ಒಟ್ಟು 90 ಕಡೆಗಳಲ್ಲಿ , 34 ದಾಸರು , 87 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿನ್ನ ನಾ ಬಿಡುವನಲ್ಲಾ ಗೋಪಾಲಾ ನಿನ್ನ ಬಿಡುವನಲ್ಲ ಎನ್ನ ರಕ್ಷಿಸದಿರೆ ಪನ್ನಗಾದ್ರಿಯವಾಸ ಪರಮಪುರುಷರಂಗಾ ಪ ನಾಗಾರಿ ರೂಪನಾದ ಪರಮಾನಂದ ಭೋಗಿಶಯನ ವಿನೋದ ಭಕ್ತವತ್ಸಲ ಸಾಗರನಳಿಯ ಭೂಸುರಧೇನು ಪೋಷಕ ಭಾಗವತರ ಪ್ರಿಯಾ ಯೋಗಿಗಳರಸ1 ಜಲಜಾಕ್ಷ ನಳಿನನಾಭ ಜಾನಕೀರಮಣ ಜಲನಿಧಿಶಯನ ದೇವಾ ಜಗದೋದ್ಧಾರ ಜಲಜಬಾಂಧವ ಕುಲ ಶ್ರೇಷ್ಠಾದಿ ಮೂರುತಿ ಒಲಿದೆನ್ನ ದುಷ್ಕರ್ಮನಳಿದು ಪೋಷಿಸದಿರೆ 2 ಶಂಬರಾರಿಯ ಪಿತನೆ ಜಗನ್ನುತ ಕುಂಭಿನೀಧವನಾದನೇ ಗೋವಿಂದ ಶ್ರೀ ಕಂಬುಕಂಧರ ಕೃಷ್ಣಾ ಅಂಬುಧಿ ಬಂಧಿಸಿ ಅಂಬುಜಾಕ್ಷಿಯ ತಂದ ಹರಿ 'ಹೆನ್ನ ವಿಠ್ಠಲಾ’ 3
--------------
ಹೆನ್ನೆರಂಗದಾಸರು
ನಿನ್ನ ನೀ ತಿಳಿಯೋ ಮೂಢ ಭೇದಿಸಿ ಗೂಢ ಧನ್ಯಗೈಸುವ ಪ್ರೌಢ ಸದ್ಗುರು ದೃಢ ಧ್ರುವ ಬಂದು ಬಂದು ಹೋಪಾದೇನ ಸಾಧಿಸಿದಲ್ಲದೆ ಖೂನ ಸಂಧಿಸಿ ಬೀಳುವುದು ಹೀನ ಜನ್ಮಕೆ ನಾನಾ ಹೊಂದು ಮನವೆ ನೀ ಪೂರ್ಣ ಸದ್ಗತಿ ಸುಖ ಸಾಧನ ಎಂದೆಂದಿಗಾದ ನಿಧಾನ ಸಾಂದ್ರ ಸದ್ಘನ 1 ಮುತ್ತಿನಂಥ ಸುಜನ್ಮ ವ್ಯರ್ಥಗಳೆವುದಧರ್ಮ ಹತ್ತಿಲ್ಯಾದಾನಂದೋ ಬ್ರಹ್ಮ ತಿಳಿಯೋ ನೀವರ್ಮ ಚೆನ್ನೊಬ್ಬಳೆ ಮಾಡೊಮ್ಮ ಕಿತ್ತಿಬಿಸ್ಯಾಡೊ ದುಷ್ಕರ್ಮ ಎತ್ತ ನೋಡಲು ಸಂಭ್ರಮ ಸದ್ಗುರು ಧರ್ಮ 2 ತನ್ನ ತಿಳಿದು ನೋಡೊ ಭಿನ್ನ ಭೇದವೆಂಬುದೀಡ್ಯಾಡೊ ಸನ್ಮತ ಸುಖ ಸೂರ್ಯಾಡೊ ಅನುಮಾನ ಬಿಡೊ ನಿನ್ನೊಳೂ ಮಹಿಪತಿ ನೋಡೊ ಅನುಭವನೇ ಕೊಂಡಾಡೊ ಉನ್ಮತವಾಗಿ ನೀ ಕೂಡೊ ಘನ ಬೆರೆದಾಡೊ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನೆಚ್ಚದಿರು ಸಂಸಾರ ಕಡೆಗೆ ಹಾಕುವುದಲ್ಲ ಮಚ್ಚುಗೊಳಿಸುವುದು ವಿಷಯದಲಿ ಎಚ್ಚತ್ತು ಪ್ರವರ್ತಿಸು ಇನ್ನಾದರೂ ಸಿರಿ- ಅಚ್ಯುತನ ಪಾದವನು ನಂಬೊ ಪ್ರಾಣಿ ಪ ಪುಂಪೆಣ್ಗಳಿಂದ ಪುಟ್ಟಿದ ದೇಹವನು ತಿಳಿ ಕೆಂಪು ಬಿಳಿದಿನ ವರ್ಣ ಮಿಳಿತ ಇಂಪಾಗಿದೆಯೆಂದು ಹಿಗ್ಗದಿರೆಲವೊ ಹೊಲೆ- ಗಂಪು ನಾರುವುದು ಅದ ತೊಳೆಯದೆ ಇರಲು 1 ಜನಿಸಿದಾಕ್ಷಣ ಕಾಯು ಕಡಮೆಂದು ತಿಳಿಯದಲೆ ಜನನಿ ಜನಕರು ಸುಖಿಸುತಿಹರು ತನುಭ್ರಮಣವಲ್ಲದೆ ಚಿದ್ರೂಪ ಬಲ್ಲರೆ ಕೊನೆಗೆ ಏನಾಗುವುದೊ ಪ್ರಾಣಿ 2 ಗಳಿಸಿ ಧನ ತರುವಾಗ ಸುತ್ತ ನೆರೆದಿಹರೆಲ್ಲ ಭಳಿರೆ ಇವ ಮಹಾತ್ಮನೆಂದು ಘಳಿಗೆ ತೊಲಗಲು ಧನವು ಕರಗಿ ತಿಂದು ಪೋಗಿ ಹಳಿದು ಹಲ್ತೆರೆದು ಅಣಕಿಪರೋ-ಪ್ರಾಣಿ 3 ಹುಬ್ಬಿನಿಂದಲೆ ಹೊಡೆದು ಹೃದಯದ ಕಗ್ಗಂಟು ಕಬ್ಬು ಕಾರ್ಮುಕನಿಂದ ಬಿಡಿಸಿ ಉಬ್ಬಿಸ್ಯುಕ್ಕಿನ ತಂತಿಯಂತೆ ಮಾತುಗಳಾಡಿ ಉಬ್ಬಸವ ಬಡಿಸುವಳೊ ನಾರಿ ಪ್ರಾಣಿ 4 ಯೌವನವೊದಗಿದಾಗ ಏನೆಂದರೂ ಅಪ್ಪ ಅವ್ವಣ್ಣನೆಂದು ನಸುನಗುತ ಗವ್ವಳಿಕೆ ವೃದ್ಧಾಪ್ಯ ಬಂದೊದಗಲು ಇವನ ಬವ್ವನ ತೆರೆದಲಾಡಿಪರೋ-ಪ್ರಾಣಿ 5 ನಿಷ್ಠಕ್ಕೆ ದೇಹವನು ಮಾಡಿಕೊಂಡಂತೆ ನೀ ದುಷ್ಕರ್ಮಕೊಳಗಾಗದಿರೆಲೋ ನಿಷ್ಕಂಟಕವಾದ ಮಾರ್ಗದಲಿ ನರಹರಿಯ ನಿಷ್ಕಾಮದಲಿ ಭಜಿಸೊ ಮನವೆ ಪ್ರಾಣಿ 6 ಅಂ¨ಲಿಗೆ ಗೃಹಪಾಲ ಮನೆ ಮುಂದೆ ಹಗಲಿರುಳು ಹಂಬಲಿಸಿ ಬಿದ್ದಂತೆ ನೀನು ಕವಿ ಜೋತು ಬಿದ್ದು ಈ ಡಿಂಬವನು ಪೋಷಿಸದಿರೆಲವೊ-ಪ್ರಾಣಿ 7 ದೇಹಕ್ಕೆ ಬಲವಾಗಬೇಕೆಂದು ಎಲ್ಲರೊಳು ಕಂಡಲ್ಲಿ ಸ್ನೇಹಭಾವವನ್ನು ಬಯಸಿ ಕಾಯ ಪುಷ್ಟಿಯಿಂದ ಮೋಹಕ್ಕೆ ಒಳಗಾದೆಯಲ್ಲೋ-ಪ್ರಾಣಿ8 ಸ್ವಲ್ಪ ದಿನವುಳಿಯಿತು ಒಂದು ಸಾಧನ ಕಾಣೆ ಕಲ್ಪಾಯು ನಿನಗಿಲ್ಲವಲ್ಲೊ ಬಲ್ಪಂಥಗಳ ಮಾಡಿ ಭೋಗಪಡದಿರು ನಾಗ- ತಲ್ಪನ್ನ ಮೊರೆಹೋಗಲೋ-ಪ್ರಾಣಿ9 ದೇಶ ದೇಶವ ತಿರುಗಿ ಬಳಲಿ ಬಾಯಾರಿ ನೀ ಕ್ಲೇಶಕೊಳಗಾಗಿ ಹೊನ್ನುಗಳ ಏಸೇಸು ತಂದದ್ದು ಏನಾಯಿತೋ ಒಂದು- ಕಾಸು ನಾಳೆಗೆ ಕಾಣೆಯೋ-ಪ್ರಾಣಿ10 ಎಂದಿಗಾದರೋ ಇದೇ ಸಂಸಾರ ವಿಸ್ತಾರ ಒಂದಕ್ಕೆ ಒಂದೊಂದು ಅಧಿಕ ಬಂಧನವಲ್ಲದಲೆ ಲೇಶ ನಿರ್ಮಲ ಕಾಣೆ ಪೊಂದು ಸಜ್ಜನರಲ್ಲಿ ಮಂದ-ಪ್ರಾಣಿ11 ನಿತ್ಯ ಗಂಡಾಂತರದಿ ಬಿದ್ದು ಸಕಲಕ್ಕೆ ಕರ್ತೃ ನಾನೆಂದು ಕೂಗುವಿಯಲೊ ಮೃತ್ಯು ನಗುವುದು ನಿನ್ನ ಹೆಡತಲೆಯಲಿ ನಿಂದು ಚಿತ್ತದಲ್ಲಿ ತಿಳಿದು ತಲೆ ಬಾಗೊ-ಪ್ರಾಣಿ 12 ದೊಡ್ಡವನು ನಾನು ಎನಗೆಲ್ಲ ಜನರು ಬಂದು ಅಡ್ಡಬೀಳುವರೆಂಬ ಮಾತು ಹೆಡ್ಡತನ ತಾಳದಿರು ಕೊನೆಗೆ ಅನುಭವಕ್ಕು ಕಡ್ಡಿಯಂದದಿ ಮಾಳ್ಪರೋ-ಪ್ರಾಣಿ 13 ಕೋಟಿಯಾದರು ಕೇಳು ಅವರೋಕ್ಷಿಗಾದರೂ ಕೋಟಲೆಯೊಳಿರದೆ ಗತಿಯಿಲ್ಲ ತಾಟತೂಟಕ ಮಾಡಿ ಅವರಂತೆ ನುಡಿದು ಭವ ದಾಟಬೇಕೋ ಬೇಗ ಜಾಣ-ಪ್ರಾಣಿ14 ಆದರಿಸಿ ಸತಿಸುತರು ಬಂಧು ಬಳಗಕ್ಕೆ ಸಂ ಪಾದಿಸಿ ಧನ ಧಾನ್ಯ ತಂದು ಮೋದಪಡಿಸುವೆನೆಂದು ವಾದಿಸುವ ಮನುಜನ್ನ ಪಾದಕ್ಕೆ ಶರಣು ಸಾರೆಲವೋ-ಪ್ರಾಣಿ 15 ವನಧಿಯೊಳು ಸಪ್ತದ್ವೀಪದ ಮೃತ್ತಿಕೆ ಹಾಕೆ ದಣುವಿಕ್ಯಲ್ಲದೆ ಪೂರ್ಣವಹುದೆ ಇನಿತು ತಿಳಿಯೆಲ್ಲೆಲ್ಲಿ ತಂದ ಧನದಿಂದ ಭವ- ವನಧಿ ತುಂಬದು ಕಾಣೊ ಮರುಳೆ-ಪ್ರಾಣಿ 16 ನಿತ್ಯ ಬರೆದ ಲೆಖ್ಖವು ದಿವಾ ರಾತ್ರಿ ನೋಡುತಲಿದ್ದು ನಿನ್ನ ಪತ್ರ ಕರದಲಿ ಪಿಡಿದು ಈ ಮೂರ್ಖ ನರಮಹಿಷ- ಪುತ್ರನೆಂದು ನಸುನಗುವರಲ್ಲೋ-ಪ್ರಾಣಿ 17 ಎನಗೆ ತನಗೆಂದು ಯಮಭಟರು ಕರಗಳ ಹೊಯಿದು ಕಣಿದು ಭುಜ ಚಪ್ಪರುಸುತಿಹರೊ ಅನಿತರೊಳಗೆಚ್ಚರಿಕೆ ಎಚ್ಚತ್ತು ಹರಿಚರಣ ವನಜ ಧಾನ್ಯವ ಒಲವು ಮಾಡೊ-ಪ್ರಾಣಿ 18 ಶ್ರುತಿಗೆ ಅಪ್ರಾಮಾಣ್ಯ ಬಾರದಂತೆ ಮಧ್ವ ಮತಕೆ ವಿರೋಧವಾಗದಂತೆ ಕ್ಷಿತಿಯೊಳಗೆ ಸುಜನರಿಗೆ ಹಿತವಾಗುವಂತೆ ಶ್ರೀ- ಪತಿಯ ಸೇವಿಸಿ ಸುಗತಿ ಪಡೆಯೋ-ಪ್ರಾಣಿ 19 ಅರ್ಥಬಾರದು ನಿನ್ನ ಸಂಗಾತ ಕೇಳ್ ಕೊನೆಗೆ ವ್ಯರ್ಥಧಾವತಿ ಪ್ರಾಪ್ತಕರ್ಮ ತೀರ್ಥಯಾತ್ರೆಯ ಮಾಡಿ ನಿಸ್ಸಂಗನಾಗು ಯ_ ಥಾರ್ಥಾ ಜ್ಞಾನದಿಂದ ಬಾಳೊ ಪ್ರಾಣಿ20 ಶಿಥಿಲವಾಗಿ ಪೋಪ ದೇಹಕೆ ಮಮತಿಂದ ಮಿಥುನ ಭಾವಗಳನ್ನೆ ಬಯಸಿ ವ್ಯಥೆಪಟ್ಟು ಪಥತಪ್ಪಿ ನಡೆದು ನರಹರಿ ಸುಗಣ ಕಥೆಗೆ ವಿಮುಖನಾಗದಿರೆಲೊ-ಪ್ರಾಣಿ 21 ವನಗಿರೀ ನದಿ ಮೆದೆ ಹೊದರು ಗಹ್ವರ ಹುತ್ತ ವನರಾಶಿ ದ್ವೀಪ ಪಾತಾಳ ತನು ಮತ್ರ್ಯ ಸುರಲೋಕ ಜನನಿ ಜಠರದೊಳಿರಲು ಅಣು ಮಾತ್ರ ತಪ್ಪುವುದೆ ಬರಹ ಪ್ರಾಣಿ 22 ಹಲವು ಹಂಬಲ ಸಲ್ಲ ಆದ್ಯಂತಕಾಲದಲಿ ಗಳಿಸಿಕೋ ಪೂರ್ಣಾಯು ವಾಯು ಒಲಿಯದಲೆ ನಿನ್ನೊಳಗೆ ವಿಜಯವಿಠ್ಠಲರೇಯ ಸುಳಿಯ ಜಾಗ್ರತನಾ ಗೆಲೋ ಪ್ರಾಣಿ 23
--------------
ವಿಜಯದಾಸ
ನೊಂದು ಬಳಲಿದೆ ದೇವ ಇಂದಿರೇಶ ಸರ್ವೇಶ ಶ್ರೀಶ ತಂದೆ ರಕ್ಷಿಸಿ ಸಲಹೊ ಶ್ರೀನಿವಾಸ ಪ ಕಂದರ್ಪಜನಕ ಕಾರುಣ್ಯವಾರಿಧಿ ದೇವ ಕಂಸಾರಿ ಶೌರಿ ಅ.ಪ ಸ್ನಾನಜಪತಪವ ನೇಮಗಳ ಬಿಟ್ಟೆ ಮೌನವನು ಬಿಟ್ಟೆ ದಾನಧರ್ಮವ ಕೊಡದೆ ಕೈಬಿಟ್ಟೆ ಶ್ರೀನಿವಾಸನ ಪೂಜೆನೇಮ ನಿಷ್ಠೆ ಮಾಡದಲೆ ಬಿಟ್ಟೆ ಶ್ವಾನ ಸೂಕರನಂತೆ ಹೊರೆದೆ ಹೊಟ್ಟೆ ಏನ ಪೇಳಲಿ ಪರರ ದ್ರವ್ಯಪಹರಿಸುತಿಹ ಹೀನ ಜನರ ಸಂಗಮಾಡಿ ಬಳಲಿ ಬರಿದೆ 1 ಹಿಂದಿನ ಪಾಪ ದುಷ್ಕರ್ಮ ಫಲವೋ ಇದು ನಿನ್ನ ಒಲವೊ ಸುಂದರಾಂಗನೆ ರಕ್ಷಿಸೆನ್ನ ಸಲಹೊ ಭವ ಕರೆ ಕರೆಯೋ ಭವಬಂಧ ಸೆರೆಯೊ ಇಂದಿರಾರಮಣ ಬಿಡಿಸೆನ್ನ ಪೊರೆಯೊ ಹಿಂದೆ ಮುಂದೆನಗೆ ಗತಿ ನೀನೆಂದು ನಂಬಿದೆ ದೇವ ಮಂದರೋದ್ಧಾರಿ ಮುಚುಕುಂದ ವರದನೆ ಸ್ವಾಮಿ 2 ಬಿಡುತಿಹೆನು ಬಾಯ ಸುಮನಸರವೊಡೆಯ ಬಿಡು ನಿನ್ನ ಮಾಯ ಕಮಲಸಂಭವ ಜನಕ ಬಿಡದೆ ಕಯ್ಯ ಪೊರೆಯುವದು ಶ್ರೇಯ ಕಮಲಾಕ್ಷ ನಮಿಸಿ ಮುಗಿಯುವೆನು ಕಯ್ಯ ಕಮಲ ಪತ್ರಾಕ್ಷ ಸುಜನರ ಕಲ್ಪತರುವೆ ಹೃ- ತ್ಕಮಲದಿ ಪೊಳೆವ ಶ್ರೀ ಕಮಲನಾಭ ವಿಠ್ಠಲ 3
--------------
ನಿಡಗುರುಕಿ ಜೀವೂಬಾಯಿ
ನೋಡು ಮನವೆ ವರಯತಿಯಾ | ನಡೆ | ನೋಡು ಸದ್ಭಾವದಿಂದಲಿ ಮಹಿಪತಿಯಾ ಪ ದುರುಳ ದುರ್ಜನರನು ಶಿಕ್ಷಿಸಲಾಗಿ | ಭೋಗಿ 1 ಕೆಲವು ದುಷ್ಕರ್ಮ ಮಾಡಿದಾ ಫಲದಿ | ದೊಲವಿಲಿ ತಾರಿಸುತಿಹನು ಭರದಿ 2 ಹರುಷದಿ ಲೋಲ್ಯಾಡುತಿಹಾನಂದದೊಳು | ಕೃಷ್ಣನ ಜೀವ ಜೀವಾಳು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಪತಿ ಗೋಪಾಲ | ವಿಠಲ ಕಾರುಣಿಕಾ ಪ ನೀನಾಗಿ ಒಲಿದಿವನ | ಪೊರೆಯೆ ಪ್ರಾರ್ಥಿಸುವೇ ಅ.ಪ. ಉತ್ತಮ ಸುಸಂಸ್ಕøತಿಯ | ಪೊತ್ತು ಜನಿಸುತ ಸರ್ವಕರ್ತೃ ನಿನ್ನಯ ಸೇವೆ | ಅರ್ಥಿಯಂ ಗೈವೆ |ಅರ್ಥಿಸುವ ನಿನ್ನ ದಾಸತ್ವ ದೀಕ್ಷೆಯನೂಸುಪ್ರೀಶ ತೋರ್ದಪರಿ | ಇತ್ತಿಹೆನೊ ಅದಗೇ 1 ಕರ್ಮನಾಮಕನೆ ದುಷ್ಕರ್ಮಗಳ ಪರಿಹರಿಸಿನಿರ್ಮಲ ಸುಸಾಧನಕೆ | ಸನ್ಮಾರ್ಗ ತೋರೋ |ಮನ್ಮಥನ ಜನಕ ತವ | ನಾಮಸ್ಮರಣೆಯ ಕವಚಪೇರ್ಮೆಯಿ ತೊಡಿಸಿ ಸ | ದ್ಧರ್ಮರಥನೆನಿಸೋ 2 ವೃದ್ಧ ಜನಗಳ ಸೇವೆ | ಬುದ್ಧಿಪೂರ್ವಕಗೈದುಮಧ್ವಮತ ಸಚ್ಛಾಸ್ತ್ರ | ತಿದ್ದಿ ಪೇಳುವಲೀ |ಶುದ್ಧಬುದ್ದಿಯನಿತ್ತು | ಉದ್ದರಿಸಬೇಕಿವನಹದ್ದುವಾಹನದೇವ | ಮಧ್ವಾಂತರಾತ್ಮಾ 3 ಅಧಿಭೂತ ಅಧ್ಯಾತ್ಮ | ಅದಿದೈವದೊಳು ನಿನ್ನಅದುಭೂತ ವ್ಯಾಪ್ತಿಯನೆ | ವದಗಿಸಿ ಮನಕೇ |ಬುಧ ಜನೇಢ್ಯನೆ ದೇವ | ಸದಯದೀ ತರಳಂಗೆಹೃದಯದಲಿ ಮೈದೋರಿ | ಮುದವನೇ ಬೀರೋ 4 ದೀರವನು ಎಂದೆನಿಪ | ಪಾವಮಾನೀಯ ಪ್ರಿಯಕೇವಲಾನಂದಮಯ | ಮಾವಿನೋಧೀಸಾವಧಾನದಿ ತರಳ | ಭಾವುಕಗೆ ಒಲಿಯೆಂದುಓದಿ ಭಿನ್ನವಿಪೆ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಪತಿ ವಿಠಲ | ಶ್ರೀನಿವಾಸ ಪ ದೀನ ಜನ ಮಂದಾರ | ನೀನಿವನ ಸಲಹೋ ಅ.ಪ. ಮೋದ ಉಣಿಸಿವಗೇ 1 ಪ್ರಾಚೀನ ಕರ್ಮಾಂಧ | ಕೂಪದಲಿ ಬಿದ್ದಿಹೆನೊಖೇಚರೊತ್ತಮ ಪ್ರಾಣ | ಮತದಿ ಬಂದಿಹನೋವಾಚಿಸುತ ಇವನಲ್ಲಿ | ನಿಚೋಚ್ಚ ತರತಮನಮೋಚಿಸೋ ದುಷ್ಕರ್ಮ | ಕೀಚಕಾರಿ ಪ್ರಿಯಾ 2 ದಾಸ ದೀಕ್ಷೆಯಲಿ ಮನ | ದಾಶಿ ಬಲು ಇಟ್ಟಿಹೆನೊಶ್ರೀಶ ತ್ಯೆಜಸನೀನೆ | ಲೇಸು ಸತ್ಪಂಥಾ |ಸೂಸಿ ತೋರಿಹೆ ಹರಿಯೇ | ಹೇ ಸದಾಶಿವ ವಂದ್ಯಕ್ಲೇಶ ನಾಶನ ಕಾಯೊ | ವಾಸವಾನುಜನೇ 3 ತೈಜಸನೆ ನೀ ತೋರ್ದ | ತೇಜರೂಪೋಪಾಸಾಮಾಜದಲೆ ಪೇಳಿರುವೆ | ವಾಜಿವದನಾ |ಸೋಜಿಗದ ತರಳನಿಗೆ | ಓಜಸ್ಯ ಪಾಲಿಸುತರಾಜಿಸೋ ಇವನಲ್ಲಿ | ಮೂಜಗತ್ಪತಿಯೇ 4 ಸರ್ವಾಂತರಾತ್ಮ ತವ | ದಿವ್ಯ ಸಂಸ್ಕøತಿಯನ್ನಸರ್ವತ್ರ ಸರ್ವದಾ | ಓವಿ ಪಾಲಿಪುದೋ |ದುರ್ವಿ ಭಾವ್ಯನೆ ಗುರೂ | ಗೋವಿಂದ ವಿಠಲಯ್ಯದರ್ವಿ ಜೀವಿಯ ಕಾಯೊ | ಬಿನ್ನವಿಪೆ ಹರಿಯೇ 5
--------------
ಗುರುಗೋವಿಂದವಿಠಲರು
ಪಥ ಕೇಳಿನ್ನು ಪ ಅಂತರಂಗದಲಿ ಶಾಂತಿಯ ತಾಳಿ | ಅಂತರಾತ್ಮನು ನೀನೆನ್ನು | ಸತಿಸುತರಿಗೆ ಗತಿಯೇ ನಂಬಿದೆ | ಗತಿಯಿದ್ದದ್ದಾಗುವದೆನ್ನು | ಅತಿಶಯ ದುಷ್ಕರ್ಮಿಗಳು ನಿಂದಿಸೆ | ಕೃತ ಪೂರ್ವದ ಫಲವೆನ್ನು || ಸತತ ದ್ರವ್ಯವ ಬಯಸಿ ಗಳಿಸಿದೆ | ಗತಿಯಾಗುವದದು ಏನು ? | ಪತಿತ ಪಾವನ ರಘೂನಾಥನ | ನಾಮವ ಗುಪಿತದಿ ಜಪಿಸೊ ನೀನು 1 ಅಣ್ಣ ತಮ್ಮ ತಾಯಿ ತಂದೆ ಬಳಗದ | ಕಣ್ಣು ಮುಂದಿರಬೇಡಿನ್ನು | ಬಣ್ಣ ಬಣ್ಣ ಮಾತುಗಳಾಡಲು | ಪುಣ್ಯವು ಅದರಲಿ ಏನು ? || ಹೆಣ್ಣು ನೋಡಿ ಮನದಲಿ ಹಿಗ್ಗುವಿ | ಮಣ್ಣು ಕೂಡಿತದು ಏನು ? | ಹಣ್ಣು ಹಾಲು ಮೃಷ್ಟಾನ್ನಕಿಂತ ನೀ | ಉಣ್ಣು ಬ್ರಹ್ಮಾನಂದಾಮೃತವನ್ನು 2 ಅಂಶವುಳಿಯಬೇಕೆಂದರೆ ಈ ಜಗ- | ದಂಶವು ನನ್ನದು ಎನ್ನು | ಮಾಂಸಪಿಂಡ ಮುಖಾಂಡ ದಹನವು ಹುತಾಶನಗಾಹುತಿ ಎನ್ನು | ಕಂಸನ ತಂಗಿಯ ಮಗ ಪಾರ್ಥಗೆ ಹೇಳಿದ | ಸಂಶಯವ್ಯಾತಕೆ ಇನ್ನು | ಹಂಸ ಪರಮರ ಐಕ್ಯವ ತಿಳಿಯದೆ | ಹಂಸೋಹಂ ಎಂದರದೇನು ? 3 ನೋಡಿದುದೆಲ್ಲಾ ಪುಸಿಯೆಂದು | ಮಾಡೋ ನಿಶ್ಚಯವಿನ್ನು | ಆಡಬೇಡ ಅನೃತ ವಚನವನು | ಆಡುತಲಿರು ಸತ್ಯವನು | ಕೂಡಬೇಡ ಕಾಮಂದಿಯ ಸಂಗ | ಕೇಡು ತಪ್ಪದದಿನ್ನು | ರೂಢಿಯೊಳಗೆ ನರನಾಗಿ ಪುಟ್ಟಿ | ಮಾಡುತ ನಡಿ ಧರ್ಮವನು 4 ಮೂರ್ತಿ ಪಡಿ | ನಾದವನಾಲಿಸು ನೀನು 5
--------------
ಭಾವತರಕರು
ಪಾದ ಕೂಡಿ ಧ್ರುವ ವಾದ ಮಾಡಬ್ಯಾಡಿ ಸದ್ಬೋಧ ಇದೆ ನೋಡಿ ಭೇದ ಬುದ್ಧೀ ಡ್ಯಾಡಿ ಹಾದಿ ಇದೆ ಕೂಡಿ 1 ಇಂಬು ನಿಜವಾದ ಗುಂಭಗುರುತಾದಾರಂಭದೋರುವದ 2 ಹಿಡಿದು ನಿಜ ವರ್ಮ ಪಡಿಯಬೇಕು ಧರ್ಮ ಜಡಿದು ಪರಬ್ರಹ್ಮ ಕಡೆವದು ದುಷ್ಕರ್ಮ 3 ಗುರುವೆ ನರನೆಂದು ಮರೆದುಬಿಡಿ ಸಂದು ಅರಿತು ನಿಜವೆಂದು ಬೆರೆತು ಕೂಡಿಬಂದು 4 ಇದೆ ಸ್ವತ:ಸಿದ್ಧ ಸದ್ಗುರು ಕೃಪೆಯಿಂದ ಸದ್ಗೈಸುವಾನಂದ ಇದೆ ಮಹಿಪತ್ಯೆಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಪಾಮರ ಜನರಿಗೆಲ್ಲ ಪ ಕಾಮಮದ ಮತ್ಸರಗಳಿಂದಲಿ ತಾಮಸೌಘಕೆಅ.ಪ ಸ್ನಾನ ಮೌನ ಜಪತಪಗಳನರಿಯದೆ ಸ್ವಾಮಿ ನಿನ್ನನು ಮುಟ್ಟಿ ಪೂಜಿಸದೆ ಸೀಮೆಯರಿಯದ ಕಾಮಕರ್ಮದಿ ನೇಮವಿಲ್ಲದ ಕ್ಷುದ್ರಸ್ವಾರ್ಥದಿ ತಾಮಸರ ಸಂಸರ್ಗದಿಂದ ವಿ ರಾಮವರಿಯದ ಜನರ ಪಾಲಿಗೆ 1 ಜ್ಞಾನ ಭಕ್ತಿ ವೈರಾಗ್ಯಗಳರಿಯದೆ ಜ್ಞಾನಿಜನರ ಸಂಗವ ಬಯಸದೆ ಹೀನದುಷ್ಕರ್ಮಗಳ ಮಾಡುತ ನಾನು ತಾನೆಂಬ ಕೊಬ್ಬಿಲಿ ಜಾನಕೀಪತಿ ನಿನ್ನ ಮಹಿಮೆಯ ಕಾಣದಿಹ ದುಷ್ಕರ್ಮಿಜನರಿಗೆ 2 ಶ್ರೀನಿಧಿ ನೀ ಕರುಣಿಸಿ ರಕ್ಷಿಸದಿರೆ ದೀನಜನರ ಪಾಲಿಪರಾರೋ ಸಾನುರಾಗದಿ ಬೇಡಲರಿಯದ ಜ್ಞಾನಹೀನರ ತಪ್ಪನೆಣಿಸದೆ ನೀನೆ ಕೈಪಿಡಿದೆತ್ತಿ ರಕ್ಷಿಸು ಮಾನನಿಧಿ ರಘುರಾಮವಿಠಲ 3
--------------
ರಘುರಾಮವಿಠಲದಾಸರು
ಪ್ರಾಣ ಗುರು ಜಯ ವಿಠಲ ಕಾಪಾಡು ಇವಳ ಪ ಪ್ರಣತಾರ್ತಿ ಹರನೆಂದು ಭಿನ್ನವಿಪೆ ಸತತಾ ಅ.ಪ. ಪತಿವ್ರತಾಮಣಿ ಎನಿಸಿ ಪತಿಸೇವೆಯೊಳುನಿರತೆಸತತ ಸದ್ಭಕ್ತಿ ಶ್ರೀ ಹರಿಗುರುಗಳಲ್ಲೀ |ಅತಿಶಯದಿ ಮಾಡುತಲಿ ವಿಹಿತವನು ತೊರೆಯದಲೆಕೃತಕಾರ್ಯಳಾಗಿಹಳ ಸತಿಯ ಸಲಹುವುದೂ 1 ತೈಜಸ ದಯಾಪಯೋನಿಧಿ ಹರಿಯೆಆ ಪರಿಮಳಾರ್ಯ ಯತಿರೂಪವನೆ ಕೊಂಡುಕೈ ಪಿಡಿದು ಕಾಯ್ವೆನೆಂಬಭಯ ಹಸ್ತವ ತೋರಿರೂಪವನು ಮರೆಮಾಡ್ಡೆ ಬೃಂದಾವನಾಂತ 2 ಮೋಚಕೇಚ್ಛೆಯೊಳ್ಸವ್ಯ ಸಾಚಿಗೇ ಅತಿಪ್ರೀಯಖೇಚರೋತ್ತಮ ಪ್ರಾಣಗೊಪ್ಪಿಸುತ ಇವಳಾನೀಚೋಚ್ಚತರತಮ ಜ್ಞಾನ ಸ್ಥಿರಪಡಿಸುತ್ತಪ್ರಾಚೀನ ದುಷ್ಕರ್ಮ ಪರಿಹರಿಸೊ ಹರಿಯೇ 3 ಪ್ರಣತಜನ ಪರಿಪಾಲಎನುತ ಭಿನ್ನೈಸುವೆನೊ ವೇಣುಗೋಪಾಲ 4 ಬದಿಗ ನೀನಾಗಿರಲು ಭಯವೇನೊ ಬುಧವಂದ್ಯವದಗಿ ಹೃದ್ಗುಹದೊಳಗೆ ತೋರಿತವ ರೂಪಮುದದಿಂದ ಕಳೆ ಇವಳನಾದಿ ರೋಗವನೆಂಬೆಇದನೇವೆ ಸಲಿಸೊ ಗುರು ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಪ್ರಾಯಶ್ಚಿತ್ತವೇನುಂಟದಂ ಮಾಡು ಯೆನಗೇ ಶೇಷ ಶಾಯಿಯೆ ನಾ ಕಾಣದೇ ಮಾಡಿದ ದುಷ್ಕರ್ಮಂಗಳಿಗೆ ಪ ತಿರುಮಲೆಯಂತೆ ನಾ ಮಂಚದುರುಗನಿಂಬುಗೊಂಡು ಕ ರ್ಪುರದ ವೀಳಯದ ಮಡುಪುಗಳನೇ ಕೊಟ್ಟು ಪರಿಯಂತ ಕಾಲನೊತ್ತುತ ಲಿರುತಿರ್ದು ಪರಿದು ಎನ್ನ ನೆರೆಪಾತಕನಾಗಿ ಮಾಡಿದುದಕೇ 1 ಕಡಲಶಯನ[ನ]ನೇಕ ಕೋಟಿ ಕಮಲಭವಾಂಡ ಕೊಡೆಯನೆ ಕಾಮಪಿತನೇ ಸರ್ವೋತ್ತಮನೇ ನಾ ಕುಡಿದು ಮಿಕ್ಕ ಹಾಲ ನೀ ಕುಡಿದು ಯೆನ್ನಾ ಪಾಪದೊಳು ಕೆಡಹಿ ಬಹಳ ಯಾತನೆ ಬಡಿಸೀ ಕೆಡಿಸಿದುದಕೇ 2 ಗುರುಶಿಷ್ಯರುಗಳು ಸ್ವಾಮಿ ಭೃತ್ಯರುಗಳು ದಂಪತಿಗಳೆಂಬೀ ಪರಿಯ ತಾರತಮ್ಯಂಗಳೊಂದಿಲ್ಲವೇ ಹರೀ ಶರಣವತ್ಸಲನೇ ವೇಲಾಪುರದ ವೈಕುಂಠಕೇಶವ ನರನ ಪಾಮರನ ದುರಿತಶರಧಿಯ ದಾಂಟಿಸುವುದಕೇ 3
--------------
ಬೇಲೂರು ವೈಕುಂಠದಾಸರು
ಬತ್ತಿಗೆ ಹತ್ತದ ಜ್ಯೋತಿಯು ನಡು ನೆತ್ತಿಯೊಳಿಂ ಬಿಟ್ಟು ಜತನ ಮಾಡಣ್ಣಾ ಪ ತೈಲ್ಯವು ಸರಿಯಾಗದು ನೋಡು ಅಶುದ್ಧ ಮೈಲಿಗೆಯಿದ್ದರೆ ಕಳದೀತು ಕೈಲಾಸಪತಿಯ ಧ್ಯಾನವ ಮಾಡು ಬಟ್ಟ ಬೈಲಲ್ಲಿ ಬೆಳಗಾಗುತಿದೆ ಮುಂದೆ ನೋಡು 1 ಕತ್ತಲೆ ಬೆಳಕಲ್ಲಿ ಉಳಿಯದು ಮಾಯಾ ಮೃತ್ಯುಪಾಶಗಳಲ್ಲಿ ಸುಳಿಯದು ನಿತ್ಯ ನಿರ್ಮಲವೆಂಬ ಗೆಲವದು ಪರ ವಸ್ತುವಿನೊಳಗೆ ಕೂಡಿರುವುದು ಅಣ್ಣಾ 2 ನಿಂದಿಹ ನಿಜಕೆ ತಾ ನಿಲುವದು ಪರ ದ್ವಂದ್ವಾಕಾರಗಳೆಲ್ಲ ಗೆಲುವದು ಕುಂದು ದುಷ್ಕರ್ಮವ ಕೊಲುವದು ವಿಮಲಾ ನಂದನ ಚರಣಕೆ ಸಲುವದು ಅಣ್ಣಾ 3
--------------
ಭಟಕಳ ಅಪ್ಪಯ್ಯ
ಬಂದದೆ ಎನಗೆ ಬರಿದೆ ದೂರು ಬಂದೊಂದು ಅವಗುಣದವನೆಂಬೊ ಮಾತು ಪ ಕಾಮಕ್ರೋಧಂಗಳು ಹೆಚ್ಚಿಸಿ ಮನದೊಳು ತಾಮಸ ಬುದ್ಧಿ ವಿಶೇಷವಾಗಿ ಕಾಮುಕವಾಗಿ ನಡವಳಿ ನಡಸಿದ ಈ ಮನದ ಅಧಿಕಾರಿ ಶ್ರೀಕೃಷ್ಣನೊ ನಾನೊ 1 ಅನ್ಯಾಯ ಅನ್ಯಾಯ ಅಸಡ್ಡಾಳ ಅಪದ್ಧ ನನ್ನ ನಿನ್ನದು ಎಂಬೊ ಬಡದಾಟವು ತನ್ನ ಸ್ಮರಣಿ ತಪ್ಪಿ ವಿಷಯಕ್ಕೆ ಎರಗಿಸಿ ಮುನ್ನ ಮನದ ದಾತಾ ಶ್ರೀಕೃಷ್ಣನೊ ನಾನೊ 2 ಮನೆ ಮನೆಗಳ ಪೊಕ್ಕು ಮಕ್ಕಳಾಟಿಕೆಯಿಂದ ವನುರುತರ ರೂಪಿಗೆ ಸೋತು ಆತು ಕನಿಕರಿಸಿ ಕ್ರಮಗೆಟ್ಟು ತಿರುಗಿಸುವ ತನವು ಮಾಡಿದಾತಾ ಕೃಷ್ಣನೊ ನಾನೊ 3 ನೀತಿ ನಿರ್ಣಯ ಮರೆದು ಪಾತಕದೊಳು ಬಿದ್ದು ಪ್ರೀತಿಯಲಿ ಅತಿಥಿಗಳ ವಂದಿಸದೆ ಯಾತಕ್ಕೆ ಬಾರದಾ ಚರಿತೆ ನಡೆವಂಥ ಚೇತನ ಕಲ್ಪಿಸಿದ ಕೃಷ್ಣನೊ ನಾನೊ 4 ಆವಾವ ದುಷ್ಕರ್ಮಗಳ ಮಾಡಿ ಉತ್ತಮ ದೇವ ಬ್ರಾಹ್ಮಣರ ಪೂಜಿಸಲಿಲ್ಲವು ಶ್ರೀ ವಿಜಯವಿಠ್ಠಲ ವೆಂಕಟಗಲ್ಲದ ಜೀವ ಪುಟ್ಟಿಸಿದಾತ ಕೃಷ್ಣನೋ ನಾನೊ 5
--------------
ವಿಜಯದಾಸ
ಬಲುಸೂಕ್ಷ್ಮ ಗುರು ಗೂಢವಿದ್ಯ ನೆಲೆವಂತಗಿದು ನಿಜವಾಗುದು ಸಾಧ್ಯ ಧ್ರುವ ಕಣ್ಣಿನ ಕೊನೆ ಮುಟ್ಟಿನೋಡಿ ನಿಜಖೂನ ಉನ್ಮನವಾಗಿ ಬೆರೆದಾಡುವ ನಿಜಸ್ಥಾನ ಚೆನ್ನಾಗ್ಯಾದಾನಂದ ಘನ ಭಿನ್ನವಿಲ್ಲದೆ ಮಾಡಿ ನಿಜಗುರು ಧ್ಯಾನ 1 ಜಾಗ್ರ ನಿದ್ರೆಯ ಮಧ್ಯ ಅರವಿನೊಳು ನಿಜಗೂಡಿ ಶೀಘ್ರ ಸಿದ್ಧಾಂತನುಭವಿಸಿ ತಾಂ ನಿಜಮಾಡಿ ಅಗ್ರ ಗುರುಪಾದವನು ಕೂಡಿ ಶುಕ ಮುನಿಗಳಿಗಿದೆ ನೋಡಿ 2 ಶಿರದಲಿ ಕರವಿಟ್ಟು ನೋಡಿ ನಿಜವರ್ಮ ಹರಿಸಿ ಅನೇಕ ಜನ್ಮಾಂತರದ ದುಷ್ಕರ್ಮ ತರಳಮಹಿಪತಿಗಿದೆ ಸುಬ್ರಹ್ಮ ಗುರು ಭಾಸ್ಕರಸ್ವಾಮಿ ಶ್ರೀಪಾದ ಧರ್ಮ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು