ಒಟ್ಟು 36191 ಕಡೆಗಳಲ್ಲಿ , 138 ದಾಸರು , 9678 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಧ್ಯಾಯ ಹತ್ತು ತಾಕ್ರ್ಷಸ್ಕಂಧ ಸಮಾರೂಢಃ ಶ್ರೀ ಬ್ರಹ್ಮಾದಿಭಿರಾವ್ನತಃ | ಧ್ವನಿ ಪರಿ ಪರಿ ಪ ಗರುಡನೇರಿದ ಶ್ರೀನಿವಾಸನು ರಾಜ ವರ ಹಂಸವನೇರಿದ ಬ್ರಹ್ಮನು ತ್ವರ ನಂದಿಯೇರಿದ ರುದ್ರನು ಅ ವರ ನಡುಮಧ್ಯೆ ನಡೆದ ಶ್ರೀಹರಿ ತಾನು 1 ದೇವಿಯೇರಿದಳಾಗ ರಥದಲಿ ಬಕುಲಾ ದೇವಿ ಯೇರಿದಳೊಂದು ರಥದಲಿ ಕೇವಲ ತಮ್ಮ ತಮ್ಮ ರಥದಲಿ ಉಳಿದ ದೇವಿಯರೇರಿ ಕೊಂಡರು ಅಲ್ಲಿ 2 ಉತ್ತಮ ಮಂಗಳವಾದ್ಯವು ನË ಬತ್ತು ನಗಾರಿಗಳಾದವು ಮತ್ತೆ ಉಳಿದ ಎಲ್ಲ ವಾದ್ಯಗಳು ಬಹು ವತ್ತಿ ಶಬ್ದಮಾಡಿ ನುಡಿದವು 3 ನಡೆದರು ಋಷಿಗಂಧರ್ವರು ಬಹು ಸಡಗರದಿಂದಲ್ಲೆ ಅಪ್ಸರರು ಬಡವ ಬಗ್ಗರು ಉಳಿದ ಮನುಜರು ಬಹು ಗಡಿಬಿಡಿಯಿಂದಲ್ಲೆ ನಡೆದರು 4 ಕುಂಟರು ಕುರುಡರು ಕಲ್ಲು ಕಂಟಕ ಕಾಲಿಲೆ ತುಳಿವವರೂ ಗಂಟು ತಲಿಯಲಿಟ್ಟುನಡಿಯುವರು ತಪ್ಪ ಗಂಟಾಗಿ ಒದರುತಲಿಹರು 5 ಕೆಲವರು ಗಂಡನ ಒದರುವರು ಮತ್ತ ಕೆಲವರು ಮಕ್ಕಳನೊದರುವರು ಕೆಲವರು ಎಡವುತಲಿರುವರು ಮತ್ತು ಕೆಲವರು ಭರದಿಂದ ಬೀಳುವರು 6 ಕೆಲವರೆಳೆದು ಎಬ್ಬಿಸುವರು ಮತ್ತು ಕೆಲವರು ನೋಡುತ ನಗುವವರು ಬಾಲರಳುವ ಧ್ವನಿ ಆಯಿತು ಜಗತ್ ಪಾಲನಸೈನ್ಯ ನಡೆಯಿತು ಮೇಲಾದನಂ ತಾಂದ್ರೀ ಇಳಿಯಿತು ಭೂಪಾಲಪುರದ್ಹಾದಿ ಹಿಡಿಯಿತು7 ವಚನ ಶೈಲವನು ಹಿಡಿದು ಭೂಪಾಲನಪುರತನಕ ಸಾಲ್ಹಿಡಿದು ನಡೆವಂಥ ಕಾಲದಲಿ ಮತ್ತಲ್ಲಿಡುವದಕ್ಕೆ ಎಳ್ಳು ಕಾಳಷ್ಟು ಸ್ಥಳವಿಲ್ಲ ಶ್ರೀಲಲಾಮನು ಮಧ್ಯಸಾಲಿನ ಮಧ್ಯಾಹ್ನ ಕಾಲ ದಲಿ ಶುಕಮುನಿಯ ಆಲಯಕೆ ಬಂದು ಕಾಲಿಗೆರಗಿದನು ಆಕಾಲಕೆ ಮುನಿ ಬಂದು ಹೇಳಿಕೊಂಡೀ ಪರಿಯು ಶೈಲ ಭೋಜನವು ಎನ್ನ ಮೇಲೆ ಕರುಣಿಯಿಂದಾ 1 ಹೀಗೆಂದು ನುಡಿದ ಶುಕಯೋಗಿಯ ವಚನವ ಕೇಳಿ ಬಾಗಿ ತಾ ನಮಿಸುತಲೆ ಆಗ ಶ್ರೀಹರಿ ನುಡಿದ ಯೋಗಿಗಳು ನಾ ಸಂಸಾರಿ ಆಗಿ ಇರವೆ ಇಲ್ಲೆ ಉಂಡರೆ ಮಿತಿಯ ಇಲ್ಲದಲೆ ಪುರದಲ್ಲೆ ಪೋಗುವುದು 2 ಮುನಿ ಮಂಡಲೇಶನು ಕೇಳಿಕೊಂಡು ಹೀಗೆಂದು ಬ್ರಹ್ಮಾಂಡ ಪತಿಯೆ ಒಬ್ಬ ಉಂಡರೆ ಜಗವೆಲ್ಲ ಉಂಡಂತೆ ಆಗುವುದು ಪುಂಡರೀಕಾಕ್ಷಾ ಭಾಳ ಕೇಳುತಲೆ ಮುಂದೆ ಬಾಲಕನ ಮುಖನೊಡಿ ಬಾಲೆ ನುಡಿದಳು ಬಕುಲ ಮಾಲಿಕೆಯು ತಾನು3 ಧ್ವನಿ:ವಸಂತಭೈರವಿ ಆದಿತಾಳ ತರವೆ ಹರಿಯೆ ಈ ಪರಿಯ ಮಾಡುವದುಪ ಸುಖಕರವಾಗಿಹ ಶುಕಮುನಿ ವಚನವು || ಲಕ್ಷಿಸದೆ ಶುಭಕಾರ್ಯಕೆ ಪೋಗುವದೂ 1 ಬಲ್ಲಿದ ಶಕುನವು ಇಲ್ಲೆನಿನಗೆ ತಿಳಿ| ಊಟಕೆ ಒಲ್ಲೆನೆಂಬುವದೂ 2 ಶ್ರೀಶ ಅನಂತಾದ್ರೀಶ ಮಹಾತ್ಮರ|| ಭಾಷೆಯ ಕೇವಲುದಾಸೀನ ಮಾಳ್ಪುದು 3 ವಚನ ಹೆತ್ತಾಯಿ ಪರಿಯಾಗಿ ಹೊತ್ತು ಹೊತ್ತಿಗೆ ತನಗೆ ಅತ್ಯಂತ ಹಿತ ಮಾಡುತಿರ್ದ ಬಕುಲಾವತಿ ಸತ್ಯವಚನ ಹರಿಯು ಮತ್ತು ಶುಕಮುನಿಗೆ ಉತ್ತರವ ಕೇಳಿ ಮುನಿ ಉತ್ತರಣೆಯು ಬೀಜ ಒತ್ತಿಕೈಯಲಿ ಮಾಡಿ ವೃತ್ತಾದ ಗುಳ್ಳ ಫಲದುತ್ತಮೋತ್ತಮಶಾಕ ತಿಂತ್ರಿಣಿಯ ರಸಸಹಿತ ಪಾತ್ರದಲಿ ಬಡಿಸಿ ಸತ್ಪಾತ್ರನಾಗಿರುವ ಸರ್ವೋತ್ತಮಗೆ ಅರ್ಪಿಸಿದ ಭಕ್ತಿಯಿಂದ 1 ತೃಪ್ತನಾದನು ನಿತ್ಯತೃಪ್ತ ಹರಿ ತಾ ಉಂಡು ಮತ್ತೆ ಮುನಿಗಳು ಎದ್ದರತ್ಯಂತ ಕೋಪದಲಿ ಚಿತ್ತಜನ ಪಿತ ಅವರ ಚಿತ್ತವೃತ್ತಿ ಸತ್ಯದಲಿ ಎಲ್ಲರಿಗೂ ತೃಪ್ತಿಯಾಗಲಿ ಎಂದು ತಿಳಿದು ಪೂತ್ಕಾರ ಮಾಡಿದನು ತತ್ಕಾಲದಲ್ಲಿ ಉತ್ತಮಳು ಶ್ರೀರಮಾ ಮತ್ತೆ ಬ್ರಹ್ಮಾದಿಗಳು ಸುತ್ತಸನ ಶುಕ ಸತ್ವ ಶೀಲರು ಉಳಿದ ಸುತ್ತೆಲ್ಲ ಜನರು ಸಂತೃಪ್ತರಾದರು ಹರಿಯ ಫೂತ್ಕಾರದಿಂದ 2 ನಿದ್ರೆಯನು ಮಾಡಿ ಅಲ್ಲಿದ್ದು ಆ ರಾತ್ರಿಯಲಿ ಎದ್ದು ಮರು ಕೂಡಿ ವಾದ್ಯ ವೈಭವ ದಿಂದ, ಸಿದ್ಧಾಗಿ ಬಂದರು ವಿಯದ್ರಾಜನ ಪುರಕೆ ಶುದ್ಧ ಸಂಜೆಯಲಿ ಮುದ್ದು ವೇಂಕಟ ಬಂದ ಸುದ್ದಿಯನು ಕೇಳುತ ವಿಯದ್ರಾಜ ತಾ ಬಹಳ ಉದ್ರೇಕದಿಂದಲೆ ಇದ್ದ ಜನರನು ವೈಭವದಿಂದ ಸಿದ್ಧನಾಗಿ3 ಧ್ವನಿ:ಕಾಂಬೋಧಿ ಆದಿತಾಳ ಆಕಾಲದಲಿ ಕಂಡನು ಹರಿಯಮುಖ ಆಕಾಲದಲಿ ಕಂಡನು ಎಲ್ಲರ ಕೂಡ ಆಕಾಶ ರಾಜನು ತಾನು1 ಹರುಷದಿಂದಲಿ ಉಬ್ಬಿದ ಹರಿಯ ಕಂಡು ಹರುಷದಿಂದಲಿ ಎದರುಗೊಂಡು ವರಪೂಜೆಯನು ಮಾಡಿದ 2 ಅಳಿಯಗಾಭರಣವನು ವಸ್ತ್ರವ ಕೊಟ್ಟು ಅಳಿಯಗಾಭರಣವನು ಉತ್ಸವದಿಂದೆ ಕಳಿಸಿ ಮನೆಗೆ ಪೋದನು3 ಶ್ರೀನಾಥದೇವ ತಾನು ಆ ಕಾಲಕ್ಕೆ ಶ್ರೀನಾಥದೇವ ತಾನು ಕರೆದುತೊಂಡ ಮಾನರಾಜಗೆ ನುಡಿದನು 4 ಹಸಿದು ಬಂದೆವು ನಾವೆಲ್ಲ ಉಣ್ಣದೆ ಬಹಳ ಹಸಿದು ಬಂದೆವು ನಾವೆಲ್ಲ ಬೇಗನೆ ಪಾಕ ಹಸನಾಗಿ ಮಾಡಿಸೆಲ್ಲ5 ಅಕ್ಕರದಲಿ ರಾಜನು ಆನುಡಿ ಕೇಳಿ ಅಕ್ಕರದಲಿ ಮಾಡಿಸಿದನು ರುಕ್ಕೋತದಡಿಗೆಯನು 6 ಮಂಡಿಗೆ ಗುಳ್ಳೋರಿಗೆ ಶಾವಿಗೆ ಮೊದಲು ತೊಂಡಮಾನÀನು ಚಂದಾಗಿ 7 ಹರಿಗೆ ಅರ್ಪಣೆ ಮಾಡಿದ ಎಲ್ಲರ ಕೂಡಿ ಹರಿಯು ಭೋಜನ ಮಾಡಿದ 8 ಆನಂದದಿಂದಿದ್ದನು ಆ ರಾತ್ರಿಯೊಳ್ ಆನಂದದಿಂದಿದ್ದನು ಮಾಡಿದ ನಿದ್ರೆ `ಅನಂತಾದ್ರೀಶ' ತಾನು 9 ವಚನ ಶ್ರೀನಿವಾಸ ಎದ್ದು ತಾನು ಮರುದಿನದಲಿ ಮಾನಿತ ವಶಿಷ್ಠ ಲಕ್ಷ್ಮೀಸಹಿತ ನೀನು ಬ್ರಹ್ಮನು ಮತ್ತೆ ಮಾನಿತಳು ಎನ್ನತಾಯಿ ತಾನು ಐವರು ಅನ್ನಹೀನರಗಿರುವುದು ಖೂನದಲಿ ಕನ್ನಿಕೆಯ ದಾನ ಪರ್ಯಂತ ಮಾನಿತನು ಆರಾಜಮಾನಿನಿಯು ಮತ್ತೆ ವಸು ದಾನರಾಜನು ಅನ್ನರಹಿತರೈವರು ಅವರು ಖೂನದಲಿ ಕನ್ನಿಕೆಯ ದಾನಪರ್ಯಂತ 1 ಪೇಳು ಅರಸನಿಗೆಂದು ಹರಿಯು ಹೇಳಿದಂತಾ ಭೂಮಿಪಾಲ ಮಾಡಿದನು ಮುನಿಹೇಳಿದಂತೆ ಮೇಲೆ ಮುನ್ನ ಸಾಯಾಹ್ನಕಾಲದಲಿ ಚತುರಂಗ ಸಾಲ ಸೈನ್ಯವು ನಡೆಸಿ ಕಾಳಿ, ಕರ್ಣಿಯ ತೂರ್ಯ, ತಾಳಮದ್ದಲೆ ಮೊದಲು ಭಾಳವಾದ್ಯ ಗಳಿಂದ ಮೇಲಾದ ಗುರುಮುಂದೆ ಮೇಲೆ ತನ್ನವರಿಂದ ಕಾಲನಡುತಿಯಲೆ ಹರಿಯ ಆಲಯಕೆ ಬಂದ 2 ಈ ವ್ಯಾಳ್ಯದಲಿ ಧರಣಿದೇವಿ ತಾ ಲಜ್ಜೆಯಲಿ ದೇವ ಗುರು ಬ್ರಹಸ್ಪತಿಯ ಕೇವಲಾಜ್ಞದಿ ದೇವದೇವ ಎನಿಸುವ ಅಳಿಯ ಶಾವಿಗೆಯ ಪರಮಾನ್ನ ವಿಯದ್ರಾಜ ಮುಂದಾ ವೇಳೆಯಲಿ ಐರಾವತದ ಮೇಲೆ ದೇವನ ಕುಳ್ಳಿರಿಸಿ ಬಂದನು ಮನೆಗೆ ತೀವ್ರದಿಂದ 3 ಆಕಾಲದಲಿ ತೋಂಡ ಸತಿ ನಿವಾಳಿಸುವತ ಚಲ್ಲಿದಳು ಶೈಲದೊಡೆಯನು ಗಜದ ಮೇಲಿಂದ ಇಳಿದು ಆಮೇಲೆ ತಾ ಬಂದಾ ಸುವಿಶಾಲ ಮಂಟಪಕೆ ಮೇಲಾದ ಗದ್ದಿಗೆಯ ಮೇಲೆ ವೇಂಕಟರಮಣನು ಕಾಲಿಟ್ಟು ಕುಳಿತನಾಮೇಲೆ ಬ್ರಹ್ಮಾದಿ ಗಳು ಗಾಲವ, ವಶಿಷ್ಠಮುನಿ ವಾಲ್ಮೀಕಿ ಭೃಗು ಜಟಾಜಾಲ ಸಂಪನ್ನ, ಶುಕ, ದಾಲ್ಭ್ಯ ಮೊದಲಾದವರು ಸಾಲ್ಹಿಡಿದು ಕುಳಿತರಾ ಕಾಲಕ್ಕೆ ಎಲ್ಲಾ ಒದಗಿ ಬೇಗನೆ ವಿಷ್ಣು ಪದರಾಜ4 ತೊಳೆದು ಆ ಉದಿಕ ಮಧುಸೂದನನ ಪೂಜೆ ಮಧುಪರ್ಕದಿಂದ ಬುಧಜನರು ಪೇಳಿದಾಜ್ಞೆಯಲಿ ಗೃಹ ದೇವತಾಸನದಲಿ ಹರಿಯ ಧ್ಯಾನದಲಿ ಇರುತಿರುವ ಮದನ ಮೋಹನ ಸನ್ನಿಧಿಗೆ ಸಮ್ಮುಖವಾಗಿ ಮುದದಿ ಇರಿಸಿದನಾಗ ಬದಿಲಿದ್ದ ಬೃಹಸ್ಪತಿಯ ಒದಗಿ ವಧು ವರಗಳಿಗೆ ವಿಹಿತದ ಅಂತಃಪÀಟವ ಮುದದಿ ಮಧ್ಯದಲ್ಲಿ ಪಿಡಿದು ಒದರಿದನು ಈ ಪರಿಯು ಮದವೆಯ ಕಾಲಕ್ಕೆ ಮಧುರÉೂೀಕ್ತಿಯಿಂದ5 ಧ್ವನಿ:ಸೌರಾಷ್ಟ್ರ ಅಟತಾಳ ಸಾವಧಾನ ಧೇ ವಾಧೀಶನ ಲಗ್ನ ದಿವ್ಯ ವೇಳೆಯಲ್ಲಿ ಸಾವಧಾನ ಪ ಪದ್ಮನಾಭನೆ ನೀನು ಸಿದ್ಧಾಗಿ ಇರು ಕಂಡ್ಯ ಸಾವಧಾನ ಪದ್ಮಾವತಿಯೆ ನೀನು ಪದ್ಮನಾಭನ ಸ್ಮರಿಸು ಸಾವಧಾನ 1 ಫಲಕಾಲದಲಿ ಚಂಚಲರಾಗದಲೆ ನೀವು ಸಾವಧಾನ ಕುಲದೇವಿ ಸ್ಮರಣಿ ನಿರ್ಮಲವಾಗಿ ಮಾಡಿರಿ ಸಾವಧಾನ 2 ಶ್ರೇಷ್ಠಾದ ಅತಿ ವಶಿಷ್ಠ ಮುನಿಗಳೆಲ್ಲ ಸಾವಧಾನ ಸ್ಪಷ್ಟಾಗಿ ಶ್ರೀ ಮಂಗಳಾಷ್ಟಕ ಪಠಿಸಿರಿ ಸಾವಧಾನ 3 ಮಂಗಳ ಮೂರುತಿ ಮನದಿಂ ಸ್ಮರಿಸಿರಿ ಸಾವಧಾನ
--------------
ಅನಂತಾದ್ರೀಶ - ಕಥನಕಾವ್ಯಗಳು
ಅನಘಸಂಪದನೆಂದು ಮನದೊಳಗೆ ನಲಿದಿಂತು ಜನಕನಿತ್ತನು ಎನ್ನ ನಿನಗಿಂದು ದಾನಕ್ಕೆ ಕೈನೀಡಿ ದಾನಮಂ ತಾಂ ಬೇಡಿ ದಾನಿಯಂ ಪಾತಾಳಕೀಡು ಮಾಡಿ ಮಾನಾಭಿಮಾನವಿಂತೇನೇನುಮಿಲ್ಲದೆಯೆ ದಾನವನ ಮನೆಗಾವನೇನ ಪೇಳ್ವೆ ತಿರುಕ ಹಾರುವನಿವಗೆ ಅರಸಿಯಾನಾದೆನೇ ಮರುಗಲ್ಕೆ ಫಲವೇನೊ ಅರಿಯೆನಿನ್ನು ಸಟೆನುಡಿಯಿನೆಲ್ಲರಂ ಮರುಳುಗೊಳಿಪ ಕುಟಿಲಗಾರನದೆಂತÀು ಸುಖವಪಡಿಪ ಚಟುಲಮತಿಕೇಳೆನ್ನಮನದಿಷ್ಟ ಸಲಿಪ ಸಟೆಯಲ್ಲವೆನ್ನೆರೆಯ ಶೇಷಗಿರಿಪ
--------------
ನಂಜನಗೂಡು ತಿರುಮಲಾಂಬಾ
ಅನಂತ ಅಪರಾಧ ಅನುಗಾಲ ಮಾಡುತಿಹೆ ಪ ಸ್ನಾನ ಸಂದ್ಯಾ ಜಪ ಮೌನವೇ ಮೊದಲಾದ ನಾನಾವಿಧದ ವಿಹಿತ ಧರ್ಮತೊರೆದು ನಾನು ನನ್ನದು ಎಂಬೊ ಹೀನ ಬುದ್ಧಿಗಳಿಂದ ಹೀನ ಜನರೊಡಗೂಡಿ ಙÁ್ಞನಿಗಳ ನಿಂದಿಸುವೆ 1 ಶ್ರೀಕಾಂತ ನಿನ್ನ ಸೇವೆಯನು ಮರೆದು ಬೇಕಾದ ವೈಷಿಕವ ಸ್ವೀಕರಿಸಿ ಲೋಕÀದೊಳು ಸಾಕಿದವರನು ನಾ ನಿರಾಕರಿಸಿ ಬಾಳುವೆನು 2 ಎನಗಿಂತ ಅಧಿಕರಾದವರ ಕೂಡ ದ್ವೇಷವನು ಅನುಗಾಲ ಮಾಡುವೆನೊ ಅನಿಮಿಷೇಶಾ ಎನಗೆ ಸರಿಯಾದವರ ಕಂಡು ಮತ್ಸರಿಸುವೆನು ಎನಗಿಂತ ನೀಚರನು ನಾ ನೋಡಿ ನಗುತಿಪ್ಪೆ 3 ಕಾಸಿನಾಸೆಗೆ ಪೋಗಿ ದಾಸವೇಷವÀ ಧರಿಸಿ ಮೋಸಮಾಡುವೆ ಜನರ ಪಾಶದಿಂದಾ ವಾಸುದೇವನೆ ಸರ್ವದೇಶ ಕಾಲಾದಿಗಳಿ ಗೀಶನೆಂದರಿಯದಲೆ ಮೋಸಹೋದೆನು ಸ್ವಾಮಿ 4 ಸಕಲ ದುರ್ಗುಣಕೆ ಆಗಾರ ನಾನವನಿಯೊಳು ಭಕುತಿ ವೈರಾಗ್ಯ ಪ್ರಸಕುತಿಯಿಲ್ಲಾ ಭಕುತವತ್ಸಲ ಗುರುಜಗನ್ನಾಥವಿಠಲನೆ ಅಕಳಂಕಮಹಿಮನೆ ಮುಕುತಾಮುಕುತರೊಡೆಯಾ 5
--------------
ಗುರುಜಗನ್ನಾಥದಾಸರು
ಅನಂತ ಗುಣ ಪೂರ್ಣ | ವಿಠಲ ಪೊರೆ ಇವನಾ ಪ ವಿನಯದಲಿ ತವದಾಸ್ಯ | ವನು ಕಾಂಕ್ಷಿಸುವನಾ ಅ.ಪ. ಸ್ವಪ್ನದಲಿ ದೇವ ಗೃಹ | ಒಪ್ಪವೋ ಹರಿರೂಪಅಪ್ಪ ಸಮ್ಮುಖದಿ ಸ್ತುತಿ | ವಪ್ಪಿಸುತ್ತಿರುವಾ |ನೆಪ್ಪಿನ ಗುರೂ ರೂಪ | ತಪ್ಪದಲೆ ತಾ ಕಂಡುಸೊಪ್ಪಿನಾ ಭಾವದಲಿ | ಅಪ್ಪಿದನು ನೆಲವಾ 1 ವಿತತ ಮಹಿಮನ ಗುಣನ | ತುತಿಸುತಿಹ ಗುರುವಿನೆಂಹಿತದಿ ಅಂಕಿತಯುಕ್ತ | ತುತಿಯ ಉಪದೇಶಾಕೃತವಾಯ್ತು ಭಾವುಕಗೆ | ಅತಿ ಚಿತ್ರ ಪೇಳಿಲ್ಕೆಮತಿಗೆ ಸಿಲುಕದೆ ಹೋಯ್ತು | ಮತ್ತೆ ಎಚ್ಚರದೀ 2 ಸುಪ್ರೀಶ ಚರ್ಯವನು | ಅಪ್ಪಿ ಇವಗಂಕಿತವಗೊಪ್ಪದಲಿ ಇತ್ತಿದೆನೊ | ಅಪ್ಪ ಹಯವದನಾ |ಅಪ್ರಮೇಯಾ ನಂತ | ಸ್ವ ಪ್ರಕಾಶಕ ಹರಿಯೆಕೃಪೆಯಿಂದಲಿ ಇವನ | ಒಪ್ಪಿ ಕೈ ಪಿಡಿಯೋ 3 ನಿದ್ರೆಯಲ್ಲಿಹನ ಪ್ರ | ಬುದ್ಧನನ ಗೈಯ್ಯುತ್ತಮಧ್ವಮತ ದೀಕ್ಷೆಯನು | ತಿದ್ದಿ ಇವನಲ್ಲೀಶ್ರದ್ಧಾಳು ಎಂದೆನಿಸೊ | ಸಿದ್ಧಾಂತ ಪಂಥದಲಿಅಢ್ವದೇಡ್ಯನೆ ಹರಿಯೆ | ಮುದ್ದು ನರಹರಿಯೇ 4 ಕೈವಲ್ಯ ಪ್ರದ ಹರಿಯೆಆವ ತವನಾಮ ಸ್ಮøತಿ | ಸಾರ್ವ ಕಾಲದಲೀತಾವಕಗೆ ನೀನಿತ್ತು ಕಾವುದೆಂಬೆನೊ ಗುರೂಗೋವಿಂದ ವಿಠಲಯ್ಯ | ಗೋವುಗಳ ಪಾಲಾ 5
--------------
ಗುರುಗೋವಿಂದವಿಠಲರು
ಅನಂತ ಯೋನಿಯೊಳಗೆ ಅನಂತ ಜನ್ಮತಿರುಗಿಅನಂತ ಯುಗಯುಗಂಗಳಲಿ ಸತ್ತು ಹುಟ್ಟೆಅನಂತನಾಟವೆಯೆಂದು ಅರಿವು ಇಲ್ಲದೆ ಹೋಗಿಅನಂತ ದುಃಖಸಾಗರದಿ ಹಿರಿದು ಬಳಲುವಿರಿ 1 ವಿಶ್ವತೈಜಸ ಪ್ರಾಜ್ಞ ಮೂವರೆಂದೆನಿಸಿವಿಶ್ವದೊಳು ನಾನಾ ರೂಪಗಳ ತಾಳಿವಿಶ್ವದೊಳ ಹೊರಗೆಲ್ಲ ಪೂರ್ಣ ತಾನೆಂದೆನಲುವಿಶ್ವಾತ್ಮಕನು ನೀವು ಮತ್ತಾರು ತಿಳಿಯಿರೋ 2 ಮೂರವಸ್ಥೆಗಳಲ್ಲಿ ಮೂರು ಮೂರ್ತಿಗಳಾಗಿತೋರುತಿಹ ನಾನಾ ಬಗೆ ಲೀಲೆಗಳನುಭೂರಿ ಸಂಸಾರಗಳ ದುಃಖ ಸುಖವೆಂದೆನಿಸಿತೋರಿ ನೋಡಿಪನವನು ಮತ್ತಾರು ತಿಳಿಯಿರೋ 3 ಸತಿ ಪುರುಷರಾಗಿಹನು ಸುತನು ತಾನಾಗಿಹನುಖತಿಯು ಶಾಂತಿಯು ಕಾಮವಾಗಿ ತಾನಿಹನುಅತಿ ಕುಲಗಳಾಗಿಹನು ಅತಿ ಜಂತುವಾಗಿಹನುಮಿತಿಯಿಲ್ಲದಾಗಿಹನು ನೀವಾರು ತಿಳಿಯಿರೋ 4 ಈ ವಾಕ್ಯಗಳನೇ ನೀವಾರಮುಂದುಸುರದಲೆಸಾವದಾನದಿ ತಿಳಿದು ನೋಡಿದೇವ ಚಿದಾನಂದ ಗುರು ತಾನೀಗ ನಿಜವೆಂದುಸಾವದಾನದಿ ಕಂಡು ಕಡೆಹಾಯಿರೋ 5
--------------
ಚಿದಾನಂದ ಅವಧೂತರು
ಅನಂತ ಹರಿ ವಿಠಲ | ಕಾಪಾಡೊ ಇವನಾ ಪ ಅನಘ ಕರುಣಾಳು ಹರಿ | ನಿನಗೆ ಭಿನ್ನೈಪೇ ಅ.ಪ. ಪಿತೃಮಾತೃ ಸೇವೆಯಲಿ | ರತಿಯ ಕರುಣಿಸು ಇವಗೆಹಿತ ವಹಿತ ವೆರಡರಲಿ | ಪ್ರೀತಿ ಸಮ ವಿರಲೀಮತಿ ಮತಾಂವರರಂಘ್ರಿ | ಹಿತದಿಂದ ಸೇವಿಸುವಮತಿಯನೇ ಕರುಣಿಸುತ | ಕಾಪಾಡೋ ಹರಿಯೇ 1 ಭಕುತಿ ಸುಜ್ಞಾನಾದಿ | ವ್ಯಕುತಿಗೈ ಇವನಲ್ಲಿಕಕುಲಾತಿ ಇರದಂತೆ | ಮುಕುತಿ ಸತ್ಪಥದೀಪ್ರಕಟಗೈ ಸ್ಥಿರಬುದ್ಧಿ | ಅಕಳಂಕ ಶ್ರೀಹರಿಯೆನಿಖಿಲಾಗಮ ಸುವೇದ್ಯ | ಭಕುತ ಪರಿಪಾಲಾ2 ಸ್ಮರಣೆ ಸುಖ ಸುಧೆ ಸುರಿದು | ಶರಧಿಭವ ಉತ್ತರಿಸೊಮರುತಾಂತರಾತ್ಮಕನೆ | ಕಾರುಣ್ಯ ಮೂರ್ತೇಆರುಹಲೇನಿಹುದಿನ್ನು | ಸರ್ವಜ್ಞ ನೀನಿರಲುಮೊರೆಇದನ ಸಲಿಸು ಗುರು | ಗೋವಿಂದ ವಿಠಲ3
--------------
ಗುರುಗೋವಿಂದವಿಠಲರು
ಅನಂತಗಿರಿವಿಠಲ | ಪಾಲಿಸೋ ಇವಳಾ ಪ ಗುಣಪೂರ್ಣ ಶ್ರೀಹರಿಯೆ | ಬೇಡುವೆನು ಧೊರೆಯೇ ಅ.ಪ. ಸಿದ್ಧಿಸುತ ಶಿಷ್ಯತ್ವ | ಶುದ್ಧ ಸ್ವಪ್ನದೊಳೀಕೆಉದ್ಧಾರಕೆಂದೆನುತ | ಪ್ರಾರ್ಥಿಸುತ್ತಿಹಳೋ |ಮಧ್ವರಮಣನೆ ದೇವ | ಸಿದ್ದಾಂತ ಸಾರವನುಬುದ್ದಿಗೇ ನಿಲುಕಿಸೋ | ಭದ್ರಮೂರುತಿಯೆ 1 ಪ್ರಾಚೀನ ದುಷ್ಕರ್ಮ | ಮೋಚನೆಗೆ ಮನಮಾಡೋವಾಚಾಮ ಗೋಚರನೆ | ಖಚರಾರಿ ವಂದ್ಯನೀಚೊಚ್ಚ ತರತಮವ | ವಾಚಿಸುತ ಕರ್ಮಗಳಪಾಚಿಯನೆ ಕಳೆಸವ್ಯ | ಸಾಚಿ ಸಖದೇವಾ 2 ಹರಿಪಾದ ರತಿ ಕೊಟ್ಟು | ಹರಿ ಗುರು ಸೇವೆಗಳನಿರುತಗೈಯುವ ಮನವೆ | ಪರಿಪಾಲಿಸ್ಹರಿಯೇಅರವಿಂದನಾಭಹರಿ ಸರ್ವ ಸತ್ಸಾಧನವನೆರವೇರಿಸೆಂದೆನುತ | ಪ್ರಾರ್ಥಿಸುವೆ ಹರಿಯೇ 3 ಜ್ಞಾನಾನು ಸಂಧಾನ | ಮಾಣದಲೆ ಇತ್ತಿವಳಧ್ಯಾನ ಮಾರ್ಗಕೆ ತಂದು | ಮೌನಿ ಜನ ವಂದ್ಯಾಸಾನುರಾಗದಿ ನಿನ್ನ | ಹೃದಯ ಗಹ್ವರದಲ್ಲಿಕಾಣುವ ಸುಸಾಧನವ | ನೀನೇ ಮಾಡಿಸೊ ಹರಿಯೇ 4 ಸರ್ವಾಂತರಾತ್ಮಕನೆ | ದುರ್ವಿ ಭಾವ್ಯನೆ ದೇವಸರ್ವಕರ್ಮದಿ ನಿನ್ನ | ಸಂಸ್ಕøತಿಯ ನಿತ್ತುದರ್ವಿಜೀವಿಯ ಕಾಯೋ ಸರ್ವೇಶ ಶ್ರೀಹರಿಯೆಶರ್ವನೊಡೆಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಅನಂತಪದ್ಮನಾಭ | ವಿಠ್ಠಲನೆ ನೀನಿವನಅನಂತ ಜನ್ಮದ ಪಾಪ | ಕಳೆದು ಸಲಹೋ ಪ ಗುಣಗಣಾರ್ಣವ ಸ್ವಾಮಿ | ಪೂರ್ಣಕರುಣೆಯೆಂದುನಿನಗೆ ನಾ ಬಿನ್ನೈಪೆ | ಸತತ ಹರಿಯೇ ಅ.ಪ. ಹಂಚಿ ದೈತ್ಯರಿಗೇ |ಸಂಚಿತಾಗಮ ಕಳೆವ | ಸಂಚುಗಳ ನೀ ತೋರಿವಾಂಛಿತಪ್ರದನಾಗೊ | ಅಂಚೆವಹ ಪಿತನೇ 1 ಭವ ತಾರಕವು | ನಾಮಸ್ಮøತಿಯೆಂಬಮೃತಯಾಮಯಾಮಕೆ ಉಣಿಸಿ | ರಾಮನೇ ಸಲಹೋ 2 ಮೂರೆರಡು ಭೇದಗಳು ತಾರತಮ್ಯ ವನರುಹಿಸಾರತಮ ನೀನೆಂಬ | ಸುಜ್ಞಾನವೀಯೋ |ಕಾರಣಿಕ ಶ್ರೀಹರಿಯೆ | ವೈರಾಗ್ಯ ಧನದಿ ಸಂಸಾರ ನಿಸ್ಸಾರೆಂಬ | ಸನ್ಮತಿಯ ನೀಯೋ 3 ದಾಸನಿವನೆಂದೆನುತ | ನೀ ಸಲಹ ಬೇಕಿವನಈಶಾದಿ ದಿವಿಜೇಡ್ಯ | ಶೇಷಶಾಯೀಕ್ಲೇಶ ಆನಂದಗಳು | ಶ್ರೀಶ ನಿನ್ನಿಂದೆಂಬಈಸು ಸನ್ಮತಿ ಕೊಟ್ಟು | ನೀ ಸಲಹಬೇಕೊ4 ಸರ್ವವ್ಯಾಪ್ತ ಸ್ವಾಮಿ | ನಿರ್ವಿಕಾರನೆ ದೇವಸರ್ವಜ್ಞ ನೀನಿರಲು | ನಾ ಪೇಳ್ವುದೇನೋದರ್ವಿ ಜೀವನ ಕಾವ | ಸರ್ವಭಾರವು ನಿಂದುಸರ್ವ ಸುಂದರ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಅನಂತಶಯನ ವಿಠಲಾ | ಕಾಪಾಡೊ ಇವಳಾ ಪ ಸಾರ ಅ.ಪ. ತಾಪತ್ರಯಗಳು ಎಂಬ | ಕೂಪಾರದಲಿ ಬಿದ್ದು ಶಾಪಕೊಳಗಾಗಿ ಹಳ ಕಾಪಾಡಬೇಕೊದ್ರೌಪದಿಯವರದ ಕರು | ಣಾಪಯೋನಿಧಿಹರೆಯೆನೀ ಪೊರೆಯದಿರಲನ್ಯ | ಕಾಪಾಡ್ವರ್ಯಾರೊ 1 ತೈಜಸನೆ ನೀನಾಗಿ | ಸೂಚಿಸಿಹ ಅಂಕಿತವಯೋಜಿಸಿಹೆ ಇವಳೀಗೆ | ಅವ್ಯಾಜ ಕರುಣೀಪ್ರಾಜ್ಯ ಎನ ಸಂಸಾರ | ಗೌಜು ಕಳೆಯಲ್‍ವೆನ್‍ತ್ರ್ಯಜಗದ್ವಾಪನೆ | ವಾಜಿವದನಾಖ್ಯ 2 ಕರ್ಮಾಕರ್ಮಗಳ | ಮರ್ಮಗಳ ತಿಳಿಸುತ್ತಪೇರ್ಮೆಯಲಿ ಪತಿಸೇವೆ | ಕರ್ಮಪ್ರಾಧಾನ್ಯಧರ್ಮವನೆ ತಿಳಿಸುತ್ತ | ಭರ್ಮಗರ್ಭನ ಪಿತನೆಕರ್ಮಬೀಜವ ಕಳೆಯೊ | ಬ್ರಹ್ಮಣ್ಯದೇವಾ3 ಮರುತಾಂತರಾತ್ಮನೆ | ಮೂರೆರಡು ಭೇದಗಳತರತಮಂಗಳನರುಹಿ | ಪೊರೆಯೊ ಇವಳಾಅರುಹುವೆನೊ ಸರ್ವಜ್ಞ | ತರುಳೆಬಹುಭಕ್ತಿಯಂತೆಕರುಣಿಸೆಲೊ ಕೃಪಾಸಾಂದ್ರ | ಕಂಜಜಾನಯ್ಯ 4 ಗಾವಲ್ಗಣೀ ವರದ | ಭಾವದಲಿ ಮೈದೋರಿನೀ ವೊಲಿಯೆ ಬಿನ್ನಪದೆ | ಗೈಯೆ ಶ್ರೀಹರಿಯೆಕೋವಿದೊತ್ತಂಸ ಗುರು | ಗೋವಿಂದ ವಿಠಲನೆಕಾವ ಕರುಣಿ ಎಂದು | ಪ್ರಾರ್ಥಿಸುವೆ ಹರಿಯೆ 5
--------------
ಗುರುಗೋವಿಂದವಿಠಲರು
ಅನಂದವಾಯಿತು ಸ್ವಾನಂದ ಘನಸುಖ ತನುಮನದೊಳಗೆ ತನ್ನಿಂದ ತಾನೊಲಿದು ಖೂನದೋರಿತು ಘನ ಗುರು ಕೃಪೆ ಎನಗೆ 1 ಸೋಮಾರ್ಕದ ಮಧ್ಯಸ್ವಾಮಿ ಸದ್ಗುರು ಪಾದ ನಮಿಸಿ ನಿಜದೋರಿತು ಜುಮುಜುಮುಗಟ್ಟಿ ರೋಮಾಂಚನಗಳುಬ್ಬಿ ಬ್ರಹ್ಮಾನಂದವಾಯಿತು 2 ನಾಮ ಸೇವಿಸಿ ಮಹಿಪತಿಗೆ ಸವಿದೋರಿತು ಪ್ರೇಮಭಾವನೆಯೊಳಗೆ ಧಿಮಿಧಿಮಿಗುಡುತ ಬ್ರಹ್ಮಾನಂದದ ಸುಖ ಅನುಭವಿಸಿತೆನಗೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಅನಾಥ ನನ್ನಿಂದ ಆಗುವುದು ಏನು ನೀನೆ ದಯಾಮಾಡಿ ಎನ್ನ ನೋಡಿದರೆ ಸರಿಯಲ್ಲದೆ ಪ ಸ್ನಾನ ಸಂಧ್ಯಾವನ ವೆಂಬ ಸತ್ಕರ್ಮ ವಿಧಿಹೋಗೆ ಧ್ಯಾನಮೌನ ಜಪತಪ ನಿಧಾನ ಹೋಗೆ ಕಾನನದೊಳಗಿನ ಕೊಂಡೆತ್ತಿ ನಂದದಿ ಏನು ಅರಿಯದ ವ್ಯರ್ಥ ಹೀನನಾಗಿರುವಂಥ 1 ಮಾಧವಾ ನಿಮ್ಮ ಸ್ಮರಣೆ ಮಹಾಮಹಿಮ ಸೇವೆ ಹೋಗೆ ವೇದ ಶಾಸ್ತ್ರಗಳಲ್ಲಿ ಇರುವ ಮರ್ಮ ಹೋಗೆ ಭೋಧ ಗುರುಕರ್ಣ ಪೂರ್ಣವು ಎಂಬದದು ಹೋಗೆ ----------- ಂದರಿಯದೆ ಹೆಡ್ಡನಾದಂಥಾ 2 ಹರಿ ನಿಮ್ಮ ಭಕ್ತರ ಅನುಗ್ರಹಕ್ಕೆ ಪಾತ್ರಹೆಂಗೊ ಹರಿ ನಿನ್ನ ಚರಿತಗಳು ಅರುವದ್ಹೇಗೊ ಕರುಣಿಸು ಕೈ ಹಿಡಿದು ಕಾಯ್ದರೆ ಸರಿ ಅಲ್ಲದೆ ವರ 'ಹೊನ್ನ ವಿಠ್ಠಲ’ ನೀನೆಂದು ನಾನರಿಯದಾ 3
--------------
ಹೆನ್ನೆರಂಗದಾಸರು
ಅನಾಥ ರಕ್ಷಕ ಆಪದ್ಬಾಂಧವ ಶ್ರೀಪತಿ ಕೇಶವ ಮಾಧವನೆ ಪ ಮದನ ಗೋಪಾಲನೆ ಮಾತರಿಶ್ವಪ್ರಿಯ ಹರಿ ಶ್ರೀಶ ಅ.ಪ ಬಿಟ್ಟ ಕಂಗಳ ಮುಚ್ಚದೆ ತಿರುಗುವ ಬೆಟ್ಟವ ಬೆನ್ನಿನೊಳಾಂತಿರುವ ಗಟ್ಟಿನೆಲವ ಕೆದರುತ ಬೇರರಸುವ ಹೊಟ್ಟೆಯ ಕರುಳನೆ ಬಗೆದಿರುವ1 ಪೊಡವಿಯ ಬೇಡುತ ಕೊಡಲಿಯ ಪಿಡಿಯುತ ಪೊಡವಿಪರೆಲ್ಲರ ಗೆಲಿದವನೆ ಮಡದಿಯನರಸುತ ಕಡಲನು ಕಟ್ಟುತ ಕಡಹಲ್ದ ಮರನೇರ್ದ ಮೃಡಸಖನೆ2 ಬುದ್ಧನಾಗಿ ತ್ರಿಪುರರ ಗೆಲಿದವನೆ ಶುದ್ಧ ಹಯವನೇರಿ ಮೆರೆದವನೆ ಹದ್ದುವಾಹನವೇರುತ ನಲಿದಾಡುವ ಪದ್ಮನಾಭ ಪುರುಷೋತ್ತಮನೆ3 ಅಗಣಿತ ಮಹಿಮನೆ ಖಗವರವಾಹನ ನಿಗಮವೇದ್ಯ ನಿರ್ಮಲಚರಿತ ಬಗೆಬಗೆಯಿಂದಲಿ ಭಜಿಸುವ ಭಕುತರ ಅಘನಾಶನ ಸುಜನರ ಪ್ರಿಯ 4 ಸೌಮ್ಯ ವತ್ಸರದಿ ಸುಂದರಶ್ಯಾಮನ ಸಾಮಗಾನಲೋಲನ ಭಜಿಸಿ ಕಾಮ್ಯಕರ್ಮಗಳ ತ್ಯಜಿಸಲು ಹರುಷದಿ ಕಮಲನಾಭ ವಿಠ್ಠಲ ಒಲಿವ 5
--------------
ನಿಡಗುರುಕಿ ಜೀವೂಬಾಯಿ
ಅನಾದ್ಯನಂತ ಕಾಲದಲಿ ನೀ ನಿರ್ದೋಷಅನಾಥ ಬಂಧುವೆ ಆಪ್ತ ಕಾಮಅನವರತ ನಿನ್ನಾಧೀನದವನಯ್ಯಕಾಣೆ ನಿನ್ನಗಲಿಪ್ಪ ಕಾಲವನ್ನುಜ್ಞಾನೇಚ್ಛ ಪ್ರಯತ್ನ ಚೇತನ ನಿಷ್ಠವೊ ||ತಾನಾದರಾಗಲಿ ತನ್ನಿಯಾಮಕ ನೀನುಈ ನೀತಿ ಸಿದ್ಧವಾಗಿದೆ ಹಾನಿ ವೃದ್ಧಿಗೆನಾನೆ ಕಾರಣನಲ್ಲಾನಂದ ಮೂರ್ತಿಪ್ರಾಣಾಂತರ್ಯಾಮಿ ಶ್ರೀ ವ್ಯಾಸವಿಠ್ಠಲರೇಯನೀನಿಟ್ಟ ಪರಿಯಲ್ಲಿ ನಿಜವಾಗಿ ಇರುತಿಪ್ಪೆ ||1
--------------
ವ್ಯಾಸವಿಠ್ಠಲರು
ಅನಿಮಿಷ ರೂಪದಿಂದಾಗಮವನು ತಂದ ರಾಮಚಂದ್ರ ಘನಕೂರ್ಮರೂಪದಿಂ ಗಿರಿಯ ಬೆನ್ನೊಳಗಾಂತ ರಾಮಚಂದ್ರ ಕನಕಾಕ್ಷನನು ಕೊಂದ ಧರಿಣಿದೇವಿಯ ರಮಣ ರಾಮಚಂದ್ರ ಹಿರಣ್ಯಕನ ಕರುಳನು ಕೊರಳೊಳು ಧರಿಸಿದ ರಾಮಚಂದ್ರ ತರಳ ಪ್ರಹ್ಲಾದನ ಕರೆದಾದರಿಸಿದ ರಾಮಚಂದ್ರ ವಟುರೂಪದಿಂ ಬಂದು ವಸುಧೆಯ ಬೇಡಿದ ರಾಮಚಂದ್ರ ದಾನಕೊಟ್ಟವಗೆ ಪಾತಾಳ ಪಟ್ಟವ ಕಟ್ಟಿದ ರಾಮಚಂದ್ರ ಕ್ಷತ್ರಿಯರ ಕುಲಬೇರ ಕತ್ತರಿಸಿದ ದೇವ ರಾಮಚಂದ್ರ ಧರಿತ್ರಿಯ ಭಾರವ ಪರಿಹರಿಸಿದ ದೇವ ರಾಮಚಂದ್ರ ವಸುದೇವನಂದನನೆಂದೆನಿಸಿ ಮೆರೆದೆಯೋ ರಾಮಚಂದ್ರ ಮತ್ತೆಕಾಮಿನಿಯರ ಚಿತ್ತವ ಕಲಕಿದ ರಾಮಚಂದ್ರ ಉತ್ತಮಾಶ್ವವನೇರಿ ಕಲ್ಕಿಯೆನಿಸಿದ ರಾಮಚಂದ್ರ ಆದಿಮಧ್ಯಾಂತ ಸ್ವರೂಪ ಸುಂದರರೂಪ ರಾಮಚಂದ್ರ ವೇದವೇದ್ಯನೆ ನಿನ್ನ ಪಾದವೇ ಗತಿಯೆನಗೆ ರಾಮಚಂದ್ರ ರಘುಕುಲತಿಲಕನೆ ರಮ್ಯಚರಿತ್ರನೆ ರಾಮಚಂದ್ರ ಅಘಹರ ಪುರವೈರಿ ಸಂಸ್ತುತಿಪಾತ್ರನೆ ರಾಮಚಂದ್ರ ಮಾನಾಭಿಮಾನ ನಿನ್ನಾಧೀನಮೆಂಬೆನೈ ರಾಮಚಂದ್ರ ಏನೊಂದನರಿಯದ ಅಜ್ಞಾನಿ ನಾನಯ್ಯ ರಾಮಚಂದ್ರ ನೀನಲ್ಲದೆ ಮತ್ತನ್ಯರಾರಿಹರೈ ರಾಮಚಂದ್ರ ದೀನಪಾಲಕ ನಿನ್ನುಳಿದಾರ ನೆರೆಯೆ ರಾಮಚಂದ್ರ ವರಶೇಷಗಿರಿದೊರೆ ಮರೆಹೊಕ್ಕು ಬೇಡುವೆ ರಾಮಚಂದ್ರ ಕರುಣಾಳು ನೀನೆಂಬ ಬಿರುದುಳಿಸೆನ್ನುವೆ ರಾಮಚಂದ್ರ
--------------
ನಂಜನಗೂಡು ತಿರುಮಲಾಂಬಾ
ಅನಿಲ ಹೃತ್ಕಮಲಸ್ಥ | ಮುನಿ ವೇದವ್ಯಾಸಎನಗಿನ್ನು ತವಧ್ಯಾನ | ಸುಖವೀಯೊ ಶ್ರೀಶಾ ಪ ಚಿದಚಿದ್ವ ಲಕ್ಷಣನೆ | ಚಿತ್ರ ಚಾರಿತ್ರನೇಚತುರಾಸ್ಯ ಪಿತ ನೀನು | ಸುರ ಚಕ್ರವರ್ತೀ |ಚತುರ ರೂಪವ ಧರಿಸಿ | ಚತುರ ವ್ಯೂಹವ ರಚಿಸಿಚತುರ ವಿಧ ಸೃಷ್ಟಿಯನು | ಚತುರ ವಿರಚಿಸಿದೇ1 ಮುನಿ ಪರಾಶರ ತನುಜ | ಶ್ರೀನಿಕೇತನ ಹರಿಯೆಎನಗರುಹು ವೇದಾರ್ಥ | ವೇದವೇದ್ಯಾ |ಘನ ಮಹಿಮ ಕೋಟಿ | ನಿಖಿಲಾಂಡ ನಾಯಕನೆಅನಘ ನೀ ಸಲಹಯ್ಯ | ಕಪಿಲ ರೂಪಾತ್ಮ 2 ಸಚ್ಛಾಸ್ತ್ರ ಕರ್ತೃ ಸತ್ | ಸೂತ್ರಗಳ ನಿರ್ಮಾತೃಸಚ್ಛಾಸ್ತ್ರ ಭಾವಗಳ | ಅರುಹೆ ವಿಬುಧರಿಗೇ |ಮತ್ಸ್ಯಾದಿ ರೂಪನಿ | ನ್ನಿಚ್ಛೆಯಿಂದಲಿ ಪೊಂದಿವತ್ಸರ್ಗೆ ಭೋದಿಸಿದೆ | ಸಚ್ಚಿದಾನಂದಾ 3 ಮೂಲ ಪ್ರಕೃತಿಯ ಮಾನಿ | ಮಹಾಲಕ್ಷ್ಮಿ ನಿನ್ನಯಶೀಲಗಳನನುಸರಿಸಿ | ಸೇವಿಸುವಳೂ |ಪ್ರಲಯ ಕಾಲದಿ ನಿನ್ನ | ಒಲುಮೆಗೋಸುಗ ವಟದಎಲೆಯ ರೂಪದಿ | ಮಲಗಲನು ವಾದಳಯ್ಯ 4 ಮೂರ್ತಿ | ಬದರಿ ಕ್ಷೇತ್ರದಿ ಪೂರ್ಣಭೋದರ ಸುಸೇವೆಯನೆ | ಸತತ ಕೊಳುತಾ |ಮೋದ ಗುಣ ಪೂರ್ಣ ಗುರು | ಗೋವಿಂದ ವಿಠ್ಠಲನೆಹೇ ದಯಾಂಬುಧೆ ನಿನ್ನ | ಪಾದಾಬ್ಜ ತೋರೋ 5
--------------
ಗುರುಗೋವಿಂದವಿಠಲರು