ಒಟ್ಟು 324 ಕಡೆಗಳಲ್ಲಿ , 54 ದಾಸರು , 270 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆನಂದ ಲಹರಿ (ಪಾರಮಾರ್ಥ ಮುಯ್ಯದ ಹಾಡು ) ಗಿರಿಜೇಶ ಮನೋಜಾತಾ ಸುರಮುನಿಜನಪ್ರೀತಾ ಕರುಣಾ ಸಾಗರ ಗಣನಾಥಾ ಜಗವದನಾ ಚರಣಕೆ ಶರಣೆಂದು ಬಲಗೊಂಬೆ ಕೋಲೆ 1 ಸಕಲಾ ಮುಖದೊಳು ಯುಕುತಿಯ ನುಡಿಗಳಾ ಪ್ರಕಟದಿ ನುಡಿಸುವೆ ಜನನಿ ಸರಸ್ವತಿ ಭಕುತಿಲಿ ಶರಣೆಂಬೆ ಕಲ್ಯಾಣಿ 2 ಆಚ್ಯುತಾನಂತನೆ ಸಚ್ಚಿದಾನಂದನೆ ನೆಚ್ಚಿದ ಶರಣರ ಸುರಧೇನುವೆ ಅವಧೂತಾ ಎಚ್ಚರ ಕೊಟ್ಟು ಸಲಹಯ್ಯ 3 ಕರಿಯಾ ಮೊರೆಯ ಕೇಳಿ ಭರದಿಂದೊದಗಿ ಬಂದು ಕರದಿಂದಲೆತ್ತಿ ಸಲಹಿದೆ ಶ್ರೀಶಾ ಚರಣವದೋರಿ ಕಾಯಯ್ಯ 4 ಶರೀರ ಒಂದರಲಿದ್ದು ನರನಾರೀರೂಪದಲಿ ಚರಿತವ ದೋರದೆ ಅನುಪಮ ಶಂಕರ ಕರುಣಿಸು ಫಣಿಗಣ ಭೂಷಣಾ 5 ಅಂಜನೀಸುತನಾಗಿ ಕಂಜನಾಭವ ಸೇವೆ ರಂಜಿಸುವಂತೆ ಮಾಡಿದ ದೈತ್ಯರ ಭಂಜನ ಹನುಮಂತ ಕರುಣಿಸು6 ಚಾರು ಚರಿತಗಳ ತೋರಿದೆ ಜಗದೊಳು ಮುನಿರಾಯಾ ಸುಖತೀರ್ಥ ತಾರಕ ಶರಣರ ನಿಜಗುರು7 ಮೇದನಿಯೊಳಗುಳ್ಳ ಸಾಧು ಸಂತರ ನಿಜ ಅನುದಿನ ಜಗದೊಳು ಸಾದರದಿಂದ ನೆನೆಯುತ 8 ಶರಣವ ಹೊಕ್ಕರ ಕರುಣದಿಂದಲಿ ನೋಡಿ ತರುಣೋಪಾಯವ ತೋರುವಾ ಮಹಿಪತಿ ಗುರುರಾಯ ನಿನ್ನ ಬಲಗೊಂಬೆ9 ಕರುಣವಾಗಲು ಅವರ ಪರಮ ಮೂಕನಜ್ಜಿಹ್ವಾ ಸುರಸ ಮಾತುಗಳ ಆಡೋದು ಹುಸಿಯಲ್ಲ ಧರೆಯೊಳು ಅನುಭವವಿದು10 ಅವರಾಮಹಿಮೆಗಳ ವಿವರಿಸಿ ಹೇಳಲು ಹವಣವೆಲ್ಲಿಹುದು ಮನುಜಗ ಭಕುತರು ಅವನಿಲಿಬಲ್ಲರು ನಿಜಸುಖ 11 ಏನೆದು ಅರಿಯದಾ ಹೀನ ಅಜ್ಞಾನಿಯು ನ್ಯೂನಾರಿಸದೇ ಸಲಹಯ್ಯಾ ಮಹಿಪತಿ ದೀನೋದ್ಧಾರಕಾ ಕರುಣಿಸು 12 ಪದುಮನಾಭನ ಭಕ್ತಿ ಚದುರಾ ಮುತ್ತೈದೇರು ಒದಗಿನ್ನು ಬನ್ನಿ ಹರುಷದಿ ಮುಪ್ಪದಾ ಉದಿತಾ ನುಡಿಗಳ ಕೇಳಲು 13 ವಿವೇಕಬೋಧಿಯಂತ ನಾವಕ್ಕತಂಗೇರು ದೇವಗುರುರಾಯನ ಮಕ್ಕಳು ನಿಜಶಕ್ತಿ ಭುವನದಿ ನಮ್ಮಾ ಹಡೆದಳು 14 ಸುಜ್ಞಾನ ವೈರಾಗ್ಯ ಸಂಜ್ಞದಿ ಮೆರೆವರು ಪ್ರಾಜ್ಞರು ನಮ್ಮಣ್ಣಾ ತಮ್ಮರು ಹರಿಭಕ್ತಿ ಮಜ್ಞರು ಅವರಿಗೆ ಸರಿ ಇಲ್ಲಾ 15 ಭಕ್ತಿಯ ತೌರಮನಿ ಶಕ್ತಿಯ ಬಲದಿಂದ ಯುಕ್ತೀಲಿ ನಾವು ಬರುತೇವು ಹರಿಭಕ್ತಿ ಭೋಕ್ತರು ನೀವು ಬರಬೇಕು 16 ದಿವ್ಯಾಂಬರವನುಟ್ಟು ಸುವಿದ್ಯಾ ಇಡಗಿಯು ತೀವಿದರ ಅರಹು ಅಂಜನಾ ವನೆ ಇಟ್ಟು ಸುವಾಸನೆಯ ಪುಷ್ಪ ಮುಡಿದಿನ್ನು 17 ಈರೆರಡು ಭೇರಿಯ ಸಾರಿಸಿ ಎಡಬಲಕ ಆರು ವಂದಣಾ ನಡಸೂತ ಕಹಳೆಗಳು ಮೂರಾರು ಊದಿಸುತೆ ಬರುತೇವು 18 ಸಾಧನ ನಾಲ್ಕರ ಕುದುರೆಯ ಕುಣಿಸುತ ಒದಗಿದ ಪ್ರೇಮದ ಮದ್ದಾನಿ ಯೊಡಗೂಡಿ ಚದುರೇರು ಮುಯ್ಯ ತರುತೇವು 19 ಭಾವದ ಬಯಲಾಟ ಆವಾಗ ಆಡುತ ಸಾವಧ ಮುಯ್ಯಾ ತರುತೇವು ನುಡಿಗಳ ನೀವಾತ ಕೇಳಿ ಜನವೆಲ್ಲಾ 20 ಮೆರೆವಾಭಿಮಾನಿಯು ಇರುವ ಸೋದರ ಮಾವ ಅರಸಿ ವಿಷಯಯೆಂಬತ್ತೆರಯರ ಮನಿಗೀಗ ಭರದಿಂದ ಮುಯ್ಯ ತರುತೇವು 21 ರಾಯ ಅಭಿಮಾನಿ ಸಿರಿಯದ ಸಡಗರ ನಾ ಏನ ಹೇಳಲಿ ಜಗದೊಳು ಪಸರಿಸಿ ತಾ ಎಡ ಬಲವನು ನೋಡನು 22 ಏಳು ಸುತ್ತಿನ ಗೋಡಿ ಮೇಲಾದ ಮನಿಗಿನ್ನು ಸಾಲಾದ ಒಂಭತ್ತು ಬಾಗಿಲು ಚಲುವಾದ ಮ್ಯಾಲಿಹ ಒಂದೊಂದು ಗಿಳಿಗಳು 23 ಅಂಗಳ ಹೋಗಲಿಕ್ಕೆ ಕಂಗಳ ಲೇಸಕಂಡೆ ಮಂಗಳವಾದ ಉಪ್ಪರಿಗೆ ಥರಥರ ರಂಗ ಮಂಟಪ ನಡುವಂದು24 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಚಾವಡಿರಾಯನ ಸೌಖ್ಯಕ ಪೊಡವಿಲಿ ಸರಿಯಾ ಕಾಣೆನು 25 ಎಂಟು ದಿಕ್ಕಿಗೆ ನೋಡೀ ಘಂಡೆಯ ಕಟ್ಟಿದ ಎಂಟು ಆನೆಯಾ ಘಡಘಾಡಿ ತಲಿಯಲಿ ಉಂಟಾದ ಗುರುತರದ ಅಂಕೂಶಾ 26 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಆನೆಯಾ ಘಡಘೂಢೀ ಥಳೀಐಳೀ ಊಂಠಾಧ ಘೂಋಊಥೃಧ ಆಂಖೂಶಾ 26 ಐದೈದು ಸಾಲಕ ಐದೈದು ಕುದುರೆಯು ಐದೈದು ಭಂಟರು ಅದಕಿನ್ನು ಅನುದಿನ ಮೈದಡುವುತಾ ಏರುವರು27 ಹತ್ತು ಮಂದಿಯಾ ಆಪ್ತರು ಮನರಾಯಾ ಒತ್ತಿ ಆಳುವ ಪ್ರಧಾನಿ 28 ಅನುವಾದ ಗುಣತ್ರಯಾ ಅನುಜರು ಈತಗೆ ಅನುಭವಿ ಒಬ್ಬ ಇದರೊಳು ಹರಿನಾಮಾ ನೆನೆವನು ಅನ್ಯ ಹಂಬಲವಿಲ್ಲಾ 29 ನಾಕಾವಸ್ಥೆಗಳೆಂಬಾ ನಾಕು ಒಳ ಮನೆಗಳು ಇಕ್ಕಿಹದೊಂದು ಅದರೊಳು ಭಂಡಾರ ಬೇಕಾದವರೆ ತೆರೆವರು 30 ಈರಾಯ ನೈಶ್ವರ್ಯ ಆರು ಬಣ್ಣಿಸುವರು ಆರೊಂದು ಮಂದಿ ಮಕ್ಕಳು ಹೆಸರಾದ ಪರಿಯಾಯ ಕೇಳಿ ಹೇಳುವೆ 31 ಮೊದಲು ಕಾಮ ಕ್ರೋಧವೊದಗಿ ಲೋಭಮೋಹ ಮದಮತ್ಸರೆಂಬ ಬಾಂಧವರು ನಿಜ ತಂಗಿ ವಿದಿತ ಅಜ್ಞಾನಿ ಶಕ್ತಿಯು 32 ಬಂದು ಹೊರಗನಿಂತು ಒಂದು ಜಾವಾಯಿತು ಮುಂದಕ ನಮ್ಮ ಕರಿಯಾರು ನಾವರಸಿ ಕಂದಿದ ಮಾರೀ ತೋರಳು 33 ಪಶ್ಚಾತಾಪವೆಂಬ ಬಿಚ್ಚಿ ಹಾಸಿಗೆ ಹಾಸಿ ತುಚ್ಚರ ದೂರ ಝಾಡಿಸೀ ಬರುತೇವು ಎಚ್ಚರ ಲೋಡಾ ತಂದಿರಿಸಿ 34 ಈ ಕಲ್ಲ ಮ್ಯಾಲದ್ದು ಈ ಕಲ್ಲಿಗ್ಹಾರುವಾ ತಾ ಕೋಡಗನಾ ಗುಣದಂತೆ ಭಾವಯ್ಯ ಆ ಕಾಮಣ್ಣನ ಕರಿಯಾರೆ35 ಎಷ್ಟು ಉಂಡರ ದಣಿಯಾ ಎಷ್ಟು ಇಟ್ಟರ ದಣಿಯಾ ಎಷ್ಟು ಉಟ್ಟರ ದಣಿಯಾನು ಕಾಮಣ್ಣ ಎಷ್ಟು ಕೊಟ್ಟರ ದಣಿಯಾ 36 ಒಳ್ಳೆವರರಿಯನು ಹೊಲ್ಲವರರಿಯನು ಕೊಳ್ಳಿಕಾರನಾ ಮತಿಯಂತೆ ಭಾವಯ್ಯ ನಿಲ್ಲರು ಈತನ ಇದರೀಗೆ 37 ಈತನ ತಮ್ಮನು ಮಾತು ಮಾತಿಗೆ ಬಹಳಾ ಖ್ಯಾತಿಯ ತಾನು ಪಡೆದಾನು ಕೋಪಣ್ಣ ಆತನ ಮುಂದಕ ಕರಿಯಾರೆ 38 ನೆಂಟರ ಅರಿಯನು ಇಷ್ಟರ ಅರಿಯನು ಬಂಟರಾ ಮೊದಲೇ ಅರಿಯನು ತಪಸಿಗೆ ಕಂಟರನಾದಾ ಈತನೇ 39 ಥರ ಥರ ಕುಣಿವುತ ಘರ ಘರ ಹಲ್ಲು ತಿಂದು ನೆರೆಮೋರೆ ಕೆಂಪು ಮಾಡುವಾ ಕೋಪಣ್ಣಾ ಸ್ಮರಣೆಯಾ ತನ್ನ ಮರೆವನು 40 ಕಂಡವರಿಗೆ ತಾನು ಕೆಂಡದ ನುಡಿಯಾಡಿ ಖಂಡಿಸಿ ಬಿಡುವಾ ಗೆಳತನಾ ಕೋಪಣ್ಣ ಹಿಂಡುವ ಹಿಡಿದು ಪ್ರಾಣವ41 ತಾನಾರೆ ಉಣ್ಣನು ಜನರಿಗೆ ಇಕ್ಕನು ಜೇನಿನನೊಣದಾ ಗುಣದಂತೆ ಲೋಭೇಶಾ ದೀನನ ಮುಂದಕ ಕರಿಯಾರೆ42 ಬಿಚ್ಚಾರುವಿಯನು ವೆಚ್ಚಮಾಡೆಂದಿಗೆ ಬಚ್ಚಿಟ್ಟು ಹೂಳಿನೆಲದೊಳು ಲೋಭೇಶಾ ಹುಚ್ಚಾಗಿ ಕಾಯ್ದಾ ಫಣಿಯಂತೆ43 ಕಾಸು ಹೋದಾವೆಂದು ಅಸುವ ಹೋಗುವವರಿ ಕಾಸಾವೀಸಿಯಾ ಬಡವನು ಲೋಭೇಶಾ ಹೇಸನು ಎಂದು ಮತಿಗೇಡಿ 44 ಇಳೆಯೊಳೀ ಪರಿಯಲೀ ಗಳಿಸಿದ ಧನವನು ಕಳೆದುಕೊಂಬರು ಅರಸರು ಕಡಿಯಲಿ ಶೆಳೆದು ಕೊಂಡನು ಪುಗಸಾಟೆ 45 ಇವರಿಂದ ಕಿರಿಯನಾ ಹವಣವ ನೋಡೀರೆ ಅವಗುಣದ ರಾಶಿ ಜಗದೊಳು ಮೋಹಾಂಗಾ ಅವನಾ ಮುಂದಕ ಕರಿಯಾರೇ 46 ತಾಯಿ ತಂದೆಗಳ ನ್ಯಾಯನೀತಿಗಳಿಂದ ಸಾಯಾಸದಿಂದ ಭಕ್ತಿಯ ಮಾಡದೆ ಮಾಯದಾ ಬಲಿಗೊಳಗಾದಾ 47 ಏನು ಬೇಡಿದುದೆಲ್ಲಾ ಪ್ರಾಣವವೆಚ್ಚಿಸಿ ಮಾನಿನೀಯರಿಗೆ ಕುಡುವನು ಮೋಹಾಂಗಾ ಮನವಿಡ ಒಳ್ಳೆವರ ಸೇವೆಗೆ 48 ಲೆಕ್ಕ ವ್ಯವಹಾರವಾ ಲೆಕ್ಕದಿ ಮಾಡದೇ ಮಕ್ಕಳಾಟಕಿಯ ಮಾಡುವಾ ಕ್ರೀಡೆಯಾ ನಕ್ಕಾರೆಂಬ ಸ್ಮರಣಿಲ್ಲಾ 49 ಕಮಲದ ವಾಸನೆಗೆ ಭ್ರಮರವು ಸಿಕ್ಕಿದ ಕ್ರಮದಿಂದ ನೋಡಿ ಸೆರೆಯಾದಾ ಶ್ರೀವಧು ರಮಣನ ನಾಮಾ ನೆನಿಯನು 50 ತರುವಾಯದವನೀತಾ ದುರುಳನ ನೋಡಿರೆ ಮರಳು ಬುದ್ಧಿಯಾ ಮದರಾಯಾ ಆತನಾ ಸರಕು ಮಾಡುವಾ ಕರಿಯಾರೆ 51 ಹೊರಸು ತೊಯ್ಯದಂತೆ ಭರ್ರನೆ ಬಿಗಿವನು ಶರಣರ ಕಂಡು ಬಾಗನು ತಲೆಯನು ಅರಿತವರಿಗೇನಾ ಹೇಳಲಿ 52 ಬಗೆಯಾದೆ ಹಿತವನು ಪಗಡಿಪಂಚಿಗಳಾಡಿ ಹಗಲಿನಾ ಹೊತ್ತುಗಳೆವನು ರಾತ್ರೀಲಿ ಮುಗುಧೇಯರೊಡನೆ ಒಡನಾಟಾ 53 ಕಣ್ಣಿಲ್ಲದಾನೆಯು ಚನ್ನಾಗಿ ತಿರುಗುತ ಮುನ್ನ ಬತ್ತಿದಾ ಬಾವಿಯ ಬೀಳ್ವಂತೆ ಕಣ್ಣೆದ್ದು ಕುರುಡನಾದನು&
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರತಿ ಬೆಳಗುವೆನಾ :ಮಹಿಪತಿ ಗುರುವಿನಾ ದೋರುವ ಪಾದುಕಿಗೆ :ಒಪ್ಪಿಸಿ ಜೀವಪ್ರಾಣ ಪ ಜಡಜೀವತಾರಿಸಲಿ :ವಸ್ತುಗುರುರೂಪತಾಳಿ ಪೊಡವಿಲಿನ್ನು ಮಹಿಮೆದೋರಿ ನಿಂತ ವಿಶ್ವಾತ್ಮದಲ್ಲಿ 1 ಇದ್ದಲ್ಲೆ ಭಾವಿಸಲಿ ಗುರುಜ್ಞಾನದಾಕೀಲಿ ಬುದ್ಧಿಪ್ರೇರಕನಾಗಿ ಹೇಳುವನು ಮೌನದಲಿ2 ಉದ್ಧವಗಯದುರಾಯಾ ನೀಡಿದಂತೆ ನಮ್ಮಯ್ಯಾ ಮುದ್ದು ಪಾದುಕೆಯಾಕೊಟ್ಟು ಮಾಡೆಂದು ಪೂಜೆಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆವ ಜನುಮ ಸಖನೇ ನಮ್ಮಯ್ಯಾ ಪ ಅವಿದ್ಯ ಬಲಿಯೊಳು ಸಿಲುಕಿ ಬಳಲುವನ | ಸುವಿದ್ಯ ನೋಟದ ಕರುಣವ ಬೀರಿದನಾ1 ಏನರಿಯದಲಿರೆ ವಿಷಯ ಮದಾಂಧದಿ | ಜ್ಞಾನಾಂಜನವ ಮಾಡಿ ಕಂಗಳದೆರಿಸಿದನಾ 2 ಹೃದಯ ಭೂಮಿಗೆ ಹರಿ ನಾಮಬೀಜವ ಬಿತ್ತಿ | ಸದಮಲ ಭಕುತಿಯ ಬೆಳೆಗಳ ನುಣಿಸಿದನಾ 3 ಕೇಳದ ನುಡಿಗಳ ಹೇಳುತ ಕಿವಿಯೊಳು | ಕಾಲ ಕಾಲಕ ಎನ್ನ ಹಿತವನೆ ಯೋಜಿಪನಾ4 ತಂದೆ ಮಹಿಪತಿ ಕಂದನೆನಿಸಿತ್ತ ನಾ | ಪರ ಭಾಗ್ಯವ ನೀಡಿದನಾ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆವ ಸಿರಿಯಲಿ ನೀನು ಎನ್ನ ಮರೆತೆದೇವ ಜಾನಕೀರಮಣ ಪೇಳು ರಘುಪತಿಯೆ ಪ ಸುರರ ಸೆರೆಯನು ಬಿಡಿಸಿ ಬಂದೆನೆಂಬಾ ಸಿರಿಯೆಕರಿ ಮೊರೆಯ ಲಾಲಿಸಿದೆನೆಂಬ ಸಿರಿಯೆಶರಧಿಗೆ ಸೇತುವೆಗಟ್ಟಿದೆನೆನ್ನುವಾ ಸಿರಿಯೆಸ್ಥಿರವಾಗಿ ಹೇಳೆನಗೆ ಹೇಳು ರಘುಪತಿಯೆ 1 ಕಡಲೊಳಗೆ ಮನೆಮಾಡಿ ಮಲಗಿದೆನೆಂಬಾ ಸಿರಿಯೆಮೃಢ ನಿನ್ನ ಸಖನಾದನೆಂಬ ಸಿರಿಯೆಬಿಡದೆ ದ್ರೌಪದಿ ಮಾನ ಕಾಯ್ದೆನೆಂಬಾ ಸಿರಿಯೆದೃಢವಾಗಿ ಹೇಳೆನಗೆ ದೇವಕೀ ಸುತನೆ2 ಭೂಮಿಯನು ಮೂರಡಿಯ ಮಾಡಿದೆನೆಂಬ ಸಿರಿಯೆಕಾಮ ನಿನ್ನ ಸುತನಾದನೆಂಬ ಸಿರಿಯೆಆ ಮಹಾಲಕುಮಿ ನಿನ್ನ ಸತಿಯಾದಳೆಂಬ ಸಿರಿಯೆಪ್ರೇಮದಲಿ ಹೇಳೆನಗೆ ಸ್ವಾಮಿ ಅಚ್ಯುತನೆ 3 ಮನುಜರೆಲ್ಲರು ನಿನ್ನ ಸ್ತುತಿಸುವರೆಂಬ ಸಿರಿಯೆಹನುಮ ನಿನ್ನ ಬಂಟನಾದನೆಂಬ ಸಿರಿಯೆಬಿನುಗು ದೈವಗಳು ನಿನಗೆಣೆಯಿಲ್ಲವೆಂಬ ಸಿರಿಯೆಅನುಮಾನ ಮಾಡದೆ ಪೇಳೊ ನರಹರಿಯೆ 4 ಇಂತು ಸಿರಿಯಲಿ ನೀನು ಎನ್ನ ಮರೆತರೆ ಸ್ವಾಮಿಪಂಥವೇ ನಿನಗಿಚಿದು ಆವ ನಡತೆಕಂತುಪಿತ ಕಾಗಿನೆಲೆಯಾದಿಕೇಶವ ರಂಗಚಿಂತೆಯನು ಬಿಡಿಸಿ ಸಂತೋಷವನು ಪಡಿಸೊ5ಚಿ
--------------
ಕನಕದಾಸ
ಆವಾವ ಬಗೆಯಿಂದ ಹರಿಗರ್ಪಿಸೊ ಭಾವ ಶುದ್ಧನಾಗಿ ಮುಖ್ಯತ್ವ ವಹಿಸದೆ ಪ ನೋಡುವ ನೋಟಗಳು ಹರಿಯೆ ನೋಡಿದನೆನ್ನಿ ಆಡುವ ಮಾತುಗಳು ಹರಿಯೆ ಆಡಿದನೆನ್ನಿ 1 ನಡಿವ ನಡಿಗೆ ಎಲ್ಲ ಹರಿಯೆ ನಡೆದನೆನ್ನಿ ಕೊಡುವ ದಾನಗಳು ಹರಿಯೆ ಕೊಟ್ಟನೆನ್ನಿ ಒಡನಾಡುವ ಲೀಲೆ ಹರಿಯೆ ಆಡಿದನೆನ್ನಿ ಪಿಡಿವ ಚೇಷ್ಟೆಗಳೆಲ್ಲ ಹರಿಯೆ ಪಿಡಿದನೆನ್ನಿ 2 ಕೇಳುವ ಶಬ್ದಗಳು ಹರಿಯೆ ಕೇಳಿದನೆನ್ನಿ ಹೇಳುವ ವಿಧವನಿತು ಹರಿಯೆ ಎನ್ನಿ ಮಾಲೆ ಧರಿಸುವುದು ಹರಿಯೆ ಧರಿಸಿದನೆನ್ನಿ ಮೇಲು ಸುಖ ಬಡುವುದು ಹರಿಯೆ ಎನ್ನಿ3 ಕೊಂಡ ಎನ್ನಿ ಭೂಷಣವಿಡುವುದು ಹರಿಯೆ ಎನ್ನಿ ಲೇಸು ಬಯಸುವುದು ಹರಿಯೆ ಬಯಿಪನೆನ್ನಿ ಗ್ರಾಸ ಮೆಲುವದೆಲ್ಲ ಹರಿಯೆ ಎನ್ನಿ 4 ಸತಿಯ ಕೂಡುವದೆಲ್ಲ ಹರಿಯೆ ಕೂಡಿದನೆನ್ನಿ ಹಿತವಾಗಿಪ್ಪದು ಹರಿಯೆ ಎನ್ನಿ ಸುತರ ಪಡೆದಾದಲ್ಲಿ ಹರಿಯೆ ಪಡೆದನೆನ್ನಿ ಪ್ರತಿಕೂಲವಾಗುವುದೆ ಹರಿಯೆ ಎನ್ನಿ 5 ಬಳಗ ಸಾಕುವುದೆಲ್ಲ ಹರಿಯೆ ಸಾಕಿದನೆನ್ನಿ ಸುಲಭನಾದರೆ ಹರಿಯಾದನೆನ್ನಿ ಗಲಭೆ ಮಾಡುವುದೆಲ್ಲ ಹರಿಯೆ ಮಾಡಿದನೆನ್ನಿ ಸುಳಿದಾಡುವುದೆಲ್ಲ ಹರಿಯೆ ಎನ್ನಿ 6 ಏನೆಂಬೆ ಹರಿ ಲೀಲೆ ನಿರ್ದೋಷ ನಿಸ್ಸಂಗ ಅನಂತಕಾಲಕ್ಕೂ ಎಲ್ಲಿದ್ದರು ಕಾಯ ವಿಜಯವಿಠ್ಠಲರೇಯ ನಾನಾ ವ್ಯಾಪಾರಗಳ ಮಾಳ್ಪನೆನ್ನಿ 7
--------------
ವಿಜಯದಾಸ
ಇಂದಿರಾರಮಣನ ಮಂದಿರದಲ್ಲೆ ನಾ- ರಂದ ತಾ ಬರುತಿರಲು ಕಂಡು ಕೃಷ್ಣನು ಕರೆತಂದು ಮನ್ನಿಸಿ ಬಂದಕಾರಣವೇನೆಂದನು 1 ಕಾರಣವೇನುಂಟು ಕಾರಣಪುರುಷನ ಕಾಣಬೇಕೆಂದೆನುತ ಕಾಮಿಸಿಬಂದೆನೊ ಕೊರಳ ತುಳಸಿ ಮಾಲೆ ನೀಡೊ ನೀ ಎನಗೆಂದನು2 ಏನು ಬೇಡಿದರು ನಾ ಕÉೂಡುವೆನು ನಾರಂದ ಪ್ರಾಣಪದಕ ತುಳಸಿ ನೀಡಲಾರೆನೊ ಮುತ್ತಿನ್ಹಾರವ ಕೊಡುವೆ- ನೆಂದು ಹೇಳುತಿದ್ದನು ಹರಿಯು 3 ನೀಡದಿದ್ದರೆ ನಾನು ಬೇಡಿ ಬಿಡುವನಲ್ಲ ನೋಡಿಕೋಯೆಂದೆನುತ ಆಡಿದ ಮಾತು ತಪ್ಪುವರುಂಟೆ ಶ್ರೀಕೃಷ್ಣ ಹೋಗಿಬರುವೆನೆಂದನು 4 ಸತ್ಯಭಾಮೆಯ ಮನೆ ಹೊಕ್ಕನು ನಾರಂದ ಹೆತ್ತಮ್ಮ ಕೇಳೆನುತ ಸುತ್ತಿಬಂದೆನು ಸುರಲೋಕದ ವಾರ್ತೆಯ ವಿಸ್ತರಿಸ್ಹೇಳುವೆನು 5 ಇಂದ್ರಲೋಕದಲಿ ದೇವೇಂದ್ರ ಶಚಿಯ ಕೂಡ್ಯಾ ನಂದದಿ ಕುಳಿತಿದ್ದನೆ ಅ- ಲ್ಲಿಂದ ಕೈಲಾಸ ಮಾರುದ್ರ ಪಾರ್ವತಿದೇವಿ ಚೆಂದವನ್ವರಣಿಸಲೆ 6 ಸತ್ಯಲೋಕದಿ ಸರಸ್ವತಿ ಕೂಡಿ ಬ್ರಹ್ಮ ಭಾ ಳುತ್ಸವದಿಂದಿದ್ದನೆ ಹಸ್ತಿನಾವತಿಯ ಪಾಂಡವರು ದ್ರೌಪದಿದೇವಿ ಅರ್ಥಿಯ ನೋಡಿ ಬಂದೆ 7 ದ್ವಾರಾವತಿಗೆ ಬಂದೆ ದೇವಿ ನಿಮ್ಮರಸನು ನಾರಿ ರುಕ್ಮಿಣಿ ಸಹಿತ ಭಾಳ ಸಂಭ್ರಮದಿಂದ ಕುಳಿತಿದ್ದ ಕಣ್ಹಬ್ಬವಾಗಿ ನಾ ಬಂದೆನಿಲ್ಲೆ 8 ಕರೆದು ರುಕ್ಮಿಣಿ ಕರದಿಂದೆ ಆಲಂಗಿಸಿ ತೊಡೆಯಮ್ಯಾಲಿಟ್ಟಿದ್ದನೆ ಅರಳುಮಲ್ಲಿಗೆ ತುರುವಿ(ಬೀ) ನಲ್ಲಿಟ್ಟು ನಿನಗಿನ್ನು ಸರಿಯಿಲ್ಲವೆಂತೆಂಬನೆ 9 ಹಾರಪದಕ ಇಬ್ಬರಿಟ್ಟಾಭರಣ ಬ್ಯಾರೆ ಬ್ಯಾರಾಗಿ ತೋರವಲ್ಲೆ ಸೂರ್ಯಚಂದ್ರರು ಕೂಡಿದಂಥ ಮುಖವು ನೋಡಿ ನಾ ಬೆರಗಾಗಿದ್ದೆನೆ 10 ಸತ್ಯಭಾಮೆಯೆ ನಿನ್ನ ಹೆತ್ತ ತಾಯಿತಂದೆ ಮಿರ್ತಾಗಿದ್ದರೆ ನಿನಗೆ ಕೊಟ್ಟರೀ ಕಪಟನಾಟಕ ದಯಹೀನಗಿ- ನ್ನೆಷ್ಟು ನಾ ಸೈರಿಸಲೆ 11 ಒಂದೊಂದು ಗುಣಗಳ ವರಣಿಸಲಿಕ್ಕೆ ಹ ನ್ನೊಂದೊ (ದ್ವ?) ರುಷವು ಸಾಲದೆ ಕಂಡು ಬಂದ್ವಾರ್ತೆಯ ಖರೆಯ ನಾ ಹೇಳುವೆ ಸಂದೇಹ ಮಾಡದಿರೆ 12 ಕೇಳಿ ಸತ್ಯಭಾಮೆ ತಾಳಲಾರದೆ ಮುನಿ ಪಾದದ ಮ್ಯಾಲೆ ಬಿದ್ದು ಹೇಳಿ ಉಪಾಯ ಮುಂದಕೆ ಪೋಗೊ ಶ್ರೀ- ಕೃಷ್ಣ ತಾನೊಲಿದಿರುವಂದದಿ13 ದಾನವಾಂತಕÀನ ನೀ ದಾನವÀ ಮಾಡಲು ದಾವಜನ್ಮಕÀು ನಿನ್ನನು ತಾನಗಲದೆ ಮುಂದೆ ಸೇರಿಕೊಂಡಿರುವೊ ಉಪಾಯ ಹೇಳುವೆನೆಂದನು 14 ರಂಗರಾಯನ ಕರೆತಂದುಕೊಟ್ಟವರಿಗೆ ಹಿಂಗದೆ ಸೌಭಾಗ್ಯವ ಎಂದೆಂದಿಗವರ ರಕ್ಷಿಸುವೋನೆಂದೆನುತಲಿ ಅಂಗನೆಯರನಟ್ಟಿದಳು 15 ದೂತೇರ ಸಹಿತಾಗಿ ಬಂದು ತಾ ಭರದಿಂದೆ ಪ್ರೀತಿಲೆ ಸತ್ಯಭಾಮ ಮಾತುಳಾಂತಕ ನಮ್ಮ ಮನೆಗೆ ಬಾರೆನುತ ಶ್ರೀ- ನಾಥನೆಯೇಳೆಂದಳು16 ಮಡದಿ ರುಕ್ಮಿಣಿ ಭಾಮೆ ಮಂದಿರಕ್ಕೊ ್ಹೀಗುವೆ ಕಡುಕೋಪ ಮಾಡದಿರೆ ತಡೆಯದೆ ನಾಳೆ ಬರುವೆನೆಂದು ಶ್ರೀಕೃಷ್ಣ ಗ- ರುಡನ ಹೆಗಲೇರಿದ 17 ವಾರಕಾಂತೆಯರು ಬಾಜಾರ ಮಧ್ಯದಿ ಸೋಳಸಾವಿರ ಸತಿಯರನೆ ವಾರೆನೋಟದಿ ನೋಡಿ ನಗುತ ಸತ್ಯಭಾಮೆ ಬಾಗಿಲ ಮುಂದಿಳಿದ 18 ಎದುರಿಗೆ ನಿಂತು ತಾ ಚೆದುರೆ ಸತ್ಯಭಾಮೆ ಪದುಮ ಪಾದಕೆ ಎರಗಿ ಮುದದಿಂದ ಮುದ್ದು ಶ್ರೀಕೃಷ್ಣನ ಮುಂಗೈಯ್ಯ ಪಿಡಿದು ತಾ ನಡೆದಳಾಗ 19 ಕೃಷ್ಣರಾಯನೆ ನಿನ್ನ ಕೊಟ್ಟೇನು ದಾ ನವ ಬಿಟ್ಟೆನ್ನ ಅಗಲದಂತೆ ಸತ್ಯಭಾಮೆಯ ನೋಡಿ ನಗುತ ಈ ಕಾರ್ಯ ಅ- ಗತ್ಯಮಾಡೆಂದೆನುತ 20 ಎರೆದು ಪೀತಾಂಬರವುಡಿಸಿ ಮಾಣ Âಕ್ಯದ ಆ- ಭರಣವ ತಂದಿಟ್ಟಳು ತರಿಸಿ ತಾಂಬೂಲ ದಕ್ಷಿಣೆಯನ್ನು ಬ್ರಾಂಬರ ಕÀರೆಸಿದಳಾಕ್ಷಣದಿ 21 ಆಚಾರ್ಯ ನೀವ್ ಬನ್ನಿ ವಾಸುದೇವನ ದಾನ ಈ ಕ್ಷಣದಲ್ಲೆ ಕೊಡುವೆ ನಾಶರಹಿತ ನಮ್ಮ ಮನೆಯೊಳಗಿರಲಿಕ್ಕೆ ಗ್ರಾಚಾರವೇನೆಂದರು 22 ವಿದ್ಯಾರ್ಥಿಗಳು ಬನ್ನಿ ಮುದ್ದು ಶ್ರೀಕೃಷ್ಣನ ವಿಧ್ಯುಕ್ತದಲಿ ಕೊಡುವೆ ಮೂರ್ಜಗದೊಡೆಯ ತಾ ಮಂದಭಾಗ್ಯರ ಮನೇಲಿದ್ದಾನ್ಯಾತಕೆ ಎಂದಾರೆ 23 ಭಟ್ಟರೆ ನೀವ್ ಬನ್ನಿ ಸೃಷ್ಟಿಪತಿಯ ದಾನ ಕೊಟ್ಟು ಬಿಡುವೆನೆಂದಳು ಅಷ್ಟದರಿದ್ರರಿಗಾಲಕ್ಷ್ಮೀವಲ್ಲಭ ದಕ್ಕುವೋನಲ್ಲೆಂದರು 24 ಯತಿಗಳೆ ನೀವ್ ಬನ್ನಿ ಪೃಥಿವಿಗೊಡೆಯ (ನನು) ಹಿತದಿ ದಾನವ ಕೊಡುವೆ ಗತಿಯಿಲ್ಲ ನಮಗೆ ಶ್ರೀಪತಿ ಸಲಹÀಲು ನಿನ್ನ ಪತಿ ಬ್ಯಾಡ ನಮಗೆಂದರು&
--------------
ಹರಪನಹಳ್ಳಿಭೀಮವ್ವ
ಇಂದು ನಮ್ಮ ಮನಿಲಿ ಬ್ರಹ್ಮಾನಂದ ಬಂದು ಭಾವ ಪೂರಿಸಿದ ಮುಕುಂದ ಧ್ರುವ ಎನ್ನಮನಕೆ ಮಾಡಿದ ಮನೋಹರ ಚೆನ್ನಾಗೊಲಿದು ದೋರಿದ ಸಹಕಾರ ಮನ್ನಿಸೆನಗೆ ಬೀರಿದ ನಿಜಸಾರ ಇನ್ನೊಬ್ಬರಿಗ್ಹೇಳುದಲ್ಲೀ ವಿಚಾರ 1 ದಯದಿಂದ ಪಿಡಿದು ಎನ್ನ ಕೈಯ ಶ್ರೇಯ ಸುಖ ನೀಡಿದ ಪ್ರಾಣಪ್ರಿಯ ತ್ರಯ ಗುಣಾತೀತದ ಸುಖಾಶ್ರಯ ತ್ರೈಲೋಕದೊಳೆನಗೆ ವಿಜಯ 2 ಕಣ್ಣು ಪಾರಣಗೈಸಿದೆನ್ನ ನೋಡಿ ಎನ್ನೊಳನುಭವಾಮೃತಸಾರ ನೀಡಿ ಚಿಣ್ಣಮಹಿಪತಿ ಕೈವಶಗೂಡಿ ಧನ್ಯಧನ್ಯಗೈಸಿದ ದಯಮಾಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ರಂಗಾನಟ್ಟೂಳಿಗೆ | ಇರಲಾರೆವಮ್ಮಾ ನಾವುಬಂದುಪಾಯವ ಕಾಣೆವೆ | ವನಿತೆ ಗೋಪ್ಯಮ್ಮಾ ಕೇಳೆ ಪ ಹಿರಿಯರಾದವರಿಗೆ | ಭರದಿ ಪೇಳೇವೆಂದರೆಸರಸಿಜ ಸಂಭವನಿಗೆ ಹಿರಿಯನೀತ ಕಾಣಮ್ಮ 1 ಮಾಯಗಳ ಮಾಡಿ ನಾವೂ | ಹೊಯಿಲೆಬ್ಬಿಸೇವೆಂದರೆಮಾಯಾದೇವಿಗೆ ಸಿಗದೆ | ಮಾಯಾವ ತೋರುವನಮ್ಮ 2 ಗುಮ್ಮನ ತೋರಿದರೀಗಾ | ಒಮ್ಮೊಮ್ಮೊ ಲೆಕ್ಕಿಸನಮ್ಮ ಅಮ್ಮಮ್ಮ ಶ್ರೀ ನಾರಸಿಂಹ | ಅದ್ಭತಾದ ದೈವ ಕಾಣಮ್ಮ 3 ಅರಿವಿ ಸರ್ಪಾನ ಮಾಡಿ | ಭರದಿ ಅಂಜಿಸೇವೆಂದರೆಖರೆಯವಾಗಿದ್ದ ದೊಡ್ಡಾ | ಉರಗಶಾಯಿ ಕಾಣಮ್ಮ 4 ಅರಸರಿಗ್ಹೇಳಿದರೂ | ಬರಿದಾಗುವುದೇ ನಿಜಧರೆ ಗಗನ ಪಾತಾಳದ | ಅರಸನಲ್ಲವೇನಮ್ಮ 5 ಕಾಸು ವೀಸಾ ಕೈಯ್ಯಾಳಿಟ್ಟೂ | ಕೂಸಿಗೆ ಬುದ್ಧಿ ಹೇಳುವೆಕೋಶ ಭಾಗ್ಯದಭಿಮಾನಿ | ಶ್ರೀಶನೇ ಈಶ ಕಾಣಮ್ಮ 6 ಪಾಪದ ಭೀತಿ ತೊರದು | ಭೂಪ ರಂಗ ಅಂಜಾನಮ್ಮಪಾಪ ರಹಿತರಾದವರ | ತಪಸಿಗಳೊಡೆಯಾನಮ್ಮ 7 ಮ್ಯಾಣದ ಚೇಳು ತೋರುವೆ | ಜಾಣ ರಂಗ ಅಂಜಾನಮ್ಮಮೇಣು ಮೂವತ್ತಾರು ಲಕ್ಷ | ತಾಂ ಶಿಂಶುಮಾರಾನಮ್ಮ 8 ಅನ್ನ ವಸನಗಳಿತ್ತು | ಮನ್ನಿಸೆವೆಂದಾರೆ ಪುಸಿಕನ್ಯೆ ದ್ರೌಪದಿ ದುಮ್ಮಾನ | ಮುನ್ನೆ ಇದಕ್ಕೇ ಸಾಕ್ಷಿಯಲ್ಲೆ 9 ಅಣ್ಣ ತಮ್ಮಾ ಬಂಧೂ ಬಳಗ | ಜನರುಂಟೇನೆ ಹೇಳೇವೆಅನಾದಿ ಕಾಲದಿಂದಾ | ಘನ್ನ ತಾನೇ ಏಕಮೇವ 10 ಚಿಣ್ಣ ನೀ ಅಣ್ಣಾ ಬಾಯೆಂದು | ಮನ್ನಿಸೇವೆಂದಾರೆ ಪುಸಿಅನಂತ ವೇದಗಳಿವನ | ಬಣ್ಣಿಸಿ ಹಿಂದಾಗಲಿಲ್ಲೆ 11 ಊರು ಕೇರಿಗಳಾ ಬಿಟ್ಟು | ದೂರ ಬಾರ ಹೋದೇವೇನೆಸಾರ ವ್ಯಾಪ್ತನಾಗಿ ಇಪ್ಪಾ | ಯಾರಿಗೆ ದೂರುವೆನಮ್ಮಾ 12 ಕದ್ದು ಕದ್ದೋಡುವಾ ನಮ್ಮ | ಲಿದ್ದು ಪಿಡಿಯಾಲೊಶವಲ್ಲೆ ರುದ್ದರನ್ನಾ ಓಡೀಸಿದಾ | ಮುದ್ದು ರಂಗಾನಿವನಮ್ಮ 13 ಹಗ್ಗದಿ ಕಟ್ಟೀದರಾಗ | ಬಗ್ಗನಮ್ಮಾ ನಿನ್ನ ಮಗಅಗ್ಗಳೀಕೆ ಖಳರ ಉಕ್ಕು | ತಗ್ಗಿಸಿ ಬಂದಿಹಾನಮ್ಮ 14 ಇಂದು ನಿನ್ನಾ ಕಂದನಾಟಾ | ಚಂದಾವೆಂದೂ ವಂದಿಸುವೆವೆತಂದೆ ವ್ಯಾಸಾ ವಿಠಲೆ*ಮಗೆ | ಬಾಂಧವಾನಾದನು ಕಾಣೆ 15
--------------
ವ್ಯಾಸವಿಠ್ಠಲರು
ಇದೇ ನೋಡಿರೋ ನಿಜನೋಡಿರೋ ಧ್ರುವ ನೋಡಿನೋಡಿ ನೋಡಿ ನೋಡುದರೊಳು ಕೂಡಿ ನೋಡುವದೇನೆಂದು ನೋಡಿ ನೋಡಿದ ಮ್ಯಾಲಿನ್ನು ಮೂಡಿಬಂದರ ಘನ ನೋಡುವದೇ ಖೂನ ಮಾಡಿ ಮಾಡಿದ ಮಾಟವು ಕೂಡಿಬಂದರೆ ಕೈಯ ನಾಡಗೂಡ ಹೇಳಬ್ಯಾಡಿ ಗೂಢ ಗುಹ್ಯದ ಮಾತು ಒಡೆದು ಹೇಳುವದಲ್ಲಾ ನೋಡಿ ನಿಮ್ಮೊಳು ಬೆರೆದಾಡಿ 1 ಓದಿದರೋದಬೇಕಿದೊಂದೇ ಅಕ್ಷರ ಭೇದಿಸುವಂತೆ ಬ್ರಹ್ಮಾಂಡ ಇದೇ ಸಾಧಿಸಿನ್ನು ಮೂಲವ ತಿಳಿಯದೆ ಓದುವದ್ಯಾಕೆ ಉದ್ದಂಡ ಹಾದಿ ತಿಳಿಯದಿದ್ದರೆ ಹೇಳಿಕೊಡುವನು ಸದ್ಗುರು ಘನಪ್ರಪಂಚ ಭೋದಿಸಿ ಬ್ರಹ್ಮಾನುಸಂಧಾನದ ಸುಖ ಉದಯ ಮಾಡುವ ಅಖಂಡ 2 ನಾನ್ಯ ಪಂಥವೆಂಬ ಮಂತ್ರದನುಭವ ಚನ್ನಾಗ್ಯಾಗಬೇಕು ಖೂನ ಇನ್ನೊಂದು ಬ್ಯಾರೆಂಬ ಭಿನ್ನವಳಿದ ಮ್ಯಾಲೆ ತನ್ನೊಳಾಯಿತು ಸಮ್ಯಕಙÁ್ಞನ ಧನ್ಯ ಧನ್ಯ ಧನ್ಯ ಧನ್ಯಗೈಸುವದಿದು ಕಣ್ಣಾರೆ ಕಾಂಬೊ ಸಾಧನ ಉನ್ಮತವಾಗದೆ ಸನ್ಮತದೋರದು ಇನ್ನೊಬ್ಬರ ಕೇಳುವದೇನ 3 ಸರ್ವಮಿದಂ ಖಲು ಬ್ರಹ್ಮವೆಂಬುವ ಮಾತು ದೋರ್ವಾಂಗೆ ನೆಲೆಗೊಳಬೇಕು ಸರ್ವ ಸಾಕ್ಷಿ ಸರ್ವಾಧಾರವು ತಿಳಿಯದೆ ಗರ್ವಿತಲ್ಯಾಡುವ ಮಾತು ಹೋತು ಗುರ್ವಿನಂಘ್ರಿಗಿನ್ನು ಗುರುತವ ಕೇಳದೆ ಮವ್ರ್ಹಿನೊಳೀಹುದು ಮುಸುಕು ನಿರ್ವಿಕಲ್ಪನ ನಿಜ ಸ್ಮರಿಸುವಾಂಗೆ ಕಣ್ಣ ದೆರ್ವದಿದೊಂದೇ ಸಾಕು 4 ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಎಂದು ಗುರುವಿಗೆ ಕೇಳಿ ನಿಜ ವಂದ ದೇಹದ ಒಳಗಿಹ್ಯ ದ್ಯಾವರ ತಿಳಿದರ ಜನ್ಮಕೆ ಬಂದುದು ಚಂದ ಸೋಹ್ಯ ಸೊನ್ನೆಯ ಗುಹ್ಯವ ತಿಳಿದರ ಭವ ಮೂಲದಿಂದ ಬಾಹ್ಯಾಂತ್ರ ಪರಿಪೂರ್ಣ ಭಾಸುತಲ್ಯದೆ ಮಹಿಪತಿಗಿದೆ ಬ್ರಹ್ಮಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಈ ತನುವಿನೊಳಗೆ ಅನುದಿನವಿದ್ದು ಎನಗೊಂದು ಮಾತ ಹೇಳದೆ ಹೋದಿ ಹಂಸ ಪ. ಜಾಳಂಧರಯೆಂಬೊ ಮಾಳಿಗೆ ಮನೆಯಲ್ಲಿ ನೋಳ್ಪರೆ ಒಂಬತ್ತು ಬಾಗಿಲು ಬೇರಿಗೆ ಹೇಳಿ ಹೋಯಿತೆ ಒಂದು ಮಾತ 1 ಏರಿಯು ನೀರನು ತೆಗೆದುಕೊಂಡಿದ್ದೇನೊ ಭೋರೆಂಬೋ ಮಳೆ ಹೊಯ್ದು ಭೋರೆಂಬೊ ಮಳೆ ಹೊಯ್ದು ಬಣವೆದ್ದು ಹೋಗುವಾಗ ಈ ಏರಿಗೆ ಹೇಳಿಹೋಯಿತೆ ಒಂದು ಮಾತ 2 ಗಟ್ಟಿ ಬೆಟ್ಟಗಳಲ್ಲಿ ಅಟ್ಟಡವಿಯಲ್ಲಿ ಇಕ್ಕಿತ್ತು ಇಟ್ಟಿತ್ತು ಜೇನು ತನ್ನ ಸುಖಕಾಗಿ [ಇಟ್ಟ]ತುಪ್ಪವನುಂಡು ನೊಣ ಹಾರಿಹೋಗುವಾಗ ಈ ಬೆಟ್ಟಿಗೆ ಹೇಳಿ ಹೋಯಿತೆ ಒಂದು ಮಾತ 3 ಹೆಸರು ಹೇಳುವೆ ನಾನನುದಿನವು ರಸಭೋಜನವವುಂಡು ಜೋತಿತಾಹೋಗುವಾಗ ಪ್ರಣತಿಗೆ ಹೇಳಿ ಹೋಯಿತೆ ಒಂದು ಮಾತ 4 ಸಪರ್Àಶಯನ ಹಯವದನನಾಡಿದ ಮಾತು ಪಣೆ ಲಕ್ಷ್ಯವ ತೊಡೆದು ಮ್ಯಾಲಿರಲಾಗಿ ಸುಪ್ಪಾಣಿಮುತ್ತು ಬಾಯ್ಬಿಟ್ಟು ಹೋಗುವಾಗ ಈ ಚಿಪ್ಪಿಗೆÀ ಹೇಳಿ ಹೋಯಿತೆ ಒಂದು ಮಾತ 5
--------------
ವಾದಿರಾಜ
ಉತ್ಸವದಲಾಹ್ನಿಕವ ಕಡು ಜನರು ಕೇಳಿರಯ್ಯ ಪ. ಅರುಣ ಉದಯದೊಳೆದ್ದು ಆ ದ್ವಾರಪಾಲಕರುಭರದೆ ಘಂಟೆ ಸುವಿಘ್ನ ಮಾಡೆತರತರದ ಹರಿದಾಸರು ತಾಳ ಮೇಳಗಳಿಂದಪರಿಪರಿಯ ಗಾನ ಪಾಡೆ ತ್ವರಿತ ವಾದ್ಯಗಳಿಂದ ತರುವಾಯ ಭೋರಿಡೆ ಮುರಹರನುಪ್ಪವಡಿಸೆತರುಣ ಯತಿಗಳು ಎದ್ದು ಸ್ನಾನ ಜಪಗಳ ಮಾಡಿನಿರುತ ಶಂಖ ಭ್ರಮಣೆ ಮಾಡೆ ನೀಟಾಗಿಒಪ್ಪುತಿಹ ಉಡುಪಿಯ ಶ್ರೀಕೃಷ್ಣನ 1 ಘೃತ ನೆನೆಕಡಲೆಯುಶುದ್ಧಾದ ಪಾಲ್ಮೊಸರು ಶುಂಠಿ ಸಕ್ಕರೆಲಡ್ಡಿಗೆತಂದ ನೈವೇದ್ಯವ ಸವಿದು ತಾ ಪೂಜೆ ಮಾಡಿಸಿಕೊಂಬ 2 ಪದ್ಮನಾಭಗೆ ಬೇಗ ಪುರುಷಸೂಕ್ತದಭಿಷೇಕಮುದದಿಂದ ಮಾಡಿದ ಬಳಿಕವಿಧಿಯ ಪೂರ್ವಕವಾಗಿ ಅಗಿಲು ಗಂಧ ತುಲಸಿಮಾಲೆಅಧಿಕವಾಗಿ ಸಮರ್ಪಿಸಿ ಒದಗಿದ್ದ ಶುಂಠಿ ಬೆಲ್ಲ ಒಳಿತಾದ ಅನ್ನ ಸೂಪದಧಿ ಕ್ಷೀರ ಕದಳಿಫಲವು ಮುರಮರ್ದನನುಚೆಲುವ ತಾ ಹಂಸಪೂಜೆಯ ಕೊಂಬ ತದನಂತರದಲಿ ಮೃತ್ತಿಕೆಯ ತಾ ಗಣಿಯಕಟ್ಟಿಸಿಕೊಂಬ 3 ದಧಿ ದಿವ್ಯ ಮಧು ಸಕ್ಕರೆ ಸೀಯಾಳವು ಇಂ-ದಿರೇಶಗೆ ಬೇಗ ಶಿರದ ಮೇಲ-ಭಿಷೇಕ ಮುದದಿಂದ ಮಾಡಿದ ಬಳಿಕತಿರುಗಿ ನೈವೇದ್ಯವನು ತೀವ್ರದಿಂದಲೆ ಸ-ಮರ್ಪಿಸಿ ಚೆಲುವ ಮಂಗಳಾರತಿಯಿಂದಪಂಚಾಮೃತದ ಪೂಜೆಗೊಂಬ 4 ಜಲಜನಾಭಗೆ ಉಷ್ಣಜಲವ ತಂದ್ಹದ ಮಾಡಿಲಲಿತವಾಗಿ ಎರೆಯುತಒಳಿತಾದ ಹೆಸರ್ಹಿಟ್ಟಿನಲಿ ಒರೆಸಿ ಮೈಯನೆತೊಳೆದು ಸುಲಭಗೆ ಪಾಲನುಣಿಸಿ ಬಳಿಕಬಾಲಉಡಿಗೆಯಿಟ್ಟು ಬಹುನೈವೇದ್ಯವನರ್ಪಿಸಿಚೆಲುವ ಉದ್ವಾರ್ಚನೆ ಪೂಜೆಚೆಂದಾಗಿ ಮಾಡಿಸಿಕೊಂಬ 5 ಮಧ್ವ ಸರೋವರಜಲವು ಹೊಳೆವÀ ಚಿನ್ನ ಕಲಶÀದಲಿಶುದ್ಧದಲಿ ಶೋಧಿಸಿ ತುಂಬಿಸಿಬದ್ಧ ಘಂಟೆನಾದದಲಿ ಬಹುಬೇಗದಲಿಬಂದು ಸನ್ನಿಧಿಯಲಿ ಪೂಜಿಸಿವಿಧುರಥನೆ ಶಂಕರಥನೆ ಪುರುಷಸೂಕ್ತÀದಭಿಷೇಕಮುದದಿಂದ ಮಾಡಿದ ಬಳಿಕ ಸಜ್ಜಿ ಘೃತದೋಸೆ ಬೆಣ್ಣೆ ಸಾರು ನೈವೇದ್ಯವ ಸವಿದು ಚೆಲುವಮಂಗಳಾರತಿಯಿಂದ ಮುದದಿ ತೀರ್ಥಪೂಜೆಗೊಂಬ 6 ಉರು ಪದಕಾಭರಂಣಗಳು ಉನ್ನಂತತೋಳ್ಬಂದಿಕರಮುದ್ರೆ ಕಂಕಣಗಳು ಚರಣಾರವಿಂದಗಳಿಗೆ ಚಾರುಚಿನ್ನದ್ಹಾವಿಗೆಕಿರುಗೆಜ್ಜೆ ಕಾಲಲಂದುಗೆವರ ಪೀತಾಂಬರ ಕಟಿಗೆ ವಡ್ಯಾಣ ನೇವಳ ಇಟ್ಟುನಿರುತ ಸುವರ್ಣದ ಕವಚವುಕೊರಳ ಕೌಸ್ತುಭಹಾರ ಕೋಮಲ ಸುವರ್ಣಕುಂಡಲಸಿರಿಮೂರುತಿ ಸಣ್ಣ ನಾಮ ಶಿರದ ಜಾವಳ ಜಡೆ ಕಡಗೋಲು ನೇಣುಸಹಿತ7 ದಧಿ ಶುಂಠಿ ನಿಂಬೆರಸ ತಕ್ರಜಗದೇಕ ಸವಿದ ಪರಿಯ 8 ಬಗೆಬಗೆಯ ಮಂಗಳಾರತಿ ಬಾರಿಬಾರಿಗೆ ಮಾಡಿ ಚಾ-ಮರ ದರ್ಪಣಗಳೆಸೆಯೆ ನಗೆಮುಖದ ಕೃಷ್ಣ-ನಂಘ್ರಿಗೆ ಷೋಡಶ ಪೂಜೆಯ ಮಾಡಿಮುಗಿಸಿ ಗುರುರಾಯ ಬರಲುಹನುಮಂತದೇವರಿಗೆ ಹಸನಾದ ಭಕ್ಷ್ಯಭೋಜ್ಯಅನುದಿನದಲರ್ಪಿಸಿ ಪೂಜಿಸಿಮುನಿ ಮಧ್ವರಾಯರಿಗೆ ಮುದದಿಂದಲರ್ಪಿಸಿ9 ಅರಳು ಆರಚ್ಚು ಬೆಲ್ಲವುಆ ಕಾಲದಲರ್ಪಿಸಿ ಪೂಜಿಸಿ ಕರಣದಲಿ ನೋಡಿ ನಗುವ 10 ಪುಟ್ಟ ಕೃಷ್ಣರಾಯರಿಗೆ ಹೊನ್ನ ಕವಚವ ತೊಡಿಸಿಇಟ್ಟ ರನ್ನದ ಕಿರೀಟವುದಿಟ್ಟಾದ ಪದಕಂಗಳು ದಿವ್ಯಮುತ್ತಿನ ಸರಕಟ್ಟಿದ್ದ ಪೂಮಾಲೆ ಎಸೆಯೆಶ್ರೇಷ್ಠವಾದ ಧೂಪದೀಪ ಶ್ರೀಪತಿಗೆ ದೋಸೆ ಬೆಣ್ಣೆಗಟ್ಟುರುಳಿ ನೈವೇದ್ಯವು ಕಟಕಟನೆಶುಂಠೀಕಷಾಯುಂಡು ಬಾಯಿ ತೊಳೆದುತಟ್ಟನೆ ರಾತ್ರಿ ಪೂಜೆಯಗೊಂಡು ತಾ ಪಲ್ಲಕ್ಕಿಯೇರಿ ಬರುವ11 ಅರಳು ಬಹುಕೊಬರಿ ಚೂರುಗಳು ಆ ಕಾಲದಲಿ ಸೂಸಿ ಪೂಜಿಸೆ ಕರುಣದಲಿ ನೋಡಿ ನಗುವ 12 ಧೀರನಿಗೆ ಚತುರ್ವೇದ ದಿವ್ಯಶಾಸ್ತ್ರಪುರಾಣ ಚೆಲುವಗಷ್ಟಕ ಗೀತವುಭೇರಿಮೌಳಿ ಮೌಳಿವಾದ್ಯಮೌಳಿಮೌಳಿ ಚಕ್ರವಾದ್ಯತಾರತಮ್ಯದ ಸರ್ವವಾದ್ಯಗಳೆಸೆಯೆತಾರಿ ಸೇವೆಯ ಮಾಡಿ ಸ್ವಾಮಿ ವೀಳ್ಯ ಮಂತ್ರಾಕ್ಷತೆ ಕಾರುಣ್ಯದಲಿಬೆರೆಸಿ ಮಾರಜನಕಗೆ ಏಕಾಂತ ಸೇವೆಯ ಮಾಡಿ ನವಮಾರಜನಕನ ಹಂಪೂಜೆಯ ಜಾಗ್ರತೆಯಲಿ ನೋಡಿ ನಗುವ 13 ಹಡಗಿನಿಂದಲಿ ಬಂದು ಕಡಲ ತಡಿಯಲಿ ನಿಂದುಬಿಡದೆ ಯತಿಗಳ ಕೈಯ ಬಿಂಕದಿ ಪೂಜೆಗೊಂಬಆದಿ ಕೃಷ್ಣನ ಆಹ್ನಿಕವನು ಆಧಾರದಲಿಓದಿವಿನೋದದಲಿ ಪಠಿಪ ಜನರಿಗೆಆಧಿವ್ಯಾಧಿಗಳಟ್ಟಿ ಬಹು ಭಾಗ್ಯಗಳ ಕೊಡುವಮಾಧವನ ಕೃಪೆಯಿಂದಲಿವಾದಿರಾಜರಿಗೊಲಿದು ವಚನ ಶುದ್ಧೋಕ್ತದಲಿ ಹೇಳುವ ಜನರಿಗೆಬರುವ ದುರಿತವ ಕಳೆದು ಮೇಲಾಗಿ ರಕ್ಷಿಸಿಕೊಂಬ ಹಯವದನ 14
--------------
ವಾದಿರಾಜ
ಉದ್ದಾಳಿಕನ ಕಥೆ ಪಾಶಾಂಕುಶ ಧರನೆ ಕರಿಣಿಸೊ ಮತಿಯ 1 ಮಾನಿನಿಕುಲಕೆ ಕಟ್ಟಾಣಿ ಕರುಣಿಸೆ ಮತಿಯ2 ಮನೋಹರನೆ ನಿಜಮತಿಯ 3 ಅಂಬರ ಮೇಲಾದಷ್ಟದಿಕ್ಪಾಲಕರು ಪುಣ್ಯಕಥೆಯ 4 ಓಣ್ಯೊಳು ಚೆಲ್ಲಿದ ಅಣಿ ಮುತ್ತಾರಿಸಿ ನೂಲಿಗೆ ಪೋಣಿಸಿದಂತೆ ಯೋಗಿಗಳರಸುದ್ದಾಳಿಕನ ಕಥೆಯನು ಹೇಳುವೆ ಚರಿತೆಯ ಮಾಡಿ5 ವೇದವೇದಾಂತ ಪಾರಗನು ಧರ್ಮ ಪತ್ನಿ 6 ಸುತಜನಿಸಿದ ಉದ್ದಾಳಿಕ ಮಾಡಿದ ಕ್ರಮದಿಂದ 7 ಮೌಂಜಿಯ ಕಟ್ಟಿ ನಡೆದರು ಪರಗತಿಗೆ 8 ನಾಲ್ಕು ವೇದಗಳ ಘನತಪವನಕಾಗಿ ನಡೆದ 9 ನಿಂದು ಬೆಳಗುವ ಜ್ಯೋತಿಯಂತೆ ಸಂದವರುವತ್ತು ಸಾವಿರವು 10 ಪಟ್ಟಣದಿ ರಾಜ್ಯವಾಳುವನು 11 ಕನ್ಯಾದಾನವು ಭೂದಾನ ರಾಜ್ಯವಾಳುವನು 12 ಹೆತ್ತ ತಾಯಿ ಮಕ್ಕಳಗಲರೆಂದೆದಿಗು ಬತ್ತದೆ ಕರೆವ ಧೇನುಗಳು ದೇಶದೊಳಗೆ 13 ಪುಣ್ಯಸಾಧನರು ಸಜ್ಜನರು ಧರ್ಮಗಳಾ ದೇಶದೊಳಗೆ 14 ಬಡವರಿಲ್ಲಿ ಚಾರರುಂಟು ದೇಶದೊಳಗೆ 15 ಧರ್ಮವ ನಡೆಸಿ ರಾಜ್ಯವಾಳುವನು 16 ಮಕುಟವೆಂದೆನಿಸಿ ಪಟ್ಟದರಸಿಯಲ್ಲದನ್ಯತ್ರ ನೋಡೇಕ ಪತ್ನಿಯ ವ್ರತವ ನಡೆಸಿದನು17 ಸಂತೋಷದೋರಲು ಹುಟ್ಟಿದಳ್ ಚಂದ್ರಾವತಿಯು 18 ಹೊನ್ನಿನ ರಾಸಿ ಸುವರ್ಣದ ಬೆಟ್ಟವು ಕನ್ಯಾದಾನದ ಹೆಬ್ಬೆಳಸು ಮಾಣಿಕವೆ ಸಂತಾನ 19 ನಡೆಯೋಳು ದಟ್ಟಡಿಯಿಡುತ ಕಡುಲಾಲಿಕೆ ಬಾಲಲೀಲೆ 20 ಬಡವಾದಾಳೆಂದು ಕಡುಹರುಷದಲಿ ಹಿಗ್ಗಿದರು 21 ಅಕ್ಷರಾಭ್ಯಾಸವ ಮಾಡಿಸಿ ಕುಮಾರಿಗೆ ನರ್ತನ ಗೀತವ ಕಲಿಸಿ ಪುತ್ರಿಗಭ್ಯಾಸ ಮಾಡಿಸಿದ 22 ಯೌವನವು ತೋರಿದವು ಆಲಯವನೆ ಕಟ್ಟಿಸಿದ 23 ಪುತ್ರಿಯ ಸೇವೆಗೆ ಇಟ್ಟನೆ ಭೂಪಾಲ ಹತ್ತುಸಾವಿರ ಕೆಳದಿಯರ ಸುತ್ತಲು ಪ್ರಾಕಾರ ಎಸೆದವು ರಕ್ಷೆಗೆ ಇಟ್ಟನೆ ದ್ವಾರಪಾಲಕರ24 ಮುನಿಕೌಶಿಕನು ನೋಡುತಲಿ 25 ಸತ್ಯಲೋಕ ತಪೋಲೋಕವ ಚರಿಸುತ್ತ ಹೊಕ್ಕ[ನೆ] ಯಮ ಲೋಕವನು ಜೀವಿಗಳ ತಾಕಂಡ 26 ತೃಣದ ಮೂಲಾಗ್ರದಿ ನಡುಗುತಿಪ್ಪರ ಕಂಡು ಬ[ಳಿ] ಯಲ್ಲಿ ನಿಂತು ಮಾತಾಡಿ ತಿಳಿದು ಹೇಳುವುದು ಎನ್ನೊಡನೆ 27 ಜಗದೊಳಗೆ ಎಮಗೆ ಪತನಕ್ಕೆ ಬಿದ್ದೆವೆಂದೆನಲು 28 ಕಾಣಿಸುವ ದೌಹಿತ್ರರು ಮುನಿಯು ಕೇಳಿದನು 29 ಹೆಣ್ಣನೊಲ್ಲದೆ ಅರಣ್ಯವ ಚರಿಸುವ ಉನ್ನಂತ ತಪಸೀಲಿದ್ದ ತಿಳಿದು ಹೇಳುವುದು 30 ಪುತ್ರಸಂತಾನವ ಪಡೆದು ವಿಸ್ತಾರವಾಗಿ ಹೇಳುವುದು 31 ಭೋರನಲ್ಲಿಂದ ತೆರಳಿದನಾಗಲೆ ಮುನಿ ಅರಣ್ಯವ ಚರಿಸುತಲೆ ತಪೋವನವ 32 ಕರವಿಡಿದು ಕರೆ ತಂದನಾಗ ಬರವೇನೆಂದು ಕೇಳಿದನು 33 ಯಮ ಲೋಕವನು ಅತ್ಯಂತ ನರಕಕೈದುವರು 34 ಆಲಸÀ್ಯವಿಲ್ಲದೆ ಬೀಳ್ಪರು ಪತನಕ್ಕೆ º
--------------
ಹೆಳವನಕಟ್ಟೆ ಗಿರಿಯಮ್ಮ
ಉದ್ಧರಿಸೆನ್ನಯ್ಯ ಮುದ್ದು ಶ್ರೀಹರಿಯೆ ಬಿದ್ದು ಬೇಡುವೆ ನಿಮ್ಮ ಪಾದಪದ್ಮದೊಳು ಪ ಬದ್ಧಗುಣ ಬಚ್ಚಿಟ್ಟು ಶುದ್ಧ ಮನದವನಂತೆ ಸುದ್ದಿ ಹೇಳುತ ಸತತ ಕದ್ದು ತಿನ್ನುವ ಎನ್ನ ಬದ್ಧ ಮನಸಿನ ಡೊಂಕ ತಿದ್ದು ಬೇಗದೊಳು 1 ನಂಬಿಗುಳ್ಳವನಂತೆ ಹೇಳುವ ಪರರ ಅಂಬುಜಾಕ್ಷಯರೊಲುಮೆ ಹಂಬಲವ ಮನದಿ ತುಂಬಿಕೊಂಡಿಹ್ಯ ಎನ್ನಡೊಂಕ ಶಂಭುವಿನುತನೆ ತಿದ್ದಿ ಇಂಬುಗೊಡು ಜವದಿ 2 ಸಫಲಮಾನಿಸನಂತೆ ಜಪಮಾತುಗಳಾಡಿ ಕಪಟತ್ವದಿಂದಿತರ ಅಪಹರಿಸುವ ಕುಪಿತ ಮನಸಿನ ಡೊಂಕ ಅಪರೂಪತಿದ್ದಿ ನುತ ಸುಫಲದಾಯಕ ಹರಿ ಕೃಪೆಮಾಡು ಜವದಿ 3 ಹಸುತೃಷಳಿದವನಂತೆ ವಸುಧೆಜನರಿಗೆ ತೋರಿ ಬಸವಳಿದು ಬಾಯಾರಿ ದೆಸೆಗೆಟ್ಟು ಪರರ ಅಶನ ಬೇಡುಂಬ ಪುಸಿಯ ಮನಸಿನ ಡೊಂಕ ಹಸನಾಗಿ ತಿದ್ದಿ ಲಕುಮೀಶ ಒಲಿ ದಯದಿ 4 ಪಾಮರಮನದ ದುಷ್ಕಾಮಿತಗಳನೆಲ್ಲ ಕ್ಷೇಮದಿಂ ಕಡೆಹಾಯ್ಸಿ ಸ್ವಾಮಿಯೇ ನಿಮ್ಮ ನಾಮಧ್ಯಾನದ ನಿತ್ಯನೇಮವನು ಪಾಲಿಸಿ ಪ್ರೇಮದ್ಹಿಡಿಕರ ಶ್ರೀರಾಮಪ್ರಭುತಂದೆ 5
--------------
ರಾಮದಾಸರು
ಉಪಕಾರವೇನಾ ಹೇಳಲಿ | ಮಾಯಾದೇವಿಯಾ || ಅಪರ ಮಾತನ ರೂಪಕೆ ಮರೆಯಾಗಿ | ಅನುದಿನ ಜನರಿಗೆ | ಅಪರಾಧ ದಾರಿಗೆ ದೂರವಿಟ್ಟಳು ಪ ಸೂರಿಯ ನಾರಾಯಣೆಂಬರು | ಶರಣೆಂದು ಬಾಗರು ತಲೆಯನು ಒಬ್ಬರು || ಪರಿ | ಧರೆಯೊಳುದಾಸೀನ ಮಾಡುವರೈಯಾ1 ಅಗ್ನಿದೇವರ ಮುಖವೆಂದು | ಸುಜ್ಞಾನಿಗಳಿದು ಹೇಳುತಲಿಹಲು || ಅಜ್ಞಾನಿಗಳು ಅಲ್ಲೆ ಕಾಲವ ಕಾಸುತ | ವಜ್ಞೆಯ ಮಾಡುವ ಉಗುಳುತಿಹರು2 ಎಂದೆಂದು ನಿಲುಕದ ಚಿದ್ರೂಪ ಘನವಾದ | ತಂದೆ ಮಹೀಪತಿ ನಂದನ ಪ್ರಾಣನ || ಛಂದದಿ ಭಕ್ತಿಯ ಮಾರ್ಗದಿ ನಡೆಸುತ | ಇಂದೆನ್ನ ಹರಿಮೆಚ್ಚು ಮಾಡಿದಳೈಯ್ಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಉರುಟಣೆ ಪದ ಜಯ ಜಯ ರಾಮ ಜಯಜಯ ಜಯ ನಮ್ಮ ಜಾನಕೀ ರಮಣಗೇ ಪ ಇಂದಿರಾದೇವಿ ರಮಣಿ ಶರಣ್ಯಮಂದರ ಗಿರಿಧರ ಶರಣ್ಯಕಂದನ ನುಡಿ ಕೇಳಿ ಕಂಬದಿಂದಲಿ ಬಂದಸಿಂಧು ಶಯನ ಸಲಹುವಾದೆನ್ನ 1 ಗುರು ವಿಜಯದಾಸರ ಚರಣಾಸರಸಿರುಹವ ಮನದೊಳಾಗಿರಿಸಿಹರಿ ಸರ್ವೋತ್ತಮ ಮಂಗಳ ಚರಿತೆಯವಿರಚಿಸುವೆನು ಸುಜನರು ಕೇಳಿ 2 ಮುತ್ತೈದೆರೆಲ್ಲಾ ಬೇಗಾದಿ ಬಂದುಅರ್ತಿಯಿಂದಲಿ ಶೃಂಗಾರವಾಗಿಚಿತ್ತಜನಯ್ಯನ ಉರುಟಣೆ ಎನುತಾಲಿಮತ್ತ ಗಮನೇರು ಬಂದರಾಗಾ 3 ಸರಸ್ವತಿ ಭಾರತಿ ಮೊದಲಾದಸರಸಿಜ ಮುಖಿಯರೆಲ್ಲಾರು ನೆರೆದುಸರಸ ಉರುಟಣಿಯ ಮೊಡಬೇಕೆನುತಾಲಿಕರೆಸಿದರಾಗ ಮುತ್ತೈದೆರಾಗ 4 ಹೇಮಮಯದ ಮಂಟಪದೊಳಗೆಪ್ರೇಮದಿಂದಲಿ ಹಾಸಿಕೆ ಹಾಕಿಸೋಮವದನನ ಗುಣವ ಕೊಂಡಾಡುತಕಾಮಿನಿಯರು ಕರೆದಾರು ಹಸೆಗೇ 5 ಕೌಸಲ್ಯಾದೇವಿ ತನಯಾನೆ ಕೇಳುಹರ್ಷದಾಯಕ ರಕ್ಷಕನೇಳುಹಂಸವಾಹನನಯ್ಯನೆ ಹಸೆಗೆ ಏಳೇಳೆಂದುಹಂಸಗಮನೆಯರು ಕರೆದರು ಹಸೆಗೆ 6 ನಿಗಮವ ತಂದಾ ಮಚ್ಚ್ಯಾನೇಳುನಗವ ಬೆನ್ನಿಲಿ ಪೊತ್ತ ಕೂರ್ಮನೇಳುಜಗವನುದ್ಧರಿಸಿದ ವರಹ ಮೂರುತಿ ಏಳುಮೃಗ ನರ ರೂಪ ಹರಿಗೇಳೆಂದಾರು 7 ಸುರನದಿಯ ಪಡೆದ ವಾಮನನೇಳುಪರಶುರಾಮ ಮೂರುತಿ ಏಳುಶರಧಿಯ ದಾಟಿ ಸೀತೆಯ ತಂದಶಿರಿ ರಾಮಕೃಷ್ಣ ಹಸೆಗೇಳೆಂದರು 8 ವ್ರತವನಳಿದ ಬೌದ್ಧನೇಳುಅತಿಬಲ ರಾಹುತನೇಳುಪೃಥಿವಿಗೊಡೆಯ ರಾಮನೇಳೆಂದುಅತಿ ಚಮತ್ಕಾರದಿ ಕರೆದರಾಗ 9 ಇಂತು ಬಗೆಯಾಲಿ ತುತಿಸಿ ಕರೆಯೇಕಂತುಜನಕನು ಹರುಷದಾಲೆದ್ದುಕಾಂತೆ ಕೈ ಪಿಡಿದು ನಡೆ ತರಲಾಗಲುನಿಂತಾರು ನಾರಿಯರೆಲ್ಲರಾಗ 10 ಎತ್ತಿಕೊಂಬುವದು ರಾಘವ ನಿಮ್ಮಪತ್ನಿಯ ನಡೆಸಲಾಗದು ಕೇಳಿನೀ ಪೃಥ್ವೀಶನಾದರೆ ನಮಗೇನೆನುತಾಲಿಸುತ್ತು ಕಟ್ಟಿದರು ವಾಮಾಕ್ಷಿಯರು 11 ಮಂಗಳಾಂಗಿಯನು ಎತ್ತಿಕೊಂಡು ರಾಮಹಿಂಗಾದೆ ದ್ವಾರದಲ್ಲಿಗೆ ಬರಲುಮಂಗಳದೇವಿಯ ಹೆಸರು ಹೇಳೆನುತಾಲಿಅಂಗನೆಯರು ಅಡ್ಡಗಟ್ಟಿದರಾಗಾ 12 ನಾಳೆ ಹೇಳುವೆನು ಇವಳ ಹೆಸರುತಾಳಲಾರೆನು ಭಾರವು ಎನಲುಶ್ರೀ ಲಕ್ಷ್ಮೀದೇವಿಯ ಹೆಸರು ಹೇಳಿದೆ ಬಿಡೆವೆಂದುಬಾಲೆಯರೆಲ್ಲಾರು ಇಟ್ಟರು ಕದವಾ 13 ಪುತ್ಥಳಿ ಗೊಂಬೆ ಹೆಸರು ಹೇಳೆನೆ ರಘು-ನಾಥಾನು ಎಂದಾಳು ಜಾನಕೀ 14 ಅಂಗಜನಯ್ಯಾ ಸತಿಯು ಸೀತೆಯ ಸಹಿತರಂಗು ಮಾಣಿಕದ ಹಾಸಿಕೆಯ ಮೇಲೆಶೃಂಗಾರದಿಂದಾಲಿ ಬಂದು ಕುಳ್ಳಿರಲಾಗಸುರರೆಲ್ಲಾ ಹಿಗ್ಗಿ ಕರೆದರು ಪೂ ಮಳೆಯಾ 15 ಸಾಸಿರ ನಾಮದ ಒಡೆಯ ಬಂದಾಶೇಷಶಯನಾ ಮೂರುತಿ ಬಂದಾಭಾಸುರಾಂಗನೆ ಸೀತೆ ಆಳಿದಾ ರವಿಕುಲಾ-ಧೀಶ ಬಂದಾನು ಎಂದಾರು ಕೇಳೆ 16 ವಾನರಾಧೀಶನೊಡೆಯಾ ಬಂದಾದಾನವಾಂತಕ ರಾಘವ ಬಂದಾ ಶ್ರೀ-ಜಾನಕೀದೇವಿ ಪ್ರಾಣದೊಲ್ಲಭ ಜಗ-ತ್ರಾಣ ಬಂದಾನು ಎಂದಾರು ಕೇಳೆ 17 ಸತ್ಯ ಸಂಕಲ್ಪ ಶ್ರೀ ಹರಿಯು ಬಂದಾಭೃತ್ಯ ಪಾಲಕ ದೊರೆಯು ಬಂದಾಮಿತ್ರೆ ಜಾನಕಿದೇವಿ ಪ್ರಾಣದೊಲ್ಲಭ ಸ-ರ್ವೋತ್ತಮ ಬಂದನೆಂದಾರು ಕೇಳೇ 18 ಸುಗ್ರೀವನ ಪರಿಪಾಲಕ ಬಂದಾ ಕ-ರಿಗ್ರಾಹ ಸಂಹಾರಿಕ ಬಂದಾವ್ಯಾಘ್ರ ಚರ್ಮಾಂಬರ ಸಖ ಸುಂದರವಿಗ್ರಹ ಬಂದಾ ಎಂದಾರು ಕೇಳೇ 19 ಇಂದ್ರನ್ನ ಪರಿಪಾಲಕ ಬಂದಾಚಂದ್ರನ್ನ ಪ್ರಭೆಯಾ ಸೋಲಿಪ ಬಂದಾಇಂದುವದನೆ ಸೀತೆ ಪ್ರಾಣದೊಲ್ಲಭ ರಾಮ-ಚಂದ್ರ ಬಂದನೆಂದಾರು ಕೇಳೇ 20 ಚಂದನ ಗಂಧೆಯರು ಎಲ್ಲಾರು ಕೂಡಿಗಂಧ ಕುಂಕುಮ ಅರಿಷಿಣ ಕಲಿಸಿಇಂದುವದನೆ ಸೀತೆಯ ಕೈ ಒಳಗಿಟ್ಟು ಶ್ರೀರಾಮ-ಚಂದ್ರಗೆ ಹಚ್ಚಿಸಿರೆಂದರಾಗ 21 ವಾರಿಜೋದ್ಭವ ಮೊದಲಾದವರುತಾರತಮ್ಯದಿಂದಾಲಿ ಕುಳಿತುವಾರಿಜಾಮುಖಿ ಸೀತೆ ನುಡಿಯೆಂದೆನುತಾಲಿಸಾರಿದರಾಗ ಸಂದಣಿಯರೆಲ್ಲಾ 22 ವಾಕು ಕೇಳಬೇಕೆಂದುಜಲಜ ಸಂಭವನು ನುಡಿದಾನು ನಗುತಾ 23 ಕಂಜವದನೆ ಜಾನಕೀದೇವಿಅಂಜಲಾಗ ನಿಮ್ಮ ಪುರುಷಾರಿಗೆಕುಂಜರ ವರದಾ ದಾಕ್ಷಿಣ್ಯ ಬ್ಯಾಡೆಂದುಅಂಜಾದೆ ನುಡಿದಾರು ನಸುನಗುತಾ 24 ದೋಷ ವರ್ಜಿತನೇ ಹರಿ ನಿಮ್ಮದೂಷಣೆ ಮಾಡಿದಳೆನ ಬ್ಯಾಡಿಮೋಸದಿಂದಲಿ ಬಲು ದೈತ್ಯರ ಕೊಂದ ಜಗ-ದೀಶ ನಿಮ್ಮ ಮುಖವಾ ತೋರೆಂದಾಳು 25 ದೇವಿ ಹಸ್ತದೊಳು ಅರಿಶಿನವ ಪಿಡಿದುಭಾವಜನಯ್ಯನ ನುಡಿದಾರಾಗದೇವರ ದೇವೋತ್ತಮ ಶಿಖಾಮಣಿದೇವಾ ನಿಮ್ಮಯ ಮುಖವಾ ತೋರೆಂದಾಳು 26 ಭಸ್ಮಾಸುರನ ಕೊಂದಾ ಬಹು ಶೂರನಾರಿಕಂಸನಳಿದಾ ಧೀರ ಅಸುರ ಹಿರಣ್ಯಕನಅಸುವ ಹೀರಿದ ದೊಡ್ಡಅಸುರಾಂತಕ ಮುಖವಾ ತೋರೆಂದಾಳು 27 ವಾಲಿಯ ಸಿಟ್ಟಿನಿಂದಾಲಿ ಕೊಂದುಕಾಲ ಯಮನಾನಸುವ ಯುಕ್ತಿಯಿಂದಾಭಳಿರೆ ಮಧುಕೈಟಭರ ಕೊಂದಾಕಾಲಾಂತಕ ಮುಖವ ತೋರೆಂದಾಳು 28 ಶ್ರೀನಾಥ ದ್ವಾರಕಾಪುರ ಮಾಡಿಆ ನಂದಿ ಗೋಮಂತಾ ಗಿರಿಗೊಲಿದೆವಾನರಾಧೀಶನಾ ಬಲು ಕೊಂಡಾಡುತ್ತದಾನವಾಂತಕಾ ಮುಖವಾ ತೋರೆಂದಾಳು 29 ಅರಿಶಿನವಾನು ಹಚ್ಚಿದಳು ಸೀತೆಅರಸನ ಫಣೆಗೆ ಕುಂಕುಮವಾ ಹಚ್ಚಿಸರಸದಿ ವದನಕ್ಕೆ ಗಂಧವಾ ಹಚ್ಚಲುಸುರರೆಲ್ಲಾ ನಕ್ಕಾರು ಕೈ ಹೊಡೆದು 30 ಪತಿ ಮೊದಲಾಗಿ ಚಪ್ಪಾಳೆನಿಟ್ಟುಹರಸಿದರಾಗ ಜಾನಕಿದೇವಿಶಿರಿಯು ಗೆದ್ದಳು ಅಯೋಧ್ಯದಅರಸು ಸೋತನೆಂದು ನಗುತೆ 31 ಬಾಹುಗಳಿಗೆ ಗಂಧವಾ ಹಚ್ಚಿಸಿಮ್ಯಾಲೆ ಪರಿಮಳಾ ಪೂಸಿದಳುಶ್ರೀ ಹರಿಯ ಚರಣಾವ ಪಾಲಿಸಬೇಕೆನುತಲಿಸರಸಾದಿಂದಾಲಿ ನುಡಿದಾಳು ಜಾನಕೀ 32 ಪಾಷಾಣ ಪೆಣ್ಣಾ ಮಾಡಿದಾ ಚರಣಶೇಷನಾ ಮ್ಯಾಲೆ ಮಲಗಿದ ಚರಣಭಾಸುರಾಂಗಿ ನಿನ್ನ ಲೀಲೆಯಾ ತೋರಿದಾಶೇಷಶಯನ ಚರಣಾ ಪಾಲಿಸೆಂದಾಳು 33 ಆಕಾಶಗಂಗೆಯ ಪಡೆದಾ ಚರಣಾಶಕಟನ ಮುರಿದೊಟ್ಟಿದ ಚರಣಾಭಕುತ ಜನರ ಸೇವೆ ಕೊಂಬ ಚರಣರಕ್ಕಸ ದಲ್ಲಣ ಚರಣಾವ ಪಾಲಿಸೆಂದಾಳು 34 ಅಂಕುಶದೊಜ್ರ ರೇಖೆಯ ಚರಣಾಕುಂಕುಮಾಂಕಿತ ರಾಶಿಯ ಚರಣಾಬಿಂಕದಿಂದ ಕುರುಪತಿಯ ಕೆಡಹಿದ ಬಿರು-ದಾಂಕ ನಿನ್ನಯ ಚರಣಾ ಪಾಲಿಸೆಂದಾಳು 36 ನಸುನಗುತ ಹರಿ ಚರಣ ವೀಕ್ಷಿಸಿಶಶಿಮುಖಿ ಸೀತೆ ಆನಂದದಿಂದಾಮಿಸಣಿಯಂತೊಪ್ಪುವ ಅರಿಶಿನೆಣ್ಣೆಯಾಎಸೆವ ಪಾದಕ್ಕೆ ಹಚ್ಚಿದಳಾಗ 37 ಪಾದ ಪದ್ಮಕ್ಕೆ ಎರಗಿಪಾಲಿಸಬೇಕೆಂದಾಳು ಅಂಗನೆ 38 ಕರಗಳ ಪಿಡಿದೆತ್ತಿದನು ರಾಮಾಹರಸಿದ ಮುತ್ತೈದಾಗೆಂದುಪರಮ ಪತಿವ್ರತೆಯೆನಿಸು ಎನುತಾಲಿಹರಿ ಹರಸೀದಾನು ಹರುಷದಲ್ಲಾಗ 39 ಅಂಡಜವಾಹ ಭಗವಂತನುಹೆಂಡತಿಯ ಮುಖವ ನೋಡೆನುತಲಿಗಂಡು ಮಕ್ಕಳ ಘನವಾಗಿ ಪಡೆಯೆಂದುಪುಂಡರೀಕಾಕ್ಷ ಹರಸಿದನಾಗ 40 ಮಂದಗಮನಿಯ ಕುಳ್ಳಿರಿಸಿಇಂದಿರೇಶ ಮುಂಗುರಳಾ ತಿದ್ದಿಎಂದೆಂದಿಗೆ ಅಗಲದಿರೆಂದು ರಾಮ-ಚಂದ್ರಾನು ಹರಸಿದನಾಗ 41 ಭೂಲೋಕದೊಡೆಯ ರಾಘವರಾಯನಶ್ರೀಲತಾಂಗಿಯ ಕುಳ್ಳಿರಿಸಿದನುಬಾಲಕಿಯರೆಲ್ಲಾರು ಗಲಿಬಿಲಿ ಮಾಡಾದಿರೆಂದುಫಾಲಾಲೋಚಾನು ನುಡಿದನು ನಗುತ 42 ಕಂತುಜನಕ ರಾಘವಾ ನಿಮ್ಮಾಪಂಥ ಸಲ್ಲಾದು ಜಾನಕಿಯೊಡನೆಯಂತ್ರವಾಹಕ ಶ್ರೀರಾಮ ಏಳೇಳೆಂದುಕಾಂತೆಯರೆಲ್ಲರು ನುಡಿದಾರು ನಗುತಾ 43 ಭಾಗೀರಥಿ ಪಾರ್ವತಿದೇವಿಬೇಗದಿ ಅರಿಷಿನ ಕೈಲಿ ಕಲಿಸಿಸಾಗರ ಶಯ್ಯನ ಕೈಯೊಳಗಿಟ್ಟುಬಾಗಿ ಸೀತೆಯ ಮುಖಕೆ ಹಚ್ಚೆಂದಾರು 44 ನಿಂದಲ್ಲಿ ನಿಲ್ಲಾದೆ ಚಂಚಳೆ ಲಕ್ಷ್ಮೀಬಂಧು ಬಳಗವನಗಲಿಸುವ ತರಳೆತಂದೆ ಮಕ್ಕಳೊಳಗೆ ಕದನವ ನಿಡುವಂಥಮಂದಹಾಸೆ ಮುಖವ ತೋರೆಂದಾನು ರಾಮಾ 45 ಅಣ್ಣನ ವಂಚಿಸಿ ಬೇಡಿದವಳೇಮನ್ನೆ ಮನ್ನೆಯರಾ ಕಳಿಸಿದವಳೇಚೆನ್ನಾಗಿ ಮನೆಯೋಳಿದ್ದು ಪೋಗುತಚೆನ್ನಾಯಿತೆ ಮುಖವ ತೋರೆಂದಾನು 46 ಭಾಷೆಯನು ಕೊಟ್ಟು ತಪ್ಪಿಸುವಳೆಕಾಸುವೀಸಾಕೆ ವತ್ತಿ ಬೀಳುವಳೆಹೇಸಿಕಿಲ್ಲದೆ ಕುಲಹೀನನ ಮನೆಯೊಳುವಾಸವಾಗಿರುವಾ ಮುಖವ ತೋರೆಂದಾನು 47 ರಾಮಚಂದ್ರಾನು ಅರಿಶಿನ ಗಂಧವಭೂಮಿಜಳಿಗೆ ಹಚ್ಚಿದನಾಗಾಸಾಮಜಗಮನೆಯ ಹಣೆಗೆ ಕುಂಕುಮ ಹಚ್ಚಿಪ್ರೇಮದಿ ಪರಿಮಳ ಪೂಸಿದಾನು 48 ಕುಸುಮ ದಂಡೆಯ ಮಾಡಿದರುಬಾಸಿಂಗವನು ಕಟ್ಟಿದಾರುಭೂಸುರರೆಲ್ಲರು ಮಂತ್ರಾಕ್ಷತೆ ತಳಿದು ನಿ-ರ್ದೋಷನಾಗೆಂದು ಹರಸಿದರು 49 ಇಂದುಮುಖಿಯರೆಲ್ಲಾರು ಕೂಡಿನಂದದಿ ಜಾನಕಿಗೆ ವೀಳ್ಯವನಿತ್ತುಅಂದಮಾಣಿಕದ ಅಕ್ಷತೆಗಳ ತಳಿದುಮಂದರೋದ್ಧರನ ಹರಿಸಿದರು 50 ದೇವಿಯನ್ನೆತ್ತಿಕೊಂಡು ರಾಮದೇವರ ಮನೆಗೆ ಬಾಹೋದು ಕಂಡುಭಾವುಕರೆಲ್ಲಾ ಹೆಸರು ಪೇಳೆಂದೆನುತದೇವಿ ರಘುನಾಥನೆಂದು ಪೇಳಿದಳಾಗ 51 ಇಂದುಮುಖಿಯರೆಲ್ಲಾರು ಕೂಡಿಇಂದಿರೇಶಾನೆ ಹೆಸರು ಪೇಳೆನಲುಎಂದಾ ಮೇಲೆ ಜಾನಕಿಯೆಂತೆಂದುಮಂದರಧರನು ನುಡಿದನಾಗ 52 ಸತಿಪತಿಯರಿಬ್ಬರು ಕೂಡಿಅತಿಶಯದಲಿ ನಮಸ್ಕರಿಸಿದಾರುಕ್ಷಿತಿಯ ಸುರರಿಗೆ ಲೀಲೆಯ ತೋರಿದ ದೇವಾಪತಿತ ಪಾವನ್ನ ಎನ್ನ ಸಲಹು ಎಂದಾನು 53 ಈ ಕಥೆಯನು ಆದರದಿಂದಾ ಬರೆದು ಹೇ-ಳಿ ಕೇಳುವ ಜನರಾಶ್ರೀಕಾಂತನೊಲಿದು ಕರುಣಿಸುವ ತಾ ಸಿದ್ಧನೇಮದಿಂದಾ ಪಾಡಿರಿ ಜನರು 54 ಕುರುಡಾನು ಈ ಕಥೆಯಾನು ಕೇಳಿದರೆಕರುಣದಿಂದಾಲಿ ಕಂಗಳ ಬರಿಸುವಶರಣವತ್ಸಲ ತನ್ನ ಶರಣರೊಳಿಟ್ಟುಪರಿಪಾಲಿಸುವನು ಶತಸಿದ್ಧ 55 ಸಿರಿ ಒದಗುವದುದಾರ ಇಲ್ಲದ ಬ್ರಹ್ಮಚಾರಿ ತಾ ಕೇಳಲುನಾರಿಯ ಸಹಿತೆ ವಾಸಿಸುವನು 56 ಉದ್ಯೋಗ ಇಲ್ಲದವನು ಕೇಳಿದರೆಸದ್ಯ ಐಶ್ವರ್ಯ ಒದಗುವದು ಸಿದ್ಧಮುದ್ದು ಸುತರಿಲ್ಲದ ಸ್ತ್ರೀಯು ಕೇಳಲುಬುದ್ಧಿವಂತ ಸುತರಾಗುವರು ಸಿದ್ಧ 57 ಮೂರ್ತಿ 58 ಕಮಲ ಧರಿಸಿಪ್ಪಪಾವನ ಮೂರುತಿ ಹೃದಯಾದಲ್ಲಿದೇವಿ ಸಹಿತವಾಗಿ ಕಾವನು ಕರುಣಾದಿನೀವೆಲ್ಲಾರು ತಿಳಿರಿ ಜನರು 59 ಜಾಹ್ನವಿ ಜನಕನುಜಯ ಜಯವೆಂದು ಮಂಗಳವ ಪಾಡೇ 60
--------------
ಮೋಹನದಾಸರು