ಒಟ್ಟು 568 ಕಡೆಗಳಲ್ಲಿ , 74 ದಾಸರು , 465 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಗವಂತನ ಸಂಕೀರ್ತನೆ2ಅಷ್ಟರೊಳಗೆ ಕೃಷ್ಣ ಬಂದನೆಸೃಷ್ಟಿಗೊಡೆಯ ದೇವನು ಪಜಗದುದರಜಾÕನಿಗಳ ಧ್ಯಾನಕೆಗೋಚರಾಗೋಚರನಾಗುತ ಅಪಅಂದಿಗೆ ಕಾಲ್ಗೆಜ್ಜೆ ಸರಪಣಿಬಂದಿ ಕಂಕಣ ತೋಳಬಾಪುರಿಮಂದಹಾಸ ಮುಂಗುರುಳು ಮುಖದಸುಂದರಾಂಗನ ಹುಡುಕುತಿರಲು 1ತರಳರೊಡನೆ ಕೂಡಿ ಕೃಷ್ಣಮುರಳಿನಾದ ಗೇಯ್ಯುತಿರಲುಸರಸಿಜಾಕ್ಷನ ಕಾಣದೆ ತವಕಿಸಿಹರಿಯ ಹುಡÀುಕುತಿರಲೆಶೋದೆ 2ವತ್ಸಗಳ ಬಾಲಗಳನೆ ಪಿಡಿದುಸ್ವೇಚ್ಛೆಯಿಂದ ನಲಿಯುತಿರಲುಅಚ್ಚುತನೆಲ್ಲೊ ಕಾಣೆನೆನುತಕೃಷ್ಣ ಕೃಷ್ಣನೆಂದು ಕರೆಯೆ 3ಮನೆ ಮನೆಗಳ ಪೊಕ್ಕು ಪಾಲುಮೊಸರು ಬೆಣ್ಣೆ ಮೆಲುವೆನೆನುವವನಿತೆಯರಸಂತೈಸಿಕಳುಹಿತನಯನೆಲ್ಲೆಂದುಡುಕುತಿರಲು 4ಬಂದನು ಬಲರಾಮ ಭಯದಿಇಂದಿರೇಶ ಮಣ್ಣು ಮೆಲುವನೆಂದು ಪೇಳೆ ಬಾಯ ತೆಗಿಸಿಕಂಡು ವಿಶ್ವವ ವಿಸ್ಮಯಗೊಳುತಿರೆ 5ಸುರಗಂಧರ್ವರು ನೆರೆದರಂಬರದಿಪರಮಧನ್ಯಳೆಶೋದೆ ಎನುತಹರಿಯ ಗುಣಗಳನ್ನೆ ಸ್ತುತಿಸಿಹರುಷದಿಂದ ನಲಿಯುತಿರಲು 6ಕಮಲಸಂಭವ ಜನಕನನೆತ್ತಿವಿನಯದಿಂದ ಮುದ್ದಿಸುತ್ತಿರೆಕಮಲನಾಭ ವಿಠ್ಠಲನ ಸಿರದಿಕಮಲಕುಸುಮಮಳೆಗರೆದರು7ಮಂಗಳಂ ಜಯ ಮಂಗಳಂಶುಭಮಂಗಳಂ ಶ್ರೀ ಕೃಷ್ಣಗೇ
--------------
ನಿಡಗುರುಕಿ ಜೀವೂಬಾಯಿ
ಭಳಿ ಭಳಿರೆ ಬಲಭೀಮ ಭಳಿರೆ ಸದ್ಗುಣಧಾಮಭಳಿರೆ ದ್ರೌಪದಿನಾಥ ಭಳಿರೆ ಶ್ರೀಹರಿದೂತಭಳಿರೆ ಅಪ್ರತಿಚರಿತ ಭಳಿರೆ ಬಲದೇವಸುತಭಳಿರೆ ಭೂಮಿಪಲಲಾಮ ಭೀಮ ಪ.ಯೋಚಿಸಿ ಖಳರು ನೆರೆದು ಭೂಚಕ್ರವಾಕ್ರಮಿಸೆಶ್ರೀ ಚಕ್ರಿ ದಯದಿ ಅಮೃತ ರೋಚಕುಲಜಾತ ಪಾಂಡು ಚಕ್ರವರ್ತಿ ಕಮಲಲೋಚನೆಯ ಪೃಥೋದರಾಬ್ಧಿ ಚಂದ್ರನಂತೆ ಜನಿಸಿಆ ಚಕ್ಷುವಿಹೀನ ಭವಾಬ್ಧಿಚೋರರೆದೆಶೂಲಗೋಚರಿಸುವಂತಿಳೆಗೆ ಸೂಚಿಸಿ ಮುಖೋದಯವಕೀಚಕ ಹಿಡಿಂಬ ಬಕ ನೀಚಮಾಗಧಮುಖರವಾಚಿಸಗುಡದೆ ಬಡಿದೆ ಭೀಮ 1ಕೊಬ್ಬಿದ ಖಳರು ಧಾತ್ರಿಗುಬ್ಬಸವ ತೋರುತಿರೆಅಬ್ಬರದಿ ಕರದ ಗದೆಗ್ಹಬ್ಬದೌತಣವಿಡುತಒಬ್ಬೊಬ್ಬರೊಮ್ಮೆ ಹನ್ನಿಬ್ಬರನ ಕರೆದುಉಬ್ಬುಬ್ಬಿ ರಣದಿ ಕುಣಿದೆಹಬ್ಬಿ ಬಹ ನಾಗರಥನಿಬ್ಬರದ ಬಿಂಕದವರೆಬ್ಬಿಸಿ ನಭಕೆ ಚಿಮ್ಮಿ ಬೊಬ್ಬಿರಿದು ಕೌರವರನಿಬ್ಬಗೆದು ಡಾಕಿನಿಯ ಉಬ್ಬಿಸಿದೆ ನಿನಗೆಪಡಿಹೆಬ್ಬುಲಿಗಳುಂಟೆ ಜಗದಿ ಭೀಮ 2ನಿರ್ಧರ ಪರಾಕ್ರಮ ಧನುರ್ಧರರ ಬೀಳ್ಗೆಡಹಿಸ್ವರ್ಧಾಮಗರು ತುತಿಸೆ ದುರ್ಧಾರ್ತರಾಷ್ಟ್ಟ್ರರಂದುರ್ಧಾಮಕೆಬ್ಬಟ್ಟಿದುರ್ಧರ್ಷಗುರುರಥವನೂಧ್ರ್ವಕ್ಕೊಗೆದುಲಿದು ಚೀರ್ದೆದುರ್ಧರ ಖಳಾನುಜನ ಮೂರ್ಧ ಕಾಲೊಳು ಮೆಟ್ಟಿಶಾರ್ದೂಲನಂದದಿ ಕೆಡದೊಡಲಿನಅರುಣಜಲಪೀರ್ದಂತೆ ತೋರ್ದೆ ಗೋವರ್ಧನಧರನನುಜÕವಾರ್ಧೀಸ್ಯರ್ಪಿಸಿದೆ ಮಝರೆ ಭೀಮ 3ಕಡಲೊಡೆಯನೆಡೆಗೆ ಬಲುಕೆಡುನುಡಿಯ ನುಡಿದವರಪಿಡಿ ಪಿಡಿದು ಖಡುಗದಿಂ ಕಡಿಕಡಿದು ಕಡೆಗಾಲದಮೃಡಕೋಟಿಯಂದದಲಿ ಕಡುರೋಷದಡಿಗಡಿಗೆಘುಡುಘುಡಿಸಿ ಹುಡುಕಿ ತುಡುಕಿಷಡಕ್ಷೋಹಿಣಿ ಪಡೆಯ ಹುಡಿ ಹುಡಿಗುಟ್ಟಿ ಪೊಡವಿ ದಿಗ್ಗಡಣ ಜಯದಂತಿ ಧಿಮ್ಮಿಡಿಸಿ ಕರ್ಮಡು ಪೊಕ್ಕುಕಡುಗಲಿಯ ತೊಡೆಮುರಿಯೆ ನಡುಮುರಿಯೆ ಗದೆಯಿಂದಹೊಡೆದೆಶಸುಪಡೆದೆ ಜಗದಿ ಭೀಮ 4ಅಪ್ಪಳಿಸಿ ಕುರುಪತಿಯ ಚಿಪ್ಪೊಡೆಯೆ ತಲೆದುಳಿದುಬಪ್ಪುವಾರುಷವೆಂಬ ಸುಪ್ತಸೂತ್ರದಿ ಅಜನಬೊಪ್ಪ ಕೃಷ್ಣನ ಕಟ್ಟುವ ಪರಾಕ್ರಮಿಗೆನುತಸುಪ್ರಾಯಶ್ಚಿತ್ತವೆನುತತಪ್ಪುಗಳನೊಂದೊಂದ ನೆಪ್ಪೆತ್ತಿ ತನ್ಮತಿಗೆಹೆಪ್ಪೆನುವ ವಾಗ್ಬಾಣ ಕುಪ್ಪಳಿಸಿ ಕೊಂದು ಶ್ರೇಯಃಪತಿ ಪ್ರಸನ್ವೆಂಕಟಾರ್ಪಣವ ಮಾಡಿ ವೈಷ್ಣವ ಪ್ರತತಿಯನು ಪೊರೆದೆ ಭೀಮ 5
--------------
ಪ್ರಸನ್ನವೆಂಕಟದಾಸರು
ಭಾಗೀರಥಿ ದೇವಿ ನಮೋ ||ಭಾಗೀರಥಿ ದೇವಿ ಭಯ ನಿವಾರಣ ಗಂಗೆ |ಸಾಗರನರ್ಧಂಗೆ ಸುತರಂಗೆ ಪವಾಮನ ವಾಮ ಪಾದಾಂಗುಷ್ಟನಖಸೋಕಿ |ಆ ಮಹ ಬ್ರಹ್ಮಾಂಡ ಸೀಳಾಲೂ | ಭಾಗೀ..... ||ತಾಮರಸಜ ಲೋಕಕ್ಕಿಳಿದು ಮಜ್ಜನವಾಗಿ |ಸ್ವಾಮಿ ಪಾದೋದಕಳೆನಿಸಿದೆ || ಭಾಗೀ... 1ಹರಿಪಾದ ಜಲ ದೊರಕುವದು ದುರ್ಲಭವೆಂದು |ಹರ ಪ್ರಾರ್ಥಿಸಲು ಜಡೆಯೊಳು ನಿಂದೆ | ಭಾಗೀ.... ||ಮೊರೆಯಿಡೆ ದೇವತೆಗಳಿಗೆ ವೊಲಿದು ಬಂದು |ಸುರನದಿಯೆಂದು ಕರೆಸಿಕೊಂಡೇ | ಭಾಗೀ..... 2ಚನ್ನಾಗಿ ಸ್ವರ್ಗದೊಳಗೆ ನಿಂತ ಕಾರಣ |ಸ್ವರ್ನದಿಯೆಂದು ಕರೆಸಿದೆವ್ವ | ಭಾಗೀ.... ||ಉನ್ನತಧೃವಮಂಡಲಕ್ಕೆ ಪೋಗಿ ಮುಟ್ಟಿದೆ |ನಿನ್ನಾಕಾಶ ಗಂಗೆ ಎಂಬೋರೆ | ಭಾಗೀ..... 3ಭಗೀರಥ ಬಹುಕಾಲ ಪ್ರಾರ್ಥಿಸೆ ಕರುಣದಿಂ |ಜಿಗಳಿ ಹೇಮಾದ್ರಿಗೆ ನಡೆತಂದೆ | ಭಾಗೀ.... ||ಸೊಗಸಿಲಿಂ ತ್ರಿಪಥಾಗಿ ದಕ್ಷಿಣದಲಿ ಬಂದು |ಸಗರರಾಯನ ಉದ್ಧರಿಸಿದೇ | ಭಾಗೀ..... 4ತವಕದಿಂದಲ್ಲಿ ಜಹ್ನು ಋಷಿಯಲ್ಲಿ ಜನಿಸಿ ಜಾ |ಹ್ನವಿಯೆಂದು ಸ್ತುತಿಸೋರೆ ಸುರರೆಲ್ಲ | ಭಾಗೀ.... ||ಭುವನದೊಳೆಲ್ಲರು ಪುನೀತರಾಗೋದು ಸಿದ್ಧ |ತವಪಾದಸ್ಮøತಿಮಾತ್ರದಿಂದಲೀ | ಭಾಗೀ...... 5ನಂದಿನಿ ನಳಿನಿ ಸೀತಾ ಮಾಲತೀ ಮಲಹ |ಮಂದರಧರ ಪದಿ ಶ್ರೀಗಂಗೆ | ಭಾಗೀ...... ||ಸುಂದರ ತ್ರಿಪಥ ಭಾಗೀರಥಿ ಭೋಗವತಿ |ವಂದೆಜಾಹ್ನವಿತ್ರಿದಶೇಶ್ವರಿ | ಭಾಗೀ.... 6ವಸುಗಳ ಮಾತು ಲಾಲಿಸಿ ರಾಯನಲಿ ಬಂದು |ಬಸುರಿಂದ ಪಡೆದು ಉದ್ಧರಿಸಿದೆ | ಭಾಗೀ.... |ಅಸಹ್ಯ ಕರ್ಮವ್ಯಾಕೆಂದೆನಲು ಕುಮಾರನ |ಕೊಸರುತ ನಿಜರೂಪವೈದಿದೇ | ಭಾಗೀ.... 7ನಮೊ ನಮೊ ಶುಭಗಾತ್ರೆ ನಮೊ ನಮೋ ಸುಚರಿತ್ರೆ |ನಮೊ ನಮೊ ಶಂತನುವಿನ ಮಿತ್ರೆ | ಭಾಗೀ..... ||ಶಮದಮಾದಿಗಳಿತ್ತುಪೊರೆಅನುದಿನದಲ್ಲಿ |ಅಮರವಿನುತಪಾದಪಂಕಜೆ | ಭಾಗೀ.....8ಕಾಣಲು ಪಾಪಹರವು ಮುಕ್ತಿ ಅಹುದು |ಸ್ನಾನದ ಫಲವು ಬಲ್ಲವರಿಲ್ಲ | ಭಾಗೀ...... ||ಕ್ಷೋಣಿಯ ಮ್ಯಾಲುಳ್ಳ ಸರಿದ್ವರಳೆನಿಸುವೆ |ಪ್ರಾಣೇಶ ವಿಠಲನ್ನ ದಯದಿಂದ | ಭಾಗೀ..... 9
--------------
ಪ್ರಾಣೇಶದಾಸರು
ಭಾವೆಗೋಪಾಲ ಸವತಿ ಪಾಲಾದನಲ್ಲೆಯುಕ್ತಿ ಯುಕ್ತಿಲೆ ಒಲಿವೋಕೌತುಕನೋಡ ನಲ್ಲೆಪ.ಹೆಣ್ಣು ನಮ್ಮಿಬ್ಬರ ಕಣ್ಣಿಗೆ ಇಂಗುಹಚ್ಚಿಸುವರ್ಣದಂತೆ ಹೊಳೆಯುತಸುವರ್ಣದಂತೆ ಹೊಳೆಯುತ ರಮಿಸುತನಮ್ಮಣ್ಣನ ಕೂಡ ಇರುವೋಳು 1ನಿತ್ಯಪ್ರಕಾಶನ ಅತ್ಯಂತ ಬೆರೆದಿರೆಹತ್ತಿರ ಆಕೆ ರಮಿಸುತಹತ್ತಿರ ಆಕೆ ರಮಿಸುತಿರಲುಎಲ್ಲಾ ಪತ್ನಿಯರು ಮಾಡೊ ತೆರನೇನ 2ಕಾಲದಲ್ಲಿದ್ದ ಹರಿಯ ಮೇಲಾಗಿ ಸ್ತುತಿಸುತಕಾಲಾಲವ ತ್ರುಟಿಯು ಬಿಡದಲೆಕಾಲಾಲವ ತ್ರುಟಿಯು ಬಿಡದಲೆ ರಮಿಸಿಎಲ್ಲಾ ಬಾಲೆಯರು ಮಾಡೊತೆರನೇನ 3ದೇಶದಲ್ಲಿದ್ದ ಹರಿಯಲೇಸಾಗಿ ಬೆರೆದಿರೆಲೇಶವಬಿಡದೆ ರಮಿಸುತಲೇಶವ ಬಿಡದೆ ಇರಲುನಮ್ಮ ಆಶೆ ಪೂರೈಸೊ ಬಗೆ ಹ್ಯಾಂಗೆ 4ರುದ್ರಾದಿ ವಂದ್ಯನ ಬದ್ದಾಗಿ ರಮಿಸುತಮುದ್ದು ಕೋಮಲೆಯು ಇರತಾಳೆಮುದ್ದು ಕೋಮಲೆಯು ಇರತಾಳೆನಿಮ್ಮ ಬುದ್ಧಿ ಎಲ್ಲಿ ಹೋಗಿ ಅಡಗಿತ 5ಬ್ರಮ್ಹನ ಮಾತಿಗೆ ತಮ್ಮಂಜಿಕೆಯು ಏನಅಮ್ಮ ಅಚ್ಯುತನ ಒಡಗೂಡಿಅಮ್ಮ ಅಚ್ಯುತನ ಒಡಗೂಡಿ ರಮಿಸಿದಾಗನಿಮ್ಮ ಹೆಮ್ಮಿಎಲ್ಲಿ ಹೋಗಿ ಅಡಗಿತ 6ಮುದ್ದು ರಾಮೇಶನ ಕದ್ದಿಲೆ ಕರೆದಿರೆಹರದೆಯರುಹರಿಯ ರಮಿಸುತಹರದೆಯರುಹರಿಯ ರಮಿಸುತ ಗಗನಕೆ
--------------
ಗಲಗಲಿಅವ್ವನವರು
ಮಂಗಲಾ ಸ್ವಸಿದ್ದ ಸಿದ್ಧಗೆ ಮಂಗಲಾ ಸ್ವಶುದ್ಧ ಶುದ್ಧಗೆ |ಮಂಗಲಾ ಸ್ವಬುದ್ಧ ಬುದ್ಧಗೆ ಸದ್ಗುರೇಂದ್ರನಿಗೆಜಯ ಮಂಗಲಾಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಆದಿಮಧ್ಯಾವಸಾನವಿಲ್ಲದೆ ನಾದ ಬಿಂದು ಕಳಾ ವಿಹೀನಗೆ |ವೇದ ವೇದಾಂತದ ವಿಚಾರವ ತಿಳಿದ ನಿಶ್ಚಲಗೆ |ಸಾಧು ಸಂತ ಮಹಾನುಭವಿಗಳು ಸಾಧಿಸುವವರಬೋಧ ಬೋಧಗೆ | ವಾದ ಮನಬುದ್ಧ್ಯಾದಿ ಉದಯಾದಿಕವ ಲಕ್ಷಿಪಗೆ1ವಿಶ್ವತೋ ಮುಖ ವಿಶ್ವನೇತ್ರನು ವಿಶ್ವಪಾಣಿಪಾದಶೀರಿಷ | ವಿಶ್ವದೊಳಹೊರಗೇಕ |ಮಯನಾ ಸೂತ್ರನು ಮಣಿಯಂತೆ | ವಿಶ್ವವನ್ನುದ್ಧರಿಸ-ಲೋಸುಗ ವಿಶ್ವದೊಳಗವತರಿಸಿ ಸಾಕ್ಷಾದೀಶ್ವರನುಕಲಿಯುಗದಿ ವಿಶ್ವಾಮಿತ್ರ ಗೋತ್ರದೊಳು2ಪರಮಪುರುಷನು ಸ್ವಪ್ರಕಾಶನು ನರಾಕೃತಿಗೆತಾ ಬಂದು ಶಿಂಧಾಪುರದಿ ಗುರುನಾಥನು-ದರದಿ ಕರಣಿಕನ್ವಯದಿ | ಸರಸ ಲೀಲಾ ನಟನೆನಟಿಸುತ ತೆರಳಿ ಭ್ರಮರಾಪುರಕೆ ಸದ್ಗುರುವರಕೃಪೆಯತಾ ಪಡೆದು ಜಗದೊಳು ಖ್ಯಾತಿ ಪಡೆದಂಗೆ3ಅಂತು ಇಂತೆನಬಾರದಾ ನಿಶ್ಚಿಂತ ರೂಪನು ಬಳಿಕ | ಸಂತಮಹಾಂತನು ಸ್ತುತಿಸಲಾತ್ಮ ಸುಬೋಧ ಬೋಧಿಯಲಿ ||ಅಂತರಂಗದ ಭ್ರಮೆಯನಳಿದೇಕಾಂತ ಭಾವಿಕ ಭಕ್ತರಿಗೆ ವಿ-ಶ್ರಾಂತವಾದ ಸ್ವ-ಪದದೊಳುದ್ಧರಿಸಿದಾತಂಗೆ4ಸ್ಪರ್ಶ ದರ್ಶನದಿಂದೆ ಝಗ ಝಗ ಧರಿಸುತಲಿ ನಾನಾ ವಿ-ಚಿತ್ರಾಚರಣವನು ಚರಿಸುತ್ತ ಸದ್ಗುರು ರಾಯ ಕಡೆಯಲ್ಲಿ,ಪರಮಹಂಸಾಶ್ರಮವ ಕೈಕೊಂಡಿನಿತುಕೆಲಕಾಲದಲಿ ಶಿಂಧಾಪುರದಿಸ್ವ-ಸ್ಥಾನ ದೊಳು ಸಹಜಸಮಾಧಿಸ್ಥಳದಲ್ಲಿ5ಶಾಲಿವಾಹನ ಶಕೆಯ ಶತಕತಿ ಮೇಲೆ ಐವತ್ತಾಗೆ ಮೂರನು |ಕಾಲು ದಕ್ಷಿಣ ಅಯನ ಸಂವತ್ಸರ ವಿರೋಧಿಕೃತು |ಕಾಳ ದ್ವಿತಿಯಾಮಾಸ ಆಶ್ವೀನ ಮೇಲೆ ಶಿವ ಬುಧವಾರಕರ್ಣವಿಶಾಲಿ ಗರ್ಜಾ ಭರಣೆ ಪ್ರಥಮಪ್ರಹರಸಮಯದೊಳು6ಆ ಸುದಿನದೊಳಗಾ ಮಹಾ ಸಂತೋಷ ಕಾಲದಿಸುರರುಪೂಮಳೆ ಸೂಸುತಿರೆ ಬ್ರಹ್ಮಾದಿಕರು ಸ್ವಸುಖದಿನಲಿದಾಡಿ |ಏಸುಕಾಲದಸುಕೃತಫಲವಿದು ವಸ್ತುಕಣ್ಣಲಿ ಕಂಡೆವೈ ಉಲ್ಲಾಸವೆನುತ ಸಮಸ್ತ ಸುರಜಯ ಘೋಷ ಮಾಡುತಲಿ7ನಿಜ ಪರಂಧಾಮಕ್ಕೆ ಸದ್ಗುರು ಬಿಜಯಮಾಡಿದನೆಂಬ ಮಹಾಶಯ | ಸುಜನರೆಲ್ಲರುಬಲ್ಲರಿದನು ಲೋಕಕಿದು ಸತ್ಯ || ತ್ರಿಜಗವೇಪುಸಿಯೆಂಬ ಮಹಾತ್ಮಗೆ ತ್ಯಜನವೆಲ್ಲಿ ಉದಾರ ಮಹಿಮಗೆ |ನಿಜವು ಜಲ ದೊರೆತಿಲ್ಲ ತೋರಲು ಕರಗಲೆರಡಹುದೇ8ನಿರಾಕಾರಾಕಾರ ವ್ಯಕ್ತಿಗೆಚರಣಒಂದೆ ಭೇದ ಮಿಥ್ಯೆಯು |ಚರಣಯುಗಕೆರಡುಂಟೆ ಈಪರಿಶರೀರ ಶರಣಂಗೆ ||ಹಿರಿದ ಕಿರಿದ ದರದರ ಹಂಗನು ಹರಿದು ಬಿಸುಟುವಶ್ರೀ ಮಹಾಶಂಕರಾನಂದ ಸರಸ್ವತೀ ಯತಿವರ್ಯ ಗುರುವರಗೆಜಯ ಜಯ ಮಂಗಲಾ ಜಯ ಜಯ ಮಂಗಲಾ9
--------------
ಜಕ್ಕಪ್ಪಯ್ಯನವರು
ಮಂತ್ರ ದೊರಕಿತು ನಾಮ ಮಂತ್ರ ದೊರಕಿತು |ಯಂತ್ರವಾಹಕನಾರಾಯಣನಪಅಂತರಂಗದಿ ಜಪಿಸುವಂಥ ಅ.ಪಆಶೆಯಲ್ಲಿ ಬೀಳಲಿಲ್ಲ ಕ್ಲೇಶಪಟ್ಟು ಬಳಲಲಿಲ್ಲ |ವಾಸುದೇವಕೃಷ್ಣನೆಂಬ ಶಾಶ್ವತದೀ ದಿವ್ಯ ನಾಮ1ಅರ್ಥ ವೆಚ್ಚವಾಗಲಿಲ್ಲ, ಕಷ್ಟಪಟ್ಟು ಬಳಲಲಿಲ್ಲ |ಭಕ್ತಿಯಿಂದ ಭಜಿಸಿ ಮಹಾಮುಕ್ತಿ ಪದವಸೇರುವಂಥ 2ಹೊದ್ದಿದ ಪಾಪವೆಲ್ಲ ಕಳೆದು, ಉದ್ಧಾರವಾಯಿತು -ಕುಲಕೋಟಿಯು |ಮುದ್ದು ಕೃಷ್ಣನ ದಿವ್ಯನಾಮ ವಜ್ರಕವಚ ಹೃದಯದಲ್ಲಿ 3ಹಾಸಬಹುದು ಹೊದೆಯಬಹುದು, ಸೂಸಿಒಡಲ ತುಂಬಬಹುದು |ದಾಸರನ್ನು ಬಿಡೆದೆ ಪೊರೆವ ಶ್ರೀಶನೆಂಬ ದಿವ್ಯ ನಾಮ 4ಒಂದುಬಾರಿಸ್ತುತಿಸಿದರೆ ಒಂದು ಕೋಟಿ ಜಪದಫಲವು |ಇಂದಿರೇಶ ಶ್ರೀಪುರಂದರವಿಠಲನೆಂಬ ದಿವ್ಯನಾಮ5
--------------
ಪುರಂದರದಾಸರು
ಮರುಳುಮಾಯಾಗರಳಾಸಾಗರದೊಳು ಬಿ -ಪರಿಪರಿ ಸ್ತುತಿಸುವಂಥ ಭಾಗ್ಯಭಾರತಿನೀಡೇ
--------------
ಗುರುಜಗನ್ನಾಥದಾಸರು
ಮಹಾಲಕ್ಷ್ಮಿ50ದಯಮಾಡಮ್ಮ ದಯಮಾಡಮ್ಮಹಯವದನನ ಪ್ರಿಯೆ ಪವಿನಯದಿಂದ ಬೇಡುವೆನೆ ಕಮಲನೇತ್ರೆಯೆ ಅ.ಪಶಂಬರಾರಿಪಿತನ ರಾಣಿ ನಂಬಿಸ್ತುತಿಸುವೆಅಂಬುಜನಾಭನ ಧ್ಯಾನಸಂಭ್ರಮಎನಗೀಯೆ1ಗೆಜ್ಜೆಪಾದ ಧ್ವನಿಗಳಿಂದ ಮೂರ್ಜಗ ಮೋಹಿಸುತ್ತಸಜ್ಜನರ ಸೇವೆಗೊಳ್ಳುತ ಜನಾರ್ದನನ ಪ್ರೀತೆ 2ತ್ರಿಗುಣಾಭಿಮಾನಿಯೆ ನಿನ್ನ ಪೊಗಳುವ ಭಕ್ತರಬಗೆ ಬಗೆ ತಾಪತ್ರಯಗಳ ಕಳೆದುಮಿಗೆ ಸೌಖ್ಯವ ನೀಯೆ 3ಪದ್ಮಾಕ್ಷಿಯೆ ಪದ್ಮಸದನೆ ಪದ್ಮಪಾಣಿಯೆಪದ್ಮನಾಭನಗೂಡುತಲಿ ಹೃತ್ಪದ್ಮದಲಿ ಪೊಳೆಯೆ 4ಕನಕಾಭರಣಗಳಿಂದಲಿ ಪೊಳೆಯುವ ಕಮಲನೇತ್ರೆಯೆಕಮಲನಾಭವಿಠ್ಠಲನ ಕೂಡಿಕರುಣದಿ ಬಾರೆತಾಯೆ 5
--------------
ನಿಡಗುರುಕಿ ಜೀವೂಬಾಯಿ
ಯಾಕೆ ಕೈ ಬಿಡುವೆ ದೇವಾ |ತ್ರಿಜಗವನು ಸಾಕುವ ನೀನಭವ ||ಏಕೋ ಮೂರುತಿ ಶ್ರೀ ವೆಂಕಟಪತಿನಿನಗೆ ನಾ ಬೇಕಾದವನಲ್ಲವೆ ಸ್ವಾಮಿಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಬಾಲನ ಪತಿಕರಿಸಿ ಹಿರಣ್ಯಕನ | ಸೀಳಿ ರಕ್ಷಿಸಿದಂತೆ |ಶ್ರೀ ಲೋಲಾ ಗತಿಯೆಂಬೆ ||ಬ್ರಹ್ಮಸುತನಿಗೆಪಾಲನಮುದ್ರೆಯನಿತ್ತೆ ಸ್ವಾಮಿ |ಸಭೆಯೊಳು ದ್ರೌಪದಿ ಸ್ತುತಿಸೆ ನಿನ್ನ | ಅಭಿಮಾನ ಕಾಯ್ದೆ |ಗಂಡಇಭನಕ್ರನೊಳ .....................................ಧ್ರುವ ಅಂಬರೀಷಅಂಗದವಿಭೀಷಣ |ಪವನಜರುಕ್ಮಾಂಗದ |ಅವರಪಾಲಿಸಿದಂತೆ ರಕ್ಷಿಸು ಬಿಡದೆ ಎನ್ನ ||ಭವಹರಾ ಶ್ರೀ ಶಂಕರನಾತ್ಮಸಖಾ ||
--------------
ಜಕ್ಕಪ್ಪಯ್ಯನವರು
ರಕ್ಷಿಸೆವರ ಮಹಲಕ್ಷ್ಮೀಅಕ್ಷಯಗುಣಪೂರ್ಣೆ ಪಪಕ್ಷಿವಾಹನನ ವಕ್ಷಸ್ಥಳದಿರಕ್ಷಿತಳಾದೆ ಸುಲಕ್ಷಣದೇವಿ ಅ.ಪನಿಗಮವೇದ್ಯನ ಗುಣಗಳ ಪೊಗಳುತಲಿಮಿಗೆ ಸಂತೋಷದಲಿಅಗಣಿತಾಶ್ಚರ್ಯನ ಕೊಂಡಾಡುತಲಿಬಗೆ ಬಗೆ ರೂಪದಲಿಖಗವರವಾಹನನಗಧರನಿಗೆ ಪ-ನ್ನಗ ವೇಣಿಯು ಬಗೆ ಬಗೆಯಿಂದರ್ಚಿಸಿಹಗಲಿರುಳೆಡೆ ಬಿಡದಲೆ ಹರಿಯನು ಬಹುಬಗೆಯಲಿ ಸೇವಿಪಭಾಗ್ಯದ ನಿಧಿಯೆ 1ಇಂದಿರೆಶ್ರೀ ಭೂದುರ್ಗಾಂಬ್ರಣಿಯೇ ಸು-ಗಂಧ ಸುಂದರಿಯೆಇಂದುಶೇಖರ ಮೋಹಿಪ ಮೋಹಿನಿಯಸುಂದರವನೆ ಕಂಡುಚಂದಿರಮುಖ ಮುದದಿಂದಲಿ ಶ್ರೀಗೋ-ವಿಂದನು ತಾಳಿದ ಮೋಹಿನಿ ರೂಪವನೆಂದು ಮನದಿ ಆನಂದ ಪಡಲು ಸುರವೃಂದವ ಸ್ತುತಿಸೆ ಮುಕುಂದನ ರಮಣಿಯೆ 2ಕಮಲಾನನೆಕಮಲಾಲಯೆಕಮಲಾಕ್ಷಿಕಮಲೋದ್ಭವೆ ಕಮಲೆಕಮಲಾಸನಪಿತನ ಸತಿಯೆ ಭಾರ್ಗವಿಯೆಕಮಲಾಂಬಿಕೆ ಪಿಡಿದಿಹಕಮಲಪುಷ್ಪಮಾಲೆಯು ಹರುಷದಿ ಶ್ರೀ-ಕಮಲನಾಭ ವಿಠ್ಠಲಗರ್ಪಿಸುತಲಿಕಮಲಪತ್ರದಳಾಕ್ಷಗೆ ನಮಿಸಿ ಸ್ವ-ರಮಣನ ಕರುಣಕೆ ಪಾತ್ರಳೆ ಸುಂದರಿ 3
--------------
ನಿಡಗುರುಕಿ ಜೀವೂಬಾಯಿ
ರಥವಾನೇರಿದ ಯತಿವರನ್ಯಾರೇ ಪೇಳಮ್ಮಯ್ಯಾ ಪವಿತತ ಮಹಿಮಾ - ನತಜನರನತಿಹಿತದಿ ಪಾಲಿಸುವ - ಅತುಲ ಮಹಿಮ ಕಾಣಮ್ಮ ಅ.ಪಸ್ಮರಿಸುವ ಭಕುತರಪರಿ-ಪರಿಸಲಹುವನ್ಯಾರೇ ಪೇಳಮ್ಮಯ್ಯಾಗುರುವರ ರಾಘವೇಂದ್ರ ಕಾಣಮ್ಮಾ 1ಸ್ತುತಿಸುವ ಜನರಿಗೆ ಸತಿಸುತ ಸಂಪದ -ಮತಿರಹಿತರಿಗೆ ಸುಮತಿಯ ನೀಡುವನ -ಭೂತಳಜನನಾಥನೆನಿಸಿ ಮಹಾ -ಭೂತಿದಾಯಕ ರಾಘವೇಂದ್ರ ಕಾಣಮ್ಮಾ 2ಭೂತಪ್ರೇತ ಪಿಶಾಚ ಸುಮಹ -ಪಾತಕವನುಕುಲವೀತಿಹೋತ್ರಸುಖದೂತನೆನಿಪ ಗುರುರಾಯ ಕಾಣಮ್ಮ 3
--------------
ಗುರುಜಗನ್ನಾಥದಾಸರು
ರಸಿಕರವರ ಪ್ರಿಯರಸ ಕಾವನು ಭಕ್ತಿಕುಶಲನಿಗಿಹಪರಕುಶಲಾಘ ದೂರ ಪ.ಪಥಮನೆ ವನದಿ ಶ್ರೀಪತಿ ಮಹಿಮೆ ಘೋಷಿಸಿಪ್ರಥಮ ಯಾಮದಿ ಹರಿಪ್ರತಿ ಮುದವೇರಿಸ್ತುತಿಸಿ ತಾರತಮ್ಯದ ಸ್ಥಿತಿ ಸನ್ಮತದೊಳಿದ್ದುಸತಿತನುಜಸೌರಂಭ ಸತತ ಹರಿಯದೆಂಬ1ಹಿತಾಹಿತವರಿದು ವಿಹಿತಹೇತು ಬಲಿದು ವಿರತಿಭಕ್ತಿ ಜ್ಞಾನ ನಿರುತ ಭೇದ ನಿರತನಾಗಿ ಕುಜನವಾರತೆಯ ಕೇಳದಿರುವಚತುರರಸುಕೃತಸಂಚಿತದಿರವೇ ಲೇಸು2ವಿಷಮೀರೈದಿಂದ್ರಿಯ ವಶಮಾಡಿ ಮನೋರಿಯೋಲ್ಸುಸುಖಾವಿಡಿದುಕೊಂಬಾ ಸುಸುಖಾವುಂಬಭೈಷಜ್ಯ ಭವರೋಗ ಭೇಷಜನೆನಿಪ ಜಗಪ್ರಸನ್ನ ವೆಂಕಟೇಶಾಂಘ್ರಿ ಸ್ಪøಶ್ಯನಾದಾರೋಗ್ಯ 3
--------------
ಪ್ರಸನ್ನವೆಂಕಟದಾಸರು
ಶಂಕರಾಚಾರ್ಯರ ಸ್ತುತಿಸ್ವಾಮಿ ಶಂಕರನೆ ಆಚಾರ್ಯನಮಾಮಿಪಂಕಜಚರಣಕ್ಕೆ ಗುರುವರ್ಯಪ.ಸುರ ಮುನಿಗಳ ಮೊರೆಯಾಕೇಳಿಧರಣಿಯೊಳುದಿಸಿದ ಗಿರಿಜೆಯ ಪ್ರೀಯಾವರಅದ್ವೈತಪದ್ಧತಿಯಾಯೋಗಿವರನೆ ಬೋಧಿಸಿ ಮೋಕ್ಷ ಬೀಜ ಬಿತ್ತಿದೆಯಾ 1ನಿರ್ಮಲ ಜ್ಞಾನ ಸುದೀಪ ಸೋಹಂಬ್ರಹ್ಮಾನೇ ಎಂಬ ಸುಜ್ಞಾನವ ತೋರ್ಪಬ್ರಹ್ಮಾನಂದನಿಷ್ಟಾಪಗುರುಲಕ್ಷ್ಮೀನಾರಾಯಣ ರೂಡ ನಿರ್ಲೇಪ 2
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶರಣು ಶರಣೂ ಪ.ಮಹಾದೇವರಾ ಗರ್ಭದಲಿ ಉದ್ಭವಿಸಿದಿಯೊ ನೀನುಸಾಧುಮಾತೆಯ ಶಾಪವನ್ನು ಕೈಗೊಂಡುಆದಿಪೂಜೆಗೆ ಅಭಿಮಾನಿದೇವತೆಯಾದಿಮಾಧವನಮ್ಮ ಹಯವದನನ್ನ ಪ್ರಿಯ1ಹಿಮಗಿರಿಗೆ ಮಗಳಾಗಿ ಜನಿಸಿ ತಪವನು ಗೈದುಕಮಲಸಂಭವಸುತನ ಒಲಿಸಬೇಕೆಂದುರಮಣಿ ರಾಮಮಂತ್ರ್ರ ದಿನಸಹಸ್ರವು ಜಪಿಸೆಕಮಲಾಕ್ಷನೆಮ್ಮ ಹಯವದನನ್ನ ಪ್ರಿಯೆ 2ಮಡದಿ ಹೋದಾಗ್ರಹಕೆ ಜಡೆಯ ಕಿತ್ತಪ್ಪಳಿಸಿಕಡುಘೋರ ತಪಗೈಯೆ ಮನ್ಮಥನು ಬರಲುಕಿಡಿಗಣ್ಣಿನಲಿ ಅವನ ಭಸ್ಮವನು ಮಾಡಿದಿಕಡಲೊಡೆಯ ನಮ್ಮ ಹಯವದನನ್ನ ಪ್ರಿಯ 3ಮತ್ಸ್ಯದೇಶಕೆ ಪೋಗಿ ಮನದ ಚಿಂತೆಯಲಿರಲುತುಚ್ಛರಕ್ಕಸನು ನಿಮ್ಮನು ಪಿಡಿಯ ಬರಲುಚಿತ್ತದೊಲ್ಲಭಗ್ಹೇಳಿ ಕೊಚ್ಚಿಸಿದಿ ಅವನ ಶಿರಅಚ್ಯುತನಮ್ಮ ಹಯವದನನ್ನ ಪ್ರಿಯೆ4ಕೇಸರಿಯ ಗರ್ಭದಲಿ ಉದ್ಭವಿಸಿದಿಯೊ ನೀನುತ್ರೇತೆಯಲಿ ರಾಮರ ಸೇವೆಯನು ಮಾಡಿಭೂತಳದೊಳು ಭೀಮ ಕಡೆಗೆ ಯತಿಯಾಗಿ ನೀಶ್ರೀಪತಿ ಹಯವದನ ದೂತ ಪ್ರಖ್ಯಾತ 5ಈರೇಳು ಲೋಕದ ಜನರ ನಾಲಗೆಯಲ್ಲಿಬೀಜವನು ಬಿತ್ತಿ ಅನ್ನವ ಕೊಡುವ ತಾಯೆವಾರಿಜಸಂಭವನ ಹಿರಿಯ ಪಟ್ಟದ ರಾಣಿನೀರಜಾಕ್ಷನಮ್ಮ ಹಯವದನನ್ನ ಪ್ರಿಯೆ6ಜನನಿಹುಟ್ಟಿದ ನಾಳದಲ್ಲಿ ಜನಿಸಿದಿ ನೀನುಜನರ ಸೃಷ್ಟಿ ಸ್ಥಿತಿಗೆ ಕಾರಣನೆಂದುಅನಿಮಿಷರೆಲ್ಲರೂ ಸ್ತುತಿಸಿ ಕೊಂಡಾಡಲುವನಜಾಕ್ಷ ನಮ್ಮ ಹಯವದನನ್ನ ಪ್ರಿಯ 7ಪದ್ಮದಲ್ಲುದ್ಭವಿಸಿ ರಾಮರ ಕೈಹಿಡಿದುಪದ್ಮಾಕ್ಷನ ರಥಕ್ಕೆ ಕೈ ನೀಡಿ ಬಂದೆಪದ್ಮಾವತಿ ಎಂದು ಖ್ಯಾತಿ ಮೂರ್ಲೋಕದೊಳುಪದ್ಮಾಕ್ಷ ನಮ್ಮ ಹಯವದನನ್ನ ಪ್ರಿಯೆ 8ಅನಂತ ನಾಟಕಾನಂತ ಸೂತ್ರಧಾರಿಅನಂತ ಚರಿತ ನಿತ್ಯಾನಂದಭರಿತಅನಂತಾಸನ ಶ್ವೇತದ್ವೀಪ ವೈಕುಂಠಅನಂತಗುಣಭರಿತ ಹಯವದನ ಚರಿತ 9ಶರಣುಮತ್ಸ್ಯಕೂರ್ಮವರಾಹನಾರಸಿಂಹಶರಣು ವಾಮನಭಾರ್ಗವರಾಮಚಂದ್ರಶರಣು ಕೃಷ್ಣ ಬೌದ್ಧ ಕಲ್ಕ್ಯಸ್ವರೂಪನೆಶರಣು ಹಯವದನನ್ನ ಚರಣಗಳ ನುತಿಪೆ 10
--------------
ವಾದಿರಾಜ
ಶ್ರೀ ಆಂಗೀರಸ ನಾಮ ಸಂವತ್ಸರ ಸ್ತೋತ್ರ149ಶ್ರೀ ಲಕ್ಷ್ಮೀ ಭೂಮಾ ನೃಸಿಂಹನ್ನ ಆರಾಧಿಸಿಶೀಲ ಉದ್ಭಕ್ತಿಯಲಿ ಸ್ತುತಿಸುವ ಶನೈಶ್ಚರಇಳೆಯಲ್ಲಿ ವಿಂಧ್ಯಾಚಲ ದಕ್ಷಿಣ ದೇಶದಲಿ ಹೊಳೆಯುತಿಹÀರಾಜನಾಗಿ ಆಂಗೀರಸ ಸಂವತ್ಸರದಿ ತಂ ನಮೋ ಪಸೂರ್ಯಛಾಯಾಸೂನುಸೂರಿಸಾಧುಗಳಿಗೆಕಾರ್ಯಾನುಕೂಲ ಸರ್ವೇಷ್ಟ ಪೂರೈಸುವನುಕ್ರಿಯಾ ರೂಪದಿ ವಿಷ್ಣುವರವಾಯು ದೇವನೊಳು ಇರುತಸಂವತ್ಸರ ನಾಯಕರೋಳು ಕ್ರಿಯೆಗಳ ಮಾಡಿಸುವ 1ನರಹರಿಯ ಒಲುಮೆ ಶನಿರಾಜನಲಿ ಬಹು ಉಂಟುನರಕ್ಷೇಮೋಪಾಯ ಅಂದು ದಶರಥಗೆ ಪೇಳಿದ ಪಾದ್ಮದಿಹರಿನಾಮೋಚ್ಛಾರಣೆ, ಶನಿಕೃತ ನೃಹರಿ ಸ್ತೋತ್ರ ಪಠಣದಿಪಾರುಗಾಣುವರು ಸಾಧು ಸಜ್ಜನ ಭಕ್ತರು 2ಅನಂದಮಯ ಹರಿಯು ಆಂಗೀರಸ ಸಂವತ್ಸರದಿಜನರಿಗೆ ಯೋಗ್ಯತಾನುಸಾರ ಸುಖವನ್ನೇಈವಜನರಿಗೆ ಆದಿಯಲಿ ಸುಕ್ಷೇಮ ಕಾಲವು ಕಥೆಯಲ್ಲಿ ದುರ್ಭಿಕ್ಷನೂತನ ವಸ್ತು ಉತ್ಪತ್ತಿ, ಧಾನ್ಯಾದಿಗಳು ಸಮೃದ್ಧಿ ಇದ್ದರೂ ಕ್ಷಾಮ 3ಬ್ರಹ್ಮಪಾರ ಸ್ತೋತ್ರವ ಕಂಡು ಋಷಿಗೆ ಉಪದೇಶಿಸಿದಬ್ರಾಹ್ಮಣೌಷಧಿ ಪತಿಯು ಸುಧಾಮೂರ್ತಿ ಚಂದ್ರಮಹಿಗೆ ಅಹ್ಲಾದವ ನೀವನು ಮಂತ್ರಿಸ್ಥಾನವ ವಹಿಸಿಅಜಸ್ಪತಿ, ಬೃಹಸ್ಪತಿ, ಶನಿಕುಜಗೋಪಾಲಸರ್ವರಿಗೂ ನಮೋ ನಮೋ 4ರಸನೆ ಲೋಲ್ಯಾಟವಾಹನಆಟೋಪ ಹೆಚ್ಚಿದರೂರಸನೆ ಸಹ ಭಕ್ತಿಯೂ ಸಹ ಹೆಚ್ಚುವುದು ಮದುವೆ ಜನನ ಕಡಿಮೆಶಾಸ್ತ್ರ, ವಿಜ್ಞಾನ, ವಿಷ್ಣು ಸಹಸ್ರನಾಮ ಪ್ರತಿಪಾದ್ಯಸರಸಿಜಾನನತಾತಪ್ರಸನ್ನ ಶ್ರೀನಿವಾಸನಲಿ ಶರಣು ಶರಣಾದೆ5ಶ್ರೀ ಲಕ್ಷ್ಮೀ ಭೂಮಾ ನೃಸಿಂಹನ್ನ ಆರಾಧಿಸಿಶೀಲ ಉದ್ಭಕ್ತಿಯಲಿ ಸ್ತುತಿಸುವ ಶನೈಶ್ಚರಇಳೆಯಲ್ಲಿ ವಿಂಧ್ಯಾಚಲ ದಕ್ಷಿಣ ದೇಶದಲಿ ಹೊಳೆಯುತಿಹರಾಜನಾಗಿ ಆಂಗೀರಸ ಸಂವತ್ಸರದಿ ತಂ ನಮೋ ಪ
--------------
ಪ್ರಸನ್ನ ಶ್ರೀನಿವಾಸದಾಸರು