ಒಟ್ಟು 561 ಕಡೆಗಳಲ್ಲಿ , 83 ದಾಸರು , 496 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೈದ್ಯವ ನಾನರಿಯೆ - ಭವರೋಗದ-|ವೈದ್ಯ ನೀನೆ ಹರಿಯೆ ಪನೀ ದಯದಿಂದೆನ್ನ ರಕ್ಷಿಸು-ಆದಿವೈದ್ಯ ಮುನ್ನ |ಪಾದೋದಕವನು ಎನಗೆ ಕೊಡಿಸು ಸರ್ವ-||ವ್ಯಾಧಿನಿವಾರಣ ಕಷಾಯ ನೀ ಕೊಡು 1ಹರಿನಿನ್ನ ಕರುಣವೆಂಬ-ಸ್ಮರಣೆಯ |ತ್ವರಿತ ಙ್ಞÕನದಿಂದ ||ಉರುತರ ಮಹಾತ್ಮೆಯ ಎನಗೆ ಕೊಡಿಸು ಸರ್ವ ||ದುರಿತನಿವಾರಣ ಕಷಾಯ ನೀ ಕೊಡು 2ಕೃಷ್ಣ ನೀ ಕೃಪೆವಿಡಿದು-ಕಪಟದ-|ಉಷ್ಣವಾಯುವಳಿದು ||ವಿಷ್ಣುಶಕ್ತಿಯೆಂದ ಅಭಯವ ಎನಗಿತ್ತು |ಇಷ್ಟವ ಸಲಿಸುವ ತೃಪ್ತಿಪಡಿಸುವಂಥ 3ನಿನ್ನ ದಾಸ ನಾನು-ದುರಿತಗ-|ಸಳೆನ್ನ ಕಾಡುವುವೇನು ||ಚೆನ್ನಾಗಿ ಕಾಯಕೆ ಶಕ್ತಿಯನಿತ್ತು ದೃಢ-|ವನ್ನು ಮಾಡಿ ಶ್ರೀಹರಿ ಸಲಹೆನ್ನನು 4ಪಂಡಿತದಯಾಸಿಂಧು-ಕಾಡುವ-|ಪಾಂಡುರೋಗ ಕೊಂದು ||ಪುಂಡರೀಕಾಕ್ಷಶ್ರೀಪುರಂದರವಿಠಲ ಅ-|ಖಂಡಮೂರುತಿ ಶ್ರೀಹರಿ ಸಲಹೆನ್ನನು 5
--------------
ಪುರಂದರದಾಸರು
ಶರಣಾಗತನಾದೆನು ಶಂಕರ ನಿನ್ನಚರಣವ ಮರೆಹೊಕ್ಕೆನು ಪ.ಕರುಣಿಸೈ ಕರಿವದನಜನಕಾ-ವರಕದಂಬಪೂಜ್ಯ ಗಿರಿವರ-ಶರಸದಾನಂದೈಕವಿಗ್ರಹದುರಿತಧ್ವಾಂತವಿದೂರದಿನಕರಅ.ಪ.ಹಸ್ತಿವಾಹನವಂದಿತ ವಿಧುಮಂಡಲ-ಮಸ್ತಕಗುಣನಂದಿತಸ್ವಸ್ತಿದಾಯಕ ಸಾವiಗಾನಪ್ರ-ಶಸ್ತ ಪಾವನಚರಿತ ಮುನಿಹೃದ-ಯಸ್ಥಧನಪತಿಮಿತ್ರ ಪರತರ-ವಸ್ತು ಗುರುವರ ಶಾಸ್ತಾವೇಶ್ವರ 1ಮಂದಾಕಿನೀಮಕುಟಶಿವ ಶಿವ ನಿತ್ಯಾ-ನಂದಮ್ನಾಯ ಕೂಟಚಂದ್ರಸೂರ್ಯಾಗ್ನಿತ್ರಿಲೋಚನಸಿಂಧುರಾಸುರಮಥನ ಸ್ಥಿರಚರ-ವಂದಿತಾಂಘ್ರಿಸರೋಜ ಉದಿತಾ-ರ್ಕೇಂದುಶತನಿಭ ನಂದಿವಾಹನ 2ನೀಲಕಂಧರ ಸುಂದರ ಸದ್ಗುಣವರು-ಣಾಲಯ ಪರಮೇಶ್ವರಕಾಲಕಾಲಕಪಾಲಧರ ಮುನಿ-ಪಾಲ ಪದ್ಮಜವಂದಿತಾಮಲ-ಲೀಲ ಡಮರು ತ್ರಿಶೂಲಪಾಣಿ ವಿ-ಶಾಲಮತಿವರ ಭಾಳಲೋಚನ 3ಮಾರಸುಂದರ ಸಂಕರ ಶ್ರೀಲಕ್ಷ್ಮೀ-ನಾರಾಯಣಕಿಂಕರಮಾರಹರ ಮಹನೀಯ ಶ್ರುತಿಸ್ಮøತಿ-ಸಾರವಿಗತಾಮಯ ಮಹೋನ್ನತವೀರ ರಾವಣಮದನಿಭಂಜನಚಾರುತರವರಭಾರಪುರಹರ4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶರಣು ಪೊಕ್ಕೆನೋ ನಿನ್ನ ಕರುಣಾಸಾಗರಾ ಪಶರಣು ಪೊಕ್ಕಚರಣಯುಗಕೆ ಕರುಣಿಸೆನ್ನ ಶರಣನೆಂದುxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಗುರವೇ ತ್ವರದಿ ಪೊರೆಯೊ ಸ್ವಾದಿ -ಧ್ವರಿಯೆಕರವಪಿಡಿದು ನಿರುತÀಅ.ಪಎನ್ನಬಿನ್ನಪಕೇಳೋ ಅಪನ್ನಪಾಲಕಾಘನ್ನ ಜ್ಞಾನವಿತ್ತು ಮುನ್ನ ಮನ್ನಿಸೋ ಯತಿರನ್ನನೇ 1ದಾತನಿನ್ನಪೋತನಾನು ಮಾತು ಕೇಳನಾಥ ಪೇಳ್ವೆಖ್ಯಾತ ಮಹಿಮನೆ 2ಪರಮ! ಕರುಣಿಸೋ ನಿನ್ನ- ಶಿರದಿ ನಮಿಸುವೆಸರಸ ಗುರುಜಗನ್ನಾಥ ವಿಠಲ ದೂತ 3
--------------
ಗುರುಜಗನ್ನಾಥದಾಸರು
ಶೋಭನವೇ ಶೋಭನವೇಶೋಭನ ಚಿದಾನಂದ ಅವಧೂತಗೆಪರೇಚಕ ಪೂರಕ ಕುಂಭಕವರೇಚಿಪ ಪೂರಿಪ ಕ್ರಮದನುವಾಸೂಚನೆಯರಿದಾ ಸುಷುಮ್ನದನುಭವರೋಚಕವಾಗಿಹ ಕಳೆಸವಿವ1ಹೃದಯಾಕಾಶದಿ ಲಕ್ಷ್ಯವಿಟ್ಟುಮುದದಿ ತೋರಲು ಪ್ರಭೆಮಿಂಚಿಟ್ಟುಬುದು ಬುದುಕಳೆ ಪ್ರಕಾಶಗಳೆದುರಿಟ್ಟುಒದವೆ ನಾದಧ್ವನಿ ಇಂಪಿಟ್ಟು2ನಿರುಪಮ ನಿರ್ಗುಣ ನಿರ್ಭೀತನಿರವಯ ನಿಶ್ಚಲ ನಿಜದಾತಾವರಚಿದಾನಂದ ಸದ್ಗುರುಅವಧೂತಶರಣು ಜನಕಾವಪ್ರಖ್ಯಾತ3
--------------
ಚಿದಾನಂದ ಅವಧೂತರು
ಶೋಭಾನ ಪಾಂಡುರಂಗಗೆ | ಶೋಭನ ಶ್ರೀನಿವಾಸಗೆ |ಶೋಭನಉಡುಪಿನಿಲಯಾಗೇ ಪಸುಮನಸರಾಳ್ದವನ ವರಜ ಬಾ |ಕಮಲೆಸದನಮುಖಕಂಜರವಿಬಾ |ವಿಮಲ ಗುಣಾರ್ಣವನೀಲಜಲದನಿಗಾತ್ರಾ ಬಾ ||ವಾರಿಜನೇತ್ರ ಬಾ ಮಂಗಳ ಸ್ತೋತ್ರ ಬಾ |ವಹನ ಪತತ್ರಾ ಬಾ ನತಜನ ಮಿತ್ರಾ ಬಾಹಸಿಯಾ ಜಗುಲೀಗೇ 1ಅಷ್ಟನಾಮ ಒಪ್ಪುವನೇ ಬಾ |ದುಷ್ಟ ದಿತಿ ಸುತ ಮದಹರಣಾ ಬಾ |ಮುಷ್ಟಿಕ ಪ್ರಮುಖಹ ಗೋವರ್ಧನಧರ ಕೃಷ್ಣಾ ಬಾ ||ಹರಿಗತಕಷ್ಟಾ ಬಾ ತ್ರಿಜಗಚ್ಚೇಷ್ಟಾ ಬಾ |ಅಕ್ಷರಜೇಷ್ಠಾ ಬಾ ನಿರುತ ವಿಶಿಷ್ಟಾ ಬಾಹಸಿಯಾ ಜಗುಲೀಗೇ 2ಮಾತುಳರಿಪುವನಅನಳಬಾ |ಶ್ವೇತವಹನ ರಥಸಾರಥಿಬಾ |ಮಾತಿ ಶಿರ ಕಡಿದು ಬಾಹುಜರೊರಸಿದ ನಾಥಾ ಬಾ ||ಗೋಕುಲ ತ್ರಾತಾ ಬಾ ಲೋಕೈಕದಾತಾಬಾ |ವಸುದೇವ ಜಾತಾ ಬಾ ಸುಪ್ರಖ್ಯಾತಾ ಬಾಹಸಿಯಾ ಜಗುಲೀಗೇ 3ವಾಮನ ಕೇಶವ ಹಯಮುಖ ಬಾ |ಭೀಮವಿನುತನಿಃಸೀಮಾ ಬಾ |ಕಾಮಿನಿಯರ ಚೈಲಹರಣ, ಋಷಿ, ರಣಭೀಮಾ ಬಾ ||ದಶರಥ ರಾಮಾ ಬಾ ಬಾಣವಿರಾಮಾ ಬಾ |ಅಜಮುಖ ನಾಮಾ ಬಾ ಕೃಷ್ಣಾ ಪ್ರೇಮಾ ಬಾಹಸಿಯಾ ಜಗುಲೀಗೇ 4ಕಂದರ್ಪಜನಕ ನರಹರಿ ಬಾ |ಅಂದಮೃತವ ತಂದವನೇ ಬಾ |ಮಂದೇತರಮುದಘಟಜ ಪ್ರಮುಖ ಮುನಿವಂದ್ಯಾ ಬಾ ||ಕಸ್ತುರಿ ಛಂದಾ ಬಾ ದೇವ ಮುಕುಂದಾ ಬಾ |ದೇವಕಿ ಕಂದಾ ಬಾ ಸದ್ಗುಣ ವೃಂದಾ ಬಾಹಸಿಯಾ ಜಗುಲೀಗೆ 5ಕ್ಷಿತಿಧರ ಜಿನಧರ ಸಖನೇ ಬಾ |ಅತುಳಮಹಿಮನೆ ಅಜಿತನೇ ಬಾ |ಸತಿಗಮರ ಸದನದಕುಸುಮತಂದಚ್ಯುತನೇ ಬಾ ||ಮೂರುತಿ ಸುತನೆ ಬಾ ಲೋಕ ವಿತತನೆ ಬಾ |ಪೂಜಿಗುಚಿತನೆ ಬಾ ರಕ್ಷಣರತನೇ ಬಾಹಸಿಯಾ ಜಗುಲೀಗೆ 6ಪ್ರಾಣೇಶ ವಿಠ್ಠಲರಾಯಾ ಬಾ |ವೀಣಾಪಾಣೀ ಜನಕನೆ ಬಾ |ಮಾಣದೆಭಕ್ತರ ಪೊರವುತಿಹನೆ ಸತ್ರಾಣಾ ಬಾ ||ಸತ್ಯಾ ಪ್ರಾಣಾ ಬಾ ಶ್ರೀ ಪಾಠೀಣಾ ಬಾ |ನಿಜ ವಿಜ್ಞಾನಾ ಬಾನಿತ್ಯಕಲ್ಯಾಣಾ ಬಾಹಸಿಯಾ ಜಗುಲೀಗೆ 7
--------------
ಪ್ರಾಣೇಶದಾಸರು
ಶ್ರೀ ಅಚ್ಯುತಾನಂತ ಗೋವಿಂದ ಸ್ತೋತ್ರ42ಪ್ರೋಚ್ಯಸುಗುಣಾರ್ಣವ ಶ್ರೀಶನಿರ್ದೋಷಅಚ್ಯುತಾನಂತ ಗೋವಿಂದಾಯ ನಮಃ || ಪಪ್ರಾತರುದಿತಾರ್ಕ ನಿಭ ತೇಜಸ್ವಕಾಂತಿಮಾನ್ರತ್ನ ಛವಿ ಜ್ವಲಿಸುವ ಕಿರೀಟಿಯೆ ಶರಣುಪ್ರತತ ಪ್ರಜ್ವಲ ಮಂಡಲೋಪಮ ಕುಂಡಲಗಳುವಿತತ ಮಹಿಮನೆ ನಿನ್ನ ಕಿವಿಯಲಿ ಪೊಳೆಯುತೆ 1ರಾಜರಾಜೇಶ್ವರನೆ ಸರ್ವಾಯುಧೋಪೇತನಿಜಬಲಾಮಿತ ಶಕ್ತ ಚತುರ್ಬಾಹು ಶರಣುಭಜಕರಕ್ಷಕ ಶಂಖಚಕ್ರಧರದೇವನೆತ್ರಿಜಗದೀಶನೆ ವಿಪೋಪರಿಸಂಸ್ಥಸ್ವಾಮಿ2ಅನಂತ ನಿತ್ಯನೆ ನಿನ್ನನ್ನ ಸರ್ವದೇವತೆಗಳುಸನಕಾದಿ ಮುನಿವರರು ಉಪಾಸಿಪರು ಶರಣುಘನವರದ ಅಭಯದನೇ ಸರ್ವ ಲೋಕವಕಾಯ್ವವನಜಭವಪಿತ ನಮೋ ಪ್ರಸನ್ನ ಶ್ರೀನಿವಾಸ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಕಾಶಿವಿಶ್ವನಾಥ ಶಿಷ್ಟ ಜನ ಪ್ರೀತಲೋಕ ರಕ್ಷಕ ವರದಾತ ಪ್ರಖ್ಯಾತಏಕಾನೇಕ ವಿವೇಕಶರಧಿಶರಪಾಕಾರಿ ಪ್ರಿಯ ಪಾಹಿಮಾಂ ಶಂಭೋಪಕರಿಮುಖಪಿತ ಈಶ ಕಲಿವಿನಾಶಕಕರಿಚರ್ಮ ವಸ್ತ್ರಧಾರಿಕದನಕಂಠೀರವಉರಗಭೂಷಣ ದೇವ ಉತ್ತಮಭಾವಕರದಿ ಬ್ರಹ್ಮಕಪಾಲ ಶಿರರುಂಡಮಾಲಧರದುರಿತನಿವಾರ ಗುಣಸಾರ ಗಂಭೀರಸಾರರಹಿತ ಸಂಸಾರ ವಿದೂರಆರಾಧಿತ ಪ್ರಜ್ಞಾಂಬುಜಭವನುತಸಾರಾಸಾರ ವಿಚಾರಪಿನಾಕಿ1ಶಶಿಯ ಶಿರದೊಳಿಟ್ಟ ಸುರಮುನಿ ಶ್ರೇಷ್ಠಅಸಮ ಅಂಧಕಾಸುರ ಸಂಹಾರಭಸಿತ ಮೈಯೊಳು ಪೂಸಿ ಭುಜಗನ ವಿಷತಾಳ್ದವೃಷಭವಾಹನಲೋಲಉರ್ವಿಜನ ಪಾಲಈಶ ಸುರೇಶ ಉಮೇಶಭೂತೇಶಭಾಸುರಕೋಟಿಸವಿತಸಂಕಾಶ ವಿನು-ತಸುರಜನ ಪಾಲಿತ ಶುಭಾಂಗಕಪರ್ದಿ2ಮೆರೆದೆಭುವನಈರೇಳು ಧರಿಸಿ ಕುಕ್ಷಿಯೊಳುನರರ ರಕ್ಷಿಸಿ ಪೊರೆದು ನಾದದೊಳ್ಬೆರೆದುಧರಣಿಯೊಳೆ ಪೆಸರ್ವಡೆದವರಕಾಶಿಪುರದಮೆರವ ವಿಶ್ವೇಶದೇವ ಸುರನಿಕರ ವಂದಿತಹರ ಅಸುರಹರ ಭವದೂರ ವೀರ ಚಿದಾನಂದಅವಧೂತಕಾರಣ ನಿರ್ಮಲ ಚಾರುಪರಾತ್ಮಕಮಾರಭಸ್ಮಾಂಕಿತ ಗೌರಿಯ ರಮಣ3
--------------
ಚಿದಾನಂದ ಅವಧೂತರು
ಶ್ರೀ ನರಹರಿ ತೀರ್ಥವಿಜಯ99ಪ್ರಥಮ ಕೀರ್ತನೆಯೋಗಾನಂದ ನರಹರಿ ರಾಮಪ್ರಿಯತಮರುಯೋಗಿವರ ನರಹರಿತೀರ್ಥರಪಾದಯುಗ್ಮವನರುಹದಿ ನಾ ಶರಣಾದೆ ಸಂತತಅಗಲದೇ ಎನ್ನ ಬದಿ ಇದ್ದು ರಕ್ಷಿಪರು ಪಅಶೇಷ ಗುಣಗಣಾಧಾರ ವಿಭು ಶ್ರೀ ರಮಣಹಂಸ ನಾಮಕ ಪರಮಾತ್ಮನಿಗೆ ನಮಿಪೆಹಂಸ ಬೋಧಿತ ವಿಧಿಗೆ ತತ್ ಶಿಷ್ಯ ಸನಕಾದಿವಂಶಜ ಗುರುಗಳು ಸರ್ವರಿಗು ನಮಿಪೆ 1ಅಚ್ಯುತಪ್ರೇಕ್ಷಾಖ್ಯ ಪುರುಷೋತ್ತಮಾರ್ಯಕರತೋಯಜೋತ್ಪನ್ನ ಆನಂದ ತೀರ್ಥರಿಗೆಕಾಯವಾಙÕನದಿಂದ ಶರಣಾದೆ ಸಂತತತೋಯಜಭವಾಂಡದ ಸಜ್ಜನೋದ್ಧಾರ2ಶ್ರೀವರ ವೇದವ್ಯಾಸನವತಾರಕನುಸರಿಸಿಭಾವಿ ಬ್ರಹ್ಮನು ಮುಖ್ಯ ವಾಯುದೇವದೇವೀಜಯಾಸಂಕರ್ಷಣಾತ್ಮಜನು ಈಭುವಿಯಲ್ಲಿ ತೋರಿಹ ಆನಂದ ತೀರ್ಥ 3ಮಾಲೋಲ ಶ್ರೀ ರಾಮಕೃಷ್ಣ ಪ್ರೀತಿಗಾಗಿಯೇಬಲ ಕಾರ್ಯ ಮಾಡಿದ ಹನುಮಂತ ಭೀಮಕಲಿಯುಗದಿ ಈ ಭೀಮ ಅವತಾರ ಮಾಡಿಹನುಕಲಿಮಲಾಪಹ ಜಗದ್ಗುರು ಮಧ್ವನಾಗಿ4ಶ್ರೀ ಮಧ್ವ ಅನಂತ ತೀರ್ಥಕರ ಅಬ್ಜಜರುಪದ್ಮನಾಭನೃಹರಿ ಮಾಧವಾಕ್ಷೋಭ್ಯಈ ಮಹಾ ಗುರುಗಳು ಸರ್ವರಿಗು ಆ ನಮಿಪೆಸುಮನಸಶ್ರೇಷ್ಠರು ಮಹಿಯಲ್ಲಿ ಪುಟ್ಟಿಹರು5ಶ್ರೀ ಮಹಾ ಪುರುಷೋತ್ತಮದಾಸರೆಂದೆನಿಪಶ್ರೀ ಮಧ್ವ ಮುನಿಗಳ ಶಿಷ್ಯ ಸಂತತಿಗೂಸುಮಹಿಮ ಹರಿದಾಸವರ್ಯರು ಸರ್ವರಿಗುಸನ್ಮನದಿ ಆ ನಮಿಪೆ ಸಂತೈಪರೆಮ್ಮ 6ಆ ಸೇತು ಹಿಮಗಿರಿ ಬದರಿಕಾಶ್ರಮಕ್ಷೇತ್ರವಸುಧೆಯ ಸಮಸ್ತಕಡೆ ಪೋಗಿ ಅಲ್ಲಲ್ಲಿದುಸ್ತರ್ಕ ದುರ್ಮತ ಅಟವಿಗಳ ಛೇದಿಸಿದಶಪ್ರಮತಿ ಮಧ್ವಮುನಿ ಒಲಿದರು ಸುಜನರ್ಗೆ 7ಈ ರೀತಿ ದಿಗ್ವಿಜಯ ಮಾರ್ಗದಲಿ ಮಧ್ವರಾಯರ ಸಂಗಡ ವಾದಕ್ಕೆ ನಿಂತು |ಭಾರಿಪಂಡಿತರತ್ನಶೋಭನ ಭಟ್ಟನುಶರಣಾಗಿ ಮಧ್ವರಾಯರ ಶಿಷ್ಯನಾದ 8ಶೋಭನ ಭಟ್ಟಾಖ್ಯ ಈಗುಣಗ್ರಾಹಿಯುಶುಭಪ್ರದೆ ಲೋಕಪಾವನಿವೃದ್ಧ ಗಂಗೆಎಂಬುವ ಗೋದಾವರೀ ತೀರದಲಿ ಮಧ್ವಅಬ್ಜಹಸ್ತದಿಕೊಂಡ ತುರ್ಯಾಶ್ರಮ 9ಸತ್ತತ್ವವಾದದ ಸೊಬಗನ್ನ ಮಧ್ವವದನಾಂಬುಜದಿಂದಕೇಳಿಸುಪವಿತ್ರಪದ್ಮನಾಭತೀರ್ಥಾಖ್ಯ ನಾಮವ ಹೊಂದಿದಮುದದಿಂದ ಈ ಮಹಾತ್ಮನು ಶೋಭನನು 10ಕಳಿಂಗ ರಾಜನ ಮಂತ್ರಿಯ ಕುಮಾರನುಶೀಲತಮ ಹರಿಭಕ್ತಸ್ವಾಮಿ ಶಾಸ್ತ್ರಿಬಾಲ ವಯಸ್ಸಲ್ಲೇವೆ ಸಿರಿತನದಾಮೋಹಾದಿಲೀಲಾವಿನೋದ ಚಟುವಟಿಕೆ ತೊರೆದವನು 11ವಿಧಿಯುಕ್ತ ಉಪನಯನ ಶಾಸ್ತ್ರಾಭ್ಯಾಸವವೇದ ವೇದಾಂತವಿದ್ಯೆಸರ್ವ ಹೊಂದಿಗೋದಾವರಿ ಕ್ಷೇತ್ರ ಎಲ್ಲೆಲ್ಲೂ ಈತನುವಿದ್ವಚ್ಛಿರೋಮಣಿ ಎಂದೆನಿಸಿಕೊಂಡ 12ರಾಮ ಮಹೇಂದ್ರಪುರಪ್ರಾಂತ್ಯಸ್ಥವಾದಿಗಜಸಿಂಹ ಶೋಭನ ಭಟ್ಟನು ಈಗತ್ರಿಜಗದ್ಗುರು ಮಧ್ವರಿಂ ಅನುಗ್ರಹವಕೊಂಡದ್ದುನಿಜ ಹರುಷದಿ ಕೇಳಿದ ಶ್ಯಾಮ ಶಾಸ್ತ್ರಿ 13ಹಿತಕರ ಈಸುದ್ದಿ ಕೇಳಲಿಕ್ಕೇವೆಕಾದಿದ್ದ ಶ್ರೀಮಂತ ಈ ಶ್ಯಾಮ ಶಾಸ್ತ್ರಿಬಂದು ಶ್ರೀಮಧ್ವರಲಿ ಕರಮುಗಿದು ಸನ್ನಮಿಸಿಒದಗಿ ಪಾಲಿಸಿ ಸೇವೆ ಕೊಳ್ಳಬೇಕೆಂದ 14ಉತ್ತಮ ದೇವಾಂಶನು ನಿಜ ಸಹಜ ಭಕ್ತಿಮಾನ್ಸುದೃಢ ಜ್ಞಾನಿಯು ಋಜುಮಾರ್ಗ ಚರಿಪಕ್ಷಿತಿಯಲ್ಲಿ ಜನಿಸಿಹ ವೈರಾಗ್ಯನಿಧಿ ಇವಹೊಂದಿದ ತುರ್ಯಾಶ್ರಮ ಮಧ್ವ ಮುನಿದಯದಿ 15ನರಹರಿ ತೀರ್ಥಾಖ್ಯ ಶುಭತಮನಾಮವಶಾಸ್ತ್ರಿಗೆ ಇತ್ತರು ಆನಂದ ಮುನಿಯುಹರಿಸೇವಾ ಕಾರ್ಯಸಿದ್ಯರ್ಥ ಆದೇಶದಲೆಇರುವುದು ಎಂದರು ಸರ್ವಜÕ ಮುನಿಯು 16ಸಾಮ್ರಾಜ್ಯ ಅಧಿಪತ್ಯ ಕಳಿಂಗ ದೇಶದಲಿಚರಿಸುವ ಕಾಲವು ಬರಲಿಕ್ಕೆ ಇದೆಯುಶ್ರೀರಾಮ ಸೀತಾ ಮೂರ್ತಿಗಳ ಅಲ್ಲಿಂದತರಲಿಕ್ಕೆ ಇರಬೇಕು ಅಲ್ಲಿಯೇ ಎಂದರು 17ಗಜಪತಿ ರಾಜನ ಅರಮನೆಯಲ್ಲಿರಾಜೀವೇಕ್ಷಣ ಮೂಲರಾಮನು ಸೀತಾರಾಜಭಂಡಾರದಲ್ಲಿ ಮಂಜೂಷದಲಿರಾಜಿಸುತ ಇಹರುಮೂರ್ತಿರೂಪದಲಿ18ಕಳಿಂಗದೇಶಾಧಿಪ ಗಜಪತಿಯ ವಂಶದಲಿಬಾಲರಾಜನು ಅವನ ಪ್ರತಿನಿಧಿಯಾಗಿಆಳುವುದು ರಾಜ್ಯವ ಎಂದು ಆಚಾರ್ಯರುಪೇಳಿದರು ನರಹರಿ ತೀರ್ಥ ಆರ್ಯರಿಗೆ 19ಬಾಲರಾಜನು ಯುವಕನಾಗಿ ರಾಜ್ಯವನ್ನುಆಳುವ ಯೋಗ್ಯತೆ ಹೊಂದಿದ ಮೇಲೆಅಲ್ಲಿಂದ ರಾಮ ಸೀತಾ ಮೂರ್ತಿರಾಜನ್ನಕೇಳಿತರಬೇಕು ಎಂದರು ಲೋಕ ಗುರುವು 20ಗೋದಾವರಿ ಕ್ಷೇತ್ರದೇಶ ಸುತ್ತು ಮುತ್ತುಸಾಧುಜನ ಉದ್ಧಾರ ಬೋಧಕ್ಕೆಪದ್ಮನಾಭತೀರ್ಥರ ತತ್ಕಾಲ ನಿಲ್ಲಿರಿಸಿಬಂದರು ಉಡುಪಿಗೆ ಪೂರ್ಣ ಪ್ರಮತಿಗಳು 21ಶ್ರೀ ಮಧ್ವಾಚಾರ್ಯರು ಅರುಹಿದ ಪ್ರಕಾರದಲೇಸಮಯ ಒದಗಿತು ರಾಣಿ ಬಿನ್ನೈಸಿದಳುಸ್ವಾಮಿ ತಾವೇ ರಾಜ್ಯ ಆಳಬೇಕೆಂದಳುಸಮ್ಮತಿಸಿದರು ಶ್ರೀ ನರಹರಿ ಮುನಿಯು 22ಮಂತ್ರಿಪದವಿಪರಂಪರೆ ಪ್ರಾಪ್ತವಾಗಿತಂದೆ ವಹಿಸಿದ್ದರುಅವರಮುಖದಿಂದಹಿಂದೆ ಪೂರ್ವಾಶ್ರಮದಿ ರಾಜ್ಯ ಆಡಳಿತದರೀತಿಯ ಅರಿತವರು ಈ ಹೊಸಯತಿಯು 23ನರಹರಿ ತೀರ್ಥರ ರಾಜ್ಯ ಆಡಳಿತದಲಿಪರಿಪರಿ ರಾಜತಂತ್ರಗಳ ಕೌಶಲ್ಯಸರಿಯಾದ ಧಾರ್ಮಿಕ ರಾಜನೀತಿಯ ದುಷ್ಟಶತ್ರು ನಿಗ್ರಹ ಶಿಷ್ಟಪಾಲನಏನೆಂಬೆ24ದಂಡೆತ್ತಿ ಆಗಾಗ ಬರುತಿದ್ದ ಶಬರಾದಿತುಂಟ ಶತ್ರುಗಳನ್ನ ಜಯಿಸಿ ರಾಜ್ಯವನ್ನಕಂಟಕದುರ್ಮತಿಗಳಿಂದ ಕಾಪಾಡಿದರುಎಂಟು ದಿಕ್ಕಲು ಹಬ್ಬಿತಿವರ ಕೀರ್ತಿ 25ಆಶ್ರಮೋಚಿತನಿತ್ಯಜಪಪೂಜ ಕಾರ್ಯಗಳುಶಿಷ್ಯ ಸಜ್ಜನರಿಗೆ ಉಪದೇಶಾನುಗ್ರಹಲೇಶವೂ ಕೊರತೆ ಇಲ್ಲದೆ ಮುದದಿಈಶನ ಪ್ರೀತಿಗೆ ರಾಜಕಾರ್ಯಗಳ ಮಾಡಿದರು 26ವಾಗೀಶಪಿತ ಶ್ರೀ ಪ್ರಸನ್ನ ಶ್ರೀನಿವಾಸಯೋಗಾನಂದ ನರಹರಿ ಮೂಲ ರಾಮನಿಗೆ ಪ್ರಿಯತಮರು ನರಹರಿ ತೀರ್ಥರಲ್ಲಿಬಾಗಿ ಶರಣಾದೆ ನಾ ಸದಾ ಪೊರೆವರೆನ್ನ 27- ಇತಿ ಶ್ರೀ ಪ್ರಸನ್ನ ನರಹರಿತೀರ್ಥವಿಜಯಪ್ರಥಮೋದ್ಯಾಯಃ -ದ್ವಿತೀಯಕೀರ್ತನೆಯೋಗಾನಂದ ನರಹರಿ ರಾಮಪ್ರಿಯತಮರುಯೋಗಿವರ ನರಹರಿತೀರ್ಥರಪಾದಯುಗ್ಮವನರುಹದಿ ನಾ ಶರಣಾದೆ ಸಂತತಅಗಲದೇ ಎನ್ನ ಬದಿ ಇದ್ದು ರಕ್ಷಿಪರು ಪಶ್ರೀಕೂರ್ಮಕ್ಷೇತ್ರದಲಿ ಕೂರ್ಮೇಶ್ವರಾಲಯದಿಯೋಗಾನಂದ ನರಸಿಂಹಗೆ ಗುಡಿಯಯೋಗಿವರ ನರಹರಿತೀರ್ಥರು ಕಟ್ಟಿಸಿಯೋಗಾನಂದ ನರಸಿಂಹನ ಸ್ಥಾಪಿಸಿದರು 1ಯುಕ್ತ ಕಾಲದಿ ರಾಜನಿಗೆ ರಾಜ್ಯ ಒಪ್ಪಿಸಲುಕೃತಜÕ ಮನದಿಂದ ಆ ಯುವಕರಾಜಇತ್ತನು ಸನ್ನಮಿಸಿ ನರಹರಿತೀರ್ಥರಿಗೆಸೀತಾರಾಮ ವಿಗ್ರಹದ ಮಂಜೂಷ 2ನರಹರಿತೀರ್ಥರು ಶ್ರೀಮದಾಚಾರ್ಯರಲಿನೇರವಾಗಿ ಪೋಗಿ ಸಮರ್ಪಿಸಲು ಆಗಶ್ರೀರಾಮ ಸೀತಾದೇವಿಯ ಮಧ್ವಮುನಿಕ್ಷೀರಾದಿ ಪಂಚಾಮೃತದಿ ಪೂಜಿಸಿದರು 3ಶ್ರೀರಾಮಸೀತಾ ಪ್ರತಿಮೆಗಳೊಳು ಹರಿರಮಾಆರಾಧನಾರ್ಚನೆ ಮೂರು ತಿಂಗಳು ಹದಿ -ನಾರುದಿನ ತಾಮಾಡಿ ಪದ್ಮನಾಭತೀರ್ಥರುತರುವಾಯ ಪೂಜಿಸಲು ಆಜೆÕ ಮಾಡಿದರು 4ಮೂರನೇಬಾರಿ ಬದರಿಗೆ ಆಚಾರ್ಯರುತೆರಳಲು ಪದ್ಮನಾಭರು ತಾವು ಪೂಜೆಚರಿಸಿ ನಿಯಮನದಂತೆ ಆರು ವರ್ಷ ತರುವಾಯನರಹರಿತೀರ್ಥರಿಗೆ ಇತ್ತರು ಮೂರ್ತಿಗಳ 5ಈ ಮೂರ್ತಿಗಳೊಳ್ ಇರುವ ಸೀತಾರಾಮಾರ್ಚನೆಬ್ರಹ್ಮದೇವರು ಮಾಡಿ ಸೂರ್ಯವಂಶಭೂಮಿಪಾಲಕ ಕೈಯಿಂದ ಪೂಜೆಯ ಕೊಂಡುಕ್ರಮದಿ ದಶರಥರಾಜ ಕರಕೆ ಲಭಿಸಿದವು 6ಶ್ರೀ ರಾಮಚಂದ್ರ ಪ್ರಾದುರ್ಭಾವಕು ಮೊದಲೇದಶರಥ ಆರಾಧಿಸಿದ ತರುವಾಯಶ್ರೀ ರಾಮತಾನೇ ಸ್ವಯಂ ಪೂಜೆ ಮಾಡಿದನುಶಿರಿಸೀತ ತಾ ಕೊಂಡಳು ಪೂಜೆಗಾಗಿ 7ರಾಮಚಂದ್ರನು ಸೇವೆ ಸಾಕ್ಷಾತ್ ಮಾಡುವಸೌಮಿತ್ರಿ ಆ ಮೂರ್ತಿಗಳನ್ನು ತಾನುಸಮ್ಮುದದಿ ತನ್ನ ಅರಮನೆಯಲ್ಲಿಟ್ಟುಕೊಂಡುನೇಮದಿ ಪೂಜಿಸುತ್ತಿದ್ದನು ಬಹುಕಾಲ 8ದ್ವಿಜನರ ಶ್ರೇಷ್ಠನು ರಾಮನಲಿ ಬಹುಭಕ್ತಿನಿಜಭಾವದಲಿ ಮಾಳ್ಪಅನುದಿನಅವನುರಾಜೀವೇಕ್ಷಣ ರಾಮನನ್ನು ತಾ ನೋಡದಲೆಭೋಜನ ಮಾಡಲಾರನು ಅಂಥಭಕ್ತ 9ವಿಪ್ರವರ ಅವಾತ ವೃದ್ಧಾಪ್ಯದಲಿಅರಮನೆ ದರ್ಬಾರ ಮಂಟಪಕೆ ಬಂದಶ್ರೀರಾಮಚಂದ್ರನು ರಾಜಕಾರ್ಯೋದ್ದೇಶಹೊರಗೆ ಹೋಗಿದ್ದನು ಏಳುದಿನ ಹೀಗೆ 10ಏಳು ದಿನವೂ ಆ ವಿಪ್ರೋತ್ತಮ ಊಟಕೊಳ್ಳದೇ ದೇಹಬಲ ಬಹು ಬಹುಕುಗ್ಗಿಮೆಲ್ಲನೆ ಎಂಟನೆ ದಿನ ಬಂದುಕುಳಿತಿದ್ದ ಶ್ರೀ ರಾಮಚಂದ್ರ ಸಭೆಯಲ್ಲಿ 11ಕಣ್ಣಿಗೆ ಏಳುದಿನ ಕಾಣದ ಶ್ರೀರಾಮಆನಂದಮಯಶ್ರೀನಿಧಿಯ ಕಂಡಲ್ಲೇಬ್ರಾಹ್ಮಣನು ಆನಂದ್ರೋದೇಕವು ಉಕ್ಕಿಸನ್ನಮಿಸುವಲ್ಲೇಯೇ ಬಿದ್ದನು ಕೆಳಗೆ 12ಏಳುದಿನ ಉಪವಾಸದಿಂದಲೇ ತನುವಿನಬಲಹೀನತೆ ಹೊಂದಿ ಆ ಬ್ರಾಹ್ಮಣ ಬೀಳೆ ಕೆಳಗೆಕನಕಆಸನದಿಂದಲಿ ರಾಮಇಳಿದುಬಂದು ಆಶ್ವಾಸಿಸಿದ ವಿಪ್ರನÀನ್ನ 13ವಿಪ್ರಶ್ರೇಷ್ಠನ ನಿವ್ರ್ಯಾಜ ಭಕ್ತಿಯ ಮೆಚ್ಚಿಕರುಣಾಬ್ಧಿ ಭಕ್ತವತ್ಸಲ ರಾಮಚಂದ್ರಕ್ಷಿಪ್ರದಲೆ ಲಕ್ಷ್ಮಣನ ಕಡೆಯಿಂದ ಪ್ರತಿಮೆಗಳತರಿಸಿಕೊಟ್ಟನು ಆ ದ್ವಿಜಶ್ರೇಷ್ಠನಿಗೆ 14ಅನುದಿನವೃದ್ಧ ದೆಶೆಯಲ್ಲಿ ಬರಬೇಡವುಅನಾಯಾಸದಿ ತನ್ನ ಪ್ರತಿಮೆಯಲ್ಲಿಕಾಣಬಹುದು ಎಂದು ಶ್ರೀರಾಮ ಪೇಳಿದನುಆನಂದದಿಕೊಂಡಬ್ರಾಹ್ಮಣ ಮೂರ್ತಿಗಳ15ಪ್ರತಿನಿತ್ಯ ವಿಧಿಪೂರ್ವಕ ಅರ್ಚಿಸಿದವಿಪ್ರಯುಕ್ತ ಕಾಲದಿ ತನು ಬಿಡುವ ಸಮಯದಲಿವಾಯುಸುತ ಹನುಮನ ಕೈಯಲ್ಲಿ ಅರ್ಪಿಸಿದಸೀತಾರಾಮ ಪ್ರತಿಮೆಗಳ ಭಕ್ತಿಯಲಿ 16ಸಮಸ್ತ ಜೀವರುಮಾಳ್ಪ ಭಕ್ತಿಗೆ ಅಧಿಕಸುಮಹಾಭಕ್ತಿಯ ಮಾಳ್ಪ ಹನುಮಂತಈ ಮೂರ್ತಿಗಳ ತಾಕೊಂಡು ಮುದದಲಿ ಕುಣಿದಸಮ್ಮುದದಿ ಅರ್ಚಿಸಿದ ಸೀತಾರಾಮನ್ನ 17ಸೌಗಂಧಿಕಾಪುಷ್ಪತರಲು ಭೀಮನು ಪೋಗಿಮಾರ್ಗದಲಿ ತನ್ನಯ ಪ್ರಥಮಾವತಾರಸಾಕೇತರಾಮಪ್ರಿಯತಮ ಅಂಜನಾಸುತನಸಂಗಡವಾದಿಸಿದ ಲೋಕರೀತಿಯಲ್ಲಿ 18ನರಾಧಮರ ಮೋಹಿಸುವ ಸಜ್ಜನರ ಮೋದಿಸುವಚರ್ಯಸಂವಾದ ತೋರಿಸಿ ರೂಪದ್ವಯದಿತರುವಾಯು ಹನುಮನು ಭೀಮನಿಗೆ ಕೊಟ್ಟನುಶ್ರೀರಾಮಸೀತಾ ಮೂಲಪ್ರತಿಮೆಗಳ 19ಭೀಮಸೇನನು ಆನಂದದಿ ಅರ್ಚಿಸಿದಸುಮನೋಹರ ರಾಮಸೀತಾದೇವಿಯನ್ನಈ ಮಹಾಹರಿಭಕ್ತ ಪಾಂಡವರ ವಂಶದಿಕ್ಷೇಮಕ ರಾಜನು ಕಡೆಯಾಗಿ ಬಂದ 20ಮೂಲರಾಮಸೀತೆಯ ಮುದದಿಂದ ಪೂಜಿಸಿದಶೀಲಭಾವದಲಿ ಆ ಕ್ಷೇಮಕಾಂತಮೂಲ ವಿಗ್ರಹಗಳು ತರುವಾಯ ಲಭಿಸಿದವುಕಳಿಂಗ ದೇಶಾಧಿಪ ಭಕ್ತನ ಕೈಯಲ್ಲಿ 21ಆಗಿನಕಾಲದಲ್ಲಿಪೀತಾಪುರವಿಜಯನಗರಎಂಬುವ ಪಟ್ಟಣದ ಮತ್ತುಜಗನ್ನಾಥಕ್ಷೇತ್ರ ದಕ್ಷಿಣ ಕಳಿಂಗಾಧಿಪರುಭಕುತಿ ಬೆಳೆಸಿದರು ಶ್ರೀರಾಮನಲ್ಲಿ 22ಆಗಾಗ ಹಸ್ತಿನಾಪುರ ಪೋಗುತಿದ್ದರುಗಂಗಾದಿಸ್ನಾನ ಕ್ಷೇತ್ರಾಟನ ಮಾಡಿಭಕ್ತಿಯಿಂ ಶ್ರೀರಾಮಚರಿತೆ ಕೇಳುವವರಲ್ಲಿವಿಗ್ರಹಗಳು ಲಭಿಸಿದವು ರಾಮನ ಕೃಪದಿ 23ಕಳಿಂಗದೇಶಾಧಿಪ ಗಜಪತಿ ರಾಜನುಬಲುಶ್ರದ್ಧೆ ಭಕ್ತಿಯಲಿ ಆರಾಧಿಸಿಕಾಲದೀರ್ಘದಿ ಸಂತತಿ ಪೂಜಿಸದಲೆಕೀಲುಹಾಕಿ ರಕ್ಷಿಸಿದರು ಬೊಕ್ಕಸದಿ 24ಹಿಂದೆ ತಾ ಭೀಮಾವತಾರದಲಿ ಪೂಜಿಸಿದ್ದುಎಂದು ಆನಂದಮುನಿಇಂದುವಿಗ್ರಹಗಳಹೊಂದಲು ನರಹರಿ ತೀರ್ಥರ ಕಳಿಂಗದಿನಿಂದಿರಿಸಿ ತರಿಸಿಕೊಂಡರು ಮೂರ್ತಿಗಳನು 25ಶ್ರೀಮದಾಚಾರ್ಯರು ಆರ್ಚಿಸಿ ತರುವಾಯಪದ್ಮನಾಭತೀರ್ಥರು ಆರುವರ್ಷಗಳು ಆರಾಧಿಸಿ ನರಹರಿ ತೀರ್ಥರು ಒಂಭತ್ತು ವರ್ಷಗಳುಮುದದಿಂ ಪೂಜಿಸಿದರು ಮೂಲ ರಾಮನ್ನ 26ಒಂಭತ್ತು ವರ್ಷಗಳು ಒಂದು ತಿಂಗಳು ದಿನಇಪ್ಪತ್ತ ಮೂರು ಈಕಾಲಸಂಸ್ಥಾನಶ್ರೀಪನಿಗೆ ಪ್ರಿಯತರದಿ ಆಡಳಿತ ಮಾಡಿಶ್ರೀಪನ್ನ ಧ್ಯಾನಿಸುತ ಹರಿಪುರ ಐದಿದರು 27ಶಾಲಿಶಕ ಹನ್ನೊಂದು ನೂರು ಮೂವತ್ತಾರುಶೀಲತಮ ಶ್ರೀಮುಖ ಪುಷ್ಯ ಕೃಷ್ಣಏಳನೇ ದಿನದಲ್ಲಿ ಹರಿಪುರ ಯೈದಿದರುಮಾಲೋಲ ಪ್ರಿಯತಮ ನರಹರಿ ತೀರ್ಥರು 28ಮತ್ತೊಂದು ಅಂಶದಲಿ ವೃಂದಾವನದಲಿವೃತತಿಜನಾಭ ತೀರ್ಥರ ಸಮೀಪಉತ್ತುಂಗಮಹಿಮ ತುಂಗಾನದಿ ಚಕ್ರತೀರ್ಥದಹತ್ತಿರ ಕುಳಿತಿಹರು ಸ್ಮರಿಸೆ ರಕ್ಷಿಪರು 29ಶ್ರೀರಾಮನರಹರಿ ಶ್ರೀ ಶ್ರೀನಿವಾಸನುನೇರಲ್ಲಿ ಪ್ರಸನ್ನನಾಗಿ ಈಗ ಈ ನುಡಿಗಳ್ಬರೆಸಿಹನು ಸಜ್ಜನರು ಓದಲು ಕೇಳಲುಗುರುಗಳಂತರ್ಯಾಮಿ ವಾಂಛಿತಗಳೀವ 30ಅರಸಿಕರಿಗೂ ಅಧಮ ಮಂದರಿಗು ಈವಿಜಯಬರೆಯಲಿಕು ಕೇಳಲಿಕು ಅವಕಾಶ ಕೊಡದೆಭಾರಿ ಪಂಡಿತರುಗಳೂ ಸಾಮಾನ್ಯ ಸುಜನರೂಸುಶ್ರಮಣ ಮಾಳ್ಪುದು ಹರಿಪ್ರೀತಿಗಾಗಿ 31ವಾಗೀಶಪಿತ ಶ್ರೀ ಪ್ರಸನ್ನ ಶ್ರೀನಿವಾಸಯೋಗಾನಂದ ನರಹರಿ ಮೂಲ ರಾಮನಿಗೆ ಪ್ರಿಯತಮರು ನರಹರಿ ತೀರ್ಥರಲ್ಲಿಬಾಗಿ ಶರಣಾದೆ ನಾ ಸದಾ ಪೊರೆವರೆನ್ನ 32ಶ್ರೀ ನರಹರಿತೀರ್ಥವಿಜಯಸಂಪೂರ್ಣಂ|| ಶ್ರೀ ಕೃಷ್ಣಾರ್ಪಣಮಸ್ತು ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ನಾಮಗಿರಿ ಅಮ್ಮ63ಶ್ರೀ ನಾಮಗಿರಿ ಅಮ್ಮ ನಿನ್ನ ನಾ ನಂಬಿದೆ ಸಲಹೆನ್ನಶ್ರೀ ನರಸಿಂಹನ ನಿಜಸತಿ ಶುಭಕರಿವನರುಹಜಾಂಡದಜನನಿಭೂಅಂಭ್ರಣಿಅ.ಪಬೊಮ್ಮನ ಪ್ರಳಯದಲಿ ಕಮಲಜ ಆಲದ ಎಲೆಯಾಗಿಸ್ವಾಮಿ ಸ್ವಾಪ್ಯನ ಬಹುನಂದದಿ ಸ್ತುತಿಸಿಸಮಸ್ತಜಗತ್ ಸತ್ಸøಷ್ಟಿಯ ಗೈಸಿದೆ 1ಕ್ಷೀರಾಂಬುಧಿಯಿಂದ ತೋರಿ ನೀ ಸರ್ವಜನರ ಮುಂದೆನಾರಅಜಿತ ಸರ್ವೋತ್ತಮ ಹರಿಗೆ ನೀನಿರಂತರ ನಿಜಸತಿಯೆಂದು ಪ್ರಕಟಿಸಿದೆ 2ಘನಬಾಲಭಕ್ತನಿಗೆ ಒಲಿದ ವೃತಿತಿಜಾಸನ ಪಿತನುಹನುಮವಂದಿತ ಶ್ರೀ ಪ್ರಸನ್ನ ಶ್ರೀನಿವಾಸನರಸಿಂಹನ ಸಹ ಭಕ್ತಜನರ ಪೊರೆವೆ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಪ್ರಸನ್ನ ರಘೂತ್ತಮ ತೀರ್ಥರ ಚರಿತ್ರೆ122ಶ್ರೀ ರಘೂತ್ತಮರಂಘ್ರಿ ರಾಜೀವಯುಗ್ಮದಲಿಶಿರಬಾಗಿ ಶರಣಾದೆ ಧನ್ಯನಾದೆಶ್ರೀರಾಮಚಂದ್ರನ ಪೂರ್ಣಾನುಗ್ರಹ ಪೂರ್ಣಪಾತ್ರರು ಎಮ್ಮ ಪಾಲಿಸುವ ಕರುಣಾಳು ಪಶ್ರೀ ಹಂಸ ಲಕ್ಷ್ಮೀಶ ಪರಮಾತ್ಮ ಸರ್ವೇಶಬ್ರಹ್ಮ ಸನಕಾದಿಗಳ ಗುರುಪರಂಪರೆಯಬ್ರಹ್ಮಪದ ಐದುವ ಶ್ರೀ ಆನಂದತೀರ್ಥರನೀರ್ರುಹ ಚರಣಂಗಳಲ್ಲಿ ಶರಣಾದೆ 1ಪಂಕೇರುಹನಾಭ ನರಹರಿಮಾಧವಅಕ್ಷೋಭ್ಯ ಜಯತೀರ್ಥ ವಿದ್ಯಾಧಿರಾಜವಾಗ್ವಜ್ರ ರಾಜೇಂದ್ರ ಕವಿವರ ಕವೀಂದ್ರವಾಗೀಶಶ್ರೀ ರಾಮಚಂದ್ರರಿಗೆ ಶರಣು2ಶ್ರೀ ರಾಮಚಂದ್ರರ ಕರಜರು ಈರ್ವರಿಗೂಎರಡನೇಯವರು ವಿದ್ಯಾನಿಧಿಯಹಸ್ತಅರವಿಂದೋತ್ಪನ್ನ ರಘುನಾಥರಿಗೆ ನಮೋ ಎಂಬೆಸೂರಿವರ ರಘುವರ್ಯರಲ್ಲಿ ಶರಣಾದೆ 3ರಘುವರ್ಯ ಗುರುರಾಜ ಕರಕಮಲ ಸಂಜಾತರಘೂತ್ತಮ ತೀರ್ಥರ ಚರಣಕಾನಮಿಪೆಅಗಣಿತಗುಣಾಂಬುಧಿ ಅಘದೂರ ರಘುಪತಿಯಹೃದ್ಗುಹಾ ಒಳಹೊರಗೆ ಕಾಂಬುವಧೀರ 4ರಾಮಚಂದ್ರಾಚಾರ್ಯ ನಾಮ ಬಾಲಕನುಬ್ರಹ್ಮಚಾರಿಯು ಧೃಢÀವ್ರತನು ಹರಿಭಕ್ತಸುಮನೋಹರಮೂರ್ತೇ ಗುಣಗುಣಾಲಂಕೃತನುಈ ಮಹಾವೇದಾಂತ ಪೀಠಕ್ಕೆ ಅರ್ಹ 5ತಮ್ಮ ಮಠ ಶಿಷ್ಯರಲು ಮಾಧ್ವ ಸಜ್ಜನರಲ್ಲೂಸುಮಹಾಪಂಡಿತರು ಇರುತಿದ್ದರೂನುಈ ಮಹಾ ಪುರುಷ ಬಾಲನೇ ತಕ್ಕವನೆಂದುನೇಮಿಸಿದರು ಪೀಠಕ್ಕೆ ರಘುವರ್ಯ ಗುರುವು 6ರಘೂತ್ತಮತೀರ್ಥ ನಾಮದಿ ತುರೀಯಾಶ್ರಮರಘುವರ್ಯರೀ ರಾಮಚಂದ್ರಗೆ ಇತ್ತುರಾಘವನ ಪೂಜಾದಿ ಸಂಸ್ಥಾನ ಅಧಿಕಾರನಿಗಮಾಂತ ಗುರುಗಳು ನಿಯಮನ ಮಾಡಿದರು 8ವೇದವೇದಾಂತ ಸಚ್ಛಾಸ್ತ್ರ ಪಂಡಿತನುವಿದ್ಯಾರ್ಥಿ ಬಹುಮಂದಿಗೆ ಪಾಠ ಪೇಳುವವಿದ್ವಾಂಸ ಓರ್ವನ್ನ ರಘುವರ್ಯ ತೀರ್ಥರುವಿದ್ಯೆಕಲಿಸಲು ಏರ್ಪಾಡು ಮಾಡಿದರು9ಶೇಷಪ್ಪನಾಯಕರ ಮಕ್ಕಳು ಈರ್ವರಲಿಜ್ಯೇಷ್ಠ ಪುತ್ರನು ವಿದ್ವಾಂಸರಲಿ ಪ್ರಮುಖಶಿಷ್ಯರೂ ಬಹು ಜನರು ಈತನಿಗೆ ಉಂಟುಭೂಷಣವೆಂದೆನಿಸಿದನು ಮಾಧ್ವ ಸಮೂಹಕ್ಕೆ 10ಸಾವಿರದ ನಾನ್ನೂರು ಎಪ್ಪತ್ತ ಒಂಭತ್ತುಸಂವತ್ಸರದಲಿ ಶಾಲಿವಾಹನದಿದಿವಸ ತದಿಗೆ ಕೃಷ್ಣ ಜ್ಯೇಷ್ಠ ಪಿಂಗಳದಿಶ್ರೀವರನಪುರಕೆ ತೆರಳಿದರು ರಘುವರ್ಯರು 11ದಯಾಳು ರಘುವರ್ಯರು ಸಮಾಧಿಸ್ಥರಾಗಲುಬಾಲ್ಯಾವಸ್ಥೆಯಲಿ ಇದ್ದ ರಘೂತ್ತಮರುವಿದ್ಯಾವ್ಯಾಸಂಗಗುರುನಿಯಮನದಂತೇಯೆಗೈಯಲಿ ಪೋದರು ಆ ವಿದ್ವಾಂಸನಲ್ಲಿ 12ಮಣೂರು ಎಂದ್ಹೆಸರುಉಳ್ಳಆ ಊರಲ್ಲಿಘನವಿದ್ವನ್ಮಣಿಯಲ್ಲಿ ಕಲಿಯುವಾಗಧನವಂತ ಊರುನಾಯಕರಘೂತ್ತಮರಲ್ಲಿಬಿನ್ನೈಸಿದ ಭೋಜನಕೆ ಬರಬೇಕೆಂದು 13ಸ್ವಾಮಿಗಳಿಗೆ ಪಾಠ ಹೇಳುವ ವಿಪ್ರನೂಆ ಮನೆಯಲಿ ಊಟಕ್ಕೆ ಬಂದಿದ್ದನೇಮ ಆಹ್ನೀಕ ಮುಗಿಸಿ ಬರಲಿಕ್ಕೇತಾಮಸವು ಆಯಿತು ವಿಲಂಬವು ಸ್ವಲ್ಪ 14ಸ್ವಾಮಿಗಳ ಬಾಲ್ಯತ್ವ ವಿದ್ಯಾರ್ಥಿತ್ವವುಆ ಮನೆಯಲಿ ಗೃಹಸ್ಥನನ್ನೂ ವಿಪ್ರನನ್ನೂ ಮೋಹಿಸಿತುತಮ್ಮ ಯೋಗ್ಯತೆ ಸ್ಥಾನ ಮರೆತು ಗರ್ವದಿವಿಪ್ರಸ್ವಾಮಿಗಳ ಲೆಕ್ಕಿಸದೆ ಕುಳಿತನು ಭೋಜನಕೆ 15ಅಂದು ರಾತ್ರಿಸ್ವಪ್ನದಲಿ ರಘುವರ್ಯ ಗುರುಗಳುಬಂದು ಪೇಳಿದರ್ತಮ್ಮ ಪ್ರೇಮಿಶಿಷ್ಯರಿಗೆಇಂದಿನಾರಭ್ಯ ಪಾಠವ ನಿಲಿಸು ವಿಪ್ರನಲಿಕುಂದುಇಲ್ಲದೆ ಹೇಳುವೆ ನೀನೇವೆ16ಈ ರೀತಿ ಸ್ವಪ್ನವು ಆಗೇ ರಘೂತ್ತಮರುವಿಪ್ರನಲಿ ಪಾಠಕ್ಕೆ ಪೋಗುವುದು ತೊರೆದುಆ ಪಂಡಿತವರ್ಯರಿಗಿಂತ ಉತ್ತಮ ರೀತಿತಾಪೇಳಿದರು ಪಾಠ ಮಠದಿ ಶಿಷ್ಯರಿಗೆ 17ಗುರುಗಳಲಿಹರಿಇಷ್ಟ ಗುರುದ್ವಾರ ಒಲಿವನುಗುರುಅನುಗ್ರಹ ಇದ್ದರೇಹರಿಅನುಗ್ರಹಗುರುಪ್ರಸಾದವ ಪಡೆದ ಶ್ರೀ ರಘೂತ್ತಮರಿಗೆಶಾಸ್ತ್ರ ಜ್ಞಾನವು ಪ್ರಜ್ವಲಿಸಿತು ಪೂರ್ಣದಲಿ 18ಜಾತಾಪರೋಕ್ಷಿಗಳು ದೇವತಾಂಶರಿಗೇವೆಜ್ಞಾತವಾಗುವ ಪದ ವಾಕ್ಯದ ತಾತ್ಪರ್ಯಈ ದೇವತಾಂಶ ಶ್ರೀ ರಘೂತ್ತಮ ಗುರುವರರುಸಂದೇಹವಿಲ್ಲದೆ ತಿಳಿದು ಬೋಧಿಸಿದರು 19ತನ್ನಲ್ಲಿ ವ್ಯಾಸಂಗ ಪೂರೈಸದ ಬಾಲಏನು ಪಾಠವ ಹೇಳೇ ಶಕ್ತನೆಂದರಿಯೆಕಾಣದೆ ಮರೆಯಾಗಿ ನಿಂತು ಆವಿಪ್ರಶ್ರವಣ ಮಾಡಿದ ಗುರುಗಳು ಬೋಧಿಸುವುದು 20ಸಂದಿಗ್ಧÀ್ದವಾಗಿ ತನಗಿದ್ದ ವಿಷಯಗಳನ್ನೂಅದ್ಭ್ಬುತ ರೀತಿಯಲಿ ಅನಾಯಾಸವಾಗಿಅತಿವಿಶದದಿ ರಘೂತ್ತಮರು ಪೇಳಲುಕೇಳಿಬಂದು ಮುಂದೆ ನಿಂತು ನಮಿಸಿದನುವಿಪ್ರ21ತಾನು ಮಾಡಿದ ಉದಾಸೀನ ಅಪರಾಧಗಳಘನದಯದಿ ಕ್ಷಮಿಸಬೇಕೆಂದು ಬೇಡುತ್ತತನು ದಂಡವತ್ ಭುವಿಯಲಿ ಬಿದ್ದು ನಮಿಸಿದನುದೀನದಯಾಳುಗುರುಅಭಯನೀಡಿದರು22ದಿಗ್ವಿಜಯ ಮಾಡುತ್ತ ಅಲ್ಲಲ್ಲಿ ದುರ್ಮತದುರ್ವಾದಿಗಳನ್ನು ಖಂಡಿಸಿ ಸಿದ್ಧಾಂತತತ್ವಬೋಧಿಸಿ ಜಗತ್ ಪ್ರಖ್ಯಾತರಾದರುಶಾಶ್ವತ ನಿಜಸುಖ ಮಾರ್ಗದರ್ಶಕರು 23ರಘುವರ್ಯ ಗುರುಗಳು ನೇರಲ್ಲು ಸ್ವಪ್ನದಲುರಘೂತ್ತಸಮರಿಗೆ ಪೇಳಿದ ಪ್ರಕಾರದಿಗ್ವಿಜಯ ಸಮಯದಿ ಸಂಸ್ಥಾನಕ್ಕೆ ಭೂಷಣಬಗೆಬಗೆ ವಸ್ತು ಪರಿವಾರ ಸೇರಿಸಿದರು 24ವೇದಾಂತ ಸಾಮ್ರಾಜ್ಯ ರಾಜಗುರುರಾಜರುಹಸ್ತಿಘೋಟಕ ಕೊಂಬು ವಾದ್ಯಮೇಳಗಳುಸುತ್ತಲೂ ವಿದ್ವಜ್ಜನ ವೇದಘೋಷದ ಮಧ್ಯಮುತ್ತು ಪಲ್ಲಕ್ಕಿಯೊಳು ಕುಳಿತರು ದೇವರ ಸಹ 25ಪೋದ ಕಡೆಗಳಲಿ ದಿಗ್ವಿಜಯ ರಾಮಾರ್ಚನೆವಿದ್ವಜ್ಜನ ಸಭೆ ವಾಕ್ಯಾರ್ಥ ಪಾಠಸಿದ್ಧಾಂತ ಸ್ಥಾಪನೆ ದುರ್ಮತ ನಿರಾಸವುಸಾಧು ಸಜ್ಜನರ ಉದ್ಧಾರ ಪ್ರತಿದಿನವು 26ಬಾದರಾಯಣನಿರ್ಣೀತ ರೀತಿಯಲಿಮಧ್ವರಾಯರು ಬರೆದ ಗ್ರಂಥಗಳಿಗೆಅದ್ಬುತ ಟೀಕೆ ಜಯತೀರ್ಥರು ಮಾಡಿಹರುಸದ್ಭಾವ ಬೋಧವು ರಘೂತ್ತಮರ ರಚನೆ 27ಟೀಕಾ ಭಾವಬೋಧರು ಎಂದು ಪ್ರಖ್ಯಾತರಘೂತ್ತಮರ ಎಲ್ಲೆಲ್ಲೂ ವಿದ್ವಜ್ಜನರುನಗರಪಟ್ಟಣ ಗ್ರಾಮ ನಾಯಕರು ಪ್ರಮುಖರುಸ್ವಾಗತ ಅರ್ಪಿಸಿ ಪೂಜಿಸಿದರು ಮುದದಿ 28ಪುಟ್ಟಿದಾರಭ್ಯಹರಿಪಾದಕಮಲದಿ ಮನಇಟ್ಟು ರಘುವರ್ಯರು ಕೊಟ್ಟ ಸಂಸ್ಥಾನಪಟ್ಟ ಆಳಿ ಸರ್ವೋತ್ತಮನನ್ನ ಸೇವಿಸಿಶ್ರೇಷ್ಠತಮ ಸುಖಪ್ರದಮಾರ್ಗತೋರಿಹರು29ಹದಿನೈದು ನೂರು ಹದಿನೇಳು ಶಕ ಮನ್ಮಥಶುದ್ಧ ಏಕಾದಶಿ ಪೌಷ್ಯದಲಿ ಹರಿಯಪಾದಸೇರಿದರು ಸಂಸ್ಥಾನ ಆಡಳಿತವೇದವ್ಯಾಸ ತೀರ್ಥರು ಮಾಡಲಿಕೆ ಬಿಟ್ಟು 30ಮತ್ತೊಂದು ಅಂಶದಲಿ ವೃಂದಾವನದೊಳುಹತ್ತಾವತಾರಹರಿದ್ಯಾನಪರರಿಹರುಭಕ್ತರು ಅಲ್ಲಲ್ಲಿ ಅರ್ಚಿಸಿ ಸೇವಿಸುವಮೃತ್ತಿಕೆಯಲ್ಲು ಸಹ ಇದ್ದು ಪಾಲಿಪರು 31ವೃಂದಾವನ ತಿರುಕೋಯಿಲೂರ್ ಮಣಂಪೂಂಡಿಎಂದು ಕರೆಯಲ್ಪಡುವ ಗ್ರಾಮದಲಿ ಇಹುದುಇಂದುಶೇಖರ ಚಾಪದಿಂದ ಉದಿಸಿದ ಪುಣ್ಯನದಿಯು ಹರಿಯುತ್ತೆ ಮಜ್ಜನವು ಅಘಹರವು 32ಮಂದಜಾಸನಮೊದಲಾದ ಸುರವೃಂದವಂದಿತ ರಮಾಪತಿಯು ರಘೂತ್ತಮಾಂತಸ್ಥವೃಂದಾವನದಿಗುರುಹರಿಭಕ್ತಿ ಪೂರ್ವಕದಿಬಂದು ಸೇವಿಪರಿಗೆ ವಾಂಛಿತÀಗಳೀವ 33ಗಾಳಿ ಬಿಸಿಲು ಮಳೆ ಮಂಜುಗಳ ಲೆಕ್ಕಿಸದೆಮಾಲೋಲನ ಧ್ಯಾನಿಸುತ ವೃಂದಾವನದೊಳುಕುಳಿತಿಹರುಪರಮಕಾರುಣಿಕಈ ಗುರುಗಳುಪಾಲಿಸುತಿಹರು ಎಮ್ಮಅನುಗಾಲದಯದಿ34ವೃಂದಾವನ ದರ್ಶನ ತೀರ್ಥ ನಮಸ್ಕಾರಪ್ರದಕ್ಷಿಣೆ ಅರ್ಚನೆ ಹಸ್ತೋದಕವಂದನೆ ಸೇವಾದಿಗಳ ಮಾಳ್ಪ ಸಜ್ಜನರಕುಂದುಕೊರತೆಗಳಳಿವ ಇಷ್ಟಾರ್ಥ ಪ್ರದರು35ಪಿಲ್ಲಿ ಶೂನ್ಯಾದಿ ವಾಮಾಚಾರ ಪೀಡೆಗಳುಗಾಳಿದುಷ್ಟಗ್ರಹ ಪೈಶಾಚಾದಿಗಳುಕಳವಳಿಕೆ ಬುದ್ದಿಭ್ರಮೆ ವ್ಯಾಧಿದಾರಿದ್ರ್ಯಾದಿಎಲ್ಲ ದೋಷಗಳನ್ನ ಪರಿಹರಿಸುವರು 36ಸವೈರಾಗ್ಯ ಜ್ಞಾನವ ಭಕುತಿ ಅಪರೋಕ್ಷವಸೇವಿಪ ಯೋಗ್ಯರಿಗೆ ಒದಗಿಸಿ ಉದ್ಧರಿಸಿಸರ್ವವಿಧದಲು ಭಾಗ್ಯ ಆಯುಷ್ಯ ಆರೋಗ್ಯಈವರು ಭಕ್ತಯಲಿ ಸ್ಮರಿಸಿ ವಂದಿಪರ್ಗೆ 37ಉತ್ತಮ ತರಗತಿ ದೇವತಾಂಶರು ಇವರುಮಧ್ವಮತದುಗಾಬ್ಧಿ ಪೂರ್ಣಚಂದ್ರಹತ್ತು ತಿಂಗಳು ಹೊತ್ತು ಹೆತ್ತ ಉತ್ತಮ ಸಾಧ್ವಿಮಾತೆಯ ಭಾಗ್ಯ ಏನೆಂಬೆ ಇಂಥವರ 38ಸೂರಿಸುರವರ ಶ್ರೀ ರಘೂತ್ತಮರ ಚರಣದಲಿಶರಣಾದೆ ಎನ್ನಯ ಎನ್ನಸೇರಿದವರಪರಿಪರಿ ಪೀಡೆಗಳ ಪಾಪಗಳ ಅಳಿದುಕಾರುಣ್ಯ ಔದರ್ಯದಿ ಪಾಲಿಸುವರು 39ಸರಿದ್ವರ ಪಿನಾಕಿನಿಯಲಿ ಕೇಶವ ಜಗವಈರಡಿಯಲಿ ಅಳೆವ ತ್ರಿವಿಕ್ರಮನು ಶಿರಿಯುಇರುತಿಹರು ಹನುಮ ಶಿವಸ್ಕಂಧ ತೀರಗಳಲಿಶರಣೆಂಬೆ ಇವರೆಲ್ಲರ್ಗು ಶ್ರೀ ರಘೂತ್ತಮರಿಗೂ 40ಕಮಲಭವಪಿತ `ಶ್ರೀ ಪ್ರಸನ್ನ ಶ್ರೀನಿವಾಸ 'ಕಮಲಾಯುತವಿಶ್ವರೂಪತ್ರಿವಿಕ್ರಮಗೂಭೀಮ ಶಿವಸ್ಕಂಧರಿಗು ಪ್ರಿಯತಮ ರಘೂತ್ತಮರಈ ಮಂಗಳ ಚರಿತ ಶ್ರೀ ಕೃಷ್ಣಾರ್ಪಿತವು 41 ಪ|| ಇತಿ ಶ್ರೀ ರಘೂತ್ತಮ ತೀರ್ಥ ಚರಿತ್ರೆ ಸಂಪೂರ್ಣಂ ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಪ್ರಸನ್ನ ಶ್ರೀನಿವಾಸ ಕಲ್ಯಾಣ (ಅಣು)34ಮೇರು ಸುತ ಗಿರಿವಾಸ |ಶರಣಾದೆ ನಿನ್ನಲಿ ವಿಶ್ವಜನ್ಮಾದಿಕರ್ತನಿರ್ದೋಷ|||ಶ್ರೀ ಶ್ರೀನಿವಾಸ ||ವಿಷ್ಣು ಸರ್ವೋತ್ತಮ ಸಾಕ್ಷಾತ್ |ರಮಾದೇವಿ ತದಂತರಾ |ತದಧೌವಿಧಿವಾಣ್ಯೌಚ ತತ್ವವನು ಪ್ರತ್ಯಕ್ಷ ಭೃಗುಗೆ |ತಿಳಿಸಿ ಲಕ್ಷ್ಮಿಯ ಇಳೆಯ ಜನರಿಗೆ ಒಲಿಯೆ ಕಳುಹಿಸಿ |ವ್ಯಾಳಗಿರಿವಲ್ಮೀಕಪೊಕ್ಕಿ ಶ್ರೀವತ್ಸಶರಣು |ಶರಣು ಹೇ ಸರ್ವ ಹೃದ್ಗುಹಾಂತಸ್ಥವಿಶ್ವ ಪವೃಷಭಅಂಜನಶೇಷ|ವೇಂಕಟಾದ್ರಿಯ ನೆನೆಯೆ ಪಾಪವಿನಾಶ |ಶ್ರೀಸ್ವಾಮಿತೀರ್ಥದ ದಕ್ಷಪಾಶ್ರ್ವಪರೇಶ ||| ಶ್ರೀ ಶೇಷಾಚಲೇಶ ||ಅರ್ಚಿಪರ ಸಂರಕ್ಷಿಪುದು ನಿನ್ನಪಣವು ಆದುದರಿಂದ ಗೋಪಾನ |ಆಸಿಯತಲೆಯಲಿ ತಡೆದು ಗೋವನು ಕಾಯ್ದ _ಕರುಣಿಯೆ ಭಕ್ತವತ್ಸಲ |ತುಚ್ಛಗೋಪನು ಭಯದಿ ಅಸುಬಿಡೆಚೋಳರಾಯಗೆ ಶಾಪವಿತ್ತು |ಅಚ್ಚುತನೆ ನೀದೇವ ಗುರುವಿನ ಸೇವೆಕೊಂಡು ನಿನ್ನರೂಪ |ಸ್ವಚ್ಛಚಿನ್ಮಯ ಭೂವರಾಹನ ಸಹವಿನೋದ ಲೀಲೆಮಾಡಿ |ಪ್ರೋಚ್ಚನಂದದಿ ಕ್ಷೇತ್ರ ಸಹಬಕುಳಾ ಯಶೋದೆಯ -ಪಾಕಕಾಗಿ ಸ್ವೀಕರಿಸಿ ಹೇ ದಯಾನಿಧೇ ನಿತ್ಯತೃಪ್ತ 1ಅಸಮ ಸತ್ಯವಾಗೀಶ |ಜಗನ್ಮಾತೆಯೆಂದು ಪೇಳಿದಂತೆ ಆಕಾಶ |ಕಂಡಪದ್ಮದಿ ಪದುಮ ಸುಮುಖವಿಲಾಸ |ಶಿಶುವಕೊಂಡಳು ಧರಣಿ ಬಹು ಸಂತೋಷ ||| ದಿಂದ ವಿಹಿತ ಆಶ ||ಧರಣಿದೇವಿ ಆಕಾಶರಾಜನ ಸುತೆಪದ್ಮಾವತಿಯೆಂಬ ನಾಮದಿ |ಪುರಿಯ ಹೊರಗೆ ಪುಷ್ಪವನದಲಿ ಸಖಿಯರೊಡನೆ ಆಡುವಾಗ |ನಾರದನು ಬಹು ವೃದ್ಧರೂಪದಿ ಬಂದು -ಹಸ್ತರೇಖೆ ನೋಡುತ |ಶ್ರೀರಮಾಲಕ್ಷಣವ ಕಾಣುತ ಬ್ರಹ್ಮದೇವನ ತಾಯಿ ಅಂಗಿಯು |ಮಾರಜನಕನೆ ಪತಿಯು ಎಂದು ಪೇಳಿತೆರಳೆ ಶಿರಿಯ ಸ್ಮರಿಸುತ |ಏರಿ ಕುದುರೆಯ ವನದಿ ಪದ್ಮಾವತಿ ಸಂಗಡ -ಆಟವಾಡಿದಿ ಹೇ ದಯಾನಿಧೇ ಶ್ರೀಶಸ್ವರಮಣ 2ಧರಣಿಯೊಡನೆ ಸಂವಾದ |ಮಾಡೆ ಬಕುಳಾ ಪೋಗೆ ನೀನು ಪುಳಿಂದ |ವಿಧಿವತ್ಸರುದ್ರನು ದಂಡ ಗುಲ್ಮಬ್ರಹ್ಮಾಂಡ |ಹಾರ ಗುಂಜಾಕಂಬುವೇಷದಿ ಪೋದಿಯೋ ಮುದದಿಂದ ||| ಕಣಿಪೇಳ್ವ ಚೆಂದ ||ಧರಣಿಪದ್ಮಗೆ ಕಣಿಯಪೇಳಿ ಮದುವೆ ನಿಶ್ಚಯಮಾಡಿ ಬಂದೆಯೋ |ಭರದಿಶುಕಆಕಾಶರಾಜ ಲಗ್ನಪತ್ರವಕೊಡಲು ಬ್ರಹ್ಮ-ಗರುಡಶೇಷಶಿವಾದಿಸುರ ಮುನಿಜನರ ಬಕುಳಾ ಲಕ್ಷ್ಮೀಸಹ ನೀ |ಪೊರಟುಮಾರ್ಗದಿ ಶುಕಮುನಿಯ ನೈವೇದ್ಯ ಉಂಡು ಜನರತೃಪ್ತಿಸಿ |ಸೇರಿಪುರಿಯ ಅಜರ ಮಂದಿರ ಪೋಲ್ವ -ಮನೆಯಲಿ ಪದ್ಮಾವತಿಗೆ ಮಾಂಗಲ್ಯ ಧರಿಸಿದಿ |ಸರಸಿಜಾಸನತಾತಪ್ರಸನ್ನ ಶ್ರೀನಿವಾಸನೆವಿಶ್ವಪಾಲಕ ಹೇ ದಯಾನಿಧೇ ಶರಣು -ಶರಣು ಹೇ ಸೌಭಾಗ್ಯದಾತಾ ಪ. 3||ಶ್ರೀ ಪ್ರಸನ್ನ ಅಣು ಶ್ರೀನಿವಾಸ ಕಲ್ಯಾಣ ಸಂಪೂರ್ಣ||
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಪ್ರಸನ್ನ ಶ್ರೀನಿವಾಸದಾಸರ ಶ್ರೀಹರಿ ಪ್ರಾದುರ್ಭಾವಗಳುಪ್ರಸನ್ನ ಶ್ರೀ ಮತ್ಸ್ಯಾವತಾರ4ಲೀಲಾವತಾರನೇ ಪ್ರಳಯಾಬ್ದಿ ಸಂಚರನೇಮಾಲೋಲ ಸುಖಚಿತ್ ತನು ಮತ್ಸ್ಯರೂಪಬಾಲಾರ್ಕ ಕೋಟ್ಯಮಿತ ಜ್ಯೋತಿರ್ಮಯ ಸುಂದರನೇಕಾಲಗುಣದೇಶ ಅಪರಿಚ್ಛಿನ್ನ ಪೂರ್ಣ ಸುಗುಣಾರ್ಣವನೇ ಶರಣು ಪಪ್ರಳಯದಲಿ ಭೂರಾದಿ ಲೋಕಂಗಳುಮುಳಗಿರಲು ಹುಯಗ್ರೀವನಾಮ ದಾನವನುಸೆಳೆದು ವೇದಗಳ ತನ್ನೊಳ್ ಅಡಗಿಸಿದ್ದವನಸೀಳ್ದಿ ನೀ ಬಂದು ವೇದೋದ್ಧರನೇ ಮತ್ಸ್ಯ 1ಗೋವಿಪ್ರಸುರ ಸಾಧು ಜನರ ವೇದಂಗಳ-ಕಾವಸರ್ವೇಶ್ವರನೇ ಪುರುಷಾರ್ಥದಾತಸರ್ವರಿಗೂ ಸುಖವೀವುದು ನಿನ್ನ ಸುಚರಿತ್ರೆಶ್ರೀವರನೇ ಮತ್ಸ್ಯರೂಪಿಯೇ ಶರಣು ಶ್ರೀ ಕೃಷ್ಣ 2ಹಂಸ ಐರಾವತ ತಿತ್ತಿರಾ ಶುಕಗಳುಈ ಪಕ್ಷಿಗಳಲ್ಲಿ ತರತಮ ಉಂಟುಸುಸುಖ ಐಶ್ವರ್ಯೋನ್ನಾಹ ಅದರಂತೇವೇಈ ಸುನುಡಿಗಳ ಪಠನ ಮಾಳ್ಪ ಸುಜನರಿಗೆ 3ಗುರುರ್ಗುರ್ರೋಗುರುಮನುಶುಕಮಧ್ವಾಂತಸ್ಥಪರಮಾತ್ಮಹರಿವಿಷ್ಣೋ ಉದ್ದಾಮಸಾಮಅರದೂರಅನಂತೋರು ನಿಜಶಕ್ತಿ ಪರಿಪೂರ್ಣಉರು ಸುಗುಣ ನಿಧಿಯೇ ಶಫರಿರೂಪ ಮಾಂಪಾಹಿ 4ಸರ್ವೋತ್ತಮನು ನಾರಾಯಣನೇ ಎಂದರಿತುದ್ರವಿಡ ದೇಶಾಧಿಪನು ಸತ್ಯವ್ರತರಾಯಸುವಿವೇಕದಿ ನಿನ್ನ ಕುರಿತು ತಪವಚರಿಸಿದನುಭಾವಶುದ್ಧನು ಸಲೀಲಾಶನ ದೃಢವ್ರತನು5ವಿವಸ್ವಾನ್ ಮಗ ಶ್ರಾದ್ಧದೇವನು ಪ್ರಖ್ಯಾತವೈವಸ್ವತಮನುವೇ ಇಂದಿನ ಮನುವುಪೂರ್ವದಲಿ ಈತನೇ ಸತ್ಯವ್ರತ ಸಾಮ್ರಾಟ್0ಅವನಿಗೆ ನಮೋ ಎಂಬೆ ನಿನ್ನವನೆಂದು 6ರಾಜ ಋಷಿ ಈ ಮಹಾನ್ ಕೃತಮಾಲಾ ನದಿಯಲ್ಲಿನಿಜ ಭಕ್ತಿಯಿಂದ ಜಲತರ್ಪಣವ ಚರಿಸೆಅಂಜಲಿಉದಕದಲಿ ಮುದ್ದು ಮರಿ ಮೀನೊಂದುಸರಿಜ್ಜಲ ಸಹಿತದಿ ಬಂದದ್ದು ಕಂಡ 7ಅರಸ ಕರುಣದಲಿ ಅದನು ನದಿಯಲಿ ಬಿಡಲಿರೆಅರುಹಿತು ತನ್ನ ವೃತ್ತಾಂತವ ಆ ಮೀನುಪರಿಪರಿಯಾಗಿ ತನ್ನ ಸಜಾತೀಯರ ಭಯ ತನಗೆ ಎಂದುನೀರು ಪ್ರವಾಹದಲ್ಲಿ ತನ್ನ ಬಿಡಬೇಡವೆಂದು ಪ್ರಾರ್ಥಿಸಿತು ರಾಜನ್ನ 8ನಾರಾಯಣಾದಿ ಸುಮಂತ್ರಿತ ಅಭಿಯಂತ್ರಿತ ತನ್ನಸ್ಫುರತ್ ಕಲಶ ಕಮಂಡಲು ನೀರಲ್ಲಿ ಮೀನು ಮರಿ ಇಟ್ಟುಕೊಂಡುಆಶ್ರಮಕೆ ಕೃತ ಕೃತ್ಯ ಮನದಿ ರಾಜನು ಬಂದಮರುದಿನ ಉದಯದಲಿ ಕಂಡ ಆಶ್ಚರ್ಯವ 9ಕಮಂಡಲ ಕಲಶ ಪೂರಾವು ಏಕ ರಾತ್ರಿಯಲ್ಲೇವೇಆಮತ್ಸ್ಯಮರಿ ಬೆಳೆದಿದ್ದು ಆಶ್ಚರ್ಯ ಕಂಡಕಮಂಡಲು ಸಾಲದೇ ವಿಸ್ತಾರವಾದ ಸ್ಥಳನಿರ್ಮಾಣ ಮಾಡಿ ನೀರು ತುಂಬಿಸಿ ಅದರೊಳ್ ಮೀನನ್ನ ಬಿಟ್ಟ 10ಉದಕತುಂಬಿದ ಕುಂಟೆ ಸರೋವರವನ್ನುಮತ್ಸ್ಯವು ಪೂರ್ಣ ವ್ಯಾಪಿಸಿದ ಆಶ್ಚರ್ಯಅತಿಶಯ ಲೀಲಾ ವಿನೋದವ ಕಂಡ ರಾಜಉದಧಿಯಲಿ ಬಿಡಲು ನಿಶ್ಚಯಿಸಿ ಕ್ರಮಗೊಂಡ 11ಮಹೋದಧಿಯಲ್ಲಿರುವ ಮಕರಾದಿಗಳು ತನ್ನ ನುಂಗುವನೆಂದುಮಹಾರಾಜನಿಗೆ ಆ ಮೀನು ಹೇಳಿ ತಾನುಆದರೂ ರಾಜನು ಅಷ್ಟರಲ್ಲೇ ಉದಧಿಯೊಳು ಬಿಟ್ಟನುಮೀನನ್ನು ಆಗ ದೊಡ್ಡ ಆಶ್ಚರ್ಯವೊಂದನ್ನ ಕಂಡ ಆಮೀನು ಮತ್ತೂ ದೊಡ್ಡದಾಯಿತು 12ಶತಯೋಜನ ಮಹಾವೀರ್ಯ ಜಲಚರಗಳುಯಾವುದೂ ಕಂಡಿಲ್ಲ ಕೇಳಿಲ್ಲ ಜಗದಿಅತಿ ಅದ್ಭುತ ಮಹಾ ಮೀನರೂಪನು ಸಾಕ್ಷಾತ್ಉದಧಿಶಾಯಿ ಶ್ರೀಮನ್ನಾರಾಯಣ ನೀ ಎಂದ 13ಜೀವರುಗಳಿಗೆ ಅನುಗ್ರಹ ಮಾಡಲಿಕ್ಕೇವೇದೇವ ನೀ ಮತ್ಸ್ಯರೂಪ ಪ್ರಕಟಿಸಿರುವಿಕಾವಕಾರುಣಿಯೇ ಪುರುಷಶ್ರೇಷ್ಠ ಸರ್ವೋತ್ತಮನೇಸರ್ವದಾ ನಮೋ ಜಗಜ್ಜ£್ಮ್ಞಧಿಕರ್ತ14ಶ್ರವಣ ಸಂಸ್ತುತಿಸಿ ಮನನ ಧ್ಯಾನಾದಿಗಳು ಮಾಡಿಶ್ರೀವರನೇ ನಿನ್ನ ಮಹಾತ್ಮ್ಯಾ ಜ್ಞಾನಪೂರ್ವಕ ನಿನ್ನಲ್ಲಿ ಸುಸ್ನೇಹರತನಾದವಿವೇಕಿ ಪ್ರಪನ್ನರ ಸಲಹಿಗತಿಈವಿ15ಯಥಾರ್ಥ ಜ್ಞಾನವ ಭಕ್ತಿಮಾನ್ ರಾಜನು ಸ್ತುತಿಸಲುಮುದದಿಂದ ಇನ್ನೂನು ನಿನ್ನವೃತತಿಜೇಕ್ಷಣ ಜಗತ್ಪತಿಯೇ ನೀನು ಆಮತಿವಂತನಿಗೆ ಪೇಳಿದಿ ಅವತಾರಕಾರ್ಯ 16ಏಳುದಿನವಾಗಲು ಭೂರಾದಿ ಲೋಕಗಳುಪ್ರಳಯಜಲದಲ್ಲಿ ಮುಳುಗಿ ಹೋಗುವವುಒಳ್ಳೇ ಓಷಧಿ ಸರ್ವವೀರ್ಯತರ ಬೀಜ -ಗಳಸಪ್ತಋಷಿ ಸಹ ಕಾದಿರು ಎಂದಿ17ಕಾದುಕೊಂಡು ಇರುವಾಗ ವಿಶಾಲ ನೌಕವು ಒಂದುಶ್ರೀದ ನೀ ಕಳುಹಿಸೆ ಜಲದ ಮೇಲ್ ಬರುವದುಅದರಲಿ ಅರೋಹಿಸಬೇಕು ಬೀಜಗಳಸಪ್ತಋಷಿ ಸಹ ರಾಜ ಎಂದು ಬೋಧಿಸಿದಿ 18ಎಲ್ಲೆಲ್ಲೂ ಪ್ರಳಯಜಲತುಂಬಿತುಳಕಾಡುವುದುಲೋಲ್ಯಾಡುವುದು ನೌಕ ಗಾಳಿರಭಸದಲಿಅಲ್ಲಿ ಸಮೀಪಿಸುವ ಮತ್ಸ್ಯರೂಪನ ನಿನ್ನಹೊಳೆವ ಶೃಂಗದಿ ನಾವೆಯನು ಕಟ್ಟು ಎಂದಿ 19ನಾವೆಯನು ಬಂಧಿಸಲುರಜ್ಜುಸರ್ಪವು ಎಂದುಸುವ್ರತ ರಾಜನಿಗೆ ಉಪಾಯ ಪೇಳಿದಸರ್ವಗುಣ ಪರಿಪೂರ್ಣ ನಿರ್ದೋಷ ಪರಬ್ರಹ್ಮವಿಶ್ವವಿಷ್ಣೋ ಸೃಷ್ಟಾ ಪಾತಾ ರಮೇಶ20ಈ ರೀತಿ ಆ ಮಹಾನ್ ಸತ್ಯವ್ರತರಾಜನಿಗೆಹರಿನೀನು ಬೋಧಿಸಿ ಅಂತರ್ಧಾನವು ಆಗೇಆ ರಾಜಋಷಿ ತಾನು ಮತ್ಸ್ಯರೂಪ ಹೈಷಿಕೇಶಸಿರಿವರನೇ ನಿನ್ನನ್ನೇ ಧ್ಯಾನಿಸುತಲಿದ್ದ 21ಯುಕ್ತ ಕಾಲವು ಬಂತು ಉಕ್ಕಿತು ಸಮುದ್ರವುಸುತ್ತು ಮುತ್ತು ಎಲ್ಲೂ ಪೊಕ್ಕಿತು ಭೂಮಿಯಲಿಅತ್ತ ಇತ್ತ ಇಲ್ಲೂ ಸುತ್ತಿ ಸುಳಿವ ನೀರುಭೀತಿಕರ ನೆನೆಯಲಿಕೆ ನೋಡೆ ಮತ್ತೆಷ್ಟೋ 22ಚಂಡಮಾರುತ ಪ್ರಚಂಡ ಮೇಘವುಕರಿಸೊಂಡಲಂತೆ ಹನಿ ಕಂಡಿಲ್ಲ ಇಂಥಾ ಮಳೆಕಂಡು ನಾವೆಯ ರಾಜಕೊಂಡು ಬೀಜಗಳಕರಕೊಂಡು ಋಷಿಗಳ ಏರಿಕೊಂಡನು ಬೇಗ 23ಕೇಶವನೇ ನಿನ್ನ ಧ್ಯಾನಿಸಲು ಆಗಕೌಶೇಯ ಶೃಂಗಿ ಮಹಾಮತ್ಸ್ಯ ನೀ ಬರಲುಈಶ ನಿನ್ನಯ ಶೃಂಗಕ್ಕೆ ನೌಕವಕಟ್ಟಿಸಂಸ್ತುತಿಸಿದನು ಮಧುಸೂಧನನೇ ನಿನ್ನ 24ಶ್ರೀ ಭಾಗವತಾಷ್ಟಮ ತ್ರಯೋವಿಂಶತ್ ಅಧ್ಯಾಯಶುಭತಯವಿಜ್ಞಾನಬೋಧಕವು ಅದರಸೊಬಗರಿತು ಯೋಗ್ಯರು ಪಠಿಸೆ ಪ್ರೇರಿಸು ಸ್ವಾಮಿಸೌಭಾಗ್ಯಪ್ರದ ಶ್ರೀಶ ಮಾಂಪಾಹಿ 25ಏಕಶೃಂಗಧರ ಸ್ವರ್ಣ ಮತ್ಸ್ಯನಿಗೆ ಸರ್ಪದಿಂಲಕ್ಷ ಯೋಜನೆ ಮೇಲಿನ ವಿಸ್ತಾರದಿ ಬಂಧಿಸಿದಸತ್ಯವ್ರತ ರಾಜನು ಸಂತೋಷದಲಿ ಸ್ತುತಿಸಿದಅನಾದಿಅವಿದ್ಯಾಪೀಡಿತ ಜನ ಸಂರಕ್ಷನ್ನ26ಪರಮಹಂಸನ ಮೂಲ ಗುರೋ ಲಕ್ಷ್ಮೀಹಯವದನಮೇರು ಇತರಾ ದೇವಹೂತಿ - ಸುತ ಶರಣುಘೋರಸಂಸಾರ ಬಂಧಮೋಚಕಹರಿಯೇವರಸುಖಪ್ರದ ಸಂರಕ್ಷಕ ಮಾಂಪಾಹಿ27ಶಕ್ರಾದಿ ಜಗತ್ತಿಗೆಗುರುಗಂಗಾಧರನುಗಂಗಾಧರನಿಗೆಗುರುಪ್ರಾಣ ಪದ್ಮಜರುಪಂಕಜಾಸನ ಪ್ರಾಣರಿಗೆಗುರುರಮೇಶನು ಹರಿಯೇಆಗುರುಮೂಲಗುರು ಪರಮಗುರ್ರೋಗುರುವು28ನಿನ್ನ ಅನುಗ್ರಹ ಹೊಂದಿದರು ನೀ ಪರಮಗುರುಎಂದು ತಿಳಿದುಬದ್ಧಜೀವರ ಮೋಕ್ಷ ಪುರುಷಾರ್ಥಅವಿದ್ಯಾsಜ್ಞಾನ ಕಳೆದು ಪುಟವಿಟ್ಟಸ್ವರ್ಣರಜತಪೋಲ್ ಶುಚಿ ಆಗಿಸುವಿ ದಯದಿ 29ಸರ್ವಲೋಕ ಜನರಿಗೆ ಹಿತಕರ ಸುಹೃತ್ ನೀನೇಪ್ರಯೇಶ್ವರ ಆತ್ಮಾಗುರು ಜ್ಞಾನ ಅಭೀಷ್ಟಸಿದ್ಧಿಯುನೀ ಸುಹೃತ್ ಅಂದರೆ ಪ್ರತ್ಯುಪಕಾರ ಶೂನ್ಯನುಇನ್ನೂ ಬಹು ವಿಧದಿ ಪರಮಸಾಧು ಸ್ತುತಿಗೈದಿ 30ಸರ್ವಲೋಕಕೆ ನೀನೇ ಸುಹೃತ್ ಪ್ರಯೇಶ್ವರನುಶರ್ವಅಜಶಕ್ರಾದಿಗಳ ನಿಯಾಮಕನುಸರ್ವಾದಾನಂದಮಯ ಗುಣನಿಧಿ ಆತ್ಮನುಸರ್ವಾಭೀಷ್ಟಪ್ರದ ಜ್ಞಾನಸಿದ್ಧಿದನು 31ದೇವದೇವೋತ್ತಮನೇ ಆದಿಪೂರುಷ ಶ್ರೀಶವಿಶ್ವೇಶ್ವರ ಮತ್ಸ್ಯರೂಪ ಭಗವಂತನೀ ವಿಹಾರವು ಮಾಡಿ ಪ್ರಳಯಾರ್ಣವದಲಿಕವಿವರ್ಯ ರಾಜನಲಿ ಸುಪ್ರೀತನಾದಿ 32ವೇದ ಉದ್ಧರಿಸಿದಿ ಹಿಂದೆ ಅಸುರನ್ನ ಕೊಂದುಯುಕ್ತ ಕಾಲದಿ ಈಗ ಪ್ರಳಯವು ತೀರೆಸಾಧುವರ್ಯನು ಜ್ಞಾನವಿಜ್ಞಾನ ಕೋವಿದನುಸತ್ಯವ್ರತನಿಗೆ ಮನು ಪದವಿಯನು ಇತ್ತಿ 33ಮತ್ಸ್ಯಾವತಾರ ಸಂಕೀರ್ತನೆ ಮಾಳ್ಪರಿಗೆಸಿಧ್ಧಿ ಆಗುವುದು ಸರ್ವೇಷ್ಟ ಸದ್ಗತಿಯುಎಂದು ಪೇಳಿರುವಿ ಶುಕಪದ್ಮಭವಪತಿ ಶ್ರೀಶಸಾತ್ಯವತಿ ಮೀನ ವೇಧಪಿತ ಪ್ರಸನ್ನ ಶ್ರೀನಿವಾಸ 34- ಇತಿ ಶ್ರೀ ಮತ್ಸ್ಯಾವತಾರ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ವೆಂಕಟೇಶ ಭುವನೇಶ್ವರೇಶಪಾಹಿವೇದವೇದ್ಯ ಕರುಣಾಢ್ಯ ಗತಮೌಢ್ಯ ಪ.ಸರ್ವಚೇತನ ಜಡನಿಚಯಪೂರ್ಣ ಹೇ ಸುಪೂರ್ಣಶರ್ವೇಶ ವಿಧಿವಿನುತ ವಿಮಲಚರಣಉರ್ವಿಭಾರಕಹರಣ ಶರಣಾನ್ವಯೋದ್ಧರಣನಿರ್ವಾಣಪದಪ್ರದ ನಿತ್ಯಾಂತ:ಕರಣಾನಿರ್ವಚನೀಯಾತಿಶಯಾನಾಥನಾಥ ಸುಗೀತಸರ್ವಾಮರಾರ್ಥಿಸುದಾತತಾತಸರ್ವಜÕ ವಾರಣೇಂದ್ರಭರಣ ಹಿತಕರಣ ದಾಶಾರ್ಹ ಹಿತಕರಣಸಂಸ್ಕøತಿವಾರ್ಧಿಕರಣ1ಆತ್ಮಾಂತರಾತ್ಮ ಪರಮಾತ್ಮ ಜ್ಞಾನಾತ್ಮ ಪುರುಷೋತ್ಮಾನ್ನಮಯ ಪ್ರಾಣಮಯ ಮನೋಮಯಾಧ್ಯಾತ್ಮಪ್ರಿಯ ಮಾಪ್ರಿಯ ವಿಬುಧಜನಸ್ವಪ್ರಿಯಆತ್ಮವೈಭವಪ್ರಿಯ ಭಕ್ತಪ್ರಿಯಆತ್ಮೀಯ ವೀರ್ಯ ಔದಾರ್ಯೋದ್ಧøತಟಂಕಆತ್ಮ ಅನಂತನಿಕುರುಂಬಬಿಂಬಆತ್ಮ ನಿವೇದನ ಬಲೀಂದ್ರನುತಉಪೇಂದ್ರ ನಿತ್ಯಾತ್ಮ ಗುಣವೃಂದ ದಯಾಸಾಂದ್ರ ವಿಭೋ ಸಿಂಧೋ 2ಸೃಷ್ಟಿ ಸ್ಥಿತಿ ಲಯ ನಿಯಮ ಜ್ಞಾನಾಜ್ಞಾನ ಬಂಧ ಮೋಕ್ಷಾದ್ಯಷ್ಟ ಕಾರಣ ಸದಾಸಾಧುಪಕ್ಷದುಷ್ಟಹರ ದುರಿತತಮೋಭಾನುಬುಧಸುರಧೇನುವಿಷ್ಣು ಜನರಕ್ಷ ಸದ್ದೀಕ್ಷ ದಕ್ಷಶಿಷ್ಟಮೂಲ ಪ್ರಕೃತಿ ತುಷ್ಟಿದ ಜಡ ಪ್ರಕೃತಿಪುಷ್ಟಿಕರ ಸುಲಲಿತ ಶ್ರೀವತ್ಸಪಕ್ಷಸ್ಪಷ್ಟಲೀಲಾದಿ ನಾರಾಯಣ ನಿರಾಮಯವೃಷ್ಣೀಶಸಾಷ್ಟ ಸಾಪರಾಗತಿ3ಬುದ್ಧೀಂದ್ರಿಯ ಪ್ರಾಣವರ್ಧಕ ಕೃತೀಶ ಅನಿರುದ್ಧ ಪಾಲನಪರ ಪ್ರದ್ಯುಮ್ನ ವಿಭೋರುದ್ರ ನಿಯಂತಾರ ಹಂತಾರ ಸಂಕರ್ಷಣಾದ್ಯವಾಸುದೇವಸನ್ಮೋಕ್ಷಪ್ರದಸದ್ಧಾಮತ್ರಯಗ ಶ್ರೀಪದ್ಮನಾಭಾಚ್ಯುತ ಮುಕ್ತಿದಾತಗಾತ್ರಅತ್ಯದ್ಭುತಾರ್ಥಶುದ್ಧಕರ ನಾಮಾಪ್ತ ಕಾಮಾಪ್ರಮೇಯ ಸಮೃದ್ಧ ಸುಖಗಾತ್ರಾಬ್ಜನೇತ್ರಮಿತ್ರ4ಸತ್ಯವ್ರತ ಪಾಲಾಬ್ಧಿ ಕೀಲನಸೃಕ್ಕೋಲಖಳದೈತ್ಯಜಸುಶೀಲಪ್ರಿಯವಟುನೃಪಕುಲಹರ್ತ ದ್ವಿಜಕರ್ತ ದಶವಕ್ತ್ರ್ತಮಾರಕ ನಮಿತಪಾರ್ಥಪದ ಶುದ್ಧೋದನ ಚಿತ್ತಹರಣಮತ್ತಕಲಿಹರ ಧರ್ಮಸ್ಥಾಪಕಪರಾತ್ಪರಸತ್ಯಸಂಕಲ್ಪಪ್ರಸನ್ನವೆಂಕಟಪರ5
--------------
ಪ್ರಸನ್ನವೆಂಕಟದಾಸರು
ಶ್ರೀ ವೈಕುಂಠಕೆ ಸರಿಯಾದ ದ್ವಾರಕೆಯಲಿ ಶ್ರೀಕೃಷ್ಣ ರುಕ್ಮಿಣಿದೇವಿಯರ ವಿವಾಹ ಶೋಭನದಿ ಉತ್ಸಾಹದಲಿ ಸರಸ್ವತಿಭಾರತಿದೇವಿಯರು ಸರ ಋಷಿ ಭಾವೆಯರು ಸಂಗೀತಕೋವಿದೆಯರು ಹಸೆಗಿಬ್ಬರನು ಕರೆದರು ಪ.ಅಗಣಿತಬ್ರಹ್ಮಾಂಡವ ರಚಿಸಿನಗುತಲೆ ನುಂಗೇಕಾಕಿಯಲಿಮಗುವೆನಿಸಿ ವಟಪತ್ರದಲಿ ಮಲಗಿದೆಮಲಗಿದಪ್ರಾಕೃತ ನಂದನಮಗನೆ ಬಾ ಕಸ್ತೂರಿ ಮೃಗನೆ ಬಾ ಶ್ರೀ ತ್ರಿಯುಗನೆ ಬಾರೆಂದು ಹಸೆಗೆ ಕರೆದರು 1ಕಡೆಗಣ್ಣಿನ ನೋಟದಿ ಕಮಲಜಮೃಡÀಮುಖ್ಯರ ಪಾಲಿಸುವೆ ಪಾಲ್ಗಡಲೊಡೆಯನ ಪಟ್ಟದರಂಭೆ ಜಗದಂಬೆಜಗದಂಬೆ ಮೋಹನ ಮಾಯದಬೆಡಗೆ ಬಾ ಭಾಗ್ಯದ ಹಡಗೆ ಬಾ ವ್ರಜದಕಡೆಗೆ ಬಾರೆಂದು ಹಸೆಗೆ ಕರೆದರು 2ಪೂತನಿ ಶಕಟಾಂತಕನೆ ಬಾ ಚಕ್ರವಾತನ ಘಾತಿಸಿದವನೆ ಬಾಪಾತಕಿಬಕಧೇನುಕಹರ ನವನೀತಚೋರ ನವನೀತಚೋರ ಭುವನಕಪ್ರತಿಪೂತನೆ ಬಾ ದೇವಕಿ ಜಾತನೆ ಬಾ ಬೊಮ್ಮನತಾತನೆÉ ಬಾರೆಂದು ಹಸೆಗೆ ಕರೆದರು 3ಯಮಳಾರ್ಜುನಭಂಜನಬಾ ಸಂಯಮಿ ಕುಲ ಮನರಂಜನ ಬಾರಮಣಕಪತಿ ಮದಹರಶುಭಯಮುನಾವಿಹಾರಯಮುನಾವಿಹಾರ ಗೋಪವಧೂಟೀರರಮಣ ಬಾ ಖಳಕುಲದಮನ ಬಾಖಗವರಗಮನಬಾರೆಂದು ಹಸೆಗೆ ಕರೆದರು4ಹೆಂಗಳ ಪಣೆಮಣಿಯೆ ಬಾ ಮನಮಂಗಳ ಗುಣಮಣಿಯೆ ಬಾ ಭುವನಂಗಳ ಬೆಳಗುವ ಚೆಲ್ವಿಕೆಯ ನಗೆಮೊಗದನಗೆಮೊಗದ ನೈದಿಲೆಗಂಗಳೆ ಬಾ ಸುರಮುನಿಜಂಗುಳಿ ಬಾ ಮಾತಿನಹೊಂಗಿಳಿಬಾರೆಂದು ಹಸೆಗೆ ಕರೆದರು 5ಸ್ವರ್ಧುನಿಯಳ ಜನಕನೆ ಬಾಭವಕರ್ದಮ ಶೋಷಕನೆ ಬಾ ಸುರಶಾರ್ದೂಲಸದ್ಗುಣಜಾಲ ಸಂಗೀತಲೋಲಸಂಗೀತಲೋಲ ಗೋಪಾಲಕವರ್ಧನಬಾ ರಿಪುಚಯ ಮರ್ದನ ಬಾಧೃತಗೋವರ್ಧನಬಾರೆಂದು ಹಸೆಗೆ ಕರೆದರು6ಅಂಬುಜಮಾಲಿನಿಯೆ ಬಾ ಮತ್ತಂಬುಜಜ ಜನನಿಯೆ ಬಾ ಹೇಮಾಂಬರೆ ಸಂಪಿಗೆಯ ಕಬರೆ ಬಿಂಬಾಧರೆಬಿಂಬಾಧರೆ ಬಹಳ ಉದಾರಿಗಳಿಂಬೆ ಬಾ ಜಗದ ವಿಡಂಬೆ ಬಾಕುಂದಣಬೊಂಬೆ ಬಾರೆಂದು ಹಸೆಗೆ ಕರೆದರು 7ರಾಜನಗಜ ಮಡುಹಿದನೆ ಬಾಮತ್ತಭೋಜೇಂದ್ರನ ಕೆಡಹಿದÀನೆ ಬಾಈ ಜನನೀ ಜನಕರ ಬಂಧನ ನಿವಾರಣನಿವಾರಣ ಕಾರಣ ಪೂರಣತೇಜಬಾ ರಾಜಾಧಿರಾಜ ಬಾ ದ್ವಿಜಸುರಭೋಜ ಬಾರೆಂದು ಹಸೆಗೆ ಕರೆದರು 8ವೈದರ್ಭ ಗರ್ಭಜಾ ತೇಜಾ ಅಲರೈದಂಬನ ಮಾತೆ ಬಾವೈದಿಕ ವಿಖ್ಯಾತೆ ಸ್ವಯಂಜ್ಯೋತೆ ದಾತೆಸ್ವಯಂಜ್ಯೋತೆ ದಾತೆ ನಿತ್ಯಮುತ್ತೈದೆ ಬಾ ಮುಕ್ತಿಯ ಬೋಧೆ ಬಾ ಮುದ್ದಿನಮೋದೆ ಬಾರೆಂದು ಹಸೆಗೆ ಕರೆದರು 9ಪಾಂಡವ ಸ್ಥಾಪಕನೆ ಬಾ ಮಹಾಖಾಂಡವವನ ದಾಹಕನೆ ಬಾಹೆಂಡರು ಹದಿನಾರು ಸಾವಿರದ ನೂರೆಂಟುನೂರೆಂಟರನಾಳುವಕದನಪ್ರಚಂಡ ಬಾ ಉದ್ದಂಡೋದ್ದಂಡ ಬಾ ಪುಂಡರಗಂಡಬಾರೆಂದು ಹಸೆಗೆ ಕರೆದರು10ಮುತ್ತಿನ ಸೂಸಕಳೆ ಬಾ ನವರತ್ನದ ಭೂಷÀಕಳೆ ಬಾಕಸ್ತೂರಿ ತಿಲಕದ ಪುತ್ಥಳಿಯೆ ಅಳಿಕುಂತಳೆಯೆಅಳಿಕುಂತಳೆಯೆ ಮದವಳಿಗನಚಿತ್ತೆ ಬಾ ನಿಜಪತಿವ್ರತ್ತೆ ಬಾಸುಪ್ಪಾಣಿಮುತ್ತೆ ಬಾರೆಂದು ಹಸೆಗೆ ಕರೆದರು 11ತುರಗಾಸ್ಯನ ಹೂಳಿದನೆ ಬಾ ಮಂದರಬೆನ್ನಲಿ ತಾಳಿದನೆ ಬಾವರಹ ನರಹರಿ ವಾಮನಭಾರ್ಗವರಾಮರಾಮರ ರಾಮ ಕೃಷ್ಣಯೋಗಿವರನೆ ಬಾ ಕಲಿಮಲಹರನೆ ಬಾ ಶಾಮಸುಂದರನೆ ಬಾರೆಂದು ಹಸೆಗೆ ಕರೆದರು 12ಶಂಕಿಣಿ ಪದ್ಮಿಣಿಯರು ರುಕ್ಮಿಣಿಪಂಕಜನಾಭನ ಪೂಜಿಸಿ ರತ್ನಾಂಕಿತ ಹರಿವಾಣದಲಿ ಆರತಿಯೆತ್ತಿಆರತಿಯೆತ್ತಿ ಪಾಡಿದರು ಅಕಳಂಕನ ಅಹಿಪರಿಯಂಕನ ಪ್ರಸನ್ನವೆಂಕಟರಮಣಗೆ ವಿಜಯವ ಹರಸಿದರು 13
--------------
ಪ್ರಸನ್ನವೆಂಕಟದಾಸರು
ಶ್ರೀ ಶಿವ74ಸೋಮಶೇಖರ ಶಿವನೆ ಹೈಮವತಿವರ ನಿನ್ನತಾಮರಸಪದಯುಗಳಕಾ ನಮಿಪೆ ಕಾಯೋಪಕಾಮಹರ ಸ್ಕಂಧಪಿತ ಅಮರೇಂದ್ರ ಮುಖವಿನುತರಾಮ ನರಹುದಾಸ ಅಮರತಟನೀಧರನೆ ಅಪರುದ್ರನೇ ನಮೋ ಎನ್ನುಪದ್ರವಗಳನು ತರಿದುಭದ್ರವನು ಇಟ್ಟೆನ್ನ ಉದ್ಧರಿಸೊ ದಯದಿರುದ್ರ ಭವಬಂಧಹರ ದುರ್ಗಾರಮಣನಾದಪದ್ಮಭವತಾತನಿಗೆ ಪ್ರಿಯತರನೆ ತ್ರಿಪುರಾರಿ 1ಈಶ ಶಿವ ಮಹದೇವ ಈಶಾನ ನಮೋ ನಿನಗೆವಾಸವಾದ್ಯಮರ ಜಗದ್ಗುರುವೆ ಶರಣೆಂಬೆಈಶ ಕೇಶವ ದೋಷದೂರ ಸುಖಮಯ ಶ್ರೀಶದಾಶಾರ್ಹನಲಿ ಎನ್ನ ಮನವ ಚಲಿಸದೆ ನಿಲಿಸೊ 2ತೀರ್ಥಪಾದನು ಸರ್ವ ಚೇತನರ ದೇಹಸ್ಥಕೃತ್ತಿವಾಸನು ಶ್ರೀ ಪ್ರಸನ್ನ ಶ್ರೀನಿವಾಸಕೃತಿಜಯಾಶ್ರದ್ಧೇಶ ಸಹ ಜ್ವಲಿಪ ನಿನ್ನೊಳಗೆಕೃತ್ತಿವಾಸನೆ ನಮೋ ಶುಭದಪಾರ್ವತೀಶ3
--------------
ಪ್ರಸನ್ನ ಶ್ರೀನಿವಾಸದಾಸರು