ಒಟ್ಟು 839 ಕಡೆಗಳಲ್ಲಿ , 98 ದಾಸರು , 766 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಯಾ ಭ್ರಮಿತನಾದ ಮೂಢನಪರಾಧ ಶತವನು ಪಗುಣ ಮೂರರೊಳು ಬದ್ಧನಾಗಿ ಮತ್ತೆಗುಣಕಾರ್ಯ ವಿಷಯಂಗಳೊಳು ಸಕ್ತನಾಗಿಗುಣ ಹತ್ತರಭಿಮಾನಿಯಾಗಿ ುಪ್ಪಗುಣಹೀನನಿಗೆ ಜ್ಞಾನ ದೊರಕೊಳ್ಳದಾಗಿ 1ಪುಣ್ಯ ಪಾಪ ಮಿಶ್ರವೆಂಬ ಕರ್ಮಜನ್ಯವಾದ ಸ್ಥೂಲದೇಹ ತಾನೆಂಬಭಿನ್ನಮತಿಗೆ ದೊರಕೊಂಬ ಜ್ಞಾನವಿನ್ನುಂಟೆ ನಿರ್ಣೈಸೆ ಸುಗುಣ ಕದಂಬ 2ಚಂಚಲವಾಗಿಪ್ಪ ಮನವು ಅಲ್ಲಿವಂಚನೆುಂ ಮಾಳ್ಪ ಸ್ತುತಿ ಪೂಜೆ ಜಪವುಸಂಚಿತವಾುತಘ ವ್ರಜವು ಹೀಗೆವಂಚಿಪ ಮಾಯೆಯ ಗೆಲಲಾರಿಗಳವು 3ಕರ್ಮಕಲಾಪವ ಕಳಿದು ಚಿತ್ತನಿರ್ಮಲನಾಗಿ ಬ್ರಹ್ಮವ ನೆರೆ ತಿಳಿದುಹಂಮಳಿದುಳಿವದೆಲ್ಲಿಯದು ನೀನುಸುಮ್ಮನಿರದೆ ಕಾಯೆ ಸುಲಭವಾಗಿಹುದು 4ಬಂಧನವಿದ ಪರಿಹರಿಸು ಕೃಪೆುಂದಲಿ ಭವದಿಂದಲೆನ್ನನುದ್ಧರಿಸು ತಂದೆ ನೀ ತಿರುಪತಿಯರಸು ಲೋಕಬಂಧು ಶ್ರೀ ವೆಂಕಟರಮಣ ನಿರೀಕ್ಷಿಸು 5ಓಂ ವಿಶ್ವರೂಪ ಪ್ರದರ್ಶಕಾಯ ನಮಃ
--------------
ತಿಮ್ಮಪ್ಪದಾಸರು
ಮಾರ ಪ. ಮಧುರೆಗೆ ಪೋಗಿ ನಮ್ಮ ಮರೆದ ಅಲ್ಲಿಇದಿರಾದ ಖಳರನು ಜರಿದಕದನಕರ್ಕಶನೆಂಬ ಬಿರುದ ತೋರಿ ತನ್ನಪದಕೆರಗಿದವರ ಪೊರೆದ 1 ಕಂದರ್ಪಕೋಟಿಯ ಗೆಲುವ ಇವಸೌಂದರ್ಯದಿಂದತಿ ಚೆಲುವನಂದನ ಕಂದ ಭಕ್ತರಿಗೊಲಿವ ಇವನಂದನ ಮುನಿವೃಂದಕೆ ಸಲುವ 2 ಕೊಡುವನು ಬೇಡಿದ ಫಲವ ಇವಬಿಡ ಸಖಿ ಖಳರೊಳು ಛಲವಒಡಂಬಡಿಸಿ ರಿಪುವ ಗೆಲುವನೆಂದುಮೃಡ ಬಲ್ಲನಿವನ ಕೌಶಲವ3 ಇಂಥ ಭವದ ದುರಂತ ಬಲುಸಂತಾಪವನುಂಬ ಭ್ರಾಂತಅಂಥಾ ಹರಿಯೊಳೆನ ಪಂಥಸಲ್ಲಸಂತತ ನಿನಗೆ ನಿಶ್ಚಿಂತ 4 ಇನ್ನಾದರೆ ಸುಪ್ರಸನ್ನ ನಮ್ಮಚೆನ್ನಿಗ ಹಯವದನನ್ನವರ್ಣಿಸಿ ವರ್ಣಿಸಿ ನಿನ್ನವನ ತಾರೆಹೆಣ್ಣೆತೋರೆ ಬೇಗದಿ ಅವನ 5
--------------
ವಾದಿರಾಜ
ಮಾರಜನಕ ನಂಬಿದೆ ನಿನ್ನ ಪಾರುಮಾಡೆನ್ನ ಪರಮಪಾವನ್ನ ಪ ಮೀರಿತು ಭವಬಾಧೆ ಸೈರಿಸೆನಿನ್ನು ಸಾರಸಾಕ್ಷನೆ ಪರಿಹರಿಸು ಮೋಹನ್ನ ಅ.ಪ ದುಷ್ಟಸಂಸಾರಸಾಗರದೊಳು ಕೆಟ್ಟ ನಿಂದೆಗಳೆಂಬ ಘನತೆರಿಗಳು ಹುಟ್ಟಿ ಏಳುತಲಿಹವು ಸಾಲಿಗೆ ಸಾಲು ಬೆಟ್ಟದಂತೆ ಮಹ ಭೀಕರದೊಳು ಎಷ್ಟಂತ ಈಸಬೇಕಿನ್ನಿದರೊಳು ಸೃಷ್ಟಿಕರ್ತ ನೀನೆ ಮೊರೆ ದಯದೊಳು 1 ವಾಸನ್ಹಿಡಿದು ಸೆಳೆದುನುಂಗ್ವವೈದಾರು ಮೋಸ ಜಲಚರಗಳ ಮೀರಿದ ತೊಡರು ಆಸೆಯೆಂಬ ಮಹ ಸೆಳವಿನ ಜೋರು ಸುಳಿ ಮಡುವು ಸಾವಿರಾರು ಈಸುವುದು ಮುಂದಕ್ಕೆ ಅಗದು ಮಾರು ಶ್ರೀಶನೆ ಪಿಡಿದೆತ್ತಿ ಕರುಣವ ತೋರು 2 ಇಂತು ಭವದ ಸಾಗರವನ್ನು ಎಂತು ದಾಟಿ ನಾ ಪಾರಾಗುವೆನು ನಿಂತುನೋಡಲು ಅಂಜಿ ಮನಸಿಗೆ ಇನ್ನು ಭ್ರಾಂತಿಬಡುತ ನಿನ್ನ ಮರೆಯ ಹೊಕ್ಕೆನು ಚಿಂತಾಯಕ ಭಕ್ತ ತೀವ್ರಬಂದಿನ್ನು ಸಂತಸದಿಂ ಪೊರೆಯೊ ಶ್ರೀರಾಮ ಎನ್ನನು 3
--------------
ರಾಮದಾಸರು
ಮಾರುತೀ ಜ್ಞಾನ ಮೂರುತೀ ಪ ಬಾರಿಬಾರಿಗೆ ಬಹದುರಿತ ಪರಿಹಸಯ್ಯ ಅ.ಪ ಜೀವ ಕೃತಕರ್ಮ ಕ್ರಿಯೆಗಳೂ ಹಗಲಿರುಳೊಳು ಪವಮಾನ ನೀನೆ ನಡೆಸೆ ಸಡೆಸೋರು ತತ್ತ್ವೇಶರು ಭವಬಂಧ ಹರಿಸಿ ಕಾಪಾಡಯ್ಯ ಬೇಡುವೆ ಜೀಯ ತವಪಾದದಾಸ್ಯವ ಕೊಡಿಸಯ್ಯ ಯಾಕೆ ನಿರ್ದಯ 1 ಬಹುಜನುಮವನೆತ್ತಿ ಬಂದೆನೊ ಇಲ್ಲಿ ನಿಂದೆನೊ ಅಹರಹರ ನೀ ನಡೆಸೆ ನಡಿವೆನೊ ನುಡಿಸೆ ನುಡಿವೆನೊ ಇಹಪರ ಸಾಧನ ನಿನ್ನಿಂದ ಎನ್ನ ಕೈಯಿಂದ ಬಹುಪರಿ ಮಾಡಿಸಿ ಭವದಿಂದುದ್ಧರಿಸೆಂದೇ 2 ಪಂಕಜೋದ್ಭವ ಪದವ ಪಡೆವಯ್ಯ ಆರೆಣೆಯಯ್ಯ ಕಿಂಕರರೊಳಗೇಕೆ ನಿರ್ದಯ ನಂಬಿದೆನಯ್ಯ ಶಂಕರಾನತ ಪೂಜಿತಾಂಘ್ರಿಯ ದಯ ತೋರಯ್ಯ ಶ್ರೀ ವೇಂಕಟೇಶನ ಮುಂದೆ ನಿಂದಿಹ ಭಕ್ತಿಯಿಂದಿಹ3
--------------
ಉರಗಾದ್ರಿವಾಸವಿಠಲದಾಸರು
ಮಾಲಕೌಸ್ತುಭ ಸತ್ಯಭಾಮಲೋಲ ನೀಲಶಾಮಸುಂದರ ಕಾಲಕಾಲದಿ ಬಿಡದೆ ಎನ್ನ ಪಾಲಿಸಭವನೆ ಪ ಭುವನವೀರೇಳು ಸೂತ್ರಧಾರ ಭವದರೋಗಕ್ವೈದ್ಯ ಭಕ್ತಭಯ ಪರಿಹಾರ ಸತ್ಯ ಬುವಿಜಾಮನೋಹರ 1 ಕೋಮಲಾಂಗ ಭಜಕಜನರ ಕಾಮಿತಾರ್ಥ ಕೊಡುವ ಸುರ ಕಾಮಧೇನು ಕಲ್ಪವೃಕ್ಷ ಸ್ವಾಮಿ ದಯಾಕರ 2 ಸಾರ ಮಾಯಾಮೋಹವಿದೂರ ಕೇಶವ 3 ಪರಕೆ ಪರಮ ಪರಾತ್ಪರ ಮರಣರಹಿತ ಮಾರಮಣ ಉರಗಶಾಯಿ ಪರಮಪುರುಷ ಶರಣು ಸುಖಕರ 4 ನಿಗಮವೇದ್ಯ ನಿರುಪಮಾತ್ಮ ಅಗಣಿತಗಣಿತಗಮ್ಯಚರಿತ ಸುಗುಣ ಶಾಂತಾಕಾರ ಮೂರು ಜಗದ ಪಾಲಯಾ 5 ಸಕಲವಿಘ್ನದೂರ ನಿನ್ನ ಭಕುತಿಯಿಂದ ಭಜಿಸಿಬೇಡ್ವೆ ಮುಕುತಿಸಂಪದ ನೀಡಿ ಸಲಹು ಭಕ್ತವತ್ಸಲ 6 ಕಂದಮಾಡಿದಪರಾಧಗಳ ತಂದೆ ದಯದಿ ಕ್ಷಮಿಸಿ ಬಂದ ಬಂಧಗಳನು ಪರಿಹರಿಸಯ್ಯ ಸಿಂಧುಮಂದಿರ 7 ನಾನಾಯೋನಿಯೊಳಗೆ ಪುಟ್ಟಿ ಜ್ಞಾನಗೆಟ್ಟು ಬಳಲುವಂಥ ಹೀನ ಬವಣೆ ತಪ್ಪಿಸಯ್ಯ ದೀನಪಾಲ 8 ನಿರುತ ನಿನ್ನ ಚರಣದೆಡೆಗೆ ಬರುವ ಸುಲಭಮಾರ್ಗ ಆವು ದ್ವರವ ಪಾಲಿಸೊಲಿದು ಎನಗೆ ಕರುಣಸಾಗರ 9 ದೋಷದಾರಿದ್ರ್ಯಗಳೆಲ್ಲ ನಾಶಗೈದು ಹರಿಯೆ ನಿಮ್ಮ ದಾಸನೆನಿಸುದ್ಧಾರಮಾಡು ದೋಷನಾಶನ 10 ಮರೆಯಬಿದ್ದ ತರಳನನ್ನು ಕರುಣದೃಷ್ಟಿಯಿಂದ ನೋಡಿ ಸರ್ವಭಯ ಪರಿಹಾರಮಾಡು ಹರಿಸರ್ವೋತ್ತಮ 11 ನಿನ್ನ ಒಲವು ಬಲವು ಎನಗೆ ಅನ್ಯಬಲವ ಒಲ್ಲೆಸ್ವಾಮಿ ಮನ್ನಿಸಬೇಕಿನ್ನು ಮಗನ ಸನ್ನುತಾಂಗನೆ 12 ನಂಬಿ ಭಜಿಪ ಬಕ್ತಜನರ ಇಂಬುದಾಯಕ ನೀನು ಇಂಬುಗೊಟ್ಟು ಸಲಹು ಎನ್ನ ಅಂಬುಜಾಕ್ಷನೆ 13 ಏನುತಪ್ಪು ಇರಲು ನೀನೆ ದಯದಿ ಕ್ಷಮಿಸಿ ಇನ್ನು ನಾನಾಬೇನೆ ಕಳೆದು ಕಾಯೊ ಜಾನಕೀಶನೆ 14 ಚಾರುವೇದ ಪೊಗಳುವಂಥಪಾರ ನಿನ್ನ ದಿವ್ಯಮೂರ್ತಿ ತೋರಿಧನ್ಯನೆನಿಸು ಎನ್ನ ನಾರಸಿಂಹನೆ 15 ಭಾರ ನಿನ್ನದಯ್ಯ ಬಂದ ಘೋರ ತಾಪತ್ರಯಂಗಳಿಂದ ಪಾರುಮಾಡಿ ಕಾಯುವುದು ಕಾರುಣ್ಯ ನಿಧೆ 16 ಪ್ರಾಣಹಾರಿ ಹೋಗಲು ನಿನ್ನ ಧ್ಯಾನವಗಲದಂತೆ ಎನಗೆ ತ್ರಾಣಪಾಲಿಸಯ್ಯ ಮೊದಲು ಧ್ಯಾನದಾಯಕ 17 ದಾಸನರಿಕೆ ದಯದಿ ಪೂರೈಸಿ ಕಾಯಬೇಕು ದೇವ ಘಾಸಿಗೈಯದೆ ರಕ್ಷಿಸಯ್ಯ ದಾಸಪ್ರಿಯನೆ 18 ಕೆಟ್ಟಶಕುನರಿಷ್ಟ ಸ್ವಪ್ನ ತಟ್ಟಬೇಕೆ ನಿನ್ನ ಪಾದ ನಿಷ್ಠೆಯಿಂದ ಭಜಿಪರ್ಗೆ ಸೃಷ್ಟಿಕರ್ತನೆ 19 ನಿತ್ಯ ನಿರ್ಮಲಾತ್ಮ ನಿನ್ನ ನಿತ್ಯಭಕ್ತಿ ಸುಖವನಿತ್ತು ಸತ್ಯಸಂಧನೆನಿಸು ಎನ್ನ ಸತ್ಯರಾಧಾರ 20 ಮರವೆ ತರಿದು ಹರಿಯೆ ನಿಮ್ಮ ಕರುಣ ನೀಡಿ ಮರಣ ಭಯವ ಪರಿಹರಿಸಯ್ಯ ಸಿರಿಯವಲ್ಲಭ 21 ಭಾನುಕೋಟಿಪ್ರಕಾಶ ನಿನ್ನ ಧ್ಯಾನಿಸಿ ಮರೆಹೊಕ್ಕೆ ನಾನಾಬೇನೆ ಗೆಲಿಸಿ ಕಾಯೊ ದಾನವಾಂತಕ 22
--------------
ರಾಮದಾಸರು
ಮಾಲೆ ಧರಿಸಿಕೊಂಡೆ ಮಾಧವನೆಂಬ ಮಣಿ ಮಾಲೆ ಧರಿಸಿಕೊಂಡೆ ಪ ಮಾಲೆ ಧರಿಸಿಕೊಂಡೆ ನೀಲಶಾಮನದಿವ್ಯ ಲೀಲೆ ಮೂಲೋಕಕ್ಕೆ ಮೇಲುಮೇಲುಯೆಂಬ ಅ,ಪ ಭವದೂರ ಪಾದವಂದನೆಂಬ ಮುಕುಟ ಧರಿಸಿಕೊಂಡೆ ಮಾದಮರ್ದನನಂಘ್ರಿಸ್ಮರಣೆಂಬ ಕರ್ಣಕುಂಡಲಿಟ್ಟುಕೊಂಡೆ ಭುವನತ್ರಯದ ಮೇಲೆ ಜವನ ನಿರ್ಭಯಕೇಶವನ ದಯವು ಎಂಬ ಭವದೊಳಗೆ ಹೊಕ್ಕು 1 ಜಡಜನಾಭನಚರಣ ದೃಢವೆಂಬ ಮಡಿಯನುಟ್ಟುಕೊಂಡೆ ಕಡಲಶಯನನಡಿಯ ಭಕ್ತೆಂಬ ಕವಚ ತೊಟ್ಟುಕೊಂಡೆ ಪೊಡವಿಗಧಿಕ ಓರ್ವ ಒಡೆಯ ಹರಿ ಅಹುದೆಂಬ ದೃಢನಿಶ್ಚಯದ ಮೇಲ್ಮಾಡಿನೊಳಗೆ ಕೂತು 2 ಅಂಗಜಪಿತನೆಂಬ ಬಂಗಾರ ಕಂಕಣಿಟ್ಟುಕೊಂಡೆ ರಂಗ ಕೃಷ್ಣನೆಂಬ ರತ್ನದ ಉಂಗುರಿಟ್ಟುಕೊಂಡೆ ಮಂಗಲಮಯ ನೀಲಾಂಗ ಶ್ರೀರಾಮನಾಮ ಚಂದ್ರಹಾರ ಹಾಕಿಕೊಂಡು ಶೃಂಗಾರನಾಗಿ ನಿಂತೆ 3
--------------
ರಾಮದಾಸರು
ಮುಕ್ತನಲ್ಲವೇ ಭವದಿ ಮುಕ್ತನಲ್ಲವೇ ಪ ಶಕ್ತನಾದ ಹರಿಯ ಪರಮ ಭಕ್ತಿಯಿಂದ ಭಜಿಪ ನರನು ಅ.ಪ. ಮಧುವಿರೋಧಿಯಮಲ ಗುಣವ ನಲಿದು ಪಾಡುವವನು 1 ಕೇಶವಗೆ ರಮಾಬ್ಜಭವ ಸದಾಶಿವ ಶಕ್ರಾದಿ ಸುರರು ದಾಸರು ಎವೆ ಇಡುವ ಶಕ್ತಿ ಲೇಶವಿಲ್ಲವೆಂಬ ನರನು 2 ಒಂದಧಿಕ ದಶೇಂದ್ರಿಯಗಳಿಗಿಂದಿರೇಶ ವಿಷಯವ ಸಮ ಬಂಧಗೈಸಿ ವೈಷಯಿಕ ಸುಖ ತಂದು ಕೊಡುವನೆಂಬ ನರನು 3 ಈ ಪರಿಯಲಿ ತಿಳಿದು ಪುಣ್ಯ ಪಾಪಕರ್ಮ ದುಃಖಸುಖ ಜ ಯಾಪಜಯ ಮಾನಾಪಮಾನ ಶ್ರೀಪ ಕೊಡುವನೆಂಬ ನರನು 4 ವೇದ ಶಾಸ್ತ್ರಗಳಲಿ ಇಹ ವಿರೋಧವಾಕ್ಯಗಳನು ಶ್ರೀ ಪ್ರ ಮೋದ ತೀರ್ಥರುಕ್ತಿಯಿಂದ ಶೋಧಿಸುತಲಿ ಸುಖಿಪ ನರನು 5 ಕರ್ಮ ವಿಹಿತ ಅಸಜ್ಜನರು ಮಾಳ್ಪ ವಿಹಿತವಾದ ಕಾಲಕದು ಅವಿಹಿತವೆಂದು ತಿಳಿಯುವವನು6 ಸ್ವರ್ಗ ಭೂಮಿ ಕರ್ಮ ಹರಿಸುವ ಹರಿಯೆಂಬ ನರನು7 ಪರಮ ಪುರುಷಗರ್ಪಿಸುತಲಿ ಹರುಷ ಬಡುತಲಿಪ್ಪ ನರನು 8 ಈ ಶರೀರದರಸು ಶ್ರೀನಿವಾಸಾ ಮಾತೆ ಪ್ರಾಣ ಪಾರ್ವ ತೀಶರಿಹರು ಎಂದೀ ದೇಹ ಪೋಷಿಸುತಲಿ ತೋಷಿಸುವನು 9 ಪ್ರಿಯ ವಸ್ತುಗಳೊಳಗೆ ಅನ್ನಮಯನೆ ಪ್ರೀಯನೆಂದು ಅನ್ಯ ಬಯಕೆಗಳನು ಜರಿದು ಹರಿಯ ದಯವ ಬಯಸುತಿಪ್ಪ ನರನ 10 ಶತ್ರುತಾಪಕನುಳಿದು ಅನ್ಯ ಮಿತ್ರರಿಲ್ಲವೆಂದು ಅಹೋ ರಾತ್ರಿಯಲ್ಲಿ ಬಿಡದೆ ಜಗದ್ಧಾತ್ರನ ಗುಣ ತುತಿಪ ನರನು11 ಬಿಂಬನೆನಿಸಿ ಸರ್ವರ ಹೃದಯಾಂಬರದೊಳಗಿದ್ದು ಜನವಿ ಡಂಬನಾರ್ಥ ಕರ್ಮಗಳ ಆರಂಭ ಮಾಳ್ಪೆನೆಂಬ ನರನು 12 ಅಕ್ಷರೇಢ್ಯ ಬ್ರಹ್ಮ ವಾಯು ತ್ರ್ಯಕ್ಷಸುರಪ ಸುರರೊಳಗ ಧ್ಯಕ್ಷ ಸರ್ವ ಕರ್ಮಗಳಿಗೆ ಸಾಕ್ಷಿಯೆಂದು ಸ್ಮರಿಸುವವನು 13 ಅಂಬುಜ ಭವಾಂಡದೊಳು ಮಹಾಂಬರವಿಪ್ಪಂತೆ ಶ್ರೀ ನಿ ತಂಬಿನಿ ಸಹ ಸರ್ವರೊಳಗೆ ತುಂಬಿಹನೆಂದರಿತ ನರನು 14 ಅದ್ವಿತೀಯನಪೇಕ್ಷ ಭಕ್ತ ಹೃದ್ವನಜ ನಿವಾಸಿಯೆನಿಸಿ ಕದ್ದೊಯ್ದವರಘವನುಣಿಪನದ್ವಯತನೆಂಬ ನರನು 15 ಜಾಂಬವತೀರಮಣ ವಿಷಯ ಹಂಬಲವನು ಬಿಡಿಸಿ ತನ್ನ ಕಾಂಬ ಸುಖವನಿತ್ತು ನಿಜ ಕುಟುಂಬದಿಡುವನೆಂಬ ನರನು 16 ಅಣು ಮಹತ್ಪದಾರ್ಥ ವಿಲಕ್ಷಣ ವಿಶೋಕ ಜೀವರೊಡನೆ ಜನಿಸಿ ಪುಣ್ಯ ಪಾಪ ಫಲಗುಳುಣದೆ ಉಣಿಪನೆಂಬ ನರನು 17 ಕರ್ಮ ಸುದತಿಯರೊಡಗೂಡಿ ಸಮಾ ಶೂನ್ಯ ಮಾಳ್ಪನೆಂದು ಪದೇ ಪದೆಗೆ ಸ್ಮರಿಸುವವನು18 ಸ್ವಾತಿವರುಷ ವಾರಿಕಣವ ಚಾತಕ ಹಾರೈಸುವಂತೆ ಶ್ವೇತವಾಹನ ಸಖನ ಕಥೆಯ ಪ್ರೀತಿಯಿಂದ ಕೇಳ್ಪ ನರನು 19 ಲೋಕಬಂಧು ಲೋಕನಾಥ ಲೋಕಮಿತ್ರ ಲೋಕರೂಪ ಲೋಕರಂತೆ ಲೋಕದೊಳು ವಿಶೋಕ ಮಾಳ್ಪನೆಂಬ ನರನು20 ಶಾತಕುಂಭವರ್ಣ ಜಗನ್ನಾಥ ವಿಠಲನೆಂಬ ಮಹ ದ್ಭೂತ ಬಡಕರಾವು ಇವನ ಭೀತಿ ಬಿಡದು ಎಂಬನರನು 21
--------------
ಜಗನ್ನಾಥದಾಸರು
ಮುಕ್ತಿ ದೊರಕಿತು ಗುರುಕೃಪೆಯಿಂದಲಿ ಪ ಒಮ್ಮನದಿಂದಲಿ ವಿವರಿಸಿ ನೋಡಲುಕರ್ಮ ಬ್ರಹ್ಮಾಗಿ ತೋರಿತಕ್ಕ |ಅಮ್ಮಾ ಅಮ್ಮಾ ಈ ಮಾತು ಏನಂತ ಹೇಳಲಿನಿರ್ಮಳ ನಿಜ ವಸ್ತು ಕಾಣ ಬಂತಕ್ಕ 1 ಮಾತು ಮಾತಿನಲಿ ಸಪ್ತಧಾತುವಿನಲಿಮತ್ತೊಂದು ತೋರಿದ ಭುವನದಲಿ |ಎತ್ತ ನೋಡಿದರತ್ತ ವಸ್ತುವೇ ಪರಿಪೂರ್ಣವಿಚಾರದಿಂದಲಿ ಅನುಭವದಿಂದಲಿ2 ಇಂದು ಜ್ಞಾನಬೋಧಗೆ ಆನಂದವಾಯಿತುಸಂದೇಹ ಹೋಯಿತು ಮನಸಿನಲಿ |ಎಂದಿಗೂ ಅಳಿಯದ ಸೌಭಾಗ್ಯ ದೊರಕಿತುತಂದೆ ಗೋವಿಂದನ ವಾಕ್ಯದಲಿ 3
--------------
ಜ್ಞಾನಬೋದಕರು
ಮುಖ್ಯಪ್ರಾಣನೀತಾ | ನಮಗೆ | ಮುಖ್ಯ ಪ್ರಾಣನೀತ ನಮಗೆ ಮೂಲ ಗುರುವಿತ ಸತತಾ | ಸೌಖ್ಯವನು ಕರುಣಿಸಿ ನಮ್ಮ ಸಖ್ಯನಾಗಿ ಪೊರೆವನೀತಾ ಪ ನಿಗಮವೇದ್ಯನೀತಾ ನಂಬಿಕೆಯನೀವ ಚರಣ | ದುರಿತ ರಾಗಗಳ ಕಳೆನೀತಾ | ವಿಗಡ ವಿಷವನುಂಡನೀತಾ | ಹಗಲ ವಲ್ಲಭನಲ್ಲಿ ಸಂಮೊಗದವನಾಗಿ | ಓದಿದನೀತಾ | ಅಗಣಿತಾದವಿದ್ಯನೀತಾ 1 ಜಗವ ಪಾಲಕನೀತಾ ಚತುರ | ಯುಗದಿ ಬಲುದಿಟ್ಟನೀತಾ | ಪೆಗಲಿಲಿ ಭೂಮಿ ಮಗಳ ಪತಿಯ | ಜಗಳದಲ್ಲಿ ಪೊತ್ತನೀತಾ | ಹಗೆಯ ದುಶ್ಶಾಸನ್ನ ವಡಲ ಬಗೆದು ಮುಂದೆ ಚತುರ | ಮೊಗದವನಾಗಿ ವಾನರ ಬಲವ | ನಗವ ತಂದೆತ್ತಿದವನೀತಾ 2 ವರ ವೃಕೋದರನೀತಾ ಸಕಲ ಸುರರೊಳು ಬಲು ಪ್ರಬಲನೀತಾ | ಪರಮ ಮಂಗಳ ಪದದಿ ಭವದ | ಶರಧಿ ಬತ್ತಿಪನೀತಾ | ಒಮ್ಮೆ ಸ್ಮರಿಸಿದಾಕ್ಷಣ ಬರುವನೀತಾ | ಮರುತಾವತಾರನೀತಾ ತನ್ನ | ಶರಣ ಜನರ ಪೊರೆವನೀತಾ 3 ಅಸಮ ಸಾಹಸನೀತಾ ಭಕ್ತರ ವಶವಾಗಿ ವೊಳಗಿಪ್ಪನೀತಾ | ನೋಡಿ ಪೊರೆವನೀತಾ | ಅಸುರ ಲಿಂಗಭಂಗವ ಮಾಡಿ | ಬೆಸನೆ ಮತವ ಕಟ್ಟುವನೀತಾ | ಹಸನಾದ ಮುನಿ ಈ ರಕ್ಕಸರೆದೆಯ ಶೂಲನೀತಾ 4 ಜ್ಞಾನ ಪೂರ್ಣನೀತಾ ಶ್ರೀಮದಾನಂದತೀರಥನೀತಾ | ದಾನ ಧರ್ಮ ಪ್ರೇರಕನೀತಾ | ಪ್ರಾಣನೀತಾ ನಾಶವಿಲ್ಲದೆ ನಾನಾ ಮಹಿಮನೀತಾ | ನಮಗೇನೇನು ಕೊಡುವನೀತಾ | ಗಾನವಿಲೋಲ ವಿಜಯವಿಠ್ಠಲ ಧ್ಯಾನ ಮಾಳ್ಪನೀತಾ 5
--------------
ವಿಜಯದಾಸ
ಮುಂಜಾನೆ ಎದ್ದು ಮುರಹರನ ಸ್ಮರಿಸೆಲೆ ಮನವೆ ಅಂಜುವ ಭವದುರಿತ ಹಿಂಗಿಸುವನು ಧ್ರುವ ಕ್ಲೇಶ ಪರಿಹರಿಸುವನು ಭವ ನಾರಾಯಣೆನಲು ಮೀಸಲು ಮನದಲೊಮ್ಮೊ ಮಾಧವೆಂದೆನಲು ತಾ ಭಾವಿಸುವ ಹೃದಯದೊಳು ಗೋವಿಂದನು ವಾಸನೆಯ ಪೂರಿಸುವ ವಿಷ್ಣು ಯೆಂದೆನಲು ತಾ ದೋಷ ಛೇದಿಸುವ ಮಧುಸೂದನೆನಲು ಲೇಸುಗೈಸುವ ಜನುಮ ವಾಮನೆನಲು 1 ಸಿರಿ ಸಕಲ ಪದವೀವ ಶ್ರೀಧರಂದೆನಲು ತಾ ಹರುಷಗತಿನೀವ ಹೃಷೀ ಕೇಶನೆನಲು ಪಾತಕ ದೂರ ಪದ್ಮಾನಾಭೆಂದೆನಲು ಭಂಜನ ದಾಮೋದರೆನಲು ಸುರಿಸುವ ಅಮೃತವ ಸಂಕರುಷಣೆಂದೆನಲು ಹೊರೆವ ಧರೆಯೊಳು ವಾಸುದೇವೆನಲು ಪರಿಪರಿಯ ಸಲುಹುವ ಪ್ರದ್ಯುಮ್ನನೆಂದೆನಲು ಅರಹುಗತಿನೀವ ಅನಿರುದ್ದನೆನಲು 2 ಪೂರಿಸುವ ಭಾವ ಪರುಷೋತ್ತಮೆಂದೆನಲು ತಾ ತಾರಿಸುವ ಜನುಮ ಅಧೋಕ್ಷಜೆನಲು ನರಜನ್ಮುದ್ಧರಿಸುವ ನಾರಸಿಂಹೆಂದೆನಲು ಕರುಣ ದಯ ಬೀರುವ ಅಚ್ಯುತನೆನಲು ಜರಿಸುವ ದುವ್ರ್ಯಸನ ಜನಾರ್ದನೆನಲು ಊರ್ಜಿತಾಗುವುದು ಉಪೇಂದ್ರ ಎನಲು ತರಳ ಮಹಿಪತಿ ಪ್ರಾಣದೊಡೆಯ ಶ್ರೀಹರಿಯೆನಲು ಕರುಣದಿಂದದೊಗುವ ಗುರುಕೃಷ್ಣನು 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮುಂದೆ ಗಾಣದೆ ದಾರಿ ಮುದಿಗೆ ಬಿದ್ದು | ಹಿಂದು ನೋಡದೆಬಂದದ್ದು ಬರಲೆಂದು ತಾಳದೊ ಕಂದಗಳ ಪ್ಯಾಡುತಲಿದಿನ ಸುಖವೆಂದೆಂದಿಗೂ ಬೇಕೆಂದು ಬೆಂದ ಭವದಂದದಿಗೆ ನಾ ಕುಂದದೆ ನೊಂದೆ ನಿನಗೆ ವಂದಿಸದೆ 1 ದೇವ ಕಾಯಯ್ಯ ಆವ ದೈವಕ ಬಾಹದೆ | ದಯಾಭಾವಿಸಲ್ಯಾಕ ಭಾವಜಾನಯ್ಯ | ಕಾಮನ ಕಾಟಿಗೆ ಕಂಗೆಡಿಸುವದುರ್ಭಾವಗಳನು ಪರಿಹರಿಸೈ | ಹಾವಿನ ಹಗಿಹಗಳಲಿವಿಹರಿಸುತಿಹ ಜೀವದ ಜೀವನದೊಡೆಯ 2 ಕರ ವಿಡಿದಿಂದುದ್ಫಸದಿಹದು ಬಾಹಳರದು 3
--------------
ರುಕ್ಮಾಂಗದರು
ಮುದ್ದು ಮೋಹನ ದಾಸ | ತಿದ್ದಿಯನ್ನಯ ದೋಷಉದ್ಧರಿಸೊ ಬುಧತೋಷ | ನಮಿಪೆ ನಿನ್ನನಿಶಾ ಪ ದಾಸ ದೀಕ್ಷೆಯ ವಹಿಸಿ | ಕ್ಲೇಶಗಳ ಬಹುದಹಿಸಿದೇಶ ದೇಶವ ಚರಿಸಿ | ಹರಿ ಪ್ರತಿಮೆಗಳ ಭಜಿಸಿ | ಮೀಸಲೆನಿಸಿದ ಮತವ | ವ್ಯಾಸರಿಗೆ ಸಮ್ಮತವದಾಸರಾಯರ ಮಾತ | ಬೀರಿರುವ ಖ್ಯಾತಾ1 ಕರಿಗಿರಿಯ ದುರ್ಗದಲಿ | ವರ ರಥೋತ್ಸವ ಸಮಯನರಸಿಪುರ ಶೇಷಪ್ಪ | ವರ ಕುವರ ನಾಗಾಖ್ಯಗೆಕರುಣಿಸುತ ಲಂಕಿತವ | ಪರಿಸರನ ಮತರಸವಒರೆದು ಸಲಹಿದೆ ಗುರುವೆ | ನೀ ಪರಮ ಗುರುವೇ 2 ಸುಜನ | ಆರ್ತರುದ್ಧರಣಾ 3 ತಂಬ್ರೂಹಿ ಎನುವಂಥ | ತಂಬೂರಿ ನೀ ಕೊಡುತತುಂಬಿ ದ್ವ್ಯೊಭವದಿಂದ | ಪೊರೆದೆ ಮುದದಿಂದಾ |ಉಂಬುಡುವುದೂ ಹರಿಗೆ | ಕೊಂಬ ಸರ್ವವ ಹರಿಗೆಎಂಬ ಜ್ಞಾನವನಿತ್ತು | ಸಂಭ್ರಮವ ಬಿತ್ತೂ 4 ಅಮಿತ ಗುಣ ಪೂರ್ಣಾ |ಸಿರಿಪತಿ ಶ್ರೀಗುರೂ | ಗೋವಿಂದ ವಿಠ್ಠಲನಉರುತರದಿ ಭಜಿಪಂಥ | ಕರುಣಿಸೆಲೊ ಪಂಥ 5
--------------
ಗುರುಗೋವಿಂದವಿಠಲರು
ಮುಳಬಾಗಲುರಂಗಸ್ವಾ'ುೀ ಯಮ್ಮನುಳುಹಬೇಕು ಭಕ್ತಪ್ರೇ'ುೀ ಪನಳಿತೋಳು ಕಳೆಮುಖ ತಲೆಗೆ ಕಿರೀಟವುನಳಿನಲೋಚನಮೂರ್ತಿ ಕಳೆುಂದ ಬೆಳಗುವೆಅ.ಪಅದ್ವೈತ ಶಾಸ್ತ್ರಾನುಭವರು ನಮ್ಮಅಣ್ಣಯ್ಯಸ್ವಾ'ುಯ ಸುತರೂಸಾಧ್ವೀಗುರ್ರಮಗರ್ಭಾಂಬುಧಿ ಶಶಿಯಾಗಿಸದ್ವಿಲಾಸದೊಳು ಸಂಜನಿಸಿದ ಚಲುವ 1ಕೃತ್ತಿಕಾನಕ್ಷತ್ರ ಪ್ರಥಮಾ ಪಾದತಿಥಿಯು ದ್ವಾದಶಿ 'ಭವನಾಮಾ'ತವಾದ ಧನುರ್ಮಾಸ ಸ್ಥಿರವಾರದುದಯದೊಳ್‍ಪೃಥಿ'ೀಪಥನವಾದ ಪರಮಪುರುಷಮೂರ್ತಿ 2ಸದ್ಗುಣದಾಟಿನೋಟಗಳೂ ಶಾಸ್ತ್ರ'ದ್ಯ ಸಂಯೋಗಪಾಠಗಳೂ ಸದ್‍ವೃದ್ಧಿ ಸ'ಯ ವ್ಯಾಪಾರ ವರ್ಜಿತಮಾಡಿಶುದ್ಧವೈಷ್ಣವ ತುಲಸಿರಾಮರ ಭಜಿಸುವ 3ಹರಸೀ ವಾಗೀಶಕಿರೀಟಾ ಗುರುಪರಂಪರೆ ಕಥೆನುಡಿದಾಟ ಹರುಷದಿ ಮೆಚ್ಚಿಸಿ ಧರಿಸಿ ಕಿರೀಟಾ ನಿರುಪಮ ಪರತತ್ವದೊಳಗೆ 'ಶೇಷಾ 4ಪರಕಾಲಮಠಕಾಗಾ'ುಸಿದೇ ಜನರತರುಣೋಪಾಯಗಳ ಮಾಡಿಸಿದೇತಿರುಮಂತ್ರಸಂಸ್ಕಾರ ಚರಮಾರ್ಥದೊರಕಿಸಿಪರಮಪಾವನರಾಗಿ ಮಾಡುತಲಿರುತಿಹ 5ವರಯತಿಗುರುಗಳ ಭಾಷಾ ಪೂರ್ಣಪರತತ್ವಬೋಧೆ ಗುಣಭೂಷಪರಮಾನುಭವಜ್ಞಾನ ಅರು' ಭಕ್ತರನೆಲ್ಲ ಪರಲೋಕಸಾಧನ ಅರಿವು ತೋರಿಸುವಂಥಾ 6ಚನ್ನಪಟ್ಣಾದಿರಾಮಕೋಟಿ ಅಲ್ಲಿಜನಕೆನೀ ತುಂಬಿದೆ ನಾಟಿಮುನ್ನುಮಾಡಿದ ಪಾಪವೆಲ್ಲವು ಪರಿಹಾರವುನ್ನತಮಾರ್ಗವ ತೋರಿದ ಗುರುದೇವ 7ರಾಮಕೃಷ್ಣೋತ್ಸವಗಳನೂ ಬಹುಪ್ರೇಮದಿನಡೆಸಿದಾದರನೂಆಮಹಾ ಕಾರ್ಯಕಾತುರದುರಂಧರನೂುೀಮ'ಯೊಳು ಪ್ರಖ್ಯಾತನಾಗಿಹನೂ 8ಪುರಪುರಗ್ರಾಮಗಳಲ್ಲಿ ಗುರು ತಿರುನಕ್ಷತ್ರೋತ್ಸವವಲ್ಲಿಪರಮವೈಭವದಿಂದ ಸ್ಥಿರವಾಗಿ ನಡೆಯಲುಹರುಷದಿ ಸೌಲಭ್ಯ ದೊರಿಕಿಸಿ ಇರುವಂಥಾ 9ಪ್ರತಿವರ್ಷ ಧನುರ್ಮಾಸ ಭಜನೇ ಒಳ್ಳೆಶೃತಿಮೃದಂಗವು ತಾಳರಚನೇಸತತವು ಹರಿಕಥೆ ತೀರ್ಥಪ್ರಸಾದವು'ತಕರಗುರುಸೇವಾ ದುರಂಧರಬಿರುದುಳ್ಳ 10ಭರತಪುರೀವಾಸಶ್ರೇಷ್ಟಾ ಗುರುವರತುಲಸಿರಾಮ ಪ್ರತಿಷ್ಠಾಪರಿಪರಿತತ್ಸೇವಾನಿರತ ಸಂತುಷ್ಟಾಗುರುಪಾದಸರಸಿಜ ಭೃಂಗಾವೆ ಸ್ವಷ್ಟಾ 11ಅಪರೋಕ್ಷಜ್ಞಾನ ಸಂಪೂರ್ಣ ಜನ್ಮಸಫಲಮಾರ್ಗದಲ್ಲಿ ಉತ್ತೀರ್ಣಾ ಅಪರಾಧಗಳನು ಮನ್ನಿಸಿ ಶ್ರಿತಜನರನ್ನುಸಫಲಗೊಳಿಸಿ ಜನ್ಮಸಾರ್ಥಕಪಡಿಸುವ 12ಪತಿತಪಾಮರರಿಗೆಯೆಲ್ಲಾಪ್ರತಿಫಲ'ಲ್ಲಾದುಪದೇಶ ಬಲ್ಲಾ'ತಕರವಾಗಿ ತೋರ್ಪುದು ಶಿಷ್ಯಜನಕೆಲ್ಲಾ ಸತತವು ತವಪಾದ ಗತಿಮೋಕ್ಷದಾಯಕ 13ಜ್ಞಾನಭಕ್ತಿಯು ವೈರಾಗ್ಯ ಸುಜ್ಞಾನದಿ ತುಳುಕುವ ಭಾಗ್ಯಮಾನವ ಜನ್ಮದಿ ಅವತರಿಸಿರುತಿಹದೀನರ ಮುಕ್ತಿಗೆ ಕಾರಣವಾಗಿಹ 14ಅಂಗ ದ್ವಾದಶನಾಮಧಾರಾ ಬಹುಶೃಂಗಾರತರ ಮಕುಟಾಂಬರಾರಂಗುಮಂಟಪದಿ ಲಂಘಿಸಿ ರಾಗ ಪಾಡುತ್ತಮಂಗಳಕರ ತುಲಸಿನಳಿನಾಕ್ಷಹಾರುಳ್ಳ 15ಗೃಹಮಣಿ ಸುಬ್ಬಾಂಬನವರೂ ನಿಮ್ಮಮಹದಾಂಶ ಸುಗುಣವಂತೆಯರುಸಹಚರಿಸುತ ಪುರಗ್ರಾಮ ಮಾದರಿಯಾಗಿಸಹಪತ್ನಿಸ'ತ ಭಕ್ತರನು ಪಾಲಿಸತಿರ್ಪಾ 16ದಿನಚರಿಬರುವ ದಾಸರನೂ ಮನದನುವಾರಿತಾನ್ನದಾನವನೂಮನದೊಳು ಭಕ್ತರವೊಡಲ ಪರೀಕ್ಷಿಸಿಘನವಾದ ಮೋಕ್ಷಾರ್ಹವಾದನರ ಕೈಪಿಡಿದ 17ಅಂಕಿತಮಾಡದೆ ುಹೆನೂ ಚಕ್ರಾಂಕಿತ 'ಲ್ಲದ್ಯೋಚಿಪೆನೂ ಕಿಂಕರನಾಗಿ ಬೇಡುವೆ ಪಾದವನೂಅಂಕಿತಕನುವiತಿ ಆಗಹೊಂದುವೆನೂ 18ಸೋಮೆಗೌಡನ ಪುರವಾಸಾ ರಂಗಸ್ವಾ'ುದಾಸರ ದಾಸದಾಸಪ್ರೇಮಭೈರವಗೌಡನೊಳಗೆ ತೋರಿಸಬೇಕು ಸ್ವಾ'ುನಿನ್ನಾಜ್ಞೆಗೇ ಬಾಗಿದಂಕಿತ'ದು19
--------------
ಮಳಿಗೆ ರಂಗಸ್ವಾಮಿದಾಸರು
ಮೂಕನಾಗೋ ಮನವೆ ನಿನಗೆ ಯಾಕೀ ಲೋಕ ಗೊಡವೆ ಪ ಮೂಕನಾಗಿ ಬಹುಜೋಕೆಯಿಂದ ನಡಿ ಏಕಾಂತ ಗುಟ್ಟೀ ಲೋಕರಿಗರುಹುದೆ ಅ.ಪ ಹೇಳಿದರೇನಾದೋ ನೀ ಬಲು ಕೇಳಿದರೇನಾದೊ ಹೇಳಿಕೆ ಕೇಳಿಕೆ ಗಾಳಿಯ ಮೊಟ್ಟ್ಯೆಂದು ನೀಲಶಾಮನ ಮನದಾಲಯದೊಳಗಿಟ್ಟು 1 ಅವನಿ ಗೊಡವೆ ಯಾಕೋ ಹರಿಯೆಂದು ಭವಭಯವನು ಕಳಕೋ ದಿವನಿಶಿ ನಿಜದನುಭವದೊಳಗಾಡುತ ಭವಗೆಲುವಿನ ಸುದ್ದಿ ಭವಿಗಳಿಗುಸುರದೆ 2 ಪಾದ ಪಿಡಿಯೋ ಮುಂದಿನ್ನು ಹುಟ್ಟು ಸಾವು ಗೆಲಿಯೊ ದುಷ್ಟಮತಿಗಳ ಗೋಷ್ಠಿಗೆ ಹೋಗದೆ ಬಿಟ್ಟಗಲದೆ ನಿಜಪಿಡಿದು ನೀತಿ 3 ಮತ್ರ್ಯಜನರ ಇದಿರು ನೀ ಬಲು ಗುಪ್ತದಿಂದಿರು ಚದುರ ಸತ್ಯತಿಳಿದು ಹರಿ ಸರ್ವೋತ್ತಮನಂಘ್ರಿ ಚಿತ್ತದಿ ನಿಲ್ಲಿಸಿ ಅತ್ಯಾನಂದಗೂಡಿ 4 ನಂಬಿಗಿಲ್ಲದಲ್ಲಿ ಸುಬೋಧ ಡಂಬವೆನಿಪುದಲ್ಲಿ ಜಂಬವಡಿಯದೆ ಕುಂಭಿನಿಯೊಳು ನೀ ನಂಬಿ ಶ್ರೀರಾಮನ ಗುಂಭದಿಂ ಭಜಿಸುತ 5
--------------
ರಾಮದಾಸರು
ಮೂರ್ತಿ ಚಿನ್ಮಯಾತ್ಮಕ ರೂಪ ಸಂತತದಿ ನೆನೆವವರ ಸಲಹೊ ಕರುಣಿ ಪ. ತುಂಬಿ ಇರುತಿಹುದು ಎಂತು ನಿನ್ನಾಟ ಪೇಳ್ ನಿಗಮವೇದ್ಯ ಚಿಂತೆ ಎನಗೊಂದಿಲ್ಲ ಅಂತರಂಗದಿ ನೆಲೆಸಿ ಸಂತತದಿ ನಿನ ಧ್ಯಾನ ನೀಡೆಂಬೆನೊ 1 ದೇಶಾಧಿಪತಿಗಳಿಗೆ ಕೋಶ ತುಂಬದ ಚಿಂತೆ ದೇಶ ತಿರುಗುವನಿಗೆ ಹಣದ ಚಿಂತೆ ದೇಶಸ್ಥನಾದವಗೆ ರಾಜಭಟರಾ ಚಿಂತೆ ಕಾಶಿಯಲ್ಲಿರುವವಗೆ ಮನೆಯ ಚಿಂತೆ 2 ಜಾರಿಣಿಗೆ ವಿಟನೊಬ್ಬ ಬಾರದಿರುವ ಚಿಂತೆ ಚೋರನಿಗೆ ರವಿ ಮುಳುಗದಿರುವ ಚಿಂತೆ ಮಾರನಿಗೆ ಯೋಗಿಗಳ ಹೃದಯ ಭೇದಿಪ ಚಿಂತೆ ಪತಿ ಒಲುಮೆ ಪಡೆವ ಚಿಂತೆ 3 ಕರ್ಮತತ್ಪರರಿಗೆ ಹರಿಮರ್ಮವರಿಯದ ಚಿಂತೆ ಧರ್ಮಪುರುಷಗೆ ಕಲಿಬಾಧೆಯ ಚಿಂತೆ ವೇದಶಾಸ್ತ್ರಜ್ಞನಿಗೆ ವಾದಿಯ ಭಯ ಚಿಂತೆ ಹಾದಿ ನಡೆವಗೆ ದುಷ್ಟ ಜನರ ಚಿಂತೆ 4 ಸಾಧು ಸಜ್ಜನರಿಗೆ ಬಾಧೆ ಕೊಡುವರ ಚಿಂತೆ ಹಾದಿ ತಪ್ಪಿದ ಪಾಪಿಗೆ ಯಮನ ಚಿಂತೆ ವಾಣಿಜ್ಯತನದವಗೆ ಹಣವು ಗಳಿಸುವ ಚಿಂತೆ ಮಾನವಂತರಿಗೂನ ನುಡಿಯ ಚಿಂತೆ 5 ಇಂತೆಲ್ಲರಾ ಚಿಂತೆ ಇರಲಿ ಕೇಳ್ ಹರಿಯೆ ಚಿಂತೆ ಬಿಡಿಸೆನಗೆ ನೀನೊಲಿದು ದೊರೆಯೆ ಚಿಂತನೆಗೆ ಸಿಗದಿಹುದು ನಿನಗೆ ಸರಿಯೆ ಚಿಂತಿಪರಿಗೊಲಿವಂಥ ಸಿರಿಕಾಂತ ಹರಿಯೆ6 ಶಾಂತ ಮೂರುತಿ ಪರಮ ಕರುಣಾಳುವೆನ್ನುತಲಿ ಎಂತೆಂತೂ ಸಜ್ಜನರು ಸ್ತುತಿಪುದನು ಕೇಳುತಲಿ ಇಂತು ನಿನ ಪದವನಾನ್ಹಾರೈಸಿ ಬಂದರೂ ನಿಂತರೂ ಎದುರಲ್ಲಿ ನೀನೊಲಿಯಲಿಲ್ಲ 7 ಕರಮುಗಿದು ಎರಗಿದರೂ ಶಿರಬಾಗಿ ನಮಿಸಿದರೂ ಚರಣದಲಿ ತನುಮನ ಒಪ್ಪಿಸಿದರೂ ಕರಗಲಿಲವು ಮನಸು ಕರುಣಪುಟ್ಟಲು ಕಾಣೆ ಭರವಸೆಯು ನಿನ್ನಲ್ಲಿ ಮೂಡಲಿಲ್ಲ 8 ಶಿರದಿ ಕರವಿಡಲಿಲ್ಲ ತೊರೆದೆಯೊ ಜರಿದೆಯೊ ವರಭಕ್ತಿ ಸಾಲದೊ ಗುರುವಿಕೆಯೊ ದೊರೆತನವೊ ಅರಹೊಟ್ಟೆ ಜೀವಿಸುತ ಅರಿಯದೆ ಮತ್ತೊಂದು ಇರುಳು ಹಗಲಾಲ್ಪರಿವ ತೆರವು ತೋರದೊ ಮನಕೆ 9 ಸರಿಯಲ್ಲ ಸರಿಯಲ್ಲ ಕರುಣಾಳುವೆಂಬುವೋ ಬಿರುದುಳಿವ ತೆರವಿಲ್ಲ ಬಿಂಕಪಟ್ಟರೆ ಈಗ ಕರೆದು ಮನ್ನಿಸೊ ಪಾಂಡುರಂಗವಿಠ್ಠಲ ದೇವ ವರ ಪುಂಡಲೀಕಗೆ ಒಲಿದದ್ದು ನಿಜವಾಗೆ 10 ಪರಿಪರಿಯ ಭಕ್ತರನು ಪೊರೆದದ್ದು ನಿಜವಾಗೆ ಹರಿದಾಸ ಸಂತತಿಗೆ ಮನೆದೈವ ನಿಜವಾಗೆ ಸರಿಯಿಲ್ಲದಾ ದೈವ ನೀನೆಂದು ನಿಜವಾಗೆ ಹೊರವೊಳಗೆ ಒಂದಾಗಿ ಕರಪಿಡಿದು ಸಲಹಿನ್ನು 11 ಗುರುಕೊಟ್ಟ ವರಬಲದಿ ಶರಣು ಪೊಂದಿದೆ ನಿನಗೆ ಚರಣದಲಿ ಬಿದ್ದಿರುವೆ ಪರಮ ಪುರುಷನೆ ದೇವ ಸ್ಮರಪಿತನೆ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಣೆ ಮಾಡಿದ ಮೇಲೆ ಭವದ ಭಯ ಉಂಟೆ 12
--------------
ಅಂಬಾಬಾಯಿ