ಒಟ್ಟು 62 ಕಡೆಗಳಲ್ಲಿ , 35 ದಾಸರು , 59 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಿಡು ಎನ್ನ ಶೆರಗನು ಬಾಲಕೃಷ್ಣಾಉಡುಗಿ ದೇವರ ಮನಿ ಬರುವೆ ಬೇಗ ಪ ಅಂಗಳ ಥಳಿ ಹಾಕಿ ರಂಗವಲ್ಲಿಯ ಹಾಕಿತಂಗಳ ಮೊಸರನ್ನಾ ಕಡೆಯಲ್ಹಾಕಿಬಂಗಾರದ ಬಟ್ಟಲೊಳು ರಂಗ ಬೆಣ್ಣೆಯನೀವೆಕಂಗಳನೆ ತೆಗಿ ಬೀರು ಮಂಗಳವಾ1 ಹಾಸಿಗೆ ಬಿಟ್ಟೇಳು ವಾಸುದೇವನೆ ನಿಮ್ಮಹಾಸಿನ ತೊಟ್ಟಿಲೊಳು ಮಲಗು ಕೂಸಾಏಸು ಹುಡುಗರೆಲ್ಲ ಸೋಸಿಲಿ ಕರೆವರುದೋಸೆ ಕೊಡುವೆ ತಿನ್ನೋ ಏಳು ಬೇಗ 2 ತರುವು ಕಟ್ಟಲಿ ಬೇಕು ಕರುವು ಕಾಯಲುಬೇಕುತೊರೆದು ಮಲಿಯನುಣ್ಣು ಏಳು ಬಾಲಜರದ ಕುಂಚಿಗೆ ಹೊದ್ದು ಹೊರಗೆ ಬಂದಿಹ ರಾಮಕರೆಯುತ್ತಲಿರುವನು ಕಣ್ಣೆತ್ತಿ ನೋಡು 3 ಕೋಳಿ ಕೂಗುತಲಿದೆ ಕಾಳು ಕಡಿವೆ ಹಾಕುಏಳು ಗಿಳಿಯು ನಿನ್ನ ಕೇಳುತಲಿವೆಪಾಲು ಸಕ್ಕರಿನಿತ್ತು ಸಾಲು ಕೋಕಿಲ ಹಿಂಡುಗಾನ ಮಾಡುತಲಿವೆ ಏಳು ಬೇಗ4 ಅಂದ ಮಾತನು ಕೇಳಿ ಆ ಕಂದ ಎತ್ತಿಕೋ ಎನ್ನಒಂದು ಬಟ್ಟಲದೊಳಗೆ ತಂದುಕೊಡು ಆಡುವೆಎಂದು ತಾಯಿ ಚಿನ್ನಾ ಹಿಂದೆ ಸೆರಗಪಿಡಿದು ಇಂದಿರೇಶ 5
--------------
ಇಂದಿರೇಶರು
ಭಕ್ತಜನ ಸಂರಕ್ಷಣ ಪ ಭಕ್ತಜನ ಸಂರಕ್ಷ ಭವದುರಿತ ಸಂಹಾರಿ ಭಕ್ತರಾ ಸುರಧೇನು - ತರುವೆ ಚಿಂತಾಮಣಿಯೆ ಪೊತ್ತ ತಿಮ್ಮಪ್ಪ ಏಳೊಅ.ಪ. ಅಂಬರವು ತಾಂಬ್ರಮಯವಾಗೆ ಗರುಡಾಗ್ರಜನು ಇಂಬಿನಲಿ ತಲೆದೋರೆ ಕಿರಣಗಳು ಹರಹಿದುವು ತಾರಾ ನಿಕರವಂಬರದಿ ರೂಹುಮಾಸೆ ಕುಂಭಿಣಿಯ ಮುಸುಕಿರ್ದ ಕತ್ತಲೆ ಪರಿದು ಪೋಗೆ ಅಂಬುಜದಳಕ್ಕೆ ಮರಿದುಂಬಿಗಳು ಎರಗಿದವು ಸರಸಿಜಾಂಬುಕ ಮಂಚದಿಂದೇಳೊ 1 ಉದಯ ಪರ್ವತಕೆ ರಥನೂಕಿದನು ಮಾರ್ತಾಂಡ ಉರಗ ಪೆಡೆಯೆತ್ತಿದನು ಭಯದಿಂದ ಅಡಗಿದರು ದಶದಿಕ್ಕಿನೊಳಗೆ ತ್ರಿದಶರಬ್ಬರಿಸಿ ಆನಕ ದುಂದುಭೀ ಶಂಖ ಧಂ ಧಂ ಧಣಾ ಸರಿಗಮಪದನೀ ಯೆಂದೆನುತ ತುರೆಸಿದರು ಸದಮಲಾನಂದ ತಿಮ್ಮಾ 2 ನಾರಿಯರು ಬಂದು ಅಂಗಳ ಬಳಿದು ಗಂಧದಾ ಸಾರಣಿಯದೆಳೆದು ಮುತ್ತಿನ ರಂಗವಾಲೆ ವಿ- ಮಕರ ಕನ್ನಡಿ ದ್ವಾರದಲಿ ಬಿಗಿದರ್ಥಿಯಲಿ ಗೊಲ್ಲ ಕಟ್ಟಿಗೇ- ಕಾರ ಪರಿವಾರದವರೆಲ್ಲ ವೊಪ್ಪುತಿದಾರೆ ಕಂಸಾರಿ ಕೋನೇರಿವಾಸ 3 ನೃತ್ಯಗಾರರು ಬಂದು ತತ್ಥಿಗಿಣಿ ತಕ್ಥೈಯ ತಿತ್ತಿರಿ ಮೃದಂಗ ಜೊತೆ ತಪ್ಪದಂದದಿ ತಾಳ ಬತ್ತೀಸರಾಗದಲಿ ಎತ್ತಿ ಧ್ವನಿತೋರುತ್ತ ನೃತ್ಯ ಪಾಡುತ್ತ ಕುಣಿಯೆ ಮುತ್ತೈದೆಯರು ಬಂದು ಮುತ್ತಿನಾರತಿ ಪಿಡಿದು ಮಿತ್ರಭಾವದಿ ನಿಮ್ಮ ಅಡಿಗಳಿಗೆ ಹರಿವಾಣ ನೋಡುತ್ತಿದಾರೆ ಸರ್ವೇಶ4 ಕಾದೋದಂ ವಿಮಲ ಕಮ್ಮೆಣ್ಣಿ ಕಸ್ತೂರಿ ಸ್ವಾದು ಜವ್ವಾಜಿ ಚಂದನ ಗಂಧ ದ್ರವ್ಯಗಳ ಹೇಮ ಪಾದುಕಾ ಪಟ್ಟುವಸನ ಈ ಧರೆಯ ಮೇಲಿರ್ದ ಉಡಿಗೆ ತೊಡಿಗೆಯು ಕರ್ಪು ರಾದಿ ತಾಂಬೂಲ ನಿರ್ಮಲ ದಾದಿಯರು ಪಿಡಿದು ಮುಂದೆ ಆದಿಹರಿ ಪರಮಪುರುಷ 5 ದಂಡಿಗೆ ಶಂಖತಾಳ ತಂಬೂರಿ ಜಾಂಗಟೆಯ ಗೊಂಡು ನಿನ್ನಯ ಪರಮ ಪ್ರೀತ್ಯರ್ಥ ದಾಸರು ಬೊಮ್ಮಾಂಡ ಕಟಹÀ ಬಿಚ್ಚುವಂತೆ ತಂಡ ತಂಡದಿ ಗೆಜ್ಜೆಕಟ್ಟಿ ಅಭಿನಯ ತಿರುಹಿ ಕೊಂಡಾಡೆ ಶಬ್ದ ಪ್ರತಿ ಶಬ್ದವಾಗುತಿದೆ ಭೂ- ಬಲ್ಲವರಾರು ಕುಂಡಲಗಿರಿವಾಸ ತಿಮ್ಮಾ 6 ಗೋತ್ರಾರಿ ಹರಿಧರ್ಮ ಪುಣ್ಯಜನಪನು ವರುಣ ವೀತಿಹೋತ್ರನ ಸಖನು ಯಕ್ಷೇಶ ಕೈಲಾಸ- ಸೂರ್ಯ ಚಿತ್ತದಲಿ ಮುಖ್ಯರಾದ ವಿಶ್ವ - ಮಿತ್ರ ಸನಕಾದಿಗಳು ನಾರದರೆ ಮೊದಲಾಗಿ ಸ್ತೋತ್ರವನು ಮಾಡುತಲಿದ್ದಾರೆ ಲಕ್ಷ್ಮೀಕಳತ್ರ ಜಗದ್ಭರ್ತ ತಿಮ್ಮಾ 7 ನಿಚ್ಚ ಏಳುವ ಸಮಯ ಮೀರಿತೋ ಇಂದೀಗ ಎಚ್ಚರಿಕೆ ಪುಟ್ಟದೇ ಎಲೋ ದೇವ ಶ್ರೀದೇವಿ ಮೆಚ್ಚಿಸಿದ ಮಹಸರಸವೆ ಮುಚ್ಚಟೆಯಿದೇಂ ತಿಳಿಯಲಾಗದೆ ಸ್ವಾಮಿ ಸೊಲ್ಲು ಕರ್ಣಕೆ ಬೀಳದಾಯಿತೆ ಕಾಣೆ ಸಚ್ಚಿದಾನಂದಾತ್ಮಕ 8 ನಿದ್ರೆಗೆವೆ ಹಾಕದಿರೊ ನೀರೊಳಗೆ ನೀನಿರೊ ಉ- ಪದ್ರ ಭೂಮಿಗೆ ಕಳೆಯೊ ಕಶ್ಯಪನ ಸುತನಳಿಯೊ ಸ- ಮುದ್ರ ರಾಣಿಯ ಪಡೆಯೊ ರಾಯರಾಯರ ತÀಡೆಯೊ ಮುದ್ರೆ ಭೂಮಿಜೆಗೆ ಕಳುಹೊ ಅದ್ರಿಯುದ್ಧರಿಸೊ ಮುಪ್ಪುರವ ಸಂಹರಿಸೊ ಕಲಿ- ಕ್ಷುದ್ರ ಕಳೆ ನಿದ್ರೆ ಸಾಕೆಂದು ಶುಕ್ತಿ ಸಾರುತಿದೆ ವೆಂಕಟಕಾದ್ರವೇಯ ಹಾಸಿಗೆಯಿಂದೇಳು 9
--------------
ವಿಜಯದಾಸ
ಭವ ಕಾಮಹರ ನಿನ್ನಂಘ್ರಿ ತಾಮರಸಯುಗಳ ಭಜಿಸುವೆ | ಭಜಿಸಿ ಬಿನ್ನೈಸುವೆ ಶ್ರೀ ಮನೋಹರನ ತೋರಯ್ಯ 1 ಕೃತ್ತಿವಾಸನೆ ಎನ್ನ ಚಿತ್ತದಲಿ ಹರಿಯಪದ ನಿತ್ಯದಲಿ ಭಜಿಪ ಮತಿ ನೀಡೊ | ಮತಿ ನೀಡೊ ಪಾರ್ವತಿ ಚಿತ್ತದೊಲ್ಲಭನೆ ನಮಿಸುವೆ 2 ಸುವರ್ಣಮುಖರಿಯ ತೀರದಲಿ ನೆಲಸಿರುವೆ ಶ್ರೀ ವರಾಹನಂಘ್ರಿ ಭಜಿಸುತ್ತ | ಭಜಿಸುತ್ತ ನೆಲಸಿರುವ ಪಾವನರೂಪ ಸಲಹಯ್ಯ 3 ಕಾಳಸ್ತಿನಿಲಯನೆ ಪೇಳಲಿನ್ನೇನು ನಾ ತಾಳಲಾರೆನು ಈ ಭವಬಂಧ | ಭವಬಂಧ ಬಿಡಿಸುವ ವ್ಯಾಳ ಶಯನನ್ನ ತೋರೈಯ್ಯ 4 ಭಕ್ತರಿಗೊಲಿದು ಅಪಮೃತ್ಯು ಪರಿಹರಿಸಿದೆ ಸತ್ಯ ಸಂಕಲ್ಪ ನಿನ್ನಂಘ್ರಿ | ನಿನ್ನಂಘ್ರಿ ಕಮಲಗಳ ಚಿತ್ತದಲಿ ತೋರಿ ಸಂತೈಸು 5 ಮನಕೆ ಗುರು ನೀನಹುದು ಮನವ ಹರಿಯಲಿ ನೆಲಸೊ ವೈರಿ ಮಮತೆಯಿಂ | ಮಮತೆಯಿಂದಲಿ ನಿತ್ಯ ಮನಶುದ್ಧಿಗೈದು ಕಾಯಯ್ಯ 6 ಶಂಖಚಕ್ರವ ಪಿಡಿದ ಸಂಕರ್ಷಣನ ರೂಪ ನಿತ್ಯ ಭಜಿಸುವೆ | ಭಜಿಸುವೆ ಕೈಲಾಸ ಅಂಕದಲಿ ನೆಲಸಿ ಹರುಷದಿ 7 ನರಸಿಂಹ ರೂಪವನು ಸ್ಮರಿಸುತ್ತ ಮೈಮರೆವೆ ಉರುತರ ಭಾವ ಭಕ್ತಿಯಲಿ | ಭಕ್ತಿಯಲಿ ಭಜಿಪ ನಿನ್ನ ಸ್ಮರಿಸುವರ ಭಯವ ಹರಿಸುವೆ 8 ಶ್ರೀ ರಾಮನಾಮವನು ಪ್ರೇಮದಿಂದುಮೆಗರುಹಿ ಆರಾರು ಅರಿಯದಾನಂದ | ಆನಂದವಿತ್ತೆ ಭವ ತಾರಕವೆಂದು ಕರುಣಾಳೂ 9 ಅಜನ ಭ್ರೂಮಧ್ಯದಲಿ ಜನಿಸಿದೆಯೊ ಜಗದಲ್ಲಿ ಭಂಜನ | ಭಂಜನಗೊಳಿಸಿದೆ ತ್ರಿಜಗದಲಿ ನಿನಗೆ ಸರಿಯುಂಟೆ 10 ಶೇಷ ಪರ್ಯಂಕನಿಗೆ ಹಾಸಿಗೆಯಾಗಲು ತೋಷದಲಿ ತಪವಾಚರಿಸಿದೆ | ಚರಿಸಿ ಸಾಧಿಸಿದೆ ನೀ ಶೇಷ ಪದವಿಯನು ತ್ರಿನೇತ್ರ 11 ಶರಧಿ ಮಥಿಸಲು ಗರಳ ಉದ್ಭವಿಸಿ ಭಯವಾಗೆ | ಭಯವಾಗಿ ಪರಿಹರಿಸಿ ಗರಳವನೆ ಕುಡಿದೆ ಶ್ರೀ ಕಂಠ 12 ಅಸುರರ ವಂಚಿಸಿದ ವಶವಲ್ಲದ ಹೆಣ್ಣು ವಶವಾಗಲೆಂದು ಹಾರೈಸಿ | ಹಾರೈಸಿ ಬಳಲುತಿರೆ ಬಿಸಜಾಕ್ಷ ನಿನ್ನ ಸಲಹಿದ 13 ತಾರಕಾಸುರನಿಂದ ಘೋರಪಡುತಿರೆ ಜಗವು ಮಾರ ಪೂಅಸ್ತ್ರ ಎಸೆಯಲು | ಎಸೆಯಲು ದಹಿಸಿ ಕು- ಮಾರನನು ಪಡೆದೆ ಗಿರಿಜೇಶ 14 ಸ್ತುತಿಪ್ರಿಯ ನಿನ್ನ ನಾ ಸ್ತುತಿಸಲಾಪೆನೆ ಮಂದ ಮತಿ ಎಂದು ನೀನೆ ಸಂತೈಸೊ | ಸಂತೈಸಬೇಕಿನ್ನು ಮತಿಯಿತ್ತು ಹರಿಯ ಪದದಲ್ಲಿ 15 ಶಿರದಲ್ಲಿ ಗಂಗೆ ಚಂದ್ರನ ಮೆರೆಯುವ ಉರಗ ಭೂಷಣನೆ ಕೇಳಿನ್ನು | ಕೇಳಿನ್ನು ಎನ್ನ ಮನ ಮರೆಯದೆ ಹರಿಯ ನೆನೆಯಲಿ 16 ವಿಷ್ಣು ಭಕ್ತರೊಳಗೆ ಶ್ರೇಷ್ಠ ನೀನಹುದಯ್ಯ ಜಿಷ್ಣುವಿಗೆ ಮೆಚ್ಚಿ ಧನುವಿತ್ತೆ | ಧನುವಿತ್ತೆ ಗೋಪಾಲ- ಕೃಷ್ಣವಿಠ್ಠಲನ ತೋರಯ್ಯ 17
--------------
ಅಂಬಾಬಾಯಿ
ಭೂಮಂಡಲಕೆ ಮಿಗಿಲೆನಿಸಿದ ತಾಯಿಕಂಡು ಬಂದೆನೆ ಪಾಂಡವರ ಭಾಗ್ಯವ ಪ. ಸಂಭ್ರಮದಿರಾಯನು ತುಂಬಿಸಿದ ಮನೆಯೊಳಗೆ ಉಂಬೊ ಪದಾರ್ಥ ಕೋಟಿ ಫಲಕದಳಿ ತಿಂಬೊ ಪದಾರ್ಥ ಕೋಟಿಷಡ್ರಸವೆಂಬೊ ಪದಾರ್ಥ ಕೋಟಿಈ ತೂಗಿಕೊಂಬ ಮಣಿಮಂಚ ಕೋಟಿ ತಾಯಿ1 ವಿತ್ತ ಕೋಟಿಯು ರಾಶಿ ರಾಯನಚಿತ್ತ ಸಂತೋಷ ರಾಶಿ 2 ಏಸುಮುನಿ ಬಳಗ ದಾಸರು ದಾಸಿಯರು ಬೀಸಿ ತೊಟ್ಟಿಲವ ತೂಗÀುವರುಮಕ್ಕಳನ ಸೋಸಿಲೆ ಕರೆದೊಯ್ಯುವರುಮಂಚದಲಿ ಹಾಸಿಗೆ ಹಾಸುವರು ರಾಯಗೆ ಈ ಬಗೆ ಸೇವಕರು ತಾಯೆ 3 ಎಲ್ಲ ಮನೆಯೊಳಗೆ ಮಲ್ಲಿಗೆ ಸಂಪಿಗೆ ಅಲ್ಲೆ ಕ್ಯಾದಿಗೆದವನವುಬುಕ್ಕಿಟ್ಟು ಅಲ್ಲಲ್ಲೆ ಶ್ರೀಗಂಧವುಎಲಿ ಅಡಕಿ ಅಲ್ಲಲ್ಲಿ ತಬಕಿಹೋದುರಾಯಗೆ ಈ ಬಗೆ ಸೇವಕರು ತಾಯೆ 4 ಆನೆಗಳು ಕಟ್ಯಾವ ಕುದರಿಯ ಸಾಲು ರಥಗಳು ಇಟ್ಟಾವ ಬಿಲ್ಲುಗಳು ಪಲ್ಲಕ್ಕಿ ಧಿಟ್ಟಾದ ವಯಿರಗಳು ರಮೆ ಅರಸಗಿಷ್ಟು ಉಪಚಾರಗಳು ತಾಯೆ 5
--------------
ಗಲಗಲಿಅವ್ವನವರು
ರಮಣನಾ ವಿಭವವನು ಅಮಮ ವಿವರಿಪೆ ನಾನು ಕಮಲಾಕ್ಷಿ ಕೇಳ್ನೀನು ಕ್ರಮದೊಳಿದನು ತನಯರೊಳು ಜಡನೊರ್ವನನಂಗನೆ ಮತ್ತೊರ್ವ ವನಿತೆ ಚಂಚಲೆಯಚಲೆಯೆನಿಪರವರು ವಕ್ರಗಮನೆಯೆ ಸುತೆಯು ಚಕ್ರವೆ ನಿಜಾಯುಧವು ಪಕ್ಷಿಯೇ ವಾಹನವು ದಕ್ಷನಿವನು ಶರಧಿಯೇ ಮಂದಿರವು ಉರಗವೇ ಹಾಸಿಗೆಯು ಇರವನರಿಯರದಾರು ಭುವಿಯ ಜನರು ಬರಿಯ ಮಾತಿಗೆ ಮನವು ಕರಗಿದುದಕೆ ಅರಿಯದಾನೈತಂದು ನೆರೆದೆನೇಕೆ ಪರಿಕಿಸಲ್ ಮತಿಭ್ರಮೆಯಿದುವೆ ಸಾಕೆ
--------------
ನಂಜನಗೂಡು ತಿರುಮಲಾಂಬಾ
ಲಲಾಟದಲ್ಲಿ ಇಡುವನೋ ಕಾವನು ಅವನನು ನಮ್ಮ ಪವಮಾನನೊಡೆಯನು ವಾಮ ಉದರದಲ್ಲಿ ಯಾವಾನಲೂ ಇಟ್ಟು ಮೆರೆಯುವನೋ ಅವನ ಗೊವತ್ಸ ನ್ಯಾಯದಿ ಕರವನು ಪಿಡಿವನು ಗಧಾಧರನು ಹಾವನ್ನೆ ಹಾಸಿಗೆ ಮಾಡಿಕೊಂಡ ಶ್ರೀಧರನ ಸ್ಥಾನದ ಕೆಳೆಗೆ ಪವಮಾನಿಗುವ ಮತಾ ಎರಡು ಗಧಾಯುಧ ಧರಿಸಲು ಪಾವನನಂತಾದವನು ಅವರ ದುರಿತಕಾನನಕೆ ಸಾವು ಹುಟ್ಟಿಲ್ಲದ ಪರಮಪುರುಷನ ಈ ಆಯುಧವ ಅವನು ವಾಮಸ್ತನದಿ ತಾನೊಮ್ಮೆ ಇಕ್ಕುವನೋ ಸಾನು ಹುಟ್ಟುಗಳಿಂದ ದೂರಗೈಸುವ ಗುರು ಕಾಳೀಮರ್ಧನಕೃಷ್ಣ 4 ಪದ್ಮ ಮುದ್ರೆಯನ್ನು ಭಕುತಿ ಪೂರ್ವಕವಾಗಿ ಹೃತ್ ಪದ್ಮದಿ ಬಂದು ಧರಿಸಲುಬೇಕು ದಕ್ಷ ಭುಜದ ಕೆಳೆಗೆ ಪದ್ಮಂಗಳೆರಡನ್ನು ದಕ್ಷ ಉದರಕೆಳೆಗೆ ಪದ್ಮವೆ ಒಂದನ್ನು ವಕ್ಷಸ್ಥಾನದಿ ಒಂದು ಪದ್ಮವ ಧರಿಸಲು ಭಕ್ತವತ್ಸಲನಾದ ಪದ್ಮ ರಮಣಗುರು ಕಾಳಿಮರ್ಧನಕೃಷ್ಣ ಪೊಳೆವಾ 5
--------------
ಕಳಸದ ಸುಂದರಮ್ಮ
ಶೇಷ-ರುದ್ರದೇವರು ಪಾದ ಭೂ- ಪಾದ ಪ. ಹರಿಗೆ ಹಾಸಿಗೆಯಾಗಿ ಹರುಷಪಡುವ ಪಾದ ಹರಿಯ ಮಂದಿರಲ್ಲಿ ಇರುವ ಪಾದ ಹರ ಪುರಂದರರಿಗೆ ಪೂಜ್ಯವಾಗಿಹ ಪಾದ ಪಾದ 1 ವಾರುಣಿ ದೇವಿಗೆ ವರನೆನಿಸಿದ ಪಾದ ಶ್ರೀ ರಾಮಗೆ ಕಿರಿಯನಾದ ಪಾದ ಘೋರ ಇಂದ್ರಾರಿಯ ಸಂಹರಿಸಿದ ಪಾದ ಪಾದ 2 ವಾಯುದೇವರು ಜೊತೆಗೆ ವಾದವಾಡಿದ ಪಾದ ನೋಯದೆ ಭೂಮಿಯನು ಪೊತ್ತಿಹ ಪಾದ ಶ್ರೀಯರಸನ ಪಾದಪದ್ಮ ಸೇವಿಪ ಪಾದ ಸುರರು ಪಾದ 3 ಸಪ್ತೆರಡು ಭುವನದಲಿ ಗುಪ್ತವಾಗಿಹ ಪಾದ ಚಿತ್ತದಭಿಮಾನಿಗೆ ಸೇವಕನಾದ ಪಾದ ಮತ್ತೆ ಮನ ಅಹಂಕಾರ ತತ್ವದೊಡೆಯನ ಪಾದ ಪಾದ 4 ಘೋರರೂಪವ ತೊರೆದು ಸೌಮ್ಯವಾಗಿಹ ಪಾದ ಸೇರಿದವರನು ಪೊರೆವ ಶ್ರೇಷ್ಠ ಪಾದ ಹಾರೈಸಿ ಗೋಪಾಲಕೃಷ್ಣವಿಠ್ಠಲನ ಪಾದ ಪಾದ 5
--------------
ಅಂಬಾಬಾಯಿ
ಶೇಷಮೂರುತಿ ಪೋಷಿಸೆನ್ನ ಹಾಸಿಗೆಯಾಗಿ ನೀ ಹರಿಯ ಪೊತ್ತಿರುವಿ ಪ ಶ್ವೇತದ್ವೀಪದ ಮಧ್ಯದಲ್ಲಿ ದೇವನರಸಿಯ ಕೂಡುತ್ತಲಿರಲು ಭಕ್ತಿಯಿಂದಲಿ ಕಂಗಳಿಂದ ಬಿಡದೆ ನೋಡುತಲಿಪ್ಪ ಸಮಯ1 ಮಗಳ ಲಜ್ಜೆಯ ಕಂಡು ಪಿತನು ಹಾಲಿನ ತೆರೆಯಿಂದ ಕಣ್ಣನೆ ಮುಚ್ಚಿಸಿಹನು ಮಗಳ ಮೇಲಿನ ಪ್ರೀತಿ ಪಿತಗೆ ಯೆಣಿಸಲಾಗದು ಲೋಕದೊಳಗೆ 2 ರಾಜೇಶ ಹಯಮುಖ ಹರಿಗೆ ಮಂಚವೆಂದರೆ ನೀನೆ ಖರೆಯು ರಾಜರಾಜರಿಗಿಂಥ ಮಂಚ ದೊರಕದೆಂದೆಂದಿಗೂ ದೇವ 3
--------------
ವಿಶ್ವೇಂದ್ರತೀರ್ಥ
ಶ್ರೀ ಗುರುವಿನ ಮನೆಯ ಮುಂದಣ ಬಾಗಿಲ ಕಾಯ್ದಿರುವೆ ಪ ತ್ಯಾಗಿಸಿ ಸಂಸಾರಾ ಶ್ರೀ ಗುರುವಿನ ಯೋಗಾಸನವಹೆನು ಅ.ಪ. ಕೊಪ್ಪರಿಗೆಯಾಗಿಹೆ ನಾನು ಜಲಹರಿಯಾಗಿಹೆ ನಾನು ಗುರುವಿನ ಚರಣಾಲಂಕರಿಸುವ ಕೇತಕಿ ಗರಿಯಾಗಿದೆ ನಾನು ಗುರು ಮಂತ್ರವನುಚ್ಚರಿಸಿ ಜಪಿಸುವ ಸರವಾಗಿಹೆ ನಾನು 1 ಗುರುವಿನ ಕೊರಳೊಳಗಿಹ ರುದ್ರಾಕ್ಷದ ಸರವಾಗಿಹೆ ನಾನು ಭರಣಿಯಾಗಿಹೆ ನಾನು ಘಟ ಪರಿಯಾಗಿಹೆ ನಾನು ಗುರುವಿನ ಭುಂಜಿಸಿ ಮಿಕ್ಕ ಪ್ರಸಾದಕೆ ಗುರಿಯಾಗಿದೆ ನಾನು2 ನಡೆವ ಹಾವಿಗೆಯಾಗಿಹೆ ನಾನು ಮಿಗೆ ನಿರ್ಮಲದೊಳು ಪವಡಿಸುತ್ತಿಹ ಹಾಸಿಗೆಯಾಗಿಹೆ ನಾನು ಹೊರಜರುಲಿಯ ಸಾರಿಹೆ ನಾನು ಜಗದೀಶ್ವರ ವಿಮಲಾನಂದ ಗುರುವಿಗೆ ಮಗನಾಗಿಹೆ ನಾನು 3
--------------
ಭಟಕಳ ಅಪ್ಪಯ್ಯ
ಶ್ರೀ ಶೇಷದೇವರು ಪೋಷಿಸೆನ್ನನು ನಿರುತ ಶೇಷದೇವ ದೋಷ ನಾಶನಗೊಳಿಸಿ ಲೇಸಾಗಿ ಪಿಡಿಕರವ ಪ ತಲ್ಪ ಅನುಜ ಪೂರ್ವಜನಾ ಘನಸೇವೆಯನು ಗೈದು | ಫಣಿರಾಜನೆ ವಿನಯದಲಿ ಬಿನ್ನೈಪೆ | ನಿನಗಶನವಾದಾತ ಅನುದಿನ 1 ಭೂಗಗನ ಪಾತಾಳ | ಸಾಗರವ ವ್ಯಾಪಿಸಿದ ಯೋಗ ಸಾಧನ ಶೂರ | ನಾಗನಾಥ ಬಾಗಿಬೇಡುವೆ ಭವದ ರೋಗಕೌಷಧವಾದ ಭಾಗವತ ಶ್ರವಣ ಸುಖರಾಗದಲಿ ನೀಕೊಟ್ಟು 2 ಸಾನಿಸಿರಾಂಬಕ ನಮಿತ | ಸಾಸಿರಾನನನಾದ ವಾಸುಕೀವರ | ವಾರುಣೀಶ ನಿನ್ನ || ಹಾಸಿಗೆಯಗೈದಂಥ ಶ್ರೀ ಶಾಮಸುಂದರನ ನಿತ್ಯ 3
--------------
ಶಾಮಸುಂದರ ವಿಠಲ
ಶ್ರೀ ಹರಿ ಪಾಲಿಪುದೈ ದಾಸನಾಗಿ ಸೇವೆಗೈವುದ ಪ ನೀನು ಕೂಡುವ ಪೀಠವಾಗಿ ಮಲಗಲು ಹಾಸಿಗೆಯಾಗಿ ನಾನು ಎದುರ ಕನ್ನಡಿಯಾಗುತ ಮಂಗಳದೀಪ ಪಿಡಿವೆನೈ 1 ನಿನ್ನ ಮೇಲಿನ ಛತ್ರಿಯಾಗಿ ಚಾಮರಹಿಡಿದು ಬೀಸುವೆನೈ ಚನ್ನವೈಜಯಂತಿಮಾಲೆ ಧನ್ಯ ಮುದ್ರಿಕೆಯನ್ನು ಮಾಡಿಕೊ 2 ಭೋಜನಪಾತ್ರ ತಾಂಬೂಲಭರಣಿ ರಾಜಿಪ ಫಲತಟ್ಟೆಯು ಆಗಿ ವಿಜಯಧ್ವಜವನಾಗಿಸೈ 3 ಬರೆದು ಓದುವ ಪತ್ರವಾಗಿ ಕೈಯ ಲೀಲಾಶುಕವಾಗೀ ಕೊರಳ ಕೌಸ್ತುಭಮಣಿಯಮಾಡಿ ಶಂಖಚಕ್ರಗಳನು ಹೊರಿಸು 4 ಜಾಜಿಕೇಶವ ದಿವ್ಯಸನ್ನಿಧಿ ಸಾಹ್ಯವಸ್ತುಗಳಾಗಿಸೈ ರಾಜಾಧಿರಾಜಪೂಜ್ಯ ಮಾಜದೆ ನಾಂ ಮಣಿವೆ ಬೇಡಿ5
--------------
ಶಾಮಶರ್ಮರು
ಶ್ರೀನಿಕೇತನ ಲಕ್ಷ್ಮೀ ಕಾಂತನ ಪದಪದ್ಮ ಧ್ಯಾನ ಮಾಡುತ ಎನ್ನ ಸ್ಥಿತಿಯ ದೀನಭಾವನೆಯಿಂದಲೊರೆವೆನು ಗುರುಪವ ಮಾನ ಪಾಲಿಸಲಿ ಸನ್ಮತಿಯ ಪ. ತಾನು ತನ್ನದೆಂಬ ಹೀನ ಭಾವನೆಯಿಂದ ನಾನಾ ಯೋನಿಗಳಲ್ಲಿ ಚರಿಸಿ ಮಾನವ ಜನ್ಮವನೆತ್ತಲು ಮುಂದಾದ- ದೇನೆಂಬೆ ಗರ್ಭದೊಳುದಿಸಿ 1 ಮಾತಾಪಿತರುಗಳು ಮೋಹದಿ ರಮಿಸಲು ಕೇತ ತತಿಗೆ ಸರಿಯಾಗಿ ಆತು ಬಂದಿಹೆನು ಗರ್ಭದಿ ಮೆಲು ನರ ವ್ರಾತ ಬಂಧಕೆ ಗುರಿಯಾಗಿ 2 ಸೇರಿದ ಕ್ರಿಮಿ ಪರಿವಾರ ಕಚ್ಚುತಲಿರೆ ಚೀರಲಾದರು ಶಕ್ತಿಯಿರದೆ ಭಾರ ವಸ್ತುವು ಕಣ್ಣಸಾರವು ತಡೆಯದೆ ಗಾರುಗೊಂಡೆನು ಗರ್ಭದೊಳಗೆ 3 ಮೂರರಾ ಮೇಲೆ ಮತ್ತಾರುಮಾಸಗಳಿಂತು ಭಾರಿ ಭವಣೆಗೊಂಡು ಕಡೆಗೆ ಭೋರನೆ ಭೂಮಿಗೆ ದೂರಿ ಬಂದೆನು ಮಲ ಧಾರೆಯಾ ಕೂಡಿ ಮೈಯೊಳಗೆ 4 ಹೇಸಿಗೆ ಮಲಮೂತ್ರ ರಾಶಿಯ ಒಳಗೆ ದು- ರ್ವಾಸನೆ ಬರುವ ಗೆರಸಿಯ ಹಾಸಿಗೆ ಒಳಗೆ ಹಾಕಿರುತಿರೆ ದೇಹದ ಲೇಶ ಸ್ವಾತಂತ್ರ್ಯವೇನಿರದೆ 5 ಮೂಸಿ ಮುತ್ತುವ ನುಸಿಮುತ್ಕುಣ ಬಾಧೆಗೆ ಘಾಸಿಗೊಳುತ ಬಾಯ ತೆರದೆ ದೋಷ ಶಂಕಿಸಿ ಮೈಯೊಳಿಕ್ಕಿದ ಬರೆಗಳ ಬಾಸಲೆಯುನು ತಾಳ್ದೆ ಬರಿದೆ 6 ನಾಲ್ಕು ಕಾಲುಗಳಿಂದ ನಾಯಿಗೆ ಪರಿಯಾಗಿ ಸೋಕಿದೆ ಸರ್ವತ್ರ ತಿರುಗಿ ಸಾಕುವ ಜನರೆಡಬಲಗಾಲ ತುದಿಯಿಂದ ದೂಕಿದರಲ್ಲಿಯೆ ಸುಳಿದೆ 7 ವಾಕುಗಳೆಂಬ ಕೂರಂಬನು ಸಹಿಸಿ ಪ- ರಾಕೆಂದು ಪರರ ಸೇವಿಸಿದೆ ಮಾಕಳತ್ರನೆ ನಿನ್ನ ಕೃಪೆಯಾದ ಬಳಿಕ ಮೋ- ಹಾಕಾರ ಮಡುವಿನೊಳಿಳಿದೆ 8 ಈಗಲಾದರು ದೇಹ ಭೋಗವೆ ಬಯಸುತ ನೀಗಿದೆ ವ್ರತ ನೇಮಾದಿಗಳ ಸಾಗದ ಫಲ ತನಗಾಗಬೇಕೆಂಬ ಮ- ನೋಗತಿಯಿಂದ ಕರ್ಮಗಳ 9 ಮೂಗಭಾವನೆಯನ್ನು ನೀಗದೆನಿಸಿ ಮುಂ- ದಾಗಿಯಾಡುವೆ ಮಥನಗಳ ಕಾಗೆಯು ಕುಂಭದ ಜಲ ಕುಕ್ಕುವಂತೆ ಬೆಂ- ಡಾಗಿ ಕೊಂಡೆನು ಝಗಳಗಳ 10 ಕಂತುಜನಕ ಕಂಜನಾಭ ವೆಂಕಟರಾಜ ಚಿಂತಾಮಣಿ ಸುರತರುವೆ ಎಂತಾದರು ನಿನ್ನ ದಾಸ್ಯ ಸೇರಿದ ಮೇಲೆ ಇಂತುಪೇಕ್ಷಿಸುವುದು ಥರವೆ 11 ಭ್ರಾಂತಿ ಎಂಬುದ ಬಿಡಿಸಿನ್ನಾದರು ಲಕ್ಷ್ಮೀ ಕಾಂತ ಕಾರುಣ್ಯ ವಾರುಧಿಯೆ ಚಿಂತಿತದಾಯಿ ಎನ್ನಂತರಂಗದಿ ಬೇಗ ನಿತ್ಯ ವಿಧಿಯೆ 12
--------------
ತುಪಾಕಿ ವೆಂಕಟರಮಣಾಚಾರ್ಯ
ಸುಗುಣೆಯ ಕೂಟವೆ ಕೂಟ ಪ ಹಗಲಿರುಳೆನ್ನದೆ ಬಗೆ ಬಗೆ ರತಿಯೊಳು ಸೊಗಯಿಸಿ ದೇಹ ಧಾತುಗಳನು ಕೆಡಿಸುವ ಅ.ಪ ಗನುದಿನ ಬಾಧಿಪ 1 ಮಾಡಿ ಹಾಸಿಗೆ ಮಂಚಾದಿಗಳಲಿ ರೂಢಿಸಿ ಕಾಮಿನಿ ಕೂಡುವ ತೆರದೊಳೋ ಲಾಡಿ ಶರೀರದ ನಾಡಿಯ ನಿಲ್ಲಿಸುವ 2 ನಿದ್ರೆಯ ಸಮಯವ ನೋಡುತ ಮುದ್ದಾಡುತ ನಮ್ಮ ನೊದ್ದಾಡಿಸುತಿಹ 3 ತೊಗಲಿನ ನರಕ್ಕೆ ತಗಲೆ ನಿದ್ರೆಯ ನಗಲಿಸಿ ಬೇಗದಿನುಸುಳಿ ಕದ್ದೋಡುವ4 ತೊಗಟೆ ರಕ್ತದ ಸುವಿನೋಡಿ ಬುಗುಟೆದ್ದ ಗಾಯವ ವಿಗಟವ ಮಾಡುವ 5 ಕಪಟ ಕಾಟಕರ್ಮದ ನಿಸರ್ಗದಲ್ಲಿನ ಬಲು ಕೋಟಲೆಯುಂಬೆ ನಿನ್ನ ಕೂಟದ ಜನರಿಗೆ 6 ಬಿರುದನು ಪೊಗಳುತ ನಿಂದೆ ವರದವಿಠಲ ನಿನ್ನ ಶರಣರಾದವರಿಗೆ 7
--------------
ವೆಂಕಟವರದಾರ್ಯರು
ಹರಿಹರಿ ಎನ್ನಿ ಹರಿವದು ಪಾಪ ಧರೆಯೊಳು ಧರೆಯೊಳು ಕರಮುಗಿದು ಗುರುವಿಗೆ ಕೇಳುವುದು ಬಲುಮೇಲು ಧ್ರುವ ಮೂಢಗೆ ಉಪಾಯ ಹೇಳಿದರೆ ತಿಳುವದೆ ತಿಳುವದೆ ಖೋಡಿಗೆ ಸುಲಕ್ಷಣದ ಮಾತು ಹೊಳೆವದೆ 1 ಬಿಸಲು ಬೀಳುದೆ ಬೀಳುದೆ ಗೂಢ ಗುರುವಿನ ಮಾತಿದು ನಾಡಿಗೆ ತಿಳುವದೆ 2 ವಿಷ ಕಚ್ಚಿದ ಮನಕೆ ಸುಘನ ಭಾಸುದೆ ಭಾಸುದೆ ತುಸು ಝರಿ ಇಲ್ಲದೆ ಬಾವಿಲಿ ನೀರು ಸೂಸುದೆ ಸೂಸುದೆ 3 ಹಸಗೆಟ್ಟಹ್ಯ ಕುಕ್ಕಡಿನೂಲ್ಹಾಸಿಗೆ ಬಾಹುದೆ ಬಾಹುದೆ ಕಸಕಡ್ಡಿಲ್ಲದ ಮುಗಿಲೆಂದಿಗೆ ತಾ ಮಾಸುದೆ 4 ಮೀಸಲ ಮನ ಒಂದಾದರೆ ಸಾಕು ತಿಳಿಕೊಳ್ಳಿ ತಿಳಿಕೊಳ್ಳಿ ಭಾಸ್ಕರ ಗುರುರಾಯನ ಶ್ರೀಪಾದಕೆ ಬಲಗೊಳ್ಳಿ ಬಲಗೊಳ್ಳಿ 5 ಲೇಸಿನ ನಿಜಸುಖ ನೆರೆಗೊಳ್ಳು ಮಹಿಪತಿ ನಿನ್ನಲ್ಲಿ ನಿನ್ನಲ್ಲಿ ಹೇಸಿ ಮುಖದೋರದೆ ಹೋಗುವುದು ಭವದ ತಳ್ಳಿ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆರಿಗಾದರು ಪೂರ್ವಕಲ್ಪನೆ ತಪ್ಪದು ಪಬೇರೆ ಬಯಸಿದರೆ ಬರಲರಿಯದಯ್ಯ ಅರಾಮಚಂದ್ರನ ಸೇವೆ ಮಾಡಿ ಮೆಚ್ಚಿಸಿ ಮಹಾತಾಮಸನ ಗರ್ವವನು ಮುರಿದು ಬಂದರೋಮಕೋಟಿ ಲಿಂಗನೆನಿಸಿದ ಹುನುಮನಿಗೆ ಹೊರಗೆಗ್ರಾಮಗಳ ಕಾಯ್ದುಕೊಂಡಿಹುದೆ ಮನೆಯಾಯ್ತು1ಸುರಪತಿಯ ಗೆದ್ದು ಸುಧೆಯನು ತಂದು ಮಾತೆಯಸೆರೆಯ ಪರಿಹರಿಸಿ ಬಹು ಭಕ್ತನೆನಿಸಿಹರಿಗೆ ವಾಹನನಾಗಿ ಹದಿನಾಲ್ಕು ಲೋಕವನುಚರಿಸಿದ ಗರುಡನಿಗೆ ಮನೆ ಮರದ ಮೇಲಾಯ್ತು2ಪೊಡವಿ ಭಾರವ ಪೊತ್ತು ಮೃಡಗೆ ಭೂಷಣನಾಗಿಹೆಡೆಯೊಳಗೆ ಮಾಣಿಕ್ಯವಿಟ್ಟುಕೊಂಡುಬಿಡದೆ ಶ್ರೀಹರಿಗೆ ಹಾಸಿಗೆಯಾದ ಫಣಿಪತಿಗೆಅಡವಿಯೊಳಗಣ ಹುತ್ತು ಮನೆಯಾಯಿತಯ್ಯ3ಮೂರು ಲೋಕದ ಒಡೆಯ ಮುಕ್ಕಣ್ಣನೆಂಬಾತಸಾರುತಿದೆ ಸಟೆಯಲ್ಲ ವೇದವಾಕ್ಯಪಾರ್ವತೀ ಪತಿಯಾದ ಕೈಲಾಸದೊಡೆಯನಿಗೆಊರ ಹೊರಗಣ ಮಸಣ ಮನೆಯಾಯಿತಯ್ಯ4ಮೀರಲಳವಲ್ಲವೋ ಮುನ್ನ ಮಾಡಿದ್ದುದನುಯಾರು ಪರಿಹರಿಸಿಕೊಂಬವರಿಲ್ಲವೊಮಾರಪಿತ ಕಾಗಿನೆಲೆಯಾದಿಕೇಶವರಾಯಕಾರಣಕೆಕರ್ತನೀ ಕಡೆ ಹಾಯಿಸಯ್ಯ5
--------------
ಕನಕದಾಸ