ಒಟ್ಟು 3030 ಕಡೆಗಳಲ್ಲಿ , 117 ದಾಸರು , 2252 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕುಲ ಕುಲ ಕುಲವೆನ್ನುತಿಹರು ಪ ಕುಲವ್ಯಾವುದು ಸತ್ಯಸುಖವುಳ್ಳ ಜನರಿಗೆ ಅ ಕೆಸರೊಳು ತಾವರೆ ಪುಟ್ಟಲು ಅದ ತಂದುಬಿಸಜನಾಭನಿಗರ್ಪಿಸಲಿಲ್ಲವೆಹಸುವಿನ ಮಾಂಸದೊಳುತ್ಪತ್ತಿ ಕ್ಷೀರವವಸುಧೆಯೊಳಗೆ ಭೂಸುರರುಣಲಿಲ್ಲವೆ1 ಮೃಗಗಳ ಮೈಯಲಿ ಪುಟ್ಟಿದ ಕತ್ತುರಿಯತೆಗೆದು ಪೂಸುವರು ದ್ವಿಜರೆಲ್ಲರುಬಗೆಯಿಂದ ನಾರಾಯಣನ್ಯಾವ ಕುಲಅಗಜ ವಲ್ಲಭನ್ಯಾತರ ಕುಲದವನು 2 ಆತ್ಮ ಯಾವ ಕುಲ ಜೀವ ಯಾವ ಕುಲತತ್ತ್ವೇಂದ್ರಿಯಗಳ ಕುಲ ಪೇಳಿರಯ್ಯಆತ್ಮಾಂತರಾತ್ಮ ನೆಲೆಯಾದಿಕೇಶವನುಆತನೊಲಿದ ಮೇಲೆ ಯಾತರ ಕುಲವಯ್ಯ 3
--------------
ಕನಕದಾಸ
ಕುಲವಂತನೇ ನೀನು ಎಲೋ ಪರಮಾನಂದ ಕುಲಹೀನನೇ ನಾನು ಪೇಳೆಲವೊ ಸ್ವಾಮಿ ಪ ಹೊಲೆಯ ಪೆದ್ದಯ್ಯಗೆ ಒಲಿದವನ ಆಳಾದಿ ಕುಲದಿ ಮಾದಿಗರ್ಹರಳಯ್ಯನ ಮನೆಲುಂಡಿ ಚೆಲುವ ಕೂಸಿನ ಕೊರತೆ ಸಲಿಸಿದಿ ಬಲುಹಿತದಿ ಮಲಿನಸೀರೆಯ ನಿನ್ನ ತಲೆಗೆ ಸುತ್ತಿಕೊಂಡಿ 1 ಡೊಂಬಿತಿಯ ಗುಡಿಸಿಲಲಿ ಸಂಭ್ರಮದಿ ಮಲಗಿದಿ ಶಂಭೋ ಕುಣಿದೆಲೋ ಕುಂಬಾರಗೊಲಿದು ಸಾಂಬ ನೀ ನಡ ಪೊತ್ತು ಇಂಬು ಸುಡುಗಾಡು ನಿನಗಂಬುಧಿಧರನೆ 2 ಪುಲಿಚರ್ಮ ಹಾಸಿಕೊಂಡ್ಹೊಲಸು ಚರ್ಮುಟ್ಟಿರುವಿ ತಲೆ ಬುರುಡೆ ಕೊರಲಿಗೆ ಮಾಲೆ ಧರಿಸಿರುವಿ ಎಲೊ ದೇವ ಇನಿತಿರ್ದು ಕುಲವನೆಣಿಸುವಿ ನಿನ್ನ ಒಲವು ಬೇಡುವರಿಗೆ ಶ್ರೀರಾಮಸಖನೆ 3
--------------
ರಾಮದಾಸರು
ಕುಶಲವರೆ ಲಾಲಿಸಿರಿ ಕಥೆಯನೆಲ್ಲವ ಪೇಳ್ವೆ ಕುಶಲಮತಿಗಳೇ ನಿಮ್ಮ ಕೌತುಕವು ಸಹಜವಲೆ 1 ಬಿಸರುಹಾಕ್ಷನ ಚರಿತೆ ಚಿತ್ರತರಮಹುದಲ್ತೆ ಉಸುರುವೆನು ಪೂರ್ವ ವೃತ್ತಾಂತವನು ನಾ ಮೊದಲೆ 2 ಅಸುರರುಪಟಳದಿಂದ ವಸುಧೆ ಭಾರವು ಹೆಚ್ಚೆ ಬಿಸಜಭವಮುಖ ಸುರರ ಮೊರೆ ಕೇಳಿ ಮನ ಮೆಚ್ಚೆ 3 ಬಿಸಜನೇತ್ರನು ತಾನು ದಶರಥನ ಸುತನೆನಿಸಿ ವಸುಮತಿಯಲುದಿಸಿ ಸಜ್ಜನರ ಸಂತಸಗೊಳಿಸಿ 4 ಹಸುಳೆತನದಲಿ ಅಸುರೆ ತಾಟಕಿಯ ಸಂಹರಿಸಿ ಕುಶಿಕಸುತನಧ್ವರವ ಕಡು ರಕ್ಷಣೆಯ ಮಾಡಿ 5 ಅಶಮವಾಗಿದ್ದಹಲ್ಯೆಯ ತಾನುದ್ಧರಿಸಿ ಅಸಮಾಕ್ಷಚಾಪವನು ಲೀಲೆಯಲಿ ತುಂಡರಿಸಿ 6 ಕರ ಪದ್ಮವನು ಗ್ರಹಿಸಿ ಎಸೆವೆರಡು ರೂಪದಲಿ ಘನಲೀಲೆ ಪ್ರಕಟಿಸಿ 7 ಕುಶಲದಿಂ ಯುವರಾಜ ಪಟ್ಟಕ್ಕೆ ಸನ್ನಾಹ ವೆಸೆದಿರಲು ವಿಧಿಲೀಲೆಯೇನೆಂಬನಾಹ 8 ದಶರಥನ ಕಿರುಮಡದಿ ಪಡೆದ ವರಕನುವಾಗಿ ಸತಿ ಅನುಜ ಸಹಿತನಾಗಿ 9 ವಸುಮತಿಯೊಳವತರಿಸಿ ಬಂದ ಕಾರ್ಯವ ನೆನೆದು ಅಸಮ ನಾಟಕ ಸೂತ್ರಧಾರಿ ಅಡವಿಗೆ ನಡೆದು 10 ಎಸೆವ ಗಂಗೆಯ ದಾಟಿ ಗುಹನನ ಧನ್ಯನಗೈದು ಋಷಿ ಭರದ್ವಾಜರಿಂ ಸತ್ಕಾರವನು ಪಡೆದು 11 ವಸುಮತೀಧರ ಚಿತ್ರಕೂಟದಲಿ ನಿಂತಿರಲು ಅಸಮ ಭಕ್ತವರೇಣ್ಯ ಭರತ ತಾನೈತರಲು 12 ಬಿಸಜಾಂಘ್ರಿ ಸಂಪೂತ ವರ ಪಾದುಕೆಗಳನಿತ್ತು ಕುಶಲಮತಿ ತಾನವನ ಕಳುಹಿ ಯೋಚಿಸಿ ಮತ್ತು 13 ಪೆಸರಾಂತ ದಂಡಕಾ ವನ ಪ್ರವೇಶವ ಮಾಡಿ ಅಸುರರನೇಕರು ಅಂತಕನ ಬಳಿದೂಡಿ14 ಋಷಿವರ್ಯ ಶರಭಂಗಗೀಕ್ಷಣದಿ ಸುಗತಿಯನು ಹಸನಾಗಿ ಕರುಣಿಸಿದ ಬಳಿಕ ಕುಂಭೋದ್ಭವನು 15 ಒಸಗೆಯಿಂದಿತ್ತ ದಿವ್ಯಾಸ್ತ್ರಂಗಳ ಸಂಗ್ರಹಿಸಿ ಪಸರಿಸಿಹ ವಿಲಸಿತದ ಪಂಚವಟಿಯಲಿ ನೆಲಸಿ 16 ಒಸಗೆಯಿಂದಿರೆ ಬಂದ ಶೂರ್ಪನಖಿಗತಿಭಂಗ ವೆಸಗಿ ಸೋದರನಿಂದ ಶೋಭಿಸೆ ಶುಭಾಂಗ 17 ಮಾಯಾ ಮೃಗಾಕಾರ ದಸುರ ಮಾರೀಚನಂ ಸಂಹರಿಸಿ ರಘುವೀರ 18 ಅಸಮ ಸೋದರ ಸಹಿತ ಆಶ್ರಮಕ್ಕೈತಂದು ದೆಸೆದೆಸೆಯೊಳರಸೆ ತನ್ನರಸಿ ಕಾಣದಿರಲು 19 ಹುಸಿವೇಷದಿಂ ಬಂದ ಖಳ ಕುಲಾಗ್ರಣಿಯಿಂದ ಶಶಿಮುಖಿಯು ಹಗರಣವಾಗಿರಲು ನಿತ್ಯಾನಂದ 20 ದೆಸೆಗೆಟ್ಟವನ ಪರಿಯಲತಿಶಯದಿ ಶೋಕಿಸುತ ದೆಸೆದೆಸೆಯೊಳರಸುತ್ತಾ ಬಸವಳಿದು ತಾ ಬರುತ 21 ಎಸೆವವರ ಋಷ್ಯಮೂಕಮತಂಗಾಶ್ರಮದಿ ಬಿಸಜಾಪ್ತಸುತನ ಕಂಡವನೊಡನೆ ತಾ ಮುದದಿ 22 ಉಸುರಿ ವಾಲಿಯ ವಧೆಗೈವೆನೆಂದಭಯವನು ಎಸೆವ ವಿಲಸಿತ ಮಹಿಮ ಕರಿಗಿರೀಶನು ತಾನು 23
--------------
ವರಾವಾಣಿರಾಮರಾಯದಾಸರು
ಕುಸುಮ ಗಂಧಿನಿ ಸೀತೆಯೆ ಪ ಮಂಜೀರ ಭೂಷೆಯೆ ಮಂಜುಸುವಾಣಿಯೆ ಕಂಜನಾಭ ರಾಮ ಭಾಮೆಯೆ ಮಂಜುಳಾಂಗಿಯೆ 1 ಅಂಬುಜಪಾಣಿಯೆ ಅಂಬುಜನಾಭಿಯೆ ಬಿಂಬಫಲ ಸದೃಶಾನನೆ ಕಂಬುಕಂಧರೆ 2 ಕ್ಷೋಣೀಷ ಸನ್ನುತೆ ವಾಣೀಶ ವಂದಿತೆ ಏಣ ನೇತ್ರೆ ಶ್ರೀರಾಮ ಸುಪ್ರಾಣನಾಯಕಿ 3 ಸುರರಚಿರ ಕುಂತಲೆ ಪರಿಜನ ವತ್ಸಲೆ ನಿರುಪಮ ವಾಣಿಸುನ್ನುತೆ ಪ್ರಣವಾಂಚಿತೆ 4 ಮಾನವ ಸೇವ್ಯಯೆ ಧೇನುಪುರಿಕಾಂತ ಸುಪ್ರಿಯೆ ರಾಮವಲ್ಲಭ 5
--------------
ಬೇಟೆರಾಯ ದೀಕ್ಷಿತರು
ಕೂಗಿತು ತಾಮ್ರದ ಚೂಡ ಪರ ಇಲ್ಲ್ಲೆಂದು ಪ ಪಕ್ಕಗಳೆರಡು ಚಪ್ಪರಿಸಿ ಡಂಗುರುವ ಹೊಯ್ಯೆ ಸೂಕ್ಕಿದವರ ಎದೆ ಜರ್ಝರಿಸೆ ರೆಕ್ಕಿಯ ಮುಖವೆತ್ತಿ ಹರಿಸರ್ವೋತ್ತಮನೆಂದು ಕೊಕ್ಕಟೆ ಕೊಕ್ಕಟೆ ಕೊಕ್ಕಟ್ಟೆ ಕೋ ಎಂದು1 ಒಂದು ಝಾವದಿ ಓಂಕಾರನೆಂದು ಕೂಗೆ ಇಂದಿರಾಪತಿ ವಿಧಿಜನಕನೆಂದೂ ಸಂದೇಹಪಡಬೇಡಿ ಸಕಲಾಂತರ್ಯಾಮಿ ಶ್ರೀ ಬಿಂದುಮಾಧವನಲ್ಲದಿಹಪರವಿಲ್ಲವೆಂದು 2 ಎರಡು ಝಾವದಿ ಪುರುಷೋತ್ತಮನೆಂದು ಗರುಡಾಚಲ ನರಸಿಂಹನೆಂದು ಮೂರನೆ ಝಾವಕ್ಕೆ ವೀರನಾರಾಯಣ ಹÀರಿಗಯಾಗದಾಧರನಲ್ಲದಿಲ್ಲವೆಂದು3 ಏಕೋ ನಾರಾಯಣ ದೇವನೆಂದು ಗೋಕುಲಪತಿಯಲ್ಲದಿಹಪರ ಇಲ್ಲವೆಂದು 4 ಯಾಮ ಆರರೊಳು ವ್ಯಾಸಮೂರ್ತಿ ಎಂದು ರೋಮಕೋಟಿ ಬ್ರಹ್ಮರುದ್ರರೆಂದು ಸಾಮಗಾಯನ ಕಾವೇರಿ ರಂಗೇಶ ಸ್ವಾಮಿ ಅಳಗಿರಿ ತಿಮ್ಮನಲ್ಲದಿಲ್ಲವೆಂದು 5 ಏಳು ಝಾವದಿ ವೇಣಿಮಾಧವನೆಂದು ಮೇಲಗೋಟೆ ಚಳ್ಳಾಬಳ್ಳನೆಂದು ಶ್ರೀಲೋಲ (ಆಯೋಧ್ಯಾ) ರಘುರಾಮ ಗಂಡಕಿ ಪರ ಇಲ್ಲೆಂದು6 ಶ್ವೇತ ವರಾಹನೆಂದು ಮಾವ ಮರ್ದನ ಜನಾದರ್Àನನೆಂದು ಶ್ರೀ ಉಡುಪಿಯ ಕೃಷ್ಣ ವಿಜಯವಿಠ್ಠಲ ತಿಮ್ಮ ದೇವನಲ್ಲದೆ ಬೇರೆ ಇಹಪರ ಇಲ್ಲವೆಂದು 7
--------------
ವಿಜಯದಾಸ
ಕೂಗಿದರು ಒಳಗೇ ಕದವ ತೆಗೆಯಂದು ಪ ಸತಿಯರು ತಾವು ಆಗ ಆನು- ನಿನ್ನ ನಾವು ಬಲ್ಲೆವು 1 ಮೆಲ್ಲನÉ ಬಾರೆ ನೀ ನಿಜವ ಮಾಡೀಗ 2 ಮನೆಯೊಳಿರಲು ' ಮಾರಜನಕನೆಂಬೊದು ಬಲ್ಲೆನೆ 3 ಇನ್ನು ನೀರೆ ನಿನ್ನ ಗಂಡನೆ ನಾನು ಓಯನ್ನ ಪ್ರಾಣಸಖಿ ಬೇಗ ಬಂದು ಕದವ ತೆಗೆ ಈಗ 4 ಎಲ್ಲಿಯವನು ಭಂಡತನ ಬಿಡುಇನ್ನು 'ಓಹೆನ್ನೆ ವಿಠಲ’ ಮಾಡುವದು ಇದು ರೀತಿಯಲ್ಲವು 5 ಚಂಡಿನಾಟ ಬಾ ಸಭಯದಿ ಓಯನ್ನ ಪ್ರಾಣಸಖಿ ಚಲುವೆ ಹೊರಗೆ ಬಾರದಿರುವೇ 6 ಅಷ್ಟು ಜಗದಲ್ಲಿ ಬಲ್ಲಿ 'ಓಹೆನ್ನೆ ವಿಠಲ’ ಚೇಷ್ಟಿಮಾಡದಲೆ ನಡಿಯಯ್ಯಾ 7 ದೇವರನ್ನು ಕೂಡಿತೆ ಓಯನ್ನ ಪ್ರಾಣಸಖಿ ಈಗ ಆಣಿ ಮಾಡಿಸಿ ಕೇಳು 8 ಅತ್ತಿಯನ್ನು ಕೂಡಿದವನೆ ಉತ್ತಮನೆ ನೀನು ಇನ್ನು ಎತ್ತಲ ಆಣೆಯು ನಿನಗೇ 'ಓ ಹೆನ್ನೆ ವಿಠಲ’ ಸತ್ಯವಂತನಾಗಿ ಹೇಳುವಿ 9 ಕಾಕು ಹೆಣ್ಣು ನಿನಗೆ ಥರವೆ ಓಯನ್ನ ಪ್ರಾಣಸಖಿ ಕಣ್ಣಿಲೆ ನೋಡದೆ ಕರಿಯೆ 10 ಪರಮ ಪರುಷನುಳ್ಳವರು ಪರಮಪುರುಷನ ಪಡೆವಂಥ ದೂರನಡಿಯೆ ಇಲ್ಲಿ ಎನಯ್ಯ 11 ಇನ್ನು ಸ್ವಲ್ಪ ನಿನಗೆ ತಿಳಿಯದೆ ಓಯನ್ನ ಪ್ರಾಣಸಖಿ ಸಾಗಿ ಬಂದು ನೋಡೆ ಬೇಗನೆ 12 ಏನು ಆಶ್ವರ್ಯವು ನಿನಗೆ ನಡಿಯಯ್ಯಾ 13 ಇನ್ನು ನಿನಗೆ ಇನ್ನಾದರೆ ಮನಸಿಗೆ ತಾರ 14 ನಿನಗೆ ಅರುವು ಇರಲು ಸೋಗು ಮಾಡಿನಡಿಯಯ್ಯಾ 15 ತಿಳಿಸುವೆನು ಮನಸು ಇಟ್ಟು ಮನ್ನಿಸೆನ್ನನು ಓಯನ್ನ ಪ್ರಾಣಸಖಿ ಮಾಡಬೇಡ ಹೀಗೆಯನ್ನನು 16 ಮರ್ಮವು ತಿಳಿಯದೆ 'ಒಹೆನ್ನೆವಿಠಲ’ ಮೋಸಮಾಡ ಬಂದಿ ನಡಿಯಯ್ಯಾ 17 ಹೇಳಿ ಎಲ್ಲರು ಹಿಗ್ಗುವ ವೇಳ್ಯೆದಿ 'ಓ ಯನ್ನ ಪ್ರಾಣಸಖಿಕೇಳಿದ ಮಾತನು ಹೇಳುವೆ 18 ಬಂದು ವಾಸವಾಗಿ ಹೇಸದೆ ಏನೆಂದು ಬಂದೆ 19 ಮಾನ ಪತಿಯೆಂಬ ಮಾರ್ಯದೆ ಓಯನ್ನ ಪ್ರಾಣಸಖಿ ಮನಸಿನಲ್ಲಿ ಏನು ಇಲ್ಲವು 20 ಮುನಿವಳಗೇ ಮಾನಪತಿ ಪುರುಷನೇನಯ್ಯಾ 21 ಮಾಡಿಕೊಳ್ಳದವನಿಗೆ ಧೈರ್ಯ ವಿಲ್ಲವೆ 22 ಅಂಜಿಕೆ ಏನಯ್ಯಾ 'ಓಹೆನ್ನೆ ವಿಠಲ’ ಧೈರ್ಯವು ಯಾಕೆ ನಿನಗಯ್ಯ 23 ಬಂದು ಇಷ್ಟು ತಡ ನಿನ್ನ ಗಂಡನೆನಾನು24
--------------
ಹೆನ್ನೆರಂಗದಾಸರು
ಕೂಗೆಲೋ ಮನುಜ ಕೂಗೆಲೋ ಪ ಸಾಗರಶಯನನೆ ಜಗಕೆ ದೈವವೆಂದು ಅ ಮಾಧವ ಕೃಷ್ಣ ಸಚ್ಚಿದಾನಂದೈಕ ಸರ್ವೋತ್ತಮ ಸಚ್ಚರಿತ ರಂಗ ನಾರಾಯಣ ವೇದ ಮತ್ಸ್ಯ ಮೂರುತಿಯೆಂದು1 ನರಹರಿ ಮುಕುಂದ ನಾರಾಯಣ ದೇವ ಪರಮ ಪುರುಷ ಹರಿ ಹಯವದನ ಸಿರಿಧರ ವಾಮನ ದಾಮೋದರ ಗಿರಿ ಕೂರ್ಮ ಮೂರುತಿಯೆಂದು2 ಪುರುಷೋತ್ತಮ ಪುಣ್ಯಶ್ಲೋಕ ಪುಂಡರೀಕ ವರದ ಅಪಾರ ಸದ್ಗುಣನಿಲಯ ಮುರುಮರ್ದನ ಮಂಜು ಭಾಷಣ ಕೇಶವ ನಿರ್ಮಲ ದೇವ ಭೂವರಾಹಮೂರುತಿ ಯೆಂದು 3 ನಿಗಮವಂದಿತ ವಾರಿಜನಾಭ ಅನಿರುದ್ಧ ಅಪ್ರಾಕೃತ ಶರೀರ ಸುಗುಣ ಸಾಕಾರ ಜಗದತ್ಯಂತ ಭಿನ್ನ ನರಮೃಗ ರೂಪಾನೆಂದು 4 ವಟಪತ್ರಶಯನ ಜಗದಂತರ್ಯಾಮಿ ಕೌಸ್ತುಭ ವಿಹಾರ ತಟಿತ್ಕೋಟಿ ನಿಭಕಾಯ ಪೀತಾಂಬರಧರ ನಿಟಿಲಲೋಚನ ಬಾಲವಟು ಮೂರುತಿಯೆಂದು5 ವಿಷ್ಣು ಸಂಕರುಷಣ ಮಧುಸೂದನ ಶ್ರೀ ಕೃಷ್ಣ ಪ್ರದ್ಯುಮ್ನ ಪ್ರಥಮ ದೈವವೆ ಸಾರಥಿ ರಾಮ ಅಚ್ಯುತಾಧೋಕ್ಷಜ ಸೃಷ್ಟಿಗೊಡೆಯ ಭಾರ್ಗವ ಮೂರುತಿಯೆಂದು 6 ಇಭರಾಜ ಪರಿಪಾಲ ಇಂದಿರೆಯರಸ ನಭ ಗಂಗಾಜನಕ ಜನಾದರ್Àನನೆ ವಿಭುವೇ ವಿಶ್ವರೂಪ ವಿಶ್ವನಾಟಕ ಋ ಷಭ ದತ್ತಾತ್ರೇಯ ಶ್ರೀ ರಾಮಮೂರುತಿಯೆಂದು 7 ವಾಸುದೇವ ರಂಗ ನವನೀತ ಚೋರ ಜಾರ ಗೋಕುಲವಾಸಿ ಗೋವಳರಾಯ ಶ್ರೀಧರ ಏಕಮೇವ ಶ್ರೀ ಕೃಷ್ಣ ಮೂರುತಿಯೆಂದು 8 ಹೃಷಿಕೇಶ ಪರಮಾತ್ಮ ಮುಕ್ತಾಮುಕ್ತಾಶ್ರಯ ಭಂಜನ ಕುಸುಮ ಶರನಯ್ಯ ಶಾರ್ಙಧರಾಚಕ್ರಿ ವಿಷಹರ ಧನ್ವಂತ್ರಿ ಬೌದ್ಧ ಮೂರುತಿಯೆಂದು 9 ಸರ್ವಮಂಗಳ ಸರ್ವಸಾರ ಭೋಕ್ತ ಸರ್ವಾಧಾರಕ ಸರ್ವ ಗುಣಗಣ ಪರಿಪೂರ್ಣ ಸರ್ವ ಮೂಲಾಧಾರ ಕಲ್ಕಿ ಮೂರುತಿಯೆಂದು 10 ಪರಿ ಅಪಾರ ಜನ್ಮ ಬೆಂಬಿಡದಲೆ ಸಪ್ತ ದ್ವೀಪಾಧಿಪ ನಮ್ಮ ವಿಜಯವಿಠ್ಠಲರೇಯ ಅಪವರ್ಗದಲ್ಲಿಟ್ಟು ಆನಂದಪಡಿಸುವ 11
--------------
ವಿಜಯದಾಸ
ಕೃತಕೃತ್ಯನಾದೆನಿಂದಿನ ದಿನದಲಿ ವ್ರತಿ ಕುಲೋತ್ತಂಸ ಭುವನೇಂದ್ರರಾಯರ ಕಂಡು ಪ ಗಂಗಾ ಪ್ರಯಾಗ ಗಯಾ ನೈಮಿಷಾರಣ್ಯ ಕುರು ಜಾಂಗಳಾದ್ಯಖಿಳ ಸುಕ್ಷೇತ್ರಗಳಲಿ ಸಾಂಗ ಕರ್ಮಗಳ ಹರಿಗರ್ಪಿಸಿದ ಫಲವು ಮುನಿ ಪುಂಗವರ ಕಂಡ ಮಾತ್ರದಿ ಸಮನಿಸಿತೆನಗೆ 1 ಹಿಂದೆ ಬಹು ಜನ್ಮದಿ ಮಾಡಿದ ಸುಕೃತಕೆ ಕ ಪಾದ ಕಮಲ ಸಂದರ್ಶನವೆ ಮಹತ್ಪಲವಾಯಿತೆನಗೆ ಗೋ ವಿಂದನ ಪ್ರತಿಬಿಂಬರಾದ ಕಾರಣದಿಂದ 2 ಅನ್ಯಸಾಧನೆಗಳಿನ್ನಾಚರಿಸಲ್ಯಾಕೆ ಮ ತ್ತನ್ಯರಾರಾಧನೆಯ ಮಾಡಲ್ಯಾಕೆ ಸನ್ನುತ ಮಹಿಮ ಜಗನ್ನಾಥ ವಿಠಲನ ಕಾ ರುಣ್ಯ ಪಾತ್ರರಾ ಕರುಣವಾಯಿತೆನ್ನೊಳಿಂದು 3
--------------
ಜಗನ್ನಾಥದಾಸರು
ಕೃಪಣ ಶ್ರೀಪಾದಾರ್ಚನೆಯನಿತ್ತು ಪ ಅಪಾರ ಜನುಮದ ಪಾಪೌಘ ಬೆನ್ನಟ್ಟಿ ತಾಪಗೊಳಿಸುತ್ತಿದೆ ಈ ಪರಿಭವದೊಳು ಅ.ಪ. ಪತಿತ ನಾನಾದರೂ ಪತಿತ ಪಾವನ ನೀನು ಪಶುಪತಿ ಪಾಪಹರ ಗತಿಹೀನರಿಗೆ ನೀನೆ ಗತಿದರ್ಶಕನೆಂದು ತುತಿಸುತ್ತಿಹುದು ವೇದತತಿ ಸಮ್ಮತವಾಗಿ 1 ಭವಭವದಲಿ ಬಂದು ಬವಣೆಗಳಲಿ ಬೆಂದು ಬಳಲಿದೆ ಭಕ್ತ ಬಂಧು ಭವಹರ ನೀನೆಂಬುದನು ಭವಿಗಳಿಂ ನಿತ್ಯ ಶ್ರವಣದಿ ಕೇಳಿ ನಿನ್ನವರವನೆನಿಸಿದೆ 2 ಗೌರಿ ಮನೋಹರ ಗೌರಾಂಗ ಭಕ್ತರು ದ್ಧಾರಿಯೆ ಶೂಲಧರ ಸಾರಿದೆ ನಿನ್ನಂಘ್ರಿವಾರಿಜಯುಗಳವ ಕಾರುಣ್ಯದಲಿ ನೋಡು ಅಭಯವ ನೀಡು 3 ಮುಪ್ಪುರಹರ ಮುಕ್ಕಣ್ಣ ಗಂಗಾಧರ ಮೃತ್ಯು ಮೃತ್ಯುವೆ ಶಂಕರಾ ಸರ್ಪಭೂಷಣ ಅಪಮೃತ್ಯು ನಿವಾರಣ ಕಪ್ಪುಗೊರಳ ಕೃತ್ತಿವಾಸ ಸುರೇಶ 4 ಅಜ ಸಂತನಧ್ವರ ಭಜನೆಯ ಕೆಡಿಸಿದ ವಿಜಯ ವಿಗ್ರಹ ಶರೀರ ಸುಜನರ ಹೃದಯಾಂಬುಜದಲ್ಲಿ ಮಿನುಗುವ ರಜದೂರ ಶ್ರೀಕಾಂತ ನಿಜಭಕ್ತ ಗುರುವರ 5
--------------
ಲಕ್ಷ್ಮೀನಾರಯಣರಾಯರು
ಕೃಷ್ಣ ಮುರಾರಿ ಕೇಶವ ಮುರಾರಿಅಚ್ಚುತಾನಂತ ಗೋವಿಂದ ಮುರಾರಿಪ. ವೇಷಧಾರಿಯಾಗಿ ಬಂದು ಅಸುರರ ಸಂಹರಿಸಿಭೂಸುರರಿಗ್ವೊರವನಿತ್ತ್ಯೋ ಕೇಶವ ಮುರಾರಿ 1 ನಾ ತಾಳಲಾರೆನೊ ಲೋಕಾಧಿಪತಿಯೆ ಕಾಯೊಅನಾಥರಕ್ಷಕ ನಾರಾಯಣನೆ ಮುರಾರಿ 2 ಮಾಧವ ಮುರಾರಿ3 ಅನೇಕ ಗೋವ್ಗಳ ಕಾಯ್ದ ಗೋಪಾಲಮೂರುತಿಗೋಪಿಯರರಸ ಗೋವಿಂದ ಮುರಾರಿ 4 ಕಟ್ಟಿದ ಕಾಮನೆಯ ಬಿಟ್ಟು ಕಳಚಿ ಮನ-ದಿಷ್ಟಾರ್ಥವನೀವ ವಿಷ್ಣು ಮುರಾರಿ 5 ಮಧುರವಾಕ್ಯಗಳಿಂದ ಮಂದಿರಕಾಗಿ ಬಾರೊಮನಸಿಜನಯ್ಯ ಮಧುಸೂದನ ಮುರಾರಿ 6 ತಿದ್ದಿದ ಕಸ್ತುರಿತಿಲಕ ತಿಗುರಿದ ಪರಿಮಳಗಂಧಮುದ್ದು ನಸುನಗೆಯ ತ್ರಿವಿಕ್ರಮ ಮುರಾರಿ7 ಕಾಮಿನಿ ಅಗಲಿಬಂದು ಸೀಮೆನಾಳುವೆÀನೆಂದುನೇಮವಾಕ್ಯದಿ ನಿಂದ ವಾಮನ ಮುರಾರಿ 8 ಶ್ರೀಯರಸ ಮೇಳದಿ ರಮಿಸಿ ಬಹುಕಾಲದಿಸಿಂಧುಶಯನ ಶ್ರೀಧರನೆ ಮುರಾರಿ 9 ಋಷಿಗಳಿಗ್ವರವಿತ್ತು ಬೃಂದಾವನದಲ್ಲಿ ನಿಂದುಹರುಷವಾರಿಧಿ ಹೃಷಿಕೇಶ ಮುರಾರಿ 10 ಪಾವನ್ನ ಮೂರುತಿ ಪರಮದಯಾಳು ನೀನೆಪಾಲಿಸೊ ಶ್ರೀಪದ್ಮನಾಭ ಮುರಾರಿ11 ದಾನವರ ಮರ್ದಿಸಿ ಸುಮನಸರಿಗೊಲಿದದಾನದತ್ತನೆ ದಾಮೋದರನೆ ಮುರಾರಿ 12 ಶಂಕೆಯಿಲ್ಲದೆ ಗೆಲಿಸು ಶಂಖಚಕ್ರವ ಧÀರಿಸಿ ಅ-ಲಂಕಾರವಾದ ಸಂಕರ್ಷಣನೆ ಮುರಾರಿ 13 ವಾಸುದೇವ ಮುರಾರಿ 14 ಇದ್ದ ಗೋಪೇರಮನೆಯ ಕದ್ದು ಬೆಣ್ಣೆಯ ಮೆದ್ದಪದ್ಮದಳಾಕ್ಷ ಪ್ರದ್ಯುಮ್ನ ಮುರಾರಿ 15 ಅನಿರುದ್ಧ ಮುರಾರಿ16 ಪುನಗು ಕಸ್ತೂರಿಗಂಧ ಪರಿಮಳಪುಷ್ಪದಿಂದ ಪುಣ್ಯಮೂರುತಿ ಪುರುಷೋತ್ತಮನೆ ಮುರಾರಿ 17 ಅವನಿ ಅಧೋಕ್ಷಜ ಮುರಾರಿ 18 ನಾನೇನ ಪೇಳಲಿ ನಗೆನಗೆಯಲ್ಲಿ ಅಕ್ಷಿಕ್ರೂರವಾಯಿತು ನಾರಸಿಂಹ ಮುರಾರಿ 19 ಮೆಚ್ಚಿದೆ ನಾ ನಿನ್ನ ಪಕ್ಷಿವಾಹನ ಸ್ವಾಮಿಮುಚ್ಚುಮರೆಗಳ್ಯಾಕೊ ಅಚ್ಚುತ ಮುರಾರಿ 20 ಜಾಣತನದಿ ಪೋಗಿ ಜಾರಸ್ತ್ರೀಯರನ್ನುಒಡಗೂಡಿ ಆಡಿದ ಜನಾರ್ದನ ಮುರಾರಿ21 ಉಗುರಲ್ಲಿ ಹಿರಣ್ಯಕನ ಸೀಳಿ ಉರದಲ್ಲಿ ಮಾಲೆಯ ಧರಿಸಿಉಬ್ಬಲ್ಲಿ ಮೆರೆದ ಉಪೇಂದ್ರ ಮುರಾರಿ 22 ಹಿರಣ್ಯಾಕ್ಷತನಯನಂದು ಕರೆಯೆ ಕಂಬದಿ ಬಂದಗರುವದಿಂದಲೆ ನರಹರಿಯೆ ಮುರಾರಿ 23 ಅಟ್ಟಡವಿಯ ತಪಸು ಎಷ್ಟುದಿನವೊ ಸ್ವಾಮಿಪಟ್ಟಣಕಾಗಿ ಬಾರೊ ಕೃಷ್ಣಮುರಾರಿ 24 ಎಲ್ಲರ ಸಲಹಿದ ಫುಲ್ಲಲೋಚನ ಸ್ವಾಮಿಪಾಲಿಸೊ ಶ್ರೀಹಯವದನ ಮುರಾರಿ 25
--------------
ವಾದಿರಾಜ
ಕೃಷ್ಣ ರುಕ್ಮಿಣಿ ವಿವಾಹದೈದು ದಿನದಲ್ಲಿ ಅರ್ಥಿ(ಯಿಂ)ಂದೋಕುಳಿಯನಾಡಿ ಕುಂಕುಮ ಗಂಧ ಬುಕ್ಕಿ ್ಹಟ್ಟಲೂ(ಲುರು?) ಟಣಿಯ ಮಾಡಿ ಆರತಿನೆತ್ತಿ ಮುತ್ತೈದೇರು ಪಾಡಿ ವೀಳ್ಯಗಳ ನೀಡಿ ಸರ್ಪಶಯನನು ತನ್ನ ಸತಿಯ ಎತ್ತಿ ಬರುವೋ ಕಾಲದಲ್ಲಿ ಚಿಕ್ಕ ಸುಭದ್ರೆ ತಾ ಬಾಗಿಲು ಕಟ್ಟಿ ತಾ ನಗುತ ನುಡಿದಳು 1 ಪಟ್ಟದರಸಿಕೂಡ ಮತ್ತೆಲ್ಲಿ ಪಯಣ ಈ ವಾರ್ತೆ ಹೇಳುವುದೆನಗೆ ಕೇಳುವೆ ಕೊಟ್ಟು ಎನಮನ ಕಾಮಿತಾರ್ಥವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 2 ನಾರಿಮಣಿಯೆ ನವರತ್ನದ ಹೆರಳು ಬಂ- ಗಾರ ರಾಗಟೆಯು ಗೊಂಡ್ಯ ಕಂಕಣ ವಂಕಿ ದ್ವಾರಾ ಹರಡಿಯು ಚೆಂದ ಒಪ್ಪುವ ಗೆಜ್ಜೆ ನಾಗಮುರಿಗೆಯು ಕಾಲ ಪೈಜಣ ಗೆಜ್ಜೆ ರುಳಿ ವೈಡೂರ್ಯದ್ವೊಡ್ಯಾಣವನೆ ಮಾಣಿಕ್ಯದ್ವಾಲೆ ಮೋಹನ್ಮಾಲೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 3 ಪಚ್ಚಮಾಣಿಕದ ಗೊಂಡ್ಯಗಳು ಬಾಜುಬಂದು ರತ್ನಹ್ಹೆರಳುಬಂಗಾರ ಕಂಕಣವಂಕಿ ಹಸ್ತಕಡಗವು ದ್ವಾರ್ಯ ಪುತ್ಥಳಿ ಏಕಾವಳಿಯ ಸರ ಚಿಂತಾಕು ಸರಿಗೆ ತೆತ್ತಿಸಿಯರಚಂದ್ರರಾಗಟೆÉ ಮತ್ತೆ ಎನಗಮ್ಮಯ್ಯಕೊಡುವಳು ಅರ್ಥಿಯಿಂದೀಗೆನ್ನ- ಮನೋರಥ ದಂiÀiಮಾಡಣ್ಣಯ್ಯ ಶ್ರೀಕೃಷ್ಣಯ್ಯ 4 ಹರದಿ ನಿನಗೆ ಹವಳದ ಕಾಲ್ವಜ್ರದ ಮಂಚ ಜರದ ಸುಪ್ಪತ್ತಿಗೆಯು ಹಾಸಿಕೆ ಲೋಡು ವರಪೀಠ ವಸನಂಗಳು ಚ- ಪ್ಪರ ಮಂಚಕ್ಕೊಲೆವೋ ಮುತ್ತಿನ ಗೊಂಚಲು ರವಿಪೋ- ಲ್ವ ರಥವು ಕರಿತುರಗ ಕರೆವೆಮ್ಮೆ ಗೋವ್ಗಳು ತರತರದ ಛತ್ತರಿಗೆ ಚಾಮರ ಜರತಾರಂಚಿನ ಸೀರೆ ಕೊಡುವೆನು ಕದವ ಬಿಡು ತಂಗಿ ಕೋಮಲಾಂಗಿ 5 ಪನ್ನಂಗಶಯನ ಕೇಳೆನ್ನ ಗಲ್ಲದಲೊಪ್ಪೋ ಸಣ್ಣ ಮುತ್ತಿನ ಗೊಂಚಲು ದ್ರಾಕ್ಷಿಯ ಬಳ್ಳಿ ಹೊನ್ನಾ ್ವಲೆ ಸರಪಳಿಯು ಹೊಸ ಪ್ರೀತಿಯಲಿನ್ನು ನಾ ಬೇಡಿದ್ದು ಕೊಡುವನು ಮನ್ಮಥನ ಪಿತ ಎನ್ನ ಮನೋರಥ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 6 ಮುದ್ದು ಸುಭದ್ರ ಮೇಲಾದ ಜೊತೆಯ ಮುತ್ತು ವÀಜ್ರ ಕೆಂಪನು ಕೆತ್ತಿಸಿ ಕೊಡುವೆನೀಗ ತಿದ್ದಿ ಮಾಡಿದ ಮೂಗುತಿ ಪಾರ್ಥನ ರಥಕಿದ್ದು ಆಗುವೆ ಸಾರಥಿ ನಡೆಸುವೆನು ಕೀರ್ತಿ ಉಗ್ರಸೇನಗೆ ಹೇಳಿ ಇದರೊಳ- ಗರ್ಧ ರಾಜ್ಯವ ಕೊಡಿಸಿ ನಾ ನಿನ್ನುದ್ದ ಹಣ ಬಿಡು ತಂಗಿ ಕೋಮಲಾಂಗಿ 7 ಅಚ್ಚುತ ಬಲರಾಮರೆಂಬೊ ಎನಗೆ ಜೋಡು ಹೆಚ್ಚಿನ ಭುಜಗಳಿನ್ನು ಯಶೋದ ದೇವಕ್ಕಿ ರೋಹಿಣೀದೇವೇರು ಇರಲು ತಂದೆ ಶ್ರೇಷ್ಠನಾದ್ವಸುದೇವನು ನೀ ಕೊಡುವುದೇನು ಮುತ್ಯನಾಗಿದ್ದುಗ್ರಸೇನನು ಮತ್ತೆ ನಾ ಬೇಡಿದರೆ ಈ ಕ್ಷಣ ಕೊಟ್ಟು ಬಿಡನೇ- ನಧರ್À ರಾಜ್ಯವ ದಯಮಾಡಣ್ಣಯ್ಯ ಶ್ರೀಕೃಷ್ಣಯ್ಯ 8 ಎಷ್ಟು ಹೇಳಿದರು ಸನ್ಮತವಿಲ್ಲೆ ಸುಭದ್ರೆ ಮತ್ತೇನು ಕೊಡಲೆ ನಾನು ಮನಕೆ ಬೇಕಾದಿಷ್ಟವ ಬೇಡೆ ನೀನು ಭಾರ ಎಷ್ಟು ತಡೆಯಲಾರೆನೆ ನೀನು ಕೈಬಿಟ್ಟು ಬಿಡುವೆನು ಬೆಟ್ಟವನು ಕಿರು ಬೆಟ್ಟಿಲಿಂದೆ ಎತ್ತಿನಿಂತಿದ್ದೇಳು ದಿವಸ ಕದವ ಬಿಡು ತಂಗಿ ಕೋಮಲಾಂಗಿ 9 ಪಕ್ಷಿವಾಹನ ನಿನ್ನ ಚೊಚ್ಚಲಮಗಳ ಎನ್ನಚ್ಛದ ಅಭಿಮನ್ಯುಗೆ ಮಾಡುವುದು ಅ- ಪೇಕ್ಷವಾಗೇದೆ ಎನಗೆ ಬೇಡುವೆನು ನಿಶ್ಚಯ ಮಾಡಿ ಜನರೊಳಗೆ ಕೊಡು ಕೀರ್ತಿ ನಿನಗೆ ಪಟ್ಟದರಸಿಯ ಸಹಿತ ನೀ ಒಡಂಬಟ್ಟು ಎನಗ್ವಚನವನೆ ಪಾಲಿಸು ಕಟ್ಟಿದ್ಹಾದಿಯ ಬಿಟ್ಟು ಪೋಗುವೆ ದಯಮಾಡಣ್ಣಯ್ಯ ನೀ ಕೃಷ್ಣಯ್ಯ 10 ತರವಲ್ಲೆ ರುಕ್ಮಣಿ ಬೀಗತನವ ಭಾಳ ಪರಿ- ಯಾಲೋಚನೆ ಮಾಡು ರುಕುಮನ ಗಡ್ಡ ಶಿರ ಪಟ್ಟಿ ಪನ್ನಿ ನೋಡು ದೊರೆ ಶಿಶುಪಾಲ ವರನವಸ್ಥೆಯ ಕೊಂಡಾಡು ಧೈರ್ಯವನೆ ಮಾಡು ಬರೆದು ಓಲೆಯ ಕಳಿಸಿ ಎನ್ನ ಕರೆಸಿ ಬೆನ್ನ ್ಹತ್ತೋಡಿಬಂದ ಬಿರುದನರಿಯೇ ನ್ವರ ಶುಭಾಂಗಿನಿ ಕದವ ಬಿಡು ತಂಗಿ ಕೋಮಲಾಂಗಿ 11 ಕೃಷ್ಣ ಸುಭದ್ರೆ ಮಾತುಗಳ ರುಕ್ಮಿಣಿ ಕೇಳಿ ಮತ್ಯಾತಕೆನ್ನ ದೂರು ಯತಿಗಳ ಬೆನ್ನ ್ಹತ್ತಿ ಹೋದವರು ದಾರು ಕೃತ್ಯವ ನಡೆಸಿದರೆನ್ನ ನಾದಿನೇರು ಚಿತ್ರಾಂಗಿಯೇರು ಹಸ್ತಿನಾವತಿ ಅರಸು ಧರ್ಮರು ಹೆಚ್ಚಿನ್ಹಿರಿ ಯಣ್ಣಯ್ಯ ಭೀಮನು ಪಾರ್ಥಸುತ ಎನ್ನ ಸೋದರಳಿಯಗೆ ಕೊಟ್ಟೇನು ತೌರುಮನಿಗ್ಹೆಣ್ಣು 12 ರಂಗ ಸುಭದ್ರೆ ಮಾತಿಗೆ ಬಪ್ಪಿ ್ವ್ವಳ್ಯವ ಕೊಟ್ಟು ಚಂದ್ರಗಾವಿಯ ಕುಪ್ಪಸ ಜರದ ಪೀ- ತಾಂಬ್ರದುಡುಗೊರೆ ಕೊಡುತ ಮುತ್ತಿನ ಹಾರ ತಂದು ಕೊರಳಿಗೆ ಹಾಕುತ ರುಕ್ಮಿಣಿಯ ಸಹಿತ ಬಂದ ಭೀಮೇಶ ಕೃಷ್ಣ ಪಾರ್ಥನ ರಂಭೆ ಕನ್ಯವಗೆದ್ದಳೆನುತಲಿ ಸಂಭ್ರಮದಿ ದೇವೇಂದ್ರ ಬ್ಯಾಗನೆ ಚೆಂದದÀಲ್ಹೂಮಳೆಯ ಕರೆದರು 13
--------------
ಹರಪನಹಳ್ಳಿಭೀಮವ್ವ
ಕೃಷ್ಣದ್ವೈಪಾಯನ ಗುರುರಾಜರ ಚರಣ ಕಮಲಕಾನಮಿಪೆ ಶಿರಬಾಗಿ ಬಿನ್ನೈಪೆ ಪ ವೇದವ್ಯಾಸರ ಕರಕಮಲಜರೆನಿಸಿ ವೇದೇಶರ ಮುಖದಿ ವೇದಾಂತ ಸುಶಾಸ್ತ್ರ ಜ್ಞಾನವ ಘಳಿಸಿ ಮೇದಿನಿಯೊಳು ಚರಿಸಿ ಮೇದಿನಿ ಸುರರಿಗೆ ಮೋದವ ಗರೆದ 1 ಧರಿಜಾರಮಣನ ಪದಪೂಜಿಸಿದಂಥ ಶ್ರೀ ವ್ಯಾಸರ ಮಂತ್ರ ಧರಿಯೊಳು ಜಪಿಸಿದರಿವರೆ ಮಹಾಂತರೆನಿಸಿದರತಿ ಶಾಂತ ವರುಣಿಸಲೊಶವೆ ಗುರುವರ ಮಠದಲಿ ಸುರಗಂಗೆಯು ಬಂದಿರುವ ಮಹಿಮೆಯನು 2 ವರ ಭೀಮಾತಟದಿ ವಿರಾಜಿಸುವಂಥ ಕುಸುಮೂರುತಿ ಸಂಸ್ಥ ಶರಣಾಗತ ಜನರಿಗೆ ಸಕಲಾಭೀಷ್ಟ ಗರಿಯುವ ಸುಸಮರ್ಥ ಧರೆಯೊಳು ಮೆರೆಯುವ 'ಶಿರಿ ಕಾರ್ಪರ ನರಹರಿ' ಯ ನೊಲಿ-ಸಿರುವ ಪರಮ ಮಹಾತ್ಮ3
--------------
ಕಾರ್ಪರ ನರಹರಿದಾಸರು
ಕೃಷ್ಣನ್ನ ಬಲೂತ್ಕøಷ್ಟನ್ನ ವಿಶಿಷ್ಟನ್ನ ಸ್ತುತಿಸಿ ತುಷ್ಟನ್ನ ಪ ಗೋಪಳ್ಳಿಯೊಳಗಂದು ನಿಂದನ್ನಬಲುಗೋಪಿಯರ ಕೂಡ ನಂದನಾಗೋಪಿ ಚಂದನದಿಂದ ಬಂದನ್ನಾನಮ್ಮಗೋಪಾಲ ವಿಷ್ಣು ಗೋವಿಂದನ್ನ 1 ಅಪಾರ ಮಹಿಮ ನೆನೆಸುವನ್ನಾಭüಕುತ ಗಾಪತ್ತಬರಲು ಮಾಣಿಸುವನ್ನಾತಾಪಸಿಗಳಿಗೆ ಕಾಣಿಸುವನ್ನಾದಶರೂಪವ ಧರಿಸಿ ಜನಿಸುವನಾ 2 ರಜತಪೀಠ ಪುರವಾಸನ್ನಮಹರಜನೀಚರರ ವಿನಾಶನ್ನತ್ರಿಜಗದೊಳಗೆ ಪ್ರಕಾಶನ್ನನಮ್ಮವಿಜಯವಿಠ್ಠಲ ಮಾನಿಸನ್ನ 3
--------------
ವಿಜಯದಾಸ
ಕೃಷ್ಣರಾಯನೆ ನಿನ್ನ ಕೃತ್ಯಗಳೆಲ್ಲ ಸೃಷ್ಟಿಯೊಳಗೆ ನಾ ಬೀರಲ್ಯಾ ಪ ಕಷ್ಟ ಬಿಡಿಸದೆ ಸುಮ್ಮನಿದ್ದೆಯಾ ಸ್ವಾಮಿ ಅ.ಪ. ಜನನ ಮರಣ ಶೂನ್ಯನೆನಿಸಿಕೊಂಡು ಗೋಪಿ ತನಯನಗಿದ್ದುದ ಹೇಳಲ್ಯಾ ಸನಕಾದಿಸೇವ್ಯ ಪೂಜ್ಯನೆ ತುರುಗಳ ಹಿಂಡು ವನದಲ್ಲಿ ಕಾಯ್ದದ್ದು ಹೇಳಲ್ಯಾ ನಾನು 1 ದನುಜ ಭಂಜನನಾದ ‌ಘನ ಮಹಿಮನೆ ಮಾಗ ಧನಿಗಂಜಿ ಓಡಿದ್ದು ಹೇಳಲ್ಯಾ ಎಣೆಯಿಲ್ಲದಾ ಶೂರ ರಣದೊಳು ಪಾರ್ಥಗೆ ಅನುಗನಾಗಿದ್ದದ್ದು ಹೇಳಲ್ಯಾ ನಾನು 2 ಸತತ ತೃಪ್ತನಾಗಿ ಕ್ಷಿತಿಯೊಳು ಬೆಣ್ಣೆಯ ಮಿತವಾಗಿ ಕದ್ದದ್ದು ಹೇಳಲ್ಯಾ ಕೃತಿದೇವಿರಮಣನೆ ಅತಿ ಪ್ರೀತಿಯಲಿ ಗೋಪ ಸತಿಯರ ಕೂಡಿದ್ದು ಹೇಳಲ್ಯಾ ನಾನು 3 ಶ್ರುತಿತತಿಗಳಿಗಭೇದ್ಯ ಪ್ರತಿಯಿಲ್ಲದೆ ದೇವ ಸತಿಗೊಶನಾದದ್ದು ಹೇಳಲ್ಯಾ ಶತಕೃತು ವಿಧಿವಂದ್ಯ ಸುತರಾಪೇಕ್ಷಿಸಿ ಭೂತ ಪತಿಯನ್ನು ಬೇಡಿದ್ದು ಹೇಳಲ್ಯಾ ನಾನು 4 ಭೂತಳದೊಳು ದೇವತೆಗಳೊಡÀನೆ ಇಂಥ ರೀತಿಲಿ ಚರಿಸಿದ್ದು ಹೇಳಲ್ಯಾ ಭೀತಿರಹಿತ ಜಗನ್ನಾಥವಿಠ್ಠಲನೆ ಅ ದ್ಭುತ ಮಹಿಮನೆಂದು ಹೇಳಲ್ಯಾ ನಾನು 5
--------------
ಜಗನ್ನಾಥದಾಸರು
ಕೃಷ್ಣಲೀಲೆ ಆನೆ ಬರುತಾದೆ ನೋಡಮ್ಮ ಮದ್ದಾನೆ ಬರುತಾದೆ ಪ ಆನೆ ಬರುತಾದೆ ಎಲ್ಲರು ನೋಡಿರಿ ಒಂ-ದಾನೆಯ ಕೊಂದ ಮದ್ದಾನೆಏನೆಂದು ಪೇಳಲಿ ಎಲ್ಲ ದಿಕ್ಕುಗಳಲಿತಾನೇ ತಾನಾಗಿ ಮದ ಸೊಕ್ಕಿದಾನೆಅ ನೀರ ಮುಳುಗಿ ಖಳನ ಕೊಂದು ವೇದ ತಂದುಬರಮದೇವಗಿತ್ತ ಮದ್ದಾನೆಕ್ರೂರ ಚಿತ್ರಗುಪ್ತನೊಡನೆ ಕಾರುಬಾರಿಗಿಳಿದಜಾರ ಕೃಷ್ಣನೆಂಬ ಸೊಕ್ಕಿದಾನೆ 1 ದಶದಿಕ್ಕಿನೊಳು ಘಂಟೆ ಘಣಿರೆಂದು ಬರುತ್ತಿದೆಕುಸುಮಶರನ ಪೆತ್ತ ಮದ್ದಾನೆದಶಕಂಠನ ಕೊಂದು ಅನುಜಗೆ ಪಟ್ಟಗಟ್ಟಿದದಶರಥಸುತನೆಂಬ ಮದ ಸೊಕ್ಕಿದಾನೆ 2 ಗಂಧ ಕಸ್ತೂರಿ ಬೊಟ್ಟು ಗಮಕದಿಂದಲಿ ಇಟ್ಟುಗೊಂದಲಗಡಿಬಿಡಿ ಸುರಲೋಕ ಅಮ್ಮಮ್ಮಬೆಂಬಿಡದೆ ದೈತ್ಯರನು ಕೊಂದ ಗುಣ ಸಂಪನ್ನಸುಂದರ ಕೃಷ್ಣನೆಂಬ ಮದ ಸೊಕ್ಕಿದಾನೆ 3 ಸಾವಿರ ತೋಳವನ ಸರಸದಿಂದಲಿ ಕಡಿದಭುವನ ರಕ್ಷಕನಾದ ಮದ್ದಾನೆಯೌವನದ ಗೋಪಿಯರ ಕಣ್ಮಣಿ ಎನಿಪ ವಸುದೇವಸುತನೆಂಬ ಮದ ಸೊಕ್ಕಿದಾನೆ 4 ಗರುಡವಾಹನವೇರಿ ಧಿಮಕೆಂದು ಬರುತಾನೆಸರುವ ಲೋಕರಕ್ಷಕನೆಂಬ ಮದ್ದಾನೆಉರೆ ಪೂತನಿಯ ಹೀರಿ ಮಾವ ಕಂಸನ ಕೊಂದಸಿರಿಯಾದಿಕೇಶವನೆಂಬ ಮದ ಸೊಕ್ಕಿದಾನೆ 5
--------------
ಕನಕದಾಸ