ಒಟ್ಟು 42 ಕಡೆಗಳಲ್ಲಿ , 21 ದಾಸರು , 39 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವಾರಿಜಗಣ ನಿಲಯೇ ಕಮನೀಯೆ ತಾಯೇ ಕಾಯೇ ನರಹರಿ ಜಾಯೇ ಪ ಸಾರಸಭವಮುಖ ಸುರ ಮಹನೀಯೆ ಚಾರುವದನೆ ಜಾಂಬೂನದ ಛಾಯೆ ಅ.ಪ ನಿನ್ನ ಕಟಾಕ್ಷ ಮಹಾಸುರಧೇನು ನಿನ್ನ ಮನವು ಚಿಂತಾಮಣಿಯು ನಿನ್ನಯ ಕರಗಳು ಸುರತರುವೆನಗೆ ಇಂದಿರೆ 1 ಹೃನ್ಮಂದಿರದಲಿ ಜ್ಞಾನವನು ಮನ್ಮಂದಿರದಲಿ ಭಾಗ್ಯವನು ಅಮ್ಮ ಬೆಳಸೆ ಕಮಲೆ ಸುವಿಮಲೆ ಇಂದಿರೆ 2 ಈಶನಂಘ್ರಿಯಲಿ ಭಕ್ತಿಯನು ಹರಿ ದಾಸದಾಸ್ಯದಲಿ ಶಕ್ತಿಯನು ಮೋಸಕೆ ಸಿಗದ ವಿರಕ್ತಿಯನು ಕರುಣದಲಿ ನೀಡೆ ಪ್ರಸನ್ನೆ3
--------------
ವಿದ್ಯಾಪ್ರಸನ್ನತೀರ್ಥರು
ವೆಂಕಟಾಚಲನೆ ಬಾರೊ ಶಂಕರಾಭರಣ ಶಾಯಿ | ಕಿಂಕರರಿಗೊಲಿದ ನಿಃಶಂಕ ಬಾರೊ ಪ ಇಂದಿರೆ ಕೂಡ | ಚಂದದಿಂದಲೊಪ್ಪುತಿಹ ಇಂದುವದನಾ || ಮಂದರೋದ್ಧಾರನೆ ಮಹನಂದ ಮೂರುತಿ | ವೃಂದಾರಕ ವಂದ್ಯಪಾಲ ವಂದಿಪೆ ನಿಂದು 1 ಲೌಕಿಕ ವಿಲಕ್ಷಣ ಅನೇಕ ಏಕಾ | ಸಾಕಾರ ವಿಗ್ರಹ ಪುಣ್ಯಶ್ಲೋಕ ವಿಭುವೆ || ಪ್ರಾಕೃತ ರಹಿತಗಾತ್ರ ಲೋಕಪಾವನ | ಶೋಕ ಮೂಲನಾಶನ ಅಶೋಕ ಜನಕಾ 2 ಮಣಿ ಅಗಣಿತ ಬಂಧು | ಆಗನಾಗಧಾರಕನೆ ನಾಗ ಭಂಜನಾ || ಆಕಾಶ ಗಂಗೆಯ ಅಂಗುಷ್ಟದಿ ಪೆತ್ತನೆ | ಆಗಲೀಗಲೆನ್ನದಲೆ ಸಾಗಿ ವೇಗದಿ 3 ಅಂಗ ಅಂಗಿ ಭಾವದಿಂದ ಅಂಗದೊಳಿದ್ದು | ಸಂಗಡ ತಿರುಗುವ ನೀಲಾಂಗ ನಿಃಸಂಗಾ || ಭೃಂಗ ಜಗದಂತ | ರಂಗ ರಂಗರಾಜ ಸುಖಸಂಗ ನಿಸ್ಸಂಗಾ 4 ಆಪ್ತಕಾಮಿ ಅಮೃತಾಂಗ ಗುಪ್ತ ಮಹಿಮ | ತಪ್ತ ಕಾಂಚನ ಸನ್ನಿಭ ವ್ಯಾಪ್ತ ನಿತ್ಯಾ || ತೃಪ್ತ ತೃಣ ಬೊಮ್ಮದಿ ನಿರ್ಲಿಪ್ತ ವ್ಯಾಪ್ತಾ | ಸಪ್ತ ಸಪ್ತ ಲೋಕೇಶ ಅತೃಪ್ತ ಲೀಲಾ 5 ನಿರ್ದೋಷ ವಸ್ತುವಿನಿಂದ ನಿರ್ಧರ ಮಾಡೆ | ಪೊಂದಿಪ್ಪವು ನಿನ್ನಲಿ ನಾಲ್ಕು ನಿರ್ದೋಷಂಗಳೂ || ಭದ್ರ ಫಲದಾಯಕ ಸಮುದ್ರಶಯನಾ | ಮಧ್ಯಜೀವಿ ವಂದ್ಯ ಸುಪ್ರಸಿದ್ಧ ಮೋಹನ 6 ಜೀವಾಭಿಮಾನಿ ಗಿರೀಶ ದೇವ ದೇವೇಶಾ | ಜೀವ ರಾಶಿಗಳ ಸ್ವಭಾವ ಪ್ರೇರಕಾ || ಜೀವನವಾಗಿ ನಮ್ಮನು ಕಾವುತಿಪ್ಪ | ರಾಜೀವ ನಯನ ವಿಜಯವಿಠ್ಠಲ ಪೂರ್ಣಾ 7
--------------
ವಿಜಯದಾಸ
ಶರಣಾಗತನಾದೆನು ಶಂಕರ ನಿನ್ನ ಚರಣವ ಮರೆಹೊಕ್ಕೆನು ಪ. ಕರುಣಿಸೈ ಕರಿವದನಜನಕಾ- ವರಕದಂಬಪೂಜ್ಯ ಗಿರಿವರ- ಶರಸದಾನಂದೈಕವಿಗ್ರಹ ದುರಿತಧ್ವಾಂತವಿದೂರ ದಿನಕರ ಅ.ಪ. ಹಸ್ತಿವಾಹನವಂದಿತ ವಿಧುಮಂಡಲ- ಮಸ್ತಕ ಗುಣನಂದಿತ ಸ್ವಸ್ತಿದಾಯಕ ಸಾವiಗಾನಪ್ರ- ಶಸ್ತ ಪಾವನಚರಿತ ಮುನಿಹೃದ- ಯಸ್ಥಧನಪತಿಮಿತ್ರ ಪರತರ- ವಸ್ತು ಗುರುವರ ಶಾಸ್ತಾವೇಶ್ವರ 1 ಮಂದಾಕಿನೀ ಮಕುಟ ಶಿವ ಶಿವ ನಿತ್ಯಾ- ನಂದಮ್ನಾಯ ಕೂಟ ಚಂದ್ರಸೂರ್ಯಾಗ್ನಿತ್ರಿಲೋಚನ ಸಿಂಧುರಾಸುರಮಥನ ಸ್ಥಿರಚರ- ವಂದಿತಾಂಘ್ರಿಸರೋಜ ಉದಿತಾ- ರ್ಕೇಂದುಶತನಿಭ ನಂದಿವಾಹನ 2 ನೀಲಕಂಧರ ಸುಂದರ ಸದ್ಗುಣವರು- ಣಾಲಯ ಪರಮೇಶ್ವರ ಕಾಲ ಕಪಾಲಧರ ಮುನಿ- ಪಾಲ ಪದ್ಮಜವಂದಿತಾಮಲ- ಲೀಲ ಡಮರು ತ್ರಿಶೂಲಪಾಣಿ ವಿ- ಶಾಲಮತಿವರ ಭಾಳಲೋಚನ 3 ಮಾರಸುಂದರ ಸಂಕರ ಶ್ರೀಲಕ್ಷ್ಮೀ- ನಾರಾಯಣಕಿಂಕರ ಮಾರಹರ ಮಹನೀಯ ಶ್ರುತಿಸ್ಮøತಿ- ಸಾರ ವಿಗತಾಮಯ ಮಹೋನ್ನತ ವೀರ ರಾವಣಮದನಿಭಂಜನ ಪುರಹರ 4
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ರಘೂತ್ತಮ ಗುರು ಸ್ತೋತ್ರ ಗುರುರಾಜ ರಘೂತ್ತಮ ಗುರುರಾಜ ಗುರುರಾಜ ನಮೋ ನಮೋ ನಿನ್ನ ಪಾದ ಸರಸಿಜಯುಗಳದಿ ನಾ ಶರಣು ಅಹ ಧರಣಿಜಾಪತಿ ರಾಮ ಭದ್ರಗೆ ಪ್ರಿಯ ನೀನು ಕರುಣದಿ ಸಲಹೆನ್ನ ದುರಿತಗಳಳಿದು ಪ ನಿವ್ರ್ಯಾಜ ಕರುಣಿ ರಘುವರ್ಯ ಗುರು ವರ್ಯ ಸುಮೇಧರ ದಿವ್ಯ ಚಾರು ತೋಯಜ ಕರದಿಂದ ಉದಯನಾಗಿ ನಿಗಮ ಸಾಮ್ರಾಜ್ಯ ಅಹ ಮಾಯೇಶ ಕಾಳೀಶ ಗುರುಗಳ ಪ್ರಿಯ ಬಾಲ ವಯಸ್ಸಲ್ಲೇ ಉದ್ದಾಮ ಪಂಡಿತನಾದಿಯೋ 1 ಬದರೀಶ ನಿರ್ಣೀತತತ್ವ ಅರ್ಥ ವಿಸ್ತಾರ ಮಾಡಿದ ಮಧ್ವ ಟೀಕೆ ಜಯತೀರ್ಥ ಬರೆದ ತದ್ಭಾವ ಪೇಳಿ ಒದಗಿಸಿದೆಯೊ ಜ್ಞಾನ ಸುಖವ ಅಹ ಮುದ ಜ್ಞಾನ ಸೌಭಾಗ್ಯ ಸಾಧು ವೈಷ್ಣವತನ ಇತ್ತು ಪಾಲಿಪುದೆನ್ನ ಕುಂದುಗಳೆಣಿಸದೆ 2 ಧರೆಯಲ್ಲಿ ದಕ್ಷಿಣಕಾಶಿ ಸ್ವರ್ಗ ಧರೆಯಳದವನ ಸೇವಿಸಿ ಗಂಗಾ ಧರಷಡಾನನ ಇಲ್ಲಿ ವಾಸಿಸುವ ಈ ಕ್ಷೇತ್ರ ವೃಂದಾವನ ವಾಸಿ ಅಹ ಪರಮೇಶ ಕೇಶವ ಪ್ರಿಯಾ ಪಿನಾಕಿನಿಯಿಂದ್ರಾ ತೀರ ಮಧ್ಯದಿ ತಪಗೈದು ಭಕ್ತರ ಕಾಯ್ವಿ 3 ಸುರವೃಂದ ಶ್ರೇಷ್ಠ ನೀನಹುದು ಎನ್ನ ಪರಿ ಬಾಧೆಯ ತರಿದು ಸರ್ವ ಸಿರಿ ಇತ್ತು ಹರಿ ಗುರು ಭಕ್ತಿ ಬೆಳೆಸಿ ಪಾಲಿಪುದು ಅಹ ಹರ ಸಮೀಪಕೆ ಒಳ್ಳೆ ಸಾಧನ ಸರ್ವದಾ ಕಾರುಣ್ಯದಲಿ ಎನ್ನೊಳ್ ನಿಂತು ಮಾಡಿಸೋ ಗುರೋ 4 ರಾಮನೃಕೇಸರಿ ವ್ಯಾಸ ಸತ್ಯ ಭಾಮ ರುಕ್ಮೀಣಿ ದೇವಿ ಅರಸ ಭೂಮ ಶ್ರೀಮಂತ ಕ್ಷೀರಾಬ್ಧಿವಾಸ ಮಧ್ವ ಭೀಮಹನುಮ ವಂದ್ಯ ಶ್ರೀಶ ಅಹ ಹೇಮಗರ್ಭನ ತಾತ `ಪ್ರಸನ್ನ ಶ್ರೀನಿವಾಸ' ರಮೆಯರಸನ ಪ್ರಿಯತಮ ಜೀಯ 5 || ಶ್ರೀ ಕೃಷ್ಣಾರ್ಪಣಮಸ್ತು ||
--------------
ಪ್ರಸನ್ನ ಶ್ರೀನಿವಾಸದಾಸರು
ಸಕಲಾಗಮ ಪೂಜಿತ ಏಕೋ ದೇವನೀತ ಏಕಾಕ್ಷರ ಬ್ರಹ್ಮೀತ ಹಂಸನಾಥ 1 ರವಿಕೋಟಿ ತೇಜನೀತ ಸಂವಿತ ಸುಖ ಸಾಕ್ಷಾತ ಪವಿತ್ರ ಪ್ರಣವನೀತ ಹಂಸನಾಥ 2 ಯತಿ ಮುನಿವಂದಿತ ಪಿತಾಮಹನ ಪಿತ ಅತಿಶಯಾನಂದನೀತ ಹಂಸನಾಥ 3 ಸನ್ಮಾತ್ರ ಸದೋದಿತ ಉನ್ಮನ ವಿರಹಿತ ಚಿನ್ಮಯನಹುದೀತ ಹಂಸನಾಥ 4 ಅನುದಿನ ಸಾಕ್ಷಾತ ಘನಗುರು ಶ್ರೀಕಾಂತ ಹಂಸನಾಥ 5 ವಿಶ್ವ ವ್ಯಾಪಕನೀತ ವಿಶ್ವರೂಪ ನಿರ್ಮಿತ ವಿಶ್ವಾತ್ಮನಹುದೀತ ಹಂಸನಾಥ 6 ಇಡದು ತುಂಬಿಹನೀತ ಮೂಢಮಹಿಪತಿ ದಾತ ಒಡಿಯನಹುದೀತ ಹಂಸನಾಥ7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುಮಾನ ಆರದು ಇನ್ನ್ಯಾಕೆಹರಿನಾಮದ ಬಲವೊಂದಿರಲಿಕ್ಕೆ ಪಸ್ವಾಮಿಮಾಧವನ ಪ್ರೇಮಪಡೆದು ಮಹನಾಮಮೃತದ ಸವಿಯುತಲಿರುವರ್ಗೆ ಅ.ಪರೊಚ್ಚಿಗೆದ್ದು ಮಾಡುವುದೇನೋ ಜನಸ್ವಚ್ಛದಿ ಒಡಗೂಡಿದರೇನೋಮೆಚ್ಚಿ ಕೊಡುವಫಲ ಇವರೇನೋ ಅತಿಹುಚ್ಚ ನೆಂದರಾಗುವುದೇನೋನಿಶ್ಚಲಚಿತ್ತದಿ ಅಚ್ಯುತಾನಂತನಬಚ್ಚಿಟ್ಟು ಮನದೊಳು ಉಚ್ಚರಿಸುವರಿಗೆ 1ಸತಿಸುತರಿವರಿಂದ್ಹಿತವೇನೊ ತನ್ನಪಿತಮಾತೆ ಮುನಿದರೆ ಕೊರತೇನೋಅತಿಸಂಪತ್ತಿನಿಂದ ಗತಿಯೇನೋ ಈಕ್ಷಿತಿಜನ ಮೆಚ್ಚಲು ಬಂತೇನೋರತಿಪತಿಪಿತನಂ ಅತಿ ಗೂಢತ್ವದಿಸತತದಿ ನುತಿಸುವ ಕೃತಕೃತ್ಯರಿಗೆ 2ಭೂಮಿಪ ಕೋಪಿಸಲಂಜುವರೆ ಈತಾಮಸರಿಗೆ ತಲೆ ಬಾಗುವರೇಭೂಮಿ ದೈವಗಳ ಬೇಡಿದರೆ ಮನಕಾಮಿತವನ್ನು ಪೂರೈಸುವರೇಕಾಮಿತಾರ್ಥನೀಗಿ ಮಹಾಮಹಿಮನನೇಮದಿ ಪಠಿಪ ಶ್ರೀರಾಮದಾಸರಿಗೆ 3
--------------
ರಾಮದಾಸರು
ಲೋಕಪಾಲಕರು96-1ಪೂರ್ಣ ಸುಗುಣಾಂಬೋಧಿಅನಘಲಕ್ಷ್ಮೀರಮಣಜ್ಞಾನಾದಿನಿಖಿಳಸೌಭಾಗ್ಯದನೆ ಸ್ವಾಮಿಅನವರತಸರ್ವ ದಿಕ್ಪಾಲಕರೊಳಿದ್ದು ನೀಎನ್ನ ರಕ್ಷಿಪ ವಿಭುವೆ ಶರಣು ಮಾಂಪಾಹಿಪಇಂದ್ರಾಗ್ನಿ ಯಮ ನಿಯಯತಿ ವರುಣ ವಾಯುಚಂದ್ರ ನಿಧಿಪತಿ ಈಶಾನಫಣಿಬ್ರಹ್ಮಇಂದಿರಾಪತಿ ಸದಾ ನಿಮ್ಮೊಳು ನಿಂತು ಆನಂದ ಸರ್ವೇಷ್ಟಗಳಈವಸ್ಮರಿಪರಿಗೆ1ವಾಮ ಹಸ್ತದಿ ವಜ್ರಬಲ ಕರವು ಅಭಯದವುಹೇಮವರ್ಣನೆ ಸಹಸ್ರಾಕ್ಷಸುರರಾಜಕಾಮಿತಾರ್ಥವನೀವೆ ಐರಾವತಾರೂಢನಮೋ ಶಚೀಪತಿ ಇಂದ್ರ ಶ್ರೀಶಪ್ರಿಯತರನೆ 2ಹೇಮವರ್ಣಾಂಗನೆ ಸಪ್ತಕರ ಸಪ್ತಾರ್ಚಿನಮೋ ಸ್ವಾಹಾಪತಿ ಅಗ್ನಿ ಮೇಷವಾಹನನೆಕಾಮದನೆ ದುರಿತಹನೆ ಹರಿಣೀಶಪ್ರಿಯಕರನೆನಮೋ ಶ್ರುವಾಶಕ್ತ್ಯಾದಿಧರ ಅಭಯಹಸ್ತ 3ಜ್ಞಾನಸುಖಮಯ ವಿಷ್ಣುಯಜÕನಿಗೆ ಪ್ರಿಯತರನೆಕೃಷ್ಣವರ್ಣನೆ ಲೋಕಕರ್ಮಫಲಪ್ರದನೆದಂಡಧರ ಅಭಯದನೆ ಮಹಿಷವಾಹನ ಯಮನೆಎನ್ನ ಮನ್ನಿಸಿಪೊರೆಇಲಾಪತಿಯೆ ಶರಣು4ಅಸುರರಿಗೆ ಭೀಕರ ಕರಾಲ ವಿರೂಪಾಕ್ಷನೆಅಸಿಧರನೆ ಅಭಯದನೆ ಶರಣು ಮಾಂಪಾಹಿನೃಸಿಂಹಪ್ರಿಯತರನೆ ಕಾಳಿಕಾಪತಿ ಊಧ್ರ್ವಕೇಶ ನಿಋಋತಿನೀಲನರವಾಹ ನಮಸ್ತೆ5ಮೀನ ವಡವಕಮಠಕ್ರೋಡನಿಗೆ ಪ್ರಿಯತರನೆಸ್ವರ್ಣವರ್ಣನೆ ವರುಣ ಪದ್ಮಿನೀರಮಣವನಪತಿಯೆ ಮಕರವಾಹನ ಹವಳಭೂಷಣನೆನಿನಗೆ ನಮೋ ಪಾಶಧರ ಅಭಯದನೆಪಾಹಿ6ನಿಯಮನ ಸುಕರ್ತಾ ಶ್ರೀ ಪುಂಡರೀಕಾಕ್ಷನಿಗೆಪ್ರಿಯತರನೆ ಹರಿಣವಾಹನ ಮೋಹಿನೀಶಶ್ಯಾಮವರ್ಣನೆ ವಾಯು ಜಗತ್ ಪ್ರಾಣರೂಪನೆಕಾಯೆನ್ನ ದಯದಿ ಗದಾಪಾಣಿ ಅಭಯದನೆ 7ಸಾರಾತ್ಮ ಹಯಮುಖ ಧನ್ವಂತರಿ ಪ್ರಿಯತರನೆಸೂರಿಜನ ಚಿಂತ್ಯ ನೀ ಸಿತಕಾಂತಿಕಾಯಪೊರೆಎನ್ನ ಅಭಯದನೆ ರೋಹಿಣೀಪತಿಸೋಮಪುರುಟಭೂಷಣ ಸುಖದ ಕುಮುದಸದ್ಮಸ್ಥ 8ಸೌಭಾಗ್ಯ ಸಾರಾತ್ಮ ಶ್ರೀಯಃಪತಿಗೆ ಪ್ರಿಯತರನೆವಿಪರತ್ನನಿಭ ಯಕ್ಷವೈಶ್ರವಣಪಾಹಿಕುಬೇರ ನಿಧಿಪತಿ ಧನಧಾನ್ಯಾಧಿಪತೇ ನಮೊಸೌಭಾಗ್ಯ ಧನ ಧಾನ್ಯ ಸಮೃದ್ಧಿ ಎನಗೀಯೊ 9ಮನುಜವಾಹ್ಯವು ವರವಿಮಾನದಿ ಕುಳಿತಿಹೆಅನಲಾಕ್ಷಶಂಖಗದಾಧರ ನಮೋಕಿರೀಟಿಎನ್ನ ತಪ್ಪುಗಳನ್ನು ಮನ್ನಿಸಿ ಹರಿಭಕ್ತಿಧನಧಾನ್ಯ ಆರೋಗ್ಯ ಸೌಂದರ್ಯವೀಯೊ 10ನಿರ್ದೋಷಸುಖಮಯ ಜಯೇಶನಿಗೆ ಪ್ರಿಯತರನೆನೀ ದಯದಿ ಸಲಹೆನ್ನ ಈಶಾನಶೂಲಿಸದಾಶಿವನೆ ಭಕ್ತರಿಂ ಅಚ್ಛಿನ್ನ ಸೇವ್ಯನೆಸದಾಅಭಯಎನಗಿತ್ತು ಪೊರೆಯೊ ಗೌರೀಶ11ಆನಂದರೂಪ ಸಂಕರ್ಷಣ ಅನಂತನಿಗೆಅನಂತ ನೀ ಪ್ರಿಯತರನು ಶುಕ್ಲವರ್ಣನಿನ್ನಸತಿವಾರುಣೀಸಮೇತ ಅಭಯದನಾಗಿಎನ್ನಪೊರೆಕೃಷ್ಟಿಧರ ನಮೋ ನೀಲವಾಸ12ಜಗದೀಶ ಭೂರಮಣ ಕೇಶವ ಸುಪ್ರಿಯತಮನೆಜಗದಾದ್ಯ ಬ್ರಹ್ಮ ಸರಸ್ವತೀಸಮೇತಖಡ್ಗಧರ ಅಭಯದನೆ ನಮೋ ರಕ್ತವರ್ಣನೆಮುಗಿದುಕರಶರಣಾದೆಪೊರೆಪಿತಾಮಹನೆ13ಐಶ್ವರ್ಯ ಆಯುಷ್ಯ ನೀತಿ ಜಯ ಅಪಿಪಾಸಪಾವಿತ್ರ್ಯ ಸುಖವಿತ್ತಜ್ಞಾನವಿಜ್ಞಾನಈವೋರು ಇವು ಸರ್ವ ಶ್ರವಣ ಪಠಣವ ಮಾಡೆವಿಶ್ರವ ಕಾಶ್ಯಪ ಲೋಕಪಾಲಕರು ದಯದಿ 14ಇಂದ್ರಾಗ್ನಿ ಯಮ ನಿಋಋತಿ ವರುಣ ಪ್ರವಹಸ್ಥಚಂದ್ರ ವೈಶ್ರವಣ ಈಶಾನ ಅನಂತಸ್ಥಮಂದಜಾಸನಪಿತ ಪ್ರಸನ್ನ ಶ್ರೀನಿವಾಸನುಕುಂದದ ಸೌಭಾಗ್ಯವನುಈವಕರುಣಾಳು15
--------------
ಪ್ರಸನ್ನ ಶ್ರೀನಿವಾಸದಾಸರು
ಶರಣಾಗತನಾದೆನು ಶಂಕರ ನಿನ್ನಚರಣವ ಮರೆಹೊಕ್ಕೆನು ಪ.ಕರುಣಿಸೈ ಕರಿವದನಜನಕಾ-ವರಕದಂಬಪೂಜ್ಯ ಗಿರಿವರ-ಶರಸದಾನಂದೈಕವಿಗ್ರಹದುರಿತಧ್ವಾಂತವಿದೂರದಿನಕರಅ.ಪ.ಹಸ್ತಿವಾಹನವಂದಿತ ವಿಧುಮಂಡಲ-ಮಸ್ತಕಗುಣನಂದಿತಸ್ವಸ್ತಿದಾಯಕ ಸಾವiಗಾನಪ್ರ-ಶಸ್ತ ಪಾವನಚರಿತ ಮುನಿಹೃದ-ಯಸ್ಥಧನಪತಿಮಿತ್ರ ಪರತರ-ವಸ್ತು ಗುರುವರ ಶಾಸ್ತಾವೇಶ್ವರ 1ಮಂದಾಕಿನೀಮಕುಟಶಿವ ಶಿವ ನಿತ್ಯಾ-ನಂದಮ್ನಾಯ ಕೂಟಚಂದ್ರಸೂರ್ಯಾಗ್ನಿತ್ರಿಲೋಚನಸಿಂಧುರಾಸುರಮಥನ ಸ್ಥಿರಚರ-ವಂದಿತಾಂಘ್ರಿಸರೋಜ ಉದಿತಾ-ರ್ಕೇಂದುಶತನಿಭ ನಂದಿವಾಹನ 2ನೀಲಕಂಧರ ಸುಂದರ ಸದ್ಗುಣವರು-ಣಾಲಯ ಪರಮೇಶ್ವರಕಾಲಕಾಲಕಪಾಲಧರ ಮುನಿ-ಪಾಲ ಪದ್ಮಜವಂದಿತಾಮಲ-ಲೀಲ ಡಮರು ತ್ರಿಶೂಲಪಾಣಿ ವಿ-ಶಾಲಮತಿವರ ಭಾಳಲೋಚನ 3ಮಾರಸುಂದರ ಸಂಕರ ಶ್ರೀಲಕ್ಷ್ಮೀ-ನಾರಾಯಣಕಿಂಕರಮಾರಹರ ಮಹನೀಯ ಶ್ರುತಿಸ್ಮøತಿ-ಸಾರವಿಗತಾಮಯ ಮಹೋನ್ನತವೀರ ರಾವಣಮದನಿಭಂಜನಚಾರುತರವರಭಾರಪುರಹರ4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಹರಿಯ ನಂಬದ ನರನು ಗೂಡರಿತು ಇರದ ವಾನರನು ಶ್ರೀಹರಿಯ ಹೊಗಳದ ಕವಿಯು ಭೂಸುರರುಣ್ಣಿಸದ ಹವಿಯು ಪ.ಕರುಣವಿಲ್ಲದ ಅರಸ ಕಾಳೋರಗನಾಡುವ ಸರಸಮಾನಕಿಲ್ಲದ ಮಂತ್ರಿ ತಾ ಗರಹೊಡಕ ಕುಮಂತ್ರಿ 1ಮೆಚ್ಚು ನುಂಗುವ ದೊರೆಯು ಮೀವ ಬಚ್ಚಲಿನ ದೊಡ್ಡಹರಿಯು ಕೈಮುಚ್ಚಿ ನೀಡದ ದಾನ ಹುಸಿರಚನೆ ನಿಧಾನ 2ಧರುಮಕೆ ಕೂಡದ ಸತಿಯು ಯಮಪುರದಾರಿ ಸಂಗತಿಯು ಬಲುಚರಿಗ ಮತ್ಸರಿತನಯಅವ ಅರಗದ ಅಗ್ಗಣಿಯ3ಮೂರ್ಖನ ಗೆಳೆತನ ಜರ್ಜರಿತ ತಂತುವಿತಾನ ಒಣಕರಕರಿ ಕಲಹದ ನೆರೆಯು ಸಾಸಿರ ತೇಳಗಗಚ್ಚಿದ ಸರಿಯು 4ವಂಚಿತವಾದಿ ಬಂಧು ಪ್ರಾಣ ಮುಂಚಿಸುವ ವಿಷಬಿಂದು ಬಹುಕಾಂಚನದಾಸೆ ಬಳಗ ಪ್ರಪಂಚದಳತೆಕೊಳಗ5ಕೊಡದಿಟ್ಟ ಕೊಡಹಣವು ಸುಡುವ ಅಡವಿಲಿ ಬಿದ್ದ ಹೆಣವು ಬಾಯಿಬಡಕನ ಒಡಂಬಡಿಕೆ ಛಿದ್ರಿಡಿದ ಮಣ್ಣಿನ ಮಡಿಕೆ 6ಬ್ರಾಹ್ಮರಿಗುಣಿಸದಸದನದುರ್ಬೊಮ್ಮ ರಕ್ಕಸನ್ವದನಮದ್ಹಮ್ಮಿನಣ್ಣಗಳ ವಿದ್ಯಾ ಮಾಯಮ್ಮನ ಮಹನೈವೇದ್ಯ 7ಓದಿ ಮಲತ ಗುರುಶಿಷ್ಯ ಸದ್ಭೋಧಾಮೃತಪರಿಹೇಯ ಆಪ್ತಾಧಾರಿಲ್ಲದ ಅರಸೆ ಗ್ರಾಮಾದರಿಸುವ ಆಳರಸೆ 8ವೇತ್ತøವಿವರ್ಜಿತ ಸಭೆಯು ಲೋಕತ್ರಯದಲ್ಲಿ ಅಶುಭವು ಕಂಠತ್ರಾಣಿಲ್ಲದ ಗಾನ ಮುದಿ ಎತ್ತೆಳೆದಾಡುವಗಾಣ9ಹುಸಿನುಡಿವ ದೈವಜÕ ತಾ ಹಡದ ಮಗನಿಂದ ಅವಜÕ ದುರ್ವಸುಕಾಂಕ್ಷೆಯ ಭೇಷಜನು ಮಾನಿಸರ ಉಂಬ ಮಾಯಿ ದನುಜನು10ಶ್ರವಣ ಮನನ ಧ್ಯಾನವನು ಬಿಟ್ಟವನೆ ಜೀವಚ್ಛವನುಮಾಧವಪ್ರಸನ್ವೆಂಕಟಮೂರ್ತಿತನ್ನವರಿಗೆ ಕೊಡುವನುಅರ್ಥಿ11
--------------
ಪ್ರಸನ್ನವೆಂಕಟದಾಸರು