ಒಟ್ಟು 8186 ಕಡೆಗಳಲ್ಲಿ , 130 ದಾಸರು , 4775 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹೇಳಬಾರದೆ ಬುದ್ಧಿಯ - ಮಗನ ಊರ-|ಗೂಳಿಯ ಮಾಡಿದೆನೆ ? ಪಮೇಳದಿ ಓರಗೆಯವರ ಕೂಡಿಕೊಂಡು |ಹಾಳು ಮಾಡುತಾನೆ ಗೋವಳಗೇರಿಯ ಅ.ಪಅಟ್ಟದ ಮೇಲಿಟ್ಟಹ - ಚೆಟ್ಟಿಗೆ ಹಾಲು |ಬಟ್ಟನಿಕ್ಕಿ ಚೀಪುವ ||ದುಷ್ಟತನವ ಮಾಡಬೇಡ ಅಯ್ಯಾ ಎನೆ |ಕಷ್ಟವೇನೆಂಬೆ ಮುದ್ದಿಟ್ಟು ಓಡಿ ಪೋದ 1ಮೊಸರ ಮಥಿಸುತಿರಲು - ಬಂದು ಕುಳಿತ |ಹಸುಗೂಸು ಎನುತಿದ್ದೆನೆ ||ಕುಸುಮನಾಭನು ತನ್ನ ವಶವಾಗು ಎನುತಲಿ |ವಸನೆತೆಗೆದು ಮೊಲೆ ಪಿಡಿದು ಹೋದ ಮೇಲೆ 2ಬೆಣ್ಣೆಯ ಕಂಡರಂತೂ - ಅದರರೂಪ |ಕಣ್ಣಿಗೆ ತೋರನಲೆ ||ಸಣ್ಣವನೆಂದು ಬಗೆದು ನಾ ಕರೆದರೆ |ಬಣ್ಣದ ಮಾತಾಡಿ ಬಾ ಎಂದು ಕರೆವನು 3ಉಡುವ ಸೀರೆಯ ಕಳೆದು - ತಡಿಯಲಿಟ್ಟು |ಮಡುವಿನೊಳ್ ಮೈದೊಳೆಯೆ ||ದಡದಡ ಬಂದೊಯ್ದು ಕಡಹದ ಮರವೇರಿ |ಕೊಡು ಕೃಷ್ಣ ಎನುತಿರೆ ಪಿಡಿ ಜೋಡು ಕೈಯೆಂಬ 4ಎಷ್ಟು ಹೇಳಲಿ ನಿನಗೆ - ಯಶೋದೆ ಒಂ-|ದಿಷ್ಟು ಕರುಣವಿಲ್ಲವೆ |ಸೃಷ್ಟಿಗೊಡೆಯ ನಮ್ಮಪುರಂದರವಿಠಲ-------------------------- 5
--------------
ಪುರಂದರದಾಸರು
ಹೇಳೆಕಾಮಿನಿರಂಗಗೆ ಬುದ್ಧಿಯಹೇಳೆಕಾಮಿನಿರಂಗಗೆಪ.ಹೇಳಿದಂದದಿಕೇಳಿಕಾಲಿಗೆರಗುವಳಮ್ಯಾಲೆ ಕೋಪಿಸಿಕೊಂಡು ಬಾಲೇರ ನೆರೆವಂಗೆ ಅ.ಪ.ತನ್ನ ಮೈಗಂಪು ಕಸ್ತೂರಿಗಿಂದಧಿಕ ಕಂಡೆತನ್ನಧರದ ರಸಾಮೃತಗಿಂತ ಸವಿದುಂಡೆತನ್ನ ದಂತದ ಘಾಯಕೆ ಅಂಜದೆಕರಜನ್ನಟ್ಟಿಸಲು ಕುಚಕ್ಕೆ ಸುಂದರಿಯರನ್ನು ಮೆಚ್ಚಿದ ದಾನಕ್ಕೆ ಇನಿಯಳಿರೆಅನ್ಯರ ಮೋಹಿಪಗೆ ಕಲಿಮಾನವಗೆ 1ಸ್ನೇಹ ನೋಟಕೆ ಮೆಚ್ಚಿ ಸುಖಭಾರ ತನಗಿತ್ತೆಬಾ ಹೆಣ್ಣೆ ಎನಲು ಭಾಗ್ಯಾಂಬುಧಿಗೊಶವಾದೆತಾ ಹೊನ್ನಾಸೆಗೆ ಮಂಚದಿ ಘಾತಿಸಿದರೆನೇಹಿಯ ಬೆರದೆಕೆಲದಿಕರಾಳ ಚೇಷ್ಟೆಗೆನೇಹದಾರದಲೊಪ್ಪಿದೆ ಎನ್ನನು ಬಿಟ್ಟುಬಾಹು ಜೋರಿನಬುದ್ಧವಾಜಿಯಲ್ಲೇರ2ಚಪಲತೆಯಲ್ಲಿಕಪಟವಿದ್ಯದಲಿ ಭೂಪಕುಪಿತಾಶಾಯಿಲ್ಲ ಹೆಜ್ಜೆ ಹೆಜ್ಜೆಗೆ ಕಥೆಯಿಲ್ಲನೃಪಕೃಷ್ಣ ಸಲಹೆಂದರೆ ಎನ್ನಿಂದಾದಅಪರಾಧ ಕ್ಷಮಿಸೆಂದರೆ ಪ್ರಸನ್ವೆಂಕಟಕೃಪಿ ಧರ್ಮಿಯೆಂದರೆ ಇದಕೆ ತಾವಿಪರೀತ ತಿಳುಹನಂತೆ ಹಾಗಲ್ಲಂತೆ 3
--------------
ಪ್ರಸನ್ನವೆಂಕಟದಾಸರು
ಹೊಡೆಯೊ ನಗಾರಿ ಮೇಲೆ ಕೈಯ |ಆನಂದಮದವೇರಿ ಗಡಗಡ ಪ.ಮೃಡಸಖನಪಾದ ಬಿಡದೆ ಭಜಿಂಸರಫ |ಬಿಡಿಸಿ ಕಾಯ್ವ ಜಗದೊಡೆಯ ಶ್ರೀ ಹರಿಯೆಂದು 1ವೇದಗಮ್ಯ ಸಕಾಲಾರ್ತಿನಿವಾರಕ |ಮೋದವೀವ ಮಧುಸೂದನ ದೊರೆಯೆಂದು 2ಗಾನಲೋಲ ತನ್ನ ಧ್ಯಾನಿಸುವರನೆಲ್ಲ |ಮಾನದಿಂದ ಕಾಯ್ವ ಶ್ರೀನಿಧಿ ಪರನೆಂದು 3ನಿಷ್ಠೆಯಿಂದಲಿ ಮನಮುಟ್ಟಿ ಭಜಿಸುವರ |ಕಷ್ಟವ ಕಳೆವ ಶ್ರೀ ಕೃಷ್ಣನು ಪರನೆಂದು 4ಈ ಪೃಥಿವಿಯೊಳಗೆ ವ್ಯಾಪಕನಾಗಿಪ್ಪ |ಶ್ರೀಪತಿ ಪುರಂದರವಿಠಲನು ಧಣಿಯೆಂದು 5
--------------
ಪುರಂದರದಾಸರು
ಹೊರ ಹೋಗಿ ಆಡದಿರೊ ಹರಿಯೆ-|ಎನ್ನ ದೊರೆಯೆ ಪಮನೆಯೊಳಗಾಡುವುದೆ ಚೆಂದ - ನೆರೆ-|ಮನೆಗಳಿಗೇಕೆ ಪೋಗುವೆಯೊ ಮುಕುಂದ ||ವನಿತೆಯರು ಮೋಹದಿಂದ - ನಿನ್ನ |ಮನವಸಹರಿಸಿಕೊಂಬುವರೋ ಗೋವಿಂದ 1ಏನು ಬೇಡಿದರೂ ನಾ ಕೊಡುವೆ-ಕೆನೆ-|ಬೆಣ್ಣೆ ಕಜ್ಜಾಯವ ಕೈಯೊಳಗಿಡುವೆ ||ನಿನ್ನ ಗುಣಗಳನು ಕೊಂಡಾಡುವೆ - ನಿನಗೆ |ಚಿನ್ನ ರನ್ನದ ಅಲಂಕಾರಗಳಿಡುವೆ 2ಹೊಲಸು ಮೈಯವನೆನ್ನುವರೊ-ದೊಡ್ಡ |ಕುಲಗಿರಿಯನ್ನು ಪೊತ್ತವನೆನ್ನುವರೊ ||ಬಲುಕೇಶದವನೆನ್ನುವರೊ-ಆ |ಎಳೆಯನನೆತ್ತಿದ ಕುರೂಪಿಯೆಂಬುವರೊ 3ಭಿಕ್ಷೆಬೇಡಿದೆ ಎಂಬುವರೊ-ಭೂಮಿ |ರಕ್ಷಿಪ ರಾಯರ ಕದಡಿದೆಯೆಂಬುವರೊ ||ಲಕ್ಷ್ಮಿಯ ಕಳೆದೆಯೆಂಬುವರೊ-------ವೈ-|ಲಕ್ಷಣ ಬೆಣ್ಣೆಯ ಕದ್ದೆಯೆಂಬುವರೊ 4ಮಾನಬಿಟ್ಟವನೆನ್ನುವರೊ-ಮಹಾ |ಹೀನರ ಬೆನ್ನಟ್ಟಿ ಹೋದನೆಂಬುವರೊ ||ದಾನವವೈರಿಯೆಂಬುವರೊ-ಸುರ-|ರಾನತ ಪುರಂದರವಿಠಲನೆಂಬುವರೊ 5
--------------
ಪುರಂದರದಾಸರು
ಹ್ಯಾಂಗಾದರು ದಾಟಿಸೊ ಭವಾಬ್ಧಿಯಹ್ಯಾಂಗಾದರು ದಾಟಿಸೊ ಪ.ಗಂಗಾಜನಕನಾ ನಿನ್ನವನೆಂದುಹ್ಯಾಂಗಾದರು ದಾಟಿಸೊ ಅ.ಪ.ನಗುತ್ತಾದರು ಉಂಡೆ ಅಳುತ್ತಾದರು ಉಂಡೆಬಗೆ ಬಗೆ ದುರ್ಜನ್ಮ ಸುಖದು:ಖವತಗೆ ಬಗೆ ನಿರಯದಿ ಹೊರಳ್ಯಾಡುವನ ತಂದುಮಿಗಿಲಾದ ದೇಹವನಿತ್ತೆ ಇನ್ನೆಲೆ ಕೃಷ್ಣ 1ತಿಳಿದಾದರು ಮಾಡಿ ತಿಳಿಯದಾದರು ಮಾಡಿಹಲವು ದೋಷದ ರಾಶಿ ಒದಗಿಸಿದೆಬಲುತಪ್ಪು ನೋಡದೆ ನಾಮಾಮೃತವನಿತ್ತುಸಲಹುವ ಮನಬಲ್ಲ ಎಲ ಎಲೋ ಮುಕುಂದ 2ಮಂದಮತಿಯುಗ್ರಾಹ ಅಂಧ ಕೂಪದಿ ಬಿದ್ದುಎಂದಿಗುಭೋಗಭೋಗಿಸಲಾಪೆನೆತಂದೆ ಪ್ರಸನ್ನವೆಂಕಟಪತಿಗೊಲಿದುನಿಂದೆನ್ನ ಛಿದ್ರವನೆಣಿಸುವರೆ ರಂಗ 3
--------------
ಪ್ರಸನ್ನವೆಂಕಟದಾಸರು