ಒಟ್ಟು 76 ಕಡೆಗಳಲ್ಲಿ , 20 ದಾಸರು , 40 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಾನೇಕೆ ಪರದೇಶಿ ನಾನೇಕೆ ಬಡವನೊಮಾನಾಭಿಮಾನದೊಡೆಯ ವಿಠಲ ಎನಗಿರಲು ಪಮೂರುಲೋಕದ ಒಡೆಯ ಶ್ರೀಹರಿಯು ಎನ್ನ ತಂದೆವಾರಿಜಾಂಬಕೆ ಲಕ್ಷ್ಮೀ ಎನ್ನ ತಾಯಿ ||ಮೂರು ಅವತಾರದವರೆನ್ನಗುರುಕಾಣಿರೊಸಾರಹೃದಯರು ಎನ್ನ ಬಂಧು ಬಳಗ1ಇಪ್ಪತ್ತುನಾಲ್ಕು ನಾಮಗಳೆಂಬ ಹಳನಾಣ್ಯಒಪ್ಪದಲಿ ಉಣಲುಂಟು ಉಡಲುಂಟು ತೆಗೆದು ||ತಪ್ಪದಲೆ ನವಭಕ್ತಿಯೆಂಬ ನವರತ್ನಗಳುಮುಪ್ಪು ಇಲ್ಲದ ಭಾಗ್ಯ ಎನಗೆ ಸಿದ್ಧವಿರಲಿಕ್ಕೆ 2ಎನಗೆ ಎಂಬವನ ಹೆಸರೇನೆಂಬೆ ಶ್ರೀನಿವಾಸತನಗೆಂದರೆಂದು ಬಗೆವನು ಕಾಣಿರೊ ||ಘನಮಹಿಮನಾದಸಿರಿಪುರಂದರವಿಠಲನುಅನುಮಾನವಿರದೆನ್ನ ಶಿರದ ಮೇಲಿರಲಿಕ್ಕೆ 3
--------------
ಪುರಂದರದಾಸರು
ನಾನೇಕೆ ಬಡವನೊ -ನಾನೇಕೆ ಪರದೇಶಿನೀನಿರುವತನಕ ಹರಿಯೇ ಪಪುಟ್ಟಿಸಿದ ತಾಯ್ತಂದೆ ಇಷ್ಟಮಿತ್ರರು ನೀನೆಅಷ್ಟೆಲ್ಲ ಬಳಗ ನೀನೆ ||ಪೆಟ್ಟಿಗೆಯೊಳಗಿನ ಅಷ್ಟಾಭರಣ ನೀನೆಶ್ರೇಷ್ಠಮೂರುತಿ ಕೃಷ್ಣ ನೀನಿರುವ ತನಕ 1ಒಡಹುಟ್ಟಿದಣ್ಣ ನೀನೆ, ಒಡಲ ಹೊರೆವನ ನೀನೆಇಡು-ತೊಡುವ ವಸ್ತು ನೀನೆ ||ಮಡದಿ ಮಕ್ಕಳನೆಲ್ಲ ಕಡಹಾಯ್ಸುವವ ನೀನೆಬಿಡದೆ ಸಲಹುವ ಒಡೆಯ ನೀನಿರುವ ತನಕ 2ವಿದ್ಯೆಹೇಳುವಗುರುನೀನೆ ಬುದ್ಧಿ ಹೇಳುವ ಧಣಿ ನೀನೆಉದ್ಧಾರಕರ್ತ ನೀನೆ ||ಮದ್ದು ಶ್ರೀಪುರಂದರವಿಠಲನ ಪಾದದಲಿಬಿದ್ದು ಲೋಲಾಡುತಿರು ಕಾಣು ಮನವೆ 3
--------------
ಪುರಂದರದಾಸರು
ಪಾಪಿಗೇತಕೆ ಪರಮಾತ್ಮಬೋಧ <?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಕೋಪಿಗೇತಕೆ ಸುಗುಣ - ಶಾಂತ ಬುದ್ಧಿ ಪ.ಹಂದಿಗೆ ಗಂಧವೇಕೆ ಅಂಧಕೆ ಕನ್ನಡಿಯೇಕೆಮಂದಮತಿ ಮನುಜರಿಗೆ ಮಂತ್ರವೇಕೆತಂದೆ - ತಾಯಂದಿರಿಗೆಕುಂದು ತರುವ ಮಗಳೇಕೆನಿಂದುವಾದಿಸುವಂಥ ಸತಿಯು ತಾನೇಕೆ1ಕತ್ತೆಗಮ್ರತವೇಕೆ ಎತ್ತಿಗೆ ಕರೆಹವೇಕೆತೊತ್ತಿಗೆ ಛತ್ರದ ನೆರಳೇತಕೆಕುತ್ತಿಗೆ ಕೊಯ್ಯುವನ ಸೊಗಸು ಮಾತುಗಳೇಕೆಸತ್ಯವಿಲ್ಲದೆ ನುಡಿವ ಯೋಗಿಯೇಕೆ 2ಷಂಡಗೆ ಹೆಂಡತಿಯೇಕೆ ತೊಂಡಿರಿಗೆ ಖಂಡೆಯುವೇಕೆಮುಂಡೆಮೋಳಿಗೆ ಮುತ್ತಿನ ದಂಡೆಯೇಕೆಮಂಡಳದೊಳಗೆ ಶ್ರೀ ಪುರಂದರವಿಠಲನಕಂಡು ಭಜಿಸದ ಮನುಜರಿದ್ದೇತಕೆ 3
--------------
ಪುರಂದರದಾಸರು
ಮಾನಹೀನರಿಗೆ ಅಭಿಮಾನವೇಕೆ - ಪ್ರಧಾನಿಯಿಲ್ಲದ ಅರಸುತನವೇಕೆ ಕೃಷ್ಣಾ ? ಪ.ಕಾಡಿನೊಳು ತಿರುಗುವಗೆಕನಕ ಭೂಷಣವೇಕೆ ?ಓಡಿನಲಿ ಉಂಬುವಗೆ ಹರಿವಾಣವೇಕೆ ?ಬೇಡಿದರೆ ಕೊಡದ ಲೋಭಿಗೆ ಬಿಂಕವೇಕೆ ?ಪಾಡಲರಿಯದೆ ಪ್ರೌಡತನವೇಕೆ ಕೃಷ್ಣಾ ? 1ಪತಿ ಮೀರಿ ನಡೆವಳ ವ್ರತ ನೇಮತನವೇಕೆ ?ಸತಿಗಳುಕಿ ನಡೆವವಗೆ ಸ್ವಾತಂತ್ತ್ಯವೇಕೆ ?ಮತಿಗೆಟ್ಟು ತಿರುಗುವಗೆ ಮಂತ್ರ - ತಂತ್ರಗಳೇಕೆ ?ಅತಿಯಾಸೆ ಬಿಡದ ಸಂನ್ಯಾಸಿ ತಾನೇಕೆ 2ಕಾಮವಿಲ್ಲದವರಿಗೆ ಕಾಂತಿಯರ ಗೊಡವೇಕೆ ?ಪ್ರೇಮವಿಲ್ಲದ ಬಂಧು - ಬಳಗವೇಕೆ ?ಸ್ವಾಮಿ - ಶ್ರೀ ಪುರಂದರವಿಠಲ ನೆನೆಯದತಾಮಸದ ಜನರಿಂಗೆ ಕೈವಲ್ಯವೇಕೆ ? 3
--------------
ಪುರಂದರದಾಸರು
ಮಾಯೆಎನ್ನ ಕಾಯವನ್ನುಪಾಯದಿಂದ ಮೋಹಿಸಿ |ಬಾಯ ಮುಚ್ಚಿ ಕೊಲ್ಲುತಿಹಳು ಕಾಯೊ ಲಕ್ಷ್ಮೀರಮಣನೆ ಪಮಾತೆ-ಪಿತರ ವಿಷಯದಿಂದ ಶ್ವೇತಬಿಂದು ಬೀಳಲಾಗಿ |ಕೀತ ತತ್ತಿ ಬಲಿದು ಮಾಸಚೀಲದೊಳಗೆ ಬೆಳೆದೆನು ||ರಕ್ತಗೂಡಿ ಬಸಿರೊಳೊಂಬತ್ತು ತಿಂಗಳಿದ್ದೆ ನಾನು |ಸತ್ತು ಮತ್ತೆ ಹುಟ್ಟ ಹೋಗಲಾರೆ ಲಕ್ಷ್ಮೀರಮಣನೆ 1ಎಲವು ಕಂಬಮಾಡಿ ನರದ ಬಳ್ಳಿಯಲ್ಲಿ ಬಿಗಿದು ಬಿಗಿದು |ಒಳಗೆ ರಕ್ತದಿಂದ ಮೆತ್ತಿ ಹೊಸೆ ಪಾಪದಿಂದ ನಿಂದೆ ||ನೆಲೆಯ ಮನೆಯ ಮಾಡಿ ಚರ್ಮಹೊಲಿzಯ ಹೊದಿಕೆ ಹೊದಿಸಿದಂಥ |ಹೊಲೆಯ ಗೂಡಿನಲ್ಲಿ ಜನಿಸಲಾರೆ ಲಕ್ಷ್ಮೀರಮಣನೆ 2ಎನ್ನ ಸತಿಯು ಎನ್ನ ಸುತರು ಎನ್ನ ಬಂಧು - ಬಳಗವು |ಎನ್ನ ಸಾಕಿ ಸಲಹು ಎಂದು ಹರಿದು ತಿಂಬರು ||ಎನ್ನ ತನುವ ಜವನು ಬಂದು ಎಳೆದುಕೊಂಡು ಒಯ್ಯುವಾಗ |ಬೆನ್ನಬಪ್ಪರಾರ ಕಾಣೆ ಚೆನ್ನ ಲಕ್ಷ್ಮೀರಮಣನೇ 3ಇರುವೆ ಮೊದಲು ಆನೆ ಕಡೆಯು ಬಸಿರೊಳು ಬಂದೆ ನಾ |ಹರಿದು ಪಾಪಕರ್ಮದಿಂದೆ ತೊಪಳಲಿಬಳಲಿ ನೊಂದೆ ನಾ ||ಬಿರುಗಾಳಿಗೆ ಸಿಕ್ಕ ಮರದ ತರಗೆಲೆಯಂತುದುರಿ ನಾ |ಮರಳಿ ಮರಳಿ ಸತ್ತು ಹುಟ್ಟಲಾರೆ ಲಕ್ಷ್ಮೀರಮಣನೆ 4ಲಕ್ಷ ಜೀವರಾಶಿಗಳನು ಕುಕ್ಷಿಯೊಳಗೆ ಇರಿಸಿ ನಿನ್ನ |ಅಕ್ಷಯ- ಅನಂತ ನನ್ನನೇಕೆ ಹೊರಗೆ ಮಾಡಿದೆ ||ಈಕ್ಷಿಸುತಿರು ಎನ್ನ ನೀನು ಕುಕ್ಷಿಯೊಳಗೆ ಇಂಬನಿತ್ತು |ರಕ್ಷಿಸಯ್ಯ ಲಕ್ಷೀಪತಿಪುರಂದರವಿಠಲನೆ5
--------------
ಪುರಂದರದಾಸರು
ಮುಟ್ಟು ಮುಟ್ಟೆನ್ನುತ ಮೂರ್ನಾರು ಹೊರಲೆಮುಟ್ಟಲಿ ಬಂತೆ ಬಿಕನಾಶಿಪಮುಟ್ಟೋ ನೀನೇ ಮಡಿಯೂ ನೀನೇಕೆಟ್ಟಿತು ನಿನಮಡಿ ಮೊದಲೇ ಜಲದಲಿ ನೀ ಮುಳುಗೆಕಡೆಯಲಿ ಆ ಉದಕವನೇ ತರುವೆದೇವರಿಗಿಂದಭಿಷೇಕವ ಮಾಡುತಅಹಂನ ಬಿಡು ನಿನ ಬಿಕನಾಶಿ1ಎಲುಬು ಚರ್ಮದಿ ಮಲಮೂತ್ರದ ಗೂಡಲಿನಲಿಯುತಲಿದ್ದೆ ಬಿಕನಾಶಿನೆಲೆಗೊಂಡಾ ನವ ದ್ವಾರದ ಜಲದೊಳುತೊಳಲುತ ಬಿಕನಾಶಿ2ಹುಟ್ಟುತಸೂತಕಹೊಂದುತಸೂತಕನಟ್ಟ ನಡುವೆ ಬಿಕನಾಶಿಪಟ್ಟಣದಾ ಕಾವೇರಿ ಮುಳುಗಲುಮುಟ್ಟು ತೇಲಿಯಿತೆ ಬಿಕನಾಶಿ3ಉತ್ತಮ ಹತ್ತಿ ಬತ್ತಿರಲಾಂಜನವೃಕ್ಷದಿ ಬೆಳೆವುದೆ ಬಿಕನಾಶಿಉತ್ತಮ ರೋಧನ ಭಾರವ ಕೆಡಿಸಲುಕೆಟ್ಟಿತು ನಿನ ಮಡಿ ಬಿಕನಾಶಿ4ನಾನಾ ಶಾಸ್ತ್ರವನೋದಿ ನಾ ನಿನ್ನ ಮರೆವೆನುಹೀನವ ಬಿಡು ನಿನ್ನ ಬಿಕನಾಶಿನಾನಾ ಶಾಖದಲಿ ಇರಲಾದರೂರ್ವಿಅದುರುಚಿತಿಳಿವುದೆ ಬಿಕನಾಶಿ5ಚರ್ಮವು ತೊಳೆದರೆ ಕರ್ಮವು ಹೋಯಿತೆಕರ್ಮವು ಬಿಡದು ನಿನ್ನ ಬಿಕನಾಶಿಒಮ್ಮೆ ಚಿದಾನಂದ ಪಾದವ ಸ್ಮರಿಸಲುನಿರ್ಮಲವಾದೆಯ ಬಿಕನಾಶಿ6
--------------
ಚಿದಾನಂದ ಅವಧೂತರು
ಯೋಗ ಯೋಗಗಳೆಂದು ಕಸಿವಿಸಿ ತಾನೇಕೆಯೋಗವು ತಾನದೆ ಬಂಧಯೋಗವ ಬಿಟ್ಟು ತನ್ನನೆ ಬ್ರಹ್ಮನೆಂದೆನೆಯೋಗವೆ ರಾಜಯೋಗವೆಂದಪವ್ರತನೇಮ ಶೌಚದಿ ಮುಕ್ತಿಯು ಎಂದನೆವ್ರತನೇಮ ಶೌಚವು ಬಂಧಪ್ರತಿಯಿಲ್ಲದಾ ವಸ್ತು ತಾನೆಂದು ಚಿಂತಿಸೆಅತಿರಾಜಯೋಗವೆಂತೆಂದ1ಮೂರ್ತಿಧ್ಯಾನಷ್ಟಾಂಗದಲಿ ಮುಕ್ತಿಯೆಂದನೆಮೂರ್ತಿಧ್ಯಾನಷ್ಟಾಂಗ ಬಂಧಕರ್ತೃನಾ ಸರ್ವ ಕಾರಣವೆಂದು ಚಿಂತಿಸೆಕರ್ತೃರಾಜಯೋಗವೆಂದ2ಲಯ ಲಕ್ಷದಿಂದ ಮುಕ್ತಿ ಎಂದೆನೆಲಯ ಲಕ್ಷ ತಾನದು ಬಂಧಸ್ವಯಂ ಬ್ರಹ್ಮವೆಂದು ತಾನೆ ಚಿಂತಿಸಿನಿಯಮವು ರಾಜಯೋಗವೆಂದ3ಖೇಚರಿ ಭೂಚರಿಯಲಿ ಮುಕ್ತಿ ಎಂದೆನೆಖೇಚರಿ ಭೂಚರಿ ಬಂಧವಾಚಾತೀತ ವಸ್ತು ತಾನೆಂದು ಚಿಂತಿಸೆಗೋಚರ ರಾಜಯೋಗವೆಂದ4ಎರಡಕ್ಕೆ ತಾವಿಲ್ಲ ಇಹನೊಬ್ಬನೇ ತಾನೇಎರಡಾಗಿ ಕಾಂಬುದೊಂದೇ ಬಂಧಗುರುಚಿದಾನಂದನ ಸಾಕ್ಷಾತ್ಕಾರವೆಂದೆನೆಗುರಿಯದು ರಾಜಯೋಗವೆಂದ5
--------------
ಚಿದಾನಂದ ಅವಧೂತರು
ವೈದ್ಯ ಬಂದ ನೋಡಿ - ವೆಂಕಟನೆಂಬ |ವೈದ್ಯ ಬಂದ ನೋಡಿ ಪ.ವೈದ್ಯ ಬಂದನು ವೇದವೇದ್ಯ ನೋಡೀಗಲೇಶ್ರೀದೇವಿರಮಣನು ಶ್ರೀನಿವಾಸನೆಂಬ ಅಪಎಷ್ಟು ದಿನದ ರೋಗಗಳೆಂಬುದ ಬಲ್ಲ |ಗಟ್ಟಿಯಾಗಿ ಧಾತುರಸಗಳನು ಬಲ್ಲ ||ಕಷ್ಟ ಬಡಿಸದಲೆನ್ನ ಭವರೋಗ ಬಿಡಿಸುವ |ಶಿಷ್ಟವಾದ ದೇಹ ಕೊಟ್ಟು ಕಾಯುವನಿವ 1ಹೊನ್ನು - ಹಣಂಗಳ ಅನ್ನವ ಅನುಸರಿಸಿ |ತನ್ನ ದಾಸನೆಂಬ ನಿಜವ ನೋಡಿ ||ಚೆನ್ನಾಗಿ ಜಿಹ್ವೆಗೆ ಸ್ವಾದವಾಗಿರುವಂಥ |ತನ್ನ ನಾಮಾಮೃತ ದಿವ್ಯ ಔಷಧವೀವ 2ಈತ ದಿಟ್ಟಿಸಿ ನೋಡೆ ಎಳ್ಳಷ್ಟು ರೋಗವಿಲ್ಲ |ಈ ತನುವಿಗೆಂದೆಂದು ರೋಗಬರಲರಿಯದು ||ಈತ ಅನಂತರೂಪದಿ ಜೀವರಿಗೆ ಮುನ್ನ |ಪ್ರೀತಿಯಿಂದಲಿ ಭವರೋಗ ಬಿಡಿಸುವ 3ಧರ್ಮವೈದ್ಯನಿವ ಜಗಕ್ಕೆಲ್ಲ ಒಬ್ಬನೆ |ಮರ್ಮಬಲ್ಲ ರೋಗಜೀವಂಗಳ ||ನಿರ್ಮಲವಾಗಿಹ ತನ್ನ ನಾಮಸ್ಮರಣೆ |ಒಮ್ಮೆ ಮಾಡಲು ಭವರೋಗ ಬಿಡಿಸುವ 4ಅನ್ಯ ವೈದ್ಯನೇಕೆ ಅನ್ಯ ಔಷಧವೇಕೆ ? |ಅನ್ನ ಮಂತ್ರ - ತಂತ್ರ - ಜಪವೇತಕೆ ? ||ಚೆನ್ನ ಪುರಂದರವಿಠಲನ್ನ ನೆನೆದರೆ |ಮನ್ನಿಸಿ ಸಲಹುವ ವೈದ್ಯ ಶಿರೋಮಣಿ 5
--------------
ಪುರಂದರದಾಸರು
ಸಾಧನವೇಕೆ ಸಾಧನವೇಕೆಸದ್ಗುರುನಾಥ ಸನಿಹದಿ ಇರಲಿಕೆಪಯಮನಿಯಮಾಸನ ಎಂಬಿವು ಯಾಕೆಕಮಲಾಸನವನು ಬಲಿಯಲದೇಕೆಶ್ರಮದಲಿ ವಾಯುವ ಬಿಗಿಯಲದೇಕೆಭ್ರಮಿತದಿ ಬ್ರಹ್ಮನ ಕಾಣುವುದೇಕೆ1ಮಿತ ಆಹಾರವ ಮಾಡಲದೇಕೆಅತಿ ವೈರಾಗ್ಯವು ದೇಹಕೆ ಯಾಕೆಸತತವು ಕಾಡನು ಸೇರುವುದೇಕೆಮತಿ ತಿಳಿಯದೆ ತಿರುಗಾಡುವುದೇಕೆ2ಶರಧಿಯು ತಾನಿರೆ ಒರತೆಯದೇಕೆತರಣಿಯೆ ತಾನಿರೆ ದೀಪವದೇಕೆಗುರುಚಿದಾನಂದನಿರೆ ಯೋಗಗಳೇಕೆಗುರುಕೃಪೆ ದೊರೆತರೆ ಭಯ ತಾನೇಕೆ3
--------------
ಚಿದಾನಂದ ಅವಧೂತರು
ಹರಿಯ ನೆನೆಯದ - ನರಜನ್ಮವೇಕೆ ? ಶ್ರೀಹರಿಯ ಕೊಂಡಾಡದ ನಾಲಿಗೆಯಿನ್ನೇಕೆ ಪ.ಸತ್ಯ - ಶೌಚವಿಲ್ಲದ ಆಚಾರವೇಕೆ ?ಚಿತ್ತ ಶುದ್ಧಿಯಿಲ್ಲದ ಜ್ಞಾನವೇಕೆ ?ಭಕ್ತಿ - ಭಾನವಿಲ್ಲದ ದೇವಪೂಜೆ ಏಕೆ ?ಉತ್ತಮರಿಲ್ಲದ ಸಭೆಯು ಇನ್ನೇಕೆ ? 1ಕ್ರೋಧವ ಬಿಡದಿಹ ಸಂನ್ಯಾಸವೇಕೆ ?ಆದರವಿಲ್ಲದ ಅಮೃತಾನ್ನವೇಕೆ ?||ವೇದ - ಶಾಸ್ತ್ರವಿಲ್ಲದ ವಿಪ್ರತನವೇಕೆಕಾದಲಂಜುವನಿಗೆ ಕ್ಷಾತ್ರ ತಾನೇಕೆ ? 2ಸಾಲದಟ್ಟುಳಿಯೆಂಬ ಸಂಸಾರವೇಕೆ ?ಬಾಲಕರಿಲ್ಲದ ಭಾಗ್ಯವಿನ್ನೇಕೆ ?ವೇಳೆಗೆ ಒದಗದ ನೆಂಟರಿನ್ನೇಕೆ ? ಅನುಕೂಲವಿಲ್ಲದ - ಸತಿಯ ಸಂಗವೇಕೆ 3ಮಾತೆ - ಪಿತರ ತೊರೆದ ಮಕ್ಕಳಿನ್ನೇಕೆ ?ಮಾತು ಕೇಳದ ಮಗನಗೊಡವೆ ಇನ್ನೇಕೆ ||ನೀತಿ ತಪ್ಪಿದ ದೊರೆಯ ಸೇವೆ ಇನ್ನೇಕೆ ? ಅನಾಥನಾಗಿರುವಗೆ ಕೋಪವಿನ್ನೇಕೆ ? 4ಅಳಿದುಳಿದಿಹ ಮಕ್ಕಳುಗಳಿನ್ನೇಕೆ ?ತಿಳಿದು ಬುಧ್ಧಿಯ ಹೇಳಿದ ಗುರುತನವೇಕೆ ?ನಳಿನನಾಭ ಶ್ರೀ ಪುರಂದರವಿಠಲನಚೆಲುವ ಮೂರುತಿಯ ಕಾಣದ ಕಂಗಳೇಕೆ 5
--------------
ಪುರಂದರದಾಸರು