ಒಟ್ಟು 7670 ಕಡೆಗಳಲ್ಲಿ , 133 ದಾಸರು , 4351 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ಸುದಿವಸ ನೋಡಿ ಕಂಡೆವು ಕಣ್ಣಾರೆ ಚಂದವಾಗಿ ಗುರು ಪೂರ್ಣಮಾಡಿದ ಮನೋಹರ ಧ್ರುವ ಕೇಳದಾ ಕೇಳಿದೆವು ಫೇಳಿಸುವದೆನ್ನೊಳಗೆ ಹೇಳೇನೆಂದರೆ ಬಾರದು ಸುಳವು ಇನ್ನೊಬ್ಬರಿಗೆ ತಾಳಮೃದಂಗ ಭೇರಿ ಭೋರಿಡುತ ಒಳ ಹೊರಗೆ ತಿಳಿದೇನಂದರದೇ ನೋಡಿ ಉಲುವು ತಾ ತನ್ನೊಳಗೆ 1 ಕಾಣದ ಕಂಡೆವು ಖೂನ ತಾ ಕಣ್ಣಿನ ಕೊನೆಯೊಳಗೆ ಪ್ರಾಣ ಪಾವನ್ನವಾಯಿತು ಪುಣ್ಯ ಪ್ರಭೆಯೊಳಗೆ ಭಾನುಕೋಟಿತೇಜ ಧನ್ಯಗೈಸಿದ ಎನಗೆ ಸ್ವಾನುಭವದ ಸುಖ ಎದುರಿಟ್ಟಿತು ಜಗದೊಳಗೆ 2 ನುಡಿಯು ಕೇಳಿದಂಥ ನುಡಿಗೇಳಿದೆವಿಂದು ಕಡಿಗಾಯಿತು ನೋಡಿ ಹುಟ್ಟಿಬಾಯ ಜನ್ಮಸಂದು ವಿಡಿದು ಗುರುಪಾದ ಜನ್ಮಸಾರ್ಥಕಾಯಿತಿಂದು ಪಡೆದ ಮಹಿಪತಿ ನಿಜಾನಂದ ವಸ್ತುವಂದು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದು ಹೊನ್ನು ಹೂವುಗಳ ತಾರತಮ್ಯ ಪ ಇದು ಬಾಹ್ಯ ಅದು ಅಂತರಂಗಿಗೆ ರಮ್ಯ ಅ.ಪ ಹೊನ್ನಿನಿಂದಾಗುವುದು ಹೂವಿನಿಂದಾಗುವುದು ಹೊನ್ನು ಹೂವೆರಡಯ್ಯ ಬಣ್ಣ ಒಂದೇ ಹೊನ್ನು ಹೂವೆರಡಕ್ಕು ಬಣ್ಣ ಒಂದಾಗವೋ ನಿನ್ನ ಕೃಪೆಯೆಂಬ ರೇಕುಗಳಾಗಬೇಕೋ 1 ಹೊನ್ನು ಭೂಲೋಕಕ್ಕೆ ಹೂವು ಪರಲೋಕಕ್ಕೆ ಹೊನ್ನಿನಾ ಹೂವುಗಳು ಇಹಪರಕೆ ದಾನ ಹೊನ್ನುಳ್ಳವರಿಗೆಲ್ಲ ಹೂ ಹೊನ್ನುವಿಲ್ಲ ತಾನಿಲ್ಲ ಹೊನ್ನ ಹೊರುವುದಸಾಧ್ಯ 2 ಹೊನ್ನ ಕಾವುದಸಾಧ್ಯ | ಹೊನ್ನುಳ್ಳ ನರರಿಗೆ [ಮ] ಗಳಿಲ್ಲ ಹೊನ್ನುಳ್ಳ ಮನುಜ ಪಾತಕಗಳನು ಕಲಿಯುವ ಹೊನ್ನಿಲ್ಲದಾತರಿಗೆ ಹೂವೊಂದು ದೊರಕಿದೊಡೆ ಅನ್ನ ನಿದ್ರಾ ಪಾನ ಸೌಖ್ಯಂಗಳುಂಟಯ್ಯ 3 [ಹೊನ್ನುಳ್ಳವಸದಾ ಹೊನ್ನಿ ನೊಡನೆಕಲ್ಳ್ವೆ] ಹೊನ್ನಿಲ್ಲದಾತ ಶ್ರೀರಾಮಕೃಷ್ಣರ ಕಲೆವ ಹೊನ್ನಿಂದ ಬೆಣ್ಣೆತಾಂ ಸುಣ್ಣವೆನಿಪುದು ಜಗದಿ ಹೊನ್ನಿಲ್ಲದಾತಂಗೆ ಸುಣ್ಣವೇ ಬೆಣ್ಣೆ 4 ಹೊನ್ನಕೇಳನು ನಮ್ಮ ಮಾಂಗಿರಿಪುರವಾಸ ಹೊನ್ನಿಂಗೆ ಬದಲು ಭಕ್ತಿಯಹೂವ ಕೇಳ್ವುದು ಹೊನ್ನ ದಾನವಮಾಡಿ ಹೂವ ಹರಿಗರ್ಪಿಸಿರಿ ಇನ್ನಾವ ವರಗಳನ್ನು ಬೇಡ ಬೇಡಿ 5
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಇದೇ ಇದೇ ಸದ್ವಸ್ತು ನಮ್ಮ ಇದೇ ಇದೇ ಧ್ರುವ ನಿಗಮ ತಂದುಳುಹಿದ ಸುಗಮ ಸುವಸ್ತು ಇದೆ ಜಗವು ಬೆನ್ನಿಲೆ ಪೊತ್ತು ನೆಗದದಿದೆ 1 ಧೀರತನವನುದೋರಿ ಧಾರುಣಿಗೆದ್ದದು ಇದೆ ನರಮೃಗನಾದ ನಿಜವಸ್ತುವಿದೆ 2 ಮೇದಿನಿ ಅಳೆದು ಮೂರುಪಾದವ ಬೇಡಿದದಿದೆ ಸಾಧಿಸಿ ಸಾಸಾರ್ಜುನನ ಮರ್ದಿಸಿದಿದೆ 3 ರಾಕ್ಷಸರನೆಲ್ಲ ಕೊಂದು ಶಿಕ್ಷೆಯುಗೈಸಿದಿದೆ ಪಕ್ಷಪಾಂಡವರಿಗ್ಯಾಗಿ ರಕ್ಷಿಸಿದಿದೆ4 ಬತ್ತಲೆ ಸುಳಿದು ಸತಿಯರ ವೃತವಳಿದುದಿದೆ ಉತ್ತಮ ತೇಜಿನೇರುವ ರಾವುತನಿದೆ 5 ಸಗುಣ ನಿರ್ಗುಣನಾದ ಜಗಜ್ಜೀವನವಿದೆ ಅಗಣಿತಗುಣಗಮ್ಯ ಗೋಚರಿವಿದೆ 6 ವಿಶ್ವತೋಮುಖನಾದ ವಿಶ್ವತೋಬಾಹುವಿದೆ ವಿಶ್ವತೋಚಕ್ಷು ವಿಶ್ವರೂಪವಿದೆ 7 ಮುನಿಗಳ ಪ್ರಿಯವಸ್ತು ಪರಾತ್ಪರವಿದೆ ವಾಸವಾಗಿ ವಿಶ್ವದೊಳು ಭಾಸುವದಿದೆ 8 ಭಾಸ್ಕರ ಕೋಟಿ ಪ್ರಕಾಶ ವಸ್ತುವಿದೆ 9
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಕೇಳ್ ಭಾಗವತಧರ್ಮ ಸ್ವರೂಪಾನಂದದಾಮರ್ಮ ತಿಳಿಯದಾಮೂಢಮನುಜರಿಗೂ ತಿಳಿಸುವಾ ಸುಲಭದಾಧರ್ಮ ಸದಾ ತನ್ನಂತರಂಗದಲಿ ಮನನವಾಮಾಡಿ ಬೋಧೆಯನು ಸದÀಮಲಾತ್ಮಾನುಭವವ ಪಡೆವುದಿದುವೇ ಅಳೀ ನೀ ಭೇದಭಾವನೆಯಾನಿಕಾಯಾ ಅಳೀ ನೀ ತಿಳೀ ನೀ ನಿರ್ವಿಕಲ್ಪಾನಂದವಿಭುವೆ ನಾನೆ ಇದÉನೆಂದು ಸ್ವರೂಪಾ ಇದೋ ಮಿಥ್ಯಾ ಜಗವಿದೆಲ್ಲ ತಿಳೀ ನೀನೆ ಕನಸಿನಂತೆ ಬೋಧಾ ಸ್ವರೂಪಾ
--------------
ಶಂಕರಭಟ್ಟ ಅಗ್ನಿಹೋತ್ರಿ
ಇದೇ ನಿತ್ಯನಮಸ್ಕಾರ ನೋಡಿ ಗುರುಚರಣಕೆ ಮನಗೂಡಿ ಧ್ರುವ ಬಿಡದಿಹುದೇ ಸತ್ಸಂಗಾ ನೋಡಿ ಇದೇವೆ ಶಿರಸಾಷ್ಟಾಂಗಾ ಕಡದ್ಹೋಯಿತು ಭವದುಸ್ಸಂಗಾ ದೃಢಮಾಡಿ ಅಂತರಂಗಾ1 ನಮೃತಲಿಹುದೆ ನಮನಾ ನೇಮದಿಂದ ನಡೆದವರು ದಿನಾ ಬ್ರಹ್ಮಾನಂದದೋರುವ ಸಾಧನ 2 ಗುರ್ವಿನಂಘ್ರಿಗೆ ಎಡೆಮಾಡಿ ಅರ್ವಿನೊಳಾದ ಮಹಿಪತಿ ನೋಡಿ ಗರ್ವ ಪುಣ್ಯೆಂಬುದು ಈಡ್ಯಾಡಿ ಸರ್ವಪಾಪ ಹೋಯಿತು ನೋಡಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡಿರೋ ನಿಜನೋಡಿರೋ ಧ್ರುವ ನೋಡಿನೋಡಿ ನೋಡಿ ನೋಡುದರೊಳು ಕೂಡಿ ನೋಡುವದೇನೆಂದು ನೋಡಿ ನೋಡಿದ ಮ್ಯಾಲಿನ್ನು ಮೂಡಿಬಂದರ ಘನ ನೋಡುವದೇ ಖೂನ ಮಾಡಿ ಮಾಡಿದ ಮಾಟವು ಕೂಡಿಬಂದರೆ ಕೈಯ ನಾಡಗೂಡ ಹೇಳಬ್ಯಾಡಿ ಗೂಢ ಗುಹ್ಯದ ಮಾತು ಒಡೆದು ಹೇಳುವದಲ್ಲಾ ನೋಡಿ ನಿಮ್ಮೊಳು ಬೆರೆದಾಡಿ 1 ಓದಿದರೋದಬೇಕಿದೊಂದೇ ಅಕ್ಷರ ಭೇದಿಸುವಂತೆ ಬ್ರಹ್ಮಾಂಡ ಇದೇ ಸಾಧಿಸಿನ್ನು ಮೂಲವ ತಿಳಿಯದೆ ಓದುವದ್ಯಾಕೆ ಉದ್ದಂಡ ಹಾದಿ ತಿಳಿಯದಿದ್ದರೆ ಹೇಳಿಕೊಡುವನು ಸದ್ಗುರು ಘನಪ್ರಪಂಚ ಭೋದಿಸಿ ಬ್ರಹ್ಮಾನುಸಂಧಾನದ ಸುಖ ಉದಯ ಮಾಡುವ ಅಖಂಡ 2 ನಾನ್ಯ ಪಂಥವೆಂಬ ಮಂತ್ರದನುಭವ ಚನ್ನಾಗ್ಯಾಗಬೇಕು ಖೂನ ಇನ್ನೊಂದು ಬ್ಯಾರೆಂಬ ಭಿನ್ನವಳಿದ ಮ್ಯಾಲೆ ತನ್ನೊಳಾಯಿತು ಸಮ್ಯಕಙÁ್ಞನ ಧನ್ಯ ಧನ್ಯ ಧನ್ಯ ಧನ್ಯಗೈಸುವದಿದು ಕಣ್ಣಾರೆ ಕಾಂಬೊ ಸಾಧನ ಉನ್ಮತವಾಗದೆ ಸನ್ಮತದೋರದು ಇನ್ನೊಬ್ಬರ ಕೇಳುವದೇನ 3 ಸರ್ವಮಿದಂ ಖಲು ಬ್ರಹ್ಮವೆಂಬುವ ಮಾತು ದೋರ್ವಾಂಗೆ ನೆಲೆಗೊಳಬೇಕು ಸರ್ವ ಸಾಕ್ಷಿ ಸರ್ವಾಧಾರವು ತಿಳಿಯದೆ ಗರ್ವಿತಲ್ಯಾಡುವ ಮಾತು ಹೋತು ಗುರ್ವಿನಂಘ್ರಿಗಿನ್ನು ಗುರುತವ ಕೇಳದೆ ಮವ್ರ್ಹಿನೊಳೀಹುದು ಮುಸುಕು ನಿರ್ವಿಕಲ್ಪನ ನಿಜ ಸ್ಮರಿಸುವಾಂಗೆ ಕಣ್ಣ ದೆರ್ವದಿದೊಂದೇ ಸಾಕು 4 ತ್ರಾಹಿ ತ್ರಾಹಿ ತ್ರಾಹಿ ತ್ರಾಹಿ ಎಂದು ಗುರುವಿಗೆ ಕೇಳಿ ನಿಜ ವಂದ ದೇಹದ ಒಳಗಿಹ್ಯ ದ್ಯಾವರ ತಿಳಿದರ ಜನ್ಮಕೆ ಬಂದುದು ಚಂದ ಸೋಹ್ಯ ಸೊನ್ನೆಯ ಗುಹ್ಯವ ತಿಳಿದರ ಭವ ಮೂಲದಿಂದ ಬಾಹ್ಯಾಂತ್ರ ಪರಿಪೂರ್ಣ ಭಾಸುತಲ್ಯದೆ ಮಹಿಪತಿಗಿದೆ ಬ್ರಹ್ಮಾನಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ನೋಡಿರೋ ಸಂಧ್ಯಾನ ಸದಾ ಆತ್ಮಾನುಸಂಧಾನ ಧ್ರುವ ತಿಳಿಯದೆನಗೆ ತ್ರಿಕಾಲಾ ಹೊಳವುತಿಹ್ಯದು ಸೂರ್ಯಅಚಲಾ ಇಳೆಯೊಳಾಯಿತು ಧರ್ಮಾನುಕೂಲ 1 ಚಂಚಲೆಂಬುದೆ ಅಚಮನ ಮುಂಚೆ ಸಂಧ್ಯಾನಕಿದೆ ಸಾಧನ ವಂಚÀನಿಲ್ಲದಾಯಿತು ಅಘ್ರ್ಯದಾನಾ 2 ಪರಮೇಷ್ಠಿ ಪರಬ್ರಹ್ಮಋಷಿಃ ಅರಿತು ಪ್ರಣಮ್ಯ ಸಾಧಿಸಿ ತಿರುಗಿನೋಡಿಘನ ಸ್ಮರಿಸಿ ಕರಿಗಿ ಹೋಯಿತು ಪಾಪದ ರಾಶಿ 3 ಆ ಹಪವೆ ಗಾಯತ್ರಿಮಂತ್ರ ಬೀಜಾಕ್ಷರವಿದು ಪವಿತ್ರ ರಾಜಿಸುತಿಹ್ಯದು ಸರ್ವಾಂತರಾ ನಿಜಗುಹ್ಯ ಋಷಿಮುನಿಗೋತ್ರ 4 ಸದೋದಿತ ಗುರುಭೋಧಪೂರ್ಣ ಇದಕಿಲ್ಲ ಉದಯಾಸ್ತಮಾನ ಇದೇ ಮಹಿಪತಿ ಸಂಧ್ಯಾನ ಸದಾ ನಿತ್ಯಾನುಂಸಂಧಾನ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇ ಭಕುತಿ ಮತಿಗೆ ಮುಕುತಿ | ಇದಕ್ಕಧಿಕವಾಗಿಪ್ಪ ವಿಧಿಗಳೆಲ್ಲಿಯಿಲ್ಲಾ ಪ ರತುನ ಗರ್ಭದೊಳಗೆ ತಿಳಿ | ರತುನ ಸಮಕ್ಷೇತ್ರಗಳಿಗೆ | ರತುನವೆನ್ನಿ ಯತಿವಂಶ | ರÀತುನ ಮಧ್ವಮುನಿಮಾಡಿದಾ 1 ಪದ ಜೀವಸ್ತರಿಗದೆ ಪಾ | ಪ ಜನರು ಕೃಷ್ಣರಾಯನ ಪಾದವ ನೋಡಿ ನಿತ್ಯಾ | ಸಾಧನಿ ಮನ ಮಾಡಿರಯ್ಯಾ 2 ಏಳು ಒಂದು ಮಠದ ಲೋಕರಂಸೆ ಸದನವೆನ್ನಿ | ಪೇಳಲೇನು ಅವರೇ ಯಿಲ್ಲಿ ಊಳಿಗವ ಮಾಡುತ್ತಿಪ್ಪರು 3 ಮೇರೊ ಪರ್ವತ ತುಲ್ಯವಿದೆ | ವಾರಿಜನೆ ಮಧ್ವರಾಯ | ಈ ರಜತ ಪೀಠವೆ ಮಂದಿರ ಶತಕೋಟಿ ಎನ್ನೀ4 ಮೆರೆವ ಮಧ್ವತೀರ್ಥ ಬಾಹಿರ | ವರಣ ಉದಕವೆನ್ನಿ ಇಲ್ಲಿ | ಚರಿಸುವಂಥ ಸುಗುಣ ತೃಣಾ ದ್ಯರು ಮುಕುತಿ ಯೋಗ್ಯರಹುದು5 ಉಡಪಿ ಯಾತ್ರೆ ಮಾಡಿದವನು | ಪೊಡವಿ ತುಂಬ ಯಾತ್ರೆ | ಬಿಡದೆ ಚರಿಸಿದವನೆ ಎಂದು | ಮೃಡನು ಇಲ್ಲಿ ಸಾರುತಿಪ್ಪಾ 6 ಉಬ್ಬಿ ಸರ್ವ ಇಂದ್ರಿಯಂಗಳಾ | ಹಬ್ಬವಾಗಿ ಸುಖಿಪದಕೆ | ಊರ್ಬಿಯೊಳಗೆ ಉಡುಪಿ ಯಾತ್ರೆ | ಅಬ್ಬದಲೆ ದೊರಕದಯ್ಯಾ 7 ಹಿಂಗಿ ಪೋಗದಕೆ ಇದೇ | ಅಂಗವಲ್ಲದೆ ಬೇರೆ ಇಲ್ಲ | ರಂಗ ಸುಲಭಸಾಧ್ಯಾವಾಹಾ 8 ನೂರು ಕಲ್ಪಧರ್ಮ ಮಾರನಯ್ಯ ವಿಜಯವಿಠ್ಠಲನ | ಸಾರಿ ತಂದು ಕೊಡುವಾ9
--------------
ವಿಜಯದಾಸ
ಇದೇ ರಾಮನಿಧಿ ನೋಡು ಎದುರಿಗಿರುತಿರೆ ಹೃದಯವೆಂಬೊ ಸದನದಲ್ಲಿ ಕದವು ತೆಗೆದಿದೆ ಪ ಭೂರಿ ಭೋಜನ ಊರೊಳಲ್ಲಿ ಪ್ರಣವ ಶಬ್ದ ಭೋರೆಗುಟ್ಟುತ ಸೂರ್ಯ ಕಿರಣ ತೋರುವಾ ಪ್ರಭೆ ಸೂರೆ ಮಾಡಿಕೊಳ್ಳಿರೋ ಪಾರವಿಲ್ಲದಾ 1 ಅಷ್ಟದಳದ ಮಂಟಪದ ಪೆಟ್ಟಿಗೆಯಲೀ ಸೃಷ್ಟಿಗೊಡೆಯ ಹರಿಯ ನಾಮ ಅಂಕಿತವಾದ ಕಟ್ಟಳೆಯಿಲ್ಲದ ನಾಣ್ಯಗಳನು ಕಟ್ಟರೀಸಿದೆ ಹುಟ್ಟ ತಿರುಕರೆಲ್ಲ ಬಂದು ಕಟ್ಟಕೊಳ್ಳಿರೋ 2 ಅಂಕೆ ಮಾಡುವರಿಲ್ಲವಿದಕೆ ಶಂಕೆ ಬ್ಯಾಡಿರೋ ಅ- ಹಂಕೃತಿಯ ತೊರೆದು ಕಾಲ್ಗೆ ಗೆಜ್ಜೆ ಕಟ್ಟಿರೋ ಶಂಖ ತಾಳ ಮದ್ದಳೆಯು ಝೇಂಕೃತಿಯಿಂದಾ ವೆಂಕಟಾಚಲ ನಿಲಯಕಾಯೊ ವಿಜಯವಿಠ್ಠಲ 3
--------------
ವಿಜಯದಾಸ
ಇದೇ ಸುಪಥನೋಡಿ ಸ್ವಹಿತ ಸಾಧು ಜನರ ಸುಸನ್ಮತ ವೇದಾಂತದ ಸುಸಾರಬೋಧವ್ಹೇಳಿದ ವಸ್ತು ಭಗವದ್ಗೀತಾ ಸಂದಿಸೀಹ್ಯದÀು ಸದೋದಿತ ಭೇದಿಸಿ ನೋಡಲು ತನ್ನೊಳಗ ತಾಂ ದೋರುತಿದೆ ಸಿದ್ದಾಂತ 1 ಮಮೈವಾಂಶೋ ಜೀವಲೋಕೇ ಜೀವಭೂತ ಸನಾತನ ಃ ಸ್ವಾಮಿ ಹೇಳಿದ್ದ ತಿಳಿಯಲಿಕ್ಕೆ ಆತ್ಮಾನುಸಂಧಾನದ ಖೂನ ನೇಮದಿಂದಲಿ ಹೇಳಿದ ಮಾತಿಗೆ ಮುಟ್ಟಿದನೊಬ್ಬರ್ಜುನ ತುಂಬೇದ ವಿಶ್ವದಿ ಪರಿಪೂರ್ಣ 2 ಏಕಾಂಶೇನ ಸ್ಥಿತೋ ಜಗತ ವೆಂಬ ವಾಕ್ಯದನುಭವ ಸೇವಿಸಿದೊಬ್ಬ ಶುಕದೇವ ನಾಲ್ಕುಶೂನ್ಯವು ಮೆಟ್ಟಿನೋಡಲು ಭಾಸುತಿದೆ ಸುಮನದೈವ ತಾನಾಗೀ ಹ್ಯದು ಜೀವ 3 ಜಾನಾತಿ ಪುರುಷೋತ್ತಮಂ ಮನುಷ್ಯರೊಳಗಧಮಾಧಮಾ ಕ್ರಮತಿಳಿದವನೆ ಪರಮಯೋಗಿ ಆತನೇ ಉತ್ತಮೋತ್ತಮಾ ತಾಂ ಕೇಳಿ ನಿಜಾಧ್ಯಾತ್ಮಾ 4 ` ಹರಿ ಃ ಓಂ ತತ್ಸದಿತಿ ' ವೆಂಬ ನಿಜ ತಿಳಯಬೇಕಿದೆ ಮುಖ್ಯ ಏಳುನೂರು ಶ್ಲೋಕದವಾಕ್ಯ ತ್ವರ ತಾಂ ತಿಳಿಯದು ಒಂದೇ ಮಾತಿನ ಬ್ರಹ್ಮಾದಿಕರಿಗಾಟಕ್ಯ ತರಳಮಹಿಪತಿಗಿದೆ ಸೌಖ್ಯ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇನಿದೇನು ನಿನ್ನ ಪದವ ನಂಬಿದವ ಗೆಡರು ಬಾಧಿಸು ವದೇನು ಪ ಅವನ ಬದಿಯಲಿ ಗರುಡ ಮಣಿಯಿರೆ| ಹಾವಿನ ಗರಳವ ಏರುವದೇ| ಅಮೃತ ಕಲಶ ಮನೆಯೊಳಿರೆ| ಸಾವಿನ ಭಯದಿಂಬಳಲುವರೇ ರಂಗಯ್ಯಾ 1 ಹನುಮನ ಪರಿಚಾರಕರಿಗೆ ಬೆಂಬತ್ತಿ ಬಿನಗು ಭೊತಂಗಳು ತಟ್ಟುವವೇ ಅನಳನ ಹೊರಿಯಲಿ ಕುಳಿತಿರೆ ಹಿಮದಿಂದ ತನುಗುಗ್ಗರಿಸಿ ಬಿದ್ದು ಎರಗುವ ದೇನಯ್ಯಾ 2 ದುರಿತ ಬಂದು| ಕುಂದ ನಿನಗಲ್ಲವೇ ಎನ್ನವ ಗುಣಗಳ ನೋಡದೆ ರಕ್ಷಿಸು ಸನ್ನುತ ಮಹಿಪತಿ ನಂದನ ಜೀವನ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇದೇವೆ ಗುರು ಘನ ಮಹಿಮೆ ಧ್ರುವ ಅಧ್ಯಾತ್ಮದಾನಂದದ ನೆಲೆನಿಭ ಮಹಾತ್ಮರು ಬಲ್ಲರು ಖೂನ ಹೊಳೆಯುತಿಹ್ಯದು ಅನುದಿನ ಚಿಂತಾಯಕ ಗುರು ಘನ ಪ್ರತಾಪವು ತುಂಬಿಹ್ಯದು ಪರಿಪೂರ್ಣ ಶುದ್ಧಾಂತ್ಮದ ಸೂತ್ರಾಂತ್ರದ ಗತಿಗಳ ಮೂಢಾತ್ಮರು ಬಲ್ಲವೇನ 1 ಮಹಿಮರು ಮನಿಮನಿಗಿಲ್ಲ ಮಹಿಮಾನಂದದನು ಸಂಧಾನ ಪರಮವಿರಕ್ತನೇ ಬಲ್ಲ ಜೀವನ್ಮುಕ್ತಾಗುವ ಗತಿ ಮಾರ್ಗವು ಎಂದಿಗೆ ದೊರೆವದಿದೆಲ್ಲ ಪೂರ್ವಕಲ್ಪನೆಯಲ್ಲ ಮಿಕ್ಕಿನಾ ನರಗುರಿಗಳಿಗಿದು ಇಲ್ಲ 2 ಹುರಳಿಲ್ಲದ ಕರ್ಮಾಚರಣೆಯೊಳು ಮರುಳಾದರು ಜನವೆಲ್ಲ ಸರ್ವರಿಗಾವುದಲ್ಲ ಪೂರ್ವಾ ಪಾರ ಮಹಾಗುರು ಯೋಗಮಾರ್ಗವು ಸ್ತುತಿಸಲೆನಗಳವಲ್ಲ ಸರ್ವಮಯವೆಲ್ಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದೇವೆ ನಿಜನೋಡಿ ನಮ್ಮ ನೇಮನಿತ್ಯ ಸಾಧು ಜನರಿಗೆ ನಡೆವದು ಸತ್ಯ ಧ್ರುವ ಅನುಸಂಧಾನ ತ್ರಿಕಾಲ ಸಂಧ್ಯಾನ ನಿತ್ಯ ನಿತ್ಯದಿತ್ಯರ್ಥದ ನಿಜಸುಷ್ಠಾನ 1 ದೇವದೇವೇಶನಾರಾಧನೆಯು ಭುವನತ್ರಯದಲಿದೆ ಸರ್ವಸಾಧನೆಯು 2 ಕರ್ಮಹರಿಸಿದ ನಿಮಿಷದೊಳಗೆ ಬ್ರಹ್ಮಾನಂದವಾಯಿತು ಮಹಿಪತಿಗೆ3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದ್ದರಿರಬೇಕು ಸಂಸಾರಸುಖದಲ್ಹೀಗೆ ಪದ್ಮಪತ್ರವು ಜಲದೊಳಗಿದ್ಹಾಂಗೆ ಧ್ರುವ ನಡಿನಡಿಯಬೇಕ್ಹೀಂಗೆ ತಡಿಯೊಳರಿಬಿಡದ್ಹಾಂಗೆ ನುಡಿನುಡಿಯಬೇಕು ಹರಿನುಡಿಸಿದ್ಹಾಂಗೆ ಪಡೆದರಿದೇ ಪಡಿಯಬೇಕು ಹರಿ ಒಡಲ ಹುಗುವ್ಹಾಂಗೆ ಅಡಿಗಡಿಗೆ ಹರಿಕೂಡಿ ಬಿಡದಗ್ಹಲದ್ಹಾಂಗೆ 1 ಇಡಗಿ ಇಡಬೇಕ್ಹಿಂಗೆ ಇಡಗರಿಗುಡಿಸಿದ್ಹಾಂಗೆ ತುಡಗಿ ತುಡಬೇಕ್ಹೀಂಗೆ ತುಡಮಾಡಿಸದ್ಹಾಂಗೆ ಉಡಗಿ ಉಡಬೇಕ್ಹೀಂಗೆ ಉಡಿಗರಿಗುಡಿಸಿದ್ಹಾಂಗೆ ಮುಡಗಿ ಮುಡಿಬೇಕ್ಹಾಂಗ್ಹರಿಗೆ ಮುಡಿಸಿದ್ಹಾಂಗೆ 2 ಉಂಡರುಣಬೇಕ್ಹೀಂಗೆ ಉಂಡದರಿಗುಣಸಿದ್ಹಾಂಗೆ ಕೊಂಡುದಕೋ ಹರಿಗೆ ಕೊಡಿಸಿದ್ಹಾಂಗೆ ಮಂಡಣಿಯ ಮಾಡ್ಹೀಂಗೆ ಹರಿಗೆ ಮಂಡಿಸಿದ್ಹಾಂಗೆ ಕೊಂಡು ಕೊಂಬುದು ಹರಿಕಂಡು ಒಲುವ್ಹಾಂಗೆ 3 ಮಲಗಿ ಏಳುವದ್ಹೀಂಗೆ ಮಲಗರಿಗೇಳಿಸಿದ್ಹಾಂಗೆ ತಿಳವು ತಿಳವದು ಹರಿ ತಿಳಿಸಿದ್ಹಾಂಗೆ ಸುಳವು ಸುಳವರು ಹರಿಸುಳಸ್ಯಾಡಿದ್ಹಾಂಗೆ ಒಲವು ಮಾಡುವದ್ಹೀಂಗೆ ಹರಿಯ ಒಲಿವಾದ್ಹಾಂಗೆ 4 ರತಿಪಿಡಿದು ಹೀಂಗೆ ಹರಿಗತಿಯಾಗುವ್ಹಾಂಗೆ ಅತಿಹರುಷ ಬಡು ಹರಿನೋಡುವ್ಹಾಂಗೆ ಸಥಿಯ ಪಡೆದವುದು ಹೀಂಗರಿಯು ಸಥಿನಡಿಸಿದ್ಹಾಂಗೆಸ್ತುತಿಮಾಡುವ ಮಹಿಪತಿ ಪ್ರತಿಗಾಣದ್ಹಾಂಗೆ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇದ್ದರೆ ಹೀಗೆ ಇರಬೇಕು ಇಲ್ಲದಿದ್ದರೆ ಕಾಯವ ಬಿಡಬೇಕು ಶುದ್ಧ ಚಿತ್ತವಾಗಿ ಹೃದಯದೊಳಿದ್ದ ವಸ್ತುವನ್ನು ನಿನ್ನ ಬುದ್ಧಿಯಿಂದ ನೀನೆ ತಿಳಿಯುತ್ತಿದ್ದು ಜೀವನ್ಮುಕ್ತನಾಗಿ ಪ ಕಲ್ಲು ಮರಳು ಕಾಷ್ಠತರುಗಳಲ್ಲಿ ಗಿರಿಗಳಲ್ಲಿ ಚರಿಸುವ ಹುಲ್ಲೆ ಕರಡಿ ವ್ಯಾಘ್ರ ಸಿಂಹದಲ್ಲಿ ಪಕ್ಷಿ ನಾನಾಮೃಗ ಗಳಲ್ಲಿ ವಸ್ತುವೊಬ್ಬನಲ್ಲದಿಲ್ಲವೆಂದು ಭಾವಿಸುತ್ತ 1 ದ್ರಷ್ಟವಾಗಿ ತೋರ್ಪುದೆಲ್ಲ ನಷ್ಟವಾಗಿ ಪೋಪುದೆಂದು ದಿಟ್ಟನಾಗಿ ತಿಳಿದುಜ್ಞಾನ ದೃಷ್ಟಿಯಿಂದಲೆ ದುಷ್ಟಜನರ ಸಂಗವನ್ನು ಬಿಟ್ಟು ಅರಿಗಳರುವರನ್ನು ಕುಟ್ಟಿ ಕೆಡಹಿ ಆಶಪಾಶವೆಂಬ ಹಗ್ಗವನ್ನು ಹರಿದು 2 ಗೇರು ಹಣ್ಣಿನ ಬೀಜ ಹೊರಸಾರಿ ಇರ್ದವೊಲು ಸಂ ಸಾರವೆಂಬ ವಾರಿಧಿಯೊಳು ಕಾಲಗಳೆಯುತ ನೀರ ಮೇಲಕಿದ್ದ ನಳಿನದಂತೆ ಹೊರಗೆ ಬಿದ್ದು ಬಕನ ಚಾರು ಚರಣ ಸ್ಮರಣೆಯಿಂದ 3
--------------
ಕವಿ ಪರಮದೇವದಾಸರು