ಒಟ್ಟು 462 ಕಡೆಗಳಲ್ಲಿ , 72 ದಾಸರು , 294 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈತ ಸೀತಾನಾಥನೇ|ವಾತಾಜಾತ ಪ್ರೀತನೇ| ಧಾತು ಮಾತು ರಹಿತ ಖ್ಯಾತ|ಭೂತವ್ರತದಾತನೆ ಪ ಸುಗ್ರೀವಗೆ ಸಾಮಗ್ರನೆ|ಶೀಘ್ರಗೈದನುಗ್ರಹನೆ| ನಿಗ್ರಹಿಸಿದಾ ವಾಘ್ರದಶಾ|ಗ್ರೀವನುಗ್ರಹ ವಿಗ್ರಹನೆ1 ಕಾಮನಿವಾನೇಮನೆ|ನಾಮಸಾರ್ವಭೌಮನೆ| ರಾಮಶ್ಯಾಮ ಮಹೀಪತಿನಂದನ|ಹೃತ್ಕುಮುದಾ ಸೋಮನೆ2
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಈತನೇನೆ ನಿನ್ನ ಮಗನು ಪ ಸೀತಾಪತಿ ರಘುನಾಥನೆಂಬವನು ಅ ವ್ಯಾಸನ ಜನನಿಯ ವಾಸನೆ ತಾಳ್ದನುದೇಶದೊಳಗೆ ಬಲು ಪೆಸರುಳ್ಳವನುನಾಸದೊಳೊರ್ವನ ಪೊತ್ತು ಮುರಿದು ಮು-ನೀಶರ ಶಾಪವ ಪಿಡಿದು ಕೊಂದಾತನು 1 ಶರಧಿ ಶಯನ ಮಾಡಿದಾತನು 2 ಮೂಗ್ರಾಮ ಮುರಿದು ವಾಜಿಯನೇರಿದಾತನುಸಾಗ್ರದಿಂದಿಳೆಯ ಭಾಗ್ಯ ಹಿಂಗಿಸಿದಯೋಗ್ಯದಿಂದ ಬಳಪತಿತನವನಿಗೆಭಾಗ್ಯವಿತ್ತ ಕಾಗಿನೆಲೆಯಾದಿಕೇಶವ 3
--------------
ಕನಕದಾಸ
ಉಡಿಯ ತುಂಬಿರೆ ನಮ್ಮ ಉಡುರಾಜಮುಖಿಗೆ ಉಡಿಯ ತುಂಬಿರೆ ನಮ್ಮ ಕಡಲೆ ಕೊಬ್ಬರಿ ಬಟ್ಟಲೊಳು ಬಾಳೆಫಲಗ- ಳ್ವುಡಿಯ ತುಂಬಿರೆ ನಮ್ಮ ಪ ಜಂಬುನೇರಲ ಗೊನೆ ಜಾಂಬೂಫಲಗಳು ನಿಂಬೆ ದಾಳಿಂಬ್ರ ಔದುಂಬ್ರ ಫಲಗಳು 1 ಉತ್ತತ್ತಿ ದ್ರಾಕ್ಷಿ ಕಿತ್ತಳೆ ಸೀತಾಫಲವು ಅಕ್ಕಿ ಅಂಜೂರ ಉತ್ತತ್ತಿ ಫಲಗಳು2 ಶ್ರೇಷ್ಠ ಭೀಮೇಶ ಕೃಷ್ಣನ ಪಟ್ಟದರಸಿ ಗ್ಹಚ್ಚಿ ಕುಂಕುಮ ವೀಳ್ಯ ಕೊಟ್ಟು ರುಕ್ಮಿಣಿಗೆ 3
--------------
ಹರಪನಹಳ್ಳಿಭೀಮವ್ವ
ಋಣವ ಮಾಡಿದ ಪತಿತನು ನಾನು ಸ್ಮøತಿಧನವ ಪಾಲಿಸು ಸೀತಾರಾಮ ನೀನು ಪ'ರಿಯರ ಮಾತನು 'ಂದುಗಳೆದು ಮುಂದೆಬರುವ ದುಃಖಗಳ ಬಗೆಗೊಳದೆದುರುದುಂಬಿತನದಿಂದ ದುಷ್ಟಸಂಗತಿಗೈದುಪರರ ಮೆಚ್ಚಿಸಿ ಬಾಳ್ವ ಪೌರುಷ್ಯವನು ನೀಗಿ 1ಹೆಮ್ಮೆಯ ಬಲು'ಷ ಹೆಡತಲೆಗೇರಿರೆಸುಮ್ಮಾನಬಡುತತಿಸುಖ'ದೆಂದುಉಮ್ಮಳಿಪರ ಠಕ್ಕಿಗುಬ್ಬಿ ುೀ ಪರಮಾತಿಗೊಮ್ಮೆಯು ಮನಗೊಡದೊರಟುಮಾರ್ಗವ ಸಾರಿ 2ಕಾಶಿಯೊಳ್ಮರಣವ ಕಾ'ುಸಿದರೆಯುಸನ್ಯಾಸವ ಮಾಡ್ದರು ಸನ್ಮುಕ್ತಿಯುತಾ ಸೋಕದು ಋಣತಗು'ದ್ದವನನೆನ್ನು'ೀ ಸೊಲ್ಲ 'ರಿಯರು ಸಾರಿದರೆಯು 'ುೀರಿ 3ಗೋವ ಕೊಂದವನಿಗೆ ಗಂಗೆಯ ಹಳಿದಗೆಭಾವೆ ಭೂಸುರರನು ಬಡಿದವಗೆಯಾವದು ಗತಿಯದು ನಿಷ್ಕøತಿ ಋಣಿಗಿಲ್ಲೆಂದುಭಾವಜ್ಞರರು'ದ ಭಯವನು ಗಣಿಸದೆ4ಬಡ್ಡಿಯ ಹೆಚ್ಚಿಸಿ ಬಹು ಧನವನು ತಂದುಕಡ್ಡಿಗೆ ಸರಿಮಾಡಿಕೊಟ್ಟವರಾಅಡ್ಡಿಯ ತೋರಿಸುತ ಸುಲಭ ಮುಳುಗಿಸಿದುಡ್ಡು ದುಗ್ಗಾಣಿಯ ತಿರಿದುಂಬ ರೀತಿಗೆ 5ಋಣಕರ್ತೃ ಪಿತೃಶತ್ರು ಧನಕರ್ತೃ ಪಿತೃ ಸಖಯೆನುವ ಗ್ರಂಥಾರ್ಥಗಳನು ಕೇಳಿಯೂಗಣಿಸದೆ ಸತಿ ಸುತರ್ಕೊರಗಿದರೆಯು ಕೆಟ್ಟುತೃಣಕಿಂತ ಕಡೆಯಾಗಿ ತಬ್ಬಿಬ್ಬನಾಡುತ್ತ6ಸಾಲವ ಕೊಟ್ಟವ ಸಾರಿ ಸಾರಿಗೆಕೇಳಿದರವನಿಗೆ ಕದ್ದೋಡುತಾಬೇಳುವೆ ಮರಣವ ಬಾಯಲಾಡುತ ಬುದ್ಧಿಜಾಳಾಗುವಂದದಿ ಜಡಿದು ಹೆದರಿಸುತ 7
--------------
ತಿಮ್ಮಪ್ಪದಾಸರು
ಎಷ್ಟು ಸಾಹಸವಂತ ನೀನೆ ಬಲವಂತದಿಟ್ಟಮೂರುತಿ ಭಳಭಳಿರೆ ಹನುಮಂತ ಪ. ಅಟ್ಟುವ ಖಳರೆದೆ ಮೆಟ್ಟಿ ತುಳಿದು ತಲೆಗಳಕುಟ್ಟಿ ಚೆಂಡಾಡಿದ ದಿಟ್ಟ ನೀನಹುದೊ ಅ.ಪ. ರಾಮರಪ್ಪಣೆಯಿಂದ ಶರಧಿಯ ದಾಟಿಆ ಮಹಾ ಲಂಕೆಯ ಕಂಡೆ ಕಿರೀಟಸ್ವಾಮಿಕಾರ್ಯವನು ಪ್ರೇಮದಿ ನಡೆಸಿದಿಈ ಮಹಿಯೊಳು ನಿನಗಾರೈ ಸಾಟಿ1 ದೂರದಿಂದಸುರನ ಪುರವ[ನ್ನು] ನೋಡಿಭರದಿ ಶ್ರೀರಾಮರ ಸ್ಮರಣೆಯನು ಮಾಡಿಹಾರಿದೆ ಹರುಷದಿ ಸಂಹರಿಸಿ ಲಂಕಿಣಿಯನುವಾರಿಜಮುಖಿಯನು ಕಂಡು ಮಾತಾಡಿ 2 ರಾಮರ ಕ್ಷೇಮವ ರಮಣಿಗೆ ಪೇಳಿತಾಮಸ ಮಾಡದೆ ಮುದ್ರೆನೊಪ್ಪಿಸಿಪ್ರೇಮದಿಂ ಜಾನಕಿ ಕುರುಹನು ಕೊಡಲಾಗಆ ಮಹಾ ವನದೊಳು ಫಲವನು ಬೇಡಿ 3 ಕಣ್ಣ್ಣಿಗೆ ಪ್ರಿಯವಾದ ಹಣ್ಣ[ನು] ಕೊಯ್ದುಹಣ್ಣಿನ ನೆವದಲಿ ಅಸುರರ ಹೊಯ್ದುಪಣ್ಣಪಣ್ಣನೆ ಹಾರಿ ನೆಗೆನೆಗೆದಾಡುತಬಣ್ಣಿಸಿ ಅಸುರರ ಬಲವನು ಮುರಿದು4 ಶೃಂಗಾರವನದೊಳಗಿದ್ದ ರಾಕ್ಷಸರಅಂಗವನಳಿಸಿದೆ ಅತಿರಣಶೂರನುಂಗಿ ಅಸ್ತ್ರಗಳ ಅಕ್ಷಯಕುವರನಭಂಗಿಸಿ ಬಿಸುಟಿಯೊ ಬಂದ ರಕ್ಕಸರ 5 ದೂರ ಪೇಳಿದರೆಲ್ಲ ರಾವಣನೊಡನೆಚೀರುತ್ತ ಕರೆಸಿದ ಇಂದ್ರಜಿತುವನೆಚೋರಕಪಿಯನು ನೀ ಹಿಡಿತಹುದೆನ್ನುತಶೂರರ ಕಳುಹಿದ ನಿಜಸುತನೊಡನೆ 6 ಪಿಡಿದನು ಇಂದ್ರಜಿತು ಕಡುಕೋಪದಿಂದಹೆಡೆಮುರಿ ಕಟ್ಟಿದ ಬ್ರಹ್ಮಾಸ್ತ್ರದಿಂದಗುಡುಗುಡುಗುಟ್ಟುತ ಕಿಡಿಕಿಡಿಯಾಗುತನಡೆದನು ಲಂಕೆಯ ಒಡೆಯನಿದ್ದೆಡೆಗೆ 7 ಕಂಡನು ರಾವಣನುದ್ದಂಡ ಕಪಿಯನುಮಂಡೆಯ ತೂಗುತ್ತ ಮಾತಾಡಿಸಿದನುಭಂಡುಮಾಡದೆ ಬಿಡೆನೋಡು ಕಪಿಯೆನೆಗಂಡುಗಲಿಯು ದುರಿದುರಿಸಿ ನೋಡಿದನು 8 ಬಂಟ ಬಂದಿಹೆನೊಹಲವು ಮಾತ್ಯಾಕೊ ಹನುಮನು ನಾನೆ 9 ಖುಲ್ಲ ರಕ್ಕಸನೆತೊಡೆವೆನೊ ನಿನ್ನ ಪಣೆಯ ಅಕ್ಷರವ 10 ನಿನ್ನಂಥ ದೂತರು ರಾಮನ ಬಳಿಯೊಳುಇನ್ನೆಷ್ಟು ಮಂದಿ ಉಂಟು ಹೇಳೊ ನೀ ತ್ವರಿಯಾನನ್ನಂಥ ದೂತರು ನಿನ್ನಂಥ ಪ್ರೇತರುಇನ್ನೂರು ಮುನ್ನೂರು ಕೋಟಿ ಕೇಳರಿಯಾ11 ಕಡುಕೋಪದಿಂದಲಿ ಖೂಳರಾವಣನು ಸುಡಿರೆಂದ ಬಾಲವ ಸುತ್ತಿ ವಸನವನುಒಡೆಯನ ಮಾತಿಗೆ ತಡೆಬಡೆಯಿಲ್ಲದೆಒಡನೆಮುತ್ತಿದರು ಗಡಿಮನೆಯವರು 12 ತÀಂದರು ವಸನವ ತಂಡತÀಂಡದಲಿಒಂದೊಂದು ಮೂಟೆ ಎಂಬತ್ತು ಕೋಟಿಯಲಿಚಂದದಿ ಹರಳಿನ ತೈಲದೊಳದ್ದಿಸೆನಿಂದ ಹನುಮನು ಬಾಲವ ಬೆಳೆಸುತ 13 ಶಾಲು ಸಕಲಾತ್ಯಾಯಿತು ಸಾಲದೆಯಿರಲುಬಾಲೆರ ವಸ್ತ್ರವ ಸೆಳೆದುತಾರೆನಲುಬಾಲವ ನಿಲ್ಲಿಸೆ ಬೆಂಕಿಯನಿಡುತಲಿಕಾಲಮೃತ್ಯುವ ಕೆಣಕಿದರಲ್ಲಿ14 ಕುಣಿಕುಣಿದಾಡುತ ಕೂಗಿ ಬೊಬ್ಬಿಡುತಇಣಿಕಿನೋಡುತ ಅಸುರರನಣಕಿಸುತಝಣಝಣಝಣರೆನೆ ಬಾಲದಗಂಟೆಯುಮನದಿ ಶ್ರೀರಾಮರ ಪಾದವ ನೆನೆಯುತ 15 ಮಂಗಳಂ ಶ್ರೀರಾಮಚಂದ್ರ ಮೂರುತಿಗೆಮಂಗಳಂ ಸೀತಾದೇವಿ ಚರಣಂಗಳಿಗೆಮಂಗಳವೆನುತ ಲಂಕೆಯ ಸುಟ್ಟುಲಂಘಿಸಿ ಅಸುರನ ಗಡ್ಡಕೆ ಹಿಡಿದ 16 ಹತ್ತಿತು ಅಸುರನ ಗಡ್ಡಮೀಸೆಗಳುಸುತ್ತಿತು ಹೊಗೆ ಬ್ರಹ್ಮಾಂಡಕೋಟಿಯೊಳುಚಿತ್ತದಿ ರಾಮರು ಕೋಪಿಸುವರು ಎಂದುಚಿತ್ರದಿ ನಡೆದನು ಅರಸನಿದ್ದೆಡೆಗೆ 17 ಸೀತೆಯಕ್ಷೇಮವ ರಾಮರಿಗ್ಹೇಳಿಪ್ರೀತಿಯಿಂ ಕೊಟ್ಟಕುರುಹ ಕರದಲ್ಲಿಸೇತುವೆ ಕಟ್ಟಿ ಚತುರಂಗ ಬಲಸಹಮುತ್ತಿತು ಲಂಕೆಯ ಸೂರೆಗೈಯುತಲಿ 18 ವೆಗ್ಗಳವಾಯಿತು ರಾಮರ ದಂಡುಮುತ್ತಿತು ಲಂಕೆಯ ಕೋಟೆಯ ಕಂಡುಹೆಗ್ಗದ ಕಾಯ್ವರ ನುಗ್ಗುಮಾಡುತಿರೆಝಗ್ಗನೆ ಪೇಳ್ದರು ರಾವಣಗಂದು 19 ರಾವಣಮೊದಲಾದ ರಾಕ್ಷಸರ ಕೊಂದುಭಾವಶುದ್ಧದಲಿ ವಿಭೀಷಣ ಬಾಳೆಂದುದೇವಿ ಸೀತೆಯನೊಡಗೊಂಡಯೋಧ್ಯದಿದೇವ ಶ್ರೀರಾಮರು ರಾಜ್ಯವಾಳಿದರು 20 ಶಂಖದೈತ್ಯನ ಕೊಂದೆ ಶರಣು ಶರಣಯ್ಯಶಂಖಗಿರಿಯಲಿ ನಿಂದೆ ಹನಮಂತರಾಯಪಂಕಜಾಕ್ಷ ಹಯವದನನ ಕಟಾಕ್ಷದಿಬಿಂಕದಿ ಪಡೆದೆಯೊ ಅಜನಪದವಿಯ21
--------------
ವಾದಿರಾಜ
ಏಕ ಬÁಣ ಬಿಟ್ಟನು ಜಾಣ ಪ ಏಕ ಸಂಕಲ್ಪದಿ ಏಕ ವಾಕ್ಯವನು ಅ.ಪ. ಏಕ ದೈವ ಲೋಕೈಕ ಮಹಿಮ ಜಗ- ದೇಕ ಕಾರಣ ಭಕ್ತ ಶೋಕ ನಿವಾರಣ ಶ್ರೀಕರ ಶುಭಗುಣ ಸೀತಾರಮಣ ಪೂರ್ಣ ರಾಕೇಂದು ವದನ ದಿವಾಕರ ಕುಲಭೂಷಣ 1 ಕಾಕುಜನರ ಬಲು ಶೋಕಕಾರಣ ಕರು ಣಾಕರ ಶರಣಾಗತ ಜನ ರಕ್ಷಣ ಶ್ರೀಕಮಲೇಕ್ಷಣ ಲೋಕ ವಿಲಕ್ಷಣ ಲೋಕವಿನುತ ಶ್ರೀ ಕರಿಗಿರಿ ನಿಕೇತನ 2
--------------
ವರಾವಾಣಿರಾಮರಾಯದಾಸರು
ಏನು ಕೊಟ್ಟನೆ ಮಗಳಾ ಉದಾ | ಸೀನದಿ ಭಿಕ್ಷುಕ ಶಿವಗೀಂದು ಗಿರಿಜಾ ಪ ಹೆತ್ತವಳಿಲ್ಲಾ ಸೀ ಹುಟ್ಟತ ಪರದೇಶೀ | ನೆತ್ತಿಗೆ ಎಣ್ಣಿಲ್ಲಾ ನೆರೆಬಿಸಿ ನೀರಿಲ್ಲಾ | ದೊತ್ತಿದ ಕೂದಲು ದುರ್ಜಟಿ ಯಾಗಲು | ಹೊತ್ತಿದ ತಲೆಯಿಂದ ಹಣೆ ಉರಿಗಣ್ಣಾದ | ಇತ್ತಿ ಹೊದಿಯಲಿಲ್ಲಾದೀ ಭಸ್ಮ ಲೇಪನಾ | ಮೆತ್ತಿದ ಗುಣದಿಂದ ಮೈ ಯಲ್ಲ ಬೆಳ್ಚಾದಾ | ಎತ್ತ ನೇವುವನು ಭೂತ ಗಣಾ | ಯೋಗಿ - ಕು | ಲೋತ್ತ ಮನೆನಿಸಿದನು ಇಂಥ | ಹತ್ತು ಭುಜವ ತಾಳಿ ದೈದು ಮೊರೆಯುಗವ 1 ಶರಥಿ ಮಥನದಲ್ಲಿ ಸಲೆ ವಿಷ ಹೊರಡಲಿ | ಸುರರ ಮಾತು ಕೇಳಿ ಶೀಘ್ರದಿ ಸುರಿಯಲಿ | ಉರಿಹೆಚ್ಚಿ- ಮೈಯ್ಯಲಿ ಉಬ್ಬಸ ಗೊಳುತಲಿ | ಸುರಗಂಗಿಯ ಹೊತ್ತ ಸೀತಾಂಶು ಕಳೆವತ್ತ | ಮರುಳವೆ ತಿರುಗುವ ಮತ್ತೆ ಭೋಳಾದೇವ | ತ್ವರಿತವ ಕೋಪದಯ ಮನಿಯೊಳು ಹಿಡಿದಿಹ | ಸುರರಿಗೆ ವಲಿದಿಹನು ಬೇಡಿದ | ವರಗಳನ್ನು ಕೊಡತಿಹನು ಬೆನ್ನಟ್ಟಿ | ಬರೆ ದುಷ್ಟ ಓಡಿದನು ಶ್ರೀ ವಿಷ್ಣು | ಕರುಣದಿ ಶರೆಯ ಬಿಡಿಸೆ ಕೊಂಡವನಿಗೆ 2 ಕರಿಚರ್ಮ ತಾಳಿದಾ ಕಾಡೊಳು ಸೇರಿದಾ | ಉರಗ ಭೂಷಣನಿವ ಊಧ್ರ್ವರೇತಾದವ | ಹೊರೆ ಹುಲಿದೊಗಲಾ ಹಾಸಿಗೆ ಮಾಡಿದಾ | ಕೊರಳಳು ರುಂಡಮಾಲಾ ಕರದೊಳು ಕಪಾಲಾ | ಧರಿಸಿದ ನೀತನು ದೊರೆಯಲ್ಲದಾತನು | ನೆರೆದುಣ - ಲುಡಿಲಿಲ್ಲಾ ನರಸುರ ರೊಳಗಲ್ಲಾ | ಪರಕ ಪರೆನಿಸುವರು ಸ್ಮರಿಸಿದಾ ಆ ಗುರುವರ ಮಹಿಪತಿ ಪ್ರಭು ಸಾಂಬನೆಂಬವನಿಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಒಬ್ಬನೆ ದಾಸ ಹುಟ್ಟಿದವನಿವ | ನೊಬ್ಬನೆದಾಸ ಪ ಸೂರಿ ತಾಯಿತಂದೆಗಳಿಂದಾಯಿತು ಅ.ಪ ನಾಲ್ಕು ವರ್ಷದವರೆವಿಗೂ ಮಾತಾಪಿತರು ಪಾಲನೆಗೈದರು ಬಳಿಕ ಕಾಲಾಧೀನವನೈದಿದರವರಾ ಮೇಲೆ ನಡೆದ ಕಥೆಯನು ಬಿನ್ನೈಸುವೆ 1 ದ್ವಾದಶ ವರುಷ ಪರಿಯಂತವು ಮಾತುಳನ ಗೃಹದಿ ಬೆಳೆದು ಪಾದವೂರದೆ ದೇಶವÀ ತಿರುಗುತ- ಲಾದುದು ಇಪ್ಪತ್ತುನಾಲ್ಕು ವರುಷವು 2 ಶ್ರೀರಮಣ ಗುರುದ್ವಾರದಲಿ ಇಪ್ಪತ್ತು ಮೂರನೆಯ ವರುಷದಲಿ ಸಾರವ ತಿಳುಹಿಸಿ ಅನುಗ್ರಹಿಸಿದನ- ಪಾರ ಸುಗುಣನಿಧಿ ಕೈಪಿಡಿದೆನ್ನನು 3 ಹರಿನಾಮಬಲದಿಂದಲಿಪ್ಪತ್ತೈದು ವರುಷದ ಮೊದಲು ಸುಕೃತದಿಂ ಹರಿಸೇವೆಗಳಿಂ ನೆರೆದ್ರವ್ಯಗಳಿಸಿ ನಲವತ್ತು ವರುಷವಾಯಿತು 4 ನಲವತ್ತೊಂದನೆ ವರ್ಷಮೊ- ದಲು ಬಲು ಜನಗಳ ಬೇಡಿ ಕಳೆದಿತು ಐವತ್ತಾರು ವರ್ಷಗಳು 5 ಮಧ್ವರಾಯರೆ ನಮ್ಮ ತಂದೆಯು ಮಧ್ವರಾಯರೆ ನಮಗೆ ಗುರು ಮಧ್ವರಾಯರೆ ಉದ್ಧಾರಕರ್ತರು ಪದ್ಮನಾಭಗತಿ ಪ್ರೀತ್ಯಾಸ್ಪದರು 6 ಬೆಂಡಾಗಿರುವುದು ಶರೀರ- ಧರ್ಮವು ಬೇರೊಬ್ಬರ ಕಾಣೆ ಉಂಡುಟ್ಟು ತೆಗೆಯುವ ವಿಷಯದಿ ಊರಿನವರ ದೂರುವುದಿನ್ಯಾಕೆ 7 ಹರಿನಾಮದ ಬಲದಿಂದ ಗಳಿಸಿದುದು ಹರಿಗೆ ಪ್ರೀತಿಯಾಯಿತು ಪರರು ವ್ಯರ್ಥವಾಗಸೂಯೆ ಪಟ್ಟರೆ ದುರಿತವ ಪ್ರಯೋಜನವು ಸತ್ಯವಿದು 8 ಏನು ಕೋರುವುದು ಸಾಕು ಸೀತಾಪತಿ ಗುರುರಾಮವಿಠ್ಠ- ಲನ ಸೀಮೆ ಈಗಲು ಮುಂದಕು ಇರಬೇಕು9
--------------
ಗುರುರಾಮವಿಠಲ
ಕಂದ ಕೃಷ್ಣ ನೀನು ಪವಡಿಸಲೆಂದು ನಾ- ನೊಂದು ಕಥೆಯ ಪೇಳ್ವೆನೋ ನಂದನನೇ ಒಂದು ಕಥೆಯ ಪೇಳ್ವೆನು ಪ ಹಿಂದಿನ ಯುಗದಲ್ಲಿ ಶ್ರೀರಾಮನೆಂಬೊರ್ವ ಕಂದ ಕೌಸಲ್ಯಗಾದ ಮುಂದೆ ಪೇಳು ಹುಂಕಾರದಿ ಕೇಳಿದೆ ಚಂದವಾದೀ ಕಥೆಯ ಸುಧೇಯ 1 ಆತನ ಪತ್ನಿ ಸುಶೀಲೆ ಸೀತೆಯೆಂದು ಖ್ಯಾತಳಾದಳು ಜಗದಿ ಮೂಡಿದನೆಂದೆ ಹುಂ ಮಾತೆ ಮುಂದಕೆ ಪೇಳು ಸೀತಾರಾಮರ ಕಥೆಯು ಸುಶ್ರಾವ್ಯ 2 ಪಂಚವಟಿಯಲಿ ಸಂಚರಿಸುತ್ತಿರೆ ಪಂಚದ್ವಯಾನನನು ಕೊಂಚ ಮಾತ್ರ ಹುಂಕಾರವ ನುಡಿ ವಿ- ರಿಂಚಿ ಪಿತನು ಮುನಿದಾ ಸದ್ದಾದ3 ಮಿಥ್ಯಾಯೋಗಿ ಯಾಗಿ ಸತ್ಯಮಹಿಮಳ ತಾ- ನೆತ್ತಿ ಕೊಂಡೋದನಯ್ಯ ಒತ್ತರಿಸಿತು ಕೋಪ ಮತ್ತೆ ನುಡಿದ ಹರಿ ಎತ್ತ ಸೌಮಿತ್ರೆ ಧನುರ್‍ಧರರ ಧನುರೇತ್ತ ಸೌಮಿತ್ರಿ ಧನುರ್ 4 ಪುಟ್ಟ ಕೂಸÉ ಆರ್ಭಟವೆಷ್ಟು ಮಾಡುವೆ ನಿಟ್ಟಿಪುದಸದಳವು ಥsÀಟ್ಟನೆ ಮಲಗೈಯ್ಯಾ ದಿಟ್ಟಿ ನರಸಿಂಹವಿಠಲ ಪಟ್ಟರಿಸುವೆನಯ್ಯ ರಂಗೈಯ್ಯಾ ಪಟ್ಟರಿಸುವೆನಯ್ಯಾ 5
--------------
ನರಸಿಂಹವಿಠಲರು
ಕಂದನೆಂದೆನಿಸಿದ ಕೌಸಲ್ಯದೇವಿಗೆ ರಾಮ ಎನಬಾರದೆ ಇಂದಿರಾಪತಿ ರಾಮಚಂದ್ರಗೆ ಶ್ರೀರಘುರಾಮ ಎನಬಾರದೆ 1 ಶಿಶುವಾಗಿ ಅವತಾರ ಮಾಡಿದ ದಶರಥನಲಿ ರಾಮ ಎನಬಾರದೆ ಋಷಿಯಜ್ಞ ಸಲಹಿ ರಕ್ಕಸರನೆ ಕೊಂದ ಶ್ರೀರಾಮ ಎನಬಾರದೆ 2 ಸಾತ್ವಿಕ ದೈವವೆ ತಾಟಕಾಂತಕ ಶ್ರೀರಾಮ ಎನಬಾರದೆ 3 ಪಾದನಖವು ಸೋಕಿ ಪಾದನಾಶನವಾಗೆ ರಾಮ ಎನಬಾರದೆ ಶ್ರೀಪತಿ ಕರುಣದಿ ಶಿಲೆಯು ಸ್ತ್ರೀಯಾಗಲು ರಾಮ ಎನಬಾರದೆ 4 ಸಕಲ ಸದ್ಗುಣ ಪೋಗಿ ಮಿಥಿಲಾ ಪಟ್ಟಣದಿ ರಾಮ ಎನಬಾರದೆ ತ್ರಿಪುರ ಸಂಹಾರ ತ್ರಿನೇತ್ರನ ಧನುವೆತ್ತಿ ರಾಮ ಎನಬಾರದೆ 5 ಚೆಲ್ವೆ ಜಾನಕಿ ಮಲ್ಲಿಗೆಯ ವನಮಾಲೆಯು ರಾಮ ಎನಬಾರದೆ ವಲ್ಲಭಗ್ಹಾಕಲು ಫುಲ್ಲಲೋಚನೆ ಸೀತಾರಾಮ ಎನಬಾರದೆ 6 ಮಂಗಳ ಮಹಿಮೆ ಸೀತಾಂಗನೆ ಕೊರಳಿಗೆ ರಾಮ ಎನಬಾರದೆ ಮಾಂಗಲ್ಯ ಬಂಧನ ಮಾಡಿದ ಮಹಾತ್ಮನು ರಾಮ ಎನಬಾರದೆ 7 ಜಗದೇಕ ಸುಂದರಿ ಜಾನಕಿಯನೆ ಗೆದ್ದ ರಾಮ ಎನಬಾರದೆ ಜಗದೀಶ ಜನಕಗೆ ಜಾಮಾತನೆನಿಸಿದೆ ರಾಮ ಎನಬಾರದೆ 8 ಮುದ್ದು ಜಾನಕಿ ಕೂಡಿ ಅಯೋಧ್ಯಕೆ ಬರುತಿರೆ ರಾಮ ಎನಬಾರದೆ ಮಧ್ಯ ಮಾರ್ಗದಿ ಬಂದಿದ್ದನು ಭಾರ್ಗವ ರಾಮ ಎನಬಾರದೆ 9 ತನ್ನ ತಾನೇ ಗೆದ್ದು ಧನ್ಯನೆಂದೆನಿಸಿದಿ ರಾಮ ಎನಬಾರದೆ ಬ್ರಹ್ಮ ಶಂಕರರಿಂದಿನ್ನು ಉತ್ತಮನಾದ ರಾಮ ಎನಬಾರದೆ 10 ಪಟ್ಟಗಟ್ಟಲು ಪರಮೋತ್ಸವ ಕಾಲಕ್ಕೆ ರಾಮ ಎನಬಾರದೆ ದುಷ್ಟ ಕೈಕೆಯ ನಿಷ್ಠೂರ್ವೊಚನವ ಕೇಳಿದ ರಾಮ ಎನಬಾರದೆ 11 ಆ ಲಕ್ಷುಮಿಯ ಮಾತಲಕ್ಷ್ಯವ ಮಾಡದೆ ರಾಮ ಎನಬಾರದೆ ಲಕ್ಷ್ಮಣ ಲಕ್ಷ್ಮಿ ಕೂಡ್ವನವಾಸ ತಿರುಗಿದ ರಾಮ ಎನಬಾರದೆ 12 ಸತಿ ಆದೇನೆಂದಸುರೆಯ ರಾಮ ಎನಬಾರದೆ ನಾಶÀರಹಿತ ಕಿವಿ ನಾಸಿಕನಳಿಸಿದ ಶ್ರೀ ರಾಮ ಎನಬಾರದೆ 13 ದಂಡಕಾರಣ್ಯದಿ ಕಂಡು ಮಾರೀಚನ್ನ ರಾಮ ಎನಬಾರದೆ ಹಿಂದ್ಹೋಗೆ ರಾಘವ ಬಂದ ರಾವಣನಲ್ಲೆ ರಾಮ ಎನಬಾರದೆ 14 ಘಾತಕ ರಾವಣ ಜಗನ್ಮಾತೆನೊಯ್ಯಲು ರಾಮ ಎನಬಾರದೆ ಸೋತು ಜಟಾಯು ಯುದ್ಧವ ಮಾಡಿ ತಾ ಬೀಳಲು ರಾಮ ಎನಬಾರದೆ 15 ಒಲಿದು ಸುಗ್ರೀವಗೆ ವಾಲಿ ವಧೆಯ ಮಾಡಿ ರಾಮ ಎನಬಾರದೆ ವಾನರಗಳ ಕೂಡಿ ವಾರಿಧಿಕಟ್ಟಿದ ಶ್ರೀರಾಮ ಎನಬಾರದೆ16 ಲೋಕ ಮಾತೆಯ ಲಂಕಾನಾಥ ತಾ ಒಯ್ದಾಗ ರಾಮ ಎನಬಾರದೆ ಸೀತಾಕೃತಿಯನಿಟ್ಟಶೋಕ ವನದೊಳು ರಾಮ ಎನಬಾರದೆ 17 ಮಂಡೋದರಿಯ ಗಂಡನ್ನ ದಶಶಿರಗಳ ರಾಮ ಎನಬಾರದೆ ಚೆಂಡನಾಡಿದ ಕೋದಂಡ ಪಾಣಿಯ ಶ್ರೀರಾಮ ಎನಬಾರದೆ 18 ಪ್ರೀತಿಂದ್ವಿಭೀಷಣಗೆ ಪಟ್ಟವಗಟ್ಟಿ ರಾಮ ಎನಬಾರದೆ ಸಿಂಧು ದಾಟಿದ ರಾಮ ಎನಬಾರದೆ 19 ಆದಿ ಲಕ್ಷುಮಿ ಕೂಡಿ ಹೋದನಯೋಧ್ಯಕೆ ರಾಮ ಎನಬಾರದೆ ಶ್ರೀದೇವಿ ಸಹಿತ ಪಟ್ಟಣ ಹೊಕ್ಕ ಪಟ್ಟಾಭಿರಾಮ ಎನಬಾರದೆ20 ಭರತ ಸುಮಿತ್ರ ಕೌಸಲ್ಯಗೆ ಸುಖವಿಟ್ಟ ರಾಮ ಎನಬಾರದೆ ಮುಕ್ತಿದಾಯಕ ಮುಂದೆ ಬಿಡದೆ ಕಾಪಾಡುವ ರಾಮ ಎನಬಾರದೆ21 ಪತ್ನಿ ವಾರ್ತೆಯ ತಂದ ಪವನಸುತಗೆ ಒಲಿದ ರಾಮ ಎನಬಾರದೆ ಸತ್ಯ ಲೋಕದ ಆಧಿಪತ್ಯವ ಕೊಟ್ಟ ಶ್ರೀ ರಾಮ ಎನಬಾರದೆ22 ರಾಮ ರಾಮನು ಎಂದು ಕÀರೆಯೆ ಭಕ್ತಿಯ ನೋಡಿ ರಾಮ ಎನಬಾರದೆ ಪ್ರೇಮದಿ ತನ್ನ ನಿಜಧಾಮವ ಕೊಡುವೋನು ರಾಮ ಎನಬಾರದೆ 23 ಅರಸಾಗಯೋಧ್ಯವನಾಳಿ ಯದುಕುಲದಲಿ ರಾಮ ಎನಬಾರದೆ ಹರುಷದಿ ಭೀಮೇಶ ಕೃಷ್ಣನಾಗ್ಯುದಿಸಿದ ರಾಮ ಎನಬಾರದೆ 24
--------------
ಹರಪನಹಳ್ಳಿಭೀಮವ್ವ
ಕದರುಂಡಲಗಿ ಹನುಮಂತದೇವರು ಇಂಥಾ ಕೀರ್ತಿಯ ಮೂರ್ತಿನ್ನಾರೇ ನೋಡಮ್ಮಯ್ಯ ಪ ಸಂತತ ಸೀತಾಪತಿಯ ಧ್ಯಾನರೊಳು ಕಂತುವಿನಸ್ತ್ರವ ಖಂಡಿಸಿದೊಡೆಯಾ ಅ.ಪ. ಸೂರಿ ಸುಲಿಗೆ ನೋಡಮ್ಮಯ್ಯ ನೋಡಮ್ಮಯ್ಯ ಭೂಸುರರಾಯರು ಸೀಮೆಯ ಸುತ್ತಲು ಗಾಸಿಯ ಮಾಡದೆ ಗ್ರಾಮವ ಕಾಯ್ದ 1 ತಾರಣ ನಾಮ ಸಂವತ್ಸರ ಶುದ್ಧ ವೈಶಾಖದಿ ನೋಡಮ್ಮಯ್ಯ ಧರೆಯೊಳು ಕಲಹ ವಿಪರೀತವದರೊಳು ರಣಮಂಡಲ ನೋಡಮ್ಮಯ್ಯ ಊರೆಲ್ಲ ಮೊರೆಯಿಡೆ ಈಕ್ಷಿಸಿ ಮಹಿಮೆಯ ತೋರುವ ಅಭಯ ಪ್ರಸಾದವ ಕೊಡುವಾ 2 ಜಯ ನಮೋ ಎನೆ ನೋಡಮ್ಮಯ್ಯ ಅಕಲಂಕ ಶೇಷಾನೃಪ ಶ್ರೀ ರಾಮರ ಸೇವಕಮಣಿ ನೋಡಮ್ಮಯ್ಯ ಲೋಕದಧಿಕ ಗುರು ಕದರುಂಡಲೀಶಾ ಬೇಕೆಂದು ನಿಂತಾ ಶ್ರೀ ಹನುಮಂತ 3
--------------
ಕದರುಂಡಲಗೀಶರು
ಕರುಣಿಸು ಜಯೇಶವಿಠಲ ವರ ಅಂಕಿತವಿದನು ಇತ್ತೆ ಪ ತರಳ ನಿನ್ನವನೆಂದು ಗುರುವಾತ ಸ್ಥಿತನಾಗಿ ಭರದಿ ಪಾಲಿಸಿದೆ ಇವನ ಹರಿ ನೀನಿದ್ದೆಡೆಗೆ ಕರೆಸಿ ಅ.ಪ ಇರಿಸು ವರ್ಣಾಶ್ರಮ ವರಧರ್ಮ ಕರ್ಮಗಳಲಿ ಮರೆಸಿ ಕಾಮ್ಯಕರ್ಮಗಳೆಲ್ಲವನು ಸ್ಮರಿಸದಂತೆ ಮಾಡು ಪರಸತಿಯರೊಲುಮೆ ಮರೆಯದಂತಿರಲಿ ಪರತತ್ವವನು 1 ಸತಿ ಸುತ ಪರಿವಾರದಿ ಕೃತಕೃತ್ಯನಾಗಿ ಮಾಡಿಸಿ ಪತಿತರ ಸಹವಾಸ ಹಿತವೆಂದರುಪದೆ ಸ- ದ್ಗತಿಯೀವ ಮಾರ್ಗ ತಿಳಿಸಿ 2 ನಿರುತ ತತ್ವ ನಿಶ್ಚಯದಲ್ಲಿ ಜ್ಞಾನ ಗುರುಹಿರಿಯರಲ್ಲಿ ಭಕ್ತಿ ದುರ್ವಿಷಯದಲಿ ವಿರಕ್ತಿನಿತ್ತು ವರ ವಿಜಯ ರಾಮಚಂದ್ರವಿಠಲ ಸುರರೊಡೆಯ ಬರೆದು ನಾಮಾಮೃತವ ನುಡಿಸಿ 3 (ಜಯೇಶವಿಠಲರಿಗೆ ಅಂಕಿತ ನೀಡಿದ ಸಂದರ್ಭ) ದುರಿತ ವಿ ದೂರ ಕರುಣಾಕರ ಸುಂದರ ಗಂಭೀರ 1 ದೀನೋದ್ಧಾರ ವಿರ್ಪಿವಿಹಾರ ದಾನವಹರ ಸುರಕಾವ್ಯ ವಿಚಾರ 2 ಸೀತಾನಾಥ ವಾನರಯೂಥ ವಾರಾತ್ಮಜ ನುತ ಶ್ರೀ ಲಕ್ಷ್ಮೀಕಾಂತ 3
--------------
ವಿಜಯ ರಾಮಚಂದ್ರವಿಠಲ
ಕರುಣಿಸು ಭಾರತೀರಮಣ ಕರುಣಿಸು ಪ ಪರಮದಯಾದಿಂದ ಹರಿಯನ್ನ ತೋರಿಸು ದುರುಳರೊಳಡಗಿದೆ ನಿಲಿಸೊ ಜ್ಞಾನಿಗಳಲ್ಲಿ ಅ.ಪ ತ್ರೇತಾಯುಗದಲ್ಲವತರಿಸಿ | ಕಪಿ ವ್ರಾತ ಶಿರೋಮಣಿ ಎನಿಸಿ | ಪಕ್ಷ - ಚೂತ ಫಲಗಳನ್ನು ಸಲಿಸಿ | ಭೂಮಿ - ಜಾತೆಯ ಪಾದಕ್ಕೆ ನಮಿಸೀ | ಅಹ ಘಾತಿಸಿ ಖಳರನ್ನು ಸೀತಾಪತಿ | ಮನೋ ರಥವನು ಸಲಿಸಿದ ಮಾತರಿಶ್ವನೆ ನೀ 1 ಕುಂತಿಯ ಉದರದಿ ಜನಿಸಿ | ಬಹು ಸಿರಿ - ಕಾಂತನ ಪಾದಕ್ಕೆ ನಮಿಸಿ | ಮಡದಿ ಚಿಂತೆಯನು ದೂರಗೈಸಿ | ಅಹ ಸಂತಾಪಗೊಳುತಿಪ್ಪ ದಂತಿಪುರಾಧಿಪನ ತಂತುಗೆಡಹಿತ ಬಲವಂತ ಶಿರೋರನ್ನ 2 ಕಲಿಯುಗದಲುದ್ಭವಿಸಿ | ಬಹು ಲೀಲೆಯೊಳನ್ಯರ ಜಯಿಸಿ | ಸತ್ಯ ಶೀಲರನ್ನುದ್ಧರಿಸಿ | ಸಿರಿ ಲೋಲನೆ ಪರದೈವವೆನಿಸಿ | ಆಹ ಬಾಲ ರವಿ ತೇಜ ವಿಜಯ ರಾಮಚಂದಿರವಿ - ಠಲನ್ನ ಪೂಜಿಸುವಂಥ ಆಲವ ಬೋರ್ಧಾಯನೆ 3
--------------
ವಿಜಯ ರಾಮಚಂದ್ರವಿಠಲ
ಕಾಡುವ ದುರಿತಗಳನು ಬಿಡಿಸೆಂದುಬೇಡಿಕೊಂಬೆನೊ ದೇವ ನಾ ನಿನ್ನ ಪ ಅಡಿದಾಸನೆಂಬೋ ಎನಗೊಂದು ದೃಢ ಬುದ್ಧಿಯು ಇಲ್ಲದೆಮಡದಿ ಮಕ್ಕಳೆಂಬೊ ಕಡಲೊಳು ಮುಳುಗಿದೆಕಡೆ ಹಾಯಿಸೊ ಎನ್ನೊಡೆಯ ನೀನಾದಡೆ 1 ಆಸೆಗಳ ಆಧಿಕ್ಯದಿಂದೀ ಪರಿಯ ಯಮಪಾಶಕ್ಕೆ ಒಳಗಾದೆನೋಮೀಸಲೂಳಿಗವ ಮಾಡದೆಯೆ ಪರಿಪರಿಯಕ್ಲೇಶದಿಂದಲಿ ಗಾಸಿಗೊಂಡೆನಯ್ಯ 2 ಪಾಡುವೆನು ನಿನ್ನ ನಾಮ ಸೀತಾರಾಮಆಡುವೆನು ಮನದಣಿವ ತನಕಬೇಡಿಕೊಂಬೆನೊ ನಿನ್ನ ಭಕ್ತರ ಸೇವೆಯನುಬಾಡದಾದಿಕೇಶವ ಭಕ್ತವತ್ಸಲನೆ3
--------------
ಕನಕದಾಸ
ಕಾಮಹರ ಒಬ್ಬ ತಾನೆ ಬಲ್ಲಾ | ರಾಮ ರಾಮ ಸೀತಾರಾಮ ರಾಮನಲ್ಲದಿಲ್ಲವೆಂದು ಪ ಕೈಯಲಿ ಕಿನ್ನರಿ ಧರಿಸಿ ಸಿರಿಮೊಗದಿಂದ | ಕೈಲಾಸಗಿರಿಯಲ್ಲಿ ಪಾರ್ವತಿ ಕೂಡ ಜಗ ದಯ್ಯನಯ್ಯ ಜಗದೊಡಿಯ ರಾಮನಲ್ಲದಿಲ್ಲೆಂದು 1 ಫಣಿಯಾಭರಣವು ಪೆಡೆಯೆತ್ತಿ ಇರಲು | ಮಣಿ ರುಂಡಮಾಲೆ ತೂಗಾಡಲು | ಕುಣಿದು ಕಣಕಾಲಿಂದ ಥಕ್ ಥಕ್ ಥೈ ರು ಪತಿ ಸರ್ವೋತ್ತಮ ರಾಮನಲ್ಲದಿಲ್ಲವೆಂದು 2 ಕಾಳಕೂಟದ ವಿಷಬಿಂದು ಮಾತುರನುಂಗೆ | ತಾಳಲಾರದೆ ತಳಮಳವಗೊಂಡು | ಕಾಳಿಮರ್ದನ ಕಮಲಾಯತಾಕ್ಷ ಎನ್ನ | ಪಾಲಿಸಿದ ಪರಮಾತ್ಮ ರಾಮನಲ್ಲದಿಲ್ಲವೆಂದು3 ಗಜಮುಖ ತಾಳವ ಪಿಡಿದು ತಥೈ ಎನ್ನಿ | ಅಜಸುತ ರಿಪು ಮದ್ದಳಿಯೆ ಮುಟ್ಟಿ | ಗಜ ಚರ್ಮಾಂಬರ ಗಾಯನವ ಮಾಡುತ-ತ್ರಿ | ಜಗಾಧಿಪತಿ | ವಿಷ್ಣು ರಾಮನಲ್ಲದಿಲ್ಲವೆಂದು 4 ಆರು ಮುಖದವ ಶಂಖವನ್ನು ಊದೆ | ಭೈರವ ನಾಗಸ್ವರವ ನುಡಿಸೆ | ಚಾರು ಪ್ರಥಮ ಭೂತ ತಲೆ ಚಪ್ಪಳಿಡೇ| ಧಾರಣಿಧರ ಸೀತಾರಾಮನಲ್ಲದಿಲ್ಲವೆಂದು 5 ಗೋರಾಜ ಸರಿಗಮಪದನಿಸ ಎಂದು ನಲಿಯೇ | ಉರಗಾದಿ ಮೂಷಕಾದಿ ಚಿಗಿದಾಡಲು | ವಾರಣದ ಗಂಗೆ ಸಿರದಲಿ ತುಳುಕಲು | ನಾರಾಯಣ ಪರದೈವ ರಾಮನಲ್ಲದಿಲ್ಲವೆಂದು 6 ತುಂಬುರನಾರಂದ ತಂದನ್ನಾತಾ ಎನ್ನೆ | ಅಂಬರದಿಂದ ಪೂಮಳೆಗೆರೆಯೆ | ಅಂಬುಜಪತಿ ಶಿರಿ ವಿಜಯವಿಠ್ಠಲ ವಿ ಶ್ವಂಭರಜಾಂಡಕರ್ತು ರಾಮನಲ್ಲದಿಲ್ಲವೆಂದು 7
--------------
ವಿಜಯದಾಸ