ಒಟ್ಟು 50 ಕಡೆಗಳಲ್ಲಿ , 22 ದಾಸರು , 50 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುರಂಜನೋಪಾಖ್ಯಾನ ಲಾವಣಿ ಗೆರಗಿ ಮಹೇಶ್ವರನಾ ಶಾರದೆಯ ಸರಸಿಜಸಂಭವನಾ | ಇಂದಿರೆ ಪರಮಭಕ್ತಿಯಲಿ ಪ್ರಾರ್ಥಿಸಿ ಸತ್ಕವಿ ಕರುಣಿಪುದು ಜ್ಞಾನ | ಚರಣಗಳಿಗೆ ಬಿನ್ನೈಸುವೆನಾ 1 ಯತಿಗಣಪ್ರಾಸೊಂದಾದರು ತಿಳಿಯದು ಮತಿಹೀನನು ನಾನು | ನಾನಾಚಮ- ತ್ಕøತಿಗಳರಿಯದವನು | ಆದರೀ ಕೃತಿಯಲಿ ತಪ್ಪೇನು | ಮತಿವಂತರಾಲಿಸುವುದು ನೀವಿದನು 2 ಒಂದರೊಳಗೆ ಎರಡಾಗಿ ಎರಡರೊಳು ಹೊಂದಿ ಮೂರ್ನಾಲ್ಕೈದಾಗಿ ಆರೇಳೆಂಟೊಂಬತ್ತುಗಳಾಗಿ | ಸಕಲದೊಳು ಹೊಂದಿರುವುದುತಾಗಿ ಕುಂದಿಲ್ಲದೆ ಇರುತಿರುವ ಮಹಾತ್ಮನ ರಂದವ ಚನ್ನಾಗಿ | ತಿಳಿದು ಸುಖ ತಂದವನೇಯೋಗಿ 3 ಮೊದಲು ಮಹತ್ ಸೃಷ್ಟಿಯಲಿ ಎಲ್ಲತ- ತ್ವದಲಿ ತೋರುತಿಹುದು ಬೇರೆಬೇರಾಗಿ ಕಾಣಿಸುವುದು ಅದುಭುತವಾಗಿಹ ಅನಾದಿ ಕರ್ಮತ್ರಿ- ವಿಧದಿ ಭಾದಿಸುವುದು | ಅದರೊಳು ಬಿ- ಡದೆ ತಾ ಮುತ್ತುವುದು ಎಂದಿಗು ನಿಜವತಿ ರಹಸ್ಯವಿದು 4 ಮೊಟ್ಟೆವೊಂದು ದಶಸಾವಿರವರುಷಗ ಳಿಟ್ಟು ಜಲದಿತಾನು | ಅದಕೆ ಕೈ- ಗೊಟ್ಟು ಎಬ್ಬಿಸಿದನು | ನಾನಾ ವಿಧ ವೆಷ್ಟಿ ಸಮಷ್ಟಿಗಳೆರಡೆಂದದರೊಳು ಗುಟ್ಟಂಗಡಿಸಿದನು | ಗುರಿಯಮಾ ಡಿಟ್ಟು ಚೇತನಗಳನು | ಅನೇಕವು ಪಟ್ಟಣ ರಚಿಸಿದನು 5 ಈ ಪಟ್ಟಣಕಾರ್ ಮಂದಿ ಇರುವರತಿ ಕಾಪಾಡುವರದರೊಳು ವ್ಯಾಪಾರಗಳನು | ಬಹುವಿಧಮಾಡುವ- ರಾಪುರ ಜನರುಗಳು | ಇವರುನಡೆ ಕೋಪಿಸೆ ಹಗಲಿರುಳು 6 ಎರಡು ಮಾರ್ಗದೊಳಿರುತಿಹರೆಲ್ಲರು ಹುರುಡಿಲ್ಲವುನೋಡೆ | ಗಜಿಬಿಜಿಯು ತರತರದಲಿಮಾಡೆ | ನಮಗಿದೆ ಸ್ಥಿರವೆನ್ನುತ ಕೂಡೆ | ಪರಿಪರಿ ಬಗೆಯಲಿ ಭೇದ ಪುಟ್ಟುವುದು ಕರೆಕರೆಯಂದುಡೆ | ವಳಗೆಕೆಲ ಬರುಹರುಷದಿ ನೋಡೆ | ಯುವಶೃಂ- ಗರುವು ಇದಕೆ ಈಡೆ 7 ಇದೆತನ್ನದೆನುತೋರ್ವಳು ಮಾನಿನಿ ಚದುರತನದಿ ಬಂದು | ಊರ ಮುಂದಿರುವ ವನದಿ ನಿಂದು | ಅವಳಿಗಿರು ವುದು ಜನ ಹನ್ನೊಂದು ಚದುರೆಯೈದುತಲೆ ಸರ್ಪವಾಡಿಸುತ ಜಾಣೆಯಿರುವಳಂದು | ತಾನೊಬ್ಬನ ಇಂದು | ಸುಖದೊಳಾ- ಳ್ಬೇಕುರಾಜ್ಯವೆಂದು 8 ಅರಸನೊಬ್ಬ ವಿಜ್ಞಾತನೆಂಬ ಭೂ- ಸುರನಸಹಿತನಾನಾ | ದೇಶಗಳ ತಿರುಗುತ ಉದ್ಯಾನ | ವನದಿಕಂ- ಡನು ಆತರುಣಿಯನ ಪರಮ ಮಿತ್ರನಹ ಬ್ರಾಹ್ಮಣನ ಮರೆತು ಹರುಷದಿ ಪೊಕ್ಕುವನ | ಸ್ಮರಶರಕೆ ತರಹರಿಸುತಲಿರೆ ಮನ | ಕೇಳಿದನು ನಗುತಲಿ ನಾರಿಯನ 9 ಯಾರೆ ಹುಡುಗಿ ನೀನ್ಯಾರೆ ನಿನ್ನ ಪೆಸ- ರೇನು ಪೇಳೆ ಹೆಣ್ಣೆ | ಮಾತನಾ- ಡೆಲೆ ತಾವರೆಗಣ್ಣೆ | ನಿನ್ನ ಮೈ- ಸುಲಿದ ಬಾಳೆಯ ಹಣ್ಣೆ ಯಾರದು ಈ ಜನ ಉರಗವೇನು ವನ- ವಾರದು ಶಶಿವದನೆ | ಈ ಪುರವ- ನಾಳುವನಾವವನೆ | ಒರ್ವಳಿ- ಲ್ಲಿರುವುದಕೇನ್ಹದನೆ 10 ಎನಲು ನಸುನಗುತವನಿತೆನುಡಿದಳೀ ಜನಗಳು ನನ್ನವರು | ಇಲ್ಲಿಕಾ- ಣುವ ಪುರ ನನ್ನೂರು | ಸರ್ಪನ- ನ್ನದು ಇದಕಿನ್ನಾರು | ಅರಸರಿಲ್ಲ ನಾನೊಬ್ಬಳಿರುವೆನೀ ವನದೊಳು ನೀನ್ಯಾರು | ನಿನ್ನಕಥೆ ವಿವರಿಸೆನಗೆ ತೋರು | ಯನ್ನ ಬಳಿ- ಗಿಷ್ಟವಿರಲುಸಾರು 11 ಎಲ್ಲಿ ನೋಡೆ ಸ್ಥಳವಿಲ್ಲವೆನಗೆ ನಿ- ನೆನ್ನ ಪುಷ್ಪಶರನು | ನೀನುಪೇ- ಪರಿ ವಲ್ಲಭನನು ಮಾಡಿಕೊ ಎನ್ನನು ಬಹು ಬಲ್ಲಿಯಳೆ ನೀನು | ನಿನ್ನಸರಿ ಚಲ್ವೆಯರಾರಿನ್ನು | ಇಬ್ಬ- ರಾಳ್ವೆಯೀವೂರನ್ನು 12 ಎನಲು ಹರುಷಗೊಂಡಾಕೆ ಸಮ್ಮತಿಸಿ ಜನವೆರಗಿತಂದು | ನುಡಿದಳಾಮೊಗದ- ಲಿನಗೆತಂದು | ನಿನ್ನಮೇಲ್ ಮನಸಾಯಿತುಯಿಂದು ನಿನ್ನನು ಮಾನವೇತಕಿಂದು | ಆಳು ಜನಸಹಿತ ಪುರವ ಮುಂದು ನೀನು ನಾನಿರುವೆವಾಗಿವಂದು 13 ಸರ್ವವನ್ನು ಭವದಿ ಆದರಿಸುತತತ್ಪುರ ಮಧ್ಯ | ದೊ ಳುಪ್ಪರಿಗೆಯೇರಿ ತ್ವರದಿ | ಸರ ಸಗಳನಾಡಿ | ಬಹುತರದಿ ಮುಳುಗಿ ಸಂಸಾರವೆಂಬಶರಧಿ 14 ಅನ್ನಪಾನಾಭರಣ ಕುಸುಮ ವಿನ್ನು ಗಂಧಧೂಪ | ತಾಂಬೂಲಗಳ ಮನ್ನಣೆಯಲಿ ಭೂಪ | ಪೊಂದಿದ ಸುಖ ವನು ನಾನಾರೂಪ | ನನ್ನದು ಎನ್ನುತಲಿ ಪ್ರತಾಪ | ಶಾಲಿತಾ- ರಾಜ್ಯವಾಳಿದನಾಗುತಭೂಪ 15 ದ್ವಾರಗಳೊಂಭತ್ತಾಪುರಕಿರುವುದು ಮೂರು ಪೂರ್ವದಲ್ಲಿ | ಮೇ- ಲೆರಡು ಕಿಟಕಿಗಳಿಹವಲ್ಲಿ | ಬಿಗಿಸಿ ಕಟ್ಟಿಹುದು ಕನ್ನಡಿಯಲಿ ತೋರುವುದುತ್ತರದಕ್ಷಿಣದೊಳೆರಡು ದ್ವಾರ ಪಶ್ಚಿಮದಲಿ ಕಾರಣವದರಲ್ಲಿ 16 ಮತ್ತದರೊಳಗಾರ್ಸುತ್ತು ಕೋಟೆ ಒಂ- ಬತ್ತು ಬಾಗಿಲ ಪುರದಿ | ಅನೇಕವು ಗೊತ್ತನಾವವಿಧವಿ | ಉತ್ತಮವಹಪುರದಿ | ಮುಖ್ಯವಾ- ಗಿರುವದೆರಡು ಬೀದಿ | ದೊರೆಯಮನೆ- ಯಿರುವುದು ವಿಸ್ತರದಿ17 ಇಂತರಮನೆಯಲಿ ದೊರೆ ಕಲಿಯಾಗುತ ಕಾಂತೆಯೊಡನೆ ಸೇರಿ | ಸದಾಸು- ಸ್ವಾಂತನಾಗಿಮೀರಿ | ಸೌಖ್ಯಹೊಂ- ದುತಲಾವೈಯ್ಯಾರಿ ನಿಂತರೆ ನಿಲುವನು ಕುಳಿತರೆ ಕೂಡುವ ಮಲಗಿದರೆ ನಾರಿ | ತಾನು ಮಲಗುವಯೇಕದಿ ಸೇರಿ | ಉಂಡ- ರುಣ್ಣುವನು ಅವಳನುಸಾರಿ 18 ಮನದಿಯೋಚಿಸದನೂ | ಈಗಲೆ ಮೃಗಯಾತ್ರೆಗೆತಾನೂ | ಸೊಗಸಿಂದ ಸೈನ್ಯವ ಕೂಡುತ ಪುಂ- ಚಪ್ರಸ್ಥವನವನು | ಪೊಕ್ಕು ಅ- ಲ್ಲಿರುವಮೃಗಗಳನ್ನು | ಹೊಡೆದು ಸಂ- ತೋಷದಿ ಸುಖಿಸುವೆನು 19 ಮೂರೆರಡು ಕುದುರೆಯೈದು ಮೇಲ್ ಮೂರು ಪತಾಕಿಗಳು | ಅ- ಚ್ಚೆರಡು ಎರಡು ಕೂಬರಗಳು | ಚಕ್ರ ವೆರಡುವರೂಥಗಳೇಳು ಆರಥಕೊಪ್ಪುವದೇ- ಕರಶ್ಮಿನಾಲ್ಕೊಂದು ವಿಕ್ರಮಗಳು | ಒಬ್ಬ ಸಾರಥಿ ಎರಡು ಗತಿಗಳು | ಬಿಗಿಸಿಹುದು ಕನಕಭೂಷಣಗಳು 20 ಪುರಂಜನ ಭೂ- ಕಾಂತಕರದಿ ಧನುವ | ಪಿಡಿದುಸು- ಸ್ವಾಮತದಿಂದಲನುವಾ | ಗಿಬಹ ಹನ್ನೊಂ- ದು ತನ್ನ ಜನನ | ಸಂತಸದಲಿ ಕೂ- ಡುತ ಹೊರಡುತ ತಾ ಪೊಕ್ಕನು ಕಾನನವಾ | ಶರಗಳಿಂ- ದ್ಹೊಡದು ಮೃಗನಿವಹವಾ | ಮೇರೆಯಿಲ್ಲ- ದೆ ತಟ್ಟುತ ಭುಜವಾ 21 ಇನಿತು ಬೇಟೆಯಾಡುವ ಕಾಲದಿ ತನ್ನ ಮನದಿ ನೆನೆದು ಸತಿಯಾ | ತಕ್ಷಣವೇ ಬಂದು ಸೇರಿ ಮನೆಯ | ಕಾಣದೆ ಹುಡುಕಿದನು ಯುವತಿಯ ಮಂಚದೊಳಿಹ ಸತಿಯ | ಕಂಡುಲಾ- ಲಿಸುತ ಚಮತ್ಕøತಿಯಾ | ನುಡಿಯಲುಪ- ಚರಿಸಿದನಾಕಾಂತೆಯ 22 ನೂರುವರುಷವೀರೀತಿಯವಳೊಡನೆ ನೂರುಹನ್ನೊಂದು ಮಕ್ಕಳನ್ನು | ಪಡೆದು ಸಂ- ಸಾರದಿ ಕಾಲವನು | ಯಾರೆ- ಮೀರಿ ಹೋದುದಿನ್ನು | ಮೊಮ್ಮಕ್ಕಳ ಪಡೆದನನೇಕರನು ದೇಶತುಂಬಿಸಿದ ತನ್ನ | ವರನು 23 ಉತ್ತರ ದಕ್ಷಿಣ ಪಾಂಚಾಲಗಳಾ ಳುತ್ತಲಿವನು ತನ್ನ | ಸುತರಬೆರೆ- ಯುತ್ತಸದಾ ಚಿನ್ನ | ಬೆಳ್ಳಿ ನವ- ರತ್ನರಾಶಿಗಳನಾ | ಮತ್ತೆ ಮತ್ತೆ ಕೂಡಿ- ಸುತೈಶ್ವರ್ಯದಿ ಮತ್ತನಾ | ಗುತಲನ್ಯಾ ಚಿಂತೆಯಿಲ್ಲದೆ ನಾ | ಬಲು ಪುಣ್ಯವಂತನೆ | ನ್ನುತ್ತತಿಳಿದಿರುವನಾ 24 ಚಂಡವೇಗವೆಂಬುವರಾ ತಮ್ಮತಮ್ಮ ಹೆಂಡಿರುಗಳು ತಾವು | ಸೇರಿಮು- ನ್ನೂರರವತ್ತು ಜನವು | ಗಂಧರ್ವರು ಬಂಡೆಬ್ಬಿಸಿ ಪುರವು | ದಂಡು ಮುಂದಾಗೆ ರಿಪುಬಲವು | ಕ್ಷೀಣಗತಿ ಹೊಂದುತಲಿರೆ ಪುರವು 25 ಸ್ತ್ರೀಜಿತನಾಗಿಹಕಾರಣದಲಿಯಾ ರಾಜಪುರಂಜನಗೆ | ಯತ್ನವಿ- ಲ್ಲದೆ ತನ್ನಯಪುರಿಗೆ | ಕೇಡುಬಂ- ದರು ತೋರದು ಕೊನೆಗೆ | ಶೋಕದಿ ಮನದೊಳಗೆ | ಮಿ ಡುಕುತಲಿರಲಾನೃಪತಿಮೇಗೆ | ಮತ್ತು ಶತ್ರುಗಳುನೆರೆಯೆ ಹೀಗೆ 26 ಯವನೇಶ್ವರನೊಬ್ಬನುಭಯಪ್ರಜ್ವಾ ರಾದಿ ಸೈನಿಕರನು | ಕಾಲಕನ್ಯಾಖ್ಯ ಯುವತಿಯನ್ನು | ಕರೆದುಕೊಂ- ಡೀಪುರವ ಸೇರಿದನು | ಬವರದಿ ಗೆದ್ದನು ಭವಿಸಿದನಾ ಕನ್ಯಾಮಣಿಪಟ್ಣವನು | ಭೋಗಿಸಿದ- ಳಾಪ್ರಜ್ವಾರನನು | ಸುಡಲುಪುರಿ ಕಂಡು ಪುರಂಜನನು 27 ಕಾಲಕನ್ಯೆ ತಾ ಲೀಲೆಯಿಂದಲಿ ನೃ- ಪಾಲನ ಹತ್ತಿಗೆಯಾ | ಪಿಡಿಯೆ ಹಾ- ಹಾಯೆನಲಾರಾಯಾ | ಅಬಲತೋ- ರದು ಮುಂದೆ ಉಪಾಯ | ಬಾಲಕರನು ಪತ್ನಿಯ | ನುಕೂಗಿಬಿಡು-
--------------
ಗುರುರಾಮವಿಠಲ
ಭಯ ನಿವಾರಣ ಸುಳಾದಿ ನಾಕೇಶ ದೇವತತಿ ಆ ಕಮಲನಾಭ ಯತಿ ನಿಕರಗೊಲಿದನೆ ಶ್ರೀಕರವದನ ಸರ್ವಲೋಕಕಧಿಪ ಕೃಪಾ- ಲೋಕನದಲಿ ನೋಡಿ ಸುಖತೀರ್ಥನುತ ಚರಣ ವ್ಯಾಕುಲ ಬಿಡಿಸಿ ನಿನ್ನಾನೇಕ ಮಹಿಮೆ ತಿಳಿಸಿ ಜೋಕೆಯಿಂ ಕಾಯ್ದ ಗುರು ಆಕಾರಂತರ್ಯಾಮಿ ಈ ಕಾಲದಲಿ ಮನ ವ್ಯಾಕುಲಪಡಿಸುವ ಕಾಕು ಭಯವ ಬಿಡಿಸಿ ನೀ ಕಾಯಬೇಕೊ ದೇವ ಲೋಕ ಲೋಕಾದಿಗಳ ಸಾಕುವ ಭಾರಕರ್ತ ಆ ಕಮಲಭವನಭಯ ವ್ಯಾಕುಲ ಬಿಡಿಸಿದೆ ಲೋಕ ಸೃಷ್ಟಿಪ ಶಕ್ತಿ ಏಕಚಿತ್ತವ ಕೊಟ್ಟು ಲೋಕಲೋಕಾಧಿಪರ ನೀ ಕಾಯ್ದೆ ಕರುಣದಿ ಲೋಕವೆಲ್ಲವ ಕೊನೆಗೆ ಏಕಾಪೋಶನಗೈವ ಲೋಕಪತಿಯೆ ಭಕ್ತಾನೀಕಕÀಭಯದಾತ ಭೀಕರ ಬೆನ್ಹತ್ತಿ ತಾಕಿದ ಮನಸಿನ ವ್ಯಾಕುಲ ಭಯಬಿಡಿಸಿ ಜೋಕೆಯಿಂದಲಿ ಕಾಯೊ ಗೋಕುಲಾಂಬುಧಿ ಚಂದ್ರ ಗೋಪಾಲಕೃಷ್ಣವಿಠ್ಠಲ ಈ ಕಾಲಕೊದಗೆ ನಿನ್ನಾನೇಕ ಕೀರ್ತಿಯು ನಿಜವೋ 1 ಭಯ ನಿವಾರಕದೇವ ಭಕ್ತವತ್ಸಲ ನೀನೆ ದಯಮಾಡು ಮನಸಿನಲಿ ತಗುಲಿದ ಭಯವನೆ ಬಿಡಿಸಿ ಭಯಪಡಿಸುತಿರೆ ಖಳನು ಬಾಲಕನ ಪ್ರತಿದಿನದಿ ನಯವಿನಯದಿ ಕಂದ ನಿನ್ನನು ಮೊರೆಯಿಡೆ ಕೇಳಿ ದಯಮಾಡುತ ತರಳನಲಿ ಕನಲುತ ದೈತ್ಯನ ಕೊಂದು ಭಯ ಬಿಡಿಸಿದೆ ಬಾಲಕಗೆ ಭಕ್ತವತ್ಸಲ ನೃಹರೆ ಅಯೋನಿಜೆ ದ್ರೌಪದಿಗೊದಗಿದ ಅನುತಾಪಗಳನೆಲ್ಲ ದಯದಲ್ಲಿ ಪರಿಹರಿಸಿದ ಆಪದ್ಭಾಂಧವ ಸ್ವಾಮಿ ಭಯಪಡಿಸುತ ಭಸ್ಮಾಸುರ ಮೃತ್ಯುವಿನಂದದಿ ಮೃತ್ಯುಂ ಜಯನನು ಬೆನ್ನಟ್ಟಿ ಬರೆ ಹರನು ನಿನ್ನನು ಮೊರೆಹೋಗಲು ಸಂತೈಸಿ ತರುಣಿಯ ರೂಪದಿ ಖಳನ ಕೈಯಿಂದಲೆ ಅವನ ಶಿರ ಉರಿಸುತ ಶಿವನನು ಪೊರೆದೆ ಭಯಹಾರಕ ನರಹರೆ ಶ್ರೀ ಗೋಪಾಲಕೃಷ್ಣವಿಠ್ಠಲ ಜಯವಲ್ಲದೆ ದಾಸರಿಗೆ ಭಯವುಂಟೆ ಪೇಳೋ 2 ನಿತ್ಯ ನಿನ್ನನು ನಂಬಿ ಚಿತ್ತದಿ ನೆನೆವಂಥ ಆಪ್ತವರ್ಗಕೆ ಇನ್ನು ಮೃತ್ಯು ಭಯವು ಉಂಟಿ ಆಪ್ತನಲ್ಲವೆ ನೀನು ಚಿತ್ತಕಂಟಿದ ಭಯ ಮೃತ್ಯು ಪರಿಹರಿಸೈಯ್ಯ ಎತ್ತ ನೋಡಲು ನಿನ್ನ ವ್ಯಾಪ್ತಿ ಸುತ್ತಿರೆ ಜಗದಿ ಮೃತ್ಯುವೆತ್ತಣದೊ ನಿನ್ನುತ್ತಮ ಭಕ್ತರಿಗೆ ಇತ್ತ ದೇಹವು ನಿಂದು ಚಿತ್ತಾದಿಂದ್ರಿಯ ನಿಂದು ನಿತ್ಯ ನಡೆವ ಜೀವಕೃತ್ಯವು ನಿನದೈಯ್ಯ ಸುತ್ತುವೊ ಗ್ರಹಗತಿ ಮೃತ್ಯು ಪರಿವಾರವೆಲ್ಲ ಭೃತ್ಯರಲ್ಲವೆ ನಿನ್ನ ಚಿತ್ತಕ್ಕೆದುರಾಗುವರೆ ಭೃತ್ಯತ್ವದಲ್ಲಿರೆ ಎತ್ತಣ ಭಯವೈಯ್ಯ ಹತ್ತಿಕಾಡುವ ದುಷ್ಟಗ್ರಹಗಳ ಕಡೆಗೆ ನೂಕಿ ಚಿತ್ತ ನಿರ್ಮಲವಿತ್ತು ಮತ್ತೆ ಮಂಗಳವಿತ್ತು ನಿತ್ಯ ಕಾಯಲಿಬೇಕೊ ನಿನ್ನ ಸೇವೆಯನಿತ್ತು ಮೃತ್ಯು ಮೃತ್ಯುವೆ ಮಹಾದೈತ್ಯ ಸಂಹರಣನೆ ಚಿತ್ತದಲ್ಲಿ ನೀನು ಆಪ್ತನಾಗಿರೆ ಬೇರೆ ಹತ್ತಿಕಾಡುವ ಗ್ರಹ ಹತ್ತಿರ ಬರಲುಂಟೆ ಸಿರಿ ಗೋಪಾಲಕೃಷ್ಣವಿಠ್ಠಲ ಹತ್ತಿದ ಮೃತ್ಯು ಭಯ ಕಿತ್ತಿ ಬಿಸುಟು ಕಾಯೊ 3 ವಾಸುದೇವನೆ ನಿನ್ನ ದಾಸನ ಕಾಯುವಂಥ ಈಶನಲ್ಲವೆ ಜೀವರಾಶಿಗಳಿಗೆ ಬಿಂಬ ಸುಷುಪ್ತಿಯಲ್ಲಿ ಕಾವ ಆತ್ಮ ಆನಂದರೂಪ ತಾಸು ತಾಸಿಗೆ ಬಂದ ಭಯವ ಬಿಡಿಸುವದರಿದೆ ದಾಶರಥಿಯೆ ನಿನ್ನ ಅನುಜನ ಜೀವಭಯ ದಾಸ ಹನುಮನಿಂದ ಗಿರಿತರಿಸಿ ಹರಿಸಿದೆ ಆ ಸುಗ್ರೀವನ ಮೊರೆ ಕೇಳಿ ಅಭಯವಿತ್ತು ತೋಷದಿಂದಲಿ ಒಲಿದು ರಾಜ್ಯ ಸುಖವನಿತ್ತೆ ವಾಸವ ಮೊರೆಯಿಡೆ ಒಲಿದು ಅಮೃತವಿತ್ತು ಘಾಸಿಗೊಳಿಪ ಮೃತ್ಯುದೈತ್ಯರ ಸದೆಬಡಿದೆ ನಾಶರಹಿತ ನೃಹರಿ ಗೋಪಾಲಕೃಷ್ಣವಿಠ್ಠಲ ನಾಶದ ಭಯ ಉಂಟೆ ನಿನ್ನ ನಂಬಿದವರಿಗೆ 4 ತರಳತ್ವದಲಿ ಭಯವು ವರ ಯೌವ್ವನದಲಿ ಭಯವು ಜರೆ ಮರಣದಲಿ ಭಯವು ಪರಿಪರಿ ರೋಗದ ಭಯವು ಆರೆಘಳಿಗೆಯು ಬರದಂತೆ ಹರಿ ನೀ ಪರಿಹರಿಸುತಲಿ ಪರತರ ನಿನ್ನಯ ಮಂಗಳ ಚರಿತೆಯ ಸ್ಮರಣೆಯನಿತ್ತು ಹರಿಭಕ್ತರ ಕಾಯುವುದು ಬಿರುದಲ್ಲವೆ ನಿನಗಿನ್ನು ಪರಿಪರಿ ಭಯ ಕ್ಲೇಶಗಳ ಪರಿಹರ ಮಾಡುತ ಕಾಯೊ ವರಯಂತ್ರ ಮಂತ್ರಗಳು ಪರಿಪರಿ ಜಪ ಹೋಮಗಳು ತರತರದೌಷಧ ಪಥ್ಯ ನರಹರಿ ಎಲ್ಲವು ನೀನೆ ಹೊರಗೊಳಗೆಡಬಲದಲ್ಲಿ | ಮರೆವು ಸ್ಮರಣೆಗಳಲ್ಲಿ ಪರಿಪರಿ ಕ್ರೀಡೆಗಳಲ್ಲಿ ಚರಿಸುವ ಕರ್ಮಗಳಲ್ಲಿ ನೆರೆದಿಹ ಜನವೃಂದದಲಿ ಹಗಲಿರುಳು ಸಂಧಿಯಲಿ ಪರಿಪರಿ ಕಾಲಗಳಲ್ಲಿ ಪರಿಪರಿ ದೇಶಗಳಲ್ಲಿ ನರಹರಿ ದುರ್ಗಾಸಹಿತ ವರ ಮೃತ್ಯುಂಜಯ ವರದ ಸಿರಿಭಾರತಿಪತಿಸಹಿತ ಚರಿಸುತ ಬೆಂಬಿಡದಲೆ ನೀ ನಿರುತದಿ ಕಾಯಲಿಬೇಕೊ ಬರಿದನು ಮಾಡದೆ ಸ್ತುತಿಯ ವರ ಸುದರ್ಶನ ಪಾಂಚಜನ್ಯ ಪದ್ಮವ ಪಿಡಿದ ಪರಮ ಮಂಗಳರೂಪ ದೈತ್ಯರಿಗತಿ ಘೋರ ಗುರುಬಿಂಬನೆ ನೀನೆಂದು ಪರಿಪರಿ ಪ್ರಾರ್ಥಿಪೆನಿನ್ನು ಕೊರಗಿಸದಲೆ ಮನವನ್ನು ಹರಿ ಸೌಭಾಗ್ಯವನಿತ್ತು ಕರೆಕರೆಗೊಳಿಸದೆ ಕಾಯೊ ಕರುಣಾಬ್ಧಿಯೆ ದಾಸರನು ವರಭಾಗ್ಯವು ಆಯಸ್ಸು ಆರೋಗ್ಯಂಗಳೂ ಎಲ್ಲ ನಿರುತವಿರಲಿ ಬೇಕೊ ನಿನ್ನವರಿಗೆ ಸಾಧನಕೆ ಕರುಣಾಕರ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಿಸಿದ ಮಾತ್ರದಿ ಸಕಲ ಭಯ ಪರಿಹಾರಕವೋ 5 ಜತೆ ನಿತ್ಯ ಮಂಗಳ ನಿನ್ನ ಸ್ಮರಿಪರ ಮನದ ಭಯವ ಕಿತ್ತು ಬಿಸುಟು ಸಲಹೋ ಗೋಪಾಲವಿಠ್ಠಲ
--------------
ಅಂಬಾಬಾಯಿ
ಭೀಮಸೇನನ ಸ್ತ್ರೀವೇಷ ಭೀಮನು ಸರ್ವಜನಾ ಮೋಹಿಸುವಂಥಕಾಮಿನಿ ರೂಪವ ತೊಟ್ಟನು ಪ ಸೋಮ ಸಮಾನನ ತಾಮರಸಾಂಬಕಹೇಮಾಂಬರ ಕಂಠೀಮಣಿ ಗಣ ಸು -ತ್ರಾಮ ಕಾಮಿನಿಯಾ ಮೋಹಿಪ ಅಬಿ -ರಾಮರೂಪ ನಿಸ್ಸೀಮ ಬಲಾಢ್ಯ ಅ.ಪ. ಬಟಕುಚಪಟ ಕರಪುಟದಿಂದ ಹಿಗ್ಗಿಸಿ ತೀಡುತ ಅಂ-ಗುಟ ತುದಿಲೆಳೆದೆಳೆದುಟಿ ರಕ್ತಿಮೆಯನು ನೋಡುತಕುಟಿಲಾಳಕನ್ಯಾವರಿಸುತ ಪಟುಮಾತಾಡುತವಿಟರಿಗೆ ಸ್ಮರಸಂಕಟವನು ಹೃದಯದಲೂಡುತ ಪುಟ್ಟಚಂಡ ಹಾರಿಸಿ ನಟನೆ ಮಾಡುವಾ -ರ್ಭಟಕಂಜಿಹ ವಿಟಪಟಲ ಹಾಂಗಿರಲದುವಟುರಿದ್ದರು ಯತಿ ಮಠಮಂದಿರ ಲಂ -ಪಟವ ಬಿಟ್ಟ ಮಿಟಿಮಿಟಿ ನೋಡುವರೋ 1 ಕರಿಕಲಭಗಮನ ಸೊರಗಿದ ಕಟಿಕಂಠೀರವುವಿಠಲ ನಯನಜತ ಎರಳೆಗಳ್ ಮನೆಯನು ಸೇರವುಸರಸ ಸ್ವರದಿಂದ ಪರಿಭ್ರಮಿಸಿತು ಕಲಕಿರವುಸುರನರವರ ಸುಂದರಿಯರ ಚಲುವಿಕೆ ಮಾರವು ಹೆರಳ್ ಬಂಗಾರವು ಮಲ್ಲಿಗೆ ಸರಗೀ ಸರಹರಳ್ ಕಂಕಣ ಬಳೆ ಸರಳ್ ಬೆರಳುಂಗುರಅರಳ್ ಮಲ್ಲಿಗೆ ಸರ ಕೊರಳ್ ಗಂಧವ ಕಂಡುಮರುಳ್‍ಗೊರಡ ಜನ ಹಗಲಿರುಳು ಧೇನಿಪರೊ 2 ಮೃಗಮದತಿಲಕವು ಮುಗುಳ್ ನಗೆಮೊಗ ಬಿಂಬಾಧರಖಗಯುಗದಂದದಿ ಝಗಝಗಿಸುತಿಹ ಪಯೋಧರಅಘಹರ ರಾಜಗೋಪಗ ಸಖ ಪಾರ್ಥ ಸಹೋದರಬಗೆ ಬಗೆಯಲಿ ಮನದಗ ಅಘಹರನ ಕೃತಾದರಮುಗುಳ್ ಮಲ್ಲಿಗೆ ಸರ ತೆಗೆತೆಗೆದ್ಹಾಕುತಸೊಗಸು ಸುಗುಣರೂಪ ತಗುಬುಗಿಲೆನುತಿರೆಜಗದ ಜನರ ಮನ ಭುಗಿಭುಗಿಲೆನುತಿರೆಬಗೆ ಬಗೆಯಲಿ ಒಂದ್ಹಗಲ್ಯುಗವಾಗೆ 3
--------------
ರಾಜಗೋಪಾಲದಾಸರು
ಭುವನ ತ್ರಾಣ ಸದ್ಭವ ಪ್ರವೀಣ ಪ ಶ್ಲೋಕ : ಹೀನಾಹೀನ ವಿವೇಕವಿಲ್ಲದೆಸೆವಾ | ನಾನಾ ವಿಧ ಪ್ರಾಣಿ ಭ | ಜ್ಞಾನಾ ಜ್ಞಾನ ತ್ರಿಕಾಖಿಳ ಕ್ರಿಯೆಗಳು | ಹೇ ನಾಥ ನಿನ್ನಿಂದಲಿ || ನಾನಾ ರೂಪ ವಿಶಿಷ್ಟನಾದಿ ರಿಪುಸ್ಸೇನೇಯ ಸಂಹರಿಸಿದೆ1 ಪದ: ಏನ ಹೇಳಲಿ ನಿಜ ಸಂಶಯ ಜನರಾಸೆಯ | ಉದ್ಧರಿಸುವ ಬಗೆಯಾ ಜ್ಞಾನ ಭಕುತಿ ವಿರಕ್ತಿಯಾ | ಕೋಟಿ ಮುಕ್ತಿಯಾ | ನೀ ಕೊಡುವಿ ಕಾಣಯ್ಯಾ | ಶ್ರೀ ನಾರಸಿಂಹನ ಪದಾಶ್ರಯಾ ಗುಣ ಸಂಚಯ | ಮಾಡೊ ಎನ್ನಲ್ಲಿ ದಯಾ | ಮಾಡಿದೆನಯ್ಯಾ | ಮುಂದೇನೋ ಉಪಾಯ 2 ಶ್ಲೋಕ: ನೀನೊಬ್ಬಾನಲ್ಲದಾವ ದೇವತೆಗಳು | ದಾವಂಗೆ ಬಿಟ್ಟೀರ್ವರು | ಜೀವಾತ್ಮಗೆ ಪೇಳ್ವಿರೊ || ಶ್ರೀ ವತ್ಯಾಂಕÀನ ಆಜ್ಞೆಯಿಂದ ತನು ಬಿಟ್ಟಾವ್ಯಾಳಿಗೆ ಪೋಪಿಯೋ | ಪದ: ಕಂಸಾರಿ ಚರಣವ ಭಜಿಸದೆ | ನಿನ್ನ ನೆನೆಯದೇ | ನಾ ಭ್ರಮಿಸಿದೆ ಬುದ್ಧಿಸಾಲದೇ || ಬಹು ಪಾಮರನಾದೆ | ಸಂಶಯ ಬಿಟ್ಟಿನ್ನು ತಪ್ಪದೇ | ನಿನ್ನ ನಂಬಿದೆ | ಇನ್ನು ಬಿಡುವುದು ಚಂದೇ | ಸಂಸಾರದಲ್ಲಿ ಪದೇ ಪದೇ ದುಃಖಪಡಿಸದೆ | ಉದ್ಧರಿಸೆನ್ನ ತಂದೆ 2 ಶ್ಲೋಕ : ಶ್ರೀಶ ಪ್ರೀತಿಗೆ ಕೀಶನಾದೆ ರವಿಯ | ಗ್ರಾಸಕ್ಕೆ ಬೆನ್ನಟ್ಟಿದೆ | ಈಶಾಧೀಶರು ಆತಗಾಗಿ ನಿನಗೆ | ಕಾಶರಭವನ್ಹಾಕಲು || ಲೇಶಾಯಾಸವು ಆಗಲಿಲ್ಲ ನಿನಗೆ ಶ್ವಾಸಾ ಬಿಡದಾಯಿತೋ | ಆಶಾಪಾಶ ಸಮಸ್ತ ಮೂರುಜಗಕೇ | ಆ ಶಕ್ತಿ ಅತ್ಯದ್ಭುತ 3 ಪದ: ವನಧಿ ಲಂಕಾಪುರವ ನೈದಿದೀ|| ಅಂಜದೆ ಸೀತೆಯಾ ನೋಡಿದಿ | ಮಾತನಾಡಿದಿ | ಚೂಡಾರತ್ನವ ಪಿಡಿದಿ | ಬಂಧಿಸಿ ಮನವ ಸಂಚರಿಸಿದಿ | ಆರ್ಭಟಿಸಿ | ರಕ್ಕಸರ ಸೀಳಿದಿ 3 ಶ್ಲೋಕ : ಕನ್ಯಾ ದೇಶನ ಕಂಡು ಅವನ ಪುರವ | ಹವ್ಯಾದಗೆ ಅರ್ಪಿಸೀ | ಅವ್ಯಾಷ್ಟಾಯೆಂದ ವಿಭೀಷಣಾಲಯವನು | ಅವ್ಯಸ್ತ ನಿರೀಕ್ಷಿಸಿ || ರಘುರಾಮರ ದಿವ್ಯಾಂಘ್ರಿಗೇ ವೊಂದಿಸೀ ಸೇವ್ಯ ನಿಜ ಕೃತ್ಯ ಅರ್ಪಿಸಿದೆಯೊ | ಅವ್ಯಾಜ ಭಕ್ತಾಗ್ರಣೇ 4 ಪದ: ಯೋಗ್ಯವ | ಬದಲು ಕಾಣದೆ ದೇವಾ ಸದ್ಭಾವ | ನೋಡಿ | ಗಂಧಮಾದನವ | ಭವ | ಮೊರೆ ಐದಿವರವ 4 ಶ್ಲೋಕ : ಸಂತುಷ್ಟನಾಗಿ ಸ್ವಯಂ | ನಿಂತ್ಹಾಂಗೆ ನೀ ಹುಟ್ಟಿದಿ | ಸಂತಾಪಪ್ರದನಾಗಿ ದುಷ್ಟ ಮಣಿನ್ಮುಂತಾದ ದೈತ್ಯಾಘಕೇ | ಪದ: ಭೀಮಾಸೇನನೆಂಬುವರು | ಧೃತರಾಷ್ಟ್ರನ್ನ ಸುತರು | ಭೀಮನ್ನ ಕೊಲ್ಲಬೇಕೆಂಬೋರು | ವಿಷವನಿತ್ತರು || ಸರ್ಪಗಳ ಕಚ್ಚಿಸಿದರು | ಕ್ಷೇಮವಾಯಿತು ಏನಾದರು | ಸುರತರು | ಮೋಕ್ಷ ಮಾರ್ಗವ ತೋರು 5 ಶ್ಲೋಕ : ಋಕ್ಷ ಕೇಸರಿ ಮಹಾ | ವೃಕ್ಷಾದಿ ಸಂಹಾರಕಾ | ಲಾಕ್ಷಾಗಾರವು ಬಿಟ್ಟು ನಿನ್ನವರ ನಾ | ಸುಕ್ಷೇಮದಿಂದೈದಿಸಿ | ಭಿಕ್ಷಾರ್ಥಾವಿನಿಯುಕ್ತನಾಗಿ ಬಕನಾ | ಲಕ್ಷಿಲ್ಲದೇ ಕುಟ್ಟಿದೀ | ಸಾಕ್ಷೀ ಮೂರುತಿ ಚಿತ್ರವೇ ನಿನಗದಧ್ಯಕ್ಷಗ್ರ ಸರ್ವೇಶಗಾ 6 ಪದ : ದ್ರುಪದಜೆ ಎನಿಸಿದಳು | ಘೋರ ದುಃಶಾಸನು ಮುಟ್ಟಲು | ಮೊರೆಯಿಟ್ಟಳು ದ್ವಾರರಾದಳು | ಧೀರನೆನವೆ ಹೃದಯದೊಳು ಹಗ ಲಿರುಳು | ಭಜನೆಗಳಿಪ್ಪನಂಘ್ರಿಗಳು || 6 ಶ್ಲೋಕ : ಎಲ್ಲಾ ದೈತ್ಯರು ಹುಟ್ಟಿ ಭೂತಳದಿ ನಿನ್ನಲ್ಲೆ ಪ್ರದ್ವೇಷದಿಂ | ದಿಲ್ಲೇ ಇಲ್ಲ ಮುಕುಂದನಾ ಗುಣಗಳು | ಸುಳ್ಳಷ್ಟು ಈ ವಿಶ್ವವೊ || ಇಲ್ಲೆಂಧೇಳಲು ಸದ್ಗುಣಕ್ಕೆ ಗೊತ್ತಿಲ್ಲಾ ತಾನಾಗ ಈ ತತ್ವವೊ | ಪದ : ಸೂನು | ರಾಜತಾಸನದಲ್ಲಿ ಇದ್ದನು | ಒಬ್ಬ ಯತಿಪನು | ವರ ಪಡೆದನು | ಭಾವೀ ಶಿಷ್ಯ ನಿನ್ನನು | ದ್ವಿಜನಾಗಿ ಬಂದು ಆ ಯತಿಯನು ಪೊಂದಿದಿ ನೀನು | ತುರ್ಯಾಶ್ರಮವನು ಯಿನ್ನು 7 ಶ್ಲೋಕ : ದುರ್ವಾದ್ಯುಕ್ತ ಭಾಷ್ಯ ಸಂಘಗಳನು | ಸರ್ವೇದ್ಯನೀ ಖಂಡಿಸೀ | ಸರ್ವಾನಂದದಿ ದಿವ್ಯ ಶಾಸ್ತ್ರಗಳನು | ವಾಗಾಜಯಂ ನಿರ್ಮಿಸಿ || ಗರ್ವೋಚಿÀಸಲ್ಲೋಕಕೆ | ಚೂಡಾಮಣಿ ಪದ: ರಜತಪೀಠ ಪುರದಲ್ಲಿ | ನೀ ಕಲಿಯುಗದಲ್ಲಿ | ಇರುವಿ ಮತ್ತೊಂದರಲ್ಲಿ | ಪಟ್ಟವಾಳಿದಿ ಅಲ್ಲಿ |ವಿಠ್ಠಲನ ವಿಜಯಪಾದದಲ್ಲಿ ಅನುದಿನದಲ್ಲಿ8
--------------
ವಿಜಯದಾಸ
ಮಗನಿಂದೆ ಗತಿಯುಂಟೆ ಜಗದೊಳಗೆನಿಗಮಾರ್ಥ ತತ್ತ್ವವಿಚಾರದಿಂದಲ್ಲದೆ ? ಪ ತ್ರಿಗುಣರಹಿತ ಪರಮಾತ್ಮನ ಧ್ಯಾನದಿಹಗಲಿರುಳು ನಿತ್ಯಾನಂದದಿಂದತೆಗೆದು ಪ್ರಪಂಚವಾಸನೆಯ ಬಿಟ್ಟವರಿಗೆಮಗನಿದ್ದರೇನು ಇಲ್ಲದಿದ್ದರೇನು ?1 ಶೋಣಿತ ಶುಕ್ಲದಿಮಿಳಿತವಾದ ಪಿಂಡ ತನ್ನ ಪೂರ್ವಕರ್ಮದಿಂದನೆಲಕೆ ಬೀಳಲು ಅದು ಸಲಹಿ ರಕ್ಷಿಪುದೆ ? 2 ಪರಮ ದುಷ್ಟನಾಗಿ ಮರೆತು ಸ್ವಧರ್ಮವಗುರು ಹಿರಿಯರ ಸಾಧುಗಳ ನಿಂದಿಸಿಬೆರೆದನ್ಯ ಜಾತಿಯ ಪರನಾರಿಯ ಕೂಡಿಸುರೆ ಕುಡಿದು ಜೂಜಾಡಿ ನರಕಕ್ಕೆ ಬೀಳುವ 3 ಸತ್ಯನೊಬ್ಬ ಮಗ ಶಾಂತನೊಬ್ಬ ಮಗ ದು-ರ್ವೃತ್ತಿ ನಿಗ್ರಹನೊಬ್ಬ ಸಮಚಿತ್ತನೊಬ್ಬನುಉತ್ತಮರೀ ನಾಲ್ಕು ಮಕ್ಕಳಿದ್ದ ಮೇಲೆಹೆತ್ತರೇನು ಇನ್ನು ಹೆರದಿದ್ದರೇನಯ್ಯ ? 4 ಸುತರಿಲ್ಲದವಗೆ ಸದ್ಗತಿ ಇಲ್ಲವೆಂತೆಂಬಕೃತಕ ಶಾಸ್ತ್ರವು ಲೌಕಿಕಭಾವಕೆಕ್ಷಿತಿಯೊಳು ಕಾಗಿನೆಲೆಯಾದಿಕೇಶವ ಜಗ-ತ್ಪತಿಯ ಭಜಿಪಗೆ ಸದ್ಗತಿಯಿರದೆ ಹೋಹುದೆ ? 5
--------------
ಕನಕದಾಸ
ಮೊದಲಿಂದ ನೀ ಕೆಟ್ಟೆ ಮನುಜ ಪ ಬುಧರಾಡುತಿಹ ನುಡಿಯನು ಕೇಳದೆ ಅ.ಪ ಹಗಲಿರುಳು ದುರ್ವಿಷಯದಲಿ ಬಿದ್ದು ಮಿಗೆ ದುರಿತಗಳ ಗಳಿಸಿ ಮುಂದೆ ಯ- ಮಗೆ ನಿರುತ್ತರನಾದೆಯಲೊ 1 ಹೆಣ್ಣು ಹೊನ್ನು ಮಣ್ಣುಗಳ ಬಯ ಸಿನ್ನು ದುರ್ಜನ ಸೇವೆಯಿಂ ಜನ್ಮವ ನಿರರ್ಥಕವ ಗೈಯುತಾ ರಣ್ಯದೊಳಿಹ ಪಿಶಾಚದೋಲ್ 2 ನಿರತವು ಸಜ್ಜನರಡಿಯ ಕಿಂ- ಕರನೆನಿಸಿ ನೀ ಬಾಳೆಲೊ ಕರುಣದಲಿ ಗುರುರಾಮ ವಿಠ್ಠಲ ಕಾಯುವನು ಸಂದೇಹ ಬಿಡು 3
--------------
ಗುರುರಾಮವಿಠಲ
ಯಾಕೆ ನಿರ್ದಯನಾದೆ ಲೋಕೇಶ ಪ್ರಭುವೆ ಸಾಕಲಾರದೆ ಎನ್ನ ನೂಕಿ ಭವದೊಳಗೆ ಪ ನಿನ್ನ ನಾಮಸ್ಮರಣೆ ಮಾಡದಲೆ ಹಗಲಿರುಳು ಅನ್ಯ ವಿಷಯಗಳಿಂದ ನೊಂದು ಬಳಲಿದೆನೊ ನಿನ್ನ ಧ್ಯಾನವ ಮಾಳ್ಪಚ್ಛಿನ್ನ ಭಕ್ತರೊಳಿರಿಸಿ ಚನ್ನಾಗಿ ಸಲಹೊ ಪ್ರಸನ್ನ ಮಾಧವನೆ 1 ಆಪನ್ನ ಜನರನು ಪೊರೆದೆ ಸನ್ನುತಾಂಗನೆ ದೇವ ಸರ್ವವ್ಯಾಪಕನೆ ಪನ್ನ ಗಾರಿವಾಹನ ಪ್ರಸನ್ನ ಶ್ರೀಹರಿ ಶೌರಿ ಎನ್ನ ಕಡೆಹಾಯಿಸಯ್ಯ ಜೀಯ 2 ಅಕ್ಷಯ ಫಲಪ್ರದ ಪಕ್ಷಿವಾಹನ ಕೃಷ್ಣ ಕುಕ್ಷಿಯೊಳು ಜಗವನಿಂಬಿಟ್ಟ ಶ್ರೀ ಹರಿಯೆ ರಕ್ಷ ಶಿಕ್ಷಕ ಜಗದ್ರಕ್ಷ ಪಾಂಡವ ಪಕ್ಷ ಈಕ್ಷಿಸಿ ಎನ್ನನುದ್ಧರಿಸಿ ಸಲಹದಲೆ3 ಪರಿಪರಿಯ ಕಷ್ಟಗಳ ಪರಿಹರಿಸಿ ಭವದೊಳಗೆ ದುರಿತದೂರನೆ ಕಾಯೊ ಶರಣ ಜನರ ಪರಿಸರನೊಡೆಯ ನಳನಾಮ ಸಂವತ್ಸರದಿ ಕರೆಕರೆಯ ಕಷ್ಟಗಳ ಬಿಡಿಸಿ ಸಲಹದಲೆ4 ಕನಕಗರ್ಭನ ಪಿತನೆ ಕಮಲನಾಭ ವಿಠ್ಠಲ ಮಿನಗುತಿಹ ದಿವ್ಯ ಸೌಂದರ್ಯ ಮೂರುತಿಯೆ ಸನಕಾದಿ ಮುನಿವಂದ್ಯ ಕ್ಷಣ ಬಿಡದೆ ಸ್ಮರಿಸುವರ ಇನಕುಲೇಂದ್ರನೆ ದೇವ ಬಿಡದೆ ಸಲಹದಲೆ5
--------------
ನಿಡಗುರುಕಿ ಜೀವೂಬಾಯಿ
ಲೋಕನೀತಿ 1 ಕಾಮಧೇನು ಕಲ್ಪತರು ಕಾಮಿತಾರ್ಥವನೀವ ಹರಿಯೇ ಎನಗಿರೆ ಎನಗ್ಯಾತಕೆ ಚಿಂತೆ ಕಾಮಿತಾರ್ಥವನೀವ ದೊರೆಯಿರಲು ಯನಗ್ಯಾತರ ಕೊರೆತೆ ಹರಿಕಾವದೇವ ನೀನಿರಲು ಕೋಳಿ ತನ್ನ ಮರಿಗೆ ಹಾಲುಕೊಟ್ಟು ಸಾಕುವದೆ ಕಾಳ ರಾತ್ರಿಯು ಕಳೆದು ಹರಿ ಉದಿಸುವನೆಂದು ಕೋಳಿಕೂಗಿದರೂ ಏಳದೆ ಮಲಗಿ ಕಾಲಕಳೆವರು ಮನುಜರುಹರಿಯೆ ಕಾಲಕೂಟ ಸಮ ಕಾಮಿತಾರ್ಥವ ಬೇಡುವರು ಕಾಲದೂತರು ಬರುವ ವ್ಯಾಳೆತನಕ ನಿನಧ್ಯಾನಿಸದೆ ಕಾಲಕಳೆವರು ಮನುಜರು ಕಾಲಮೂರುತಿ ನೀನೆ ಎಂದರಿಯರು ಹರಿ ಕಾಲ ಅಕಾಲ ನಿನಗುಂಟೆ ಎನಗುಂಟೆ ದೇವ ನೀ ಎನಗೆ ಇಂಥಾ ಕೀಳು ಬುದ್ಧಿಯ ಕೊಡದಿರೊ, ಏಳು ಬೆಟ್ಟದ ಒಡೆಯ ಶ್ರೀ ಶ್ರೀನಿವಾಸ 2 ಬೆಳಗೆದ್ದು ಹರಿ ನಿನ್ನ ಧ್ಯಾನಿಸದೆ ಪರಧ್ಯಾನ ಪರನಿಂದೆಯಲ್ಲಿಹರು ನಿತ್ಯ ನಿನ್ನ ಧ್ಯಾನ ಬಿಟ್ಟು ಬೆಳಗಾಗೆ ನಿನ್ನ ಸೂರ್ಯರಶ್ಮಿ ಬಿದ್ದರೂ ಏಳರು ಶಯನ ಬಿಟ್ಟು ಈ ಜಗದಿ ದೇವ ಈ ಕಲಿ ಜನರು ಇಂಥಾ ಬೆಳಗ ಎನಗೀಯದೆ ನೀ ಎನ್ನೊಳಗಿದ್ದು ಬೆಳಗಿನ ಜಾವದಿ ನಿನ್ನ ಕಳೆಕಳೆರೂಪ ಎನಗೆ ತೋರೋ ಘಳಿರನೆ ಶ್ರೀ ಶ್ರೀನಿವಾಸ 3 ಎರಡನೆ ಜಾವದಲಿ ಹುಂಜ ಹರಿಪೂರ್ವದಲಿ ಬರುವ ಏಳಿರೆಂದು ಕೂಗಲು ಸತಿ ಸಹಿತ ಕಾಮಕೇಳಿಯಲಿಹರು ಮೂರನೆ ಝಾವದಲಿ ಹರಿ ಉದಿಸಿ ಬ್ರಾಹ್ಮೀಮುಹೂರ್ತದೊಳು ಹರಿ ಬೆಳಕೀವ ಲೋಕಕೆ ಎಂದು ಕೂಗುವುದು ಕೋಳಿ ಕೇಳಿ ಕರ್ಣದಲಿ ಶಯನ ಬಿಟ್ಟೇಳರೊ ಈ ಜಗದಿ ಮೂರೆರಡು ಶತಶ್ವಾಸ ಜಪ ಮಾಡಿಸುವ ಹರಿಭಕ್ತ ಹನುಮನೆಂದರಿಯದೆ ಮಲಗಿ ಕಾಲ ಎರಗಿ ಬರುವುದು ಆಯುಷ್ಯವೆಂದರಿಯದೆ ಭಾರತೀಪತಿ ಅಂತರ್ಯಾಮಿ ನಿನ್ನಧ್ಯಾನಿಸದೆ ಇಹರಲ್ಲೋ ಈ ಜಗದಿ ಶ್ರೀ ಶ್ರೀನಿವಾಸ ಎನ್ನ ನೀನವರ ಸಂಗ ಸೇರಿಸದೆ ಕಾಯೊ ಹರಿಯೆ ಎನ್ನ ದೊರೆಯೆ 4 ಸೂರ್ಯನಂತರ್ಯಾಮಿ ನೀನಲದೆ ಮತ್ಯಾರಿಹರು ಹರಿ ಸೂರ್ಯಾಂತರ್ಗತ ಸೂರ್ಯನಾರಾಯಣ ಸೂರ್ಯಕೋಟಿ ತೇಜದಿ ಮೆರೆವೆ ಸೂರ್ಯ ಸಹಸ್ರ ಉದಿಸಿದಂತೆ ಬರುವೆ ಕರ್ಮ ನೀ ಮಾಡಿಸಿ ಪೆರ್ಮೆಯಿಂದವರ ಕಾಯ್ವ ಶರ್ವಾದಿವಂದಿತ ಗರ್ವರಹಿತ ವೈಕುಂಠಪತಿ ನೀ ನಿನ್ನವರ ಕಾಯಲು ಸರ್ವದಾ ಅವರಿಗೆ ವಲಿದು ಕಾವೆ ಆದಿನಾರಾಯಣ ಶ್ರೀ ಶ್ರೀನಿವಾಸ ಕಾಯೆನ್ನ ಸೂರ್ಯಾಂತರ್ಗತ ವೆಂಕಟೇಶಾ 5 ಹಗಲಿರುಳು ಎನ್ನದೆ ನಿನ್ನ ಸ್ತುತಿಪರು ಭಕ್ತರು ಅಘಹರನೆ ನಿನ್ನ ಪ್ರೇರಣೆಯಿಂದಲವರಿರಲು ಬಗೆಬಗೆಯ ರೂಪದಿ ಬಂದವರ ಸಲಹುವೆ ನಗೆ ಮೊಗದ ಶ್ರೀ ರಮೆಯರಸ ಲಕ್ಷ್ಮೀಶ ನಿನ್ನ ಬಗೆ ಅರಿತಿಹರಾರಿರೀಜಗದಿ ಪಗಲಿರುಳೆನ್ನದೆ ನೀನವರಲ್ಲಿದ್ದು ಸಲಹಲು ಬಗೆವರೆ ಅನ್ಯರಿಗೆ ಅಲ್ಪರಿವರೆ ನಿನ್ನವರು ಜಗದಾಖ್ಯ ವೃಕ್ಷನೀನಿರಲು ನಿನ್ನ ಭಕ್ತರು ನಿನಗಲ್ಲದೆ ಜಗದೊಡೆಯ ಶ್ರೀ ಶ್ರೀನಿವಾಸ
--------------
ಸರಸ್ವತಿ ಬಾಯಿ
ಲೋಕನೀತಿ ಇಳೆಯೊಳಗೆ ದೇಹತಾಳಿ ಬಂದೆಲ್ಲಾ ತಮ್ಮಾ ಗಳಸಿ ಮನೆ ಹೆಂಡಿರು ಮಕ್ಕಳಿಟ್ಟಿಲ್ಲಾ ಬಲಿಸಿ ಹಣ ಹೊನ್ನು ಹೂಳಿಟ್ಟಿಲ್ಲಾ ತಮ್ಮಾ ಒಲಿದು ಉಂಡಿ ವಿಷಯ ಸುಖವಾ ಪೇಳಲ್ಲಾ 1 ತೆರಪೀರಾದೆ ಜನಿಸಿದಾವು ಸುತ್ತಲು ಪರಿಪರಿಯ ಸುಖದುಃಖ ಪಗಲಿರುಳು ತಮ್ಮಾ ಇರದೆಯೊದಗಿ ದಣಿಸಿದಾವು ನಿನ್ನ ಮರುಳೆ 2 ಯಮನವರು ಬರುವದು ಮರೆತೇಯ ತಮ್ಮಾ ರಮಣೀ ಮೋಹಾ ಕೇಳಿರು ನೀನರಿಯಾ ಅಮಿತ ಧನ ಬಳಗ ಇನ್ನೆಲ್ಲಯ್ಯಾ ತಮ್ಮಾ ನಮೋ ನರಸಿಂಹವಿಠಲ ಎನ್ನಯ್ಯ 3
--------------
ನರಸಿಂಹವಿಠಲರು
ಶೇಷ ಪರ್ಯಂಕ ಶಯನ ವಿಷಯದಭಿ ಲಾಷೆ ಪರಿಹರಿಸಿ ಕಾಯೋ ಪ ರೆನದೆ ಮನೆಮನೆ ತಿರುಗಿದೆ ಅನಿಮಿಷೋತ್ತಂಸ ನಿನ್ನ ಪಾದವೊಂ ದಿನ ಭಜಿಸಿದವನಲ್ಲವೋ 1 ಹರಿ ಗುರುಗಳನು ನಿಂದಿಪ ನೀಚರನು ಸರಿಸಿ ಅವರನು ಸ್ತುತಿಸಿದೆ ಪೊರೆಯಲೋಸುಗ ಉದರವ - ಜನರಿಂದ ಹರಿದಾಸನೆನಿಸಿಕೊಂಡೆ 2 ಭಗವಂತ ನಿನ್ನ ಗುಣವ ವರ್ಣಿಸದೆ ಭಗವತಿಯರವಯವಗಳಾ ಸೊಗಸಿನಿಂದಲಿ ವರ್ಣಿಸಿ ಎನ್ನ ನಾ ಲಗೆ ಎರಡು ಮಾಡಿಕೊಂಡೆ 3 ಸರ್ವಪ್ರಕಾರದಲ್ಲಿ ಹಗಲಿರುಳು ದುರ್ವಿಷಯಕೊಳಗಾದೆನೋ ಶರ್ವಾದಿ ವಂದ್ಯ ಚರಣಾ ನೀನೊಲಿ ದುರ್ವಿಯೊಳು ಸಲಹ ಬೇಕು 4 ಉಪರಾಗ ಪರ್ವಗಳಲಿ ಸ್ನಾನ ಜಪ ತಪ ಅನುಷ್ಠಾನ ಜರಿದು ನೃಪರ ಮಂದಿರವ ಕಾಯ್ದು ಧನವ ತಂ ದುಪ ಜೀವಿಸಿದೆನೊ ಜೀಯಾ 5 ವೇದ ಶಾಸ್ತ್ರಾರ್ಥಗಳನು ತಿಳಿದು ಸ ನ್ಮೋದ ಬಡದಲೆ ಕುಶಾಸ್ತ್ರ ಓದಿ ಪಂಡಿತನೆನಿಸಿದೆ ಕೀರ್ತಿ ಸಂ ಪಾದಿಸಿದೆ ವ್ಯರ್ಥ ಬಾಳಿದೇ 6 ವೈರಾಗ್ಯ ಪುಟ್ಟಲಿಲ್ಲ ಘೋರ ಸಂ ಸಾರದೊಳು ಮಗ್ನನಾದೆ ಸೂರಿಗಳ ಮಧ್ಯದಲ್ಲಿ ಬುಧನಂತೆ ತೋರುವೆನು ನೋಳ್ಪ ಜನಕೆ 7 ನಾ ಮಾಡ್ದ ಪಾಪರಾಶಿ ಎಣಿಸಲ್ಕೆ ತಾಮರಸಭವಗಸದಳ ಸ್ವಾಮಿ ಎನಗೇನು ಗತಿಯೋ ಭಾರವಾದೆ ಈ ಮಹಿಗೆ ಪ್ರತಿದಿನದಲೀ 8 ಭೂತ ಸಂಬಂಧದಿಂದ ಬಹುವಿಧದ ಪಾತಕವೆ ಸಮನಿಸಿದವೋ ದಾತೃನೀ ಕಡೆ ಗೈದಿಸೋ ಭವದಿ ಜಗ ನ್ನಾಥ ವಿಠ್ಠಲ ಕೃಪಾಳೋ 9
--------------
ಜಗನ್ನಾಥದಾಸರು
ಶೌರಿ ಬಾರೋ ಶ್ರೀಹರಿ ಪ ಬಾರೋ ಬಾರೋ ಕರುಣಾನಿಧಿ ನಿನ್ನನು ಬಾರಿ ಬಾರಿಗೆ ಸಿರಬಾಗಿ ನಮಿಸುವೆನು ಅ.ಪ ಮಾರನಯ್ಯನೆ ಮಂಗಳರೂಪ ತೋರೊ ಬೇಗನೆ ಸಾರಸಾಕ್ಷ ಸನ್ಮಂಗಳ ಮಹಿಮನೆ ತೋರೋ ನಿನ್ನ ಮಹಾ ಮೀನರೂಪವನು 1 ಸುಂದರಾನನ ಚಂದಿರವದನ ಮಂದಹಾಸನೆ ದುರಿತ ಕಳೆವಂದದಿ ಬೆನ್ನಿಲಿ ಮಂದರವೆತ್ತಿದ2 ಆದಿದೈತ್ಯನು ಭೂದೇವಿಯಪಹಾರ ಗೈದನು ಆ ದಿತಿಜರ ಸಂಹಾರ ಮಾಡಲು ನೆಲ ವರಾಹ ಬೇಗ 3 ಕಂದನಾಡಿದ ಆ ನುಡಿ ಕೇಳಿಯಾನಂದ ತಾಳಿದ ಮಂದರೋದ್ಧರ ಮುಚುಕುಂದ ವರದ ಸುರ- ಗಂಗೆಯ ಪಿತ ನರಸಿಂಗರೂಪದಿ 4 ಬಾಲರೂಪದಿ ಬೇಡಿದ ದಾನ ಭೂಮಿ ಮಾತ್ರದಿ ಬೇಡಿದುದನೆ ಕೊಟ್ಟಾಮಹೀಪಾಲನ ದೂಡಿ ಪಾತಾಳಕ್ಕೆ ಬಾಗಿಲ ಕಾಯ್ದೆ 5 ಶೂರ ರಾಜರ ಸಂಹಾರ ಮಾಡಿ ತೋರಿ ಶೌರ್ಯವ ಸಾಗರಶಯನಗೆ ತೋರಿ ಪರಾಕ್ರಮ ಶೂಲಿಯ ಧನುವಿತ್ತೆ ರೇಣುಕಾತ್ಮಜ 6 ವಾನರಾಧಿಪ ಹಗಲಿರುಳು ಭಕ್ತಿಮಾಡಿ ಧ್ಯಾನಿಪ ಶ್ರೀ ಮಾನಿನಿಯಳ ಕೈಪಿಡಿಯುತ ಅಯೋಧ್ಯದಿ ಮೆರೆದ ಶ್ರೀರಾಮ ಚಂದಿರನೆ 7 ಪಾಂಡುನಂದನ ಮಾಡಿದ ನಿನ್ನ ಬಂಡಿ ಬೋವನ ಸಂದೇಹಿಸದಲೆ ಅಂದು ಅವರ ಮನೆ ಎಂಜಲ ಬಳಿದ ಮುಕುಂದನೆ ಬೇಗದಿ 8 ಮಂಗಳಾತ್ಮಕ ತ್ರಿಪುರರ ಮದ ಭಂಗನಾಶಕ ಮಂಗಳಮಹಿಮ ವಿಹಂಗವಾಹನ ಸುರ ಸಂಗೀತಲೋಲ ಕೃಪಾಂಗ ದಯಾನಿಧೆ 9 ತೇಜಿಯನೇರುತ ಸುಜನರು ಮಾಳ್ಪಪೂಜೆಗೊಳ್ಳುತ ರಾಜೀವಾಕ್ಷ ರಕ್ಕಸ ಸಂಹಾರಕ ಅ- ಪಾರ ಮಹಿಮ ರಥವೇರುತ ತವಕದಿ 10 ಕಂಜಲೋಚನ ಕಮಲಾಯತಾಕ್ಷ ಮಂಜುಭೂಷಣ ಕಂಜದಳಾಂಬಕ ಕಮಲನಾಭ ವಿಠ್ಠಲಝಗಝಗಿಸುವ ಮದ್ಹøದಯ ಮಂಟಪಕೇ 11
--------------
ನಿಡಗುರುಕಿ ಜೀವೂಬಾಯಿ
ಶ್ರೀ ಪತಿಯೆ ನಿನ್ನ ದಯವೆಂತಾಹದೋ ಪಾಪಕರ್ಮವ ಮಾಡಿ ಜೀವಿಸುವೆ ನಿರುತ ಪ ಬಾಲತನವನು ಬಾಲಲೀಲೆಯಿಂದಲಿ ಕಳೆದೆ ಕೀಳು ಜನರೊಡನೆ ಸ್ನೇಹವ ಬೆರಸಿದೆ ಹಾಳು ಹರಟೆಗೆ ಹೊತ್ತು ಸಾಲದೋಯಿತು ಯನಗೆ ಶ್ರೀ ಲೋಲ ನಿನ್ನಡಿಗೆ ದೂರಾದೆ ನಾನು 1 ಬುದ್ಧಿ ಪೂರ್ವಕದಿ ಸದ್ವಿದ್ಯೆಯನು ಕಲಿಯದಲೆ ಶುದ್ಧ ತಾಮಸ ವಿದ್ಯದೊಳು ರಮಿಸಿದೆ ಮಧ್ವಶಾಸ್ತ್ರದಸಾರವನ್ನು ತಿಳಿಯದೆ ನಾನು ಕದ್ದಕಳ್ಳನ ತೆರದಿ ಬಾಳಿದೆನು ಬರಿದೆ 2 ಪ್ರಾಯತನವೆ ವಿಷ ಪ್ರಾಯವಾಯಿತು ಎನಗೆ ಕಾಯಜನ ಉಪಟಳದಿ ಮತ್ತನಾದೆ ತೋಯಜಾಕ್ಷಿಯರ ದುರ್ಮಾಯ ಜಾಲಕೆ ಸಿಲುಕಿ ನೋಯಿಸಿದೆ ನಿಜ ಸತಿಯ ಪರಿಪರಿಯಲಿಂದ 3 ಮದನ ಜನಕನೆ ನಿನ್ನ ಮಧುರನಾಮವ ಮರೆದು ಸುದತಿಯರ ಅಧರಾಮೃತಕೆ ಬೆರೆದು ವಿಧಿಕುಲಾಚರಣೆ ಜರೆದ್ಹÀÀಗಲಿರುಳು ನಾರಿಯರ ವದನವನು ನೋಡಿ ಮೋದಿಪನರಾಧಮನೊಳ್ 4 ಉದರ ಗೋಸುಗ ಪರರ ಹೃದಯ ದ್ರವಿಸುವ ತೆರದಿ ವಿಧ - ವಿಧದಿ, ಆತ್ಮ ಸ್ತೊತ್ರವನೆ ಪೊಗಳಿ ಸದ-ಸದ್ವಿ ವೇಕವನು ತೊರೆದನ್ಯರ್ಹಳಿದು ಬಲು ಚದುರ ನಾನೆಂಧೇಳಿ ಮೋಸಗೊಳಿಸುತ ಜನರ 5 ಸಿರಿ ಚರಣಕ್ಕೆ ಶಿರ ಬಾಗ ದ್ಹರಿ ಭಕುತರಿಗೆ ವಿನಯದಿಂದೆರಗದೆ ನಿರುತದಲಿ ನಾಚಿಕಿಲ್ಲದಲೆ ಭೂದನುಜಯ ವಾನರಿಗೆ ಕರಮುಗಿದು ಜೀವಿಪÀಖೂಳ ಮನುಜನೊಳು 6 ಸತ್ಯಧರ್ಮವÀ ತ್ಯಜಿಸಿ ಮತ್ತೆಯುತ್ತಮರಜಾ - ನ್ನತ್ಯವನು ಸಹಿಸದಲೆ ತತ್ತಳಿಸುವೆ ಪೆತ್ತವರ ಸೇವಿಸದೇ ಮಿಥ್ಯವನೆ ಬೊಗಳಿದು - ಷ್ಕøತ್ಯದಿಂಬಾಳ್ವ ಉನ್ಮತ್ತನರ ಪಶುವಿನೊಳು 7 ಹರಿಗೆರಗದಿರುವÀÀ ಶಿರ ಹರಿಯ ಸ್ಮರಿಸದ ಜಿಂಹೆ ಹರಿವಾರ್ತೆಯಾಲಿಸದ ಕರ್ಣಂಗಳು ಕರ ಹರಿಯ ನೋಡದ ಚಕ್ಷು ಸರುವ ಪರಿಯ ಪವಿತ್ರದೇಹಧರಿಸಿದ ನರಗೆ 8 ವಿತ್ತ ಪಹರಿಸಿ ಪರರ ನಿಂದಿಸಿ ಪರರ ಬಲುವಂಚಿಸಿ ಪರಮೇಷ್ಟಿ ಜನಕನೆ ಪರತರ ಪರಂಜ್ಯೋತಿ ಪರದೈವನೆಂದರಿಯದಿರುವ ಪಾಮರನಿಗೆ 9 ನಾಮಾಡದಿಹ ಪಾಪ ವೀಮಹಿಯೊಳೊಂದಿಲ್ಲ ಸೀಮೆಗಾಣಲು ರವಿಜನಿಗೆ ಸಾಧ್ಯವಿಲ್ಲ ಆ ಮಹಾನರಕÀಂಗಳೆನಗೆÀ ತಕ್ಕವು ಅಲ್ಲ ಸ್ವಾಮಿ ನೀಪೊರೆಯದಿರೆ ಯನಗಾರು ಗತಿಯಿಲ್ಲ 10 ಏನಾದರೊಳಿತೆ ವರದೇಶ ವಿಠಲ ನಿನ್ನಾ ಙÁ್ಞನುಸಾರದಿ ಕರ್ಮಗಳ ಮಾಡಿದೆ ಧೀನರಕ್ಷಕನೆಂಬ ಬಿರಿದು ನಿಜ ವಿದ್ದರಾ - ದೀನನಾದವನನುದ್ಧರಿಸಲರಿಯಾ 11
--------------
ವರದೇಶವಿಠಲ
ಶ್ರೀಹರಿ ನಿನ್ನನ್ನೆ ಪಡೆವುದು ಭಾಗ್ಯ ಬಾಹಿರನೆನಿಸದೆ ಸೇರಿಸು ಯೋಗ್ಯ ಪ ಹೃದಯಾರವಿಂದದೆ ದೇವಿಯರುಸಹಿತ ಸದಯ ಸನ್ನಿಧಿ ಮಾಡು ಅದು ನನಗೆ ವಿಹಿತ 1 ಭಾಗವತ ಕೈಕಂರ್ಯ ಹಗಲಿರುಳು ಇರಲಿ ನಿತ್ಯ ಸಿದ್ಧಿಸಲಿ 2 ಇಡುದೇವ ಪದಕಮಲ ನನ್ನ ತಲೆಮೇಲೆ ಅನುದಿನ ಲೀಲೆ 3 ಕೊನೆಗಾಲದಲಿ ಬಂದು ನೆನೆವಂತೆ ನೀಡೈ ಮನಕೆ ಮಂಗಳರೂಪ ಧ್ಯಾನ ದಯಮಾಡೈ 4 ಅವತಾರಫಲಗಳ ಸ್ಮರಣೆ ಬರುತಿರಲಿ ಭವವೆಲ್ಲ ಕರಣಗಳು ನಿನ್ನ ಸೇವಿಸಲಿ 5 ದಾಸನ್ನ ಚರಣಾಂಬುಜದÀಡಿಯಿರಿಸು ಶ್ರೀಶನೆ ಪ್ರೇಮದ ಸವಿಯನುಣಬಡಿಸು 6 ಎಲ್ಲವು ನಿನ್ನದೆ ನನ್ನದೇನಿಲ್ಲ ಬಲ್ಲವನೆ ನೀನಾಗಿ ಮುಕ್ತಿಕೊಡು ನಲ್ಲ 7 ಹಿಂದೇಳು ಮುಂದೇಳು ತಲೆಮಾರಿನವರು ತಂದೆ ನಿನ್ನಂಘ್ರಿ ಶೇಷಾಂಕಮುದ್ರಿತರು 8 ಕುಲಧನವೆ ನೀನಮ್ಮಕುಲಕೋಟಿಯನ್ನ ಒಲಿದು ಕಾಪಾಡಯ್ಯ ಕರುಣಿ ಪ್ರಸನ್ನ 9 ಹೆಜ್ಜಾಜಿ ಕೇಶವ ಇದು ನಮ್ಮ ಮೋಕ್ಷ ಅರ್ಜುನಸಾರಥಿ ಕಾಣು ಪ್ರತ್ಯಕ್ಷ10
--------------
ಶಾಮಶರ್ಮರು
ಸಿಕ್ಕದಿರು ನಾರಿಯರ ಕಡೆಗಣ್ಣಿಗೆ ಮನ ವಿಕ್ಕಿದರೆ ಇಹಪರದ ಗತಿ ಕೆಡಗು ನಿನಗೆ ಪ ಹೇಸದೇತಕೆ ಮನಸು ಪರದಾರ ಪರದ್ರವ್ಯ ದಾಸೆಯೊಳು ಹಗಲಿರುಳು ಕುದಿದು ಕುದಿದು ಘಾಸಿಯಾಗುತ ತೊಳಲಿ ಬಳಲಿ ಯಮನರಕದೊಳು ವಾಸವನು ಮಾಡದಿರು ಎಲೆ ಮೂಢ ಮನುಜ 1 ಮೊಲೆಯೆ ಮಾಂಸದ ಚೆಂಡು ಮೊಗವು ಶ್ಲೇಷ್ಮೆಯಗೂಡು ಬಳಸಿ ನೋಡಿದರಿದಕೆ ಹುರುಳಿಲ್ಲವೋ ಒಳ ಹೊರಗು ಹೊಲಸು ಹೆಬ್ಬಡಿಕೆಗಳು ವಸನದಲಿ ಬೆಳಗುವಳು ತಲೆ ತುರಿಸಿ ಸಿಲುಕದಿರು ಕಂಡ್ಯಮನುಜ 2 ವಿಧಿ ಲಿಖಿತ ಸರಿಗು ಇಹಪರ ಕೆಡಗು ಪರವಧುವಿನೊಳು ಮನವ ಹರಿಸಬೇಡ ತೊರೆದಿವರ ಮರುತಸುತ ಕೋಣೆ ಲಕ್ಷ್ಮೀಪತಿಯ ಸಾಯುಜ್ಯ ಪದವಿಯನು 3
--------------
ಕವಿ ಪರಮದೇವದಾಸರು
ಸೂಳೆಯನಿಟ್ಟದ್ದೇವೆ ಕೇಳೈ ಆಶಾ ಪ ಸೂಳೆ ಮಾತುಗಳನ್ನು ಕೇಳಿ ಕೇಳಿ ದೇಹ ಜಾಳಾಗಿ ಹೋಯಿತು ಬೀಳೋಕಾಲವು ಬಂತು ಅ.ಪ ಮನೆಯ ಯೋಚನೆ ಬಿಡಿಸಿ ವಿಧವಿಧ ತಿಂಡಿ- ಯನು ತಾತಂದು ಕೊಡಿಸಿ ಮನುಮಥನಾಟವೆಘನ ಬೋಧೆಯೆನ್ನಿಸಿ ಕೊನೆಗೆ ರೋಗಗಳಿತ್ತು ಗತಿಶೂನ್ಯ ಮಾಡುವ 1 ಸತಿಯ ಬಿಡಿಸಿ ಬಿಟ್ಟಳು ಆತ್ಮಜರಲ್ಲಿ ಅತಿದ್ವೇಷವೇ ಕೊಟ್ಟಳು ಪಿತೃಮಾತೃಗಳಿಗಿಲ್ಲ ವಡಹುಟ್ಟಿದವರಿಗಿಲ್ಲ ಪ್ರೀತಿ ಹುಟ್ಟಿಸಿಯಿದ್ದದ್ದೆಲ್ಲಾ ಸೆಳಕೊಂಬುವ 2 ಇತರ ಚಿಂತೆ ಹೋಯ್ತು ಕುಲದಪ- ಧ್ಧತಿಯ ಮರಿಯ ಲಾಯ್ತು ಹಿತವೇ ಪೇಳಿದರ ಹಿತವಾಗಿ ತೋರುವೆ 3 ವಡವೆ ವಸ್ತ್ರವು ಬೇಕಂತೆ ಕೇಳಿದ್ದನೆಲ್ಲ ಕಡುಚಲ್ವೆ ಅವಳೆಂದು ಕಥೆಗಳ ಹೇಳುತ್ತ ಮಡದಿ ಮಕ್ಕಳ ಬಿಟ್ಟುಮನಸು ಅವಳಿಗೆ ಕೊಟ್ಟು 4 ಸ್ಮರನಾಟಯಾವಾಗಲು ಅವಳನೋಡಿ ಕರಗುತ್ತ ಹಗಲಿರುಳು ಪರಗತಿ ಕೊಡುವಂಥ ಗುರುರಾಮ ವಿಠಲನೆ ಅರಿಯವ ಸಂಸಾರ ತೊರೆದು ತುಂಟರಾಗಿ 5
--------------
ಗುರುರಾಮವಿಠಲ