ಒಟ್ಟು 3495 ಕಡೆಗಳಲ್ಲಿ , 122 ದಾಸರು , 2470 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರುಣಿಸೈ ಗುರುರಾಯ ಚರಣತೀರ್ಥವನು ಹರಣ ಭಯದೊಳು ಲಕುಮೀರಮಣನೊಲಿವಂದದಲಿ ಪ ದೇಶ ದೇಶವ ತಿರುಗಿ ಬೇಸರದು ಈ ಚರಣ ಭೂಸುರವ ಪೂಜಿಸುವದು ಈ ದಿವ್ಯ ಚರಣ ಕ್ಲೇಶವೆನಿಸದೆ ತೀರ್ಥದಾಸೆಯ ಬಿಡದ ಈ ಚರಣ ಕಾಶಿ ರಾಮೇಶ್ವರಕೆ ನಡೆದ ಚರಣ1 ಹಾವಿಗೆಯನೊಲ್ಲದೆ ಹಾದಿ ನಡೆದಿಹ ಚರಣ ದೇವಿ ಭಾಗೀರಥಿಗೆ ಇಳಿದ ಚರಣ ಕಾವಿ ವಸ್ತ್ರವನುಟ್ಟ ಕಾಶಿವಾಸಿಯ ಚರಣ ಕೋವಿದರು ವಂದಿಸುವ ದಿವ್ಯ ಚರಣ2 ಗಟ್ಟಿ ಬೆಟ್ಟವ ತಿರುಗಿ ಕಷ್ಟಬಟ್ಟಿಹ ಚರಣ ಸೃಷ್ಟಿಗುತ್ತಮ ನದಿಯ ಮಿಂದ ಚರಣ ಇಷ್ಟಗಳನೆಲ್ಲ ತಾ ಪಡೆದುಕೊಂಡಿಹ ಚರಣ ಕೃಷ್ಣಮೂರ್ತಿಯ ಬಳಿಗೆ ಬಂದ ಚರಣ 3 ಶುದ್ಧ ವೈಷ್ಣವರೆಲ್ಲ ಉಜ್ಜಿ ತೊಳೆವ ಚರಣ ಬದ್ಧ ಮುಕ್ತರಿಗೆಲ್ಲ ಸಿದ್ಧಿಯಹ ಚರಣ ಮಧ್ವರಾಯನ ಮತದಿ ಎದ್ದು ತಿರುಗುವ ಚರಣ ವಿದ್ಯೆನಿಧಿ ಗುರುರಾಯ ಬಾಳ್ದ ಚರಣ 4 ಧರಣಿಯನು ಬಲವಂದು ದಣಿದು ಬಂದಿಹ ಚರಣ ಕೈವಲ್ಯ ಪಡೆದ ಚರಣ ವರಾಹತಿಮ್ಮಪ್ಪನಿಹ ಗಿರಿಯನೇರಿದ ಚರಣ ಸ್ಥಿರವಾಗಿ ಉಡುಪಿಯೊಳು ನಿಂದ ಚರಣ 5
--------------
ವರಹತಿಮ್ಮಪ್ಪ
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕರೆದೂ ಕೈ ಪಿಡಿಯೊ ಎನ್ನಾ ಗುರುವರ ಮುನ್ನಾಕರೆದೂ ಕೈ ಪಿಡಿಯೊ ಎನ್ನಾ ಪ ಪರಿ ಪರಿಯಿಂದಲಿ ಅ.ಪ. ಪಸುಳೆ ತಪ್ಪನು ಮಾಡೆ | ಶಿಶುವ ಕರೆಯಳ ಜನನಿಕಸವಿಸಿ ಕಳೆದೆನಗೆ | ಕುಶಲವ ನೀಯೋ ||ಕಸರು ಕರ್ಮವ ಕಳೆದು | ಬಿಸಜನಾಭನ ಹೃನ್‍ಮುಸುಕಿಲಿ ತೋರಿಸಿ | ಪಸರಿಸು ಜ್ಞಾನವ 1 ಮಾನವ ನಾನು | ನಿನ್ನ ಮಹಿಮೆಯನ್ನಯೇನ ಬಣ್ಣಿಪೆನಯ್ಯ | ಘನದಯಾ ಪೂರ್ಣ 2 ಚಾರು ವಾರಿಧಿ ಗುರುವೇ |ಆರೂ ಕಾಯುವರಿಲ್ಲ | ಸಾರಿದೆ ತವ ಚರಣಭೋರಿಟ್ಟು ಮೊರೆಯಿಡುವೆ | ಧೀರ ಕಾಯಲಿ ಬೇಕೊ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕರ್ಪೂದಾರುತಿ ತಾರೆ ಕೊಪ್ಪರದಪ್ಪನಿಗೆ ಸರ್ಪಸುತಲ್ವಗೆ ಮುಪ್ಪಾದ ದೇವನಿಗೆ ಅಪ್ರತಿಮರಿಹಿಮೆಗೆ ಪ ನೀರೆ ನಲುವಿಂದಲಿ ನೀಮುದದಿಂದಲಿ | ಸಖಿ ನಿಜಮನದಲಿ ಅ.ಪ ಫಾಲಾಕ್ಷ ವಂದಿತಪಾದ ಪಾಲಾಬ್ಧಿವಾಸಗೆ | ಪಾಂಚಾಲಿವರದರಂಗಗೆ | ಶಿಶುಪಾಲ ಖರಮುರ ಹಾರಿಗೆ | ಕಾಳಿಂಗನ ಫಣೆಯಲ್ಲಿ ತಥೈವಿಎಂದು ಕುಣಿದವಗೆ | ಬಾಲೆಯರಾಲಯ ಪೊಕ್ಕು ಪಾಲು ಬೆಣ್ಣೆ ಕದ್ದವಗೆ | ಗೋಪಾಲಕೃಷ್ಣನಿಗೆ ನೀರೆ ನಲುವಿಂದಲಿ | ನೀ ಮುದದಿಂದಲಿ | ಸಖಿ ನಿಜಮನದಲಿ 1 ದೇವಾಧಿದೇವನಾದ ಭಾವಜನಯ್ಯನಿಗೆ | ವÀಸುದೇವದೇವಕಿ ಕಂದಗೆ ಭೂದೇವೌಕ್ಷವಂದ್ಯಗೆ | ಪಾವನ್ನ ಮೂರುತಿಯಾದ ಶ್ರೀದೇವಿ ಅರಸಗೆ | ಗೋವಳರಿಂಧ ಕೂಡಿ ಗೋಹಿಂಡು ಕಾಯ್ದವಗೆ | ದೇವಾರಿ ವೈರಿಗೆ ಶ್ರೀವಾಸುದೇವಗೆ 2 ಮಂಗಳಾಂಗ ಗಂಗಾಜನಕ | ತುಂಗವಿಕ್ರಮದೇವಗೆ | ಜಯ ಸಂಗೀತ ಪ್ರಿಯಲೋಲಗೆ | ಪತಂಗಜವೈರಿ ದೇವಗೆ ಶೃಂಗಾರದಿ ಶಾಮಸುಂದರ ಗಾಂಗೆಯಂಬರಧಾರಿಗೆ 3
--------------
ಶಾಮಸುಂದರ ವಿಠಲ
ಕರ್ಮ ಮಾಳ್ಪ | ಜಾಣ ಬಾರೋ ಪ ಪಂಚ ರೂಪದಿ ಪ್ರಾ | ಪಂಚ ವ್ಯಾಪ್ತ ಬಾರೋ |ಹಂಚಿಕೇಲಿ ದೈತೇಯರ | ವಂಚಕನೆ ಬಾರೋ1 ಕರ್ಮ | ಗೈವಾಪಾನ ಬಾರೊ |ವಾಯುವ ನೀ ನಿರೋಧಿಸೆ | ಕಾಯ್ವರ್ಯಾರೋ 2 ಭಾರ ಹೊರೆವ || ವ್ಯಾನ ಬಾರೋ |ಪ್ರಾಣ ಪಂಚವ್ಯೂಹ ಮುಖ್ಯ | ವ್ಯಾನ ಬಾರೊ 3 ಉದಕ ಅನ್ನಕ್ಕವಕಾ | ಶುದಾನ ಬಾರೊ |ಮುದದಿ ಶ್ವಾಸಮಂತ್ರ ಜಪ | ಜಾಣ ಬಾರೋ 4 ವೈದಿಕ ಲೌಕಿಕ ಶಬ್ದ | ನುಡಿಸೆ ಬಾರೊ |ಊಧ್ರ್ವಗತಿ ದಾತನೆ | ಉದಾನ ಬಾರೋ 5 ಪಾನ ಅನ್ನಗಳ್ಹಂಚೆ ಸ | ಮಾನ ಬಾರೊ |ಧ್ಯಾನ ವಿಂತು ಈವ ಮುಖ್ಯ | ಪ್ರಾಣ ಬಾರೊ 6 ಕರುಣಸಾಗರ ದೇಹ ವೀಣೆ | ಚರಿಸೆ ಬಾರೊ |ಗುರು ಗೋವಿಂದ ವಿಠಲಾಧಿಷ್ಠಿತ | ಗುರುವೆ ಬಾರೋ 7
--------------
ಗುರುಗೋವಿಂದವಿಠಲರು
ಕಲಿಯುಗದೊಳು ಕಂಡೆನು ನಿನ್ನೊಬ್ಬನ | ಕಲಿವಾಳದನಿಂಗಪ್ಪ || ಕಲಿತ ಬುದ್ಧಿಯು ಕಡೆಯಲಿ ನಿನ್ನ |ಕೆಲಸಕೆ ಏನೂ ಬಾರದಪ್ಪ ಪ ಎತ್ತು ಎಮ್ಮಿ ಆಕಳ ಹೋರಿ | ಜತನ ಮಾಡೀದೆಪ್ಪ || ಮೃತ್ಯು ದೇವತೆಗೆ ತುತ್ತು ಇದರೊಳು | ಮುಕ್ತಿ ನಿನಗಿಲ್ಲಪ್ಪಾ 1 ಹೊಲಮನಿಯೆಂದು ನಲಿನಲಿದಾಡುತ | ಒಲಒಲ ಗುಟ್ಟುವಿಯಪ್ಪಾ || ಹೊಲಮನಿ ಸಾಧಿಸಿ ಸಂಗಡ |ಒಯ್ದಿಲ್ಲಾ ನಿಮ್ಮಪ್ಪಾ 2 ಶುದ್ಧವಾಗಿ ನೀ ಕೋಶವ ಕಲಿತು | ಬದ್ಧವ ತಿಳಕೋಳಪ್ಪಾ || ಬುದ್ಧಿವಂತನು ನೀ ಸ್ವರ್ಗದ ಸುದ್ದಿಯು | ಸ್ವಲ್ಪವು ನಿನಗಿಲ್ಲಪ್ಪಾ 3 ರೋಗವ ನೀಗಿಸಿ ಜನರಿಗೆ ಭೋಜನ | ಭೋಗವನ್ನು ನೀ ಪಡೆದೆಪ್ಪಾ || ಹೋಗದು ಕರ್ಮವು ಇದರಲಿ ಮುಂದಿನ | ಆಗಮ ಮಹಿಮೆಯ ತಿಳಕೋಳಪ್ಪಾ 4 ಅಪರೂಪದ ನರದೇಹಕೆ ಬಂದು | ವಿಪರೀತ ವಿದ್ಯಾಕಪ್ಪ || ಗುಪಿತದಿ ಭವತಾರಕನ ಭಕ್ತರ |ಕೃಪೆಯನು ನೀ ಸಂಪಾದಿಸಪ್ಪಾ 5
--------------
ಭಾವತರಕರು
ಕವಿ ಕವಿದು ಪೊಳೆವ ಭುವನಪಾವನ ಚರಿತ ಇಂದೀವರಾಕ್ಷ ಪ ತವಪೂರ್ಣ ನಿಜ ಒಲಿಮೆ ಪ್ರಭುಪೂರ್ಣ ಕವನದಲಿ ಮೋದ ಕರಿವರದ ಭವಭಂಗ ಪರಿಹಾರ ಕವನ ವೋದಿದ ಮಾತ್ರ ಧವಳ ಕೀರುತಿ ಬೆಳುದಿಂಗಳನು ಮೀರಿಹುದೊ 1 ತವಪೂರ್ಣ ಗುಣ ಕ್ರಿಯೆ ರೂಪ ಘನ ಭಾವಗಳು ಲವಲವಿಕೆ ಎಮ್ಮ ಚೇತನಕೆ ಕೊಟ್ಟು ಭವಭೀತಿಗೆ ಭೀತಿ ತಂದೊಡ್ಡುವುದೊ ಕಮಲೇಶ ಸವಿದುಣ್ಣುವಾ ಜನಕೆ ಜಡದಲ್ಲೂ ನೀ ಬರುವೆ 2 ಶ್ರವಣ ಮಾತ್ರಕೆ ಮೈಮರೆಸುವುದು ಮಹಸಿರಿಯು ಶುಕ ಪಿತ ಸವಿದ ರುಚಿಯು ಇಹುದು ಪವಮಾನ ಕೃಷ್ಣಾರ್ಯ ರಾಮಾರ್ಯರತಿ ವಲುಮೆ | ಶ್ರವಿಸುವುದು ಪಠಿಪರನು ಭಕ್ತಿಮತ್ತರ ಮಾಡಿ 3 ಕವಲುಮತಿಯಲಿ ಮುಳುಗಿ ಚಲಿಸದಿರು ಇದರಿಂದ ಭವಮೂಲಕುನ್ಮೂಲ ಇದರ ಮಹಿವi ಅವಲಿಯನು ತಿಂದವನು ಅಗಲಿರದೆ ಒಡನಿಹನು ಜವನ ದೂತರು ತಲೆಮಣಿದು ಓಡುವರೊ 4 ತತ್ವಾಭಿಮಾನಿಗಳಿಗಾಹಾರವಿದು ಸತ್ಯ ತತ್ವಾರ್ಥ ಬಲು ಸುಲಭದಲ್ಲೆ ಮನಕವಗಾಹ್ಯ ಸತ್ಕøತಿಯ ಮಾಡಿ ಚಿತ್ಸುಖವ ಉಣು ನಿತ್ಯ ವಾತಾತ್ಮ ಗುರು ಶ್ರೀ ಜಯೇಶವಿಠಲನ ನೋಡು 5
--------------
ಜಯೇಶವಿಠಲ
ಕವಿಗಳು ಪೊಗಳುವ ವಿವರವ ಪೇಳುವೆ ಪ ಅವನಿಯೊಳ್ ಕೃಷ್ಣನು ಅವತರಿಸುವ ಕಥೆ ಅ.ಪ ಸುರರೊಡೆಯನ ದಿವ್ಯ ತರುವನು ಬಲದಲಿ ಸರಸಿಜನಾಭನು ಧರೆಗೆ ತರುವನೆಂದು ಅರಿಯುತ ವರ ಸುಮನಸರೆಲ್ಲ ಕರಗಳಿಂದಲಿ ಸುಮ ಸುರಿದರೆಂದೆನುತಲಿ 1 ಅಂಬುಜನಾಭನು ಶಿಶುವಾಗಿರಲವನ ಸಂಭ್ರಮದಲಿ ತನ್ನ ವಶಗೊಳುವುದಕೆ ತುಂಬುರು ಗಂಧರ್ವರು ಪಾಡಿದರು ರಂಭೆ ಊರ್ವಶಿಯರು ನೃತ್ಯ ಮಾಡಿದರೆಂದು2 ವಾಸುದೇವನು ತನ್ನ ಶಿಶುವೆಂದರಿಯುತ ವಸುದೇವನ ಬಲು ಆಸೆಗೆ ನಗುತಲಿ ವಸುಗಳು ದೇವರು ವಾಸುದೇವನು ತಮ್ಮ ಕೂಸು ಏಕಲ್ಲವೆಂದು ಹರುಷ ಪೊಂದಿದರೆಂದು 3 ಇಂದುವದನನ ಅಂದವ ನೋಡುತ ಚಂದ್ರಕಲೆಯರ್ಧ ಕುಂದಿದನೆನ್ನುತ ಸುಂದರಕೃಷ್ಣನು ಅಂದು ತನ್ನಯ ಕುಲ ದಿಂದ ಬಂದಿರೆ ಬಲು ನಂದ ಪೊಂದಿದನೆಂದು 4 ಪನ್ನಗಶಯನನು ಸಣ್ಣ ಕೂಸಾಗಿರೆ ತನ್ನ ವಿಭುತನಕೆ ಇನ್ನು ಕುಂದಿಲ್ಲವೆಂದು ಉನ್ನತ ಗಗನ ಪ್ರಸನ್ನನಾಗಿ ದಿವ್ಯ ಸಣ್ಣ ತಾರೆಗಳಿಂದ ಬೆಡಗು ತೋರಿದ ಕಥೆ 5
--------------
ವಿದ್ಯಾಪ್ರಸನ್ನತೀರ್ಥರು
ಕಷ್ಟ ಕಷ್ಟವೋ ಕೃಷ್ಣ ದೃಷ್ಟಿಯಲಿ ನೋಡದಿರೆ ತುಷ್ಟಿಪಡಿಸಲು ನಿನ್ನ ನಾನೆಷ್ಟರವನಯ್ಯ ಪ ಭ್ರಷ್ಟನಾಗಿಹೆ ನಾ ಅಷ್ಟಾಂಗಯೋಗವ ತಿಳಿಯೆ ಒಂ- ದಿಷ್ಟು ಭಕುತಿಯ ಕೊಟ್ಟು ಕಡೆಹಾಯಿಸಯ್ಯ ಅ.ಪ ಸತ್ಯ ಅಸ್ತೇಯ ಬ್ರಹ್ಮಚರ್ಯ ಅಹಿಂಸಾ ಧೃತಿ ದಯಾ ಕ್ಷಮಾರ್ಜಿತ ಮಿತಭುಕ್ತವು ನಿತ್ಯ ಬಾಹ್ಯಾಂತರ ಶೌಚಾದಿ ದಶಗುಣ ಯುತವಾದಯಮ ಉಪಾಸನೆಗಳಿನಿತಿಲ್ಲವೋ ದೇವಾ 1 ನಿಯಮ ಮೊದಲಿಲ್ಲ ಜಪತಪ ಸಂತೃಪ್ತಿ ನಿಯತ ಸಿದ್ಧಾಂತ ಶ್ರವಣ ಲಜ್ಜಮತಿಯು ಶ್ರೀಯಃಪತಿಯ ಪೂಜನ ಆಸ್ತಿಕ್ಯವ್ರತ ದಾನೋ- ಪಾಯವಿಲ್ಲದೇ ಕಡೆ ಹಾಯ್ವುದೆಂತಯ್ಯ 2 ಘಾಸಿಯಾಗಿಹುದಯ್ಯ ಷಡ್ವಿಧಾಸನಗಳೂ ಸ್ವಸ್ತಿಕ ಭದ್ರಪದ್ಮ ಅರ್ಧಾಂಗಾಸನದಿ ಸಿದ್ಧ ಪರ್ಯಂಕಗಳೆಂಬ ಆಸನದಿ ಕುಳಿತು ನಾ ಧೇನಿಸಲರಿಯೆ ಹರಿಯೇ 3 ಪ್ರಾಣಾಯಾಮವ ಕ್ರಮವು ರೇಚಕ ಪೂರಕವು ದಣಿವಿಲ್ಲದೆ ಕುಂಭಕದ ಕ್ರಮವಿಲ್ಲ ತ್ರಾಣವಿಲ್ಲವೋ ವಾಯುಬಂಧ ಮಾಡಲರಿಯೆ ಪ್ರಾಣಪತಿ ನಿನ್ನ ಕರುಣವಿಲ್ಲದಾತನಕ 4 ವಿಷಯಾಭಿಲಾಷೆಯಿಂದ್ಹರಿದು ಹೋಯಿತು ಮನಸು ವಿಷಮವಾಗಿಹುದಯ್ಯ ಮತ್ಸಾಧನ ಪ್ರತ್ಯಾಹಾರ ಸಾಧನವಿಲ್ಲ ಕೃಷಿಮಾಡಿ ಸ್ಥಿರಮನದಿ ಧೇನಿಸಲು ನಾನರಿಯೆ 5 ಧಾರಣೋಪಾಯದೊಳು ಅಣುಮಾತ್ರ ನಾನರಿಯೆ ನರಕ್ರಿಮಿಯಾಗಿ ನಾ ಧರೆಯೊಳುಳಿದೆ ಅರಿಯೆ ಬಾಹ್ಯಾಂತರದಿ ಭೂತಪಂಚಕವಿರುವ ಪರಿ ತಿಳಿದು ಪ್ರಾಣವಾಯು ಸಡಿಲಬಿಡಲರಿಯೆ 6 ಧ್ಯಾನಿಸಲು ಏಕಾಗ್ರಚಿತ್ತವೇ ಎನಗಿಲ್ಲ ಸಂಸ್ತುತಿಸೆ ಸಂಪ್ರಜ್ಞಾ ಅಸಂಪ್ರಜ್ಞವೆಂಬ ಘನಸಮಾಧಿಯೊಳ್ ಪರಿವಿಲ್ಲದಲೆ ನಿನ್ನ ಕರುಣವೆಂತಾಗುವುದೋ ಶ್ರೀ ವೇಂಕಟೇಶಾ 7 ಶುದ್ಧವಾದ ದ್ವೈತತ್ರಯ ತಿಳಿಯದಲೆ ಮುಗ್ಧನಾಗಿಹೆ ನಾನಪರಿಶುದ್ಧನೊ ಶಬ್ದಗೋಚರ ನಿನ್ನ ಪರಿಶುದ್ಧ ಭಾವದಿಂ ಬುದ್ಧಿಪೂರ್ವಕ ತಿಳಿಯೆ ಬದ್ಧಪಾಮರನಯ್ಯ 8 ಕರಣತ್ರಯದಲಿ ಮಾಳ್ವ ಕ್ರಿಯೆಗಳೆಲ್ಲವು ಸತತ ಹರಿಯೇ ಬಿಂಬಕ್ರಿಯವ ನಾನರಿಯದೇ ಕರುಣಶರಧಿಯೆ ನೀ ಕೃಪೆಮಾಡಿ ಪೊರೆಯದಿರೆ ಉರಗಾದ್ರಿವಾಸವಿಠಲ ನಿನ್ನ್ಹ್ಹೊರತು ಗತಿಯುಂಟೆ 9
--------------
ಉರಗಾದ್ರಿವಾಸವಿಠಲದಾಸರು
ಕಷ್ಟಹರಿಸೊ ಪರಮೇಷ್ಟಿಪಿತನೆ ನೀ ಕೈ ಬಿಟ್ಟರೆ ಸೃಷ್ಟಿಯೊಳು ಪಾರುಗಾಣುವುದೆಂತೂ ಪ ಇಷ್ಟದಿಂದಲೋ ಅನಿಷ್ಟದಿಂದಲೋ ನಾನೇ ಹುಟ್ಟಿಬಂದೆನೆ ದೇವ-ನಿನ್ನಿಷ್ಟದಿಂದಲ್ಲವೇ ಅ.ಪ ಬಿಂಬನೆನಿಸಿದೆ ಎನಗೆ ಪ್ರತಿಬಿಂಬ ನಾ ನಿನಗೆ ಬಿಂಬ ಪ್ರತಿಬಿಂಬಕೆ ಉಪಾಧಿಯು ನಿತ್ಯ- ವೆಂಬನ್ವಯಕೆ ಗುಣತ್ರಯಬದ್ಧವೇ ಕಾರಣ- ವೆಂಬ ಗುಣಜೀವಸ್ವರೂಪೋಪಾಧಿಯು ಬೆಂಬಲನೀನಿದ್ದೂ ಗುಣಕಾರ್ಯಕನುವಾಗಿ ಇಂಬುಕೊಡುವೆ ಫಲಭೋಗಿಸಲೀವೇ ಎಂಬನುಡಿ ಶ್ರುತಿಶಾಸ್ತ್ರಸಿದ್ಧವು ನಂಬಿಹುದು ಜಗವೆಲ್ಲ ಸತ್ಯವು ಶಂಬರಾಂತಕ ಪಿತನೆ ಎನ್ನ ಹೃದ- ಯಾಂಬರದಿ ನಿನ್ನ ಬಿಂಬ ತೋರೈ 1 ಕಾಲಕರ್ಮಾದ್ಯಷ್ಟಗುಣಗಳೆಲ್ಲವು ನಿಜ- ವೆಲ್ಲಜಡಗಳು ಮತ್ತು ಅಚೇತನಂಗಳೈ ಶೀಲ ಮೂರುತಿ ನೀ ಪರಮ ಚೇತನನಾಗಿ ಎಲ್ಲ ಕಾಲದಿ ನಿನ್ನ ನಿಯಮನಂಗಳೈ ಕಾಲಕರ್ಮಗುಣಂಗಳೇನಿಹುದೆಲ್ಲ ಫಲಪ್ರದಾನವ ಮಾಡೆ ಶಕ್ತಿ ಜಡಕೆಂತಿಹುದಯ್ಯ ಕಾಲನಾಮಕ ನೀನೆ ಸರ್ವ ಕಾಲದಲಿ ಸ್ವಾತಂತ್ರ್ಯ ನಿನ್ನದೋ ಇಲ್ಲ ಘನ ಸಮರಿಲ್ಲ ಸರ್ವಕರ್ಮ ಫಲವೆಲ್ಲ ನೀನೆ ದಾತೃವೋ 2 ಮರ್ಮವರಿಯೆನೊ ದೇವ ಧರ್ಮಭ್ರಷ್ಟನಾದೆ ಕರ್ಮಫಲಾನುಭವಮಾಡಿ ಬೆಂಡಾದೆನು ಕರ್ಮ ತಾ ಶಿಕ್ಷಿಸಲರಿಯದು ನ್ಯಾಯ ಧರ್ಮಾಧಿಪತಿ ಭೀಕರ ಫಲಕೊಟ್ಟು ಶಿಕ್ಷಿಪಂತೆ ಧರ್ಮಮೂರುತಿ ಶುದ್ಧನಿಷಿದ್ಧಕರ್ಮಂಗಳಿಗೆ ಪೂರ್ಣಫಲವಿತ್ತು ಸಮನೆಂದೆನಿಸಿರುವೆ ಕರ್ಮಮೋಚಕ ನೀನೆ ಸಕಲ ಕರ್ಮಪ್ರದನೆಂದೆನಿಸಿ ಪೂರ್ವ- ಕರ್ಮಫಲ ಭೋಗಿಸಲು ಜನ್ಮವನಿತ್ತು ಕರ್ಮಪ್ರವಹದೊಳಿಡುವೇ 3 ವಿಮುಖನಾಗಿಹೆ ಶ್ರುತಿಸ್ಮøತಿಶಾಸ್ತ್ರಧರ್ಮಕೆ ಪ್ರಮುಖನಾಗಿಹೆ ದುಷ್ಕರ್ಮ ಮಾರ್ಗದಲ್ಲಿ ಕರ್ಮಕಲಾಪದ ಧರ್ಮ ಮರ್ಮವನರಿಯೆ ಹೆಮ್ಮೆಯಿಂದಲಿ ನಾನಾ ಕರ್ಮಕೂಪದಲಿರುವೆ ಪೆರ್ಮೆಗೋಸುಗ ಅಧರ್ಮವೆಷ್ಟೋ ಮಾಡ್ದೆ ಒಮ್ಮೆಗಾದರು ಸದ್ಧರ್ಮಾಚರಿಸಲಿಲ್ಲ ಕರ್ಮ ಅಕರ್ಮ ವಿಕರ್ಮ ಪರಿಚಯವಿಲ್ಲ ಜನ್ಮಕೆ ಧರ್ಮಪುತ್ರನೆ ದ್ವಂದ್ವಕರ್ಮಸಮರ್ಪಿಸಲು ಸನ್ಮತಿಯ ಕೊಟ್ಟಿನ್ನು 4 ಬೆಟ್ಟದೊಡೆಯನೆ ಶ್ರೀ ವೇಂಕಟೇಶ ನೀ ತುಷ್ಟಿಯಾದರೆ ನಿನ್ನಿಷ್ಟದಂತೆ ಫಲವು ಸೃಷ್ಟಿಯೊಳು ಪುಟ್ಟಿಸಿ ದುಷ್ಟಕರ್ಮದ ಪಾಶ ಕಟ್ಟಿನೊಳಿಟ್ಟೆನ್ನ ಕಷ್ಟಪಡಿಸುವರೇ ಸೃಷ್ಟೀಶ ಉರಗಾದ್ರಿವಾಸ ವಿಠಲ ಎನ್ನ ನೀನಿಟ್ಟಿರುವಷ್ಟುಕಾಲ ಧಿಟ್ಟಭಕುತಿಯ ಕೊಟ್ಟು ದಿಟ್ಟ ರಕ್ಷಿಸು ಇಷ್ಟಮೂರುತಿಯೆ ಇಷ್ಟದಾಯಕನೆಂದು ನಾನಿಷ್ಟು ನುಡಿದೆನೋ ನಿನ್ನ ಎನ್ನ ಮನೋಭೀಷ್ಟೆ ಸಲಿಸೆ ನಿನ್ನಿಷ್ಟವಯ್ಯ5
--------------
ಉರಗಾದ್ರಿವಾಸವಿಠಲದಾಸರು
ಕಳದೇವಲ್ಲ ಕೈಗೆ ನಿಲುಕಿದ ನಿಧಾನ |ತಿಳಿದು ಬಿಟ್ಟೆವಲ್ಲ ಸ್ವರ್ಗದ ಸೋಪಾನ || ಅಳಿದೆವಲ್ಲ ಆತ್ಮಲೋಕದ ವಿಮಾನ |ಸಲೆಯೆಂಬ ಸಮಯ ತುಂಬಿತಲ್ಸಮಾನಾ ಪ ಮದ್ದು ಮೇಯಿದಂತೆ ಚಿಂತೆಗಳಿದ್ದು ಸೊರಗಿ |ಕದ್ದು ಕಳ್ಳನಂತೆ ಲೋಕದೊಳು ತಿರುಗಿಬಿದ್ದು ಬೈಸಿಕೊಂಡೆ ಧನಿಕರಲಿ ಮರುಗಿ |ಹದ್ದು ಕಾಗೆಯಂತೆ ಕೂಳ ತಿಂದು ಒರಗಿ1 ಜನದ ಮನದ ನಾಚಿಕೆಗಳೆಲ್ಲ ಬಿಟ್ಟು |ಕನಸಿನಂಥ ವಿಷಯ ಸವಿಗೆ ಸೋಂಕಿ ಕೆಟ್ಟು |ಜನಿಸಿದವರ ಕೂಡ ಮತ್ಸರವ ತೊಟ್ಟು |ಶುನಕನಂತೆ ಬೊಗಳಿ ಬೊಗಳಿ ಗೋಳಿಟ್ಟು 2 ಉಕ್ಕಿ ಸೊಕ್ಕಿ ಸಾಧು ಸಜ್ಜನರ ದೂರಿ |ನಕ್ಕು ನುಡಿದು ಅವರ ದೋಷಗಳ ಬೀರಿ |ಝಕ್ಕಿಸಲರಿಯಾದವರ ಮಾತುಗಳ ಮೀರಿ |ರುಕ್ಮದಾಶೆ ಹಿಡಿಯದೆ ಹೇಡಿತನವ ತೋರಿ 3
--------------
ರುಕ್ಮಾಂಗದರು
ಕಳವಳಿಪುದೆನ್ನ ಮನ ಕಮಲಾಕ್ಷ ಬಾರದಿರೆ ಪ ನಳಿನಸಂಭÀವ ಲಿಖಿತವೇನಿಹುದೊ ಸಖಿಯೆ ಅ.ಪ. ಪೋದ ವಿಪ್ರನು ಬರದಿರಲು ಏನು ಕಾರಣವೊ ಹಾದಿಯಲಿ ವಿಘ್ನ ತಾನೊದಗಿತೊ ಮಾಧವನಿಗೆನ್ನೊಳು ಮಮತೆ ಬಾರದೆ ಹೊಯ್ತೆ ಮೇದಿನಿಯೊಳೇಕೆ ನಾ ಪುಟ್ಟಿ ಬಂದನೆ ಸಖಿಯೆ 1 ನಿನ್ನ ಹೊರತೆನಗಿನ್ನು ಅನ್ಯಗತಿಯಿಲ್ಲೆಂದು ಭಿನ್ನವಿಸಿಕೊಂಡಿದ್ದೇನಾಯಿತೆ ಕರ್ಮ ಬಲವಂತವಾಗಿರಲು ಬನ್ನಪಡಿಸುತಲೆನ್ನ ಬಳಲಿಪುದು ಸರಿಯೆ 2 ವಸುದೇವ ಸುತನಾಗಿ ಶಿಶುತನದ ಕ್ರೀಡೆಯೊಳ್ ಅಸುರರನು ಸಂಹಾರ ಮಾಡಿದವಗೆ ಶಿಶುಪಾಲನಾಕಾಲದ ವಶಮಾಡಲಸದಳವೆ ಕುಸುಮಾಕ್ಷಿ ಕರಿಗಿರೀಶನೆ ಗತಿಯು ಸಖಿಯೆ 3
--------------
ವರಾವಾಣಿರಾಮರಾಯದಾಸರು
ಕಳೆಯ ಬ್ಯಾಡವೋ ಕಾಲವ | ತಿಳಿ ನೀ ಮಾನವಾ | ವೃಥಾ | ಪ ಹರಿಚರಿತಾಮೃತ ವರಸುಗ್ರಂಥವನು ಪರಮತತ್ವವೆಂದರಿಯದೆ ಜಗದೊಳು 1 ಹದ್ದುಗಳಂದದಿ ಕಳೆಯಬ್ಯಾಡವೋ ಕಾಲವ 2 ದೋಷಿಗಳಮದದಿ ಕಳೆಯಬ್ಯಾಡವೋ ಕಾಲವ 3 ತನುಮನಧನ ಸತಿಯರನು ವಿಧಿಜಕಗರ್ಪಿಸದೆ ಶುನಕನಂದದಿ ಕಳೆಯ ಬ್ಯಾಡವೋ ಕಾಲವ 4 ಪ್ರೇಮದಿಂದಲಿ ಶಾಮಸುಂದರನ ನಾಮವು ಪಾಡದೆ ಪಾಮರನಂದದಿ ಕಳೆಯಬ್ಯಾಡವೋ ಕಾಲವ 5
--------------
ಶಾಮಸುಂದರ ವಿಠಲ
ಕಾಕುತ್ಸ ರಘುನಾಥ ಶ್ರೀರಾಮಚಂದ್ರ ಭೂಕಾಂತೆ ಸಿರಿವಂತೆ ಜನಕಾತ್ಮಜೇಂದ್ರ ಪ ಪಾಕ ಶಾಸನ ಕಾಯ್ದ ದಶರಥ ಕಂದ ಲೋಕನಾಯಕ ಸ್ವಾಮಿ ಭಕ್ತರಾನಂದಾ ನಂಬಿದೆ ಹರಿ ನಿನ್ನ ಚರಣಯುಗ್ಮಗಳ ನಂಬಿದ ಶ್ರೀ ಹರಿ ದಿವ್ಯ ರೂಪಗಳಾ ನಂಬಿದೆ ನಿನ್ನ ಹರಿಲೀಲೆ ಮಹಿಮ ಕೀರ್ತಿಗ¼ À ನಂಬಿದೆ ಪಾಲಿಸೋ ತರಿದು ಕಷ್ಟಗಳ 1 ಸ್ಮರಿಸುವೆ ಭಜಿಸುವೆ ಶುಭ್ರ ನಾಮಗಳ ಪರಿಪರಿ ಪೊಗಳುವೆ ನಮಿಸುವೆ ಹರಿಯ ನಿರುತದಿ ಪಾಡುವೆ ನಿನ್ನ ಸ್ತೋತ್ರಗಳ ವಿರಚಿಸಿ ಮಾಡುವೆ ಹರಿ ಕೀರ್ತನೆಗಳ 2 ಭಕ್ತನ ಲಾಲಿಸೋ ದಾನವಾಂತಕನೇ ಭಕ್ತಿಯ ಪಾಹಿಸೂಕರ ರೂಪಧರನೇ ಭಕ್ತನ ಪಾಲಿಸೋ ದೇವ ನಿರ್ಮಲನೇಮುಕ್ತಿಯ ಪಾಲಿಸೋ ಚನ್ನಕೇಶವನೇ 3
--------------
ಕರ್ಕಿ ಕೇಶವದಾಸ
ಕಾಖಂಡಕಿ ಪ್ರಸನ್ನ ವೆಂಕಟದಾಸರು ಸಿರಿ ಪ್ರಸನ್ನವೆಂಕಟನ್ನನಿರುತ ಸ್ಮರಿಪ ಕಾಖಂಡಿಕಿ ವೆಂಕಪ್ಪನವರ ಚರಣವನೆ ನೆನೆವನೆ ಧನ್ಯಾಮಾನ್ಯ ಪ ಮರುತ ಮತಾಬ್ಧಿ ಮರಕತ ಭೂಸುರಜನ್ಮ ಧರನಾಗಿಭೂಮಿಯೊಳುದಿಸಲುತರುಳತ್ವ ಕಳೆದು ತರುಣತನ ಬರಲಿನ್ನು ಅರಿವ ಕಾಣದೆ ಇರುತಿರಲುಹರಿನಾಮಾವಳಿಗಳು ಬರೆದು ಓದುವ ಭಾಗ್ಯ ಅರಿವೆನೆಂದರೆ ಬಾರದಿರಲುತೊರೆದು ಮನೆಯವರ ಗಿರಿಯಾತ್ರೆ ಮಾಳ್ಪರನನುಸರಿಸಿ ತೆರಳಿಬರುತಿರಲು 1 ವರಾಹ ಮೂರ್ತಿಯನೆ ಕಂಡಾಲಸವ ಮಾಡದಲೆಚೆನ್ನಾಗಿಝಷಕೇತು ಜನಕನ ಪುಟ್ಟಿಸಿದ ಕಾರಣವೇನು ಉಸಿರೆಂದು ಚರಣಕ್ಕೆಬಾಗಿ 2 ವಂದಿಸಿದ ಕ್ಷಣ ಸ್ವಪ್ನದಿ ಪ್ರಸನ್ನವೆಂಕಟನೆಂದು ಬರೆಯೆ ನಾಲಿಗೆಲಿನಂದದಿಂದೆಚ್ಚೆತ್ತು ಜ್ಞಾನವುದಿಸೆ ಮುಕುಂದನ ಕಂಡು ಎದೆಯಲಿಚಂದ ಚಂದದಿ ಪೊಗಳುತ್ತ ಕಂಗಳಿಂದಾ ನಂದಬಾಷ್ಪ ಸುರಿಸುತಲಿಇಂದು ಧನ್ಯನಾದೆನೆಂದು ತೋಷಾಬ್ಧಿಯ ಹೊಂದಿ ಹರಿಯಾಜ್ಞೆಯಲಿತೆರಳಿ 3 ಭಾಗವತ ಪೂರ್ವಾರ್ಧಕನ್ನಡದಿಮತಿಪೂರ್ವಕ ರಚಿಸುತಾನಂದವು ತುಳುಕು ತಿಹುದು ಕವಿತೆಯಲಿನುತಿಸಿ ದುರ್ಮತ ನಿರಾಕರಿಸಿ ಬಾಳಿ ಬಲು ಕುಲ ತತಿ ಶುದ್ಧಮಾಳ್ಪರು ಹರಿಪುರವಹೊಂದಿ 4 ಕಲಿಕಾಲದಿ ನರಹರಿ ನಾಮ ಸ್ಮರಣೆಯು ಮುಖದಿಂದ ಬರುವುದು ಅತ್ಯಸಾಧ್ಯಲಲಿತಕವನದಿ ತುತಿಸೆ ರಮಾಪತಿವಿಠಲನು ಒಲಿವನು ಇದು ಸತ್ಯಹಲವು ಮಾತೇಕಿವರು ಸುರರೇ ಸರಿ ನರರಲ್ಲ ಇದು ಸಿದ್ಧವೇ ಸಿದ್ಧಛಲದಿ ಮನುಜನೆಂಬಧಮನು ಹರಿಯಾಜ್ಞೆಯಲಿ ಬಲು ಬಲು ನರಕದೊಳು ಬೇಳುವುದುರಾದ್ಧ 5
--------------
ರಮಾಪತಿವಿಠಲರು