ಒಟ್ಟು 1634 ಕಡೆಗಳಲ್ಲಿ , 111 ದಾಸರು , 1347 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸತ್ಯಲೋಕೇಶನೆ ಬಳಿತ್ಥಾದಿ ಶ್ರುತಿವಿನುತ ಸುರಪೂಜ್ಯ ಭಕುತರ ವಿ ಪತ್ತು ಪರಹರಿಸಿ ಸಲಹಯ್ಯ 1 270 ಸತ್ಯಲೋಕವೆ ಸದನ ತತ್ವಾಭಿಮಾನಿಗಳು ಭೃತ್ಯರೆನಿಸುವರು ಮಹಲಕ್ಷ್ಮಿ | ಮಹಲಕ್ಷ್ಮಿ ಜನನಿ ಪುರು ಷೋತ್ತಮನೆ ಜನಕನೆನಿಸುವ 2 271ಚತುರದಶ ಲೋಕಾಧಿಪತಿಯೆಂದೆನಿಪ ನಿನಗೆ ಸರ ಸ್ವತಿಯು ನಿಜರಾಣಿ ವಿಹಗೇಂದ್ರ | ವಿಹಗೇಂದ್ರ ಶೇಷ ಪಾ ರ್ವತಿಪರಾತ್ಮಜರು ಎನಿಸೋರು 3 272 ಋಜುಗಣಾಧೀಶ್ವರನೆ ಅಜಪದವಿಗೋಸುಗದಿ ಭಜಿಸಿದವನಲ್ಲ ಹರಿಪಾದ | ಹರಿಪಾದ ಸೇವೆಯು ಸ ಹಜವೇ ಸರಿ ನಿನಗೆಂದೆಂದು 4 273 ಚತುರಾಸ್ಯ ತತ್ವ ದೇವತೆಗಳಂತರ್ಯಾಮಿ ನತಿಸಿ ಬಿನ್ನೈಪೆ ನಿನ್ನಲ್ಲಿ | ನಿನ್ನಲ್ಲಿ ಭಕ್ತಿಶಾ ಶ್ವತವಾಗಿರಲೋ ಹರಿಯಲ್ಲಿ 5 274 ದ್ವಿಶತ ಕಲ್ಪದಲಿ ತಪವೆಸಗಿ ಅಸುದೇವ ಪೊಂ ಹರಿಯಿಂದ ಮಿಕ್ಕ ಸುಮ ನಸರಿಗುಂಟೇನೊ ಈ ಭಾಗ್ಯ 6 275 ಇನಿತಿದ್ದ ಬಳಿಕ ನೀ ಸಲಹದಿಪ್ಪುದು ನಮ್ಮ ಅನುಚಿತೋಚಿತವೊ ನೀ ಬಲ್ಲೇ | ನೀ ಬಲ್ಲೆ ಶಾರದಾ ವನಿತೆಯ ರಮಣ ದಯವಾಗೊ 7 276 ಸತ್ವಾತ್ಮಕ ಶರೀರ ಮಿಥ್ಯಾದಿ ಮತಗಳೊಳು ಉತ್ಪತ್ತಿ ಸಂಪತ್ತು ಕೊಡದಿರು | ಕೊಡದಿರೆನಗೆಂದು ಸಂ ಪ್ರಾರ್ಥಿಸುವೆ ನಿನಗೆ ನಮೋ ಎಂದು 8 277 ಅಜ್ಞಾನವೆಂಬ ಧಾನ್ಯವನು ಒರಳಿಗೆ ಹಾಕಿ ಸುಜ್ಞಾನವೆಂಬೊ ಒನಕೀಲಿ | ಒನಕೀಲಿ ಪಾಪಧಾನ್ಯಗಳ ನುಗ್ಗು ಮಾಡಿದೆಯೊ ಘಳಿಗ್ಯಾಗೆ 9 278 ಮಾತರಿಶ್ವನೆ ನಿನ್ನ ಪ್ರೀತಿಯೊಂದೇ ಜಗ ನ್ನಾಥವಿಠಲನ್ನ ಕರುಣಕ್ಕೆ | ಕರುಣಕ್ಕೆ ಕಾರಣವು ಯಮ ಯಾತನವು ಬರಲು ನಾನಂಜೆ 10
--------------
ಜಗನ್ನಾಥದಾಸರು
--------------ಗುಡಿವಾಸಾ ಪ ------ತಾಪತ್ರಯಗಳಿಂದ ------ರದೆ ಬಂದೆ ಭೂಪಾ ನೀ ಕರುಣದಿ ಪೊರೆಯೆನ್ನ ಅ.ಪ ಸೂರ್ಯ ನೇತ್ರಾಗದಾಧರ----ಸುಂದರಗಾತ್ರಾ ಇಂದಿರಾ ಹೃದಯಾನಂದಾ ವಿಶ್ವೇಶ ಮು- ಮಾಧವ ಗೋವಿಂದಾ ಸಿಂಧು ಶಯನ ಆಶ್ರಿತ ಜನ ರಕ್ಷಕ ಮಂದರಧರ ಹರಿ ಮಂಗಳದಾಯಕ 1 ಸುರಮುನಿ ವಂದ್ಯ ದೇವ ದೇವಾದಿ ದೇವ ವರದಾ ಮಹಾನುಭಾವ ಕರುಣಸಾಗರನಿಲಯಾ ಕಮಲನಾಭ ಸ್ಥಿರಹರಿ ಪುರಿಗೀಯಾ ಪರಮಭಕ್ತನಾದ ಕರಿರಾಜನ ಕಾಯ್ದ ಇಂದು ಪಾದ 2 ಶಂಕರನುತ ಶಾಶ್ವತ ಜಗತ್ಕರ್ತ ಪಂಕಜೋದ್ಭವನ ಪಿತ ಶಂಕೆಯಿಲ್ಲದೆ ದೈತ್ಯರಾ ಭೇದಿಸಿ------ನೆನಿಸಿದ ಧೀರಾ ಕಿಂಕರನಾನು ನಿಮ್ಮ ಕೀರ್ತಿ ಕೊಂಡಾಡುವೆ ಪುಂಕಾಲದಿ (?) ಸಲಹೊ ಹೊನ್ನಪುರ 'ಹೊನ್ನವಿಠ್ಠಲಾ’ 3
--------------
ಹೆನ್ನೆರಂಗದಾಸರು
---------ದಾನು ಮುಕ್ತಿ ಭಕ್ತಿ --- ಪ -----------ಭಾರತನವು ಬಿಟ್ಟು 1 ಕಮಲ ರಥದಲ್ಲಿ ಧರಿಸಿ ಮೇಲುವಲ್ಲಿ ಹಣೆಯ ಕಟ್ಟಿ ಮೇಲೆ ಪಟ್ಟಿ ನಾಮಗಳಿಟ್ಟೂ 2 ನೀ ----------ದೇಹದಿಯಂಥ ವೇಗದಿಂದ ನಡೆದು ಸಂಸಾರ ಗೃಹಧರ್ಮ ಹಿಡಿದಾನಂತಕಾಲ---------ನೆಂದು 3 ಭಾರಮಾರ್ಗ ಹಿಡಿದು ಅತಿಧೀರನಾಗಿ ಗ್ರಾಮದೊಳಗೆ ಮೂರು ಎರಡು ಮನಿಗಳ ಬಿಟ್ಟು ಮೂರು ಮೂರು ಮನಿಗಳ್ಹಾದಿಲೆ 4 ಸ್ಥಿರಹೊನ್ನ ವಿಠ್ಠಲನ್ನ ದಿವ್ಯ ಚರಣದಲ್ಲಿ ಚಿತ್ತವಿಟ್ಟು ಪರಮ ಹರುಷದಿಂದ ಪಾಡುತ ಭಕ್ತಿ ಸಿದ್ಥಿಯಲ್ಲಿ 5
--------------
ಹೆನ್ನೆರಂಗದಾಸರು
-------ಅರಿಯೆ ----ನಡತಿ ಮಾರ್ಗವನೂ ಹೀನಮಾನವ ನಾನು ಯಂ ---- ಹರೇ ಪ ನಾನಾಯೋನಿಗಳಲ್ಲಿ ನಟಿಸಿನಟಿಸಿ ಇಲ್ಲದೆ ಇರೊ ವಿಧಾನ ಒಂದಲ್ಲದೆ 1 ದರಿ----ರ್- ಸರತಿ ತಿಳಿದಿನ್ನು ಧೀನ ರಕ್ಷಕ ನಿನ್ನ ದಿನಚರ್ಯ ವರ್ಣಿಸುವರ ಕಾಣುತಲೆ ವಂದಿಸಿ ಕಾಲುಹಿಡಿವದು ಅರಿಯೆ 2 ವೇದಾದಿ ಸಕಲವು ವಿದ್ಯಶಾಸ್ತ್ರವನರಿಯೆ ಮೇದಿನಿಯೊಳು ನಡೆವ ಸುಮಾರ್ಗ ನಾನರಿಯೆ ಗಾಧಿ ಬೋಧಿಗಳೀಗೆ ಒಳಗಾಗಿ ಈ ಪರಿಯೆಗಾಧೆಯೊಳಗೆ ಬಿದ್ದನ ಕೈ ಪಿಡಿಯೊಧೊರಿಯೆ 3 ಆಗ ಅಂತರಂಗದಾ ಭಾವನರಿಯೆ ನಾಗಶಯನ ನಿಮ್ಮ ನಾಮವೆಂಬುದು ಅರಿಯೆ ಕೃಪೆತೋರಿ ರಕ್ಷಿಸಯ್ಯಾ ಹರಿಯೆ 4 ಸಕಲಾವು ನೀನೆಂದು ಸಾರುವ ಧರೆಯಾ ಭಕ್ತವತ್ಸಲನೆಂಬ ಬಿರುದು ನಿಂದರಿಯಾ ಅಕಳಂಕ ಮಹಿಮ `ಹೊನ್ನವಿಠ್ಠಲನೆ’ ಪ್ರೀಯಾ ಮುಕುತಿದಾಯಕ ಆಲಸ್ಯನಾದವನ ಪೊರೆಯಾ 5
--------------
ಹೆನ್ನೆರಂಗದಾಸರು
(4) ಚನ್ನಾಕೇಶವ ಶರಣು ಶರಣು ಚೆನ್ನಕೇಶವರಾಯ ಚರಣಗಳೇ ಗತಿ ನಂಬಿದೆ ಜೀಯಾ ಪ ತರಳಧ್ರುವನಿಗಿತ್ತೆಯೊ ಬಹುಶ್ರೇಯ ವರದ ವೇಂಕಟ ಶ್ರೀರಂಗ ಚೆಲ್ವರಾಯಾ ಶರಣ ಶ್ರಿತನಭಯಾ ಆನಂದನಿಲಯಾಅ.ಪ ಅಂದುಗೆ ಗೆಜ್ಜೆಯ ಘಲುಘಲು ತುಂದಿಲನಗೆಮೊಸ ಪೀತಾಂಬರದಿಂ ಧಿಂದಿಮಿಕಿಟ ಕುಣಿಗೋವಿಂದಾ ನಿತ್ಯ ಮುಕುಂದ 1 ಕವಿಕುಲಸ್ತುತ್ಯನೆ ದೇವವರೇಣ್ಯ ಭವಸಾಗರ ತಾರಣ ಪ್ರಾವೀಣ್ಯ ಭುವನಗಳೆಲ್ಲಕು ನೀನೇ ಗಣ್ಯ ಪವಿತ್ರಯೋಗಿಯ ಧ್ಯಾನ ಹಿರಣ್ಯ ಪಾವನ ಪುಣ್ಯ ಶ್ರುತಿ ಪ್ರಾಮಾಣ್ಯ 2 ವಿದುರೋದ್ಭವ ಅಕ್ರೂರ ತ್ರಾತ ಮಧುರ ಬಾಂಧವ ಬದರೀನಾಥ ವಿಧಿ ಪಿತನರನಾರಾಯಣ ಪೂತ ಮಧುಕೈಟಭಾರಿ ಬಹುಪ್ರಖ್ಯಾತ ಬುಧಪ್ರೀತ ಭಾಗ್ಯದಾತ 3 ಒಂದೇ ಅಳತೆಗೆ ಜಗವು ಮೂರಡಿ ಚಂದಿರ ಮುಖಿಮಣಿ ಕೊಟ್ಟನು ಕರಡಿ ನಿಂದೆಯಾ ಕಾಳಿಂಗನ ಮೇಲ್ಗಾರುಡಿ ತಂದೆ ಕರೆದನ ಕರುಣದಿ ಕರಪಿಡಿ ಇಂದೆ ಕಡೆಜನ್ಮಮಾಡಿ ಇಡು ನಿನ್ನಪದದಡಿ4 ಹೆಜ್ಜಾಜೀಶ್ವರ ಶಿವ ಶಂಕರನೆ ಸಜ್ಜನ ಮುನಿಗಣ ಹೃದ್ಭಾಸ್ಕರನೆ ದುರ್ಜನಶಿರಹರ ಶಂಖಚಕ್ರಧರ ವಜ್ರಿ ಅಜಹರಗಾಧಾರ ಧೀರ ಸುಜಯ ಭೂಮ್ಯೋದ್ಧಾರಿ ಜಂiು ಶ್ರೀಕರ 5
--------------
ಶಾಮಶರ್ಮರು
(ಅ) ಶ್ರೀಹತಿಸ್ತುತಿಗಳು ಜಗದುದರನು ಹರಿ ಸೂತ್ರಧಾರಂ ನಗಿಸುವ ಅಳಿಸುವ ಕಾರಕನಿವ ತಾಂ ಪ ಪರಿಪರಿ ಸೃಷ್ಟಿಸುತಾ ಸಲಹುವನು ಅರಿವಿಂದವುಗಳ ಲಯಗೈಸುವನು ಭರಿತನು ಸಕಲ ಚರಾಚರಂಗಳಲಿ ನಿರುತವೆಲ್ಲ ತರತಮದಿಂದಾರಿಸಿ ಇರುವನು ಪರಮಾತ್ಮನು ಸರ್ವೇಶಂ 1 ನಿತ್ಯನಿರ್ಮಲನು ಸತ್ಯಸನಾತನು ಅತ್ಯಂತನು ಗುರುವನಂತನು ಮೃತ್ಯುನಿಯಾಮಕ ಮುಕ್ತಿಪ್ರದನು ಭೃತ್ಯವರ್ಗ ಸಂರಕ್ಷ ಶಕ್ತನು ಮತ್ತೊಂದಕು ಸಹ ಮೂಲನು 2 ಅಣೋರಣೀವನು ಮಹತೋಮಹೀಮನು ಗುಣಗಣಭರಿತನಗಣ್ಯನು ಕ್ಷಣಮಾದಲನು ಕಂಟಕನು ಕಾಲನು ತೃಣಮೊದಲು ಬ್ರಹ್ಮಾಂಡನು ಧೀರನು ಘನಮಹಿಮನು ಶ್ರೀ ಜಾಜೀಶಂ 3
--------------
ಶಾಮಶರ್ಮರು
(ಆ) ಯತಿ ; ದಾಸ ನಮನ ಶ್ರೀ ವಿದ್ಯಾಧೀಶರು ಪಾದ ಪದ್ಮಂಗಳಿಗೆ ಪ. ಸಾಧನದಗೋಸುಗಕೆ ಮೇದಿನಿಯೊಳ್ ಜನಿಸಿಸಾಧನವ ಕಾಣದೆ ಮೋದಗೊಂಡಿಹೆನುಸಾಧುಜನ ಪ್ರಿಯನೆ ಸಾದರದಿಂದಲಿಭೇದ ಕಂಚಜ್ಞಾನ ಹಾದಿಯನೆ ತೋರುತಲಿ 1 ಧರೆಯ ರಮಣನು ತಾನು ಧೊರೆ ಎಲ್ಲ ಜಗಕೆಂದುಪರಿಪರಿ ಸ್ತುತಿಸುವಾ ಪರಮ ಭಕುತಿಯನಿತ್ತುಪರಿಪಾಲಿಸಬೇಕು ಕರಮುಗಿದು ಪ್ರಾರ್ಥಿಸುವೆಶರಣು ಜನ ಪರಿಪಾಲಾ 2 ನಿರುತ ಸಂಸಾರದೋಳ್‍ವೈರಾಗ್ಯ ಕರುಣಿಸಿ ಕರಪಿಡಿಯೋ ಕರುಣಾಲವಾಲಪರಮ ಪಾವನ ತಂದೆವರದವಿಠಲನಚರಣವನು ಭಜಿಸುವೆನು ಮರುತ ಮತ ಮೋಹನ 3
--------------
ಸಿರಿಗುರುತಂದೆವರದವಿಠಲರು
(ಆ) ಲಕ್ಷ್ಮೀಸ್ತುತಿಗಳು ನಾರಿಮಣಿಯೆ ನಿನ್ನಾಣೆ ನಾಕಾಣೆ ಕರತಂದು ತೊರೆ ಚೆಲ್ವ ರಂಗನಾ ಪ ಕರತಂದು ತೋರೆ ಮಧ್ಯರಂಗನಾ ಅ.ಪ ಪಾರವಾರನೆಂಬ ಧೀರ ಭವದೂರನೊ ಬಾರದ ಮನಸೆನ್ನ ಸೂರೆಗೊಳ್ಳುತಿದೇ 1 ಮೀರಿದ ಹದ್ದಿಗೆ ಹಾರಿಬಂದಾ ಗಿಣಿಯು ದಾರಿಯ ತಪ್ಪಿ ಹಿಂತಿರುಗಿದಂತೆ ಮಾರನಯ್ಯನ ಪಾದತೋರಿ ಪೋಗಿಯು ತಾ ತೇರಮೇಲೇರಿದ ಸಾರುವ ಬಾರೆ 2 ಉರಗೇಂದ್ರಶಯನನೆ ಸರಿಗಾಣೆ ರಮಣಿ ಶ್ರೀ ನರಗೆ ಸಾರಥಿಯಾಗಿ ಮೆರೆವ ಶ್ರೀ ಪರಮಾತ್ಮ ನಿರುತಿಹ ನೀನೋಗಿ ಕರತಾರೆ ಕಾಮಿನೀ3
--------------
ಚನ್ನಪಟ್ಟಣದ ಅಹೋಬಲದಾಸರು
(ಆ). ವಿವಿಧ ದೇವತಾ ಸ್ತುತಿ ರುದ್ರದೇವರು ಬೇಡಿಕೊಂಬೆನು ನಾನು ರೂಢಿಗೊಡೆಯನಾಗಿ ಆಡುವನಂತೇಶನಿದಿರೊಳು ಮೂಡಿದ ಚಂದ್ರಶೇಖರನ ಪ ಒಪ್ಪುವ ಶಿರದೊಳಗೆ ಸರ್ಪನ ಮೇಲೊರಗಿಪ್ಪನ ಮಗಳನ್ನು ಒಪ್ಪದಿ ಧರಿಸಿದನ 1 ಮುಪ್ಪುರಹರನೆಂದು ಮೂರು ದೃಷ್ಟಿಗಳುಳ್ಳ ಕಪ್ಪುಕೊರಳ ದೇವನ ರೌಪ್ಯದ ಪುರವರಧೀಶನೆಂದೆನಿಸಿಯೆ ಇಪ್ಪಂಥ ಪರಶಿವನ 2 ಗಿರಿಯ ನಂದನೆಯನ್ನು ಉರದೊಳು ಧರಿಸಿಯೆ ಕರಿಚರ್ಮ ಪೊದ್ದವನ ಗರುಡನ ಭಯಕಂಜಿ ಮೊರೆಹೊಕ್ಕ ಶರಣನ ಕರುಣದಿ ಕಾಯ್ದವನ 3 ಉರಗಾಭರಣವ ಸುತ್ತಿಕೊಂಡಿರುವಂಥ ಗರುವ ದೇವರ ದೇವನ ಚರಣ ಸೇವಕರನ್ನು ಸ್ಥಿರವಾಗಿ ಸಲುಹುವ ಬಿರುದುಳ್ಳ ಪರಶಿವನ 4 ದ್ವಾರಕಿವಾಸನಾಚಾರ್ಯನ ಮುಖದಿಂದ ಸೇರಿಸಿಕೊಂಡವನ ಧಾರುಣಿ ಸುರರಿಗೆ ಶೈವ ವೈಷ್ಣವವೆಂಬ ಚಾರವ ತೋರಿದನ 5 ಮೀರಿದ ದಾರಿದ್ರ್ಯವೆಂಬ ವೃಕ್ಷದ ಬೇರ ಹಾರಿಸಿ ತರಿದವನ ಸಾರಿದ ಭಕ್ತರ ಸಲುಹುತ್ತ ಮುಂದಣ ದಾರಿಯ ತೋರ್ಪವನ 6 ಬತ್ತೀಸ ಗ್ರಾಮಕ್ಕೆ ಕರ್ತನೆಂದೆನಿಸಿಯೆ ಅರ್ತಿಯಿಂ ನಲಿವವನ ಪಾರ್ಥಸಂಗರದೊಳು ಮೆಚ್ಚಿಯೆ ಶರವಿತ್ತು ಕೀರ್ತಿಯ ಪೊತ್ತವನ 7 ಸ್ಮಾರ್ತರ ನಿಂದಿಸಿ ರಚಿಸುವ ಯಾಗಕ್ಕೆ ಮೃತ್ಯುವನೊಟ್ಟಿದನ ಮೃತ್ಯುಂಜಯನೆಂದು ಮೊರೆಹೊಕ್ಕ ನರರ ಕಾ- ಯುತ್ತಲಿರ್ಪವನ 8 ಕೊಡಲಿಯ ಪಿಡಿದವ ಪಡೆದಿಹ ಕ್ಷೇತ್ರದಿ ಉಡುಪಿನ ಸ್ಥಳವೆಂಬುದು ಪಡುವಲು ಮೂಡಲು ಎರಡಾಗಿ ತೋರುವ ಒಡಲೊಂದೆ ಮೃಡನೊಬ್ಬನೆ 9 ಕಡಗೋಲ ಪಿಡಿದಿಹ ಕೃಷ್ಣ ನಿಂತದರಿಂದ ಪೊಡವಿಯುತ್ತಮವಾದುದು ಬಡವರ ಬಡತನ ಉಡು (ಪಿಯ)1 ಕಾಣಲು ಸಡಲಿತು ಸುಲಭದಲಿ 10 ಚಿಂತೆಗಳೆನ್ನನು ಭ್ರಾಂತಿ(ಬ)2 ಡಿಸುತಿದೆ ಅಂತಕಾಂತಕ ಲಾಲಿಸು ಪಂಥವ ಮಾಡದೆ ಏಕಾಂತ ಭಕ್ತರಿಗೆಲ್ಲ ಸಂತೋಷವನು ಪಾಲಿಸು 11 ಪಿಂತೆನ್ನ ಕೃತ್ಯ ಬೆನ್ನಾಂತು ಬಂದರು ಇಭ- ವಾಂತದಿ ನೀ ಹಾರಿಸು ಸಂತತ ಎನ್ನನು ಸಲಹಯ್ಯ ಪಾರ್ವತೀ ಕಾಂತನೆ ಕಡೆ ಸೇರಿಸು 12 ಹರ ಹರ ಮಹಾದೇವ ಪರದೈವ ಶಂಕರ ಮೆರೆವ ಆ ವೃಷಭಧ್ವಜ ವರದ ಕೃತ್ತೀವಾಸ ಸ್ಮರನಾಶ ದೇವೇಶ ಸಿರಿಕಂಠ ಪುರಹರನೆ 13 ಗಿರಿಯ ಮಗಳ ಗಂಡ ಉರಿಗಣ್ಣ ಮಹಾರುದ್ರ ಸ್ಥಿರವಾದ ಶಿವಬೆಳ್ಳಿಯ ಪುರಪತಿ ಅನಂತೇಶ ವರಾಹತಿಮ್ಮಪ್ಪನ ಸರಿಯೆಂದು ತೋರ್ಪವನ14
--------------
ವರಹತಿಮ್ಮಪ್ಪ
(ಇ) ಶ್ರೀಕೃಷ್ಣಸ್ತುತಿಗಳು ಜಯಕೃಷ್ಣ ಜಗದೀಶ ಜಯ ಶಶಿಕುಲಾಧೀಶ ವಿನುತ ವಾಣೀಶ ಜಯಣೀಶ ಜಯ ಜಯ ಪ ಕಮಲಭವನುತಿಪಾತ್ರ ಕಮಲಸಖನಿಭಗಾತ್ರ ಕಮಲರಿಪುಸಮವಕ್ತ್ರ ಕಮಲದಳನೇತ್ರ ಕಮಲಕರಧೃತಗೋತ್ರ ಕಮನೀಯ ಸುಚರಿತ್ರ ಕಮಲಾರಿಧರಮಿತ್ರ ಕಮಲಾಕಲತ್ರ 1 ನಂದಗೋಪಕುಮಾರ ನವನೀತದಧಿಚೋರ ಸುಂದರೀ ಕುಲಜಾರ ಸ್ಮರಸಮರ ಶೂರ ಕಂದರ್ಪಸಹಕಾರ ಕಾಮಿನೀವಾರ ಬೃಂದಾವನವಿಹಾರ ಭಕ್ತ ಮಂದಾರ 2 ಧರಣೀಧರಾಸ್ಫಾಲ ಮನಕರ ನಿಜಲೀಲ ನರಪೌತ್ರ ಪರಿಪಾಲ ನವ್ಯವನಮಾಲಾ ವರವ್ಯಾಘ್ರಗಿರಿಲೋಲ ವರದಾರ್ಯವಿಠಲ 3
--------------
ವೆಂಕಟವರದಾರ್ಯರು
(ಈ) ಅವತಾರತ್ರಯ ಆರು ನಿನಗಿದಿರಧಿಕ ಧಾರುಣಿಯೊಳಗೆ ಪ ಸಾರ ಶಾಸ್ತ್ರವನೊರೆದ ಸರ್ವಜ್ಞ ಮುನಿರಾಯ ಅ.ಪ. ಆರೊಂದು ವೈರಿಗಳ ತರಿದು ವೈಷ್ಣವರಿಗೆಆರೆರಡು ಊಧ್ರ್ವ ಪುಂಡ್ರಗಳ ಇಡಿಸಿಆರು ಮೂರರಮೇಲೆ ಮೂರಧಿಕ ಕುಮತಗಳಬೇರೊರಸಿ ಕಿತ್ತೊಮ್ಮೆ ಬಿಸುಟಂಥ ಧೀರ 1 ಆರು ನಾಲ್ಕು ತತ್ವದಭಿಮಾನಿಗಳಿಗೊಡೆಯಮಾರುತನ ಮೂರನೆಯ ಅವತಾರನೆಆರೈದು ಮೇಲೆರಡು ಅಧಿಕ ಲಕ್ಷಣವುಳ್ಳಮೂರುತಿಯೊಳೊಪ್ಪುತಿಹ ಮುನಿವರೇಣ್ಯ 2 ಆರಾರು ಮೇಲೊಂದು ಅಧಿಕ ಲೆಖ್ಖದ ಗ್ರಂಥಸಾರವನು ರಚಿಸಿ ಸಜ್ಜನರಿಗಿತ್ತುಪಾರಮಾರ್ಥಿಕ ಭೇದ ಪಂಚಕ ಸ್ಥಾಪಿಸಿದೆ ಉ-ದಾರ ಶ್ರೀಕೃಷ್ಣನ ದಾಸರೊಳು ದೊರೆಯೆ 3
--------------
ವ್ಯಾಸರಾಯರು
(ಈ) ಆತ್ಮನಿವೇದನಾ ಕೃತಿಗಳು ಅಕಟಕಟ ಬಹಳ ಬಡತನವಡಸಿದುದೆ ನಿನಗೆ ಅಕಳಂಕ ಚರಿತ ಹರಿಯೆ ಪ ಪ್ರಕಟತನದಿಂ ಗೋದಾನಕ್ಕೆ ಕೈನೀಡುವರೇ ಸುಖಮಯ ಶರೀರ ಚನ್ನರಾಯಾ ಅ.ಪ ಹಿಂದೆ ಯಜ್ಞದಲಿ ಬಲಿಯಿತ್ತ ಭೂದಾನಕ್ಕೆ ದಂದಿಗೆ ಸಾಲದಾಯಿತೆ ಅಂದು ಕರ್ಣನು ಕೊಟ್ಟ ದಾನವನು ನೀ ಪಿಡಿದು ದಂದಿಗೆ ಸಾಲದಾಯಿತೆ ಇಂದು ನಿನ್ನಯ ದಾಸಾನುದಾಸನು ಕೊಟ್ಟ ಗೋದಾನ ದೊಂದೊಂದು ಗೋಗಳಿಗೆಛಂದದಲಿ ನಿಂದು ದಾನವ ಕೊಂಡೆಯಾ ಸ್ವಾಮಿ 1 ಉರದೊಳಗೆ ಅನವರತ ವಾಸವಾಗಿರುತಿಪ್ಪ ಶರಧಿಸುತೆ ಕೈಬಿಟ್ಟಳೇ ಬೆರೆತು ಪೋದುದೇ ಪಾಲ್ಗಡಲು ಮುನಿಸಿಕೊಂಡು ಬರಡಾಯಿತೇ ಕಾಮಧೇನೂ ತಿರುಕ ಹಾರುವನಂತೆ ಪರಿಪರಿಯ ದಾನಕ್ಕೆ ಭರದಿ ಕೈ ಒಡ್ಡುತಿಹರೆ ಪುರುಷೋತ್ತಮನೆಂಬ ಅಭಿಮಾನವಿನಿತಿಲ್ಲದೇ ದೂರಿಗೊಳಗಾಗಬಹುದೆ ಸ್ವಾಮಿ 2 ಇತ್ತ ದಾನದ ಗೋವುಗಳನೆಲ್ಲ ಗುಡಿಯೊಳಗೆ ಮೊತ್ತದಿಂ ಕೂಡಿಕೊಂಡೂ ಒತ್ತಿ ಮುದ್ರೆಯನು ನಾಮವನಿಟ್ಟು ಬಾಲಗಳಿ ಗೆತ್ತಿ ಘಂಟೆಗಳ ಕಟ್ಟೀ ಅರ್ಥಿಯಿಂ ತೋರಿಸಿ ಯೆನ್ನ ಕುಲಕೋಟಿಗಳಿ ಗಿತ್ತೆ ಸುರಪದವನು ಕರ್ತುೃ ವೈಕುಂಠ ವೇಲಾಪುರಾಧೀಶ್ವರನೇ ಭೃತ್ಯನ್ನ ಕಾಯೊ ಸತತ ಸ್ವಾಮಿ 3
--------------
ಬೇಲೂರು ವೈಕುಂಠದಾಸರು
(ಈ) ತಾತ್ವಿಕ ಕೃತಿಗಳು ಓಂ ನಮೋ ನಾರಾಯಣ ಓಂ ನಮೋ ನಾರಾಯಣ ಪ ರಾಮಾನುಜ ಬೆಳೆದ ಧರೆಯೊಳಗೆ ಅ.ಪ ನಾರದ ಬಿತ್ತಿದ ನಾರಾಯಣ ಬೀಜಕೆ ಧೀರಾಂಬರೀಷನು ಗೊಬ್ಬರವಾದ ಕು- ಮಾರ ಪ್ರಹ್ಲಾದನು ನೀರಾಗೆರೆದ ಆ ರುಕುಮಾಂಗದ ಗಾಳಿಯಾದ1 ನಾರಾಯಣನೆಂಬ ಬೀಜಮಂತ್ರವು ಕು- ವರ ಧ್ರುವನ ಕಾವಲಿನಲ್ಲಿ ಸರಸರ ಬೆಳೆಯಿತು ಆಳುವಾರರು ಭೂ ಸುರ ಭಾಗವತರುಗಳಲಿ 2 ರಮಾನುಜನಿದರ ಒಕ್ಕಣೆಮಾಡಿ ಸಮಾನತೆಯಿಂದ ಹಂಚಿದನು ಶ್ರಿಮಣಿಯಲ್ಲಿ ತುಂಬಿದನು ಸಮಾನ ವೇದವೆನಿಸಿದನು 3 ಹಬ್ಬಿತು ಹರಡಿತು ಧರೆಯೆಲ್ಲ ಉಬ್ಬಿತು ಉಲಿಯಿತು ಗಿರಿಯೆಲ್ಲ ಅಬ್ಬಬ್ಬ ಜಾಜಿಪುರೀಶ ಕೇಶವನಾಮವು ಹಬ್ಬವಾಯಿತು ನಮಗೆಲ್ಲ 4
--------------
ನಾರಾಯಣಶರ್ಮರು
(ಈ) ಬಾಲಕೃಷ್ಣಲೀಲೆ ಅಣ್ಣ ಬಲರಾಮನ ಸ್ತುತಿ ಚಂದ್ರವಾರಿಧಿಮಣಿ ನಂದನ ರೋಹಿಣಿಸುಂದರ ರವಿ ಸಮಾ ವಂದಿಪೆ ನಿಮಗೆ ಪ ಮೂಲಪುರುಷ ಯದು ಬಾಲಕೃಷ್ಣಗೆ ಹಾರಬಾಲ ಭೂಷಣ ಹರಿ ಬಾಲ ಸೋದರನೆ 1 ಅಂಗದ ಕಪಿವರನಂಗಜ ರಾಘವಅನಂಗಾ ನಾರಿಗಳು ಉತ್ತುಮಾಂಗನ ಸಖನೆ 2 ಈಶ ಮನಸ ದೋಷ ಧೀಶ ಕಳೆದುಇಂದಿರೇಶನಲಯತವ ತೋಷಿಸು ಪ್ರಭುವೆ3
--------------
ಇಂದಿರೇಶರು
(ಈ) ಶ್ರೀರಾಮ ಏನು ಕಾರಣ ಮಲಗಿದಿಯೊ ಶ್ರೀನಾಥ ರಘುಕುಲೋದ್ಭವ ದರ್ಭಶಯನಾ ಪ ಸೀತೆ ಪೋದಳು ಎಂದು ಚಿಂತೆಯಲಿ ಮಲಗಿದೆಯೊ ಕೋತಿಗಳ ಕೈಯಲೆ ರಣವಾಗದೆಂದು ಮಲಗಿದೆಯಾ ಪಾತಕ ಹರದೈತ್ಯ ಭಂಜಾ ತಿಳುಪುವದು ಜ್ಯೋತಿರ್ಮಯರೂಪ ದರ್ಭಶಯನಾ1 ವನವಾಸ ತಿರಗಲಾರೆನೆಂದು ಮಲಗಿದೆಯೊ ವನಧೀಶ ಮಾರ್ಗವನು ಕೊಡನೆಂದು ಮಲಗಿದೆಯೊ ದನುಜ ಬಲ್ಲಿದನೆಂಬೊ ವ್ಯಾಕುಲದಿ ಮಲಗಿದೆಯೊ ಜನನ ಮರಣರಹಿತ ರಾಮ ತಿಳುಹುವದು ಪಾದ ಶ್ರೀದರ್ಭಶಯನಾ 2 ಅನಿಲಾರಿ ಅಹರಗೆ ಕರುಣಿಸಿ ಮಲಗಿದೆಯೊ ವನಜ ಸಂಭವಗೆ ನೀ ಒಲಿಯ ಬಂದು ಮಲಗಿದಿಯೊ ಮುನಿಗಳು ಸ್ತೋತ್ರವ ಮಾಡಲು ಹಿಗ್ಗಿ ಮಲಗಿದೆಯೊ ಜನನಾಥ ಜಾನಕಿಕಾಂತ ತಿಳುಪುವದು ಎನಗೊಲಿದ ವಿಜಯವಿಠ್ಠಲ ದರ್ಭಶಯನಾ 3
--------------
ವಿಜಯದಾಸ