ಒಟ್ಟು 43 ಕಡೆಗಳಲ್ಲಿ , 2 ದಾಸರು , 43 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೂರ್ತಿ ಧೃತ ಹೇಮವರ್ಣ ಸರ್ವಾಂಗ ಶೋಭಿತೆ ಕಾಮಿತಾರ್ಥ ಉದಾರಿಣಿ ಕುಂಡಲ ಪಾಣಿ ಪಾತ್ರ ಸುಧಾರಿಣಿ ಸೂರ್ಯ ಸುರಮುನಿಸ್ತೋಮ ಹೃದಯ ಸಂಚಾರಿಣಿ ಕಾಲ ಕಠಾರಿ ಪರಶಿವೆ 1 ಅಂಬುಜಾನನೆ ಸಕಲ ಕುಟುಂಬ ರಕ್ಷಕ ಮೋಹಿನಿ ಶಂಭುದಾನವ ಶಿಕ್ಷಿತೆ ಶಿವ ಪ್ರತಿಬಿಂಬೆ ಸಿಂಹ ಸುವಾಹಿನಿ ಕಂಬುಕಂಧರ ರತ್ನ ಭೂಷಿತೆ ತುಂಬರ ಪ್ರಿಯಗಾಯಿನಿ ಕುಮುದ ಲೋಚನೆÀ 2 ವರದ ಅಭಯ ಕರಾಂಬುಜೇಷಣೆ ವೀಣಾ ಪುಸ್ತಕ ಶೋಭಿತೇ ಪರಮ ಪಾವನ ಚರಿತೆ ಪರಮೇಶ್ವರಿ ಪ್ರತಾಪ ವಿರಾಜಿತೆ ಭರಿತ ಬಂಧ ಕಟಾದಿವಾಸಿನಿ ಭಕ್ತ ಸಜ್ಜನ ಪೂಜಿತೆ ಗುರು ವಿಮಲಾನಂದ ದೇವಿ ಶ್ರೀ ಮಹಾಲಕ್ಷ್ಮೀ ಸಂತತ 3
--------------
ಭಟಕಳ ಅಪ್ಪಯ್ಯ
ಯಾಚಕ ಜನ್ಮಾ ಯಾಕೆ ಬರೆದನೊ ಬ್ರಹ್ಮಾ ನಾಚಿಕೆಯಾಗಿ ನಷ್ಟಾಗುವಂತೆ ಸ್ವಧರ್ಮಾ ಪ ಒಡಲಾಶೆಗಾಗಿ ಹೊಲೆಯನ ಹೊಗಳಬೇಕು ಕಡುಲೋಭಿಯಾದ ಅರಸನೋಲಗವೆ ಸಾಕು ಬಡತನವೆಂದು ಪರರ ಸೇರುವದೆ ಸಾಕು ಒಡಲು ಪರಾಕು 1 ತ್ಯಾಗದಿ ಕರ್ಣಾ ಭೋಗದಿ ದೇವೇಂಧ್ರನೆಂದು ಕೊಂಡಾಡಲು ಪೋಗಿ ಬಾ ನಾಳೆ ಎಂದು ಎನುತ ಪೇಳಲಾಗಿ ಬೈದಾಡುತ ಬಂದು ಬಳಲುತಿರಲಾಗ ಚಿತ್ತಕ್ಕೆ ತಂದು 2 ಪರ್ವತವನ್ನು ಕಂಡು ಕೈತಿಕ್ಕಿ ಕೋರಿದೆ ಬರಿದೆ ಇಂಥಾ ಗರ್ವದಿಂದುಕ್ಕಿ ಏರಿದೆ ಗುರುವಿಮಲಾನಂದ ಸರ್ವೋತ್ತಮನ ನೆನೆಯ ಬಾರದೇ 3
--------------
ಭಟಕಳ ಅಪ್ಪಯ್ಯ
ಲೋಕೇಶನೆನಿಪ ಶ್ರೀಗುರು ಸಿದ್ಧೇಶ್ವರಗೆ ಪ ನೀ ಕಮಲಮುಖಿ ಆಋವೈರಿಯ ನೇಕ ಮೈಯ್ಯಾಳು ಸುತ್ತಿಕೊಂಡು ವಿ ವೇಕವಿಲ್ಲದೆ ವಿಷವನುಂಡ ಪಿನಾಕಧರÀನಿಗೆ ಸೋಲುವರೆ ನೀ ಜಗವ ಮೋಹಿಪ ಮಾನಿನೀ ಮಣಿಯೇ ಅ.ಪ. ಶಿರದೊಳು ಶಶಿಯ ಕೆಂಜೆಡೆ ಇಹ ಜೋಗಿ ಸ್ಮರನ ದಹಿಸಿ ಭಸ್ಮ ಹಣೆಗಿಟ್ಟ ಯೋಗಿ ಇರುವರೆ ಸ್ಥಳವಿಲ್ಲದಂತೆ ತಾ ಪೋಗಿ ಮೆರೆವ ಸ್ಮಶಾನ ಮಂದಿರಕನುವಾಗಿ ಮರುಲು ಭೂತ ಪಿಶಾಚ ಯಕ್ಷರ ನೆರವಿಯಲಿ ಕುಣಿಕುಣಿದು ಬ್ರಹ್ಮನ ಶಿರವಿಡಿದು ತಿರಿದುಂಬ ಗೊರವಗೆ ಬರಿದೆ ತಿಳಿಯದೆ ಜಗವ ಮೋಹಿಪ ಮಾನಿನೀ ಮಣಿಯೇ 1 ಮಂಡೆಯೋಳ್ ಜಾನ್ಹವಿ ಶಶಿಯನ್ನೆ ಸೂಡಿ ರುಂಡಮಾಲೆಯ ಕೊರಳೊಳಗಿಟ್ಟಪಚಾಡಿ ಕುಂಡಲಿಗಳಾ ಧರಿಸಿರುವನ ನೋಡಿ ಖಂಡ ಪರಶುವೆಂದು ಅವನ ಕೊಂಡಾಡಿ ಧಿಂಡೆಯಾಗಿಹ ಪ್ರಾಯದವಳು ನೀ ನೀನವನನೊಲಿದೆ ಪ್ರ ಚಂಡೆ ಪಾರ್ವತಿ ಜಗವ ಮೋಹಿಪ ಮಾನಿನೀ ಮಣಿಯೇ 2 ಕರದಿ ತ್ರಿಶೂಲ ಧಮರುಗಳ ಧರಿಸಿರುವಾ ಕಂಚರ್ಮಾಂಬಕ ಪುಲಿದೊಗಲುಟ್ಟು ಮೆರೆವಾ ಹಿರಿಯತನಕೆ ವೃಷಭವನೇರಿ ಬರುವಾ ಶಿರಿಯ ಹೊಗಾಡಿ ಫಕೀರನಂತಿರುವಾ ವಿರಚಿಸಿದ ಲೀಲಾವಿನೋದದ ಪರತರ ಶ್ರೀ ಪ್ರಣವರೂಪನ ಗುರುವಿಮಲಾನಂದ ತೊಟ್ಟಿದ ಗುರು ಸಿದ್ಧೇ ಶ್ವರನೆಂದು ತಿಳಿಯದೆ ಜಗವ ಮೋಹಿಪ ಮಾನಿನೀಮಣಿಯೇ 3
--------------
ಭಟಕಳ ಅಪ್ಪಯ್ಯ
ಶರಣು ಹೊಕ್ಕೆನು ಶಿವನ ತೋರಯ್ಯಾ ಸದ್ಗುರುರಾಯಾ ಪ ಅಂಗದ ಮೇಲೆಯು ಲಿಂಗದಂತಿಹುದೆಂದು ಮಂಗಲಾತ್ಮನ ತಿಳಿಯುವದೀನ್ಯಾಯಾ ಸದ್ಗುರುರಾಯಾ 1 ದುನಿಯಾಕೇ ಬೀಚಮೊತುಮ್ ಬಡೇ ಸಾಬ ಮನಮೊರೆ ಸಾಬ ತುಮ್‍ಆಯಾ ಸದ್ಗುರುರಾಯಾ 2 ಜಮ ನಮೋ ಸ್ಥಲಮೋ ಎಕದಿಸತಹೈ ರಮತಠಡೇ ಮೋರಾ ಪೀಯಾ ಸದ್ಗುರುರಾಯಾ 3 ಪರಮಾತ್ಮಾ ಪಿವಳಾ ಕೀಂ ಧವಳಾ ಮೀ ನೇಣೇ ಗುರುನಾಥಾ ಪಡೇನ ತುಝ್ಯಾ ಪಾಯಾಂ ಸದ್ಗುರುರಾಯಾ 4 ವರ ಸಚ್ಚಿದಾನಂದ ಬ್ರಹ್ಮದಿಂದೆಸೆವ ಗುರುವಿಮಲಾನಂದಾ ಪ್ರಿಯಾ ಸದ್ಗುರುರಾಯಾ 5
--------------
ಭಟಕಳ ಅಪ್ಪಯ್ಯ
ಶರಧಿ ಗಂ ಭೀರ ದಯಾಸಾರ ವಾರಿಜಾಕ್ಷ ಮುರಹರ ಸಖನಾಗಿಹ ಚಾರುಮಹಿಮ ನಿಟಿಲಾಂಬಕ ಪರಶಿವ ಪ ಸಿಂಧು ಮಥನದೊಳಗೆ ಕೈಲಾಸ ದಿಂದ ಬಂದನಿಳೆಗೆ ನಂದಿವಾಹನ ಗರಳವನೆಲ್ಲ ಭುಂಜಿಸಿ ಮಾರ 1 ವ್ಯೋಮಕೇಶ ದೇವಾ ಸುಜನರ ಸ್ತೋಮವನು ಕಾವಾ ಕಾಮಿತಾರ್ಥ ವರಗಳನಿತ್ತು ಸಲಹುವ ಸೋಮಶೇಖರ ಕರ್ಪೂರಧಲಾಂಗಾ 2 ಸುರನರೋರಗ ಪಾಲಾ ಸಜ್ಜನ ಪೊರೆವ ಪುಣ್ಯಶೀಲಾ ಗುರುವಿಮಲಾನಂದ ಭರಿತ ಕುಶಸ್ಥಳ ಪುರನಿವಾಸ ಶ್ರೀ ಮಹಾಂಗಿರೀಶ ಮಹಾರುದ್ರ 3
--------------
ಭಟಕಳ ಅಪ್ಪಯ್ಯ
ಶ್ರೀ ಗುರುಮಹಾರಾಯಾ ದಮ್ಮಯ್ಯ ನಿನ್ನ ಪಾದಕೆ ಬಿದ್ದೆನು ತೋರಿಸೋ ಶ್ರೀ ಗುರುನಾಥಾ ಪ ತೋರುವ ತೋರಿಕೆಗಳೆಲ್ಲವ ಹಿಂಗಿಸೋ ಷಡ್ವೈರಿಗಳಾಗಿಹ ಚೋರರ ಬಾಧೆಯ ಬಲವನು ಭಂಗಿಸೋ ತತ್ವಾಮೃತ ಸಾರ ನಿತ್ಯಸುಖದೊಳನ್ನ ನಿಲ್ಲಿಸೋ 1 ಅಮೃತಾನ್ನವ ಮುಂದಿಡೋ ಜೋಡಾಗದ ಊಟವನ್ನುಣ್ಣಿಸೋ ನವನೂತನವಾಗಿಹ ಆಡದಿರುವ ಆಟವಾಡಿಸೋ ನಿನ್ನರ್ಚನೆ ಪೂಜೆಯ ಮಾಡುವಾನಂದವುದಯ ಮಾಡಿಸೋ 2 ಚರಣತೀರ್ಥ ಪ್ರಸಾದವನು ಕೃಪೆಮಾಡೋ ಸಜ್ಜನರಾ ಸ್ಮರಣೆಯ ಕರ್ಣಾಭರಣವ ನೀಡೋ ನಾನಾಮೃತದ ಚರಣ ರಜಪ್ರಕಾಶದೊಳಿಡೋ ವಿಮಲಾನಂದ ವಿಧಿ ನೋಡೋ 3
--------------
ಭಟಕಳ ಅಪ್ಪಯ್ಯ
ಶ್ರೀ ಗುರುವಿನ ಮನೆಯ ಮುಂದಣ ಬಾಗಿಲ ಕಾಯ್ದಿರುವೆ ಪ ತ್ಯಾಗಿಸಿ ಸಂಸಾರಾ ಶ್ರೀ ಗುರುವಿನ ಯೋಗಾಸನವಹೆನು ಅ.ಪ. ಕೊಪ್ಪರಿಗೆಯಾಗಿಹೆ ನಾನು ಜಲಹರಿಯಾಗಿಹೆ ನಾನು ಗುರುವಿನ ಚರಣಾಲಂಕರಿಸುವ ಕೇತಕಿ ಗರಿಯಾಗಿದೆ ನಾನು ಗುರು ಮಂತ್ರವನುಚ್ಚರಿಸಿ ಜಪಿಸುವ ಸರವಾಗಿಹೆ ನಾನು 1 ಗುರುವಿನ ಕೊರಳೊಳಗಿಹ ರುದ್ರಾಕ್ಷದ ಸರವಾಗಿಹೆ ನಾನು ಭರಣಿಯಾಗಿಹೆ ನಾನು ಘಟ ಪರಿಯಾಗಿಹೆ ನಾನು ಗುರುವಿನ ಭುಂಜಿಸಿ ಮಿಕ್ಕ ಪ್ರಸಾದಕೆ ಗುರಿಯಾಗಿದೆ ನಾನು2 ನಡೆವ ಹಾವಿಗೆಯಾಗಿಹೆ ನಾನು ಮಿಗೆ ನಿರ್ಮಲದೊಳು ಪವಡಿಸುತ್ತಿಹ ಹಾಸಿಗೆಯಾಗಿಹೆ ನಾನು ಹೊರಜರುಲಿಯ ಸಾರಿಹೆ ನಾನು ಜಗದೀಶ್ವರ ವಿಮಲಾನಂದ ಗುರುವಿಗೆ ಮಗನಾಗಿಹೆ ನಾನು 3
--------------
ಭಟಕಳ ಅಪ್ಪಯ್ಯ
ಶ್ರೀಗುರುವಿಟ್ಟಂತಿರಿರೋ ವ್ಯರ್ಥಸ್ಯ ಭ್ರಮೆಗೊಳ್ಳಬೇಡೀ ಪ ಕೊಟ್ಟರೂಟವ ಮಾಡಿ ಕೊಡದಿದ್ದರವನ ಪಾಡಿ ಸಿಟ್ಟಾಗಿ ಶಿವನ ಬೈಬೇಡೀ 1 ಸಂತೆಯ ಕೂಟವಿದು ಸಟೆಯ ಸಂಸಾರವಿದು ಅಂತರಾತ್ಮನ ಧ್ಯಾನಿಸುವನೇ ಸಾಧು 2 ಯಾರಿಗೆ ಯಾರಿಲ್ಲಾ ನರದೇಹ ಸ್ಥಿರವಲ್ಲಾ ವಸ್ತು ಮೀರಿದ ಬಳಿಕ ಇರಲಿಲ್ಲಾ 3 ಒಂದೇ ಜನ್ಮದ ನಂಟು ಸುಖದುಃಖಕ್ಕೋಂದೇ ಗಂಟು ಸಂದೇಹವಿಲ್ಲ ಕೊಟ್ಟ ಋಣ ಉಂಟು 4 ವರಮಂಗೀಶಾತ್ಮಾರಾಮಾ ಇರಿಸಿದಂತಿರುವ ನೇಮಾ ಗುರು ವಿಮಲಾನಂದ ಸುಖಧಾಮಾ 5
--------------
ಭಟಕಳ ಅಪ್ಪಯ್ಯ
ಸಾರಿ ಹೇಳಿದೆ ಮೂರು ಬಾರಿ ಮನ ಬಾರದಿದ್ದವರು ದೂರಿದರೆನ್ನ ದೂರಿಪ ನರದೇಹವಿದು ನಂಬಬೇಡಿ ಭವ ಶರಧಿಯ ದಾಟಲುಪಾಯವ ಮಾಡಿ ಎರವಿನ ತನುವನು ನೋಡಿ ಶ್ರೀ ಗುರುವಿನ ಚರಣಕ್ಕೆ ಶೆರಗೊಡ್ಡಿ ಬೇಡಿ 1 ಗುರುವಿನಿಂದಧಿಕ ದೈವವಿಲ್ಲಾ ಇದ ನರಿಯದೆ ಕೆಡುವರು ಪ್ರಾಣಿಗಳೆಲ್ಲಾ ಅರಿತ ಸುಜ್ಞಾನಿಯೆ ಬಲ್ಲಾ ಉಪ ಕರಿಸಿ ಪೇಳುವೆನು ಕೇಳಿರೋ ಎನ್ನ ಸೊಲ್ಲಾ 2 ಸರಸಿಜೋದ್ಭವನ ಕೈಮಾಟಾ ಚೆಲ್ವ ಗಿರಿಜಾರಮಣನ ಸೂತ್ರದ ಗೊಂಬೆಯಾಟಾ ಬರಿದೆ ವಿಷ್ಣು ಮಾಯಾಕಾಟಾ ಶ್ರೀ ಗುರುವಿಮಲಾನಂದ ಹೇಳಿದ ಪಾಠಾ 3
--------------
ಭಟಕಳ ಅಪ್ಪಯ್ಯ
ಸಾವಾತ ನಾನಲ್ಲಾ ಸಾವು ಮೊದಲೆನಗಿಲ್ಲಾ ಯೋಗಿ ತಾ ಬಲ್ಲಾ ಪ ಧರೆಯೆನಿಸಿ ದೊರೆಯಾಜÉ್ಞಯೊಳಾಳುತಿಹೆ ನಾನು ವರಮಂತ್ರಿಯಾಗಿ ವರ್ತಿಸುವವನೆ ನಾನು ಕರಣಿಕರ ತೆರದಿ ಲೆಕ್ಕವ ನೋಡುತಿಹೆ ನಾನು ಪರಿವಾರವಾಗಿ ಓಲೈಸುವವನೆ ನಾನು 1 ವಾಹನ ಹೊರುವಾತ ನಾನು ಹೊತ್ತಂತಿರುವೆ ನಾನು ಹರಿನಾಮ ಹರನಾನು ನರನಾನು ಸರ್ವವೀ ಪರಿಯೊಳಗೆ ಮೆರೆದು ವಿಸ್ತರಿಪೆ ನಾನು 2 ಅಣುರೇಣು ತೃಣಕಾಷ್ಠ ಭರಿತನಾಗಿಹೆ ನಾನು ಗಣನೆಯಿಲ್ಲದ ಗುಣವ ತೋರ್ಪೆ ನಾನು ಉಣಲಿಕ್ಕುವವ ನಾನು ಉಂಡು ತೃಪ್ತಿಪೆ ನಾನು ರಣನಾನು ರಣವ ಗೆಲುವಾತ ನಾನು 3 ಭೂಮಿಯಾಗಿಹೆ ನಾನು ಬೆಳೆವ ಬೆಳೆಯೇ ನಾನು ಸೋಮ ಸೂರ್ಯಾಗ್ನಿ ವಾಯುಗಳೆ ನಾನು ನಾಮರೂಪಾತೀತ ವಸ್ತುವಾಗಿಹೆ ನಾನು ಕಾಮಿನಿಯರಾಗಿ ಕಾಮಿಸುವವನೆ ನಾನು 4 ಒಲಿವಾತನೇ ನಾನು ಒಲಿದರಗಲೆ ನಾನು ಕೊಲಿಸಿಕೊಂಬುವೆ ನಾನು ಕೊಲುವಾತ ನಾನು ಸುಲಭದಿಂದಲಿ ಜ್ಞಾನ ಫಲವಿಕ್ಕುವವ ನಾನು ಚೆಲುವ ವಿಮಲಾನಂದ ಗುರುರಾಯ ನಾನು 5
--------------
ಭಟಕಳ ಅಪ್ಪಯ್ಯ
ಹುಡುಕಿ ನೋಡೆಲೋ ನಿನ್ಯಾರೆಂದು ಧೃಢಚಿತ್ತಕÉ ತಂದು ಪ ಮಲಮೂತ್ರದ ಬೀಡು ಹೊಲೆಯ ಸಂಸಾರದೊಳೀಡು ಗುರುಚರಣಕೆ ಕೂಡು 1 ಏಸು ದುರ್ಗಂಧದೊಳು ನೀ ಬೆಳಿದೆ ಸೂತಕದಿಂದಿಳಿದೆ ಆಶಾಪಾಶದಲಿ ದಿನವನು ಕಳೆದೆ ಮಾಯೆಯೊಳು ಸಳಿದೆ 2 ಅಂತರಾತ್ಮನ ನೆಲೆಯ ಹುಡುಕು ಇದಕ್ಯಾತಕೆ ತುಡುಕು ಶಾಂತ ಶ್ರೀ ವಿಮಲಾನಂದನ ಹುಡುಕು ಅಜ್ಞಾನವ ಬಿಡುಕು 3
--------------
ಭಟಕಳ ಅಪ್ಪಯ್ಯ
ಹೂವಾ ಕೊಟ್ಟಳು ಮಹಾದೇವಿ ಮೂಕಾಂಬಾ ಭೂಪವರ ಬಸವ ನೃಪನ ಭಾವಭಕ್ತಿಗೆ ಒಲಿದು ಪ ತನ್ನ ಮಗನೆಂಬ ತಾತ್ಪರ್ಯದಲಿ ಕೈವಿಡಿದು ಮನ್ನಿಸುವೆನೆನುತ ಮೋಹದಲಿ ಕರೆದು ಅನ್ಯ ವೈರಿಗಳ ಜಯಿಸೆಂದು ಅಭಯವನಿತ್ತು ಚೆನ್ನಾಗಿ ಸಾಮ್ರಜ್ಯ ಪದವಿಯನನುಭವಿಸೆನುತಾ 1 ದೃಢಭಕ್ತಿವಿಡಿದು ತನ್ನಡಿಗಳನು ಪೂಜಿಸಲು ಒಡನೊಡನೆ ಬಂದು ಭೂಮಿಪನ ನೋಡಿ ಪಡುಗಡಲ ಒಡೆಯ ಬಾರೆಂದು ನಂಬಿಗೆಯನ್ನು ಕೊಡುವ ತೆರದಲಿ ವಿಶ್ವದೊಡತಿ ತನ್ನಯ ಬಲದ 2 ಪರಿಯಂತ ನೃಪನೇನಿಸಿ ಚಂದದಿಂದಲಿ ವಿಮಲಾನಂದವಾಗಿ ಎಂದೆಂದು ಸ್ಥಿರದಿ ಬಾಳೆಂದು ಬಸವೇಂದ್ರನಿಗೆ ಇಂದೀವರಾಕ್ಷಿ ಕೊಲ್ಲೂರ ಮೂಕಾಂಬಾ 3
--------------
ಭಟಕಳ ಅಪ್ಪಯ್ಯ
ಹೆಚ್ಚುಕಡಿಮೆಯೆಂದು ಹೆಣಗಾಡಬೇಡಿ ಸಚ್ಚಿದಾನಂದ ಬ್ರಹ್ಮನ ಗುಟ್ಟು ನೋಡಿ ಪ ಪರಮಾತ್ಮ ಕಾಯದೊಳಿರುತಿರ್ಪತನಕಾ ಪರಿಪರಿ ಹೆಸರಿಂದ ಕರಿವರು ಅನಕಾ ಶರೀರ ಭೋಗವ ತೀರಿಸಿಕೊಂಡು ಹೋಹಾಗೆ ಲ್ಲರಿಗೊಂದೆ ಪೆಸರಿಂದ ಕರೆಯುವರಾಗಾ 1 ಅರಸು ಮಂತ್ರಿ ಕರಣೀಕ ತಳವಾರಾ ಕವಿ ಶಾಸ್ತ್ರಿ ಉದಾರಾ ಪರಿಯ ನಾಮಗಳಿಂದ ಉಪಾಧಿಯೋಗಾ ಪರಮಾತ್ಮ ತೊಲಗಲು ಹೆಣವೆಂಬರಾಗಾ 2 ಪರಮಾತ್ಮನಾಟದ ಲೀಲೆ ಇದೆಲ್ಲಾ ಗುರುಪುತ್ರನಾದ ಮಹಾತ್ಮನೆ ಬಲ್ಲಾ ಗುರು ವಿಮಲಾನಂದ ಶರಧಿಯೊಳಾಡಿ ಹಿರಿದು ಕಿರಿದು ಯಾವಲ್ಯುಂಟೆಂದು ನೋಡಿ 3
--------------
ಭಟಕಳ ಅಪ್ಪಯ್ಯ