ಒಟ್ಟು 95 ಕಡೆಗಳಲ್ಲಿ , 35 ದಾಸರು , 91 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗೋವಿಂದ ಗೋವಿಂದ ಎನ್ನಲರಿಯದೆ - ವೃಥಾನೋವಿಂದ ಭಂಗವ ಪಡುವುದುಚಿತವೆ ? ಪ ಕ್ಷೀಣ ಶಾಸ್ತ್ರಾರ್ಥವನು ಪರಿಗ್ರಹಿಸಿ ನಿಖಿಲ ಕುರಿಕೋಣಗಳ ತಲೆಚೆಂಡ ಕುಟ್ಟಿಸುತಪ್ರಾಣ ಹತ್ಯವ ಮಾಳ್ಪುದಾವ ಸತ್ಕರ್ಮ - ನಾರಾ-ಯಣನ ನಾಮಸ್ಮರಣೆ ಮಾಡು ಮನವೆ 1 ಖಂಡವನು ಕೊಯ್ದು ಕೊಡಬೇಡ ದಳ್ಳುರಿಯಗ್ನಿಕುಂಡವನು ಹೊಕ್ಕು ಹೊರಡುವುದುಚಿತವೆಭಂಡರಂದದಿ ಬತ್ತಲೆಯೆ ಬರುವುದಾವಾಟಪುಂಡರೀಕಾಕ್ಷನ ನೆನೆ ಕಂಡ್ಯ ಮನವೆ 2 ಕುಟ್ಟಿಕೊಳ್ಳದಿರಿ ಜಟ್ಟಿ ಗುಂಡಿನಲಿ, ಶಸ್ತ್ರವನುಚಿಟ್ಟಿ ಕೊಳ್ಳದಿರಿ, ಬೆನ್ನಲಿ ಸಿಡಿಯನುಕಟ್ಟಿ ತೂಗಿಸಿಕೊಳ್ಳದಿರಿ ಕರಟಕದಂತೆಗುಟ್ಟಿನಲಿ ಗೋಪಾಲಕನ ಸ್ಮರಿಸು ಮರುಳೆ 3 ತೊಗಲ ಬಿಲ್ಲೆಗಳ ಕೊರಳಲ್ಲಿ ಕಟ್ಟಿಕೊಂಡುಹಗಲಿರುಳು ಅನ್ನಪಾನಕೆ ಹೋಗದೆಮೃಗವೈರಿಯಂತೇಕೆ ಕಿಸುಕೆಲೆವ ರಂಪಾಟಜಗದಾಧಿಪತಿಯ ನಾಮ ಸ್ಮರಿಸು ಮರುಳೆ 4 ಉತ್ತಮರು ಸುರೆಯನೀಂಟುವರೆ ತರಹರಿಸಿ ಮದೋ-ನ್ಮತ್ತರಾಗಿ ಅಸಭ್ಯ ಶಬ್ದವ ನುಡಿವರೆಸತ್ತ ಹೆಣದಂತೆ ಬಿದ್ದಿಹುದಾವ ನೀತಿ ಪುರು-ಷೋತ್ತಮನ ನಾಮ ಸ್ಮರಣೆಯ ಮಾಡು ಮನವೆ 5 ವೇದೋಕ್ತ ಪೂಜೆಯಲಿ ತೃಪ್ತಿಪಟ್ಟರೆ ನೀವುಅದರಿಂದ ಫಲವೇನು ಪೇಳಿರಯ್ಯನಾದವನು ಕೇಳ್ದ ಹರಿಣದಂದದಿ ಕೆಡದೆ ಮಧುಸೂದನನ ನಾಮ ಸ್ಮರಣೆಯ ಮಾಡು ಮರುಳೆ 6 ನಿಂದಾಪವಾದ ಘಟಿಸುವುದೈಸೆ ಇದರಿಂದಮುಂದೆ ಮುಕ್ತಿಯು ನಿಮಗೆ ಸಾಧ್ಯವಹುದೆತಂದೆ ಶ್ರೀ ಕಾಗಿನೆಲೆಯಾದಿಕೇಶವ ನಾಮಒಂದೇ ವೈಕುಂಠ ಪದವನೈದಿಪುದಯ್ಯ 7
--------------
ಕನಕದಾಸ
ತತ್ತ್ವ ತಿಳಿಯದು ಅಹಂಮತ್ವ ಅಳಿಯದನಕ ಧ್ರುವ ವಿದೇಹ ಸುದೇಹಾಗದನಕ ಸಂದೇಹ ಸಂಶಯ ಸಂಕಲ್ಪ ಹೋಗದನಕ 1 ಪ್ರವೃತ್ತಿ ನಿವೃತ್ತಿ ಸುವೃತ್ಯಾಗಕನಕ ಸ್ವಪ್ನ ಸುಷಪ್ತಿ ಜಾಗ್ರ್ಯತ್ಯಾಗದನಕ 2 ದೃಷ್ಟ ಅದೃಷ್ಟ ಸದ್ರಷ್ಟಾಗದನಕ ದುಷ್ಟನಷ್ಟಗಳ ಸಂಕಷ್ಟೋಗದನಕ 3 ಲಬ್ಧ ಅಲಬ್ಧ ಪ್ರಾಲಬ್ಧಾಗದನಕ ಶಬ್ಧ ನಿಶ್ಯಬ್ಧ ಸುಶಬ್ದಾಗದನಕ 4 ಭಾವ ಅಭಾವ ಸ್ವಭಾವಾಗದನಕ ಮಾಯ ಮೋಹದ ಮನೆಯು ಮುಕ್ಕಾಗದನಕ 5 ಸದ್ಗುರು ದಯಕರುಣ ಕೃಪೆ ಅಗದನಕಮಹಿಪತಿ ನಿನ್ನೊಳು ನೀ ಬೆರಿಯತನಕ 6
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತತ್ವ ಚಿಂತನೆ ಮಾಡು ಮನುಜಾ ವ್ಯರ್ಥಕಾಲವು ಕಳೆಯದೆ ಪ ಮೂರುಬಾರಿಗೆ ಸಾರಿದೆ ಅ.ಪ ಮನೆಯು ಉರಿಯುವಾಗ ಭಾವಿ- ಯನು ತೆಗೆವ ನರನಂದದಿ ಕೊನೆಗೆ ಯಮನವರೆಳೆವ ಕಾಲದಿ ಕೋರಿದರೆ ಸುಖ ಬಾರದು 1 ಈಷಣತ್ರಯದಾಸೆಯಿಂದಲಿ ಮೋಸಹೋಗದೆ ಸಂತತ ರೋಷದೋಷಕೆ ಕಾರಣವು ಸಂ- ತೋಷದಿಂದರು ನಲಿಯುತ 2 ಎಲ್ಲಿ ನೋಡಿದರಲ್ಲಿ ಹರಿಯನು ಸೊಲ್ಲು ಸೊಲ್ಲಿಗೆ ತುತಿಸುತ ವೆಲ್ಲ ಕಳೆ ದೃಢವಾಗುತ 3 ನಾನು ನನ್ನದು ಎಂಬುವ ದುರಭಿ- ಮಾನ ನಿನಗೆ ಬೇಡೆಲೊ ಸ್ವಾನುಭವಕಿದು ಹಾನಿ ತರುವದು ನೀನೆ ನಿನ್ನೊಳು ನೋಡೆಲೊ4 ನೇಮಗಳನು ಪರಿಸುತ 5
--------------
ಗುರುರಾಮವಿಠಲ
ತಂದೆಯಿಂದಲಿ ತಾಯಿ ಗರ್ಭಕೆ ನೂಕಿದ್ವಂದ್ವ ಜನ್ಮಕೆ ಕರ್ತ ಇಂದ್ರ ರಕ್ಷಿಪುದೆಂದೋ ಜನ್ಮದಿಂದ |ಇಂದ್ರಾದಿ ಪ್ರಾವರ್ತಕನಿಂದು ಪ್ರಲಯಾದಲ್ಲಿನಂದಕರ ಮುಕ್ತರಿಗೆ ಮಂದಿರವು ಸಿತ ದ್ವೀಪ ಗುರು ಗೋ-ವಿಂದ ವಿಠಲಾತ್ಮಕ ಸಂಕ್ಷೇಪ್ತø ಶರಣು ||ಹರಣ ಹೋಗದ ಮುನ್ನ | ಹರಿ ನಿನ್ನ ಹಂಬಲನ್ನಕರುಣಿಸಿ ಕಾವುದೆನ್ನ | ಕರುಣಾನಿಧಿಯೆ ಘನ್ನಸ್ವರ್ಣ ಗರ್ಭನನಯ್ಯ | ಅರ್ಣ ಸಂಪ್ರತಿಪಾದ್ಯಕರ್ಣರಹಿತ ಶಯ್ಯ | ವರ್ಣಿಸೆ ನಿನ್ನನಯ್ಯಮರುತನ ಮತದಲ್ಲಿ | ಕರೆ ತಂದು ಎನ್ನನುತರತಮ ಜ್ಞಾನವನ್ನ | ಅರುಹುವುದೊಳಿತಲ್ಲೆಹರಿಯೆ ಸರ್ವೋತ್ತಮ | ಮರುತ ಜೀವೋತ್ತಮಹರ ವೈಷ್ಣವೋತ್ತಮ | ವರ ಜ್ಞಾನ ಪಾಲಿಸಿಪನ್ನಗಾಚಲವಾಸ ಪ್ರ | ಸನ್ನ ರಘನಾಶಘನ್ನ ಗುರು ಗೋವಿಂದ ವಿಠಲಾ ಗೋ ಪ್ರಸನ್ನ ||
--------------
ಗುರುಗೋವಿಂದವಿಠಲರು
ತನ್ನೊಳಗಿಹುದು ತನಗೆ ತಿಳಿಯದು | ತನ್ನಂಥ ಮಹಿಮಗೆತೋರುವದು | ಇನ್ನೊಬ್ಬ ಮೂಢಗೆ ತೋರಿಸೆನೆಂದರೆಸಕ್ಕರಿಯೊಳಗಿನ ಸವಿ ಇದ್ಧಾಂಗೆ | ಹಾಂಗೆ ನಿಜವಸ್ತು 1 ನೂಕದು ಪೀಕದು ದೇಹಕ್ಕೆ ತಾಕದು | ಏಕಾಗಿ ಇಹುದುಮಾತಾಡದು ಪ್ರಾಕೃತ ಜನರಿಗೆ | ಮುಸುಕು ಹಾಕಿಹುದು ಕಾಷ್ಠದ ಒಳಗಿನ ಅಗ್ನಿ ಇದ್ಧಾಂಗೆ | ಹಾಂಗೆ ನಿಜವಸ್ತು 2 ಕಣ್ಣಿಗೆ ತೋರದು ಬೈಲಾಗಿ ಹೋಗದು | ಕಣ್ಣಿಗೆ ಕಣ್ಣಾಗಿ ನಿಂತಿಹುದು | ಹೆಣ್ಣಿಗೆ ಗಂಡಿಗೆ ಕುಣಿಸ್ಯಾಡುತಿಹುದು | ಕುಸುಮದ ಒಳಗಿನ ಪರಿಮಳದ್ಹಾಂಗೆ | ಹಾಂಗೆ ನಿಜವಸ್ತು 3 ಕೆಳಗದ ಮೇಲದ ಎಡಕದ ಬಲಕದ ಹಿಂದದ ಮುಂದದ ಜಡವದ | ಒಳ ಹೊರಗೆ ತುಂಬೇದ ಬ್ರಹ್ಮಾಂಡ ಮೀರೇದ | ಚಂದ್ರನ ಒಳಗಿನ ಬೆಳದಿಂಗಳ್ಹಾಂಗ ಹಾಂಗೆ ನಿಜವಸ್ತು 4 ನರಸಿಂಹ ಸದ್ಗುರು ರಾಮನ ದಯದಿಂದ ಪರವಸ್ತು ಎನಗೆ ಪ್ರಕಟಾಯಿತೊ ಪರರ ಮುಖದಿಂದಹೇಳುವದಲ್ಲ | ಪರವಸ್ತು ತಿಳಿದಂಥ ಯೋಗಿಯೆಬಲ್ಲಾ || ಹಾಂಗೆ ನಿಜವಸ್ತು 5
--------------
ನರಸಿಂಹ
ದಾಸನಾಗು ಹರಿಯ ದಾಸನಾಗು ಮೋಸಹೋಗದೆ ಭವಕೆ ಬ್ಯಾಸರಾಗು ಪ ಭಾನುಮಂಡಲ ಕಂಡು ಶ್ವಾನನುಬ್ಬರಿಪಂತೆ ಭೂನಾಥನಡಿವಿಡಿದು ಬಾಳ್ವೆ ನಿನಗೆ ಹೀನಮಾನವ ಕಂಡಣಕೆ ನುಡಿದರು ಸರಿಯೆ ಜ್ಞಾನನಿಧಿ ಹರಿಭಕುತಿಯ ಲೆಕ್ಕಿಸದೆ ಮಾಡು1 ಕಾಳುವೆಗ್ಗಳವಾಗೆ ಸುಮತಿ ಸಂಗ್ರಹಿಪಂತೆ ಬಾಳುವೆಯೊಳ್ಹರಿಸೇವೆ ಬಲು ಅಗ್ಗವಂತೆ ಕೀಳು ಜನರಲ್ಲಿ ಲೌಕಿಕತೆ ಮರುಳಾಗಿ ಸಂತೆ ಕೇಳುವವರಾರು ಹರಿಭಕುತಿ ಮಾಡುವವರು2 ಮಾರಿಗಾಹುತಿಯಾಗ್ವ ಕುರಿಮೇಕೆ ತೆರನಂತೆ ಘೊರ ಜವನನು ಮರೆತು ಕೊಬ್ಬುವವರಂತೆ ಶೇರು ನರಸಿಂಹವಿಠ್ಠಲನಂಘ್ರಿಕಮಲವಾ ಆರಾರು ಬಾಧೆಯಿಲ್ಲದೆ ಗತಿಯ ಕೊಡುವಾ 3
--------------
ನರಸಿಂಹವಿಠಲರು
ದುಮು ದುಮು ಬಸವಂತನ ಹಬ್ಬಾ ಪ ರಾಮಕೃಷ್ಣ ಗೋವಿಂದ ಮುರಾರಿ | ಶಾಮ ಸುಂದರ ಸುರಜ ಸಹಕಾರಿ | ಕಾಮಿತ ಫಲಗಳ ನೀವ ಉದಾರಿ | ಶ್ರೀ ಮಾಧವನೇ ಕಾಯೋ ಚರಣವ ದೋರಿ 1 ಬನ್ನ ಬಡುತಲಿ ಬಲು ಭವದಲಿ ಬಂದೆ | ಮುನ್ನಿನ ತಪ್ಪವನೆಣಿಸದೆ ತಂದೆ | ಚೆನ್ನಾಗಿ ರಕ್ಷಿಸು ನಮೋ ನಮೋ ಎಂದೆ 2 ಈ ರೀತಿಯಿಂದಲಿ ಹರಿಯ ಕೊಂಡಾಡಿ | ಆ ರಾಧಿಪ ನವವಿಧದಲ್ಲಿ ಕೂಡಿ | ನಾರಕ ಭಯಗಳುವನು ಮೂಲದೀಡ್ಯಾಡೀ | ಸೂರ್ಯಾಡು ಸ್ವ ಸುಖ ಎಲೊ ಹುಚ್ಚು ಖೋಡಿ 3 ಮುನ್ನಿನ ಪುಣ್ಯದಿ ನರದೇಹ ತಾಳಿ | ಮಾನವನಾಗಿ ಹರಿಕಥೆ ಕೇಳಿ | ಚೆನ್ನಾಗಿ ವಿಷಯದಲನುದಿನ ಬಾಳೀ | ವೈರಿ ನೀನಾದೆ ಗೈಯ್ಯಾಳಿ 4 ಮೃಗಜಲ ಹೋಲುವ ವಿಷಯಾ ನಂದಾ | ಬಗೆದೆಲೋ ಶಾಶ್ವತವೆಂದು ನಿನ್ನಿಂದಾ | ಭಕುತಿಯ ಮಾರ್ಗವ ಬಿಟ್ಟೆಲೋ ಛಂದಾ | ಜಗ ದೊಳಗಾದೆಲೋ ನೀ ಮತಿ ಮಂದಾ 5 ಹೆಂಡರು ಮಕ್ಕಳು ಮಮತೆಯ ಸ್ಥೂಲಾ | ಖಂಡದಿ ಬಿದ್ದಿದೆ ಕಾಲಿಗೆ ಕೋಳಾ | ಅಂಡಲೆವುತ ಹೊಟ್ಟೆಹೊರೆದೆಲೋ ಮೂಳಾ 6 ಸುಖವಿಲ್ಲ ಇದರೊಳಗಿಂದು | ಪಾದ ಹೊಂದು 7 ತ್ವರಿತದಿ ಭಾವಭಕ್ತಿಗೆ ಗಮನವಿಟ್ಟು | ತರಳನಾಗಿ ಹೋಗದಿರೆಲೋ ಕೆಟ್ಟು 8 ಚಿನುಮಯ ಗೆಚ್ಚರಗಳೆದೆಲೋ ಭ್ರಾಂತಾ | ಕುಣಿಸ್ಯಾಡುತಿ ಹನು ಅಚ್ಯುತಾನಂತಾ 9 ಒಬ್ಬರು ಶಾಸ್ತ್ರದ ಮದದಲಿ ಬಿಗಿದು ಉಬ್ಬುಬ್ಬಿ ಕುಣಿದರು ಹೇಳಲೇನಿಂದು 10 ಅಷ್ಟಮದದಿಂದ ಕಣ್ಣು ಮುಚ್ಚಿ | ಕುಟ್ಟುವಾಗ ನೆಲ್ಲಿಕಾಲನು ಘಟ್ಟಿಸಿ 11 ಸಂತರ ಕಥೆ ಕಿವಿಯಲಿ ಕೇಳಲಿಲ್ಲಾ | ಭ್ರಾಂತನೆ ನಾಳೆ ಮುರಿವನು ಹಲ್ಲಾ 12 ನೆರೆದಹಿಸುತ ದುರ್ಮದ ಬೂದಿ ಚೆಲ್ಲಿ | ನರಜನ್ಮ ಸಾರ್ಥಕ ಮಾಡೆಲೊಹುಳ್ಳಿ 13 ಕಂದನು ಸಾರಿದಾ ಹೋಳಿಯಾ ವಂದಾ | ಭವ ಬಂದಾ 14
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದುಷ್ಟ ಮನುಜ ಕೇಳೊ ನೀ ಬಲು ಭ್ರಷ್ಟನಾದೆಯಲ್ಲೋ ಪ ಎಷ್ಟು ಪೇಳಿದರೇನು ನಿನಗೆಳ್ಳಿ- ನಷ್ಟಾದರು ಮತಿ ಬರಲಿಲ್ಲ ಅ.ಪ ಶುದ್ಧ ವೈಷ್ಣವನೆಂಬೀ ನೀನು ನಿ- ಷಿದ್ಧ ಕೂಳನು ತಿಂಬೀ ಬುದ್ಧಿಪೂರ್ವಕವಾಗಿ ನಮ್ಮ ಅನಿ ರುದ್ಧನ ನಾಮದ ನೆನೆಯದಲಿರುವಿ 1 ಬಾಯೊಳು ಬಹುನೀತಿ | ಬೊಗಳುವೆ ಹೇಯ ಕರ್ಮದಿ ಪ್ರೀತಿ ಮಾಯವಾದಿಯನುತವನು ಪೊಗಳುವೆ ಕಾಯಕ್ಲೇಶ ನಿನಗಾಗದಿರದು 2 ಭಂಗ ಹೋಗದೆ ಬಾಳೊ | ಮುಂದಕೆ ಭಂಗಿಕೋರನೆ ಕೇಳೊ ರಂಗೇಶವಿಠಲನ ಮೊರೆಹೊಗು ನಿನ ದುರಿ- ತಂಗಳು ಪೋಪವು ಮಂಗನಾಗಬೇಡ 3
--------------
ರಂಗೇಶವಿಠಲದಾಸರು
ಧನವಗಳಿಸಬೇಕೆಂಥಾದು | ಈ | ಜನರಿಗೆ ಕಾಣಿಸದಂಥಾದು ಪ ಹರಿಹರ ಬ್ರಹ್ಮಾದಿಗಳೆಲ್ಲ | ಹೌದಹುದಹುದೆಂಬಂಥಾದು ಅ.ಪ ಕೊಟ್ಟರೆ ಹತ್ತಿರದಂಥಾದು | ತನ್ನ ಬಿಟ್ಟು ಹೊರ ಹೋಗದಂಥಾದು || ಬಿಚ್ಚಿದ ಗಂಟನು ಬಯಲೊಳಗಿಟ್ಟರೆ | ಮುಟ್ಟಬಾರದಾರಿಂಥಾದು 1 ಕರ್ಮವು ಬಾರದಂಥಾದು | ಜನರೋರ್ವರು ತೋರಿಸದಂಥಾದು | ನಿರ್ಮಲವಾದ ಮನಸಿಗೆ ದಾನ | ಧರ್ಮವ ಮಾಡಿಸುವಂಥಾದು 2 ಮರವನು ತಾರದಂಥಾದು | ನಿಜದರಿವಿನೊಳಗೆ ಇರುವಂಥಾದು |ಗುರು ಭವತಾರಕ ಭಜಕರ ಕಣ್ಣಿಗೆ | ತೊರಹಿಲ್ಲದೆ ತುಂಬಿದಂಥಾದು 3
--------------
ಭಾವತರಕರು
ಧುಮ್ಮಸಾಲೆನ್ನಿರ್ಯೋ ಶ್ರೀ ಗುರುವಿನ ಬಳಗವೆ ಧುಮ್ಮಸಾಲೆನ್ನಿ ಸದ್ಗುರುವಿನ ಬಳಗವೆ ಧ್ರುವ ಗುರುವಿನ ಬಳಗವೆಂದು ಗುರುತುವಿಟ್ಟು ನೋಡಿರ್ಯೋ ಅರುಹಿನೊಳು ಮುಣಗಿ ಪರಮಸುಖ ಸೂರ್ಯಾಡಿರ್ಯೋ ಗರ್ವಿನಾಹರಿಗೆ ಬಿಟ್ಟು ಹರಿದುಹೋಗ ಬ್ಯಾಡಿರ್ಯೋ ಪರ್ವಣಿದೆ ಗುರುಕರುಣ ಪಡೆದು ಪೂರ್ಣಕೂಡಿರ್ಯೋ 1 ಧುಮ್ಮಸಾಲೆನ್ನಿರ್ಯೋ ಬೆರದು ಬ್ರಹ್ಮ ಸುಖವ ಸಮ್ಯಙÁ್ಞನದಿಂದ ದೂರಮಾಡಿ ಭವದು:ಖವ ನಿಮ್ಮ ನಿಮ್ಮೊಳು ನೋಡಿ ಘನ ಕೌತುಕವ ಹ್ಯಮ್ಮಿಯೊಳಗಾಗಿ ನೀವು ಹೋಗಬ್ಯಾಡಿ ಹೋಕುವ 2 ಕಣ್ಣದ್ಯರದು ನೋಡಿರ್ಯೊ ಚಿನ್ನುಮಯ ರೂಪವ ಭಿನ್ನವೆಲ್ಲದ್ಯದೆ ತನ್ನೊಳು ಸಮೀಪವ ಪುಣ್ಯ ಹಾನಿ ಮಾಡಿಕೊಂಡು ಹಿಡಯಬ್ಯಾಡಿ ಕೋಪವ ಕಣ್ಣ ದ್ಯರಸಿಕುಡುವ ಹಚ್ಚಿ ಗುರು ತಾನ ದೀಪವ 3 ನಮ್ಮ ನಿಮ್ಮ ದ್ಯಾವರೆಂದು ಹೊಯಿದಾಡಬ್ಯಾಡಿರ್ಯೋ ಬೊಮ್ಮನ ಪಡದ ಪರಬ್ರಹ್ಮನೊಬ್ಬ ನೋಡಿರ್ಯೋ ಇಮ್ಮನಕ ಹೋಗದೆ ಒಮ್ಮನವ ಮಾಡಿರ್ಯೋ ಸುಮ್ಮನೆ ಸುವಿದ್ಯದೊಳು ಬೆರದು ನಿಜಗೂಡಿರ್ಯೋ 4 ಸುಗ್ಗಿಯೋ ಸುಗ್ಗಿಯೋ ಸುಙÁ್ಞನದ ಲಗ್ಗಿಯೋ ಭಾಗ್ಯವಿದೆ ನೋಡಿ ಭಕ್ತಿ ಙÁ್ಞನ ವೈರಾಗ್ಯಯೋ ಬಗ್ಗಿ ನಡವ ಸಾಧುಸಂತ ಜನರಿಗಿದು ಯೋಗ್ಯಯೋ ಹಿಗ್ಗಿ ಹರುಷಪಡುವ ಮಹಿಪತಿಯ ನಿಜ ಸ್ರಾಘ್ಯಯೋ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನನಗೆ ಹೊತ್ತು ಹೋಗದೆ ನಾನೆಯೆ ಆಡುವೆನನಗೆ ಹೊತ್ತು ಹೋಗದೆ ಪ ಈಶನ ಅವತಾರವಾಗಿ ಜೀವನ ಅವತಾರವಾಗಿಈಶನಾಗಿ ಜೀವ ಬೊಂಬೆಯನಾಡುವೆ1 ಜೀವರ ಹುಟ್ಟಿಸಿಯೆ ಜೀವರ ಬೆಳೆಸಿಯೇಜೀವರಲಿ ಲಯಿಸುವೆ ತ್ರೈಮೂರ್ತಿಯಾಗುವೆ 2 ಎಚ್ಚರವನೆ ಕೊಟ್ಟು ಎಚ್ಚರವನೆ ಕೊಟ್ಟುಎಚ್ಚರವನೆ ತಿಳುಹಿ ನಿಚ್ಚಳ ಚಿದಾನಂದನನು ಮಾಡುವೆ3
--------------
ಚಿದಾನಂದ ಅವಧೂತರು
ನಾಟಕವಿದು ಹಳೆ ನಾಟಕ ನೋಟಕೆ ಇದು ಬಲು ನೂತನ ಪ ನಾಟಕ ಮಂದಿರ ಜಗವೆಲ್ಲ ಕಂಡಿರ ನೋಟವು ಯಾರದೊ ಆಟವು ಯಾರದೊ ಅ.ಪ ಇರುಳೊಳು ರಾಜಾಧಿರಾಜನಿವ ಹಗಲಲಿ ಭಿಕ್ಷಕೆ ಹಾಜರಿವ ಮುಗಿವುದು ಎನ್ನಯ ಪಾತ್ರವೆನ್ನುವುದೆ ಹಗಲಿನತನಕವು ಕಾಣನಿವ 1 ಯುದ್ಧವು ದಿನವೊ ಈ ನಾಟಕದಿ ಗೆದ್ದವರೊಬ್ಬರ ತೋರಿಸಿ ಯುದ್ಧದಗೋಚಿಗೆ ಹೋಗದೆ ಶಾಂತಿಯೊ ಳಿದ್ದ ಜನರೆ ಗೆದ್ದವರಿಲ್ಲಿ 2 ಕಲಿಪುರುಷನ ದೊಡ್ಡ ಸಭೆಯಲ್ಲಿ ಕುಳಿತು ಮಾತಾಡುವರಾರು ಜನ ಕಳುಹಿಸಲೊಬ್ಬನು ಇಳೆಯೊಳಗೊಬ್ಬರ ಉಳಿಸದೆ ಗೆಲುವೆನು ನೋಡು ಪ್ರಭು 3 ಶೌರ್ಯ ಸಾಹಸ ಕಾಪಟ್ಯಗಳಾ ಶ್ಚರ್ಯವು ಒಂದೊಂದು ದೃಶ್ಯದಲೂ ಯಾರ್ಯರೆಂಬುದ ಕಾಣದೆ ವೇಷದ ಮರ್ಯಾದೆಯು ವರ್ಣಿಪುದೆಂತು 4 ಕುಣಿವರು ಒಂದೆಡೆ ದಣಿವರು ಒಂದೆಡೆ ಕೊನೆ ಮೊದಲಿಲ್ಲವೀ ನಾಟಕಕೆ ಪ್ರಣಯಹನನ ದೃಶ್ಯಗಳನು ಒಂದೇ ಕ್ಷಣದಲಿ ತೋರುವ ಅಸದೃಶ್ಯದ 5 ಹೊಸ ಹೊಸ ದೃಶ್ಯವು ಹೊಸ ಹೊಸ ಪಾತ್ರವು ಪುಸಿಯಲ್ಲವು ಈ ನಾಟಕವು ಶಶಿಕುಲದರಸ ಪ್ರಸನ್ನನಾಗಿ ತಾ ಮುಸಿ ಮುಸಿ ನಗುತಲಿ ನೋಡುತಿಹ 6
--------------
ವಿದ್ಯಾಪ್ರಸನ್ನತೀರ್ಥರು
ನಿಜ ವಸ್ತುನೆ ಮುಂದುಗಾಣಿ ಥಳ ಥಳ ಗುಡುವುತ ಹೊಳೆವುತಲ್ಯದೆ ಬಲಿಯೊ ಸದ್ಗುರು ಸುಪ್ರಾರ್ಥನೆ ಧ್ರುವ ಜನ್ಮದ ಸಂದೇಹಗಳೀತೆ ಒಂದಾದರ ಮಾತಿಗಿಳಿಯಿತೆ ನಿಜಘನ ನೆಲೆಗೊಳ್ಳಿತೆ ಹೊಂದಿತೆ ಅರಿಯದಿಹುದು ಒಳಿತೆ1 ನಿನ್ನೊಳು ನೀ ನಿಜ ತಿಳಿಯದೆ ಖೂನ ಇನ್ನೊಬ್ಬರಿಗ್ಹೇಳುವುದೇನ ಕನ್ನಡಿಯೊಳು ಕಾಂಬುವ ಕಾಂಚನ ಸನ್ನಿದಾಗುವದೆ ಪೂರ್ಣ ಭಿನ್ನಭೇದವು ಹೋಗದೆ ಅನುಮಾನ ಚೆನ್ನಾಗ್ಯಾಗುವದೆ ಜ್ಞಾನ ಧನ್ಯಗೈಸುವ ಸದ್ಗುರು ಕರುಣ ಮನ್ನಿಸಿ ಪಡಕೊ ನಿಧಾನ 2 ಮುಗ್ದದಿ ಗುರುಪಾದ ಈಗ ಏನೆಂದು ತಾ ತಿಳಿಯುವದು ಆಗ ಸ್ವಾನುಭವದ ಸ್ವಸುಖಭೋಗ ಅಣುರೇಣುದೊಳಗ ತಾ ಬ್ಯಾಗ ದೀನ ಮಹಿಪತಿಗದೆ ಒಳಹೊರಗೆ ಫನ ಭಾಸುತಲ್ಯದೆ ಆವಾಗ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಿತ್ಯ ನಿರುಪಮ ಚಿದಾನಂದ ಕರುಣಾಬ್ಧಿ ನೀನೆ ದೊರಕೆ ನಿಲುಕೆ ಅಪಮಂಗಳನೆ ಮಂಗಳವನಿತ್ತೆ ಮನಸಿಗೆ ನೀನು ಅಂಗ ಮಂಗಳವಾುತುಹಿಂಗಿದವು ದುರಿತಗಳು ಸಂಗವಿದ್ದರು ಜಡದ ತೊಂಗವವ ಮನ ಮೀರಿತುನುಂಗುತಿದೆ ದೋಷಗಳ ಬಂದಡೊಡಬನ ತೆರದಿ ಭಂಗವೆಂಬುದು ಹೋುತುಅಂಗ ಲಿಂಗದ ಕಾಂತಿ ಹೊಂಗಿ ಹೊರಹೊಮ್ಮುತಿದೆ ರಂಗ ನಿನ್ನೊಲವಾುತು ುನಿತು 1ಹೊನ್ನಿನೊಳಗಿದ್ದ ಮಲಿನವನಗ್ನಿ ಕಳಚಿದರೆ ಮುನ್ನಿನಂದದಿ ಮಲಿನವೆಹೊನ್ನಾದ ಕಬ್ಬಿನವು ಕಬ್ಬಿನದ ಸಂಗದಲಿುನ್ನು ಕಬ್ಬಿನ ಭಾವವೆಬೆಣ್ಣೆ ಕ್ಷೀರದಿ ಬಂದು ಘೃತವಾದ ಬಳಿಕ ತಾ ಬೆಣ್ಣೆಯಲ್ಲದೆ ಕ್ಷೀರವೆನಿನ್ನ ಕೃಪೆುಂದ ಮಂಗಳನಾಮವನು ಸ್ಮರಿಸೆ ನಿನ್ನವಗೆ ದೋಷ ಬಹವೆ ಇಹವೆ 2ಬಾಳೆಯನು ಬಿತ್ತಿ ಪ್ರತಿ ದಿವಸ ನೋಡಿದಡಲ್ಲಿ ನೀಳವಾಗಿಹುದು ಸುಳಿಯುಕಾಲ ಬಂದರೆ ಗೊನೆಯು ಹಾಯ್ದು ಫಲವಾಗಿರಲು ಮೇಲೊಮ್ಮೆಯುಂಟೆ ಯೆಲೆಯುಕಾಲ ಕರ್ಮಾಧೀನವಾಗಿರುವ ಸಂಸಾರ ಲೋಲ ಮನಸಿನ ವೃತ್ತಿಯುಜಾಲದಿಂದಿರಲಲ್ಲಿ ನಿನ್ನಂಘ್ರಿ ಸ್ಮರಣೆುಂಮೇಲುಂಟೆ ಕರ್ಮಗತಿಯು ಸ್ಥಿತಿಯು 3ವೃತ್ತಿ ಮಾಯಾಕಾರ್ಯ ಮಾಯೆ ನಿನ್ನಾಧೀನ ವೃತ್ತಿ ಮಾಯೆಯು ಕಲ್ಪಿತಸುತ್ತಿ ಸುಳಿಸುಳಿದಾಡಿ ಸತ್ಯದಂದದಿ ತೋರಿ ಮತ್ತೆ ನಿನ್ನೊಳಗರ್ಪಿತಚಿತ್ತು ತಾನೆ ನಾಮರೂಪಾದ ಬಗೆುಂದ ಚಿತ್ತು ಚಿತ್ತಾಹುದುಚಿತಸತ್ಯಸಂಧನು ನೀನು ಚಿತ್ತವನು ಬಿತ್ತರಿಸಿ ವೃತ್ತಿಯಾುತು ಬೆಳೆಯುತಾ ಇರುತಾ 4ಮನದ ಸಂಶಯ ಬಿಡದು ಶ್ರವಣಮನನಾದಿಗಳನನುದಿನವು ಮಾಡುತಿರಲುಮನಕೆ ಸಾಕ್ಷಿಕನಾದ ನೀನು ಘನಮಾಯೆಯನು ಮನಕೆ ಮರೆಮಾಡುತಿರಲುಚಿನುಮಯನೆ ಮಾಯೆಯನು ಕಡೆಗೆ ತೆಗೆಯಲು ಜ್ಞಾನ ಜನಿಸುವುದು ನೀನು ಕೊಡಲುಇನಕೋಟಿಸಂಕಾಶ ಇಭರಾಜದುರಿತಹರ ಎನಲು ನಿಜವಾಗುತಿರಲು ನಿಲಲು 5ತರಣಿಕಿರಣಗಳಿಂದ ಜನಿಸಿದಾ ಮೇಘಗಳು ತರಣಿಯನು ಮುಚ್ಚಲಳವೆತರಣಿ ತಾನೆನದಿವನು ಹರಹಿ ಹಿಂದಕೆ ತೆಗೆಯೆ ನೆರೆ ಹಿಂಗಿ ಹೋಗದಿಹವೆಪರಮಪುರುಷನು ನೀನು ಸ್ಮರಿಸಿ ಮಾಯೆಯ ಬೀಸಿ ತಿರುಗಿಸಲು ಮಾಯೆಗಿರವೆದುರಿತವಾಗಿರೆ ಜನಕೆ ನೆರೆ ಭಕ್ತಿಯನು ನೀನು ಕರುಣಿಸಲು ಮತ್ತೆ ಭವವೆ ಧ್ರುವವೆ 6ಅರಣಿುಂದುದುಭವಿಸಿದನಲ ಮುನ್ನಿನ ತೆರದ ಅರಣಿಯಾಗಿಯೆ ತೋರ್ಪನೆಅರೆದು ತಿಲವನು ತೆಗೆಯೆ ತೈಲವನು ತಿಲ ಬಳಿಕ ಇರುವದೆ ತೈಲದೊಡನೆಬೆರೆದು ಕರ್ಪುರವಗ್ನಿಯೊಡನಾಡಿ ಬೇರ್ಪಟ್ಟು ಮೆರೆವುದೆಂತಗ್ನಿಯೊಡನೆತಿರುಪತಿಯ ವೆಂಕಟನೆ ನಿನ್ನ ಚರಣದೊಳಿಟ್ಟ ಶರಣ ಮುನ್ನಿನ ಮನುಜನೆಯಹನೆ 7ಓಂ ಪುಣ್ಯ ಶ್ಲೋಕಾಯ ನಮಃ
--------------
ತಿಮ್ಮಪ್ಪದಾಸರು
ನಿನ್ನಾಜ್ಞದವನೊ ನಾನೆನ್ನನೊಪ್ಪಿಸದೆಬಿನ್ನಹ ಚಿತ್ತೈಸಿ ಎನ್ನ ಪಾಲಿಸೊ ಕೃಷ್ಣ ಪ ಏಳು ಸುತ್ತಿನಕೋಟೆ ಯಮನಾಳು ಮುತ್ತಿಕೊಂಡುಪಾಳು ಮಾಡೇವೆಂದು ಪೇಳುತಿರಲುಆಳು ಸಾಮಗ್ರಿಯ ಅಪಾರ ಬಲಮಾಡಿಕೋಳುಹೋಗದ ಮುನ್ನ ಕೋಟೆ ರಕ್ಷಿಸಬೇಕು 1 ಆರು ಮೂರರ ಬಾಧೆ ಆರು ಎಂಟರ ಬಾಧೆಕ್ರೂರರೈವರ ಬಾಧೆ ಹೋರುತಲಿದಕೋಆರಿಂದ ನಿರ್ವಾಹವಾಗದು ಇವರನುಮೇರೆಲಿಡುವನೊಬ್ಬ ಧೀರನ್ನ ಬಲಮಾಡೊ2 ಲಕ್ಷ ಎಂಭತ್ತು ನಾಲ್ಕು ಜೀವರಾಶಿಗಳೊಳುಸೂಕ್ಷ್ಮದ ಕೋಟೆಂದುಪೇಕ್ಷಿಸದೆಪಕ್ಷಿವಾಹನ ನೀನು ಪ್ರತ್ಯಕ್ಷ ನಿಂತರೆಅಕ್ಷಯ ಬಲವೆನಗೆ ರಕ್ಷಿಸೊ ಸಿರಿಕೃಷ್ಣ 3
--------------
ವ್ಯಾಸರಾಯರು