ಒಟ್ಟು 312 ಕಡೆಗಳಲ್ಲಿ , 69 ದಾಸರು , 288 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಸಿಸ್ಟೆಂಟ್ ಅಮಲ್ದಾರ್ರು ಹೇಳಿಕಳುಹಿಸಿದ್ದಾರೆ ಪ ಬಿಸಿ ನೀರು ನಿನಗಾಗಿ ಹಸನಾದ ಪನ್ನೀರ- ರಿಸಿನ ಕುಂಕುಮ ಕಳಶ ಕನ್ನಡಿಗಳಾ ಶಶಿಮುಖಿಯರೆಲ್ಲರು ತಂದು ಕಾದಿಹೆವಿಲ್ಲಿ ಕುಸುಮಾಸ್ತ್ರ ನಾಟದಲಿ ನಿಶಿ ನಿದ್ರೆ ಇಲ್ಲವೇನೋ 1 ಒಬ್ಬ ಒಡವೆಗಳು ಮತ್ತೊಬ್ಬ ಸೀರೆಗಳು | ಇ ನ್ನೊಬ್ಬ ಪರಿಮಳ ದ್ರವ್ಯ ತಂದು ಕೊಡುವಾ ಹಬ್ಬ ಪ್ರತಿದಿನ ರಾತ್ರಿಯಾಗುತ್ತಲೆ ನಿನಗೆ ನಮ್ಮ ಸುಬ್ಬ ಪೋಲೀಸನವರಿಂದ ಬಿಡಿಸಲಿಲ್ಲವೆ 2 ಹೊನ್ನು ಹಣಗಳಿಗೇನು ಕಡಿಮೆಯಿಲ್ಲ ಇನ್ನಾದರು ಸ್ಮರಿಸಿ ಕಣ್ದೆರೆದು ನೋಡೆ 3
--------------
ಗುರುರಾಮವಿಠಲ
ಆಟವನಾಡುವ ಬಾರೋ ಶ್ರೀ ಕೃಷ್ಣ ಪ ನೋಟಕೆ ಜನಗಳ ಕೂಟವು ಕಾದಿದೆ ಅ.ಪ ದೊರೆಯು ನೀನಂತೆ ದೊರೆಯು ವಾಸಿಸಲು ಅರಮನೆ ಎಂದಿದನರಿಯಬೇಕಂತೆ ಪರಿಪರಿಯಲಿ ನಿನ್ನ ಸೇವೆಯು ಮಾಡಲು ಪರಿಚಾರಕ ನಾನಿರಬೇಕಂತೆ 1 ತಂದೆಯು ನೀನಂತೆ ತಾಯಿ ರುಕ್ಮಿಣಿಯಂತೆ ಮಂದಿಗಳೆಲ್ಲರು ಮಕ್ಕಳು ನಿನಗಂತೆ ಮುಂದೆ ಎಮಗೆ ನಿನ್ನ ದಿವ್ಯ ರಾಜ್ಯದಲಿ ಒಂದೊಂದು ಭಾಗವ ಬರೆದಿಡಬೇಕಂತೆ 2 ಬಿಂಬವು ನೀನಂತೆ ಕನ್ನಡಿಯೊಳು ಪ್ರತಿ ಯೋಗಿ ಪ್ರಸನ್ನ ಬಿಂಬದಿ ಬಿಂಬವ ನೋಡುವೆನಂತೆ 3
--------------
ವಿದ್ಯಾಪ್ರಸನ್ನತೀರ್ಥರು
ಆತ್ಮನಿವೇದನೆ ಅಚಿಂತ್ಯಾದ್ಭುತ ಮಹಿಮ ಈ ಸಚರಾಚರದೊಳು ಪ್ರಚುರನಾಗಿಹೆ ದೇವಾ ಮುಚುಕುಂದವರದಾ ಪ ಅಚಲಭಕುತಿಯು ನಿನ್ನ ಚರಣದಿ ಕಿಂಚಿತಾದರೂ ಪ್ರಚುರಮಾಡಿಸು ಅತಿಚಂಚಲನು ಬಲು ವಂಚಕನು ನಾ ಅನು- ಚಿತೋಚಿತ ಕರ್ಮವರಿಯೆನೋ ಅ.ಪ ವಿಪಿನವಾಸದಿ ಎನಗೆ ವಿಪರೀತವನು ತೋರಿ ಅಪರಾಧವೆಣಿಸದೆ ಪಾಲಿಸಿದೇ ಕೃಪಣವತ್ಸಲ ನೀನೇ ಕೃಪೆಮಾಡಿ ಸ್ವಪನದಿ ಅಪರಿಮಿತದ ವಿಶ್ವರೂಪವ ನೀ ತೋರ್ದೆ ಅಪರಾಧಿ ನಾನಹುದೋ ಸ್ವಾಮಿ ಅಪವರ್ಗಪ್ರದನು ನೀನು ಸಫಲಗೊಳಿಸಿದೆ ಎನ್ನ ಮನದನು- ತಾಪವನು ಪರಿಹರಿಸಿ ಕಾಯ್ದೆ ನಿನ್ನಡಿದಾವರೆಯ ನಂಬಿದೆನೋ ಶ್ರೀ ಪರಮಹಂಸರಿಂದ ನುಡಿಸಿದ ರಹಸ್ಯಗಳು ಅದುಏನೋ ಶ್ರೀ ಪುರುಷೋತ್ತಮನೆ ನೀನೆನ್ನಭಯಹಸ್ತದಿ ಕರೆದ ಪರಿಯೇನೋ ಅದನೊಂದನರಿಯೆನೊ ಈಪರಿಯ ಕರಚರಣದಲಿ ಚರಿಸಿದ ಅನುಪಮ ಕ್ರಿಯೆಯ ನೋಡಿ ಮನದೊಳು ಸುಪುತಕಾಲದಿ ತೈಜಸನೆ ನೀನೆನ್ನ ಪುಳುಕಾಂಕಿತನ ಮಾಡಿದೇ 1 ಅಮಿತ ಕಾರ್ಯವನೆಸಗೀ ಬಲು ಯಾತನೆಗೊಂಡು ಇಳೆಯೊಳು ಬಾಳೀ ದು- ರ್ಬಲನಾಗಿದ್ದರು ಎನ್ನ ಛಲವು ತೊಲಗಲಿಲ್ಲ ಜಲಜನಾಭನೆ ನೀನೆ ಕರುಣಿಸಿ ಸಲಹದಿರ್ದೊಡೆ ಪ್ರ- ಬಲರೆನ್ನನು ಕವಿದು ಮನಚಂಚಲವ ಪುಟ್ಟಿಸೀ ವಲೀಮುಖನಂತಾಡಿಸುವರೋ ಕಲಿಮಲವನ್ನೆ ಪರಿಹರಿಸುವುದೋ ಮನದಿ ಎಡೆಯು ದುರ್ಲಭವೋ ಒಲುಮೆಯಿಂದಲಿ ಸಾಧಿಸಲು ಎಲ್ಲೆಡೆಯ ಸರ್ವತಂತ್ರ ಸ್ವಾತಂತ್ರ್ಯ ನಿನ್ನದೋ ಭೋ ಜಗತ್ಪತೇ ಕಾಲನಾಮಕ ನೀನೆ ಆಪತ್ಕಾಲಬಾಂಧವವೆಂದು ನಂಬಿದೆ ಜಾಲಮಾಡದೆ ಎನ್ನ ಜೀವಿತದಲ್ಪಕಾಲದಿ ಕರುಣೆ ತೋರೈ2 ತುಷ್ಟನೆಂತಾಗುವೆಯೊ ಭ್ರಷ್ಟಪಾತಕಿ ನಾನು ಕಷ್ಟವಲ್ಲವೋ ನಿನಗೆ ಶ್ರೇಷ್ಟಮೂರುತಿಯೆ ಇಷ್ಟಮೂರುತಿಯೆಂದು ಇಷ್ಟು ನುಡಿದೆನೊ ಸಾಷ್ಟಾಂಗ ನಿನ್ನೊಳು ಇರಲೋ ಇಷ್ಟೇ ಎನ್ನದೊ ದೇವಾ ಕಷ್ಟಕಷ್ಟವೊ ಬೆಟ್ಟದೊಡೆಯ ಕೊಟ್ಟುದಷ್ಟು ನಿನ್ನದಯ್ಯಾ ಇಷ್ಟೆಬೇಡುವೆ ಎನಗೆ ಎ- ಳ್ಳಷ್ಟು ಭಕುತಿಯ ಕೊಡದಿರುವೆಯಾ ಸೃಷ್ಟಿಸ್ಥಿತಿಲಯನಿಯಮನಾದ್ಯಷ್ಟ ಕತೃತ್ವವು ನಿನ್ನದೊ ಅಷ್ಟಾಂಗಯೋಗದಿ ತುಷ್ಟಪಡಿಸೆ ತನುಮನೋಧಿಷ್ಟಾನವು ನಿನ್ನದೊ ಶ್ರೇಷ್ಠಮೂರುತಿ ಸುಲಭದಲಿ ನೀ ದೃಷ್ಟಿಗೋಚರವಾಗುವುದು ಇನ್ನೆಂತೋ ಹಾ ಕಷ್ಟಕಷ್ಟವೋ ಸೃಷ್ಟಿಯೊಳು ನಾನೆಷ್ಟರವ ನಿನ್ನಿಷ್ಟಬಂದಂತಾಗಲಿ ಭವ- ಶ್ರೀ ವೇಂಕಟೇಶ ಉರಗಾದ್ರಿವಾಸವಿಠಲ 3
--------------
ಉರಗಾದ್ರಿವಾಸವಿಠಲದಾಸರು
ಆರು ಬಾಳಿದರೇನು ಆರು ಬದುಕಿದರೇನುನಾರಾಯಣನ ಸ್ಮರಣೆ ನಮಗಿಲ್ಲದನಕ ಪ ಉಣ್ಣ ಬರದವರಲ್ಲಿ ಊರೂಟವಾದರೇನುಹಣ್ಣುಬಿಡದ ಮರಗಳು ಹಾಳಾದರೇನುಕಣ್ಣಿಲ್ಲದವಗಿನ್ನು ಕನ್ನಡಿಯಿದ್ದು ಫಲವೇನುಪುಣ್ಯವಿಲ್ಲದವನ ಪ್ರೌಢಿಮೆ ಮೆರೆದರೇನು 1 ಅಕ್ಕರಿಲ್ಲದವಗೆ ಮಕ್ಕಳಿದ್ದು ಫಲವೇನುಹೊಕ್ಕು ನಡೆಯದ ನಂಟತನದೊಳೇನುರೊಕ್ಕವಿಲ್ಲದವಗೆ ಬಂಧುಗಳು ಇದ್ದರೇನುಮರ್ಕಟನ ಕೈಯೊಳಗೆ ಮಾಣಿಕ್ಯವಿದ್ದರೇನು 2 ಅಲ್ಪ ದೊರೆಗಳ ಜೀತ ಎಷ್ಟು ಮಾಡಿದರೇನುಬಲ್ಪಂಥವಿಲ್ಲದವನ ಬಾಳ್ವೆಯೇನುಕಲ್ಪಕಲ್ಪಿತ ಕಾಗಿನೆಲೆಯಾದಿಕೇಶವನಸ್ವಲ್ಪವೂ ನೆನೆಯದ ನರನಿದ್ದರೇನು 3
--------------
ಕನಕದಾಸ
ಆವ ತ್ರಾಣವು ಎನ್ನೊಳಿನಿತಿಲ್ಲವಯ್ಯ ಭಾವಜಪಿತ ನೀನೆ ದಯಮಾಡಬೇಕೊ ಪ ಗುಡಿಯ ಕಟ್ಟಿಸಲೆ ನಾ ಒಡುಕುಕವಡೆನಗಿಲ್ಲ ಬಡವರಿಗೆ ಅನ್ನಿಟ್ಟಿಲೆ ಹಿಡಿಧಾನ್ಯವಿಲ್ಲ ಕೊಡುವೆನೆನೆ ಧರ್ಮವ ಪಡೆದು ನಾ ಬಂದಿಲ್ಲ ಬಿಡುವೆನೇ ದು:ಸ್ಸಂಗ ಅಡರಿಹ್ಯರು ರಿಣವು 1 ದೃಢಧ್ಯಾತ್ಮಗೈವೆನೆನೆ ನಡೆವ ಶಕ್ತ್ಯೆನಗಿಲ್ಲ ಮಡಿಮಾಡ್ವೆನೆನೆ ಮನವು ತಡೆವಶಕ್ತಿಲ್ಲ ಸುಡಲೆ ಕಾಮಾದಿಗಳು ತೊಡರಿಹ್ಯದು ಸಂಸಾರ ನುಡಿಯಲೆ ಸತ್ಯ ಸದಾ ಬಡವನಾಗಿಹೆನು 2 ಒಡೆಯ ಶ್ರೀರಾಮ ನಿನ್ನಡಿಯ ಗುರುತರಿಯೆ ಕಡುಮೂರ್ಖ ಜನ್ಮವನು ಪಡೆದಿಹೆನು ಜಗದಿ ಒಡೆಯ ಸರ್ವಕೆ ನೀನೆ ಜಡಮತಿಯು ಗಡ ಕಡಿದು ದೃಢಭಕ್ತಿ ಸುಖವಿತ್ತು ಪಿಡಿದು ಸಲಹಯ್ಯ 3
--------------
ರಾಮದಾಸರು
ಇದನಾದರು ಕೊಡದಿದ್ದರೆ ನಿನ್ನ ಪದಕಮಲವ ನಂಬಿ ಭಜಿಸುವದೆಂತೊ ಪ ಗ್ರಾಸವಾಸಗಳಿಗೆ ಇಲ್ಲವೆಂದು ನಿನ್ನಬೇಸರಿಸಿ ಬೇಡ ಬಂದುದಿಲ್ಲವಾಸುದೇವನೆ ನಿನ್ನ ದಾಸರ ದಾಸರದಾಸರ ದಾಸ್ಯವ ಕೊಡು ಸಾಕೆಂದರೆ 1 ಸತಿಸುತರುಗಳ ಸಹಿತನಾಗಿ ನಾಹಿತದಿಂದ ಇರಬೇಕೆಂಬೊದಿಲ್ಲಇತರ ವಿಷಯಂಗಳಿಗೆರಗಿಸದೆ ಮನಕೆ ನಿನ್ನಕಥಾಮೃತವನೆ ಕೊಡು ಸಾಕೆಂದರೆ 2 ಸಾಲವಾಯಿತೆಂದು ಸಂಬಳ ಎನಗೆಸಾಲದೆಂದು ಬೇಡ ಬಂದುದಿಲ್ಲನಾಲಗೆಯಲಿ ನಿನ್ನ ನಾಮದುಚ್ಚರಣೆಯಪಾಲಿಸಬೇಕೆಂದು ಬೇಡಿದೆನಲ್ಲದೆ3 ಒಡವೆಗಳಿಲ್ಲ ಒಡ್ಯಾಣಗಳಿಲ್ಲೆಂದುಬಡವನೆಂದು ಬೇಡ ಬಂದುದಿಲ್ಲಒಡೆಯ ನಿನ್ನಡಿಗಳಿಗೆರಗುವುದಕೆ ಮನಬಿಡದಿಹದೊಂದನು ಕೊಡು ಸಾಕೆಂದರೆ4 ಆಗಬೇಕು ರಾಜ್ಯಭೋಗಗಳೆನಗೆಂದುಈಗ ನಾನು ಬೇಡ ಬಂದುದಿಲ್ಲನಾಗಶಯನ ರಂಗವಿಠಲ ನಾ ನಿನ್ನ ಬಾಗಿಲ ಕಾಯುವ ಭಾಗ್ಯ ಸಾಕೆಂದರೆ5
--------------
ಶ್ರೀಪಾದರಾಜರು
ಉಕ್ಕುವ ತುಪ್ಪಕೆ ಕೈಯಿಕ್ಕುವೆ ನಾನು ಪ ಚಕ್ರಧರ ಪರಮಾತ್ಮನೊಬ್ಬನಲ್ಲದಿಲ್ಲವೆಂದು ಅ.ಪ ಕರಿ ಮೊರೆಯಿಡಲು ಕಂಡುನೆರೆದ ಬೃಂದಾರಕರು ಅಂದು ಪೊರೆದರೆ ಬಂದುಕರದಲೊಪ್ಪುವ ಮುತ್ತಿಗೆ ಕನ್ನಡಿಯ ನೋಡಲೇಕೆಭರದಿ ಗಜೇಂದ್ರನ್ನ ಕಾಯ್ದ ಹರಿಯೆ ಪರದೈವವೆಂದು 1 ಮತಾಂತರದಲ್ಲಿ ಭಗವದ್ಗೀತೆಯನದ್ವೈತವೆಂದುವಾತಗುದ್ಧಿ ಕೈಗಳೆರಡು ನೋಯಿಸಲೇಕೆ‘ಏತತ್ಸರ್ವಾಣಿ ಭೂತಾನ್ಯೆಂ’ಬ ಶೃತ್ಯರ್ಥವ ತಿಳಿದುಜ್ಯೋತಿರ್ಮಯ ಕಿರೀಟಿ ಅಚ್ಯುತಾಂತರ್ಯಾಮಿಯೆಂದು 2 ತಾನೆ ಪರಬ್ರಹ್ಮನೆಂಬ ಮನುಷ್ಯಾಧಮನು ತಾನುಜ್ಞಾನಹೀನನಾಗೆ ಲೋಕದಾನವನೆಂದುಭಾನು ಕೋಟಿ ತೇಜೋತ್ತಮ ವರದ ಶ್ರೀಹರಿಯೆಂಬಜ್ಞಾನವೆ ಕೈವಲ್ಯದ ಸೋಪಾನವೆಂದು ಸಭೆಯಲ್ಲಿ 3 ತಪ್ಪಾದ ವಿಚಾರದಿಂದ ತತ್ತರವ ಪಡಲೇಕೆತಪ್ಪು ಶಾಸ್ತ್ರ ವೋದಿ ದೇಹ ದಂಡಿಸಲೇಕೆಕಲ್ಪ ಕಲ್ಪಾಂತರದಲ್ಲಿ ವಟಪತ್ರಶಯನನಾಗಿಮುಪ್ಪು ಮೊದಲಿಲ್ಲದ ಮುಕುಂದನಲ್ಲದಿಲ್ಲವೆಂದು 4 ಶಕ್ತಿ ಶೂನ್ಯನಿವನೆಂದು ಸಂಶಯವ ಪಡಲೇಕೆಕೃತ್ಯದಿಂದ ನೋಡೆ ಶ್ರೀಕೃಷ್ಣನೊಬ್ಬನೆಹತ್ತಾರು ಸಾಸಿರ ನೂರು ಗೋಪಸ್ತ್ರೀಯರನ್ನು ಆಳಿನಿತ್ಯ ಬ್ರಹ್ಮಚಾರಿಯೆನಿಪ ನಿಷ್ಕಳಂಕನೊಬ್ಬನೆಂದು 5
--------------
ವ್ಯಾಸರಾಯರು
ಉದಯ ಕಾಲವದಗಿತೀಗಲೂ ನಿನ್ನಿನ್ನಂತೆ ರವಿ ಪಪದುಮನಾಭನ ಸ್ಮರಿಸುತ ಮೋ-ದದಿಯಾನ್ಹೀಕ ಬುಧರು ಮಾಳ್ಪ ಅ.ಪಅಪರಾತ್ರಿಯಲ್ಲಿ ಎದ್ದುಚಪಲಚಿತ್ತರಾಗದಲೆ ಸು-ರಪನ ದೆಸೆಯ ನೋಡಿ ನಮಿಸಿಸುಫಲಗಳನು ಪಡೆಯುವರಿಗೆ 1 ಕಣ್ಣುತೆರೆದು ಕೈಗಳುಜ್ಜಿ ಕನ್ನಡಿಯನು ನೋಡಿ ಶೌಚ ವನ್ನು ತೀರಿಸಿ ಸ್ನಾನ ಸಂಧೆÀ್ಯಗ- ಳನ್ನು ಮಾಳ್ಪ ಸದ್ವಿಜರಿಗೆ2 ಬ್ರಂಹ್ಮಯಜ್ಞ ಜಪವು ಮುಖ್ಯ ಕರ್ಮಗಳಿಂ ಸವಿತೃನಾಮಕ ಒಮ್ಮನದಲಿ ಧ್ಯಾನಿಸುವರಿಗೆ 3
--------------
ಗುರುರಾಮವಿಠಲ
ಉಪಾಧಿ ಬೇಡಆತ್ಮನೆಂಬುದೇ ಕಾಂಬುದು ನಿಮ್ಮ ಮಹಾತ್ಮರಾದವರು ಪ ಕುಂಭಗಳು ಇರುತಲಿರೆ ಅಂಬರದ ಚಂದ್ರನುಕುಂಭಗಳೊಳಗೆ ಹಲವಾಗಿ ಬಿಂಬಿಸುವ ತೆರದಿಅಂಬುಜಾಸನ ಮೊದಲು ಜೀವ ಕಂಬದೊಳು ದೃಷ್ಟಿಯಿಟ್ಟು ಇಂಬಾಗಿ ಇರುವನೊಬ್ಬ ಚೇತನಾತ್ಮಕನು1 ಕನ್ನಡಿ ಪಳುಕಿನ ಗೃಹದಿ ಸನ್ನಿಧಿಯಲೊಂದು ದೀಪವಿಡೆಕನ್ನಡಿಯೊಳಗೆ ದೀಪ ಹಲವಾದ ತೆರದಿಉನ್ನತ ಜೀವರಾಶಿಯ ತನ್ನ ಛಾಯೆ ಹೊಳೆ ಹೊಳೆದುತನ್ನ ತಾನೇ ಇರುವನೊಬ್ಬ ಚೇತನಾತ್ಮಕನು2 ಒಬ್ಬನಾ ಕಾಂತಿಯಿಂ ಹಬ್ಬಿಕೊಂಡಿದೆ ಲೋಕಒಬ್ಬನೆಂದೇ ತಿಳಿದಡೆ ತಾನೊಬ್ಬನೇ ಇಹನೀಹರನುಒಬ್ಬನನೊಯ್ದು ನೀವು ಹಾಗಿಬ್ಬರ ಮಾಡಲಾಗದುಒಬ್ಬನೇ ಚಿದಾನಂದನು ಚೇತನಾತ್ಮಕನು3
--------------
ಚಿದಾನಂದ ಅವಧೂತರು
ಋಣವೆಂಬ ಪೈಶಾಚ ಋಜುವಾಗಲೀಸದುನೆನ'ಗೆ 'ಘ್ನವ ನಿಲಿಸುವದು ಪಮನದೊಳು ನೆಲೆಗೊಂಡು ಮಂಕುಮರುಳ ಮಾಡಿಕಣ್ಣು ಗೆಡಿಪುದ ನೋಡಿ ಕರುಣಬಾರದೆ ರಾಮಾ ಅ.ಪಪತಿತ ಪಾವನನೆಂಬ ಬಿರುದುಳ್ಳ ನಿನ್ನಂಘ್ರಿಸತಿಯಹಲ್ಯೆಯ ಸೋಕಿ ಸಲ'ದುದೂಸತತ ಸ್ಮರಿಸಲು ಮಾರೀಚನಂ ಭಯದಿಂದಗತಿಗೊಟ್ಟು ಸಲಹಲೈದಿದವು ನಿನ್ನಡಿಗಳೂ 1ಮನು ಮುನಿಗಳು ಸ್ಮøತಿ ಮಾರ್ಗದಿ ನಿಷ್ಕøತಿಯನು ಪೇಳಲಿಲ್ಲ'ೀ ಋಣ ದೋಷಕೆಪುನಹ ವೃದ್ಧಿಯು ಸಹ ಪೂರೈಸಿಕೊಳಲದನುಭವ ಬಿಡದಾವ ಜನ್ಮಕ್ಕೆಂಬುದ ಕೇಳಿ2ಸಾಕು ಸಾಕಾುತು ಸಂಸಾರ ಕೋಟಲೆಬೇಕಾುತು ನಿನ್ನ ಭಜಿಸುವದೂಈ ಕಷ್ಟವನು ಬಿಡಿಸೈ ಕರುಣಾಬ್ಧಿಯೆನೀಕರಿಸುವರಿಂದ ಆನಂದ ದೊರಕಿತು 3ಸಂತುಷ್ಟ ಚಿತ್ತನಾಗಿರಬೇಕು 'ಪ್ರನುಚಿಂತಿಸಬಾರದೆಂಬೀ ಪಥವಾಎಂತಾದರು ಹೊಂದಲೀಸದಲೆವ ಋಣಕಂತವಾಗುವ ಹಾಗೆ ಧನವ ಪಾಲಿಸಬೇಕು 4ಕೊಟ್ಟವರೊಡವೆಯ ಕೊಡುವಂತೆ ದ್ರವ್ಯವುಪುಟ್ಟುವಂದದಿ ಕೃಪೆಮಾಡೆನಗೆಪಟ್ಟಾಭಿರಾಮ ನಿನ್ನವನೆಂದ ಬಳಿಕಿನ್ನುಕೆಟ್ಟನೆಂಬೀ ಮಾತ ಕೇಳದಂದದಿ ಮಾಡಿ 5ಗುರು ವಾಸುದೇವಾರ್ಯನಾಗಿ ಚಿಕನಾಗಪುರದಿ ನೆಲಸಿ ತಿಮ್ಮದಾಸನನೂಪೊರೆದನೆಂಬೀ ಮಾತು ಹರಿದಿದೆ ಜಗದೀ ತಪ್ಪಿರಲಿ ನೆಪ್ಪಿರಲಿ ನೀ ಸಲಹು ವೆಂಕಟರಾಯಾ 6
--------------
ತಿಮ್ಮಪ್ಪದಾಸರು
ಎಂಥ ಟವಳಿಗಾರನಮ್ಮ ಪ ನಂದ ಗೋಪ್ಯಮ್ಮ ಕೇಳೆ - ನಿನ್ನ ಮಗ ಎಂಥ ಟವಳಿಗಾರನಮ್ಮ ಅ ಹಣವ ಕೊಟ್ಟೇನೆಂದುಗುಣದಿಂದ ಎನ್ನ ತಂದಹಣವ ಕೇಳಿದರಲ್ಲಿ - ಹಣವೆ ?ತಡೆಯಲಾರದ ತಲ್ಲಣವೆ ?ಕುದುರೆ ಮೇಲಿನ ಪಲ್ಲಣವೆ ?ಇಲ್ಲ, ಬಾಯಿಗಿಟ್ಟ ಬೊಕ್ಕಣವೆ ? - ಹೋಗೆನುತಾನೆ 1 ಕೊಪ್ಪಾನೆ ಕೊಟ್ಟೇನೆಂದುಒಪ್ಪಿಸಿ ಎನ್ನ ತಂದಕೊಪ್ಪಾನ ಕೇಳಿದರಲ್ಲಿ - ಕೊಪ್ಪ ?ಊರಮುಂದಿನ ತಿಪ್ಪ ?ಕೇರಿಯೊಳಗಿನ ಕೆಪ್ಪ ?ಕೆರೆಯೊಳಗಿನ ಹುಳಿಸೊಪ್ಪ ? - ಹೋಗೆನುತಾನೆ2 ಬಳೆಯ ಕೊಟ್ಟೇನೆಂದುಬಲು ಮಾತಿನಲಿ ತಂದಬಳೆಯ ಕೇಳಿದರಲ್ಲಿ - ಬಳೆಯೆ ?ಊರ ಮುಂದಿನ ಗಳೆಯೆ ?ಗದ್ದೆಯೊಳಗಿನ ಕಳೆಯೆ ?ಕೈಕಾಲ ಹಿಡಿದು ಸೆಳೆಯೆ ? - ಹೋಗೆನುತಾನೆ 3 ವಾಲೆ ?ಕನ್ನಡಿಯ ಕಪೋಲೆ ?ಹೇಳು ಸುವ್ವಿ ಸುವ್ವಾಲೆ ?ನಿನ್ನ ಕಾಲಿಗೆ ಸಂಕೋಲೆ ? - ಹೋಗೆನುತಾನೆ 4 ಕಡಗವ ಕೊಟ್ಟೇನೆಂದುಸಡಗರದಿಂದ ತಂದಕಡಗ ಕೇಳಿದರಲ್ಲಿ - ಕಡಗ ?ಅಂಬರದ ಗುಡುಗ ?ಮುಂಗೈ ಮೇಲಿನ ಗಿಡುಗ ?ಎತ್ತಿನ ಮ್ಯಾಲಿನ ಧಡಗ ? - ಹೋಗೆನುತಾನೆ 5 ಬುಗುಡಿಯ ಕೊಟ್ಟೇನೆಂದುರಗಡು ಕಿವಿಹಿಂಡಿ ತಂದಬುಗುಡಿ ಕೇಳಿದರಲ್ಲಿ - ಬುಗುಡಿ ?ಪಾಂಡವರಾಡಿದ ಪಗಡಿ ?ಮೂಗಿಂದ ಸುರಿವ ನೆಗಡಿ ?ಛಿ ! ನೀನೆಂಥ ಧಗಡಿ ? - ಹೋಗೆನುತಾನೆ 6 ಆದಿಕೇಶವನ ಮೇಲೆಆಣೆಯಿಟ್ಟು ಕರೆತಂದಆಣಿ ಎಲ್ಲಹುದೆಂದು ತೋರ್ದಆನಂದದಿಂದಲಿ ಬೆರೆದಬೀದಿಗೆ ಬಂದು ಕರೆದಹೀಂಗೆ ಧರೆಯೊಳು ಮೆರೆದ - ಶ್ರೀ ಕೃಷ್ಣರಾಯ 7
--------------
ಕನಕದಾಸ
ಎಂಥಾ ಪಾವನ ಪಾದವೋ ಶ್ರೀರಾಮನ ದೆಂಥಾ ಚೆಲುವ ಪಾದವೋ ಪ ಸಂತತವು ಸಜ್ಜನರ ಪಾಲಿಸೆ ನಿಂತು ಧನುವನು ಧರಿಸಿ ಮೆರೆವ ಅ.ಪ ಮುನಿಪತಿ ನುಡಿ ಮನ್ನಿಸಿ ತಪೋವನಕ್ಕನುಜನೊಡನೆ ಗಮಿಸೀ ಮುನಿಯಾಜ್ಞೆಯಿಂ ಘೋರ ತಾಟಕಿಯನೆ ವಧಿಸಿ ವಿನಯದಿ ಯಜ್ಞರಕ್ಷಣೆ ಮಾಡಿ ಮುದವಿತ್ತ 1 ಘನಶಾಪವನು ಕಳೆಯೆ ಮುನಿಯಾಜ್ಞೆಯಿಂ ಘನಶಿಲೆಯ ಮೇಲಡಿಯಿಟ್ಟು ಘನತರ ಮಾನಿನಿಯನು ನಿರ್ಮಿಸಿ ಮೆರೆದ 2 ಗುಹನು ಗಂಗೆಯ ತಟದಿ ದೋಣಿಯ ತಂದು ಗಹನ ಶಂಕೆಯೊಳಂದು ಸಹಜಭಕ್ತಿಯಲಿ ನಿರ್ಮಲಗಂಗೆಯುದಕದಿಂ ದಹಹ ಪಾದರಜವನು ತೊಳೆಯಲೊಪ್ಪಿದ 3 ಹರಧನುವನು ಭಂಗಿಸಿ ಮಿಥಿಲೆಯಲಿ ವರ ವಿಕ್ರಮವ ಮೆರೆಸಿ ತರುಣಿ ಜಾನಕಿಯಂದು ಶಿರದಿ ನಿನ್ನಡಿಗಳಿ ಗೆರಗಲು ಘನ ಶಂಕೆಯಿಂ ಮಾಲೆಯರ್ಪಿಸಿದ 4 ಸಾಧುಗಳ ಪೊರೆಯೆ ಚರಣ ಪಾದುಕೆಗಳ ಶರಣ ಭರತಗಿತ್ತು ಬರಿಗಾಲಲಿ ನಡೆದ ರಘುರಾಮವಿಠಲನ5
--------------
ರಘುರಾಮವಿಠಲದಾಸರು
ಎಂದು ಕಾಂಬುವೆ ಮಾಧವತೀರ್ಥರ ಸುಂದರ ಮಂದಿರ ಪ ಚಾರುಚಿತ್ರ ಕಲಶಕನ್ನಡಿ ಆರೊಂದು ನೆಲೆಗೋಪುರವ ಸವಿ ಸ್ತಾರಮಾಗಿ ತೋರುವ ಮಹಾ ದ್ವಾರದಮುಂದೆ ಬಿದ್ದು ನಮಿಸಿ 1 ತೊಲೆತುಂಡು ಕಂಭ ಬೋದುಗೆ ಶಿಲೆಯಿಂದ ನಿರ್ಮಿತವಾಗಿ ಹೊಳೆವ ಮಂಟಪ ರಂಗು ಮಧ್ಯ ದೊಳಗೆಚೆಲುವ ವೃಂದಾವನವ 2 ಮೂಲ ಪ್ರತಿಮೆ ಸಾಲು ಸಾಲು ವಿ ಮೂಲಪೀಠದ ಪವಿತ್ರಶಾಲೆ ಕಾಲತ್ರಯದಿ ವೇದಘೋಷ 3 ಧಾತ್ರಿಜನರು ಬಂದು ಕೂಡಿ ಯಾತ್ರೆಗೈದು ಜನುಮ ನಿತ್ಯ ಸಾರ್ಥಮಾಡಿಕೊಂಡು ಸತತ ಅರ್ಥಿಯಿಂದ ಪೋಪ ಸಮಯ 4 ಧರೆಯೊಳಧಿಕ ಬುದ್ಧಿನ್ನಿಪುರದಿ ಮೆರೆವ ಶ್ರೀಗುರು ಮಾಧವೇಂದ್ರ ವರಮಂದಿರದಮಿತ ವೈಭವ ಕರುಣಿ ಶ್ರೀರಾಮ ನಿಂತು ನಡೆಸುವ 5
--------------
ರಾಮದಾಸರು
ಎಂದು ಕಾಂಬೆನು ಪಾಂಡುರಂಗ ಮೂರುತಿಯಾ ಇಂದು ಭಾಗನಿವಾಸ ನರನ ಸಾರಥಿಯ ಪ ಚಾರು ಚರಣಾಂಗುಲಿ ನಖರ ತರುಣೀಂದುಚ್ಛವಿ ತಿರಸ್ಕರಿಸುವ ಪ್ರಖರ ಕಿರುಗೆಜ್ಜೆ ಕಡಗ ನೂಪುರ ಪೆಂಡೆ ಶಫರ ತೆರಜಾನು ಜಂಘೆ ಭಾಸ್ಕರ ರತ್ನ ಮುಕುರ1 ರಂಭಾ ಪೋಲುವ ಊರು ಪೊಂಬಣ್ಣಾಂಬರವ ಕುಂಭೀ ಮಸ್ತಕದೊಲ್ ನಿತಂಬದಿ ಪೊಳೆವ ಕಂಬು ಮೇಖಳಕಂಜ ಗಂಭೀರ ನಾಭೀ ವಿಧಿ ಶಂಭು ಪೂಜಿತನ 2 ಲವಕುಕ್ಷಿತ್ರವಳಿ ಬಾರ್ಗವಿ ವಕ್ಷ ಉರವು ಕೌಸ್ತುಭ ವೈಜಯಂತಿಯ ಸುವಿಶಾಲ ವಕ್ಷದೊಳ್ ವಿವಿಧ ಹಾರಗಳು ನವನೀತ ಚೋರ ಶ್ರೀ ಪವಮಾನಾರ್ಚಿತನ 3 ಪದಕ ಸರಿಗೆಯ ಜಾಂಬೂನದ ಕಂಬುಕಂಠ ರದನೀಕರ ಬಾಹು ಚದುರ ಭುಜಕೀರ್ತಿ ಬದರ ಸಂಕಾಶಾ ಅಂಗದ ರತ್ನ ಕಟಕಾ ಪದಮಾರುಣ ಕರಯುಗ್ಮ ಕಟಿಯಲ್ಲಿಟ್ಟವನಾ4 ವಿಧುಬಿಂಬೋಪಮ ಚಲ್ವವದನ ಕೆಂದುಟಿಯಾ ಬಿದುರಾಭಾದಶನಾಲಿಂಗದನೊಳ್ ಕಿರುನಗೆಯಾ ಕದಪು ಕನ್ನಡಿ ನಾಸಾ ತುದಿ ಚಂಪಕ ತೆನೆಯಾ ಉದಕೇಜಾಯತ ನೇತ್ರಯದುವಂಶೋದ್ಭವನಾ 5 ಕುಂಡಲ ಕರ್ಣ ಸುಲಲಿತ ಭ್ರೂಯುಗಳ ಪೊಳೆವ ಬಾಲ ಶಶಾಂಕ ತಿಲಕಾಂಕಿತ ಫಾಲ ಅಳಿಬಾಲವೆನಿಪ ಕುಂತಳ ರತ್ನ ಚಕಿತ ಕಲಧೌತ ಮಕುಟ ದಿಗ್ವಲಯ ಬೆಳಗುವನ 6 ಮಾನವ ಹರಿಯಾ ವಟುಭಾರ್ಗವ ಕಾಕುಸ್ಥ ಶಠ ಕಂಸದ್ವಿಷನ ನಿಟೆಲಾಂಬಕ ಸಹಾಯ ಖಳಕಟಕಾರಿ ಭೀಮಾ ತಟವಾಸ ಜಗನ್ನಾಥವಿಠಲ ಮೂರುತಿಯ 7
--------------
ಜಗನ್ನಾಥದಾಸರು
ಎಂದು ಕಾಂಬೆನೊ ರಾಘವೇಂದ್ರ ಗುರುಗಳನಾ | ಕಾಯ ಆನಂದ ನಿಧಿಯ ಪ ತಾಯಿಯಂದದಿ ನಮ್ಮ ಕಾಯುವ ಧಣಿಯಾ ನ್ಯಾಯ ಸದ್ಗುಣ ಪೂರ್ಣ ಮಾಯಿ ಜಗ ಹರಿಯಾ 1 ಮಾಯಾ ರಮಣನ ನಾಮ ಗಾಯನ ಪರನ ದಾಯಾದಿ ಕುಲವೈರಿ ಶ್ರೇಯ ಬಲಯುತನಾ2 ನರರೂಪ ಧರಿಸಿ ವಾನರÀ ಭಕ್ತವರನಾ ನರಶೌರಿ ಪ್ರೀಯ ದೀನರ ಕಾಯುತಿಹರಾ 3 ಜನರನ ಪೊರೆವನೆಂದೆನುತ ಭೂಮಿಯಲಿ ಜನಿಸಿದ ತನ್ನವನ್ನ ವನುತಿ ಸಹಿತದಲಿ 4 ದುರಿತ ವರೆಕೆ ತಾಮುರುತನಾಗಿಪ್ಪ ಗುರುವೆಂಬ ಸಿರಿಗೆ ಇವ ನಿರಂತರದಿ ಸುರಪಾ 5 ಭಕ್ತರ ಬಯಕೆ ಪೂರೈಪಾ ಸುರತರುವೇ ಶಕ್ತ ವಿರಕ್ತ ಹರಿಭಕ್ತ ಮದ್ಗುರುವೆ 6 ಭುವನದಿಂ ದಾಟಿಸೆ ನೌಕವಾಗಿಹಿನಾ ನವ ಭಕುತಿಯನೀವ ಕುವಿಕುಲ ವರನಾ 7 ಇವನೇ ಗತಿಯೆನೆ ಜ್ಞಾನ ತವಕದಿ ಕೊಡುವಾ 8 ನಿಂದಿಪ ಜನರಲ್ಲಿ ಪೊಂದಿಪ ಪ್ರೇಮ ವಂದಿಪ ಜನರಿಗೆ ಸತತ ಶ್ರೀ ರಾಮ 9 ಶ್ರೀನಿವಾಸ ಪುತ್ರ ಪರಮ ಪವಿತ್ರಾ ಜ್ಞಾನಿ ಜನರ ಮಿತ್ರ ವಿಹಿತ ಚರಿತ್ರಾ 10 ನಷ್ಟ ತುಷ್ಟಿಗೆ ಅಂಜಾ ದುಷ್ಟ ಶೇರಾ ಕಷ್ಟ ಕಳೆಯುವ ನಮ್ಮ ಕೃಷ್ಣ ಪಾರಿಜಾತ 11 ಪೊಳಲುರಿ ಸಖನಾ ಘನಪೊಳಿಯುವ ಪಾದಯುಗವಾ ಘಳಿಗಿ ಬಿಡದಲೆ ನೋಡುತ ನಲಿಯುತಿರುವಾ 12 ಅರಿದು ಈತನೇಯನ್ನ ಗುರುವೆಂಬಗೆ ರುದ್ರಾ ಧುರದೊಳು ಭೀಮ ಗುರುವಿಗತಾ ದಾರಿದ್ರ್ಯಾ 13 ಅನಿಮಿತ್ತ ಬಂಧು ಬ್ರಾಹ್ಮಣ ವಂಶಜಾ ಭವ ತ್ರಾತಾ 14 ತಪ್ಪು ನೋಡದಲೆ ಕಾಯುತಿಪ್ಪ ನಮ್ಮಪ್ಪ ಸರ್ಪ ತಲ್ಪನ ಧ್ಯಾನದಿಪ್ಪ ನಿಪ್ಪ 15 ಅರುಣಾಭಿ ಚರಣ ತಲೆಬೆರಳು ಪಂಕ್ತಿಗಳಾ ಸರಸಿಜ ಪೋಲ್ವ ಮೃದುತರ ಪಾದಯುಗಳಾ 16 ವಲಿದ ಭಕ್ತರಿಗಿಷ್ಟ ಸಲಿಸುವ ಪಾದ17 ಸಕಲ ರೋಗವ ಕಳೆವ ಅಕಳಂಕ ಪಾದ ಪಾದ 18 ಹರಿಯಂತೆ ಹರನೊಲ್ ಸಾಸಿರ ನಯನನಂತೆ ಶಿರಿಯಂತೆ ತೋರ್ಪ ಭಾಸ್ಕರ ನರನಂತೆ 19 ಸುಳಿರೋಮಗಳುಳ್ಳ ಚಲುವ ಜಾನುಗಳಾ ಎಳೆಬಾಳೆ ತೆರ ಊರು ಹೊಳೆವ ಸುಚೈಲ 20 ತಟಿತ ಸನ್ನಿಭವಾದ ಕಟಿಗಿಪ್ಪ ಸೂತ್ರ ನಟ ಶೇವಸಿವಲಿ ತಾನು ಪುಟಿಯು ಉದರಾ 21 ಎದೆಯಲಿಪ್ಪುದÀು ನಮ್ಮ ಪರಮೇಶನ ಮನೆಯೊ ವದಗಿ ಭಕ್ತರಿಗೆ ಕರುಣದಿ ಕಾಯ್ವ ಖಣಿಯೂ 22 ಹುತವಾಹನನಂತೆ ಭಾರತೀಕಾಂತನಂತೆ ಚತುರಾಶ್ಯ ಈ ಕ್ಷಿತಿಯಂತೆ ಇಹನಂತೆ23 ಹಸುವಿನಂದದಲಿ ಪಾಗಸನೊಳಿಹನ ವಸುಧಿಯೊಳಿಂತಿದೊಮ್ಮೆ ಪಸುಯನಿಸಿದನಾ 24 ಭೂಧರತನಂತೆ ವಸುಧರನಂತೆ ಭೂಧರನಂತೆ ಸೋದರನಂತೆ 25 ಚರ್ಚಿತ ಸುಂದರ ರೂಪ ಕಂಬು ಲೋಕ ಕಂಧರಾಯುತನ 26 ಕರೆದು ಭಕ್ತರಿಗಿಷ್ಟಗರಿಯುವ ಚೆಲ್ವಾ ವರ ರೇಖೆಯುತ ಶಿರಕರದಾ ವೈಭವನಾ 27 ಮಂಗಳದಾಯಕ ಅಂಗೈಯಿಯುಗಳಾ ಭಂಗಾರ ದುಂಗಾರ ಇಟ್ಟಿಪ ಬೆರಳು 28 ಕೆಂದುಟಿ ಮೊದನಾಗಿ ಇಂದಿಪ್ಪ ವದನಾ ಪೊಂದಿದ ದಂತಗಳಿಂದ ಸ್ವಾರಚನಾ29 ಹಸನಾದ ದೊಕರದಂತೆಸೆವ ಗಲ್ಲಗಳಾ ಬಿಸಜದಂತೆ ರಾಜಿಸುವ ನೇತ್ರಗಳಾ 30 ನಾಸಿಕದಲಿಪ್ಪ ಮೀಸಿ ದ್ವಂದ್ವಗಳಾ ದೇಶಾದಿ ಪಾಲ್ಮೂರು ವಾಸಿ ಕರ್ಣಗಳಾ 31 ಗಿಳಿಗೆ ವಾಚ್ಯಾಪದೊಳ ಹೊಳೆವಾ ಪುಚ್ಛಗಳಾ ತಿಲಕಾ ಮುದ್ರೆ ಪುಂಡ್ರಗಳುವುಳ್ಳ ಫಾಲಾ 32 ಹರಿಪಾದ ಜಲವನ್ನು ಧರಿಸಿದ ಶಿರವಾ ಶಿರಿಗೋವಿಂದ ವಿಠಲನ್ನಡಿಗೆಯರಗುವಾ ಶಿರವಾ33
--------------
ಅಸ್ಕಿಹಾಳ ಗೋವಿಂದ