ಒಟ್ಟು 45 ಕಡೆಗಳಲ್ಲಿ , 16 ದಾಸರು , 45 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ರಾಮಾ ನಿನ್ನ್ಹ್ಹೊರತನ್ಯರ ಕಾಣೆ ಪೊರೆ ನೀನೆನ್ನಾಣೇ ಶ್ರೀರಾಮಾ ಪ ಕಾಮಾಂತಕ ತನ್ನ ಭಾಮೆಗೊರೆದ ಶ್ರೀ ರಾಮತಾರಕಮಂತ್ರವೆ ಗತಿ ಲೋಕಕೆ ರಾಮಾಅ.ಪ ಮತಿವಂತ ದಶರಥ ಕೌಸಲ್ಯೆಯರ ಸುತನಾಗ್ಯವತರಿಸಿ ಅತಿ ಬಾಲ್ಯದಿ ಮುನಿಯೊಡನಡವಿಗೆ ನಡೆದು ಕಡು ದುರುಳೆಯಸದೆದು ಮತಿಹೀನ ರಕ್ಕಸರುಪಟಳವಳಿದು ಮುನಿಪತಿ ಮಖ ಬೆಳೆದು ಪತಿಸುತಸಖಹಿತ ಜನಪತಿ ಜೀವಿತ ಪಥದಾದರ್ಶವ ಜಗತಿಗೆ ತೋರಿದೆ1 ಮುನಿಗೌತಮಸತಿ ತಾ ಶಿಲೆಯಂತಿರಲು ಪದರಜದಿಂದುದ್ಧರಿಸಿ ಜಾಹ್ನವಿ ಚರಿತೆಯ ಕೇಳುತ ನಲಿದು ಅನುಜಾತನ ಬೆರೆದು ಜನನಾಥನ ಜನಕನ ಮಿಥಿಲೆಗೆ ನಡೆದು ಹರಧನುವನುಪಡೆದು ಅನುಪಮವೆನಿಪದ ನಡುವೊಳೆ ಖಂಡಿಸಿ ಜನಕಸುತೆಯ ಕರಕಮಲವ ಪಿಡಿದೆ 2 ಪರಶುಹಸ್ತರು ಮಾರ್ಗದಿ ಎದುರಾಗಿ ಅಂಜಿಸೆ ಬೆರಗಾಗಿ ಕರದಲ್ಲಾಟಿಕೆಯೊಲು ಧನುವದಗ್ರಹಿಸಿ ಕ್ಷಣದಲ್ಲುಪಹರಿಸಿ ಜನಕೆ ಹಿರಿಯರಿಗೆ ದಶರಥನಿಗೆ ಸುರನರರೆಲ್ಲರು ಪರಮಾನಂದದೊ ಳಿರುತಿರೆ ವಸಿದೆ ಸುದತಿಯೊಡನೆ ರಘುರಾಮ3 ಹಿಂದೆ ನಾ ಬಹುಜನ್ಮಗಳಲಿ ಬಂದು ನೊಂದೆನು ಈ ಭವದಿ ನಿನ್ನಲಿ ಬಂದು ನಿಂದೆ ಗತಿಯೆಂದು ಸಂದೇಹವಿಲ್ಲ ನೀನೇ ಗುಣಸಿಂಧು ಜಗಕಾಪದ್ಬಂಧು ತಂದೆ ನೀನಿಂದೆನ್ನ ಬಂಧನ ಬಿಡಿಸದೆ ಕೊಂದೆಯಾದರೆ ಕುಂದದು ನಿನಗಪಯಶ 4 ಆನಂದಮಯ ನೀನಾನಂದದಲ್ಲಿದ್ದೆ ಆಶ್ಚರ್ಯವದೇಳು ಆನಂದವನಂದು ಕುಂದದಲಿತ್ತೆ ಜಗಕತಿಶಯವೇಳು ಸಾನಂದದೊಳಿದ್ದರು ತವಸನ್ನಿಧಿಬಲದಿ ಅತಿಶಯಮತ್ತೇಳು ನ್ಹೊಂದಿಸಿ ಪೊರೆ ರಘುರಾಮವಿಠಲ 5
--------------
ರಘುರಾಮವಿಠಲದಾಸರು
ಲೋಕನೀತಿಯ ಪದಗಳು 448 ಅನ್ನದಾನವನ್ನೆ ಮಾಡು ಕನ್ಯದಾನವನ್ನೆ ಮಾಡುನಿನ್ನ ನಂಬಿದರ ಪೊರೆದುನ್ನತ ಹರ್ಷದಿ ಬಾಳುಸನ್ನುತ ಸರ್ವಲೋಕಗಳನ್ನು ರಕ್ಷಿಸುವನಾಗ ಪ್ರ-ಸನ್ನ ಮೂರುತಿಯಾಗುರನ್ನದ ರಾಶಿಗಳನ್ನು ಚಿನ್ನದ ಆಭರಣಗಳನ್ನುಭೂಸುರರಿಗಿತ್ತು ಮನ್ನಿಸು ಉದಾರನಾಗುಮನ್ನೆಯರೆಲ್ಲರು ಬಂದುನಿನ್ನನೋಲೈಸಲೆಂದು ಅಪರ್ಣೆಪರಿಸಿದಳು 1 ಕೋಟಿ ಗೋದಾನವ ಮಾಡು ಸಾಟಿಯಿಲ್ಲದಂಥಾ ಪಂಚಕೋಟಿ ಗಜದಾನ ಶತಕೋಟಿಯಶ್ವದಾನಗಳಮೀಟಾದ ಬ್ರಾಹ್ಮರಿಗಿತ್ತು ಕೀರ್ತಿವಂತನಾಗು ಕಿ-ರೀಟ ಶೌರ್ಯದೊಳಾಗು ಮೀಟಾದ ಮಂತ್ರಿಗಳ ಕಿ-ರೀಟ ರತ್ನಕಾಂತಿಗಳ ಕೋಟಿ ನಿನ್ನ ಪಾದದಲ್ಲಿಧಾಟಿಯಾಗಿರುವನಾಗುಲೂಟಿಸಿ ವೈರಿಗಳನು ಗೋಟುಗೊಳಿಸುವ ಶಶಿಜೂಟ ಭಕ್ತನಾಗು 2 ಇತ್ತೆರದೆ ಬೀಸುತಿಹ ಮುತ್ತಿನ ಚಾಮರ ಶ್ವೇತಛ್ಛತ್ರ ಸೀಗುರಿಗಳ ಮೊತ್ತದ ಸಾಲೊಳಗೆ ಒ-ಪ್ಪುತ್ತಲಿರುವವನಾಗು ಸತ್ಯವಂತನಾಗು ಸುವ್ರತ ನೀನಾಗುಪೆತ್ತವರ ನೋಡಿ ನಲಿವುತ್ತಿರಲು ಭೂಸುರರುಮುತ್ತಿನಕ್ಷತೆಯನಾಂತುಪೃಥ್ವಿಯ ವೊಳಗೆಲ್ಲಾ ಸ-ರ್ವೋತ್ತಮ ಪುರುಷನಾಗೆನುತ್ತಮಸ್ತಕದಿ ತಳಿವುತ್ತ ಪರಸಿದರು 3 ಇಂದ್ರನಾಗು ಭೋಗದೊಳು ಸತ್ಯವಾಕ್ಯದೊಳು ಹರಿ-ಶ್ಚಂದ್ರನಾಗು ಪಾಲನೆಯ ಮಾಡುವುದರೊಳಗೆ ಉ-ಪೇಂದ್ರನಾಗು ಬುದ್ಧಿ ಕೌಶಲದೊಳು ತಿಳಿಯಲು ನಾ-ಗೇಂದ್ರ ನೀನಾಗುಚಂದ್ರನಾಗು ಶಾಂತಿಯೊಳಗೆಂದು ವಂದಿಮಾಗಧರವೃಂದ ಕರವೆತ್ತಿ ಜಯವೆಂದು ಪೊಗಳುತ್ತಿರಲಾ-ಚಂದ್ರಾರ್ಕವು ಸೌಖ್ಯದಿ ಬಾಳೆಂದು ಸಾನಂದದೊಳಾಗಇಂದಿರೆ ಪರಸಿದಳು4 ಧೀರನಾಗುದಾರನಾಗು ಸೂರಿಜನವಾರಕೆ ಮಂ-ದಾರನಾಗು ಸಂಗರ ಶೂರನಾಗು ವೈರಿ ಜ-ಝ್ಝೂರನಾಗು ಮಣಿಮಯ ಹಾರನಾಗುವೀರಾಧಿವೀರ ನೀನಾಗುಭೂರಮಣನಾಗು ಮಂತ್ರಿವಾರ ಸಂರಕ್ಷಕನಾಗುಕಾರುಣ್ಯಸಾಗರನಾಗು ಕಾಮಿತಫಲಿದನಾಗುಶ್ರೀ ರಾಮೇಶನಪಾದಾಬ್ಜ ವಾರಿಜ ಭಕ್ತನಾಗೆಂದುಶಾರದೆ ಪರಸಿದಳು5
--------------
ಕೆಳದಿ ವೆಂಕಣ್ಣ ಕವಿ
ವಿಭವ ಪ್ರಪೂರಣ | ಮಾಂಗಿರಿಮೋಹನಾ ಪ ದಾನವಕುಲಭೀಷಣಾ ಕೃಪಾಕರಾ ಅ.ಪ ಪರತರ ಸುಖದಾತ ಸುಜನಗಣನುತ ಕಾಮಿತ ಸಂದಾತ ಪಾರ್ಥಿವ ರಥಸೂತ ವರದಸ್ವಯಂಜಾತಾ ಶರಣ ಸಂಪ್ರೀತಾ 1 ಮುರಹರ ಮುಚುಕುಂದ ಭಯಹರ ವರದಾ ಶ್ರೀಮುಖ ಸಾನಂದ ಗೋಕುಲ ಮಕರಂದ ಸುರಮುನಿ ಬೃಂದ ನಂದನ ಕಂದ ಸುರುಚಿರ ಕೋವಿದಾ | ಮುರಳೀ ಬೃಹನ್ನಾದ ಪಾಂಡುಸುತಾನಂದ | ಮಾಂಗಿರಿವರದಾ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶಿರಸಾವಂದಿಪೆ ನಿನ್ನ ಕರುಣಾಕರ ನೇತ್ರ ದೀನದಲಿತ ವರದಾತ [ಮಾಂಗಿರೀಶ ಪ್ರೀತ] ಪ ಗುರುರಾಜ ಸುರಭೂಜ ಸುರುಚಿರಗಾತ್ರ ಪರಮಾತ್ಮ ಶಶಿತೇಜ ಶ್ರೀಮಂತ್ರ ವಾಸ ಅ.ಪ ವರದಂ ಸುಖದಂ ಚಿರಂ ಅರವಿಂದ ಸಾನಂದ ನಿರುಪಮ ಗುರುವರ್ಯ ವಾರಿಜ ನೇತ್ರ 1 ಸಾರಸ ಪದಯುಗ ಕನಕ ಸಮಗಾತ್ರ ಚಾರುತರ ಕಮ[ನೀಯ] ಮಿತ್ರರೂಪಂ ದೃತಿಮಾನ್ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀನಿವಾಸ ನಿನ್ನ ಪಾದಧ್ಯಾನವ ಪಾಲಿಸಿ ಎನ್ನ ಮಾನಸಾನಂದಿಸೋ ಶತಭಾನುತೇಜನೆ ಪ ಸಾನುರಾಗದಿಂದ ನಿನ್ನ ಧ್ಯಾನಿಪಜನರ ಭವ ಕಾನನಾದಹನ ಚಿತ್ರಭಾನು ದನುಜಾರಿಹರಿ ಅ.ಪ ಇಂದಿರಾರಮಣ ನಿನ್ನ ಸುಂದರ ಚರಣಕೆ ನಾಂ ವಂದನೆಯ ಮಾಡುವೆನಯ್ಯಾ ಇಂದುವದನಾ ಇಂದುಧರ ನುತ ಮುಚುಕುಂದವರದನೆ ಗುಣ ಬಂಧುರಾ ಶ್ರೀ ಪುಲಿಗಿರಿ ಮಂದಿರ ಮಂದರಧರ1 ಇಷ್ಟುದಿನ ನಿನ್ನ ಮನಮುಟ್ಟಿ ಭಜಿಸದೆ ಬಲು ದುಷ್ಟಮನುಜರ ಕೂಡಿ ಭ್ರಷ್ಟನಾದೆನು ಇಷ್ಟ ಫಲದಾಯಕ ತ್ರಿವಿಷ್ಣಪಾದಿಪಾನುಬವ್ಯ ಅಷ್ಟಸಿದ್ಧಿಪ್ರದ ನಿನ್ನ ಗಟ್ಟಿಯಾಗಿ ನಂಬಿದೆನು 2 ಲೋಕಪತಿ ಪಿನಾಕೆಯನ್ನು ವೃಕನೆಂಬ ಭೀಕರಾಸುರನು ಉರಿಹಸ್ತ ಬೇಡಲು ಆಕಪಾಲಿಯಿತ್ತು ಅವಿವೇಕದಿಂದ ಲೋಡುತಿರೆ ಲೋಕ ಮೋಹಿನಿಯ ರೂಪ ಸ್ವೀಕರಿಸಿ ಶಿವನಕಾಯ್ದೆ3 ಆಡಿಸೋ ನಿನ್ನವರೊಳು ಪಾಡಿಸೋ ನಿನ್ನಯ ಕೀರ್ತಿ ಮೂರ್ತಿ ಬೇಡಿಸದಿರು ಆಡಿಸದೆ ಭವವೆಂಬ ಕಾಡಿನೋಳ್ಕಟಾಕ್ಷದಿಂದ ನೋಡಿ ನಿನ್ನ ನಾಡಿನೊಳಗಾಡಿಸೋ ಮುರಾರಿಹರಿ4 ವಾಸುಕಿಶಯನ ಪೀತವಸನ ದಿವ್ಯಭೂಷಣ ವಿ ಭೂಷಿತ ಲಲಿತಶುಭ ವೇಷವಿಪುಲ ಭಾಸಮಾನ ವ್ಯಾಘ್ರಶೈಲಾವಾಸ ಶ್ರೀನಿವಾಸ ಭಕ್ತ ಪೋಷಣ ದುರಿತಗಣ ಶೋಷಣ ಶ್ರೀ ವರದವಿಠಲ5
--------------
ವೆಂಕಟವರದಾರ್ಯರು
ಶ್ರೀವರ ಶುಭಗುಣನಿಚಯ ರಮಾಸ್ವದ ಪಾಲಯ ಮಾಂ ಸತತಂ ಪ. ನೀಲ ಮೇಘ ಶೋಭ ಸುಖ ಕಲ್ಲೋಲ ನಿತ್ಯಲಾಭ ಲೋಲಾಂಬಕ ಕಮಲಾಲಯವರ ಕರು ಣಾಲವಾಲ ಮಾತಾಲಿಸು ತ್ವರಿತದಿ 1 ಮಂದಹಾಸದಿಂದ ಮೆಚ್ಚಿದ ಸುಂದರೇಶ ವೃಂದ ಹೊಂದುತ ಹೊಸ ಪರಿಯಿಂದ ರಮಿಸಿ ಸ್ವಾ- ನಂದವಿತ್ತ ಗೋವಿಂದ ಮುಕುಂದ 2 ದಾಸಾನಂದಕರ ನಿತ್ಯವಿಲಾಸಿತ ಸುರನಿಕರ ಶ್ರೀಶಯನ್ನನಕಲುಷಿತ ಪೂರಿಸು ಶೇಷಗಿರಿಯ ಶ್ರೀವಾಸ ಪರಾತ್ಪರ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀಶನು ತನ್ನಯ ದಾಸತ್ವ ಕೊಟ್ಟೆನ್ನ ಧ್ಯಾಸದಿ ಬಂದು ಸ್ಥಿರಮಾದ ಪ ಧ್ಯಾಸದೊಳಗೆ ಬಂದು ಸ್ಥಿರವಾಗಿ ನಿಂತಿನ್ನು ನಾಶನ ಜಗದಾಸೆ ಎನಗೇನೆ ಅ.ಪ ಸುಂದರಮಾದ ಸುಸಂಧಿಯೆನಗೆ ಫಲಿಸಿತು ಸುಕೃತ ಫಲದಿಂದೆ ಸುಕೃತ ಫಲದಿಂದ ಎನ್ನಗೆ ತಂದೆ ಗೋವಿಂದ ತಾನೆ ಗೋವಿಂದ 1 ಕೆಟ್ಟ ಬವಣೆಯಿಂದ ಕೆಟ್ಟು ಹೋಗುತಲಿರ್ದೆ ಸೃಷ್ಟೀಶ ದಯದಿ ನೋಡಿದ ಸೃಷ್ಟೀಶ ದಯದಿಂದ ನೋಡಿ ಮುಂದಕೆ ಕರೆದು ನೆಟ್ಟನ ಮಾರ್ಗಕೆ ಹಚ್ಚಿದ 2 ಸಾಧ್ಯವಲ್ಲಾರಿಗೀತಸಾಧ್ಯಮಾಗಿ ತಾನೆ ಸಾಧ್ಯವಿಲ್ಲದ ಸುದ್ದಿ ತಿಳಿಸಿದ ಸಾಧ್ಯವಿಲ್ಲದ ನಿಜ ಸುದ್ದಿ ತಿಳಿಸಿ ಪರಿ ಶುದ್ಧನ್ನ ಮಾಡಿ ನಿಲಿಸಿದ 3 ಮೂಲೆಗೆ ಬಿದ್ದ್ವೊಸ್ತು ಮೇಲಕ್ಕೆ ಎತ್ತಿ ತವ ಲೀಲೆ ನಾಲಗೆಮೇಲೆ ಬರೆದನೆ ಲೀಲೆ ನಾಲಗೆಮೇಲೆ ಬರೆದೆನ್ನಜ್ಞಾನ ಕಾಳೆಂಬ ಕತ್ತಲ ಕಳೆದನೆ 4 ಮಂತ್ರಮೂಲನು ಸರ್ವಾಂತರ್ಯಾಮಿಯು ಸ್ವ ತಂತ್ರ ತಾನೆಂಬ ನಿಜ ತಿಳಿಸಿದ ಸ್ವ ತಂತ್ರ ತಾನೆಂಬ ನಿಜ ತಿಳಿಸಿ ಎನಗನ್ಯ ಚಿಂತೆ ಭ್ರಾಂತಿಗಳೆಲ್ಲ ಬಿಡಿಸಿದ 5 ಮರವೆಯ ಹಾರಿಸಿ ಕರುಣಿಸಿ ಸ್ಥಿರಜ್ಞಾನ ಪರಿಭವ ದು:ಖ ಪರಿಹರಿಸಿದ ಪರಿಭವ ದು:ಖ ಪರಿಹರಿಸೆನಗೆ ಸ್ಥಿರವಾದ ಪರಲೋಕದರಿವು ನಿಲಿಸಿದ 6 ಆಶದಿ ಬಿದ್ದು ನಾ ದೇಶದೇಶವ ತಿರುಗಿ ಬೇಸತ್ತು ಬಾಯ ಬಿಡುತಿರ್ದೆ ಬೇಸತ್ತು ಬಾಯ ಬಿಡುತಿರ್ದೆ ಕಂಡೆನ್ನಯ್ಯ ಲೇಸಾದ ಪದವಿ ತೋರಿಸಿದ 7 ಜಗಸುಖಕೊಲತಿದ್ದೆ ಜಗದಾತ್ಮನು ಈಗ ಜಗದ್ಹಗರಣ ತೋರಿಸ ನಗಿಸಿದ ಹಗರಣ ತೋರಿಸಿ ನಗಿಸಿದಚಲಸೌಖ್ಯ ಬಗೆ ತೋರಿ ಜಗಸುಖ ಮರೆಸಿದ 8 ಏನೆಂದು ಪೇಳಲಿ ಸಾನಂದನುತ ಮಹ ದಾನಂದದಾಲಯ ಪೊಗಿಸಿದ ಆನಂದದಾಲಯ ಪೊಗಿಸೆನ್ನ ವದನದಿ ತಾ ನಿಂದು ನಿಖಿಲ ನುಡಿಸಿದ 9 ಭವಭಯಹರಿಸುವ ಸವಿನುಡಿಗಲಿಸಿದ ಭವರೋಗದ್ವೈದ್ಯ ಮಮಪಿತ ಭವರೋಗದ್ವೈದ್ಯ ಮಮಪಿತ ಮುಂದಿನ್ನು ಸಾವ್ಹುಟ್ಟೋಭೀತಿ ಎನಗಿಲ್ಲ 10 ಕರ್ತು ಸರ್ವೋತ್ತಮ ನಿತ್ಯನಿರ್ಮಲ ಎನ್ನ ಮತ್ರ್ಯದ ಗುಣವ ತೊಡೆದೆನ ಮತ್ರ್ಯದ ಗುಣ ತೊಡೆದು ಸತ್ಯ ಶ್ರೀರಾಮ ಎನ್ನ ಮುಕ್ತಿ ಸಾಮ್ರಾಜ್ಯ ತಖ್ತೆ ಏರಿಸಿದ 11
--------------
ರಾಮದಾಸರು
ಸರಸ್ವತಿ ದೇವಿ ವಾರಿಜನೇತ್ರೆಯ ಶಾರದೆ ಶ್ರೀಮುಖ ತೋರುವದೆನ್ನಯ ಪಾರ ಪರಾತ್ಪರೆ ಪ ಮಯೂರ ವಾಹಿನಿ ಕಾಯುವುದೆನ್ನ ತಾಯೆ ಚಿದ್ಛನ ನಿಜದಾಯುವ ನೀಯುವ 1 ಬಾಲೆಯ ಭಾಗ್ಯವಿಶಾಲೆಯ ನವಕುಸುಮ ಮಾಲೆಯ ಗಾನವಿಲೋಲೆ ವಾಗೇಶ್ವರಿ 2 ಛಂಧದೊಳೆನ್ನ ಸಾನಂದವ ಪಾಲಿಪ ಮಂದಮತಿಯ ತಿದ್ದಿ ಸುಂದರ ಮುಖಿಯೆ ನೀ3 ನಂಬಿಕೆ ಹೊಂದಿಹನೆಂಬುವ ಭಕ್ತರ ಇಂಬುಗಳನ್ನೆ ಕೊಟ್ಟು ಬೆಂಬಲಕಿರ್ಪಳೆ 4 ಕಂತು ಬ್ರಹ್ಮನರಾಣಿ ಅಂತರಿಕ್ಷಣೆವಾಣಿ ಶಾಂತಿ ಸದ್ಗುರುಪದ ಸಂತಸಕಾರಿಣಿ 5
--------------
ಶಾಂತಿಬಾಯಿ
ಹರಿ ಗೋವಿಂದ ಮುಕುಂದ ಮನುವಂದ್ಯ ಮಾಧವ ಹರ ಅಜನುತ ಪರಮಾನಂದ ಪ ದೇವ ಗಿರಿಧರ ಸುರನರ ಮುರಹರ ಪರತರ ಶರಧಿಜಾ ವರ ನರಹರಿ ಕೇಶವ ಸ್ಮರಿಪರ ಸುರತರು ಪರಮಪ್ರಕಾಶನೆ ಪುರಹರವರಸುಖ ಸುರೇಶ 1 ಈಶ ಮುನಿಕುಲ ವಸುಕಾಲ ತನುಶೀಲ ವನಮಾಲ ಜನಕಜೆಪತಿ ಭಕ್ತರಾನಂದ ವನಜಾಕ್ಷ ದಿನಕರ ಘನಪ್ರಭೆತನುಶೋಭ ವಿನಮಿತ ಸನಕಾದಿಸಾನಂದ 2 ಜಗದೀಶ ಅಘಪೋಷ ಮೃಗನಾಶ ಲಕುಮೀಶ ಖಗಗಮನ ದಶಶತನಾಮ ಬಗೆಬಗೆ ಪೊಗಳುವ ನಿಗಮ ಆಗಮನುತ ಶ್ರೀರಾಮ 3
--------------
ರಾಮದಾಸರು
ಆನಂದಂ ಮಹದಾನಂದಂಹರಿಯ ಭಜನ ಬ್ರಹ್ಮಾನಂದಂ ಪಸತ್ಯ ನುಡಿಯುವುದೆ ಆನಂದಂ ತನ್ನಗುರ್ತ ತಿಳಿಯುವುದೆ ಆನಂದಂನಿತ್ಯನಿರ್ಮಲನ ಸತ್ಯ ಗುಣಂಗಳನುಭಕ್ತಿಯಿಂ ಭಜಿಸೆ ನಿತ್ಯಾನಂದಂಸತ್ಯ ಸತ್ಯ ಸರ್ವೋತ್ತಮ ಹರಿಯೆಂದುಅರ್ತಿಯಿಂ ಭಜಿಸೆ ಅತ್ಯಾನಂದಂ 1ಆಶ ನೀಗುವುದೆ ಆನಂದಂಭವಪಾಶಗೆಲಿಯುವುದೆ ಆನಂದಂಶ್ರೀಶ ಕೇಶವನ ಸಾಸಿರ ನಾಮದಧ್ಯಾಸದಿರುವುದೆ ಲೇಸಾನಂದಂದೋಷದೂರ ಭವಪಾಶಹರನ ಅನುಮೇಷ ಪÀಠಿಸೆ ಸ್ಥಿರದಾನಂದಂ 2ಹಮ್ಮನಳಿವುದೇ ಆನಂದಂ ತಾಸುಮ್ಮನಿರುವುದೆ ಆನಂದಂಕರ್ಮರಹಿತನಾಗಿ ಬ್ರಹ್ಮಪಿತನಪಾದಒಮ್ಮನದೊಳಗಸಮಾನಂದಂಧರ್ಮವಿಡಿದು ಪರಬ್ರಹ್ಮ ಶ್ರೀರಾಮನಮರ್ಮ ತಿಳಿಯೆ ನಿರ್ಮಲಾನಂದಂ 3
--------------
ರಾಮದಾಸರು
ಉತ್ಥಾನ ದ್ವಾದಶಿಯ ದಿವಸ(ಕಾರ್ತೀಕ ಶುದ್ಧ ದ್ವಾದಶಿಯ ಉತ್ಸವ)ರಂಭೆ : ಮಾನಿನೀ ಈತನಾರೆಂದೆನೆಗೆ ಪೇಳೆ ಮಾನಿನೀ ಪ.ಮಾನಿನೀಮಣಿ ಈತನ್ಯಾರೆ ಕರುಣಾನಿಧಿಯಂತಿಹ ನೀರೆ ಹಾ ಹಾಭಾನುಸಹಸ್ರ ಸಮಾನಭಾಷಿತ ಮ-ಹಾನುಭಾವನು ಸುಪ್ರವೀಣನಾಗಿಹ ಕಾಣೆ 1ಭಯಭಕ್ತಿಯಿಂದಾಶ್ರಿತರು ಕಾಣಿ-ಕೆಯನಿತ್ತುನುತಿಸಿಪಾಡಿದರು ನಿರಾ-ಮಯ ನೀನೇ ಗತಿಯೆಂದೆಲ್ಲವರು ಹಾ ಹಾಭಯನಿವಾರಣ ಜಯ ಜಯವೆಂದು ನುತಿಸೆ ನಿ-ರ್ಭಯಹಸ್ತತೋರುತ ದಯಮಾಡಿ ಪೊರಟನೆ2ಭೂರಿವಿಪ್ರರ ವೇದ ಘೋಷದಿಂದಸ್ವಾರಿಗೆ ಪೊರಟ ವಿಲಾಸ ಕೌಸ್ತು-ಭಾರತ್ನ ಹಾರ ಸುಭಾಸ ಹಾ ಹಾಚಾರುಕಿರೀಟಕೇಯೂರಪದಕಮುಕ್ತಾಹಾರಾಲಂಕಾರ ಶೃಂಗಾರನಾಗಿರುವನು 3ಸೀಗುರಿ ಛತ್ರ ಚಾಮರದ ಸಮವಾಗಿ ನಿಂದಿರುವ ತೋರಣದ ರಾಜಭೋಗನಿಶಾನಿಯ ಬಿರುದ ಹಾ ಹಾಮಾಗಧಸೂತ ಮುಖ್ಯಾದಿ ಪಾಠಕರ ಸ-ರಾಗ ಕೈವಾರದಿ ಸಾಗಿ ಬರುವ ಕಾಣೆ 4ಮುಂದಣದಲಿ ಶೋಭಿಸುವ ಜನಸಂದಣಿಗಳ ಮಧ್ಯೆ ಮೆರೆವ ತಾರಾವೃಂದೇಂದುವಂತೆ ಕಾಣಿಸುವ ಹಾಹಾಕುಂದಣಖಚಿತವಾದಂದಣವೇರಿ ಸಾ-ನಂದದಿ ಬರುವನು ಮಂದಹಾಸವ ಬೀರಿ 5ತಾಳ ಮೃದಂಗದ ರವದಿಶ್ರುತಿವಾಲಗಭೇರಿರಭಸದಿ ಜನಜಾಲಕೂಡಿರುವ ಮೋಹರದಿ ಹಾಹಾಸಾಲು ಸಾಲಾಗಿ ಬೊಂಬಾಳ ದೀವಟಿಗೆ ಹಿ-ಲಾಲು ಪ್ರಕಾಶದಿ ಲೋಲನಾಗಿಹ ಕಾಣೆ 6ಊರ್ವಶಿ: ಈತನೆ ಭಾಗ್ಯನಿಧಿ ನೋಡೆ ನೀ ಮುದದಿ ಪ.ಈತನೆ ಈರೇಳು ಲೋಕದದಾತನಾರಾಯಣ ಮಹಾ ಪುರು-ಹೂತ ಮುಖ್ಯಾಮರವಿನುತನಿ-ರ್ಭೀತ ನಿರ್ಗುಣ ಚೇತನಾತ್ಮಕ ಅ.ಪ.ಮೀನ ರೂಪವೆತ್ತಾಮಂದರಪೊತ್ತಭೂನಿತಂಬಿನಿಯ ಪ್ರೀತಮಾನವಮೃಗಾಧಿಪ ತ್ರಿವಿಕ್ರಮದಾನಶಾಲಿ ದಶಾನನಾರಿ ನ-ವೀನ ವೇಣುವಿನೋದ ದೃಢ ನಿ-ರ್ವಾಣ ಪ್ರವುಢ ದಯಾನಿಧಿ ಸಖಿ 1ವಾರಿಜಾಸವಾನವಂದಿತ ಶ್ರೀಪಾದಯುಗ್ಮವತೋರಿಕೊಂಬುವ ಸಂತತಕೇರಿಕೇರಿಯ ಮನೆಗಳಲಿ ದಿ-ವ್ಯಾರತಿಯ ಶೃಂಗಾರ ಭಕ್ತರ-ನಾರತದಿ ಉದ್ಧಾರಗೈಯಲುಸ್ವಾರಿ ಪೊರಟನು ಮಾರಜನಕನು 2ಮುಗುದೆ ನೀ ನೋಡಿದನು ಕಾಣಿಕೆಯ ಕ-ಪ್ಪಗಳ ಕೊಳ್ಳುವನು ತಾನುಬಗೆಬಗೆಯ ಕಟ್ಟೆಯೊಳು ಮಂಡಿಸಿಮಿಗಿಲು ಶರಣಾಗತರ ಮನಸಿನಬಗೆಯನೆಲ್ಲವ ಸಲ್ಲಿಸಿ ಕರುಣಾಳುಗಳ ದೇವನು ಕರುಣಿಸುವ ನೋಡೆ 3ರಂಭೆ : ದೃಢವಾಯಿತೆಲೆ ನಿನ್ನ ನುಡಿಯು ಸುರಗಡಣಓಲಗಕೆ ಇಮ್ಮಡಿಯು ಜನ-ರೊಡಗೂಡಿ ಬರುತಿಹ ನಡೆಯು ಹಾ ಹಾಮೃಡಸರೋಜ ಸುರಗಡಣ ವಂದಿತಕ್ಷೀರಕಡಲ ಶಯನ ಜಗದೊಡೆಯನಹುದು ಕಾಣೆ 1ಮದಗಜಗಮನೆ ನೀ ಪೇಳೆ ದೇವಸದನವ ಪೊರಡುವ ಮೊದಲೇ ಚಂದ-ನದಪಲ್ಲಂಕಿಯ ತಂದು ಮ್ಯಾಲೆ ಹಾ ಹಾಮುದದಿಂದ ಬಾಲಕರೊದಗಿ ಸಂತೋಷದಿಚದುರತನದಿ ಪೋಗುವನು ಪೇಳೆಲೆ ನೀರೆ 2ಊರ್ವಶಿ: ನಾರೀಮಣಿ ನೀ ಕೇಳೆ ಚಕ್ರೋತ್ಸವಶ್ರೀರಮಾಧವನ ಲೀಲೆಘೋರದೈತ್ಯಕುಠಾರ ಲಕ್ಷ್ಮೀನಾರಾಯಣನ ಬಲಕರ ಸರೋಜದಿಸೇರಿ ಕುಳಿತ ಗಂಭೀರ ದಿನಪನಭೂರಿತೇಜದಿ ಮೆರೆವುದದು ತಿಳಿ 1ದೊರೆಯು ಬರುವನು ಎಂದು ಎಲ್ಲರಿಗೆ ಗೋ-ಚರಿಸುವನೊಲಿದುಇಂದುತರ ತರದ ಆರತಿಗಳನು ನೀವ್ಧರಿಸಿ ನಿಂದಿರಿಯೆಂದು ಜನರಿಗೆ-ಚ್ಚರಿಗೆಗೋಸುಗ ಮನದ ಭಯವಪ-ಹರಿಸಿ ಬೇಗದಿ ಪೊರಟು ಬಂದುದುರಂಭೆ :ಸರಸಿಜನಯನೆ ನೀ ಪೇಳೆಸೂರ್ಯಕಿರಣದಂತಿಹುದೆಲೆ ಬಾಲೆ ಸುತ್ತಿಗೆರಕವಾಗಿಹುದು ಸುಶೀಲೆ ಆಹಾಹರಿಯ ವೈಕುಂಠ ನಗರದಂತೆ ಜ್ಯೋತಿ ವಿ-ಸ್ತರವಾಗಿ ಸುತ್ತಿನೊಳ್ ಮೆರೆವುದಿದೇನೆಲೆ 1ಊರ್ವಶಿ : ಸಾದರದಲಿ ನೀ ಕೇಳೆ ಕಾರ್ತಿಕ ಶುದ್ಧದ್ವಾದಶಿಯೊಳಗೆ ಬಾಲೆಮಾಧವನ ಪ್ರೀತ್ಯರ್ಥವಾಗಿ ಶು-ಭೋದಯದಿ ಸಾಲಾಗಿ ದೀಪಾರಾಧನೆಯ ಉತ್ಸಹದ ಮಹಿಮೆಯಸಾದರದಿ ನೀ ನೋಡೆ ಸುಮನದಿ 1ನಿಗಮಾಗಮದ ಘೋಷದಿ ಸಾನಂದ ಸು-ತ್ತುಗಳ ಬರುವ ಮೋದದಿಬಗೆ ಬಗೆಯ ನರ್ತನ ಸಂಗೀತಾದಿಗಳ ಲೋಲೋಪ್ತಿಯ ಮನೋಹರದುಗುಮಿಗೆಯ ಪಲ್ಲಂಕಿಯೊಳು ಕಿರು 2ನಗೆಯ ಸೂಸುತ ನಗಧರನು ಬಹಚಪಲಾಕ್ಷಿ ಕೇಳೆ ಈ ವಸಂತ ಮಂ-ಟಪದಿ ಮಂಡಿಸಿದ ಬೇಗಅಪರಿಮಿತ ಸಂಗೀತ ಗಾನ ಲೋ-ಲುಪನು ಭಕ್ತರ ಮೇಲೆ ಕರುಣದಿಕೃಪೆಯ ಬೀರಿ ನಿರುಪಮ ಮಂಗಲಉಪಯಿತನು ತಾನೆನಿಸಿ ಮೆರೆವನು 3ಪಂಕಜಮುಖಿನೀ ಕೇಳೆ ಇದೆಲ್ಲವುವೆಂಕಟೇಶ್ವರನ ಲೀಲೆಶಂಕರಾಪ್ತನು ಸಕಲ ಭಕ್ತಾತಂಕವನು ಪರಿಹರಿಸಿಕರಚಕ್ರಾಂಕಿತನು ವೃಂದಾವನದಿ ನಿಶ್ಯಂಕದಿಂ ಪೂಜೆಯಗೊಂಡನು 4ಕಂತುಜನಕನಾಮೇಲೆ ಸಾದರದಿ ಗೃ-ಹಾಂತರಗೈದ ಬಾಲೆಚಿಂತಿತಾರ್ಥವನೀವ ಲಕ್ಷ್ಮೀಕಾಂತ ನಾರಾಯಣನು ಭಕುತರತಿಂಥಿಣಿಗೆ ಪ್ರಸಾದವಿತ್ತೇ-ಕಾಂತ ಸೇವೆಗೆ ನಿಂತಮಾಧವ5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತದಿಗೆಯ ದಿವಸ(ಶೇಷ ದೇವರನ್ನು ಕುರಿತು)ರಂಭೆ :ನ್ಯಾರೆಂಬುದನೆನಗೆ ಪೇಳೆಕ್ರೂರತನದಿ ತಾ ತೋರುವನೀಗ ಮ-ಹೋರಗನೆನ್ನುತ ಕೋರಿಕೆ ಬರುವದು 1ಒಂದೆರಡು ಶಿರವಲ್ಲ ಬಹುಹೊಂದಿಹವು ಸಟೆಯಲ್ಲಕಂಧರದಲಿ ಕಪ್ಪಂದದಿ ತೋರ್ಪವುಚಂದಿರಮುಖಿ ಯಾರೆಂದೆನಗರುಹೆಲೆ 2ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ-ಸಾಮಾನ್ಯನೆ ಕಾಣೆಭೂಮಿಯ ಪೊತ್ತ ನಿರಾಮಯನಾದಸುಧೀಮನಿವನು ಜಾಣೆ 1ವಾಸುದೇವಗೆ ಈತ ಹಾಸಿಗೆಯವ ನಿ-ರ್ದೋಷನಿವನು ಜಾಣೆಸಾಸಿರಮುಖದ ವಿಲಾಸನಾಗಿಹ ಮಹಾ-ಶೇಷನಿವನು ಕಾಣೆ 2ಅದರಿಂದಲಿ ಕೇಳ್ ತದಿಗೆಯ ದಿವಸದಿಮಧುಸೂದನನಿವನಅಧಿಕಾನಂದದಿ ಒದಗಿಸಿ ಬರುವನುಇದೆಯಿಂದಿನಹದನ3ಎಂದಿನಂತೆ ಪುರಂದರವಂದ್ಯ ಮುಕುಂದಸಾನಂದದಲಿಅಂದಣವೇರಿ ಗೋವಿಂದ ಬರುವನೊಲ-ವಿಂದತಿ ಚಂದದಲಿ 4ಕಂಟಕಗಳು ಎಲ್ಲುಂಟೆಂಬಂತೆ ನೃಪ-ಕಂಠೀರವಗೈದಘಂಟಾನಾದದಿ ಮಂಟಪದೊಳು ವೈ-ಕುಂಠನು ಮಂಡಿಸಿದಾ 5ಕಾಂತಾಮಣಿ ಕೇಳಿಂತೀಪರಿ ಶ್ರೀ-ಕಾಂತ ನತತಂಡಸಂತವಿಸುತ ಮಹಾಂತಮಹಿಮನೇ-ಕಾಂತಸೇವೆಯಗೊಂಡ 6* * *ಪರಶಿವನನ್ನು ಕುರಿತುರಂಭೆ : ಯಾರಮ್ಮಾ ಮಹಾವೀರನಂತಿರುವನುಯಾರಮ್ಮಾ ಇವನ್ಯಾವ ಶೂರ ಯಾವಊರಿಂದ ಬಂದ ಪ್ರವೀರ ಆಹಾಮಾರಜನಕನ ವಿಸ್ತಾರಪೂಜೆಯ ವೇಳ್ಯಧೀರನಂದದಿ ತಾ ವಿಚಾರ ಮಾಡುವನೀತ 1ಕರದಿ ತ್ರಿಶೂಲವ ಧರಿಸಿ ಮತ್ತೆವರಕೃಷ್ಣಾಜಿನವನುಕರಿಸಿಹರಿಚರಣಸನ್ನಿಧಿಗೆ ಸತ್ಕರಿಸಿ ಆಹಾಜರಿಯ ದುಕೂಲವ ನಿರಿದುಟ್ಟುಕೊಂಡು ವಿ-ಸ್ತರವಾದ ತೋಷದಿ ಮೆರದು ನಲಿವ ಕಾಣೆ 2ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ.ಈತನೀಗ ಪೂರ್ವದೊಳಗೆಭೂತನಾಥ ಸೇವೆಯೊಲಿದಓತು ವಿಷ್ಣುಭಕ್ತಿಯಿಂದಪೂತನಾದ ಪುಣ್ಯಪುರುಷ ಅ.ಪ.ಊರು ಇವಗೆ ಮೊದಲು ಗಂಗಾತೀರವಾಯ್ತುವೇಣುತಾ ವಿ-ಚಾರದಿಂದ ಪೊದನೈಉದಾರತನದಿ ರಾಮೇಶ್ವರಕೆಸಾರಗ್ರಹಿತ ಮುಕ್ತಿ ಪಥವನು ಕರುಣದಿಂದತೋರಿಸುವನು ವಿಷ್ಣುವೆಂದೆನುತ ಗಿರಿಯನೇರಿ ಕರುಣ ವಾರಿಧಿಯಪದಾರವಿಂದಸೇವೆಗೈದುಮಾರಪಿತನ ಭಕ್ತಿಯೊಳು ತಾ ಹೇರಿನಲಿವ ಚಾರುಚರಿತ 1ಪರಮಪುರುಷ ಹರುಷದಿಂದೀಪುರಕೆಬರುವಕಾಲದಲ್ಲಿಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆಚರಿಸುವ ತ್ರಿಕಾಲಪ್ರಜÕನು ಇವನ ಗುಣವ-ನರಿವರ್ಯಾರು ಮನುಜಭುಜಂಗರಲಿಮಹತ್‍ಕಾರಣೀಕಪುರುಷನಿವ ಮಹಾ ಬಲಾಢ್ಯಕರುಣವುಳ್ಳ ವಿಷ್ಣುಭಕ್ತ 2ಶ್ರೀನಿವಾಸ ಕರುಣದಿಂಪ್ರಧಾನಿಯೆಂದು ನಡೆಸಿಕೊಡುವಏನಗೈದರೀತ ಮನದಿ ತಾನುತೋಷಪಟ್ಟು ಇರುವಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತನಾನಾ ಉಪದ್ರವಗಳ ಬಿಡಿಸುವ ಧನಿಯ ಆಜೆÕಏನ ದೊರಕಿತದನು ಬೇಗ ತಾನೆಬಂದು ಪೇಳಿ ಜನರಮಾನಿಸುತ ನಿಧಾನಗೊಳಿಸಿಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ನಂಬಿರೈ ಕರುಣಾಂಬುಧಿ ಕೋಮಲಕಂಬುಕಂಧರಹರಿಯಪ.ಯೋಗಿಮನಮುದ ರಾಗ ಮೂರುತಿಯ ದೊರೆಯಪಾಲಿತ ಕೌಂತೇಯಭಾಗವತತನಕಾಗಿ ತಾ ದಯವಗೈದ ಭರದಿಂದ ತೋರ್ವಯೋಗ ಮಾಯಾಧೀಶ ಸತ್ಸಕಲಾಗಮಾರ್ಚಿತಭೋಗಿಶಯನಸ-ರಾಗಕಪ್ಪನಿಯೋಗಿಸುವರೆ ಮಹಾಗಿರಿಯಿಂದಲಿ ಸಾಗಿ ಬಂದನ 1ಮಂದವಾರದಿ ಮಿಂದು ಮಡಿಗಳನು ಉಟ್ಟು ಕಾಣಿಕೆಯನಿಟ್ಟುಮಂದರಾಧರ ನೀನೆ ಗತಿಯೆಂದು ಬಂದು ಕೈಮುಗಿದುನಿಂದುವಂದಿಸುತ ಬಲ ಬಂದು ಚರಣದ್ವಂದ್ವಸೇವೆಯ ಕುಂದದರ್ಚಿಸಿದಂದುಗವ ಬಿಡಿಸೆಂದು ಪೇಳ್ದರೆ ಮಂದಹಾಸಾನಂದವೀವನು 2ಕಾಸುವೀಸದ ಬಡ್ಡಿ ಭಾಷೆಯನು ಬಿಡನು ನಮ್ಮೊಡೆಯನುದೇಶದೇಶದಿ ಕಷ್ಟ ತರಿಸುವನು ತಾನು ಭಕ್ತರ ಕಾಯುವನುಘಾಸಿಯಾಗದೆ ಧನಿಯ ಹಣವನುಸೂಸಿ ಕರುಣಾರಾಸ ರಾಜ್ಯದವಾಸವಾಗಿಹ ಒಕ್ಕಲಿಗರೆಂಬೀ ಸುಮನದಿಂ ಕೇಶವನ ಪದವ 3ಕಷ್ಟವಿಲ್ಲದೆ ಇಷ್ಟ ದೊರಕುವದು ನೆನೆದುಸುಖದಿಂ ಬಾಳುವದುದೃಷ್ಟಿಯಿಂದಲಿನೋಡುನಮ್ಮ ದೊರೆಯ ಹರಿಯಪರಿಯ ನೀನರಿಯಾಸಿಟ್ಟುಮಾಡುವ ಸ್ವಾಮಿನಿನ್ನೊಳಗಿಟ್ಟುಕೊಂಡರೆ ಕೆಟ್ಟು ಹೋಗುವಿಒಟ್ಟುಗೂಡಿಸಿ ತಟ್ಟನೆಲ್ಲ ಮುಂದಿಟ್ಟುಯಿರೆ ಕೈಗೊಟ್ಟು ಕಾಯುವ 4ಮಾನನಿಧಿ ಭಕ್ತರನು ಮನ್ನಿಸುವ ನಲಿವ ಕರುಣವ ಗೈವಭಾನುಕೋಟಿಪ್ರಕಾಶದಿಂದಿರುವ ಮೆರೆವ ಮಹಾನುಭಾವಏನನೆಂಬೆನು ಆದಿ ಶ್ರೀಲಕ್ಷ್ಮೀನಾರಾಯಣ ತಾನೆ ಕಾರ್ಕಳಸ್ಥಾನ ರಾಜಧಾನಿಯಲಿ ಮೆರೆವನನವರತದಿ ಶ್ರೀನಿವಾಸನ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಬಿದಿಗೆಯ ದಿವಸ(ಹನುಮಂತನನ್ನು ಕುರಿತು)ಸಮನಸನಾಗಿ ತೋರುವನಲ್ಲೆ ನೀರೆ ಪ.ಧನ್ಯನಾಗಿರುವ ದೊರೆಯ ಧರಿಸುತ್ತಚೆನ್ನಿಗನಾಗಿ ತೋರುವನಲ್ಲೆ ಈತ 1ಪಟ್ಟೆಕಂಬಿಯ ನಿರುದುಟ್ಟುಕೊಂಡಿರುವಕಟ್ಟಿದುತ್ತರೀಯ ಭೂಷಣದಿಂದ ಮೆರೆವ 2ಸೋಮಾರ್ಕಶಿಖಿಯಂತಿರುವುದು ತ್ರಿನಾಮರಾಮಣೀಯಕ ಮನೋಹರ ಪೂರ್ಣಕಾಮ 3ವೀರವೈಷ್ಣವ ಮುದ್ದು ಮೋಹನಕಾಯಭೂರಿಭೂಷಣಭುಜಬಲ ಹರಿಪ್ರಿಯ 4ರೂಪನೋಡಲು ಕಾಮರೂಪನಂತಿರುವಚಾಪಲ ಪ್ರೌಢ ಚಿದ್ರೂಪನಂತಿರುವ 5ಬಾಲವ ನೆಗಹಿ ಕಾಲೂರಿ ಶೋಭಿಸುವನೀಲದುಂಗುರದ ಹಸ್ತವ ನೀಡಿ ಮೆರೆವ 6ಗೆಜ್ಜೆ ಕಾಲುಂಗರ ಪದಕಕಟ್ಟಾಣಿಸಜ್ಜನನಾಗಿ ತೋರುವನು ನಿಧಾನಿ 7ಊರ್ವಶಿ :ತರುಣಿ ಕೇಳೀತನೆ ದೊರೆಮುಖ್ಯಪ್ರಾಣವರನಿಗಮಾಗಮ ಶಾಸ್ತ್ರಪ್ರವೀಣ1ಮಾಯವಾದಿಗಳ ಮಾರ್ಗವ ಖಂಡಿಸಿದವಾಯುಕುಮಾರ ವಂದಿತ ಜನವರದರಂಭೆ : ದಿಟವಾಯ್ತು ಪೇಳ್ದ ಮಾತಾದರು ಜಾಣೆಚಟುಳ ಹನುಮನ ಉತ್ಕಟರೂಪ ಕಾಣೆ 1ವಾಮನನಾದ ಕಾರಣವೇನೆ ಪೇಳೆನಾ ಮನಸೋತೆ ಎಂತುಂಟೊ ಹರಿಲೀಲೆ 2ಊರ್ವಶಿ : ನಾಗವೇಣಿ ನೀ ಕೇಳೆ ನಾಗವೈರಿಯೊಳುಸಾಗಿತು ಸೇವೆಯೆಂಬುದು ಮನಸಿನೊಳು 1ವಾದವ ಮಾಡಿ ವಿನೋದದಿ ಹರಿಯಪಾದಸೇವೆಗೆ ಮನನಾದ ಕೇಳಿದೆಯೊ 2ವೀರ ವೇಷವನಿದ ಕಂಡು ಶ್ರೀಹರಿಯದೂರವಾದನೋ ಎಂದು ಮನದೊಳು ನಿಜವು 3ತೋರಲು ಬೇಗದಿ ದೊರೆ ಹನುಮಂತಭೂರಿಭೂಷಣ ಸುಂದರ ರೂಪವಾಂತ 4ಇಂದಿನ ಸೇವೆಯೆನ್ನಿಂದತಿ ದಯದಿಮಂದರಧರಿಸಿಕೊಳ್ವುದು ಎಂದು ಭರದಿ 5ಒಯ್ಯನೆ ಪೇಳುತ್ತ ವಯ್ಯಾರದಿಂದಕೈಯನು ನೀಡಿ ಸಾನಂದದಿ ಬಂದ 6ಕಂತುಪಿತನು ಹನುಮಂತ ಮಾನಸಕೆಸಂತಸ ತಾಳಿ ಆನಂತನು ದಿಟಕೆ 7ಏರುತ ಹನುಮನಭೂರಿವೈಭವದಿಸ್ವಾರಿಯು ಪೊರಟ ಸಾಕಾರವ ಮುದದಿ 8ತೋರಿಸಿ ಭಕ್ತರಘೋರದುರಿತವಸೂರೆಗೊಳ್ಳುವನು ವಿಚಾರಿಸಿ ನಿಜವ 9ಹದನವಿದೀಗೆಲೆ ಬಿದಿಗೆಯ ದಿನದಿಮದನಜನಕನು ಮೈದೋರುವ ಮುದದಿ 10ಪ್ರತಿದಿನದಂತೆ ಶ್ರೀಪತಿ ದಯದಿಂದಅತಿಶಯ ಮಂಟಪದೊಳು ನಲವಿಂದ 11ಎಂತು ನಾ ವರ್ಣಿಪೆ ಕಂತುಜನಕನಅಂತ್ಯರಹಿತ ಗುಣಾನಂಮಹಿಮನ 12ಏಕಾಂತದಿ ಲೋಕೈಕನಾಯಕನುಶ್ರೀಕರವಾಗಿ ನಿಂದನು ನಿತ್ಯಸುಖನು 13* * *ರಂಭೆ : ಇವನತಿಜಾಣನಮ್ಮಾ ಇವನ್ಯಾರಮ್ಮಾ ಪ.ಇವನತಿಜಾಣ ಲಕ್ಷ್ಮೀಧವನಿಗಿಂತಲು ಮುಂದೆತವಕದಿ ಬರುವತ್ತಿತ್ತವರನ್ನು ನೋಡದೆ 1ಅಂದಣವೇರಿ ಮತ್ತೊಂದ ತಾ ನೋಡದೆಒಂದೇ ಮನದಿ ಬೇಗ ಮುಂದೆ ಬರುವನಮ್ಮಾ 2ಬಾಲಬ್ರಹ್ಮಚಾರಿ ಶಿಲೆಯಂತಿರುವನುಅಲೋಚಿಸಲಿವ ಮೂಲಪುರುಷನಮ್ಮಾ 3ಪುಟ್ಟನಾದರು ಜಗಜಟ್ಟಿಯಂತಿರುವನುದಿಟ್ಟನಿವನವನ ಮುಟ್ಟಿ ನೋಡಮ್ಮ 4ಊರ್ವಶಿ :ನಾರೀ ಇವನೀಗಹೊಂತಕಾರಿಲೋಕಕ್ಕಾಧಾರಿಪ.ಕೊಬ್ಬಿದ ದೈತ್ಯರಿಗೀತನೆಕಾಲಹಬ್ಬುವದಾತ್ಮಕ್ಕೀತನೆ ಮೂಲಉಬ್ಬುವ ಹರಿಯೆಂದರೆ ಮೈಯೆಲ್ಲಒಬ್ಬನಿಗಾದರೂ ಬಗ್ಗುವನಲ್ಲ 1ಎಲ್ಲಿರುವನುಹರಿಅಲ್ಲಿಹನೀತಬಲ್ಲಿದನಾರಾಯಣಗಿವ ದೂತಖುಲ್ಲರ ಮನಕತಿ ಝಲ್ಲೆನುವಾತಸುಲ್ಲಭನೆಯಿವ ಮುಂದಿನ ಧಾತ 2ಭೇದವಿಲ್ಲೆಂಬುದವರಿಗೆಯಿವ ತುಂಟಮೇದಿನಿಬಾಧಕರಿಗೆ ಯಿವ ಕಂಟಆದಿ ಮೂರುತಿ ಕೇಶವನಿಗೆಬಂಟಮಾಧವಭಕ್ತರಿಗೀತನೆ ನೆಂಟ 3ದುರಿತಾರಣ್ಯದಹನ ನಿರ್ಲೇಪವರವೆಂಕಟಪತಿಯಿದಿರೊಳಗಿಪ್ಪಪರಮಾತ್ಮನ ಪರತತ್ತ್ವ ಸ್ವರೂಪಮರೆಮಾತೇನಿವ ದೊರೆ ಹನುಮಪ್ಪ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀತುಳಸಿ162ಶ್ರೀ ತುಳಸಿ ಮಹಿಮೆಯನು ಪೊಗಳಲಳವಲ್ಲ ಶ್ರೀನಾಥ ನಾರಾಯಣನ ಅರ್ಚನೆಗೆ ಸರ್ವದಾಪ್ರೀತಿಕರಳಾಗಿ ರಾಜಿಪಳು ಕಲಿಯುಗದಲ್ಲಿ ನೋಂತವರಭಾಗ್ಯವೆಂತೊ ಪ .ಶ್ರೀಮದಾರ್ಜಿತ ಕ್ಷೀರವಾರಿಧಿಯ ಮಥಿಸುತಿರೆಆ ಮಹಾವಿಷ್ಣುವಿನ ನೇತ್ರದಿಂದಲಿ ಹೊರಟಪ್ರೇಮಜಲದುದ್ಭವಿಸಿ ನಳನಳಿಸಿ ದಿವ್ಯ ಆಮೋದ ಪೂರ್ಣಳಾಗಿಭೂಮಿ ಪಾವನವ ಮಾಡುತಲಿ ಭೂನಿರ್ಜರರಧಾಮಧಾಮಗಳಲ್ಲಿ ವೃಂದಾವನದಿ ನೆಲಸಿಕಾಮಿತ ಫಲವನೀವ ಕಲ್ಯಾಣಿ ಕೃಷ್ಣನಿಗೆ ನೇಮದಿಂ ಪ್ರಿಯಳಾದ 1ಈ ಮನುಜ ದೇಹದಲಿದಾವಪ್ರಾಣಿಯು ಪಿತೃಸ್ತೋಮವನ್ನುದ್ಧರಿಪೆನೆಂದರೆ ಸುಲಭ ಸಾಧ್ಯಕೋಮಲ ದಳವನೊಂದು ತಂದು ಮಾಧವನಚರಣತಾಮರಸಕರ್ಪಿಸುವದುತಾ ಮುನ್ನ ಮಾಡಿದಘ ಪಂಚಕಗಳೋಡಿದವುಸಾಮಾನ್ಯವಲ್ಲ ತುಳಸಿಯ ವನವಸೋಂಕಿಬಂದಾ ಮರುತದಿಂದ ದೇಶ ಗ್ರಾಮಗಳು ಪಾವನವುಧೀಮಂತ ಮಾನ್ಯಳಾದ 2ತುಳಸಿ ನೆಳಲಲ್ಲಿ ಅಂಕುರಗಳೆದ್ದಲ್ಲಿ ಪಿತೃಗಳಿಗನ್ನವಿತ್ತರಕ್ಷಯಫಲವು ಊಧ್ರ್ವಪುಂಡ್ರತಳದ ಮೃತ್ತಿಕೆಯಲಿಟ್ಟರೆ ಕೋಟಿ ತೀರ್ಥಗಳ ಮುಳುಗೆದ್ದಫಲ ಸಿದ್ಧವುನಿಲಯದಲಿ ಪತ್ರಮೃತ್ತಿಕೆಕಾಷ್ಠವಿರಲಲ್ಲಿಕಲಿಮುಟ್ಟಲಂಜಿ ತೊಲಗುವನು ಮಣಿಸರಗಳನುಗಳದೊಳಾಂತರಾಕಲುಷಸಂಹರವು ಸಹ ಸಲೆವಿಷ್ಣುಪದವಿಯನೀವ 3ಶತಸಾಸಿರಪರಾಧವಿರಲಿನ್ನು ಮೃತ್ತಿಕೆಲಿಪಿತ ಕಾಯದನಿಗೆ ಬಹುಜನ ನೋಡೆ ವಿಘ್ನಗಳಗತಿಯುಡುಗಿ ದುಷ್ಟಗ್ರಹಗಳೆಲ್ಲನುಕೂಲಗತಿಯಾದ ಫಲವೀವವುಪ್ರತಿದಿನದಿ ನಾಭಿಕಕರ್ಣದಲಿ ಶಿರದಲ್ಲಿ ಶ್ರೀಪತಿಯ ನಿರ್ಮಾಲ್ಯದಳ ಧರಿಸಿ ಹರಿಪಾದ ತೀರಥವೊಮ್ಮೆ ಸೇವಿಸಿದವರ ಮುಕ್ತಿ ಕರತಳವು ಪತಿತಪಾವನಿಎನಿಸುವಾ 4ದರುಶನದಿ ಸ್ಪರುಶನದಿ ಧ್ಯಾನದಿಂ ಕೀರ್ತನೆಯುನಿರುತ ಪ್ರಣಾಮಗಳು ಸ್ತೋತ್ರದಾರೋಪಣಿಂಪರಮಜಲ ಶೇಚನಾರ್ಚನ ನಿಷ್ಠೆಯಿಂದ ನವ ಪರೀಕ್ಷೆಯನುಮಾಡಲುಹರಿಚರಣ ಕಮಲರತಿ ದೊರಕಿ ಯುಗ ಕೋಟಿ ಸಾಸಿರಕಾಲತಿರುಗಿ ಬಂದರೆ ಸತತ ಮಾಂಗಲ್ಯಹರಿಯ ಮನೆಯಲ್ಲಿ ನಿಜ ಹರುಷವನ್ನುಂಬುವರು ಮುರಾರಿವರದಂತೆ ಪದವ 5ಒಂದೊಂದುದಳಕೋಟಿ ಸ್ವರ್ಣಭಾರಕೆ ಮಿಗಿಲುಎಂದು ವಿಶ್ವಾಸದಲಿ ತಂದು ಸಾಸಿರನಾಮದಿಂದ ಗೋವಿಂದಗರ್ಪಿಸಿದರಿಲ್ಲಿಹ ಭವದಂದುಗವು ಮಾನಿಸರ್ಗೆಸುಂದರ ತುಲಸಿ ಮೂಲವನ್ನು ತೊಡಕಿರ್ದಕಳೆಯಂದೆಗೆದು ಶಾಖೋಪಶಾಖದಿಂ ವೃದ್ಧಿಸಾನಂದವಿತ್ತರಾ ನೂರೊಂದು ಕುಲ ನರಕವನು ಹೊಂದಲೀಸರುಪುಣ್ಯದಾ 6ಶ್ರೀ ವಿಷ್ಣುವಲ್ಲಭೆಯ ಮೂಲದಲಿ ತೀರ್ಥಗಳುಬಾವನ್ನಗಂಧಿಯಳ ಮಧ್ಯದಲಿ ಸುರನಿಕರಪಾವನಿಯಳಾ ಹರಿಯ ಕೊನೆಯಲಿಶ್ರುತಿಸಮೂಹಲಾವಣ್ಯ ಗುಣರಾಸಿಯುಭಾವಶುದ್ಧಿಯಲಿ ಉದಯದಿ ಸ್ಮರಿಸಿ ನಿರುತದಿನಾವ ಕಾರ್ಯಕೆ ಗೆಲುವು ಇಹಪರದ ಸೌಖ್ಯವಿತ್ತಾವ ಕಾಲಕ್ಕೆಹೊರೆವಪ್ರಸನ್ನವೆಂಕಟ ದೇವನಂಗ ದೊಳೊಪ್ಪುವಾ7
--------------
ಪ್ರಸನ್ನವೆಂಕಟದಾಸರು