ಒಟ್ಟು 63 ಕಡೆಗಳಲ್ಲಿ , 20 ದಾಸರು , 61 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮೋ ನಮೋ ನಾರಾಯಣ ನಮೋ ಶ್ರುತಿ ನಾರಾಯಣ ನಮೋ ಬಾದರಾಯಣ ನರನ ಪ್ರಾಣ ಪ ಶಿವನ ಮೋದದಲಿ ಪಡೆದೆ ಶಿವರೂಪದಲಿ ನಿಂದೆ ಶಿವನೊಳಗೆ ಏರಿದೆ ಶಿವನಿಗೊಲಿದೆ ಶಿವಗೆ ನೀ ಮಗನಾದೆ ಶಿವ ತಾತನೆನೆಸಿದೆ ಶಿವನ ಮಗನಾ ಪಡೆದೆ ಶಿವನ ಕಾಯ್ದೆ1 ಶಿವಗೆ ಸಹಾಯಕನಾದೆ ಶಿವನ ಕಂಗಡಿಸಿದೆ ಶಿವನ ಧನುವನು ಮುರಿದೆ ಶಿವನೊಲಿಸಿದೆ ಶಿವನ ಜಡ ಮಾಡಿದೆ ಶಿವನ ಒಡನೆ ಬಂದೆ ಶಿವಮುನಿಗೆ ಉಣಿಸಿದೇ ಕೇಶವನೆನಿಸಿದೇ 2 ಶಿವನ ಜಡೆಯೊಳಗಿದ್ದ ಶಿವಗಂಗೆಯ ಪೆತ್ತೆ ಶಿವನ ಕೂಡಲಿ ಕಾದಿದವನ ಭಾವ ಶಿವ ಭಕ್ತನ್ನ ನಿನ್ನವನಿಂದ ಕೊಲ್ಲಿಸಿದೆ ಶಿವನ ಶೈಲವನೆತ್ತಿದವನ ವೈರಿ3 ಶಿವ ನುಂಗಿದದ ನುಂಗಿದವನ ಒಡನಾಡುವ ಶಿವ ಪರಾಶಿವ ನಿನ್ನ ಶಿವ ಬಲ್ಲನೇ ಯವೆ ಇಡುವನಿತರೊಳಗೆ ಧವಳ ಹಾಸಾ4 ಶಿವನ ಮೇಲಿದ್ದ ಸಹಭವೆ ರಮಣ ಸರ್ವದಾ ಶಿವನೊಳಗಿಳಿದ ಶಿಷ್ಯನಿವ ಹರಾತೀ ತಲ್ಪ ಶಿವ ಸಮಾನಿಕ ರೂಢ ಶಿವನ ಮನೆ ತೊಲಗಿಸುವ ಶಿವ ಬಾಂಧವಾ 5 ಶಿವನ ಧೊರಿಯೆ ಜ್ಞಾನ ಶಿವ ಹಚ್ಚುವದೆ ಕೊಡು ಶಿವಮಣಿ ಎನಿಸುವ ಸ್ತವ ಪ್ರಿಯನೇ ವಾಹನ ವೈರ ಶಿರವ ತರಿಸಿದೆ ದೇವ ಶಿವ ಪ್ರತಿಷ್ಠಿಸಿದೆ ಶಿವಗೆ ಕಾಣಿಸದಿಪ್ಪೆ6 ಶಿವನ ಸೋಲಿಸಿದವನ ಜವಗೆಡಿಸಿದೆ ಶಿವನು ಕುದರಿಯ ಹೆರವ ಅವನು ಕಾಯಿದ ಗೋವ ಶಿವನವತಾರ ಶಸ್ತ್ರವನು ಹಳಿದೆ 7 ಶಿವನಧರ್Àನಾಗಿ ದಾನವನು ಕೊಂದ ಮಹಿಮಾ ಶಿವಋಷಿ ಪೇಳಿದ ಯುವತಿ ರಮಣಾ ಶಿವನ ವೀರ್ಯವ ಧರಿಸಿದವನ ಮುಖದಲಿ ಉಂಬ ಅವರ ಬೆಂಬಲವೇ ಯಾದವಕುಲೇಶಾ 8 ಶಿವಗೆ ತ್ವಂಚ ಬಾಹುಯೆಂದು ಪೇಳಿ ಮೋಹ ದಿವಿಚಾರಿಗಳ ತಮಸಿಗೆ ಹಾಕುವೆ ಶಿವಮೂರುತಿ ನಮ್ಮ ವಿಜಯವಿಠ್ಠಲರೇಯ ಶಿವನಾಳು ಮಾಡಿ ಆಳುವ ದೈವವೇ9
--------------
ವಿಜಯದಾಸ
ನೀಚಕೃತ್ಯದ ಮನಸೇ ನಿನಗೆ ತುಸು ನಾಚಿಕಿಲ್ಲಲೆ ಹೊಲಸೆ ಪ ಪ್ರಾಚೀನಹಿರಿಯರ ಯೋಚಿಸಿನೋಡದೆ ನೀಚತನದ ಆಲೋಚನೆಯೊಳು ಬಿದ್ದು ಅ.ಪ ಕುಂತಿಸುತನ ರಥವ ನಡೆಸಿದನು ಅ ತ್ಯಂತ ಕೃಪೆಯಿಂದ ಹರಿಯು ಕಂತುಜನಕ ಭಕ್ತ ಚಿಂತಾಯಕನೆಂದು ಅಂತರಂಗದಿ ಭಜಿಸಿ ಸಂತಸ ಪಡುವಲ್ಲಿ 1 ಅಂಬರೀಷನೆಂಬುವ ನೃಪಗೆ ಮುನಿ ಡೊಂಬೆಯಿಂಬ (?) ಶಾಪಿಸಲು ಅಂಬುಜಾಸನ ಬಂದು ಬೆಂಬಲಿಸಿ ನೃಪನನ್ನು ಇಂಬಿಟ್ಟು ಪೊರೆದದ್ದು ನಂಬಿ ಭಜಿಸವಲ್ಲಿ 2 ಭೂಮಿಪ ಬಲಿಚಕ್ರನ ಬಾಗಿಲ ಕಾಯ್ದ ಪ್ರೇಮದಿಂ ರಮೆಯರಸನು ಪ್ರೇಮದಿಂ ಭಕುತರ ಕಾಮಿತವೀಯಲು ಕಾಮಧೇನೀತನೆಂದು ನೇಮದಿಂದರವಲ್ಲಿ 3 ಗೌತಮ ಮುನಿಸತಿಯು ಪಾಷಾಣವಾಗಿ ಕ್ಷಿತಿಮೇಲೆ ಎರಗಿರಲು ಕ್ಷಿತಿಜಾತೆಪತಿ ತಾನು ಅತಿಹಿತದ ಕೃಪೆಯಿಂದ ಪತಿತಗೈದವನೆಂದು ಸ್ತುತಿಸಿ ಒಲಿಸವಲ್ಲಿ 4 ಹನುಮಂತನೊಡೆಯನಾದ ಜನಕಜೆಪತಿ ವನಜಾಕ್ಷ ಶ್ರೀರಾಮನ ಘನತರಮಹಿಮೆಯ ಅನುದಿನಕೊಂಡಾಡು ಘನಮುಕ್ತಿ ಸಾಮ್ರಾಜ್ಯ ಕನಿಕರದಿಂ ಕೊಡುವ 5
--------------
ರಾಮದಾಸರು
ನೀನೆ ದಯಾಶರಧಿ ತ್ರಿಜಗದಿ ಧ್ಯಾನದಾಯಕ ಮಮಪ್ರಾಣ ಜಾನಕೀ ಜೀವ ಪ ದೀನರ ಪಾಲಿಪ ಜಾಣ ಮಹಿಮ ಪ್ರಭು ಕ್ಷೋಣಿಯೋಳ್ನಿನ್ನ ಸಮಾನ ದೇವರ ಕಾಣೆ 1 ಒಲಿದು ಕಂಬದಿ ಬಂದಿ ಬಲಿಯ ಬಾಗಿಲ ಕಾಯ್ದಿ ಲಲನಾಮಣಿಗೆ ಒಲಿದು ಕುಲವನುದ್ಧರಿಸಿದಿ 2 ಕರಿಯು ಕರೆಯಲು ಬಂದಿ ತರುಣಿ ಬೆಂಬಲ ನಿಂದಿ ಚರಣದಾಸರ ಪ್ರಿಯ ಕರುಣಿ ಶ್ರೀರಾಮ 3
--------------
ರಾಮದಾಸರು
ಪೊರೆದ್ಯಾಕೋ ಸೀತಾನಾಥ ತಂದೆ ಮಂದರಧರ ಎನ್ನೊಳ್ದಯ ಮಾಡಲೊಲ್ಲ್ಯಾಕೋ ಸೀತಾನಾಥ ಪ ಕರಿರಾಜ ನಿಮ್ಮಯ ಚರಣ ಸರೋಜಕ್ಕೆ ಸೀತಾನಾಥ ಹರಿ ಬರೆದೋಲೆ ನಿನ್ನನು ಕರೆಕಳುಹಿದನೇನೊ ಸೀತಾನಾಥ ತರುಣಿ ದ್ರೌಪದಿ ತನ್ನ ಅವಮಾನಕಾಲಕ್ಕೆ ಸೀತಾನಾಥ ಸಿರಿವರ ನಿನ್ನ್ವೊಯ್ಕುಂಠಕೆ ತಾರು ಕೊಟ್ಟಿರ್ದಳೇ ಸೀತಾನಾಥ 1 ಕಂಬದಿ ಬಾರೆಂದಂಬುಧಿಗೆ ಬಂದ್ಹೇಳ್ದನೇ ಸೀತಾನಾಥ ಡೊಂಬೆ ಮಾಡುವ ದೂರ್ವಾಸಮುನಿಯಂದು ಸೀತಾನಾಥ ನಿನ್ನ ಬೆಂಬಲಿಟ್ಟು ಅಂಬರೀಷ ವ್ರತಗೈದನೇ ಸೀತಾನಾಥ 2 ವರಧ್ರುವ ಧರೆಯೊಳು ಜನಿಸುವ ಕಾಲಕ್ಕೆ ಸೀತಾನಾಥ ದೇವ ಕರವ ಪಿಡಿದು ನಿಮ್ಮ ಜೊತೆಲಿ ಕರೆತಂದನೇ ಸೀತಾನಾಥ ಪರಮಪಾಪಿ ಅಜಮಿಳನಗೆ ಪದವಿಯು ಸೀತಾನಾಥ ದೇವ ಕರುಣಿಸಿದವನಿನಗೆ ನೆರವಾಗಿರ್ದನೇನೊ ಸೀತಾನಾಥ 3 ಛಲದ ರಾವಣನಳಿದು ವರವಿಭೀಷಣನಿಗೆ ಸೀತಾನಾಥ ಲಂಕ ಕರುಣಿಸಿ (ದಿವೈಕುಂ) ಠ ಬಾಗಿಲೊಳಿರ್ದನೇ ಸೀತಾನಾಥ ಸೀತಾನಾಥ ಅವ ಇಳೆಯೊಳು ನಿಮಗೆ ಪಕ್ಷದ ಗೆಳೆಯನೆ ಸೀತಾನಾಥ 4 ಹಿಂದಿನ ಹಿರಿಯರವರನು ದುರಿತದಿಂ ಸಲಹಿದಿ ಸೀತಾನಾಥ ಇದು ಚೆಂದವೆ ನಿನಗೆ ಕಂದನ ಬಿಡುವುದು ಸೀತಾನಾಥ ಕಂಟಕ ಬೇಗ ಬಯಲ್ಹರಿಸಯ್ಯ ಸೀತಾನಾಥ ರಂಗ ಸಿಂಧುಶಯನ ಮಮ ತಂದೆಯೇ ಶ್ರೀರಾಮ ಸೀತಾನಾಥ 5
--------------
ರಾಮದಾಸರು
ಪ್ರಸನ್ನವಿಠಲ ಪಾಲಿಸಿವನ ಪ ಅಸತ್ಯದಲಿ ಮನವಿಡದೆ ಆಸಕ್ತಿ ನಿನ್ನಲ್ಲಿ ಕೊಟ್ಟು ಅ.ಪ. ದೃಢÀ ನಿನ್ನ ಭಕ್ತರಲಿ ಕೊಡುಭಕ್ತಿ ವಿರಕ್ತಿ ದೃಢ ಜ್ಞಾನ ನಿನ್ನಲ್ಲಿ ಬಿಡದೆ ನಿತ್ಯ ಮಡದಿ ಮಕ್ಕಳ ಕೂಡಿ ನಿನ್ನ ಸೇವೆ ಸಲ್ಲಿಸಲಯ್ಯ ಕಡಲಸುತೆ ಶ್ರೀ ರಮಣ ಬೆಂಬಲನು ನೀನಾಗು 1 ಸಜ್ಜನರ ಪದಧೂಳಿ ಆಗಿರಲಿ ಎಂದೆಂದು ದುರ್ಜನರ ಸಹವಾಸ ಕೊಡಬೇಡವಯ್ಯ ಬೊಜ್ಜೆಯಲಿ ಮೂರ್ಜಗವ ಪೊತ್ತ ಮಹಾತ್ಮ ಇವನ ಹೆಚ್ಚಾಗಿ ಪೊರಿ ಬಿಡದೆ ಅಚ್ಚ ಮಾರ್ಗದಿ ಇಟ್ಟು 2 ನಿನ್ನ ನಾಮಾಮೃತ ಸತತ ಸುಖ ಸವಿಯಲಿ ಸ್ವಾಮಿ ಬನ್ನ ಬಡಿಸಲಿ ಬೇಡ ತರಳನಿವನು ಉನ್ನತೋನ್ನತ ಮಹಿಮ ಜಯೇಶವಿಠಲ ಮನ್ನಿಧಿ ನೀನೆಂದು ಪ್ರಾರ್ಥಿಸುವೆ ಕೈಪಿಡಿದು 3
--------------
ಜಯೇಶವಿಠಲ
ಬಹಳ ದೇಹವ ದಂಡನೆ ಮಾಡಿ ದೇಹ ಘನ ಬಳಲಿಸಿ ಅಹಿಶಯನನು ನಿನ್ನ ಬೆಂಬಲನಾಗಿಹ ಚಿಂತೆ ಮಾಡಲಿ ಬ್ಯಾಡಾ ಪ ಅರಿವರ್ಗಗಳು ಕ್ರೀಡಿಸುತಿಹ ಮನದಿ ಧರ್ಮವ ಮಾಡಲಾದೀತೆ ಪಾಪಿಗೆ ಹಿತವಾದೀತೆ 1 ದುರ್ವಿಕ್ಷಯ ಭುಂಜಿಪ ದುರುಳಗೆ ಅಸಮ ಫಲಪ್ರದ ಹರಿದಿನ ಮಾಡ್ದರೆ ನರಕ ಬಾಧೆ ಬಿಟ್ಟೀತೆ 2 ಪರವಿತ್ತವಪಹರಿಸಿ ಧರೆಯ ಪ್ರದಕ್ಷಿಣೆ ಮಾಡ್ದರೆ ಗತಿಯಾದೀತೆ ನರಸಿಂಹವಿಠ್ಠಲನ ಸ್ಮರಿಪ ಸುಜ್ಞಾನಿಗಿ ಬಹುಭಾಗ್ಯ ತಪ್ಪೀತೆ 3
--------------
ನರಸಿಂಹವಿಠಲರು
ಬಾರೊ ಮನಕೆ ಮುರಾರಿ ಗೋಪಾಲಕೃಷ್ಣ ಬಾರೊ ಬೇಗ ಹದಿ- ನಾರು ಸಾವಿರದ ನೂರೆಂಟು ನಾರೇರ ಮನೋಹರ ಪ. ನೀಯೆನಗಿಂಬೆಂದರಸುತ ನಂಬಿಹೆನು ಸಂಬಾಳಿಸುತಿಹ ದೊರೆ ನೀನು ತುಂಬಿದ ದುರಿತಾಡಂಬರ ಓಡಿಸಿ ಬೆಂಬಲನಾಗಿರು ಕಂಬ್ವರಧರನೆ1 ಬಲೆಯನು ಕೆಡವುತ ಬೇಗದಲಿ ಕಳದನುಗಾಲವು ಕಾವುತಲಿ ಸುಲಲಿತ ವಕ್ಷಸ್ಥಳದಲಿ ಭಾರ್ಗವಿ ಲಲನೆಯನಿರಿಸಿದ ನಳಿನಜ ಜನಕಾ 2 ಮಾನ್ಯ ಪರಾಪರ ಮೂರುತಿಯೆ ಚಿನ್ಮಯ ನಿನಗಿದು ಕೀರುತಿಯೆ ಪನ್ನಗ ಗಿರಿವರ ಪದಯುಗ ಪದ್ಮಗ- ಳೆನ್ನ ಶಿರದೊಳಿಸುನ್ನತ ಕರುಣದಿ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಿಡದಿರು ಕೈಯ್ಯ ರಂಗ ಒಡೆಯ ಶ್ರೀ ನರಸಿಂಗ ಬಡವನ ಮೇಲಪಾಂಗವಿಡುರಮಾಲಿಂಗಿತಾಂಗ ಪ. ನುಡಿವ ಮಾತುಗಳ ನಿನ್ನಡಿಗಳ ಸ್ತವವೆಂದು ಒಡಂಬಡೊ ನಿಜ ದಾಸ ಭಿಡೆಯ ಮೀರದ ದೇವ 1 ವಾರಿಜನಾಭ ನಿನ್ನ ಪ್ರೇರಣೆಯಿಂದ ಸರ್ವ ಧಾರುಣಿವರರ ದಯಾರಸ ದೊರೆವುದು 2 ಅಂಬುಜಾಲಧರಬಿಂಬಫಲಾಮೃತ ಚುಂಬನಲೋಲ ನೀ ಬೆಂಬಲಾಗಿರು3 ಹರಿ ನಿನ್ನ ಕೃಪಾರಸವಿರಲು ಚತುರ್ವಿಧ ಪುರುಷಾರ್ಥವೆಲ್ಲ ಸೇರಿ ಬರುವದೆಂದರಿದೆನು 4 ದುರಿತರಾಶಿಗಳನ್ನು ತರಿವರೆ ಶಕ್ತನಾದಪರಮಪಾವನ ಶೇಷಗಿರಿವರನೆಂದೆಂದಿಗು 5
--------------
ತುಪಾಕಿ ವೆಂಕಟರಮಣಾಚಾರ್ಯ
ಬೇಕಿಲ್ಲ ಎನಗನ್ಯ ಏನೇನು ಸ್ವಾಮಿ ಸಾಕು ನಿನ್ನಯ ನಾಮವೊಂದೆ ನುತ ಪ್ರೇಮಿ ಪ ದುರುಳ ಸಂಹರ ನಾಮ ದುರಿತ ಪರಿಹರ ನಾಮ ಶರಧಿಮಥನ ನಾಮ ಸುರರ ಸಲಹಿದ ನಾಮ ಹರನ ಪ್ರೇಮದ ನಾಮ ಪರಮೇಷ್ಟಿಯನು ಪಡೆದ ಸ್ಥಿರನಾಮದ್ಹೊರತು 1 ಸೃಷ್ಟಿಯಾಳುವ ನಾಮ ಶಿಷ್ಟಪಾಲನ ನಾಮ ಕಷ್ಟ ಕಳೆಯುವ ನಾಮ ಇಷ್ಟಪೂರ್ಣ ನಾಮ ಮುಟ್ಟುಮುಡಿ ಹರನಾಮ ಅಷ್ಟಸಿರಿಪತಿನಾಮ (ಹುಟ್ಟುಸಾವಿ)ಲ್ಲದ ಶಿಷ್ಟನಾಮದ್ಹೊರತು 2 ವೇದ ಹೊಗಳಿದ ನಾಮ ಸಾಧುವಂದಿತನಾಮ ಬೋಧರೂಪದ ನಾಮ ಆದಿಮಹನಾಮ ಭೇದವಿಲ್ಲವ ನಾಮ ವೇದಗೋಚರ ನಾಮ ಆದಿ ಅಂತಿಲ್ಲದನಾದಿ ನಾಮದ್ಹೊರತು 3 ತರಳನ್ಪೊರೆದ ನಾಮ ಕರಿಯ ಸಲಹಿದ ನಾಮ ತರುಣಿನುದ್ಧಾರ ನಾಮ ಧರೆಪೊತ್ತ ನಾಮ ಕರುಣೆ ತುಂಬಿದ ನಾಮ ಶರಣಾಗತಪ್ರಿಯ ನಾಮ ನರನ ಬೆಂಬಲನಾದ ಹರಿನಾಮದ್ಹೊರತು 4 ಮೂರು ಕಳೆಯುವ ನಾಮ ಆರುಗೆಲಿಸುವ ನಾಮ ಆರುನಾಲ್ಕು ಸುಲಭದಿ ಹಾರಿಸುವ ನಾಮ ಸಾರ ಮುಕ್ತಿಯ ನಾಮ ಧೀರ ಶ್ರೀರಾಮ ನಿಮ್ಮಪಾರನಾಮದ್ಹೊರತು 5
--------------
ರಾಮದಾಸರು
ಬೇಗನೆ ದಯಮಾಡೊ ಸಾಗರ ನಿಲಯ ನಾಗಶಯನ ನೀನು ಹ್ಯಾಗೆ ಮಹ ಕರುಣಾಳು ಪ ಭಕ್ತರ ದುರ್ಭವ ಕತ್ತರಿಸದೆ ಇಡೀ ಭಕ್ತರ ಬೆಂಬಲೆಂಬೋಕ್ತಿ ಸತ್ಯವೇನು 1 ಪಾದ ನುತಿಸಲು ಕಾಯದಾದಿ ನುತ ಪೋಷನೆಂಬ ಮಹ ಸ್ಮøತಿವಾಕ್ಯ ಸರಿಯೇನೋ 2 ಶ್ರೀಶ ಶ್ರೀರಾಮ ನಿನ್ನದಾಸರ ನೊರೆದಿಹಿ ದಾಸರ ಪ್ರಾಣನೆಂಬುವಾಚ ಲೇಸೇನೆಲೋ 3
--------------
ರಾಮದಾಸರು
ಭಜಿಸಿ ಧನ್ಯನಾದೆ ನಾನು ಭುಜಗಶಯನನಂಘ್ರಿಯನ್ನು ಪ ಕುಸುಮ ತರಲು ಸರಸಿಧುಮುಕಿ ಮೊಸಳೆಬಾಯಿಗೆ ಸಿಲುಕಿ ಕರಿಯು ಕಂಟಕ ಗೆಲಿದು ಅಸಮಸೌಖ್ಯ ಪೊಂದಿದ್ದು ಕೇಳಿ 1 ಪಾಪಿ ಕುರುಪನೋಲಗದಲ್ಲಿ ದ್ರೌಪದಿಗೊದಗಿಬರಲು ಭಂಗ ಆಪತ್ತು ಗೆಲಿದಳೆಂಬುದ ಕೇಳಿ 2 ಇಳೆಯೊಳ್ಪತಿಯ ಶಾಪದಿಂದ ಶಿಲೆಯ ರೂಪದಿ ಬಿದ್ದ ಯುವತಿ ಗೊಲಿದು ಪಾವನಾಂಗಿಯೆನಿಸಿ ಕುಲಕೆ ತಂದ ಸುದ್ದಿ ಕೇಳಿ 3 ತ್ಯಜಿಸಿ ತನ್ನ ಬ್ರಹ್ಮಕುಲವ ಕುಜಕುಲದ ನಾರಿಗೆ ಕೆಟ್ಟ ಅಜಮಿಳನ ಅಂತ್ಯಕ್ಕೆ ಒದಗಿ ನಿಜಪದವಿ ನೀಡಿದ್ದು ಕೇಳಿ 4 ಅಂಬುಧಿನಿಲಯ ಅಸಮ ಮಹಿಮ ಕಂಬುಕಂಧರಮಿತ್ರ ಭಕುತ ಬೆಂಬಲ ಶ್ರೀರಾಮ ಪ್ರಭುವೆ ನಿನ್ನ ನಂಬಿದವರ ಸಂಭ್ರಮ ಕೇಳಿ 5
--------------
ರಾಮದಾಸರು
ಮಂಗಳಂ ಜಯ ಮಂಗಳಂ ಲಿಂಗಾಕಾರದ ಪರಶಿವಗೆ ಪ ರಜತಾದ್ರಿಪುರದೊಳು ನಿಂದವಗೆ ಭಜಕರ ಸಲುಹಲು ಬಂದವಗೆ ನಿಜಸುರ ಸೇವಿತ ಗಜಚರ್ಮಾಂಬರ ತ್ರಿಜಗ ವಂದಿತನಾದ ಪರಶಿವಗೆ1 ಬಾಣನ ಬಾಗಿಲ ಕಾಯ್ದವಗೆ ತ್ರಾಣದಿ ತ್ರಿಪುರವ ಗೆಲಿದವಗೆ ಕಾಣದ ಅಸುರಗೆ ಪ್ರಾಣಲಿಂಗವನಿತ್ತು ಮಾಣದೆ ಭಕ್ತರ ಸಲುಹುವಗೆ 2 ಗಂಗೆಯ ಜಡೆಯೊಳು ಧರಿಸಿದಗೆ ಸಿಂಗಿಯ ಕೊರಳೊಳು ನುಂಗಿದಗೆ ತಿಂಗಳ ಸೂಡಿಯೆ ಅಂಗ ಭಸ್ಮಾಂಗದಿ ಕಂಗಳು ಮೂರುಳ್ಳ ಕೃಪಾಂಗನಿಗೆ 3 ಅಸ್ಥಿಯ ಮಾಲೆಯ ಧರಿಸಿದU É ಹಸ್ತದಿ ಶೂಲವ ಪಿಡಿದವಗೆ ವಿಸ್ತರವಾಗಿಯೆ ಭಸ್ಮಸುವಾಸಿಗೆ ಸತ್ಯದಿ ವರಗಳನಿತ್ತವಗೆ 4 ಅಂಬಿಕಪತಿಯೆಂದೆನಿಸಿದಗೆ ತ್ರಿ- ಯಂಬಕ ಮಂತ್ರದಿ ನೆಲೆಸಿದಗೆ ನಂಬಿದ ಸುರರಿಗೆ ಬೆಂಬಲವಾಗಿಯೆ ಇಂಬಾದ ಪದವಿಯ ತೋರ್ಪವಗೆ 5 ಪಂಚಾಕ್ಷರದೊಳು ಒಲಿದವಗೆ ಪಂಚಮ ಶಿರದೊಳು ಮೆರೆವವಗೆ ಪಾತಕ ಸಂಚಿತ ಕರ್ಮವ ವಂಚಿಸಿ ಭಕ್ತರ ವಾಂಛಿತವೀವಗೆ 6 ಪಾಶುಪತವ ನರಗಿತ್ತವಗೆ ಶೇಷಾಭರಣವ ಹೊತ್ತವಗೆ ಕಾಶಿಗಧಿಕವಾಗಿ ಕೈವಲ್ಯವಿತ್ತು ವಿ- ಶೇಷದಿ ಜನರನು ಸಲುಹುವಗೆ7 ಯಕ್ಷ ಸುರಾಸುರ ವಂದಿತಗೆ ದಕ್ಷನ ಮಖವನು ಕೆಡಿಸಿದಗೆ ಕುಕ್ಷಿಯೊಳೀರೇಳು ಜಗವನುದ್ಧರಿಸಿಯೆ ರಕ್ಷಿಸಿಕೊಂಬಂಥ ದೀಕ್ಷಿತಗೆ 8 ಕಾಮಿತ ಫಲಗಳ ಕೊಡುವವಗೆ ಪ್ರೇಮದಿ ಭಕ್ತರ ಸಲಹುವಗೆ ಭೂಮಿಗೆ ವರಾಹತಿಮ್ಮಪ್ಪನ ದಾಸರ ಸ್ವಾಮಿಯೆಂದೆನಿಸುವ ಈಶನಿಗೆ 9
--------------
ವರಹತಿಮ್ಮಪ್ಪ
ರಾಜವದನೆ ಸುರರಾಜನ ಪುರದೊಳುರಾಜಿಸುತಿಹ ಕುಜವ ಪ ರಾಜೀವ ಮುಖಿಯೆನಿಸುವ ಸಖಿಗೊಲಿದಿತ್ತರಾಜನ ತೋರೆನಗೆ ಅ ನೆತ್ತಿಯಿಂದಿಳಿದಳ ಹೆತ್ತ ಮಗನ ಮೊಮ್ಮನೆತ್ತಿದಾತನ ಪಿತನ ತುತ್ತು ಮಾಡುವನ ವೈರಿಯನೇರಿ ಜಗವನು ಸುತ್ತು ಬರುತಲಿಪ್ಪನಕತ್ತಲೆಯೊಳು ಕಾದಿ ಅಳಿದಯ್ಯನ ಶಿರವಕತ್ತರಿಸಿದ ಧೀರನಸತ್ತ ಮಗನ ತಂದಿತ್ತವನನು ಎ-ನ್ನೊತ್ತಿಗೆ ಕರೆದು ತಾರೆ 1 ವರುಷವೈದರ ಪೆಸರವನ ತಾಯನುಜನಧರಿಸಿದಾತನ ಸಖನಧುರದೊಳು ತನಗೆ ಬೆಂಬಲ ಮಾಡಿಕೊಂಡು ಭೂವರಗೆ ತಾನೊಲಿದವನಸುರಗಿರಿಯನು ಸುತ್ತಿ ಬಾಹನ ಸುತನ ಕೈಯಲಿಹರಸಿ ದಾನವ ಕೊಂಡನಧರಣಿಜಾತನ ಶಿರವರಿದು ನಾರಿಯರನುಪುರಕೆ ತಂದವನ ತೋರೆ 2 ಹನ್ನೆರಡನೆಯ ತಾರೆಯ ಪೆಸರಾಕೆಯಕನ್ನೆಯಯ್ಯನ ಮನೆಯತನ್ನ ತಾ ಮರೆ ಮಾಡಿಕೊಂಡಿಪ್ಪರಸಿಯಬಣ್ಣವ ಕಾಯ್ದಿಹನಪನ್ನಗಶಯನ ಬೇಲಾಪುರದರಸನುತನ್ನ ನೆನೆವ ಭಕ್ತನಮನ್ನಿಸಿ ಕಾಯುವ ಚೆನ್ನಾದಿಕೇಶವ ಪ್ರ-ಸನ್ನನ ತೋರೆನಗೆ 3
--------------
ಕನಕದಾಸ
ಲಕ್ಷ್ಮೀದೇವಿ ಅಂಬೋರುಹೇಕ್ಷಣೆ ಅಂಬಾಲತೇ ಜಗ ದಂಬಾ ಪೊರೆಯೆ ಸತತ ಗಂಭೀರ ಗಜಗಮನೆ ಪ ನಂಬಿದೆ ನಿನ್ನ ಪದಾಂಬುಜಯುಗಳವ ಕಂಬು ಕಂಧರಿ ಕನಕಾಂಬರ ಧಾರಿಣಿ ಬೆಂಬಲವೀಯೆ ವಿಳಂಬವ ಮಾಡದೆ ಅ.ಪ `ಯಂಕಾಮಯೇ'ತ್ಯಾದಿ ಶೃತಿಗಳೆಲ್ಲಾ ಪಂಕಜಭವಮುಖ ಸುಮನಸರು ಕಿಂಕರರೆನ್ನುತ ಪೊಗಳುತಿರೆ ಶಂಕೆಯುಂಟೆ ನಿನ್ನ ಮಹಿಮೆಗಳಲ್ಲಿ ಶ ಶಾಂಕ ಸೋದರಿ ಆತಂಕವ ಬಿಡಿಸೆ 1 ನೀರಜಾತಗಣ ಕೃತ ನಿಲಯೇ ಮಾರಜನಕ ಹರಿ ಪ್ರಿಯ ಜಾಯೆ ಕೋರುವೆ ನಿನ್ನಯ ಪರಮದಯೆ ಸಾರಸಾಕ್ಷಿ ಸರಿಯಾರು ನಿನಗೆ ಕರು ಣಾರಸಮಯೆ ಸುವಿಶಾರದೆ ಜನನಿ 2 ಕನ್ಯೆ ನಿಖಿಲ ಸುರನರರೊಳಗೆ ಮಾನ್ಯೆ ನಿನ್ನ ಪೋಲುವರನ್ಯರುಂಟೆ ನಿನ್ನ ದಾಸನಾದ ಎನ್ನ ಮನೋರಥ ವನ್ನು ತಿಳಿಸೆ ಪ್ರಸನ್ನ ಶ್ರೀ ಹರಿಯಲಿ 3
--------------
ವಿದ್ಯಾಪ್ರಸನ್ನತೀರ್ಥರು
ವಂಚನೆಲ್ಲಿಹುದಯ್ಯ ವೈಕುಂಠಪತಿ ಗೊಂಚನೆಲ್ಲಿಹದಯ್ಯ ಪ ವಂಚನೆಲ್ಲಿಹ್ಯದು ವಿರಂಚಿತಾತನಿಗೆ ಕಿಂಚಿತ್ತು ಧ್ಯಾನಕ್ಕಾಗೊಂಚನಿಲ್ಲದೆ ಬಂದ ಅ.ಪ ಚರಣದಾಸರೆಂದು ಪಾಂಡವರ ತುರಗಕಾಯ್ದ ನಿಂದು ನರಗೆ ಬೆಂಬಲನಾಗಿ ತಿರುಗಿದ ಧುರದಲಿ ಜರ ಮರೆಯಾಗದೆ ಪರಮಕರುಣಾಕರ 1 ಜಾಗುಮಾಡುತಲಿವ ಭಕ್ತರ ಯೋಗಕ್ಷೇಮ ತಿಳಿವ ನೀಗದಂಥ ಮಹಾಭೋಗಭಾಗ್ಯವಿತ್ತು ಬಾಗಿಲ ಕಾಯ್ದನು ಸಾಗರನಿಲಯ 2 ಜಾರನೆನಿಸಿಕೊಂಡ ಒಲಿದು ಚೋರನೆನಿಸಿಕೊಂಡ ತೋರಿದವರ ಮನಸಾರ ವರವಿತ್ತು ಭೂ ಭಾರವಿಳುಹಿದ ನಮ್ಮ ಧೀರ ಶ್ರೀಗುರುರಾಮ 3
--------------
ರಾಮದಾಸರು