ಒಟ್ಟು 2365 ಕಡೆಗಳಲ್ಲಿ , 107 ದಾಸರು , 1650 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಂಗಮನು ಇಂತಿವನು ಸರ್ವಸಂಗ ದೂರಾದವನೀಗ ಜಂಗಮ ಪ ತನ್ನ ತಿಳಿದು ತಾನಾದವ ಜಂಗಮ ಜಗವಭಿನ್ನವೆಂದು ಕಾಣದವ ಜಂಗಮಹೊನ್ನು ಹೆಣ್ಣು ಬಿಟ್ಟವನು ಜಂಗಮ ಸಂ-ಪನ್ನ ಸಾಧು ಸಂಗವಿಹ ಜಂಗಮ 1 ಒಳಗೆ ಹೊರಗೆ ಒಂದಾದವ ಜಂಗಮ ಎಲ್ಲಹೊಳೆವುದೊಂದೆ ಜ್ಯೋತಿಯು ಎಂಬುವ ಜಂಗಮಹೊಲೆಯು ಶುದ್ಧವ ಕಳೆದವ ಜಂಗಮ ಎನಗೆಕುಲವು ಛಲವು ಇಲ್ಲವೆಂಬುವ ಜಂಗಮ 2 ಅಂಗ ಲಿಂಗವಾಗಿಹ ಜಂಗಮಲಿಂಗ ಅಂಗ ಏಕವಾಗಿಹ ಜಂಗಮಮಂಗಳವೇ ನಿತ್ಯವಿಹ ಜಂಗಮ ಗುರುಲಿಂಗವಾದ ಚಿದಾನಂದ ಜಂಗಮ 3
--------------
ಚಿದಾನಂದ ಅವಧೂತರು
ಜನನೀ ತ್ರಿಜಗತಿ ಜನಾರ್ದನೀ ಜನನೀ ಜಯತು ಶ್ರೀಪದ್ಮಾವತೀ ಪ. ಗುಣಗಣಾರ್ಣವೆ ವಿಶ್ವಪೂಜಿತ ಜನನಮರಣವಿದೂರೆ ಪದ್ಮಾಸನೆ ಘನಗಗನಭೂಪಾಲನಂದಿನಿ ಅ.ಪ. ಶ್ರೀನಿವಾಸನ ರಾಣಿ ಸರ್ವಾರ್ಥ ನಿ- ದಾನಾಂಬುಜಪಾಣಿ ಭಾನುಕೋಟಿಸಮಾನ ತೇಜೆ ಸ- ದಾನುರಾಗಪ್ರದಾನೆ ವಿಬುಧ- ಶ್ರೇಣಿನುತೆ ಮಹದಾದಿಮಾಯಾ- ಮಾನಿ ಮಾಧವಮನವಿಲಾಸಿನಿ 1 ಸುಂದರಿ ಸುಮನೋಹರಿ ಸುಜ್ಞಾನಾ- ನಂದೆ ಸಿಂಧುಕುವರಿ ಚಂದ್ರವದನೆ ಚರಾಚರಾತ್ಮಕಿ ವಂದನೀಯೆ ಪರೇಶಪರಮಾ- ನಂದರೂಪೆ ಸನತ್ಸುಜಾತ ಸ- ನಂದನಾದಿಮುನೀಂದ್ರವಂದಿತೆ 2 ಅಂಬೆ ಶ್ರೀಹರಿಪ್ರೀತೆ ಶಂಭುಸಂಭಾವಿತೆ ತ್ರಿಲೋಕಾ- ರಂಭಸೂತ್ರೆ ಪವಿತ್ರೆ ವಿಶ್ವಕು- ಟುಂಬೆ ಕಮಲಯನೇತ್ರೆ ಸಾಧ್ವೀಕ- ದಂಬಮಸ್ತಕಮಣಿಪ್ರಭಾಶಿನಿ 3 ಪದ್ಮ ಸರೋವಾಸಿನೀ ಪಾವನಹೃ ತ್ಪದ್ಮನಿತ್ಯಭಾಸಿನಿ ಪದ್ಮನವಕ್ರೀಡಾವಿಲಾಸಿನಿ ಮ- ಹನ್ಮನೋಧ್ಯಾನಾಧಿರೂಢೆ ಸು- ಪದ್ಮಹಸ್ತೆ ನಮಸ್ತೆ ಪಾವನೆ ಪದ್ಮನಾಭನರಮಣಿ ಕರುಣಿ 4 ವರಲಕ್ಷ್ಮೀವಾರಾಯಣಿ ಕಲ್ಯಾಣಿ ಶ್ರೀ- ಕರೆ ಕಾಳಾಹಿವೇಣಿ ಧರೆಯೊಳುತ್ತಮ ಕಾರ್ಕಳದಿ ಸು- ಸ್ಥಿರನಿವಸವ ಗೈದೆ ಕರುಣಾ- ಶರಧಿ ಭಕ್ತರ ಪ್ರಾರ್ಥನೆಯ ಸ್ವೀ- ಕರಿಸಿ ಪೊರೆವಿಷ್ಟಾರ್ಥದಾಯಿನಿ5
--------------
ತುಪಾಕಿ ವೆಂಕಟರಮಣಾಚಾರ್ಯ
ಜನುಮಪಾವನ ಹರಿನಾಮ ಭಜನೆ ಜನುಮ ಪಾವನ ಪರಲೋಕಸಾಧನ ಪ ದಿನದಿನದಿ ಘನವಾಗಿ ಕನಸುಮಸಿನೊಳು ಬಿಡದೆ ವನಜನಾಭನ ನೆನೆದರಿಲ್ಲ ಜನನ ಮರಣ 1 ಲೊಂದುಭವದ ಬಂಧನಗಳ್ ಸಂಧಿಸವೆಂದಿಗು 2 ಕಾಮಜನಕ ಸ್ವಾಮಿ ಶ್ರೀರಾಮಮಂತ್ರ ಗೂಢದಿಟ್ಟು ನೇಮದಿಂದ ಪೊಗಳುತಿರೆ ಆ ಮಹಮೋಕ್ಷ ಸಿದ್ಧಿ3
--------------
ರಾಮದಾಸರು
ಜನ್ಮವ್ಯರ್ಥವಾಯಿತು ಶಾಙ್ರ್ಗಧನ್ವ ನಿನ್ನನಂಬದೆ ಪ ಮನ್ಮಥನಾಟದಲ್ಲಿ ಮರೆತು ಹೋಗಿಕಾಲ ನಾಕಳದೇ ಅ.ಪ ಹೊಟ್ಟೆಗೋಸಗ ಕಾಡಿಬೇಡಿ ನಿಷ್ಟುರಗಳನಾಡುತಾ ಕೆಟ್ಟವನಿವನೆನಿಸಿ ಕೊಂಡು ಕೀರ್ತಿಶೂನ್ಯನಾಗುತಾ 1 ನಿತ್ಯಕರ್ಮಮಾಡದೆ ಗೃಹಕೃತ್ಯದಲ್ಲಿ ಬಳಲುವೆ ಸತ್ಯವೆಂಬುದು ಸ್ವಪ್ನದಲ್ಲಿಯು ಸಾಧ್ಯವಾಗದು ಜನರಿಗೆ2 ಸುಳ್ಳು ಹೇಳುವವನ ಜನರು ಒಳ್ಳೆವನಿವನೆಂಬರು ಬಲ್ಲ ಹಿರಿಯರಾಡುವ ನುಡಿ ಭಕ್ತಿಯಿಂದನಂಬರು 3 ಖಲರು ನಡಿಯಲಾರದೆಯಿದು ಕಲಿಯುಗವೆಂದು ನಿಂದಿಸೀ ಕೊಲೆಗೆ ಗುರಿಯಾಗಿ ಕಾಮ ಕ್ರೋಧಗಳಿಂದ ಬಂಧಿಸಿ 4 ಹೀನ ವಿದ್ಯಗಳೆಚ್ಚಿತು ಸುಜ್ಞಾನಬೋಧೆ ತಗ್ಗಿತು ಸ್ವಾನುಭವಕೆ ಹಾನಿಕರ ನಿಧಾನಿಸೇ ಧರ್ಮ ಕುಗ್ಗಿತು 5 ದುರ್ಗುಣಿಗಳ ತೃಪ್ತಿಪಡಿಸೆ ಭರ್ಗಗಾದರು ಸಾಧ್ಯವೇ ನಿರ್ಗಮಿಸುವಧ್ಹ್ಯಾಗೆ ನಾವಿನ್ನಿರುವುದು ಭೂಮಿಭಾರವೆ6 ಲೇಶ ಸಾಧನವಾಗುವದಿಲ್ಲ ಆಸೆ ಅಧಿಕವಾದುದರಿಂದ ಘಾಶಿಪಡುವದಲ್ಲದೆ ದೇಹಾಯ್ಸವೇಕೆ ಪಡುವೆನಾಂ 7 ಮಾನವಿಲ್ಲ ಜ್ಞಾನವಿಲ್ಲ ಮಮತೆಯೆಂಬೋದು ಬಿಡದಲ್ಲಾ ಹೀನಾರನಾಸೇವಿಸಲಾರೆ ಹಿತವ ಕಾಣೆ ಸಿರಿನಲ್ಲಾ8 ಇರುಳು ಹಗಲು ನಿನ್ನ ದಿವ್ಯ ಚರಣಸೇವೆ ಪಾಲಿಸೊಗುರುರಾಮ ವಿಠಲನೆ ಪಾಮರರ ಬಿನ್ನಹ ಲಾಲಿಸೊ9
--------------
ಗುರುರಾಮವಿಠಲ
ಜಯ ಜಯ ನಿಮಗೆ ಜಯವಣ್ಣ ಭಯವಿಲ್ಲೀನುಡಿ ಕೇಳ್ ಚಿಣ್ಣ ಪ ಶ್ರೀ ಮನೋಹರನ ಲೀಲೆಯಿದು ಸು ಕ್ಷೇಮವಹುದು ಸತ್ಪುರುಷರಿಗೆ1 ಈ ಜಗತ್ತನೂ ಈಶ್ವರನೂ ತಾ ರಾಜನಾಗಿ ಕಾಪಾಡುವನು 2 ಕುರುಡರು ತಾವ್ ಕೆಡುವರು ಕೊನೆಗೆ 3 ಇದರೊಳುಂಟು ಬಹುವಿಧ ಭೇದ ವದರುತಿಪ್ಪದು ಸಕಲವೇದ4 ಅಂತ್ಯವಿಲ್ಲದಿಹ ಕಾರಣದಿ ಅ ನಂತ್ಯವೆಂದು ಪೇಳ್ವರು ಭರದಿ 5 ಮನುಜ ಜನ್ಮ ಬಹುದುರ್ಲಭವು ಮನನಶೀಲರಿಗಹುದು ಶುಭವು 6 ಮರೆಯಬೇಡಿ ಜನರೆ ನೀವು ಅರಿತು ಅರಿಯದವರಿಗೆ ನೋವು 7 ಕತ್ತಲೆ ಕೊನೆಯಿಲ್ಲದ ಘೋರ 8 ವುಳಿಯದು ನಿಮಗದು ಕೇಳ್ ಜನರೆ 6 ಧರ್ಮವೆಂಬ ಮೂಟೆಯ ಕಟ್ಟೆ ಬಟ್ಟೆ 10 ಗುರುವಾಜ್ಞೆಯ ಮೀರುವುದು ಸಲ್ಲ ಈ ದುರುಳತನ ನಿಮಗೆ ಸರಿಯಲ್ಲ 11 ನಾನೇ ಶ್ರೇಷ್ಠನೆಂಬುವ ಮಾತು ಶಾನೆ ವಡಕು ಗಡಿಗೆಯು ತೂತು 12 ಹಿಂದಿನವರ ಕಷ್ಟವ ನೋಡಿ ಮುಂದಕೆ ಸತ್ ಸಾಧನೆ ಮಾಡಿ 13 ಮೂರು ಕರಣ ಶುದ್ಧಿಯು ಬೇಕು ಧೀರ ಜನರಿಗಿಷ್ಟೇ ಸಾಕು 14 ಜನರ ನೋಡಿ ನಡೆಯಲಿಬೇಡಿ ಕೊನೆಗೆ ನಿಮಗೆ ಕಾಲಿಗೆ ಬೇಡಿ 15 ಹೆಚ್ಚಪೇಕ್ಷಿಸೆ ಬರುವುದಿಲ್ಲ ಮೆಚ್ಚನು ನಿಮಗೆ ಸಿರಿಯನಲ್ಲ 16 ನಿರ್ಮಲ ಮಾರ್ಗ ಹುಡುಕಿದಿರಾ 17 ಜ್ಞಾನರತ್ನ ಸಂಪಾದನೆಯು ಹೀನ ಜನರಿಗಾಗದು ಕೊನೆಯು 18 ದುರಾಸೆಯಲಿ ಕೆಡುವರು ಕೆಲರು ನರಾಧಮರು ಎಂದೆನಿಸುವರು 19 ಪರಿಯಂತ ತಂ ತಮ್ಮಟ್ಟಿಗಿಹುದು ಅಂತ 20 ಗೂಡಿನ ಮೇಲೆ ದುರಭಿಮಾನ ಮಾಡಿ ಮಾಡಿ ಕೆಡುತಿಹರು ಜನ 21 ಯೀಗೂಡಿಗೆವೊಂದಾಧಾರ ಯೋಗಿಗಳರಿವರಿದರಸಾರ 22 ವರ ರಸಗಳು ನಾಲ್ಕು ತೊಗರು 23 ಹಂಚೇಳರಿಂ ಮಾಡಿಹದೇವ 24 ಘಟಿಸಿರುವುದು ಪತ್ತಲೆಯಿದರೊಳ್ 25 ಮರನಿದೆಂದು ಶಾಸ್ತ್ರದ ಮೂಲ ಅರಿಯದೆ ನಾನೆಂಬೆನು ಬಾಲ 26 ಪಕ್ಷಿಗಳೆರಡೀ ಮರದಲ್ಲಿ ಸಾಕ್ಷಿ ಒಂದು ಒಂದಕೆ ಅಲ್ಲಿ 27 ಮರದ ಪಣ್ಣು ತಿಂಬುವದೊಂದು ನಿರುತವು ನೋಡುತಿರುವದೊಂದು 28 ದ್ವಾಸುಪರ್ಣ ಶೃತಿ ಇದರರ್ಥ ದಾಸನಾಗದಿರುವನು ವ್ಯರ್ಥ 29 ಅಧ್ಯಾತ್ಮ ವಿದ್ಯದಲಿ ತೋರುವುದೇ 30 ಜೀವನಾಮ ಆತ್ಮನಿಗುಂಟು ದೇವತಾನು ತಬ್ಬಿದ ಗಂಟು 31 ಅಭೇದ ಶೃತಿಗಳೇನಕ ವಿಧ ಸ್ವಭಾವದಿರುನಡೆ ತೋರುವದ32 ಸುರರುತ್ತಮರು ನರರಾನಿತ್ಯ ಸುರೇತರರು ನೀಚರು ಸತ್ಯ 33 ನೂರು ವರುಷ ಬದುಕುವರೆಂದು ಮೀರಿ ಮನದಿ ಯೋಚಿಸಿ ಮುಂದು 34 ಬಹು ಧನಾರ್ಜನೆಯ ವೂಹೆಯಲಿ 35 ಮೊದಲು ಅನ್ನಕಿಲ್ಲೆಂದು ಮತಿ ವಿಧ ವಿಧ ವಸ್ತ್ರಗಳಲಿ ಪ್ರೀತಿ 36 ನಾಬಡವನು ಎಂದಗಲಿರುಳು 37 ತನಗೆ ಬೇಕಂತ ಚಿಂತೆಯೊಳು 38 ಇತರರ ನೋಡಿ ತನಗಪೇಕ್ಷೆ ಗತಿ ಇಲ್ಲದೆ ಇರುವುದೆ ಶಿಕ್ಷೆ 39 ತಾವ್ ಸಮಂಜಸದಿ ಪೇಳಿದರು 40 ಪ್ರವೃತ್ತಿ ಮಾರ್ಗದ ಸಂಪತ್ತು ಭವಾಂಬುಧಿ ಸುಳಿಯು ವಿಪತ್ತು 41 ಫಲವ ಕೋರಿ ಕರ್ಮವ ಮಾಡಿ ಹಲವು ಯೋನಿಗಳೊಳೋಡಾಡಿ42 ಮರಳಿ ಮರಳಿ ಜನನ ಮರಣದೆ ದರಿಯ ಕಾಂಬ ಬಗೆ ದಾರಿಯದೆ 43 ಇದುವೆ ದೊಡ್ಡ ಸಂಸೃತಿ ವೃಕ್ಷ ತುದಿ ಮೊದಲಿಗು ದೊರಕದು ಮೋಕ್ಷ 44 ಇನ್ನು ಅಕ್ಕ ತಂಗಿಯು ಮೊದಲು 45 ಸತಿ ಸುತರು ಬಳಗಗಳು 46 ಇವರು ತನ್ನವರಿತರರಲ್ಲ ಭವ ಜಲಧಿಯ ಜಂತುಗಳೆಲ್ಲ 47 ಕೊಡದಿದ್ದರೆ ಕೋಪವು ಬಹಳ 48 ವಿತ್ತವಿರಲು ಬಂಧುಗಳೆಲ್ಲ ಹತ್ತಿ ಇವನ ಬಾಧಿಪರೆಲ್ಲ 49 ಸುಳ್ಳುಹೇಳಿದರೆ ಬಹುನಂಬಿಕೆ 50 ಹಿತೋಪದೇಶದಿ ಬಹುಕೋಪ ಪತಿತ ಜನರಿಗೆ ಇದು ಪಾಪ 51 ಒಬ್ಬ ದೈವಲೋಕಕೆ ಸತ್ಯ ಹಬ್ಬವವನ ಭಜಿಪುದಗತ್ಯ 52 ಕಾಮುಕರಿಗೆ ಕಡೆಗೂ ದುಃಖ ನೇಮವದಕೆ ಮೂಲವುರೊಕ್ಕ 53 ಸ್ಪøಹದಿಂದಲೆ ಕೋಪವು ಬಹುದು ವಿಹಿತವೆಂದು ನಗುವನೆ ಸಾಧು 54 ಲೋಭದಿಂದ ಮೂಲಕೆ ನಾಶ ಸ್ವಾಭಾವ್ಯದಿ ದುರ್ಜನಕಾಶಾ 55 ರಾಶಿ ಧನವ ಕೊಳ್ಳೆಯು ಕೊಡುವ 56 ದಾನಕೆಂದರಿಲ್ಲವು ಕಾಸು ದಂಡಕೊಡುವುದಕೆ ಬಹುಲೇಸು 57 ನಷ್ಟವಾದರೂ ಮನಕಿಷ್ಟ ದುಷ್ಟಾತ್ಮರು ಪಡುವರು ಕಷ್ಟ 58 ಆರ್ಯರುಕ್ತಿ ಕೇಳುವುದಿಲ್ಲ ಕಾರ್ಯದಲಿ ವಿಘಾತವೆ ಎಲ್ಲ 59 ಧನವಿದ್ದರು ಸೌಖ್ಯವು ಕಾಣೆ ಘನದುರಾಸೆ ಕುಜನರಿಗೆ ಆಣೆ 60 ಭೂಮಿ ಉಂಟು ತನಗೆಂಬುವರು ನೇಮದಿ ದಂಡವ ತೆರುತಿಹರು 61 ಮಳೆಬೆಳೆಯನು ನಿಂದಿಪರು ಕೆಲರು ಖಳರು ಸುಮನಸರ ದೂಷಿಪರು62 ಮೊದಲು ತುದಿಯಲಿ ದುರಭಿಮಾನ 63 ವ್ಯಾಪಾರದಿ ಧನ ಕಳಕೊಂಡು ಕೋಪ ವ್ಯಾಜ್ಯಕೆಳೆವದೆ ಫಂಡು 64 ಬಲುಧನವ ಕೂಡಿಸುತಲಿ ಮುಂದು 65 ಮುಖದಾಕ್ಷಿಣ್ಯದಿ ಮಾತಾಡಿ ವಿಕಲರನರ ಸ್ನೇಹದಿ ಕೂಡಿ66 ದೊಡ್ಡದಾಗಿ ಮನೆಯನು ಕಟ್ಟಿ ದುಷ್ಟತನದಿ ವಾದಿಸಿ ಬಿಟ್ಟಿ 67 ಕೂಲಿಯವರ ಹೊಟ್ಟೆಗೆ ಕೊಡದೆ ಲೋಲನಾಗಿ ವಂಚನೆ ಬಿಡದೆ 68 ಸಂಸಾರವಿದೆ ಸ್ಥಿರವೆಂದು ಹಿಂಸೆಪಡುತಲಿ ಸದಾನೊಂದು 69 ಚತುರ ಶೀತಿ ಲಕ್ಷಯೋನಿಗಳೊಳ್ ಮತಿಹೀನರಾಗಿ ಜನಿಸುತಲೂ 70 ಭದ್ರವು ತಮಗೆಂದು ಪ್ರಾಣಿಗಳು 71 ಇದಕ್ಕಾಗಿ ಪರಾಧೀನದಲಿ ಪದೇ ಪದೆಗೆ ತಾವು ನೋಯುತಲಿ 72 ಮನುಜ ಜನ್ಮ ಬರುವುದೆ ಕಷ್ಟ ಮಾನಿತನಾದವನೆ ಅತಿ ಶ್ರೇಷ್ಠ 73 ಭೋಧಿಸುವಾತನೆ ಶುಭತಮನು 74 ಸುಜನರಿಲ್ಲವವರದೆ ಪಂಥ 75 ಕರ್ಮಾರ್ಥ ಶೃತಿ ಗಹನದಲಿ ನಿರ್ಮಲರಾಗದೆ ಚಿಂತೆಯಲಿ&ಟಿbsಠಿ
--------------
ಗುರುರಾಮವಿಠಲ
ಜಯ ಜಯ ಭೀಮಸೇನ ಪ. ಜಯ ಭೀಮಸೇನ ದುರ್ಜಯ ಪರಾಕ್ರಮ ಧೀರಾದಯಾಪಯೋನಿಧಿಯೆ ನಿರ್ಭಯ ವೈಷ್ಣವಾಗ್ರಣಿಅ.ಪ. ಅಂಬ ಪಾವಕ ದೀನೋದ್ಧಾರಿ1 ವೃಕೋದರ ವಿಷ್ಣುಸೇವಕ ವಿಜ್ಞಾನಾಂಬುಧಿಬಕಮದಧ್ವಂಸಿ ಜಟಾಸುರಾಂತಕ ಹಿಡಿಂ-ಬಕಾಸುರಗರ್ವಪರ್ವತ ಪವಿಧರ ಹಿಡಿಂಬಕಿ ಚಿತ್ತಕುಮುದಕೋರಕ ಪೂರ್ಣೋಡುಪರಾಜಅಕಳಂಕ ಧನುರಾಗಮಾಚಾರ್ಯ ನಿಪುಣ ಕೀ-ಚಕ ಬಲ ನಿರ್ಮೂಲನ ದ್ರೋಣಾದಿ ಸೈ-ನ್ಯ ಕುಮನ ಅಸುಹರಣ ಧಾರ್ತರಾಷ್ಟ್ರನಿಕರವಾರಣ ವಿದಾರಣ ಪಂಚವದನಾ 2 ಮಣಿಮಯರಥವೇರಿ ಫಣಿಕೇತನನನುಜನುನೆಣನು ದುರ್ಗುಣನು ಮಾರ್ಗಣಗಣದಿಂದಲಿರಣಾಂಗಣದಿ ನಿನ್ನ ಸೆಣಸಲಾಕ್ಷಣ ನೋಡಿತೃಣಮಾಡಿ ಗದೆಯಿಂದ ಹಣಿದು ಹಣೆಯ ಮೆಟ್ಟಿಪಣದಿ ನುಡಿದವರ ರಣವ ತಿದ್ದಿ ಅತ್ಯು-ಲ್ಬಣದಿಂದವಗೆ ಲಂಘಿಸಿ ವಕ್ಷದಿ ರಕ್ತಕೊಣನ ಶಸ್ತ್ರದಿ ನಿರ್ಮಿಸಿ ಕದಡಿಗೂಡಿರಣದೊಳೊಪ್ಪಿದ್ಯೊ ನಿನಗೆಣೆಯಿಲ್ಲವೆನಿಸಿ 3 ಮದ್ದಾನೆ ರೂಪ ಧರಿಸಿ ಮಾಯದಲಿ ಬಂದಾರುದ್ರಾನ ಯುದ್ಧದಿ ಗೆದ್ದುವೋಡಿಸಲಾಗಕೃದ್ಧನಾಗಿ ವ್ಯಾಘ್ರಸಿಂಹರೂಪದಿ ಬರೆಗುದ್ದಿ ಕೆಡಹಿ ವೇಗಕೆ ದಾರಿ ಕಟ್ಟಿದೆಯಿದ್ಧರೆಯೊಳು ನಿಮಗೆಣೆಯಾರು ಮಹಾಬಲಿಮದ್ರಾಧಿಪತಿಯ ಅಂಬರಕಟ್ಟಿ ರಾಜಸೂ-ಯಾಧ್ವರದಲಿ ಮಾಗಧನ ಸಂಹರಿಸಿದತಿಶುದ್ಧ ಸ್ವಭಾವ ಶೂರ ಸತತ ಸಾಧ್ಯಸಿದ್ಧೇಶನಿಲ ಕುಮಾರ ನಮಿಪೆಯೆನ್ನಉದ್ಧರಿಸುವುದಯ್ಯ ಶುದ್ಧ ಮನೋಹರ 4 ಸೂತ್ರ ಅಮಿತ ರೂಪ ಸದ್ಗುಣಗಣಧಾಮ ವೀರಪ್ರತಾಪ ಭಕುತಿ ಜ್ಞಾನಕಾಮಿತಾರ್ಥಗಳಿತ್ತು ಪೊರೆಯಯ್ಯ ಅಸುವ 5
--------------
ಗೋಪಾಲದಾಸರು
ಜಯ ಜಾನಕೀನಾಥ ಜಯ ಕುಶೀಲವ ತಾತ ಜಾಮಾತ ಪ ಜಯ ಜಯತು ಸುಖದಾತ ಜಯ ಜಗನ್ನಾಥ ಅ.ಪ ಮರುತಸಂಭವ ಪಕ್ಷ ಮಹನೀಯ ಸುಕಲಾಕ್ಷ ಸರಿಸಿಜದಳ ನಿಭಾಕ್ಷ ಸಾಧು ಸಂರಕ್ಷಾ ಶರಧಿ ಬಂಧನದಕ್ಷ ಶಾತ್ರವನಿಕರ ಶಿಕ್ಷ ವರವಿಶಾಲಸು ವಕ್ಷ ವಂದ್ಯ ಪಾಲಾಕ್ಷ 1 ಘೋರ ಪಾಪವಿದೂರ ಕುಜನಸಂಹಾರ ಸಾರತತ್ವವಿಚಾರ ಸದಸದ್ವಿಹಾರ 2 ಶಿವವಿನುತ ಶುಭನಾಮ ಜೀಮೂತನಿಭಶ್ಯಾಮ ನವತುಳಸಿದಳಧಾಮ ನತಜನಪ್ರೇಮ ಅವನಿಪಾಲಲಲಾಮ ಅಖಿಳಾಮರಸ್ತೋಮ ಕವಿಗೇಯ ಗುರುರಾಮವಿಠಲ ರಿಪುಭೀಮ3
--------------
ಗುರುರಾಮವಿಠಲ
ಜಯ ದೇವ ಜಯ ದೇವ ಜಯ ನಿರಂಜನ ಭಂಜನ ಗುರು ತಾರಕ ಋಷಿಮುನಿ ಜೀವನ ಧ್ರುವ ಅನಂತ ಗುಣ ಪರಿಪೂರ್ಣ ಅನಂದಮಯ ಘನ ಸ್ವಾನಂದ ಸದೋದಿತ ಸದ್ಗುರು ನಿಧಾನ ಅನಾದಿ ಮಹಿಮಾನಂದ ಸುಙÁ್ಞನಾಂಜನ ಅನೇಕ ಸಕಲಾಗುಮಪೂಜಿತ ಸೇವಿತ ತ್ರಿಭುವನ 1 ಕಲ್ಪತರು ಚಿಂತಾಯಕ ಅನಾಥ ರಕ್ಷಣ ತ್ರಿಜಗ ಜೀವನ ಅತೀತ ಸುಙÁ್ಞನ ಭಕ್ತ ಕೃಪಾನಿಧಿ ವಿಶ್ವವಂದನ 2 ಸಜ್ಜನ ಸಂಜೀವನ ಸದ್ಗುರು ಚಿದ್ಫನ ಸಗುಣ ನಿರ್ಗುಣ ಸಹಕಾರ ಸುರಮುನಿ ರಂಜನ ಮಹಿಪತಿ ತಾರಕ ಗುರು ಪತಿತಪಾವನ ಸದ್ಬ್ರಹ್ಮಾನಂದ ಸದೋದಿತ ಸದ್ಗತಿ ಸಾಧನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಜಯಕೃಷ್ಣವೇಣಿ | ಜಗಪಾವನೀ | ಜಯಕರುಣಿ ಭಯಹರಿಣಿ ಭವತಾರಿಣಿ ಪ ಮಾಬಳೇಶ್ವರನ ಸುಜಟಾ ಭಾಗದಲಿ ಪದ್ಮ | ನಾಭನಂಶದಿ ಬಂದು ಶೋಭಿಸುತಲಿ | ಈ ಭುವನಜನರ ಮನದಾಭೀಷ್ಟಮಂ ಕೊಡಲು | ತಾ ಭರದಿ ನದಿರೂಪನಾಗಿ ಪ್ರವಹಿಸಿದೆ 1 ನಿನ್ನೆಡೆಗೆ ನಡೆತಂದು ನಿನ್ನ ಜಲ ವೀಕ್ಷಿಸುತ | ನಿನ್ನ ಘೋಷವ ಕೇಳಿ ತನ್ನ ಕರದಿ | ನಿನ್ನ ಸ್ಪರ್ಶನ ಅಚಮನ ಮಾರ್ಜನದಿಂದ | ತನುಮನೇಂದ್ರಿಯಗಳು ಪಾವನವಾದವು 2 ಪೊಡವಿಯೊಳಧಿಕ ತೀರ್ಥ ತಡಿಯಗ್ರಾಮವೇ ಕ್ಷೇತ್ರ | ಸುರರು | ಒಡಲೊಳಿಹ ಜಲಚರಗಳೊಡನೆ ಗತಿಸಾಧಕರು | ನುಡಿವ ಪಕ್ಷಿಗಳು ಸಲೆ ಗಿಡಮರಗಳು 3 ಸಾಗಿಸುವ ಕರ್ಮೇದ್ರಿ ತ್ಯಾಸದ್ಧರ್ಮದಿಂ | ಯೋಗ ಅಷ್ಟಾಂಗದಿಂ ಯಾಗದಿಂದ | ಭೋಗಿಸುವ ಪುಣ್ಯವನು ರಾಗದಿಂ ತೀರದಿಹ | ಯೋಗಿಜನಕೀವೆ ತಾನೀಗ ದಯದಿ 4 ಬಿಂದುಮಾತ್ರವೇ ಬೀಳಲೊಂದು ಕಾಯದಿ ಅಘದ | ವೃಂದ ನಾಶನವಹುದು ಮಿಂದಡವನ | ಛಂದಮಂ ಬಣ್ಣಿಸುವದಿಂದು ತಿಳಿಯದು ಎನುತ | ತಂದೆ ಮಹೀಪತಿ ಜ ಕರದ್ವಂದ್ವ ಮುಗಿಯೇ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯಜನನೀ ಶಾರದೆ ಜನನಮೃತಿಭಯಭಿದೆ ಪ. ನಯವಿದೆ ತ್ರಿಜಗನ್ಮಯೆ ವೀಣಾವಿನೋದೆ ಅ.ಪ. ಭಕ್ತಿಜ್ಞಾನ ಮಾನದೆ ಭಗವತ್ಪ್ರಾಪ್ತ ಪ್ರಸಾದೆ ಮುಕ್ತಿಶಕ್ತಿಪ್ರದೆ ನಿಜ ಭೃತ್ಯವತ್ಸಲೆ ಪ್ರಬುದ್ಧೆ 1 ವೇದಾರ್ಥತತ್ವಪ್ರಬೋಧೆ ಆದಿತೇಯಾನತಪದೆ ಶ್ರೀಧರೆ ಸದಾನಂದೆ ಸಾಧು ಸೌಭಾಗ್ಯನಿಧೆ 2 ಅನಘ ಲಕ್ಷುಮಿನಾರಾಯಣನ ಭಕ್ತ ಪ್ರಹ್ಲಾದ ಸನಕನುತೆ ಸನ್ನುತೆ ಘನಪಾಪಾಪಹ್ನುತೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಜಯಜಯತು ಶುಭಕಾಯ ಜಯಜಯತು ಹರಿಪ್ರೀಯಜಯತು ಜೀಯ ಮಧ್ವಾಖ್ಯಮುನಿರಾಯಪ. ರಾಮಾವತಾರದಲಿ ಹನುಮಂತನಾಗಿ ನೀತಾಮಸನ ಪುರವ ಅನಲಗಾಹುತಿಯನಿತ್ತೆಭೂಮಿಜೆಯ ಕುಶಲವನು ರಘುನಾಥಗರುಹಿದೆಸ್ವಾಮಿಕಾರ್ಯವ ವಹಿಸಿ ಖಳರ ನೀ ತರಿದೆ 1 ದ್ವಾಪರಾಂತ್ಯದಲಿ ಶ್ರೀಕೃಷ್ಣನಂಘ್ರಿಯ ಭಜಿಸಿಪಾಪಿಮಾಗಧ ಬಕ ಕೀಚಕಾದಿಗಳಕೋಪದಿಂದಲಿ ತರಿದು ಕುರುಕುಲವ ನೀನಳಿದೆ ಪ್ರ-ತಾಪದಿಂದಲಿ ಮೆರೆದೆ ಖಳರ ನೀ ಮುರಿದೆ 2 ಮಾಯಿಗಳು ಹೆಚ್ಚಿ ಮತವೆಲ್ಲ ಸಂಕರವಾಗಿತಾಯಿಗಳಿಲ್ಲದ ಶಿಶುಗಳಂತೆ ಸುಜನರಿರಲುನೀಯವತರಿಸಿ ಮತವೆಲ್ಲ ಉದ್ಧರಿಸಿ ನಾ-ರಾಯಣನೆ ಮೂಜಗಕೆ ಪರದೈವವೆಂದೊರೆದೆ 3 ದುರುಳ ವಾದಿಗಳಿಗುತ್ತರವ ಕೊಡಬೇಕೆನುತಸರುವ ಶಾಸ್ತ್ರಾಮೃತವ ಸೃಜಿಸಿ ವಾಕ್ಯಗಳ ಕ್ರೋಡಿಸಿದರುಶನ ಗ್ರಂಥಗಳ ರಚಿಸಿ ಶಿಷ್ಯರಿಗಿತ್ತೆಪರಮ ತತ್ವದ ಖಣಿಯೆ ಗುರುಶಿರೋಮಣಿಯೆ 4 ನಿನ್ನ ಮತವೇ ವೇದಶಾಸ್ತ್ರಗಳ ಸಮ್ಮತವುನಿನ್ನ ಮತವೇ ಇಹಪರಕೆ ಸಾಧನವುಪನ್ನಂಗಶಯನ ಶ್ರೀ ಹಯವದನದಾಸರೊಳುನಿನ್ನ ಪೋಲುವರುಂಟೆ ಮಧ್ವಮುನಿರಾಯ 5
--------------
ವಾದಿರಾಜ
ಜಯಜಯಾ ಶ್ರೀನಿವಾಸಾ ಜಗದೀಶಾ ವೆಂಕಟೇಶಾ ದಯದಿಂದಲಿ ಪಾಲಿಸೆನ್ನಾ ದೋರಿನಿಜ ಪ್ರಕಾಶಾ ಪ ಉರಗಾದ್ರಿಯಲ್ಲಿ ಬಂದು ಭೂವೈಕುಂಠಿದೇಯಂದು ಕರದಿಂದ ಮಹಿಮೆದೋರಿ ತಾರಿಸುವ ಜನದಿಂದು 1 ಧರ್ಮಾರ್ಥ ಕಾಮ್ಯ ಚತುರ್ವಿಧಮುಕ್ತಿಗಳು ಧರ್ಮವರಿತೆಸಾಧುರಿಗೆ ನೀಡುತಿಹೆ ದಯಾಳು 2 ಕುಲಧರ್ಮದಿಂದಲೆನೆಗೆ ಮಾನ್ಯತಾನಬಂದ್ಹಾಂಗೆ ವಲಮೆಯಿಂದ ಪರಗತಿಗೆ ಕುಡುಮಾನ್ಯತೆನವೀಗ 3 ಮಂದರೊಳು ಮಂದನಾನು ಜ್ಞಾನಭಕ್ತಿಯರಿಯೆನು ತಂದೆ ಮಹಿಪತಿಸ್ವಾಮಿ ಇಂದು ಉದ್ಧರಿಸುನೀನು 4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಜಯತೀರ್ಥ ಗುರು ಹೃದ್ಗುಹಾಂತರ ವಾಸ ವಾಯ್ವಂತರ್ಗತ ಶ್ರೀ ಕೃಷ್ಣಯ್ಯ ಜೀಯಾ ಪ ಕಾಯೈಯ ನಿನ್ನವ ನಿವನೆಂದು ಅನುದಿನದಿ ಕಾಯ ಮನ ವಚನದಲಿ ನಿನ್ನ ನೆನವಿರಲಿ ಜೀಯಾ ಶ್ರೀ ವಿಜಯರಾಯರ ಸೇವೆ ಕಾರ್ಯಗಳಿಗಭಯವ ನಿಡೈಯಾ ಜೀಯಾ 1 ಲೌಕಿಕದಲ್ಲಿಹನೆಂದು ನಿರಾಕರಿಸದೇಲೆ ನಿನ್ನ ಏಕಾಂತ ಭಕುತಿಯನಿತ್ತು ಸಲಹೋ ಶ್ರೀ ಕಳತ್ರನೆ ಇವನ ವ್ಯಾಕುಲಗಳ ಹರಿಸಿ ಕೃಪಾಕಟಾಕ್ಷದಿ ನೋಡಿ ಕಾಯಬೇಕೈಯಾ 2 ಭಕ್ತವತ್ಸಲ ನಿನ್ನ ಭಕ್ತನಿವನೆಂದೆನಿಸು ಭಕ್ತಿಬಲಜ್ಞಾನ ಸಾಧನವನಿತ್ತು ಶಕ್ತನೆನಿಸಿಹಪರದಿ ಭಕ್ತಿನಿನ್ನೊಳು ಇರಲಿ ಮುಕ್ತರೊಡೆಯ ಕೃಷ್ಣವಿಠಲ ಶ್ರೀ ವೆಂಕಟೇಶ 3
--------------
ಕೃಷ್ಣವಿಠಲದಾಸರು
ಜಯತೀರ್ಥ ಗುರು ಹೃದ್ಗುಹಾಂತರವಾಸ ಪ ವಾಯುವಂತರ್ಗತ ಕೃಷ್ಣಯ್ಯ ಜೀಯ್ಯ ಅ.ಪ ಕಾಯಯ್ಯಇವ ನಿನ್ನವನೆಂದು ಅನುದಿನ ಕಾಯ ವಾಚದಲಿ ನಿನ್ನ ನೆನವಿರಲಿ ಜೀಯ ಶ್ರೀ ವಿಜಯರಾಯರ ಸೇವಾ ಕಾರ್ಯಗಳಿಗಭಯವ ನೀಡಯ್ಯ 1 ಲೌಕಿಕದಲ್ಲಿಹನೆಂದು ನಿರಾಕರಿಸದಲೆ ನಿನ್ನ ಏಕಾಂತ ಭಕ್ತಿಯನಿತ್ತು ಸಲಹೋ ಶ್ರೀ ಕಳತ್ರನೆ ಇವನ ವ್ಯಾಕುಲವ ಹರಿಸಿ ಕೃ ಪಾ ಕಟಾಕ್ಷದಿ ನೋಡಿ ಕಾಯಬೇಕಯ್ಯ 2 ಭಕ್ತವತ್ಸಲ ನಿನ್ನ ಭಕ್ತನಿವನೆಂದೆನಿಸೊ ಭಕ್ತಿಬಲಜ್ಞಾನ ಸಾಧನವನಿತ್ತು ಭಕ್ತವತ್ಸಲನೆಂಬೊ ಬಿರುದು ನಿನ್ನೊಳು ಇರಲಿ ಮುಕುತರೊಡೆಯ ದೇವಾ ಶ್ರೀ ವೇಂಕಟೇಶ 3
--------------
ಉರಗಾದ್ರಿವಾಸವಿಠಲದಾಸರು
ಜಯತೀರ್ಥರಾಯಾ ಗುರುವರ್ಯಾ ಮುಗಿವೆನು ಕೈಯ್ಯಾ ಪ ತೋಯಜಾಕ್ಷನಂಘ್ರಿ ಪ್ರೀಯ - ಜೀಯ ಮಳಬೇಡ ನಿಲಯ ಅ.ಪ ಮೋದ ತೀರ್ಥಗ್ರಂಥ ಕ್ಷೀರ ವಾರಿಧಿಯನ್ನು ಮಥಿಸಿ ಧೀರ ಸಾಧುಗಳಿಗೆ ಸುಧೆಯನೆರದೆ - ವಾದಿಗಳೆದಯ ಮುರಿದೇ 1 ಅದ್ವೈತಾರಣ್ಯದಹನ - ಮಧ್ವ ಪಂಥಸುಜನಸದನ ಪೊದ್ದಿದೆನೋ ನಿನ್ನ ಚರಣ - ಉದ್ಧರಿಸೋ ದೀನೋದ್ಧರಣ 2 ಅಕ್ಷಯಮಾಲಾ ದಂಡ ಧಾರೀ - ಭಿಕ್ಷುಶ್ರೇಷ್ಠನಧಿಕಾರಿ ಅಕ್ಷೋಭ್ಯ ಮುನಿಪ ತನಯ - ಲಕ್ಷ್ಮೀಕಾಂತ ಭಜಕ ಸದಯ 3
--------------
ಲಕ್ಷ್ಮೀನಾರಯಣರಾಯರು