ಒಟ್ಟು 58 ಕಡೆಗಳಲ್ಲಿ , 29 ದಾಸರು , 50 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾಲಕ ಕಂಡೆನು ನಿನ್ನ | ಬಾಲಕ ಪ. ಬಾಲಕ ಕಂಡೆನು ನಿನ್ನಾ | ಮುದ್ದು ಬಾಲ ತೊಡಿಗೆ ಇಟ್ಟರನ್ನಾ | ಆಹ ಕಾಲ ಕಾಲದ ಪೂಜೆ ಮೇಲಾಗಿ ಕೈಕೊಂಡು ಪಾಲಿಪ ಸುಜನರ ಅ.ಪ. ವಸುದೇವ ಕಂದ ಗೋವಿಂದ ವಸುಧಿ ಭಾರವನಿಳುಹೆ ಬಂದಾ | ಪುಟ್ಟ ಹಸುಗಳ ಕಾಯ್ವ ಮುಕುಂದ | ರ ಕ್ಕಸರನೆಲ್ಲರ ತಾನೆ ಕೊಂದಾ | ಆಹಾ ಹಸುಮಕ್ಕಳೊಡಗೂಡಿ ಮೊಸರು ಬೆಣ್ಣೆಯ ತಿಂದು ಶಶಿಮುಖಿಯರಮನಕಸಮ ಸಂತಸವಿತ್ತು 1 ವಿಶ್ವವ್ಯಾಪಕನಾದ ಬಾಲಾ | ಸರ್ವ ವಿಶ್ವ ತನ್ನೊಳಗಿಟ್ಟ ಬಾಲಾ | ಸ ರ್ವೇಶ್ವರನೆನಿಸುವ ಬಾಲಾ | ಬ್ರಹ್ಮ ಈಶ್ವರ ಸುರ ಪರಿಪಾಲಾ | ಆಹ ವಿಶ್ವ ಪ್ರದೀಪಕ ವಿಶ್ವನಾಟಕ ಸರ್ವ ವಿಶ್ವಚೇಷ್ಟಕನಾದ 2 ಸಿರಿಗರಿಯದ ಗುಣನೀತಾ | ಮತ್ತೆ ಸಿರಿಯ ತನ್ನೊಳಗಿಟ್ಟಾತಾ | ಆ ಸಿರಿಯಲ್ಲಿ ತಾನಿರುವಾತಾ | ಸೃಷ್ಟಿ ಸಿರಿಯಿಂದ ಮಾಡಿಸುವಾತಾ | ಆಹ ಸಿರಿಯ ಬಿಟ್ಟಗಲದೆ ಸಿರಿಗೆ ಮೋಹಕನಾಗಿ ಸಿರಿ ಸೇವೆ ಕೈಕೊಂಬ ಸಿರಿಕಾಂತ ಶ್ರೀಕೃಷ್ಣ 3 ಪ್ರಳಯಾಂಬುವಟಪತ್ರ ಶಯನಾ | ಥಳ ಥಳಿಸುವ ಪದತಳ ಅರುಣಾ | ವರ್ಣ ಎಳೆಗೂಸಿನಂತಿಹ ಚಿಣ್ಣಾ | ಆರು ತಿಳಿಯಲಾಗದ ಗುಣಪೂರ್ಣ | ಆಹ ನಳಿನಭವನ ಪೊಕ್ಕಳಲಿ ಪಡದು ತನ್ನ ನಿಲಯ ತೋರಿಸಿ ಕಾಯ್ದ ಚಲುವ ಚನ್ನಿಗ ದೇವ4 ಸತಿ ಪ್ರಾಯ ಕೆಡಿಸದೆ ತನ್ನಾ | ಮೈಯ್ಯೋಳ್ ಸುತರ ಪಡೆದಂಥ ಸಂಪನ್ನಾ | ವೇದ ತತಿಗೆ ಶಿಲ್ಕದ ಸುಗುಣಾರ್ಣ | ಅ ದ್ಭುತ ರೂಪ ಜಗದೇಕ ಘನ್ನಾ | ಆಹ ಜಿತಮಾನಿಗಳಿಗೆ ಹಿತಕೃತಿ ಕಲ್ಪಿಸಿ ಜತನದಿ ಜಗಜೀವತತಿಗಳ ಕಾಯೂವ 5 ಸುರತತಿಗಳನೆ ನಿರ್ಮೀಸಿ | ಅವರೊಳ್ ತರತಮ ಭೇದ ಕಲ್ಪಿಸಿ | ತನ್ನ ವರಪುತ್ರನೋಶಕೆ ವಪ್ಪೀಸಿ | ಸೃಷ್ಟಿ ಗರಸನ್ನ ಮಾಡಿ ನೀ ನಿಲಿಸೀ | ಆಹ ಪರಮೇಷ್ಟಿ ಪದವಿತ್ತು ಸರುವ ಜೀವರ ಶ್ವಾಸಕ್ಕರಸನೆಂದೆನಿಸಿದ 6 ಸರಿ ಇಲ್ಲ ವಾಯುಗೆಂದೆನಿಸೀ | ತತ್ವ ಸುರರಿಗಧೀಶನೆಂದೆನಿಸೀ | ತನ್ನ ಶರಣರ ಕಾಯ್ವನೆಂದೆನಿಸೀ | ಅವ ನಿರುವಲ್ಲಿ ತಾ ಸಿದ್ಧನೆನಿಸೀ | ಆಹ ತರಣಿಜಗೊಲಿಯುತ್ತ ಕುರುಕುಲವಳಿಯುತ್ತ ಪರಮತ ಖಂಡಿಸಿ ಕರೆಯೆ ತನ್ನನು ಬಂದಾ 7 ತ್ರಿವಿಧ ಜೀವರಗತಿದಾತಾ | ನಮ್ಮ ಪವನನಂತರ್ಯಾಮಿ ಈತಾ | ಪದ್ಮ ಭವ ರುದ್ರ ತ್ರಿದಶರ ಪ್ರೀತಾ | ಭಕ್ತ ರವಸರಕೊದಗುವ ದಾತಾ ಪವನಜ ಸತಿಭಕ್ತ ನಿವಹ ತಾಪದಿ ಕೂಗೆ ಭುವಿಯಲ್ಲಿ ಪೊರೆದಂಥ 8 ಶೋಣಿತ ನೀಲ ಕಾಯಾ | ದೇವ ಅಕ್ಲೇಶ ಆನಂದಕಾಯಾ | ಯುಗಕೆ ತಕ್ಕಂಥ ವರ್ಣಸುಕಾರ್ಯ | ಮಾಳ್ಪ ರಕ್ಕಸಾಂತಕ ಕವಿಗೇಯಾ | ಆಹ ಪೊಕ್ಕಳ ನಾಡಿಯೊಳ್ ಸಿಕ್ಕುವ ಜ್ಞಾನಿಗೆ ದಕ್ಕುವ ಸುರರಿಗೆ ಠಕ್ಕಿಪ ದನುಜರ 6 ಸಚ್ಚಿದಾನಂದ ಸ್ವರೂಪ | ಭಕ್ತ ರಿಚ್ಛೆ ಸಲ್ಲಿಸಿ ಕಳೆವ ತಾಪಾ | ಶ್ರೀ ಭವ ಕೂಪಾ | ದಲ್ಲಿ ಮುಚ್ಚಿಡ ತನ್ನನ್ನೆ ಸ್ತುತಿಪಾ | ಆಹ ಅಚ್ಚ ಭಾಗವತರ ಮೆಚ್ಚಿ ಕಾಯುತ ಅಘ ಕೊಚ್ಚಿ ತನ್ನುದರದಿ ಬಚ್ಚಿಟ್ಟು ಕಾಯುವ 10 ವಲ್ಲನು ಸಿರಿಸತಿ ಪೂಜೆ | ಮತ್ತೆ ವಲ್ಲನು ಸುರ ಸ್ತುತಿ ಗೋಜೆ | ತಾ ನೊಲ್ಲನು ಮುನಿಗಳ ಓಜೆ | ಹರಿ ವಲ್ಲನು ಋಷಿಯಾಗವ್ಯಾಜೆ | ಆಹ ಬಲ್ಲಿದ ಭಕುತರ ಸೊಲ್ಲಿಗೊದಗಿ ಬಂದು ಚಲ್ವರೂಪದಿ ಹೃದಯದಲ್ಲಿ ನಿಲ್ಲುವ ಕರುಣಿ11 ಅಂಬುದಿಶಯನ ಶ್ರೀಕಾಂತಾ | ಸರ್ವ ಬಿಂಬನಾಗಿಹ ಮಹಶಾಂತ | ತನ್ನ ನಂಬಿದ ಸುಜನರ ಅಂತಾ | ರಂಗ ಅಂಬುಜ ಮಧ್ಯ ಪೊಳೆವಂಥಾ | ಆಹ ಭಂಜನ ಪಶ್ಚಿ- ಮಾಂಬುಧಿ ತಡಿವಾಸ ಶಂಬರಾರೀಪಿತ12 ಸ್ವಪ್ನದಿ ಗೋಪಿಕರ ತಂದು | ಎನ ಗೊಪ್ಪಿಸೆ ತನ್ನ ಕೂಸೆಂದು | ಚಿನ್ನ ದಪ್ಪಾರಭರಣವದೆಂದೂ | ನಾನು ವಪ್ಪದಿರಲು ಎತ್ತೆನೆಂದೂ | ಆಹಾ ತಪ್ಪಿಸಿಕೊಳ್ಳೆ ಮತ್ತೊಪ್ಪಿಸಿ ಪೋದಳು ಅಪ್ಪಿ ಎನ್ನ ತೋಳೊಳೊಪ್ಪಿದ ಶಿಶುರೂಪ 13 ಶ್ರೀ ಮಾಯಾಜಯ ಶಾಂತಿ ರಮಣಾ | ಕೃತಿ ನಾಮಕ ಶಿರಿವರ ಕರುಣಾ | ಪೂರ್ಣ ಹೇಮಾಂಡ ಬಹಿರಾವರ್ಣ | ವ್ಯಾಪ್ತ ಮಾ ಮನೋಹರ ಪ್ರಣವ ವರ್ಣಾ | ಆಹ ಸ್ವಾಮಿ ಸರ್ವೋತ್ತಮ ಧಾಮತ್ರಯದಿ ವಾಸ ಶ್ರೀಮದಾಚಾರ್ಯರ ಪ್ರೇಮ ಮೂರುತಿ ಮುದ್ದು14 ದ್ವಿ ದಳ ಮಧ್ಯದಿ ರಥ ನಿಲಿಸೀ | ಪಾರ್ಥ ನೆದೆಗುಂದೆ ತತ್ವಾರ್ಥ ತಿಳಿಸೀ | ನಿನ್ನ ಅದುಭುತ ರೂಪ ತೋರಿಸೀ | ಸ- ನ್ಮುದವಿತ್ತು ಕುರುಕುಲವರಸಿ | ಆಹ ವಿದುರನ ತಾತ ನಿನ್ನೊಡೆಯ ಬಾಣದಿ ಫಣೆ ಯದುವೀರ ಚಕ್ರ ಹಸ್ತದಿ ಧರಿಸುತ ಬಂದ 15 ನಿತ್ಯನೂತನ ದೇವ ದೇವಾ | ಸರ್ವ ಶಕ್ತ ನಿನ್ಹೊರತಾರು ಕಾವಾ | ಎನ್ನ ಚಿತ್ತದಿ ನೆಲಸು ಪ್ರಭಾವಾ | ಸರ್ವ ಕೃತ್ಯ ನಿನ್ನದೊ ವಿಜಯ ಭಾವಾ | ಆಹಾ ಮುಕ್ತಿ ಪ್ರದಾತನೆ ಮುಕ್ತರಿಗೊಡೆಯನೆ ತತ್ವ ನಿಯಾಮಕ ತತ್ವಾರ್ಥ ತಿಳಿಸೈಯ್ಯಾ 16 ಚರಣತಳಾರುಣ ಪ್ರಭೆಯೂ | ಹತ್ತು ನಖ ಪಂಕ್ತಿಯ ಪರಿಯೂ | ಗೆಜ್ಜೆ ಸರಪಳಿ ಪಾಡಗರುಳಿಯೂ | ಮೇಲೆ ಜರೆಯ ಪೀತಾಂಬರ ನೆರಿಗೆಯೂ | ಆಹ ವರ ಜಾನುಜಂಘೆಯು ಕರಿಸೊಂಡಲಿನ ತೊಡೆ ಸರ ಮಧ್ಯ ಉರುಕಟಿ ಕಿರಿಗೆಜ್ಜೆ ಉಡುದಾರ 17 ಸರಸಿಜೋದ್ಭವ ವರಸೂತ್ರ | ಮೇಲೆ ಮೆರೆವಂಥ ಸಿರಿಯ ಮಂದೀರ | ಹೃದಯ ವರರತ್ನ ಪದಕದ ಹಾರ | ಸ್ವಚ್ಛ ದರ ವರ್ಣ ಪೊಲ್ವ ಕಂಧಾರಾ | ಆಹ ಕರದ್ವಯ ಕಂಕಣುಂಗುರ ತೋಳ ಬಾಪುರಿ ಸುರರಿಗಭಯ ತೋರ್ಪ ಕರಕಮಲದ ಪುಟ್ಟ 18 ಮೊಸರರ್ಧ ಕಡದಿರೆ ಜನನೀ | ಬಂದು ಹಸುಗೂಸು ಮೇಲೆ ಬೇಡೆ ನನ್ನೀ | ಯಿಂದ ಮುಸುಗಿಟ್ಟು ಪಾಲ್ಕುಡಿಯಲು ನೀ | ಒಲೆ ಬಿಸಿ ಹಾಲುಕ್ಕಲು ಪೋಗೆ ಜನನೀ | ಆಹ ಹಸಿವಡಗದ ಕೋಪಕ್ಮಸರ್ಗಡಿಗೆಯ ವಡ- ದೆಸೆವ ಕಡಗೋಲ್ವಡಿದ್ಕೊಸರೋಡಿ ಬಂದ ಹೇ19 ಪದ್ಮ ಮುಖದ ಕಾಂತಿ ಸೊಂಪೂ | ಅಧರ ತಿದ್ದಿ ಮಾಡಿದ ದಂತ ಬಿಳುಪೂ | ತುಂಬಿ ಮುದ್ದು ಸುರಿಸುವ ಗಲ್ಲದಿಂಪೂ | ಕರ್ಣ ಕುಂಡಲ ಕೆಂಪೂ | ಆಹ ಮಧ್ಯ ಮೂಗುತಿ ನಾಸ ಪದ್ಮದಳಾಕ್ಷವು ಸದ್ಭಕ್ತರೇಕ್ಷಣ ಶುದ್ಧಾತ್ಮ ಸುಖಪೂರ್ಣ20 ಕಮಲಸಂಭವ ವಾಯುಚಲನಾ | ಹುಬ್ಬು ವಿಮಲ ಫಣೆ ತಿಲುಕದಹನಾ | ಮೇಲೆ ಭ್ರಮರ ಕುಂತಳ ಕೇಶ ಚನ್ನಾ | ವಜ್ರ ಅಮಿತ ಸುವರ್ಣ ಮುತ್ತೀನಾ | ಆಹ ಕಮನೀಯ ಮಕುಟವು ಸುಮನಸರೊಂದಿತ ಕಮಲ ತುಳಸಿಹಾರ ವಿಮಲಾಂಗ ಸುಂದರ 21 ಅಂತರ ಬಹಿರ ದಿವ್ಯಾಪ್ತಾ | ಸರ್ವ ರಂತರ ಬಲ್ಲ ನೀ ಗುಪ್ತಾ | ಜೀವ ರಂತರಂಗದಿ ವಾಸ ಸುಪ್ತಾ | ದಿಗ ಳಂತಾನೆ ನಡೆಸುವ ಆತ್ತಾ | ಆಹ ಸಂತತ ಚಿಂತಿಪರಂತರಂಗದಿ ನಿಂತು ಕಂತುಪಿತ ಇನಕೋಟಿಕಾಂತಿ ಮೀರಿದ ಪ್ರಭ22 ಎಚ್ಚತ್ತು ಇರುವ ಸರ್ವದಾ | ಕಾಲ ಮುಚ್ಚಿ ಕೊಂಡಿಪ್ಪೊದೆ ಮೋದಾ | ಅಜ ನುಚ್ವಾಸದುತ್ಪತ್ತಿಯಾದ | ಬಾಯ ಪಾದ | ಆಹ ಮುಚ್ಚೆ ಭೂವ್ಯೋಮವು ಹೆಚ್ಚಿನ ಕೋಪವು ಇಚ್ಚಿಪವನವಾಸ ಸ್ವೇಚ್ಛಾ ವಿಹಾರನೇ 23 ಗೊಲ್ಲರೊಡನಾಟ ಬಯಸೀ | ವಸ್ತು ವಲ್ಲದೆ ಪರಸ್ತ್ರೀಯರೊಲಿಸೀ | ಮತ್ತೆ ಚಲ್ವ ಕುದುರೆ ಏರಿ ಚರಿಸೀ | ತಾ ನೆಲ್ಲಿ ನೋಡಲು ಪೂರ್ಣನೆನಿಸೀ | ಆಹ ವಲ್ಲದೆ ದ್ವಾರಕೆ ಇಲ್ಲಿಗೈತಂದು ಮ ತ್ತೆಲ್ಲರ ಕಾಯುವ ಚೆಲ್ವ ಮಧ್ವೇಶ ಶ್ರೀ 24 ಗೋಪಿ ಕಂದನೆ ಮುದ್ದು ಬಾಲಾ | ಚೆಲ್ವ ರೂಪ ಸಜ್ಜನ ಪರಿಪಾಲಾ | ಗುರು ನಿತ್ಯ ನಿರ್ಮಾಲಾ | ದೇವಾ ಗೋಪಾಲಕೃಷ್ಣವಿಠ್ಠಾಲ | ಆಹ ಪರಿ ನಿಂತು ಮ ಕೊಂಡ ಶ್ರೀಪತಿ ಮರುತೇಶ 25
--------------
ಅಂಬಾಬಾಯಿ
ಬೇಡಧ್ಯಾನಿಸಿ ನೋಡು ಪ ಭವ ಮುಳುಗಿ ನೀನಾರು ಅಲ್ಲಿ ತಂದೆ ತಾಯಿಗಳು ಮತ್ತವರಾರು ಅಂದಿನವನಿತೆಯಾಗಿಗಳಾರು ನಿನ್ನ ನಂದನರೆನಿಸಿ ಬಂದವ ರಾರೋ 1 ಮುನ್ನ ಮಾಡಿದ ಹೊಲಮನೆಯೆಲ್ಲ ನಿನ್ನ ಬೆನ್ನು ಬಂದಗ್ರಜಾನುಜರೆಲ್ಲ ಚೊಕ್ಕ ಚಿನ್ನ ಚಿಗುರು ಬೆಳ್ಳಿ ನಗವೆಲ್ಲಿ ಪಶು ಹೊನ್ನು ಕನಕ ಮಿತ್ರ ಜನರೆಲ್ಲ 2 ಇಂದಿನ ಭವದೊಳು ನಿನಗೆಲ್ಲಿ ಈಗ ಬಂದು ಕೊಡಿದ ಸಂಸಾರವೆಲ್ಲಿ ಮುಂದೆ ಹೊಂದಿ ಹುಟ್ಟುವ ಠಾವುಗಳೆಲ್ಲ ಅಲ್ಲಿ ಬಂಧು ಬಳಗ ನೆರೆದಿಹುದೆಲ್ಲ 3 ಹಲಬರ ನೆರವಿಯ ದೇಹವಿದು ಹೊಳೆ ಚಳಿಕ ತನ್ನಯ ಈ ಋಣ ತೀರುವುದು ಎಲ್ಲ ಬಯಲಿಗೆ ಬಯಲಾಗಿ ಹೋಗುವುದು 4 ಸಾರವಿಲ್ಲದ ಸಂಸಾರವಿದು ನಿ ಪರ ಕೆಡುತಿಹುದು ಈ ಘೋರವನುಳಿದು ನಿರ್ಮಲನಹುದು ಲಕ್ಷ್ಮೀ ಪಾದ ಕೊಡುವುದು5
--------------
ಕವಿ ಪರಮದೇವದಾಸರು
ಮಂಗಳಾರುತಿ ತಂದು ಬೆಳಗಿರೆ | ಅಂಗನೇಯರು ರಂಗಗೇ ||ಅ|| ತುಂಗ ಮಹಿಮ ಶುಭಾಂಗ ಕರುಣಾ | ಪಾಂಗ ಶ್ರೀನರಸಿಂಗಗೇ ಅ.ಪ. ಪ್ರಳಯ ಜಲಧಿಯೊಳಾಲದೆಲೆಯಲಿ | ಮಲಗಿ ಬೆರಳು ಸವಿದಗೇಶ್ರೀಲತಾಂಗಿಯು ಸ್ತೋತ್ರ ಗೈಯ್ಯಲು |ಒಲಿದು ಜೀವರ ಸೃಜಿಸಿದವಗೆ 1 ಮೂಲಕಾರಣ ಮಾಡಿ ಪ್ರಕೃತಿಯ | ನಾಲಕ್ಕಿಪ್ಪತ್ತು ತತ್ವದಾಲೀಲೆಯಿಂದಲಿ ಸೃಜಿಸಿ ಬೊಮ್ಮನ ಚೆಲುವ ತನುವನೆ ಮಾಡ್ದಗೇ2 ಮತ್ತೆ ವಾರಧಿ ಶಯ್ಯನಾಗುತ | ತತ್ವಮಾನಿ ಬೊಮ್ಮನಪೆತ್ತು ತನ್ನಯ ಪೊಕ್ಕಳಿಂದಲಿ | ಕೀರ್ತಿಯನು ಪಡೆದಾತಗೇ 3 ನೀರೊಳಾಡಿ ನಗವ ನೆಗಹಿ | ಕೋರೆದಾಡೆಯ ತೋರ್ದಗೇನರಸಿಂಹಗೆ ದಾನ ಬೇಡ್ದಗೆ | ಧೀರ ಪರಶುರಾಮ ರಾಮಗೇ 4 ಗಿರಿಯ ನೆಗಹಿ ನಗಗಳ್ವೈರಿಯ | ಮರುಳು ಮಾಡಿದ ಚೆಲುವಗೇಬರಿಯ ಮೈಯ್ಯಗೆ ತುರಗನೇರಿದ | ಗುರು ಗೋವಿಂದ ವಿಠಲಗೇ 5
--------------
ಗುರುಗೋವಿಂದವಿಠಲರು
ಮಾಡಿರೊ ಪಾಡಿರೊ | ಲೋಕದೊಳಗೆ ಇದೆ ಬೀರುತಾ ಸಾರುತಾ ಶ್ರೀಕಾಂತನ ವೊಲಿಸಿ ಪ ದಶಮಿ ಏಕಾದಶಿ ದ್ವಾದಶಿ ದಿನತ್ರಯ | ವಸುಧಿಯೊಳಗೆ ಮಹಾವ್ರತವೆಂದು ತಿಳಿದು ತ್ರಿ | ದಶರೆಲ್ಲ ಕೈ ಕೊಂಡು ಮಾಡಿದರಂದು ರಂ | ಜಿಸುವ ಸತ್ಕರ್ಮದಲ್ಲಿ | ಬಿಸಜನಾಭನು ಲಕುಮಿಗೆ ಪೇಳಿದ ವ್ರತ | ಹಸನಾಗಿ ಬೊಮ್ಮಗೆ ಅರಹು ಮಾಡಲು ದೇವ | ಋಷಿಗೆ ಅಜನು ಪೇಳಲಾ ಮುನಿ ಬೀರಿದಾ ದಶ ದಿಕ್ಕಿನೊಳಗೊಂದು 1 ಉದಯಕಾಲದೆಲೆದ್ದು ಸಂಸಾರಯಾತ್ರೆ ಎಂದು | ಬದಿಯಲ್ಲಿದ್ದವರೆಲ್ಲ ಹರಿದಾಸ ದಾಸಿಯರು ಹೃದಯದೊಳೀಪರಿ ಯೋಚಿಸಿ ಅಜ್ಞಾನ ಒಂದು ಕಡೆಗೆ ನೂಕಿ | ಸದಮಲನಾಗಿ ಸ್ನಾನಾದಿಯ ಮಾಡಿ ಮ ವಿಧಿ ಮುಗಿಸಿ ಶ್ರವಣ ಸಾರಾ ಹೃದಯರಿಂದಲಿ ಕೇಳಿ2 ಗೋವಿಂದನ ಚರಣಕೆ ಎತ್ತಿ ನಿರ್ಮಲ ಚಿತ್ತ | ದಿಂದಲಿ ನಲಿವುತ ಹಿಗ್ಗಿ ಹಾರೈಸಿ ಆನಂದ ವಾರಿಧಿಯಲ್ಲಿ | ಕುಂದದೆ ಸೂಸುತ ಗೆಳೆಯರ ಒಡಗೂಡಿ | ತಂದು ಪುಷ್ಪಗಳಿಂದ ಮಂಟಪವ ವಿರಚಿಸಿ | ಇಂದು ಸ್ಥಾಪಿಸಿ ತುತಿಸಿ 3 ಜ್ಞಾನಿಗಳೊಡನೆ ಕುಳ್ಳಿದ್ದು ಸುಜ್ಞಾನಿಗಳು ಶುದ್ಧ ಗಾ| ಆನನ ಕೂಗುತ ಹಾಡುತ ಪಾಡುತ | ಧ್ಯಾನವ ಗೈವುತಲಿ | ಕಾಣಬಾರದಂತೆ ಪ್ರಜೆದೊಳಗೆ ತೋರಿ | ಮಗುವಿನಂತೆ ಶ್ರೀನಿವಾಸನ ನೆನಸಿ 4 ಕೂಡಿ ಸೋಗು ವೈಯಾರದಿ | ಕಾಲಲಿ ಗೆಜ್ಜೆಯ ಕಟ್ಟಿ | ವಲಯಾಕಾರ | ಮೇಲು ಚಪ್ಪಳೆಯಿಂದ | ಬಾಲವೃದ್ಧರು ನಿಂದು ಕುಣಿಕುಣಿದಾಡಿ ಹಿ | ಯಾಲಲಿ ಹರಿಯ ಸಂಕೀರ್ತನೆ ಕೀರ್ತಿಸಿ | ಸೋಲದೆ ಘನಸ್ವರ ಸ್ವರದಿಂದಲಿ ಕೂಗಿ ವಿ | ಶಾಲ ಭಕುತಿ ಒಲಿಸಿ 5 ಕಿರಿಬೆವರೊದಕ ಮೊಗದಿಂದಿಳಿಯಲು | ಉರದಲಿ ಇದ್ದ ದೇವಗೆ ಅಭಿಷೇಚನೆ | ಪರವಶವಾಗಿ ಮೈಮರೆದು ತಮ್ಮೊಳು ತಾವು | ಕರದು ತರ್ಕೈಸುತಲಿ | ಕಿರಿನಗೆಯಿಂದ ತೋಳುಗಳು ಅಲ್ಲಾಡಿಸಿ | ಎರಡು ಭುಜವ ಚಪ್ಪರಿಸಿ ಏಕಾದಶಿ | ದುರಿತ ರಾಸಿಗೆ ಪಾವಕನೆಂದು ಕೂಗಿ ಬೊಬ್ಬಿರಿದು ಬಿರಿದು ಸಾರಿ6 ಮಧ್ಯ ಮಧ್ಯದಲಿ ಮಂಗಳಾರುತಿ ಎತ್ತಿ | ಮಧ್ವರಾಯರೆ ಮೂರು ಲೋಕಕೆ ಗುರುಗಳು | ಸಿದ್ಧಾಂತ ಮುನಿ ಸಮ್ಮತಾ | ಮಲ ಮೂತ್ರವನು ಕ್ರಿಮಿವ ಮನವು | ಮೆದ್ದಾ ಸದ್ದೋಷಿ ಚಂಡಾಲ ವೀರ್ಯಕ್ಕೆ ಬಿದ್ದವ ನಿಜವೆನ್ನಿ 7 ಸಾಗರ ಮೊದಲಾದ ತೀರ್ಥಯಾತ್ರೆಯ ಫಲ | ಭೂಗೋಳದೊಳಗುಳ್ಳ ದಾನ ಧರ್ಮದ ಫಲ | ಆಗಮ ವೇದಾರ್ಥ ಓದಿ ಒಲಿಸಿದ ಫಲ | ಯೋಗ ಮಾರ್ಗದ ಫಲವೊ | ಜಾಗರ ಮಾಡಿದ ಮನುಜನ ಚರಣಕ್ಕೆ ಬಾಗಿದವಗೆ ಇಂಥ ಫಲಪ್ರಾಪ್ತಿ ನಿರ್ದೋಷನಾಗುವ ವೈರಾಗ್ಯದಿ 8 ನಿತ್ಯಾ ನೈಮಿತ್ಯಕ ಮಾಡು ಮಾಡದಲಿರು | ಪೋಗಾಡದೆ ಸದಾಚಾರ ಸ್ಮøತಿಯಂತೆ ಅತ್ಯಂತ ಪಂಡಿತ ಪಾವನ್ನ | ಉತ್ತಮರೊಡಗೂಡಿ ಮೃಷ್ಟಾನ್ನ ಭುಂಜಿಸಿ | ಮೃತ್ಯು ಜೈಸಿ ಸದ್ಗತಿಗೆ ಸತ್ಪಥಮಾಡು | ಸತ್ಯ ಮೂರುತಿ ನಮ್ಮ ವಿಜಯವಿಠ್ಠಲರೇಯ | ನಿತ್ಯ ಬಿಡದೆ ಕಾವಾ 9
--------------
ವಿಜಯದಾಸ
ಯಾತಕೆನ್ನ ಮೇಲಿನ್ನು ಪಂಥ ಸಾಕೊ ಶ್ರೀಕಾಂತ ಪ. ಘೋರ ಷಡ್ವೈರಿಗಳಾರುಭಟಿಗಳನ್ನು ದೂರಗೈದರೆ ನಿನ್ನ ಮಂದಿರವನು ಸಾರಿಸಿ ಶುಚಿಗೈವನಿಂದಿರಾ- ವರ ಬಾರೊ ಭಕ್ತ ಕುಮುದ ಚಂದಿರಾ ಶ್ರುತಿ ಸಾಗರಾ ಲೋಕೈಕ ಸುಂದರಾ 1 ವ್ಯರ್ಥವಾಗಿ ಬಹಿರರ್ಥದಿ ಮಾನಸ ವರ್ತಿಸದಿರೆ ನಿನ್ನ ನೋಡುವೆ ಬಹ- ಳರ್ಥಿಯಿಂದಲಿ ಪಾಡಿ ಪೊಗಳುವೆ ಮೋಹ ಕಾರ್ಥ ಶಾಸ್ತ್ರವ ದೂರ ದೂಡುವೆ ಪುರು- ಷಾರ್ಥದಾಯಕ ನಿನ್ನ ಕೂಡುವೆ 2 ಪತಿಯೆಂದು ಸಂಭ್ರಮಗೊಂಬೆನು ಭೂ- ಪತಿಯಲಿ ನೀನಿಹೆಯೆಂಬೆನು ಸಮ ರತಿಯಿಂದ ಪುರುಷ ಸುಖವುಂಬೆನು ಭಕ್ತಿ ಸತಿಯರ ಭರವನಿಂತು ಕಾಂಬೆನು 3
--------------
ತುಪಾಕಿ ವೆಂಕಟರಮಣಾಚಾರ್ಯ
ಯಾರಿಗೆ ದೂರುವೆನು ವೆಂಕಟರಾಯ ಚಾರದ ಮಹಿಮೆಯನು ಪ ಈರಾರು ಸ್ಥಳವಲ್ಲಿ ಮೂರಾರು ಸೇರಿಸಿ ಹೋರಾಟವನಿತ್ತು ಮಾರಿದೆಯೆನ್ನನು ಅ.ಪ ತೇಜವುಳ್ಳವನೊಬ್ಬನು ಐದನೆಯಲ್ಲಿ ಮೋಜಾಗಿ ಒಳಹೊಕ್ಕನು ಹೂಜಿ ತುಂಬಿದ್ದುದ ಸೋಜಿಗದೊಳು ಕದ್ದು ಪಾಜಿ ಮಾಡಿದನೆನ್ನ ಮೂಜಗದೊಡೆಯ 1 ಸೀತವಾದವನೊಬ್ಬನು ಅಷ್ಟಮದದಲ್ಲಿ ಕಾತುರದೊಳು ಬಂದನು ಘಾತಕತನ ಮಾಡಿ ಭೀತಿಗಳನು ತೋರಿ ದಾತ 2 ಮೂರನೆಯವನೊಬ್ಬನು ಏಳನೆಯಲ್ಲಿ ಸೇರಿಯೆ ಕಳುತಿದ್ದನು ಏರಿ ಬಂದುದನೆಲ್ಲ ಆರಿಸಿ ಮಾರಿಸಿ ಸೂರೆಗೊಂಡನು ಎನ್ನ ವಾರಿಜನಾಭ 3 ಅತ್ರಿಯ ಮೊಮ್ಮಗನು ನಾಲ್ಕನೆಯಲ್ಲಿ ಶತ್ರುವಾಗಿಯೆ ನಿಂತನು ಗೋತ್ರದಿ ಕಲಹವ ಬೆಳಸಿಯೆಯಿದ್ದಂಥ ಪಾತ್ರವÀ ತೀರಿಸಿ ಗಾತ್ರವ ಕೆಡಸಿದ 4 ಸುರಗುರುವೆಂಬುವನು ಮೂರನೆಯಲ್ಲಿ ಸ್ಥಿರವಾಗಿ ನಿಂತಿಹನು ಗುರುಗಳ ಮುಖದಿಂದ ಕರಕರೆ ಹತ್ತಿಸಿ- ದರು ಪಾಡಿ ಹರಿಯನ್ನು ತಿರುಕನಾದೆನು ನಾನು 5 ಆರನೆ ಮನೆಯೊಳಗೆ ದೈತ್ಯರ ಆ- ಚಾರಿಯನು ನಿಂತಿಹನು ಹಾರುಮಾತುಗಳೇಕೆ ತೂರಿದನೆಲ್ಲವ ಪಾರಾದೆನು ನಾನು ವಾರಿಜನೇತ್ರ 6 ಆದಿತ್ಯ ಪುತ್ರನಾದ ಶನೈಶ್ವರ ಬಾಧಿಪ ಮನೆಗಳಾರು ದ್ವಾದಶ ಆದಿಯು ದ್ವಿತೀಯ ಪಂಚಮದಲ್ಲಿ ವೇದಗಳೆಲ್ಲವು ಏಳುಯೆಂಟಿರಲಿ 7 ನಾಡನಾಳುವ ರಾಯರ ಕೆಡಿಸಿ ಮುಂದೆ ಕಾಡಿಗೆ ಸೇರಿಸಿದ ಈಡಿಲ್ಲ ಈತಗೆ ಜೋಡಿಲ್ಲ ಗ್ರಹರೊಳು ಪಾಡೆಲ್ಲ ಕೆಡಿಸಿದ ರೂಢಿಗೆ ಒಡೆಯ 8 ವಾರಿಧಿ ಮಥನದಲಿ ಸುಧೆಯನ್ನುಂಡು ಸೇರಿದ ಗೃಹರೊಳಗೆ ಮೀರಿದರಿಬ್ಬರ ಪಾರುಪತ್ಯಗಳನ್ನು ಮಾರ ಸನ್ನಿಭನೆ 9 ಸಂಧಿ ಸಂಧಿಯಲಿವರು ಬಂದೆನ್ನನು ದಂದುಗ ಬಡಿಸುವರು ಇಂದ್ರಾದಿ ದೇವರಿಗಳವಲ್ಲ ಇವರೊಳು ಹಿಂದು ಮುಂದರಿಯೆನು ಬಂದ ಬವರವನ್ನು 10 ಶುಭದಲ್ಲಿ ಶುಭವಿತ್ತರು ವೆಂಕಟರಾಯ ಶುಭ ತೋರಿಸೊ ಅಭಯವನಿಪ್ಪಂಥ ವರಾಹತಿಮ್ಮಪ್ಪನೆ ಪ್ರಭುವೆಂದು ನೀ ಹೇಳಿ ವಿಭವಗಳೆನಗೀಯೊ 11
--------------
ವರಹತಿಮ್ಮಪ್ಪ
ವಂದಿಸುವೆನು ನಿತ್ಯದೊಳು ವಂದಿಸುವೆನು ಪ ವಂದಿಸುವೆ ಗುರುಮಧ್ವರಾಯನಷ್ಟಾಂಗದೊಳು ನಿಂದಿರ್ದ ವೈಷ್ಣವಮತಚಂದ್ರವಾರಿಧಿಗೆ ಅ.ಪ ಕ್ರೋಧವರ್ಜಿತನಾಗಿ ವೈರಾಗ್ಯವನು ತೊಟ್ಟು ಬಾಧಿಸುವ ಇಂದ್ರಿಯಂಗಳನೆಲ್ಲ ಬಲಿದು ಆಧರಿಸಿ ಕ್ಷಮೆ ದಮೆ ಶಾಂತ ಸದ್ಗುಣದಿಂದ ಮಾಧುರ್ಯದೊಳು ಜನರ ಪ್ರೀತಿಕರನಾದವಗೆ 1 ಭಯವಿವರ್ಜಿತನಾಗಿ ಬಹುಲೋಭವನು ತೊರೆದು ಕ್ಷಯ ಮಾಡಿ ಮೋಹವನು ಹಿಂದುಗಳೆದು ನವವಿಧದ ಜ್ಞಾನವನು ದಶಲಕ್ಷಣಗಳಿಂದ ನಿಯತವತಿ ಕೈಕೊಂಡನಕ್ಷರ ತ್ರಯದೊಳು 2 ಏಳು ಕೋಟಿಯ ಮಹಾ ಮಂತ್ರ ಬಾಹ್ಯದ ಕೋಟೆ ನಾಲಿಗೆ ವಶಮಾಡಿ ನವದ್ವಾರಗಳು ಮೂಲಾಗ್ನಿಯಿಂ ಸುಟ್ಟು ದಶವಾಯುಗಳ ಕದವ ಸಾಲು ನಾದಗಳೆಂಬ ಕಹಳೆವಿಡಿದವಗೆ 3 ದಶವಿಧದ ಘೋಷಗಳ ಬಿಂದು ಪ್ರತಾಪದಿಂ ದಶಮನಾಗಿಯೆ ಮುಂದೆ ಡೆಂಕಣಿಯ ಹಾರಿ ಗಸಣಿಯನು ಬಿಟ್ಟು ಕಳೆಯಿಂದೇಳು ಧಾತುಗಳ ಎಸೆವ ದುರ್ಗಾಂತರಕೆ ತಾಗಲಿಟ್ಟವಗೆ 4 ಒಂದು ಮುಹೂರ್ತದಲಿ ವ್ಯಸನಗಳನು ಹೂಳಿ ಬಂಧಿಸಿಯೆ ಚಂದ್ರಾರ್ಕ ವೀಧಿಗಳ ಪ್ರಣವದೊಳು ಮುಂದೆ ಮೂಲಾಧಾರವೆಂಬ ಅರಮನೆ ಪೊಕ್ಕು ನಿಂದು ನಿಯಮದಿ ಸುಲಿದನದಿಷ್ಠಾನದರಮನೆಯ 5 ಪ್ರತ್ಯಾಹಾರದಿಂ ಮಣಿಹಾರಕದ ಮನೆಯ ಕಿತ್ತು ಕಿಚ್ಚಂ ಹಾಕಿ ಧ್ಯಾನ ಯೋಗದಿ ಬಂದ ಮತ್ತೆ ಸಂಶುದ್ಧ್ದವೆಂಬರಮನೆಯ ಕೋಲಾಹಲದಿ ಉತ್ತಮದ ಅಂಬಿಕಾ ಯೋಗದಿಚ್ಛೆಯೊಳು 6 ಜ್ಞಾನ ಮಂಟಪವೆಂಬ ರಾಜ ಮನೆಯೊಳು ನಿಂತು ಮನದೊಳು ಮೂಲ ಬಂಧದಿ ಆರು ಶಕ್ತಿಗಳ ಹೀನವಾಗಿಹ ಗುಣತ್ರಯವೆಂಬ ಗೊಲ್ಲರನು ವ- ಡ್ಯಾಣ ಬಂಧದಿ ಇರಿವುತಲಿ ಕ್ಷಿಪ್ರದಲಿ 7 ಖೇಚರಿಯ ಯೋಗದಿಂ ಕರಣ ಚತುಷ್ಟಯದ ನೀಚ ಪ್ರಧಾನಿಗಳ ನೆಗಳವನಿಕ್ಕಿ ಕಾಲ ಕರ್ಮದ ಕಣ್ಣುಗಳ ಕಿತ್ತು ಯೋಚನೆಯ ಮಾಡಿದನು ವೀರಾಸನದೊಳು 8 ಮಾಯಾ ಪ್ರಪಂಚವೆಂಬನ್ಯಾಯ ನಾಯಕರ ಕಾಯ ಉಳಿಸದೆ ಸವರಿ ವಾಸ್ತಿಯಿಂದನುಗೈದು- ಪಾಯದಿಂದಾರು ವಿಕಾರಗಳ ಕೈಗಟ್ಟಿ ಬಾಯ ಹೊಯ್ದ ಗುರುವಿಗೆರಗುವೆನು ನಾನು 9 ಇಪ್ಪತ್ತೊಂದು ಸಾವಿರವಾರು ನೂರಾದ ಉತ್ಪವನ ಉಶ್ವಾಸ ನಿಶ್ವಾಸಗಳನೆಲ್ಲ ತಪ್ಪಿಸದೆ ಕುಂಭಕದಿಂದ ಬಂಧಿಸಿಕೊಂಡು ಒಪ್ಪುವನು ಅರೆನೇತ್ರದಿಂದ ಬೆಳಗುವನು 10 ಮುನ್ನೂರ ಅರುವತ್ತು ವ್ಯಾಧಿಗಳ ಲವಳಿಯಿಂ ಬೆನ್ನ ಬೆಳೆಸಿ ಕಪಾಲ ಭೌತಿಯಿಂದಷ್ಟಮದ ವರ್ಣಾಶ್ರಮಂಗಳನು ಏಕವನು ಮಾಡಿಯೆ ನಿರ್ಣಯಿಸಿಕೊಂಡು ತಾ ನೋಡುವವಗೆ 11 ನುತಿಕರ್ಮದಿಂದಷ್ಟ ಆತ್ಮಕರ ಆಸನವ ಜೊತೆಗೂಡಿ ಜಾತ ಮಧ್ಯದ ದೃಷ್ಟಿಯಿಂದ ಅತಿವೇಗದೊಳು ನಡೆವ ಅವಸ್ಥಾತ್ರಯವೆಂಬ ಕೃತಿ ಕುದುರೆಗಳ ಯುಕುತಿಯಲ್ಲಿ ಪಿಡಿದವಗೆ 12 ನಾದದಿಂ ಪಂಚಕ್ಲೇಶ ಪ್ರಭುಗಳನು ಹೊಯ್ದು ಕಾದು ಇರುತಿಹ ಹರಿಗಳಾರು ಬಿಂದುವಿನಿಂ ಸಾಧಿಸುತ ಮಂತ್ರಭ್ರಮಣದಿಂದ ಮಲತ್ರಯದ ಆದಿ ಕರಣಿಕನನ್ನು ಹಿಡಿದವನಿಗೆ13 ದಾತೃತ್ವದಿಂ ಸತ್ಯಲೋಕವನು ತಾ ಕಂಡು ಕಾತರದಿ ಆಕಾರದುರ್ಗವನು ಹತ್ತಿ ಓತಿರುವ ತಿರಿಕೂಟವೆಂಬ ಬಾಗಿಲ ದಾಟಿ ಈ ತೆರದ ಮಹಾದುರ್ಗವನು ಕಂಡವಗೆ 14 ಅಣು ಮಾತ್ರ ಸೂಕ್ಷ್ಮದೊಳು ನೋಡಿ ತಾ ಜ್ಞಾನದೊಳು ಕುಣಿಯೊಳಗೆ ಆ ಪರಂಜ್ಯೋತಿ ಆಗಿರುತಿಪ್ಪ ಗುಣನಿಧಿಯು ವರಾಹತಿಮ್ಮಪ್ಪರಾಯನನು ಕಣು ಮನದಿ ದೃಢವಾಗಿ ನೋಡಿ ಸುಖಿಯಾದವಗೆ 15
--------------
ವರಹತಿಮ್ಮಪ್ಪ
ಶ್ರೀಧರಾಕರ ಕಂಜ ಸೇವಿತ ಪಾದ ಪದ್ಮಜ ಪದದ ಪುರು ಕರು- ಣೋದಧಿಯೆ ಲಾಲಿಪುದು ಪಾಮರನೆಂಬ ಬಿನ್ನಪವ ಸೋದರ ಸ್ಥಿತ ಸಕಲ ಬ್ರಹ್ಮಾಂ- ಪತಿ ನೀನರಿವಿಯಾದರು ಮಾಧವನೆ ಮನದಿರವ ಪೇಳ್ವೆನು ಮನುಜಭಾವದಲಿ 1 ಸುಕೃತ ಫಲವೋ ದೋಷದೂರನೆ ನಿನ್ನ ಪದವನು ಮೀಸಲಳಿಯದೆ ಸೇವೆ ಮಾಳ್ವದು ಲೇಸುಲೇಸೆಂದು ದಾಸಕೂಟದಿ ಸೇರಿ ಮನೆಯಲಿ ವಾಸವಾಗಿರಲಿದರ ಮಧ್ಯಮ ರಾಶೆ ಬಲೆಯಲಿ ಸಿಲುಕಿದೆನು ಕರುಣಾ ಸಮುದ್ರಹರಿ 2 ತನ್ನಿಕೃಷ್ಟ ಮನೋವಿಕಾರಗ- ಳಿನ್ನು ಬಿಡದಲೆ ಪೀಡಿಸುವ ಪರಿ ಯನ್ನು ಪರಮ ಕೃಪಾಳು ನೀನೆಂದೊರವೆನಖಿಳೇಶ ಮಾನ್ನವರ ಮಧ್ಯದಲಿ ಮಾನದಿ ಎನ್ನ ಕಾಪಾಡುವದು ಭಾರವೆ ತನ್ನ ಫಲಗಳ ತಾನೆ ಕೆಡಹುವದುಚಿತವೇ ತೆಗೆ 3 ಯುಕ್ತಿಯಲಿ ನಿನ್ನಂಥ ದೇವರ ರೆತ್ತಿ ವೈದಮೃತವನು ಸುಲಭದೊಳಿತ್ತೆ ದಿವಿಜರಿಗೆ ಔತ್ತರೇಯನ ಕಾಯ್ದ ದ್ರೌಣಿಯ ನೆತ್ತಿಯೊಳಗಿನ ರತ್ನ ಭೀಮನಿ ಗಿತ್ತ ಪರಿಯನು ಪಠಿಸಿ ತಿಳಿದೆನು ಪಾವನಾತ್ಮಕನೆ 4 ಬ್ರಹ್ಮತೇಜೋ ವೃದ್ಧಿ ಬಲಿಯೊಳು ಬ್ಯಾಡ ಸಂಗರ ನಮಗೆನುತ ನಿ- ಮ್ಮಮ್ಮನೊಳ್ ನುಡಿದಂದು ಕಶ್ಯಪನಿಂದಲವತರಿಸಿ ಬ್ರಹ್ಮಚಾರಿಯ ರೂಪದಿಂದೀ ಕ್ಷಮ್ಮೆಯನು ಸೆಳೆದಿಂದ್ರಗಿತ್ತಮ- ಹಾನ್ಮಹಿಮ ನಿನಗಾವದಘಟಿತ ನೀರಜಾರಮಣ5 ನಾರದರ ನುಡಿ ನಿಜವೆನುತ ಮೂ- ರಾರು ಭಕ್ತಿಯ ತಾಳ್ದ ಮನುವಿನೊ- ಳಾರುಭಟಿಸುತ ಕಾಶ್ಯಪನು ಮದವೇರಿ ನಿಂದಿರಲು ಯಾರು ತಿಳಿಯದ ತೆರದಿ ಕಂಭದಿ ಮೃಗ ರೂಪವನು ಹೆ- ಮ್ಮಾರಿ ದೈತ್ಯನ ತರಿದು ತ್ವತ್ಪದವಿತ್ತೆ ದಾಸನಿಗೆ 6 ಏನು ಶ್ರಮವಿಲ್ಲದಲೆ ಪಿಡಿದು ದ- ಶಾನನನ ತೊಟ್ಟಿಲಿಗೆ ಕಟ್ಟಿ ಪ್ರ- ವೀಣತೆಯ ತೋರಿಸಿದ ವಾಲಿಯ ಪಕ್ಷವನು ತ್ಯಜಿಸಿ ದೀನ ಬಾಂಧವನೆಂಬ ಬಿರುದನು ದಿಟವೆ ನಿಶಿತದ್ರಾಜ್ಯ ಪದವಿಯ ಭಾನುಜನಿಗೊಲಿದಿತ್ತ ಭಕ್ತಜನಾರ್ತಿ ಭಂಜನನೆ 7 ಶಬ್ದಗೋಚರವಾದ ಕಥೆಗಳು ಬದ್ಧವೆಂಬುದು ಪೂರ್ವದನುಭವ ಸಿದ್ಧವಾಗಿಹುದೆನಗೆ ಸಜ್ಜನಲಬ್ಧಪದ ಪದ್ಮ ಬುದ್ಧಿಹೀನತೆಯಿಂದ ನುಡಿದರು ಮಧ್ವವಲ್ಲಭ ನಿನ್ನ ದಾಸನ- ನುದ್ಧರಿಸು ನೀನಲ್ಲದೆನಗಿನ್ನಾರು ಗತಿ ಹರಿಯೆ8 ಒಡೆಯರೆಂಬರನೆಲ್ಯುಕಾಣದೆ ಉಡುವದುಂಬುದಕೇನು ದೊರೆಯದೆ ಗಿಡವ ನಿಲುಕದ ಬಳ್ಳಿಯಂದದಿ ಬಡುವ ಕಷ್ಟವನು ತಡೆಯಲಾರದೆ ತಳಮಳಿಸುತಿರೆ ಪಿಡಿದು ಕರವನು ಕಾಯ್ದೆಯೆನ್ನನು ನುಡಿವದೇನಖಿಳಾಂಡ ನಾಯಕ ನಿನ್ನ ಮಹಿಮೆಯನು 9 ಮಾರಿಯಂದದಿ ಮಧ್ಯದೊಳಗೊ- ಬ್ಯಾರುವೇನೆಂಬಧಮ ಹೂಣನು ತೀರಿಸುವೆನೆಂದೆನ್ನೊಳಿಲ್ಲದ ದೂರ ಸಂಗ್ರಹಿಸಿ ಗಾರಗೊಳಿಸುವದರಿತು ಕಕ್ಷವ ಹಾರಿಸುತ ಸುರವಂದ್ಯ ಮೂರ್ತಿಯ ತೋರಿ ತಂದಿಲ್ಲಿರಿಸಿ ಪೊರೆದವನ್ಯಾರು ಪೇಳ್ದೊರೆಯೆ 10 ಶ್ರೀಶ ನಿನ್ನ ಪದಾಬ್ಜ ಪೊಗಳುವ ದಾಸ ಕೂಟದಿ ಸೇರಿ ಸೇವೆಯ ಬ್ಯಾಸರದೆ ನಡೆಸುತಿರೆ ಮತ್ತೊಬ್ಬಾಸುರನ ತೆರದಿ ದ್ವೇಷದಿಂದಿರೆ ದೂರ ಓಡಿಸಿ ದುರಿತ ಭಯಗಳ ಪರಿಹರಿಸಿದ ಮ- ದೀಶ ನೀನೆಂದನವರತ ನಂಬಿರುವೆ ಶ್ರೀಪತಿಯ 11 ಇಷ್ಟು ಪರಿಯಿಂದೆನ್ನ ರಕ್ಷಿಸು- ತಿಷ್ಟ ಫಲಗಳನೀವ ವೆಂಕಟ ಬೆಟ್ಟದೊಡೆಯನೆ ಬೇಡಿಕೊಂಬುವೆ ಒಂದು ಕೃತ್ಯವನು ಮಾನವ ನುಡಿಯಕಾಡನು ಸುಟ್ಟು ಸೂರೆಯಗೈದು ನಾ ಮನ ಸಿಟ್ಟ ತೆರದಲಿ ತೋರು ಚಿತ್ತವ ಸೃಷ್ಟಿಕರ ಶ್ರೀಶ 12
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಶ ಬ್ರಹ್ಮ ಸದಾಶಿವಾದಿ ಸುರಾರ್ಚಿತ ದಾಶರಥಿ ತವ ದಾಸರೊಳಗಿಟ್ಟು ನೀ ಸಲಹೊ ವಿಷಯಾಶೆಗಳ ಬಿಡಿಸಿ ಪ ಲೋಕನೀಯ ವಿಶೋಕ ಭಕ್ತರ ಶೋಕ ಮೋಹವ ನೀ ಕಳೆದು ಸುಖ ವೇ ಕರುಣಿಸು ಕೃಪಕಟಾಕ್ಷದಿ ಅಕೂತಿತನಯ ವಾಕುಮನ್ನಿಸನೇಕ ಮಹಿಮ ವಿ ವೇಕ ಬುದ್ದಿಯ ನೀ ಕೊಡೆನೆಗೆ ಪಿ ನಾಕಿಸುತ ಪರಲೋಕದಾಯಕ ಲೌಕಿಕವ ಬಿಡಿಸೊ1 ವೈರಿವರ್ಗಗಳಾರು ಇಂದ್ರಿಯ ದ್ವಾರದೊಳು ಪೊಕ್ಕು ಚಾರುಧರ್ಮದ ದಾರಿ ಮನಸಿಗೆ ತೋರ ಗೊಡದಲೆ ನಾರಿ ಧರಣಿ ಧನಾ ಹಾರಯಿಸುತಿದ್ದು ಘೋರಿಸುತಿವೆ ಮುರಾರಿ ತವಚರ ಣಾರವಿಂದವ ತೋರಿ ಮನದಿ ಸಂ ಸಾರ ಶರಧಿಯ ತಾರಿಸನುದಿನ2 ತರಣಿ ನವ ಪೋತ ಕಾಲವ ಭೀತಿ ಬಿಡಿಸು ಪುರು ಹೂತನ ಪ್ರಿಯ ಮಾತುಳಾಂತಕ ಮಾತುಗಳನೆ ಮನ್ನಿಸಿ ಶ್ವೇತವಾಹನ ಸೂತಸುಖಮಯ ವಾತಪಿತ ಜಗನ್ನಾಥವಿಠ್ಠಲ ಪಾತಕಾರಣ್ಯ ವೀತಿಹೋತ್ರ ನಾ ತುತಿಪೆನೆ ನಿನ್ನಾ 3
--------------
ಜಗನ್ನಾಥದಾಸರು
ಶ್ರೀಶೈಲದೊಳಗಿಪ್ಪ ಸ್ವಾಮಿ ಪುಷ್ಕರಣಿ ಇತಿ ಹಾಸವ ದಿಲೀಪನೃಪ ಬೆಸಗೊಳಲು ಕೇಳಿ ದು ಕೇಳಿ ಸಂತೋಷಿಸುವುದು ಪ ಮುನಿಕುಲೋತ್ತಮ ನೆನಿಸಿ ದುರ್ವಾಸಋಷಿ ದಿಲೀ ಪನ ಸದನವೈದಿರಲು ಕೇಳಿ ಸಂತೋಷದಲಿ ಮುಗಿದು ವಿಜ್ಞಾಪಿಸಿದನು ಋಷಿಗೆ ಅನಿಮಿಷೇಶಾ ವೆಂಕಟನ ನಾಮಧೇಯ ಕುಂ ಭಿಣಿ ಯೊಳಿಪ್ಪಾಖ್ಯಾನ ತೀರ್ಥಗಳ ವೈಭವಗ ದುರ್ವಾಸ ಪೇಳೊದಗಿದಿ 1 ಕೇಳು ರಾಜೇಂದ್ರ ವೆಂಕಟ ಪರ್ವತನು ಮೇರು ಶೈಲಾತ್ಮಜನು ವಾಯು ಶೇಷರ ಸುಸಂವಾದ ಸ್ವರ್ಣ ಮುಖರೀ ತೀರದಿ ಬೀಳಲ್ಕೆ ನೊಂದು ಪ್ರಾರ್ಥಿಸಿದ ಶೇಷನು ಎನ್ನ ಮ್ಯಾಲೆ ಮಲಗಿಪ್ಪ ತೆರದಂತೆ ದಯದಿಂ ನೀನೆ ಶೇಷಾದ್ರಿಯೆನಿಸುತಿಹುದು 2 ಈ ನಗೋತ್ತಮದಾದಿ ಮಧ್ಯಾವಸಾನ ಪ್ರ ಸೂನು ಫಲ ಸಂಯುಕ್ತ ಸಾನುಗಳ ಸುರುಚಿಕೋ ಪುಷ್ಕರಣಿ ತೀರ್ಥದ ತಟದಲಿ ಶ್ರೀನಿವಾಸನು ಬಂದು ನಿಂತ ಕಾರಣವೆನಗೆ ನೀನರುಪುವುದು ಯೆಂದು ಬೆಸಗೊಳಲು ದುರ್ವಾಸ ನೃಪಗೆ ಹರುಷೋದ್ರೇಕದಿ 3 ತೀರ್ಥೋತ್ತಮತ್ವ ಸಾಪೇಕ್ಷಿಯಿಂದಲಿ ಬ್ರಹ್ಮ ಪತ್ನಿ ಪೂರ್ವದಲಿ ಬ್ರಹ್ಮಾವರ್ತ ದೇಶದೊಳ ಪುಲಸ್ತಾಖ್ಯ ಮುನಿಪ ತತ್ತೀರದಲಿ ತಪವಗೈವೆನೆಂದೆನುತ ಬರೆ ಪುತ್ರನೆಂದರಿದು ಮನ್ನಿಸದಿರಲು ಕೋಪದಲಿ ನಿಷ್ಫಲವಯೈದಲೆಂದು ನುಡಿದ 4 ನದ್ಯೋತ್ತಮತ್ವ ಜಾಹ್ನವಿಗಿರಲಿ ಗುಣಗಳಿಂ ಸ್ವರ್ಧುನಿಯು ನೀಚಳಾದರೆಯು ಸರಿ ಲೋಕ ಪ್ರ ಪಾದ ಪ್ರಸಾದದಿಂದ ವಾಗ್ದೇವಿ ನುಡಿಗಳು ಭ ವದ್ವಂಶರೆಲ್ಲ ರಾಕ್ಷಸರಾಗಿ ಬಹಳ ವಿ ಪದಕೆರಗಿ ಬಿನ್ನೈಸಿದ 5 ಅನಭಿಜ್ಞ ಲೋಕೋಪಕಾರ ತಪವೆಂದರಿಯ ದನುಚಿತೋಕ್ತಿಗಳನಾಡಿದೆ ಮಯಾಕೃತದೋಷ ಮುನಿವರನು ಸಂಪ್ರಾರ್ಥಿಸೆ ಪುನರಪಿ ವಿಶಾಪವಿತ್ತಳು ಪ್ರಸನ್ಮುಖಳಾಗಿ ಜನಿಸಲೀ ಭವದ ಪ್ರಾಂತಕ್ಕೆವರ ವಿಭೀ ಭಗವದ್ಧ್ಯಾನಪರಳಾದಳು 6 ತೀರ್ಥೋತ್ತಮತ್ವ ಸಾಪೇಕ್ಷಯಿಂ ವಾಗ್ದೇವಿ ಮತ್ತು ತಪದಿ ಪ್ರೀತಿಗೊಳಿಸಲ್ಕೆ ದೇವದೇ ಬಿನ್ನೈಸಿದಳು ವಾಂಛಿತವನು ವ್ಯರ್ಥವಾಯಿತು ತಪವು ಬಹ್ಮ ಶಾಪದಲಿ ತೀ ರ್ಥೋತ್ತಮತ್ವವು ಕರುಣಿಸೆಂದು ಕೇಳ್ದುದಕೆ ಪ್ರ ಇನಿತೆಂದು ಕಾರುಣ್ಯಸಿಂಧು 7 ನದಿಯರೂಪಕೆ ಬ್ರಹ್ಮಶಾಪ ನಿನಗಾಯಿತ ಲ್ಲದೆ ಸರೋವರಕೆ ಬ್ಯಾರಿಲ್ಲ ಪುಷ್ಕರಣಿಗಳೊ ಸ್ವಾಮಿ ಪುಷ್ಕರಣಿ ಎನಿಸಿ ವಿಧಿಪತ್ನಿ ಶೇಷನೋದ್ದೇಶ ತ್ವತ್ ಸನ್ನಿಧಾ ನದಿ ವಾಸವಾಹೆ ಸಂದೇಹವಿಲ್ಲಿದಕೆ ಸ ಸಜ್ಜನರಿಗಖಿಳಾರ್ಥವೀವೆನೆಂದ 8 ಮೂರುವರೆ ಕೋಟಿ ತೀರ್ಥಗಳು ಭುವನತ್ರಯದೊ ಳಾರಾಧಿಸಿದರೆಯೆನ್ನ ಸ್ವಸ್ವ ಪಾಪೌಘ ಪರಿ ಧನುರ್ಮಾಸ ಸಿತಪಕ್ಷದ ಈರಾರುದಿನದಲರುಣೋದಯಕೆ ತೀರ್ಥ ಪರಿ ವಾರನೈದಿರಿ ಶುದ್ಧರಾಗುವಿರಿಯೆಂದು ತ ಪ್ರೇಷ್ಯತ್ವ ವಾಣಿಗಿತ್ತ 9 ವಾಣಿದೇವಿಯು ತೀರ್ಥರೂಪಳಾಗಲು ಕೃಷ್ಣ ವೇಣಿಸಮ ಬಕುಳ ಮಾಲಿಕೆ ತೀರ್ಥ ಭೂಮಾಭಿ ಹರಿಗೆ ನೈವೇದ್ಯರಚಿಸಿ ಪಾನೀಯ ಧೀ ಭೋಗ ಪತ್ನಿ ಪೂರ್ವದಿ ಸನ್ನಿ ಧಾನದಲ್ಲಿಪ್ಪೆನೆಂದೆನುತ ಪ್ರಾರ್ಥಿಸೆ ಶೇಷ ತಾನಿತ್ತ ಕಮಲಾಕಾಂತನು 10 ಸ್ವಾಮಿ ಪುಷ್ಕರಣಿ ನವತೀರ್ಥಮಾನಿಗಳಿಗೆ ಸು ಧಾಮವೆನಿಸುವಳು ತತ್ತನ್ನಾಮಗಳು ಪೇಳ್ವೆ ಅಗ್ನಿಯನು ಋಣವಿಮೋಚನಿ ಈ ಮಹಾ ವಾಯು ತೀರ್ಥಗಳ ಸುಸ್ನಾನಲ ಕ್ಷ್ಮೀ ಮನೋಹರನ ದರುಶನ ತತ್ವ್ರಸಾದಾತ್ರ ಅಲ್ಪಾಧಿಕಾರಿಗಳಿಗೆ 11 ಕವಿಭಿರೀಡಿತ ಪೂಜ್ಯನೆನಿಸುವನು ಪದ್ಮಸಂ ಭವನು ಪೂಜಕನೆನಿಪ ನೈವೇದ್ಯಕರ್ತೃ ಭಾ ಶರ್ವಶಕ್ರಾರ್ಕ ಮುಖ್ಯ ದಿವಿಜಗಣವಿಹರೆಂದು ಚಿಂತಿಸದೆ ಮರೆದು ಮಾ ನವರೆ ವರ್ತಿಪರೆಂದು ತಿಳಿವವನು ಘೋರ ರೌರವ ಧರಾತಳದೊಳೆಂದ 12 ಮೇರುನಂದನ ವೈಕುಂಠಾದ್ರಿಶತಯೋಜನದ ಮೇರೆಯೊಳು ಪುಣ್ಯತೀರ್ಥಗಳಿಪ್ಪವಲ್ಲೆಲ್ಲ ಮುಖ್ಯಾಮುಖ್ಯ ಭೇದದಿಂದ ನೂರೆಂಟು ತೀರ್ಥಗಳು ಮುಖ್ಯವೆನಿಸುವುವಿದರೊ ಳಾರುತ್ತಮೋತ್ತಮವುಗಳ ನಾಮ ಪೇಳ್ವೆನು ಕು ತುಂಬರ ಆಕಾಶಗಂಗ 13 ವಸುರುದ್ರ ಕಾಣ್ವಗ್ನಿ ಮನ್ವಿಂದ್ರಯಮ ಸೋಮ ಬಿಸರುಹ ಪ್ರೀಯ ನವಪ್ರಜ ಆಶ್ವಿನಿಗಳು ಶುಕ ಜಗಜ್ಜಾಡ್ಯಹರ ಬಾರ್ಹಸ್ವತಿ ದಶಪ್ರಚೇತಸ ಗರುಡ ಶೇಷವಾಸುಕಿಯು ಹೈ ಬ್ಬಸುರ ನಾರದ ವೈಶ್ವದೇವ ಸ್ವಾಹಾಸ್ವಧಾ ಹಸ್ತಿ ನಾರಾಯಣಾದಿ ಪಂಚ 14 ಶಿವರೂಪಿ ದೂರ್ವಾಸ ಪೇಳ್ದನಿನಿತೆಂದು ಜಾ ಹ್ನವಿಯೊಳಬ್ದ ಸ್ನಾನಫಲ ಧನುರ್ಮಾಸದೊಳು ವಾಗ್ದೇವಿ ಶುಕ್ಲಪಕ್ಷ ದ್ವಾದಶಿ ದಿವಸದಿ ಶುಚಿರ್ಭೂತನಾಗಿ ಸಂತೋಷದಲಿ ವಿವರಾಗ್ರಜೋದಯದಿ ಸ್ನಾನವನು ಮಾಡೆ ಐ ಶಿಷ್ಯನೆಂದರಿದು ದಯದಿ 15 ನಾರದ ಮುನೀಂದ್ರನುಪದೇಶದಿಂ ದಕ್ಷನ ಕು ಮಾರಕರು ಸಾಹಸ್ರ ತಮ್ಮ ತಮ್ಮಾಶ್ರಮದ ದಾಕ್ಷಣ್ಯವೆನಿಸುತಿಹ್ಯದು ಭೈರವಾಷ್ಟ ತೀರ್ಥ ಸಿದ್ಧಿಪ್ರದಾಯಕ ಕು ಮಾರಧಾರಿಕ ಪಶ್ಚಿಮದಲಿಹವು ಎಂಟಧಿಕ ತೀರ್ಥಾದ್ರಿಯೆನಿಸುತಿಹುದು 16 ತಾ ತಿಳಿ ಪುದಿತಿಹಾಸ ಶೌನಕಾದ್ಯರಿಗೆ ವರ ಪುಷ್ಕರಣಿಮಹಿಮೆ ಪ್ರೀತಿಯಿಂದಲಿ ತಿಳಿದು ಪಠಿಸುವವರಿಗೆ ಜಗ ನ್ನಾಥ ವಿಠಲ ಮನೋವಾಂಛಿತಗಳಿತ್ತು ಪುರು ಹೂತ ಲೋಕದಲಿ ಸುಖಬಡಿಸಿ ಪ್ರಾಂತಕೆ ತನ್ನ ಪುರವನೈದಿಪ ಕೃಪಾಳು17
--------------
ಜಗನ್ನಾಥದಾಸರು
ಸರಸ್ವತಿ ಮಂಗಳಾರುತಿಯನೆತ್ತೀರೆ ವಾರಿಜಭವಮುಖಿಗೆ ಮಂಗಳಾರುತಿಯನೆತ್ತೀರೆ ಪ ಇಂದು ಬಿಂಬ ಸದೃಶ ವದನೆಗೆ ಲಾವಣ್ಯ ಖಣಿಗೆ ಅಂದ ಕುಂಕುಮಭೂಷಿತ ಫಣೆಗೆ ಹರಿದ್ರ ಭೂಷೆಗೆ ಸಂದ ಮೌಕ್ತಿಕ ಚಂಪಕ ನಾಸಿಕೆಗೆ ಚಂದ ಕರುಣಾಭರಣ ಭೂಷಿತೆಗೆ ಚಾಪ ಇಂದು ಛವಿಯ ಕಿರೀಟ ಭೃತೆಗೆ ಹಿಂದೆ ಜೋಲ್ವ ಕನಕವೇಣಿಗೆ ಮಂಗಳಾರುತಿಯನೆತ್ತಿರೆ 1 ಚಾರುವಸನ ಭೂಷಿತಾಂಗೆಗೆ ವಿದ್ಯುತ್ಸುಕಾಂತೆಗೆ ಹಾರಪದ ಶÀಮಿರೂಪ ಕಂಠೆಗೆ ಸುಕಂಬು ಶ್ರೀದೇವಿಗೆ ಸಾರ ವೇದಾಂಗ ಭೂತೆಗೆ ನೀರಜ ಪಲ್ಲವಗಾತ್ರೆಗೆ ಸಾರಸಾಕ್ಷಿ ಶಿರಿವಂತೆಗೆ ಮಂಗಳಾರುತಿಯನೆತ್ತಿರೆ2 ಕರದಿ ವೀಣೆ ಧರಿಪ ದೇವಿಗೆ ಪಾವನ್ನಗಾತ್ರೆಗೆ ಧರೆಯ ಸೃಷ್ಟಿಕರ್ತನರಸಿಗೆ ಮಂಗಳ ವಾಣಿಗೆ ಪರಿಪರಿಯಲಂಕಾರ ಭೂಷಿತೆಗೆ ಸರಸ ಕೋಮಲ ಪದ್ಮಪಾತೆಗೆ ಮರಕತಭೂಷಣ ಭಾಸೆಗೆ ನಿರುತ ಜನಕೆ ವಿದ್ಯಪ್ರದೆಗೆ ನರಸಿಂಹವಿಠ್ಠಲನ ಬಾಲೆಗೆ ಮಂಗಳಾರುತಿಯನೆತ್ತಿರೆ 3
--------------
ನರಸಿಂಹವಿಠಲರು
ಸಲ್ಲದೋ ಎಲೋ ಮಾಯಿ ಸಲ್ಲದೊ ಎಲೊ ಮಾಯಿ ಎಲ್ಲಾ ಒಂದೆಂಬೋದು ಸೊಲ್ಲನಾಡಲು ಯಮ ಕೊಲ್ಲದಲೆ ಬಿಡಾ ಪ ಉಕ್ಕಿನ ಮಳಿಯ ರೋಮರೋಮದಲಿ ಬಡಿದು ಬೆಸಸಿ ಸದಾ ಗಂಡುತಗಲಿ ಗಟ್ಟಿ ಪಕ್ಕಿಯ ತಿವಿದು ಪಾಶದಲಿ ಬಿಗಿದು ಕಾ ಲಿಕ್ಕಿ ನೆಲಕೆ ವರಿಸಿ ಕೆಂಪಗೆ ಕಾಸಿ ಇಕ್ಕಳದಲಿ ಉಚ್ಚಿ ಕರುಳು ಬೈಲಿಗೆ ಹಾಕಿ ಪೊಕ್ಕಳಿಗೆ ತೇಳಾರು ಪೊಗಿಸಿ ಕಟ್ಟಿ ಕರ ಹೊಯಿದು ನಕ್ಕು ಯಮದೂತರು ನಿನ್ನ ಬಾಧಿಪÀರು 1 ನಿನ್ನ ಕಾಲಲಿ ಒದ್ದೊದ್ದು ಹೆಡಗುಡಿಯನು ಕಟ್ಟಿ ಗಾರ್ಧಭದ ಲದ್ದಿಯೊಳಡಿಗಿಸಿ ಸುತ್ತ ಉರಿಯನಿಕ್ಕಿ ಮದ್ದು ಮೈಯಿಗೆ ಮುಚ್ಚಿ ಮುದದಿಂದ ಬೇಯಿಸಿ ಹದ್ದು ಕಾಗೆಗೆ ನಿನ್ನ ಯೆಡೆ ಮಾಡುವರು ಅ ಮೇಧ್ಯವ ತಿನಿಸುವರು ಅರಗಲ್ಲಿಗೆ ಉದ್ದಿ ಉರುಳ ಬಿಡುವರು ಕೆಂಡದ ಮೇಲೆ ವೊದ್ದಿಸಿ ಪರಿಪರಿ ಭಂಗವಪಡಿಸುವರು 2 ವೈತರಣಿಯೊಳಗದ್ದಿ ಅದ್ರಿಯ ಹರಿ ಮಾತು ಪೊರಡದಂತೆ ಮಾಡಿ ಮುದ್ರೆ ಬಾಯಿಗೆ ಹಾಕಿ ತೂತು ಮೈಯಿಗೆ ತಂತಿಯ ಪೋಣಿಸಿ ಪೂತಿ ಗಂಧದೊಳು ಹೊರಳಿಸಿ ತಡಿಯದೆ ಯಾತಣೆಯಿಂದ ಬಿಸುಟು ಮೊಟ್ಟೆಯ ಕಟ್ಟಿ ಮೂತರ ಕುಡಿಸುವರು ಮೀಸಿಯನು ಕಿತ್ತಿ ಘಾತಿಸಿ ನೋಡುವರು ಮಹಾ ಪಾತಕನೆಂದು ವಿಧಿಯ ಮೇಲೆ ಗುದ್ದೋರು 3 ಹೆಡತಲೆಯಿಂದ ನಾಲಿಗೆಯ ತೆಗೆದು ಕ ಕ್ಕಾಡಿ ಮಾಡಿ ನವನಾರು ಸಂದುಗಳು ಸುಟ್ಟು ಕೈಕಾಲನು ಕಟ್ಟಿಸಿ ಸಾಸವಿ ಸುಣ್ಣ ತೊಡೆದು ಬೋರಿಗೆಯಿಂದ ಬಡಿದು ಬಸಿಗೆ ಹಾಕಿ ಒಡಲೊಳು ಸೀಸವರೆದು ಮರದ ಬೇಲೆಯಲಿ ಹೊಡೆದು ಸರ್ರನೆ ಸೀಳೋರು ಕುರಿಯಂತೆ ಕಡಿದು ಈ ಬಗೆ ಮಾಡೋರು ಕೀವಿನ ಮಡುವಿನೊಳಗೆ ಇಟ್ಟು ತಲೆಮೆಟ್ಟಿ ಕುಣಿವರೊ 4 ಮೂಗನು ಕೊಯಿದು ಕವಡಿಯ ಪೋಣಿಸಿ ಚೆ ನ್ನಾಗಿ ಅತ್ತರಾಟದಲ್ಲಿ ತಲೆಕೆಳಕಾಗಿ ಜೋಲುವಂತೆ ಝೋಲಿಯ ಹೊಡೆದು ಮಾತುಗಾಲೆ ನಿನ್ನ ತೂಗಹಾಕಿ ಬಾಗಿಸಿ ಇನ್ನೊಮ್ಮೆ ಬೊಗಳೆಂದು ಕುಡಕಾಸಿ ವೇಗನೆ ಬರೆ ಇಡುವರು ದು:ಖದ ಸಾಗರ ಉಣಿಸುವರು ಬೆಕ್ಕಿನಂತೆ ಕೂಗಲು ಕೇಳಿ ಸೈರಿಸದಲೆ ಇಪ್ಪರು 5 ಘಾಯವಡೆದಲ್ಲಿ ಇರಿದು ಉಪ್ಪನೆ ತುಂಬಿ ಬಾಯಿವರಳು ಮಾಡಿ ಭತ್ತವ ಥಳಿಸಿ ಕ್ರೂ ರಾಯುಧ ಕಿವಿಗೆ ಬಿರಿಯಿಟ್ಟು ಬಂಧಿಸಿ ಖೋಯೆಂದು ಕೆಡಹಿ ಬೊಬ್ಬಿರಿಯೇ ಚಿಂದಿ ಮಾಡಿ ನಾಯಿಗಳಿಂದ ಕಚ್ಚಿಸಿ ಸೂಜೀಯ ಆಯಕ್ಕೆ ಊರುವರು ಮರಕ್ಕೆ ಕಟ್ಟಿ ಊಯಾಲೆ ಆಡುವರು ಇಪ್ಪತ್ತೆಂಟು ನಾಯಕ ನರಕದಲ್ಲಿಟ್ಟು ತೆಗೆಯುವರು6 ಪರಿ ಬಾಧಿಗೆ ಇರೆ ನರಕ ನರಕದಲ್ಲಿ ಹೂಳಿ ಉಬ್ಬಸಗೈಸಿ ಉರ ಕಾಲದಲ್ಲಿಟ್ಟು ತರುವಾಯ ತೆಗೆದು ಪಾ ಮರ ದುರುಳನೆಂದು ಮಿಡುಕಿಸಿ ಮಹಾನಿತ್ಯ ನರಕದೊಳಗೆ ನೂಕಿ ಕಡೆಗಾಣದಂತೆ ವರಲುತಿರೆ ನಗುವರು ನಿರ್ಮಲವಾದ ಮರುತ ಮತದವರು ಪ್ರತಿದಿನ ಸಿರಿಪತಿ ವಿಜಯವಿಠ್ಠಲನ ನಂಬದ ಮಿಥ್ಯಾ 7
--------------
ವಿಜಯದಾಸ
ಸಂಸಾರದೊಳ್ ಪ ನಾನುನನ್ನದೆಂದು ವೃಥಾ ನರಳಿಬಳಲುವೆ ಅ.ಪ ತಂದೆ ತಾಯಿಯು ಬಂಧು ಬಳಗವು ಸಂ ಬಂಧಿಗಳೆಲ್ಲರು ಸತಿಸುತರೂ ಎಂದಿಗು ರಕ್ಷಕರೆಂದು ನೀ ತಿಳಿದು ಮಂದಮತಿಯೆ ಮುಂದೇ ಕೆಡುವೆಯೊ 1 ದುರ್ವಿದಗ್ಧ ವಿಜ್ಞಾನನಾಗಿ ಗರ್ವಪಡಲೂ ಸುಪರ್ವರ್ ನಗರೇ 2 ಸತ್ಯವೆಂಬುವದು ಮಾತೃ ಪಿತನು ಸ- ರ್ವೋತ್ತಮ ಜ್ಞಾನವು ಭೂತದಯೆಯು ಸ- ನ್ಮಿತ್ರಧರ್ಮವು ಭ್ರಾತೃಗಳ್ ಶಾಂತಿಯು ಪತ್ನೀ ಕ್ಷಮೆಯೂ ಪುತ್ರರ್ ನಿತ್ಯರಿವರು 3 ನಡೆವುದು ಯಾತ್ರೆಯು ನುಡಿವುದು ಮಂತ್ರ ನಡೆಸುವನು ಎಂದು ಧೃಡವಾಗಿ ನಂಬದೆ4 ಧ್ಯಾನನದೀಯೊಳು ಸ್ನಾನಮಾಡಿಸು- ಶ್ರೀನಿವಾಸನ ಸೇವೆಯಿದೆನ್ನದೆ 5 ಮೂರು ವಿಧವಾದ ಜೀವ ಕೋಟಿಯೊ- ಳಾರು ನಾನೆಂದು ದೂರದೃಷ್ಟಿಯಿಂ ಧೀರ ನಾಗಿದರ ಪರವ ಗಾಣದೆ 6 ನೀಮನವಲಿದು ವ್ಯರ್ಥನಾದೆ ನಾಮಾ ಜಪಿಸೀ ಕಾಮಿತ ಪಡಿಯದೆ 7
--------------
ಗುರುರಾಮವಿಠಲ
ಸಾಮಜ ವರದಗೆ ಮಾಮನೋಹರಗೆ ಕಾಮನ ಪಿತ ಶಾಮವರ್ಣ ಶ್ರೀಹರಿಗೆ ವಾಮದೇವನ ಸಖ ಸೋಮವದನ ಹರಿಗೆ ಕಾಮಿನಿ ಸತ್ಯಭಾಮ ಪತಿಗೆ ಹೊಸ ಹೇಮದಾರುತಿಯ ಬೆಳಗಿರೆ 1 ಲಕ್ಷ್ಮೀಯ ಅರಸಗೆ ಪಕ್ಷಿವಾಹನಗೆ ಮೋಕ್ಷದಾಯಕ ಪಾಂಡವ ಪಕ್ಷ ಶ್ರೀಹರಿಗೆ ವಕ್ಷಸ್ಥಳದಿ ಲಕ್ಷ್ಮೀಯ ಪೊರೆವ ಕುಕ್ಷಿವಳಗೆ ಜಗವ ರಕ್ಷಿಸುವ ಹರಿಗೆ ಲಕ್ಷದಾರತಿಯ ಬೆಳಗಿರೆ 2 ಭೋಗಿ ಶಯನಗೆ ಬೇಗದಿಂದಲಿ ಭಕ್ತರ ಪೊರೆವಗೆ ವಾಗೀಶವಂದ್ಯ ಶ್ರೀ ಗುರು ವಿಜಯವಿಠ್ಠಲ ಮಂಗಳ ಮಹಿಮ ತುಂಗ ಚರಿತ ಹರಿಗೆ ಮಂಗಳಾರುತಿಯ ಬೆಳಗಿರೆ 3
--------------
ವಿಜಯದಾಸ
ಸಾರವೆಂದು ನಂಬಬ್ಯಾಡವೋ ಸಂಸಾರ ಸಾರವೆಂದು ನಂಬಬ್ಯಾಡವೋ ಪ ಸಾರವೆಂದು ನಂಬದೇ ಸಂಸಾರ ಸುಖವೆಲ್ಲ ಅ ಕಂಸಾರಿ ಚರಣ ಸಾರಿರೋ ಅ.ಪ ಇಂದ್ರಜಾಲ ದೊಡ್ಡವಣ ಗಂಧರ್ವ ಪುರದ ಮಾಟಾ ಸಾಂದ್ರಜಲ ಪೂರಾ ಛಂದವಿದು ನೋಡಿರ್ಯೋ ಕನಸಿನಲಿ ಕೆಂಯ್ಯಾ ಬೆಳೆಯ ಘನವಕಂಡು ನೆಚ್ಚಿ ತನ್ನ ಮನಿಯೊಳಿಹ ಧಾನ್ಯವೆಲ್ಲಾ ಜಿನುಗು ಮಾಡಿದಂದದಿ 1 ತನುವುತನ್ನನಳಿದರೆ ತನು ಸಂಬಂಧಿಗಳಾರು ಕ್ಷಣಿಕವಾದಾ ಸತಿಸುತ ಧನದ್ರವ್ಯ ಕಾಣಿರ್ಯೋ ಮರ್ಕಟವು ಕೀಲುದೆಗೆದು ಪುಕ್ಕಟೆವೆಸಿಕ್ಕಿದಂತೆ ಅಕ್ಕರದ ಸುಖವೆಲ್ಲಾ ದುಃಖ ರೂಪ ಕಾಣಿರ್ಯೋ 2 ಕುತ್ತಿನ ಮಡಹು ತಾಪತ್ರಯ ತಾರುಮನೆ ಮೃತ್ಯುಬಾಯ ತುತ್ತುರೋಗ ಹುತ್ತವಿದು ಕಾಣಿರ್ಯೋ ಮರಹು ನೀಗಿ ಹರಿಯಭಕ್ತಿ ಬೆರೆದು ನಿತ್ಯರಾಗಿರೆಂದು ಗುರು ಮಹಿಪತಿ ಭೋದಗರೆದ ವಾಕ್ಯನೋಡಿರ್ಯೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು