ಒಟ್ಟು 8519 ಕಡೆಗಳಲ್ಲಿ , 133 ದಾಸರು , 4842 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಧ್ಯರಾತ್ರಿಯೊಳೀಗ ನಾ ನಿದ್ದೆಯೊಳಿರೆ ಬಾಗಿಲು |ಸದ್ದು ಮಾಡಿ ವೊತ್ತಿದವರಾರೈ | ಬಾಳ್ವರಿಗಿದುಬುದ್ಧೆ ಹೆಣ್ಣೋ ಗಂಡೋ ಪೇಳಿರೈ ಪಮೇದಿನಿಯೊಳು ಪ್ರಸಿದ್ಧವಾದ ತುಂಗಮಹಿಮ ಶ್ರೀ |ಮಾಧವಬಂದಿಹೆ ಕೇಳೆಲೆ | ಆದರೊಳ್ಳಿತುಮದನನೊಳಾಡಲಿ ಹೋಗೆ 1ಹೇ ಸಖಿ ವಿಚಾರ ಮಾಡೆ ವಸಂತನಲ್ಲವೆ | ಸರ್ವದೇಶ ಬಲ್ಲದು ನಾಚಕ್ರಿಯೆ | ಇಲ್ಲಿ ಬೇಕಿಲ್ಲಆ ಸಂತಿಯೊಳಿಟ್ಟು ಮಾರೊದೈ 2ಉತ್ತಮಗಂಬುವದಲ್ಲೆ ವೈತ್ತಿಕೆ ತುಳಿವನೆಂದುಧರೆ|ಹೊತ್ತವ ಕೇಳೆಲೆ ಸುಂದರಿ | ಒಳ್ಳೆದು ನಿನ್ನಹುತ್ತಿನೊಳು ವಾಸ ಮಾಡೊದೈ3ಸರ್ಪನಲ್ಲವೆ ಅಖಂಡಲ ದರ್ಪ ತಗ್ಗಿಸಿದವ ಸ- |ಮರ್ಪಕವಾಯಿತೇನೆ ಮನಕೆ | ಮರದ ಗೂಡೊಳುತೆಪ್ಪನೆ ಸೇರುವುದೇ ಬಹು ಲೇಸೈ 4ಸೂರಿಗಳೆಲ್ಲರು ಯನ್ನ ಕೀರುತಿ ಬಲ್ಲರುಹುದಲ್ಲ |ನಾರೀಮಣಿಹರಿಬಂಧಿನಿ ಕೇಳೆ | ಮನಗಳಲ್ಲಿ ವಿ-ಹಾರ ಮಾಡುವುದೇ ಲೇಸೈ 5ತರುಗಳಲ್ಲಿಹೊದಕ್ಕೆ ವಾನರನಲ್ಲೆ ಜನನಾದಿ ದೋಷ |ವಿರಹಿತ ನಾರಾಯಣ ಬಂಧಿನೆ | ಈ ನಾಮಕ್ಕಿನ್ನು-ತ್ತರವೇನು ಇದ್ದರೆ ಪೇಳೆ ಗುಣಧೀ 6ನಾನರಿತೆನೀಗ ದೇವ ಪ್ರಾಣೇಶ ವಿಠಲನೆಂಬೊದು |ಏನಾಡಿದಾಪದ್ಧವನು ಕ್ಷಮಿಸೈ | ತನುವೆ ನಿನ್ನದುಮಾನದಿಂದೆನ್ನನು ರಕ್ಷಿಸೈ 7
--------------
ಪ್ರಾಣೇಶದಾಸರು
ಮಧ್ವರಾಯರ ನೆನೆದು ಶುದ್ಧರಾಗಿರೊ |ಹೊದ್ದಿ ವೈಷ್ಣವ ಮತಭವಾಬ್ಧಿದಾಟಿರೋಪಉದಯದಲಿ ಏಳುವಾಗ ನದಿಯ ಸ್ನಾನ ಮಾಡುವಾಗಒದಗಿನಿತ್ಯಕರ್ಮಗಳನು ನಡೆಸುವಾಗ ||ಹೃದಯದಲಿ ಬೀಜಾಕ್ಷರ ಮಂತ್ರಗಳನು ಜಪಿಸುವಾಗಸದಮಲಾನಂದ ಹನುಮನನ್ನು ನೆನೆಯಿರೊ 1ಕಾಮವಿಲ್ಲದ ಹರಿಯ ಪೂಜೆ ವೈಶ್ವದೇವ ಮಾಡುವಾಗಪ್ರೇಮದಿಂದ ವೈಷ್ಣವರು ಅರ್ಚಿಸುವಾಗ ||ಆ ಮಹಾ ಭಕ್ಷ್ಯಭೋಜ್ಯ ಆರೋಗಣೆ ಮಾಡುವಾಗನೇಮದಿಂದ ಕೌರವಾಂತಕ ಭೀಮಸೇನನ ನೆನೆಯಿರೊ 2ಕರಗಳನ್ನು ತೊಳೆದು ತೀರ್ಥ ತುಳಸೀದಳವ ಮೆಲ್ಲುವಾಗಪರಿಪರಿಯ ಪುಷ್ಪವೀಳ್ಯ ಅರ್ಪಿಸುವಾಗಸರುವಾಂತರ್ಯಾಮಿ ಗುರುಮಧ್ವರಂತರಾತ್ಮಕಪುರಂದರವಿಠಲಗೆ ಸಮರ್ಪಣೆ ಮಾಡಿರೊ3
--------------
ಪುರಂದರದಾಸರು
ಮಧ್ವರಾಯಾ-ಗುರು-ಮಧ್ವರಾಯಾಮಧ್ವರಾಯಾ-ಗುರು-ಮಧ್ವರಾಯಾ ಪರಾಮಾವತಾರದೊಳೊಮ್ಮೆ ಮಧ್ವರಾಯಾಆ ಮಹಾ ಹನುಮನಾದೆ ಮಧ್ವರಾಯಾ ||ವಾಮಮುಷ್ಟಿಲಿ ರಾವಣನ ಗೆಲಿದೆ ಮಧ್ವರಾಯಾ ||ಕಾಮಿತಾರ್ಥಸುರರಿಗಿತ್ತೆ ಮಧ್ವರಾಯಾ1ಕೃಷ್ಣಾವತಾರದೊಳೊಮ್ಮೆ ಮಧ್ವರಾಯಾದುಷ್ಟಕುಲಕೆ ಭೀಮನಾದೆ ಮಧ್ವರಾಯಾ ||ಕುಟ್ಟಿದೆ ಕೌರವರನೆಲ್ಲ ಮಧ್ವರಾಯಾ - ಶ್ರೀ -ಕೃಷ್ಣನ ಪ್ರೀತಿಯ ಪಡೆದೆಯೊ ಮಧ್ವರಾಯಾ 2ಧರೆಯೊಳು ಯತಿಯಾಗಿ ಜನಿಸಿದೆ ಮಧ್ವರಾಯಾಗುರುವ್ಯಾಸರ ಹಿತವ ಪಡೆದೆ ಮಧ್ವರಾಯಾದುರುಳಮಾಯಿಮತವ ಮುರಿದೆ ಮಧ್ವರಾಯಾಪುರಂದರವಿಠಲನ ದಾಸನಾದೆ ಮಧ್ವರಾಯಾ3
--------------
ಪುರಂದರದಾಸರು
ಮನವು ನಿನ್ನಲಿ ನಿಲ್ಲಲಿಅನುದಿನನಿನ್ನ ನೆನೆದುಮನವು ನಿನ್ನಲಿ ನಿಲ್ಲಲಿ ಪ.ದುಃಖ ಸುಖ ಲೆಕ್ಕಿಸದೆ ಮುಖ್ಯ ಫಲ ಮುಂದರಿಸೆಮಿಕ್ಕುತ್ತ ಸೊಕ್ಕಿ ಮೋಹಕ್ಕೆ ಸಿಕ್ಕದೆ 1ನಿನ್ನಗುಣವರ್ಣಿಸುತ ನಿನ್ನವರ ಮನ್ನಿಸುತನಿನ್ನಪಾವನ್ನಲಾವಣ್ಯ ಧ್ಯಾನಿಸೆ2ಸಂತೋಷ ನಿರಂತರವು ಸಂತ ಜನ ಸಹವಾಸವುಶಾಂತತ್ವವಾಂತು ಮಹಾಂತಧೈರ್ಯದಿ 3ಭಕ್ತಿ ಸುವಿರಕ್ತಿ ಜ್ಞಾನ ಮುಕ್ತಿಗೆ ಮುಖ್ಯ ಕಾರಣಚಿತ್ತದೊಳಿತ್ತೆಲ್ಲ ಹೊತ್ತುಹೊತ್ತಿಗೆ4ಪ್ರಿಯ ಶ್ರೀಲಕ್ಷುಮಿನಾರಾಯಣ ಪರಾಯಣನಧೈರ್ಯದಂತರ್ಯ ಗಾಂಭೀರ್ಯ ಭಾವದಿ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮನವೆಂಬ ಬೇಟೆಗಾರಹತ್ತಿಂದ್ರಿಯ ನಾಯಿಮನ ಬಂತು ಘೋರವಾದಮನಮನಾದಿ ಮೃಗಂಗಳನುಮಹಾಕೊಲೆಯ ಕೊಲ್ಲುತಿಹನುಪಮಹಾಪ್ರಪಂಚ ಬಲೆಯುತಾಪತ್ರಯತೊಡಕುಮಹಾವಿಷಯ ಮೇವು ಮಹಾವಿಷಯಮೇವಿಗೆ ಬಂದು ಮನುಜಮೃಗಗಳು ಕೆಡವುತಿಹವು1ನಯನೇಂದ್ರಿಯಗಳೆಂಬ ನಾಯಿಕಂಡಾಗಲೆ ಹಿಡಿವುದುಪ್ರಾಯ ಒಳ್ಳೆಯ ನಾಯಿನಿಯತವಿಹುದಲ್ಲೆ-ನ್ನದಲೆ ನೆನೆದಾಗಲೇ ಹಿಡಿಯುತಿಹುದು2ಒಂದಕ್ಕದೊಂದು ವೇಗವುಹತ್ತೀಪರಿನಾಯಿಬಂದರೆಂತೊಂದು ಸತ್ವವುಬಂದು ಹಿಡಿಯದಿರೆಮತ್ತೊಂದಾದರೆ ಹಿಡಿದು ಕೆಡವುತಿಹುದು3ಬಾಹ್ಯದ ಅಡವಿಯೊಳಗೆಮೃಗಂಗಳಿಗೆ ಬಹಬಾಧೆ ನಿತ್ಯದೊಳಗೆಬಾಹ್ಯ ವಿಷಯಪೇಕ್ಷೆಯಬಿಟ್ಟರೆ ಬದಿಯ ನಾಯಿಗಳು ಸೇರದಿಹವು4ತನಗೆ ತಿಳಿಯಬೇಕುತಾನುಳಿವುದಕೆ ತನಗೇಯಬೇಕುತನ್ನ ಚಿದಾನಂದನೆಂದು ತನ್ನ ಕಂಡರೆ ಭಯವಿಲ್ಲ5
--------------
ಚಿದಾನಂದ ಅವಧೂತರು
ಮನುಷ್ಯನಾದ ಫಲವೇನುಶ್ರೀನಿವಾಸನ ಕಂಡು ಸುಖಿಯಾಗದನಕ ಪ.ಭಾನುಉದಿಸದ ಮುನ್ನ ಸ್ವಾಮಿ ಪುಷ್ಕರಿಣಿಯಲಿಸ್ನಾನಸಂಧ್ಯಾನಜಪಗಳನೆ ಮಾಡಿಸಾನುರಾಗದಿ ಶ್ರೀವರಹಗೆ ನಮಿಸಿತಾನಖಿಳ ಪುಣ್ಯವನು ಸೂರೆಗೊಳದನಕ 1ಹಸ್ತದಲಿ ವೈಕುಂಠವೆಂದು ತೋರುವ ವಿಮಾನಸ್ಥಾಚ್ಯುತನ ಕರ್ಮಗುಣನಾಮವಸ್ವಸ್ಥಮತಿಯಾಗಿ ಕೊಂಡಾಡಿ ಕುಣಿದಾಡಿ ತಾವಿಸ್ತರದಕೈವಲ್ಯಪಡೆಯದನಕ2ತುಲಸಿ ಬರ್ಹಕೆ ಪೋಲ್ವ ಆ ಮಹಾಪ್ರಸಾದವನುಅಲಸದೆ ಸೇವಿಸಿ ಕೃತಾರ್ಥನಾಗಿಹಲವು ದುರಿತಾರಿ ಪ್ರಸನ್ವೆಂಕಟಗಿರಿಯನಿಲಯನೆ ಗತಿಯೆಂದು ಭಜಿಸದನಕ 3
--------------
ಪ್ರಸನ್ನವೆಂಕಟದಾಸರು
ಮನ್ನಿಸೆನ್ನ ಮಹಾಲಿಂಗದೇವೋತ್ತುಂಗಪುಣ್ಯಶ್ಲೋಕ ನಿನ್ನ ವರ್ಣಿಪೆ ಮುಕ್ಕಣ್ಣ ಪ.ಭಕ್ತಪಾರಿಜಾತ ಶಕ್ತಿದೇವಿಪ್ರೀತಸತ್ಯಧರ್ಮಯೂಥ ಸ್ವಾಮಿಲೋಕನಾಥ 1ವಂದನೀಯ ಕೃಪಾಸಿಂಧು ದಿವ್ಯರೂಪಚಂದ್ರಚೂಡ ಸಾಂದ್ರಾನಂದ ವೈಷ್ಣವೇಂದ್ರ 2ಮಾರವೈರಿ ಲಕ್ಷ್ಮೀನಾರಾಯಣಪ್ರೇಮಿಸಾರತತ್ತ್ವಬೋಧ ಸಾಧುಸುಪ್ರಸೀದ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಮರತೆ ಮರತೆ ಬಗಳ ಮಹಾಮಂತ್ರವಸುರತರುವಿಗೆ ತರುವಾದ ಬ್ರಹ್ಮಾಸ್ತ್ರವಪಭುಗುಭುಗಿಸಿ ಭುವನಗಳನ್ನೆಲ್ಲಾ ಪಾಲಿಪ ಮಂತ್ರಧಗಧಗಿಸಿ ಝಗ ಝಗಿಸಿ ನಿಗಿ ನಿಗಿವ ಮಂತ್ರಜಗದೊಡೆಯರಾದವರಿಗೆ ಒಡೆಯಳ ಮಂತ್ರತಗತಗನೆ ಶತಕೋಟಿರವಿಸೂಸುವ ಮಂತ್ರ1ಸರಸಿಜಾಸನ ತಾನೆ ಜಪಿಸುತಿಹ ಮಂತ್ರಹರಿಹರರುಅನವರತಸ್ಮರಿಸುವಾ ಮಂತ್ರಸುರಪ ಇಂದ್ರಾಗ್ನಿಗಳಿಗಭಯ ನೀಡಿಹ ಮಂತ್ರದುರುಳರಿಪು ವನಗಳಿಗೆದಾವಾಗ್ನಿಮಂತ್ರ2ಹರಿಯ ಸಮಭಾಗ್ಯ ಕೋ ಎಂದು ಕೊಡುವ ಮಂತ್ರಹರಗೆ ಸರಿಯಾದ ಸತ್ವವನೀವ ಮಂತ್ರಗುರುಚಿದಾನಂದ ತಾನಾದ ಬಗಳ ಮಹಾ ಮಂತ್ರಪರಬ್ರಹ್ಮ ಸತ್ಯ ಬ್ರಹ್ಮಾಸ್ತ್ರ ಮಂತ್ರ3
--------------
ಚಿದಾನಂದ ಅವಧೂತರು
ಮರವನು ನುಂಗುವ ಪಕ್ಷಿ ಮನೆಯೊಳಗೆ ಬಂದಿದೆ ಪ.ಒಂಟಿ ಕೊಂಬಿನ ಪಕ್ಷಿ ಒಳಗೆ ಕರುಳಿಲ್ಲಗಂಟಲು ಮೂರುಂಟು ಮೂಗು ಇಲ್ಲಕುಂಟು ಮನುಜನಂತೆ ಕುಳಿತಿಹುದು ಮನೆಯೊಳಗೆಎಂಟು ಹತ್ತರ ಭಕ್ಷ ಭಕ್ಷಿಸುವುದು 1ನಡುವೆ ತಲಿಯೆಂಬುವದು ನಡು ನೆತ್ತಿಯಲಿ ಬಾಯಿಕಡು ಸ್ವರಗಳಿಂದ ಗಾನ ಮಾಡ್ವದುಅಡವಿಯಲಿ ಹುಟ್ಟುವುದು ಅಂಗವೆರಡಾಗುವುದುಬಡತನ ಬಂದರೆ ಬಹಳ ರಕ್ಷಿಪುದು 2ಕಂಜ ವದನೆಯರ ಕರದಲ್ಲಿ ನಲಿದಾಡುವುದುಎಂಜಲನುಣಿಸುವುದು ಮೂರ್ಜಗಕೆರಂಜಿಪಶಿಖಾಮಣಿ ಸಿಂಹಾಸನದ ಮೇಲಿಪ್ಪಸಂಜೀವ ಪಿತ ಪುರಂದರವಿಠಲನೇ ಬಲ್ಲ * 3
--------------
ಪುರಂದರದಾಸರು
ಮರವೆ ಎಂಬುದು ಎಲ್ಲಿಹುದೋ ಯೋಗಿಗೆಮರವೆ ಎಂಬುದು ಎಲ್ಲಿಹುದೋಅರಿತು ಸರ್ವವ ಸರ್ವದಲಿ ಆತ್ಮ ತಾನಾಗಿರ್ದುನಿರುತ ಕಾಲದಿ ಮುಕ್ತಗೆ ಅವಗೆಪನಿರ್ವಿಕಲ್ಪಸಮಾಧಿನಿತ್ಯನಿತ್ಯಳವಟ್ಟುದುರ್ವಿಘ್ನಗಳೆಜರಿದುಗರ್ವದೂರವಾಗಿ ಗಾಢ ತೂರ್ಯದೊಳಿದ್ದುನಿರ್ವಹಿಸಿ ನಿಜಸುಖವನುಪರ್ವಿಪಸರಿಸಿ ತನಗೆ ಪ್ರತಿಗಾಣುತಿರುತಿಪ್ಪಸರ್ವಸಾಕ್ಷಿ ತಾನಾದವಗೆ1ನಾದದೊಳು ಕಿವಿಯಿಟ್ಟು ನಾಸ್ತಿಮನವಸಿಮಾಡಿಬೋಧೆ ಬಲಿದಾ ಲಹರಿಯಹಾದಿಯಂತುಟೋ ಅಂತು ಹರಿದಾಡುತಲಿ ತಾಭೇದಾ ಭೇದಗಳನುಳಿದುಸಾಧು ಸಂಗವ ಕೂಡಿ ಸಂತುಷ್ಟನಾಗಿಪ್ಪನಾದ ಮೂರುತಿಯಾಗೆ2ಪರಮಸಾರವ ತಿಳಿದು ಪರಿಪೂರ್ಣನಾಗಿರುತವರಚಿದಾನಂದ ಗುರುವೆಚರಣಸ್ಮರಣೆಯ ಮನದಿ ಚಲಿಸದಂತಾವಾಗಹಿಡಿದು ನಾಲಗೆಯೊಳಿರಿಸಿಗುರುವೆ ಗುರುವೆ ಎಂದು ತಾನಾಗಿರ್ದುನಿರತಿಶಯದ ಪರಮಗೆ3
--------------
ಚಿದಾನಂದ ಅವಧೂತರು
ಮರೆತನೇನೇ ರಂಗ ಸ್ತ್ರೀಯರಸುರತದ ಸುಖಸಂಗ ಪಪರಿಪರಿ ವಿಧದಲಿ ಸರಸವನಾಡುತಗುರುಕುಚ ಎದೆಗಿರಿಸಿ ಮುದ್ದಿಸುವುದ ಅ.ಪಗೋವರ್ಧನವೆತ್ತಿ ವನದೊಳುಗೋವ್ಗಳೊಡನೆ ಸುತ್ತಿಹಾವನು ಭಂಗಿಸಿ ಮಾವನ ಮರ್ದಿಸಿಕಾಯದಿ ಘನತರ ನೋವಾಗಿದೆಯೆಂದು 1ಭಕ್ತ ಜನರಿಗೊಲಿದು ದೈತ್ಯರಶಕ್ತಿಯಿಂದಲಿ ಗೆಲಿದುಭಕ್ತರಂದದಿ ವೀರಕ್ತಿಯ ತಳೆದನೆನಕ್ತ ನಡತೆಗೆನ್ನ ಶಕ್ತಿ ಕುಂದಿಹುದೆಂದೂ 2ಎಣಿಕೆಯಿಲ್ಲದ ನಾರೀ ಜನರೊಳುಸೆಣಸಿ ರಮಿಸಿದಶೌರಿದಣಿದು ಮನದಿ ಗೋವಿಂದನ ದಾಸರಮನೆಯ ಸೇರ್ದನೆ ಮ£ÀುªÀುಥನನು ಜರೆಯುತ 3
--------------
ಗೋವಿಂದದಾಸ
ಮರೆಯದಿರೆಲೆ ಮನವಿಲ್ಲಿ - ಯಮಪುರಿಗೆ ಒಯ್ದು ಬಾಧಿಸುತಿಹರಲ್ಲಿ ಪ.ಪರನಾರಿಯರ ಸಂಗವಿಲ್ಲಿ - ಉಕ್ಕುಎರೆದ ಸತಿಯರ ತಕ್ಕೈಸುವರಿಲ್ಲಿಗುರು - ಹಿರಿಯರ ನಿಂದೆಯಿಲ್ಲಿ - ಬಾಯೊಳೆರದು ಸೀಸವ ಕಾಸಿ ಹೊಯಿಸುವರಿಲ್ಲಿ 1ಉಂಡ ಮನೆಯ ಕೊಂಬುದಿಲ್ಲಿ - ಎದೆಗುಂಡಿಗೆಯನು ಸೀಳಿ ಕೊಲುತಿಹರಲ್ಲಿಗಂಡನ ದಣಿಸುವುದಿಲ್ಲಿ - ಯಮಕುಂಡದೊಳಗೆ ಹಾಕಿ ಕುದಿಸುವರಲ್ಲಿ 2ಚಾಡಿಯ ಹೇಳುಸುದಿಲ್ಲಿ - ನುಡಿದಾಡುವ ನಾಲಿಗೆ ಕೇಳುವರಲ್ಲಿಬೇಡಿದರಿಗೆ ಧರ್ಮವಿಲ್ಲಿ - ಇದನೀಡದಿರಲು ಒದ್ದು ನೂಕುವರಲ್ಲಿ 3ಪುಸಿ - ಠಕ್ಕು - ಠವುಳಿಗಳಲ್ಲಿ -ಕಟ್ಟಿಎಸೆದು ಕೊಲ್ಲುವರೊ ನಿನ್ನವರು ಕೇಳಿಲ್ಲಿಅಶನಪ್ರಭದಿಗಳಲ್ಲಿ - ಮಾಡೆಬಿಸಿಯ ಕೆಂಡವ ತಂದು ತಿನಿಸುವರಲ್ಲಿ 4ಸಿರಿಮದದೊಳಗಿಹುದಿಲ್ಲಿ - ಸೊಕ್ಕಮುರಿದು ಹಲ್ಲುಗಳ ಕಳಚುವರಲ್ಲಿಪುರಂದರವಿಠಲನ ಇಲ್ಲಿ - ನೆನೆಯಸ್ಥಿರವಾದ ಮುಕುತಿ ಪಡಕೊಂಬುವರಲ್ಲಿ 5
--------------
ಪುರಂದರದಾಸರು
ಮಲಗಯ್ಯ ಜಲಜನಾಭ ಪಆದಿಶೇಷ್ಟನು ಬಂದು ಹಾಸಿಗೆಯಾಗಿಹವೇದವಿನುತ ಜಗದಾದಿ ಪುರುಷ ಕೇಳೊ 1ಸಿರಿ ಭೂ ದುರ್ಗೆಯರು ತರುಣಿಯರು ಮೂವರುಚರಣವೊತ್ತಲಿಕೆ ಕೈಕಟ್ಟಿ ನಿಂತಿಹರು 2ಸರುವಜÕ ಮುನಿವಂದ್ಯ ಸರುವ ಸ್ವತಂತ್ರನೇಪರಮ ಸುಂದರ ಪುರಂದರವಿಠಲರಾಯಾ3
--------------
ಪುರಂದರದಾಸರು
ಮಹಾದಾದಿದೇವ ನಮೋ ಮಹಾಮಹಿಮನೆ ನಮೋಪ್ರಹಲ್ಲಾದವರದ ಅಹೋಬಲ ನರಸಿಂಹ ಪ.ತರಣಿಗುಬ್ಬಸವಾಗೆ ತಾರಾಪತಿಯು ನಡುಗೆಸುರರು ಕಂಗೆಟ್ಟೋಡೆ ನಭವ ಬಿಟ್ಟು ||ತರುಗಿರಿಗಳಲ್ಲಾಡೆ ಶರಧಿಗಳು ಕುದಿದುಕ್ಕೆಉರಿಯನುಗುಳುತ ಉದ್ಭವಿಸಿದೆಯೊ ನರಸಿಂಹ 1ಸಿಡಿಲಂತೆ ಗರ್ಜಿಸುತೆ ಕುಡಿಯ ನಾಲಗೆ ಚಾಚಿಅಡಿಗಡಿಗೆ ಹುಂಕರಿಸಿ ಕಡುಕೋಪದಿಂದ ||ಮುಡಿವಿಡಿದು ರಕ್ಕಸನ ಕೆಡವಿ ನಖದಿಂದೊತ್ತಿಬಿಡದೊಡಲ ಬಗೆದ ಕಡುಗಲಿ ನಾರಸಿಂಹ 2ಸರಸಿಜೋದ್ಭವ ಹರ ಪುರಂದರಾದಿ ಸಮಸ್ತಸುರರು ಅಂಬರದಿ ಪೂಮಳೆಗರೆಯಲುಸಿರಿಸಹಿತ ಗರುಡಾದ್ರಿಯಲಿ ನಿಂತು ಭಕುತರನುಕರುಣಿಸುವ ಪುರಂದರವಿಠಲ ನಾರಸಿಂಹ 3
--------------
ಪುರಂದರದಾಸರು
ಮಹಾದೇವ ಶಿತಿಕಂಠ ದಾಸ ಕಲ್ಪಮಹೀಜ ಬಿನ್ನವಿಪೆ ನಿರ್ದೋಷ ||ಆಹಾ ||ಕುಹಕಾರಿ ಹರಿಪಾದ ಮಹಿಮೆ ಕೊಂಡಾಡಿಸೊ |ಗಹನವಿಕ್ರಮಭೀಮ ಮಹೀಧರಪ ಜಾಧವ ಪಸ್ಫಟಿಕಾಭ ಶ್ರೀಕಂಠ ದಕ್ಷ ಧ್ವಂಸಿ |ನಿಟಿಲಲೋಚನ ಸುರಪಕ್ಷ ಹೇ || ಧೂ |ರ್ಜಟ ಹೀನ ವಿಷಯಾಖ್ಯ ಕಕ್ಷವಹ್ನಿ|ಕುಟಿಲತ್ವ ಬಿಡಿಸತಿ ದಕ್ಷ ||ಆಹಾ||ಕಠಿಣ ಸಂಸಾರದಿತ್ರುಟಿಮಾತ್ರ ಸುಖ ಕಾಣೆ |ವಟುರೂಪಿ ಭಕುತರ ಕಟಕದೊಳಿರಿಸೆನ್ನ1ಇಳಿರಥ ನಗಶರಸೋಮಮೌಳಿ|ನಳನಂದಿನಿಪ ಸುತ ರಾಮ ನಾಮಾ |ನಲಿದು ಪಾಡುವ ಗುಣಧಾಮ ರೌಪ್ಯಾ |ಬಲಾವಾಸಾನಂಗ ವಿರಾಮಾ ||ಆಹಾ||ಹಲವರಾಶ್ರಯಿಸಿ ನಾ ಬಲು ನೊಂದೆನೋರ್ವರು ಕಾಯ್ವ |ಸುಳಿವು ಕಾಣೆನೋ ಹೇ ಗರಳಕಂಠ ಪೊರೆಯೆನ್ನ 2ಪಂಚ ಸುಸ್ಮಿತ ಯುಕ್ತ ವದನಾ ನಿಷ್ಪ್ರ |ಪಂಚ ಗಜಾಸುರ ಹನನಾ ಏಕಪಂಚಾಸ್ಯ ಜನಕ ಕೇಶವನಾ ಪ್ರೀತಿ |ಮಂಚ ನೀನಾಹೆ ಖಳರನಾ ||ಆಹಾ||ಹಿಂಚಾಗಿ ಅಳಿವಂಥ ಹಂಚಿಕೆಯಲಿವರ|ಮುಂಚೆ ಕರೆದು ಕೊಟ್ಟು ವಂಚಿಪೆ ಅತ್ರಿಜ 3ಅಹಂಕಾರಾಧೀಶ ನಭೇಶತಾತ|ಮಹಾ ಮುನಿ ವಂದ್ಯಾಮರಾಸ್ಯ ಚಂದ್ರ |ದಿನಪತೇಕ್ಷಣನೆ ಅಶೇಷಾಮೋದ|ಬಹುಮೋದಸಕ್ತಾಯನ್ನಾಶಾ ||ಆಹಾ||ದಹಿಸೊಜಠರಪೋಷ ವಹಿಸಿ ಬೆಂಡಾದೆನೊ |ಅಹಿಮಲಾಂಧಕಾಸುರ ಗುಹಹ ಅಶ್ವತ್ಥಾಮ 4ಶಕ್ರಾವರಜ ಶ್ರೀ ಪ್ರಾಣೇಶ ವಿಠ್ಠಲ |ನಕ್ರಾಹನಂಘ್ರಿಯನಿಶದಲ್ಲಿ |ವಕ್ರವಿಲ್ಲದೆ ಸೇವಿಪೀಶ ಹೇ ತ್ರಿ- |ವಿಕ್ರಮಕರವ್ಯೋಮಕೇಶ||ಆಹಾ||ಶುಕ್ರಪೂಜಿತಪಾದಅಕ್ರೂರಯನ್ನೊಳಿ |ದ್ದ ಕ್ರಮವೆಣಿಸದೆ ಸುಕೃತವೊದಗಿಸೊ5
--------------
ಪ್ರಾಣೇಶದಾಸರು