ಒಟ್ಟು 252 ಕಡೆಗಳಲ್ಲಿ , 58 ದಾಸರು , 187 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏಳೇಳೇಳೆಲೆ ಮಾಮ | ಆರೋ ರೇಳೋದು ಸುಳ್ಳು ಬಂತು ಕ್ಷಾಮ ಪ ಹಾಳಾಗಿ ಹೋಯ್ತು ಮಳೆಬಳೆ ಕಾಳೆಲ್ಲ ಕಸವಾಯಿತು ಅ.ಪ ಭೂಮಿ ಒಕ್ಕಲಮಗನದು ಭೂಮೆಮ್ಮನ ಮಕ್ಕಳು ಒಕ್ಕಲಿಗರು ಭೂಮಿ ಬೆಳೆದರೆ ಅರ್ಧವನ್ನು ಬ್ರಾಹ್ಮಣರಿಗೇಕೆ ಕೊಡಬೇಕು 1 ಆರೋರು ಹೊಲ ಮಾಡಬಾರದು ಮಾಡಿದರೆ ಬಲು ಪಾಪ ಮಾರಲಿ ನಮಗೆ ಮೂರಕ್ಕೆ ನಾಲ್ಕಕ್ಕೊ ಏನಲಾ ಯೀರ್ಕೆಂಪ 2 ಎರವು ಇಸ್ತೆ ಚೇಸ್ತಾನು ಒದ್ದಂಟೆ ವಾಡೆ ಪೋನಿ ವಲ್ಲ ಬಾ ಪ್ನೋಳ್ ಚೇನು 3 ಹೊಲಕುಯಿದು ಕಟ್ಟುವಾಗ ಛಲದಿ ಹಾರುವೈಯ ಬೇಗ ಒಕ್ಕಲಿಗನ ಕಾಯಬೇಕಂತಾನೆ ಬಲು ಭ್ರಾಂತನು ತಾನೆ4 ಕೊಳಗ ಕೊಡÀುವೆವೇಳು ನಮ್ಮಲ್ಲಿ ನಡೆಯದು 5 ಕಂದಾಯ ಕೊಡುವಮಟ್ಟಿಗೆ ಕಾಳುಕೊಟ್ಟರೆ ಸಾಕು ಮುಂದಲು ಬಾರಿಗೆ ಸಾವೇ ಹಾಕಿ ಮೂಗಳಕ್ಕೆ ಗುತ್ತಿಗೆಬೇಕು 6 ನಾವು ತಿಂದು ಮಿಕ್ಕದರೊಳಗೆ ಹಾರೋರಿಗೆ ಸರಿಪಾಲು ಕಾಲ ಕಳ್ವೋದೆ ಮೇಲು 7 ಹೆಂಡಿರು ಹಿಟ್ಟು ಹೊರಲಿಲ್ಲ ಈ ಪುಂಡುತನ ನಮ್ಮಲಿ ಸಲ್ಲಾ ಭಂಡಿಸೌದೆ ಬೇಕೆಂದು ಬರುತಾನೆ ಭಲೆ ಭಲೆ ಹಾರೋನೆ 8 ನಮ್ಮದುಕೇಳಲೆ ಇನ್ನು ಉಳುಮೆಯಿಲ್ಲ ಹಾರುವೈಯಂಗೆ ರಾಜಿನಾಮೆ ಕೊಡಲಿ ಬಿಡಲೆ 9 ಎಷ್ಟು ಧರ್ಮದೊಳಿದ್ದುರು ರೈತರು ಕಷ್ಟಪಡುವರು ನಾವೆ ಬಿಟ್ಟಿ ಹಾರುವಯ್ಯ ಬಲ್ಲೆನೆ ಗುರುರಾಮವಿಠಲಗಾಗಲಿ ಸೇವೆ 10
--------------
ಗುರುರಾಮವಿಠಲ
ಒಂದು ಬಾರಿ ಸ್ಮರಣೆ ಸಾಲದೆ ಆನಂದ- ಪ. ತೀರ್ಥರ ಪೂರ್ಣಪ್ರಜ್ಞರ ಸರ್ವಜ್ಞರಾಯರ ಮಧ್ವರಾಯರಅ.ಪ. ಹಿಂದನೇಕ ಜನ್ಮಗಳಲಿ ನೊಂದು ಯೋನಿಯಲ್ಲಿ ಬಂದುಇಂದಿರೇಶ ಹರಿಯ ಪಾದವ ಹೊಂದಬೇಕೆಂಬುವರಿಗೆ 1 ಪ್ರಕೃತಿ ಬಂಧದಲ್ಲಿ ಸಿಲುಕಿ ಸಕಲ ವಿಷಯಗಳಲಿ ನೊಂದುಅಕಳಂಕಚರಿತ ಹರಿಯ ಪಾದಭಕುತಿ ಬೇಕೆಂಬುವರಿಗೆ 2 ಆರುಮಂದಿ ವ್ಶೆರಿಗಳನು ಸೇರಲೀಸದಂತೆ ಜರಿದುಧೀರನಾಗಿ ಹರಿಯ ಪಾದವ ಸೇರಬೇಕೆಂಬುವರಿಗೆ 3 ಘೋರ ಸಂಸಾರಾಂಬುಧಿಗೆ ಪರಮಜ್ಞಾನವೆಂಬ ವಾಡೆಏರಿ ಮೆಲ್ಲನೆ ಹರಿಯಪಾದ ಸೇರಬೇಕೆಂಬುವರಿಗೆ4 ಹೀನಬುದ್ಧಿಯಿಂದ ಶ್ರೀ ಹಯವದನನ್ನ ಜರಿದು ತಾನು ಬದುಕಲರಿಯದಿರಲು ತೋರಿಕೊಟ್ಟ ಮಧ್ವಮುನಿಯ 5
--------------
ವಾದಿರಾಜ
ಒಂದು ಮಾತ ನಾಡೋಣು ಬಾರೆ ನಗುತಲಿಮಾತನಾಡೋಣು ಬಾರೆ ಪ್ರೀತಿ ಹರುಷದಿಂದ ನೀತಿಯಿಂದ ನಲಿದಾಡುತ ಪ. ನೀಲ ನೀಲ ಮಾಣಿಕದ ಸರಗಳು ಸರಗಿಯನಿಟ್ಟುಬಾಲೆಯರು ಭಾಳೆ ಹರುಷದಿ1 ಸೂರ್ಯರಾಗದ ಸೀರೆ ಸಾಲೆವಲಿಯ ಕುಪ್ಪುಸ ತೋರ ಮಾಣಿಕದ ನೆನಿದಂಡೆ ತೋರ ಮಾಣಿಕದ ನೆನಿದಂಡೆ ತಂದೇವ ನಾರಿರುಕ್ಮಿಣಿಯೆ ಉಡುಬಾರೆ2 ಉದಯರಾಗದ ಸೀರೆ ಪದುಮರಾಗದ ಕುಪ್ಪಸ ಪದುಮದ್ಹೂವಿನ ನೆನೆದಂಡೆಪದುಮದ್ಹೂವಿನ ನೆನೆದಂಡೆ ತಂದೇವ ಪದುಮಾಕ್ಷಿ ಭಾವೆ ಉಡುಬಾರೆ 3 ತುರಗ ತಾಪತಿ ಭೇರಿ ಬಿರುದಿನ ಹೆಗ್ಗಾಳೆಬರಿಯ ಮಾಣಿಕದ ರಥಗಳುಬರಿಯ ಮಾಣಿಕದ ರಥಗಳು ಅಂಬಾರಿ ಆನೆಹಿರಿಯ ರುಕ್ಮಿಣಿಗೆ ಉಚಿತವ 4 ಛsÀತ್ರ ಚಾಮರ ದಿವ್ಯ ಮುತ್ತಿನ ಪಲ್ಲಕ್ಕಿಉತ್ತಮ ರಥವು ಹಿಡಿದೇಜಿಉತ್ತಮ ರಥವು ಹಿಡಿದೇಜಿ ರಾಮೇಶನ ಮಿತ್ರಿ ಭಾವೆಗೆ ಉಚಿತವ 5
--------------
ಗಲಗಲಿಅವ್ವನವರು
ಕರವ ಜೋಡಿಸಿ ಎಲ್ಲರಿಗೊಂದಿಸಿ ಪ. ಎಲ್ಲರಿಗೊಂದಿಸಿ ಫುಲ್ಲನಾ¨sನÀ ಮುಖ್ಯವಲ್ಲಭೆಯರುನಾವು ಗೆಲ್ಲಬೇಕೆಂದುಅ.ಪ. ಮಡದಿ ಇಂದಿರಾದೇವಿ ಕಡೆಗಣ್ಣನೋಟದಿ ಪಡೆದಾಳು ಲೋಕಬ್ರಹ್ಮರುದ್ರಾದಿ ಪಾದಂಗಳಿಗೆ ನೀವೆ ಮಹಾಲಕ್ಷ್ಮಿಪಾದಂಗಳೆಗೆ ನೀವೆ ಮಹಾಲಕ್ಷ್ಮಿ ದೇವಿಯಶುಭಾಂಗಿಯ ಮೊದಲೆ ಬಲಗೊಂಬೆ 1 ಪರಮೇಷ್ಠಿ ಪರಮೇಷ್ಠಿ ಪಾದ ಪದ್ಮವನೆ ಮೊದಲೆ ಬಲಗೊಂಬೆ2 ವಾಣಿ ಅಜನ ಪಟ್ಟದರಾಣಿ ಪನ್ನಂಗ ವೇಣಿಜಾಣಿ ಕೊಡು ಎಮಗೆ ಮತಿಗಳಜಾಣಿ ಕೊಡು ಎಮಗೆ ಮತಿಗಳ ನಿನ್ನಪಾದರೇಣುವ ಮೊದಲೆ ಬಲಗೊಂಬೆ 3 ಪಾದ ವನಜವ ಮೊದಲೆ ಬಲಗೊಂಬೆ4 ಭಾರತಿ ನಿನ್ನ ಪಾದವಾರಿಜ ಚರಣವ ಬಾರಿ ಬಾರಿಗೆ ಸ್ಮರಿಸುವೆಬಾರಿ ಬಾರಿಗೆ ಸ್ಮರಿಸುವೆ ನಮಗಿನ್ನುತೋರೆ ಬೇಗ ಮತಿಗಳು5 ಇಂದ್ರನ ಗೆದ್ದು ಸುಧೆಯ ತಂದ ಮಾತೆಯ ಬಂಧನ ಕಡೆದ ಬಲು ಧೀರಬಂಧನ ಕಡೆದ ಬಲುಧೀರನಾದ ಖಗೇಂದ್ರನ ಮೊದಲೆ ಬಲಗೊಂಬೆ6 ಸಾಸಿರ ಮುಖದಿಂದ ಶ್ರೀಶನ ಸ್ತುತಿಸಿದವಾಸುದೇವಗೆ ಹಾಸಿಗೆವಾಸುದೇವಗೆ ಹಾಸಿಗೆ ಯಾದಶೇಷಗೆ ಮೊದಲೆ ಬಲಗೊಂಬೆ7 ಅಪಾರ ಮಹಿಮನೆ ತ್ರಿಪುರಸಂಹಾರಕಚಂದ್ರ ಶೇಖರನೆ ಸರ್ವೇಶ ಚಂದ್ರ ಶೇಖರನೆ ಸರ್ವೇಶ ನಿನ್ನಪಾದದ್ವಂದ್ವವ ಮೊದಲೆ ಬಲಗೊಂಬೆ 8 ವಾರುಣಿ ಅಪರ್ಣಾದೇವಿಯರು ಕರುಣಿಸಿನಮಗೆ ಕಾಲಕಾಲಕರುಣಿಸಿನಮಗೆ ಕಾಲಕಾಲಕೆರಾಮೇಶನ ತರುಣಿಯರೆ ಗೆದ್ದು ಬರಬೇಕ9
--------------
ಗಲಗಲಿಅವ್ವನವರು
ಕರಿಗಿರೀಶ ನಿನ್ನ ಬೇಡುವೆನೀಗ ಪರಿಪಾಲಿಸೊ ಸತತ ಪ. ನರಹರಿ ಭಕ್ತರ ಪೊರೆಯುವೆ ನೀನೆಂ- ಇಂದು ಅ.ಪ. ನಾರಸಿಂಹ ನಿನ್ನ ಸಾರಿ ಭಜಿಸುವೆನು ತೋರೊ ನಿನ್ನ ಪದವ ಬಾರಿಬಾರಿಗೆ ಸ್ತುತಿಸಲು ಬಾಲನು ಘೋರ ದೈತ್ಯನ ಸೀಳಿ ಪೊರೆದೆಯೊ 1 ಶೇಷಾಂತರ್ಗತ ನಾರಸಿಂಹ ವಿ- ಶೇಷ ಮಹಿಮೆ ತೋರೊ ಶೇಷಶಯನ ಮಹರುದ್ರಾಂತರ್ಗತ ಪೋಷಿಸೊ ಭಕ್ತರ ಶಾಂತರೂಪದಿ 2 ಲೀಲೆಯಿಂದ ಶ್ರೀ ಲಕುಮಿ ಹಿತದಿ ವ್ಯಾಳಶಯನನಾಗಿ ಪಾಲಿಸಬೇಕೆನ್ನನು ಸತತದಿ ಗೋ- ಪಾಲಕೃಷ್ಣವಿಠ್ಠಲ ನೀ ದಯದಿ 3
--------------
ಅಂಬಾಬಾಯಿ
ಕಾಣಿ ನಿನ್ನಂಥವಳ ಪ. ಮುದ್ದು ರುಕ್ಮಿಣಿಯು ದೂತೆಗೆ ತಿದ್ದಿ ಮಾತುಗಳ ಹೇಳಿ ಬುದ್ಧಿವಂತಳೆ ರಾಯಗ ಸುದ್ದಿ ಹೇಳಮ್ಮ ಹೋಗಿ1 ಮಾನ ಮಾಡಿ ದೂತೆಗೆ ಆನೆ ಅಂಬಾರಿ ಕೊಟ್ಟುನಾನಾ ಭೂಷಣಗಳಿಟ್ಟು ತಾನು ವಸ್ತ್ರಗಳನೆ ಕೊಟ್ಟು2 ಹರದಿ ರುಕ್ಮಿಣಿಯು ದೂತೆಗೆ ತುರಗ ಬಿರುದುಗಳೆ ಕೊಟ್ಟುಎರಗಿ ಹೇಳಮ್ಮ ಅಷ್ಟು ಹಿರಿತನಗಳಟ್ಟು 3 ರಂಗ ಬಂದಿಳಿದಾನೆಂಬೊ ಮಂಗಳವಾರ್ತೆಯಸಂಗೀತಲೋಲರಾಯನ ತಂಗಿಗ್ಹೇಳಮ್ಮ ಹೋಗಿ 4 ಭರದಿ ದ್ರೌಪತಿಗೆ ಮುಯ್ಯಾ ತಿರುಗಿಸಿ ತಂದಾರೆಂದು ಎರಗಿ ಹೇಳಮ್ಮ ಮೈಯ್ಯ ಮರೆತಿರಬ್ಯಾಡಿರೆಂದು5 ಮಂದಗಮನೆಯರು ಮುಯ್ಯ ತಂದಾರೆ ತಾರಾರೆಂದು ಸಂದೇಹ ಬಿಟ್ಟು ಊಟ ಚಂದಾಗಿ ಮಾಡಿರೆಂದು6 ಧೀರರಾಯಗೆ ಮುಯ್ಯ ನಾರಿಯರು ತಂದಾರೆಂದು ಬಾರಿ ಬಾರಿಗೆ ನಮಿಸಿ ಸಾರಿ ಹೇಳಮ್ಮ ಹೋಗಿ 7 ಧಿಟ್ಟೆಯರು ಮುಯ್ಯ ಉತ್ಕøಷ್ಟದಿ ತಂದಾರೆಂದು ಕೃಷ್ಣರಾಯನ ಬಂದದ್ದಷ್ಟು ಹೇಳಮ್ಮ ಹೋಗಿ8 ಇಂದು ರಾಮೇಶನ ಮಡದಿಯರು ಬಂದರು ದ್ವಾರದಿ ಒಂದೊಂದು ಮಾತುರಾಯಗೆ ಚಂದಾಗಿ ಹೇಳಮ್ಮ ಹೋಗಿ9
--------------
ಗಲಗಲಿಅವ್ವನವರು
ಕುಲಾಂಬುಧಿ ಚಂದ್ರ ಶ್ರೀ ರಾಮಚಂದ್ರ ಪ ಒಂದೇ ಭಾಷಣ ನಿನಗೊಂದೇ ಮಾರ್ಗ ಸಾಕು ಒಂದೇ ಸ್ಥಾನದೊಳಾಶ್ರಿತರನೇ ನಿಲ್ಲಿಸುವಿ ಒಂದೇ ಬಾರಿಯೆ ಕೊಟ್ಟುದ್ಧರಿಸುವೆÉ ಭೃತ್ಯರ ಒಂದೇ ಪತ್ನಿಯು ನಿನಗೆಂಬುದು ಬಿರುದು 1 ನಿನ್ನ ತಮ್ಮನು ನಿನ್ನ ರಾಣಿಯ ಭೃತ್ಯನು ನಿನ್ನಂಥ ಭಾಗ್ಯ ಮತ್ತೆಲ್ಲಿ ತೋರುವುದು ಘನ್ನ ಮಹಿಮ ನೀನು ಮಲತಾಯಿ ನುಡಿಯಲು ತನ್ನ ರಾಜ್ಯಗಳನ್ನು ತಮ್ಮನಿಗೊಪ್ಪಿಸಿದೆ 2 ಭರತನು ನಿನ್ನಡಿಗಾಗಿ ಬೇಡಿದರೂ ನೀ ಹರುಷದಿಂದಲಿ ಕಾಲಾಂತರವ ಪೇಳಿರುವಿ ಮರಳಿ ರಾಜ್ಯದಿ ಬಂದು ರಾಜೇಶ ಹಯಮುಖ ಕರುಣಿಸಿ ಪಟ್ಟಾಭಿಷಿಕ್ತನಾಗಿರುವಿ 3
--------------
ವಿಶ್ವೇಂದ್ರತೀರ್ಥ
ಕೃಷ್ಣ ಕೃಷ್ಣ ಕೃಷ್ಣಯೆಂದು ಮೂರುಬಾರಿ ನೆನೆಯಿರೊ ಪ ಭಾರ ಹೊರುವನೋಅ.ಪ ಸಕಲ ವೇದ ಶಾಸ್ತ್ರ ಪಠಿಸಿ ಸಾರವನ್ನು ತಿಳಿದರೇನುಮಕರ ಕುಂಡಲಧರನ ನಾಮಕೆ ಸರಿಯಿಲ್ಲವೊ 1 ಕಮಲನಾಭನ ಚಿನ್ಹೆಯನ್ನು ಧರಿಸಿಕೊಂಡು ಮೆರೆಯಿರೊಯಮನ ಭಟರು ನೋಡಿ ಅಂಜಿ ಅಡವಿ ಹೊಗುವರೋ2 ಜನ್ಮವೆತ್ತಿ ಮಧ್ವಮತವ ಅನುಸರಿಸಿ ನಡೆಯಿರೊಸುಮ್ಮಾನದಿ ಸಿರಿಕೃಷ್ಣ ತನ್ನ ಲೋಕ ಕೊಡುವನೋ3
--------------
ವ್ಯಾಸರಾಯರು
ಕೃಷ್ಣಲೀಲೆ ಆನೆ ಬರುತಾದೆ ನೋಡಮ್ಮ ಮದ್ದಾನೆ ಬರುತಾದೆ ಪ ಆನೆ ಬರುತಾದೆ ಎಲ್ಲರು ನೋಡಿರಿ ಒಂ-ದಾನೆಯ ಕೊಂದ ಮದ್ದಾನೆಏನೆಂದು ಪೇಳಲಿ ಎಲ್ಲ ದಿಕ್ಕುಗಳಲಿತಾನೇ ತಾನಾಗಿ ಮದ ಸೊಕ್ಕಿದಾನೆಅ ನೀರ ಮುಳುಗಿ ಖಳನ ಕೊಂದು ವೇದ ತಂದುಬರಮದೇವಗಿತ್ತ ಮದ್ದಾನೆಕ್ರೂರ ಚಿತ್ರಗುಪ್ತನೊಡನೆ ಕಾರುಬಾರಿಗಿಳಿದಜಾರ ಕೃಷ್ಣನೆಂಬ ಸೊಕ್ಕಿದಾನೆ 1 ದಶದಿಕ್ಕಿನೊಳು ಘಂಟೆ ಘಣಿರೆಂದು ಬರುತ್ತಿದೆಕುಸುಮಶರನ ಪೆತ್ತ ಮದ್ದಾನೆದಶಕಂಠನ ಕೊಂದು ಅನುಜಗೆ ಪಟ್ಟಗಟ್ಟಿದದಶರಥಸುತನೆಂಬ ಮದ ಸೊಕ್ಕಿದಾನೆ 2 ಗಂಧ ಕಸ್ತೂರಿ ಬೊಟ್ಟು ಗಮಕದಿಂದಲಿ ಇಟ್ಟುಗೊಂದಲಗಡಿಬಿಡಿ ಸುರಲೋಕ ಅಮ್ಮಮ್ಮಬೆಂಬಿಡದೆ ದೈತ್ಯರನು ಕೊಂದ ಗುಣ ಸಂಪನ್ನಸುಂದರ ಕೃಷ್ಣನೆಂಬ ಮದ ಸೊಕ್ಕಿದಾನೆ 3 ಸಾವಿರ ತೋಳವನ ಸರಸದಿಂದಲಿ ಕಡಿದಭುವನ ರಕ್ಷಕನಾದ ಮದ್ದಾನೆಯೌವನದ ಗೋಪಿಯರ ಕಣ್ಮಣಿ ಎನಿಪ ವಸುದೇವಸುತನೆಂಬ ಮದ ಸೊಕ್ಕಿದಾನೆ 4 ಗರುಡವಾಹನವೇರಿ ಧಿಮಕೆಂದು ಬರುತಾನೆಸರುವ ಲೋಕರಕ್ಷಕನೆಂಬ ಮದ್ದಾನೆಉರೆ ಪೂತನಿಯ ಹೀರಿ ಮಾವ ಕಂಸನ ಕೊಂದಸಿರಿಯಾದಿಕೇಶವನೆಂಬ ಮದ ಸೊಕ್ಕಿದಾನೆ 5
--------------
ಕನಕದಾಸ
ಕೇಳಕ್ಕಯ್ಯ ನಾ ಮಾಡಿದ ಮದುವೆ ಮನಸಿಗೆ ಬರುತ್ತದೆಕೇಳಕ್ಕಯ್ಯ ನಾ ಮಾಡಿದ ಮದುವೆ ಮನಸ್ಸಿಗೆ ಬರುತ್ತದೆ ಪ ಮುಂಡಕೆ ದಂಡೆಯ ಮಾಡಿಸಿದೆ ಮುಸುಕಲಿ ಸೋಭಾನ ಮಾಡಿದೆಮುಂಡಕೆ ರುಂಡವ ಕೂಡಿಸಿದೆ ಮಂಗಳಾರತಿ ಬೆಳಗಿಸಿದೆ 1 ಕೋತಿಯು ಅಲ್ಲಿ ಕುಣಿಯುತ್ತಿತ್ತು ಕೋಣವು ಮದ್ದಲೆ ಬಾರಿಸುತ್ತಿತ್ತುಕೋತಿಯ ಕಾಲನೆ ಮುರಿದೆ ಕೋಣನ ಮದ್ದಲೆ ಮುರಿದೆ2 ಹಾರುವವನನು ಕಟ್ಟಿ ಹಾಕಿಸಿದೆ ಹಾದಿಲಿ ದೀಪವ ಹಿಡಿಸಿದೆಮೂರು ಮನೆಯ ಮೇಲಟ್ಟದಲ್ಲಿ ಮೆರವಣಿಗೆಯನೆ ಮಾಡಿಸಿದೆ3 ಒಳ್ಳೆ ಬೀಗರ ಬೆಳ್ಳಿ ತಳಿಗೆಯಲ್ಲಿ ಎಲ್ಲರ ಒತ್ತೊತ್ತಾಗಿ ಕೂರಿಸಿದೆಬೆಲ್ಲದ ಪರಮಾನ್ನವನೆ ಉಣಿಸಿದೆ ಬೆಳ್ಳನೆ ಉಡುಗೊರೆ ಹೊದಿಸಿದೆ 4 ಗುಡ್ಡ ಮೂರ ಕೊನೆಯಲಿದ್ದ ಅಡ್ಡಗಲದೆ ದೇವರ ಮನೆಗೊಯ್ದುದೊಡ್ಡ ಚಿದಾನಂದ ಗುರುವಿಗೆ ನಾ ಅಡ್ಡಗೆಡವಿ ಮದುವೆ ಮಾಡಿಸಿದೆ5
--------------
ಚಿದಾನಂದ ಅವಧೂತರು
ಕೇಳೊ ಗೋವಿಂದ ಹೇಳಿದರಂತು ಬಲು ಚಂದ ಇಂದಿರೇಶನ ಗುಣ ಚಂದಿಲ್ಲಚಾರವಿಲ್ಲ ಅಂದರೆಭಾಳ ಬಲುಕೋಪ ಕೇಳೊ ಗೋವಿಂದ ಪ ಭೇರಿ ಬಾರಿಸಿ ಕೇಳುತ ಭೂರಿಜನರ ಕೂಡಿಭೋರೆಂಬೊ ಕಾಳಿ ಹಿಡಿಸುತ ಭೋರೆಂಬೊ ಕಾಳಿ ಹಿಡಿಸುತ ಖಳರ ಸಂಹಾರ ಮಾಡಿದ ಮಧುರೆಯಲಿ ಕೇಳೊ 1 ಹೊರಗಿಂದ ಬಂದಳು ತಿರುಗಲ ತಿಪ್ಪಿಯು ಹೆರವರಿಗುಪಕಾರಿ ಮನೆಗೆ ಮಾರಿ ಹೆರವರಿಗುಪಕಾರಿ ಮನೆಗೆ ಮಾರಿ ಮಕ್ಕಳ ಕೊರಳ ಹಿಚುಕಿ ಕೊಂದಳು2 ತಲೆಹೊೈಕ ಹಿರಿಯವ ಚಿಕ್ಕವ ಚಂಚಲ ಬಹು ಚಾಡಿಕೋರ ಇನ್ನೊಬ್ಬಬಹು ಚಾಡಿಕೋರ ಇನ್ನೊಬ್ಬ ಎನುತಲಿಫಲ್ಗುಣ ನಗುತ ನುಡಿದನು 3 ಸುರತರು ತರುವಾಗ ಇಂದ್ರ ಬಂದಿದ್ದ ಜಗಳಕ್ಕೆÀಇಂದ್ರ ಬಂದಿದ್ದ ಜಗಳಕ್ಕೆ ಆಗನಮ್ಮಕ್ಕನಿಂದ ಮಾನ ಉಳಿದೀತೊ4 ಒಗೆತನ 5 ಬಲು ಪತಿವ್ರತೆಯೆಂದು ಜನರೆಲ್ಲ ಹೊಗಳೋರು ತಲೆಯಲ್ಲಿ ಹೊತ್ತ ಮಹಾದೇವತಲೆಯಲ್ಲಿ ಹೊತ್ತ ಮಹಾದೇವ ಇಂಥವಳ ಬಲುಗುಣವಂತೆ ಎನಬಹುದೆ 6 ಒಗೆತನ ಕೇಳೊ ಗೋವಿಂದ7
--------------
ಗಲಗಲಿಅವ್ವನವರು
ಗÀಣೇಶ ಪ್ರಾರ್ಥನೆ ಗಜಮುಖ ವಂದಿಸುವೆ ಕರುಣಿಸಿ ಕಾಯೊ ಪ.ಗಜಮುಖ ವಂದಿಪೆ ಗಜಗೌರಿಯ ಪುತ್ರಅಜನ ಪಿತನ ಮೊಮ್ಮಗನ ಮೋಹದ ಬಾಲಅ.ಪ.ನೀಲಕಂಠನ ಸುತ ಬಾಲಗಣೇಶನೆಬಾರಿ ಬಾರಿಗೆ ನಿನ್ನ ಭಜನೆ ಮಾಡುವೆನಯ್ಯ 1 ಪರುವತನ ಪುತ್ರಿ ಪಾರ್ವತಿಯ ಕುಮಾರಗರುವಿಯಾ ಚಂದ್ರಗೆ ಸ್ಥಿರಶಾಪ ಕೊಟ್ಟನೆ 2 ಹರಿಹರರು ನಿನ್ನ ಚರಣ ಪೂಜೆಯ ಮಾಡಿದುರುಳ ಕಂಟಕರನು ತರಿದು ಬಿಸುಡಿದರಯ್ಯ 3 ಮತಿಗೆಟ್ಟ ರಾವಣ ಪೂಜಿಸದೆಸೀತಾಪತಿ ಕರದಿಂದಲಿ ಹತವಾಗಿ ಪೋದನು 4 ವಾರಿಜನಾಭ ಶ್ರೀ ಹಯವದನನ ಪದಸೇರುವ ಮಾರ್ಗದ ದಾರಿಯ ತೋರಿಸೊ5
--------------
ವಾದಿರಾಜ
ಗಂಧವಾಹನ ಮತವ ಪೊಂದವರು ಹಂದಿನಾಯಿಗಳಾಗಿ ಬಹುಕಾಲ ಕಳೆದಂತೆ ಪ ಇಳೆಯಾಣ್ಮನಿಲ್ಲದಾ ನಾಡು ಶೋಭಿಸದಂತೆ ಜಲವಿಲ್ಲದಾ ವಾಪಿ ಕೂಪದಂತೆ ನಳಿನ ಬಾಂಧವ ಮಿತ್ರನುದಯಿಸದ ದಿನದಂತೆ ಕುಲಹೀನನಾದವರ ಸಂಗಮಾಡಿದಂತೆ 1 ಕೋಣನಾ ಸಮ್ಮುಖದಿ ವೀಣೆ ಬಾರಿಸಿದಂತೆ ಜಾಣತನವಿಲ್ಲದಾಮಾತ್ಯನಂತೆ ವಾನರನ ಕೈಯಲ್ಲಿ ಮಾಣಿಕವ ಕೊಟ್ಟಂತೆ 2 ಶಾಮಸುಂದರನಾಮ ವರ್ಣಿಸದÀ ಕವಿಯಂತೆ ಪಾಮರಗೆ ಪೌರಾಣ ಪೇಳಿದಂತೆ ಕಾಮಾದಿಗುಣ ಬಿಡದೆ ಸನ್ಯಾಸಿಯಾದಂತೆ ಕೋಮಲಾಂಗದ ಸತಿಗೆ ಕ್ಲೀಬ ದೊರಕಿದಂತೆ 3
--------------
ಶಾಮಸುಂದರ ವಿಠಲ
ಗಾನಮಾಳ್ಪ ಧೀರನಾವನೋ ಪ ತಾಳ ತಂಬೂರಿಗಳನು ಮೇಳವಿಸಿ ಸರಾಗದಿಂದ 1 ಹಿಂಗದೆ ಮೃದಂಗದಿಂದ ಸಂಗಡಿಸಿ ಸುಲಲಿತವಾಗಿ2 ಗುಂಬವಾದ್ಯವನು ಪರಮಸಂಭ್ರಮದಲ್ಲಿ ಬಾರಿಸುತ್ತ 3 ಜೊತೆಗೆ ಸೇರಿದವರ ಕೂಡಿ ಶ್ರುತಿಲಯಗಳಿಂದ ಪಾಡಿ4 ಪರಮಪುರುಷ ವ್ಯಾಘ್ರಗಿರಿಯ ವರದವಿಠಲನೆಂದು ಮುದದಿ 5
--------------
ವೆಂಕಟವರದಾರ್ಯರು
ಗಿರಿಜೆಪತಿ ಪ್ರಿಯ ವಿಠಲ | ಪೊರೆಯ ಬೇಕಿವನಾ ಪ ವಾರಿಧಿ ಪೋತ | ಹರಿಯೇ ವಿಖ್ಯಾತ ಅ.ಪ. ಮಂದ ಮಾನವ ನೀದಯಎಂದಿಗೊ ಗತಿ ನೀನೆ | ಯೆಂದು ನಂಬಿಹೆನೋ 1 ತೈಜಸನು ಶ್ರೀ ಹರಿಯೆ | ವಾಜಿವದನನು ಆಗಿನೈಜರೂಪವ ತೋರಿ | ಸೋಜಿಗವ ಬೀರಿ |ಭ್ರಾಜಿಷ್ಣು ಭಯ ತೋರೆ | ಓಜಸವ ಕಳಕೊಂಡುಮಾಜದಲೆ ದುಷ್ಕರ್ಮ | ಗೋಜಿದೊಳಗಿಹನಾ 2 ಪತಿ ಕಲ್ಯಾಣನಿರುತ ಭಕ್ತರು ಗೈವ | ಪರಮ ಸೇವೆಗಳಾ 3 ಸಾರ ನಾಮಾ ಮೃತವಬಾರಿ ಬಾರಿಗೆ ಉಣಿಸಿ | ತಾರಿಸೋ ಭವವಾ 4 ಸತಿ ಸುತರು ಹಿತರಲ್ಲಿ | ವ್ಯಾಪ್ತನಿಹ ಶ್ರೀ ಹರಿಯೇಅತುಳ ಮಹಿಮೆಯ ತಿಳಿಸಿ ವಾತಸುತ ವಂದ್ಯಾ |ಕೃತ ಕೃತ್ಯನೆಂದೆನಿಸಿ | ಭಕ್ತನ್ನ ಪೊರೆಯೆಂದುಹಿತ ಗುರೂ ಗೋವಿಂದ | ವಿಠಲ ಪ್ರಾರ್ಥಿಸುವೇ 5
--------------
ಗುರುಗೋವಿಂದವಿಠಲರು