ಒಟ್ಟು 688 ಕಡೆಗಳಲ್ಲಿ , 97 ದಾಸರು , 632 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶಾಮಸುಂದರನೆ ನೀನು ಪ್ರೇಮಾದಿ ಕಾಯೊ ಪ ಧರೆಯೊಳು ನಾ ಬಂದು ಥರಥರದಲ್ಲಿ ನೊಂದು ಮರುಗಿದೆ ತೋರ್ನಿನ್ನ ಚರಣಕಮಲವಾ 1 ಅನ್ಯನೆಂದರಿಯದೆ ನಿನ್ನವನೆಂದೆನ್ನ ಬನ್ನ ಬಿಡಿಸು ಬಾರೋ 2 ಶ್ರೀವತ್ಸಾಂಕಿತ ನೀನು ಶರಣಾಗತ ನಾನು ಸರಸಿಜನಯನ ಬ್ಯಾಗ ಬಾರೊ ನಿನ್ನ 3
--------------
ಸಿರಿವತ್ಸಾಂಕಿತರು
ಶುಭ ಮಂಗಳ ತ್ರಯಭುವನ ವಂದ್ಯ ಸೀತಾಕಾಂತಗೆ ಪ ದಶರಥಾತ್ಮಜನಾಗಿನರಲೀಲಿ ನಟಿಸಿದಗ ಋಷಿಮುಖಕಾಯ್ದ ಹಿಲ್ಯೋದ್ದಾರಗ ಅಸಮಧನುಮುರಿದ ವನಿಜೆಯಾಮಾಲೆಧರಿಸಿದಗ ಬೀಸಜಲೋಚನ ಜನಕ ಜಾಮಾತಗ 1 ಮೂನವರನುಜರ ಕೂಡಿ ಕಲ್ಯಾಣವಿಡಿದಂಗ ದೇವಭೃಗುಪತಿ ಮನಾನಲಿಸಿದವಂಗ ಅವಿಭವಿ ಬಂದಯೋಧ್ಯಾ ಪುರವನಾಳ್ದಂಗ ಜೀವಜಾತಕಸುಖವ ಬಡಿಸಿದಂಗೆ 2 ಗುರು ಮಹೀಪತಿ ಸುತನ ಜೀವ್ಹದಲಿತಾನಿಲಿಸಿ ನಿರುಪಚಾರಿತ್ರ ನುಡಿಸಿದಂಗೆ ಧರೆಯೊಳಗ ದೀನ ಅನಾಥರನು ಪೊರೆವ ಪರಮ ಮಂಗಳ ನಾಮ ಶ್ರೀ ರಾಮಗೆ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶುಭ ಮಂಜುಳಗಾತ್ರ್ರೆಕುಂಜರದಂತೆ ಗಮನೆ ರಂಜಿತಾಂಗಿ ನಿರಂಜನಾಂಗಿ ಪ ಧರೆಯ ಮ್ಯಾಲೆ ಹಿರಿಯಳು ನಾ-ನಿರಲು ಲಜ್ಜೆ ತೊರೆದು ನೀನುಸರಸವಾಡೋದೆ ಮುರಹರನಕರೆದು ಭಾಮಿನಿ ಸುಗುಣೆ ಕಾಮಿನಿ 1 ಪತಿಯ ಪ್ರೀತಿ ಎನ್ನ ಮ್ಯಾಲೆಅತಿಶಯದಿ ಇರಲು ಜ್ಯೇಷ್ಠಸತಿಯಳೇನೇ ನೀನು ನೋಡುಮತಿಯ ರುಕ್ಮಿಣಿ ಸುಪದ್ಮಗಂಧಿನಿ2 ಒಂದು ಕಾಲದಲ್ಲಿ ದಾಸಿ-ಯಿಂದ ಪತಿಯು ಸರಸವಾಡಲುಬಂದಳೇನೇ ಅರಸಿ ಸಮ-ಳೆಂದು ಭಾಮಿನಿ ಸುಗುಣೆ ಕಾಮಿನಿ 3 ದಾಸಿ ಸಮಳು ನಾನು ಅಲ್ಲ ದೋಷ ಮಾತನಾಡಬೇಡಶ್ರೀಶನ ದಯರಾಶಿ ಇರಲುದಾಸಿಯೆ ರುಗ್ಮಿಣಿ ಸುಪದ್ಮಗಂಧಿನಿ 4 ಸಾರೆ ಕೃತ್ಯವಾರೆ ಹೂಡಿದ್ವಾರಾವತಿಯಿಂದ ಎನ್ನಸಾರೆ ಬಂದ ಪ್ರೀತಿಯು ಅ-ಪಾರೆ ಭಾಮಿನಿ ಸುಗುಣೆ ಕಾಮಿನಿ5 ಕಡಲಶಾಯಿ ತಡೆದರಿನ್ನುದಿಡುಗು ದೇಹ ಬಿಡುವೆನೆಂಬೊನುಡಿಯ ಕೇಳಿ ಪಿಡಿದನೆಬಿಡದೆ ರುಗ್ಮಿಣಿ ಸುಪದ್ಮಗಂಧಿನಿ 6 ಮಂದರಧರನು ಪ್ರೀತಿ-ಯಿಂದ ನಿನ್ನ ಪಡೆದನೇನೆಒಂದು ಮಣಿಯ ಕಾರಣದಿಬಂದೆ ಭಾಮಿನಿ ಸುಗುಣೆ ಕಾಮಿನಿ7 ಸುಮ್ಮನೆ ಬಂದವಳಿಗೆಬ್ರಹ್ಮ-ಲಗ್ನದಿ ಬಂದೆನಗೆಸಾಮ್ಯವೇನೆ ಯಾಕೆ ನಿನಗೆಹೆಮ್ಮೆ ರುಗ್ಮಿಣಿ ಸುಪದ್ಮಗಂಧಿನಿ. 8 ಮಾನಾದಿ ಭಕ್ತಿಯು ಕನ್ಯಾ-ದಾನವು ಲೋಕದೊಳಗುಂಟುಏನು ನಿನ್ನ ತಾತ ಕೊಟ್ಟದೀನ ಭಾಮಿನಿ ಸುಗುಣೆ ಕಾಮಿನಿ 9 ಎನ್ನ ಹಂಗದೆಂದುಪ್ರಸನ್ನ ಕೇಳಿ ಶತಧನ್ವನಬೆನ್ನಟ್ಟಿ ಕೊಂದನೇ ನೀ-ಚೆನ್ನ ರುಗ್ಮಿಣಿ ಸುಪದ್ಮ ಗಂಧಿನಿ 10 ವೀರ ಅರಸರ ಸ್ವಭಾವಚೋರರ ಕೊಲ್ಲಬೇಕೆಂಬೋಸಾರ ಪ್ರೀತಿಯದರಿಂದತೋರಿ ಭಾಮಿನಿ ಸುಗುಣೆ ಕಾಮಿನಿ11 ಇಂದ್ರಾದಿ ದೇವತೆಗಳೊಳುಸಾಂದ್ರಯುದ್ಧವನ್ನೆ ಮಾಡಿವೀಂದ್ರ ಎನಗೆ ಪಾರಿಜಾತತಂದ ರುಗ್ಮಿಣಿ ಸುಪದ್ಮಗಂಧಿನಿ12 ಕ್ಲೇಶ ನೋಡಿ ತಂದತರುವ ಭಾಮಿನಿ ಸುಗುಣೆ ಕಾಮಿನಿ13 ನಿಜಳೆಂದು ರಂಗನು ಎನ್ನವಿಜಯಯಾತ್ರೆಯಲ್ಲಿ ತನ್ನಭುಜಗಳಿಂದಾಲಂಗಿಸಿದಸುಜನೆ ರುಗ್ಮಿಣಿ ಸುಪದ್ಮಗಂಧಿನಿ 14 ಅರಸರ ಸ್ವಭಾವ ತಮ್ಮಅರಸೇರ ಮನೆಯೊಳಗಿಟ್ಟುಸರಸ ದಾಸೇರಿಂದ್ಹೋಗೋದುಸ್ಮರಿಸೆ ಭಾಮಿನಿ ಸುಗುಣೆ ಕಾಮಿನಿ 15 ಸಾರವಚನ ಕೇಳಿ ಭಾಮೆಮೋರೆ ಕೆಳಗೆ ಮಾಡುತಿರಲುನಾರಿ ರುಕ್ಮಿಣಿ ಭಾಮೆಯರನ್ನುವೀರ ಕರೆದನು ತಾ ಸೇರಿ ಮೆರೆದನು16 ಮಂಗಳಾಂಗ ಮಹಿಮ ಕೇಶವಾ-ಲಿಂಗಿಸಿದ ಭೈಷ್ಮಿಯನ್ನುತುಂಗಗುಣ ಗೋಪೀರಮಣರಂಗವಿಠಲನು ಅನಂಗಜನಕನು 17
--------------
ಶ್ರೀಪಾದರಾಜರು
ಶುಭ ಚರಣಕೆ ಹೊಯ್ಯಂದ ಹಂಗುರವ | ಹೊಯ್ಯಂದ ಡಂಗುರವ ಹೊಯ್ಯಂದ ಡಂಗುರವ ಹೊಯ್ಯಂದ ಡಂಗುರವ ಪ ಸಂತರೊಳಗ ಮಹಂತನು ಈತನೇ | ನಿಂತರೆ ನೆರೆಯಲಿ ಸ್ವರ್ಗದ ಸುಖವುಂಟು | ಇಂತಿಪ್ಪ ಪ್ರಪಂಚ ಪರಮಾರ್ಥವೆನಿಸಿದ | ಕರತಲ ಮಲಕಂತೆ ತೋರಿದ 1 ಗುರು ಎಂದರೆ ಹಗದೊಳು ತಾನೇ ತಾನೇ | ಮರಳು ಮಂಕಗಳಿಗೆ ಗುರುತನ ಥರವೇ | ನÉರೆಯಂತ್ರ ಮಂತ್ರದಿ ಸಿಂತ್ರಗೆಡಹುದಲ್ಲಾ | ಪರಬ್ರಹ್ಮ ಇದೆಕೋ ಯಂದಯ್ಯ ತೋರುವ2 ನರ ನಲ್ಲಾ ನರನಲ್ಲಾ ಅವತಾರ ದೇಹೆಂದು | ಧರೆಯೊಳು ಮುಂಡಿಗೆ ಹಾಕುವೆ ಇದಕಿನ್ನು | ಗುರುತಿನ ಮಾತವ ಅರಿತನು ನಂದನ ಘನ | ನೆರೆ ಸಂಶಯಾತ್ಮಗ ದುರ್ಗತಿ ತಪ್ಪದು
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶೋಭನವೆನ್ನಿರೋ ಶೋಭನ ಬನ್ನಿರೆ ಶೋಭನ ಬನ್ನಿ ಸವ್ಯದಿಂದ ಧ್ರುವ ಶೋಭಾನವೆಂಬೋದು ಸೋಹಂಭಾವಗುಣ ಅಹಂಭಾವಿಗಳು ಅರಿಯವು ಅಹಂಭಾವಿಗಳು ಅರಿಯುವು ಅನಂಗನ ಅಹಂಭ್ರಮೆಯು ವಿಪರೀತ 1 ಶೋಭನವೆನ್ನಿರೇ ಸಿದ್ಧಾಂತನುಭವಿಗಳು ಕಾಮಿ ಕಾಮಣ್ಣನ ಮದುವಿಗೆ ಪ್ರಾಣಿ ಮಾತ್ರಗಳೆಲ್ಲ ಬರಬೇಕು 2 ಶೋಭನವೆನ್ನಿರೇ ಮದೂಣಿಗಾನಂಗಗೆ ಕಾಮಿತದಳಗಿತ್ತಿ ಅರಸಗ ಕಾಮಿತದಳಗಿತ್ತಿ ಅರಸ ಮೋಹನ್ನಗೆ ನೆರೆಯಿತು ಲೋಕ ಧರೆಯೊಳು 3 ಶೋಭನವೆನ್ನಿರೇ ಕಾಮಿ ಕಾಮಣ್ಣಗೆ ಕಾಯದೊಳೀಹ್ಯ ಕರುಣಿಗೆ ಕಾಯದೊಳಿದ್ದು ಮೆರೆವ ಅನಂಗನು ಚರ್ಮದಬೊಂಬಿ ಗುರುತಾಗಿ 4 ಶೋಭನವೆನ್ನಿರೇ ಸಜ್ಜನ ಸಾವಿತ್ರೇರು ಆನಿ ಮೊದಲೆ ಇರುಹು ಕಡಿಗೆಲ್ಲ ಆನಿಮೊದಲೆ ಇರುಹು ಕಡಿಗೆಲ್ಲ ಮಹಿಪತಿ ಶೋಭಾನಯೆಂದ ಸಬೂದಿಂದ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶೋಭಾನವೆನ್ನಿರೆ ಶುಭಕರ ಸಾವಿತ್ರೇರು | ಪ್ರಭುಗುರು ಆತ್ಮಾ ಶ್ರೀರಾಮಗ ಪ ರಾಮರಾವಣ ಕ್ರೋಧನಿಸ್ಸೀಮ ಕುಂಭಕರ್ಣಾದಿ | ತಾಮಸದವರಾ ಮದಮುರಿದು | ತಾಮಸದವರ ಮದಮುರಿದು ಹೃದಯಕ | ಪ್ರೇಮ ಜಯೋತ್ಸವದಿಂದೈ ತಂದಾ 1 ಒಡನೆ ಶಾಂತಿ ಸೀತೆಯಾ ಬಿಡಿಸಿ ತಂದನು ಸೆರೆಯಾ | ದೃಢವಿಭೀಷಣನ ಸ್ಥಾಪಿಸಿದನಾ | ದೃಢವಿಭೀಷಣನ ಸ್ಥಾಪಿಸಿ ಆಶಾಪಾಶ | ಕಡಲ ಮಧ್ಯ ಪೂರದೊಳು ಈಗ 2 ವಿವೇಕ ಹರಿವಾನದಿ ಭಾವದಾರತಿಯೋಳು | ತೀವಿದ ಸಮ್ಯಜ್ಞಾನ ಜ್ಯೋತಿ | ತೀವಿದ ಸಮ್ಯಜ್ಞಾನಜ್ಯೋತಿಯಿಂದ | ದೇವದೇವೇಶಗ ತಿಂದೀಗ 3 ಅರಿಗಳ ಶಿಕ್ಷಿಸು ಶರಣರ ರಕ್ಷಿಸು | ಧರೆಯೊಳುಯೆಂದು ಹರಸುತ | ಧರೆಯೊಳು ಎಂದು ಹರಸುತ ಮುತ್ತಿನ | ಪರಮಶಾಶಯ ನೊಸಲೊಳಿಟ್ಟು 4 ಇಹಪರಸುಖದಾತಾ ಬಾಹ್ಯಾಂತ್ರ ಸದೋದಿತಾ ಮಹಿಪತಿಸುತ ಪ್ರಭು ರಘುನಾಥ | ಮಹಿಪತಿಸುತ ಪ್ರಭು ರಘುನಾಥ ನೆನೆವರ ಸಹಕಾರಿ ನಮ್ಮ ಸದೋದಿತ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಶ್ರಯಧೇನು ಬಂತು ಮನಿಗೆ ದಯ ಕರುಣದಿಂದೊಲಿದು ಸರ್ವಾರ್ಥಗರೆವುತಲಿ ಧ್ರುವ ತನ್ನಿಂದ ತಾನೊಲಿದು ಚೆನ್ನಾಗಿ ತೋರ್ವಿಳಿದು ಭಿನ್ನವಿಲ್ಲದೆ ನೋಡಿ ಹಂಬಲಿಸುತ ಉನ್ನತೋನ್ನತ ಮೋಹ ಮೊಳಿಯೊಳಮೃತ ತುಂಬಿ ಪುಣ್ಯಧಾರಿಂದೊರಗಿ ಭೋರಿಡುತಗಲೆರವುತಲಿ 1 ಸುರಸ ಸಾರಾಯದನುಭವ ಬೆರಸಲಾಗಿ ತಾಂ ವರ ಮಹಾಕೃಪೆ ಘನದೊಳವಿನಿಂದ ಧರೆಯೊಳಾನಂದ ಸುಖ ಸಾರಿಡುತ ಪೂರ್ಣ ಇರ್ಹುಳಗಲೆನದೆ ಸರ್ವಪತಿ ಯಿಂದ್ಹರುಷಗರೆವಾ 2 ಬೆಳಗಿ ತನ್ನರ ಬೆಳೆಸಲಾಗಿ ಸದ್ವಸ್ತು ತಾಂ ತಿಳಿದು ಶ್ರಯಧೇನಾಗಿ ಬಂತು ಬಳಿಗೆ ಕಳವಳಿಸಿ ಕರುಣ ಕಟಾಕ್ಷದಿಂದಲಿ ನೋಡಿ ಎಳೆಗರುವ ಮಹಿಪತಿಗಮೃತನುಣಿಸಿಕೊಳಲಾಗಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀ ಅಕ್ಷೋಭ್ಯ ತೀರ್ಥರ ಚರಿತ್ರೆ ಅಕ್ಷೋಭ್ಯ ತೀರ್ಥಗುರು ಸಾರ್ವಭೌಮರು ಎಮ್ಮ ರಕ್ಷಿಪ ಕೃಪಾನಿಧಿಗೆ ಶರಣು ಶರಣೆಂಬೆ ಪಕ್ಷೀಶ ವಾಹನ್ನ ಲಕ್ಷ್ಮೀಶ ಕಮಲಾಕ್ಷ ವಿಷ್ಣು ಆತ್ಮಗೆ ಪ್ರಿಯ ಸತ್ತತ್ವವಾದಿ ಪ ಅಖಿಳಗುಣ ಆಧಾರ ನಿರ್ದೋಷ ಶ್ರೀರಮಣ ಜಗದಾದಿ ಮೂಲಗುರು ಅಗುರು ಶ್ರೀ ಹಂಸ ವಾಗೀಶ ಸನಕಾದಿ ದೂರ್ವಾಸಾದಿಗಳ ಪೀಳಿಗೆ ಗುರುಗಳಿಗೆ ಶರಣು ಶರಣೆಂಬೆ 1 ಅಚ್ಯುತ ಪ್ರೇಕ್ಷಾಖ್ಯ ಪುರುಷೋತ್ತಮತೀರ್ಥ ಅಚ್ಯುತ ಪ್ರೇಕ್ಷರ ಶಿಷ್ಯರೆಂದೆನಿಪ ಅಚ್ಯುತನ ಮುಖ್ಯಾಧಿಷ್ಠಾನ ಶ್ರೀಮಧ್ವ ಖಚರೇಂದ್ರ ಫಣಿಪಮೃಡ ಅಮರೇಂದ್ರವಂದ್ಯ 2 ಕರ ಅಬ್ಜಜರು ಪದ್ಮನಾಭನೃಹರಿ ಮಾಧವಾಕ್ಷೋಭ್ಯ ಈ ಮಹಾಗುರುಗಳು ಸರ್ವರಿಗು ಆನಮಿಪೆ ಸುಮನಸ ಶ್ರೇಷ್ಠರು ಮಹಿಯಲಿ ಪುಟ್ಟಿಹರು 3 ಸಾಧು ವೈದಿಕ ವೇದಾಂತ ಸತ್ತತ್ವ ಮತ ಮಧ್ವ ಮತವೇ ಅನ್ಯ ಯಾವುವೂ ಅಲ್ಲ ಎಂದು ನಿಶ್ಚೈಸಿ ಶೋಭನಭಟ್ಟಸ್ವಾಮಿ ಶಾಸ್ತ್ರಿ ಮೊದಲಾದವರು ಮಧ್ವಗೆರಗಿದರು 4 ಸೂರಿವರ ಶೋಭನ ಭಟ್ಟಾದಿಗಳಂತೆ ಸಾರಾಸಾರ ವಿವೇಕಿ ಗೋವಿಂದ ಶಾಸ್ತ್ರಿಯು ಮಹಾ ದೊಡ್ಡ ಪಂಡಿತರು ತಾನೂ ಎರಗಿ ಶರಣಾದರು ಮಧ್ವರಾಯರಲಿ 5 ಇಂಥಾ ಮಹಾತ್ಮರ ಇನ್ನೂ ಬಹು ಸಜ್ಜರನ ಉದ್ಧರಿಸಲಿಕ್ಕೇವೆ ಹರಿ ಅಜ್ಞೆಯಿಂದ ಈ ಧರೆಯಲ್ಲಿ ತೋರಿಹ ಮಧ್ವರಾಯರ ಶಾಸ್ತ್ರಿ ಬೇಡಿದರು ಸಂನ್ಯಾಸ ಕೊಡು ಎಂದು 6 ಸಚ್ಚಾಸ್ತ್ರ ಪ್ರವಚನ ಪಟು ವಿದ್ವನ್ಮಣಿಯು ನಿಶ್ಚಲ ಭಕ್ತಿಮಾನ್ ಸವೈರಾಗ್ಯ ವಿಪ್ರ ಅಚಲ ಸತ್ತತ್ವನಿಶ್ಚಯ ಜ್ಞಾನಿ ಶಾಸ್ತ್ರಿಗೆ ಅಕ್ಷೋಭ್ಯ ನಾಮನ ಇತ್ತರಾಚಾರ್ಯ 7 ಪ್ರಣವ ಮೂಲಾದಿ ಸುಮಂತ್ರ ಉಪದೇಶಿಸಿ ತನ್ನ ಮಠದಲ್ಲಿ ಅಕ್ಷೋಭ್ಯತೀರ್ಥರಿಗೆ ವನರುಹನಾಭರಿಂದ ನಾಲ್ಕನೇ ಸ್ಥಾನವ ಘನದಯದಿ ಇತ್ತರು ಆನಂದಮುನಿಯು 8 ಬದರಿಗೆ ಮೂರನೇ ಬಾರಿ ತೆರಳುವ ಪೂರ್ವ ಮಧ್ವ ಮುನಿ ನೇಮಿಸಿದ ಕ್ರಮದಿಂದಲೇವೆ ಮಾಧವ ತೀರ್ಥರು ವೇದಾಂತ ಪೀಠದಲಿ ಕುಳಿತುಜ್ವಲಿಸಿದರು 9 ಪದ್ಮನಾಭತೀರ್ಥರ ಪಾದಪದ್ಮಗಳಿಗೆ ಸದಾ ನಮೋ ನಮೋ ಎಂಬೆ ಇವರ ಪೀಳಿಗೆಯ ವಿದ್ಯಾಕುಶಲರು ಸೂರಿಗಳ ಚರಣಕ್ಕೆ ಸಂತೈಪರೆಮ್ಮ ಸದಾ ನಮೋ ಸರ್ವದಾ 10 ನರಹರಿತೀರ್ಥರು ಚರಣ ಸರಸೀರುಹದಿ ಶರಣಾದೆ ಕಾಯ್ವರು ಈ ಮಹಾನ್ ಇಹರು ವರಾಹ ತನಯಾ ಸರಿದ್ವರಾಕ್ಷೇತ್ರದಲಿ ಶ್ರೀ ವೃಂದಾವನದೊಳು ಹರಿಯ ಧ್ಯಾನಿಸುತ 11 ಮಾಧವತೀರ್ಥರ ಪಾದಪದ್ಮಗಳಿಗೆ ಸದಾನಮೋ ನಮೋ ಎಂಬೆ ಇವರ ಪೀಳಿಗೆಯ ಯತಿಗಳೂ ಭಕ್ತಿಮಾನ್ ಜ್ಞಾನಿಗಳ ಚರಣಕ್ಕೆ ಆದರದಿ ನಮಿಸುವೆ ಸದಾ ಪೊರೆವರೆಮ್ಮ 12 ಸುಲಭರು ಸುಜನರಿಗೆ ಶರಣರ ಸಲಹುವರು ಮಾಲೋಲನೊಲಿದಿಹ ಅಕ್ಷೋಭ್ಯತೀರ್ಥ ಬಲು ಖಿನ್ನ ಬ್ರಾಹ್ಮಣನು ಬ್ರಹ್ಮ ಹತ್ಯ ಮಾಡಿದವ ಕಾಲಲ್ಲಿ ಬಿದ್ದು ಶರಣಾದ ಗುರುಗಳಲಿ 13 ಗುರು ದಯಾನಿಧಿ ಅಕ್ಷೋಭ್ಯತೀರ್ಥರು ಆಗ ಶರಣಾದ ಪುರುಷನ ಪಶ್ಚಾತ್ತಾಪ ಖರೆಯೇ ಎಂಬುವುದನ್ನು ಜನರಿಗೆ ತಿಳಿಸಲು ಏರಿ ಮರ ನದಿಯಲಿ ಬೀಳೆ ಹೇಳಿದರು 14 ತನ್ನಯ ಮಹಾಪಾಪ ಕಳೆಯುವ ಗುರುಗಳು ಏನು ಹೇಳಿದರೂ ಮಾಡುವೆ ತಾನೆಂದು ಸನ್ನಮಿಸಿ ಗುರುಗಳಿಗೆ ನದಿ ಬದಿ ಮರಹತ್ತೆ ದೀನ ರಕ್ಷಕ ಗುರು ಇಳಿಯೆ ಹೇಳಿದರು 15 ವೃಕ್ಷದಿಂದಿಳಿದ ಆ ವಿಪ್ರಘಾತುಕನ ಮೇಲೆ ಅಕ್ಷೋಭ್ಯತೀರ್ಥರು ಶಂಖತೀರ್ಥವನ್ನ ಪ್ರೋಕ್ಷಿಸಿ ಆತನ ಮಹಾ ಬ್ರಹ್ಮಹತ್ಯಾ ದೋಷ ಕಳೆದರು ಪಂಕ್ತಿಯಲಿ ಸೇರಿಸಿದರು 16 ಶಂಖತೀರ್ಥದ ಮಹಿಮೆ ಅಲ್ಲಿದ್ದ ಜನರಿಗೆ ಶಂಕೆಯಲ್ಲದೆ ತಿಳಿಸಿ ಬಂದು ಬೇಡುವವರ ಡೊಂಕು ಕೊರತೆಗಳೆಲ್ಲ ನೀಗಿಸಿ ಯೋಗ್ಯದಿ ಶ್ರೀಕಾಂತನಲಿ ಭಕ್ತಿ ಪುಟ್ಟಿಸಿಹರು 17 ತಮ್ಮಲ್ಲಿ ಬೇಡುವ ಅಧಿಕಾರಿಯೋಗ್ಯರಿಗೆ ಶ್ರೀಮಧ್ವಶಾಸ್ತ್ರದ ದಾಢ್ರ್ಯ ಜ್ಞಾನ ಶ್ರೀ ಮನೋಹರನನ್ನ ಅಪರೋಕ್ಷಿಕರಿಸುವ ಸುಮಹಾ ಉಪಾಯವ ಅರುಹಿಹರು ದಯದಿ 18 ಮಧ್ವಸಿದ್ಧಾಂತ ಸ್ಥಾಪನ ಮಾತ್ರವಲ್ಲದೇ ವೇದ ವಂಚಕ ದುರ್ಮತಗಳ ಖಂಡನವ ಪೋದಕಡೆ ಮಾಡುತ್ತಾ ದಿಗ್ವಿಜಯ ಜಯಶೀಲ - ರೆಂದು ಮರ್ಯಾದೆಗಳ ಕೊಂಡಿಹರು ಜಗದಿ 19 ಅದ್ವೈತವಾದಿಯು ಶಾಂಕರ ಮಠಾಧೀಶ ವಿದ್ಯಾರಣ್ಯರು ಪ್ರಸಿದ್ಧ ಪಂಡಿತರು ಎದುರು ನಿಂತರು ಅಕ್ಷೋಭ್ಯ ತೀರ್ಥರ ಮುಂದೆ ವಾದಿಸಿದರು ಮುಳುಬಾಗಿಲು ಸಮೀಪ 20 ಶ್ವೇತಕೇತು ಉದ್ದಾಲಕರ ಸಂವಾದ ತತ್ವ ಮಸಿ ವಾಕ್ಯವೇ ವಾದದ ವಿಷಯ ವೇದಾಂತ ದೇಶಿಕರು ರಾಮಾನುಜೀಯತಿಯ ಅಧ್ಯಕ್ಷತೆಯಲ್ಲಿ ಸಭೆಯು ಕೂಡಿತ್ತು 21 ಛಾಂದೋಗ್ಯ ಉಪನಿಷತ್ತಲ್ಲಿರುವ ವಾಕ್ಯವು ಸಆತ್ಮಾ ತತ್ವಮಸಿ ಎಂಬುವಂಥಾದ್ದು ಭೇದ ಬೋಧಕವೋ ಅಭೇದ ಬೋಧಕವೋ ಎಂದು ವಾದವು ಆ ಈರ್ವರಲ್ಲಿ 22 ಆತ್ಮ ಶಬ್ದಿತ ನಿಯಾಮಕಗು ನಿಯಮ್ಯ ಜೀವನಿಗೂ ಭೇದವೇ ಬೋಧಿಸುವುದು ಆ ವಾಕ್ಯವೆಂದು ಸಿದ್ಧಾಂತ ಬಹುರೀತಿ ಸ್ಥಾಪಿಸಿದರು ಅಕ್ಷೋಭ್ಯರು ಸೋತಿತು ವಿದ್ಯಾರಣ್ಯರ ಐಕ್ಯವಾದ 23 ಅಸಿನಾತತ್ವ ಮಸಿನಾ ಪರಜೀವಪ್ರಭೇದಿನಾ ವಿದ್ಯಾರಣ್ಯ ಮಹಾರಣ್ಯಂ ಅಕ್ಷೋಭ್ಯ ಮುನಿರಚ್ಛಿನತ್ ಎಂದು ಬರೆದರು ತಮ್ಮಯ ಗ್ರಂಥದಲ್ಲಿ ಮಧ್ಯಸ್ತ ವೇದಾಂತದೇಶಿಕ ಸ್ವಾಮಿಗಳು 24 ಇಳೆಯ ಸಜ್ಜನರಿಗೆ ಜಯತೀರ್ಥರನಿತ್ತ ಮಾಲೋಲಪ್ರಿಯ ಅಕ್ಷೋಭ್ಯರ ಮಹಿಮೆ ಅಲ್ಪಮತಿ ನಾನರಿಯೆ ಇಲ್ಲಿ ಒಂದೋ ಎರಡೋ ಸ್ಥಾಲಿ ಪುಲೀಕ ನ್ಯಾಯದಲಿ ಪೇಳಿಹುದು 25 ನದಿ ದಡದಿ ಕುಳಿತಿದ್ದ ಅಕ್ಷೋಭ್ಯತೀರ್ಥರು ಎದುರಾಗಿ ನದಿಯಲ್ಲಿ ಆಚೆ ದಡದಿಂದ ಕುದುರೆ ಸವಾರನು ವರ್ಚಸ್ವಿ ಯುವಕನು ಬೆದರದೆ ಪ್ರವಾಹದಲಿ ಬರುವುದು ಕಂಡರು 26 ಕುದುರೆ ಮೇಲ್ ಆಸೀನನಾಗಿದ್ದ ಯುವಕನು ಕ್ಷುತ್‍ತೃಷಿ ಶಮನಕ್ಕೆ ಯತ್ನ ಮಾಡುತ್ತಾ ಉದಕವ ಕೈಯಿಂದ ತುಂಬಿಕೊಳ್ಳದಲೇ ಎತ್ತುಗಳು ಕುಡಿವಂತೆ ಬಾಯಿ ಹಚ್ಚಿದನು 27 ಮಾಧವ ಮಧ್ವರು ಮೊದಲೇ ಸೂಚಿಸಿದಂತೆ ಇಂದು ಆ ಕುರುಹರಿತು ಅಕ್ಷೋಭ್ಯರು ಇದು ಏನು ಪಶುವಂತೆ ಎಂದು ಧ್ವನಿಗೂಡಲು ಹಿಂದಿನ ಜನ್ಮ ಯುವಕಗೆ ನೆನಪು ಬಂತು 28 ಪಶು ಶಬ್ದ ಗುರುಮುಖದಿಂಬಂದಲಾಕ್ಷಣ ಪೂರ್ವ ಸಂಸ್ಕಾರ ಪ್ರತಿಭೆಯು ಉದಯವಾಯ್ತು ದಶಪ್ರಮತಿಗಳ ತಾನು ಎತ್ತಾಗಿ ಸೇವಿಸಿದ್ದು ಹಸನಾಗಿ ಟೀಕೆ ಬರೆಯಲಾಜÉ್ಞ ಕೊಂಡದ್ದು 29 ನಗಾರಿಸಮ ಬಲಿಯುವಕನು ಪ್ರವಾಹದ ವೇಗ ಲೆಕ್ಕಿಸದಲೇ ದಡಕೆ ತಾ ಬಂದು ಮುಗಿದುಕರ ಬಾಗಿಶಿರ ನಮಿಸಿ ಅಕ್ಷೋಭ್ಯರ ಆಗಲೇ ಸಂನ್ಯಾಸ ಕೊಡಲು ಬೇಡಿದನು 30 ಗಾಧಿ ಅರ್ಜುನ ಸಮ ಬಲರೂಪದಲಿ ತೋರ್ಪ ಈತ ರಾಯರ ಸುತನಾದರೂ ವೈರಾಗ್ಯ ಯುತ ಭಕ್ತಿಮಾನ್ ಸುಶುಭಲಕ್ಷಣನು ಎಂದು ಹರಿ ಮಧ್ವನಿಯಮಿತ ಅವಗೆ ಕೊಟ್ಟರು ಸಂನ್ಯಾಸ 31 ಶ್ರೀಯಃಪತಿಗೆ ಪ್ರಿಯತರ ಜಯತೀರ್ಥನಾಮವ ದಯಾಶೀಲ ಹೊಸಯತಿಗೆ ಇತ್ತು ಅಭಿಷೇಕ ಅಕ್ಷೋಭ್ಯ ಗುರುಮಾಡೆ ಗಗನದಿಂ ಪೂವರ್ಷ ಜಯ ಘೊಷ ಹರಡಿತು ಪರಿಮಳ ಸುಗಂಧ 32 ಶ್ರೀಮಧ್ವಾಚಾರ್ಯರು ಬೋಧಿಸಿ ತೋರಿಸಿದ ರಮಾಪತಿ ಪೂಜಾಸತ್ತತ್ವವಾದ ದುರ್ಮತ ಖಂಡನದ ರೀತಿಯ ಜಯಾರ್ಯರಿಗೆ ಸುಮ್ಮುದದಿ ಅರುಹಿದರು ಗುರುಸಾರ್ವಭೌಮ 33 ಶೀಲತಮ ಗುರುವರ್ಯ ಅಕ್ಷೋಭ್ಯತೀರ್ಥರು ಇಳೆಯಲ್ಲಿ ಮಧ್ವಮತ ಹರಿಭಕ್ತಿಯನ್ನ ಬೆಳೆಸಲು ಪ್ರತ್ಯೇಕ ಮಠವ ಸ್ಥಾಪಿಸಿದರು ತ್ರೈಲೋಕ ಭೂಷಣ ತೀರ್ಥರ ಮೊದಲ್ಮಾಡಿ34 ಆದಿ ಮಠ ಹರಿನೈದು ಸಮೀಪ ಪಟ್ಟವ ಆಳಿ ಹನ್ನೊಂದು ನೂರು ಅರವತ್ತೇಳ ಶಕವರುಷ ವದ್ಯ ಪಂಚಮಿ ಮಾರ್ಗಶಿರ ವಿಶ್ವಾವಸುವಲ್ಲಿ ಮಧ್ವ ಹೃದಯಾಬ್ಜಗನ ಪುರವ ಐದಿದರು 35 ಮತ್ತೊಂದು ಅಂಶದಲಿ ಮಳಖೇಡ ಗ್ರಾಮದಲಿ ನದಿ ತೀರದಲಿ ಹರಿಯ ಧ್ಯಾನ ಮಾಡುತ್ತಾ ಬಂದು ಬೇಡುವವರಿಷ್ಟಾರ್ಥ ಪೂರೈಸುತ ವೃಂದಾವನದಲ್ಲಿ ಕುಳಿತಿಹರು ಕರುಣಿ 36 ಶಾಶ್ವತ ಸರ್ವಾಶ್ರಯ ಗುಣಗಣಾರ್ಣವ ಅನಘ ಜೀವ ಜಡ ಭಿನ್ನ ಪರಮಾತ್ಮ ವಿಧಿತಾತ ಮಧ್ವಹೃತ್ಪದ್ಮಗ ಶ್ರೀ ಪ್ರಸನ್ನ ಶ್ರೀನಿವಾಸಗೆ ಸರ್ವದಾಪ್ರಿಯ ಅಕ್ಷೋಭ್ಯ ಗುರೋ ಶರಣು 37 ಪ || ಶ್ರೀ ಅಕ್ಷೋಭ್ಯ ತೀರ್ಥಚರಿತೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಗುರು ರಾಜರ ಸೇವಿಸಿರೋ---- ದಂಡ ಕಮಂಡಲ ಪಿಡಿದಿ ನಿಂದಿಹ ಹಸ್ತ ಭೂ ಮಂಡಲವೆಲ್ಲಾ ತಿರುಗಿ ಬಂದಿಹ ಹಸ್ತ ಬಿಡದೆ ಭಕುತರಾ ಸಲಹುವ ಹಸ್ತ ಪತಿ ಶ್ರೀ ರಘು ರಾಮರ ಸೇವಿಪ ಹಸ್ತಾ ಮತ್ತೆ ಭೂಸುರರಿಗೆಲ್ಲಾ ಅಭಯವೀಯುವ ಹಸ್ತ ಮುಕ್ತಿಮಾರ್ಗಕೆ ದಾರಿ ತೋರುತಿಹ ಹಸ್ತ ಚಿತ್ತಜನಯ್ಯನ ನೆನೆದು ಮನದಲ್ಲಿ ನಲಿಯುವ ಹಸ್ತಾ ಭೂತ ಪ್ರೇತಗಳನೆಲ್ಲ ಓಡಿಸುತಿಹ ಹಸ್ತ ಸಕಲವ್ಯಾಧಿಗಳ ಹರಿಸಿರಕ್ಷಿಪ ಹಸ್ತ ಸುವ ಜನರ ಉದ್ಧಾರ ಗೈಯುವ ಹಸ್ತ ಸರುವದಾ ಶಿರಿಪತಿಯ ಕೊಂಡಾಡುವ ಹಸ್ತಾ ಕನಸಿಲಿ ಬಂದು ಕಣ್ಣಪೊರೆ ತೆಗೆದಿಹ ಹಸ್ತ ಮುದದಲಿ ಮಗಿವಿಗೆ ಮಾತ ಕಲಿಸಿದ ಹಸ್ತ ಜೀವ ಕಳೆ ತುಂಬಿದ ಹಸ್ತ ಪರಮ ಪಾವನವಾದ ಶ್ರೀಗುರುರಾಜರ ಹಸ್ತಾ ಜಗವೆಲ್ಲ ನೋಡೆ ಪ್ರಖ್ಯಾತಿ ಪಡೆದಿಹ ಹಸ್ತ ನಗುತ ಮಂತ್ರಾಲಯದೊಳು ಬಂದು ನಿಂದಿಹ ಹಸ್ತ ಅಗಣಿತಮಹಿಮೆ ತೋರಿ ಮೆರೆಯುತಿಹಾ ಹಸ್ತ ಸರಿಗಾಣೆ ಧರೆಯೊಳು ಶ್ರೀರಾಘವೇಂದ್ರರ ದಿವ್ಯ ಹಸ್ತಾ.
--------------
ರಾಧಾಬಾಯಿ
ಶ್ರೀ ಗುರುವರದೇಂದ್ರರ ಸ್ತೋತ್ರಗಳು ಅಂದಣೇರಿದ ವರದೇಂದ್ರ ಮುನಿಪರ ನಿಂದು ಪಾಡುವರಫವೃಂದ ತರಿವರ ಪ ಅಂದದಿ ಭೂಸುರ ಸಂದಣಿ ಮಧ್ಯದಿ ಚಂದದಿ ಬಹು ಕರ್ಮಂದಿಗಳರಸ ಅ.ಪ ಶ್ರೀ ಮಧ್ವಮತಾಂಬುಧಿ ಸೋಮ ನಿಷ್ಕಾಮ ತಾಮಸಮತಕÀಂಜಸ್ತೋಮ ನಿಧೂಮ ಆ ಮಹಾಭಕ್ತ ಕುಮುದ ಪ್ರೇಮ ಸತ್ಕಾಮ ಕಾಮಿತ ಕಲ್ಪದ್ರುಮಗುರುಸಾರ್ವಭೌಮ ರಾಮ ಪದಾಂಬುಜ ಪ್ರೇಮದಿ ಭಜಿಸುವ ಭೂಮಿಸುರರ ಹೃತ್ತಾಮಸಹಾರಾ 1 ಉದಿತಾಕರ್À ಸಂಕಾಶ ವಿಧಿಕುಲಾಧೀಶ ಮುದದಿ ಭಜಿಸುವ ಭಕ್ತಹೃದಯನಿವಾಸ ಸದಮಲಭಕ್ತಙÁ್ಞನ ಉದಜವಿಕಾಸ ವಿಧಿಕುಲದ್ವೇಷಿ ಕುಮುದ ತತಿನಾಶ ವಿಧವಿಧದಲಿ ಹರಿಪದ ಭಜಿಸುವ ಮತಿ ವದಗಿ ಪಾಲಿಸು ಹೃದಜನಸದಯಾ 2 ಕರುಣಾನಿಧಿಯೆ ನಿನ್ನ ಚರಣ ಸೇವಕರ ಜರಮರಣಾದಿ ದೋಷತ್ವರಿತ ಪರಿಹಾರ ಶರಧಿ ವಿಹಾರ ನಿರುತದಿ ಹರಿಯನಾಮ ಸ್ಮರಿಸುವಧೀರ ವರದೇಶ ವಿಠಲನ ಕರುಣದಿ ಧರೆಯೊಳು ಮೆರೆಯುವ ಯತಿಕುಲವರಿಯ ಸುಚರಿಯಾ 3
--------------
ವರದೇಶವಿಠಲ
ಶ್ರೀ ಜಗನ್ನಾಥದಾಸ ನಮಿಪೆ ಗುರುರಾಜ ಸಾತ್ವಿಕವಪುಷ ಪ ಈ ಜಗದೊಳು ನಿಮಗೆಣೆಗಾಣೆ ಸತತ ನಿ - ವ್ರ್ಯಾಜದಿ ಹರಿಯ ಗುಣೋಪಾಸನೆ ಮಾಳ್ಪ ಅ.ಪ. ಹರಿದಾಸ ಕುಲವರ್ಯರೆನಿಸಿ ಕಲ್ಪತರುವಂದದಿ ಚರ್ಯ ಚರಿಸುತ ಧರೆಯೊಳು ಮೆರೆವ ಮಹಾತ್ಮರ ಚರಣೇಂದ್ರೀವರಯುಗ್ಮ ದರುಶನ ಮಾಳ್ಪರ ದುರಿತರಾಶಿಗಳಿರಗೊಡದೆ ನೆರೆ ಪರಮಮುಕ್ತಿಯ ದಾರಿ ತೋರುತ ಸಿರಿಸಹಿತ ಹರಿ ತೋರುವಂದದಿ ಕರುಣ ಮಾಳ್ಪ ಸುಗಣಮಹೋದಧಿ 1 ರವಿಯು ಸಂಚರಿಸುವಂತೆ ಭೂವಲಯದಿ ಕವಿಶ್ರೇಷ್ಠ ಚರಿಸಿದೆಯೋ ಅವಿರುದ್ಧ ತ್ರಯಿಜ್ಞಾನ ಪ್ರವಹಂಗದಲಿ ಭುವನೈಕ ವೇದವದ್ಯನ ಶ್ರವಣಭಕುತಿಯಿಂದ ದಿವಸ ದಿವಸದಿ ಪ್ರೀತಿ ಬಡಿಸುತ ಧ್ರುವವರನಂಘ್ರಿಗಳಿಗರ್ಪಿಸಿ ಭುವನ ಪಾವನ ಮಾಡಲೋಸುಗ ಅವನಿ ತಳದಿ ವಿಹರಿಸುತಿಹ ಗುರು 2 ಅಹೋ ರಾತ್ರಿ ಕ್ಷಣ ಬಿಡದೆ ಸನ್ಮನ ಹೃ - ದ್ಗುಹಾಧೀಶನನು ಬಿಡದೆ ಅನುದಿನ ಸ್ಮರಿಸುತ ಸಹನದಿ ಶಮದಮಯತು ನಿಯಮಗಳನ್ನು ವಹಿಸಿ ಶ್ರೀದವಿಠಲನಂಘ್ರಿಯ ಮಹಿಮೆ ತೋರುತ ಪೂಜಿಸುತ ಬಲು ಮಹಿತಪೂರ್ಣಾನಂದತೀರ್ಥರ ವಿಹಿತ ಶಾಸ್ತ್ರಗಳರಿತು ಬೋಧಿಪ 3
--------------
ಶ್ರೀದವಿಠಲರು
ಶ್ರೀ ತುಳಜಾ ಮಹಾತ್ಮೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸಿರಿಯ ಸಹಿತಾಗಿರುವ ವೆಂಕಟಗಿರಿಯ ರಮಣನ ಮರೆತು ಎಲ್ಲವನು|| ಚರಕೆರಗುವೆನು|| 1 ಧರೆಯೊಳಗವನ ಮೆಟ್ಟಿ ಹಾರುವ ಹಿರಿಯ ಕವಿಗಳಿಗೆಲ್ಲಾ ನಾನೇ ಕಿರಿಯನೆಂದೆನಿಸಿ ಅವರನು ಮರೆಯದಲೆ ನೆನೆವೆ|| ಕಿರಿಯನಾದರೇನು? ನಾ ಈ ಧರೆಯೊಳಗೆ ಎಲ್ಯಿದ್ದರೇನು? ಮರೆಯದಲೇ ಮಾಡುವರು ಗುರುಗಳು ಮಮತೆ ಎನ ಮೇಲೆ||2 ಕೇವಲಾನಂತಾದ್ರಿ ರಮಣನ ಭಾವ ತಿಳಿಸುವ ನಮ್ಮ ಗುರುಗಳು ಭಾರ ಭಾವದಲ್ಲಿ ಪೇಳುವೇನು ತುಳುಜಾದೇವಿಯ ಮಹಿಮೆಯನು|| 3 ಪದ್ಯ ಪೂರ್ವದಲಿ ಕೃತಯುಗ ಪೂರ್ವದಲ್ಲಿ| ದ್ವಿಜವಯ ನೀರ್ವಕದ್ರುಮನೆಂದು ಊರ್ವಿಯಲ್ಲಿ ಪ್ರಖ್ಯಾತ ಸರ್ವದಾ ಮಾಡುವನು ಸರ್ವರಿಗೆ ಸಮ್ಮತಪೂರ್ವಧರ್ಮವು ಭಕ್ತಿ ಪೂರ್ವಕವಾಗಿ|| ಸರ್ವ ಸ್ತ್ರೀಯ ರೊಳಗ ಪೂರ್ವ ಸುಂದರಿಯಾಗಿ ಇರ್ವಳಾತನ ಮಡದಿ ಊರ್ವಶಿಯ ಪೋಲುವಳು ಊರ್ವಿಯಲಿ ಪತಿಸೇವೆ ಸರ್ವದಾ ಮಾಡುತಲೆ ಇರ್ವಳಾತೆಯು ಮನಃ ಪೂರ್ವಕವಾಗಿ||1 ಆ ಕಾಂತನಿಂದಲ್ಲಿ ತಾಕೂಡಿ ತನ್ನ ಮನಕೆ ಬೇಕಾದ ಸೌಖ್ಯದನೇಕ ವರ್ಷಗಳಲ್ಲಿ ಸ್ವೀಕಾರ ಮಾಡಿದಳು ಶ್ರೀಕಾಂತನ ದಯದಿ ಆಕೆಯ ಹೆಸರುಂಟು ಅನಭೂತಿ ಯಂತೆಂದು|| ಆ ಕರ್ದಮಾಖ್ಯ ದ್ವಿಜತಾಕಾಲದಿಂದ ಭೂತೋಕವನು ಬಿಟ್ಟು ಪರಲೋಕಕೆ ಪೋಗುತಿರೆ ಆಕೆ ಪತಿವುತೆಯು ಎಂಬಾಕೆ ಸಹಗಮನವೆಂಬ ಸಹಗಮನೆಂಬೊ ಆಶಾರ್ಯ ಮಾಡುತಿರೆ| ಆ ಕಾಲದಲ್ಲಿ ಆಯಿತಾಕಾಶವಾಣಿ|| ಪದ ಬ್ಯಾಡ ಬ್ಯಾಡಮ್ಮ ಬ್ಯಾಡದು || ನೀ ಮಾಡೋಕಾರ್ಯ ಬ್ಯಾಡ|| ಬ್ಯಾಡು ಬ್ಯಾಡುಮ್ಮ ಕೇಳು ಮಾಡತಕ್ಕ ಕಾರ್ಯದೂರ ನೋಡಿ ಮಾಡುಬೇಕು ಇಂಥ ಮೂಢ ಬುದ್ಧಿ ಮಾಡುವದು||ಪ ಪತಿಯ ಸರಿಯು ಹಿತಕರಿಲ್ಲವು || ಪತಿವ್ರತೆಗೆ ತನ್ನ ಪತಿಯ ಹೊರತು ಗತಿಯು ಇಲ್ಲವು || ಸುಳ್ಳಲ್ಲವು|| ಪತಿಯು ಇಲ್ಲದಿದ್ದರೇನು ಸುತರು ಸುಗುಣರುಂಟು ನಿನಗೆ ಸುತರು ಇರಲು ಪತಿಯ ಕೂಡಿ ಗತಿಯಸಮ್ಮತವು ಅಲ್ಲ|| 1 ಪತಿಯ ಬಿಟ್ಟು ಸ್ಥಿತಿ ಅಧರ್ಮವೇ| ಆ ಸತಿಗೆ ತನ್ನ ಪತಿಯ ಕೂಡೆ ಗತಿಯು ಧರ್ಮವೇ|| ಸತ್ಕರ್ಮವೇ|| ಪತಿಯ ಮ್ಯಾಲೆ ಸತಿಯು ಊಂಟು ಸತಿಗೆ ಸಮ್ಮತವು ಸತ್ಯ ಪತಿಯಿಂದಲೇ ಪತಿಯಲೋಕ ಗತಿಯು ಪತಿವುಲೆಯೇ ನಿನಗೆ||2 ಮುಖ್ಯಮಾತು ನೀನು ಕೇಳಿದ್ದು|| ಗರ್ಭಿಣಿಯು ಮತ್ತು ಮಕ್ಕಳುಳ್ಳ ಸ್ತ್ರೀಯು ಮಾಳ್ಪುದು || ಧರ್ಮಲಿಲ್ಲದ್ದು|| ಮಕ್ಕಳುಳ್ಳವಳು ನೀನು ಮಕ್ಕಳನ್ನು ಪಾಲಿಸುವುದು ಮುಖ್ಯನಂತಾದ್ರಿ ರಮಣ ತಕ್ಕ ಮುಕ್ತಿಕೂಡುವ ನಿನಗೆ|| 3 ಪದ್ಯ ಆ ಕಾಲಕ್ಕಾಗಿರುವ ಆಕಾಶವಾಣಿಯನ್ನು ತಾ ಕೇಳಿ ಅನುಭೂತಿ|| ಕಾಲ ಮೇರು ಶೈಲದಲ್ಲಿ|| 1 ಚಾರು ಮಂದಾಕಿನಿಯ ತೀರದಲ್ಲಿ ಪರ್ಣದ ಕುಟೀರವನ್ನು ಹಾರಿಸುತಾ ಬಂದನಾ ನಾರಿ ಇದ್ದಲ್ಲಿ||2 ಆಗ ಆಕೆಯ ಕಂಡು ಹೋಗಿ ಬದಿಯಲಿ ನಿಂತು ಹೀಗೆಂದು ಮನಸಿನಲಿ ಯೋಗಿಯಂತಲಿ ನಿಶ್ಚಳಾಗಿಹಳು ದಾವಾಕಿ ದೈವಯೋಗದಲ್ಲಿ ನೋಡಿದರೆ ಯೋಗಿಗಳು ತಮ್ಮ ಉದ್ಯೋಗಿವನ್ನು ಬಿಡುವರು ಹೀಗೆಂದು ಅನುಭೂತಿಯಾಗಿ ಮೋಹಿಸಿ ನುಡಿದ ಭೋಗ ಬಯಸುತಲೇ|| 3 ಪದ ರಾಗ:ಶಂಕರಾಭರಣ ನೀಪೇಳೆ ದಾವದಾವದು ನಿನ್ನ ಜೀವಕ್ಕ ಬೇಕು ಹೇಳೆ|| ಪ ನಿತ್ಯ ಶೋಷಣ ಮಾಡುಬ್ಯಾಡೇ|| 1 ದೇವತೆಗಳು ಎಲ್ಲಾರು ಬಿಡದೆ ಎನ್ನ ಕೋಕರಾಗಿಹರು|| ಸಾವಿರ ಸ್ತ್ರೀಯರು ಸೇವಿಸುವರು ಎನ್ನ ಸೇವಿಸುವರು ನಿನ್ನನ್ನು 2 ಚಿಕ್ಕ ಪ್ರಾಯದಲ್ಲಿ ನೀನು ಇರುವಿ ನಿನ್ನ ತಕ್ಕ ಪುರುಷನು ನಾನು|| ಮುಖ್ಯನಂತಾದ್ರೀಶ ಸಿಕ್ಕ ನಿನಗೆ ನಿನ್ನ ತಕ್ಕಂತೆ ಆಯಿತ್ಹೇಳೆ|| 3 ಪದ್ಯ ಧ್ಯಾನದಲ್ಲಿರಲು ದುಷ್ಟ ದನುಜೇಶ್ವರನು ತಟ್ಟನೆ ಮಾಡಿ ದುಕೃಷ್ಟ ತಾಳ ಧ್ವನಿಯು ಕಟ್ಟು ಇಲ್ಲದೇ ಒಳ್ಳೆ ಗಟ್ಟಿ ವದರಿಸಿ ನೋಡಿ ಒಂದಿಷ್ಟು ನುಡಿಯದೆ ಇರಲು, ದಿಟ್ಟಾಗಿ ತನಗೆ ರೀತಿ|| ಸಿಟ್ಟಲೇ ನುಡಿದಾಳು ಆ ಪತಿವುತೆ|| 1 ದಾ ಪೇಳಲೋ ನೀ ಧಿಟ್ಟ ದಾರಿಲ್ಯಾತಕೆ ಬಂದ್ಯೊ ನೀ ಪಾಪಿಷ್ಠ|| ದೂರದಲ್ಲಿ ಇರೋ ನೀ ದುಷ್ಟ || ಧೈರ್ಯದಿ ನೀ ಎನ್ನ ಮುಟ್ಟಿದ್ಯೋ ಭ್ರಷ್ಟ|| 2 ಸುಖಭರಿತ || ಲಗುಬಗೆಯಲಿ ಮೋಹಿಸುತ || ಬಗೆ ಬಗೆಯಲ್ಲಿ ಮಾತನಾಡಿದನು ನಗುನಗುತ| 3 ಪದ, ರಾಗ:ಶಂಕರಾಭರಣ ಮರುಳು ಗೊಂಡೆನೇ || ತರುಳೆ ನೊಂದೆನೆ|| ಮರಳು ಗೊಂಡೆ ತರುಳೆ ನಿನ್ನ ಹೊರಳಿ ನೋಡುವ ಯ್ಹರಳಿನೋಟಕೆ|| ಪ ಮಾನ್ಯ ಮಾನಣಿ || ರನ್ನೆ ಶಿರೋಮಣಿ || ಚೆನ್ನವಾದ ಚಿನ್ನದಂಥ ನಿನ್ನ ದೇಹವನ್ನು ಕಂಡು|| 1 ಮಾತುಲಾಲಿಸೆ|| ಪ್ರೇತಿ ತೋರಿಸೆ ||ಪ್ರೀತಿ ಎಂಬೊದ್ಯಾತಕಿನ್ನ ಸೋತು ಕಾಮಾಪೂರದಲ್ಲಿ|| 2 ನಿಂತು ಮರೆತೆನಾ || ಅನಂತಾದ್ರೀಶನಾ || ಎಂಥಹವರಿಗೆ ಭ್ರಾಂತಿ ಬಿಡಿಸುವಂಥ ನಿನ್ನ ಕಾಂತಿ ನೋಡಿ|| 3 ಆರ್ಯಾ ಇಂಥಾ ಮಾತವು ಕೇಳಿ || ಚಿಂತಾಕ್ರಾಂತಳಾದಳಾಗ ಆಗ ಆ ಬಾಲಿ|| ಬಂದಿತು ಇಂಥಾ ಘೋರಾ || ಚಿಂತಿಸ ಬೇಕಿನ್ನು ಇವನ ಸಂಹಾರಾ|| 1 ಶಾಪಿಸ ಬಾರದು ಜ್ಞನಿ || ಶಾಪಿಸಿದವರ ಅಗುವುದು ತಪಹಾನಿ|| ಪರಿ ಮನಸಿಗೆ ತಂದು ವ್ಯಾಪಾರವು ಮಾಡಿದಳು ಮತ್ತೊಂದು| 2 ಎಂಬಾಕೆ ನಾಮವೇ ತುಳಜಾ|| 3 ಪದ ರಾಗ :ಸಾರಂಗ ತಾಳ :ತಿವಿಡಿ ಸ್ವರಷಡ್ಜ ಸಲಹಬೇಕೆಂದು ನಿಲ್ಲದೆ|| ಪ ಪಾಶಾಕೃಷ್ಟ ಧರಿಸುತಾ||1 ವರೆಂದು || ದಯಮಾಡಿ ವರಗÀಳ ನೀಡುವಳು ಹಿಡಿಯಂದು|| ಕಾರುಣ್ಯಸಿಂಧು|| ಗಾಢನೆ ಧ್ವನಿ ಮಾಡುತಲೇ ಹಾರ್ಯಾಡುತಲೇ ತ್ವರ ಮಾಡಿಸುತಲೇ ಓಡಿ ಬರುತಿಹ ಪ್ರೌಢಗಣಗಳ ಕೂಡಿ ಸಿಂಹಾರೂಢಳಾಗಿ||2 ಎಂತು ಪೊಗಳಲಿ ನಾನು|| ಅತ್ಯಂತ ಬಹಳಾದಂತ ಮಹಿಮೆಗಳನು ಎಂತೆಂಥವರು ಬೇಕಂತ ಹುಡುಕಿದರೇನು|| ಹಿಗಂತ ಆಕೆಯ ಅಂತೂ ತಿಳಿಯದು ಇನ್ನು|| ಗುಣವತಿ ತಾನು|| ಶಾಂತಿಯಿಂದ ಅನಂತಾದ್ರೇಶನ ಕಾಂತಯಳ ಪೋಲುವಂತ ದೇವಿಯು ಚಿಂತೆಯಲಿ ತನ ಚಿಂತಿಸಿರುವಳ ಚಿಂತೆ ಬಿಡಿಸ ಬೇಕಂತ ಧಾವಿಸಿ|| 3 ಆರ್ಯಾ ಸಾರ ಪರಮಾದರದಿಂದ ಕೂತು ಕೇಳಿದವರು || ಪರಿಪೂಜಿಸುತಾ ತುಳಜಾ ತಾನಾಗುವಳು ಪ್ರತ್ಯಕ್ಷ|| 1 ವರಕವಿತಾ ರಚನಕ್ಕೆ|| ತುಳಜಾದೇವಿಯ ದಿವ್ಯ ಚರಿತಕ್ಕೆ || ಚರಿಸದು ಎನ್ನ ಉಪಾಯ|| ಗುರು ಕೃಪೆಯಿಂದಾಯಿತೊಂದಧ್ಯಾಯ|| ಶ್ರೀಹರೇ ಪ್ರಸೀದ||
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಪ್ರಹ್ಲಾದ ಚರಿತ್ರೆ ಅಧ್ಯಾಯ ಒಂದು ಪದ ಆದಿಯಲಿ ಲಕ್ಷ್ಮೀಸಹಿತ ಪ್ರಹ್ಲಾದವರದನ ಪಾದಕೊಂದಿಸಿ ಬೋಧನಿಧಿ ಮಧ್ವಾದಿ ಗುರುಗಳ ಪಾದಕೊಂದಿಸುತಾ ಕೇಳುವರ ಮನಕಾ ಲ್ಹಾದ ಕೊಡುತಿರುವಂಥ ಶ್ರೀ ಪಹ್ಲಾದ ಚರಿತವನು 1 ಸಹಿತಾಗಿ ಪರಮಾ ನಂದದಿಂದ ವಿಹಾರ ಮಾಡುತ ಚಂದದಿಂದಿರಲು ಬಂದರಾ ಕಾಲದಲಿ ಸನಕ ಸನಂದನಾದಿಗಳಲ್ಲೆ ಬೇಡೆಂ ತೆಂದು ಆ ಜಯವಿಜಯರವನು ಹಿಂದುಕೊತ್ತಿದರು 2 ಮೂರುಜನ್ಮದೊ ಳಸುರರಾಗಿರಿ ನೀವು ಹೀಗೆಂತೆಂದು ಶಾಪಿಸಲು ಅಸುರರಾಘ್ಯುಟ್ಟಿದರು ಶಾಪದಿ ಹುಸಿಯದಾಗದು ದೊಡ್ಡವರು ಕೋಪಿಸುತ ನುಡಿದದ್ದು 3 ದಿತಿಯ ಸುತರಾಗ್ಯವರು ಮುಂದಕೆ ಪ್ರಥಿತರಾದರು ದ್ವಿತೀಯ ಹಿರಣ್ಯಾಕ್ಷಾ ಪೃಥಿವಿಯನು ಮುಣುಗಿಸಿದ ಕಾರಣ ಅತಿರಭಸದಲೆ ಕೊಂದು ಮತ್ತಾ ಪೃಥಿವಿಯನು ತಂದಾ 4 ತನ್ನ ಅನುಜನ ನಾಶವನು ಕೇಳುತಲೆ ಮನದಲಿ ಕ್ಲೇಶವನು ಪಟ್ಟು ಶ್ರೀಸುರೇಶನ ಮೇಲೆ ಬಹಳಾಕ್ರೋಶದಿಂದಲೆ ನಡೆದ ತಪಸಿಗೆ ದೋಷ ರಹಿತಾನಂತಾದ್ರೀ±ನÀ ದ್ವೇಷಿತಾನಾಗಿ5 ವಚನ ಸುರರು ಆ ಸಂಧಾನ ಯುದ್ಧವ ಮಾಡಿ ಕೊಂದುಹಾಕಿದರು ಆ ಇಂದ್ರನಾ ಕಂಡು ಒಂದು ನೋಡದೆ ಪ್ರಾಣ ಒಂದು ಉಳಿದರೆ ಸಾಕು ಯೆಂದು ಓಡಿದರು 1 ಅಡಗಿರಲು ದೇವೇಂದ್ರ ಬಂದು ನಡತೆ ಕಂಡವನ ಬಿಡು ಬೇಗ ಈಕೆಯ ನಿಮಗೆ ಕೆಡಕು ಕೊಡುತೆಲ್ಲರ ಮುಂದೆ ನುಡಿದನಾ ರಾಜನ ಮಡದಿಗೀಪರಿಯು 2 ರಾಗ ಅಂಜಿಕೆಯ ಬಿಡಿಸುವೆನಮ್ಮಾ ಪ ಪುಟ್ಟುವನಮ್ಮಾ ಸಂದರ್ಭವನು ತಿಳಿಸುವೆನಮ್ಮಾ 1 ಸ್ಮರಿಸುವನು ಹರಿಗುಣಗಳಮ್ಮಾ ಗಭಯ ಕಾಣಮ್ಮಾ 2 ಅಭಯದಾನಂತಾದ್ರೀಶನ ಭಕ್ತನಮ್ಮಾ ನಿಶ್ಚಿಂತೆಯಿಂದಲಿ ನೀನಿರಮ್ಮಾ 3 ರಾಗ ಕೇಳಿ ಅರ್ಭಾಟವು ಗರ್ಭಿಣಿಯುದರದಲಿರುವಾ ನಡೆದರು ಅರ್ಭಕನಾ ಸ್ಮರಿಸಿ 1 ಕೊಟ್ಟು ತಂದೆಯ ಪರಿ ಮುಂದಾಕೆಯು ನಾರದನ ಬೇಡಿದಳು ವಂದಿಸಿ ವರಗಳನ್ನು2 ಭೋ ಮಹಾ ಮುನಿಯೇ ಮಾತನು ಕೇಳುತಲೆ ಆ ಮಹಾ ಮುನಿ ನಾರದನು ಪ್ರೇಮದಿ ನುಡಿದನು ಕೊಟ್ಟಕಾಮಿತ ವರಗಳನ್ನು 3 ನಿನಗಿನ್ನು ಪರತತ್ವವÀ ನೀ ಕೇಳಮ್ಮಾ ಹರಿಮಹಿಮೆಯ ಹರುಷವ ಕೊಡುತಿಹುದು 4 ಪರಿ ಗರ್ಭದಲಿ ಇರುವನೆ ವರದಾನಂತಾದ್ರೀಶನ ಸ್ಮರಿಸುತ ಪರಮೇಷ್ಠಿಯ ಸುತನು 5 ವಚನ ತಪವನು ಮಾಡಿ ಮನಸಿನೊಳಗಿಟ್ಟು ಪಾದದುಂಗುಷ್ಠವನು ನೆಟ್ಟನೆ ಮೇಲೆತ್ತಿ ಘಟ್ಯಾಗಿ ನಿಂತಾ 1 ಸುಡತಲೆ ಸಕಲ ಕಣವಿದು ಮುಚ್ಚಿತು ಅವನ ಭಯದಲಿ ತಮ್ಮ ಭವನ ಅವನ ಮುಂದು ಸುರಿದರು ಅವನ ಕಥೆಯಾ ಸಕಲ ಭುವನ ಪಾಲಕರೂ 2 ರಾಗ ಮೊರೆಯ ಕೇಳೋ ನೀನುಪ ಹಿರಣ್ಯ ಕಶಿಪು ಮೂಜಗ ಸಂಹರಿಸುವನಯ್ಯ ಅ.ಪ ದಿಟ್ಟ ಕೇಳವನ ವಿಶಿಷ್ಟ ಕಥೆಯ ಪಾದಾಂಗುಷ್ಟದಿಂದಲಿ ಭೂಮಿ ಮೆಟ್ಟಿನಿಂತಿ- ಮಂದರಾದ್ರಿಯಲ್ಲಿರುವಾ 1 ಉಪವಾಸದಿಂದುಗ್ರ ತಪಸಿ ಲೋಕಗಳನೆಲ್ಲ ಸುಡುವಾ 2 ರೋಷದಿ ಮಾಡುವಾ ದ್ಷೇಷ ನಮ್ಮಲ್ಲೆ ನಿತ್ಯದಲ್ಲೆ ನಿತ್ಯದಲ್ಲೆ ಅನಂತಾದ್ರೀಶನಲ್ಲೆ 3 ವಚನ ಮಾಡುವ ಚರ್ಯಾ ಹತ್ತಿತಾ ಹಂಸವನು ಸತ್ವರದಿ ಕಂಡು ನೆತ್ತಿಯಾ ಮೇಲಗ್ನಿ ಬೆಳದಿಹದಲ್ಲೆ ಸುತ್ತಲೆ ನುಡಿದನು ಬ್ರಹ್ಮದೈತ್ಯ ಗೀಪರಿಯ 1 ರಾಗ ಹಿರಣ್ಯ ಕಶಿಪು ಏಳು ಏಳು ಏಳು ಬೇಗನೇ ಪ ಮಾತು ನಿನ್ನ ಭಾಳ ತಪಸಿಗಾಗಿ ನಾನು ಭಾಳ ಮೆಚ್ಚಿದೆನೋ ಇನ್ನು ಅ.ಪ ಹೋದುವಯ್ಯಾ ಮತ್ತು ತಪಸಿ ನಲ್ಲಿ ನೀನು ಚಿತ್ತಮಾಡಬೇಡ ಬಿಟ್ಟು 1 ಕೊಡುವೆನು ವರಗಳನ್ನು ದಾನವೇಶ ಎನ್ನ ನೋಡು ಮೌನಬಿಟ್ಟು ಮಾತನಾಡು 2 ಬಲ್ಲಿದವನೋ ನೀನು ಬೇಡಿ ದ್ದೆಲ್ಲ ನಾನು ಕೊಡುವೆ ನಿನಗೆ 3 ವಚನ ಮನ್ನಿಸಿದನಾ ದೇಹವನ್ನು ಘನ್ನದಿವ್ಯೋದಕದಿ ಚೆನ್ನಾಗಿ ಘನ್ನ ದೈತ್ಯನು ಎದ್ದು ಮುನ್ನನತಿ ಸ್ತುತಿಮಾಡಿ ಹಿರಣ್ಯ ಕಶಿಪಿಂತು 1 ರಾಗ ಮರಣ ಬೇಡಾ ಧರೆಯೊಳು ನಿನ್ನಿಂದ್ಹುಟ್ಟಿರುವ ಪ್ರಾಣಿಗಳಿಂದ ಮರಣಬೇಡಾ 1 ಮರಣ ಬೇಡ ಇಳೆ ಯೊಳೆನಗಾಕಾಶದೊಳೆನಗೆ ಮತ್ತು ಮರಣ ಬೇಡಾ 2 ಮರಣ ಬೇಡಾ ಮೃಗಗಳೊಗ್ಹೆಚ್ಚಿನ ಮೃಗಗಳಿಂದಾದದರು ಮರಣ ಬೇಡಾ 3 ಮರಣಬೇಡಾ ನರರಿಂದ ವಿಷವುಳ್ಳ ಹರಿವ ಹಾವುಗಳಿಂದ ಮರಣ ಬೇಡಾ 4 ವಿಸ್ತಾರವಾದ ದೇ ವಾಸ್ತ್ರಗಳಿಂದಲಿ ಮರಣಬೇಡಾ 5 ಮರಣಬೇಡಾ ಅಂತಕ ನಾದ ಅನಂತಾದ್ರೀಶನ ಮುಂಚೆ ಸ್ಮರಣೆ ಬೇಡಾ 6 ರಾಗ ಹಾಗೆ ಆಗಲಿ ಎಂದು ಸಾಗಿದತಾನು ಆಗೆದ್ದು ಮದವೇರಿದ ನಾಗೇಂದ್ರನಂತೆ ಬೇಗ ಮನೆಯಲಿ ಬಂದಸಾಗಿ ದೈತ್ಯೇಂದ್ರಾ 1 ತಂದು ಒಪ್ಪಿಸಿದಾತಗೆ ಚಂದಾಗಿ ಮುನಿಯು ಹಿಂದಾದುದೆಲ್ಲಾತನ ಮುಂದೆ ತಿಳಿಸಿದನು ಮುಂದಾ ಸ್ಥಳವನು ಬಿಟ್ಟು ಬಂದಾ ಸ್ವಸ್ಥಳಕೆ
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಭಾರತೀದೇವಿ ಎಂತು ನೀವಶವಾದಿಯೇ ಭಾರತಿದೇವಿ ಎಂತು ನೀ ಮರುಳಾದಿಯೆ ಪ ಕಂತು ಹರನ ತಾಯಿ ದಂತಿಗಮನೆ ದಮಯಂತಿ ಕಾಂತಸುತೆ ಅ.ಪ ಧರೆಯೊಳು ಪುಟ್ಟುತಲಿ | ಆಕಾಶಕ್ಕೆ ಭರದಿಂದ ಜಿಗಿಯುತಲಿ ಸರಸಿಜ ಸಖನಾದ | ತರಣಿಯ ಫಲವೆಂದು ಅರಿತು ಭಕ್ಷಿಸಲ್ಹೋದ | ತರು ಚರ ರೂಪಿಗೆ 1 ಪುಂಡರೀಕಾಕ್ಷ ಕೇಳಿ | ದ್ವಾಪರದಿ ಪ್ರಚಂಡಗೆ ಒಲಿಯುತಲಿ ಭಂಡ ಬಕನ ಶಿರದಿಂಡು ಗೆಡಹಿ ಅವನ ಭಂಡಿ ಓದನವನ್ನು ಉಂಡ ಪುಂಡಗೆ ಮಾತೆ 2 ಶ್ರೀ ಶಾಮಸುಂದರನೇ ತ್ರೈಲೋಕ್ಯಕ್ಕೆ ಈಶನೆಂಬುದು ತಾನು ಲೇಸಾಗಿ ಪೇಳಲು | ಲೇಶವಾದರು ನಿನ್ನ ಆಶೆ ಇಲ್ಲದೆ ಸನ್ಯಾಸಿ ಆದವನಿಗೆ 3
--------------
ಶಾಮಸುಂದರ ವಿಠಲ
ಶ್ರೀ ಮಧ್ವಮತ ಸಾಗರದೊಳಗೆ ಲೋಲಾಡಿ ಆ ಮಹಾತತ್ವ ತಾರತಮ್ಯಗಳ ತಿಳಿದು ಕಾಮ ಕ್ರೋಧಗಳೆಲ್ಲ ಹಳಿದು ಗುರು ಹನುಮಂತ ಭೀಮ ಮಧ್ವಮುನಿಯ ಸಾರಿರಯ್ಯ | ಅಯ್ಯಯ್ಯಾ ಪ ಅಂಜನೇಯ ಗರ್ಭದಲಿ ಜನಿಸಿ ಆಕಾಶದಲ್ಲಿ ಕಂಜನಾಪ್ತನ ತುಡುಕಿ ಕಿಷ್ಕಿಂಧದಲಿ ಕಪಿ ರಂಜನನ ಕೂಡಿ ಪಂಪಾ ತೀರದಲಿ ದೇವಂಜನ ಪಾದವ ಅಕ್ಷರಿ ಎನೊ ಭಂಜನವ ಮಾಡಿ ಲಂಕೆಯನುರಿಪಿ ಬಂದ ಪ್ರ ಭಂಜನಿಯ ಭಜಿಸಿರಯ್ಯಾ | ಅಯ್ಯಯ್ಯಾ | 1 ಧರ್ಮನಂದನೊಡನೆ ಜನಿಸಿ ಹಾಲಹಲ ಉಂಡು ಸೀರ್ಮುಟ್ಟಿ ಪೋಗಿ ನಾಗನ ಗೆದ್ದು ಅರಗಿನ ಅರ್ಮನೆಯ ದಾಟಿ ವನದೊಳಗೆ ಹಿಡಂಬನ ಶಾ ರಿರ್ಮುರಿದು ಸೀಳಿ ಬಿಸಟು ಕಿರ್ಮೀರ ದನುಜರ ಸದೆದು ಪೂತಂದು ಸು- ಶರ್ಮಕನ ಬಿಗಿದು ಕಣದೊಳಗೆ ದುಶ್ಯಾಸನನ ನಿರ್ಮಳಾತ್ಮಕನ ಭಜಿಸಿರಯ್ಯಾ | ಅಯ್ಯಾಯ್ಯಾ 2 ಹರಿಯೆ ಪರನೆಂದು ಬೊಬ್ಬಿಕ್ಕಿ ವಾದಿಗಳೆದೆ ಬಿರಿಯೆ ದು:ಶಾಸ್ತ್ರಜ ಜರಿಯೆ ದುರ್ಮತಗಳು ಪರಿಯ ಬಿಡದು ಠಕ್ಕೆ ಮೆರೆಯೆ ಧರೆಯೊಳಗೆ ಈ ಪರಿಯೆ ಮುನಿಗಾರು ಸರಿಯೆ ಪೊರೆಯ ಭಕ್ತರಿಗೆ ಸುಧೆ ಗರಿಯೆ ಜ್ಞಾನ ಮಾರ್ಗಾಂಕುರಿಯೆ ವೇದದ ಸಾರ ನೆರಿಯೆ ರಿಪುಕಾಲ ಮದಕರಿಗೆ ಕೇಸರಿಯೆ ಒಪ್ಪುವ ಭಜಿಸಿರಯ್ಯಾ | ಅಯ್ಯಯ್ಯಾ 3 ಅಜನಾಗಿ ಮುಂದೆ ಪಸರಿಸಿ ಬೆಳೆದು ಹರುಷದಲಿ ತ್ರಿಜಗವನು ನಿರ್ಮಾಣವನು ಮಾಡಿ ಒಂದೊಂದು ಸೃಜಿಸುವನು ಚಿತ್ರವಿಚಿತ್ರ ಗುಣಗಣವುಳ್ಳ ಇವನೆಂದು ವೇದಗಳು ಸಾರುತಿವೆ ಕುಜನಮತವನೆ ಪಿಡಿದು ಪುಸಿಯಿದು ಎಂದೆನ್ನದೆ ಭಜಿಸಿ ಗುರುಪಥವಿಡಿದು ಸಂದೇಹವನೆ ತೊರೆದು ಸುಜನರ ಶಿರೋಮಣಿಯಯ್ಯ | ಅಯ್ಯಾಯ್ಯಾ4 ಜಾತಿ ಸಂಕರವಾಗಿ ಜಾತಿ ಧರ್ಮವ ತೊರೆದು ಜಾತವೇದ ಸಯಜ್ಞ ಇಲ್ಲದಿದರೆ ವನಜ ಸಂ ಮೌಕ್ತಿದಮಣಿ ನುಡಿದ ಕರುಣದಲಿ ದ್ವಿ ಜಾತರನ ಉದ್ಧರಿಸ ಪೋಗೆನಲು ಜಯ ತನೋ ಜಾತ ಪುಟ್ಟಿದನು ಇಳಿಯೊಳಗೆ ಮಧ್ಯಗೇಹರ ಜಾತನಂ ಭಜಿಸಿರಯ್ಯ | ಅಯ್ಯಯ್ಯಾ | 5 ಇಳಿಯೊಳಗೆ ಬಲವಂತನಾದ ಮತ ಮಧ್ವಮತ ಸುಲಭವಾಗಿಹುದು ಸುಲಭರಿಗೆ ಕಮಲಕೇತಪನ ಹೊಳಪು ಹೊಳೆದಂತೆ ವಿಕಸಿತಾ ಮಾಡಿ ಸುಜ್ಞಾನ ಜಲಧಿಯೊಳಗಾಡಿಸುವುದು ಮಲತು ನಿಂತಿರ್ದ ಹರಿನಾಮ ದಂಡವಾ ಗುರುಕುಲತಿಲಕನಂ ಭಜಿಸಿರಯ್ಯಾ | ಅಯ್ಯಯ್ಯಾ |6 ದುರವಾದಿಗಳ ಗಂಡ ಗಜದಭೇರುಂಡ ಸಂ ಕರಣ ಪ್ರಾಣವನರದು ದುರ್ಮಾಯಿ ಮಿಥ್ಯದ ಕುಹಕ ಮುರಿದು ಉರಹಿ ಅರಿಗಳಂಗದ ಚರ್ಮ ಸುಲಿದು ಭೇರಿಗೆ ಹಾಕಿ ಹರಿಸೆ ಓಂಕಾರ ಮಣಿಯಂ ಭಜಿಸಿಯ್ಯಾ | ಅಯ್ಯಯ್ಯಾ 7 ಗುರುಕರುಣ ಪಡೆದ ಮಾನವನೆ ಸರ್ವಕೃತಾರ್ಥ ಗುರುಕರುಣ ಪಡೆಯದಿದ್ದವನ ಜನ್ಮವೇ ವ್ಯರ್ಥ ಉರಗ ಉಪವಾಸ ತಂತ್ರ ಕರಿ ಕರುಣತಿಪ್ಪುವದು ಗುರು ದಯಾಕರನಾಗೆ ಹರಿವೊಲಿದು ಸಲಹುವನು ಪಾದವ ನಂಬಿರೈಯ್ಯ | ಅಯ್ಯಯ್ಯಾ 8 ಪದ್ಧತಿಯ ಕೇಳಿ ಶುದ್ಧಾತ್ಮರಿದು ವರಗುರು ಮಧ್ವ ದುಗ್ಧಾಬ್ಧಿಯನು ಕಟಿದ ನವ ನವನೀತ ಮುದ್ದೆಯನು ತೆಗೆದು ನವವಿಧ ಭಕುತಿರಸದಿಂದ ಮೆದ್ದು ಸದ್ಭಾವದಲಿ ಸದ್ವೇಷ್ಣವರಾಗಿ ಮೃತ್ಯುವಿನ ಗೋನಾಳಿ ಒದ್ದು ಕಾಲನ ಮೀರಿ ವೈಕುಂಠಪುರ ಸಾರಿ ಸಿರಿ ಪಾದದ್ವಯವ ಭಜಿಸಿರಯ್ಯಾ ಅಯ್ಯಯ್ಯ 9
--------------
ವಿಜಯದಾಸ