ಒಟ್ಟು 63 ಕಡೆಗಳಲ್ಲಿ , 27 ದಾಸರು , 63 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂದಮತಿಯೇ ಮಾನವಾ ಪ ಹಿಂದೊ ಮುಂದೊ ಎಂದು ಯೋಚಿಸದಿರು ಅ.ಪ ಸತತವು ಲಕ್ಷ್ಮೀಪತಿಯ ಭಜಿಸು 1 ಭಾವದಿ ತಿಳಿದತಿಭಕ್ತಿಯೊಳಿರು 2 ಈ ಚರಾಚರಕು ಗೋಚರಿಸುವ ಕಂಜ- ಲೋಚನನೆಂದು ನಿನ್ನ ನಾಚಿಕೆ ಬಿಡು 3 ಕೊರಳು ನೋಯುವಂತೆ ಕೂಗುತಲಿರು 4 ಪರದಲಿ ಮುಕ್ತಿಯು ಇಹದಲಿ ಸೌಖ್ಯವು ಗುರುರಾಮವಿಠಲನೆ ಕರುಣಿಸುವನು 5
--------------
ಗುರುರಾಮವಿಠಲ
ಯಾಕೆ ಕೃಪೆ ಬಾರದೋ ನಿನಗ್ಯಾಕೆ ದಯಬಾರದೊ ಪ ಲೋಕರಕ್ಷಕ ದುಷ್ಟಕಾಲಶಿಕ್ಷಕ ನಿನಗ್ಯಾಕೆ ಅ.ಪ ಪಕ್ಷಿವಾಹನನೆನಿಸಿ ಲಕ್ಷಿಸದಿರಲು ಲೋಕದಿ ಲಕ್ಷಣವೆಲ್ಲವು ಶುಭಲಕ್ಷಣ ಮೂರುತಿ ನಿನಗ್ಯಾಕೇ 1 ಕುಕ್ಷಿಯೊಳೀ ಜಗವನಿಟ್ಟು ರಕ್ಷಿಸುವ ಲಕ್ಷ್ಮೀಪತಿ ದಕ್ಷಿಣ ಶೇಷಾದ್ರಿವಾಸ ರಕ್ಷಿಸು ನಿನಗ್ಯಾಕೇ ಕೃಪೆ 2 ವಾಸವಸನ್ನುತ ಶ್ರೀನಿವಾಸ ನಿನ್ನದಾಸನೊಳು ದೋಷವನೆಣಿಸದೆ ಕಾಯೊ ದೋಷರಹಿತನೆ ನಿನಗ್ಯಾಕೆ 3 ಶುಭ ದೃಷ್ಟಿಯಿಂದ ನೋಡಿ ಎನ್ನ ಕಷ್ಟವ ಬಿಡಿಸಿ ಮನದಿಷ್ಟವ ಪಾಲಿಸು 4 ವಾರಣವರದಭವ ತಾರಣ ಚರಣ ಗುಣ ಪು ರಾಣ ವರದವಿಠಲ ಕಾರುಣಿಕರರಸ ನಿನಗ್ಯಾಕೇ 5
--------------
ವೆಂಕಟವರದಾರ್ಯರು
ಯಾಕೆ ಕೃಪೆ ಬಾರದೋ-ಲೋಕರಕ್ಷಕ ನಿನಗ್ಯಾಕೇ ಪ ಲೋಕ ರಕ್ಷಕ ದುಷ್ಟಕಾಕ ಶಿಕ್ಷಕ ನಿನಗ್ಯಾಕೇ ಅ.ಪ. ಪಕ್ಷಿವಾಹನನೆಸಿ ಲಕ್ಷಿಸದಿರಲು ಲೋಕದಿ ಶುಭ ಲಕ್ಷಣ ಮೂರುತಿ ನಿನಗ್ಯಾಕೆ ಕೃಪೆ 1 ಕುಕ್ಷಿಯೊಳೀ ಜಗವನಿಟ್ಟು ರಕ್ಷಿಸುವ ಲಕ್ಷ್ಮೀಪತಿ ದಕ್ಷಿಣಶೇಷಾದ್ರಿವಾಸ ರಕ್ಷಿಸುವ ನಿನಗ್ಯಾಕೇಕೃಪೆ 2 ಸನ್ನುತ ಶ್ರೀನಿವಾಸ ನಿನ್ನ ದಾಸನೊಳು ದೋಷವೆಣಿಸದೆ ಕಾಯೊದೋಷರಹಿತನೆ ನಿನಗ್ಯಾಕೇ 3 ಶುಭ ದೃಷ್ಟಿಯಿಂದ ನೋಡಿಯನ್ನ ಕಷ್ಟವ ಬಿಡಿಸಿ ಮನದಿಷ್ಟವ ಪಾಲಿಸು 4 ಭವ ತಾರಣ ಚರಣಗುಣ ಪೂರಣ ವರದ ವಿಠಲ ಕಾರುಣಿಕರರಸನಿನಗೆ5
--------------
ಸರಗೂರು ವೆಂಕಟವರದಾರ್ಯರು
ಯಾರು ಇದ್ದರೇನು ನಿನ್ನ ಪಥಕೆ ಬಾರರೋ ಶ್ರೀಹರಿ ಮುರಾರಿ ಎಂದು ಗತಿಯ ನೋಡಿ ಕೊಂಡಿರೋ ಪ ಹೊನ್ನು ಹಣವು ಚಿನ್ನ ಚಿಗುರು ಬಣ್ಣ ಬಂಗಾರವಿರಲು ಎನ್ನವರು ತನ್ನವರು ಎಂದು ಬರುವರೋ ಅನ್ನಕಿಲ್ಲದಿರಲು ಕೆಟ್ಟು ಅಲ್ಲಿ ಪರಿಕಾಲದಲ್ಲಿ ನಿನ್ನ ಕುಶಲವಾರ್ತೆಗಳನು ಮುನ್ನ ಕೇಳರೋ 1 ಇಂದು ಹಬ್ಬ ಹುಣ್ಣಿಮೆಂದು ಬಂಧು ಬಳಗವೆಲ್ಲನೆರೆದು ತಿಂದು ನಿನ್ನ ಹಿಂದೆ ಮುಂದೆ ತಿರುಗು ತಿಪ್ಪರೋ ಬಂಟ ಬಹಳ ಭಾಗ್ಯವೆಲ್ಲ ಕುಂದಿ ಹೋದ ಕಾಲದಲ್ಲಿ ಮುಂದೆ ಸುಳಿಯರೋ 2 ತುಂಬಿ ಇರಲು ಎಡದೆ ಬಿಡದೆ ನೆಂಟರಿಷ್ಟರೆಂದು ತಿಂಬರೋ ವಡವೆ ವಸ್ತು ನಷ್ಟವಾಗಿ ಬಡತನವು ಬಂದ ಬಳಿಕ ಬಿಡುವ ಕೈಯ ನಿನ್ನ ನೊಂದ ನುಡಿಯ ನುಡಿಸರೋ 3 ಮಡದಿ ಮಕ್ಕಳೆಲ್ಲ ನಿನ್ನ ಒಡನೆ ಹುಟ್ಟಿದವರು ಸಹಿತ ಕಡು ಮಮತೆಯಿಂದಲವರು ನೋಡಿ ನಡೆವರೋ ಉಡಲು ತೊಡಲು ಒಡಲಿಗಿಷ್ಟು ಕಡಿಮೆಯಾಗಿ ಎಂದು ಹೊಡೆದು ಕೊಂಬರೋ 4 ಮೃತ್ಯುನಿನ್ನ ಹತ್ತಿರಿದ್ದು ಹೊತ್ತು ವೇಳೆ ನೋಡುತಿಹುದು ವ್ಯರ್ಥವಾಗಿ ಇವರ ನಂಬಿ ಕತ್ತೆ ಕೆಡದಿರೋ ಸತ್ತು ಹುಟ್ಟಿ ಸಾಯ ಬೇಡಿ ಚಿತ್ತದಲ್ಲಿ ಭೀಮನಕೋಣೆ ಗೊತ್ತಿಲಿದ್ದ ಲಕ್ಷ್ಮೀಪತಿಯ ಒತ್ತಿ ಭಜಿಸಿರೋ 5
--------------
ಕವಿ ಪರಮದೇವದಾಸರು
ಲಕ್ಷ್ಮೀಪ್ರಿಯರ ಚರಣ ಭಜನೆ ನಿರುತದಿಂದ ಮಾಡುವ ಪ ಲಕ್ಷ್ಮೀಪತಿಯ ಕರುಣ ಪಡೆದು ಹರುಷದಿ ನಾವ್ ಬದುಕುವ ಅ.ಪ ಸದ್ಪೈಷ್ಣವ ಕುಮುದಕಾಭಿ ವೃದ್ಧಿ ತರುವ ಗೋಸುಗ ಮಧ್ವ ಮತಾಬ್ಧಿಯಲ್ಲಿ ಉದ್ಭವಿಸಿದ ಚಂದ್ರರ 1 ವ್ಯಾಸಮುನಿಗೆ ಒಲಿದ ಕೃಷ್ಣನ ಸೋಸಿನಿಂದ ಪೂಜಿಸಿ ವ್ಯಾಸಸೂತ್ರ ಭಾಷ್ಯ ಉಪ ನ್ಯಾಸ ಮಾಡಿ ಮರೆವರ 2 ದೀನ ಜನರ ವೃಂದಕೆ ಸುರ ಧೇನು ಎನಿಪ ಮುನಿವರ ಶ್ರೀ ನರಹರಿಗೆ ತಾವು ಅನುಗರಾಗಿ ಇರುವರ 3
--------------
ಪ್ರದ್ಯುಮ್ನತೀರ್ಥರು
ವ್ಯರ್ಥವಾಗೊದÉೂ ಜನ್ಮ ಸಾರ್ಥಕಾಗದೊ ಭಕ್ತಿ ಭಾವದಿಂದ ಪುರುಷೋತ್ತಮನ ಪೂಜಿಸದ ಜನ್ಮ ಪ ಪರಮ ಶ್ರೇಷ್ಠಜನ್ಮದಿ ಬಂದು ಪರಮ ಭಕುತಿಯಿಂದಲೀಗ ಪರಮಾತ್ಮನ್ನ ಪಾದವ ಭಜಿಸದೆ ಪಾಮರನಾಗಿ ಕಳೆವೋ ಜನ್ಮ 1 ಲಕ್ಷ್ಯ ಇಟ್ಟಧೋಕ್ಷಜ ನಿನ್ನನುಗ್ರಹ ಅಪÉೀಕ್ಷಿಸದಲೆ ಲಕ್ಷ್ಮೀಪತಿಯ ಪಾದವನ್ನಲಕ್ಷ್ಯ ಮಾಡದವನ ಜನ್ಮ 2 ಕರ್ಮ ಕಳೆದು ಪಂಚಮುಖನ ಪ್ರಿಯನ ನಾಮ ಮುಂಚೆ ನೆನೆಯದವನ ಜನ್ಮ 3 ನಿತ್ಯ ನಿನ್ನ ನಾಮ ಬಿಟ್ಟನಿತ್ಯ ಮಾರ್ಗ ಹಿಡಿದು ಮುಂದೆ ಕೆಟ್ಟು ಹೋಗೋದಕ್ಕೆ ಒಡಂಬಟ್ಟು ಹರಿಯ ಬಿಟ್ಟ ಜನ್ಮ 4 ಏಸುಏಸು ಜನ್ಮದಲ್ಲಿ ಬ್ಯಾಸರದಲೆ ಸಲಹುತಿಹ ಭೀ- ಮೇಶ ಕೃಷ್ಣನಂಘ್ರಿಗಳನು ದರ್ಶನ ಮಾಡದವನ ಜನ್ಮ 5
--------------
ಹರಪನಹಳ್ಳಿಭೀಮವ್ವ
ವ್ಯರ್ಥವಾಯಿತೆನ್ನಿ ಜನ್ಮ ಸ್ವಾರ್ಥವಿಲ್ಲದೆ ಪರ ಕೃತ್ತಿ ವಾಸನ ಪೂಜೆಯನ್ನು ಮಾಡದೆ ಪ ಹಿಂದೆ ಜನನಿ ಗರ್ಭವಾಸದಿಂದ ಹೊರಟು ಬಂದ ಮೇಲೆ ಕೊಂದು ದಿವಸನಾನು ನಿಷ್ಠೆಯಿಂದ ಲಿರ್ದು ಆಗಮೋಕ್ತ ದಿಂದ ಶಿವಗೆ ಜಲದಿ ರುದ್ರದಿಂದ ಜಳಕ ಗೈದು ಶ್ರೀ ಗಂಧ ಪುಷ್ಪ ಪತ್ರೆಯಿಂದ ಪೂಜೆಯನ್ನು ಮಾಡದೆ 1 ಪುಣ್ಯನದಿಯು ಪುಣ್ಯಕ್ಷೇತ್ರ ಪುಣ್ಯ ಭೂಮಿಯಲ್ಲಿ ವಾಸ ಪುಣ್ಯಕಥೆಯು ಪುಣ್ಯತೀರ್ಥ ಸ್ನಾನವಿಲ್ಲದೆ ಪುಣ್ಯ ಮೂರ್ತಿಯಲ್ಲಿ ಧ್ಯಾನ ಪುಣ್ಯಪುರುಷರೊಡನೆ ಸಂಗ ಪುಣ್ಯ ಕಾಲದಲ್ಲಿ ಶಿವನ ಪೂಜೆಯನ್ನು ಮಾಡದೆ 2 ಮಂಡೆ ಜುಟ್ಟ ಸೂತ್ರವನ್ನು ಖಂಡಿಸಿರ್ದುಯತಿಎನುತ್ತ ದಂಡವನ್ನು ಧರಿಸಿ ಪೀತ ಕೌಶೇಯ ವಸನವನ್ನು ಪೊದ್ದು ಮೊಂಡತನದಿ ಸಕಲ ವಿಷಯ ಭೋಗವನು ಭೋಗಿಸುತ್ತ ಮಂಡೆ ಬೋಳನಾದರೇನು ಮನವ ಬÉೂೀಳಮಾಡದೆ 3 ಕಾಮಾರಿಯನ್ನು ಆಗಮೋಕ್ತದಿಂದ ಪೂಜೆಯನ್ನು ಮಾಡಿ ಘೋರಪಾತಕಂಗಳನು ಸುಟ್ಟುಸೂರೆಮಾಡದೆ 4 ಬೆಟ್ಟದೊಳಗನಂತ ವ್ಯಕ್ಷ ಹುಟ್ಟಿಮಡಿದ ವೊಲು ಜನ್ಮ ನಷ್ಟ ವಾಯ್ತು ವಿಧಿಯು ಬರೆದಿಟ್ಟ ದುರ್ಲಿಖಿತವೆಲ್ಲ ತುಟ್ಟಿಸಿತ್ತು ತಿಳಿದು ಶಿವನ ಮುಟ್ಟಿ ಪೂಜಿಸಾದರಿನ್ನು ಕೆಟ್ಟು ಹೋಗ ಬೇಡ ಲಕ್ಷ್ಮೀಪತಿಯ ಸ್ಮರಣೆಮಾಡದೆ 5
--------------
ಕವಿ ಪರಮದೇವದಾಸರು
ಶರಣುಹೊಕ್ಕೆನು ಕರುಣಾಂಬುಧಿಯೇ ಕಾಯೊ ಪ ಸುರಪುರ ನಿಲಯ ಲಕ್ಷ್ಮೀಪತಿಯೇ ಅ.ಪ ಪುಂಡುದಾನವರ ಶಿರವನೆ ಛೇದಿಸಿ ಮುಂ ದಿಂಡುದರಿದು ರಕ್ಕಸರ ಸಂಹರಿಸಿ ಖಂಡ ವಿಭೀಷಣಗುದ್ದಂಡಪದವಿಯ ಇತ್ತನೆಂದು 1 ಸುರಪನ ವರ ತನುಜನ ರಥದೊಳು ನಿಂದು ಕರುಣದಿಂದಲೆ ತುರಗವ ಪೊಡೆಯೆ ಕುರುಕುಲ ಚತುರ್ಬಲವ ಸಂಹರಿಸಿಯೆ ಉರಗಶರವು ಬರೆ ನರನ ಕಾಯ್ದನೆಂದು 2 ನರಮೃಗರೂಪಿನಲಿ ಹಿರಣ್ಯಕಶಿಪುವಿನ ಉರವ ಬಗೆದು ಶರಣನ ಪೊರೆಯೆ ಸುರಪುರವಾಸನೆ ಶ್ರೀಲಕ್ಷ್ಮೀ ಅರಸನೆ ದುರುಳ ನೆಗಳ ಕೊಂದು ಕರಿಯ ಕಾಯ್ದನೆಂದು 3
--------------
ಕವಿ ಲಕ್ಷ್ಮೀಶ
ಶಿವ ಶಿವ ನಿಮ್ಮ ನಾಮ ಅಡಿಗಡಿಗೆ ಬೇಕು ಪರಿಯಂತ ತಾನೊಂದೆ ಸಾಕು ಪ ಜಗವೆಲ್ಲ ಶಿವ ಮಯವು ಎಂದು ಕಾಣಲು ಬೇಕು ನಿಗಮ ದೂರನ ಹೃದಯ ದೊಳಗರಸಬೇಕು ಬಗೆಯರಿತು ಮಾನಸದಿ ಶಿವನ ಪೂಜಿಸಬೇಕು ನಿಗಮಾಗಮಸ್ತುತನ ಅಡಿಗೆರಗಬೇಕು 1 ಅನವರತ ಶಿವಮಂತ್ರವನು ಜಪಿಸುತಿರಬೇಕು ತನುಮನವ ವಸ್ತುವಿನೊಳಗಿರಿಸಬೇಕು ಘನ ಪರಂಜ್ಯೋತಿ ಸ್ವರೂಪವ ನರಿಯ ಬೇಕು ತನುಮಯ ಚಿದಂಬರನ ಕೂಡಬೇಕು 2 ನಾನು ನಾನೆಂದೆಂಬ ಹಮ್ಮ ಬಿಡಬೇಕು ಜ್ಞಾನಾಗ್ನಿಯಿಂದ ಜ್ಞಾನವನು ಸುಡುಲುಬೇಕು ಪವಮಾನ ಸುತ ಕೋಣೆ ಲಕ್ಷ್ಮೀಪತಿಯ ಕಡುಮಿತ್ರನಾದ ವನ ಪಾದವನು ಕೊಡಬೇಕು 3
--------------
ಕವಿ ಪರಮದೇವದಾಸರು
ಶ್ರವಣ ಮಂಗಳನೀವುದೊ ಎನ್ನ ಕರ್ಣಗಳಿಗಾ- ನಂದ ಕೊಡುವುದು ಶರಣ ಜನರಿಗೆ ಬಂದ ದುರಿತಗಳ್ಹರಣ ಮಾಡುವುದು 1 ಭರಣ ಭೂಷಿತನಾದ ಲಕ್ಷ್ಮೀರಮಣ ನೀಲಾ- ವರಣ ನಿನ್ನ ಝಣ ಝಣಂದಿಗೆ ನಾದ ನೂಪುರ ಚರಣಕ್ವಂದಿಸುವೆ 2 ಕಮಲನಾಳದಿ ಪುಟ್ಟಿದಾತನ ಜನನಿ ಪತಿ ಜಗಜ್ಜನಕ ನಿನ್ನ ವನಜಪಾದಕೆ ನಮಿಸುವೆನೊ ಈ ಮನವು ನಿನ್ನಲ್ಲಿ 3 ನಿಲಿಸಿದರೆ ನಾ ನಿನ್ನ ನಾಮವ ನೆನೆಸಿದರೆ ಫÀಲಫಲಿಸಿ ಬಾಹೋದು ಒಲಿಸುವನು ವೈಕುಂಠಪತಿ ನೀ ಮನಸು ಮಾಡುವರೆ 4 ಘನಮಹಿಮ ಗಾಂಧಾರಿ ಸುತರನು ಹನನ ಮಾಡಿದ ಪವನ ಪ್ರಿಯನೇ ಜನುಮ ಜನುಮದಿ ನಿನ್ನ ಬಿಡೆ ನಾ ಜಗದ ವಲ್ಲಭನೆ 5 ಪತಿ ನಿನ್ನ ಸುಂದರಾಂಗವನು ತೋರದಲೆ ಭವ ಭಂಗ ಬಿಡಸುವು- ದ್ಯಾತಕೋ ಶ್ರೀರಂಗ ಪೇಳಿನ್ನು 6 ಚಕ್ರದಂದದಿ ತಿರುಗೊ ಎನಮನ ಚಕ್ರಧಾರಿಯೆ ನಿನ್ನ ಕಾಣದೆ ಶಕ್ರಸುತನ ಸಖನೆ ದಯಮಾಡ್ಹಕ್ಕಿವಾಹನನೆ 7 ಅನ್ನದಾತನು ಇರಲುಕಾಣದೆ ಅನ್ಯರಿಗೆ ಬಾಯ್ತೆರೆಯಲ್ಯಾತಕೆ ಪನ್ನಗಾದ್ರಿಶಯನ ನೀ ಸಲಹೆನ್ನ ಶ್ರೀಹರಿಯೆ 8 ಸರ್ವಗುಣ ಸಂಪನ್ನ ಸರ್ವೋತ್ತಮನೆ ಸರ್ವ ವ್ಯಾಪಾರಗಳನು ಸರ್ವಕಾಲದಿ ನಡೆಸುತಿರುವ ಸರ್ವರಾಧಾರಿ 9 ವರಮಹಾಲಕ್ಷ್ಮೀಪತಿಯೆ ವಾರಣವರದ ನಿನ್ನ ಸುರ ವಿರಿಂಚನಾ ಹರನು ವೀಣಾ- ಪಾಣಿನಾರದ ಬರಿದೆ ನಮಿಸುವರೆ 10 ಪರಮ ಕರುಣಾಶರಧಿ ಎನ್ನ ದುರಿತಗಳ ನೀ ದೂರ ಮಾಡುವೆ ಬಿರುದು ನಿನ್ನದÀು ಬಿಡದೆ ಭೀಮೇಶಕೃಷ್ಣ ಸಲಹೆನ್ನ 11
--------------
ಹರಪನಹಳ್ಳಿಭೀಮವ್ವ
ಶ್ರೀಕಾಮಕೋಟಿ ಲಾವಣ್ಯಮೋಹನ ರೂಪಿನ ಶ್ರೀಕಾಂತ ಮಂಗಳ ಮೂರುತಿ ವರದೇವಾ ಪ ಶ್ರೀಮಣಿಮೌಳಿ ಮಸ್ತಕದ ಕಸ್ತುರಿಯ ಲ ಲಾಮವೆಸೆವ ವರ ಫಣಿಯಾ ಭ್ರೂಮಧ್ಯದೊಳೆಳೆವರೆಯಂತೊಪ್ಪುವ ನಾಮದ ಪಿರಿನೊಸಲಾ1 ತಾಮರಸಾಯತನೇತ್ರದಾನತಸು ಕ್ಷೇಮಾಂಕುರದ ನೋಟದ ಚಾಮೀಕರ ಕುಟ್ಮಲ ನಾಸಿಕದಭಿ ರಾಮ ಸುಮೌಕ್ತಿಕದಾ2 ಮಾ ಮನೋಹರ ಚುಬುಕಾಗ್ರದ ನವಪಲ್ಲ ವಾ ಮಿಳಿತಾಧರದ ಸೋಮವದನದೆಳನಗೆಯೂ ಪೊಳೆವಟ್ಟ ಕೌಮುದಿಯಾ ಸೊಗಸಿನಾ 3 ರಾಮಣೀಯಕವದನ ಮಕರಕುಂಡಲದ ಸು ರಾಮಯದ ಕದಪಿನ ಕಾಮನೀಯ ಕಂಬುಕಂಠದ ಸಿರಿತುಳ ಸೀ ಮಂದಾರಮಾಲೆಯ 4 ಜೀಮೂತ ಸವಿಯನೆ ರಂಜಿಪ ಸು ಶ್ಯಾಮಲ ರುಚಿರಾಂಗದ ಕಮಲ ಕಂಬು ನಿ ಸ್ಸೀಮ ಚಕ್ರಾಯುಧಂಗಳಾ 5 ಶ್ರೀಮೆರೆವುರದ ಶ್ರೀವತ್ಸಕೌಸ್ತುಭ ದಿ ವ್ಯಾಮೋದ ಗಂಧ ಲೇಪದ ಸೌಮಾನಜಂ ತಾಳ್ದುಪವೀತದ ಮಣಿ ಸ್ತೋಮಾಭರಣಂಗಳಾ 6 ಸಾಮಾಜಿಕರ ಸನ್ನಿಭ ರಂಜನದು ದ್ದಾಮ ಸುಬಾಹುಗಳಾ ನೇಮಿತಾಂಗದ ತೋಳಬಂದಿ ಕಂಕಣಮುಂ ಗೈಮುರಾರಿ ಮುದ್ರೆಯಾ 7 ಐಮೊಗದಹಿಯ ತೆರದ ಕರಕಮಲದ ಸೈಮಿರುಪಂಗುಲಿಗಳಾ ರೋಮಾವಳಿಯ ಪೊಳೆವ ಪೊಡೆವಲರ ಪಿ ತಾಮಹಮುದಿತ ನಾಭಿಯಾ 8 ಹೇಮಾಂಬರದಸಿಮಧ್ಯದ ಕಾಂಚೀ ಧಾಮದ ಕಟಿತಟದ ಪ್ರೇಮಿತ ಊರುಗಳ ಸಜಾನುಗಳ ಮುದದಿಂ ತಾಳ್ದ ವಾಮಜಂಫೆಯ ತೊಡರಿನ ಪೊಂಗೆಜ್ಜೆಗಳ9 ಭೂಮಿ ಪಾವನ ಗಂಗೆಯುದಿಸಿದುಂಗುಟದ ಯ ಶೋ ಮಹಿಮೆಯ ಚೆಲ್ವಿನಾ ಪ್ರೇಮದೊಳಾನತರಂ ಸಲಹುವ ಸುರಪುರ ಮ - ಹಾಮಾತೆ ಲಕ್ಷ್ಮೀಪತಿ ಪಾದಪದ್ಮದ 10
--------------
ಕವಿ ಲಕ್ಷ್ಮೀಶ
ಶ್ರೀನಿವಾಸಾರ್ಯರ ಶೃಂಗಾರ ಗುಣಂಗಳಆನೆಂತು ವರ್ಣಿಸುವೆನು ಪ ದಾನವಾಂತಕ ಹರಿಯ ಮಾನಸಾರ್ಚನೆ ಮಾಳ್ಪಮಾನಿಸಾ ವೇಷಧರರ ಇವರ ಅ.ಪ. ನಿರ್ಜರ ಪತಿಯ ಚಿತ್ತ ಸಂಪಾದಿಸುವರಮತ್ತು ಗಜವೆಂಬ ದುರ್ವಾದಿಗಳನೇ ಮುರಿದು ಹತ್ತು ದಿಕ್ಕಿಲಿ ಮೆರೆವರ ಇವರ 1 ಪಾದ ಅಂಗಾರ ಕರಮುಟ್ಟಿ ಪಾಲಿಸುತ್ತಿಹರ ||ವರ ಮಂತ್ರಾಕ್ಷತೆಯನ್ನಿತ್ತು ಮುದದಿಂದ ಪಾ-ಮರರನ್ನೆ ಪೊರೆವರ ಇವರ2 ಲಕ್ಷ್ಮೀಪತಿ ಶ್ರೀನಿವಾಸಾರ್ಯರೆಮ್ಮನು ಬಿಡದೆ ರಕ್ಷಿಸಲೆಂತೆಂಬೆನೊಅಕ್ಷರ ಪುರುಷ ಅಪ್ರಾಕೃತನ ತೋರಿ ಮದ ಮತ್ಸರವ ಬಿಡಿಸೆಂಬೆನೊ ||ಸೂಕ್ಷ್ಮಾಂಬರಧರ ಮೋಹನ ವಿಠಲನಈ ಕ್ಷಣದಿ ತೋರಿಸೆಂಬೆನೊ ನಾನು 3
--------------
ಮೋಹನದಾಸರು
ಸರ್ಪಭೂಷಣನ ಸುತನ ಭಕ್ತಿಯಿಂದ ಬಲಗೊಂಡು ಮತ್ತೆ ಅಜನಸತಿಯ ಪಾದಕ್ಕೆ ಎರಗುವೆ 1 ಎಲ್ಲ ದೇವತೆಗಳಿಗೆ ಎರಗಿ ಭಕ್ತಿಯಿಂದ ಲಕ್ಷ್ಮೀ- ವಲ್ಲಭನ ಕತೆಗಳ ವರ್ಣಿಸುವೆನು 2 ಸ್ವಾಮಿ ಶ್ರೀಕೃಷ್ಣನ ಪ್ರೇಮವನ್ನು ಪಡೆದ ಸು- ದಾಮನೆಂಬೊ ಭಕ್ತ ಬಡವ ಬ್ರಾಹ್ಮಣಿದ್ದನು 3 ಸ್ನಾನ ಹೋಮ ಜಪವಮಾಡಿ ನೇಮ ನಿಷ್ಠೆಲಿಂದ ಉಪ್ಪು ಕಾಲ ಕಳೆಯುತಿದ್ದನು 4 ಅಶನವಿಲ್ಲ ವಸನವಿಲ್ಲ ಹಸಿದ ಮಕ್ಕಳನ್ನು ನೋಡಿ ವ್ಯಸನದಿಂದ ಪತಿಯ ಪಾದಕ್ಕೆರಗಿ ನಿಂತಳು 5 ತಂದೆ ತಾಯಿಗಳ ಕಡೆಯ ಬಂಧು ಬಳಗ ಯಾರು ಹತ್ತಿ ದ್ಹೊಂದಿದವರುಯಿಲ್ಲೆ ನಿಮಗೆ ಎಂದು ನುಡಿದಳು 6 ಪತ್ನಿ ಮಾತು ಕೇಳಿ ಪರಮ ಭಕ್ತಿಯಿಂದ ನುಡಿದ ಧ- ರ್ಮಾರ್ಥ ಕಾಮ್ಯಗಳನೆ ಕೊಡುವೋ ಮೋಕ್ಷದಾಯಕ 7 ಆದಿಮೂರುತಿ ಕೃಷ್ಣ ಓದಿಕೊಂಡ ಗೆಳೆಯನೊಬ್ಬ ಮಾಧವನ ಬಿಟ್ಟು ಮತ್ತೊಬ್ಬರಿಲ್ಲವು8 ಆತನ ಕಂಡು ಬಂದರ್ಯಾತರ ದಾರಿದ್ರ್ಯ ನಮಗೆ ಪ್ರೀತಿಯಿಂದ ಹೋಗಿಬನ್ನಿರೆಂದು ನುಡಿದಳು 9 ವರಮಾಲಕ್ಷ್ಮಿ ಅರಸು ಕೃಷ್ಣನರಮನೆಗೆ ಪೋಗಲಿಕ್ಕೆ ನ- ದರ ಏನುವೊಯ್ಲೆ ನರಹರಿಗೆ ಎಂದನು 10 ಲಕ್ಕುಮೀಶನ್ನ ದರ್ಶನಕ್ಕೆ ಒಯ್ಯಲಿಕ್ಕೆ ಮೂರು ಮುಕ್ಕು ಅವಲಕ್ಕಿ ತಿರಿದು ತಂದುಕೊಟ್ಟಳು 11 ಅದನು ಗಂಟು ಕಟ್ಟಿ ತನ್ನ ಹೆಗಲಮ್ಯಾಲೆ ಇಟ್ಟುಕೊಂಡು ನ- ಗಧರನ್ನ ನಗರಕ್ಕಾಗ ಬರುತಲಿದ್ದನು 12 ಲಕ್ಷಣಾದ ಶಕುನವ ಆ ಕ್ಷಣದಿ ಕಂಡು ವಿಪ್ರ ಲಕ್ಷ್ಮೀಪತಿಯ ದಯವು ನಮಗೆ ಆಗೋದೆಂದನು 13 ಹಾದಿಲ್ಹರಿವೊ ಜಲವ ಕಂಡು ಸ್ನಾನವನ್ನು ಮಾಡಿಕೊಂಡು ವೇದ ಪುಸ್ತಕವ ಹಿಡಿದು ಓದಿಕೊಳುತಲಿ 14 ಮಲ್ಲೆ ಮಲ್ಲಿಗೆ ದವನ ಅಲ್ಲೆಯಿದ್ದ ಫಲಗಳು ಲಕ್ಷ್ಮೀ- ವಲ್ಲಭಗೆ ಅರ್ಪಿತವೆಂದು ನಡೆದನು 15 ಗೋಪುರವ ಕಂಡು ದ್ವಾರಕಾಪುರಕ್ಕೆ ಕೈಯಮುಗಿದು ಶ್ರೀಪತಿಯ ಬಾಗಿಲಲಿ ಬಂದು ನಿಂತನು 16 ದ್ವಾರದಲ್ಲಿ ನಿಂತವರು ದಾರುಯೆಂದ್ವಿಚಾರಿಸಲು ನಾರಾಯಣನ ಸಖನು ನಾನೆಂದ್ಹೇಳುತಿದ್ದನು 17 ನುಡಿದ ನುಡಿಯ ಕೇಳುತ ನಡೆದು ಬಂದು ಚಾರಕರು ಒಡೆಯ ನಿಮ್ಮ ಗೆಳೆಯನಂತೆ ಬಡವ ಬ್ರಾಹ್ಮಣ 18 ಹುಟ್ಟ ಮೊದಲೆ ಅನ್ನ ತನ್ನ ಹೊಟ್ಟೆಗುಂಡ ಮನುಜನಲ್ಲ ಗಟ್ಟಿಗಾಳಿ ಬರಲೀಗ್ಹಾರುವಂತೆ ತೋರುವ 19 ಅಸ್ಥಿ ಚರ್ಮ ಆತನಂಗಕ್ಹತ್ತಿಕೊಂಡ ಹೊಟ್ಟೆಬೆನ್ನು ಮತ್ತೆ ನಡೆಯಲಾರ ಮಾತನಾಡಲಾರನು 20 ಒಡೆದ ಗುಂಡುತಂಬಿಗೆ ಬಡಿದನದರ ಸುತ್ತ ಮ್ಯಾಣ ಹಿಡಿದ ಗಂಟ ಬಿಡದಲ್ಹೊತ್ತು ನಡೆದು ಬಂದನು 21 ಮರದ ಗುಂಡು ಸರದಗುದ್ದಿ ಕೊರಳೊಳಗೆ ಹಾಕಿಕೊಂಡು ಎರಳೆ ಚರ್ಮ ಸುತ್ತಿ ಎಡದ ಬಗಲಲ್ಲಿಟ್ಟನು22 ದೊಡ್ಡನಾಮ ಹಚ್ಚಿಕೊಂಡು ಮುದ್ರೆಮಯ್ಯಲೊತ್ತಿಕೊಂಡು ಶುದ್ಧ ಚಂದ್ರಮನ ಕಾಂತಿ ತೋರುತಿದ್ದನು 23 ಛಿದ್ರವಾದ ಬಟ್ಟೆನುಟ್ಟು ಚಿಗುರು ತುಳಸಿ ಕಿವಿಯಲ್ಲಿಟ್ಟು ಪದ್ಮನಾಭ ಪಾಲಿಸೆನುತ ಕೂಗುತಿದ್ದನು24 ನಾಮಾಂಕಿತÀವ ಕೇಳಲು ಸುದಾಮನೆಂದು ಹೇಳುವ ನಾನಾ ಪರಿಯಲ್ನಿಮ್ಮ ಸ್ತುತಿಯ ಮಾಡುತಿದ್ದನು 25 ಅಪ್ಪುಣಾದರಾತನ ಇತ್ತ ಕರೆದು ತಾವೆನೆನಲು ಭಕ್ತರೊಡೆಯ ಭಾಳ ಸಂಭ್ರಮದಿ ಎದ್ದನು 26 ಕರವ ಪಿಡಿದು ಕುಳ್ಳಿರಿಸಿ ದಿವ್ಯಾಸನದ ಮ್ಯಾಲೆ ತರಿಸಿ ಚಾಮರದ ಗಾಳಿ ಹಾಕುತಿದ್ದನು 27 ಪನ್ನೀರು ತಂದು ಪಾದತೊಳೆದು ದ್ರಾಕ್ಷಿ ಕಿತ್ತಳೆ- ಹಣ್ಣು ಎಳನೀರು ತಂದು ಮೆಲಲು ಕೊಟ್ಟನು 28 ಮದುವೆ ಆಯಿತೇನೊ ಸಖನೆ ಎಂದು ಕೇಳಿದ 29 ಸೋಳಸಾವಿರ ಸತಿಯರಾಳುವೊ ಶ್ರೀರಮಣ ಕೇಳೊ ರಾಣಿವೊಬ್ಬಳಿರುವೊಳಯ್ಯ ನಮಗೆಯೆಂದನು 30 ಇಷ್ಟುದಿವಸ ಇಲ್ಲಿಗೆ ಬಾರದಿದ್ದ ಕಾರಣೇನು ಚಿಕ್ಕಂದಿನ ಸ್ನೇಹವೆಲ್ಲ ಮರೆತ್ಯ ಎಂದನು 31 ಬರದಲಿದ್ದೆ ನಾನು ಪಾಮರನೂ ಆದಕಾರಣ ಕಳುಹಿಕೊಟ್ಟಳೆನ್ನ ಭಾರ್ಯಳೀಗ ಎಂದನು 32 ಅಣ್ಣ ನಮ್ಮತ್ತಿಗೆ ನಮಗೇನು ಕಳಿಸಿದಳು ನಿನ್ನ ಹೆಗಲ ಗಂಟು ಬಿಚ್ಚಿ ತೋರಿಸೆಂದನು 33 ವಿಪ್ರ ನಾಚಿ ನೆಲನ ನೋಡುತಿರಲು ಕೃಷ್ಣ ಸಲಿಗೆಲಿಂದ ಗಂಟನೆಳೆದು ಬಿಚ್ಚಿಸಿದನು 34 ಸುಜನ ಜನರು ಮಾಡುವಂಥ ಭಜನೆಯೊಂದೆ ಸಾಕುಯೆನೆಗೆ ಹೇಮ ರತ್ನಾಭರಣವ್ಯಾತಕೆಂದನು 35 ಕುಂದಣದ ಪಾತ್ರೆಯೊಳಗೆ ತಂದು ಸುರುವೆ ಪ್ರತಕವನ್ನು ಮಂದರೋದ್ಧರನು ಮುಷ್ಟಿ ತೆಗೆದುಕೊಂಡನು36 ಮುಷ್ಟ್ಟಿಗೊಂದು ಬಾರಿ ಶ್ರೀಕೃಷ್ಣ ತೆಗೆದು ಮೆಲ್ಲುತಿರಲು ಕಷ್ಟ ದಾರಿದ್ರ್ಯವೆಲ್ಲ ಹರಿದು ಹೋಯಿತು 37 ಎರಡನೇ ಮುಷ್ಟಿ ಪಾಲ್ಗಡಲಶಯನ ಮುಕ್ಕುತಿರಲು ಸಡ- ಸಡಗರ ವೈಕುಂಠಪದವಿ ಮುಕ್ತಿ ಆಯಿತು 38 ಮೂರನೇ ಮುಷ್ಟಿಗೆ ನಾರಿ ರುಕ್ಮಿಣಿ ಬಂದು ಕೃಷ್ಣಯೇನು ಕೊಡುವಿ ಕರವ ಪಿಡಿದಳು 39 ಭಾವನವರು ತಂದುಕೊಟ್ಟ ದೂರದ ಪದಾರ್ಥವನ್ನು ನೀವೆ ಸವಿಯ ನೋಡುವೋದು ದಾವ ನೀತಿಯು40 ಅಕ್ಕ ಕಳಿಸಿದ್ದು ಅವಲಕ್ಕಿ ನಮಗಿಲ್ಲದ್ಹಾಗೆ ಮುಕ್ಕಿ ಬಿಡುವರೇನೊ ಎಂದು ನÀಕ್ಕಳಾಗಲೆ41 ಇಷ್ಟು ಮಂದಿಯೊಳಗೆ ಎನ್ನ ಮುಷ್ಟಿ ಹಿಡಿದು ನಿಲ್ಲುವಂಥ ದಿಟ್ಟತನಗಳೆಲ್ಲ್ಲಿ ಕಲಿತೆ ಹೇಳೆಯೆಂದನು 42 ಚಿಕ್ಕ ಸತ್ಯಭಾಮೆ ನೋಡಿ ನಕ್ಕಾಳೆಂಬೊ ನಾಚಿಕಿಲ್ಲ ಮುಕ್ಕು ಅವಲಕ್ಕಿಗೆನ್ನ ಕÀರವ ಪಿಡಿವೋರೆ 43 ಸರ್ವರೊಳಗೆ ಅಧಿಕಳೆಂಬೊ ಗರುವಿನ ರುಕ್ಮಿಣಿಗೆ ಬುದ್ಧಿ ಕರೆದು ಹೇಳಬಾರೆ ಸತ್ಯಭಾಮೆಯೆಂದನು 44 ಎನ್ನ ಭಕ್ತರಲ್ಲಿ ಪ್ರೇಮ ನಿನಗೆ ಉಂಟಾದರೆ ಇನ್ನೂ ಒಂದು ಮುಕ್ಕು ನಿನಗೆ ಕೊಡುವೆನೆಂದನು45 ಅಕ್ಕಗಾಡೋ ಮಾತಕೇಳಿ ಚಿಕ್ಕ ಸತ್ಯಭಾಮೆ ತಾನು ಅಕ್ಕರದಿ ಬಂದು ಕೃಷ್ಣನೆದುರು ನಿಂತಳು 46 ರಂಗ ನಿನ್ನ ಪಟ್ಟದರ್ಧಾಂಗಿಯಾದ ರುಕ್ಮಿಣಿಗೆ ಮುಂಗೈ ಹಿಡಿವೋದಕ್ಕೆ ದಾರಭಯವೇನೆಂದಳು47 <ಈಔಓಖಿ ಜಿಚಿಛಿe='ಓuಜ
--------------
ಹರಪನಹಳ್ಳಿಭೀಮವ್ವ
ಸಾರಿ ಸಾರಿ ಹೇಳು ತೀನಿ ಕಡ್ಡಿ ಮುರಿದು ನಾನು ಬಾರಿ ಬಾರಿಗೆ ಸತ್ತು ಹುಟ್ಟತಲಿಹೆ ನೀನು ಪ ಇರುಳು ವಿಷಯದೊಳಗೆ ಮನವ ನಿರಿಸಿ ಮಡದಿ ಮಕ್ಕಳೆಂಬಲೆಯಲಿ ಪರಿಯನರಿಯದಿದು ಇನ ಸುತನ ದೂತರೊಡನೆ ಕೊಲಿಸಿ ಕೊಳದಿರು 1 ನೀನು ಹುಟ್ಟಿ ಬರುವ ಮುನ್ನ ಇವರಿಗೆಲ್ಲ ವಾಸವೆಲ್ಲಿ ನೀನದೆಲ್ಲಿ ನಟ್ಟನಡುವೆ ಬಂದ ಸಿರಿಯಿದು ಕಾನ ಕಪಿಗಳಂತೆ ನೆರೆದು ಮಡದಿ ಮಕ್ಕಳೆಂದು ಈಗ ಪ್ರಾಣವನ್ನು ತಿನಲು ಬಂದ ನರಿಗಳಿವದಿರು 2 ದಾರಿ ಹೋಕರಿವರು ನಿನ್ನ ಋಣವು ತೀರಿ ಹೋದ ಬಳಿಕ ಯಾರಿಗಾರು ಇಲ್ಲ ನಿನಗೆ ನೀನದಲ್ಲದೆ ವೈರಿ ಕೋಣೆಲಕ್ಷ್ಮೀಪತಿಯ ಸೇರಿ ನಾಮ ಸ್ಮರಣೆಯಿಂದ ಮುಕ್ತಿ ಪಡೆದಿರು 3
--------------
ಕವಿ ಪರಮದೇವದಾಸರು
ಸಿಕ್ಕದಿರು ನಾರಿಯರ ಕಡೆಗಣ್ಣಿಗೆ ಮನ ವಿಕ್ಕಿದರೆ ಇಹಪರದ ಗತಿ ಕೆಡಗು ನಿನಗೆ ಪ ಹೇಸದೇತಕೆ ಮನಸು ಪರದಾರ ಪರದ್ರವ್ಯ ದಾಸೆಯೊಳು ಹಗಲಿರುಳು ಕುದಿದು ಕುದಿದು ಘಾಸಿಯಾಗುತ ತೊಳಲಿ ಬಳಲಿ ಯಮನರಕದೊಳು ವಾಸವನು ಮಾಡದಿರು ಎಲೆ ಮೂಢ ಮನುಜ 1 ಮೊಲೆಯೆ ಮಾಂಸದ ಚೆಂಡು ಮೊಗವು ಶ್ಲೇಷ್ಮೆಯಗೂಡು ಬಳಸಿ ನೋಡಿದರಿದಕೆ ಹುರುಳಿಲ್ಲವೋ ಒಳ ಹೊರಗು ಹೊಲಸು ಹೆಬ್ಬಡಿಕೆಗಳು ವಸನದಲಿ ಬೆಳಗುವಳು ತಲೆ ತುರಿಸಿ ಸಿಲುಕದಿರು ಕಂಡ್ಯಮನುಜ 2 ವಿಧಿ ಲಿಖಿತ ಸರಿಗು ಇಹಪರ ಕೆಡಗು ಪರವಧುವಿನೊಳು ಮನವ ಹರಿಸಬೇಡ ತೊರೆದಿವರ ಮರುತಸುತ ಕೋಣೆ ಲಕ್ಷ್ಮೀಪತಿಯ ಸಾಯುಜ್ಯ ಪದವಿಯನು 3
--------------
ಕವಿ ಪರಮದೇವದಾಸರು