ಒಟ್ಟು 103 ಕಡೆಗಳಲ್ಲಿ , 39 ದಾಸರು , 75 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾಲಿಸೆನ್ನನು ನಿರುತ ಪವನರಾಯ | ಫಾಲಲೋಚನ ನಮಿತ ಪಾವನ್ನಕಾಯ ಪ ಅಭಿನಮಿಸಿ ಭಜಿಪರಿಗೆ ಉಭಯ ಕಷ್ಟವ ಕಳೆದಿ | ಶುಭವಿಭವನೆಗರಿದು ಪೊರಿಯುವಲ್ಲಿ | ಪ್ರಭುವನಧಿ ನಿನ್ನಂಥ ಪ್ರಬಲ ಪ್ರಭುಗಳ ಕಾಣಿ ಸನ್ನುತ ಮಹಿಮ ಅಭಿಗಾರಪುರವಾಸ 1 ನಿನ್ನನೆ ನೆರೆನಂಬಿ ನಿನ್ನನೆ ಧ್ಯಾನಿಸುತ ನಿನ್ನ ಸನ್ನಿಧಿಯಲ್ಲಿ ನೆಲೆಸಿಪ್ಪೆ ನಾ | ಬಿನ್ನಪವ ಲಾಲಿಸಿ ಬನ್ನಗಳ ಪರಿಹರಿಸಿ ನಿನ್ನೊಡೆಯನಂಘ್ರಿಯಲಿ ಘನ್ನ ಭಕುತಿಯ ಕೊಟ್ಟು 2 ಭೂಮಿಜಾತೆಯ ರಮಣ ಶಾಮಸುಂದರ | ಬದರಿ ಧಾಮ ಮೂರುತಿತ್ರಯ ಪ್ರೇಮ ಪಾತ್ರ | ಕಾಮಿತಪ್ರದ ಹನುಮ ಭೀಮ ಗುರುಸುಖತೀರ್ಥ ಯಾಮ ಯಾಮಕೆ ಹರಿಯ ನಾಮ ಜಿಂಹ್ವೆಯೊಳಿಟ್ಟು 3
--------------
ಶಾಮಸುಂದರ ವಿಠಲ
ಪೊರಿಯದಲಿರುವರೇನು ಶ್ರೀಹರಿ ನೀನು ಪ ನಿರುತ ನಿನ್ನನಾನು ಸ್ಮರಿಸುತಲಿರುವೆನು ಕೌಸ್ತುಭ ಭೂಷಾ ಹರುಷದಿ ಮಂಜುಭಾಷಾ 1 ಭವಾರ್ಣವ ಪಾರಗಾಣಿಸೋ ದೇವಾ ಸಾರಸದಲನೇತ್ರ ನೀರದ ನಿಭಗಾತ್ರ 2 ದಿನಕರ ಕೋಟಿ ತೇಜ ಘನ ಗರುಡಧ್ವಜ ವನಧಿ ಕನ್ಯಾಧವ 3 ವರಗಿರಿಧರ ಕರುಣಾಕರ ಶುಭವದನ ಶರಣರ ಕಾಯುವಂತಹ ಬಿರುದು ನಿನ್ನದೊ ಅನಂತ 4 ಪರಮ ಪಾವನನಾದ ತರುಳ ಪ್ರಹ್ಲಾದಗೊಲಿದ ನರಹರಿ `ಹೆನ್ನೆಯ ಪುರನಿಲಯ ಪ್ರಮೇಯ 5
--------------
ಹೆನ್ನೆರಂಗದಾಸರು
ಪ್ರಸನ್ನ ಶ್ರೀನಿವಾಸ ಕಲ್ಯಾಣ ಜಯ ಜಯ ಜಯ ಶ್ರೀನಿವಾಸ ಕೃತಿ ಮಾಯಾ ಶ್ರೀಶ ಭಯಬಂಧಮೋಚಕ ಜೀಯ ಆಹ ಸುಂದರ ಚಿನ್ಮಯಾನಂದ ಜ್ಞಾನಾತ್ಮನೆ ಮಂದಜಭವ ಸುರವೃಂದ ಸಂಸೇವ್ಯ ಜಯ ಪ ಸುರಸರಿತ ತೀರದಿಂದ ಸುರಮುನಿ ಭೃಗು ಬಂದು ನಿನ್ನ ಪರಸಮರಹಿತನೆಂದರಿತ ಆಹ ಸಿರಿಯು ನಿನ ಭಾವವನುಸರಿಸಿ ಬೇಗ ಕರವೀರ ಪುರ ಪೋಗೆ ಗಿರಿಪುತ್ತ ಪೊಕ್ಕೆಯೊ 1 ಮೇರುಸುತನೆ ಹಾಟಕಾದ್ರಿ ವೀರ ಭಕುತ ವೃಷಭಾದ್ರಿ ಸರೀಸೃಪಾವರಿಸಿದ ಸೌರಭ್ಯಗಿರಿಯಿದು ಪರವೇಂಕಟಾದ್ರಿಯು ಹರಿತು ವಿಪ್ರನ ಪಾಪ 2 ನೀನಿದ್ದ ಸ್ಥಳವೇ ವೈಕುಂಠ ನಿನಗಾರು ಸಮರುಂಟೆ ಶ್ರೀಶ ದೀನ ಸುಜನರಿಗೆ ನಂಟ ಆಹ ಧೇನು ಪಾಲ್ಗರೆಯಲು ಪಾಲಕ ಹೊಡೆಯಲು ದೀನರಕ್ಷಕ ನೀನು ಶಿರಸಿತ್ತು ಪೊರೆದೆಯೊ 3 ಏಳು 2ತಾಳದ ಉದ್ದ ರಕ್ತ ತಾಳಲಾರದೆ ಬಿದ್ದ ಗೋಪ ಚೋಳರಾಯಗೆ ಕೊಟ್ಟೆ ಶಾಪ ಆಹ ಪೇಳಬಲ್ಲೆನೆ ನಿನ್ನ ಅತಿಶಯ ಲೀಲೆಯ ಶೀಲ ಸುರರ ಗುರು ಚಿಕಿತ್ಸೆಯನೈದಿದೆ 4 ಸ್ವಗತ ಭೇದವಿಲ್ಲದಂಥ ಸ್ವಚ್ಛ ಚಿತ್ಸುಖಮಯನಂತ ಸ್ವಾನಿರ್ವಾಹಕ ವಿಶೇಷ ಆಹ ಶ್ವೇತವರಾಹನ ಸಂವಾದದಿಂದಲಿ ಸ್ವೀಕರಿಸಿದೀ ಸ್ಥಳ ಮೊದಲು ಪೂಜೆಯ ಕೊಟ್ಟು 5 ಸರಸ್ವತೀ ಸ್ವಾಮಿ ಪುಷ್ಕರಣಿ ಸುರಮುನಿನರರಿಗೆ ಸ್ನಾನ ಪರಸುಖಮಾರ್ಗ ಸೋಪಾನ ಆಹ ಸುರತಟಿನ್ಯಾದಿ ಸುತೀರ್ಥಗಳೆಲ್ಲವು ಸರಿತವಾಗಿರುತವೆ ಈ ಸ್ವಾಮಿ ತೀರ್ಥದಿ 6 ಆದಿಕಾರಣ ನಿನ್ನ 3ಲೀಲಾ ಮೋದಸಂಭ್ರಮವನ್ನು ನೋಡೆ ಕಾದುಕೊಂಡಿಹರು ಕೋವಿದರು ಆಹ ಸಾಧು ಸಂಭಾವಿತ ಬಕುಳಾದೇವಿಯುಗೈದ ನಿತ್ಯ ಸಂತೃಪ್ತ 7 ಮಂಗಳ ಚಿನ್ಮಯ ರಂಗಾ - ನಂಗನಯ್ಯನೆ ಮೋಹನಾಂಗ ತುಂಗ ಮಹಿಮನೆ ಶುಭಾಂಗ ಆಹ ಬಂಗಾರ ಕುದುರೆ ಮೇಲಂಗನೇರಲಿ 4ಬಂದ ಶೃಂಗಾರವೇನೆಂಬೆ ಎಂದಿಗೂ ಸ್ವರಮಣ8 ತೋಂಡಮಾನ ರಾಯನಣ್ಣ ಚಂಡಭೂಪನು ಆಕಾಶ ಕಂಡನು ಕಮಲದೊಳ್ ಶಿಶುವ ಆಹ ಅಖಿಳ ಕೋಟಿ ಅಸಮ ಈ ಶಿಶುವನ್ನು ಹೆಂಡತಿ ಧರಣಿಯು ಕೊಂಡಳು ಮಗಳಾಗಿ 9 ಮೂಲೇಶ ನಿನ್ನಯ ರಾಣಿ ಮೂಲಪ್ರಕೃತಿ ಗುಣಮಾನಿ ಭವ ತಾಯಿ ಆಹ ಶೀಲ ಭೂಪಾಲನ ಸುತೆ ಪದ್ಮಾವತಿಯೆಂದು 5 ಬಾಲೇರ ಸಹ ಪುಷ್ಪವನಕೆ ಬಂದಿಹಳೊ 10 ಮಹಿದೇವಿ ಕಮಲವಾಸಿನಿಯು ಬಹಿನೋಟಕ್ಕೆ ರಾಜಸುತೆಯು ಬಹು ಚಿತ್ರ ಪುಷ್ಪವ ಕೊಯ್ಯೆ ಆಹ ಮಹತಿಪಾಣಿಯು ಬಹು ವಯೋರೂಪದಲಿ ಬಂದು ಅಹಿತಲ್ಪ ಶ್ರೀಶನೆ ಪತಿಯೆಂದು ನುಡಿದ 11 ಹಾಟಕಗಿರಿಯಿಂದ ನೀನು ಬೇಟೆಯಾಡುವ ರೂಪ ತಾಳಿ ಘೋಟಕವೇರಿ ಸಂಭ್ರಮದಿ ಆಹ ಆಟವಾಡುವ ಬಾಲೆ ಬಳಿಯಲ್ಲಿ ಬಂದು ನೀ ನಾಟಕವಾಡಿದ್ದು ಪಾಡಲರಿಯೆನೊ 12 ನಿತ್ಯನಿರ್ಮಲ ಅವಿಕಾರ ಮತ್ರ್ಯರವೋಲು ನೀ 1ನಟಿಸೋ ಕೃತ್ಯಗಳರಿವರು ಯಾರೋ ಆಹ ಭೃತ್ಯವತ್ಸಲ ನೀನು ಬಕುಳೆಯ ಬಳಿ ಪೇಳಿ ಸಂತ್ಯಸಂಕಲ್ಪ ನಿನ ಸಂದೇಶ ಕಳುಹಿದೆ 13 ಪೊಂದಿದೆ ಫುಲ್ಕಸೀ ರೂಪ ಮಂಧಜಭವ ಶಿಶುವಾಗೆ ನಂದಿನಿಧರ ಯಷ್ಟಿಯಾದ ಆಹ ಮಂದಜಭವಾಂಡ ಗುಣಗುಲ್ಮ ಮಾಡಿ ನೀ ಕಂಧರದಲಿ ಗುಂಜ ಕಂಬುಸರವ ತೊಟ್ಟೆ 14 ನಾರಾಯಣಪುರಿಯಲ್ಲಿ ಮಾರನಯ್ಯನೆ ನಿನ್ನ ಸುಗುಣ ವಾರಿಧಿ ಪೊಕ್ಕಳು ಪದುಮೆ ಆಹ ಪುರಿಪ ಧರಣೀದೇವೀ ಪುತ್ರಿಗೆ ಜ್ವರವೆಂದು ಪರಿಪರಿ ಪರಿಹಾರ ಪರದು ನೋಡಿದರಾಗ 15 ಶುದ್ಧ ಸುಂದರ ಸುಖಕಾಯ ವೃದ್ಧ ಫುಲ್ಕಸೀ ವೇಷಧಾರಿ ಬದ್ಧ ಶೋಕರ ಬಳಿ ಪೋದೆ ಆಹ ಇದ್ದ ಸುದ್ದಿಯ ಅಬದ್ಧವಿಲ್ಲದೆ ಪೇಳಿ ಮುದ್ದು ಪದ್ಮೆಗೆ ಅನಿರುದ್ಧನೆ ಪತಿಯೆಂದೆ 16 ವಹಿಸಿ ನಿನ ಶಾಸನ ಬಕುಳ ಮಹದೇವನಾಲಯದಿಂದ ಮಹಿಳೆಯರ ಸಹ ಕೂಡಿ ಆಹ ಮಹಿದೇವಿಯಲಿ ಪೋಗಿ ವಿಹಿತ ಮಾತುಗಳಾಡಿ ಬಹು ಶುಭವಾರ್ತೆಯ ತಂದು ಪೇಳಿದಳೊ 17 ಶುಕಮುನಿ ಕರಪ್ರದವಾದ ಆಕಾಶ ನೃಪ ಲಗ್ನಪತ್ರ ಸ್ವೀಕರಿಸಿದೆ ಬಹು ಹಿತದಿ ಆಹ ವಾಗೀಶ ಶಶಿಧರ ನಾಗೇಶ ಸೌಪರ್ಣ ನಾಕೀಶ ಮೊದಲಾದ ಸುರರನು ಕರೆದೆ 18 ಶಿಷ್ಟ ಸನ್ಮುನಿಜನ ಕೂಟ ತುಷ್ಟ ಸುಮನಸ ಸಮೂಹ ಶ್ರೇಷ್ಠಸುಗಂಧಿ ಆಗಮನ ಆಹ ಸೃಷ್ಟ್ಯಾದಿಕರ್ತೆ ನಿನ ಸುಮಹೋತ್ಸವ ನೋಡಿ ಇಷ್ಟಾರ್ಥ ಪಡೆವರು ಎಷ್ಟೆಂಬೆ ವಿಭುವೆ 19 ಮಾಯ ಜಯೇಶ ಶ್ರೀವತ್ಸ ಛಾಯೇಶಗುಪಾಯ ಪೇಳಿ ತೋಯಜೆಯನು ಕರೆತಂದೆ ಆಹ ಸಿರಿ ಕೃತಿ ಕಾಂತಿ ನಿನ್ನಿಂದ ವಿಯೋಗರಹಿತರು ಎಂದೂ ಎಲ್ಲೆಲ್ಲೂ 20 ಬೃಹದಣುವಿಗೆ ಸತ್ತಾಪ್ರದನೆ ಸುಹೃದ ಸಂತೃಪ್ತ ಮುಖಾಬ್ಧೇ ದೃಢವ್ರತ ಶುಕಮುನಿಗೊಲಿದೆ ಆಹ ಬೃಹತೀ ಫಲಾನ್ನವನುಂಡು ಫೂತ್ಕಾರದಿ ಗೃಹ ಬಹಿರದಿ ಇದ್ದ ಜನರ ತೃಪ್ತಿಸಿದೆ 21 ಸುಜನರಿಗಾನಂದ ದಾತ ದ್ವಿಜರೂಢ ಜಗದೀಶ ನೀನು ಅಜಸುರರೊಡಗೂಡಿ ಬರೆ ಆಹ ಅಜಿತ ಚಿನ್ಮಯ ನಿನ್ನ ಆಕಾರ ನೃಪ ನೋಡಿ ನಿಜವಾಗಿ ಕೃತಕೃತ್ಯ ಧನ್ಯ ತಾನೆಂದ 22 ಅಜರ ಮಂದಿರ ಪೋಲ್ವ ಮನೆಯು ಪ್ರಜುವಲಿಸುವ ದಿವ್ಯ ಸಭೆಯು ನಿಜಭಕ್ತ ಪುರುಜನ ಗುಂಪು ಆಹ ದ್ವಿಜರ ವೇದಗಾನ ವಾದ್ಯ ಘೋಷಿಸಲಾಗ ನಿಜಸತಿ ಪದ್ಮೆಗೆ ಮಾಂಗಲ್ಯ ಧರಿಸಿದೆ 23 ಸುರಮುನಿಜನ ಮೂರು ವಿಧಕೆ ತರತಮ ಯೋಗ್ಯತೆ ಆರಿತು ಪರಿಪರಿ ಸಾಧನವಿತ್ತೆ ಆಹ ನೀರರುಹಜಾಂಡವು ನಿನ್ನಾಧೀನವು ಸಿರಿಭೂದೊರೆಯೇ ಶ್ರೀನಿವಾಸ ದಯಾನಿಧೆ 24 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ಚನ್ನಮಾರುತ ಮನೋಗತನೆ ಆಹ ವನರುಜಹಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 25
--------------
ಪ್ರಸನ್ನ ಶ್ರೀನಿವಾಸದಾಸರು
ಬಾರಯ್ಯ ಭಕ್ತವತ್ಸಲ ಶ್ರೀ ಗುರು ಮುದ್ದುಕೃಷ್ಣ ಮದನಗೋಪಾಲ ಧ್ರುವ ಯಾದವಕುಲತಿಲಕ ಶ್ರೀದೇವದೇವ ಸಾಧುಜನರ ಪಾಲಕ ಉದ್ಧವ ಪ್ರಾಣಪೋಷಕ ಆದಿಕೇಶವ ಸದಮಲ ಸುಖದಾಯಕ 1 ಇಂದೀವರದಳನಯನ ನಂದಕುಮಾರ ಸುಂದರ ಶುಭವದನ ಮಾಧವ ಮಧುಸೂದನ ಮಂದರಧರ ವೃಂದ ಗೋಕುಲೋದ್ಧರಣ 2 ಮುರಹರ ಸಂಕರುಷಣ ಉರಗಶಯನ ತೋರಯ್ಯ ನಿಮ್ಮ ಚರಣ ಬಾರಯ್ಯ ನಾರಾಯಣ ಗರುಡವಾಹನ ಹೊರೆಯಾ ಮಹಿಪತಿ ಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಕುತರಪರಾಧವ ಬಗೆಯನೀ ದೇವಭಕುತರು ತಪ್ಪಿದರೆ ಬಲು ಭಯವೀವ ಪ . ಇಟ್ಟುಣಿಸಿದ ಬಲಿ ಕಟ್ಟಿದ ಯಶೋದೆಗೆಇಷ್ಟಾರ್ಥಗಳನಂದು ಕೊಟ್ಟು ಕಾಯನೆದುಷ್ಟತನದಿ ಧೃತರಾಷ್ಟ್ರತನಯ ತನ್ನಕಟ್ಟಲು ಹವಣಿಸೆ ಕಷ್ಟವನುಣಿಸನೆ 1 ಕಾಲಲಿ ತನ್ನ ಅಂಗವನೊದ್ದ ಮುನಿಪನಮೂಲೋಕವರಿಯೆ ಮುದ್ದಿಸಿ ಮೆರೆಯನೆತಾಳದೆ ನೃಪತಿಯ ತಾನೆಂದು ತಿಳಿಯನುಕಾಲಯವನ ಬಂದು ಕಾಳು ಮಾಡಿಸನೆ 2 ಪರವಶಚಿತ್ತನಾಗಿಫಲುಗುಣ ಜರೆಯಲುಹರಿ ದೂರಾಗದೆ ಹರಣವ ಕಾಯನೆಅರಸೆಂಬ ಗರ್ವದಿಂದ ಅರಿಭಟ ಪೌಂಡ್ರಕನಧುರಕೆ ಗುರಿಯ ಮಾಡಿ ಧುರದಿ ಕೊಲಿಸನೆ3 ಶರಕೆ ಗುರಿಯ ಮಾಡಿ ಸಮರದೊಳೊಡ್ಡಿದಸುರವ್ರತÀಗಂದು ಶುಭವನೀಯನೆಹರನ ಮೆಚ್ಚಿಸಿ ತನ್ನ ಗೆಲುವ ಬಿಲ್ಲ ಬೇಡಿದಶರೀರ ಸಂಬಂಧಿಯ ಕೊಲಿಸನೆ 4 ಮಕುಟವ ಕದ್ದೊಯ್ಯಲು ಮಹಾಬಲಿಯ ಬಾಗಿಲಅಕಳಂಕನಂದು ಕಾವುದ ಬಿಟ್ಟನೆಈ ಕೃಷ್ಣ ಹಯವದನನಿಂದುಡುಪಿನ ಜನಕೆಶೋಕವಿತ್ತ ಕಳ್ಳನಿಗೆ ಶೂಲಗತಿಯೀಯನೆ5
--------------
ವಾದಿರಾಜ
ಮಂದಿರ ಕರುಣಾಕರ ಪ ದುರಿತ ಸುರವರ ಮಾಮುದ್ಧರ ಅ.ಪ ಸುತೆಯಾ ಶುಭವಾರ್ತೆಯಾ ಬಿಡಿಸಯ್ಯ ಸಂಸೃತಿ ಭಯ 1 ಕಂಸಾರಿ ಪಡೆದಿಯೊ ಜವ ಶೌರಿ ನೋಳ್ಪ ಸುಖವ2 ಮಹಿಮೆಯ ತಿಳಿವ ಬಗೆಯ ಕೊಡು ಸುಮತಿಯ 3
--------------
ಕಾರ್ಪರ ನರಹರಿದಾಸರು
ಮರೆಯುವರಾರೆ ಶ್ರೀ ಮುರಳೀಧರನ ಕಂಡು ವರವ ಬೇಡದವರಾರೆ ಪಡೆಯದವರಾರೆ ಪ ಮುರಳೀದನಿಯ ಕೇಳಿ ಪರಿದೋಡದವರಾರೆ ಅವನೆಡೆ [ಪರಮಸುಖ] ಪಡೆಯದವರಾರೆ ಅ.ಪ ಕಂಜನಾಭನು ಬಂದು ಪುಂಚವನದಿ ನಿಂದು ಮಂಜುಳಗಾನವ ಮಾಡುತಿರೆ ಅಂಜುವರೇನೆ ನಿರಂಜನನವ ಪಾಪ ಭಂಜಕನೇ ತಂಗಿ ಹೋಗೋಣ ಬಾರೆ 1 ಮಂಗಳಮೂರ್ತಿ ಮಾತಂಗವರದ ಭವ ಭಂಗನ ಚರಣವ ನೋಡುವ ಬಾರೆ ಮಂಗಳ ಜಯ ಜಯ ಮಂಗಳ ಮಾಂಗಿರಿ ರಂಗಗೆ ಶುಭವೆಂದು ಪಾಡುವ ಬಾರೆ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮರ್ಮವ ತಿಳಿದವಗೆ ಈ ಕಾಯದ ಕರ್ಮದ ಗೊಡವೆಯುಂಟೇ ನಿರ್ಮಲಾತ್ಮಕಗೆ ಸಮರ್ಪಣೆಯೆಂಬ ಸ್ವ ಧರ್ಮ ಮೂಲ ಮಂತ್ರ ಸೋಹಂವೆಂದೆಂಬ ಪ ಜ್ಯೋತಿ ಹಸ್ತದೊಳಿರಲು ಕತ್ತಲೆಗೆ ಬ ದ್ಯೋತವ ಬಯಸುವರೇ ಪಾತಕ ಪುಣ್ಯ ಶುಭಾಶುಭವೆಂಬ ವಿ ಘಾತಿಯಾಗುವ ಅವಧೂತ ಮಂತ್ರವೆಂಬ 1 ಶರೀರಾತ್ಮಗ್ರಹವು ಪೂಜೆಗೆ ಸಹಜ ಪರಿಪರಿ ವಿಷಯ ಭೋಗಾ ನಿದ್ರೆ ಸಮಾಧಿ ಸಂಚಾರ ಪ್ರದಕ್ಷÀಣೆ ನಿರುತ ಆಡುವ ವಾಣಿ ಸ್ತೋತ್ರಗಳೆಂದೆಂಬ 2 ಬರಿದೆ ಕಾಯದ ಸುಖವು ಕರ್ಮಾ ಕರ್ಮ ಪರಿಪೂರ್ಣಾತ್ಮಕಗರ್ಪಿಸಿ ಗುರು ವಿಮಲಾನಂದಭರಿತನಾಗಿಹ ಮಂತ್ರೋ ಚ್ಚರಣೆಯೊಳಿರುವುದು ದೊರಕೊಂಡನೆಂದೆಂಬ 3
--------------
ಭಟಕಳ ಅಪ್ಪಯ್ಯ
ಯಾರಿಗೆ ದೂರುವೆನು ವೆಂಕಟರಾಯ ಚಾರದ ಮಹಿಮೆಯನು ಪ ಈರಾರು ಸ್ಥಳವಲ್ಲಿ ಮೂರಾರು ಸೇರಿಸಿ ಹೋರಾಟವನಿತ್ತು ಮಾರಿದೆಯೆನ್ನನು ಅ.ಪ ತೇಜವುಳ್ಳವನೊಬ್ಬನು ಐದನೆಯಲ್ಲಿ ಮೋಜಾಗಿ ಒಳಹೊಕ್ಕನು ಹೂಜಿ ತುಂಬಿದ್ದುದ ಸೋಜಿಗದೊಳು ಕದ್ದು ಪಾಜಿ ಮಾಡಿದನೆನ್ನ ಮೂಜಗದೊಡೆಯ 1 ಸೀತವಾದವನೊಬ್ಬನು ಅಷ್ಟಮದದಲ್ಲಿ ಕಾತುರದೊಳು ಬಂದನು ಘಾತಕತನ ಮಾಡಿ ಭೀತಿಗಳನು ತೋರಿ ದಾತ 2 ಮೂರನೆಯವನೊಬ್ಬನು ಏಳನೆಯಲ್ಲಿ ಸೇರಿಯೆ ಕಳುತಿದ್ದನು ಏರಿ ಬಂದುದನೆಲ್ಲ ಆರಿಸಿ ಮಾರಿಸಿ ಸೂರೆಗೊಂಡನು ಎನ್ನ ವಾರಿಜನಾಭ 3 ಅತ್ರಿಯ ಮೊಮ್ಮಗನು ನಾಲ್ಕನೆಯಲ್ಲಿ ಶತ್ರುವಾಗಿಯೆ ನಿಂತನು ಗೋತ್ರದಿ ಕಲಹವ ಬೆಳಸಿಯೆಯಿದ್ದಂಥ ಪಾತ್ರವÀ ತೀರಿಸಿ ಗಾತ್ರವ ಕೆಡಸಿದ 4 ಸುರಗುರುವೆಂಬುವನು ಮೂರನೆಯಲ್ಲಿ ಸ್ಥಿರವಾಗಿ ನಿಂತಿಹನು ಗುರುಗಳ ಮುಖದಿಂದ ಕರಕರೆ ಹತ್ತಿಸಿ- ದರು ಪಾಡಿ ಹರಿಯನ್ನು ತಿರುಕನಾದೆನು ನಾನು 5 ಆರನೆ ಮನೆಯೊಳಗೆ ದೈತ್ಯರ ಆ- ಚಾರಿಯನು ನಿಂತಿಹನು ಹಾರುಮಾತುಗಳೇಕೆ ತೂರಿದನೆಲ್ಲವ ಪಾರಾದೆನು ನಾನು ವಾರಿಜನೇತ್ರ 6 ಆದಿತ್ಯ ಪುತ್ರನಾದ ಶನೈಶ್ವರ ಬಾಧಿಪ ಮನೆಗಳಾರು ದ್ವಾದಶ ಆದಿಯು ದ್ವಿತೀಯ ಪಂಚಮದಲ್ಲಿ ವೇದಗಳೆಲ್ಲವು ಏಳುಯೆಂಟಿರಲಿ 7 ನಾಡನಾಳುವ ರಾಯರ ಕೆಡಿಸಿ ಮುಂದೆ ಕಾಡಿಗೆ ಸೇರಿಸಿದ ಈಡಿಲ್ಲ ಈತಗೆ ಜೋಡಿಲ್ಲ ಗ್ರಹರೊಳು ಪಾಡೆಲ್ಲ ಕೆಡಿಸಿದ ರೂಢಿಗೆ ಒಡೆಯ 8 ವಾರಿಧಿ ಮಥನದಲಿ ಸುಧೆಯನ್ನುಂಡು ಸೇರಿದ ಗೃಹರೊಳಗೆ ಮೀರಿದರಿಬ್ಬರ ಪಾರುಪತ್ಯಗಳನ್ನು ಮಾರ ಸನ್ನಿಭನೆ 9 ಸಂಧಿ ಸಂಧಿಯಲಿವರು ಬಂದೆನ್ನನು ದಂದುಗ ಬಡಿಸುವರು ಇಂದ್ರಾದಿ ದೇವರಿಗಳವಲ್ಲ ಇವರೊಳು ಹಿಂದು ಮುಂದರಿಯೆನು ಬಂದ ಬವರವನ್ನು 10 ಶುಭದಲ್ಲಿ ಶುಭವಿತ್ತರು ವೆಂಕಟರಾಯ ಶುಭ ತೋರಿಸೊ ಅಭಯವನಿಪ್ಪಂಥ ವರಾಹತಿಮ್ಮಪ್ಪನೆ ಪ್ರಭುವೆಂದು ನೀ ಹೇಳಿ ವಿಭವಗಳೆನಗೀಯೊ 11
--------------
ವರಹತಿಮ್ಮಪ್ಪ
ಲೋಕನೀತಿ ಮತ್ಸರಿಸುವವರಲ್ಲಿ ಮಾನ್ಯವಿರಲೀ ಪ ಬಚ್ಚಲಿಲ್ಲದ ಮನೆಯು ಸ್ವಚ್ಛತಾನಾಗಿಹುದೆ ಅ.ಪ ಅರಿಷಡ್ವರ್ಗಗಳು ತುಂಬಿಕೊಂಡಿಹ ದೇಹ ಪರಿಶುದ್ಧವಹುದೇನೊ ಆವಾಗಲೂ ಪರಿಪರಿಯಿಂದಲಿ ಪರಿವಾರ ಜನಗಳು ಪರಿಹಾಸ್ಯಮಾಡಿ ಅಘವ ಕದ್ದೊಯ್ವರಯ್ಯ 1 ಗುಣತ್ರಯಗಳಿಂದಲಿ ನಿಬಿಡವಾದೀದೇಹ ಗುಣಕಾರ್ಯ ಮಾಡದೇ ಬಿಡದೆಂದಿಗೂ ಅಣಿಯಾಗಿ ದುರ್ಗುಣಗಳೊಕ್ಕಣಿಸಿ ಪೇಳುವಡೆ ಗುಣವ ತಿದ್ದಲು ತಾವು ಋಣಿಯಾಗುವರಯ್ಯ2 ಅಭಿಮಾನವೆಂಬುದು ನಭೋಮಂಡಲವರೆಗಿಹುದು ಶುಭವೆಂತೊ ಡಾಂಭಿಕದ ಹೇ ಮಾನವಾ ತುಂಬಿತುಳುಕುವ ದುರಭಿಮಾನವನೆ ತೊಲಗಿಸಿ ಇಂಬು ತೋರುವರಯ್ಯ ಮನಸ್ಥೈರ್ಯಕೇ3 ಕಕ್ಕುಲತೆ ಪಡದೆ ನಕ್ಕುಸಂತೈಸಿಲಾಲಿಸುವ ತೆರದಿ ಅಕ್ಕರದಿ ತನ್ನ ಅಪರಾಧಗಳನೆಲ್ಲ ಲೆಕ್ಕಿಸದೆ ಪೇಳ್ವರದು ಉಪಕಾರವಯ್ಯ 4 ಮಚ್ಚರದಿ ನಿಂದಿಸೆ ಅಚ್ಚುತನ ಭಕುತರಿಗೆ ನಿಚ್ಚದಲಿ ಸ್ವಚ್ಛಭಕುತಿ ಇಹುದು ಮಚ್ಚರಕೆ ಸ್ವೇಚ್ಛೆಯಿಂದೆದುರು ಉಚ್ಚರಿಸದಿರೆ ಮೆಚ್ಚಿ ಕಾಯುವನಯ್ಯ ಶ್ರೀ ವೇಂಕಟೇಶ 5
--------------
ಉರಗಾದ್ರಿವಾಸವಿಠಲದಾಸರು
ವಾರಿಧಿ ಸುತಿಗೆ ಸಾರ ಸಂಗೀತದಿಂದಲಿ ಪ ಸಕಲ ವಸ್ತುವೆನಿಸಿ ಮುಕುತಿದಾಯಕ ಹರಿಗೆ ಭಕುತಿಯಿಂದಲಿ ಬಿಡದೆ | ಸದಾಪೂಜಿಪ ಸಿರಿಗೆ ವಿಖನ ಸಾದ್ಯಮರ ಗಣಕೆ | ಸುಖ ಕೊಡುವಳಿಗೆ ಮಕರಧ್ವಜನ ಮಾಲೆಯಾದ ರುಕುಮನನುಜಗೆ 1 ಚಾರುಶ್ರಾವಣ ಭಾರ್ಗವ ಶುಭವಾರದ ದಿನದಿ ಭೂರಿ ಭಕ್ತಿ ಭರಿತಳಾಗಿ ನಮಿಸುತ ಮನದಿ ನೀ ಆರಾಧಿಸೆ ಘೋಡಶ ಉಪಚಾರದಿ ಮುದದಿ ಕೋರಿಕೆಯನು ಗರೆಯುವ ವರಲಕ್ಷ್ಮಿಗೆ ಜಯದಿ2 ತಾಮರಸ ಸುಧಾಮಳಾದ ಸೋಮವದನಿಗೆ ಗೋಮಿನಿ ಸೌದಾಮಿನಿ ಸಮ ಕೋಮಲಾಂಗಿಗೆ ಶಾಮಸುಂದರ ಸ್ವಾಮಿಯ ಸುಪ್ರೇಮದ ಸತಿಗೆ ಕಾಮಿತ ಫಲದಾಯಿನಿ ಶ್ರೀ ಭೂಮಿಜೆ ರಮಗೆ3
--------------
ಶಾಮಸುಂದರ ವಿಠಲ
ವಾಸುದೇವ ಶ್ರೀ ಗೋವಿಂದ ವರದ ಶ್ರೀ ಗೋವಿಂದ 1 ಪಾಲಕ ಗೋವಿಂದ ಸಾಗರಗೃಹ ಶರಣಾಗತವಾಂಛಿತ ಭಾಗವತಪ್ರಿಯ ಗೋವಿಂದ 2 ಮಾಧವ ಗೋವಿಂದ ಪ್ರೇರಣ ಕರ್ತುವಿಚಾರಣ ಭಕ್ತೋದ್ಧಾರಣ ಶ್ರೀಹರಿ ಗೋವಿಂದ 3 ಭೂಮಂಡಲನಾಯಕ ಗೋವಿಂದ ಕರದಂಡದಳಾಕ್ಷ ಶ್ರೀ ಗೋವಿಂದ 4 ನಮೋ ನಮೋ ಗೋವಿಂದ ಮತಂಗವರದ ಶ್ರೀ ಗೋವಿಂದ 5 ಶಕ್ರಾರ್ಚಿತ ವಟುವಾಕೃತಿಧರ ಕರಚಕ್ರಾಂಕಿತ ಹರಿ ಗೋವಿಂದ ಅಕ್ರೂರವರದ ಅಖಿಳಪ್ರದ ತ್ರಿವಿಕ್ರಮರಾಯ ಶ್ರೀ ಗೋವಿಂದ 6 ಶ್ರೀ ಭಾರ್ಗವರಾಮ ಶ್ರೀ ಗೋವಿಂದ ಅಗ್ರಗಣ್ಯ ಶುಭವಿಗ್ರಹ ನೃಪಕುಲವರ್ಗವಿದಾರಣ ಗೋವಿಂದ 7 ನೂತನ ಲೀಲ ಶ್ರೀ ಗೋವಿಂದ ವಾತಜವರದ ಸಾಕೇತಾಧಿಕ ನಿರ್ಭೀತ ಶ್ರೀ ರಾಮ ಗೋವಿಂದ 8 ಕರುಣಾಲಯದೇವ ಶ್ರೀ ಗೋವಿಂದ ಕುಚೇಲವರದ ಶ್ರೀ ಗೋವಿಂದ 9 ಬುದ್ಧಾಕೃತಿಧರ ಗೋವಿಂದ ಶುದ್ಧಾತ್ಮಕ ಭವವೈದ್ಯ ವಿಬುಧಾರಾದ್ಯಚರಣ ಶ್ರೀ ಗೋವಿಂದ 10 ಸುರರಾಜಾಧಿರಾಜ ಶ್ರೀ ಗೋವಿಂದ ಪ್ರೌಢ ಶ್ರೀ ಗೋವಿಂದ 11 ಶ್ರೀ ಕಪ್ಪುಗೊರಳಪ್ರಿಯ ಗೋವಿಂದ ಸರ್ಪಾಚಲದಿಂದೊಪ್ಪಿಲ್ಲಿಯೆ ನೆಲಸಿಪ್ಪ ತಿಮ್ಮಪ್ಪ ಶ್ರೀ ಗೋವಿಂದ 12 ತಾನೆ ಭಕ್ತರ ಸನ್ಮಾನದಿ ಸಲಹಲು ತಾನೆತಂದ ಶ್ರೀ ಗೋವಿಂದ ಲಕ್ಷ್ಮೀನಾರಾಯಣ ಹರಿ ಗೋವಿಂದ 13
--------------
ತುಪಾಕಿ ವೆಂಕಟರಮಣಾಚಾರ್ಯ
ವಾಸುದೇವ ಶ್ರೀ ಗೋವಿಂದ ವರದ ಶ್ರೀ ಗೋವಿಂದ 1 ಪಾಲಕ ಗೋವಿಂದ ಸಾಗರಗೃಹ ಶರಣಾಗತವಾಂಛಿತ ಭಾಗವತಪ್ರಿಯ ಗೋವಿಂದ 2 ಮಾಧವ ಗೋವಿಂದ ಪ್ರೇರಣ ಕರ್ತುವಿಚಾರಣ ಭಕ್ತೋದ್ಧಾರಣ ಶ್ರೀಹರಿ ಗೋವಿಂದ3 ಭೂಮಂಡಲನಾಯಕ ಗೋವಿಂದ ಕರದಂಡದಳಾಕ್ಷ ಶ್ರೀ ಗೋವಿಂದ4 ನಮೋ ನಮೋ ಗೋವಿಂದ ಮತಂಗವರದ ಶ್ರೀ ಗೋವಿಂದ 5 ಶಕ್ರಾರ್ಚಿತ ವಟುವಾಕೃತಿಧರ ಕರಚಕ್ರಾಂಕಿತ ಹರಿ ಗೋವಿಂದ ಅಕ್ರೂರವರದ ಅಖಿಳಪ್ರದ ತ್ರಿವಿಕ್ರಮರಾಯ ಶ್ರೀ ಗೋವಿಂದ 6 ಉಗ್ರಕುಠಾರ ನೃಪಾಗ್ರಣಿವಿಪಿ£ ಶ್ರೀ ಭಾರ್ಗವರಾಮ ಶ್ರೀ ಗೋವಿಂದ ಅಗ್ರಗಣ್ಯ ಶುಭವಿಗ್ರಹ ನೃಪಕುಲವರ್ಗವಿದಾರಣ ಗೋವಿಂದ7 ನೂತನ ಲೀಲ ಶ್ರೀ ಗೋವಿಂದ ವಾತಜವರದ ಸಾಕೇತಾಧಿಕ ನಿರ್ಭೀತ ಶ್ರೀ ರಾಮ ಗೋವಿಂದ 8 ಕರುಣಾಲಯದೇವ ಶ್ರೀ ಗೋವಿಂದ ಕುಚೇಲವರದ ಶ್ರೀ ಗೋವಿಂದ9 ಬುದ್ಧಾಕೃತಿಧರ ಗೋವಿಂದ ಶುದ್ಧಾತ್ಮಕ ಭವವೈದ್ಯ ವಿಬುಧಾರಾದ್ಯಚರಣ ಶ್ರೀ ಗೋವಿಂದ 10 ಸುರರಾಜಾಧಿರಾಜ ಶ್ರೀ ಗೋವಿಂದ ಪ್ರೌಢ ಶ್ರೀ ಗೋವಿಂದ11 ಶ್ರೀ ಕಪ್ಪುಗೊರಳಪ್ರಿಯ ಗೋವಿಂದ ಸರ್ಪಾಚಲದಿಂದೊಪ್ಪಿಲ್ಲಿಯೆ ನೆಲಸಿಪ್ಪ ತಿಮ್ಮಪ್ಪ ಶ್ರೀ ಗೋವಿಂದ 12 ತಾನೆ ಭಕ್ತರ ಸನ್ಮಾನದಿ ಸಲಹಲು ತಾನೆತಂದ ಶ್ರೀ ಗೋವಿಂದ ಲಕ್ಷ್ಮೀನಾರಾಯಣ ಹರಿ ಗೋವಿಂದ13
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ವಿಷ್ಣುಶತಕ ಶಿರಿದೇವಿ ಹೃತ್ಕುಮುದ ಚಂದ್ರಮನೆ ಕರುಣಾರ್ಣವಾಗಣಿತ ಸದ್ಗುಣನೇ ಭಂಜನ ಮುರಾಂತಕನೇ ಪರಮಾತ್ಮ ಪಾಲಿಸು ಪರಾತ್ಪರನೇ 1 ಕಮಲಾಸನಾದ್ರಿಜೆ ಮನೋಹರ ಮು ಖ್ಯಮರಾಳಿಯಂ ಭಕುತಿಯಿಂ ಬಲಗೊಂಡು ಮ- ಹಾತ್ಮರಾದ ಗುರುಪಾದಕೆ ನಾಂ ನಮಿಸೀ ಪ್ರಬಂಧವನು ಹೇಳುತಿಹೇಂ2 ನೂರಾದ ಪದ್ಯಗಳೊಳಾಂ ಸಕಲಂ ಧಾರಾಳವಾಗಿ ತವ ಸನ್ನಿದಿಯೋಳ್ ಸಾರಂಗಳಂ ಗ್ರಹಿಸಿ ಬಿನ್ನಯಿಪೇಂ ಶ್ರಿರಾಮನೀಂ ದಯದಿ ಲಾಲಿಸಿ ಕೇಳ್ 3 ಕವಿತಾ ಧುರೀಣತೆಯು ಬಂದುದು ನಿ_ ನವ ಯುಕ್ತಿ ಚತುರತೆಗಳೊಂದರಿಯೇಂ 4 ಜೀವಕ್ಕೆ ನೀನು ಮಿಗೆ ಚಿತ್ತದಿ ಶ್ರೀ ದೇವೀ ಮನೀಷದೊಳು ಬ್ರಹ್ಮನಿಹಂ ಯಾ ವಿಶ್ವನಾಥ ಸಹ ರುದ್ರ ಮನೋ ಭಾವಂಗಳಿಂಗೊಡೆಯನಾಗಿರುವಂ 5 ಸಲೆ ಹಮ್ಮಿಗಾ ತ್ರಿಪುರ ಸಂಹರನೇ ಉಳಿದಿಂದ್ರಿಯಗಳಿಗೆ ಜಿಷ್ಣುಮುಖರ್ ಒಳಗಿದ್ದು ಒಳ್ಳಿದನು ಕೆಟ್ಟುದನೂ ಬಲವಿತ್ತು ಮಾಡಿಸುವರೈ ಹರಿಯೆ 6 ಜಲಜಾತ್ಮಜಾಭಿಮತ ಬಂಧು ಪಥಂ ಗಳು ಮೂರು ಬಗೆಯು ನೋಡಿದರೆ 7 ಮಿಗೆ ಕರ್ಮಕರ್ಮವು ವಿಕರ್ಮಗಳೂ ಜಗದಲ್ಲಿ ಎಲ್ಲರಿಗು ಮೂಲವಿದೂ ತ್ರಿಗುಣ ಪ್ರಬದ್ಧರಹ ಜೀವಗಣಾ ಖಗರಾಜ ವಾಹನನೆ ಸಾಕ್ಷಿಯು ನೀಂ 8 ಸದಸದ್ವಿವೇಕಾವನು ಕಾಣದೆ ಸ ಚಿದಚಿದ್ವಿಲಕ್ಷಣನು ನೀನೆನದೇ ಮದಗರ್ವದಿಂದ ಮೆರೆದಾಂ ಕೆಡುವೇಂ 9 ಕುಹುಕಾತ್ಮರಾದವರ ಸಂಗದಿ ಬಂ- ದಿಹ ನೋವು ನಾನಕಟ ಬಣ್ಣಿಸೇಂ10 ಅಂತವರ್ಗವಾರ್ವರು ಶರೀರದೊಳಿ ದುರ್‍ವೃತ್ತಿ ಪುಟ್ಟಿಸುತ ಕೊಲ್ಲುತಿಹರ್ ಪರಮಾತ್ಮ ನಿನ್ನವರ ಸೇರಿರುವೇಂ 11 ಮಲಮೂತ್ರ ಕೂಪವಹ ದೇಹವಿದು ಜಲಗುಳ್ಳೆ ಎಂದರಿತಡಂ ಬರಿದೇ ಕಲುಷಾತ್ಮನಾದೆ ಕರಿರಾಜವರದಾ 12 ಹಸನಾಗಿ ತೋರುತಿಹ ದುರ್ವಿಷಯಂ ಬಿಸಿನೀರು ತುಂಬಿರುವ ಬಾವಿಯಿದುಂ ಕುಸುಮಾಸ್ತ್ರನೆಂಬ ಕಡುಗಳ್ಳನು ತಾ ನೆಸಗೀ ಪ್ರವಾಹದಲಿ ನೂಕುತಿಹಂ13 ಪಾದ ಪದ್ಮಂಗಳ ನಂಬಿದೆ ವೆಂ- ಮ್ಮವಮಾನ ಮಾನಗಳು ನಿನ್ನದುದೆಂ- ದ್ವ್ಯವಸಾಯವಂತರೆ ಮಹಾತ್ಮಕರೂ 14 ಜನುಮಗಳನೆತ್ತುತಲಿ ಜೀವರು ನಿಂ ನನು ಕಾಂಬ ಯೋಚನೆ ತಿರಸ್ಕರಿಸೀ ಘನ ಕಾಮಭೋಗಗಳಪೇಕ್ಷಿಸಿತಾಂ ಧನಕಾಗಿ ದುರ್ಜನರ ಸೇವಿಸುವರು 15 ಹಿತದಿಂದ ಎಲ್ಲರಿಗೆ ನೀನೆ ಇದಂ ಮತಿಹೀನರಾದವರು ಬಾಹ್ಯರ ನಂ- ಬುತ ದುಃಖದಿಂದಲವಿವೇಕರಹರ್ 16 ಗುಣಶೂನ್ಯ ನೀನೆನುತ ಕೊಂಚ ಜನಂ ಗಣಿಸಲ್ಕಸಾಧ್ಯವಹ ವಾದಗಳಿಂ ಘನ ತರ್ಕದಿಂದ ಅನುವಾದಿಸಿ ದುರ್ ಜನ ಮುಖ್ಯರೆನಿಸುತಿಹರ್ ಭುವಿಯೊಳ್ 17 ಅನುಮಾನವೇ ತಮಗೆ ಮುಖ್ಯವೆನು- ತನುಸಾರಿ ರಾಜಸದಿ ತಾಂ ಮುಳುಗೀ ವನಜಾಕ್ಷ ಕೋರಿಕೆಗಳಿಂ ಭಜಿಪರ್ 18 ಉದರ ಪ್ರಯುಕ್ತ ಪರರಾಶ್ರಯಿಸಿ ಪದ್ಯ ಪದ್ಯ ಪೇಳಿ ಬಹುನೀಚನು ನಾ- ನುದಯಾಸಮುದ್ರರೆಲೆ ನೀವೆನುತೇ ಸುದುರಾತ್ಮರಂ ಪೊಗಳಿ ಕೆಟ್ಟೆನು 19 ಹಿತತತ್ವ ಭಾವದಲಿ ದುರ್ಜನರು ಮತಿವಂತರಂತೆ ಬಹಿಯೋಳ್ ನಟಿಸಿ ಸತಿ ಪುತ್ರ ವಿತ್ತಗಳ ಮೋಹದಲೀ ವ್ಯಥೆಪಟ್ಟು ಬಾಯ್ಬಿಡುತ ನೋಯುತಿಹರ್20 ಮೊದಲಾಗಿ ಎಲ್ಲರನು ಮಾಯದಿ ನಿ- ನ್ನುದ ರಾಖ್ಯ ವಾರಿನಿಧಿಯಿಂದಲಿ ತಾವ್ ಉದಿಸಿರ್ಪರೆಂದುಸುರುಗುಂ ಶ್ರುತಿಗಳ್ 21 ಅನುಮಾನವುಳ್ಳ ಜನಕೆಂದಿಗು ಪಾ- ಮೂರ್ತಿ ನಿನ್ನ ಘನ ಜ್ಞಾನ ಸುಖಂ ತೃಣ ಮಾತ್ರವೂ ಬರದು ಸ್ವಪ್ನದೊಳು ಜನದಲ್ಲಿ ಕೀರ್ತಿ ಬಹಿಯೊಳ್ ಬರಿದೆ 22 ಗುರುಸೇವೆಯಿಂದ ತನುದಂಡಿಸಿ ತಾ ನಿರುತಂ ಸುಶಾಸ್ತ್ರಗಳ ನೋಡುತಲಿ ಸ್ಥಿರ ಚಿತ್ತನಾಗಿ ಶ್ರವಣಾದಿಗಳಿಂ ಹರಿಭಕ್ತರಿಂದ ಕಡೆಸೇರುತಿಹಂ 23 ಕವಿಯಾದವರ್ ನಿರುತವುಂ ಮಿಗೆ ಭಾ- ಗವತಾದಿ ಗ್ರಂಥಗಳ ಸಜ್ಜನರಿಂ ಕಿವಿಯಿಂದ ಕೇಳುವುದಕಂ ಬಹು ಜ- ನ್ಮವು ಪಕ್ವವಾಗಿ ಸಲೆ ಪ್ರಾಪ್ತಿಸುಗುಂ 24 ಹರಿಕೃಷ್ಣ ಕೇಶವ ಮುಕುಂದ ನೃಕೇ- ಸರಿ ವಿಷ್ಣುವಾಮನ ತ್ರಿವಿಕ್ರಮ ಶ್ರೀ ಪದ್ಮನಾಭ ಮಧುಸೂದನ ಹೇ ಪುರಷೋತ್ತಮೌಚ್ಯುತ ಜನಾರ್ದನನೇ 25 ವಸುದೇವ ನಂದನ ಮುರಾಂತಕನೇ ಹೃಷಿಕೇಶ ನಾರೇಯಣ ಮಾಧವನೇ ಪರಿ ಪಾ- ಲಿಸುಪೇಂದ್ರ ಭಕ್ತರ ಅಧೋಕ್ಷಜನೇ 26 ಪರಮಾತ್ಮ ನೀನೆಮಗೆ ಎನ್ನುತನಂ- ಬರು ನಿನ್ನ ತಾಮಸರು ಸತ್ಯವಿದು ನೆರೆ ನೋವಿನಿಂಬಳಲಿ ತಾವ್ ಮಿಗೆ ಸಂ- ಸರಣ ಪ್ರವಾಹದೊಳು ಬೀಳುತಿಹರ್ 27 ದ್ಗುಣದಲ್ಲಿ ದುರ್ಗುಣಗಳೇ ಗಣಿಸಿ ಘನ ಮೋಹ ದುಃಖದೊಳು ಸತತ ನಿ- ನ್ನನು ಕಾಂಬ ಯೋಚನೆಯ ಬಿಟ್ಟಿರುವರ್ 28 ನ್ನನು ನಂಬಿ ನಂಬಿದಲೆ ತಾವ್ ನಿರತಂ- ಘನ ಕಾಮ ಕ್ರೋಧ ಮದ ಮತ್ಸರದಿಂ ಜನದಿಂದ ಯತ್ನವನು ಮಾಡುತಿಹರ್ 29 ದೇವಾದಿದೇವ ದಿವಿ ಭೂಮಿಗಳೋಳ್ ಭಾವ ಪ್ರಭೇದದಲಿ ಧ್ಯಾನಿಪರಿಂ- ಗೀ ವೇಷ್ಟಸಿದ್ಧಿಗಳ ನೀನೆ ಸದಾ 30 ಯೋಗಿ ಜನವಂದಿತ ಸ- ಜ್ಜನಕಲ್ಪವೃಕ್ಷ ಜಗದೇಕ ವಿಭೋ ವನಜಾಕ್ಷ ಇಂದಿರೆಯ ವಲ್ಲಭ ಬ್ರಾ- ಹ್ಮಣ ಪ್ರೀಯ ಭಕ್ತಸುಖದಾಯಕನೇ 31 ರವಿಕೋಟಿತೇಜ ರಮಣೀಯ ಕಥಾ- ತವನಾಮ ಕೀರ್ತನೆಯ ಮಾಳ್ಪರ ಪಾ- ಪವ ನೀನೆ ಓಡಿಸುವುದೇನರಿದೈ 32 ವರಾಹ ನೃಕೇ- ಸರಿ ವಾಮನಾವನಿ ಸುರೋತ್ತಮ ಭಾ- ಸ್ಕರ ವಂಶ ಚಂದ್ರವಸುದೇವಜ ಭಾ ಬುದ್ಧ ಕಲ್ಕ ವಪುಷೇ ನಮಃ 33 ಮುನಿಕರ್ದಮಂಗುದಿಸಿ ತಾಯಿಗೆ ಪಾ ವನ ರಾಜಯೋಗವನು ಬೋಧಿಸಿದೈ ಘನಯೋಗಿವರ್ಯ ಕಪಿಲಾಖ್ಯನೆನಿ- ನ್ನನು ನಂಬಿ ಪ್ರಾರ್ಥಿಸುವೆನಾನನಿಶಂ 34 ರ್ಜುನ ಕಾರ್ತವೀರ್ಯಗುಪದೇಶಿಸಿದೇ ಘನಯೋಗ ಬೋಧೆಯನು ಹೈಹಯರ್ ತಾ ವನುವಾದ ಶಿಷ್ಯರೆಲೆದತ್ತವಿಭೋ 35 ಋಷಭಾಖ್ಯನಾಗಿ ಸುತರಿಂಗೆ ಮಹಾ ಋಷಿಚರ್ಯ ಬೋಧಿಸಲವರ್ ತಿಳಿದು ದಶಯೋಗಿವಂದಧಿಕ ಎಂಬತ್ತು ಭೂ- ಮಿಸುರಕ್ರಿವೃತ್ತಿಯಲಿ ಶೋಭಿಸಿದರ್ 36 ಜಂಭ್ವಾಖ್ಯ ದ್ವೀಪದೊಳು ಖಂಡಗಳಿಂ ಅಂಭೋಜನಾಭ ತವನೇಮದಲೀ 37 ಹರಿ ನೀನೆ ಪುಟ್ಟಿಯದು ಸ್ಥಾಪಿಸಿ ದು ರ್ನರರನ್ನು ಕೊಂದು ಶರಣಾಗತರಂ ಪರಿಪಾಲಿಸುತ್ತಿರುವೆ ಸಂತತವುಂ 38 ಕಲಿಕಾಲವೀಗ ಖಳರೆಲ್ಲರು ಸ- ತ್ಕುಲದಲೆ ಪುಟ್ಟಿ ನೆರೆ ಸಾಧುಗಳಂ ಬಲುಬಾಧಿಸುತ್ತ ದುರಿತಂ ಘಳಿಸೇ ನರಕಂಗಳಲ್ಲಿ ನೆರೆಯಾಗುತಿಹರ್ 39 ಪರಮಾತ್ಮ ತತ್ವದಲಿಯೇ ಮರವು ದುರ್ವಿದ್ಯವಭ್ಯಸಿಪುದಕೆ ಮನವು 40 ಪರರನ್ನು ನೋಡಿಯವರಂತೆ ತಾ ವಿರಬೇಕೆನ್ನುತ್ತಲನಿಶಂ ಬಳಲೀ ಗುರುಯತ್ನಮಾಡಿ ವಿಫಲಾಗಲು ಶ್ರೀ ಹರಿ ನಿನ್ನದೂರುತಿರುವರ್ ದುರುಳರ್41 ಕರ್ಣ ಮುಖರಿಂದಲಿ ಸಂ ಗರದಲ್ಲಿ ಕಾದಿ ಮಡಿದಂ ಬರಿದೇ42 ಜಮದಗ್ನಿ ಪುತ್ರನಿಗೆ ಶಿಷ್ಯನು ಭೀ ಷ್ಮಮಹಾ ಪರಾಕ್ರಮಿಯು ದ್ರೋಣನುತಾಂ ಕಮಲಾಪ್ತಪುತ್ರ ಕಲಿ ಶಲ್ಯ ಮುಖ್ಯರ್ ಭ್ರಮೆಯಿಂದಲನ್ನಕಸುಗಳ್ ತೊರೆದರ್ 43 ಯಮಜಂ ವೃಕೋದರನು ಫಲ್ಗುಣನೂ ಯಮಳರ್ ತವಾಂಫ್ರಿಸ್ಮøತಿಯೇ ಬಲವಾ- ಗಿ ಮಹಾಪದಂಗಳನು ದಾಂಟಿದರೈ ಸುಮಬಾಣನಯ್ಯನೆ ಮಹಾತ್ಮರವರ್ 44 ಹರಿ ನಿನ್ನ ಡಿಂಗರಿಗರಿಗಾಶ್ರಯವೇ ವರಭಾಗ್ಯ ನಿತ್ಯಸುಖವೆನ್ನುತಲೀ ಅರಿದುತ್ತಮರ್ ಬಯಸರೆಂದಿಗು ಪಾ- ಮರರಂತೆ ತುಚ್ಛಗಳ ಸ್ವಪ್ನದೊಳು 45 ಸಲೆ ಚಿನ್ನ ಬೆಳ್ಳಿ ಬೆಲೆ ಹೆಚ್ಚು ಪಟ ಗಳ ಗೃಹಕ್ಷೇತ್ರ ಸುತದಾರ ಧನ- ಗಳ ನಿತ್ಯವೆಂದರಿದು ಲೆಕ್ಕಿಸದೇ ಜಲಜಾಕ್ಷ ನಿನ್ನ ಭಜಿಪರ್ ಸುಜನರ್ 46 ಸುಜನಾಬ್ಧಿ ಚಂದ್ರ ಸುಗುಣಾರ್ಣವ ನೀ ನಿತ್ಯ ನಿರವದ್ಯ ಸ್ವಭಾ ವಜ ಕರ್ಮದಿಂ ಸಕಲ ಪ್ರಾಣಿಗಳೂ ನಿಜಯೋಗ್ಯತೆಯಂತೆ ವರ್ತಿಪುದು 47 ಕರುಣಾನಿಧೇ ಕಮಲಲೋಚನನೆ ಸು- ರರಾಜ ಸೋದರನೆ ಭಾವಜನೈ ಯರಮಾಧಿನಾಥ ಯದುವಂಶ ಭೂ ರಥಾಂಗ ಪಾಣಿಯೆ ಜನಾರ್ದನನೇ 48 ರಘುವಂಶಕೇತು ರವಿಮಂಡಲದೋಳ್ ಭಗವನ್ನಿರಂತರದಿ ನೀನಿರುತೆ ಜಗಕೆಲ್ಲ ಕಾಲದನುಸಾರದಿ ನೀ ನಘನಾಳಿಯಿಂದ ಮಳೆಯಂ ಕೊಡುವೇ 49 ವಿಭುದಾಗ್ರಗಣ್ಯರಹ ಜ್ಞಾನಿಗಳೂ ಶುಭವನ್ನು ಲೋಕಕೆ ಸದಾಚರಿಸಿ ನಭ ಭೂಮಿ ಮಧ್ಯದಲಿ ಕೀರ್ತಿ ಸೌ- ರಭವಾಗಿ ಸ್ಥಾಪಿಸಿ ವಿಮುಕ್ತರಹರ್ 50 ಯೋಗ ಪ್ರವರ್ತನೆಯಲೇ ಸುಖಿಸಿ ರೋಗಾದ್ಯುಪದ್ರಗಳು ಇಲ್ಲದಲೇ ರಾಗಾದಿ ದೋಷಗಳ ಸುಟ್ಟಿರುವರ್ 51 ಮನವಾಕ್ಕು ಕಾಯಗಳೊಳೊಂದೆ ವಿಧಂ ಋಣಮುಖ್ಯ ಸೂತಕಗಳಿಲ್ಲದೆಲೇ ಗುಣವಂತರೆನ್ನಿಸಿಯೇ ಶೋಭಿಸುತಾ ಜನದಲ್ಲಿ ಮೌನದಲಿ ವರ್ತಿಸುವರ್ 52 ನರರೊಳ್ ದಿವೌಕಸರು ಪುಟ್ಟುತಲೀ ಹರಿಭಕ್ತಿಯುಕ್ತರೆನಿಸುತ್ತಲಿಸ- ತ್ವರದಿಂದ ಸಾಧನವ ಮಾಡುತಲೀ<
--------------
ಗುರುರಾಮವಿಠಲ
ಶುದ್ಧ ಸನ್ಮಾರ್ಗ ಸರ್ವರಿಗಿದು ಒಂದೆ ಬುದ್ಧಿವಂತರು ತಿಳಿದರು ಇದರಿಂದೆ 1 ಇದರಿಂದೇವೆಂಬುದು ನಿರ್ವಾಣ ಒದರುತಲಿಹುದು ವೇದಪುರಾಣ 2 ಪುರಾಣ ಪುಣ್ಯದ ಹಾದಿಯು ನಿಜ ಸುರಮುನಿಗಳಿಗಿದು ಹೊಳೆವದು ಸಹಜ 3 ಸಹಜಾನಂದದ ಸುಖಸಾಗರ ಬಾಹ್ಯಾಂತ್ರ ಸದೋತಿತ ಸಹಕಾರ 4 ಸಹಕಾರವು ಚಿನ್ಮಯ ಚಿದ್ರೂಪ ಸೋಹ್ಯದೋರುವ ಶ್ರೀ ಗುರುಸ್ವರೂಪ 5 ಸ್ವರೂಪವೆ ಸದ್ಗೈಸುವ ಹಾದಿ ಪರಮ ವೈಷ್ಣವರ ಮೂಲಾಗ್ರದ ಆದಿ 6 ಅಧಿವೆಂಬುದು ನಿಜನಿರ್ಧಾರ ಸಾಧಿಸುದವರಿಗೆ ಸಾಕ್ಷಾತಾರ 7 ಸಾಕ್ಷಾತ್ಕಾರವೆ ಮೋಕ್ಷದಮನೆಯು ಅಕ್ಷಯ ಪದ ಅದ್ವೈತದ ಖಣಿಯ 8 ಅದ್ವೈತವೆ ಆಧ್ಮಾತ್ಮ ಸುವಿದ್ಯ ಸಿದ್ದಸಾಧಕರಿಗೆ ಆಗುವ ಸಾಧ್ಯ 9 ಸಾಧ್ಯವೆಂಬುದು ನಿಜಸಿದ್ಧಾಂತ ಭೇದಿಸಿದವರಿಗೆ ಇದು ಸನ್ಮತ 10 ಸನ್ಮತವೆ ಮತ ಸರ್ವರಿಗೆಲ್ಲ ಉನ್ಮನಲೀಹ ಮಹಾಯೋಗಿಯು ಬಲ್ಲ 11 ಬಲ್ಲೆವೆಂಬುದು ಬಲು ಅಗಾಧ ಸೊಲ್ಲಿಗೆ ಸಿಲುಕದು ಗುರುನಿಜಭೋದ 12 ಬೋಧವೆ ಸದ್ಗುರುವಿನ ದಯಕರುಣ ಸದ್ಗತಿಸುಖ ಸಾಧನದ ಸ್ಫುರಣ 13 ಸ್ಫುರಣವೆ ಬ್ರಹ್ಮಾನಂದದ ಹರುಷ ತರಣೋಪಾಯದ ಮಹಾ ಉಪದೇಶ 14 ಉಪದೇಶವೆ ನಿಜ ಉಪನಿಷದ್ವಾಕ್ಯ ಒಪ್ಪಿಡುವದು ಭೂಸ್ವರ್ಗತ್ರೈಲೋಕ್ಯ 15 ತ್ರೈಲೋಕ್ಯಕೆ ಇದು ನಿಜನಿಧಾನ ಭಯವಿಲ್ಲದ ಮಹಾಸುಖಸಾಧನ 16 ಸಾಧನದಿಂದ ಸದ್ಗತಿ ಸಂಪೂರ್ಣ ಸಾಧು ಸಜ್ಜನರಿಗೆ ಸಕಲಾಭರಣ 17 ಸಕಲಾಭರಣ ಸದ್ಗುರು ನಿಜ ಅಭಯವು ಶುಕಾದಿ ಮುನಿಗು ಕೂಡಿದ ಪ್ರಭೆಯು 18 ಪ್ರಭೆಗಾಣಲು ತೋರದು ನೆಲೆನಿಭವು ನಿಭವೆ ಮಹಾಮಂಗಳಕರ ಶುಭವು 19 ಶುಭದೋರುದು ಸದ್ಗುರು ಕೃಪೆಯಿಂದ ಭ್ರಮೆಹಾರಿತು ಮಾಯೆ ಇದರಿಂದ 20 ಇದರಿಂದೆ ಇದರಿಟ್ಟಿತು ಪುಣ್ಯ ಒದಗಿ ಕೈಗೂಡಿತು ಬಂತು ತಾರ್ಕಣ್ಯ 21 ತಾರ್ಕಣ್ಯವು ಬಂತೆನ್ನೊಳು ಪೂರ್ಣ ಸರ್ಕನೆ ದೊರೆಯಿತು ಸದ್ಗುರುಖೂನ 22 ಖೂನವೆ ಎನ್ನೊಳಗಾಯಿತು ಧ್ಯಾನ ಘನಸುಖದೋರುವ ಅನುಸಂಧಾನ 23 ಅನುಕೂಲಾದ ನಮ್ಮಯ್ಯ ಪ್ರಸಿದ್ಧ 24 ಪ್ರಸಿದ್ಧವೆ ಪ್ರತ್ಯಕ್ಷ ಪ್ರಮಾಣ ಭಾಸುತಿಹುದು ಶ್ರೀಗುರು ಶ್ರೀಚರಣ 25 ಶ್ರೀಚರಣಕೆ ಎರಗಿಹ ಮಹಿಪತಿಯು ಸೂಚನೆ ಮಾತ್ರ ಕೊಂಡಾಡಿದ ಸ್ತುತಿಯು 26
--------------
ಕಾಖಂಡಕಿ ಶ್ರೀ ಮಹಿಪತಿರಾಯರು