ಒಟ್ಟು 325 ಕಡೆಗಳಲ್ಲಿ , 60 ದಾಸರು , 265 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದಿರಾರಮಣನ ಮಂದಿರದಲ್ಲೆ ನಾ- ರಂದ ತಾ ಬರುತಿರಲು ಕಂಡು ಕೃಷ್ಣನು ಕರೆತಂದು ಮನ್ನಿಸಿ ಬಂದಕಾರಣವೇನೆಂದನು 1 ಕಾರಣವೇನುಂಟು ಕಾರಣಪುರುಷನ ಕಾಣಬೇಕೆಂದೆನುತ ಕಾಮಿಸಿಬಂದೆನೊ ಕೊರಳ ತುಳಸಿ ಮಾಲೆ ನೀಡೊ ನೀ ಎನಗೆಂದನು2 ಏನು ಬೇಡಿದರು ನಾ ಕÉೂಡುವೆನು ನಾರಂದ ಪ್ರಾಣಪದಕ ತುಳಸಿ ನೀಡಲಾರೆನೊ ಮುತ್ತಿನ್ಹಾರವ ಕೊಡುವೆ- ನೆಂದು ಹೇಳುತಿದ್ದನು ಹರಿಯು 3 ನೀಡದಿದ್ದರೆ ನಾನು ಬೇಡಿ ಬಿಡುವನಲ್ಲ ನೋಡಿಕೋಯೆಂದೆನುತ ಆಡಿದ ಮಾತು ತಪ್ಪುವರುಂಟೆ ಶ್ರೀಕೃಷ್ಣ ಹೋಗಿಬರುವೆನೆಂದನು 4 ಸತ್ಯಭಾಮೆಯ ಮನೆ ಹೊಕ್ಕನು ನಾರಂದ ಹೆತ್ತಮ್ಮ ಕೇಳೆನುತ ಸುತ್ತಿಬಂದೆನು ಸುರಲೋಕದ ವಾರ್ತೆಯ ವಿಸ್ತರಿಸ್ಹೇಳುವೆನು 5 ಇಂದ್ರಲೋಕದಲಿ ದೇವೇಂದ್ರ ಶಚಿಯ ಕೂಡ್ಯಾ ನಂದದಿ ಕುಳಿತಿದ್ದನೆ ಅ- ಲ್ಲಿಂದ ಕೈಲಾಸ ಮಾರುದ್ರ ಪಾರ್ವತಿದೇವಿ ಚೆಂದವನ್ವರಣಿಸಲೆ 6 ಸತ್ಯಲೋಕದಿ ಸರಸ್ವತಿ ಕೂಡಿ ಬ್ರಹ್ಮ ಭಾ ಳುತ್ಸವದಿಂದಿದ್ದನೆ ಹಸ್ತಿನಾವತಿಯ ಪಾಂಡವರು ದ್ರೌಪದಿದೇವಿ ಅರ್ಥಿಯ ನೋಡಿ ಬಂದೆ 7 ದ್ವಾರಾವತಿಗೆ ಬಂದೆ ದೇವಿ ನಿಮ್ಮರಸನು ನಾರಿ ರುಕ್ಮಿಣಿ ಸಹಿತ ಭಾಳ ಸಂಭ್ರಮದಿಂದ ಕುಳಿತಿದ್ದ ಕಣ್ಹಬ್ಬವಾಗಿ ನಾ ಬಂದೆನಿಲ್ಲೆ 8 ಕರೆದು ರುಕ್ಮಿಣಿ ಕರದಿಂದೆ ಆಲಂಗಿಸಿ ತೊಡೆಯಮ್ಯಾಲಿಟ್ಟಿದ್ದನೆ ಅರಳುಮಲ್ಲಿಗೆ ತುರುವಿ(ಬೀ) ನಲ್ಲಿಟ್ಟು ನಿನಗಿನ್ನು ಸರಿಯಿಲ್ಲವೆಂತೆಂಬನೆ 9 ಹಾರಪದಕ ಇಬ್ಬರಿಟ್ಟಾಭರಣ ಬ್ಯಾರೆ ಬ್ಯಾರಾಗಿ ತೋರವಲ್ಲೆ ಸೂರ್ಯಚಂದ್ರರು ಕೂಡಿದಂಥ ಮುಖವು ನೋಡಿ ನಾ ಬೆರಗಾಗಿದ್ದೆನೆ 10 ಸತ್ಯಭಾಮೆಯೆ ನಿನ್ನ ಹೆತ್ತ ತಾಯಿತಂದೆ ಮಿರ್ತಾಗಿದ್ದರೆ ನಿನಗೆ ಕೊಟ್ಟರೀ ಕಪಟನಾಟಕ ದಯಹೀನಗಿ- ನ್ನೆಷ್ಟು ನಾ ಸೈರಿಸಲೆ 11 ಒಂದೊಂದು ಗುಣಗಳ ವರಣಿಸಲಿಕ್ಕೆ ಹ ನ್ನೊಂದೊ (ದ್ವ?) ರುಷವು ಸಾಲದೆ ಕಂಡು ಬಂದ್ವಾರ್ತೆಯ ಖರೆಯ ನಾ ಹೇಳುವೆ ಸಂದೇಹ ಮಾಡದಿರೆ 12 ಕೇಳಿ ಸತ್ಯಭಾಮೆ ತಾಳಲಾರದೆ ಮುನಿ ಪಾದದ ಮ್ಯಾಲೆ ಬಿದ್ದು ಹೇಳಿ ಉಪಾಯ ಮುಂದಕೆ ಪೋಗೊ ಶ್ರೀ- ಕೃಷ್ಣ ತಾನೊಲಿದಿರುವಂದದಿ13 ದಾನವಾಂತಕÀನ ನೀ ದಾನವÀ ಮಾಡಲು ದಾವಜನ್ಮಕÀು ನಿನ್ನನು ತಾನಗಲದೆ ಮುಂದೆ ಸೇರಿಕೊಂಡಿರುವೊ ಉಪಾಯ ಹೇಳುವೆನೆಂದನು 14 ರಂಗರಾಯನ ಕರೆತಂದುಕೊಟ್ಟವರಿಗೆ ಹಿಂಗದೆ ಸೌಭಾಗ್ಯವ ಎಂದೆಂದಿಗವರ ರಕ್ಷಿಸುವೋನೆಂದೆನುತಲಿ ಅಂಗನೆಯರನಟ್ಟಿದಳು 15 ದೂತೇರ ಸಹಿತಾಗಿ ಬಂದು ತಾ ಭರದಿಂದೆ ಪ್ರೀತಿಲೆ ಸತ್ಯಭಾಮ ಮಾತುಳಾಂತಕ ನಮ್ಮ ಮನೆಗೆ ಬಾರೆನುತ ಶ್ರೀ- ನಾಥನೆಯೇಳೆಂದಳು16 ಮಡದಿ ರುಕ್ಮಿಣಿ ಭಾಮೆ ಮಂದಿರಕ್ಕೊ ್ಹೀಗುವೆ ಕಡುಕೋಪ ಮಾಡದಿರೆ ತಡೆಯದೆ ನಾಳೆ ಬರುವೆನೆಂದು ಶ್ರೀಕೃಷ್ಣ ಗ- ರುಡನ ಹೆಗಲೇರಿದ 17 ವಾರಕಾಂತೆಯರು ಬಾಜಾರ ಮಧ್ಯದಿ ಸೋಳಸಾವಿರ ಸತಿಯರನೆ ವಾರೆನೋಟದಿ ನೋಡಿ ನಗುತ ಸತ್ಯಭಾಮೆ ಬಾಗಿಲ ಮುಂದಿಳಿದ 18 ಎದುರಿಗೆ ನಿಂತು ತಾ ಚೆದುರೆ ಸತ್ಯಭಾಮೆ ಪದುಮ ಪಾದಕೆ ಎರಗಿ ಮುದದಿಂದ ಮುದ್ದು ಶ್ರೀಕೃಷ್ಣನ ಮುಂಗೈಯ್ಯ ಪಿಡಿದು ತಾ ನಡೆದಳಾಗ 19 ಕೃಷ್ಣರಾಯನೆ ನಿನ್ನ ಕೊಟ್ಟೇನು ದಾ ನವ ಬಿಟ್ಟೆನ್ನ ಅಗಲದಂತೆ ಸತ್ಯಭಾಮೆಯ ನೋಡಿ ನಗುತ ಈ ಕಾರ್ಯ ಅ- ಗತ್ಯಮಾಡೆಂದೆನುತ 20 ಎರೆದು ಪೀತಾಂಬರವುಡಿಸಿ ಮಾಣ Âಕ್ಯದ ಆ- ಭರಣವ ತಂದಿಟ್ಟಳು ತರಿಸಿ ತಾಂಬೂಲ ದಕ್ಷಿಣೆಯನ್ನು ಬ್ರಾಂಬರ ಕÀರೆಸಿದಳಾಕ್ಷಣದಿ 21 ಆಚಾರ್ಯ ನೀವ್ ಬನ್ನಿ ವಾಸುದೇವನ ದಾನ ಈ ಕ್ಷಣದಲ್ಲೆ ಕೊಡುವೆ ನಾಶರಹಿತ ನಮ್ಮ ಮನೆಯೊಳಗಿರಲಿಕ್ಕೆ ಗ್ರಾಚಾರವೇನೆಂದರು 22 ವಿದ್ಯಾರ್ಥಿಗಳು ಬನ್ನಿ ಮುದ್ದು ಶ್ರೀಕೃಷ್ಣನ ವಿಧ್ಯುಕ್ತದಲಿ ಕೊಡುವೆ ಮೂರ್ಜಗದೊಡೆಯ ತಾ ಮಂದಭಾಗ್ಯರ ಮನೇಲಿದ್ದಾನ್ಯಾತಕೆ ಎಂದಾರೆ 23 ಭಟ್ಟರೆ ನೀವ್ ಬನ್ನಿ ಸೃಷ್ಟಿಪತಿಯ ದಾನ ಕೊಟ್ಟು ಬಿಡುವೆನೆಂದಳು ಅಷ್ಟದರಿದ್ರರಿಗಾಲಕ್ಷ್ಮೀವಲ್ಲಭ ದಕ್ಕುವೋನಲ್ಲೆಂದರು 24 ಯತಿಗಳೆ ನೀವ್ ಬನ್ನಿ ಪೃಥಿವಿಗೊಡೆಯ (ನನು) ಹಿತದಿ ದಾನವ ಕೊಡುವೆ ಗತಿಯಿಲ್ಲ ನಮಗೆ ಶ್ರೀಪತಿ ಸಲಹÀಲು ನಿನ್ನ ಪತಿ ಬ್ಯಾಡ ನಮಗೆಂದರು&
--------------
ಹರಪನಹಳ್ಳಿಭೀಮವ್ವ
ಇಂದಿರೇಶನು ಮಣಿನಂದಿನೀ ತೀರದಿ ಚೆಂದದಿ ಕೊಳಲೂದುತಿರಲು ಹರಿ ಆ- ನಂದದಿ ಕೊಳಲೂದುತಿರಲು ಅಂಬುಜಾಕ್ಷಿಯರು ಕೇಳತಿ ಮೋಹತನದಿ ಗೋ- ವಿಂದನಿದ್ದಲ್ಲೆ ನಡೆದರು 1 ಕರ ಸಡಿಲ ಬೀಳುತಲಿರೆ ಪರವಶವಾಗಿ ನಾರಿಯರು ದೇಹ ಪರವಶವಾಗಿ ನಾರಿಯರು ಕರುಗಳ ತೊಟ್ಟಿಲೊಳಗೆಯಿಟ್ಟು ಪಾಡುತ ಭರದಿಂದ ತೂಗಿ ನಡೆದರು 2 ಉಕ್ಕುವೊ ಹಾಲಿಗೆ ಉರಿ ಮಾಡಿ ಮತ್ತಿಷ್ಟು ಮಕ್ಕಳ ಕಣ್ಣಿಗೆ ಬಿಗಿದು ಅಳುವೊ ಕೃಷ್ಣನಿದ್ದಲ್ಲೆ ನಡೆದರು 3 ಕುಂಭಿಣಿಪತಿ ನೋಡೋ ಸಂಭ್ರಮದಿಂದಲಿ ಅಂಬರವನೆ ಬಿಟ್ಟು ಕೆಲರು ತಾವು (ಉ) ಟ್ಟಂಬರವನೆ ಬಿಟ್ಟು ಕೆಲರು ಕಂಚುಕ ಕಬರಕ್ಕೆ ಸುತ್ತಿ ನಡೆದರು 4 ಪಂಚಭಕ್ಷ ಪರಮಾನ್ನ ಘೃತವು ಕ್ಷೀರ ಪತಿಸುತರಿಗೆ ಉಣ ಬಡಿಸಿ ತಮ್ಮ ಮತಿಭ್ರಾಂತರಾಗಿ ಮ್ಯಾಲೆಡೆಗಳನಿಕ್ಕದೆ ಸತಿಯರು ಸಾಗಿ ನಡೆದರು 5 ಪಂಚರತ್ನದ ಹಾರಪದಕ ಕಠಾಣಿಯ ಟೊಂಕಕ್ಕೆ ಸುತ್ತಿ ನಾರಿಯರು ಸರವ ಟೊಂಕಕ್ಕೆ ಸುತ್ತಿ ನಾರಿಯರು ಪಂಚಮುಖದ ಪಟ್ಟಿ ಕಂಠದಲ್ಲಿಟ್ಟರು ವೈ- ಕುಂಠಪತಿಯ ನೋಡೋ ಭರದಿ 6 ಕಂಕಣ ಬಳೆ(ಡೋ)ರ್ಯ ಕಾಲಿನಲ್ಲೇರಿಸಿ ಕಿಂಕಿಣಿ ಕಿರುಗೆಜ್ಜೆ ರುಳಿಯು ಕಾಲ ಕಿಂಕಿಣಿ ಕಿರುಗೆಜ್ಜೆ ರುಳಿಯು ಪಂಕಜಾಕ್ಷೇರು ನಳಿತÉೂೀಳಿನಲ್ಲೇರಿಸಿ ಅ- ಲಂಕಾರವಾಗಿ ನಡೆದರು 7 ಮುತ್ತಿನ ಬಟ್ಟರಳಲೆ ಚಂದ್ರರಾಗಟೆ ಕಟ್ಟಿದರೊಂದೊಂದು ಕಿವಿಗೆ ಚೌರಿ ಅರಳು ಮಲ್ಲಿಗೆ ಮಾಲೆ ದಿಕ್ಕಿ ಗೊಂದೊಂದುದುರುತಲಿ 8 ವಾಲೆ ಮೂಗುತಿ ವೈಯಾರದ ಬಾವುಲಿ ಕೂ- ದಲಿಗೊಂದೊಂದು ಸಿಗಿಸಿ ತಮ್ಮ ಕೂ- ದಲಿಗೊಂದೊಂದು ಸಿಗಿಸಿ ಮಾರನಯ್ಯನ ಮೋರೆ ನೋಡಲು ಮದ- ವೇರಿದ ಗಜದಂತೆ ನಡೆದರು 9 ಹಲ್ಲಿಗೆ ಕುಂಕುಮ ಗಲ್ಲಕ್ಕೆ ಕಾಡಿಗೆ ಚೆಲ್ವ ಹಣೆಗೆ ಅರಿಷಿಣವ ತೀಡಿ ಚೆಲ್ವ ಹಣೆಗೆ ಅರಿಷಿಣವ ಫುಲ್ಲಾಕ್ಷದಲ್ಲಿ ಕಸ್ತೂರಿ ತಿಲಕವನ್ನಿಟ್ಟು ಗೊಲ್ಲ ಸತಿಯರು ನಡೆದರು 10 ಭಕ್ತಿಭಾವದಿ ಚಿತ್ತ ಪರವಶವಾಗಿದ್ದ ಮಿತ್ರೆಯರನೆ ನೋಡಿ ನಗುತ ಬರುವೊ ಮಿತ್ರೆಯರನೆ ನೋಡಿ ನಗುತ ಕತ್ತಲೊಳಗೆ ದಿಟ್ಟತನದಿಂದ ಬರುವುದಿ- ದಾಶ್ಚರ್ಯವೆಂದ ಶ್ರೀಕೃಷ್ಣ 11 ಏನು ಕಾರಣ ನೀವು ಬಂದಿರಿ ವನಕಿನ್ನು ಭಾನು ತಾ ಉದಿಸದ ಮುಂದೆ ಅರುಣ ಮಾನದಿಂದಲಿ ಮನೆಗಳಿಗೆ ಹೋಗಿರಿ ಎಂದು ದಾನವಾಂತಕ ಕೃಷ್ಣ ನುಡಿದ 12 ದೇವಾಧಿದೇವ ದೇವಕ್ಕಿ ಸುತನೆ ಕೃಷ್ಣ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಕೇಳೊ ತ್ರಿಲೋಕ್ಯಾಧಿಪತಿ ನಿನ್ನ ಬಿಟ್ಟು ಮಾನವೆಲ್ಲಿಹುದ್ಹೇಳೊ ಮಾವನಾಂತಕನಾದ ಶ್ರೀನಾಥ ರಕ್ಷಿಸೊ ನಮ್ಮ 13 ರಂಗನೆ ನಿನ್ನಂಗಸಂಗವ ಬೇಡುವ ಅಂಗನೇರಿಗೆ ದಯ ಮಾಡೊ ನೀ ಗೋ- ಪಾಂಗನೇರಿಗೆ ದಯ ಮಾಡೊ ಕಂಗಳ ತೆರೆದು ಕಟಾಕ್ಷದಿ ನೋಡುತ ಇಂದೀ ಜಲಕ್ರೀಡೆನಾಡೊ 14 ಭಂಗಾರಾಭರಣದಿ ಕುಂದಣವಿಟ್ಟಂತೆ ಚಂದ್ರ ತಾರದಲ್ಲಿದ್ದಂತೆ ಹರಿ ತಾ ಚಂದ್ರ ತಾರದಲ್ಲಿದ್ದಂತೆ ಮಂದಗಮನೆಯರ ಮಧ್ಯ ಆಡುತ ಗೋಪೀ ಕಂದ ದೃಷ್ಟಿಗೆ ಮರೆಯಾದ 15 ಜಾಜಿ ಮಲ್ಲಿಗೆ ಸಂಪಿಗೆ ಶಾವಂತಿಗೆ ಕಮಲ ಕ್ಯಾದಿಗೆಯೆ ಕಮಲ ಕ್ಯಾದಿಗೆಯೆ ನೀವಿಲ್ಲೆ ಕಂಡಿರ ಯಾದವ ಕೃಷ್ಣನ ತೋರೆ ತೋರೆಂದ್ವೊದರುತಲಿ 16 ಕೆಂದಾವರೆ ಕೆಲದಲ್ಲಿದ್ದ ತಾವರೆ ಕುಂದಕುಸುಮ ಎಳೆ ತುಳಸಿ ತೋರೆ ಕುಂದಕುಸುಮ ಎಳೆ ತುಳಸಿ ಅಂಬುಜನಾಭನಾಲ್ಪರಿದುಡುಕುತಲಿರೆ ಕಂಡರ್ವೊಂದರವಿಂದ ನಖವ 17 ವಂಚಿತಳಾಗಿದ್ದ ವನಿತೆಯ ಮುಖ ನೋಡಿ ಚಂಚಲಾಕ್ಷನ ಸುದ್ದಿ ಕೇಳಿ ತಾವು ಚಂಚಲಾಕ್ಷನ ಸುದ್ದಿ ಕೇಳಿ ಭ್ರಾಂತರಾಗ್ವನದಿ ಶ್ರೀಕಾಂತನ ಸ್ತುತಿಸಲು ನಿಂತ ಮನ್ಮಥನಂತೆ ಬಂದು 18 ಸೂರ್ಯ ಮಧ್ಯ ಮೇಘವು ಪೊಳೆದಂತೆ ಕಾಂತೆಯರನೆ ಕೂಡ್ಯಾಡಿ ಹರಿ ತಾ ಕಾಂತೆಯರನೆ ಕೂಡ್ಯಾಡಿ ಅಂತರಂಗದಿ ನಿಶ್ಚಂಚಲ ಭಕ್ತಿಗೆ ಸಂತೋಷ ಬಡಿಸಿದ ಕೃಷ್ಣ&ಟಿb
--------------
ಹರಪನಹಳ್ಳಿಭೀಮವ್ವ
ಇಂದು ಶ್ರೀರೂಪವ ಛಂದಾದಿಂದಲಿ ನೋಡುವೆನು ಆನಂದ ಪಡುವೆನು ಪ. ಬಿಳಿಯ ಕುಪ್ಪುಸವಾ ತೊಟ್ಟಳು ನೋಟವ ನೋಡುವಳು 1 ಪಾದಾಕೊಪ್ಪುವ ಋಳಿ ಪೈಜಣಿ ಕಾಲುಂಗರದಂದಾ ಸಾಲಿನೊಳಗೆ ಅಘಾದ ಪರಿಪೂರ್ಣ 2 ಗಳದಿ ಕಠಾಣೆಯಕಟ್ಟಿ ಅದರ ಮೇಲ್ ಗೆಜ್ಜೆಯ ಟೀಕಿ ಪುಥಲಿಸರ ಚಂದ್ರಹಾರಗಳು ವೈಯಾರದಿ ಬರುವೋಳೂ 3 ಮುದ್ದು ಮುಖಕ್ಕೆ ತಕ್ಕ ಮುಖುರೆ ಬುಲಾಕು ದ್ರಾಕ್ಷಝೂಲರ ಬುಗುಡಿಯ ಬೆಳಕು ಆನಂದ ಸುರಿಯೋಳು ಇವಳು ಮನಕ 4 ಚವರಿ ಚಂದ್ರಾ ಜಡಿ ಭಂಗಾರದ ರಾಗುಟಿ ಬೈತಲ ಮುತ್ತನಿಟ್ಟ ಹೇಳ ಭಂಗಾರ ಗೊಂಡೆವ ಕಟ್ಟಿ ಇವಳ್ಯಾರು ಧಿಟ್ಟಿ 5 ಮಂದರ ಮಲ್ಲಗಿ ಸುಗಂಧಿಯು ತ್ಯಾದಿಗಿ ನೂತನದ ಪಾರಿಜಾತವನ್ನು ಇಂದು ತಾಂಬೂಲ ಮೆಲುವುತ ಮುಗುಳು ನೆಗಿಯು ನಗುತ 6 ತರುಣಿಯೆನ್ನದಿರು ಹರಿಯಾ ರೂಪಾವ ವ್ಹಾ ನೋಡು ಛಂದಾಮನ ಕಾನಂದಾ 7 ನೀನು ಶ್ರೀರಂಗನಾಯಕನೆ ಕಾಳಿಂಗಶಯನನೆ ನರಶಿಂಗನೋ 8 ಯೇಷ್ಟುನೋಡಿದರು ಈ ಧಿಟ್ಟ ಮೂರುತಿಯ ದೃಷ್ಟಿ ತಾಕುವ ದಯ್ಯ ಕಾಳಿಯ ಮರ್ಧನ ಕೃಷ್ಣರಾಯಾ 9
--------------
ಕಳಸದ ಸುಂದರಮ್ಮ
ಇಂದು ಇಂದು ಇಲ್ಲಿ ಚಂದ್ರವದನೆ ಇಂದಿರಾದೇ'ಗಂಡುಗಲಿಯ ವೇಶತಾಳಿ ಗೆಂಡಾಸುರನ ಕೊಂದು ನಗುತಅ.ಪಜಗದೀಶನ ಮಡದಿಯಂತೆ ಮಗಗೆ ನಾಲ್ಕು ಮುಖಗಳಂತೆಮಗನ ಮಗ ಬೈರಾಗಿಯಂತೆ ಅಗಜೆ ಅವಗೆ ಒಲಿದಳಂತೆ 1ಹರಿಯ ಹೃದಯದಲ್ಲಿ ಸದಾ ಅಗಲದೆ ತಾ ಇರುಳಂತೆಆದಿಮಾಯಾ ಶಕ್ತಿಯಾಗಿ ಜಗದ ವ್ಯಾಪಾರ ಮಾಡುವಳಂತೆ 2ಕೋಟಿ ಕೋಟಿ ಭೃತ್ಯರಿರಲು ಹಾಟಕಾಂಬರಸೇವೆಸಾಟಿಇಲ್ಲದೆ ಮೂಡಿ ಪೂರ್ಣ ನೋಟದಿಂದ ಸುಖಿಪಳಂತೆ 3ಛಕ್ರಚಾಮರ ವ್ಯಜನ ಪರ್ಯಂಕ ಪಾತ್ರರೂಪದಲ್ಲಿನಿಂತುಚಿತ್ತಚರಿತನಾದ ಹರಿಯ ನಿತ್ಯ ಸೇವೆ ಮಾಡುವಳಂತೆ4ಗಂಡ ಹೆಂಡಿರ ಜಗಳವಂತೆ ಕೊಲ್ಹಾಪುರದಿ ಇರುವಳಂತೆಗಂಡ ವೈಕುಂಠ ಮಂದಿರಬಿಟ್ಟು ವೆಂಕಟಗಿರಿಯಲಿ ಇರುವನಂತೆ5'ೀರಪುರುಷ ವೇಷವಂತೆ ಕ್ರೂರ ದೈತ್ಯನ ಸೀಳಿದಳಂತೆಯಾರಿಗು ಗೊತ್ತಾಗದಂತೆ ರಾತ್ರಿ ಊರೊಳಗೆ ಬರುವಳಂತೆ 6ಭಾರತಹುಣ್ಣಿಮೆ ಜಾತ್ರಿಯಂತೆ ಭಾರಿಜನರು ಕೂಡುವರಂತೆಭಾರಿ ಡೊಳ್ಳು ಹೊಡಿವರಂತೆ ಭೂಪತಿ'ಠ್ಠಲ ನಗುವನಂತೆ 7ಹನುಮಂತದೇವರು
--------------
ಭೂಪತಿ ವಿಠಲರು
ಇದೋ ಬಂದಾನೇಳೇ ಭಾವೇ ನಿನ್ನರಸಾ| ಮುದದಿ ಪ್ರಾರ್ಥನೆಯ ಮಾಡಿ ಕರೆತಂದೆನೀಗ ಪ ನೊಸಲಲಿ ಇಟ್ಟ ಕಸ್ತೂರಿ ರತ್ನಮಯದಿಂದ| ಪೊಸಪರಿಯ ಕಿರೀಟವಧರಿಸಿ| ಎಸೆವ ಕುಂಡಲದಿಂದ ಪೊಳೆವಾಕದಪುಗಳು| ಬಿಸಿರು ಹದಳ ನೇತ್ರಲೊಪ್ಪುತ ನಮ್ಮ 1 ತುಂಬಿಯಂತೆ ವಳೆಕಾವಳಿ ಶೋಬಿ| ತುಂಬಜ ಮುಖ ಅತಿ ಸುಂದರ ರೂಪಾ| ಕಂಬುಕಂದರದಲಿ ಹಾರದಾ ಕೌಸ್ತಭ ಮಾಲೆ| ಅಂಬುಜಧರ ನೋಡು ಅರನಗೆ ನಗುತ್ತಾ 2 ಗರುಡನ ಮ್ಯಾಲೇರಿ ಕೊಂಡುತಾಹರುಷದಿ| ಪರಮ ಪಾವನೆ ಕೇಳು ಸದ್ಭಕುತಿಂದ| ಧರೆಯೊಳಾರಾರು ಕರೆದರೆ ಬಷ್ಟುವೆನೆಂಬ| ತೆರ ತೋರಿಸಲು ಮಹಿಪತಿ ನಂದ ನೊಡೆಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಈ ಧರಣಿಯೊಳ್ ಹದಿನಾರು ಸಾವಿರ ಮಂದಿ ಆಳುತ ದ್ವಾರಕೆಯಲ್ಲಿ ವಿನೋದದಿ ಕುಳಿತಿದ್ದ ಹರಿಯು 1 ಅಂಬುಜೋದ್ಭವನ ಅಂಕದಲುದಿಸಿದ ಸುತ ಚೆಂದ ಚೆಂದ ವೀಣೆ ಪಿಡಿದು ಕಂದರ್ಪಪಿತ (ನಲ್ಲಿಗೆ) ನಲಿನಲಿದಾಡುತ ಬಂದ ನಾರಂದ ಹರುಷದಲಿ2 ಬಂದ ನಾರಂದನ ಕಂಡು ಕಮಲನಾಭ ಚೆಂದದಿಂದಲಿ ಅಘ್ರ್ಯ ಪಾದಪೂಜೆಯ ಮಾಡಿ ನಾ- ರಂದಗೆ ಎರಗಿದನಾಗ3 ದೇವಾಧಿದೇವನೆ ದೇವಲೋಕದಿ ಸುತ್ತಿ ಈ ಪಾರಿಜಾತವ ತಂದೆ ದೇವಿ ರುಕ್ಮಿಣಿಗೀಗ ಮುಡಿಸೆಂದು ನಾರಂದ ಸ್ವಾಮಿಯ ಚರಣಕ್ಕರ್ಪಿಸಿದ 4 ತಕ್ಷಣದಿ ಜಗನ್ಮಾತೆ ಮಾಲಕ್ಷುಮಿ ಸಾಕ್ಷಾತ ಶ್ರೀನಾರಾಯಣನು ವಕ್ಷಸ್ಥಳದಲಿ ಹೊಂದಿರುವ ರುಕ್ಮಿಣಿಯನು ಸ್ತೋತ್ರ ಮಾಡಿದನು ನಾರದನು 5 ಕಡಲಶಯನ ಕಡೆಗಣ್ಣ ನೋಟಗಳಿಂದ ಕಡುಮುದ್ದು ಸುರಿವೊ ರುಕ್ಮಿಣಿಯ ಬಡನಡುವಿನ ಭಾಮಿನಿರನ್ನೆ ಬಾರೆಂದು ತೊಡೆಯ ಮ್ಯಾಲಿಟ್ಟ ಶ್ರೀಕೃಷ್ಣ 6 ದುಂಡುಮಲ್ಲಿಗೆ ಗೊಂಡ್ಯ ಚೌರಿ ರಾಗಟೆ ಜಡೆ- ಅಂಗನೆ ರುಗ್ಮಿಯಾಲಿಂಗನೆ ಮಾಡುತ ರಂಗ ತಾ ಮುಡಿಸಿದ ಸತಿಗೆ 7 ಸರಿಸವತೇರ ಬಿಟ್ಟು ಸುರಪಾರಿಜಾತವ ಗರುವಿಕೆಯಿಂದ ನೀ ಮುಡಿದೆ ಹರದಿ ಸತ್ಯಭಾಮೆ ಕೇಳಿ ಮುನಿದರಿನ್ನು ಅರಿಯೆನು ನಾ ಇದಕೆ ಉಪಾಯ 8 ಗಾಡಿಕಾರನು ಕೃಷ್ಣ ಆಡುವೊ ಮಾತನು ಕೇಳಿ ರುಕ್ಮಿಣಿ ನಗುತಿರಲು ಓಡುತ ಬಂದು ನಾರದ ಸತ್ಯಭಾಮೆ- ಗಲ್ಲದ ವಾರ್ತೆಗಳರುಹಿದನು 9 ಅಲ್ಲಿಂದ ದೇವಲೋಕವ ಸುತ್ತಿ ತಂದೇನೆ ಚೆಲ್ವೆನಗೆ ತಕ್ಕ ಕುಸುಮ ಗೊಲ್ಲ ಕೃಷ್ಣನ ಕೈಯಲ್ಲಿ ಕೊಟ್ಟರೆ ತನ್ನ ನಲ್ಲೆ ರುಕ್ಮಿಣಿಗೆ ಮುಡಿಸಿದನು 10 ಕೇಳುತ ಭಾಮೆ ತಲ್ಲಣಿಸಿ ಕೋಪಗಳಿಂದ ಹೇಮಮಾಣಿಕ್ಯದ್ವಜ್ರಾಭರಣ ಹಾರ ಪದಕ ಕಠಾಣಿಮುತ್ತನೆ ಚೆಲ್ಲಿ ಭೂಮಿಲಿ ಬಿದ್ದೊ ್ಹರಳಿದಳು 11 ಮಲ್ಲಿಗೆ ದವನ ಕ್ಯಾದಿಗೆ ಶಾವಂತಿಗೆ ಬಿಟ್ಟು ಒಲ್ಲೆನೆಂದೊರೆಸಿ ಕಸ್ತೂರಿಯ ವಲ್ಲಭನೊಲ್ಲದೀ ಸೊಗಸ್ಯಾತಕೆನುತಲಿ ಗಲ್ಲದ್ವಿಳ್ಯವನುಗುಳಿದಳು 12 ಸರ್ಪನಂದದಿ ಉಸುರ್ಹಾಕುತ ಭಾಮೆ ತಾ ನೇತ್ರದಿ ಜಲವ ಸುರಿಸುತಲಿ ಸರ್ಪಶಯನನೊಲ್ಲದೀ ದೇಹವ್ಯಾಕೆಂದು ಪಟ್ಟೆ ಮಂಚದಲೊರಗಿದಳು 13 ನಿಂತು ನೋಡುತ ಸತ್ಯಭಾಮೆ ಮಾಡುವೊದು ಇ- ನ್ನೆಂತು ಮಾಡಲಿಯಿದಕೆಂದು ಅಂತರಂಗದಲಿ ಯೋಚನೆ ಮಾಡಿ ನಾರಂದ ಶ್ರೀ- ಕಾಂತನ ಮನೆಮಾರ್ಗ ಹಿಡಿದ 14 ತಿರುಗಿ ಬಂದ್ಹರಿಯ ಮುಂದರುಹಿದ ನಾರಂದ ತೊರೆವೋಳು ತನ್ನ ಪ್ರಾಣವನು ಮರುಗುತ ಸೊರಗಿ ಬಿದ್ದಿರುವೊ ಭಾಮೆಯ ನೋಡಿ ಕರುಣವಿಲ್ಲೇನೊ ಶ್ರೀ ಕೃಷ್ಣ 15 ಮುನಿಯ ಮಾತನು ಕೇಳಿ ಮುಗುಳು ನಗೆಯ ನಕ್ಕು ಪರಿ ಬವಣೆಗೆ ಒಳಗಾದೆ ಧರೆಯ ಒಳಗೆ ಇಬ್ಬರ್ಹೆಂಡರಾಳುವೋರಿನ್ನು ಪರಮ ಮೂರ್ಖರು ಅವರೆಂದ 16 ಹೊದ್ದ ಪೀತಾಂಬರ ಅಲೆಯುತ ಶ್ರೀಕೃಷ್ಣ ಹದ್ದನೇರದೆ ನಡೆಯುತಲಿ ಮುದ್ದು ರುಕ್ಮಿಣಿಯ ಮುಂದಕೆ ಕರೆದ್ಹೇಳದೆ ಎದ್ದು ಬಂದನು ಭಾಮೆಮನೆಗೆ 17 ಅರ್ಕನಂತ್ಹೊಳೆಯುತ ಹೊಕ್ಕ ತನ್ನರಮನೆ ಕಕ್ಕಬಿಕ್ಕ್ಯಾಗಿ ನೋಡುತಲಿ ದಿಕ್ಕು ದಿಕ್ಕಿಗೆ ಬಿದ್ದಾಭರಣವಾರಿಸಿ ರತ್ನ ದೆಕ್ಕಿಲೇ(?) ಬಂದು ತಾ ಕುಳಿತ 18 ಮಿಂಚು ಸೂರ್ಯಗೆ ಮಿಗಿಲಾಗಿದ್ದ ಮುಖ ಬಾಡಿ ಸಂಪಿಗೆ ಸರವ ಈಡ್ಯಾಡಿ ಚಿಂತೆಮಾಡುವರೆ ಚಿನ್ನದ ಗೊಂಬೆ ಏಳೆಂದು ಮಂಚದ ಮ್ಯಾಲೆ ತಾ ಕುಳಿತ 19 ಬೆವರಿದ್ದ ಮುಖವ ಮುಂಜೆರಗಿಲಿಂದೊರೆಸುತ ಹ- ರವಿದ ಹಾರ ಹಾಕುತಲಿ ಪರಮ ಪ್ರೀತಿಲಿ ತನ್ನ ಕರಗಳಿಂದ್ಹಿಡಿದೆತ್ತೆ- ನ್ನರಗಿಳಿ ಏಳೆಂದೆಬ್ಬಿಸಿದ 20 ಸಿಟ್ಟಿಲಿಂದೆದ್ದು ಶ್ರೀ ಕೃಷ್ಣನ ಒಳೆಯಿಕ್ಕೆ ಬಿಟ್ಟವರಾರು ಈಗೆನುತ ದೃಷ್ಟಿ ತೆಗೆದು ಕೋಟಿಸೂರ್ಯ ಪ್ರಕಾಶನ ಇ- ಕ್ಕದ್ಹಾಗೆವೆಯ ನೋಡಿದಳು 21 ಇಷ್ಟು ಕ್ರೋಧಗಳ್ಯಾತಕೀ ಚಾಡಿ ನಾರಂದ ಹಚ್ಚಿ ಹೋದನೆ ಕದನವನು <ಈಔಓಖಿ size=
--------------
ಹರಪನಹಳ್ಳಿಭೀಮವ್ವ
ಈ) ರುದ್ರದೇವರು ವೃಷಭನೇರಿದ ವಿಷಧರನ್ಯಾರೆ ಪೇಳಮ್ಮಯ್ಯ ಪ ಹಸುಳೆ ಪಾರ್ವತಿಯ ತಪಸಿಗೆ ಮೆಚ್ಚಿದಜಟಾಮಂಡಲಧಾರಿ ಕಾಣಮ್ಮ ಅ.ಪ. ಕೈಲಾಸಗಿರಿಯ ದೊರೆಯಿವನಮ್ಮ-ಅದು ಅಲ್ಲದೆ ಕೇಳೆಬೈಲು ಸ್ಮಶಾನದಿ ಮನೆಯಿವಗಮ್ಮ-ಸಂಕರ್ಷಣನೆಂದುಕೇಳೆ ಮಹಿಯೊಳು ಜನ ಪೊಗಳುವರಮ್ಮ-ಇದು ನಿಜವಮ್ಮನಾಲಿಗೆ ಸಾಸಿರ ಫಣಿಭೂಷಣ ನಮ್ಮರಮೆಯರಸಗೆ ಇವ ಮೊಮ್ಮಗನಮ್ಮ 1 ಪತಿ ಇವನಮ್ಮ-ಮಾವನ ಯಾಗದಲಿಬ್ಹಾಳ ಕೃತ್ಯಗಳನು ನಡೆಸಿದನಮ್ಮ-ಸಾಗರದಲಿ ಹುಟ್ಟಿದಕಾಳಕೂಟವ ಭಕ್ಷಿಸಿದನಮ್ಮ-ರಾಮನ ದಯವಮ್ಮಮೇಲೆ ಉಳಿಯಲು ಶೇಷಗರಳವುನೀಲಕಂಠನೆಂದೆನಿಸಿದನಮ್ಮ2 ಹರನೊಂದಿಗೆ ವೈಕುಂಠಕೆ ಬರಲು-ತಾತಗೆ ವಂದಿಸುತತರುಣೀರೂಪವ ನೋಡ್ವೆನೆನಲು-ಹರಿ ತಾ ನಸುನಗುತಕರೆದು ಸೈರಿಸಲಾರೆ ನೀ ಎನಲು-ಹಠದಿ ಕುಳ್ಳಿರಲುಕರುಣೆಗಳರಸನು ಹರನ ಮೊಗವ ನೋಡಿಅರುಣೋದಯಕೆ ಬಾರೆಂದು ಕಳುಹಿದ 3 ಅರುಣೋದಯಕೆ ಗಂಗಾಧರ ಬರಲು-ಹದಿನಾರು ವರುಷದ ತರುಣೀರೂಪದಿ ಹರಿ ವನದೊಳಗಿರಲು-ಚರಣನಖಾಗ್ರದಿಧರಣೀ ಬರೆಯುತ್ತ ನಿಂತಿರಲು-ಸೆರಗ ಪಿಡಿಯೆ ಬರಲುಕರದಿ ಶಂಖ ಗದೆ ಚಕ್ರವ ತೋರಲುಹರನು ನಾಚಿ ತಲೆತಗ್ಗಿಸಿ ನಿಂತ4 ಮಂಗಳಾಂಗನೆ ಮಾರಜನಕ-ನಾ ಮಾಡಿದ ತಪ್ಪಹಿಂಗದೆ ಕ್ಷಮಿಸೊ ಯದುಕುಲ ತಿಲಕ-ವಕ್ಷದಲೊಪ್ಪುವ ನಿನ್ನಂಗನೆ ಅರಿಯಳು ನಖಮಹಿಮಾಂಕ-ಹೀಗೆನುತಲಿ ತವಕರಂಗವಿಠಲನ ಪದಂಗಳ ಪಿಡಿದು ಸಾಷ್ಟಾಂಗವೆರಗಿ ಕೈಲಾಸಕೆ ನಡೆದ 5
--------------
ಶ್ರೀಪಾದರಾಜರು
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು
ಎಣೆಯಾರೊ ನಿನಗೆ ಹನುಮಂತರಾಯ ಪ. ಎಣೆಯಾರೊ ನಿನಗೆ ತ್ರಿಭುವನದೊಳಗೆಲ್ಲಪ್ರಣತಜನಮಂದಾರ ಪವನಸುಕುಮಾರ ಅ.ಪ. ಅಡಿಗಡಿಗೆ ರಾಮ ಪದಾಂಬುಜಕೆ ವಂದಿಸುತನಡೆನಡೆದು ಮುದ್ರಿಕೆಯ ಪಡೆದು ಮುದದಿದಡದಡನೆ ಅಂಬುಧಿಯ ದಾಟಿ ಸೀತೆಗೆ ಗುರುತಕೊಡುಕೊಡುತ ಕುಸ್ತ್ತರಿಸಿದಂಥ ಹನುಮಂತ1 ಗರಗರನೆ ಪಲ್ಗಡಿದು ಕಲುಷದೈತ್ಯರನೆಲ್ಲಚರಚರನೆ ಸೀಳಿ ಸಂಭ್ರಮದಿಂದಬಿರಬಿರನೆ ಕಣ್ಬಿಡುತ ಬಿಂಕದಲಿ ಲಂಕೆಯನುಸುರಸುರನೆ ಬಾಲದಲಿ ಸುಟ್ಟ ರಣದಿಟ್ಟ 2 ಫಳಫಳನೆ ಆರ್ಭಟದಿಂದ ರಾವಣನ ನಳನಳನೆ ಬೆಳೆದ ನಂದನವ ಕಿತ್ತುಖಳಖಳನೆ ನಗುತ ದಶಕಂದರನ ಗುದ್ದಿ ಬಂದೆಭಳಿಭಳಿರೆ ಹಯವದನ ದಾಸ ನಿಸ್ಸೀಮ 3
--------------
ವಾದಿರಾಜ
ಏನಯ್ಯ ಧೊರೆಯೆ-ನಿನಗಾನಂದವೆ ಧೊರೆಯೇ ಪ ನುಡಿನೀನೊಲಿದಾಲಿಪುದುಅ.ಪ. ಜಾತಿಧರ್ಮವಿಲ್ಲಾ-ಶಾಸ್ತ್ರದರೀತಿನಡತೆಯಿಲ್ಲ ಮಾತಿದುಪುಸಿಯಲ್ಲಾ-ಮಾನದ-ಭೀತಿಯುಮೊದಲಿಲ್ಲಾ ನೀತಿಯನರಿಯದ-ಕೋತಿಗಳಂದವ ಜಾತಿಯ ಜನರೊಳು ಮಾತಿನವಾಶಿಯಿಲ್ಲ 1 ದುರ್ಜನರು ಬೆರೆದು-ದೋಷವಿ ವರ್ಜಿತರನ್ನು ಜರಿದು ಲಜ್ಜೆಯನೆರೆತೊರೆದು ಗರ್ವದಿ ಗರ್ಜಿಸಿ ಮೊರೆದು ಈ ಜಗದೊಳಗಿಹ ಸಜ್ಜನರಿಗೆ ಕುಲಕಜ್ಜಳರವ ಮತಿ ಗುಜ್ಜುಗಿಸುತ್ತಿಹ 2 ಗಂಡನ ಬಿಟ್ಟಿಹರು-ಗರತಿಯ-ಕಂಡು ನಗುತ್ತಿಹರು ಮಿಂಡರ ಬೆರೆದಿಹರು-ಮೇಲತಿ-ದಿಂಡೆಯರಾಗಿಹರು ಚಂಡಿಸುತಿರ್ಪರೋ 3 ಕೇಳುಹಂದೆಯಾಳು-ಕ್ಲೇಶವ ಪೇಳಲು ಮತಿತಾಳು ಕೀಳು ಜನರ ಬಾಳು ಕಿವಿಯಲ್ಲಿ ಕೇಳಬಹುದೆ ಪೇಳು ಜನರೂಳಿಗ ಬಲುಘನ 4 ಧರೆಯೊಳಧಿಕವಾದ ಶ್ರೀ ಪುಲಿ-ಗಿರಿಯೊಳು ನೆಲೆಯಾದ ಸಿರಿವರ ನಿಜಪಾದ-ಸೇವೆಯ-ಕರುಣಿಸು ಬಹುಮೋದ ಶರಣಾಭರಣ ನಿಜ ಕರುಣವ ತೋರಿಸು ವರದ ವಿಠಲಧೊರೆ ವರದದಯಾನಿಧೆ 5
--------------
ಸರಗೂರು ವೆಂಕಟವರದಾರ್ಯರು
ಏನು ಪವಮಾನಿ | ಏನು ಪವಮಾನಿ | ಈ ನಿಧಿಯಲಿ ಬಂದು ನಿಂದ ಕಾರಣ | ಮಾಣದೆ ಪೇಳು ನಿ | ದಾನದಿಂದಲಿ | ಮಾನಸದಲಿ | ದಾನವಾರಿಯ | ಧ್ಯಾನ ಮಾಡುವ ಜಾಣ ಜಗದ ಪ್ರಾಣ ಸುಂದರಾ | ನಾನಾ ಮಹಿಮಾ ಗುರುವೆ ಪ ಕೇಸರಿನಂದನ ಪಾಶವಿನಾಶ ನಿರ್ದೋಷ | ಭಾರತೀಶ ಈಶಾ | ಶೇಷಾದ್ಯರಿಗುಪದೇಶದ ಕರ್ತಾ | ಲೇಸು ಸದ್ಗುಣಗಣ ಕೋಶ ಸರಸಿಜಾಸನ ಪದವಿಗೆ ಸೇರುವಾತಾ || ದೇಶದೊಳು ಬಲುಭೂಷಣ ಪಾಕಶಾಸನ ಶರದ ಶರೀರ | ದಾಶರಥಿ ಪಾದಾಸರವಿಡಿ | ದೇಸು ಬಗೆಯಲಿ | ಮೋಸ ಪೋಗದಾಯಾಸಬಡದಲೆ | ಮೀಸಲ ಮನ ಸೂಸು ವನರಾಸಿ ಲಂಘಿಸಿ 1 ಪರಿಸರ ಪೋಗಲಾಸಮಯದಲ್ಲಿ | ಭಾಸುರ ಲಂಕೆ | ಯ ಶೋಧಿಸಿದನಾ ಗೋ | ಸಾಸಿರವಿತ್ತು ಕೂಸಿನಂದದಲಿ || ಭಾಷಿಯನಾಡಿ ಪದ್ಮಾಸನಿಗೆ ಸಂ | ಸವರಿ ಫಲ ಸವಿದು ಖಳನ ನಗುತ | ನಾಶಗೊಳಿಸಿದ ಸಮರ್ಥನೆ 2 ಹಿಂದೆ ಪ್ರಳಯದಲ್ಲಿಂದಿರೇಶನು ಸುರ್ವೃಂದ ಉದರದೊಳು | ಪೊಂದಿಟ್ಟುಕೊಂಡು ಆಗ | ಅಂದು ನೀನೊಬ್ಬನೇ ಮಂದನಾಗದೆ ನಯದಿಂದಲಿ ಎಚ್ಚತ್ತು | ಪೊಂದಿಕೊಂಡು ಇದ್ದೆ | ಇಂದು ಕದನದೊಳು ಇಂದ್ರಜಿತನು ಕರದಿಂದ ಸೆಳೆದÀ ಶರ | ದಿಂದಲಿ ಸಿಗಿಬಿದ್ದು | ಬಂಧಿಸಿಕೊಂಡಂಜಿನಿಂದಂತೆ ಮೈದೆಂದಿಗಿಲ್ಲದಂತೆ ನಂದವ ತೋರಿದೆ ಇಂದು ಮೌಳಿಯ ಪೊಂದಿದದಶ | ಕಂಧರನ ಮೊಗ ಮುಂದೆ ಭಂಗಿಸಿ | ಬಂದು ಗುದ್ದಿಲಿನೊದ್ದನು ಅವನಿರೆ | ಮಂದಹಾಸದಲಿಂದ ನಗುತ 3 ಪುರವನುರುಹಿ ಅಸುರರ ಸದೆದು ತೀ | ವರದಿಂದ ಶರಧಿಯ ಮರುಳೆ ಹಾರಿ ಬಂ | ದುರವಣಿಯಿಂದ ಶ್ರೀ | ಹರಿ ಚರಣಕ್ಕೆರಗಿ ಪೊಡಮಟ್ಟು | ಕರವನೆ ಮುಗಿದು | ಚೂಡಾಮಣಿ ಇಡೆ ಮುಂದೆ ವಿವರಿಸಿದೆ | ರಿಪುಗಳಾ | ಗರದ ವಿಸ್ತಾರ | ಸುರರು ಭಾಪುರೆ ಎಂದಂಬರದಲಿವಾದ್ಯ | ಬೆರೆದಲ್ಲಿ ಮೊರೆಯಾಗಿ ಅರಮರೆಯಿಲ್ಲದೆ | ತರಿಸಿ ಮಾರ್ಗವಸರದಲಿ ವಿಸ್ತರಿಸಿ | ಧುರದೊಳಗರಿಗಳಿಂದಲಿ ಮರಣವಾದವರನ ಎಬ್ಬಿಸಿ 4 ಪಾತಾಳದೊಳು ಹತ್ತು ತಲೆಯವನಿರಲು ಕಾತುರದಿಂದ ಹೋ ಮಾತುರಕಾರ್ಚಿಸೆ | ಮಾತು ಮುಂಚದ ಮುನ್ನ ಭೀತಿ ಇಲ್ಲದೆ ಪೋಗಿ | ಪಾತಕನವಧಾನ | ದಾತಗೆ ದಿವ್ಯವರೂಥವೆಂದೆನಿಸಿ ವಿ| ಧೂತ ರಾವಣನ ವಿ | ಪಾತನ ಗೈಸಿದೆ | ಪ್ರೀತಿ ಬಡಿಸಿ ನಿಜಾರಾತಿ ವಿಭೀಷಣಗೆ ತಪ್ಪದೆ ಲಂಕಾ | ನಾಥನ ಮಾಡಿ ನೀ | ರಘುನಾಥನ ಯಡೆ ನೀ ತೆಗೆದುಂಡೆ | ಶ್ರೀ ತರುಣೇಶ ವಿಜಯವಿಠ್ಠಲನ ದೂತಾ ಹನುಮಾ 5
--------------
ವಿಜಯದಾಸ
ಏನು ಹಾವಳಿ ಮಾಡುತಿಹನಮ್ಮ ಗೋಪಮ್ಮ ಕೇಳೆಏನು ಹಾವಳಿ ಮಾಡುತಿಹನಮ್ಮ ಪ ಏನು ಹಾವಳಿ ಮಾಡುತಿಹಮನೆ ಓಣಿಯಲಿ ಕ್ರೀಡಿಸುವ ಮಕ್ಕಳನುತಾನು ಅಳಿಸುವ ಹಿಡಿಯ ಪೋಗಲುವೇಣುನೂದುತ ಮೋಹಿಸುವನು ಅ.ಪ. ಮನಿಯೊಳು ತಾ ಪೊಕ್ಕು ನೋಡುವನೆ ಪಾಲ್ಮೊಸರ ಕೊಡಗಳಮನಸಿನಂದದಿ ತಿಂದು ಒಡೆಯುವನೆತಿನಿಸಿ ಬೆಕ್ಕಿಗೆ ಕ್ಷಣವು ತಡೆಯದೆ ವನಿತೆರೆಲ್ಲರು ಹಿಡಿಯ ಕೂಸಿನತನುವು ಧರಿಸಿ ನಿಂತ ಕಟಿಯಲಿ ಸ್ತನವ ತಿಂಬುವ ವನರುದೇಕ್ಷಣ1 ತರುಗಳಾಲಯದಲ್ಲಿ ತಾ ಬರುವಕರೆಸದಲೆ ಮುಂಚಿತ ತೊರಿಸಿ ಮೊಲೆಗಳ ಪಾಲ ತಾ ಕುಡಿದಕರಸಿಕೊಳ್ಳದೇ ಸುರಭಿ ತಿರುಗಲು ಸರಣಿಯೊಳು ತಾ ನಿಂತು ನಗುತಲಿ ತರುಣಿಯರ ಹೆರಳ್ಹಿಡಿದುಜಗ್ಗುತ ಕರದಿ ಸಿಗದಲೆ ಭರದಿ ಓಡುವ 2 ಕೂಸಿನಂದದಿ ತೊಡೆಯೊಳಾಡುವನೆ ಕ್ಷಣದೊಳಗೆ ಪತಿಗಳವೇಷಧರಿಸಿ ಮೋಸ ಮಾಡುವನೆತಾಸು ಘಳಿಗೆ ಬಿಡದೆ ನಮ್ಮ ನಿವಾಸ ಮಾಡುತ ಕಾಡುತಿಹಇಂದಿರೇಶವಚ್ಛವ ಸಾಕು ಮಾಡು ಹೇ ಶುಭಾಂಗಿ3
--------------
ಇಂದಿರೇಶರು
ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ರಂಗನ ಮಹಿಮೆಯ ಏನೆಂದ್ಹೇಳಲಿ ಪ ಘನ್ನಸಿರಿವಿಧಿ ಧ್ಯಾನಕೆ ನಿಲುಕದ ಅಗಣಿತ ಮಹಿಮೆಯ ಅ ಎಲ್ಲವ ಬಲ್ಲನು ಎಲ್ಲವ ಮಾಡುವ ಎಲ್ಲರ ಒಡೆಯನು ಇಲ್ಲದ ಸ್ಥಳವಿಲ್ಲ ಬಲ್ಲವರಿಲ್ಲವೆ ಫುಲ್ಲನಾಭನ ನಲ್ಲನು ಲಕ್ಷ್ಮಿಗೆ ಗೊಲ್ಲನು ಆದನೆ 1 ಅಂಗನೆ ಲಕ್ಷ್ಮಿಯ ಸೊಗಸಿಗೆ ನಿಲುಕದ ಅಂಗನೆ ಇಲ್ಲದೆ ಮಗನನು ಪಡೆದವ ಹಿಂಗದ ತಾನೆ ಅಂಗನೆ ಯಾದವ ರಂಗನ ಗೋಕುಲ ಹೆಂಗಳ ಕೂಡಿದನೆ2 ತಂದೆಯ ಕೊಂದನು ಕಂದನ ಸಲಹಿದ ಕಂದನ ಕೊಂದನು ತಂದೆಯ ಸಲಹಿದ ಬಂಧುಗಳೆನ್ನದೆ ಕೊಂದನು ವಂಶವ ತಂದೆಯು ಇಲ್ಲದೆ ಕಂದನು ಆಗುವನೇ 3 ದಾನವ ನೀಡಿದ ದಾನಿಯ ತುಳಿದನು ಮಾನವ ತೆಗೆದಾ ಹೀನನ ಸಲಹಿದ ದೀನರ ಸಲಹುವ ದಾನವರಳಿವನು ಜ್ಞಾನಿಗಮ್ಯನು ಮಾನಸ ಹಂಸನ 4 ಹಸಿವೆಯ ಅರಿಯದ ಅಸಮದೇವನು ಸೊಸಿಯು ನೀಡಿದ ಶಾಖವ ತಿಂದನೆ ಪಶುಪತಿ ಋಷಿಯನು ವಶವಾಗಿ ಮಾಡಿದ ಮಾಸದಮಹಿಮನು 5 ನಾಲ್ಮೊಗನಯ್ಯನು ಸುಳ್ಳನು ಹೇಳುತ ಕಳ್ಳನು ಆದನು ಗೊಲ್ಲರ ಭಕ್ತರಿಗೆ ಮೆಲ್ಲನೆ ಕುರುಕುಲ ಎಲ್ಲವ ಸವರಿದ ಬಲ್ಲಿದ ಕೃಷ್ಣಗÉ ಇಲ್ಲವೆ ಸಮರಧಿಕ 6 ಜಗವನು ಮಾಡುವ ಜಗವನು ಪಾಲಿಪ ಜಗವನು ಅಳಿಸುವ ಮಗುವಾಗಿ ಬಂದನೆ ಜಗಜೀವ ಭಿನ್ನನು ಜಗದೊಳು ವ್ಯಾಪ್ತನು ನಗುತಲಿ ಬಾಯಲಿ ಜಗವನು ತೋರಿದನೆ7 ಯಾಗವ ನಡೆಸಿದ ಯಾಗವ ಕೆಡಿಸಿದ ಯೋಗವ ಚರಿಸುತ ಯೋಗವ ಬೋಧಿಪನೆ ಬಾಗುವ ಭಕ್ತರ ನೀಗುವ ಕಲುಷವ ಆಗಮವಂದಿತ ಸಾಗರಶಯನನೆ8 ಹತ್ತವತಾರವ ನೆತ್ತಿದ ಮಹಿಮನು ಉತ್ತಮ ಭಕುತರ ತೆತ್ತಿಗನಾದನೆ ಬತ್ತಲೆ ಶಿಶುವಾಗಿ ಬಿತ್ತಿದ ಮೋಹವ ಬೆಸ್ತರಕುವರಿಗೆ ಆತ್ಮಜನಾದವನೆ9 ಚಕ್ರವಪಿಡಿದವ ನಕ್ರನ ತರಿದವ ಶಕ್ರನಕಾಯ್ದವ ವಕ್ರೆಯ ಕೂಡಿದನೆ ರಕ್ಕಸಯವನನ ಠಕ್ಕಿಲಿ ಅಳಿಸುತ ಭಕ್ತನಪೊರೆದಾ ಯುಕ್ತಗಳೊಡೆಯನೆ 10 ನಾರೆಂದೊದರಿದ ಉರುತರ ಪಾಪಿಯ ಭರದಿಂಪೊರೆಯೊ ಕರುಣಾಸಾಗರನೆ ನರಹರಿದೇವನು ಪರಿಪರಿರೂಪನು ಪರಿಪರಿಲೀಲೆಗೆ ಮೇರೆಯೆ ಇಲ್ಲಾವೇ 11 ವಾರಿಯಲಾಡುವ ಭಾರವ ಹೊರುವಾ ಕೋರೆಯ ತೀಡುವ ಘೋರವ ತೋರುವನೇ ವೀರರತರಿಯುವ ಕ್ರೂರರಸವರುವ ಜಾರನು ಆಗುವ ವೈರಿಗಳ್ವಂಚಿಪ ಏರುವ ತೇಜಿಯನೆ 12 ಅದ್ಬುತ ರೂಪವ ಕದನದಿ ತೋರಿದ ಬದರಿಯನಿಲಯಗೆ ತುದಿಮೊದಲಿಲ್ಲಾವೆ ಉದರದಿ ಮಗುವನು ಮುದದಿಂಸಲಹಿದ ಮುದಮುನಿ ಪ್ರಿಯನು ಹೃದಯದಿ ವಾಸಿಪನೆ 13 ವಿಷವನು ಕುಡಿದಾ ವೃಷಭವಾಹನ ಅಸುರನ ಭಯದಿಂ ಘಾಸಿಲಿ ಓಡುತಿರೇ ಮೋಸದಿ ಯುವತಿಯ ವೇಷವ ಧರಿಸುತ ಪಶುಪತಿ ಸಲಹಿದನೇ 14 ಭರದಿಂ ರಥವೆತ್ತಿ ನರನಂ ಕಾಯ್ದನು ಧರಣಿಯ ಒತ್ತುತ ಕುರುಪನ ಕೆಡಹಿದನೇ ಮರೆಸುತ ರವಿಯನು ಪೊರೆದನು ಚೇಲನ ಸುರವರಪೋಷಕ ಸಿರಿಪತಿ ಚದುರನ 15 ಗಂಗೆಯಪಡೆದ ಮಂಗಳ ಮಹಿಮನು ಹಿಂಗದೆ ಗೋಪರ ಸಂಗಡ ಆಡಿದನೇ ತಿಂಗಳ ಬೆಳಕಲಿ ಶೃಂಗರ ಸೊಬಗನು ಹೆಂಗಳ ಕೂಡುತ ಸಂಗೀತ ಪಾಡಿದನೆ 16 ಕಾಳಿಯ ಫಣೆಯಲಿ ಕಾಳಿಂದೀಶನು ತಾಳಕೆ ಕುಣಿಯುತ ಕೊಳಲನ್ನೂದಿದನೆ ಘೂಳಿಗಳಳಿಯುತ ನೀಲಳತಂದವ ಊಳಿಗ ಮಾಡಿದನೇ 17 ನಾರಿಯು ಮೊರೆಯಿಡೆ ಸೀರೆಯನೀಡಿದ ವಾರಿಜಾಕ್ಷನು ಸೀರೆಯ ಚೋರನೆ ನೀರೊಳು ಮುಳುಗಿದ ಪೋರರಿಗೆಲ್ಲ ತೋರಿದ ಜಗವನು ಸೂರಿಗಳೊಡೆಯನೆ 18 ಗರುಡನ ಏರುವ ಧರಣಿಯ ರಮಣನು ಏರುತಹುಡುಗರ ತುರುಗಳ ಕಾಯ್ದನೆ ಮಾರನಪಡೆದ ಮುರಹರಕೃಷ್ಣನು ಗಿರಿಯನು ಎತ್ತುತ ಹರುಷವ ಬೀರಿದನೇ 19 ಶೃತಿಗಳು ಪೊಗಳುವ ವ್ಯಾಪ್ತನ ನಿತ್ಯನ ಪಾತಕ ಹೋಗುವುದೇ ಅಂತಕ ಗತಿ ಮತಿ ಪ್ರೇರಕ ದಾತನು ಎಂತೆನೆ ಪ್ರೀತಿಲಿ ಸಲಹುವನೆ 20 ಮಜ್ಜಿಗೆ ಕಡೆಯುವ ರಜ್ಜುವಿನಿಂದಲಿ ಮೂರ್ಜಗನಯ್ಯನು ಕಟ್ಟಿಸಿಕೊಂಡಾನೆ ಲಜ್ಜೆಯ ಬಿಡುತಲಿ ಗೆಜ್ಜೆಯ ಕಟ್ಟುತ ಘರ್ಜಿಸಿ ಪಾಡಲು ಹೆಜ್ಜೆಯ ತೋರುವನೆ 21 ದಾಸರ ಪೋಷಿಪ ಶೇಷಗಿರೀಶನ ವಿಶೇಷವೆ ಬಣ್ಣಿಸೆ ಶೇಷಗೆ ಆಗದೆ ದೋಷವು ಇಲ್ಲದ ವಾಸುದೇವನೆ ತೋಷವ ನೀಡುವ ಸಾಸಿರ ನಾಮಕನೆ22 ಜಯಮುನಿ ಅಂತರ ವಾಯುವಿನಲ್ಲಿಹ ಜಯಕೃಷ್ಣವಿಠಲನು ಜೀಯನೆ ಜಗಕೆಲ್ಲ ನಯಭಯದಿಂದಲಿ ಹಯಮುಖನೊಲಿಸಲು ಭಯವನು ಹರಿಸುತ ನ್ಯಾಯದಿ ಪಾಲಿಪನೇ 23
--------------
ಕೃಷ್ಣವಿಠಲದಾಸರು
ಒದಗಿ ಬಂದಿತು ಯೋಗ ಒದಗಿ ಬಂದಿತು ಯೋಗ ಪ ಪದುಮೆಯರಸನು ರಥದೊಳಿರುವ ದರುಶನ ಭಾಗ್ಯ ಅ.ಪ ಭುಜಗಶಯನನು ದಿವ್ಯ ರಜತ ರಥದಲಿ ಬರಲು ಸುಜನರೆಲ್ಲರು ಸೇರಿ ಭಜನೆ ಮಾಡುವ ಭಾಗ್ಯ 1 ಅಂಗನಾಮಣಿಯರೆ ರಂಗವಲ್ಲಿಯೆ ಎತ್ತಿ ಮಂಗಳಾಂಗನು ದೀರ್ಘ ಮಾಂಗಲ್ಯವನೆ ಕೊಡುವ 2 ಬಾಲಕರ ಸಡಗರ ಬಾಲೆಯರ ವೈಯ್ಯಾರ ಬಾಲ ವೃದ್ಧರು ಸ್ವಾಮಿಯೋಲಗದಿ ಸಹಕಾರ 3 ಜಯಘೋಷಗಳ ಮಾಡೆ ಭಯಗಳನು ಬಿಡಿರಿ ಮನ ಬಯಕೆಗಳ ಆನಂದಮಯನು ನೀಡುವ ನಗುತ 4 ತನ್ನಿ ಫಲಕುಸುಮಗಳ ಧನ್ಯರಾಗಿರಿ ಕಣ್ಣಾರ ನೋಡಿ ಪ್ರಸನ್ನ ಶ್ರೀ ನಿಲಯನನು 5
--------------
ವಿದ್ಯಾಪ್ರಸನ್ನತೀರ್ಥರು
ಒಂದು ದಿನ ನಾರದಮುನಿ ಗೋಕುಲದಿ ಇಂದಿರೇಶನ ಲೀಲೆಯಾ ನಿಂದು ನಭದಲಿ ನೋಡುತಾ | ಮೈಯುಬ್ಬಿ ಬಂದನಾ ವೈಕುಂಠಕೆ 1 ಸಿರಿದೇವಿ ಸಖಿಯರೊಡನೆ | ವನದಲ್ಲಿ ಪರಿಪರಿಯ ಕ್ರೀಡೆಯೊಳಿರೇ ಅರವಿಂದ ನಯನೆಯನ್ನೂ | ಕಂಡನಾ ಸುರಮುನಿಯು ಸಂಭ್ರಮದಲೀ 2 ಜಗನ್ಮೋಹನಾಕಾರಳೂ | ಶ್ರೀ ಹರಿಯ ಜಗ ಸೃಷ್ಟಿಗನುಕೂಲಳೂ ಬಗೆ ಬಗೆಯವತಾರಳೂ | ಕ್ಷಣ ಹರಿಯ ಅಗಲದಂತಿರುತಿಪ್ಪಳೂ 3 ಹರಿಗೆ ಗುಣದಿಂ ಕಿರಿಯಳೂ | ಮತ್ತೆಲ್ಲ ಪರಿಯಲ್ಲಿ ಹರಿಗೆ ಸಮಳೂ ಶರಣೆಂದವರ ಕಾಯ್ವಳೂ | ಬೊಮ್ಮಾದಿ ಸುರರ ಸೃಜಿಸುವ ಶಕ್ತಳೂ 4 ನಾಕ ಸ್ತ್ರೀಯರನೆ ಕೂಡೀ | ವನದಲ್ಲಿ ಲೋಕನಾಯಕಿ ರಮಿಸುತಾ ಶ್ರೀಕಾಂತನಗಲದವಳೂ | ಮುನಿಗೆ ತ ನ್ನೇಕರೂಪವ ತೋರ್ದಳೂ 5 ನೊಡಿ ನಮಿಸಿದನು ಸಿರಿಯಾ | ಹರಿಗುಣವ ಹಾಡಿ ಪಾಡಿದನು ಮೈಯ್ಯಾ ಮೂಡೆ ರೋಮಾಂಚ ಕೈಯ್ಯಾ | ಮುಗಿಯುತಲಿ ನೋಡಿದನು ಸಿರಿಯ ದಣಿಯಾ 6 ಪಲ್ಲವಾಧರೆ ನಗುತಲಿ | ತನ್ನ ಕರ ಪಲ್ಲವದಿ ಕೃಪೆಯ ಮಾಡೀ ಎಲ್ಲಿಂದ ಬಂದೆ ಮುನಿಪಾ ವಿಷಯವೇ ನೆಲ್ಲ ಪೇಳೆಂದೆನ್ನಲೂ 7 ಏನ ಪೇಳುವೆನೆ ತಾಯೆ | ನಿನ ಪತಿಯ ನಾನಾ ವಿಧ ಚರ್ಯೆಗಳನೂ ನಾನರಿಯಲಾರೆ ನಮ್ಮಾ | ನವನೀತ ಚೋರನಾಗಿರುವನಮ್ಮಾ 8 ನಾಕ ಭೂಲೋಕ ತಿರುಗೀ | ಭುವಿಯೊಳಗೆ ನಾ ಕಂಡೆ ಗೋಕುಲವನೂ ಹೇ ಕಮಲೆ ಕೇಳು ಅಲ್ಲೀ | ನಿನ ಪತಿಯು ಆಕಳಾ ಕಾಯುತಿಹನೂ 9 ಬಿಟ್ಟು ವೈಕುಂಠವನ್ನೂ | ಪ್ರಾಯ ಸತಿ ದಿಟ್ಟೆ ನಿನ್ನನು ತೊರೆದನೂ ಹುಟ್ಟಿ ಗೊಲ್ಲರ ಕುಲದಲೀ | ಬೆರತನಾ ಕೆಟ್ಟ ಹೆಂಗಳೆಯರಲ್ಲಿ 10 ನಳಿನಜಾಂಡವ ಸಾಕುವಾ | ಜಗದೀಶÀ ಗೋಪಿ ಬೈ ಗಳನು ತಾ ಕೇಳುತಿಹನೂ 11 ಮದನಮೋಹನರೂಪನೂ | ಗೊಲ್ಲತೆರ ಅಧರಾಮೃತವ ಸವಿವನೂ ಎದೆ ಗಂಟು ಪಿಡಿಯುತಿಹನೂ | ಚಂಡೆಂದು ಗದರಿಸಲು ನುಡಿಯುತಿಹನೂ 12 ಸಂಪೂರ್ಣ ಕಾಮ ತಾನು | ವನದಲ್ಲಿ ಗುಂಪು ಸ್ತ್ರೀಯರ ಕೂಡ್ವನೂ ಸಂಪನ್ನ ಭೋಗಿಸುವನೂ | ಕೊಳಲ ಪಿಡಿ ದಿಂಪುಗಾನವ ಗೈವನೂ 13 ವನದ ಸೊಬಗೇನುಸುರುವೇ | ಶ್ರೀರಮಣಿ ದನಕರುವ ಕಾಯುತ್ಹರಿಯಾ ವನವನವ ತಿರುಗುತ್ತಿರೇ | ಕೊಳಲ ಧ್ವನಿ ವನವೆಲ್ಲ ತುಂಬಿರುತಿರೇ 14 ತಿಳಿಯುದಕ ಯಮುನೆ ಮಳಲು | ದಿಣ್ಣೆಯಲಿ ಕೊಳಲೂದೆ ಹರಿ ಕೇಳಲೂ ಮೊಳೆತವಾ ಬಂಜೆ ಮೋಟೂ | ಮೃಗಪಕ್ಷಿ ಕುಳಿತು ಮೈಮರೆತು ಕೇಳೇ 15 ಓಡಿ ಬರುತಲಿ ತುರುಗಳೂ | ಬಾಲವ ಲ್ಲಾಡಿಸದೆ ಕಣ್ಣುಮುಚ್ಚಿ ಮಾಡಿಟ್ಟ ಪ್ರತಿಮೆಯಂತೆ | ಕಾಣುತಿರೆ ಆಡಿಸದೆ ಸರ್ಪ ಹೆಡೆಯಾ 16 ಶೃಂಗಾರ ಕೊಳಲನೂದೆ | ಜಡ ಚೇತ ನಂಗಳಾಗುತ ಚಿಗುರಲೂ ಅಂಗ ಮರೆಯುತ ಜೀವಿಗಳ್ | ಜಡದಂತೆ ಕಂಗಳನುಮುಚ್ಚಿನಿಲ್ಲೆ 17 ಅಷ್ಟ ಐಶ್ವೈರ್ಯದಾತಾ | ನಾರಿಯರ ತುಷ್ಟಿಪಡಿಸುತಲಿ ಖ್ಯಾತಾ ಶಿಷ್ಟ ಜನರನು ಪೊರೆಯುತಾ | ರಕ್ಕಸರÀ ಹುಟ್ಟಡಗಿಸುವನು ವಿಹಿತಾ 18 ಪೇಳಲಳವಲ್ಲವಮ್ಮಾ | ಶ್ರೀ ಹರಿಯ ಲೀಲೆ ಜಾಲಗಳ ಬ್ರಹ್ಮಾ ನೀಲಗಳರರಿಯರಮ್ಮಾ | ಆನಂದ ತಾಳಿದೆನು ಕೇಳೆ ರಮ್ಮಾ 19 ಇಷ್ಟು ಗೋಕುಲದಿ ನೋಡೀ | ಕಾಣದಿ ನ್ನೆಷ್ಟೋ ಎನ್ನುತಲಿ ಪಾಡೀ ಗುಟ್ಟು ಪೇಳಲು ಬಂದೆನೂ | ಸಿರಿದೇವಿ ಸಿಟ್ಟಾಗಬೇಡವಿನ್ನೂ 20 ಪರನಾರಿಯರ ಬೆರೆಯುತಾ | ಶ್ರೀ ಕೃಷ್ಣ ಮರೆತು ನಿನ್ನನು ಸುಖಿಸುತಾ ಪರಿ ಯೊಚಿಸಮ್ಮಾ | ಆಜ್ಞೆ ಕೊಡು ತ್ವರಿತದಲಿ ಪೋಪೆನಮ್ಮಾ 21 ಹರಿಚÀರ್ಯವೆಲ್ಲ ಕೇಳಿ | ಶ್ರೀ ತರುಣಿ ಪರಮ ಆನಂದ ತಾಳೀ ಬೆರಗಾದ ಪರಿತೋರುತಾ | ಮುನಿವರಗೆ ಪರಿ ಏನು ಮುಂದೆ ಎನಲೂ 22 ಸನ್ನುತಾಂಗನ ಕೂಡಲೂ | ಭೂತಳದಿ ಇನ್ನೇನುಪಾಯವೆನಲೂ ಪನ್ನಂಗ ವೇಣಿ ಉದಿಸೂ | ಭೀಷ್ಮಕಗೆ ಇನ್ನು ನೀ ಕುವರಿ ಎನಿಸೂ 23 ಎಂತೆಂತು ಹರಿಯಚರ್ಯೆ | ಸಿರಿಕಾಂತೆ ಅಂತಂತು ನಿನ್ನ ಚರ್ಯೆ ಸಂತೋಷಪಡಿಸಿ ಎಮ್ಮಾ | ಸಲಹಮ್ಮ ಶಾಂತೆ ನಾ ಪೋಪೆನಮ್ಮಾ 24 ಮತ್ತೊಮ್ಮೆ ನೋಳ್ಪೆನೆಂದೂ | ಗೋಕುಲದ ಹತ್ತಿರದಿ ನಭದಿ ನಿಂದೂ ಸುತ್ತು ಮುತ್ತಲೂ ನೊಡಲೂ | ಸಿರಿದೇವಿ ವ್ಯಾಪ್ತಳಾಗಲ್ಲಿ ಇರಲೂ 25 ವನದಿ ಹರಿವಕ್ಷದಲ್ಲೀ | ಸಿರಿದೇವಿ ಘನ ವೇಣೂರೂಪದಲ್ಲೀ ವನಲಕ್ಷ್ಮೀರೂಪದಲ್ಲೀ | ಗೋಪಿಯರ ಪ್ರಣಯ ಪ್ರಕಾಶದಲ್ಲೀ 26 ಎಲ್ಲೆಲ್ಲಿ ಸೌಂದರ್ಯವೋ | ಉಲ್ಲಾಸ ಎಲ್ಲೆಲ್ಲಿ ವೈಭವಗಳೋ ಎಲ್ಲೆಲ್ಲಿ ಹರಿಲೀಲೆಯೋ | ಸಿರಿದೇವಿ ಅಲ್ಲಲ್ಲಿ ತಾನಿರುತಿರೆ 27 ಸಿರಿ ಹರಿಯ ಚರಿಯ ನೊಡಿದ ಪ್ರತಾಪಾ ಧರೆಗಿಳಿದು ನಮಿಸಿ ನಿಂದಾ | ಕ್ಷಮಿಸೆಂದು ಸಿರಿ ಹರಿಗೆ ಸ್ತೋತ್ರಗೈದಾ 28 ಸಿರಿಹರಿ ವಿಯೋಗವಿಲ್ಲಾ | ಆವಾವÀ ಕಾಲ ದೇಶದಲ್ಲೀ ಅರಿಯದಜ್ಞಾನ ನುಡಿಯಾ | ಮನ್ನಿಸೋ ಮಾಯಾ 29 ಜಯ ಜಯತು ಸುರವಂದ್ಯನೇ ಜಯ ಜಯತು ದುಷ್ಟಹರಣ | ಗುಣ ಪೂರ್ಣ ಜಯ ಜಯತು ಶಿಷ್ಟ ಶರಣಾ30 ಸ್ತುತಿಸುತಂಬರಕಡರಿದಾ | ಸುರಮುನಿಪ ಚ್ಯುತದೂರನತಿ ವಿನೋದಾ ಪತಿತರನು ಕಾಯ್ವ ಮೋದಾ | ಸುಖತೀರ್ಥ ಯತಿಗೊಲಿದು ಉಡುಪಿಲ್ನಿಂದಾ 31 ಆಪಾರ ಮಹಿಮ ಶೀಲಾ | ಸರ್ವೇಶ ಗೋಪಿಕಾ ಜನ ವಿಲೋಲಾ ಆಪನ್ನ ಜನರ ಪಾಲ | ಗುರುಬಿಂಬ ಗೋಪಾಲಕೃಷ್ಣವಿಠಲಾ 32
--------------
ಅಂಬಾಬಾಯಿ