ಒಟ್ಟು 1686 ಕಡೆಗಳಲ್ಲಿ , 118 ದಾಸರು , 1173 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಮೋ ನಮೋ ಮುಖ್ಯ ಪ್ರಾಣ ನಾಥನೇ ನಮೋ ಜಗದೊಳು ಪ್ರಖ್ಯಾತನೇ ಪ ಧರಣಿ ಸುತೆಯ ಮುಖ ಚಂದ್ರಚಕೋರನಾ ಸಿರಿ ಚರಣಾಂಬುಜ ಭೃಂಗಾ ಸುರವರರಿಯ ತಂದೆಯ ಮಾವನ ಸಂ ಹರಿಸದೆ ವಾನರ ತುಂಗಾ1 ದುರ್ಯೋಧನಾದಿ ನೂರೊಂದು ಮಂದಿಯ ತನು ಪರ್ವತ ವಜ್ರದಂಡಾ ಕರಿ ಏರಿ ಬಹ ಭಗದತ್ತನ ಗದೆಯಿಂದ ಹರಿಸದೆ ಭೀಮ ಪ್ರಚಂಡಾ2 ಧರಿಯೊಳುತಾನವ ಗುಣ ಕರಿಯಾವಳ ನರಸಿಂಹನು ಮಧ್ವರೇಯ ಪರಮರೂಪವ ಮೂರಾಗಿ ದೊರಿದೆ ಗುರು ಮಹಿಪತಿ ಪ್ರಭು ಪ್ರೀಯಾ || 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮ್ಮ ರಂಗನ ಕಂಡಿರ್ಯಾ ಹೇಳಿರಿ ನೀವಮ್ಮಾ ಪ ಅರಳೆಲೆ ಮಾಗಾಯಿ ಕಿರಿಗೂದಲು ಮುತ್ತಿನ| ವರಮಕುಟ ಪದಕ ಕೊರಳಿನಾ 1 ಕುಂಡಲ ಕುಡಿ-ಗಂಗಳ ಬೆಳಗಿನ| ಚೆಲುವ ಕದವು ಮುದ್ದು ಸೊಬಗಿನಾ 2 ಬರಿಮುಗುಳ ನೆಗೆಯಾ ಸುದಂತ ಸಾಲಿನ ಸಿರಿವತ್ಸಧರ ಹೇಮಚಸನನಾ3 ಧರೆಯೊಳು ಭಕ್ತರ ಮಾಡುವ ಪಾವನ| ಮಿರುಪರನ್ನದಂಗುರ ಬೆರಳಿನಾ 4 ಕೊಳಲನೂದಿ ಗೋಪ್ಯಾರ ಮೋಹಿಪ ಮನಸಿನಾ| ಒಲಿದು ಪಾಲಿಪ ಮಹಿಪತಿಜನ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನರನೆನಬಹುದೆ ಸದ್ಗುರು ವರನಾತರುವೆನಬಹುದೆ ಸುರತರುವನ್ನ ಪ ಆಸನವನೆಹಾಕಿ ಕುಳ್ಳಿರಿಸಿದವನನಾಸಿಕ ಕೊನೆದೃಷ್ಟಿ ಇರಿಸಿದವನಬೀಸುವ ವಾಯುವ ಕುಂಭೀಸೀದವನಸೂಸುವ ಮುತ್ತಿನ ಮಳೆ ಸುರಿಸಿದವನ 1 ಆರು ಮಂಟಪ ನೆಲೆ ಅಡರಿಸಿದವನಭೇರಿ ಘಂಟವು ಶಂಖವು ಭೋರಿಡಿಸಿದವನಬೀರುವ ದ್ವಿದಳ ಸದರಕಾಶಿಸಿದವನನೂರು ಕೋಟಿಯ ರವಿ ಬೆಳಕ ಚೆಲ್ಲಿದವನ 2 ಸಾವಿರ ದಳದ ಮನೆಯ ಜೈಸಿದವನಈವ ಬ್ರಹ್ಮರಂದ್ರ ಸುಖವುಣಿಸಿದವನಕೇವಲ ಶಿಂಶುಮಾರಕೆ ಸೇರಿದವನದೇವ ಚಿದಾನಂದನ ಮಾಡಿದವನ 3
--------------
ಚಿದಾನಂದ ಅವಧೂತರು
ನಲಿದಾಡು ಬಾರೊ ಗರುಡತುರಂಗಾ ಪ ದುರುಳ ಭಸ್ಮಾಸುರ ಉರಿಹಸ್ತ ಪಡೆದಂದು ತರುಣಿರೂಪದೆ ನಲಿದು ಹರನ ಪೊರೆದೆಯಲ್ತೆ 1 ಲೋಲ ಲೋಚನೆಯರ ಆಲಯಗಳ ಪೊಕ್ಕು ಹಾಲು ಬೆಣ್ಣೆಯ ಮೆದ್ದ ಗೋಪಾಲ ವಿಠಲನೇ 2 (ಭವ ಬಂಧವು ನಾಮಪ್ರಿಯ ಪರಂಧಾಮನೇ) 3 ಆವ ಬಂಧವನ್ನೂ ಬಿಡಿಸಿ ನವನೀತವೀವನೇ ಕಾವರಿಲ್ಲವೋಯೆನ್ನ ಮಾವಿನ ಕೆರೆರಂಗಾ 4 ಕಾಮಿತಂಗಳ ದೇವ ಶಾಮಲಾಂಗನೆ ನಿನ್ನ ನಾಮವ ನೆರೆಸಾರು ರಾಮದಾಸಾರ್ಚಿತ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಸು ನಗುತ ನಿಂತ ಬಗೆಯು ಪ ತಿಳಿದು ಪೂಜೆಯು ಮಾಡುವ ಭಕುತರನು ಬಳಿಗೆ ಕರೆವುದು ತೀವ್ರವೊ ಖಳಕುಲದ ಜನರು ಬರಲು ಹೋಗೆಂದು ಕಳುಹುವ ಬಗೆಯ ಏನೊ ಕೃಷ್ಣ 1 ಸುಳಿದ ಜನಗಳ ಕೂಡ ಸುಂಕವನು ಸೆಳೆಕೊಂಬ ಬಗೆಯು ಏನೊ ಕೆಳದಿಯರ ಬಂದವರನಾ ಮೋಹಿಸಿ ಕೊಳಲನೂದುತಲಿ ನಿಂದಿಯೊ ಕೃಷ್ಣ 2 ಬಲಿಯ ಕಾಯಿದ ಬಗೆಯಲಿ ದಾಸರನ ಚಲಿಸದಲೆ ಕಾವ ಬಗಿಯೊ ನೆಲೆ ವಾಸುದೇವವಿಠಲ ಭಕುತನ್ನ ಸಲಿಗೆ ಬಿನ್ನಪ ಸಲಿಪುದೊ 3
--------------
ವ್ಯಾಸತತ್ವಜ್ಞದಾಸರು
ನಾ ಮಾಡಿದತಿಶಯ ಅಪರಾಧ ಅಹಾ ಸ್ವಾಮಿದ್ರೋಹವೆ ಮಾಡಿದೆ ಪ ನೇಮವಿಲ್ಲದೆ ಪಾಪ ಕಾಮಿಸಿ ಮಾಡಿ ಹರಿ ಪ್ರೇಮಕ್ಕೆ ದೂರಾದೆ ಪಾಮರತನದಿ ಅ.ಪ ಗುರುನಿಂದೆ ಮಾಡಿದೆ ಸ್ಮರಿಸಿದೆನನುದಿನ ಸ್ಮರಿಸಬಾರದ ಸ್ತ್ರೀಯರ ಶರಣಜನರು ಕಂಡು ಶಿರವ ಬಾಗದೆ ಮಹ ಗರುವದಿಂ ಚರಿಸಿದೆ ಪರಿಪರಿ ಜಗದಿ 1 ಲಕ್ಷಿಸದೆ ಪರರರ್ಥ ಭಕ್ಷಿಸಿ ಇಲ್ಲೆನುತ ಪಕ್ಷಿಗಮನನ ಸಾಕ್ಷಿಟ್ಟು ಲಕ್ಷದಶಶತಪಾಪ ಲಕ್ಷ್ಯವಿಲ್ಲದೆ ಗೈದು ಶಿಕ್ಷೆಗೆ ಗುರಿಯಾದೆ ಮೋಕ್ಷವನರಿಯದೆ 2 ಪಿತಮಾತೆಯರ ನೂಕಿ ಇತರರ ಜತೆಯೊಳು ಮತಿಗೆಟ್ಟು ಮಮತಿಟ್ಟಿಹೆ ಮಿತಿಯಿಲ್ಲದನೃತ ಕ್ಷಿತಿಯೊಳು ಸರಿಧರ್ಮ ಹಿತಚಿಂತನಿನಿತಿಲ್ಲದತಿಭ್ರಷ್ಟನಾದೆ 3 ಮಣಿದು ದೈನ್ಯೆಂಬರಿಗೆ ಘನಹಾಸ್ಯಗೈಯುತ ಮನವ ನೋಯ್ಸಿದೆ ಬೆನ್ನ್ಹಚ್ಚಿ ಕನಿಕರೆಂಬುದು ಎನ್ನ ಕನಸಿನೊಳಿನಿತಿಲ್ಲ ಮನಸಿನಂತ್ವರ್ತಿಸಿ ಘನಕರ್ಮಿಯಾದೆ 4 ಇಂತು ಪಾಪಿಗೆ ಸುಖವೆಂತು ತ್ರಿಜಗದೊಳು ಕಂತುಜನಕ ಶ್ರೀರಾಮ ಭಕ್ತವತ್ಸಲ ನೆಂಬ ಬಿರುದು ವಹಿಸಿದಿ ಎನ್ನ ದೆಂಥ ತಪ್ಪಿರೆ ಕ್ಷಮಿಸಿ ಸಂತಸದಿಂ ಪೊರೆ 5
--------------
ರಾಮದಾಸರು
ನಾಗಲೋಕದ ಕಾಳಿ ಈಗಳೆ ಹಿಡಿಸುತನಾಗವೇಣಿಯರೆಲ್ಲ ಸಾಗಿ ಹೆಜ್ಜೆ ನಿಕ್ಕುತ ಈಗ ನೋಡುಣು ಬಾರೆ ಬ್ಯಾಗಸೆ ದ್ವಾರಕಾಸಾಗರ ಶಯನನಿನ್ನು ಪ. ಅಂಬುಜಾಕ್ಷನು ತಾನು ಅತಿ ಬೇಗ ಹೊಯ್ಸಿದ ಜಂಬುದ್ವೀಪದ ಜಯಭೇರಿಜಂಬುದ್ವೀಪದ ಜಯಭೇರಿ ಹೊಯಿಸಲು ಕುಂಭಿಣಿ ಜನರೆಲ್ಲ ಕೂಡಿತು ಎಲೆ ಸಖಿ 1 ಏಳು ಲೋಕದ ಕಾಳಿಭಾಳೆ ರೌಸದಿ ಹಿಡಿಯೆಕಾಳಿ ಮರ್ದನನ ಮನೆಮುಂದೆಕಾಳಿ ಮರ್ದನನ ಮನೆಮುಂದೆ ಹಿಡಿಸಲುಏಳು ಲೋಕದ ಜನ ಮೇಳವ ನಮಗೆ ಎಲೆ ಸಖಿ2 ಕೋಟಿ ಕೋಟಿ ಹಿಲಾಲು ಥಾಟಾಗಿ ತೋರುವ ಹಾಟಗಾಂಬರನ ಮನೆಮುಂದೆ ಹಾಟಗಾಂಬರನ ಮನೆಮುಂದೆ ಬೆರಗಾಗಿಪಾಟಿಸಿ ನೋಡೋ ಪ್ರಜರೆಷ್ಟ ಎಲೆ ಸಖಿ 3 ಹತ್ತು ಕೋಟಿ ಹಿಲಾಲು ಜತ್ತಾಗಿ ತೋರುತಚಿತ್ತಜನೈಯನ ಮನೆಮುಂದೆಚಿತ್ತಜನೈಯನ ಮನೆಮುಂದೆ ಬೆರಗಾಗಿಅರ್ಥಿಲೆ ನೋಡೋ ಪ್ರಜರೆಷ್ಟ ಎಲೆ ಸಖಿ4 ನೂರು ನೂರು ಸಾವಿರ ತೋರುವ ಬಾಣ ಬಿರುಸುವಾರಿಜಾಕ್ಷನ ಮನೆಮುಂದೆ ವಾರಿಜಾಕ್ಷನ ಮನೆಮುಂದೆ ಈ ಸೊಬಗುಆರುವರ್ಣಿಸಲು ವಶವಲ್ಲ ಎಲೆಸಖಿ5 ಸಿಡಿಲು ಫರ್ಜಿಸಿದಂತೆ ಬಿಡುವ ಬಾಣಗಳೆಷ್ಟಧಡ ಧಡ ಹಾರುವ ಬಿರುಸೆಷ್ಟಧಡ ಧಡ ಹಾರುವ ಬಿರುಸೆಷ್ಟು ಮುಯ್ಯದ ಬೆಡಗವರ್ಣಿಸಲು ವಶವಲ್ಲ ಎಲೆಸಖಿ6 ಗರುಡನ ಆಭರಣವ ಮೃಡನು ವರ್ಣಿಸಲಾರ ಜಡಿದ ರತ್ನಗಳು ಝಳಪಿಸುತಜಡಿದ ರತ್ನಗಳು ಝಳಪಿಸುವÀ ವಾಹನವೇರಿಒಡೆಯ ರಾಮೇಶ ಕುಳಿತಾನೆ ಎಲೆಸಖಿ 7
--------------
ಗಲಗಲಿಅವ್ವನವರು
ನಾಗಶಯನನು ನಿನಗಾಗಿಯೆ ಬಂದಿಹೆÉ ಬಾಗಿಲ ತೆಗೆಯೆ ಭಾಮೆ ನೀ ಬಾಗಿಲ ತೆಗೆಯೆ ಭಾಮೆ ಪ. ಕೂಗುವ ನೀನ್ಯಾರೊ ಈಗ ಹೊತ್ತಲ್ಲ ಕೂಗಬೇಡ ಪೋಗೋ ನೀ ಕೂಗಬೇಡ ಪೋಗೋಅ.ಪ. ನಿಗಮ ಚೋರನ ಗೆದ್ದ ನೀರಜಾಕ್ಷನೆ ಭಾಮೆ ನಾ ನೀರಜಾಕ್ಷನೆ ಭಾಮೆ ನಾರುವ ಮೈಯನ್ನು ಎನ್ನಲ್ಲಿ ತೋರದೆ ಸಾರು ಸಾರು ನೀ ದೂರ ರಂಗ ಸಾರು ಸಾರು ನೀ ದೂರ 1 ಮಂದರ ಗಿರಿಯನು ಬೆನ್ನಲಿ ಪೊತ್ತ ಇಂದಿರೆಯರಸನೆ ಭಾಮೆ ನಾ- ನಿಂದಿರೆಯರಸನೆ ಭಾಮೆ ಇಂದು ನಿನಗೆ ತಕ್ಕ ಭಾರಗಳಿಲ್ಲವು ಸಿಂಧುವಿನೊಳು ನೀ ಪೋಗೈ ಕೃಷ್ಣ ಸಿಂಧುವಿನೊಳು ನೀ ಪೋಗೈ 2 ಧರಣಿಗೆ ಸುಖವನು ತೋರಿದ ಸೂಕರ ಪರಮಪುರುಷನೆ ಭಾಮೆ ನಾ ಪರಮ ಪುರುಷನೆ ಭಾಮೆ ವರಾಹರೂಪದ ನಿನ್ನ ಗುರುಗುರು ಶಬ್ದವ ಅರಿವಳಲ್ಲವೊ ನೀ ಪೋಗೈ ರಂಗ ಅರಿವಳಲ್ಲವೊ ನೀ ಪೋಗೈ 3 ಬಾಲನ ತಾಪವ ಕೋಪದಿ ತರಿದ ನಾರಸಿಂಹನೆ ಭಾಮೆ ನಾ ನಾರÀಸಿಂಹನೆ ಭಾಮೆ ಜ್ವಾಲೆಯ ವದನ ಕ್ರೂರ ಕಾರ್ಯಂಗಳ ಕೇಳಿ ಅಂಜುವಳಲ್ಲ ಪೋಗೈ ರಂಗ ಕೇಳಿ ಅಂಜುವಳಲ್ಲ ಪೋಗೈ 4 ವಾಸವನನುಜನೆ ವಾಮನರೂಪನೆ ನಾಶರಹಿತನೆ ಭಾಮೆ ನಾ ನಾಶರಹಿತನೆ ಭಾಮೆ ಕೂಸಿನ ರೂಪದಿ ಮೋಸವ ಮಾಡಿದಗೆ ದಾಸಿ[ಯೊ]ಬ್ಬಳು ಬೇಕೇ ರಂಗ ದಾಸಿ[ಯೊ]ಬ್ಬಳು ಬೇಕೇ 5 ತಾತನ ಮಾತಿಗೆ ತಾಯಿಯನಳಿದ ಖ್ಯಾತ ಭಾರ್ಗವನೆ ಭಾಮೆ ನಾ ಖ್ಯಾತ ಭಾರ್ಗವನೆ ಭಾಮೆ ಮಾತೆಯನಳಿದ ಘಾತಕ ನಿನಗೆ ದೂತಿಯೊಬ್ಬಳು ಬೇಕೇ ರಂಗ ದೂತಿಯೊಬ್ಬಳು ಬೇಕೇ 6 ದಶರಥನಂದನ ದಶಮುಖಭಂಜನ ಪಶುಪತಿವಂದ್ಯನೆ ಭಾಮೆ ನಾ ಪಶುಪತಿ ವಂದ್ಯನೆ ಭಾಮೆ ಹಸನಾದ ಏಕಪತ್ನೀವ್ರತದವಗೆ ಸುದತಿಯೊಬ್ಬಳು ಬೇಕೇ ರಂಗ ಸುದತಿಯೊಬ್ಬಳು ಬೇಕೇ 7 ಹದಿನಾರು ಸಾಸಿರ ನೂರೆಂಟು ಸುದತೇರ ಬದಿಯಲಿಟ್ಟವನೆ ಭಾಮೆ ನಾ ಬದಿಯಲಿಟ್ಟವನೆ ಭಾಮೆ ಹದನಕ್ಕೆ ಬಾರದ ಮಾರ್ಗಂಗಳ್ಯಾತಕ್ಕೆ ವದನ ಮುಚ್ಚಿಕೊಂಡು ಪೋಗೈ 8 ಬೌದ್ಧರಕುಲದಲ್ಲಿ ಹುಟ್ಟಿ ಅವರಂತೆ ಮುಗ್ಧರ ಮಾಡಿದೆ ಭಾಮೆ ನಾ ಮುಗ್ಧರ ಮಾಡಿದೆ ಭಾಮೆ ಶುದ್ಧಗುಣಗಳೆಲ್ಲ ಇದ್ದಲ್ಲಿಗೆಪೇಳೆ ವೃದ್ಧಳು ನಾನಲ್ಲ ಪೋಗೈ ರಂಗ ವೃದ್ಧಳು ನಾನಲ್ಲ ಪೋಗೈ 9 ವರ ತುರಗವನೇರಿ ಧರೆಯೆಲ್ಲ ಚರಿಸಿದ ದೊರೆವರ ನಾನೆ ಭಾಮೆ ಚರಿಸಿದ ದೊರೆವರ ನಾನೆ ತÀುರಗದ ಚಾಕರಿಯೊ[ಳಗಿರುವವನಿಗೆ] ತರುಣಿಯ ಭೋಗವು ಬೇಕೇ ರಂಗ ತರುಣಿಯ ಭೋಗವು ಬೇಕೇ 10 ಸರುವ ಪ್ರಾಣಿಗಳ ಉದರದೊಳಿಂಬಿಟ್ಟು ಶರಧಿಯೊಳ್ಮಲಗಿದವ ಭಾಮೆ ನಾ ಶರಧಿಯೊಳ್ಮಲಗಿದವ ಭಾಮೆ ದೊರೆ ಹಯವದನ ಚರಣಕ್ಕೆರಗುತ ತೆರೆದಳು ಬಾಗಿಲ ಭಾಮೆ ಆಗ ತೆರೆದಳು ಬಾಗಿಲ ಭಾಮೆ 11
--------------
ವಾದಿರಾಜ
ನಾಟಕವಿದು ಹಳೆ ನಾಟಕ ನೋಟಕೆ ಇದು ಬಲು ನೂತನ ಪ ನಾಟಕ ಮಂದಿರ ಜಗವೆಲ್ಲ ಕಂಡಿರ ನೋಟವು ಯಾರದೊ ಆಟವು ಯಾರದೊ ಅ.ಪ ಇರುಳೊಳು ರಾಜಾಧಿರಾಜನಿವ ಹಗಲಲಿ ಭಿಕ್ಷಕೆ ಹಾಜರಿವ ಮುಗಿವುದು ಎನ್ನಯ ಪಾತ್ರವೆನ್ನುವುದೆ ಹಗಲಿನತನಕವು ಕಾಣನಿವ 1 ಯುದ್ಧವು ದಿನವೊ ಈ ನಾಟಕದಿ ಗೆದ್ದವರೊಬ್ಬರ ತೋರಿಸಿ ಯುದ್ಧದಗೋಚಿಗೆ ಹೋಗದೆ ಶಾಂತಿಯೊ ಳಿದ್ದ ಜನರೆ ಗೆದ್ದವರಿಲ್ಲಿ 2 ಕಲಿಪುರುಷನ ದೊಡ್ಡ ಸಭೆಯಲ್ಲಿ ಕುಳಿತು ಮಾತಾಡುವರಾರು ಜನ ಕಳುಹಿಸಲೊಬ್ಬನು ಇಳೆಯೊಳಗೊಬ್ಬರ ಉಳಿಸದೆ ಗೆಲುವೆನು ನೋಡು ಪ್ರಭು 3 ಶೌರ್ಯ ಸಾಹಸ ಕಾಪಟ್ಯಗಳಾ ಶ್ಚರ್ಯವು ಒಂದೊಂದು ದೃಶ್ಯದಲೂ ಯಾರ್ಯರೆಂಬುದ ಕಾಣದೆ ವೇಷದ ಮರ್ಯಾದೆಯು ವರ್ಣಿಪುದೆಂತು 4 ಕುಣಿವರು ಒಂದೆಡೆ ದಣಿವರು ಒಂದೆಡೆ ಕೊನೆ ಮೊದಲಿಲ್ಲವೀ ನಾಟಕಕೆ ಪ್ರಣಯಹನನ ದೃಶ್ಯಗಳನು ಒಂದೇ ಕ್ಷಣದಲಿ ತೋರುವ ಅಸದೃಶ್ಯದ 5 ಹೊಸ ಹೊಸ ದೃಶ್ಯವು ಹೊಸ ಹೊಸ ಪಾತ್ರವು ಪುಸಿಯಲ್ಲವು ಈ ನಾಟಕವು ಶಶಿಕುಲದರಸ ಪ್ರಸನ್ನನಾಗಿ ತಾ ಮುಸಿ ಮುಸಿ ನಗುತಲಿ ನೋಡುತಿಹ 6
--------------
ವಿದ್ಯಾಪ್ರಸನ್ನತೀರ್ಥರು
ನಾಥದೀನಾನಾಥ ಸದ್ಗತಿ|ದಾತ ನೋಡಿರೋ|ಭವ| ಭೀತರ ಪತಿತರೆ ಪುನೀತಮಾಡುವ ನೀತನೆ|ರಘು| ಪ ಹವಣದಿ ತಾನಾರೆ ಸವಿಧ್ಹಣ್ಣುಗಳನ್ನು| ತವಕದಿ ಜಾನಕಿಧಮಗರ್ಪಿತವೆನೆ| ಅವನಿಲಿ ಶಬರಿಗೆ ಘವಿಘವಿಸುತ್ತಿಹ| ಅವಿರಳ ಪದದನುಭವ ನೀಡಿದ|ರಘು...... 1 ದಾವನ ಶ್ರುತಿಗಳು ಭಾವಸಿ ನುಡಿಯಲು| ದೇವನ ಹಿತಕುಜ ಕೇವಲ ವನಜರ| ಜೀವರೊಳಾಡುತ ಸೇವೆಗೆ ನಲಿಯುತ| ಕೈವಿಡಿದಿತ್ತನು ಕೈವಲ್ಯವ|ರಘು...... 2 ಕುಂದದೆ ಬಾಂಧವ ನಿಂದಿಸಿ ನೂಕಲು| ನೊಂದುವಿಭೀಷಣ ಬಂದರೆ ಶರಣವ| ತಂದೆ ಮಹೀಪತಿ ನಂದನ ಪ್ರಭು ಆ| ನಂದದ ಸ್ಥಿರಪದ ಹೊಂದಿಸಿದಾ|ರಘು..... 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಾನೇ ಭ್ರಮಿಸಿದೆನೋ ವಿಷಯ ಸಂಗ ನೀನೇ ನಲಿದಿತ್ತೆಯೋ ಪ. ಗಾನಲೋಲನೆ ಕೃಷ್ಣ ಏನೆಂಬುದರಿಯೆನೊ ಮೌನಿ ಜನಪ್ರಿಯ ಧ್ಯಾನಗಮ್ಯನೆ ರಂಗ ಅ.ಪ. ನೂಕುತ ದಿನ ಕಳೆದೆ ಕಾಕು ಯುಕುತಿಯಲ್ಲಿ ವ್ಯಾಕುಲ ಮನಕಿಲ್ಲ ಶ್ರೀಕಾಂತ ನಿನ್ನಿಚ್ಛೆ ಸುಖದುಃಖ ನಿಕರವ 1 ಆಟ ಪಾಟ ನೋಟವೂ ಊಟ ಕೂಟ ಕಾಟ ಕರ್ಮಗಳೆಲ್ಲವೂ ಹಾಟಕಾಂಬರ ನಿನ್ನಾಟವÉನ್ನಲುಭವ ದಾಟಿಸುವವೊ ತೆರೆ ಏಟಿಗೆ ಕೊಡುವುವೋ 2 ನರಕಕೆ ಕಾರಣವೋ ಹೇ ಶ್ರೀನರ ಹರಿ ನಿನ್ನ ಪ್ರೀತಿ ಕರವೋ ಸಂಚಿತ ಕರ್ಮ ಹರಿಸುತ ವರ ಸುಖ ಪಾಲಿಪ ಗುರುತಿನ ಪರಿಯೋ 3 ದೇಹಕ್ಕೆ ಹಿತಕರವೋ ಇಲ್ಲವೆ ಮನ ದಾಹಕ್ಕೆ ಮೃತ ಕರವೋ ದೇಹ ಮೋಹಾದಿಗಳಳಿದು ನಿಶ್ಚಲ ತತ್ವ ಶ್ರೀಹರಿ ತೋರುವ ತೆರವೊ ಒಂದರಿಯೆ 4 ಪಾಪಕ್ಕೆ ಹಿತಕರವೋ ಇಲ್ಲವೆ ಮನ ದಾಹಕ್ಕೆ ಮೃತ ಕರವೋ ದೇಹ ಮೋಹಾದಿಗಳಳಿದು ನಿಶ್ಚಲ ತತ್ವ ಶ್ರೀಹರಿ ತೋರುವ ತೆರವೊ ಒಂದರಿಯೆ 5 ಪಾಪಕ್ಕೆ ಕಾರಣವೋ ಈ ಕರ್ಮಗಳ ಳಾಪದುದ್ಧಾರಕವೋ ಗೋಪಾಲಕೃಷ್ಣವಿಠ್ಠಲನೆ ಮದ್ಗುರು ಬಿಂಬ ವ್ಯಾಪಾರದ್ವಯ ನಿಂದು ನೀ ಪ್ರೀತನಾಗಲೊ 6
--------------
ಅಂಬಾಬಾಯಿ
ನಾನೇನು ನಿನ್ನಯ ಚರಣವ ಮಾಣೆನು ಪ ಮಾನವ ಕಾಯ್ವರನನ್ಯರ ಕಾಣೆನು ಅ.ಪ. ಕಣ್ಣನು ಬಿಡುತಲಿ ಬಿರಿಬಿರಿ ನೋಡುತಿಣ್ಣನೆ ಬೆಟ್ಟದ ಮೇಲೆ ಬಿಸಾಡುಮಣ್ಣನುಗ್ಗಲು ಹಲ್ಲಲ್ಲಿ ತೋಡುಸಣ್ಣನ ಉಗುರಿಲಿ ಹರಿಕೊಂಡು ನೋಡು 1 ಕಾಲಲಿ ತಲೆಯನು ತುಳಿಯುತೋಡಾಡುಮೇಲಾಗಿ ಕೊಡಲಿಯನೊಗೆದು ಈಡಾಡುಬಾಲದ ಮಂಗನ ಕರಡಿಯ ಛೂಬಿಡುಸೋಲಿಸಲಾವುದೆ ತಂತ್ರವ ಹೂಡು 2 ಮೃದು ನುಡಿಯಲಿ ಅವಮಾನಿಸಿ ನೂಕುಕುದುರೆಯ ತಂದೆನ್ನ ಮೈಮೇಲೆ ಹಾಕುಗದುಗಿನ ವೀರನಾರಾಯಣ ಸಾಕುಪದಗಳ ಸೇವೆಯು ನಿತ್ಯದಿ ಬೇಕು 3
--------------
ವೀರನಾರಾಯಣ
ನಾರದ ಕೊರವಂಜಿ ಜಯ ಜಯ ದಯಾಕರನೆ ಹಯವದನ ಭಯಹರನೆ ಜಯ ಶೀಲಸಾಧ್ವರನೆ ಜಯ ದೀನೋದ್ಧರನೆ ಪ್ರಿಯಜನ ಮನೋಹರನೆÀ ಸುಯತಿ ಸಾಕಾರನೆ 1 ಹರಿಯೇ ಪತಿಯಾಗಬೇಕೆಂದು ರುಕುಮಿಣಿ ಪರದೇವತೆಯ ನೆನವುತಿರಲು ಕೊರವಂಜಿ ವೇಷದಿ ರುಕುಮಿಣಿದೇವಿಗೆ ಪರಮ ಹರುಷವೀವೆನೆಂದು ನಾರದ ಬಂದ 2 ಧರಣಿ ಮಂಡಲದಲ್ಲಿ ನಾರದ ಧರಿಸಿ ಕೊರವಂಜಿ ವೇಷವ ಸುರನರಾದಿಗಳೆಲ್ಲರಿಗೆ ತಾ ಪರಮ ಆಶ್ಚರ್ಯ ತೋರುತ್ತ 3 ಬಂದಳು ಕೊರವಂಜಿ ಚಂದದಿಂದಲಿ ಮಂದಹಾಸವು ತೋರುತ್ತ ಪಾದ ಧಿಂಧಿಮಿ ಧಿಮಿ- ಕೆಂದು ನಿಂದಭೀಷ್ಟವ ಪೇಳುತ 4 ಗಗನದಂತಿಹ ಮಧ್ಯವು ಸ್ತ- ನಘನ್ನ ಭಾರಕೆ ಬಗ್ಗುತ ಜಗವನೆಲ್ಲವ ಮೋಹಿಸಿ ಮೃಗ ಚಂಚಲಾಕ್ಷದಿ ನೋಡುತ 5 ಕನಕಕುಂಡಲ ಕಾಂತಿಯಿಂದಲಿ ಗಂಡಭಾಗವು ಹೊಳೆವುತ್ತ ಕನಕಕಂಕಣ ನಾದದಿಂದಲಿ ಕಯ್ಯ ತೋರಿ ಕರೆಯುತ್ತ 6 ಕುಂಕುಮಗಂಧದಿ ಮಿಂಚುವೈಯಾರಿ ಚುಂಗು ಜಾರಲು ಒಲವುತ್ತ ಕಿಂಕಿಣಿ ಸರಘಂಟೆ ಉಡಿಯೊಳು ಘಲ್ಲು ಘಲ್ಲೆಂದು ಬಂದಳು ಘಲ ಘಲ ಘಲ್ಲು ಘಲ್ಲೆಂದು ಬಂದಳು 7 ಕರೆದಾಳೆ ಸುಪಲ್ಲವ ಸುಪಾಣಿ ಕೀರವಾಣಿ ಪರಿಮಳಿಸುವ ಫಣಿವೇಣಿ 8 ಪರಿಪರಿ ಬೀದಿಯಲ್ಲಿ ನಿಂದು ಹಿಂದೂ ಮುಂದೂ ಸರಸವಾಡುತ್ತ ತಾನೆ ಬಂದು 9 ಕೊರವಂಜಿ ಯಾರೊಳಗೆ ನೋಡಿ ಕೂಡಿಯಾಡಿ ಸರಿಯಿಲ್ಲವೆಂದು ತನ್ನ ಪಾಡಿ 10 ಮನೆಮನೆಯಿಂದ ಬಂದಳು ಕೊರವಂಜಿ ತಾನು ಮನೆಮನೆಯಿಂದ ಬಂದಳು ರನ್ನವ ತೆತ್ತಿಸಿದ ಚಿನ್ನದ ದಿವ್ಯ ಬುಟ್ಟಿ ತನ್ನ ನೆತ್ತಿಯಲ್ಲಿಟ್ಟು ಬೆನ್ನಿಲಿ ಸಿಂಗಾನ ಕಟ್ಟಿ 11 ಗದ್ಯ : ಸುಗುಣಾಂಗಿಯರು ಪೇಳಲು ಮುದದಿಂದ ರುಕುಮಿಣಿದೇವಿ ತಾನೂ ಮುಗುಳು ನಗೆಯಂ ನಗುತ ಕೊರವಂಜಿಯನೆ ಅತಿಬೇಗ ಜಗವರಿಯೆ ಕರೆಯೆಂದಳು. ಶ್ರೀ ರುಗ್ಮಿಣಿ ತಾ ಬಂದಳು ಸ್ತ್ರೀಯರ ಕೂಡಿ ಚಾರುಹಾಸದಿಂದೊಪ್ಪುತ ಚೆಲ್ವ ದಿವ್ಯ ನೋಟಂಗಳಿಂದ ರಾಜಿಪ ಕಂಕಣದಿಂದ ರಮ್ಯ ನೂಪುರಗಳಿಂದ ರಾಜಚಿಹ್ನೆಗಳಿಂದ ರಾಜೀವನೇತ್ರೆ ಒಲವುತ್ತ12 ರಾಜಾಧಿರಾಜ[ರು]ಗಳಿಂದ ರಾಜಸಭೆಯಲ್ಲಿ ಪೂಜಿತಳಾದ ರಾಜಹಂಸಗ-ಮನೆಯು ಬರಲು ರಂಜಿತಳಾಗಿ ಒಲೆವುತ್ತ ಗದ್ಯ : ಆಗಲಾ ದೂತಿಕೆಯರು ಕೊರವಂಜಿಯನೆ ಅತಿ ಬೇಗ ಕರೆಯಲು ಬೇಕಾದ ವಜ್ರವೈಢೂರ್ಯ ರಾಗವಿಲಸಿತವಾದ ದ್ವಾರ ಭೂಭಾರದಿಂದೆಸೆವ ಭಾಗಧೇಯದಿಂ ರಾಜ ಸತ್ಕುಲವಾದ ದಿವ್ಯ ಮಂದಿರಕೆ ತ್ಯಾಗಿ ರುಕುಮಿದೇವಿ ನೋಡಲಾ ಶ್ರೀ- ರಾಗದಿಂ ಗಾನವಂ ಪಾಡುತ್ತ ಕೊರವಂಜಿಯು ಬಂದ ಚೆಂದ13 ಬಂದಾಳಂದದಲಿ ಬಾಗಿಲೊಳಗೆ ದಿಂಧಿಮಿಕೆನ್ನುತ 14 ಚೆಲುವ ತುರುಬಿನಿಂದಲಿ ಜಗುಳುವ ಚಲಿಸುವ ಪುಷ್ಪದಂದದಿ ನಲಿನಲಿ ನಲಿದಾಡುತ್ತ ಮಲ್ಲಿಗೆ ಝಲಝಲಝಲ ಝಲ್ಲೆಂದು ಉದುರುತ್ತ ಕಿಲಿಕಿಲಿ ಕಿಲಿ ಕಿಲಿ ಕಿಲಿಯೆಂದು ನಗುತ್ತ 15 ಗದ್ಯ :ಥಳಥಳನೆ ಹೊಳೆವುತ್ತ ನಿಗಿನಿಗೀ ಮಿಂಚುತ್ತ ರನ್ನದ ಬುಟ್ಟಿಯ ಕೊಂಕಳಲಿಟ್ಟು ಧಿಗಿಧಿಗಿಯೆಂದು ನೃತ್ಯವನ್ನಾಡುತ್ತ ಎತ್ತರದಲಿ ಪ್ರತಿಫಲಿಸುವ ಮುತ್ತಿನಹಾರ ಉರದೊಳಲ್ಲಾಡುತ ನಿಜಭಾಜ ಮಾರ್ತಾಂಡ ಮಂಡಲ ಮಂಡಿತಾ ಪ್ರಭು ಪ್ರತಿಮ ದಿಶದಿಶ ವಿಲಸಿತವಾದ ಭುಜಕೀರ್ತಿಯಿಂದೊಪ್ಪುವ ಆಕರ್ಣಾಂತ ಸುಂದರ ಇಂದೀವರದಳಾಯತ ನಯನ ನೋಟಗಳಿಂದ ಚಂಚಲಿಸುವÀ ಮಿಂಚಿನಂತೆ ಮಿಂಚುವ ಕಾಂತೀ ಸಂಚಯಾಂಚಿತ ಕಾಂಚನೋದ್ದಾಮ ಕಾಂಚೀ ಪೀತಾಂಬರಾವಲಂಬನಾಲಂಬಿತಾ ನಿತಂಬದಿಂದೊಪ್ಪುವ ಝೇಂಕರಿಸುವ ಭೃಂಗಾಂಗನಾಸ್ವಾದಿತ ಜಗುಳುವ ಜುಗುಳಿಸುವ ಪರಿಮಳಿಸುವ ಜಘನ ಪ್ರದೇಶಗಳಲ್ಲಿ ವಿವಿಧ ಪುಷ್ಪಗಳಿಂದ ಅಲಂಕೃತ ನಿತಾಂತಕಾಂತಿಕಾಂತಾ ಸುಧಾಕುಂತಳ ಸಂತತಭರದಿಂದೊಪ್ಪುವ ಪುಂಜೀಕೃತ ಮಂಜುಭಾಷಣ ಅಪರಂಜಿ ಬಳ್ಳಿಯಂತೆ ಮನೋರಂಜಿತಳಾದ ಕೊರವಂಜಿಯು ನಿಶ್ಶಂಕೆಯಿಂದ ಕಂಕಣಕ್ಷಣತೆಯಿಂದ ಕೊಂಕಳ ಬುಟ್ಟಿಯ ಪೊಂಕವಾಗಿ ತನ್ನಂಕದಲ್ಲಿಟ್ಟುಕೊಂಡು ಬೆನ್ನಸಿಂಗನ ಮುಂದಿಟ್ಟು ಚೆಂದವಾಗಿ ರುಕುಮಿಣಿ ದೇವಿಯ ಕೊಂಡಾಡಿದಳು. ಗದ್ಯ :ಅವ್ವವ್ವ ಏಯವ್ವ ಕೈಯ್ಯ ತಾರೆ ಕೈಯ್ಯ ತೋರೆ ನೀ ಉಂಡ ಊಟಗಳೆಲ್ಲ ಕಂಡ ಕನಸುಗಳೆಲ್ಲ ಭೂಮಂಡಲದೊಳಗೆ ಕಂಡ್ಹಾಗೆ ಪೇಳುವೆನವ್ವಾ. ಶಿಖಾಮಣಿ ಏನೇ ರುಕುಮಿಣಿ ನಿನ್ನ ಚೆಲುವಿಕೆಯನೇನೆಂತು ಬಣ್ಣಿಪೆ. ಮದನ ಶುಭ ಅಮಿತ ರಸಶೃಂಗಾರದಿಂದೊಪ್ಪುವ ನಿನ್ನ ಕೀರ್ತಿಯ ಕೇಳಿ ಬಂದೆನಮ್ಮಾ ಅಂಗ ವಂಗ ಕಳಿಂಗ ಕಾಶ್ಮೀರ ಕಾಂಭೋಜ ಸಿಂಧೂ ದೇಶವನೆಲ್ಲ ತಿರುಗಿ ಬಂದೆನಮ್ಮಾ 16 ಮಾಳವ ಸೌರಾಷ್ಟ್ರ ಮಗಧ ಬಾಹ್ಲೀಕಾದಿ ಚೋಳ ಮಂಡಲವನೆಲ್ಲ ಚರಿಸಿ ಬಂದೆನಮ್ಮಾ17 ಲಾಟ ಮರಾಟ ಕರ್ಣಾಟ ಸೌಮೀರಾದಿ ಅಶೇಷ ಭೂಮಿಯ ನಾನು ನೋಡಿ ಬಂದೆನಮ್ಮಾ 18 ಮಾಯಾ ಕಾಶೀ ಕಾಂಚಿ ಅವಂತಿಕಾಪುರೀ ದ್ವಾರಾವತೀ ಚೇದಿ|| ಮೆಚ್ಚಿ ಬಂದ ಕೊರವಿ ನಾನಮ್ಮ ಪುರಗಳಿಗೆ ಹೋಗಿ ನರಪತಿಗಳಿಗೆ ಸಾರಿ ಬರÀ ಹೇಳಿ ನಾ ಕಪ್ಪವ ತಂದೆ 19 ಸತ್ಯಮುಗಾ ಚೆಪ್ಪುತಾನಮ್ಮಾ ಸಂತೋಷಮುಗಾ ವಿನುವಮ್ಮ ಸತ್ಯ ಹರುಶ್ಚಂದ್ರನಿಕಿ ಚಾಲ ಚೆಪ್ಪಿತಿ 20 ಕನ್ನೆ ವಿನವೆ ನಾ ಮಾಟ ನಿನ್ನ ಕಾಲಂನೆ ನೇನಿಕ್ಕು(?) ಚಿನ್ನ ಸಿಂಗಾನೀ ತೋಡೂನೆ ಚೆಪ್ಪ್ಪೆಗಮ್ಮಾನೇ 21 ಗದ್ಯ :ಆಗ ರುಕುಮಿಣಿದೇವಿಯು ಚಿತ್ರವಿಚಿತ್ರ ಚಿತ್ತಾರ ಪ್ರತಿಮೋಲ್ಲಸಿತ ತಪ್ತ ರಜತರಂಜಿತಸ್ಫಟಿಕ ಮಣಿಗಣ ಪ್ರಚುರ ತಟಿಕ್ಕೋಟಿ ಜ್ವಾಲಾವಿಲಸಿತವಾದ ವಜ್ರಪೀಠದಲಿ ಕುಳಿತು ಚಿನ್ನದ ಮೊರಗಳಲ್ಲಿ ರನ್ನಗಳ ತಂದಿಟ್ಟುಕೊಂಡು ಕೊರವಂಜಿಯನೆ ಕುರಿತು ಒಂದು ಮಾತನಾಡಿದಳು. ವೊಲಿಸೀನ ಸೊಲ್ಮೂಲೆಲ್ಲ ವನಿತೆನೆ ನಿಂತೂ(?) 22 ಗದ್ಯ : ಆಗ ರುಕುಮಿಣಿದೇವಿಯಾಡಿದ ಮಾತ ಕೇಳಿ ಕೊರವಂಜಿಯುಯೇ-ನೆಂತೆಂದಳು. ನೆನೆಸಿಕೊ ನಿನ್ನಭೀಷ್ಟವ ಎಲೆ ದುಂಡೀ ನೆನೆಸಿಕೊ ವನಿತೆ ಶಿರೋಮಣಿಯೆ ಘನಮುದದಿಂದ ನೆನೆಸಿಕೊ 23 ರನ್ನೆ ಗುಣಸಂಪನ್ನೆ ಮೋಹನ್ನೆ ಚೆನ್ನಾಗಿ ಮುರುಹಿಯ ಮಾಡಿ ನೆನೆಸಿಕೊ 24 ಮಾಧವ ಸೇತುಮಾಧವ ವೀರರಾಘವ ಚಿದಂಬರೇಶ್ವರ ಅರುಣಾಚÀಲೇಶ್ವರ ಪಂಚನದೇಶ್ವರ ಶ್ರೀಮುಷ್ಣೇಶ್ವÀÀರ ಉಡುಪಿನ ಕೃಷ್ಣ ಮನ್ನಾರು ಕೃಷ್ಣ ಸೋದೆ ತ್ರಿವಿಕ್ರಮ ಬೇಲೂರು ಚೆನ್ನಪ್ರಸನ್ನ ವೆಂಕಟೇಶ್ವರ ಸೂರ್ಯನಾರಾಯಣ ಇವು ಮೊದಲಾದ ದೇವತೆಗಳೆಲ್ಲ ಎನ್ನ ವಾಕ್ಯದಲಿದ್ದು ಚೆನ್ನಾಗಿ ಸಹಕಾರಿಗಳಾಗಿ ಬಂದು ಪೇಳಿರಯ್ಯಾ ಮಂಗಳದ ಕೈಯ್ಯ ತೋರೇ ಎಲೆದುಂಡೀ ಕೈಯ ತೋರೆ ಕೈಯ ತೋರೆ 25 ಕೇಳೆ ರನ್ನಳೆ ಎನ್ನ ಮಾತ ಬೇಗ ಇಳೆಯರಸನಾದನು ಪ್ರಿಯ26 ಕಳಸಕುಚಯುಗಳೆ ಚಿಂತೆ ಬೇಡ ನಿನ್ನ ಕರೆದಿಂದು ಕೂಡ್ಯಾನು ರಂಗ 27 ನಾಡಿನೊಳಧಿಕನಾದ ನಾರಾಯಣನ ಪತಿ ನೀನು ಮಾಡಿ ಕೊಂಡೆನೆಂದು ಮನದಲ್ಲಿ ನೆನಸಿದೆ ಕಂಡ್ಯಾ ನಮ್ಮ ಕೃಷ್ಣ ಕುತೂಹಲದಿ 28 ಸುಂದರಶ್ಯಾಮ ಅಲ್ಲಿ ನÀಂದಾ ನಂದಾನಾಡುವಾನಂದಮುಗಾವಚ್ಚಿ ಕೂಡೇನಮ್ಮಾ 29 ಶಂಖಚಕ್ರಯುಗಲ ಪಂಕಜನಾಭುಂಡು ಪಂಕಜಮುಖೀ ನೀವು ಪ್ರಾಣಿಗ್ರಹಣಮು ಚೇಸಿ ಕೂಡೆನಮ್ಮಾ 30 ಚೆಲುವಾ ನಾ ಮಾಟಾ ನೀಕು ಪುಚ್ಚಾ ಚೆಲುವಾ ನಾ ಮಾಟ ಕಲ್ಲಗಾದು ನಾ ಕಣ್ಣೂಲಾನೂ ಪಿಲ್ಲ ವಿನುವಮ್ಮ ಪಲ್ಲವಪಾಣೀ ಚೆಲುವಾ ನಾ ಮಾಟ31 ದಮಯಂತೀಕೀನೇ ಚೆಪ್ಪಿತಿ ನಮ್ಮವೆ ಮಾಟ ಅಮರುಲಕೆಲ್ಲಾ ಅನುಮೈನವಾಡು ಚೆಪ್ಪೀ ಅಮಿತ ಬಹುಮಾನಾಮಂದೀತೀನಮ್ಮಾ ಚೆಲುವ ನಾ ಮಾಟ ಚೆಲುವ 32 ಬಂತೆ ಮನಸಿಗೆ ನಾ ಹೇಳಿದ್ದು ಚಿಂತೆ ಸಂತೋಷದಿ ನಾನಾಡಿದ ಶಾಂತ ಮಾತೆಲ್ಲ ಇದು ಪುಸಿಗಳಲ್ಲ ಬೇಗ ಬಂದಾನೋ ನಲ್ಲಾ ಆಹಾ ಆಹಾ ಬಂತೇ ಮನಸ್ಸಿಗೆ
--------------
ವಾದಿರಾಜ
ನಾರಾಯಣ ಹರಿ ವಿಠಲ | ಪೊರೆಯ ಬೇಕಿವಳಾ ಪ ಕಾರುಣಿಕ ಹರಿಯೇಅ.ಪ. ನಾದ ಮೂರುತಿ ನಿನ್ನ | ಪಾದಾನುವರ್ತಿ ಇಹಸಾಧು ತರುಳೆಯ ಕಾಯೊ | ವೇದ ವೇದ್ಯಾ |ಶೋಧಿಸಿದ ಸಂಸ್ಕಾರ | ಕಾದಿಹುದು ಸತ್ಪುಣ್ಯಬೋಧವಿದು ಸಂಪಿಗೆಯ | ಸ್ವಾದು ದರ್ಶಾ 1 ಭವ | ಸಾಗರವ ದಾಂಟಿಸುವೆಯೋಗಿ ಕುಲ ಸದ್ವಂದ್ಯ | ಅಗಜೆದರ್ಶನದೀ 2 ಭಾವಿ ಬೊಮ್ಮನ ಮತವ | ಭಾವದಲ್ಯಭಿವೃದ್ಧಿಗೈವ ಹವಣೆಯು ನಿಂದು | ದೇವದೇವೇಶಾಭಾವಿ ಕಾರ್ಯವು ಎನ್ನೆ | ಜೀವಗಂಕಿತಸೂಚಿಭಾವದಲಿ ತೋರಿರುವೆ | ಶ್ರೀ ವರನೆ ಹರಿಯೇ 3 ಕೈವಲ್ಯ | ದಿಂತ ತವದಾಸ್ಯವನುಈ ತರಳೆಗಿತ್ತು ಸುಖ | ದಿಂದ ನಾಗುವುದೋ 4 ಸಾರ್ವ ಭೌಮ ಸ್ವಾಮಿ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ದರ್ವಿಜೀವಿಯನೂಕಾವುದೆನೆ ಭಿನ್ನಪವ | ನೀ ವೊಲಿದು ಸಲಿಸುವುದುದೇವ ದೇವೇಶ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ನಾರಾಯಣನಮ್ಮ ಈತ ನಾರಿ ಒಳ್ಳೊಳ್ಳೆ[ಯ]ವರಿಗೆ ಮಾಡಿದ ಖ್ಯಾತ ಪ. ನಾನಾ ಬಗೆಯಿಂದ ಪೊಗಳುವೆನೀತ- ನ್ನಾನೆಂಬುವುದನ್ನು ಮುರಿದ ಪ್ರಖ್ಯಾತ ಅ.ಪ. ಕೈಕಾಲಿಲ್ಲದೆ ಆಟ ಆಡಿದ ಮೈಮ್ಯಾಲೆ ಹೊರೆಯ ಹೊತ್ತು ನೋಡಿದ ಕೋರೆಯ ಮಸೆದು ಹದ ಮಾಡಿದ ಕೋಯೆಂದು ಕೂಗಿ ಒದರುತೋಡಿದ ಇವ ಭಕ್ತರನ್ನ ಪಾತಾಳಕ್ಕೆ ದೂಡಿದ ಶಕ್ತಿ ಮಗನಾದ ಕ್ಷತ್ರಿಯರ ಕಾಡಿದ ಅಂಬು ತೆಗೆದು ಹೂಡಿದ ರಾಧಾನ್ಮನೆ ಪೊಕ್ಕು ಮೋಜು ಮಾಡಿದ ಇವ ದಿಗಂಬರನಾಗಿ ಅಶ್ವವೇರಿ ಓಡಿದ 1 ಕಲ್ಲು ಮಾಡಿಕೊಂಡು ಇರುವನು ನೆಳ್ಳ ಭೂಮಿ ನೆಗವಿ ಸುತ್ತಿ ಬಲ್ಲ ಬುದ್ಧಿವಂತ ಪ್ರಹ್ಲಾದಗೊಲಿದನಲ್ಲ ಇವ ಎರುಡುಪಾದ ಭೂಮಿ ದಾನ ಒಲ್ಲ ಇವನ ಕೊಡಲಿಬಾಯಿಗ್ಯಾರು ಇದಿರಿಲ್ಲ ಲಂಕೆಗೆ ಬೆಂಕಿಯನಲ್ಲ ಕೊಂಕಿ ಕೊಳಲನೂದುವನು ಗೊಲ್ಲ ಮೈಮೇಲೆ ಗೇಣು ಅರಿವ್ಯಿಲ್ಲ ಇವ ಮಾಮೇರೆಂಬೊ (?) ತೇಜಿ ಏರ್ಯಾನಲ್ಲ 2 ವೈರಿ ಕೊಂದ ಕಾಮಾತ್ಮರಿ[ಗಾ]ಗೋದೇನು ಛಂದ ದಾಡೆಯಿಂದ ದೂಡಿ ಭೂಮಿ ತಂದ ದಾಡೆಯಿಂದ ಕಂಬ ಒಡೆದು ಬಂದ ಇವ ಶುಕ್ರನ್ನ ಕಣ್ಣ ಮುರಿದೊಂದ ತಂದೆ ಮಾತಿಗೆ ತಾಯಿ ಮರಣಂದ ವನದ್ಹಿಂಡು ಕೂಡಿ ವನಕೆ ಕೇಡು ತಂದ ಒಮ್ಮೆ ಮೀಸಲ್ಬೆಣ್ಣೆ ಮೆದ್ದೇನಂದ ಇವ ಬತ್ತಲಾಗಿ ಹತ್ತು ಕುದುರಿದಂದ ತಂದೆ ಹೆಳವನಕಟ್ಟೆರಂಗ ಬಂದ 3
--------------
ಹೆಳವನಕಟ್ಟೆ ಗಿರಿಯಮ್ಮ