ಒಟ್ಟು 40 ಕಡೆಗಳಲ್ಲಿ , 19 ದಾಸರು , 37 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣರ ಪರಿಪಾಲಾ ಶ್ರೀಲೋಲಾ ಪರಮ ಸುಂದರ ಬಾಲಾ ಪ. ರುಕ್ಮಿಣಿ ರಮಣಾ ರಕ್ಕಸ ಹರಣಾ ಶಕ್ರಾದಿನುತ ಚರಣಾಭರಣಾ 1 ಮಧ್ವ ಮುನೀಶಾ ಶುದ್ಧ ಪ್ರಕಾಶಾ ಪದ್ಮನಾಭ ಮನಶುದ್ಧಿಯ ನೀಡೋ 2 ಕಾಮಿತ ಫಲದಾ ಕೋಮಲ ಪಾದಾ ಶ್ರೀ ಮನೋಹರ ಸುರ ಕಾಮ್ಯ ಪ್ರದಾತಾ 3 ಮೃಡ ಸುರ ಪ್ರೀಯಾ ಧೃಡಮನ ಕೊಡು ನಿನ್ನಡಿಯಲಿ ಜೀಯಾ 4 ಗೋಪಿಯ ತನಯಾ ನೀ ಪಿಡಿ ಕೈಯ್ಯಾ ಗೋಪಾಲಕೃಷ್ಣವಿಠ್ಠಲ ಹೇ ಜೀಯ್ಯಾ 5
--------------
ಅಂಬಾಬಾಯಿ
ಶ್ರೀ ಕರಗ್ರಹ ಎನ್ನ ಸಾಕಲಾರದÉ ಹೀಗೆ ನೂಕಿ ಬಿಡುವುದು ನ್ಯಾಯವೆ ಪ. ಬೇಕೆಂದು ನಿನ್ನ ಪದ ನಾ ಕಾಣ ಬಂದರೆ ಈ ಕಪಟತನವು ಸರಿಯೆ ಹರಿಯೆ ಅ.ಪ. ಎಲ್ಲರನು ಸಲಹಿದಂತೆನ್ನ ನೀ ಸಲಹೆನ ನಿಲ್ಲದೆ ನೀರ ಪೊಗುವೆ ಸೊಲ್ಲು ಸೊಲ್ಲಿಗೆ ನಿನ್ನ ಸ್ತುತಿಪೆನೊ ಬಾರೆನಲು ಕಲ್ಲಡೀ ಅವಿತುಕೊಳುವೆ ಖುಲ್ಲನಲ್ಲವೊ ನಾನು ತಲ್ಲಣಿಪೆ ಪೊರೆ ಎನಲು ಹಲ್ಲು ಕೋರೆಯ ತೋರುವೆ ಎಲ್ಲಿ ಹೋಗಲೊ ನಾನು ಇಲ್ಲವೊ ಇನ್ನೊಬ್ಬ ಸೊಲ್ಲು ಕೇಳುವರನರಿಯೆ | ದೊರೆಯೆ 1 ತಡಬಡಿಸುತಿಹೆನೆನ್ನ ಪಿಡಿದು ಕೈ ಸಲಹೆನಲು ಘುಡು ಘುಡಿಸಿಕೊಂಡು ಬರುವೆ ಬಡವನೋ ನಾನು ನಿನ್ನಡಿಯನೇ ನೀಡೆನಲು ಹುಡುಗತನದಲಿ ಬೇಡುವೆ ತಡೆಯಲಾರೆನೊ ಭವದ ದಡವ ಸೇರಿಸು ಎನಲು ಕೊಡಲಿಯ ಪಿಡಿದು ಬರುವೆ ಕಡು ಬವಣೆ ಬಿಡಿಸೆಂದು ಅಡಿಗಡಿಗೆ ಎರಗಲು ಅಡವಿ ಅಡವಿಯ ತಿರುಗುವೆ | ಥರವೇ 2 ಹತ್ತು ನಾಲ್ಕು ಲೋಕಕೆ ತೆತ್ತಿಗನೊ ನೀನೆನಲು ಮುತ್ತ್ಯದೊರೆ ಎಂದೆನ್ನುವೆ ಸುತ್ತಿರುವ ಆವರಣ ಮತ್ತೆ ನೀ ಛೇದಿಸೆನೆ ಬತ್ತಲೆ ನೀ ನಿಲ್ಲುವೆ ಭೃತ್ಯ ನಾ ನಿನಗೆನಲು ಹತ್ತಿ ಕುದುರೆಯ ಓಡುವೆ ನಿತ್ಯ ಮೂರುತಿ ನಿನ್ನ ಕೃತ್ಯವೇ ಹೀಗಿರಲು ಮತ್ತಿನ್ನ ಹ್ಯಾಗೆ ಪೊರೆವೆ | ಕರೆವೆ 3 ದÉೂರೆಯು ನೀ ಜಗಕೆಂದು ಸುರರೆಲ್ಲ ನುಡಿಯುವರೊ ಅರಿಯೆ ನಾನದರ ಮಹಿಮೆ ಸಿರಿಗೊಡೆಯನಾದರೆ ಪೊರೆಯದೆಲೆ ಎನ್ನನು ಕರೆಕರೆಗೊಳಿಸುವರೆ ತಿರಿಯ ಬರಲಿಲ್ಲ ನಾ ಸಿರಿಯ ನೀಡೆಂದೆನುತ ಉರುತರದ ಭಯವೇತಕೆ ಚರಣ ಧ್ಯಾನವನಿತ್ತು ಪರಮ ಭಕ್ತರೊಳಿಡಿಸಿ ದೊರೆಯೆ ನೀ ಸಲಹ ಬೇಕೋ | ಸಾಕೋ4 ಆಪಾರ ಮಹಿಮನೆ ಆರ್ತಜನ ರಕ್ಷಕ ಪಾಪಿ ನಾನಿಹೆನೋ ಈಗ ನೀ ಪಿಡಿದು ಪೊರೆಯದಿರೆ ಕಾಪಾಡುವವರ್ಯಾರೊ ಶ್ರೀ ಪತಿಯೆ ನೀನೆ ತೋರೊ ತಾಪಪಡಲಾರೆ ಭವಕೂಪದೊಳು ಬಿದ್ದಿಹೆನು ನೀ ಕೃಪಾದಿಂದೀಕ್ಷಿಸೋ ಗೋಪಾಲಕೃಷ್ಣವಿಠ್ಠಲನೆ ನೀನಲ್ಲದಲೆ ಕಾಪಾಡುವವರನರಿಯೆ ದೊರೆಯೆ 5
--------------
ಅಂಬಾಬಾಯಿ
ಹಿಡಿದ ಕೈಬಿಡಬೇಡವೋ ರಾಮಾ ಪ ಹಿಡಿದ ಕೈ ಬಿಡಬೇಡ ಕಡಲವಾಸವು ಬೇಡ ತಡಿಗೆ ತಳೆಯದಿರಬೇಡ ಕಡೆಗಣ್ಣಿಡ ಬೇಡ ಅ.ಪ ನುಡಿ ಕೇಳದೆನಬೇಡ ಅಡಿದೋರದಿರ ಬೇಡ ಕುಡುಕ ಹೋಗೆನಬೇಡ ನುಡಿಸದಿರ ಬೇಡ ಕೊಡು ಕೊಡೆನ್ನಿಸಬೇಡ | ಪಡೆಯುವಾಸೆಯು ಬೇಡ ದೃಢವಾಗಿ ನಿನ್ನಡಿಯ ಹಿಡಿಸದಿರ ಬೇಡ 1 ಬಿಗುಮಾನ ಬೇಡಯ್ಯ ನಗುಮೊಗವ ತೋರಯ್ಯ ಬಗೆಯರಿತು ನಡೆಸಯ್ಯ ಸುಗತಿದೋರಯ್ಯ ಬಿಗಿಹಿಡಿದ ಕೈಯ ಜಗುಳಿಸಲು ಬೇಡಯ್ಯ ನಿಗಮ ವಂದಿತಜೀಯ ಮಾಂಗಿರಿಯ ರಂಗಯ್ಯ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಏಳು ವಾರಿಜನೇತ್ರ ಏಳು ಚಿನ್ಮಯಗಾತ್ರಏಳು ಪಾಂಡವಪಾಲ ಏಳುಸಿರಿಭೂಲೋಲಏಳು ಪಾವನಚರಿತ ಏಳೆರಡು ಜಗಭರಿತಏಳು ಯದುಕುಲಲಲಾಮಾ ಪ.ಮೂಡುತಿವೆಅರುಣಕಿರಣೋಡುತಿವೆ ತಮದ ಕುಲಬಾಡುತಿವೆ ತಾರಿನನ ಬೇಡುತಿವೆ ಚಕ್ರವಾಕಾಡುತಿವೆಕೀರಬಲು ಪಾಡುತಿವೆತುಂಬಿನಲಿದಾಡುತಿವೆಖಗಸಮೂಹರೂಢಿಯೊಳು ಮುನಿಜನರು ನೋಡಿ ರವಿಗತ ಹರಿಯಷೋಡಶುಪಚಾರಾರ್ಚನೆ ಮಾಡಿ ಮನದಣಿಯೆ ಕೊಂಡಾಡಿ ಕುಣಿದಾಡಿ ಭವಕಾಡನೀಡಾಡಿವರಬೇಡುತೈದಾರೆ ಗಡ ಹರಿಯೆ 1ವಿಷ್ಣುಪದೆ ವೃದ್ಧನದಿ ಕೃಷ್ಣವೇಣ್ಯಖಿಳ ಸಂಹೃಷ್ಟಿಪ್ರದೆ ಕಾವೇರಿ ಇಷ್ಟದಾ ಯಮುನೆಅಘನಷ್ಟಕಾರಣೆ ಭೀಮೆ ಶಿಷ್ಟಾಂಗೆ ತುಂಗೆವರತುಷ್ಟಿದಾಯಕ ನದಿಗಳುಕೃಷ್ಣ ನಿನ್ನಡಿಯುಗಳ ಸ್ಪøಷ್ಟರಾಗುತಲಿ ಉತ್ಕøಷ್ಟ ಪದ ಪಡೆವೆವೆಂದಷ್ಟ ದಿಗತಟದಿಂದಚೇಷ್ಟಿತ ತರಂಗದಿಂ ಸ್ಪಷ್ಟ ಬಂದಿರೆ ಕರುಣದೃಷ್ಟಿಯಿಂದವರ ನೋಡೈ ಹರಿಯೆ 2ಕೇಶನಾಕೇಶ ಕಕುಭೇಶಾದಿ ಅಮರರಾಕಾಶದಲಿ ದುಂದುಭಿಯ ಘೋಷ ಮೊಳಗಿಸಿದರನಿಮೇಷ ಮುನಿ ವೀಣೆಯುಲ್ಲಾಸದಿಂ ಮಿಡಿಮಿಡಿದು ಧನಶ್ರೀ ಭೂಪಾಳಿಯಿಂದಶೇಷಶಯನಖಿಳ ನಿರ್ದೋಷಗುಣಪೂರ್ಣಸರ್ವೇಶ ಮುಕುಂದ ಭಟಕೋಶನೆಂದವರು ನಿನ್ನಬೇಸರದೆ ಪಾಡುತಿಹರು ಶ್ರೀಶ ಪ್ರಸನ್ವೆಂಕಟೇಶನೆ ಒಲಿದುಪ್ಪವಡಿಸೊ ಹರಿಯೆ 3
--------------
ಪ್ರಸನ್ನವೆಂಕಟದಾಸರು
ಕೆಡಗೊಡದಿರು ದೇಶಿಗ ನಾ ರಂಗಕೆಡಗೊಡದಿರು ದೇಶಿಗ ನಾ ಪ.ನುಡಿ ನುಡಿದು ಮುಪ್ಪಾದೆ ನನ್ನಯನಡೆ ನೋಡಲು ಹುರುಳಿಲ್ಲಹುಡಿ ಹುಡಿಯಾದೆನೊ ವಿಷಯದ ಬಯಕೆಲಿಅಡಿಗಡಿಗೊದಗಿತು ಪಾಪವು ರಂಗ 1ಜಪತಪವ್ರತಗಳ ನೇಮವನರಿಯೆನಿಪುಣ ಪೂಜಾವಿಧಿಯರಿಯೆಅಪರಿಮಿತಶುಭಕ್ರಿಯದೊಳು ಕಾಮನಚಪಲತೆ ಭ್ರಮೆಗೊಳಿಸುತಿದೆ ರಂಗ 2ಹಿಡಿ ಹಿಡಿ ಮುಳುಗುವೆ ಯಾರಿಲ್ಲವೊ ಪಾಲ್ಗಡಲೊಡೆಯ ಭವಾಬ್ಧಿಯಲಿಚಡಪಡಿಸುವೆ ಮೂರುರಿಯಲಿಹರಿನಿನ್ನಡಿಯೆಡೆಲಿಡು ಪ್ರಸನ್ವೆಂಕಟ ರಂಗ 3
--------------
ಪ್ರಸನ್ನವೆಂಕಟದಾಸರು
ತಾರಿಸೊ ಶ್ರೀಹರಿ ತಾರಿಸೊ ಪತಾರಿಸೊ ಭವವ ನಿವಾರಿಸೊ ನಿನ್ನಡಿಯತೋರಿಸೊ ವೈಕುಂಠ ಸೇರಿಸೋ ರಂಗಯ್ಯ ಅ.ಪಪಾಪವಿನಾಶನ ಮಾಡುವಿ ನೀತಾಪಸರನುನಿತ್ಯಸಲಹುವಿ ||ವ್ಯಾಪಿಸಿ ಸರ್ವತ್ರ ನಿನ್ನವರನು ಕಾಯ್ವಶ್ರೀ ಪಾಂಡುರಂಗ ಪರಮಾತ್ಮ ಮುಕುಂದ 1ಹಿರಣ್ಯಕಶಿಪುವನು ಸೀಳಿದೆ ಅವನಕರುಳನು ಕೊರಳೊಳು ಹಾಕಿದೆ ||ದುರಳ ಬುದ್ಧಿಯ ತಳೆದ ದೈತ್ಯಾಧಮನ ಕೊಂದಕರುಣ ದಿಂದಲಿ ಕಂದಗೊಲಿದೆ ಗೋವಿಂದ 2ಅಸುರೆ ಪೂತನಿಯ ಸಂಹರಿಸಿದೆ ನೀಶಶಿಮುಖಿಯಭಿಮಾನ ಕಾಯ್ದೆ ||ಶಿಶುವಾಗಿ ಬಾಲಲೀಲೆಗಳನು ತೋರಿದೆಕುಸುಮನಾಭ ಶ್ರೀಪುರಂದರವಿಠಲ3
--------------
ಪುರಂದರದಾಸರು
ಮತ್ತವನಲ್ಲೊ ಮುರಾರಿ ನಿನಗೆ ನಾಮತ್ತವನಲ್ಲೊ ಮುರಾರಿ ನಿನ್ನಭೃತ್ಯರ ಭೃತ್ಯರ ಭೃತ್ಯರ ಭೃತ್ಯನಿಗೆತ್ತಣ ಸ್ವಾತಂತ್ರ್ಯ ಸಲಹಯ್ಯಶೌರಿಪ.ರಂಗಾ ನೀ ಕೊಳ್ಳದ ಬಂಗಾರ ತಳಿಗ್ಯೂಟನುಂಗುವ ಮತ್ತವನಲ್ಲೊರಂಗಾ ನಿನ್ನ ಮರೆದಂಗನೆಯರನಾಲಂಗಿಸಿ ಮತ್ತವನಲ್ಲೊರಂಗಾ ನಿನ್ನೊಲುಮೆಯ ಡಿಂಗರರಂಘ್ರಿಗೆರಂಗದೆ ಮತ್ತವನಲ್ಲೊರಂಗಾ ನಿನ್ನೆಂಜಲೆನ್ನಂಗೈಯೊಳುಂಡು ರಾಜಂಗಳನುಡುಗುವ ಬಡವ ನಾನಲ್ಲದೆ 1ನಾಥನೆ ನಾನೆಂದು ಮಾತು ಕಲಿತುಖಳವ್ರಾತಸಂಗದಿ ಮತ್ತವನಲ್ಲೊನಾಥ ನಿನ್ನ ಮೀರಿದಾತನುಂಟೆಂದು ನಿರ್ಭೀತಿಲಿ ಮತ್ತವನಲ್ಲೊನಾಥ ನಿನ್ನ ಗುಣಖ್ಯಾತಿ ಹೊಗಳದನ್ಯಸ್ತೌತ್ಯದಿ ಮತ್ತವನಲ್ಲೊನಾಥ ನಿನ್ನಡಿಯ ತೀರಥವೆ ಗತಿಯೆಂದುಯಾತನೆಗಂಜುವ ಬೆದರುಗುಳಿಯಲ್ಲದೆ 2ತಂದೆ ನೀ ಮಾರಿದರೊಂದೊಪ್ಪು ಕೊಂದರೊಪ್ಪೆಂದಿಗೆ ಮತ್ತವನಲ್ಲೊತಂದೆ ನಿನ್ನ ಮನೆ ಹೊಂದಿದಟ್ಟಣೆಗೈದಿಬಂಧಿಸು ಮತ್ತವನಲ್ಲೊತಂದೆ ನಿನ್ನಾಯುಧ ಸಂದು ಸಂದಿಗೆ ಕಾಸಿತಂದಿಡು ಮತ್ತವನಲ್ಲೊತಂದೆ ಪ್ರಸನ್ನವೆಂಕಟಿಂದಿರೇಶನೊಬ್ಬ ಅಹುದೆಂದ ಸೊಕ್ಕೊಂದುಳ್ಳವನಲ್ಲದೆ 3
--------------
ಪ್ರಸನ್ನವೆಂಕಟದಾಸರು