ಒಟ್ಟು 14110 ಕಡೆಗಳಲ್ಲಿ , 135 ದಾಸರು , 6022 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಲಹೊ ಸಾತ್ತ್ವಿಕ ದೈವವೆ ಕಾಗಿನೆಲೆಯಾದಿ ಕೇಶವ ನೀಲದ ವರ್ಣ ಆದಿಕೇಶವಾ ಪ ಕನಕ ಕಾಮಿನಿ ಕುಂಭಿಣಿಯಿಂದ ಬರುವ ಚಿಂತೆ | ಕನಸಿನೊಳಗಾದರೂ ದೂರಾಗಲಿ | ಕನಕೋದರಗೆ ಸಾಮ್ಯವಾದ ಜೀವನದಲ್ಲಿ | ಕನಲದೆ ಭಕುತಿ ಇರಲಿ ಎಂದೆಂದಿಗೆ | ಮನವು ನಿನ್ನಾಧೀನ ದೇವರದೇವ 1 ಕನಕ ನಯನ ಮಯನ ಕಂಡವರಿಗೆ ಜ್ಞಾನ | ಕನಕವರುಷವ ಕÀರೆವ ವಾಸುದೇವಾ | ಕನಕಕೇಶಪ್ರಿಯ ಕಾಮಿತಫಲದಾಯಕ | ಕನಕ ಪರ್ವತದಿಂದ ಬಂದ ಗೋವಿಂದ ವ | ಚನವೇ ನಿನ್ನಾಧೀನವೋ ದೇವರ ದೇವ 2 ಕನಕ ಮಾಲಿಗೆ ಒಲಿದ ಕಮಲದ ಲೋಚನ | ಮೂರ್ತಿ | ಕನಕಕಾಯ ನಮ್ಮ ವಿಜಯವಿಠ್ಠಲರೇಯ | ಕನಕರಿಸುವಾಗ ನಿನ್ನ ಧ್ಯಾನವೆ ಕೊಡು | ತನುವೆ ನಿನ್ನಾಧೀನವೊ ದೇವರದೇವ 3
--------------
ವಿಜಯದಾಸ
ಸಲಹೋ ಶ್ರೀನಿವಾಸ ಸದ್ಗುಣನಿಲಯ ವೆಂಕಟೇಶ ಪ ಜಲಜಾಂಬ ನೀನಲಸದೆ ಎನ್ನನು ಅ.ಪ ವಾತವು ಮಿತಿಮೀರಿ ಪಿತ್ತವ್ರಾತದೊಡನೆ ಸೇರಿ ಘಾತವು ಹೆಚ್ಚಿದ ಸೇರುವ ನೋಡಿ 1 ಶ್ವಾಸ ನಿರೋಧದಲಿ ಸೇರಿದ ಕಾಸುಗಳುದರದಲಿ ಕೇಶರಂಧ್ರವಕಾಶದೊಳೂಧ್ರ್ವ ಬಲು ಶ್ವಾಸ ಹೆಚ್ಚಿ ಘಾಸಿಪಡಿಸುತಿದೆ 2 ಕಾಯದಬಲವೆಲ್ಲಾ ಕದಲುತ ಮಾಯವಾದವಲ್ಲ ನೋಯುತ ದೇಹದೊಳಾಯಾಸ ಹೆಚ್ಚಿತು 3 ನಿದ್ರೆಬಾರದಯ್ಯ ನಿಶೆಯೊಳಗೆದ್ದಿರಬೇಕಯ್ಯಾ ಗುದ್ದಿಕೊಂಡು ಬಿದ್ದೊದ್ದಾಡಿಸುತಿದೆ4 ಅನ್ನವರೋಚಕವು ಅಪ್ತರೊಳನ್ಯತೆಗೋಚರವು ಕಾಣಿ ಕಣ್ಣತೆರೆದು ನೋಡೆನ್ನ ಕಟಾಕ್ಷದಿ5 ರೋಗವು ಘನವಯ್ಯಾರೋದನೆಯಾಗಿಹುದೆನಗಯ್ಯಾ ಭವ ರೋಗ ವೈದ್ಯ ನೀನೇಗತಿಯೆಂದಿಗು 6 ಪರಮಪುರುಷ ನಿನ್ನ ಚರಣವ ಮೆರೆಹೊಕ್ಕಿಹೆ ಮುನ್ನ ವರದವಿಠಲದೊರೆ ವರದದಯಾನಿಧೆ7
--------------
ವೆಂಕಟವರದಾರ್ಯರು
ಸಲ್ಲದೊ ಸಲ್ಲದೊ ಸರ್ವರು ಕೇಳಿ ನಮ್ಮ ಪುಲ್ಲನಾಭನ ಬಿಟ್ಟು ಖುಲ್ಲದೇವರ ಪೂಜೆ ಪ ಮಾರಿ ಮಸಣಿ ಜೆಟ್ಟೆ ಜೆಟ್ಟಿಂಗ ಭೇತಾಳ ವರ ಪೋತರಾಜಾ ಬೊಮ್ಮೆಯನು ಬೀರೆದೇವರು ಹಾದಿಬೀದಿಯ ಬಸವಣ್ಣ ಚಾರುದೈವ ಉಚ್ಚಾರವಲ್ಲದೆ ಹೊಲ್ಲಾ 1 ಯಲ್ಲಮ್ಮಾ ಯಕನಾತಿ ಅಡವಿಯ ಗಿಡದಮ್ಮ ಹಳ್ಳದ ತೀರದ ಹಾಳದೇವಿ ಅಮ್ಮ ಜಲದೇವಿ ಜಕ್ಕಮ್ಮನೆಂತೆನಲು ಸೊಲ್ಲು ಬರಿದೆ ವ್ಯರ್ಥವಲ್ಲದೆ ಫಲವಿಲ್ಲ 2 ಬನದಶಂಕರಿ ಕುಳ್ಳಹಟ್ಟಿಗೆ ಕರಿಮಾತೆ ವನಶಕ್ತಿ ಚವಡಮ್ಮ ಜವನಿಕೆ ಬಿನಗ್ಯ ಮಾಳಾದೇವಿ ಮಾಳಿಗೆ ಹಿರಿಯಕ್ಕ ಘನ ಪಿಶಾಚಿಗಳಿಂದ ಒಂದಿಷ್ಟು ಸುಖವಿಲ್ಲ 3 ಖಂಡೇರಾಯ ಮಲಕಚ್ಚಿನ ಗಡಿಗೆಮ್ಮ ಮುಂಡೆ ಮೂಕಾರುತಿ ಬೆಂಚೆಮ್ಮನು ಭಾಂಡಾರದ ದುರ್ಗಿ ಹಿರಿಯಣ್ಣ ಮೈಲಾರ ಹಿರಚು ಗುಂಪಿನ ಬಳಗ ಕಂಡರೇನಿಲ್ಲ 4 ಸುಣ್ಣದ ಕೆಸರು ಹಾಲು ಕೂಡಿ ಕುಡಿದಂತೆ ಅನ್ಯದೇವತೆಗಳ ಭಜನೆ ಹೊಲ್ಲ ಸಿರಿ ವಿಜಯವಿಠ್ಠಲನ ಯುಗಳಪಾದ ಸನ್ನುತಿಸಿದರೆ ಪರಮ ಪದವಿಯಮ್ಮ 5
--------------
ವಿಜಯದಾಸ
ಸಲ್ಲದೋ ಎಲೋ ಮಾಯಿ ಸಲ್ಲದೊ ಎಲೊ ಮಾಯಿ ಎಲ್ಲಾ ಒಂದೆಂಬೋದು ಸೊಲ್ಲನಾಡಲು ಯಮ ಕೊಲ್ಲದಲೆ ಬಿಡಾ ಪ ಉಕ್ಕಿನ ಮಳಿಯ ರೋಮರೋಮದಲಿ ಬಡಿದು ಬೆಸಸಿ ಸದಾ ಗಂಡುತಗಲಿ ಗಟ್ಟಿ ಪಕ್ಕಿಯ ತಿವಿದು ಪಾಶದಲಿ ಬಿಗಿದು ಕಾ ಲಿಕ್ಕಿ ನೆಲಕೆ ವರಿಸಿ ಕೆಂಪಗೆ ಕಾಸಿ ಇಕ್ಕಳದಲಿ ಉಚ್ಚಿ ಕರುಳು ಬೈಲಿಗೆ ಹಾಕಿ ಪೊಕ್ಕಳಿಗೆ ತೇಳಾರು ಪೊಗಿಸಿ ಕಟ್ಟಿ ಕರ ಹೊಯಿದು ನಕ್ಕು ಯಮದೂತರು ನಿನ್ನ ಬಾಧಿಪÀರು 1 ನಿನ್ನ ಕಾಲಲಿ ಒದ್ದೊದ್ದು ಹೆಡಗುಡಿಯನು ಕಟ್ಟಿ ಗಾರ್ಧಭದ ಲದ್ದಿಯೊಳಡಿಗಿಸಿ ಸುತ್ತ ಉರಿಯನಿಕ್ಕಿ ಮದ್ದು ಮೈಯಿಗೆ ಮುಚ್ಚಿ ಮುದದಿಂದ ಬೇಯಿಸಿ ಹದ್ದು ಕಾಗೆಗೆ ನಿನ್ನ ಯೆಡೆ ಮಾಡುವರು ಅ ಮೇಧ್ಯವ ತಿನಿಸುವರು ಅರಗಲ್ಲಿಗೆ ಉದ್ದಿ ಉರುಳ ಬಿಡುವರು ಕೆಂಡದ ಮೇಲೆ ವೊದ್ದಿಸಿ ಪರಿಪರಿ ಭಂಗವಪಡಿಸುವರು 2 ವೈತರಣಿಯೊಳಗದ್ದಿ ಅದ್ರಿಯ ಹರಿ ಮಾತು ಪೊರಡದಂತೆ ಮಾಡಿ ಮುದ್ರೆ ಬಾಯಿಗೆ ಹಾಕಿ ತೂತು ಮೈಯಿಗೆ ತಂತಿಯ ಪೋಣಿಸಿ ಪೂತಿ ಗಂಧದೊಳು ಹೊರಳಿಸಿ ತಡಿಯದೆ ಯಾತಣೆಯಿಂದ ಬಿಸುಟು ಮೊಟ್ಟೆಯ ಕಟ್ಟಿ ಮೂತರ ಕುಡಿಸುವರು ಮೀಸಿಯನು ಕಿತ್ತಿ ಘಾತಿಸಿ ನೋಡುವರು ಮಹಾ ಪಾತಕನೆಂದು ವಿಧಿಯ ಮೇಲೆ ಗುದ್ದೋರು 3 ಹೆಡತಲೆಯಿಂದ ನಾಲಿಗೆಯ ತೆಗೆದು ಕ ಕ್ಕಾಡಿ ಮಾಡಿ ನವನಾರು ಸಂದುಗಳು ಸುಟ್ಟು ಕೈಕಾಲನು ಕಟ್ಟಿಸಿ ಸಾಸವಿ ಸುಣ್ಣ ತೊಡೆದು ಬೋರಿಗೆಯಿಂದ ಬಡಿದು ಬಸಿಗೆ ಹಾಕಿ ಒಡಲೊಳು ಸೀಸವರೆದು ಮರದ ಬೇಲೆಯಲಿ ಹೊಡೆದು ಸರ್ರನೆ ಸೀಳೋರು ಕುರಿಯಂತೆ ಕಡಿದು ಈ ಬಗೆ ಮಾಡೋರು ಕೀವಿನ ಮಡುವಿನೊಳಗೆ ಇಟ್ಟು ತಲೆಮೆಟ್ಟಿ ಕುಣಿವರೊ 4 ಮೂಗನು ಕೊಯಿದು ಕವಡಿಯ ಪೋಣಿಸಿ ಚೆ ನ್ನಾಗಿ ಅತ್ತರಾಟದಲ್ಲಿ ತಲೆಕೆಳಕಾಗಿ ಜೋಲುವಂತೆ ಝೋಲಿಯ ಹೊಡೆದು ಮಾತುಗಾಲೆ ನಿನ್ನ ತೂಗಹಾಕಿ ಬಾಗಿಸಿ ಇನ್ನೊಮ್ಮೆ ಬೊಗಳೆಂದು ಕುಡಕಾಸಿ ವೇಗನೆ ಬರೆ ಇಡುವರು ದು:ಖದ ಸಾಗರ ಉಣಿಸುವರು ಬೆಕ್ಕಿನಂತೆ ಕೂಗಲು ಕೇಳಿ ಸೈರಿಸದಲೆ ಇಪ್ಪರು 5 ಘಾಯವಡೆದಲ್ಲಿ ಇರಿದು ಉಪ್ಪನೆ ತುಂಬಿ ಬಾಯಿವರಳು ಮಾಡಿ ಭತ್ತವ ಥಳಿಸಿ ಕ್ರೂ ರಾಯುಧ ಕಿವಿಗೆ ಬಿರಿಯಿಟ್ಟು ಬಂಧಿಸಿ ಖೋಯೆಂದು ಕೆಡಹಿ ಬೊಬ್ಬಿರಿಯೇ ಚಿಂದಿ ಮಾಡಿ ನಾಯಿಗಳಿಂದ ಕಚ್ಚಿಸಿ ಸೂಜೀಯ ಆಯಕ್ಕೆ ಊರುವರು ಮರಕ್ಕೆ ಕಟ್ಟಿ ಊಯಾಲೆ ಆಡುವರು ಇಪ್ಪತ್ತೆಂಟು ನಾಯಕ ನರಕದಲ್ಲಿಟ್ಟು ತೆಗೆಯುವರು6 ಪರಿ ಬಾಧಿಗೆ ಇರೆ ನರಕ ನರಕದಲ್ಲಿ ಹೂಳಿ ಉಬ್ಬಸಗೈಸಿ ಉರ ಕಾಲದಲ್ಲಿಟ್ಟು ತರುವಾಯ ತೆಗೆದು ಪಾ ಮರ ದುರುಳನೆಂದು ಮಿಡುಕಿಸಿ ಮಹಾನಿತ್ಯ ನರಕದೊಳಗೆ ನೂಕಿ ಕಡೆಗಾಣದಂತೆ ವರಲುತಿರೆ ನಗುವರು ನಿರ್ಮಲವಾದ ಮರುತ ಮತದವರು ಪ್ರತಿದಿನ ಸಿರಿಪತಿ ವಿಜಯವಿಠ್ಠಲನ ನಂಬದ ಮಿಥ್ಯಾ 7
--------------
ವಿಜಯದಾಸ
ಸಲ್ಲಾ ಸಲ್ಲಾ ಭಕುತಿಗೆ ಸಲ್ಲಾ ಸಲ್ಲಾ | ರತಿಯಿಲ್ಲದೆ ಡಾಂಭಿಕನು | ಬೆಲ್ಲದೊಳಗಿನ ಕಲ್ಲಿನಂದದಲಿಹನು | ಪರಿಪಾಕದಲ್ಯವ ದೂರಾಹನು | ಅವನೀಗ ಪ ಗುರುವಿನಂಘ್ರೀಯ ಕಂಡು | ಗುರುತಕ ಬಾರದೆ | ಧರಿಯೊಳು ವ್ಯಭಿಚಾರಿತೆರನಂದದಿ | ಗುರುಭಕ್ತನೆನುಸುವ ಗುರಶೇವೆಘೋದಲುವ | ಗುರುನಾಮ ಜಾಗಿಸುವನು ಯಲ್ಲರೊಳು | ಗುರುದಯ ದೋರಿಸು | ನಿಷ್ಠಿಗೆ | ಹುರುಳಿಲ್ಲ ಮಾನಿಸನು 1 ಎಲ್ಲಾ ಶಾಸ್ತ್ರವ ಕಲೆ ಬಲ್ಲವ ನಾನೆಂದು | ಸೊಲ್ಲು ಸೊಲ್ಲಿಗೆ ತನ್ನ ಹೊಗಳುತಲಿ | ಒಳ್ಳೆವರನು ಕಂಡು ಮನ್ನಿಸಿಕೊಳ್ಳದೆ | ನಿಲ್ಲದೇ ವಾದಿಸುವ ಅವರಾಚು ಸೊಲ್ಲಿಗೆ | ಸೊಲ್ಲಿಗೆ ಕುಂದಿಡುವ | ಆಚಾರ | ಕ್ಷುಲ್ಲಕತನದಿ ನೋಡುವಾ ಅವನಿಗೆ 2 ಘನ ಗುರು ಮಹಿಪತಿ ಸ್ವಾಮಿಯ ಸೂತ್ರದಿ | ಅನುವಾದಾ ಲಾಭಾ ಲಾಭಗಳೆನ್ನುತ | ಜನರಿಗೆ ಹೇಳುವಾತಾ ಹಾದಿತಪ್ಪುವಾ | ಧನ ಮದಾಂಧರ ಮನವಾ | ಹಿಡಿವುತ | ತನುಪರವಶ ಮಾಡುವಾ | ಸಿದ್ಧಾಂತ | ಅನುಭವ ನುಡಿಮರವಾ ಅವನೀಗ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂಸಾರ ಚಿಂತೆ ನಮ್ಮ ಸ್ವಾಮಿ ಶ್ರೀ ಹರಿಗುಂಟು ಸಂಸಾರಿ ಕೃಷ್ಣ ಕರುಣಿಸುವ ಇದರಿಟ್ಟು ಧ್ರುವ ತುತ್ತಾಯತವ ಮಾಡಿ ಹೊತ್ತು ನಡೆಸುವ ಒಡಿಯ ಮತ್ತೆ ಚಿಂತಿಸಲ್ಯಾಕೆ ಹತ್ತು ಕಡೆಯ ಭಕ್ತವತ್ಸಲ ಸ್ವಾಮಿ ಚಿಂತ್ಯಾಕೆನ್ನೊಡಿಯ ಗ್ರಾಸ ಭಕ್ತರೊಡಿಯ 1 ಅನೆ ಮೊದಲಿರುವೆ ಕಡೆ ತಾಂ ನಡೆಸುತಿರಲಿಕ್ಕೆ ಜನಕೊಡ್ಡಿ ಕೈಯ ನಾ ದಣಿಯಲೇಕೆ ಅನುದಿನ ಹರಿವಾಕ್ಯ ಅನುಭವಿಸುತಿರಲಿಕ್ಕೆ ಅನುಮಾನವಿಡಿದು ನಾ ಹೆಣಗಲ್ಯಾಕೆ 2 ಭಾರ ವಹಿಸಿ ಕೊಂಡಿರಲು ಮಾರಪಿತ ಪರಿಪೂರ್ಣ ಸಾರಾಂಶ ವಿತ್ತು ವರಕೃಪೆಯ ಙÁ್ಞನ ಆರ್ಹಂಗವೆನಗ್ಯಾಕೆ ತೋರುತಿದೆ ನಿಧಾನ ತರಳ ಮಹಿಪತಿ ಹೊರೆವ ಗುರು ಕರುಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಂಸಾರ ಸಾಗರವನುತ್ತರಿಸುವಡೆಕಂಸಾರಿ ನಾಮವೊಂದೇ ಸಾಕು ಮರುಳೆ ಪ ಯತಿಯಾಗಬೇಡ ನೀ ವೈರಾಗ್ಯವನೆ ಪಿಡಿದುಸತತ ವ್ರತವ ಮಾಡುವೆನೆಂಬ ಹಮ್ಮು ಬೇಡಶ್ರುತಿಸ್ಮøತಿಯರಿತು ನಡೆವೆನೆಂಬ ಚೇಷ್ಟೆಯು ಬೇಡರತಿಪತಿಪಿತನ ನಾಮವೊಂದೆ ಸಾಕು ಮರುಳೆ 1 ತನುವ ದಂಡಿಸಿ ತುದಿಯ ಕೋಡುಗಲ್ಲಿನ ಮೇಲೆವನಿತೆಯನು ಬಿಟ್ಟು ತಪವಿರಲು ಬೇಡಅನುದಿನವು ನೀರೊಳಗೆ ಮುಳುಗಿ ನಡುಗಲು ಬೇಡವನಜನಾಭನ ನಾಮ ನೆನೆ ಕಂಡ್ಯ ಮರುಳೆ 2 ತೀರ್ಥಯಾತ್ರೆಯ ಮಾಡಿ ಬಹುವಿಧದಲಿ ಬಳಲಿ ಕೃ-ತಾರ್ಥನಾದೆನೆಂಬುವ ಹೆಮ್ಮೆ ಬೇಡಪಾರ್ಥಸಾರಥಿ ಕಾಗಿನೆಲೆಯಾದಿಕೇಶವನಕೀರ್ತನೆಯ ಮಾಡಿ ಮುಕುತಿಯ ಹೊಂದು ಮರುಳೆ 3 * ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ಸಂಸಾರ ಸುಖವಿಲ್ಲ ನಾ ಹಿಂಸೆಯ ತಾಳಲಾರೆ ಪ ಮಾತೆಯ ಮಾಂಸದ ಹೇಸಿಗೆ ಕೋಶದೊಳ್ ಮಾಸ ಒಂಭತ್ತನು ಕ್ಲೇಶದಿಂದ ತಳ್ಳಿದೆ ಈಶ ಲಕ್ಷ್ಮೀಶನು ಕೋಪದಿಂದ ಬೀಸಲು ಕೂಸಾಗಿ ಭೂಮಿಗೆ ವಾಸಕ್ಕೆ ಬಂದೆನು 1 ನಡೆ ನುಡಿಯ ಕಲಿಯುತಲಿ ಹರುಷದಲಿ ಕುಣಿಯುತಲಿ ಹುಡುಗತನ ಕಳೆಯುತಿರೆ ಹರುಷಗಳು ತೊಲಗಿದವು ದುಡಿಕಿನಲಿ ಭ್ರಮಿಸಿದೆನು ಮಡದಿಯಳ ಸಡಗರಕೆ ಭವ ಕಡಲೊಳಗೆ ಮುಳುಗಿ 2 ಕಡುಬಡತನ ಕೊರೆಯುತಲಿದೆ ಕಿರಿಕಿರಿಗಳು ಉರಿಸುತಲಿವೆ ತನುಮನಗಳು ಜರಿಯುತಲಿವೆ ಅಣಕಿಸುವರು ನಿಜ ಜನಗಳು ಪರಮ ಪುರುಷ ಸಿರಿಯರಸನೆ ಮರೆಯದಿರುವೆ ಉಪಕೃತಿಗಳ ದಡಕೆಳೆಯೊ ಪ್ರಸನ್ನ ಹರೇ 3
--------------
ವಿದ್ಯಾಪ್ರಸನ್ನತೀರ್ಥರು
ಸಂಸಾರದೊಳು ಸುಖವಿಲ್ಲ ಪ ದುಂಡನೆ ಬಂದಿಹೆ ದುಂಡನೆ ಹೋಗುವೆ ಹೆಂಡಿರು ಮಕ್ಕಳ ನಡುವೆಯಲಿ ತಂಡ ತಂಡದಿ ಹುಟ್ಟಿ ಕೊಂಡವರು ನಚ್ಚಿ ಕೊಂಡಿವರನು ಪರಗತಿಯ ಕೆಡಿಸದಿರು 1 ಹುಟ್ಟುತ ತರಲಿಲ್ಲ ಹೋಗುತ ವೈಯೊಲ್ಲ ನಟ್ಟ ನಡುವೆ ಬಂದ ಸಿರಿಯಿದು ಕಟ್ಟ ಕಡೆಗೆ ನೀನು ಮಡಿಯಲಿ ಕರುವೆಯ ಬಟ್ಟೆಯ ಶವ ಕಿತ್ತಲಿದು ಬಳ್ಳಿತೆಂಬರು 2 ಎನ್ನಮನೆಯು ಎನ್ನತೋಟ ತುಡಿಗೆಯಿದು ದೆನುತ ಹಿಗ್ಗದಿರು ಇದರೊಳಗೊಂದು ಚಿನ್ನ ಬಾರದು ಕಾಲನವರೆಳೆದೊಯ್ವಾಗ 3 ಘಟ್ಟದ ಕೆಳಗುಷ್ಟು ಬೆಟ್ಟದ ಮರಗಾಯಿ ಹುಟ್ಟಿದ ಬಯಲ ಸೀಮೆಯ ಮೆಣಸು ಬಟ್ಟಾದ ಲವಣ ಶಾಕದ ವೋಲು ಸಂಸಾರ 4 ಜಾಣನಾದರೆ ಪರಗತಿಯ ನೀ ನೊಲುವೊಡೆ ತ್ರಾಣ ವಿರಲಿಕೆ ತೊಡಕಬಿಟ್ಟು ಕಾಣುಸಂಸಾರವ ವಿಷವೆಂದು ತ್ಯಜಿಸಿ ಗೀರ್ವಾಣವಂದಿತ ಲಕ್ಷ್ಮೀರ ಮಣನ ಮೊರೆಹೋಗು 5
--------------
ಕವಿ ಪರಮದೇವದಾಸರು
ಸಂಸಾರವನು ಮಾಡಿ ಸಕಲ ಜನರೂ ಪ ಕಂಸಾರಿ ಶ್ರೀಕೃಷ್ಣ ಕೈಪಿಡಿದು ಸಲಹುವನು ಅ.ಪ. ಬುದ್ಧಿಯೆಂದೆಂಬ ಕನ್ನಿಕೆಯ ಮದುವೆಯ ಮಾಡಿಸದ್ಧರ್ಮದಭಿಮಾನದಿಂದ ಬೆಳಸೀ ||ಶುದ್ಧ ಭಕ್ತಿಗಳೆಂಬ ಮಕ್ಕಳನು ಪಡೆದು ಬಹುಅದ್ಭುತ ಭವಾಬ್ಧಿಯನು ದಾಟಿರಯ್ಯಾ 1 ಚಾರು ಸುಜ್ಞಾನವೆಂಬುವ ಮುದ್ದು ಮಗನ್ಹಡೆದುವೈರಾಗ್ಯವೆಂಬ ಭಾಗ್ಯವನೆ ಬೇಡೀ ||ಸಾರ ಹರಿನಾಮಗಳ ರಸ ಪದಾರ್ಥಗಳುಣಿಸಿಕಾರುಣ್ಯದಲಿ ಬೆಳೆಸಿರಯ್ಯ ಮಕ್ಕಳನೂ 2 ಯಮ ನಿಯಮ ಅಷ್ಟಾಂಗ ಅಣಿಮಾದಿಗಳುಕ್ಷಮೆ ದಮಾದಿಗಳೆಂಬ ಬಂಧು ಬಳಗಾ ||ಮಮತೆ ಪೆರ್ಚಿಸಿಕೊಂಡು ಬೀಗತನ ಮೊದಲಾದಅಮರಿಕೆಯ ಸಂಬಂಧವನೆ ಮಾಡಿರಯ್ಯಾ 3 ಶೀಲ ಸನಕಾದಿಗಳು ಮುನಿ ದೇವತಾದಿಗಳುತಾಳಿ ತಮ್ಮೊಳಗೆ ಸಮ ವಿಷಯರಾಗಿ ||ಆಲಂಪಟಗಳ್ಹಚ್ಚಿಕೊಂಡು ಭವನಿಧಿ ದಾಟಿಸಾಲೋಕ್ಯ ಮೊದಲಾದ ಮುಕ್ತಿಗೈದಿದರೂ 4 ಸತಿ ಸುತರು ಭಾಗ್ಯವೆ ನಿಮಗೆಹರಿಯಿತ್ತ ಕಾಲಕ್ಕು ಹೃದಯದೊಳಗೇ ||ಮರೆಯಲಾಗದು ಹಿಂದೆ ಸಂಸಾರದಾ ಬಾಧೆ ದುರಿತಾರಿ ವ್ಯಾಸ ವಿಠ್ಠಲ ಬ್ಯಾಗ ಒಲಿವಾ 5
--------------
ವ್ಯಾಸವಿಠ್ಠಲರು
ಸಂಸಾರವೆಂದೆಂಬ ಮಾರಿಗೆ ಸಿಲುಕಿದೆಕಂಸಾರಿ ಕರುಣದಿಂದೆನ್ನ ನೋಡಯ್ಯ ಪ ಬಲಿಗಾಯತವಾದ ಕುರಿ ಮೆಲುವಂತೆ ಹೆಡ-ತಲೆ ಮೃತ್ಯುವನರಿಯದೆ ಮತ್ತನಾದೆ 1 ಕಂಡು ಕಂಡು ಪತಂಗ ಕಿಚ್ಚಿನೊಳ್ ಬೀಳ್ವಂತೆಕಂಡ ಕಂಡ ಹೇಯ ವಿಷಯಗಳಿಗೆರಗುವೆ 2 ಸತಿ ಅನ್ಯರರಸುವಂತೆಗತಿ ನೀನಿರಲು ಅನ್ಯರೆ ಗತಿಯೆಂಬೆ 3 ಒಂದು ಮೊಲಕೆ ಆರು ಹುಲಿ ಬಂದಡರುವಂತೆಬಂದೆಳೆವುತಲಿವೆ ಅರಿಷಡ್ವರ್ಗಗಳು 4 ಜೋಗಿಗಾಗಿ ಕೋಡಗ ಪಾಟು ಬಡುವಂತೆಲೋಗರಿಗಾಗಿ ನಾ ತೊಳಲಿ ಬಳಲುವೆ 5 ಶುಕನ ಓದುಗಳಂತೆ ಎನ್ನ ಓದುಗಳಯ್ಯಅಕಟಕಟವೆನಗೆ ಬಂಧಕವಾದುವೊ6 ಮಿಂದು ಮಿಂದು ಆನೆ ಹುಡಿ ಹೊಯ್ದು ಕೊಂಬಂತೆಮಂದಮತಿಯಾದೆ ಕರುಣಿಸೊ ಕೃಷ್ಣ 7
--------------
ವ್ಯಾಸರಾಯರು
ಸಂಸಾರವೆಂಬ ಸರ್ಪದ ಬಾಧೆಯನ್ನು ಕಂಸಾರಿ ಕೇಳು ಸೈರಿಸಲಾರೆ ಇನ್ನು ಪ ಕಚ್ಚಿ ಬಹುಕಾಲ ಕಡಿಮ್ಯಾಗಲೊಲ್ಲದು ಹೆಚ್ಚುತಲೆ ವೋಗುತಿದೆ ಪೇಳಲೇನು ಅಚ್ಯುತನೆ ನಿಮ್ಮ ನಾಮ ಮಂತ್ರದೌಷಧಿಯನ್ನು ಮುಚ್ಚಿ ಕೊಡುಯೆಂದು ಮನದಲ್ಲಿ ನಿಂದು 1 ಮತ್ತೆ ಮಹಾಪಾಪವೆಂಬ ವಿಷ ತಲೆಗೇರಿ ತತ್ತರಿಸಿ ಕಳವಳಗೊಳಿಸುತಲಿದೆ ಉತ್ತಮರಾ ಜ್ಞಾನವೆಂಬುತ್ತಾರವನೆ ಕೊಟ್ಟು ಹತ್ತುನೂರು ನಾಮದೊಡೆಯ ಹರಿಯೆ ಸಲಹೆನ್ನ 2 ಬೆಂದ ದುರ್ವಿಷಯಗಳು ಹಂದಿನಾಯ್ಗಳಿಗುಂಟು ಎಂದು ದೊರೆವುದೋ ದ್ವಿಜಾಗ್ರಕುಲವು ಎಂದಾದರೂ ಒಮ್ಮೆ ಬಯಸುವಂತಿ ಭಕುತಿ ಕೊಡು ತಂದೆ ಕದರುಂಡಲಗಿ ಹನುಮಯ್ಯನೊಡೆಯಾ 3
--------------
ಕದರುಂಡಲಗಿ ಹನುಮಯ್ಯ
ಸಹಿಸಲಾರೆನೊ ವ್ಯಥೆಯ ಪವಮಾನ ವಂದಿತನೆ ಪ. ಅಹೋರಾತ್ರಿಲಿ ಮನ ಕಳವಳ ಪಡುವದೊ ಆಹಾರ ನಿದ್ರೆಗಳು ತೊಲಗಿ ಪೋದವು ದೇವಾ ಸಹಿತಾಗಿ ತಾಯಿಯ ಸರ್ವಬಾಂಧವರೆಲ್ಲಾ ಸ ನ್ನಿಹಿತರಾಗಿ ಎನ್ನ ಬಳಗ ಇದ್ದರೂ ಕೂಡ ಅ ಸಹ್ಯವಾದ ದುಃಖ ದೂರಾಗಲಿಲ್ಲವೊ ಆಹಾ ಇರಲಾರೆ ಇರಲಾರೆ ಭಕ್ತ ಜನರ ಬಿಟ್ಟು ಮಹಿದಾಸ ಮೂರ್ತಿಯ ನಿನ್ನ ಭಕ್ತರ ಪಾದ ಸಹವಾಸ ಸುಧೆಯ ಸುರಿಸಿ ಬಲುಪರಿ ಅಹಿಭೂಷಣ ತಾತ ಕಾಳಿಮರ್ಧನಕೃಷ್ಣಾ 1 ಕರ್ಮ ಅಡ್ಡಬಂದು ಎನ್ನ ಘಾಸಿ ಮಾಡುತಲಿದೆ ಅರಿಯದಾದೆನೊ ದೇವಾ ಬ್ಯಾಸರವಾಗಿದೆ ಜನ್ಮವು ಮಹಿಯೊಳು ಸಾಸುವೆ ಮಾತ್ರವು ಸ್ವತಂತ್ರವಿಲ್ಲದಿಹ ದೋಷಿಜೀವನ ತಾನೇನು ಮಾಡಬಲ್ಲ ಸಾಸಿರನಾಮಗುರು ಕಾಳೀಮರ್ಧನಕೃಷ್ಣ2 ಜಲದ ಮಧ್ಯದಿ ಇರುವ ಮೀನವನು ಕಾವ ಮಳಲಿನೊಳಗೆ ತೆಗೆದು ಬಿಸುಟಿದಂತಾಯಿತು ಹೊಳೆಯ ಈಜುವೆನೆಂದು ಬಲು ಹೆಮ್ಮೆಯಿಂದಲಿ ಸೆಳೆವಿಗೆ ಸಿಕ್ಕು ಬಿದ್ದ ಮನುಜನ ತೆರನಾಯ್ತು ಬಲವಾಗಿ ಘಾಯವ ಪೊಂದಿದ ಸ್ಥಾನದಲ್ಲಿ ಸಲೆ ಕಾದ ಆಯಸ ಸೆಳೆಯನೆಳೆದಂತಾಯ್ತು ಅಳಲನು ನಿನಗಲ್ಲದೆ ಇನ್ನಾರಿಗೆ ಪೇಳಲೋ ಕೊಳಲಧರನೆ ಗುರು ಕಾಳಿಮರ್ಧನಕೃಷ್ಣಾ 3 ನಿನ್ನ ಭಕ್ತರಾ ಮಾತು ಯನಗದು ಮನ್ನಣೆ ನಿನ್ನ ಭಕ್ತರ ಕಥಾಶ್ರವಣ ಯನ್ನ ಕರಣಾಭರಣ ನಿನ್ನ ಭಕ್ತರ ಸಮೂಹ ಎನ್ನಯ ಕಣ್ಬೆಳಕು ನಿನ್ನ ಭಕ್ತರ ಪಾದದೂಳಿಯೆ ಶಿರೋಭೂಷಣವೆನೆಗೆ ನಿನ್ನ ಭಕ್ತರ ಆಶೀರ್ವಾದವೇ ಸರ್ವ ಬಲವೈ ಇನ್ನು ಈ ಬುದ್ಧಿಯು ಎಂದಿಗೂ ಕೆಡೆದಂತೆ ಚೆನ್ನಾಗಿ ರಕ್ಷಿಸೊ ಗುರು ಕಾಳಿಮರ್ಧನಕೃಷ್ಣಾ 4 ಪರಾಧೀನನೆಂದು ಪರಿಪರಿಯಿಂದಲಿ ಕೊರಗಿಸುವುದು ನಿನಗೆ ಎಂದಿಗೂ ಸರಿ ಅಲ್ಲ ಪರಾಧೀನನು ಅಹುದು ಪರತಂತ್ರನಾನಹುದು ಸರ್ವತಂತ್ರ ಸ್ವತಂತ್ರ ನೀನೆಂಬುದು ಸಿದ್ಧ ಶರಣಾಕರ ಆದರಿಷ್ಟು ಮಾತ್ರ ಕೇಳೋ ಸತಿ ತನ್ನಧೀನಳೆಂದು ಶಿರಶಿಡಿಯುವ ಊರಿ ಬಿಸಿಲಿನೊಳು ನಿಲ್ದಪನೆ ಸರಿಬಂದಿದ್ದು ಮಾಡೋ ಇದರ ಮೇಲಿನ್ನು ದೇವಾ ಉರಗಶಯನ ಗುರು ಕಾಳೀಮರ್ಧನಕೃಷ್ಣಾ 5 ನೀನು ನುಡಿಸಿದಂತೆ ನುಡಿದು ನುಡಿವೆನಯ್ಯ ನಿನ್ನ ಚಿತ್ತವು ಗುರು ಕಾಳೀಮರ್ಧನಕೃಷ್ಣಾ
--------------
ಕಳಸದ ಸುಂದರಮ್ಮ
ಸಾಕಲಾರದಿರೆ ಎನ್ನ ಯಾಕೆ ಪುಟ್ಟಿಸಿದ್ಯೊ ಹರಿಯೆ ಪ ಬೇಕು ಬೇಡದಿದ್ದರೆ ನಿನಗೆ -----ಯುಗ ಜನರೊಳೆನ್ನಾ ಅ.ಪ ಹಿಂದಿನಿಂದ ಬಂದಾ ದೋಷಗಳಿಂದ ನಾನು ಬಹಳ ಬೆಂದು ಬಳಲುತ ನಿನ್ನ ಪಾದವ ಹೊಂದಿ ನಿನ್ನ ಸೇರೆ ಬಂಧು ಬಳಗ ನೀನೆ ಇನ್ನು ಎಂದು ಮೊರೆಯ ಇಡಲೂ ತಂದೆ ತಾಯಿಗಳು ಕಂದನ ಪೊರೆದಂತೆ ಮಂದರಧರ ಶ್ರೀ ಮಾಧವ ಕೃಷ್ಣಾ 1 ವಸುಧೆಯೊಳಗೆ ನಿನ್ನ ಬಿಡದೆ ಮನಸಿನಲಿ ಸ್ತುತಿಸುವಾ ಪಶುಪತಿ ಪಾಲಕನೆ ಎನ್ನ ಪಾಲಿಸೊ ಕೈ ಹಿಡಿದೂ ಶಿಶುವಿನಂದ ನಿನ್ನ ನಿಜ ಸೇವಕ ಜನರಂತೆ ಸೂನುವು ಎನಗೆ ಅಡಗಿಸಿ ರಕ್ಷಿಸಿದರೆ ವಸುಧೆಯೊಳಗೆ ಎನ್ನ 2 ಎಲ್ಲ ಜನಕೆ ಇನ್ನು ಕರ್ತನಲ್ಲವೇನೊ ನೀನು ಎಲ್ಲರಂತೆ ಎನ್ನಾ ಕರುಣಿಸಿ ಯಾಕೆ ನೋಡವಲ್ಲೆ ಹೊಲ್ಲನೊ ನಾ ನಿಮಗೆ ನಿಮ್ಮ ಧ್ಯಾನದಲ್ಲಿರುವನಲ್ಲೊ ಭಲೆ `ಹೆನ್ನೆ ವಿಠ್ಠಲನೆ' ನೀನಿಷ್ಟು ಭಾಗ್ಯವಂತ ನಾಗಿ ಬಡವನ ನೋಡಿ 3
--------------
ಹೆನ್ನೆರಂಗದಾಸರು
ಸಾಕು ಬಿಡು ಭಾವೆ ಸಾಕು ಬಿಡು ನಿನ್ನ ಹೋಕೆ ಮಾತುಗಳೆಷ್ಟುಸಾಕು ಬಿಡು ಪ ಮದಗಜಗಮನೆ ನೀ ಒದೆವೋದ್ಯಾತಕೆ ಕಲಿತೆಬದಿಯಲಿದ್ದವರು ಇದಕೆ ನಗರೇನೆ ಸಖಿಯೆ ಬದಿಯಲಿದ್ದವರು ನಗರೇನೆ ನಿನ್ನ ಬುದ್ದಿಅದ್ಬುತವಾಗಿ ಈಗ ಬೆಳೆದಿದೆ ಸಖಿಯೆ1 ಸುದತಿ ಸುಭದ್ರಾಗೆ ಕದನ ಕಠೋರಿ ಸರಿಯೇನ ಸಖಿಯೆ2 ಎತ್ತಿ ಒಯ್ದವ ನಿನ್ನ ಅತ್ಯಂತ ಸುಖಿಸಿದ ಲತ್ತಿತಿಂದೊಬ್ಬ ಬಳಲುವಲತ್ತಿತಿಂದೊಬ್ಬ ಬಳಲುವ ನಿನ್ನ ನಡತೆವಿಸ್ತಾರವಾಗಿ ಈಗ ತಿಳಿಸಿದೆ ಸಖಿಯೆ3 ತಾಯಿ ಮಕ್ಕಳೊಳು ನ್ಯಾಯವನಿಕ್ಕುವಿಮಾಯಗಾರುತಿಯೆ ಬಲು ಮೂದೇವಿಮಾಯಗಾರುತಿಯೆ ಬಲು ಮೂದೇವಿ ನಿನಕಂಡುಬಾಯಿ ಬಿಡುತಾರೆ ಜನರೆಲ್ಲ ಸಖಿಯೆ4 ಖ್ಯಾತ ರಾಮೇಶ ಈಗ ಈ ಮಾತೆಲ್ಲಿ ಕಲಿತೆಂದ ಚಾತುರ್ಯದಲ್ಲಿ ಚಪಲನೆಚಾತುರ್ಯದಲ್ಲಿ ಚಪಲ ಚನ್ನಿಗನೆಂಬೊಪಾರ್ಥನು ನಿನಗೆ ಗುರುವೇನ ಸಖಿಯೆ 5
--------------
ಗಲಗಲಿಅವ್ವನವರು