ಒಟ್ಟು 558 ಕಡೆಗಳಲ್ಲಿ , 89 ದಾಸರು , 469 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಮ್ಮಮ್ಮ ಗೋಪಿಯೆನೆ ಏನೆಂಬೆ ಪರ ಬೊಮ್ಮ ಮಗನೆಂಬೊ ಧೈರ್ಯಕೆ ಪ. ಬೊಮ್ಮನಯ್ಯನ ಸಿರಿರಮ್ಮೆ ಪತಿಯ ಘನ ಪೆರ್ಮೆ ಗುಣಗಣನಿಲಯನ ಅ.ಪ. ಹೊಳೆವ ಶ್ರೀರೂಪು ವಟಪತ್ರದಲ್ಲಿ ಪ್ರಳಯಜಲಧಿಯ ಶಯನನ ಸೆಳೆಮಂಚದ ಮ್ಯಾಲೆ ಮಗ್ಗುಲೊಳಿಟ್ಟು ತನ್ನ ಗೋಪಿ 1 ಚರಾಚರಂಗಳ ಸೃಷ್ಟಿ ಸ್ವಯಿಚ್ಛೆಯಿಂದ ಪುರುಷರೂಪವ ಧರಿಸಿದ ಪರಮಮಂಗಳ ಮೂರುತಿಯ ತನ್ನ ಗೋಪಿ 2 ಕತ್ತಲೆಯನು ನುಂಗಿ ತತ್ವಂಗಳನು ಕೊಂಡು ಮತ್ತೆ ಬೊಮ್ಮಾಂಡದೊಳಗೆ ಪೊಕ್ಕು ತತ್ವಸಾರದಿಂದೊಪ್ಪುವ ಕೊಮರನ ಗೋಪಿ 3 ಅದಭ್ರಸೃಷ್ಟಿಗಳಿಗಗೋಚರನಾದ ಆದಿಮೂರುತಿ ¸ಚ್ಚಿದಾನಂದನ ಸದಾ ತನಯನೆಂದೆತ್ತಿ ಮುದ್ದಿಸಿ ಸುಖ ಗೋಪಿ 4 ಚತುರುಭುಜ ಶಂಖ ಚಕ್ರ ಗದೆ ಪದುಮ ಸುತಪ ಪ್ರಶ್ನೆಗೆ ವರವಿತ್ತ ಶ್ರುತಿಶಿರೋಮಣಿಯೆಂದರಿಯದೆ ತಾ ಗೋಪಿ 5 ಬೊಮ್ಮಕಲುಷಾನಂತ ಸಹಸ್ರಗಳ ನಿಮಿಷಮಾತ್ರದಿ ಪಡೆದನ ಬೊಮ್ಮಾಂಡವೆ ತನ್ನ ರೋಮಕೂಪದಲ್ಲಿಪ್ಪ್ಪ ರನ್ನವೆ ಮಗನೆಂದಳೆ ಗೋಪಿ6 ಅನ್ನಂತ ರವಿತೇಜಕಿರೀಟದ ಅನ್ನಘ್ರ್ಯ ಸರ್ವಾಭರಣ ಪೊನ್ನ ವಸ್ತ್ರವನ್ನುಟ್ಟ ಅದ್ಭ್ಬುತ ಬಾಲಕನ ಗೋಪಿ 7 ಅನ್ನಂತಾನಂತ ಜೀವಗಣಗಳು ಅನ್ನಂತಾನಂತ ಕರ್ಮಗಳು ಅನ್ನಂತಾನಂತ ಗಾಯತ್ರಿಗೆ ಕÀರ್ತೃ ವಿಷ್ಣು ಗೋಪಿ 8 ಅನ್ನಂತಾಸನ ಶ್ವೇತದ್ವೀಪ ವೈಕುಂಠ ದನ್ನವರತ ವಾಸವಾಗಿಪ್ಪನ ಅನ್ನಿಮಿಷರ ಯೋಚನೆಗೆ ಒಲಿದನ ಗೋಪಿ 9 ಧರ್ಮದÀ ವೃದ್ಧಿಗೆ ಧರ್ಮದ ಹಾನಿಗೆ ತನ್ನಿಚ್ಛೆಯಲವತರಿಸಿದ ಮಮ ಪ್ರಾಣಾಹಿ ಪಾಂಡವನೆನಿಸಿದ ಗೋಪಿ 10 ಉದ್ದಾಮ ಕಾಂಚೀದಾಮ ಕಂಕಣ ಶ್ರೀ- ಮುದ್ರೆಯ ಶ್ರೀವತ್ಸಕೌಸ್ತುಭಧರನ ಮಧ್ವಮುನಿಗೆ ತಾನೊಲಿದು ಬಂದನ ಗೋಪಿ 11 ಸರಸಿಜಬೊಮ್ಮಾಂಡ ಒಡೆದಾಗ ವಿರಿಂಚಿ ತೊಳೆದ ಪಾದೋದಕವ ಹರ ಸೇವಿಸಲಾಗ ಶಿವನ ಮಾಡಿದ ಹರಿಯ ಮಗನೆಂದಳೆ [ಗೋಪಿ] 12 ದೇವಕಿ ಉದರದಲ್ಲಿದ್ದಾಗ ಬ್ರಹ್ಮಾದಿ ದೇವರಿಂದಲ್ಲಿ ಕೀರ್ತಿಸಿಕೊಂಡು ಭಾವಕಿ ದೇವಕಿ ವಸುದೇವನಲ್ಲಿ ಪಿತೃ ಗೋಪಿ 13 ಶಿಶುರೂಪವ ತೋರಿದ ಬೊಮ್ಮನ ಕಂಡು ವಸುದೇವಗೆ ನದಿ ಎಡೆ ಬಿಡೆ ಸಾಸಿರನಾಮ ಚಿತ್ರವಾಗಿದ್ದ ಜಗ- ಗೋಪಿ 14 ಪಾಲಗಡಲಲ್ಲಿ ಪವಡಿಸಿಪ್ಪನ ಕಾಲಮೇಲೆ ಮಲಗಿಸಿಕೊಂಡು ನೀಲಮೇಘಶ್ಯಾಮಯೆಂದು ಬಣ್ಣಿಸುತಲಿ ಗೋಪಿ 15 ಆದಿದೇವನು ಬ್ರಹ್ಮಸೂತ್ರವ ಕಲ್ಪಿಸಿ ವೇದ ವಿಭಾಗವ ಮಾಡಿದನ ಆದರದಿಂತುಂತೆಂದು ಕಲಿಸಿ ಸಂ ಗೋಪಿ 16 ಭಾನುಶತಕೋಟಿತೇಜಪ್ರಕಾಶನ್ನ ಆನಂದವನೆ ನೋಡಿ ಮನ ಉಬ್ಬಿ ಆನಂದನಿಧಿಯ ತೊಡೆಯ ಮ್ಯಾಲೆಯಿಟ್ಟು ಗೋಪಿ 17 ಶೃಂಗಾರನಿಧಿಯನ್ನು ಬಾಯೆಂದು ಕರೆದು ರ- ಥಾಂಗಪಾಣಿಯನೆ ಎತ್ತಿಕೊಂಡು ತಿಂಗಳನೋಡಯ್ಯ ಕಂದ ಎಂದಾತನ ಗೋಪಿ 18 ಸನ್ನಕಾದಿಗಳಯ್ಯನ ಪಿತನ ಕರೆ ದೆನ್ನ ಮಾಣಿಕವೆಯೆಂದಪ್ಪಿಕೊಂಡು ಹೊನ್ನ ತಾ ಗುಬ್ಬಿಯೆಂದಾಡು ಎನ್ನಯ್ಯನೆ ಗೋಪಿ 19 ಗಂಭೀರವಾರಿಧಿಗೆ ಅಂಬಾ ಹೂಡಿದ ತೋಳು ಇಂದಿರೆಯನೆ ಅಪ್ಪಿದ ತೋಳು ಶಂಭರಾರಿಯ ಪಿತ ತೋಳನ್ನಾಡೈ ಎಂದು ಗೋಪಿ 20 ಪಾದ ಉ- ದ್ದಂಡ ಬಲಿಯಮೆಟ್ಟಿದ ಪಾದ ಪುಂಡರೀಕಾಯತವಾದ ಪಾದದಿ ಪ್ರ- ಗೋಪಿ 21 ನಿತ್ಯತೃಪ್ತನು ಹಸ್ತ (ಸಿದ?) ನೆಂದೆನುತಲೆ ಇತ್ತ ಬಾ ಹೊರೀಯೆಂದಾದರಿಸಿ ಹೊತ್ತಾರಿಂದಮ್ಮೆ ಉಣ್ಣದಿರಲು ಹೊಟ್ಟೆ ಗೋಪಿ 22 ಅಮ್ಮೆ ಉಂಬುವ ಪುಟ್ಟ ಬಾಯ ಮುದ್ದಿನ ಮಾ ರಮ್ಮೆಯನರಸುವನಚ್ಚರಿಯ ಅಮ್ಮೆ ನೋಡಿ ನಗುವ ಮುದ್ದು ಬಾಲಕನ ಪರ ಗೋಪಿ 23 ತಾಯ ಮೊಗವ ನೋಡುತ್ತಾಕಳಿಸುತ ಬಾಯಲ್ಲೀರೇಳುಲೋಕವ ತೋರೆ ಆಯತೆ ನೋಡಿ ಮರಳಿ ಕಂಗೆಟ್ಟು ವಿಶ್ವ- ಗೋಪಿ 24 ಜ್ಞಾನಘನನ ವಿಶ್ವತೋನಯನನ ಆನಂದಚರಿತ್ರನ ಅವ್ಯಕ್ತನ ಜ್ಞಾನಿಗಳ ಹೃತ್ಕಮಲದೊಳಿಹನ ಕಣ್ಣಮುಚ್ಚಿ ಗೋಪಿ 25 ಹಾಲ ಹರವಿಯ ಒಡೆದು ಬಂದು ಗೋ- ಪಾಲ ನೀನೆಲ್ಲಿಗೆ ಪೋದೆಯೆಂದು ಕಾಲಕರ್ಮಂಗಳಿಗೆ ಕಾರಣವಾದೋನ ಗೋಪಿ 26 ಜಗದುದರ ಜಂಘಿಸುತ ಅಡಿಯಿಡೆ ಮೃಗಲೋಚನೆ ಮೈಮರೆದಿರೆ ಅಗಣಿತಮಹಿಮನು ಚರಿಸುತ ಬರ ಗೋಪಿ 27 ಆಮ್ಮಹಾ ಮತ್ತಿಯ ಮರನ ಮುರಿದು ಸುರರು ಜಯವೆನ್ನೆ ಶ್ರೀಮಣಿ ಶಿವರಿಂದ ಕೀರ್ತಿಸಿಕೊಂಬ ಗೋಪಿ 28 ಕತ್ತಲೆಯೊಳಗಿದ್ದು ಅಂಜಿದ ಮಗನೆಂದು ಶ್ರುತಿಮಂತ್ರಗಳಿಂದುಚ್ಚರಿಸಿ ಮೃತ್ಯುಂಜಯನ ಪಿರಿಯನೆತ್ತಿಕೊಂಡು ಗೋಪಿ 29 ಶೇಷಶಾಯಿಯ ಹಾಸಿ ಮಲಗಿಸಿ ಚಾರು- ವೇಷನ್ನ ನಿದ್ರಿಗೈಸುವೆನೆಂದು ಸಾಸಿರಮುಖಭೂಷಣನ ಪಾಡುತ್ತ ಸಂ- ತೋಷದಿ ಮೈಮರೆದಳೆ ಗೋಪಿ30 ತ್ರಿಗುಣಾತೀತನ್ನ ಪೊಂದೊಟ್ಟಿಲೊಳ್ಮಲಗಿಸಿ ಜೋಗುಳ ಪಾಡುವ ಯಶೋದೆÉಯ ಎಸೆವ ನೀಲವಸ್ತ್ರನು ಪಾಡೆನ್ನೆ ಕೃಷ್ಣ ಅನು- ಗೋಪಿ 31 ಹರಿಯ ಹೊರಿಸುವಳಲ್ಯಲ್ಲಿ ನಿಮ್ಮಣ್ಣ ವರ ಸಿಂಹಾಸನವಾಗಿಪ್ಪನೆಂದು ಸಿರಿಯಕೂಡೇಕಾಂತದಲಿಪ್ಪನ್ನ ಗೋಪಿ 32 ಪಾದ ನಿಮ್ಮಣ್ಣನ ಶಿರದಲೊಪ್ಪಿದೆÀಯೆಲೆ ಕಂದ ಸುರವರರ ಭಾಗ್ಯನಿಧಿಯೆ ಬಲರಾಮ ಗೋಪಿ 33 ಕಣ್ಣಮುಚ್ಚಿದ ಕೃಷ್ಣನೆಂದು ತೊಟ್ಟಿಲ ಬಿಟ್ಟು ಪುಣ್ಯಾಂಗನೆ ಮೈಮರೆದಿರೆ ಅಣ್ಣ ಆಶನು ಬೆಣ್ಣೆಯ ಕಳಹೋದ ಚಿಣ್ಣನ ಕಾಣೆನೆಂದಳೆ ಗೋಪಿ34 ನೀಲಾಂಬರನ ಬೆನ್ನ ಮೆಟ್ಟಿ ನೆಲವಿನ ಮ್ಯಾಲಿನ ಬೆಣ್ಣೆಯ ಮೆಲ್ಲೆ ಕೃಷ್ಣ ಬಾಲಕಿಯರು ಕೂಡಿ ಕಳ್ಳ ಸಿಕ್ಕಿದನೆಂದು ಗೋಪಿ 35 ಹುಟ್ಟ್ಟದ ಬೆಳೆಯದ ಹಸುಳೆ ಅಣ್ಣನ ಬೆನ್ನ ಮೆಟ್ಟಿ ನೆಲವು ಜಗ್ಗಿದನೆಂದು ರಟ್ಟು ಮಾಡಿದಿರೆಲ್ಲ ನೋಡಿರವ್ವಾ ಎನ್ನ ಗೋಪಿ 36 ಕಂದನ ಎತ್ತಿಕೊಂಡು ರಾಜ್ಯದಂಗನೆಯರ ಮಂದಿರವನೆ ಪೊಕ್ಕು ಬರುತಿರೆ ಒಂದೊಂದು ಕೌತುಕವನೆ ಕಂಡಾನಂದ ಗೋಪಿ 37 ಶಶಿಮುಖಿಯಂಗಳದ ಹಾಲಹಳ್ಳ ಮೊಸರ ಮಡುವು ಬಾಗಿಲ ಮುಂದೆ ಪ್ರಸಾದವೆಲ್ಲ ಬೆಣ್ಣೆ ಫಲಿತವಾಗಿರೆ ಗೋಪಿ 38 ವಾರಿಧಿಯೊಳಗಿದ್ದ ಪನ್ನಗಶಾಯಿಯ ತೇರ ಮೇಲೆ ಇದ್ದ ಬಾಲಕನ ಮೂರುತಿ ಒಂದೆಂಬೋ ಅ- ಗೋಪಿ 39 ದ್ರೌಪದಿಗಕ್ಷಯವಿತ್ತನ ಗುರು ಸಾಂ- ದೀಪಗೆ ಸುತನ ತಂದಿತ್ತನ ಪ್ರೀತಿಯಿಂದಲಿ ಯಜ್ಞಪತ್ಯರಿಗೊಲಿದ ಸುಪ್ರ- ಗೋಪಿ 40 ಘಾತಪುತ್ರರ ಆರು ಮಂದಿಯ ತರಹೇಳಿ ಮಾತೆಯೆಚ್ಚರಿಸೆ ಅಂಗೀಕರಿಸಿ ಅತಿ ಬೇಗದಿಂದಣ್ಣನ ತಂದು ತೋರಿದ ಅ- ಗೋಪಿ 41 ಭಕುತ ಶ್ರುತದೇವ ಬಹುಳಾಶ್ವರಾಯಗೊಲಿ ದೇಕ ಕಾಲದಿ ರೂಪೆರಡಾಗಿ ಆ ಕರುಣಾಬ್ಧಿಯ ಮಾಯಾರೂಪಿÀನ ಪರಿ- ಗೋಪಿ 42 ಪೂತನಿ ಶಕಟವತ್ಸಾಸುರ ವೃಷಭÀನ ಪಾತಕಿ ಚಾಣೂರ ಕುಂಜರನ ಘಾತಿಸಿ ಕಂಸನ್ನ ರಂಟೆಯಾಡಿದ ಬಲು ಭೂತನ್ನ ಮಗನೆಂದಳೆ ಗೋಪಿ43 ಬಾಲತನದಲ್ಲಿ ಸಖನಾಗಿ ಬಂದು ಕು- ಚೇಲ ತಂದವಲಕ್ಕಿಯ ಧರಿಸಿ ಮೇಲುತನದಿಂದ ಸೌಭಾಗ್ಯವಿತ್ತ ಶ್ರೀ ಲೋಲನ್ನ ಮಗನೆಂದಳೆ ಗೋಪಿ&ಟಿbsಠಿ
--------------
ವಾದಿರಾಜ
ಅವಗೆಲ್ಲಿಹುದೋ ನಿಜ ಮುಕ್ತಿ | ದಾವಗಿಲ್ಲವೋ ಗುರುಪಾದ ಭಕ್ತಿ ಪ ತಂದಿ ತಾಯಿ ಗುರು ಬಂಧು ಬಳಗಾ | ಎಂದು ಹಂಬಲಿಡದೆ ಮನಲೀಗಾ 1 ಗುರು ಕಂಡಾಗಳೆವೆ ಶರಣೆಂಬಾ | ತಿರುಗಿ ನೋಡಲು ಮರವನು ಡೊಂಬಾ2 ಹೊರಗ ದೋರುವ ಡೊಂಬ ಅನೇಕ | ಗುರುಸೇವೆಗೆ ಹೋದನು ಹೋಕಾ 3 ಪೂಜೆ ಸರ್ವೋಪಚಾರದಿ ಮಾಡಿ | ತ್ಯಾಜ ಪಡಿಯನು ಗುರುದಯ ಕೂಡಿ4 ಪರಮ ಗತಿಗಿದೇ ಕಾರಣವೆಂದು | ಗುರುಮಹಿಪತಿ ಬೋಧಿಸಿದನಿಂದು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅವನೆವೆ ದಾನವನು ನೋಡಿರೋ | ಅವನವೇ ದಾನವನು ಪ ದಾವನು ಸಾಕುವ ದೇವರ ಮರೆದು | ಅವಿವೇಕತನದಲಿ ಜೀವಿಸುತಿಹಾ ಅ.ಪ ವಿಷಯದ ಸಂಭ್ರಮದಾ ಸ್ಥಿರಪಟ್ಟಾ | ವಸುಧಿಲಿ ಬಗದಾವಾ | ಆಶನ ವ್ಯಸನದೊಳು ಪಶುವಿನ ಪರಿಯಲಿ | ನಿಶಿದಿನ ಗಳೆವುತ ದೆಶೆಗೆಟ್ಟು ಹೋದಾ 1 ಸಾಧು ಸಂಗಕ ದೂರಾ ಶ್ರವಣದ | ಹಾದಿಗೆಂದಿಗೆ ಬಾರಾ | ಸಾಧಿಸಿ ಕುವಿದ್ಯಾವಾದಾ ಆಟಗಳನು | ಸಾದರ ನೋಡುತಾ ತಾ ದಿನಗಳೆವಾ 2 ಗುರು ಮಹಿಪತಿ ಬೋಧಾ ನಂದನು | ಸಾರಿದನಾ ಹಿತವಾದಾ | ಹರಿನಾಮಾವೆಂದಿಗೆ ಸ್ಮರಿಸು ಮುಖದೊಳು | ನರದೇಹವೆಂಬುದು ಬಾರದು ನೋಡಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಅಹಹ ಮೋಸ ಹೋದೆನಯ್ಯ ಹರಿಯೆ ನಿನ್ನ ನೆನೆಯದೆ ಪ ಇಹದ ಭೋಗ ನಿತ್ಯವೆಂದು ಮೆರೆದೆ ನಿನ್ನ ನೆನೆಯದೆ ಅ ಹೇಯವಾದ ದೇಹವನ್ನು ಶ್ಲಾಘನೀಯವೆಂದು ನಾಲ್ವರೊಡನುಪಾಯದಿಂದ ಹೇಮದಂತೆ ಬಣ್ಣಗಟ್ಟಿಬಾಯ ಬಡಿದು ತಂದು ತಂದುಕಾಯ ಕಳದೆನಲ್ಲದೆ 1 ಚಂಚಲತ್ವ ಬಲವು ಫಲವು ಜಾಲ ಕೋಪ ತಾಪದಿಂದವಂಚನಾರ್ಥ ಹಲವು ಕೆಲವು ಮಿಂಚಿನಂತೆ ಸುಳಿಸುತಸಂಚುಮಾಡಿ ಕಾಲನವರ ವಂಚನೆಗಳ ತಿಳಿಯದ್ಹೋದೆಪಂಚಬಾಣನಯ್ಯ ಕಾಯೊ ಎನ್ನವಗುಣಗಳನೆಣಿಸದೆ2 ದಿಕ್ಕುದೆಸೆಯದಾರೊ ಅಕ್ಕರದಿಂದಾರ ಕರೆವೆಉಕ್ಕಿ ಸವಿದು ಮನುಜರೊಡನೆಸೊಕ್ಕಿ ದಿನವ ಕಳೆದೆನೆನಗೆತಕ್ಕುದಾಯಿತಯ್ಯ ಕೇಳು ಒಡೆಯ ಆದಿಕೇಶವ3
--------------
ಕನಕದಾಸ
ಆಗಿನ್ನೆಂಥ ಕವತುಕ ಕಂಡೆ ಅಮ್ಮಿನ ಎಂಥ ಅಂಜಿದೆವೆ ಪ. ಮತ್ತೆ ಎರಗಲು ಹೋದೆನಮ್ಮ ಪಾದ ಕಂಡು ಕಣ್ಣು ಕತ್ತಲೆ ಹೊಯ್ದಾವೆ ಅಮ್ಮಿನ 1 ಪಂಚ ಹಸ್ತ ಕಂಡು ಮನದಲೆ ಚಂಚಲಗೈಯ್ದೆನೆ 2 ಅತ್ಯಂತ ಪ್ರೇಮದಲಿ ದ್ರೌಪತಿ ಹತ್ತು ಹಸ್ತ ಕಂಡು ಮೈಯ ಮರೆತೆನೆ ನಾನು 3 ಬಾರಿ ಬಾರಿಗೆ ಬೆದರಿಬೆಚ್ಚಿ ನಾರಿಯ ನೋಡಿದೆನೆ ನಾನು ಸೂರ್ಯನಂತೆ ಹೊಳೆವೊ ಐದುಮಾರಿ ಕಂಡೆನೆ4 ವಾರ್ತೆಯ ಹೇಳುತಲಿದ್ದೆ ಮಾರುತನ ರಾಣಿ ಭಾರತಿಯು ಆದಳೆ ಅಮ್ಮಿನ್ 5 ವಚನ ಪೇಳುತ ನಿಂತೆನಮ್ಮ ರುಚಿರರೂಪ ಅಡಗಿ ಆಗ ಶಚಿಯು ಆದಳೆ ಆಮ್ಮಿನ್ 6 ಇಂದ್ರನರಸಿ ಅಡಗಿ ಶ್ಯಾಮಲೆ ಬಂದು ನಿಂತಾಳಮ್ಮ ಕ್ಷಣದಿ ಎಂದೂ ಕಾಣದ ಸೋಜಿಗ ಒಂದೊಂದು ಕಂಡೆನೆ ಅಮ್ಮಿನ್7 ಎಂಥ ಬೆಳಕನೆ ತೋರಿಸಿದಳಮ್ಮ ಇಂಥ ಬೆಡಗು ರಾಮೇಶನ ಕಾಂತೆ ಕೇಳಮ್ಮ ಅಮ್ಮಿನ್8
--------------
ಗಲಗಲಿಅವ್ವನವರು
ಆತ್ಮನಿವೇದನೆ ಅಗಲಿ ನಾ ಸೈರಿಸಲಾರೆ ಪ-À್ನಗರಾಜಶಯನನ ತೋರೆ ಪ. ಖಗರಾಜಗಮನ ನಿಗಮಗೋಚರನಜಗದೇಕವಂದ್ಯನ ಜಾಣೆ ರಂಗಯ್ಯನ ಅ.ಪ. ಮಾರನು ಮನೆಗ್ಹೋದÀನಮ್ಮ ಎನ್ನಸೇರದೆ ಮುನಿದ ಕಾಣಮ್ಮಯಾರಿಗೆ ಉಸುರಲೆ ನೀರಜಾಕ್ಷಿಯೆ ಎನ್ನಬಾರದೆ ಮುನಿದು ತಾಳಲಾರೆ ನೋಡಮ್ಮ 1 ಹೆಣ್ಣುಜನ್ಮ ವ್ಯರ್ಥಕಾಣಮ್ಮ ಎನ್ನಪುಣ್ಯವಿನ್ನಿಂತಾಯಿತಮ್ಮಬಣ್ಣ ಸರವನೀವೆ ಭಾಮಿನಿರನ್ನಳೆಕಣ್ಣಾಣೆ ಕರೆತಾರೆ ಪುಸಿಯಲ್ಲ ಕೃಷ್ಣನ 2 ಅಂತರಂಗವ ತಿಳಿದೇನಮ್ಮ ಪ್ರಾಣ-ಕಾಂತ ಮನೆಗೆ ಬಂದನಮ್ಮಪಂಥವ ಬಿಟ್ಟೀಗ ಬಂದೆ ನಾ ಪಾಲಿಸುವಕಂತುಜನಕ ಹಯವದನ ರಂಗಯ್ಯನ 3
--------------
ವಾದಿರಾಜ
ಆತ್ಮನಿವೇದನೆ ಏನಿದು ಎನ್ನಯ ಬಾಳು-ನರಹರೀ ಪ ಶ್ರೀನಿಧಿಯನು ಮನಮನೆಯೊಳು ನಿಲಿಸದಾ ಅ.ಪ. ಕಳೆಯಿತು ಆಯು-ಕಳೆಯಿತು ಕಾಯೊ ಬೆಳೆಯಿತು ಆಶೆ-ಉಳಿಯಿತು ಸಾಧನ 1 ಹೊಟ್ಟೆಗೆ ಹಾಕೇ-ಪುಟ್ಟಿದು ದಾಯ್ತೇ ಪೊಟ್ಟೆಯ ತುಂಬವೆ-ದುಷ್ಟ ಮೃಗಂಗಳು2 ಇಲ್ಲವು ತಾ ಹರಿ-ಎಲ್ಲವೂ ನೀನೇನೆ ಇಲ್ಲವು ಯಾಕೇ-ಎಲ್ಲ ಕಾಲದಿ ಸುಖ 3 ಪುಟ್ಟವುದೇ ಜಗ-ಪುಟ್ಟಿಸ ನಿಲ್ಲದೇ ಭ್ರಷ್ಠರ ಮತವಿದು-ಅಷ್ಟಕರ್ತನ ಬಿಡೆ 4 ಮಾನವಾ ತನುವಾ-ಬಾಹೋದೆ ದುರ್ಲಭ ಮಾನದ ಶ್ರೀ ಕೃಷ್ಣ ವಿಠಲನ ತೋರದಿಹ5
--------------
ಕೃಷ್ಣವಿಠಲದಾಸರು
ಆನಂದ ಲಹರಿ (ಪಾರಮಾರ್ಥ ಮುಯ್ಯದ ಹಾಡು ) ಗಿರಿಜೇಶ ಮನೋಜಾತಾ ಸುರಮುನಿಜನಪ್ರೀತಾ ಕರುಣಾ ಸಾಗರ ಗಣನಾಥಾ ಜಗವದನಾ ಚರಣಕೆ ಶರಣೆಂದು ಬಲಗೊಂಬೆ ಕೋಲೆ 1 ಸಕಲಾ ಮುಖದೊಳು ಯುಕುತಿಯ ನುಡಿಗಳಾ ಪ್ರಕಟದಿ ನುಡಿಸುವೆ ಜನನಿ ಸರಸ್ವತಿ ಭಕುತಿಲಿ ಶರಣೆಂಬೆ ಕಲ್ಯಾಣಿ 2 ಆಚ್ಯುತಾನಂತನೆ ಸಚ್ಚಿದಾನಂದನೆ ನೆಚ್ಚಿದ ಶರಣರ ಸುರಧೇನುವೆ ಅವಧೂತಾ ಎಚ್ಚರ ಕೊಟ್ಟು ಸಲಹಯ್ಯ 3 ಕರಿಯಾ ಮೊರೆಯ ಕೇಳಿ ಭರದಿಂದೊದಗಿ ಬಂದು ಕರದಿಂದಲೆತ್ತಿ ಸಲಹಿದೆ ಶ್ರೀಶಾ ಚರಣವದೋರಿ ಕಾಯಯ್ಯ 4 ಶರೀರ ಒಂದರಲಿದ್ದು ನರನಾರೀರೂಪದಲಿ ಚರಿತವ ದೋರದೆ ಅನುಪಮ ಶಂಕರ ಕರುಣಿಸು ಫಣಿಗಣ ಭೂಷಣಾ 5 ಅಂಜನೀಸುತನಾಗಿ ಕಂಜನಾಭವ ಸೇವೆ ರಂಜಿಸುವಂತೆ ಮಾಡಿದ ದೈತ್ಯರ ಭಂಜನ ಹನುಮಂತ ಕರುಣಿಸು6 ಚಾರು ಚರಿತಗಳ ತೋರಿದೆ ಜಗದೊಳು ಮುನಿರಾಯಾ ಸುಖತೀರ್ಥ ತಾರಕ ಶರಣರ ನಿಜಗುರು7 ಮೇದನಿಯೊಳಗುಳ್ಳ ಸಾಧು ಸಂತರ ನಿಜ ಅನುದಿನ ಜಗದೊಳು ಸಾದರದಿಂದ ನೆನೆಯುತ 8 ಶರಣವ ಹೊಕ್ಕರ ಕರುಣದಿಂದಲಿ ನೋಡಿ ತರುಣೋಪಾಯವ ತೋರುವಾ ಮಹಿಪತಿ ಗುರುರಾಯ ನಿನ್ನ ಬಲಗೊಂಬೆ9 ಕರುಣವಾಗಲು ಅವರ ಪರಮ ಮೂಕನಜ್ಜಿಹ್ವಾ ಸುರಸ ಮಾತುಗಳ ಆಡೋದು ಹುಸಿಯಲ್ಲ ಧರೆಯೊಳು ಅನುಭವವಿದು10 ಅವರಾಮಹಿಮೆಗಳ ವಿವರಿಸಿ ಹೇಳಲು ಹವಣವೆಲ್ಲಿಹುದು ಮನುಜಗ ಭಕುತರು ಅವನಿಲಿಬಲ್ಲರು ನಿಜಸುಖ 11 ಏನೆದು ಅರಿಯದಾ ಹೀನ ಅಜ್ಞಾನಿಯು ನ್ಯೂನಾರಿಸದೇ ಸಲಹಯ್ಯಾ ಮಹಿಪತಿ ದೀನೋದ್ಧಾರಕಾ ಕರುಣಿಸು 12 ಪದುಮನಾಭನ ಭಕ್ತಿ ಚದುರಾ ಮುತ್ತೈದೇರು ಒದಗಿನ್ನು ಬನ್ನಿ ಹರುಷದಿ ಮುಪ್ಪದಾ ಉದಿತಾ ನುಡಿಗಳ ಕೇಳಲು 13 ವಿವೇಕಬೋಧಿಯಂತ ನಾವಕ್ಕತಂಗೇರು ದೇವಗುರುರಾಯನ ಮಕ್ಕಳು ನಿಜಶಕ್ತಿ ಭುವನದಿ ನಮ್ಮಾ ಹಡೆದಳು 14 ಸುಜ್ಞಾನ ವೈರಾಗ್ಯ ಸಂಜ್ಞದಿ ಮೆರೆವರು ಪ್ರಾಜ್ಞರು ನಮ್ಮಣ್ಣಾ ತಮ್ಮರು ಹರಿಭಕ್ತಿ ಮಜ್ಞರು ಅವರಿಗೆ ಸರಿ ಇಲ್ಲಾ 15 ಭಕ್ತಿಯ ತೌರಮನಿ ಶಕ್ತಿಯ ಬಲದಿಂದ ಯುಕ್ತೀಲಿ ನಾವು ಬರುತೇವು ಹರಿಭಕ್ತಿ ಭೋಕ್ತರು ನೀವು ಬರಬೇಕು 16 ದಿವ್ಯಾಂಬರವನುಟ್ಟು ಸುವಿದ್ಯಾ ಇಡಗಿಯು ತೀವಿದರ ಅರಹು ಅಂಜನಾ ವನೆ ಇಟ್ಟು ಸುವಾಸನೆಯ ಪುಷ್ಪ ಮುಡಿದಿನ್ನು 17 ಈರೆರಡು ಭೇರಿಯ ಸಾರಿಸಿ ಎಡಬಲಕ ಆರು ವಂದಣಾ ನಡಸೂತ ಕಹಳೆಗಳು ಮೂರಾರು ಊದಿಸುತೆ ಬರುತೇವು 18 ಸಾಧನ ನಾಲ್ಕರ ಕುದುರೆಯ ಕುಣಿಸುತ ಒದಗಿದ ಪ್ರೇಮದ ಮದ್ದಾನಿ ಯೊಡಗೂಡಿ ಚದುರೇರು ಮುಯ್ಯ ತರುತೇವು 19 ಭಾವದ ಬಯಲಾಟ ಆವಾಗ ಆಡುತ ಸಾವಧ ಮುಯ್ಯಾ ತರುತೇವು ನುಡಿಗಳ ನೀವಾತ ಕೇಳಿ ಜನವೆಲ್ಲಾ 20 ಮೆರೆವಾಭಿಮಾನಿಯು ಇರುವ ಸೋದರ ಮಾವ ಅರಸಿ ವಿಷಯಯೆಂಬತ್ತೆರಯರ ಮನಿಗೀಗ ಭರದಿಂದ ಮುಯ್ಯ ತರುತೇವು 21 ರಾಯ ಅಭಿಮಾನಿ ಸಿರಿಯದ ಸಡಗರ ನಾ ಏನ ಹೇಳಲಿ ಜಗದೊಳು ಪಸರಿಸಿ ತಾ ಎಡ ಬಲವನು ನೋಡನು 22 ಏಳು ಸುತ್ತಿನ ಗೋಡಿ ಮೇಲಾದ ಮನಿಗಿನ್ನು ಸಾಲಾದ ಒಂಭತ್ತು ಬಾಗಿಲು ಚಲುವಾದ ಮ್ಯಾಲಿಹ ಒಂದೊಂದು ಗಿಳಿಗಳು 23 ಅಂಗಳ ಹೋಗಲಿಕ್ಕೆ ಕಂಗಳ ಲೇಸಕಂಡೆ ಮಂಗಳವಾದ ಉಪ್ಪರಿಗೆ ಥರಥರ ರಂಗ ಮಂಟಪ ನಡುವಂದು24 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಚಾವಡಿರಾಯನ ಸೌಖ್ಯಕ ಪೊಡವಿಲಿ ಸರಿಯಾ ಕಾಣೆನು 25 ಎಂಟು ದಿಕ್ಕಿಗೆ ನೋಡೀ ಘಂಡೆಯ ಕಟ್ಟಿದ ಎಂಟು ಆನೆಯಾ ಘಡಘಾಡಿ ತಲಿಯಲಿ ಉಂಟಾದ ಗುರುತರದ ಅಂಕೂಶಾ 26 ಬಿಡದೆಂಟು ಕಂಬದಿ ಸಡಗರ ರಚಿಸಿದ ಒಡನಿಹ ಆನೆಯಾ ಘಡಘೂಢೀ ಥಳೀಐಳೀ ಊಂಠಾಧ ಘೂಋಊಥೃಧ ಆಂಖೂಶಾ 26 ಐದೈದು ಸಾಲಕ ಐದೈದು ಕುದುರೆಯು ಐದೈದು ಭಂಟರು ಅದಕಿನ್ನು ಅನುದಿನ ಮೈದಡುವುತಾ ಏರುವರು27 ಹತ್ತು ಮಂದಿಯಾ ಆಪ್ತರು ಮನರಾಯಾ ಒತ್ತಿ ಆಳುವ ಪ್ರಧಾನಿ 28 ಅನುವಾದ ಗುಣತ್ರಯಾ ಅನುಜರು ಈತಗೆ ಅನುಭವಿ ಒಬ್ಬ ಇದರೊಳು ಹರಿನಾಮಾ ನೆನೆವನು ಅನ್ಯ ಹಂಬಲವಿಲ್ಲಾ 29 ನಾಕಾವಸ್ಥೆಗಳೆಂಬಾ ನಾಕು ಒಳ ಮನೆಗಳು ಇಕ್ಕಿಹದೊಂದು ಅದರೊಳು ಭಂಡಾರ ಬೇಕಾದವರೆ ತೆರೆವರು 30 ಈರಾಯ ನೈಶ್ವರ್ಯ ಆರು ಬಣ್ಣಿಸುವರು ಆರೊಂದು ಮಂದಿ ಮಕ್ಕಳು ಹೆಸರಾದ ಪರಿಯಾಯ ಕೇಳಿ ಹೇಳುವೆ 31 ಮೊದಲು ಕಾಮ ಕ್ರೋಧವೊದಗಿ ಲೋಭಮೋಹ ಮದಮತ್ಸರೆಂಬ ಬಾಂಧವರು ನಿಜ ತಂಗಿ ವಿದಿತ ಅಜ್ಞಾನಿ ಶಕ್ತಿಯು 32 ಬಂದು ಹೊರಗನಿಂತು ಒಂದು ಜಾವಾಯಿತು ಮುಂದಕ ನಮ್ಮ ಕರಿಯಾರು ನಾವರಸಿ ಕಂದಿದ ಮಾರೀ ತೋರಳು 33 ಪಶ್ಚಾತಾಪವೆಂಬ ಬಿಚ್ಚಿ ಹಾಸಿಗೆ ಹಾಸಿ ತುಚ್ಚರ ದೂರ ಝಾಡಿಸೀ ಬರುತೇವು ಎಚ್ಚರ ಲೋಡಾ ತಂದಿರಿಸಿ 34 ಈ ಕಲ್ಲ ಮ್ಯಾಲದ್ದು ಈ ಕಲ್ಲಿಗ್ಹಾರುವಾ ತಾ ಕೋಡಗನಾ ಗುಣದಂತೆ ಭಾವಯ್ಯ ಆ ಕಾಮಣ್ಣನ ಕರಿಯಾರೆ35 ಎಷ್ಟು ಉಂಡರ ದಣಿಯಾ ಎಷ್ಟು ಇಟ್ಟರ ದಣಿಯಾ ಎಷ್ಟು ಉಟ್ಟರ ದಣಿಯಾನು ಕಾಮಣ್ಣ ಎಷ್ಟು ಕೊಟ್ಟರ ದಣಿಯಾ 36 ಒಳ್ಳೆವರರಿಯನು ಹೊಲ್ಲವರರಿಯನು ಕೊಳ್ಳಿಕಾರನಾ ಮತಿಯಂತೆ ಭಾವಯ್ಯ ನಿಲ್ಲರು ಈತನ ಇದರೀಗೆ 37 ಈತನ ತಮ್ಮನು ಮಾತು ಮಾತಿಗೆ ಬಹಳಾ ಖ್ಯಾತಿಯ ತಾನು ಪಡೆದಾನು ಕೋಪಣ್ಣ ಆತನ ಮುಂದಕ ಕರಿಯಾರೆ 38 ನೆಂಟರ ಅರಿಯನು ಇಷ್ಟರ ಅರಿಯನು ಬಂಟರಾ ಮೊದಲೇ ಅರಿಯನು ತಪಸಿಗೆ ಕಂಟರನಾದಾ ಈತನೇ 39 ಥರ ಥರ ಕುಣಿವುತ ಘರ ಘರ ಹಲ್ಲು ತಿಂದು ನೆರೆಮೋರೆ ಕೆಂಪು ಮಾಡುವಾ ಕೋಪಣ್ಣಾ ಸ್ಮರಣೆಯಾ ತನ್ನ ಮರೆವನು 40 ಕಂಡವರಿಗೆ ತಾನು ಕೆಂಡದ ನುಡಿಯಾಡಿ ಖಂಡಿಸಿ ಬಿಡುವಾ ಗೆಳತನಾ ಕೋಪಣ್ಣ ಹಿಂಡುವ ಹಿಡಿದು ಪ್ರಾಣವ41 ತಾನಾರೆ ಉಣ್ಣನು ಜನರಿಗೆ ಇಕ್ಕನು ಜೇನಿನನೊಣದಾ ಗುಣದಂತೆ ಲೋಭೇಶಾ ದೀನನ ಮುಂದಕ ಕರಿಯಾರೆ42 ಬಿಚ್ಚಾರುವಿಯನು ವೆಚ್ಚಮಾಡೆಂದಿಗೆ ಬಚ್ಚಿಟ್ಟು ಹೂಳಿನೆಲದೊಳು ಲೋಭೇಶಾ ಹುಚ್ಚಾಗಿ ಕಾಯ್ದಾ ಫಣಿಯಂತೆ43 ಕಾಸು ಹೋದಾವೆಂದು ಅಸುವ ಹೋಗುವವರಿ ಕಾಸಾವೀಸಿಯಾ ಬಡವನು ಲೋಭೇಶಾ ಹೇಸನು ಎಂದು ಮತಿಗೇಡಿ 44 ಇಳೆಯೊಳೀ ಪರಿಯಲೀ ಗಳಿಸಿದ ಧನವನು ಕಳೆದುಕೊಂಬರು ಅರಸರು ಕಡಿಯಲಿ ಶೆಳೆದು ಕೊಂಡನು ಪುಗಸಾಟೆ 45 ಇವರಿಂದ ಕಿರಿಯನಾ ಹವಣವ ನೋಡೀರೆ ಅವಗುಣದ ರಾಶಿ ಜಗದೊಳು ಮೋಹಾಂಗಾ ಅವನಾ ಮುಂದಕ ಕರಿಯಾರೇ 46 ತಾಯಿ ತಂದೆಗಳ ನ್ಯಾಯನೀತಿಗಳಿಂದ ಸಾಯಾಸದಿಂದ ಭಕ್ತಿಯ ಮಾಡದೆ ಮಾಯದಾ ಬಲಿಗೊಳಗಾದಾ 47 ಏನು ಬೇಡಿದುದೆಲ್ಲಾ ಪ್ರಾಣವವೆಚ್ಚಿಸಿ ಮಾನಿನೀಯರಿಗೆ ಕುಡುವನು ಮೋಹಾಂಗಾ ಮನವಿಡ ಒಳ್ಳೆವರ ಸೇವೆಗೆ 48 ಲೆಕ್ಕ ವ್ಯವಹಾರವಾ ಲೆಕ್ಕದಿ ಮಾಡದೇ ಮಕ್ಕಳಾಟಕಿಯ ಮಾಡುವಾ ಕ್ರೀಡೆಯಾ ನಕ್ಕಾರೆಂಬ ಸ್ಮರಣಿಲ್ಲಾ 49 ಕಮಲದ ವಾಸನೆಗೆ ಭ್ರಮರವು ಸಿಕ್ಕಿದ ಕ್ರಮದಿಂದ ನೋಡಿ ಸೆರೆಯಾದಾ ಶ್ರೀವಧು ರಮಣನ ನಾಮಾ ನೆನಿಯನು 50 ತರುವಾಯದವನೀತಾ ದುರುಳನ ನೋಡಿರೆ ಮರಳು ಬುದ್ಧಿಯಾ ಮದರಾಯಾ ಆತನಾ ಸರಕು ಮಾಡುವಾ ಕರಿಯಾರೆ 51 ಹೊರಸು ತೊಯ್ಯದಂತೆ ಭರ್ರನೆ ಬಿಗಿವನು ಶರಣರ ಕಂಡು ಬಾಗನು ತಲೆಯನು ಅರಿತವರಿಗೇನಾ ಹೇಳಲಿ 52 ಬಗೆಯಾದೆ ಹಿತವನು ಪಗಡಿಪಂಚಿಗಳಾಡಿ ಹಗಲಿನಾ ಹೊತ್ತುಗಳೆವನು ರಾತ್ರೀಲಿ ಮುಗುಧೇಯರೊಡನೆ ಒಡನಾಟಾ 53 ಕಣ್ಣಿಲ್ಲದಾನೆಯು ಚನ್ನಾಗಿ ತಿರುಗುತ ಮುನ್ನ ಬತ್ತಿದಾ ಬಾವಿಯ ಬೀಳ್ವಂತೆ ಕಣ್ಣೆದ್ದು ಕುರುಡನಾದನು&
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆರೂ ಸಂಗಡ ಬಾಹೋರಿಲ್ಲ ಪ ನಾರಾಯಣ ನಾಮ ನೆರೆ ಬಾಹೋದಲ್ಲದೆ ಅ ಪರಿಯಂತ ಗರ್ಭದಲಿಹೆತ್ತು ಅತ್ಯಂತ ನೋವು ಬೇನೆಗಳಿಂದಲಿತುತ್ತು ವಸ್ತ್ರವನಿಕ್ಕಿ ಸಲಹಿದಾ ತಾಯ್ತಂದೆಹೊತ್ತುಗಳೆವರಲ್ಲದೆ ಬೆನ್‍ಹತ್ತಿ ಬಹರೆ 1 ಹರಣ ದಾರು ಗತಿಯೆಂದಳುವಳು2 ಮನೆ ಮಕ್ಕಳು ತಮ್ಮ ಧನಕೆ ಬಡಿದಾಡುವರುಧನಕಾಗಿ ನಿನ್ನನೆ ನಂಬಿದವರುಅನುಮಾನವೇಕೆ ಜೀವನು ತೊಲಗಿದಾಕ್ಷಣದಿಇನ್ನೊಂದು ಅರಗಳಿಗೆ ನಿಲ್ಲಗೊಡರು 3 ಸುತ್ತಲು ಕುಳ್ಳಿರ್ದ ಮಿತ್ರ ಬಾಂಧವರೆಲ್ಲಹೊತ್ತು ಹೋದೀತು ಹೊರಗೆ ಹಾಕೆನುವರುಹಿತ್ತಲಾ ಕಸಕಿಂತ ಅತ್ತತ್ತ ಈ ದೇಹಹೊತ್ತುಕೊಂಡೊಯ್ದು ಅಗ್ನಿಯಲಿ ಬಿಸುಡುವರು 4 ಹರಣ ಹಿಂಗದ ಮುನ್ನು ಹರಿಯ ಸೇವೆಯ ಮಾಡಿಪರಗತಿಗೆ ಸಾಧನವ ಮಾಡಿಕೊಳ್ಳೊಕರುಣನಿಧಿ ಕಾಗಿನೆಲೆಯಾದಿಕೇಶವರಾಯನನಿರುತದಲಿ ನೆನೆನೆನೆದು ಸುಖಿಯಾಗೊ ಮನುಜ5 * ಈ ಕೀರ್ತನೆ ಪುರಂದರಾಸರ ಅಂಕಿತದಲ್ಲೂ ಇದೆ.
--------------
ಕನಕದಾಸ
ಆವ ಸಾಧನದ ಗೋಜ್ಯಾಕೆ ನಿನ್ನ ಭಾವದೊಳಗೆ ಹರಿಯಿರಲಿಕ್ಕೆ ಪ ಜಾವಜಾವಕೆ ಗೋವಳರೊಡೆಯನ ಕೇವಲಭಕ್ತಿಯಿಂ ಕೂಗಲು ಸಾಲದೆ ಅ.ಪ ಎಷ್ಟು ಆಸನ್ಹಾಕಿದರೇನೋ ಬಲು ಕಷ್ಟದಿ ದೇಹದಂಡಿಸಲೇನೋ ಬೆಟ್ಟವೇರಿ ಕೂತರೆ ಏನೋ ಅನ್ನ ಬಿಟ್ಟು ಉಪವಾಸ ಮಲಗಿದರೇನೋ ಕಷ್ಟಹರಣ ಮಹ ಶಿಷ್ಟಪಾಲನೆಂದು ನಿಷ್ಠೆಯಿಂ ಭಜಿಸಲಿ ಸಾಕಾಗದೇನೋ 1 ತೊಪ್ಪಲ ತಿಂದು ಬಾಳಿದರೇನೋ ಮತ್ತು ತಿಪ್ಪೆಯೊಳಗೆ ಉಣಕೂತರೇನೊ ಕಪ್ಪೆಯಂತೆ ಜಲ ಮುಳುಗಿದರೇನೋ ಎಲೊ ಮುಪ್ಪಿನ್ಹದ್ದಿನಂತೆ ಮೇಲಕ್ಹೋದರೇನೋ ಅನುದಿನ ಮುಪ್ಪುರಾಂತಕನ ಗೌಪ್ಯದಿಂ ನೆನೆಯಲು ಸಾಕಾಗದೇನೊ 2 ಸೊಟ್ಟಿ ಹಾಕಿಕೊಂಡು ಪೋದರೇನೋ ಚರ್ಮ ಉಟ್ಟುಕೊಂಡು ತಿರುಗಿದರೇನೋ ಬಟ್ಟಿ ನುಂಗಿ ದೇಹ್ಯ ತೊಳೆದರೇನೋ ಬಲು ಕಷ್ಟದೆಷ್ಟು ಸಾಧಿಸಲೇನೋ ಕೆಟ್ಟಗುಣವ ಬಿಟ್ಟು ದಿಟ್ಟ ಶ್ರೀರಾಮನ ಗಟ್ಟ್ಯಾಗಿ ನಂಬಲು ಮುಕ್ತಿಕಾಣೊ 3
--------------
ರಾಮದಾಸರು
ಆವಾವ ಬಗೆಯಿಂದ ನೀನೆ ರಕ್ಷಿಸುವೆಯೊದÉೀವಾದಿ ದೇವ ಶ್ರೀಕೃಷ್ಣ ನೀನೆನ್ನನು ಪ ಹಿಂದಿನ ಕಾಲವ ವ್ಯರ್ಥವಾಗಿ ಕಳೆದೆನೊಮುಂದಿನ ಗತಿ ಚಿಂತೆ ಲೇಶವಿಲ್ಲವೊಸಂದು ಹೋಯಿತು ದೇಹದೊಳಗಿನ ಬಲವೆಲ್ಲಮಂದವಾದವು ಇಂದ್ರಿಯ ಗತಿಗಳೆಲ್ಲ 1 ಆಸೆಯೆಂಬುದು ಅಜನ ಲೋಕಕ್ಕೆ ಮುಟ್ಟುತಿದೆಕಾಸು ಹೋದರೆ ಕ್ಲೇಶವಾಗುತ್ತಿದೆಮೋಸಮಾಡಿ ಮೃತ್ಯು ಬರುವುದ ನಾನರಿಯೆವಾಸುದೇವನೆ ಎನ್ನ ದಯಮಾಡಿ ಸಲಹೊ2 ಜನರು ದೇಹವ ಬಿಟ್ಟು ಪೋಪುದ ನಾ ಕಂಡುಎನ್ನ ದೇಹ ಸ್ಥಿರವೆಂದು ತಿಳಿದುಕೊಂಡುದಾನ ಧರ್ಮ ಮೊದಲಾದ ಹರಿಯ ನೇಮವ ಬಿಟ್ಟುಹೀನ ವಿಷಯಂಗಳಿಗೆರಗುವೆ ಸಿರಿಕೃಷ್ಣ3
--------------
ವ್ಯಾಸರಾಯರು
ಇಕ್ಕೊ ಇಲ್ಲೆ ಹಾನೆ ಅಖಂಡವಾಗಿ ಸದ್ಗುರು ನಮ್ಮ ಅಕ್ಕಿಸಿಕೋಬೇಕು ಗುಕ್ಕಿ ತನ್ನೊಳು ತಾ ಗುಹ್ಯವರ್ಮ ಧ್ರುವ ಹೇಳಬಾರದು ಇನ್ನೊಬ್ಬರಗೀ ಮಾತು ಬಹಳ ಗೂಢ ತಿಳಿದ ಮಹಿಪನೀವಾ ಲಕ್ಷಕೋಟಿಗೆ ಒಬ್ಬ ಪ್ರೌಢ ಒಳಗುಟ್ಟಿನ ಕೀಲು ತಿಳಿಯಲಿಕ್ಕೆ ಮಾಡಿ ಮನದೃಢ ಸುಳಹು ಕಂಡಮ್ಯಾಲೆ ಪ್ರಾಣಹೋದರೆ ಒಬ್ಬನು ಬಿಡಾ 1 ದೂರಿಲ್ಲ ದೂರಿಲ್ಲ ತಿಳಿಕೊಳ್ಳಿ ಪೂರ್ಣ ಅರಿತು ಬ್ಯಾಗ ತಿರುಗಿನೋಡಲು ತನ್ನೊಳು ದೋರುತಿದೆ ಬ್ರಹ್ಮಯೋಗ ಸಾರವೇ ಸುಖಗರವುತದೆ ನೋಡಿರೋ ರಾಜಯೋಗ ಪರದೆ ಇಲ್ಲದೆ ಗುರುತದೋರುವಾ ನೋಡಿ ಕಣ್ಣಾರೆ ಈಗ 2 ಗುರುಕೃಪೆಯಿಂದ ಗುರುತಕ ದೂರಿಲ್ಲ ಕೊಳ್ಳಿ ಖೂನ ಒಳಹೊರಗೆ ತುಂಬಿತುಳುಕುತದೆ ತಾನೆ ನಿಧಾನ ತರಳ ಮಹಿಪತಿ ಸ್ವಾಮಿ ನೋಡಲಿಕ್ಕೆದ ಒಂದೆ ಸಾಧನ ಸ್ವರೂಪರಿಯಲಿಕ್ಕೆ ಆಗುತ್ತದೆ ಬಲುಬ್ಯಾಗಲುನ್ಮನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದಿರೆ ವಿಜಯೆ ಜಯಮಂಗಳಂ ಪ ಸಾರಸದಳಹಿತೆ ಸಾರಸಮಹಿತೆ ಮಂಗಳಂ1 ಇಂದು ಸುಮಾಕರೆ ಸಹೋದರಿ ಸುಂದರ ಕಬರಿ ಮಂಗಳಂ 2 ರಾಜರಾಜಾರ್ಚಿತೆ ರಾಜಮುಖಾಂಚಿತೆ ರಾಜಗೃಹಾರ್ಚಿತೆ ರಾಜಿತ ವನಿತೆ ಮಂಗಳಂ 3 ಮಾನವ ವಂದಿತೆ ಧೇನುನಗರ ಹರಿಮಾನಿನಿ ಜನನಿ ಮಂಗಳಂ 4
--------------
ಬೇಟೆರಾಯ ದೀಕ್ಷಿತರು
ಇದು ಕಲಿಗಾಲದ ಮಹಿಮೆಯ ಗುಟ್ಟು ಮುದಿತನ ಬಂದರೆ ಮಾಯದ ಪೆಟ್ಟು ಪ ವಿಧವೆಯಾದರೆ ತಲೆಯ ಮೇಲ್ಮೊಟ್ಟು ವಿಧುರನಾಗೆ ದುರ್ನೀತಿಯ ಕಟ್ಟು ಅ.ಪ ಕುರುಡನಾದರೆ ಅಣಕದ ಬಾಳು ಅರೆಕಿವುಡಗೆ ಬೈಗುಳ ಕೂಳು ನರಳಿದರೆ ಸಾಯಲಿಲ್ಲವೆಂಬ ಗೀಳು ಕೊರಗಿ ಕಣ್ಣೀರನು ಸುರಿಸುವ ಗೋಳು 1 ಇತ್ತಬಾರದಿರು ಎಂಬರು ಕೆಲರು ಅತ್ತಲೆ ಹೋಗು ಹೋಗೆಂಬರು ಕೆಲರು ಎತ್ತಹೋದರೂ ಬಂದುದೇಕೆಂಬರು ತುತ್ತೊಂದಾದರೂ ಸಿಗದೆಂಬುವರು 2 ಹದ್ದುಹದ್ದೆಂಬುವ ಬಿರುನುಡಿಯಿಂದ ಒದ್ದೋಡಿಸುವಳು ಸೊಸೆ ಮನೆಯಿಂದ ಕದ್ದೋಡುವನು ಮಗ ಭಯದಿಂದ ಮದ್ದುಕೊಡಯ್ಯ ಮಾಂಗಿರಿಯ ಗೋವಿಂದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಇಂದು ರಂಗಾನಟ್ಟೂಳಿಗೆ | ಇರಲಾರೆವಮ್ಮಾ ನಾವುಬಂದುಪಾಯವ ಕಾಣೆವೆ | ವನಿತೆ ಗೋಪ್ಯಮ್ಮಾ ಕೇಳೆ ಪ ಹಿರಿಯರಾದವರಿಗೆ | ಭರದಿ ಪೇಳೇವೆಂದರೆಸರಸಿಜ ಸಂಭವನಿಗೆ ಹಿರಿಯನೀತ ಕಾಣಮ್ಮ 1 ಮಾಯಗಳ ಮಾಡಿ ನಾವೂ | ಹೊಯಿಲೆಬ್ಬಿಸೇವೆಂದರೆಮಾಯಾದೇವಿಗೆ ಸಿಗದೆ | ಮಾಯಾವ ತೋರುವನಮ್ಮ 2 ಗುಮ್ಮನ ತೋರಿದರೀಗಾ | ಒಮ್ಮೊಮ್ಮೊ ಲೆಕ್ಕಿಸನಮ್ಮ ಅಮ್ಮಮ್ಮ ಶ್ರೀ ನಾರಸಿಂಹ | ಅದ್ಭತಾದ ದೈವ ಕಾಣಮ್ಮ 3 ಅರಿವಿ ಸರ್ಪಾನ ಮಾಡಿ | ಭರದಿ ಅಂಜಿಸೇವೆಂದರೆಖರೆಯವಾಗಿದ್ದ ದೊಡ್ಡಾ | ಉರಗಶಾಯಿ ಕಾಣಮ್ಮ 4 ಅರಸರಿಗ್ಹೇಳಿದರೂ | ಬರಿದಾಗುವುದೇ ನಿಜಧರೆ ಗಗನ ಪಾತಾಳದ | ಅರಸನಲ್ಲವೇನಮ್ಮ 5 ಕಾಸು ವೀಸಾ ಕೈಯ್ಯಾಳಿಟ್ಟೂ | ಕೂಸಿಗೆ ಬುದ್ಧಿ ಹೇಳುವೆಕೋಶ ಭಾಗ್ಯದಭಿಮಾನಿ | ಶ್ರೀಶನೇ ಈಶ ಕಾಣಮ್ಮ 6 ಪಾಪದ ಭೀತಿ ತೊರದು | ಭೂಪ ರಂಗ ಅಂಜಾನಮ್ಮಪಾಪ ರಹಿತರಾದವರ | ತಪಸಿಗಳೊಡೆಯಾನಮ್ಮ 7 ಮ್ಯಾಣದ ಚೇಳು ತೋರುವೆ | ಜಾಣ ರಂಗ ಅಂಜಾನಮ್ಮಮೇಣು ಮೂವತ್ತಾರು ಲಕ್ಷ | ತಾಂ ಶಿಂಶುಮಾರಾನಮ್ಮ 8 ಅನ್ನ ವಸನಗಳಿತ್ತು | ಮನ್ನಿಸೆವೆಂದಾರೆ ಪುಸಿಕನ್ಯೆ ದ್ರೌಪದಿ ದುಮ್ಮಾನ | ಮುನ್ನೆ ಇದಕ್ಕೇ ಸಾಕ್ಷಿಯಲ್ಲೆ 9 ಅಣ್ಣ ತಮ್ಮಾ ಬಂಧೂ ಬಳಗ | ಜನರುಂಟೇನೆ ಹೇಳೇವೆಅನಾದಿ ಕಾಲದಿಂದಾ | ಘನ್ನ ತಾನೇ ಏಕಮೇವ 10 ಚಿಣ್ಣ ನೀ ಅಣ್ಣಾ ಬಾಯೆಂದು | ಮನ್ನಿಸೇವೆಂದಾರೆ ಪುಸಿಅನಂತ ವೇದಗಳಿವನ | ಬಣ್ಣಿಸಿ ಹಿಂದಾಗಲಿಲ್ಲೆ 11 ಊರು ಕೇರಿಗಳಾ ಬಿಟ್ಟು | ದೂರ ಬಾರ ಹೋದೇವೇನೆಸಾರ ವ್ಯಾಪ್ತನಾಗಿ ಇಪ್ಪಾ | ಯಾರಿಗೆ ದೂರುವೆನಮ್ಮಾ 12 ಕದ್ದು ಕದ್ದೋಡುವಾ ನಮ್ಮ | ಲಿದ್ದು ಪಿಡಿಯಾಲೊಶವಲ್ಲೆ ರುದ್ದರನ್ನಾ ಓಡೀಸಿದಾ | ಮುದ್ದು ರಂಗಾನಿವನಮ್ಮ 13 ಹಗ್ಗದಿ ಕಟ್ಟೀದರಾಗ | ಬಗ್ಗನಮ್ಮಾ ನಿನ್ನ ಮಗಅಗ್ಗಳೀಕೆ ಖಳರ ಉಕ್ಕು | ತಗ್ಗಿಸಿ ಬಂದಿಹಾನಮ್ಮ 14 ಇಂದು ನಿನ್ನಾ ಕಂದನಾಟಾ | ಚಂದಾವೆಂದೂ ವಂದಿಸುವೆವೆತಂದೆ ವ್ಯಾಸಾ ವಿಠಲೆ*ಮಗೆ | ಬಾಂಧವಾನಾದನು ಕಾಣೆ 15
--------------
ವ್ಯಾಸವಿಠ್ಠಲರು