ಒಟ್ಟು 243 ಕಡೆಗಳಲ್ಲಿ , 57 ದಾಸರು , 200 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಡುದನು ಪೇಳ್ವೆ ಬ್ರಹ್ಮಾಂಡ ನಾಯಕನೆ | ಕೊಂಡೆಯವಿದಲ್ಲ ಗ್ರಹಕುಂಡಲವ ಶೋಧಿಸುತ ಪ ಮಕರ ಸತಿ ಲಗ್ನದಲ್ಲಿರ್ಪ ಜಲ ತಾರಕೇಂದು ದಶೆ ಯಲಿ ನಿನಗೆ ಜಲದೊಳಾವಾಸವಾಯಿತು ಹರಿಯೆ 1 ಮನುಮಥನ ತಾತ ಕೇಳಿನಸುತನು ನಾಲ್ಕನೆಯ ಮನೆಯೊಳಿರುವನು ಲಗ್ನಕಧಿಪನೆನಿಸಿ ಮನದಿ ಯೋಚಿಸಲಿಕಾ ಶನಿದಶೆಯೊಳಾ ಕುಧರ ವನು ಪೊತ್ತು ದಣಿದೆನೀವ ನಿಧಿಯೊಳು ಹರಿಯೆ2 ಮಂಗಳನೆ ಸುಖಕಧಿಪ ಮಂಗಳನು ಸಿಂಗರದಿ ಸಿಂಗರಾಶಿಯೊಳು ತಾ ಕಂಗೊಳಿಸುತ ತುಂಗವಿಕ್ರಮನವನೆ ಸಂಘಟಿಸಿದನು ವನದಿ ಹಿಂಗದೆ ಬೇರು ಮೆಲುವಂಗವನು ಹರಿಯೆ 3 ವಾರಿಜಾಸನ ಪಿತನೆ ಕ್ರೂರಕ್ಷೇತ್ರದಿ ರಾಹು ಸಾರಿರ್ಪ ರಾಶಿ ವೃಶ್ಚಿಕವೆನಿಸಲು | ಕಾರುಣಿಕನವನ ದಶೆಯಾರಂಭದಲಿ ನಿನಗೆ ಘೋರ ರೂಪವ ತಾಳಲಾಯ್ತು ನರಹರಿಯೆ 4 ಮಂದರೋದ್ಧರ ಕೇಳು ಚಂದಿರನ ರಾಶಿಗಾ ನಂದದಧಿಪತಿ ಸೂರ್ಯನಂದನನು ತಾ ನಿಂದು ಮೇಷದೊಳತ್ರಿಕಂದನ ನಿರೀಕ್ಷಿಸಲು ಬಂದುದೈ ಭಿಕ್ಷೆಯದರಿಂದ ನಿನಗೆಲೆ ಹರಿಯೆ 5 ಅಂಬುಜಾನನ ಕೇಳು ಒಂಭತ್ತರಧಿಪ ಶಶಿ- ಸಂಭವನು ಪಾಪದಿಂ ತುಂಬಿರ್ಪನು | ಸಂಭವಿಸಲವನ ದಶೆಯಿಂದ ನೀ ಕ್ಷತ್ರಿಯ ಕ-ದಂಬ ಮರ್ದಿಸಿ ಧರ್ಮಮಂ ಬಿಟ್ಟೆ ಹರಿಯೆ 6 ದುರಿತ ಸ್ಥಾನಾಧಿಪತಿ ಗುರುವೇಳನೆಯ ಮನೆಯೊಳಿರುವನದರಿಂ | ಹಿರಿಯರುಪದೇಶದಿಂದಿರದೆ ಭಾರ್ಯೆಯನಗಲಿ ಚರಿಸಿದೆಯರಣ್ಯದೊಳಗಿರುತ ನೀ ಹರಿಯೆ 7 ಘೋರಪಾಪವಿನಾಶ ನಾರಿರಾಶಿಯ ನವಮ-ಕಾ ರವಿಯು ಸಾರಿ ನಿಂದಿರ್ಪನದರಿಂ | ಚೋರವ್ಯಾಪಾರ ಪರನಾರಿಯರ ಕೂಡೆ ವ್ಯಭಿ-ಚಾರ ನಿನಗಾಯಿತು ರಮಾರಮಣ ಹರಿಯೇ 8 ಕೈವಲ್ಯ ತಾರಕನಾಥನು | ಪೂತ ಬುದ್ಧಿಸ್ಥಾನ ವಾದನದರಿಂಲಿಂ ಭೂತಲದಿ ಸ್ಥಾಪಿಸಿದೆ ನೂತನ ಮತವ ಹರಿಯೇ 9 ಪಾರವರ್ಜಿತ ಕವಿಯು ಸಾರಿರ್ದ ದಶಮದೊಳ್-ಗಾರವ ನೆನೆಯುಂಟು ಧೀರನೆನಿಸಿ | ಭೂರಿಮ್ಲೇಂಛರನು ಸಂಹಾರ ಗೈಯುತ ತೇಜಿಯೇರಿ ಮೆರೆಯುತ್ತಿರುವ ನಾರಾಯಣ ಹರಿಯೆ 10
--------------
ಅನ್ಯದಾಸರು
ಕಂಡೆಯಾ - ಮನವೇ - ನೀನಿಂದು - ಕಂಡೆಯಾ ಪ ಕಂಡೆಯ ಮನವೆ ನೀನಿಂದು - ತನ್ನತೊಂಡರ ಸಲಹುವ ಬಂಧು - ಆಹಮಂಡೆಯ ಬೋಳಿಸಿ | ಪುಂಡರೀಕಾಕ್ಷನೆಹಿಂಡು ದೈವಂಗಳ | ಗಂಡನೆಂದೇಳ್ವರ ಅ.ಪ. ಪಾದ ಸೊಬಗು - ವೇಗತೆರಳುತ್ತಿದ್ದರದು ಮೆಲ್ಲಗು - ನಖವರರತ್ನ ಕೆಂಪಿನ ಬೆಡಗು - ಊರುಕರಿಯ ಸೊಂಡಿಲಿನಂತೆ ಬೆಳಗು _ ಆಹ ಪರಿಶುದ್ದ ಕಟಿಯಲ್ಲಿ | ಸುರಚಿರಾಂಬರನುಟ್ಟುವರಕಂಠ ಫಣೆಯುದರ | ತ್ರಿವಳಿಯಂ ಮೆರೆವರ 1 ಮೃದುರೋಮ ಶಾಲು ಪ್ರಾವರಣ - ನೋಡಲದು ಭಾಸ ಉದಯಾರ್ಕ ವರಣ - ಪೋಲ್ವದದು ಮೇರು ಗಿರಿಯಂತೆ - ವರ್ಣ ನೋಡುಎದೆಯ ವಿಸ್ತರಾ ಭರಣ - ಆಹಸದಮಲುನ್ನತಾಂಸ | ಉರುಟು ನೀಳದ ತೋಳುಪದುಮ ರಾಗದ ಭಾಸ | ಧ್ವಜರೇಖೆ ಹಸ್ತವ 2 ಮೋದ ಪೋಲ್ವ - ಮತ್ತೆಮಂದ ದೂರನು ಅತಿ ಚೆಲ್ವಾ - ಆಹಕುಂದಾಭ ರದನವು | ಸುಂದರಾರುಣ ಓಷ್ಠಮಂದಜೇಕ್ಷಣ ನೋಟ | ದಿಂದ ಬೀರುವ ಮುದ 3 ಕಿವಿಗಳಲೊಪ್ಪುವ ತುಳಸೀ - ಮೂರುಭುವನ ಭೂತಿ ಭ್ರೂವಿಲಾಸಿ - ಮತ್ತೆಅವನೆ ಅಭೂತಿದನೆನಿಸೀ - ಚೆಲ್ವದವಡೆಯಿಂದೊಪ್ಪುವ ಶಿರಸಿ - ಆಹಅವಯವ ಲಕ್ಷಣ | ಪ್ರತಿ ಪ್ರತಿ ಜನ್ಮದಿವಿವರವೀತೆರವೆಂದು | ವಿಭುದರು ತಿಳಿದರು 4 ಈ ವಿಶ್ವವೆಲ್ಲವೂ ಸತ್ಯ - ಮತ್ತೆಸಾರ್ವ ಭೇದವು ತಾರತಮ್ಯ - ವಿಧಿಪೂರ್ವಕಲ್ವೊರೆಯುತ್ತ ದಿವ್ಯ - ತತ್ವಸಾರ್ವವ ಪೇಳುತ್ತ ಭವ್ಯ - ಆಹಕಾವ ಕೊಲ್ಲುವ ಗುರು ಗೋವಿಂದ ವಿಠಲನೆಸರ್ವೋತ್ತುಮಾನೆಂದು | ಈ ವಿಧ ಮೆರೆವರ 5
--------------
ಗುರುಗೋವಿಂದವಿಠಲರು
ಕಮಲನಾಭ ಹರುಷದಿಂದ ಖಗವಾಹನನ್ಹೆಗಲನೇರಿ ಬಗೆಬಗೆ ಶೃಂಗಾರವಾಗಿ ಬಂದ ರಂಗನು 1 ಅಂಬರ ಜರನಿರಿಗಳಲಿ ಕುಂದಣದುಡಿದಾರವ ಕಟ್ಟಿ ಚÉಂದುಳ್ಳ ಭುಜಕೀರ್ತಿ ಕರ್ಣಕುಂಡಲನಿಟ್ಟು2 ಶಂಖ ಚಕ್ರ ಕರಗಳಲ್ಲಿ ಕಂಕಣ ಭೂಷಣಗಳಿಂದ ಕಿಂಕಿಣಿ ನೂಪುರಗಳಿಂದ ಅಲಂಕಾರವಾಗಿ 3 ಕಸ್ತೂರಿ ಕೇಸರಿಯು ಗಂಧ ಬುಕ್ಕಿ ್ಹಟ್ಟು ಪರಿಮಳದ ಚೆಂದ ಕರ್ಪೂರ ತಾಂಬೂಲ ಬಾಯಲೊಪ್ಪುವ ರಂಗ 4 ನಿತ್ಯ ಸೂರ್ಯ ಪ್ರಕಾಶ ಮಲ್ಲಿಗೆ- ಮಾಲೆ ಮುಡಿದು ಹೊರಟ ಜಗದಮೋಹನ ರಂಗ5 ಸಾಲು ಸಾಲು ಮನೆಗಳಲಿ ಮೇಲು ಮೇಲುಪ್ಪರಿಗೆನೇರಿ ಬಾಲಕೃಷ್ಣ ಬರುವ ಭರವ ನೋಡುತ್ತಿದ್ದರು 6 ವಾರಿಗೆ ಸತಿಯೇರ ತನ್ನ ವಾರೆನೋಟದಿ ನೋಡುತ ಮಾರನಯ್ಯನು ಬಂದನು ತಾ ಬಜಾರ ಮಧ್ಯದಿ 7 ಚೆಲ್ವೆಯರೆಲ್ಲರು ಅರಳುಮಲ್ಲಿಗೆ ಕರದಲ್ಲಿ ಪಿಡಿದು ಫುಲ್ಲಾಕ್ಷನ ಮ್ಯಾಲೆ ನಗುತ ಚೆಲ್ಲುತಿದ್ದರು 8 ಯಾದವರೇಶನೆ ನಿನಗೆ ಭೇದವ್ಯಾಕೆನ್ನ ಮ್ಯಾಲೆ ನೀ ದಯಮಾಡೆನ್ನ ಮನೆಗೆನುತ ರಾಧೆ ಕರೆದಳು 9 ವಜ್ರದ ಗೊಂಬೆಯಂದದಿ ವೈಯಾರಿ ಮೆಲ್ಲನೆ ಬಂದು ಪದ್ಮನಾಭ ಬಾ ನಮ್ಮನೆಗೆನುತ ಭದ್ರೆ ಕರೆದಳು 10 ಅಂತರಂಗದಲ್ಲಿ ಕೋಟಿ ಪಂಥವ್ಯಾತಕೆನ್ನಮ್ಯಾಲೆ ಸಂತೋಷದಿ ಬಾರೆನುತ ಜಾಂಬವಂತಿ ಕರೆದಳು 11 ಸತ್ಯಭಾಮೆ ರುಕ್ಮಿಣಿದೇವಿ ಮಿತ್ರೆನೀಲಾ ಜಾಂಬವಂತಿ ಲಕ್ಷಣಾ ಕಾಳಿಂದಿ ಭದ್ರೆ ಕರೆಯುತಿದ್ದರು 12 ಇಷ್ಟುಮಂದಿ ಸತಿಯರೊಳಗೆ ನಿಷ್ಠುರವಾಗುವೆನೆಂದು ಎತ್ತ ಕಡೆಗೆ ಪೋಗಲೆಂದು ಶ್ರೀಕೃಷ್ಣ ನುಡಿದನು 13 ಹರಿಯ ಮಾತುಗಳನೆ ಕೇಳಿ ಸರುವರು ಸುಮ್ಮನೆ ನಿಲ್ಲೆ ಕರದಿ ವೀಣೆಯ ಪಿಡಿದು ಬಂದನು ಭರದಿ ನಾರದ 14 ಭಂಗ ಬಂದಿತೇನೊ ನಿನಗೆ ಇಂದೆನ್ನ ಹಿಂದೆ ಬಾರೆನುತ ನಾರಂದ ಕರೆದನು 15 ಕೇಳಿ ನಾರದರ ಮಾತು ತಾಳಲಾರದೆ ರುಕ್ಷ್ಮಿಣಿಯು ದಾನ ಒಯ್ದು ದಕ್ಕಿಸಿಕೊಂಡಿರೆಂದು ನುಡಿದಳು 16 ಅಕ್ಕನ ಮಾತಿನ ಬಾಣ ನೆಟ್ಟಿತು ಎನ್ನೆದೆಗೆ ಬಂದು ಕೃಷ್ಣ ನೀ ಕೇಳೊ ಕೇಳೆಂದು ನುಡಿದಳು ಭಾಮೆ 17 ಬಿಟ್ಟು ಬಾಣವ ಮಾಡಿ ಯುದ್ಧ ದಿಟ್ಟಳೆನಿಸುವುದೆ ಸಿದ್ಧ ಪೃಥಿವಿಯೊಳಗೆ ಬಾಣನಂದಿ ಎಂದು ಪ್ರಸಿದ್ಧಿ 18 ದಾರಿಗೆ ತೆಗೆಸಿದೆ ನೀನು ಮೋರೆಗಡ್ಡ ಮಂಡಿ ಪನ್ನಿ ಹೀನ ಕಾರ್ಯವ ಮಾಡಲು ನೀ ಅರಿಯೇನೆ ರುಕ್ಮಿಣಿ 19 ಗುಣನಿಧಿ ಗೋಪಾಲ ಹರಿಗೆ ಮಡದಿ ಎನಿಸುವುದೆ ಸರಿಯೆ ಮಣಿಯ ಕಳವು ಇಟ್ಟದ್ದು ನಿಮ್ಮ ಗುಣವ ನಾನರಿಯೆ 20 ಮಾಯಕಾರ್ತಿ ಮಾತುಗಳ ಅನ್ಯಾಯವೊ ನ್ಯಾಯವೊ ನಾನು ಬಾಯಬಿಟ್ಟರೇನುಳಿದೀತೆ ನಿನ ಮಾರ್ಯಾದೆ ರುಕ್ಮಿಣಿ 21 ಸಾಕು ಸತ್ಯಭಾಮೆ ನಿನಗೆ ಯಾಕೆ ಕೋಪ ಬಂದಿತೆಂದು ನಾಲ್ಕು ತೋಳಿಂದಪ್ಪಿಕೊಂಡನು ಶ್ರೀಕಾಂತ ನಗುತ 22 ಎಲ್ಲ ಸತಿಯರನು ತಾನಿದ್ದಲ್ಲಿಗೇ ಕರೆಸಿದ ಕೃಷ್ಣ ವಲ್ಲಭೆ ರುಕ್ಮಿಣಿಯ ಚರಣಕ್ಕೆ ಎರಗಿಸಿದನಾಗ 23 ರುಕ್ಮಿಣಿದೇವೇರ ತೊಡೆಯ ವಿಚಿತ್ರದ್ಹಲಿಗೆ ಮಂಚಮಾಡಿ ನಕ್ಷತ್ರದೊಳು ಚಂದ್ರನಂತೆ ಹೊಳೆಯುತ್ತಿದ್ದನು 24 ಆರ್ಯಳು ಎನ್ನ ಪಟ್ಟದ ಭಾರ್ಯಳು ರುಕ್ಮಿಣಿಯ ಮಾತು ಮೀರಬ್ಯಾಡಿರೆಂದೆನುತ ಸಾರಿ ಹೇಳಿದ 25 ಹಚ್ಚಿದ್ಹಗಲು ಬತ್ತಿಯಂತೆ ಹದಿನಾರು ಸಾವಿರ ಮಂದಿ ಭೀಮೇಶ ಕೃಷ್ಣನ ಚರಣಕ್ಕೆರಗಿ ನಗುತ ಕುಳಿತಿರಲು 26
--------------
ಹರಪನಹಳ್ಳಿಭೀಮವ್ವ
ಕಲ್ಲಿನಿಂದ ಸರ್ವ ಫಲ ಬಾಹುದೊ | ಪ ಕೈವಲ್ಯ ತೋರುವುದೊ ಅ.ಪ ಕಲ್ಲು ಕಡೆಯುತ್ತಿರಲು ಅಮೃತವೆ ಪುಟ್ಟಿತು | ಕಲ್ಲು ಎತ್ತಲು ಮಳೆಯೊಳೆಲ್ಲವರು ಉಳಿದರು | ಕಲ್ಲು ಹರಿಪಾದವನು ಸೋಕೆ ಹೆಣ್ಣಾಯಿತು | ಕಲ್ಲು ಲಂಕೆಗೆ ಮಾರ್ಗ ಚೆನ್ನಾಗಿ ಶೋಭಿಸಿತು1 ಕಲ್ಲಿನೊಳಗೆ ದೇವನೊಡಮೂಡಿ ಕಾಣಿಸುವ | ಮೂರ್ತಿ ಮಂತಾಹುದು | ಕಲ್ಲು ದೇವರ ಗುಡಿಗೆ ಗರುಡ ಗಂಬವು ಆಯ್ತು | ಕಲ್ಲು ಕೋಟ್ಯಾನು ಕೋಟಿಗೆಲ್ಲ ಬೆಲೆಯಾಯ್ತು2 ಕಲ್ಲೆಂದುಪೇಕ್ಷಿಸದೆ ಕಾಲಕಾಲದಿ ನಿಮ್ಮ | ಕಲ್ಲು ಮನಸನು ಬಿಟ್ಟು ಪೂಜೆಮಾಡಿ | ಸಿರಿ ವಿಜಯವಿಠ್ಠಲ ಒಳ್ಳೆ | ಕಲ್ಲು ಪದವಿಯ ಕೊಟ್ಟು ಸತತ ಪಾಲಿಪನೊ 3
--------------
ವಿಜಯದಾಸ
ಕಾಯ ಪಾದ ಪದುಮ ದಾಸ್ಯವನಿತ್ತು ಪ ಕಂಸಾರಿ ತವ ಪಾದಪಾಲಿಸುವನೆ ಶಿರದೊಳಗಸಂಶಯದಿ ಧರಿಸೀ |ವಿಂಶತಿಯ ಮತ್ತೊಂದು ಭಾಷ್ಯ ದೂಷಕ ಮರು-ತ್ತಂಶ ಸಂಭೂತ ಶ್ರೀ ಮಧ್ವ ಮತದವನಾ 1 ಆವ ಭವರೋಗ ಹ | ಭಾವ ಕ್ರಿಯ ದ್ರವ್ಯಾಖ್ಯಅದ್ವೈತ ತ್ರಯಗಳನು ಸಂಧಾನವಿತ್ತೂ |ದೇವ ದತ್ತದಿ ತೃಪ್ತಿ ಭಾವವನೆ ನೀನಿತ್ತುಭಾವದಲಿ ತವರೂಪ ಓವಿ ತೋರುವುದೂ 2 ಆಗಮಸುವೇದ್ಯ ಭವರೋಗ ವೈದ್ಯನೆ ದೇವನಾಗಾರಿ ವಾಹನನೆ | ಯೋಗಿಧ್ಯೇಯಾಆಗು ಹೋಗುಗಳೆರಡು | ನೀನಿತ್ತುದೆಂಬಂಥಜಾಗ್ರತೆಯ ನೀನಿತ್ತು ಕಾಪಾಡು ಹರಿಯೇ 3 ಕುಡುತೆ ಪಾಲನು ಭಕ್ತ ಕೊಡಲದನು ಕುಡಿಯುತ್ತಕಡಲಂತೆ ಹಾಯಿಸಿದೆ ಬಡವರಾಧಾರೀ |ಧೃಡಭಕ್ತಿ ಸುಜ್ಞಾನ ವೈರಾಗ್ಯ ಭಾಗ್ಯಗಳಕಡು ಕರಣಿ ನೀನಿತ್ತು ಕಡೆಹಾಯ್ಸು ಭವವಾ 4 ಸರ್ವಜ್ಞ ಸರ್ವೇಶ ಸರ್ವಾಂತರಾತ್ಮಕನೆದರ್ವಿಜೀವನ ಕಾಯೊ ದುರ್ವಿಭಾವ್ಯಾ |ಗುರ್ವಂತರಾತ್ಮ ಮತ್ಪ್ರಾರ್ಥನೆಯ ಸಲಿಸಯ್ಯಶರ್ವವಂದ್ಯನೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಕಾಯ-ಜೀವ ಸಂವಾದಕಂ||ವಿರತಿಯು ಪುಟ್ಟದೆ ಸಂಸೃತಿ ಹರೆಯದೆನುತ್ತೊಲಿದು ಗುರುತಾವಾದಿಪನೆವದಲಿಬರೆ ಭಸೂಸುರನಾಗಿ ಕಾಣದೆ ದುರುನುಡಿಗಳ ನುಡಿದೆನದ ಕೆತೊಲಗದೆ ಮತ್ತಂ 1ಪರಿಪರಿ ಶಂಕೆಗಳಿಂದಲಿ ದುರುನುಡಿಗಳ ಬಿಡಿಸಿಯುತ್ತರಗೊಡುವಂತೆನ್ನಯಕರಣದೊಳೆಚ್ಚರದೋರು ತಿರಿಸಲೆರಗಿಯೆ ಸಂಸಾರದಿರವ ಬಿನ್ನವಿಸಿದೆನಾಂ 2
--------------
ತಿಮ್ಮಪ್ಪದಾಸರು
ಕಾಯೊ ಕರುಣಾಕರನೆ ನೀಯನ್ನಾ ಕಾಯೋ ಆನಾಥರಕ್ಷಕ ದಯಾಸಿಂಧೂ ಪ. ಕಾಯೊಯನ್ನನು ಕರವಿಡಿದು ಕೃಪೆಯಿಂದ ನೀಯನ್ನಾ ಕಾಯೊದೇವರದೇವ ಶ್ರೀ ವೆಂಕಟೇಶ್ವರನೆ ಕಾಯೊ ಅ.ಪ. ನೀನಲ್ಲದೆ ಅನ್ಯತ್ರ ತಾಯಿ ತಂದೆಗಳಿಲ್ಲಾ ನೀನಲ್ಲದೆ ಬಂಧುಬಳಗವೆನಗಿಲ್ಲಾ ನೀ ಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 1 ತರುಳ ಕರಿಯಲು ಕಂಭದಿ ಬಂದು ಹಿರಣ್ಯಾಕ್ಷಕನ ಕರುಳ ತೆಗದು ವನಮಾಲೆ ಹಾಕಿ ನಿಂದೀ ನರಮೃಗರೂಪಿನಲಿ ಪ್ರಹ್ಲಾದಗೆ ವರವಿತ್ತೆ ನೀಯನ್ನ ಕಾಯೊ ಶ್ರೀ ವೆಂಕಟೇಶ್ವರನೆ 2 ಜಲದೊಳಗೆ ನೆಗಳೆಯು ಹಿಡಿದು ಎಳೆಯುತ್ತಿರೆ ಬಹುಬಾಧೆಬಡಿಸೆ ನಿಮ್ಮ ನೆನೆಯಲು ನಿಲ್ಲದೆ ಬಂದೊದಗಿನೆಗಳೆಯನು ಶೀಳ್ದು ಕರಿರಾಜಗೊಲಿದು ರಕ್ಷಿಸಿದೊ ಶ್ರೀ ವೆಂಕಟೇಶ್ವರನೆ 3 ದುರುಳದುಶ್ಯಾಸ ದ್ರೌಪತಿ ಸೀರೆಯನು ಸೆಳೆಯೆ ಹರಿಣಾಕ್ಷಿ ಸಭೆಯೊಳಗೆ ಕೃಷ್ಣಾಯೆಂದುವದರೆ ಪರಿಪರಿ ವಸ್ತ್ರವನು ಕೊಟ್ಟೆ ಅಭಿಮಾನವನು ಕಾಯ್ದೊ ದೇವರದೇವ ಶ್ರೀ ವೆಂಕಟೇಶ್ವರನೆ 4 ಶಂಖಚಕ್ರಧರ ನಿನ್ನ ಚರಣವನು ನಂಬಿದೆ ಪಕ್ಷಿವಾಹನಸ್ವಾಮಿ ಕರುಣಾನಿಧೆ ಹೆಳವನಕಟ್ಟೆಯೊಳು ನಿಂದು ಭಕ್ತರನ್ನೆಲ್ಲಾ ಕಾಯ್ದ ದೇವರದೇವ ಶ್ರೀ ವೆಂಕಟೇಶ್ವರನೆ 5
--------------
ಹೆಳವನಕಟ್ಟೆ ಗಿರಿಯಮ್ಮ
ಕಾಲು ತೊಳೆದವನೊಬ್ಬ ತೊಳೆಸಿಕೊಂಡವನೊಬ್ಬ ಮೌಳಿ ಮೇಲಾಜಲವ ಸತತ ಧರಿಸಿದನೊಬ್ಬ ಪಾಲಿಸುವ ಪ್ರಭುವೊಬ್ಬ ಕೊಲುವ ತಳವಾರನೊಬ್ಬ ಮೂರ್ಲೋಕವರಿಯೆ ಪುಟ್ಟಿಸಿದ ಪಿತನೊಬ್ಬ ಆಲೋಚನೆಯ ಬಲ್ಲವಗೆ ಸಂಶಯ ಸಲ್ಲ ಮಾಲೆಯನು ಮಹಲಕ್ಷುಮಿ ಹಯವದನಗಿತ್ತಳಾಗಿ 1 ರಾವಣನ ಕೊಂದ ಪಾಪವ ಕಳೆಯಬೇಕೆಂದು ದೇವ ರಘುಪತಿ ಸದಾಶಿವನ ಪೂಜಿಸಿದ ಗಡಾ ಆ ವಿಧಿಯ ಒಂದು ತಲೆಯನು ಕಡಿದ ಮಾತ್ರದಿಂದ ಆವಾಗ ಕರದಲ್ಲಿ ಇಹ ಕಪಾಲವ ಕಾಣನೆ ದಾವಘದೊಳು ಪೊರಳುವನ ದಾವಾತ ಭಜಿಸುವನು ಜೀವರಿಗೆ ಉಳ್ಳಷ್ಟು ವಿವೇಕ ಹಯವದನಗಿಲ್ಲವೆ 2 ರಾಮಾಯಣದ ಕತೆಯು ಮಹಾಪುಣ್ಯ ಕಥೆಯು ಗಡಾ ರಾಮ ರಾವಣನ ಕೊಂದದ್ದು ಮಹಾಪಾಪ ಗಡಾ ಆ ಮನುಮುನಿಗಳೆಲ್ಲ ಪಾಪಕಂಗೀಕರಿಸಿದರೆ ಸ್ವಾಮಿಯು ಲಯದಿ ಬೊಮ್ಮನ ಮೊದಲು ಕೊಲಿಸದೆ ಧೀಮಂತ ಹಯವದನ ಕೊಂದ ಹಿರಣ್ಯಕ ಮುಖ್ಯ ತಾಮಸ ದಿತಿಜರು ಕಶ್ಯಪ ಋಷಿ ಸುತರಲ್ಲವೆ3 ಶ್ರುತಿಯಿವ ಕರ್ಮಣಾನೋಕನೀಯ ಎಂದು ತುತಿಸುತಿರೆ ನಿಮ್ಮ ನಿರ್ಗುಣ ಬೊಮ್ಮಗೆ ಕರ್ಮವುಂಟೆ ಕ್ಷಿತಿಯೊಳಗೆ ರಾವಣನ ವಧೆಯ ಮಾಡಿದ ಸೇತುಪತಿಯ ಪಾವನನೆನಲು ಅವನ ಕೊಂದವನ ಪತಿತಪಾವನನೆಂಬುದೆ ಕುಚಿತ್ತಯುಕುತಿಯು ಸತತ ಹಯವದನನೊಬ್ಬನೆ ಶುದ್ಧ ಕಾಣಿರೊ 4 ಒಂದು ಕಡೆಯಲಿ ವಿಭೀಷಣನ ಪ್ರತಿಷ್ಠಿಸಿದನು ಮ- ತ್ತೊಂದು ಕಡೆಯಲಿ ಸದಾಶಿವನ ಪೂಜಿಸಿದ ಇಂ- ತೆಂದು ಪುರಾಣಗಳು ಕೂಗುತಿವೆ ತ್ರಾಸಿನೊಳು ಹೊಂದಿಸಿ ಸಮನೆಂದು ತೂಗಿ ತೋರು ಮದದಲಿ ಸಂದೇಹ ಸಲ್ಲ ಹಯವದನ ರಘುಪತಿಗಿಬ್ಬರು ಸಂದ ಭಕುತರೆಂಬುದು ಸಲೆ ಸುಪ್ರಸಿದ್ಧ 5 ಸೇತುವೆಯ ಕಂಡ ನರರಿಗೆ ಬ್ರಹ್ಮಹತ್ಯಾದಿ ಪಾತಕವು ಬಿಡುವುದೆಂಬ ಶ್ರುತಿಯ ಮನ್ನಿಸಲು ಖ್ಯಾತ ಬೊಮ್ಮನ ತಲೆಯ ಕಡಿಯೆ ಕರದಲಿಕೊಟ್ಟ ತಾ- ಸುಕೃತ ಸೇತುಮುಖದಿಂದ ಸೀತೆಯರಸನು ಶಿವನ ನಿಲ್ಲಿಸಿ ಪ್ರತಿಷ್ಠಾಪಿಸಿದ ಜಗನ್ನಾಥ ಹಯವದನ ಭಕ್ತರಬಂಧು ಕಾಣಿರೊ 6 ರಾಮ ಶ್ರೀರಾಮರಾಮೇತಿ ರಮೆಯೆಂಬ ಆ ಮಹಾದೇವ ಭಗವದ್ಭಕ್ತನಲ್ಲವೆ ಸ್ವಾಮಿ ತನ್ನ ಭಕ್ತರÀನು ಪ್ರತಿಷ್ಠಿಸಿದ ನಿ- ಸ್ಸೀಮ ಕರುಣಾಂಬುಧಿ ಮಹಾಮಹಿಮನೆಂಬರು ಭ್ರಾಮಕದ ನುಡಿಗೆ ಮರುಳಾಗದಿರು ಹಯವದನ ರಾಮಚಂದ್ರನೆ ಕಾಶಿಯ ತಾರಕಬೊಮ್ಮ ಕಾಣಿರೊ 7 ಕಾಶಿಯಲಿ ರಾಮಮಂತ್ರೋಪದೇಶವ ಮಾಳ್ಪ ಈಶ ಜಾಣರ ಮತದಿ ಜಗಕೆ ಗುರುವೆಂತೆಂಬ ಆ ಶಿವನ ಮಂತ್ರದೇವತೆ ತಾರಕಬೊಮ್ಮಯೆನಿಪ ವಾಸುದೇವನೆ ಜಗಕೆ ಪರದೈವ ಕಾಣಿರೊ ಈ ಸುತತ್ವÀವ ಪೇಳ್ವ ಹರಗೆ ನಮ್ಮ ಹಯವದನ ಏಸುಮನ್ನಣೆ ಮಾಡಿದರುಚಿತ ಕಾಣಿರೊ 8 ಕರವ ಶಿರದ ಮೇಲೆ ಇರಿಸಬಂದ ಖಳಗಂಜಿ ಹರ ಸಕಲ ಸುರೇಶ್ವರರ ಅರಮನೆಗಳಿಗೆ ಪೋಗಿ ಪರಿಹರವ ಕಾಣದೆ ನಮ್ಮ ಸಿರಿವರನ ಮರೆಹೊಗಲು ಪÀರಿಣಾಮವನು ಪೊರೆದ ಗಡಾ ಶರಣರಕ್ಷಕನೆಂಬ ಬಿರುದುಳ್ಳ ಹಯವದನ ಹರಿಯಲ್ಲದೆ ಪಿರಿದೊಂದು ಪರದೈವವಿಲ್ಲವಯ್ಯ 9 ರೋಮಕೋಟಿಲಿಂಗನೆನಿಸಿದ ಹನುಮನೊಂದು ರೋಮಕೆ ಕೋಟಿ ಶಿವರ ಮಾಡುವ ಶಕ್ತ ಕಾಣಿರೊ ಆ ಮಹಾತ್ಮನ ತನ್ನ ಆಳುಮಾಡಿ ನಡೆಸಿಕೊಂಡ ರಾಮಚಂದ್ರನೆ ಜಗಕ್ಕೆ ಪರದೈವ ಕಾಣಿರೊ ಸ್ವಾಮಿ ಹಯವದನ ವೇದವ ತಂದು ಕಮಲಜನ ಕಾಮಿತವನಿತ್ತನಾಗಿ ಅವನೆ ಜಗದೊಡೆಯ 10 ನೂರು ರುದ್ರರು ಪೇಳೆ ಕಾರ್ಯವಾದರೇನವರು ಈರೇಳು ಜಗವ ಸಂಹರಿಸಲರಿಯರು ಗಡಾ ಕಾರ್ಯವಿಲ್ಲದ ಶಿವರ ಪೇಳಲದ್ವೈತಮತ ಹಾರಿಹೋಗದೆ ಬರಿದೆ ಹಲವು ಹಂಬಲಿಸದೆ ಶ್ರೀರಮಣ ಹಯವದನನೊಡಂಬಟ್ಟನಿ ಬರನು ದೂರ ಕಳಚಿದನೆಂದು ಪೂರ್ವದವರನೆ ನಂಬು 11 ಯಾತ್ರೆಯ ಮಾಡಿಸಿಕೊಂಡು ಹರ ಹಿರಿಯ ತಾನಾಗಿ ಯುಕ್ತಿ ಬಾಧಕವಾಯಿತ್ತು ಹರಿಹರರೊಳೈಕ್ಯ ಚಿತ್ರ ನಿನ್ನ ಮತಕೆ ನೀನೆ ಶತ್ರುವಾದೆ ಪ್ರತ್ಯುತ್ತರವ ಪೇಳೆ ಪರಾಜಯ ಬಾರದಿಹುದೆ ಮತ್ತೆ ನೆನೆಯೊ ಶ್ರೀಹಯವದನಗಿದು ಲೀಲೆಯಾದರೆ ಸತ್ವ ಹೆಚ್ಚಿತು ಸರ್ವೋತ್ತಮನೆಂಬ ಶ್ರುತಿಗೆ 12 ವಂದ್ಯಮಾನಂ ಪಿತಾನಾಂ ಪ್ರತಿ ಪ್ರಮಾಣಂ ಎಂದು ರುದ್ರನ ಕೂಡೆ ಶ್ರುತಿ ಪೇಳಿತಾಗಿ ತಂದೆ ಮಕ್ಕಳ ಮನೆಗೆ ಪೋದಂತೆ ಪೋಗಿ ಮು- ಕುಂದ ಮೊಮ್ಮಗನಿಗೆ ಹಿರಿತನವ ಕೊಡಲೆಂದು ಮುಂದೆ ಜನಿಸುವ ಕಿರಿಯ ಕುವರರೊಳು ತನ್ನ ಕಂದನ ಸೃಜಿಸಿದ ಹಯವದನ ಚತುರನಲ್ಲವೆ 13 ಸುರರು ದ್ವಾರಕಾಪುರ ಯಾತ್ರೆಯಲಿ ಪಾಲಸಾಗರಯಾತ್ರೆ ಗರ್ಭಯಾತ್ರೆ ಕಳೆಯೆ ಶೂಲಧರ ಖಳಗಂಜಿ ಭುವನವೆಲ್ಲವ ಸುತ್ತಿ ಶ್ರೀ- ಲೋಲನಿಹ ವೈಕುಂಠಯಾತ್ರೆಯಿಂದ ಬದುಕನೆ ಭೂಲೋಕದಲಿ ಪುಟ್ಟಿ ಹಯವದನ ಕೃಷ್ಣ ಮಾಡಿದ ಕೈಲಾಸಯಾತ್ರೆ ಕೈವಲ್ಯಪತಿಗೆ ಲೀಲೆ 14 ಹರನಾರು ಪುರಾಣಗಳು ವಿರಿಂಚನಾರು ಪುರಾಣಗಳು ಹರ ವಿರಿಂಚರವಲ್ಲವೆಂದು ಹಿರಿಯರೆ ಮನ್ನಿಸಲಾಗಿ ಪರಮ ಸಿದ್ಧಾಂತಕೋವಿದರೆನಿಪ ಬುಧರಿಗೆ ಪುರಾಣಗಳ ಮ್ಯಾಲೆ ಮಾಡುವ ಪರಮಾದÀರ ಸಲ್ಲದಯ್ಯ ದುರಾಗ್ರಹವ ಮಾಡಬ್ಯಾಡ ಗುರುಮತವ ಬಿಡಬ್ಯಾಡ ಸಿರಿ ಹಯವದನನಾರುಪುರಾಣಗಳ ನೋಡಿರೊ 15 ಒಂದು ಬೊಮ್ಮಚಿತ್ತು ಒಂದು ಜೀವಚಿತ್ತು ಇಂ- ತೆಂದು ಶ್ರುತಿಸ್ಕಂಧÀ ಚೇತವೆಲ್ಲ ಗ್ರಂಥ[ಆ]ಸ್ಯ ದಿಂದ [ಒರೆಯೆ] ಹರಿಜಡನೋ ಹರಜಡನೋ ಮಂದಹಾಸದಿಂದ ಜಡರು ಮನುಮುನಿಗಳೆಲ್ಲ ಇಂಥ ಶಿವನ ವಹಿಸಿಕೊಂಡು ವಾದಿಸುವರು ಹಿಂದು ಮುಂದರಿಯರೆಂದು ಹಯವದನ ನಗನೆ 16 ಯಂ ಬ್ರಹ್ಮವೇದಾಹಂ ಬ್ರಹ್ಮ ವೇದಶ್ರುತಿಶಬ್ದ ಬ್ರಹ್ಮ- ವೆಂಬ ವೇದ ಬೋಧಿಸಿತಾಗಿ ಇಂಥ ಮನುಜರಿಗೆಲ್ಲ ಭಾವಾಭಾವ ಪೇಳ್ವ ಹೊಂದಿಬದುಕು ಹಯವದನನ ಚರಣವ ಹೊಂದಿಬದುಕೊ ಜೀವ ಹರಿಯೆ ನಾನೆನ್ನಬ್ಯಾಡ 17
--------------
ವಾದಿರಾಜ
ಕಾಳಿಂಗನಾ ಮೆಟ್ಟೆ ನಾಟ್ಯವಾಡಿದ ಕಂಜನಾಭ ಕೃಷ್ಣನು ಪ ಕಾಳಿಂಗನಾ ಮೆಟ್ಟಿ ಆಡಿದ ಭರದಲ್ಲಿಶ್ರೀವತ್ಸ ಉರದಲ್ಲಿ ಕೊರಳಲ್ಲಿ ವನಮಾಲೆತರಳತನದಲ್ಲಿ ಯಮುನೆಯ ಮಡುವಿನಲ್ಲಿಆಡುತ್ತ ಪಾಡುತ್ತ ಅ.ಪ. ಕಾಲಲಿ ಗೆಜ್ಜೆ ಘಲುಘಲು ಘಲುಕೆನ್ನೆಫಾಲದಿ ತಿಲಕವು ಹೊಳೆ ಹೊಳೆಯುತ್ತಜ್ವಲಿತ ಮಣಿಮಯ ಲಲಿತ ಪದಕಹಾರಜ್ವಲಿತ ಕಾಂತಿ ಬೆಳಗುತ ದಿಕ್ಕುಗಳಲ್ಲಿ 1 ಸುರರು ತಥ್ಥೈತಥ್ಥೈಯೆನ್ನಲುನಾರದ ತುಂಬುರ ಸಿದ್ಧರು ವಿದ್ಯಾ-ಧರರು ಅಂಬರದಲ್ಲಿ ಆಡುತ್ತ ಪಾಡಲು 2 ಯೋಗಿಗಳೆಲ್ಲ ಜಯ ಜಯ ಜಯಯೆನ್ನೆಭೋಗಿಗಳೆಲ್ಲ ಭಯಭಯ ಭಯವೆನ್ನೆನಾಗಕನ್ಯೆಯರು ಅಭಯ ಅಭಯವೆನ್ನೆನಾಗಶಯನ ಸಿರಿಕೃಷ್ಣ ಜನನಿಯ ಕಂಡುಬೇಗನೆ ಬಿಗಿದಪ್ಪಿ ಮುದ್ದನು ತೋರಿದ3
--------------
ವ್ಯಾಸರಾಯರು
ಕುಣಿ ಕುಣಿಯೆಲೋ ಹರಿಗಾನದಲಿ ಪ ಅಣಕಿಸುವರೆಂದು ಮನ ಜರಿಯದೆಲೆ ಅ.ಪ ಅನುಗಾಲವು ಮನಕೊರೆಯುವ ಅನುತಾಪಗಳ ಕೊನೆಗಾಣಿಸಲು 1 ಸ್ಥಿರವಲ್ಲವು ನರಜನ್ಮವು ಸರಿಸಮಯವೆಂದು ಅರಿಯುತ್ತ ಮುದದಿ 2 ಒಣ ಭೋಗವ ಉಣಲೋಸುಗ ಹಣಗಳಿಸೆ ಬಲು ದಣಿವುದಕಿಂತ 3 ಗಾನ ಲೋಲನ ನಾಮ ಮಧುರಸ ಸಾನುರಾಗದಿಂದ ವಾಸಮಾಡುತಲಿ 4 ಪನ್ನಗಾರಿವಾಹನ ಹರಿಯು ಪ್ರ ಸನ್ನನಾಗಲೆಂದು ಸನ್ನುತಿಸುವ ಸದಾ 5
--------------
ವಿದ್ಯಾಪ್ರಸನ್ನತೀರ್ಥರು
ಕೃಪಣ ಶಿಷ್ಯನಿಗೇಅಪವರ್ಗಪ್ರದ ಹರಿಯೆ | ಅಪವಾದ ಕಳೆಯೋ ಅ.ಪ. ದಾಸನಾದವನು ನಿ | ರ್ದೋಷಿ ಎನುವುದು ನಿಜದಾಸನೆನೆ ಹನುಮಂಗೆ | ಲೇಸು ಸಲ್ಲುವುದೋ |ದಾಸರನುಯಾಯಿ ನರ | ದೂಷಣೆಗೆ ಒಳಗಾಗಿಕ್ಲೇಶ ಪಡುವುದು ಉಚಿತೆ | ಶ್ರೀಶ ಸರ್ವೇಶಾ 1 ಫಲವು ತುಸು ಕೆಟ್ಟಿರಲು | ಆ ಉಪಭಾಗವ ಬಿಸುಟುಮೆಲುವುದಿಲ್ಲವೆ ಫಲವ | ಹಲವು ಜನರೂಕಲಿಮಲಘ್ನನೆ ಹರಿಯೆ | ಕಲುಮಷವನೆ ಕಳೆಯುತ್ತಕಲುಷ ದೂರನ ಗೈಯ್ಯೋ | ಬಲು ದಯಾ ಪೂರ್ಣಾ 2 ಶಿರಿಮಾಧವಾ ಭಿನ್ನ | ಗುರು ಗೋವಿಂದ ವಿಠಲಕರುಣಾಪಯೋನಿಧಿಯೆ | ಸರ್ವಾಂತರಾತ್ಮತರಳಗೊದಗಿಹ ವಿಪದ | ಪರಿಹರವ ಗೈಯ್ಯುತ್ತಕರುಣಿಸೆನೆ ಮನಶಾಂತಿ | ಹರಿಯೆ ಭಿನ್ನವಿಪೇ 3
--------------
ಗುರುಗೋವಿಂದವಿಠಲರು
ಕೇಶವದಾಸಗೆ ಚರಣವ ನೀಡೋ ವಾಸುದೇವನೇ ನಿನ್ನ ಪಾದವ ನೀಡೋ ಪ ಚರಣವ ಗಂಗಾಮೃತದಿಂದ ತೊಳೆಯುವೇ ಚರಣಕ್ಕೆ ಶ್ರೀಗಂಧವನ್ನು ಲೇಪಿಸುವೆ ಚರಣಕ್ಕೆ ಆರತಿ ಬೆಳಗುವೆ ಹರಿಯೇ 1 ಪಾದದೊಳೆನ್ನಯ ಶಿರವಿತ್ತು ಬೇಡುವೆ ನಿತ್ಯ ಕುಡಿಯುತ್ತಲಿರುವೇ ಪಾದಧೂಳಿಗಳನ್ನು ಬಿಡದೆ ನಾ ಹÉೂರುವೇ ಪಾದದೊಳೀ ತನುವನ್ನು ನಾ ಬಿಡುವೇ 2 ಅಡಿಯನ್ನು ನೋಡಿ ಸಂತೋಷಗೊಳ್ಳುವೆನು ಅಡಿಯನ್ನು ಸೇವಿಸಿ ಭಕ್ತನಾಗುವೆನು ಅಡಿಯನ್ನು ಪೂಜಿಸಿ ಭಜಿಸಿ ಪಾಡುವೆನು ಅಡಿಯನ್ನು ಸೇರಿ ನಾ ಮುಕ್ತನಾಗುವೆನು 3
--------------
ಕರ್ಕಿ ಕೇಶವದಾಸ
ಕೇಳಕ್ಕಯ್ಯ ನಾ ಮಾಡಿದ ಮದುವೆ ಮನಸಿಗೆ ಬರುತ್ತದೆಕೇಳಕ್ಕಯ್ಯ ನಾ ಮಾಡಿದ ಮದುವೆ ಮನಸ್ಸಿಗೆ ಬರುತ್ತದೆ ಪ ಮುಂಡಕೆ ದಂಡೆಯ ಮಾಡಿಸಿದೆ ಮುಸುಕಲಿ ಸೋಭಾನ ಮಾಡಿದೆಮುಂಡಕೆ ರುಂಡವ ಕೂಡಿಸಿದೆ ಮಂಗಳಾರತಿ ಬೆಳಗಿಸಿದೆ 1 ಕೋತಿಯು ಅಲ್ಲಿ ಕುಣಿಯುತ್ತಿತ್ತು ಕೋಣವು ಮದ್ದಲೆ ಬಾರಿಸುತ್ತಿತ್ತುಕೋತಿಯ ಕಾಲನೆ ಮುರಿದೆ ಕೋಣನ ಮದ್ದಲೆ ಮುರಿದೆ2 ಹಾರುವವನನು ಕಟ್ಟಿ ಹಾಕಿಸಿದೆ ಹಾದಿಲಿ ದೀಪವ ಹಿಡಿಸಿದೆಮೂರು ಮನೆಯ ಮೇಲಟ್ಟದಲ್ಲಿ ಮೆರವಣಿಗೆಯನೆ ಮಾಡಿಸಿದೆ3 ಒಳ್ಳೆ ಬೀಗರ ಬೆಳ್ಳಿ ತಳಿಗೆಯಲ್ಲಿ ಎಲ್ಲರ ಒತ್ತೊತ್ತಾಗಿ ಕೂರಿಸಿದೆಬೆಲ್ಲದ ಪರಮಾನ್ನವನೆ ಉಣಿಸಿದೆ ಬೆಳ್ಳನೆ ಉಡುಗೊರೆ ಹೊದಿಸಿದೆ 4 ಗುಡ್ಡ ಮೂರ ಕೊನೆಯಲಿದ್ದ ಅಡ್ಡಗಲದೆ ದೇವರ ಮನೆಗೊಯ್ದುದೊಡ್ಡ ಚಿದಾನಂದ ಗುರುವಿಗೆ ನಾ ಅಡ್ಡಗೆಡವಿ ಮದುವೆ ಮಾಡಿಸಿದೆ5
--------------
ಚಿದಾನಂದ ಅವಧೂತರು
ಕೇಳಿದರೆನಗೇನು ಗೊತ್ತಿಲ್ಲ ಹೇಳುವದ್ಹುಟ್ಟನಾ ಕಲಿತಿಲ್ಲ ಪ ಹೇಳಿದ್ದೆ ಕೇಳಿ ನಾ ಮೂಲತಿಳಿದು ಭವ ಮಾಲನ ಭಜಿಸುವೆನಲ್ಲ ಅ.ಪ ವೇದಮೊದಲು ನಾನೋದಿಲ್ಲ ವೇದಮಂತ್ರ ಗೊತ್ತೆನಗಿಲ್ಲ ಮೇದಿನಿಯೊಳು ಹರಿಪಾದದಾಸರು ನಿ ವೇದಿಸಿದ ತೆರ ಸಾಧಿಪೆನಲ್ಲ 1 ನಿತ್ಯತತ್ತ್ವಗೊತ್ತೆನಗಿಲ್ಲ ಮತ್ತು ಆವಶಾಸ್ತ್ರ ಗತಿಯಿಲ್ಲ ಸತ್ಯರು ಪೇಳಿದ ನಿತ್ಯವಾಕ್ಯಗಳ ಚಿತ್ತವಿಟ್ಟರಿಯುತ್ತ ಸತ್ಯ ನಂಬಿಹೆನಲ್ಲ 2 ಛಂದಸ್ಸು ಲಕ್ಷಣ ನೋಡಿಲ್ಲ ಒಂದು ಪುರಾಣದರ್ಥ ಮಾಡಿಲ್ಲ ಬಂಧುಭಜಕರಾನಂದ ಶ್ರೀರಾಮನ ಬಂಧುರಂಘ್ರಿ ಸ್ಮರಣೊಂದೆ ಬಲ್ಲೆನಲ್ಲ 3
--------------
ರಾಮದಾಸರು
ಕೇಳು ಕಲ್ಮಷಹಾರಿ ಕರುಣಾವಾರುಧಿ ಶೌರಿ ತಾಳು ಕ್ಷಮೆಯ ಕೃಪೆದೋರಿ ಕೇಳು ಸಂಸೃತಿ ದುಃಖ ತಾಳಲಾರೆನು ಮಾತ ನಾಲಿಸು ಮಲ್ಲಕಂಸಾರಿ ಪ. ಮೂರೊಂದು ಎಂಬತ್ತು ಲಕ್ಷ ಯೋನಿಗಳನ್ನು ಸಾರಿ ಕಡೆಗೆ ಮಾನುಷ್ಯವನು ಸೇರಿದೆನಿದಿರಲಿ ಷಡ್ವೈರಿ ಗಣವೆನ್ನ ಗಾರು ಮಾಡುವುದನೇನೆಂಬೆ 1 ದೂರಾಪುರದ ಕಾಮ ವಾರುಧಿವಳಗೀಸ ಲಾರದೆ ಬಾಯಬಿಟ್ಟೊರವೆ ಕ್ಷೀರಾಬ್ಧಿಶಯನ ಥಟ್ಟನೆ ಬಂದು ಸಲಹೊ ಮು- ರಾರಿ ನೀನ್ಯಾಕೆನ್ನ ಮರೆವೆ 2 ಬುದ್ಧಿ ಬರುವ ಮೊದಲಿದ್ದ ಪರಿಯು ಮಣ್ಣ ಮುದ್ದೆಯಂತಾಯ್ತನಂತರದಿ ಹದ್ದಿನಂದದಿ ಹಂಗಿನನ್ನವ ಕಾಯುತ್ತ ಇದ್ದೆನು ಪರರ ಮಂದಿರದಿ 3 ಮಧ್ಯವಯಸ್ಸಿನೊಳ್ ಮದನನ ¨ಲೆಯೊಳು ಬಿದ್ದು ಹೊರಳಿ ಬಹು ಬಳಲಿ ಮಧ್ವವಲ್ಲಭ ನಿನ್ನ ಮರೆತೆನು ಮುಂದಾದ- ರುದ್ಧರಿಸೆನ್ನ ಬೇಗದಲಿ 4 ನೇಮವ್ರತಗಳನೊಂದಾದರು ಮಾಡದೆ ಕಾಮಲಾಲಸನಾದೆ ಬರಿದೆ ವ್ಯಾಮೋಹ ಕಡಲಿಗೆ ಕೊನೆಗಾಣೆ ಕಾರುಣ್ಯ ಧಾಮನ ಬಿಡೆ ನಿನ್ನ ಸ್ಮರಣೆ 5 ಸಾಮಜೋದ್ಧಾರ ಸಕಲಸುರವೈರಿ ನಿ- ರ್ನಾಮವತಾರ ಭೂಧಾರ ನಿತ್ಯ ಸವಿದು ಬಾಳುವ ಮುಖ್ಯ ಕಾಮಿತಾರ್ಥವ ನೀಡು ವರದಾ 6 ಸುರಮುನಿ ಪಿತೃಋಣ ಭರವ ನೀಗುವ ಮೂರು ಕಾಲ ಕಳೆದೆ ವರ ದೇವಾಲಯ ಕೂಪಾ ರಾಮಯಜ್ಞಾದಿ ಸ- ತ್ಕರಗಳ ವಾರ್ತೆಯ ತೊರೆದೆ 7 ಗುರು ಹಿರಿಯರ ಸೇವೆ ಮರೆತು ಮನಸಿನಲ್ಲಿ ಸರಿಯಲ್ಲ ಎನಗೆಂದು ತಿಳಿದೆ ಮರಿಯಾದೆ ಗೆಟ್ಟು ಮಾಯಾತಂತು ಬಂಧದೊ- ಳಿರುವೆ ಈ ಪರಿಯಿನ್ನು ಥರವೆ 8 ಲೋಕನಾಯಕ ನಿನ್ನ ಸ್ಮರಣೆ ಒಂದಿದ್ದರೆ ಸಾಕೆಂಬ ಶ್ರುತಿ ಪುರಾಣಗಳು ವಾಕಾನುವಾಕುಗಳು ಸುರಿದ ಸರ್ವಜ್ಞ ಶ್ರೀಕರ ಪಾದದ ಮತವ 9 ಸ್ವೀಕರಿಸುತ ನಿನ್ನ ಸೇವೆ ಮಾಡಲು ಬ್ಯಾರಿ- ನ್ಯಾಕಿನ್ನು ಡಾಂಭಿಕರ ವ್ಯಾಕುಲವ ಬಿಡಿಸಿ ವೆಂಕಟನಾಥ ಕರುಣಿಸ ಬೇಕು ಶ್ರೀವರ ನಿನ್ನ ಪಥವಾ 10
--------------
ತುಪಾಕಿ ವೆಂಕಟರಮಣಾಚಾರ್ಯ