ಒಟ್ಟು 64 ಕಡೆಗಳಲ್ಲಿ , 27 ದಾಸರು , 57 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶೌನಕಾದಿ ಮುನಿಗಳಿಗೆ ಸಾನುರಾಗದಲಿ ಪೇಳಿದರು 1 ಕೈಲಾಸಶಿಖರ ಮೆರೆವುದು ಮೇಲಾದ ರತ್ನಕಾಂತಿಗಳಿಂ2 ಜಂಬುಕೇತಕಿ ಪನಸ ಪುನ್ನಾಗ ಸರ್ವಾತಿಶಯದಲಿ ತೋರುವದು 3 ಸಿದ್ಧಿದಾಯಕ ವೆಂದಿಲ್ಲಿ ಪದಧ್ಯಾನದಿ ಕುಳಿತಿಹರು 4 ದಿವಿಜ ಅವನಿಧರಾಗ್ರಣಿಯಾಗಿ ಭುವನೋದರತ್ವದಿ ಭುವನಜನಾಭ ಶ್ರೀಧವನಂತೆ ಗಿರಿಯು ಮೆರೆಯುವುದು5 ಪಾರ್ವತಿಯೊಡನೆ ಸತಿ ನಮಿಸಿ ನುಡಿದಳು 6 ನುಡಿಯ ಲಾಕ್ಷಣದಿ ನಾಕರುಣಿಸುವೆ ಕೇಳೆಂದ7 ವರಮಹಾಲಕ್ಷ್ಮಿಯ ವೃತವು ದೊರೆವುದು ಸಕಲಸೌಭಾಗ್ಯ 8 ಶ್ರಾವಣ ಪೂರ್ಣ ಮಾಸಿಯ ದಿನದಿ ಪೂಜಿಪದು ವಿಶ್ವಾಸದಿಂದಾರಾಧಿಸುತಲಿ 9 ಪಕ್ವಾನ್ನ ಲೇಹ್ಯಾದಿ ನೈವೇದ್ಯ ತತ್ತನ್ನಿಯಾಮಕರ ಚಿಂತಿಪುದು 10 ಕೃಪಾಪಯೋನಿಧೆಯ ಪೂಜಿಪುದು ಬಿಂಬಾಪರೋಕ್ಷಿಗಳು ಪೂಜಿಪರು 11 ಕಾಮಿತ ಪಡೆದವರ್ಯಾರು ಮಹಾಮಹಿಮೆಯನು ಚನ್ನಾಗಿ12 ಮಡದಿ ತಾನಿರಲು ಕರೆಯುವರೆಲ್ಲಾರು ಪುರದಿ 13 ವನಜನಾಭನ ಶೇವೆಯೆಂದು ಗುಣದಿ ಭೂಷಿತಳು 14 ಬಂದಳು ವರಮಹಾಲಕ್ಷ್ಮಿ ಪರಮ ಸಂಭ್ರಮದಿ 15 ನಿರ್ಮಿಸುವನು ಜಗವೆಲ್ಲ ನೀ ಕರುಣಿಸು ಮಾತೆ 16 ಶ್ರಾವಣ ಹರುಷದಿಂದೆನ್ನಯ ವೃತವ ವರಗಳನಿತ್ತಳು ದಯದಿ 17 ಸಂತೋಷದಲಿ ಪೇಳಲವರು ಚಿಂತಿತ ಫಲವೀವುದೆಂದು 18 ಸಿಂಗರಿಸಿದಳಾದಿನದಿ ವಿಪ್ರಾಂಗನೆಯರನು ಕರೆದಳು 19 ಶಿರಿದೇವಿ ಪೂಜಾಸಾಧನವ ನೆರೆದರಾ ದ್ವಿಜನಮಂದಿರದಿ 20 ಕುಂಭಗಳಿಟ್ಟಘ್ರ್ಯಾದಿಗಳಿಂ ಸುರರ ಸಮ್ಮುಖದಿ 21 ಇಂದಿರ ದೇವಿಗಾರುತಿಯ ಬಂಧÀ£ವÀನÉ ಮಾಡುತಿಹರು 22 ಪೂಜಿಸುತಿರಲಾಗೃಹವು ಸೋಜಿಗವಾಯ್ತು ನೋಳ್ಪರಿಗೆ 23 ಕೊರಳೊಳುನವರತ್ನಹಾರ ಸಿರಿದೇವಿ ಕರುಣವಿದೆಂದು 24 ಇತ್ತರು ಬಾಗಿಣಗಳನು ಪೋದರು ತಮ್ಮ ಮನೆಗೆ 25 ಪುಣ್ಯದಿಂದೆಲ್ಲರು ನಾವೆಂ ಧನಧಾನ್ಯ ಸಂಪದಾಗಮನ 26 ಪಾಲಿಸುವಳು ಸಿರಿಯೆಂದು ಶಿವನು ಹೀಗೆಂದು ||27| ಕಾಯಜ ಜನನಿಯ ಕಾಯುವದೆಂದು ನೀ ತಿಳಿಯೆ 28 ನಿರ್ಮಲ ಭಕ್ತಿಜ್ಞಾನ ವೈರಾಗ್ಯ ಇಳೆಯೊಳು ಕಾರ್ಪರ ನಿಲಯ ಶ್ರೀನರಹರಿ ಒಲಿವನು ನಿರುತ ಪಠಿಸಲು30
--------------
ಕಾರ್ಪರ ನರಹರಿದಾಸರು
ಶ್ರೀರಾಮ ಶ್ರೀರಾಮ ಶ್ರೀರಾಮ ಶ್ರೀರಾಮ ಸರಸಿಜಾಸನ ಪುರಹರನನ್ನು ಮೊದಲು ನೀ ಶರೀರದಿ ಪಡೆದೆ ಸರ್ವೇಶ | ಕೇಶವ ಪರಮಪುರುಷನೆ ಕೈಪಿಡಿಯೊ1 ಅರಿವಿಗಾಶ್ರಯನೀನೆ ಸರ್ವಶಬ್ದವಾಚ್ಯ ದುರಿತವಿದೂರ ಪರಮಾತ್ಮ | ನಾರಾಯಣ ಕರುಣವಾರಿಧಿಯೆ ಕೈಪಿಡಿಯೊ 2 ಮಾಧವ ರಾಯನೀ ಒಲಿದು ಕೈಪಿಡಿಯೊ 3 ಸೂರ್ಯ ನೀವೊಲಿದೆಲ್ಲರ ಸಲಹುವೆ | ಎನ್ನಯ್ಯ ಗೋವಿಂದ ನೀನೆ ಕೈಪಿಡಿಯೊ 4 ಆಪತ್ಭಾಂಧವನೇ ಕೈಪಿಡಿಯೊ 5 ಕಲುಷ ಪನ್ನಗಶಯನ ಕೈಪಿಡಿಯೊ 6 ಶಕ್ರಗೋಸುಗ ನೀನೆ ಶುಕ್ರ ಶಿಷ್ಯನ ಬೇಡಿ ವಿಕ್ರಮದಿಂ ಭೂಯಳದೆ | ಅದ್ಭುತತ್ರಿ ವಿಕ್ರಮ ಮೂರುತಿಯೆ ಕೈಪಿಡಿಯೊ 7 ಆಮಹಾವಟುರೂಪದಿಂದಲದಿತಿಯೊಳು ವಾಮನ ಮೂರ್ತಿಯೆ ಕೈಪಿಡಿಯೊ 8 ತ್ವರಿತದಿ ಎನ್ನ ಕೈಪಿಡಿಯೊ 9 ಹೃಷಿಕೇಶ ನಿನ್ನ ಕಾಣರೊ | ಪಾಮರರು ಋಷಿಗಣವಂದ್ಯ ಕೈಪಿಡಿಯೊ 10 ಶೋಭನಚರಿತಾಮರವಿನುತ | ನೆ ಪದ್ಮ ನಾಭನೆ ಒಲಿದು ಕೈಪಿಡಿಯೊ 11 ನೀ ದಯದಲಿ ಯಶೋದಾದೇವಿಯಿಂದಲಿ ಬೋಧರೂಪನೆ ಕಟ್ಟಿಸಿಕೊಂಡೆ | ಸ್ವಾಮಿ ದಾಮೋದರ ಎನಗೊಲಿದು ಕೈಪಿಡಿಯೊ 12 ಹರನಲ್ಲಿ ನಿಂತು ಸಂಹರಿಸುವೆ ಜಗವನ್ನು ಪರಮ ನಿಷ್ಕರುಣದಲಿ | ನೀ ಸಂ ಕರ್ಷಣ ಮೂರುತಿಯೆ ಕೈಪಿಡಿಯೊ 13 ಭಾಸುರಗಾತ್ರ ದೇವಾಸುರ ಮನುಜರೆಂ- ಬೀಸಮುದಾಯದೊಳಗಿರ್ಪೆ | ಸರ್ವಾತ್ಮ ವಾಸುದೇವಾಖ್ಯ ಕೈಪಿಡಿಯೊ 14 ಸೂರಿ ಜನಾಶ್ರಯ ವಿದ್ವದ್ಭೀರೀಡ್ಯಾ ಸುಗುಣಾಢ್ಯ | ನೀನೆ ಶ್ರೀ ಪ್ರದ್ಯುಮ್ನ ಒಲಿದು ಕೈಪಿಡಿಯೊ 15 ಮುನಿಜನವಂದಿತ ಅನಿಮಿಷಸನ್ನುತ ಖಗವಾಹ | ಗತ ಮೋಹ ಅನಿರುದ್ಧ ಎನ್ನ ಕೈಪಿಡಿಯೊ 16 ಸರಸಿಜಭವ ಮೊದಲು ತೃಣಪರಿಯಂತವು ಪುರುಷೋತ್ತಮ ನೀನೆ ಕೈಪಿಡಿಯೊ 17 ಮೋಕ್ಷದಾಯಕ ಸರ್ವಾಧ್ಯಕ್ಷ ಜೀವರಿಗೆಲ್ಲ ಸಾಕ್ಷಿಯಾಗಿರುವೆಯೊ ಹೊರ ಒಳಗೆ | ಸ್ವಾಮಿ ಅ- ಧೋಕ್ಷಜ ನೀನೆ ಕೈಪಿಡಿಯೊ 18 ಪರಮಸತ್ಪುರುಷನಾಗಿಹ ಪ್ರಹ್ಲಾದನ ನರಸಿಂಹ ಮೂರುತಿಯೆ ಕೈಪಿಡಿಯೊ19 ಇಚ್ಛಾಮಾತ್ರದಿ ಸೃಷ್ಟಿ ಸ್ಥಿತಿಲಯಗೈಯ್ಯುವೆ ನಿಚ್ಛಲನಾಗಿ ಜಗವನ್ನು | ನುಂಗುವೆ ಅಚ್ಯುತ ಎನ್ನ ಕೈಪಿಡಿಯೊ 20 ನಿರ್ದಯನಾಗಿ ಕೊಲ್ಲುವೆ | ನೀನೆ ಜ- ನಾರ್ಧನಸ್ವಾಮಿ ಕೈಪಿಡಿಯೊ 21 ವಿಧಿ ಚಂದ್ರಶೇಖರ ಮುಖ್ಯ ಸಂದೋಹ ನಿನ್ನ ಪೊಗಳುವರು | ಅಯ್ಯ ಉ- ಪೇಂದ್ರ ಮೂರುತಿಯೆ ಕೈಪಿಡಿಯೊ 22 ಕರುಣಸಾಗರ ನೀನೆ ಶರಣ ಜನೋದ್ಧಾರ ಸಿರಿದೇವಿಯರಸ ಸರ್ವೇಶ | ಸರ್ವಗ ಸ್ವಾಮಿ ಹರಿಯೆ ನೀ ಒಲಿದು ಕೈಪಿಡಿಯೊ 23 ಕಷ್ಟ ಎಂಬುವ ಬಲು ಉಷ್ಣ ಜಲದಿ ಬಿದ್ದು ವಿಷ್ಣುವೆ ನಾನು ಮೊರೆಯಿಡುವೆ | ಕಾದುಕೊ ಕೃಷ್ಣ ನೀ ಒಲಿದು ಕೈಪಿಡಿಯೊ 24 ವರಬಿಂಬಮೂರ್ತಿ ನೀನಯ್ಯಾ | ಸ್ವಾಮಿ ಶ್ರೀ ಗುರುರಾಮವಿಠ್ಠಲಾನತಪಾಲ 25
--------------
ಗುರುರಾಮವಿಠಲ
ಶ್ರೀಹರಿ ಸ್ತೋತ್ರ ಪಾಲಿಸೆನ್ನನು ಶ್ರೀ ಹರಿಯೆ ಸಿರಿದೇವಿ ಧೊರೆಯೇ | ಸರಸಿಜಾಸನ ಪಿತನೇ|| ಪ ಪಾರ್ಥಸೂತ ಪನ್ನಗಗಿರಿ ನಿಲಯ ಪವಮಾನ ವಂದ್ಯ | ಶ್ರೀ ಭೂರಮಣನೇ ಸೃಷ್ಟಿಗೊಡೆಯನೆ | ಕ್ಲೇಶ ಕಳೆಯುವ ಕೈಟಭಾರಿ ಕರುಣ ಶರಧಿಯೆ ಅ.ಪ ಬ್ರಹ್ಮಾದಿ ಮನುಜಾಂತ ಶ್ರವಣ ಮನನ ಧ್ಯಾನ ದಿಂದಲೇ ಕಾಂಬೋರು ನಿನ್ನ ರೂಪ ಯೋಗ್ಯತಾನುಸಾರ | ನಿಯಮ ಭಂದ ಮೋಕ್ಷ ಕರ್ತನೆ | ಶಾಂತಿ ಕೈತಿ ಜಯಾ ರಮಣನೀನೇ ಮೋಕ್ಷದಾಯಕ ಮಾಯಾಪತಿಯೇ ಸರ್ವ ಆಶ್ರಯ ಲಕ್ಷ್ಮೀ ರಮಣನೇ ಸಮರು ಅಧಿಕರು ಇಲ್ಲದಂಥಾ | ಸಾರ್ವಭೌಮನೇ ಆದಿಮೂಲನೆ ಅಪ್ರಮೇಯನೆ ಅನಿರುದ್ಧ ಮಾರುತಿ | ಎನ್ನ ಅಪವಳಿಗಳನೆ ತಂದು ಚÉನ್ನವಾಗಿ ನಿನ್ನ ತೋರಿಸಿದ 1 ಸದೋಷಿ ನಾನಹುದೋ ಸಂಕರ್ಷಣ ಮದ್ದೋಷ ಪರಿಹರಿಸೋ ನಿಗಮ ವೇದ್ಯನೆ ನಿನ್ನಧೀನವು ಎಲ್ಲಾ | ವಿಶ್ವ ತೇಜಸ ಪ್ರಾಜ್ಞರೂಪನೇ ಮೂರು ಸ್ಥಿತಿಯಲ್ಲಿ ಮುಖ್ಯ ಪ್ರವರ್ತಕ | ಅಂಡ ಪಿಂಡ ಬ್ರಹ್ಮಾಂಡದಲ್ಲಿ ಒಳ ಹೊರಗೆ ವ್ಯಾಪ್ತನೆ ವಿಶ್ವತೋಮುಖ ವಿಧಿಭವ ನುತ ವಿಚಿತ್ರ ಮಹಿಮ ವಿಭೂತಿರೂಪನೇ ವಾಸುದೇವನೇ ವಾರಿಜಾಸನ ವಂದ್ಯ ವರಾಹನೆ ಇರುವ ತಾ¥ಟಿÀ ಹರಿದು 2 ನಿರ್ಗುಣ ಗುಣ ಭರಿತಾ ನಿನ್ನ ಪರೋಕ್ಷ ಬೇಡುವೆ ಬಹುವಿಧದಿ ಭವದ ಕ್ಲೇಶಗಳ ಬಿಡಿಸೋ ಭಕ್ತವತ್ಸಲ | ಪತಿ ಸನ್ನುತ | ಪರಮ ಹಂಸೋಪಸ್ಯ ತುರ್ಯನೆ ಆತ್ಮ ಅಂತರಾತ್ಮ | ಪರಮ ಆತ್ಮ ಜ್ಞಾನಾತ್ಮ ನೀನೆ | ಕೂರ್ಮ ಕ್ರೋಢ ನರಹರಿ ಮಾಣವಕ | ಮೋದ ಕೊಡುವ ಮುದ್ದು ಬುದ್ಧನೆ | ಕಠಿಣ ಖಳರ ಕಡಿವ ಕಲ್ಕಿಯೆ ಅನಂತ ಗುಣ ಕ್ರಿಯಾ ರೂಪದಲಿ ನೀ ಸ್ವಗತ ಭೇದ ವಿವರ್ಜಿತಾತ್ಮನೇ | ನಿರಂಜನ ನಾರಾಯಣನೇ | ಪತಿ ಪ್ರಭಂಜನ ಪ್ರಿಯ ರಾಗರಹಿತ ರಾಘವೇಂದ್ರ ಸಂಸೇವ್ಯ ನರಹರಿಯೆ | ಅಜನ ತಾತ ಪ್ರಸನ್ನ ಶ್ರೀನಿವಾಸ ಲಕ್ಷ್ಮೀ ಈಶ ಹರಿಯೆ | ಪ್ರಣತಾರ್ತಿಹರ ಪ್ರಮೋದಿ ನೀನೇ 3
--------------
ಪ್ರಸನ್ನ ಶ್ರೀನಿವಾಸದಾಸರು
ಸರಸಿಜಾಲಯವೆನಿಪ ಸೊಗಸಿನ ವರರತ್ನ ಮಂಟಪದೊಳು ಸಿರಿದೇವಿಯೊಡನೆÉ ನೀಂ ಶಯನಿಸು 1 ಚಪಲಾಕ್ಷಿ ಶ್ರೀದೇವಿಯುಪಚಾರದಿಂ ನಲಿದು ಅಪರಿಮಿತಾನಂದದಿಂ ಶಯನಿಸು 2 ಸಂಭ್ರಮದಿ ಕೇಳುತ್ತ ಅಂಬುಜೋದ್ಬವ ತಾತ ಅಂಬುಜಾನನೆಯೊಡವೆರಸಿ ನಲಿಯುತ 3 ಗರುಡ ಪವನಜರೆಂಬುವ ನಿನ್ನಂಘ್ರಿಸರಸಿಜವ ಸೇವಿಸುವ ಪರಮಭಕ್ತರು ಬಂದು ಕರಮುಗಿದು ನಿಂದಿರಲು ಕುಡುತೆ ಮುದವಂ4 ವರಶೇಷಗಿರಿನಿಲಯನೆÀ ಜಯಜಯತು ವರದನಾರಾಯಣನೆ ಕರವಿಡಿದು ಪೊರೆಯೆನ್ನ ದೊರೆ ಮರೆಯೆ ನಾನಿನ್ನ ಪರಮಮಂಗಳೆಯೊಡನೆ ನೀಂ ಪರುಕಿಸೆನ್ನ 5
--------------
ನಂಜನಗೂಡು ತಿರುಮಲಾಂಬಾ
ಸಾಸಿರನಾಮ ಪೂಜೆಸಾಸಿರ ನಾಮ ಪೂಜೆಯ ಸಮಯಾ ಶ್ರೀವಾಸುದೇವನೆ ರಕ್ಷಿಪ ಸಮಯಾ ಸ್ವಾಮಿ ಪಸಾಸಿರ ದಳ ಪದ್ಮ ಮಧ್ಯಕೆ ಶ್ರೀ ವೇದವ್ಯಾಸ ಗುರುವು ಬಂದಿಹ ಸಮಯಾ ಭಾಸುರ ಛಂದಸ್ಸು ಮುಖಮಂಡಲದಿ ಪ್ರಕಾಶಿಸಿ ಮಂತ್ರ ಸಿದ್ಧಿಪ ಸಮಯಾ ಸ್ವಾಮಿ 1ಶ್ರೀರಮೆ ಧರೆ ಸಹ ಹೃದಯಮಧ್ಯದಿ ಶ್ರೀಮನ್‍ನಾರಾಯಣ ನೀನಿಹ ಸಮಯಾತೋರುತಿದಿರೆ ಪೀಠದಿ ಪೂಜೆಗೊಳುತೆನ್ನಸ್ಮೇರಾಸ್ಯದಿಂ ನೋಡುವ ಸಮಯಾ ಸ್ವಾಮಿ 2ಬೀಜನಾಮವು ದಕ್ಷಿಣ ಸ್ತನ ದೇಶದಿಭ್ರಾಜಿಸಿ ಭಕ್ತಿಗೂಡುವ ಸಮಯಾರಾಜಿಪ ಶಕ್ತಿ ನಾಮವು ವಾಮದಿ ಫಲರಾಜಿಯ ಬೆಳಸುತಿರುವ ಸಮಯಾ ಸ್ವಾಮಿ 3ಹೃದಯದಿ ಕೀಲಕ ನಾಮವು ನಿನ್ನಯಪದಸನಿಯವ ಸೇರಿಪ ಸಮಯಾಪದರದೆ ವಿಘ್ನತತಿಗೆ ಭಜಿಸೆನ್ನುತಸದಯ ಸದ್ಗುರು ನಿಯಮಿಪ ಸಮಯಾ ಸ್ವಾಮಿ 4ಅಂಗುಲಿಗಳು ನಿನ್ನ ಮಂಗಳ ನಾಮಗಳಸಂಗದಿ ಶುದ್ಧಿವಡೆದಿಹ ಸಮಯಾಗಂಗೆಯ ಪಡೆದ ನಿನ್ನಡಿಗೆ ತುಲಸಿ ಕುಸುಮಂಗಳನರ್ಪಿಸುತಿಹ ಸಮಯಾ ಸ್ವಾಮಿ 5ಅಂಗಗಳಾರು ಶುಭಾಂಗಗಳಾಗಿ ನಿನ್ನಮಂಗಳ ತನುವ ಧ್ಯಾನಿಪ ಸಮಯಾತೊಂಗದೆ ವಿಷಯಗಳೊಳು ನಿನ್ನ ಪದದುಂಗುಟದುದಿಯ ಸೇರಿಹ ಸಮಯಾ ಸ್ವಾಮಿ 6ದಶನಾಮ ದಶಕ ದಶಕ ಸಮಯದಿ ದಿವ್ಯದಶವಿಧ ಭೋಜ್ಯ ಭೋಜಿಪ ಸಮಯಾದಶವಿಧದಾರತಿಗಳ ಬೆಳಕಿಗಿಂದ್ರಿಯದಶಕವು ವಶಕೆ ಬಂದಿಹ ಸಮಯಾ ಸ್ವಾಮಿ 7ಮೀನ ಕಮಠ ಬುದ್ಧ ಕಲ್ಕಿನೀನಾಗಿ ಭಕತರಿಷ್ಟವನಿತ್ತೆ ನನ್ನಯದೀನತೆಯಳಿವರಿದೇ ಸಮಯಾ ಸ್ವಾಮಿ 8ಅನುಗ್ರಹಶಕ್ತಿಯೊಳಿರುತಷ್ಟಶಕ್ತಿಗಳನು ನೋಡಿ ಸೇವೆಗೊಳುವ ಸಮಯಾಸನಕಾದಿಗಳು ಶ್ರುತಿ ಸ್ಮøತಿ ಪುರಾಣಂಗಳುವಿನಮಿತರಾಗಿ ನುತಿಪ ಸಮಯಾ ಸ್ವಾಮಿ 9ವರ ಸಿಂಹಾಸನದಗ್ನಿ ದಿಕ್ಕಿನೊಳ್ ಧರ್ಮನುಹರುಷದಿಂ ಸೇವೆಗೈಯುವ ಸಮಯಾನಿರುರುತಿ ದೇಶದಿ ಜ್ಞಾನನು ತಾಮಸಬರದಂತೆ ಕಾದು ನಿಂದಿಹ ಸಮಯಾ ಸ್ವಾಮಿ 10ವೈರಾಗ್ಯ ವಾಯವ್ಯದೊಳು ನಿಂದು ದುಃಖವಹಾರಿಸುತಲಿ ಸೇವಿಪ ಸಮಯಾಸಾರಿರುತೈಶ್ವರ್ಯನೀಶನೆಡೆಯೊಳ್ ನೀನುತೋರಿದೂಳಿಗ ಗೈಯುವ ಸಮಯಾ ಸ್ವಾಮಿ 11ಸುರಪತಿ ದೆಶೆಯೊಳಧರ್ಮನು ಬೆದರುತಕರವ ಮುಗಿದು ನಿಂದಿಹ ಸಮಯಾಇರುತ ದಕ್ಷಿಣದಲಜ್ಞಾನನು ಚೇಷ್ಟೆಯತೊರೆದು ಭಯದಿ ಭಜಿಸುವ ಸಮಯಾ ಸ್ವಾಮಿ 12ವರುಣದಿಕ್ಕಿನೊಳವೈರಾಗ್ಯನು ನಿನ್ನಡಿಗೆರಗುವವರ ನೋಡುವ ಸಮಯಾಇರುತಲುತ್ತರದಲನೈಶ್ವರ್ಯ ಮಂತ್ರದುಚ್ಚರಣೆಯ ತಪ್ಪನೆಣಿಪ ಸಮಯಾ ಸ್ವಾಮಿ 13ಕಾಮಾದಿಗಳು ಪೀಠಸೀಮೆಯೊಳಗೆ ನಿಂತು ಕೈಮುಗಿದಲುಗದಿರುವ ಸಮಯಾತಾಮಸ ರಾಜಸ ಸಾತ್ವಿಕಗಳು ನಿನ್ನನಾಮದ ಬಲುಹ ತಿಳಿವ ಸಮಯಾ ಸ್ವಾಮಿ 14ಎಂಟು ದಿಕ್ಕಿನ ದೊರೆಗಳು ಪರಿವಾರ ಸಹಬಂಟರಾಗಿಯೆ ಕಾದಿಹ ಸಮಯಾಎಂಟು ಬಗೆಯ ಸಿರಿದೇವಿಯರೊಂದಾಗಿನಂಟುತನವ ಬಳಸಿಹ ಸಮಯಾ ಸ್ವಾಮಿ 15ಮೊದಲ ನಾಮವು ವಿಶ್ವಮಯ ನಿನ್ನ ನಿರ್ಗುಣಪದವ ಸೂಚಿಸಿ ಸಲಹುವ ಸಮಯಾತುದಿಯ ನಾಮದಿ ಭಕತರಿಗಾಗಿ ತನುದಾಳಿಒದೆದು ದುರಿತವ ರಕ್ಷಿಪ ಸಮಯಾ ಸ್ವಾಮಿ 16ದೂರಕೆ ದುರಿತವು ಹಾರಿ ಹೋಗಿಯೆ ಭಕ್ತಿಸೇರಿ ನಿನ್ನೆಡೆಯೊಳಾನಿಹ ಸಮಯಾದಾರಿದ್ರ್ಯ ದುಃಖವು ತೋರದಾನಂದವ ಸಾರಿ ನಿನ್ನನು ನುತಿಸುವ ಸಮಯಾ ಸ್ವಾಮಿ 17ಸಾಸಿರ ತಾರಕ ಜಪ ಮೊದಲು ಲಭಿಸಿಸಾಸಿರ ನಾಮ ಜಪವು ಮಧ್ಯದಿಸಾಸಿರ ವಂದನೆ ಕುಸುಮ ತುಲಸಿಗಳಸಾಸಿರದಿಂದೊಪ್ಪುವ ಸಮಯಾ ಸ್ವಾಮಿ 18ಸಾಸಿರ ಸಾಸಿರ ಜನ್ಮ ಜನ್ಮಗಳೊಳುಸಾಸಿರ ಸಾಸಿರ ತಪ್ಪುಗಳಾಸಾಸಿರ ಬಾರಿ ಮಾಡಿದ್ದರು ನಾಮದಸಾಸಿರ ಪ್ರಭೆಯೊಳಳಿವ ಸಮಯಾ ಸ್ವಾಮಿ 19ಮುಂದೆನ್ನ ಕುಲವೃದ್ಧಿಯೊಂದಿ ನಿನ್ನಯ ಕೃಪೆುಂದ ಭಕತಮಯವಹ ಸಮಯಾುಂದೆನ್ನ ಭಾಗ್ಯಕೆಣೆಯ ಕಾಣದೆ ನಿನ್ನಮುಂದೆ ನಾ ನಲಿದು ಕುಣಿವ ಸಮಯಾ ಸ್ವಾಮಿ 20ಗುರುವÀರನುಪದೇಶಿಸಿದ ಮಂತ್ರಕೆ ಸಿದ್ಧಿಬರುವ ನಿನ್ನಯ ಕೃಪೆಗಿದು ಸಮಯಾಕರುಣದಿಂ ನೋಡಿ ಕೈವಿಡಿದಭಯವನಿತ್ತುಪೊರೆವದಕೆನ್ನನಿದೇ ಸಮಯಾ ಸ್ವಾಮಿ 21ಧನ್ಯನು ಧನ್ಯನು ಧನ್ಯನು ನಾನೀಗಧನ್ಯನು ಮತ್ತು ಧನ್ಯನು ವಿಭುವೆಧನ್ಯರು ಜನನೀ ಜನಕ ಬಾಂಧವರೆಲ್ಲಧನ್ಯರೆಮ್ಮನು ನೋಡುವ ಸಮಯಾ ಸ್ವಾಮಿ 22ಮೂಲ ಮಂತ್ರಾಕ್ಷರ ಮೂಲ ನೀನಾಗಿಯೆಮೂಲಾವಿದ್ಯೆಯ ತೊಲಗಿಪ ಸಮಯಾಮೂಲೋಕನಾಯಕ ಮುಕ್ತಿ ಮಾರ್ಗಕೆುದೆಮೂಲವಾಗಿಯೆ ಬದುಕುವ ಸಮಯಾ ಸ್ವಾಮಿ 23ಮುರಹರ ಮಾಧವ ತಿಮಿರ ಭಾಸ್ಕರ ಕೃಷ್ಣಶರಣುಹೊಕ್ಕೆನು ನಿನ್ನ ಚರಣ ಪಂಕಜಗಳಪೊರೆಯುವರೆನ್ನನಿದೆ ಸಮಯಾ ಸ್ವಾಮಿ 24ತಿರುಪತಿಯೊಡೆಯನೆ ಶ್ರೀ ವಾಸುದೇವಾರ್ಯಗುರುವಾಗಿ ಕಾವೇರಿ ತೀರದಲಿಕರುಣದಿಂ ಪಾದುಕೆಗಳನಿತ್ತ ಭಾಗ್ಯವುಸ್ಥಿರವಾಗಿ ಭಕತಿ ಹೆಚ್ಚುವ ಸಮಯಾ ಸ್ವಾಮಿ 25 ಓಂ ಶಕಟಾಸುರಭಂಜನಾಯ ನಮಃ
--------------
ತಿಮ್ಮಪ್ಪದಾಸರು
ಸಿರಿದೇವ ನಮ್ಮ ನಿದೈವನು ಶರಣರಕ್ಷಕವಾವನು ಪ ಆಲಯದೊಳುಛಲವಿಡಿದರೆ| ಪಾಲಗಡಲದೊಳಗಿಟ್ಟೀ ಹಾ 1 ವರದ ಮದದಿ ಭಸ್ಮಾಸುರ ಬೆನ್ನಟ್ಟಿ|ಗಿರಿಜೇಶನ ಪೀಡಿಸುತಿರೇ ಭರದಿಂದೊದಗಿ ಬಂದು ಮೋಹಕ ರೂಪದಿ| ದುರುತಳನ ಭಸ್ಮವ ಮಾಡಿದಾ 2 ಅಖಳ ದೊಳಗೆ ಅರಾರಾಧಿಸುವರು| ಭಕುತಿಯಂದದಿ ತನೊಲಿವನು ಪ್ರಕಟಿದಿ ಮಹಿಪತಿ ನಂದನಮುಖದೊಳು ಸಕಲಚರಿತೆಯನು ನುಡಿಸುವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಿರಿದೇವಿ ವರಬೇಗ ಕರುಣಿಸೊ ದಯದಿಂದ ಶರಣಾಗತ ಪರಿಪಾಲನೆಂಬಿ ಘನ ಬಿರುದಿಹದೊರೆ ನರಹರಿಕರುಣಾಕರ ಪ. ಕರಿರಾಜ ಮೊರೆಯಿಡುವ ಸ್ವರವ ಕೇಳುತಲಂದು ಸಿರಿಯೊಳಗುಸುರದೆ ಗರುಡನ ಪೆಗಲೇರಿ ಸರಸಿ ತಡಿಗೆ ಬಂದು ಕರಿಯನುದ್ಧರಿಸಿದಿ 1 ಘೋರ ಕಿಂಕರರಿದಿರು ಸಾರೆಜಾಮಿಳ ಭಯದಿ ನಾರಾಯಣನೆಂದು ಬೇಡಿದ ಮಾತ್ರದಿ ವಾರಿಜಭವಪಿತ ಪಾರಗಾಣಿಸಿದಿ 2 ತರಳ ಪ್ರಹ್ಲಾದನನು ಹಿರಣ್ಯಕನು ಬಾಧಿಸಲು ಹರಿ ನೀನೆ ಗತಿಯೆನುತಿರೆ ಕಂಭದಿ ಇರವ ತೋರಿ ಬಹು ಪರಿಯಲಿ ಸಲಹಿದಿ 3 ದುರುಳ ಸೀರೆಯ ಸೆಳೆಯೆ ಹರಿಕೃಷ್ಣ ಸಲಹೆನೆ ಸೀರೆಯ ಮಳೆ ಗರದಂದದಲಿತ್ತು ಪರಿಪಾಲಿಸಿದೆ 4 ಎನ್ನ ದುಷ್ಕøತದಿಂದ ನಿನ್ನ ನಾಮದ ಮಹಿಮೆ ಭಿನ್ನವಾಗುವದೆ ನಿನ್ನ ಪದಾಂಬುಜ ವನ್ನು ನಂಬಿದ ಮೇಲಿನ್ನುದಾಸೀನವೆ 5 ಪಾಕಶಾಸನನಘವ ನೀಕರಿಸಿ ಸಲಹಿದನೆ ಭೀಕರವಾಗದೆ ಸಾಕು ಸಾನುಭವ ಕೃಪಣ ದಯಾಕರ ಮೂರುತಿ 6 ಒಳಗೆ ನೀ ತಳಿಸುತಲಿ ಗಳಿಸಿ ಪಾಪಗಳೆನಗೆ ತಳಮಳಗೊಳಿಸುತ ಬಳಲಿಪದುಚಿತವೆ ಉಳುಹಿನ್ನಾದರು ನಳಿನನಾಭ ಹರಿ 7 ಬಡವ ಮಾನವನೊಬ್ಬ ಪಡೆಯ ತನ್ನವರನ್ನು ಕೆಡಲು ಬಿಡನು ಜಗದೊಡೆಯ ನೀ ಎನಗಿರೆ ತಡವ ಮಾಡಿ ಕಂಡ ಕಡೆಯಲಿ ಬಿಡುವುದೆ 8 ನಿನ್ನ ಕಥಾಮೃತಸಾರವನ್ನೆ ಶಿರದಿ ಧರಿಸಿ ಇನ್ನು ಬಳಲಿದರೆ ನಿನ್ನ ಘನತೆಗಿದು ಚೆನ್ನಾಗುವುದೆ ಪ್ರಸನ್ನ ಮುಖಾಂಬುಜ 9 ಮಾನಾಮಾನವ ತೊರೆದು ನಾನಾ ದೇಶದಿ ತಿರಿದು ಶ್ರೀನಿವಾಸ ನಿನ್ನಾನನ ದರುಶನ- ವನು ಮಾಡಿದ ಮೇಲೇನಿದು ತಾತ್ಸಾರ 10 ಆಶಾಪಾಶವ ಬಿಡಿಸಿ ಮನದಾಸೆಗಳ ಪೂರೈಸಿ ದಾಸದಾಸನೆಂಬೀ ಸೌಖ್ಯವನಿತ್ತು ಪೋಷಿಸು ಶೇಷಗಿರೀಶನೆ ತವಕದಿ 11
--------------
ತುಪಾಕಿ ವೆಂಕಟರಮಣಾಚಾರ್ಯ
ಸಿರಿದೇವಿ ಹರಿಯ ದಯವು | ಆವಾವ ಪರಿ ಪಾಲಿಸೆ ಪ ಆಲದೆಲೆಯಲಿ ಅಂದು | ನಿನ್ನಯ ಮ್ಯಾಲೆ ಮಲಗಿಪ್ಪ ಹರಿಯ ತೋಳು ಬಿಗಿದಾಲಂಗಿಸಿ | ಸೃಷ್ಟಿಯ ಲೀಲೆಯನು ಮಾಡಿಸಿದ ತಾಯೆ 1 ವಕ್ಷವಾಲಯವ ಮಾಡಿದೆ | ಆವಾಗ ದಕ್ಷಣಾದೇವ್ಯೆನಿಸಿದೆ ಲಕ್ಷ್ಯವಿಲ್ಲದೆ ಭಾಗ್ಯವ | ಭಕ್ತರಿಗೆ ವೀಕ್ಷೆಯಿಂದಲ್ಲಿ ಈವೆ 2 ದೇವತಾಜನ ಸ್ತುತಿಸೆ | ನೀ ಎನ್ನ ಭಾವ ಹರಿಯಲಿ ನಿಲ್ಲಿಸೆ ಕಾವ ಭಾರವು ನಿನ್ನದೆ | ಶ್ರೀ ವಾಸು ದೇವವಿಠಲನ್ನ ರಾಣಿ 3
--------------
ವ್ಯಾಸತತ್ವಜ್ಞದಾಸರು
ಸಿಂಹ ರಮಾರಮಣ ಪ ಬ್ರಂಹ್ಮಾದ್ಯಮರವಿನುತ ಪಾದಪರ ಬ್ರಂಹ್ಮನಿನಗೆ ಮನ್ಮಾನಸವೆಂಬುವ ಅ.ಪ. ದಾರುಲೋಹಮಯ ಪೀಠಗಳೀವುದು ತರವೆ ನಿನಗೆ ಸ್ವಾಮಿ ವಾರಿಧಿತಾರಕನಾಮ ರತ್ನಮಯ 1 ಸಿರಿದೇವಿಯು ನಿನ್ನರ್ಚನೆಗೈವಡ ಶಕ್ತಳಾಗಿರುವಳು ಸ್ವರಮಣ ಸರ್ವಾಂತರ್ಯಾಮಿ ಪರಾ- ತ್ಪರ ಮುಕುಂದ ರತ್ನಮಯ ಮಣಿಖಚಿತ2 ಏಕಚಿತ್ತದಲಿ ನಿನ್ನ ಭಜಿಪರಿಗೆ ಅ- ನಾ ಕೇಶನುತ ಗುರುರಾಮ ವಿಠಲ ನಮೋ ಮಣಿ ಖಚಿತ 3
--------------
ಗುರುರಾಮವಿಠಲ
ಸೇವೆ ಮಾಳ್ಪೆ ನಾರಾಯಣಈವುದಯ್ಯ ನಿನ್ನ ಚರಣ ಪ ಸುರಮುನಿಗಳಿಗಿದು ದುರ್ಲಭಸಿರಿದೇವಿಗೆ ಮಾತ್ರ ಸುಲಭಕರುಣಿಸು ಹೇ ಕಮಲನಾಭಇರದೆ ಭೌವ್ಯ ನಿನ್ನ ಚರಣ 1 ತ್ರಿಜಗಂಗಳ ಗೆಲ್ದ ಚರಣಭಜಕ ಗುಹಕಗೊಲಿದ ಚರಣರಜತ ನದಿಯ ಹೆತ್ತ ಚರಣಕಲ್ಲಹಲ್ಯೆ ಪೊರೆದ ಚರಣ2 ಕುರುನೃಪನನು ಕೆಡೆದ ಚರಣಉರಗ ಕಾಳಿ ಹಣಿದ ಚರಣಧರೆಗೆ ಮೆರೆದ ಗದಗು ವೀರನಾರಾಯಣ ನಿನ್ನ ಚರಣ 3
--------------
ವೀರನಾರಾಯಣ
ಹರಿಯೇಕಾಯೋ ಶರಧಿಶಯನನೇ ಸಿರಿದೇವಿಯರಸ ಪರಮಾತ್ಮ ಪರಾತ್ಪ್ಪರನೇ ಪ ಬಿರುದ ಧರಿಸಿ ಮೆರೆಯವೆ ನೀ ಧರೆಯೊಳು ಶುಭಚರಿತನೆ ಅ.ಪ ವರರುಕ್ಮಾಂಗದ ಪ್ರಹ್ಲಾದರು ದ್ರೌಪದಿ ವಿಭೀಷಣಶ- ಸಿರಿ ನಾಮದ ಮಹಿಮೆಯು 1 ಬುದ್ಧಿವಂತರೆಲ್ಲ ಮನವ ತಿದ್ದಿಕೊಳುತಲಹರ್ನಿಶಿಯಲಿ ವುದ್ಧವಪ್ರಿಯ ನಿನ್ನಪಾದ ಪದ್ಮಮಧುಪರೆನಿಪರು 2 ಗಹನವಳವಡುವಡಲ್ಲವು ಮಹಿಯೊಳು ಪಾಮರರಿಗೆ 3 ಪರ ಸುಖವನು ತಾವ್ಕೋರದೆ ಸದ್ಭಕುತಿಯಿಂದ ಸೇವಿಪರು 4 ಹೊರಳಿ ಹೊರಳಿ ನೋಯ್ವರು ಶ್ರೀ ಗುರುರಾಮ ವಿಠಲನೇ 5
--------------
ಗುರುರಾಮವಿಠಲ
ಅಂಗನಾಕುಲ ಶಿರೋಮಣಿ ಶ್ರೀಮಾ |ಶೃಂಗಾರವನಧಿಗರುಡಧ್ವಜೆಮಂಗಳಾದೇವಿ ಹಸೆಗೇಳು ಪಕ್ಷೀರಸಾಗರಕನ್ಯಾವಿಧಿ|ಮಾರಾಂತಕ ಶಕ್ರಕರಾರ್ಚಿತೆ ||ವಾರಿಜಸದನೆ ಸಿರಿದೇವಿ |ಸಿರಿದೇವಿ ತ್ರೈಲೋಕಕೆ ಜನನೀ ರಕ್ಕಸಾರಿ ಹಸೆಗೇಳು 1ಭಾರತಿಪಾರ್ವತಿ ಶಾಮಲ ಮುಖ |ನೂರು ಸುರರರಸಿಯರೆಲ್ಲರು ||ಮೀರಿಧರುಷದಲಿ ಪದಪಾಡಿ | ಹಸೆಯಬರೆದಿಹರೆಲೆ ನಾರಾಯಣನ ರಾಣೀ || ಹಸೆಗೇಳು 2ಋಷಿಗಳು ವೇದ ಪುರಾಣಗಳುಪ |ನಿಷದ್ವಾಕ್ಯಗಳಿಂದ ತುತಿಸುವರು ||ವಸುಧೆಗಾನಂದ ಪಡಿಸಲು |ಶುಭಕುಂದರದನೆಆಸಿತಕುಂತಲೆಯೇ ಹಸೆಗೇಳು 3ಕಡೆಗಣ್ಣಿನ ನೋಟದಿ ಲೋಕವ |ತಡೆಯದೆ ಪುಟ್ಟಿಸಿ ಪಾಲಿಸಿ ಪುನಃ ||ಕೆಡಿಸುವೆ ಸ್ವೇಚ್ಛೆಯಲಿ ವೈದರ್ಭೆ ಸತ್ರಾಜಿತೆಕೃತಿ|ಯೊಡತಿ ಜಯಮಾಯಾ ಹಸೆಗೇಳು 4ಪ್ರಾಣೇಶ ವಿಠಲನೊಳು ದ್ವೇಷಿಪ |ಹೀನರ ಸಂಹರಕೋಸುಗ ಶರ ||ಪಾಣಿಯಾಗಿಹಳೆಶ್ರುತಿವೇದ್ಯೆ | ಶ್ರುತಿವೇದ್ಯೆ ದೇವದೇವಿಕಅಹಿವೇಣಿಶುಕವಾಣಿ | ಹಸೆಗೇಳು 5
--------------
ಪ್ರಾಣೇಶದಾಸರು
ಇವಗೇಕೆ ಪರಿಮಳ ಇವಗೇಕೆ ಶೃಂಗಾರ |ನವನೀತ ಚೋರ ನಾರುವ ಗೊಲ್ಲಗೆಪಹೊಲಸು ಮೈಯವಗೇಕೆ ಹೊಸ ಕಸ್ತೂರಿಯ ಲೇಪ |ತಲೆದೋರದವಗೇಕೆ ದಟ್ಟ ಪುನುಗು |ಬಲು ಕೇಶದವಗೇಕೆ ಬಾವನ್ನದ ಲೇಪ |ಸಲೆಘೋರರೂಪಿಗೇಕೆ ನೊಸಲ ಸಾದು 1ತುಲಸಿಮಾಲೆಯ ಧರಿಸಿದವಗೇಕೆ ಜವ್ವಾಜಿ |ಕೊಲೆಗಡುಕಗೀಕೆ ಕುಂಕುಮತಿಲಕ ||ಅಲೆದಾಡುವವಗೇಕೆ ಅಂಗರಾಗದ ಸುಖ|ಕಳವು ಮಾಡುವವಗೇಕನಂಗ ಸೊಬಗು 2ಪರಸತಿಯ ಬಯಸುವಗೆ ಪನ್ನಗಶಯನವೇಕೆಹರಿದಾಡುವನಿಗೇಕೆ ಅಡಪ - ಡವಿಕೆ ||ಸಿರಿದೇವಿ ಶೃಂಗಾರಗೈದು ವರಿಸಿದ ಬಳಿಕ |ಧರೆಗಧಿPನಾದನೀಪುರಂದರ ವಿಠಲ3
--------------
ಪುರಂದರದಾಸರು
ಎಂತು ನಿನ್ನ ಪೂಜೆ ಮಾಡಿ ಮೆಚ್ಚಿಸುವೆನೊ ಪಚಿಂತಾಯತನೆ ನಿನ್ನ ನಾಮ ಎನಗೊಂದು ಕೋಟಿ ಅ.ಪಪವಿತ್ರೋದಕದಿಪಾದತೊಳೆವೆನೆಂತೆಂದರೆ |ಪಾವನೆಯಾದ ಗಂಗೆ ಪಾದೋದ್ಭವೆ ||ನವಕುಸುಮವ ಸಮರ್ಪಿಸುವೆನೆಂದರೆ ಉದುಭವಿಸಿಹನುಅಜನಿನ್ನ ಪೊಕ್ಕುಳ ಹೂವಿನಲಿ1ದೀಪವನು ಬೆಳಗುವೆನೆ ನಿನ್ನಕಂಗಳುಸಪ್ತದ್ವೀಪಂಗಳೆಲ್ಲವನು ಬೆಳೆಗುತಿಹವೋ ||ಆಪೋಶನವನಾದರೀವೆನೆಂತೆಂಬೆನೆಆಪೋಶನವಾಯ್ತು ಏಳು ಅಂಬುಧಿಯು 2ಕಾಣಿಕೆಯಿತ್ತಾದರೂ ಕೈ ಮುಗಿವೆನೆಂದರೆರಾಣಿವಾಸವು ಸಿರಿದೇವಿ ನಿನಗೆ ||ಮಾಣದೆಮನದೊಳು ನಿನ್ನ ನಾಮಸ್ಮರಣೆಧ್ಯಾನವನು ದಯೆ ಮಾಡೋ ಪುರಂದರವಿಠಲ 3
--------------
ಪುರಂದರದಾಸರು
ಏನನಿತ್ತು ಮೆಚ್ಚಿಸುವೆನು ಏನೋ ವಿಠಲ ಪಮಾನಿನಿಯರಸ ನಿನ್ನನಾಮವೆನ್ನ ನೆನೆವೆನಯ್ಯ ಅ.ಪಓದಿ ನಿನ್ನ ಮೆಚ್ಚಿಸುವೆನೆ ವೇದವನ್ನು ಅಜನಿಗಿತ್ತೆವಾದಿಸಿ ನಿನ್ನ ಮೆಚ್ಚಿಸುವೆನೆ ಆದಿಶೇಷಶಯನನೆ 1ಆಡಿ ನಿನ್ನ ಮೆಚ್ಚಿಸುವೆನೆ ಮೃಡನಯ್ಯನಯ್ಯನೆಪಾಡಿ ನಿನ್ನ ಮೆಚ್ಚಿಸುವೆನೆ ಪವನಜನೊಡೆಯನೆ 2ಚಿನ್ನವಿತ್ತು ಮೆಚ್ಚಿಸುವೆನೆ ಸಿರಿದೇವಿಯ ರಮಣನೆಪೂರ್ಣಾನಂದ ಙ್ಞÕನಿ ನೀನೆಪುರಂದರವಿಠಲಯ್ಯ3
--------------
ಪುರಂದರದಾಸರು