ಒಟ್ಟು 1050 ಕಡೆಗಳಲ್ಲಿ , 102 ದಾಸರು , 867 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಸ ನಿಯಾಮಕ ದೇವತೆಗಳ ವರ್ಣಿಸುವೆನು ಪ ಶ್ರೀಶನಾಜ್ಞೆಯಲಿ ಸಕಲ ಸುಜನರಿದ ಕೇಳಿ ಅ.ಪ. ಸಹವೆಂಬ ಮಾರ್ಗ ಶಿರದಿ ಪುತ್ರ ನಾಮಕ ಸವಿತೃ ಮಹಾ ವಿಶಾಲಾಕ್ಷಿರಮಣ ಕೇಶವ ನಿಯಾಮಕನು ಸಹಸ್ಯವೆನಿಪ ಪುಷ್ಯದೊಳು ವಿಷ್ಣುವೆನಿಪನು ಮಹಲಕುಮಿರಮಣ ನಾರಾಯಣನಿದಕೆ ಕರ್ತೃ 1 ತಪವೆನಿಪ ಮಾಘದೊಳು ಅರುಣನಾಮಕ ಸವಿತೃ ಚಪಲಾಕ್ಷಿ ರುಕ್ಮಿಣೀರಮಣ ಮಾಧವನು ದೊರೆಯು ತಪಸ್ಯವೆನಿಪ ಫಾಲ್ಗುಣದಿ ಸೂರ್ಯನೆನಿಪನು ಸುಪವಿತ್ರೆ ಧಾತ್ರೀಪತಿ ಗೋವಿಂದನಧಿದೇವತೆ2 ಮಧುಮಾಸವಾದ ಚೈತ್ರದೊಳು ವೇದಾಂಗನು ಪದುಮಾಕ್ಷ ಮಾ ರಮಾರಮಣ ವಿಷ್ಣು ನಿಯಾಮಕನು ಮಾಧವನೆನಿಪ ವೈಶಾಖದಿ ಭಾನುವೆಂದೆನಿಸುವನು ಮಧುಸೂದನ ನಾಮಕ ಮೋಹಿನೀ ಪತಿಯು 3 ಶುಕ್ರವೆನಿಪ ಜ್ಯೇಷ್ಠದೊಳು ಇಂದ್ರನೆನಿಪ ಸವಿತೃ ತ್ರಿ ವಿಕ್ರಮನಿದಕಧಿಪತಿಯು ಪದುಮಾಕ್ಷಿರಮಣ ಅಕ್ಕರದಿ ಶುಚಿಯೆನಿಪಾಷಾಡದಿ ರವಿಯೆನಿಪನು ಚಕ್ರಧರ ವಾಮನನಿದರಧಿಪತಿ ಕಮಲಾರಮಣ 4 ನಭವಾದ ಶ್ರಾವಣದಿ ಗಭಸ್ತಿಯೆನಿಸುವನು ತ್ರಿಭುವನದಧಿಪತಿ ಶ್ರೀಧರನು ಕಾಂತಿಮತಿರಮಣ ನಭಸ್ಯವೆನಿಪ ಭಾದ್ರಪದದಿ ಯಮನೆನಿಸುವನು ಇಭವರದ ಹೃಷಿಕೇಶ ಅಪರಾಜಿತಾ ರಮಣ 5 ಒದಗಿಹ ಇಷವೆನಿಪಾಶ್ವೀಜದೊಳು ಸ್ವರ್ಣರೇತಾ ಇದಕಭಿಮಾನಿ ಪದಮಾವತಿಪತಿ ಪದುಮನಾಭ ಉದಯಿಸುತಿಹ ಊರ್ಜಿಯೆನಿಪ ಕಾರ್ತಿಕದಿ ದಿವಾಕರ ರಾಧಾರಮಣ ದಾಮೋದರನಿದರಭಿಮಾನಿ 6 ಆಯಾಯ ಮಾಸದಲಿ ಮಾಳ್ಪ ಸಕಲ ಕರ್ಮಗಳನು ಆಯಾಯಭಿಮಾನಿ ದೇವರುಗಳಿಗರ್ಪಿಸಿ ಮಾಯಾರಮಣ ಶ್ರೀ ರಂಗೇಶವಿಠಲನ ನೆನೆಯುತ ಆಯಾಸವಿಲ್ಲದೆ ಪರಮಪದವನು ಪಡೆಯಿರೊ 7
--------------
ರಂಗೇಶವಿಠಲದಾಸರು
ಮಾಹಾನುಭಾವರೇ ಪ ಸದಮಲಾನಂದ ಪಡಿರೋ ನಮ್ಮವರೇ ಮೊದಲು ವಂದನೆ ಹರಿಗೆ ಅರ್ಪಿಸಿ ಅ.ಪ ಪದುಮನಾಭನ ಸದಮಲಂಘ್ರಿಯ ಅಧಿಕ ನಿಖಿಳದೇವರೊಳಗೆಂದು ಕದಲಗೊಡದಂತೆ ಮನವ ನಿಲ್ಲಿಸಿ ವದನದಿಂ ವಿಧವಿಧದಿ ಪೊಗಳುತ 1 ಆದಿ ಅಂತ್ಯಿಲ್ಲದಾದಿವಸ್ತು ಸಾಧುಸಜ್ಜನಪ್ರೇಮಪೂರ್ಣೇಂದು ವೇದ ವೇದಾಗಮ್ಯ ಮಹ ಪಾದ ಮೇಲೆಂದು 2 ನಿಗಮ ಆಗಮಗಳಿಗೆ ನಿಲುಕದ ಸುಗುಣಸಂತರ ಕರುಣಮಂದಿರ ಬಗೆದು ಭಕುತರ ಭಾವ ನೀಡಲು ರಘು ಶ್ರೀರಾಮಗೆ ಸಾಟಿಯಿಲ್ಲೆಂದು 3
--------------
ರಾಮದಾಸರು
ಮುಕ್ತಿ ಹೇಗೆ ಬಂದೀತೊ ಪಾಮರನೆ ಕೇಳೊ ವಿ- ರಕ್ತಿಯಾಗದೆ ಶಕ್ತಿ ಕಾಣಾದೆ ಪ ದುರ್ಜನ ದುಷ್ಟರಾದವರಾ ದೂರಮಾಡಿ ಮನದಿ ಸಾಧು ಕರುಣಾವು ಪಡುವಾ 1 ವೇದಶಾಸ್ತ್ರ ಸಂಪನ್ನಾರು ಆದ ಪಂಡಿತಾರು ಕೂಡಿ ಭೇದಾಭೇದಾರ್ಥಗಳು ಎಲ್ಲಾ ವಿದಿತವಾಗಿ ತಿಳುವ ಜ್ಞಾನಾ 2 ಪಾದ ಹಿಡದೂ ನಿಖರನಾಗಿ ನಿಶ್ಚಲನಾಗಿ ನಿಂತು ಸೇವೆ ಮಾಡುವಂಥಾ 3 ನಿತ್ಯ ಕರ್ಮಾ ನೇಮ ವೃತಾ ಸತ್ಯವಾಗಿ ನಡಸುವಂಥಾ ಉತ್ತುಮಾರ ಮನೆಗಳಲ್ಲಿ ಭೃತ್ಯನಾಗಿ ನಡೆಸೆಂಬುವಾ 4 ಮರ್ಮಮಂತ್ರಾಚಮನಾಗಳಲ್ಲಿ ಸರ್ವಕಾಲ ಹರಿಯ ಭಜಿಸಿ ಸತ್ಪುರಷಾ ತಾನಾಗುವಂಥಾ 5 ನಾನಾ ಪರಿಯಲಿ ಸ್ಮರಣೆಯ ಮಾಡಿ ನಾರಾಯಣನಾ ಕೃ------------- 6 ಚರಣವನ್ನೆ ಪೂಜಿಸಿ ಧನ್ಯನಾ----ಸನ್ಮಾರ್ಗವು ಕಾಣುವಂಥಾ 7
--------------
ಹೆನ್ನೆರಂಗದಾಸರು
ಮುಖ್ಯಪ್ರಾಣ ಕರವೆತ್ತಿ ನಿಂದ ಪ ಹರಿಯೆ ಪರನೆನ್ನದವನ ಹಲ್ಮುರಿವೆನೆಂದು ಅ.ಪ. ಸಿರಿ ರಾಮನಾಜ್ಞೆಯನು ಸಿರದೊಳಾನುತ ಬಂದು ವರಕಪಿಗಳೊಡಗೂಡಿ ಸಿರಿದೇವಿಯನರಸುತ ಶರಧಿತಟಕೆ ಬಂದು ಸಿರಿಪೋದ ಪಥವರಿಯದೆ ಪರಿತೋರದಿರ್ದ ಹರಿವರರಿಗಭಯವಿತ್ತು 1 ಇರುಳು ಇಂದ್ರಜಿತುವಿನ ಶರಹತಿಯಲಳಿದಂಥ ಸಿರಿ ರಾಮ ನೋಡುತ ಮರುಗುತಿರಲಂದು ವರ ಜಾಂಬವನ ಸುಮತಿಯಲಿ ತ್ವರಿತದಿ ಸಂಜೀವನ ಗಿರಿಯ ತಹೆನೆನ್ನುತ 2 ಭರದಿ ದಶಶಿರನು ತಾನರಿಯದೆ ಹನುಮನ ಬಲ ಭರವಸದಲಿ ಮಾಡಿ ಮೂರು ಗುದ್ದಿನ ಪಂಥ ಕರಹತಿಗೆ ಕಂಗೆಟ್ಟು ಧುರವ ಬಿಟ್ಟೋಡುತಿರೆ ಅರಸಿ ಅಸುರನ ಪಿಡಿದ ಹರಿಸು ಋಣವನೆಂದು 3 ದುರುಳ ಕೀಚಕನಂದು ಕರಿಗಮನೆಯನು ಕಂಡು ಸ್ಮರಶರಹತಿಯಿಂದ ಉರುತರದಲಿ ನೊಂದು ಹರಿಣಾಕ್ಷಿಯನು ಬರಿಸಿ ಸೆರಗ್ಹಿಡಿದೆಳೆದುದನು ತರಳೆ ಮುಖದಿ ಕೇಳವನ ಸಿರ ಮುರಿವೆನೆಂದು 4 ಕುರುಪತಿಯ ಸಭೆಯಲಿ ದುರುಪದಿ ಗೈದ ಶಪಥ ಮರೆಯದೆ ದುಶ್ಶಾಸನನ ಧುರದಿ ಕೆಡಹಿ ಕೊಂದು ಉರ ಬಗೆದು ಕರುಳ ನಿಜತರುಣಿಗೆ ಮುಡಿಸುವಾಗ ಬರಲಿ ಬಿಡಿಸುವರೆಂದು ಉರು ಗದೆಯನು ಪಿಡಿದು 5 ಹರಿಹರರು ಸರಿಯೆಂದು ಹರಟುತಿರ್ದವರನು ಗುರುತರ ವಾಕುಗಳೆಂಬ ಬಿರುಬಾಣದಿಂದ ಗರ ಹೊಡೆದವರ ಮಾಡಿ ಪರತತ್ವವನು ಪೇಳಿ ಭರದಿ ನಡೆದೆ 'ಪರಮೋನಹತಿ ಸದೃಶ' ವೆಂದು 6 ಸರುವರಂತರ್ಯಾಖ್ಯ ಹರಿಯಾಜ್ಞಾನುಸಾರ ಸರುವ ಜೀವರಿಗೆ ತಾನು ಗುರುವೆನಿಸಿಕೊಂಡು ಸಿರಿ ರಂಗೇಶವಿಠಲನ ದುರಿತ ಭಯವಿಲ್ಲೆಂದು 7
--------------
ರಂಗೇಶವಿಠಲದಾಸರು
ಮುಟ್ಟದಿರಿಗೋಪವನಿತೆಯರು ಗಲಭೆಯದೇನುತೊಲಗಿರೇ ತೊಟ್ಟಿಲಂ ತೂಗದಿರಿ ಕೃಷ್ಣನೆದ್ದರೆ ಕಾಡದಿರನೆನ್ನಾ ಪ ಮಿಸುನಿದೊಟ್ಟಿಲೊಳಂತೆ ದುಪ್ಪದುಪ್ಪಳಿನ ಹಾಸಿನಲಿ ಮಂದಾರ ಕುಸುಮಗಳ ಜಾಜಿ ಮಲ್ಲಿಗೆ ಸೇವಂತಿಗೆ ಪಂಕೇರುಹದಾ ಎಸಳುಗಳ ಪಸರಿಸಿಯೆ ಮಲಗಿಸಿದೆ ಪಾಲೆರದು ಮೊಲೆಯೂಡಿ ಪೀತಾಂಬರವನೆ ಹೊದ್ದಿಸೀ | ಹಸುಳೆಯನಮಲ ಕೋಮಲಾಂಗನನಂಗಕೋಟಿಗಳ ನಾ ಚಿಸಿ ಚಿತ್ತಿನ ಪುತ್ಥಳಿಯ ಸಚ್ಚಿದಾನಂದ ಮೂರುತಿಯಾ ಬಿಸಜಾಕ್ಷನಂ ಕೃಷ್ಣನಂ ಬಲದೇವಸಹಜಾತನಂ ಕುಸುಮನಾಭನಂ ಜಲದನೀಲನಂ ದಿವಿಜಪಾಲನಂ 1 ಬಿಡದೊತ್ತಿಯಪ್ಪಿ ಪರಮಾನಂದ ಜಲಧಿಯೊಳಗೋಲಾಡಿ ಸಂತುಷ್ಟಿಯಿಲ್ಲವಲ್ಲಾ ಒಡೆಯನೋ [ಇವ]ಯೆಮ್ಮೊಡನೆ ಪೊಡವಿಗೆ ಜೀವಂಗಳಿಗೆ ಒಡೆಯನೆಂಬಿರಿ ಪರಲೋಕದಾನಂದಕ್ಕೆ ಒಡೆಯನೇ ನಿಮಗೆನ್ನ ಕಂದ ಮುದ್ದು ಭಾಗ್ಯದ ಬೆಳಸು ಮಡಗಿ ತೊಟ್ಟಿಲೊಳಚ್ಯುತನನಂತನಂ ಮುಕುಂದನ 2 ನೋಡಲಿಹೆವೆಂತು ಲಾವಣ್ಯಸಿಂಧುವನೊಲಿದು ಸರವೆತ್ತಿ ನಾಡ ಹೆಂಗಳ ದೃಷ್ಟಿದೋಷದಿಂ ಪಾಲ್ಗುಡಿದು ನಲವಿಂದ ಲಾಡಲೊಲ್ಲನು ವಸುಂಧರೆಯ ತೊಟ್ಟಿಲಶಿಶುಗಳಂದದಿ ಮೊಲೆಯ ನೂಡಿದರೆ ಬಾಯ್ದೆರೆಯಲೊಲ್ಲ ಮಂತ್ರದಿಯಂತ್ರದಿಂದೊಮ್ಮೆ ಯೂಡಿ ಮಲಗಿಸಿದೆ ವಿಶ್ವನಂ ತ್ರೈಜಗಪ್ರಾಜ್ಞಮೂರುತಿಯಂ3 ರವಿಯಹುದು ಬಿಸಿಗದಿರದೆಲ್ಲಿ ಚಂದಿರನಹುದು ಹಿಮವೆಲ್ಲಿ ನವದೆಲ್ಲಿ ಇಂದುಧರನಹುದು ಫಣೆಗಣ್ಣೆಲ್ಲಿಯೆಂದು ಬರಿದೇಕೆ ಮರುಳಾಗುವಿರಿ ಅವಿರಳನದ್ವಯನನಾದಿಮಧ್ಯಾಂತರಹಿತನ ಧರ್ಮಸ್ಥಾಪನಾಚಾರ್ಯ ನ[ವಂ] ಮಹೀಭಾರವ ತವಿಸಲೆಂದವÀತರಿಸೆ ಜನನವಂ ಪಡೆದ ತಂದೆಯಂ ಭುವನಪಾವನ ಸುಪ್ರಗಧಾಮೂರ್ತಿಯಂ ಶ್ರವಣಮಂಗಳಸತ್ಕೀರ್ತಿಯಂ4 ನಿಗಮವೀ ಹರಿಯ ಮಹಿಮಾ ಸಮುದ್ರದ ತಡಿಯ ತೆರೆಗಳಲಿ ಮಿಗೆ ಸಿಲುಕಿ ಮುಳುಗಲರಿಯದೆ ಬೀಳುತೇಳುತಾಳುತಲಿವೇಕೋ ಮೊಗನಾಲ್ಕನಯ್ಯನ ಸಾಸಿರದೈವವಂ ಪಡೆದ ತಂದೆಯಂಅದೆಂತಲೆಂದಾರರಿವರೂ ಸುಗುಣ ಸರ್ವಜ್ಞನಂ ಸರ್ವಭೂತರಾತ್ಮಕನಂ ಜಗದೊಳ್ ಹೊರಗೆ ಪೂರ್ಣನಾಗಿ ಭುವನವ ಜಠರದೊಳಗಿಟ್ಟ ಅಗಣಿತನ ವೈಕುಂಠ ಪತಿಯ ಘನತೆಯನರಿತು ಪೊಗಳುವರೇ ಮುಗುದೆಯರು ನೀವೆತ್ತ ಮಾಯೆಯ ಕುಣಿಸಿ ನಗುವ ಹರಿಯೆತ್ತಾ 5
--------------
ಬೇಲೂರು ವೈಕುಂಠದಾಸರು
ಮುದದಿ ಪಾಲಿಸೊ ಮುದತೀರಥರಾಯಾ ಸದ್ಭುಧ ಜನಗೇಯಾ ಪ ಪದುಮನಾಭ ಪದ ಪದುಮ ಮಧುಪ ಸದಯಾ ಸದಮಲ ಶುಭಕಾಯಾ ಅ.ಪ ವದಗಿ ರಾಮಕಾರ್ಯದಿ ನೀ ಮನಸಿಟ್ಟಿ ಲಂಕಾಪುರ ಮೆಟ್ಟಿ ಹೆದರದೆ ದಿತಿಜರನೆಲ್ಲ ಕೊಂದುಬಿಟ್ಟೆ ಪುಚ್ಛದಿ ಪುರಸುಟ್ಟ ಕದನದಿ ಭೀಮ ವೃಕೋದರ ಜಗಜಟ್ಟಿ ಸಂನ್ಯಾಸತೊಟ್ಟಿ1 ಸೀತಾಶೋಕ ವಿನಾಶನ ಮಹಂತಾ ಮಹಬಲಿ ಹನುಮಂತ ವಾತಜ ವಾರಿಜ ಜಾತನಾಗುವಂತಾ ಖ್ಯಾತಿಯುಳ್ಳ ವಂಥಾ ಜಯವಂತಯತಿನಾಥನೆ ಶಾಂತಾ 2 ಶಿರಿಗೋವಿಂದ ವಿಠಲನ ಪ್ರೀತಿ ಕಂದಾ ಭೀಮನೆ ಆನಂದಾಗರಿದು ಮುರಿದು ಪರಮತವನೆ ಆನಂದಾ ಮುನಿ ರೂಪದಲಿಂದ ಬದರಿಗೆ ನಡೆತಂದಾ 3
--------------
ಅಸ್ಕಿಹಾಳ ಗೋವಿಂದ
ಮುದ್ದು ಮೋಹನದಾಸರೆ | ಎನ್ನನು ಬೇಗ ಉದ್ಧರಿಸಿರಿ ಪ್ರೀತರೆ ಪ. ಬಿದ್ದಿಹೆ ದುರ್ವಿಷಯಾಂಧ ಕೂಪದೊಳೀಗ ಶುದ್ಧ ಜ್ಞಾನವನಿತ್ತು ಪದ್ಮನಾಭನ ತೋರಿ ಅ.ಪ. ಪರಮಯತಿಚರ್ಯರೆ | ಈ ಜಗದೊಳು ವರ ಭಕ್ತಿವೆಗ್ಗಳರೆ ತರಳತನದಲಿ ಪಾದಚಾರಿಗಳಾಗಿ ಧರೆಯ ಕ್ಷೇತ್ರವನೆಲ್ಲ ಚರಿಸಿರ್ಪ ವಶಗೈದು ಹರಿಯ ಮೆಚ್ಚಿಸಿ ದಾಸಭಾವದಿ ಪರಿಪರಿಯ ಅಂಕಿತದಿ ಶಿಷ್ಯರ ಪರಮ ಸಂಭ್ರಮಗೊಳಿಸಿ ಮೆರೆಯುತ ಸಿರಿವರನ ಪದಸಾರಿದಂಥ 1 ಶೀಲವಂತರೆ ನಿಮ್ಮನು | ಕೊಂಡಾಡೆ ಈ ಸ್ಥೂಲಮತಿಗೆ ಸಾಧ್ಯವೆ ಕಾಲಕಾಲದಿ ಹರಿಲೀಲೆಯ ಪಾಡುತ ನೀಲವರ್ಣನ ಹೃದಯಾಲಯದಿ ಕಂಡು ಮೂಲರೂಪಿಯ ಪಾದಕಮಲದಿ ಲೋಲುಪಡುತಲಿ ಓಲ್ಯಾಡಿದ ಬಹು ಶೀಲಗುಣಗಣಪಾಲರೆ ಎನ್ನ ಪಾಲಿಸಿರಿ ಸಿರಿಲೋಲನ ತೋರಿ 2 ಸಂದೇಹವಿನ್ಯಾತಕೆ | ಮಂತ್ರದ ಮನೆ ಮಂದಿರದೊಳಗಿರೆ ಬಂದಿರಿ ದಾಸತ್ವದಿಂದ ಧರೆಯೊಳು ನಂದಕಂದನ ಲೀಲೆ ಅಂದ ಪಾಡುತಲಿ ಅಂದು ಗ್ರಂಥಗಳನೋದಿ ಪದವನು ಒಂದು ರಚಿಸಿ ಸಾಲದೆ ಮು- ಕುಂದನಾ ಗುಣವೃಂದ ಪೊಗಳಲು ಚಂದದಿಂದ ವಸುಂಧರೆಯೊಳು 3 ವರತತ್ವ ಅಂಶದಲಿ | ಶ್ರೀ ಗುರುವಿಗೆ ತಾರಕರೆನಿಸಿದಿರಿ ಸಾರಿರೆ ನಿಮ್ಮ ಪದ ಸ್ವಪ್ನದೊಳು ತೋರಿ ತೀರುಥವನೆ ಕೊಟ್ಟು ಸುಮ್ಮನಿರಲು ಗುರು ಸಾರಿ ಬಂದು ಬದಿಯಲಿ ನಿಂದು ಭೂರಿ ಕರುಣವ ಮಾಡಬೇಕೆಂದು ತೋರಿ ಪೇಳಲು ಹರಿ ನಿರ್ಮಾಲ್ಯ ಅಪಾರ ಕರುಣದಿ ಕೊಟ್ಟು ಪೊರೆದಿರಿ 4 ಸ್ತುತಿಸಲಳವೆ ನಿಮ್ಮನು | ಈ ಜಡಮತಿ ಕೃತಕವಲ್ಲವು ಇದಿನ್ನು ಅತಿಪ್ರೇಮ ಗುರುಗಳ ಹಿತದಿಂದ ನುಡಿದುದು ಚ್ಯುತದೂರ ಗೋಪಾಲಕೃಷ್ಣವಿಠ್ಠಲನ ಸತತ ಸ್ತುತಿಸುವ ಮತಿಯ ಪಾಲಿಸಿ ಪಥವ ತೋರಿರಿ ಕರ್ಮಜರೆ ಬೇಗ ಸತತ ಶ್ರೀ ಗುರು ವ್ರತವ ಪಾಲಿಪ ಮತಿಯ ದೃಢದಲಿ ಹಿತದಿ ಕರುಣಿಸಿ 5
--------------
ಅಂಬಾಬಾಯಿ
ಮುರುಳಿಯ ನೂದಿದನಾಗ ಹರಿ ವಿಧವಿಧರಾಗದೊಳೀಗ ಪ ತುರುಗಳ ಕಾಯುತ ತರಳರ ಒಡಗೂಡಿ ಸುರಮುನಿವಂದಿತ ಸರಸಿಜನಾಭನು ಅ.ಪ ಚಂದದ ಪಾಡಗರುಳಿಯು ಕಾ- ಲಂದುಗೆ ಕಿರುಗೆಜ್ಜೆ ಧ್ವನಿಯು ಹಿಂಡುಗೋವ್ಗಳ ವೃಂದದಿ ನಲಿಯುತ ಮಂದರೋದ್ಧರ ಗೋವಿಂದ ಮುಕುಂದನು1 ಉಟ್ಟ ಪೀತಾಂಬರ ಹೊಳೆಯೆ ನಡು ಕಟ್ಟಿದ ಚಲ್ಲಣ ಹೊಳೆಯೆ ಪರಮೇಷ್ಟಿ ಪಿತನು ತನ್ನ ಪುಟ್ಟ ಕರದಲಿ ಉತ್ತಮನಾದದ 2 ವಿಧವಿಧಹಾರಗಳಿಂದ ರನ್ನ ಪದಕದ ಮುತ್ತುಗಳಿಂದ ಹೃದಯದಿ ಶ್ರೀ ಭೂ ಸಹಿತದಿ ಮೆರೆಯಲು ಪದುಮನಾಭ ಶ್ರೀ ಚಲ್ವ ಮದನಗೋಪಾಲನು 3 ಕೋಟಿಸೂರ್ಯರಂದದಲಿ ಬಹು ಮಾಟದ ಮುಖಕಾಂತಿಯಲಿ ನೋಟದಿ ಜಗವನೆ ಮೋಹವಗೊಳಿಪ ಕಿರೀಟಿಯ ಪೊರೆದ ವೈರಾಟನು ಹರುಷದಿ 4 ಕರ್ಣದಿ ಬಾವುಲಿ ಹೊಳಪು ನವ- ರನ್ನ ಕಿರೀಟದ ಬೆಳಕು ಕನ್ನಡಿಯಂದದಿ ಕದುಪಿನ ಝಳಪು ಮೋ- ಹನ್ನ ಮಾಲೆನಿಟ್ಟ ಸೊಗಸಿನ ವಲಪು 5 ಮುಖದಲಿ ಮುಂಗುರುಳೊಲಿಯೆ ಪ್ರಿಯ ಸಖಿಯರು ಹರುಷದಿ ನಲಿಯೆ ಅಕಳಂಕ ಮಹಿಮನು ಗುಪಿತದಿ ಗೆಳೆಯರ ಸುಖವ ಪಡಿಸುತಲಿ ಸಖ್ಯದಿಂದ ಪ್ರಿಯನು 6 ತುರು ವೃಂದದಲಿ ಗೋ- ವಿಂದನು ಕುಣಿಕುಣಿಯುತಲಿ ಅಂಬರದಲಿ ದೇವದುಂದುಭಿ ಮೊಳಗಲು ಕಂಬು ಕಂಧರ ಹರಿ ಸಂಭ್ರಮ ಸೂಸುತ 7 ವಾಸವ ವಂದಿತ ಹರಿಯೆ ಸರ್ವೇಶ ಕೃಪಾಕರ ದೊರೆಯೆ ವಾಸುದೇವ ಸರ್ವೇಶನೆ ಭಕುತರ ಸಾಸಿರನಾಮದಿ ತೋಷಪಡಿಸುತಲಿ 8 ಪಾಹಿ ಪಾಹಿ ಶ್ರೀಶ ನಮೋ ಪಾಹಿ ಪಾಹಿ ಬ್ರಹ್ಮೇಶ ಪಾಹಿ ಪಾಹಿ ಪರಿಪಾಲಿಸು ನಮ್ಮನುಪಾಹಿ ಕಮಲನಾಭವಿಠ್ಠಲ ದಯಾನಿಧೆ 9
--------------
ನಿಡಗುರುಕಿ ಜೀವೂಬಾಯಿ
ಮೂರನೆಯ ಸಂಧಿ ಪತ್ರವನೋದಿಕೊಂಡು ಪದ್ಮನಾಭನ ಕಿಂಕರಗೆ ವಿಷಯೆ ವಿಶಾಲದಿ ಸಖಿಯರು ಕೂಡಿ ಆಲಯದಿಂದಲಿ ಹೊರಟರು ವಸಂತಕಾಲ ಬಂದಿರೆ ನಂದನಕೆ 1 ವಚ್ಚೇರೆಗಂಗಳ ವಾರಿಜಮುಖಿಯರು ನಿಚ್ಚಳಾಂಗದ ನೀರೆಯರು ಹೆಚ್ಚ ಹಿರಿಯ ಹೆಂಗಳ ರನ್ನೇರು ಬೆಚ್ಚದೆ ಬೆರೆದು ನಡೆದರು 2 ಚೆಲ್ಲೆಗಂಗಳ ಚೆಲ್ವೆಯರು ಎಲ್ಲರೈದಿದರು ನಂದನಕೆ 3 ಕಳಸಕುಚದೋರು ಕಂಬುಕಂಧರೆಯರು ಕುಂತಳಕಾಗಿ ನಡೆದರು4 ಚೆಂದುಟಿ ಚೆಲುವಿನ ಬಾಲೆಯರು ನಟನೆಯಿಂದೆಲ್ಲ ನಡೆದರು 5 ತಬ್ಬುತ ತಾಗೊಲವುತಲಿ ಕಬ್ಬುವಿಲ್ಲನ ಕೋಲಾಹಲ ಉಲ್ಲಸದಿ ತಬ್ಬಿ ನಡೆದರು ನಂದನಕೆ 6 ಕಕ್ಕಸ ನಕ್ಕುನಲಿದು ನಾನಾ ಚೇಷ್ಟೆಗಳಿಂದ ಹೊಕ್ಕರು ನಂದನವನವ7 ಸರೋವರವಿಳಿದು ಮಾಡಿದರ್ ಕೈಚಳಕವ ಜಲಕ್ರೀಡೆಯನಾಡಿದರತಿ ಹರುಷದಲಿ 8 ಕೆಂದಾವರೆ ಮೊಗ್ಗು ಕಂಡು ಹರುಷದಿ9 ಕೋಮಲೆಯರ ನೀರಾಟದ ರಭಸಕ್ಕೆ ತಾವರೆಗಳು ಬೆರಗಾಗೆ ಹೇವದಿ ತಲೆಯ ತಗ್ಗಿದವು10 ಸಮನಾಗಿ ತೋರುತಲಿಹವು 11 ದಿವ್ಯಾಂಗ ತೋರುತಲಿ ಹೆರೆಯ ಕೂರಂಬಿನಂದದಲಿ12 ಸಡಿಲಿದಾಭರಣವನಿಟ್ಟು ಮುಡಿದರು ತುದಿವೆಣ್ಣೆಗಂಟು 13 ಕಣ್ಣಿಗೆ ಅಂಜನ ಹಚ್ಚಿ ಸಂಪಿಗೆ ಮಕರಂದ ಪತ್ರಿಕೆಯನಿಟ್ಟು ಲಲನೆಯರೆಲ್ಲ ಶೃಂಗಾರದಿ 14 ಮಾನಿನಿಯರು ತೆರಳಿದರು 15 ಕಂದರ್ಪನ ಮದದಾನೆಯಂತೆ ಕರ್ಪುರ ವೀಳ್ಯವ ಕರದಲ್ಲಿ ಪಿಡಿದು ಗುಪ್ಪವಡೆದರು ನಾರಿಯರು 16 ಘನರಾಗದಿಂದ ಪಾಡುತಲಿ ತಮ್ಮ ಮನಬಂದ ಫಲ ಪುಷ್ಪಂಗಳ 17 ಉದ್ದಂಡತನದಲಾಡುತಿಹರು 18 ಬೆರಸಿಕೊಂಡಾಡುತಲಿಹರು ಹರುಷದಿಂದಲಿ ಮಂತ್ರಿ ತನುಜೆ 19 ಚಿಕ್ಕ ಪ್ರಾಯದ ಕೋಮಲಾಂಗಿಯು ಹೆಮ್ಮಕ್ಕಳನಗಲಿ ತಾ ಚೂತ ಬೆಕ್ಕಸ ಬೆರಗಾಗಿ ನಿಂದಳ್ 20 ಮತಿಭ್ರಮೆಯಿಂದ ನೋಡಿದಳು 21 ಪಾರ್ವತಿಪತಿಯೆಂಬೆನೆ ಪಣೆಗಣ್ಣಿಲ್ಲ ವಾರಿಜೋದ್ಭವನಿವನಲ್ಲ ನಾರಾಯಣನೆಂಬೆನೆ ಶಂಖಚಕ್ರವು ತೋರುವುದಿಲ್ಲ ಕೈಯೊಳಗೆ 22 ಇಂದ್ರನೆಂಬೆನೆ ಬಿಳಿಯಾನೆ ಕೆಲದಲಿಲ್ಲ ಚಂದ್ರನೆಂಬೆನೆ ಮೃಗವಿಲ್ಲ ಬಂದಿಳಿದನೊ ಭೂತಳಕೆ 23 ಕುಸುಮ ಬಾಣವು ಕೈಯೊಳಿಲ್ಲ ವಿಷಯೆ 24 ಹತ್ತಿರೆ ಬಂದು ನಿಲ್ಲುವಳು ಹೊತ್ತಲ್ಲವೆಂದು ಸಾರುವಳು 25 ಮುಟ್ಟುವೆನೆಂದು ನಿಲ್ಲುವಳು ಥಟ್ಟನೆ ಕಡೆಗೆ ಸಾರುವಳು 26 ಲಜ್ಜೆಹೋದರು ಹೋಗಲಿ ಎನುತ ಭೇದಿಸಿ ನೋಡಿದಳವನ 27 ಚೊಗೆಯ ಕುಪ್ಪಸದ ಕೊನೆಯಲ್ಲಿ ಮಂತ್ರಿ ತನುಜೆ 28 ಹೊದ್ದಿದ್ದ ಲಜ್ಜೆ ಭಾವದಲಿ ಸಾರ್ದುಮುದ್ರೆಯೊಡೆದಳಂಬುಜಾಕ್ಷಿ 29 ಮೋಡಿಯ ಬರೆದ ಬರಹನು ಮಾಡಿದ ಸುಕೃತದ ಫಲದಿ 30 ನೇಮಿಸಿ ಕಳುಹಿದ ಕಾರ್ಯ ವಿಷವ ಕೊಡುವುದುತ್ತಮವು 31 ಭಾವಿಸಿ ನಿನ್ನ ಮನದಿ ಮುಂದಕ್ಕೆ ಲೇಸುಂಟು ನಮಗೆ 32 ಕೈತಪ್ಪೆಂದು ಮನದಲ್ಲಿ ತಿಳಿದು 33 ವಾಕಾರವನೆ ಚೆಳ್ಳುಗುರಿಂದಲಿ ತಿದ್ದಿ ಯೇಕಾರವನೆ ಮಾಡಿದಳು ಮರುಗಿದಳು 34 ಕಟ್ಟಿದ ಭರದಿಂದ ತಲೆಯನು ಎತ್ತಿ 35 ನಿಂದೊಮ್ಮೆ ನೋಡುವಳು ಕಂದಿ ಕಾತರಿಸುತಲಿಹಳು 36 ಬೆದರಿದ ಹುಲ್ಲೆಯಂದದಲಿ ಹೃದಯ ಸಂಚಲಿಸುತಲಿಹಳು 37 ಹುಸಿ ನುಡಿಗಳನು ಉಟ್ಟ ದೇವಾಂಗ 38 ಪರಿಮಳ ಮಾಜುವುದೆ
--------------
ಹೆಳವನಕಟ್ಟೆ ಗಿರಿಯಮ್ಮ
ಮೂರ್ತಿ ಸತ್ಯ ಸಂಧರ ಕೀರ್ತಿ ಜಗದಲ್ಲಿ ಉದ್ಧರರ ಪ. ಪದ್ಮನಾಭ ಮಾಧವ ಮಾಧವ ಅಕ್ಷೋಭ್ಯರ ಚರಣವವಿದ್ಯುಕ್ತದಿಂದ ಬಲಗೊಂಬೆ ರನ್ನದ 1 ಪಾದ ಪದ್ಮವ ಮೊದಲೆ ಬಲಗೊಂಬೆ ರನ್ನದ 2 ರಘುನಾಥ ರಘುವರ್ಯ ರಘೋತ್ತಮ ತೀರ್ಥರ ವೇದವ್ಯಾಸ ವಿದ್ಯಾಧೀಶರೆ ರನ್ನದ ವೇದವ್ಯಾಸ ವಿದ್ಯಾಧೀಶರ ಚರಣವ ಜಗದ ಗುರುಗಳನು ಬಲಗೊಂಬೆ3 ಉತ್ತಮ ವೇದನಿಧಿ ಸತ್ಯವೃತ ತೀರ್ಥರ ಸತ್ಯನಿಧಿ ಸತ್ಯನಾಥರ ರನ್ನದ ಸತ್ಯನಾಥರ ಚರಣವ ಭಕ್ತಿಂದ ಮೊದಲ ಬಲಗೊಂಬೆ 4 ಸತ್ಯಾಭಿನವ ತೀರ್ಥ ಸತ್ಯಪೂರ್ಣ ತೀರ್ಥರಸತ್ಯವಿಜಯ ಸತ್ಯಪ್ರಿಯರ ರನ್ನದ ಸತ್ಯಪ್ರಿಯರ ಚರಣವ ಅತ್ಯಂತವಾಗಿ ಬಲಗೊಂಬೆ 5 ಸತ್ಯಬೋಧ ಸತ್ಯಸಂಧ ಸತ್ಯವರಚಿತ್ತಶುದ್ಧಿಯಲೆ ಬಲಗೊಂಬೆಚಿತ್ತಶುದ್ಧಿಯಲೆ ಸಭೆಯೊಳುಸತ್ಯವಾಕ್ಯಗಳ ನುಡಿಸಲು ರನ್ನದ6 ಸತ್ಯವರ್ಯರೆಂಬ ಉತ್ತಮ ಗುರುಗಳ ಹಸ್ತಕಮಲದಲೆ ನಮಿಸುವೆ ರನ್ನದ ಹಸ್ತಕಮಲದಲೆ ನಮಿಸುವೆ ಜಗದೊಳುಮೆರೆವ ಸತ್ಯಧರ್ಮರನು ಬಲಗೊಂಬೆ 7 ಪಾದ ಪೊಂದಿದ್ದ ಗುರುಗಳು ವಿದ್ಯುಕ್ತದಿಂದ ಬಲಗೊಂಬೆ ರನ್ನದ ವಿದ್ಯುಕ್ತದಿಂದ ಬಲಗೊಂಬೆ ಅತ್ತಿಗೆಯರ ಗೆದ್ದು ದುಂಧುಭಿಯ ಹೊಯಿಸೇವ ರನ್ನದ 8 ಯತಿ ಮುನಿರಾಯರು ಅತಿ ಭಕ್ತರಾಗಿದ್ದಅತಿಪ್ರಿಯರಾದ ಗುರುಗÀಳು ಅತಿ ಪ್ರಿಯರಾದ ರಾಮೇಶನ ಅತಿ ಭಕ್ತರ ಮೊದಲ ಬಲಗೊಂಬೆ ರನ್ನದ 9
--------------
ಗಲಗಲಿಅವ್ವನವರು
ಮೋಕ್ಷ ಪುಣ್ಯ ಫಲಾ ಮದನ ಗೋವಿಂದನ ಕರುಣವು ಪ ಆಕಾರಾಮೊದಲಾ ದಕ್ಷರದಲಿ ನೇಕಾ ಪರಿಯಲಿ ಕರೆದು ಸುವರ್ತಡದನಿಂದಾದಾ ಆದಿಮುನಿ ಗಣಸಹಿತಾ ಶ್ರೀ ಕರದಿಂದಾಲಾಶ್ರಿತ ಜನ ಪೋಷಕನ ನೀ ಕಾಮನಾದಿ ಪೂಜಿಸಿ ನಿಜಭಕುತಿ ಆಕಾಲದಲ್ಲಿ ಮಾಡಿದವರಿಗೆ ಎಲ್ಲಾ ಮುಕುತಿ ಲೋಕನಾಯಕನನುಗ್ರಹದಿಂದಲೇ 1 ನಾಯಕ ಪೂಜಿತನಾ ಸಾಸಿರನಾಮದ ಸರ್ವೇಶನ ದಾಸೋತ್ತುಮರಾದ ವರಿಗೆಲ್ಲಾ ವಾಸುದೇವಾನು ತನ್ನವರು ಎಂದು ಪಾಲಿಸಿ ಈಸು ಜನರಿಗಿತ್ತಾ ಇಹಪರವು 2 ಅಂದು ಚಂದ್ರಗೆ ಬಂದ ಶಾಪವು ಕಳೆದಾ ಅಜಮಿಳನಂತ್ಯ ಕಾಲಕೆ ಕಾಯ್ದ ಕಂದಾ ಕೂಗಲು ನೇರ ಕಂಭದೊಳಗೆ ಬಂದಾ ಮುಂದಾ ದನುಜನ ಸೀಳಿ ಮಗನಕಾಯ್ದ ಸಿಂಧುಶಯನ ತನ್ನ ಹೊಂದಿದವರನೆಲ್ಲಾ ಬಂಧು ಬಳಗ ಆಗಿಪೊರೆವಂಥಾ ಸ್ಮರಿಸುವ ಶರಣರಿಗೆ 3
--------------
ಹೆನ್ನೆರಂಗದಾಸರು
ಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರಯಚ್ಚರಿಕೆ ಯಚ್ಚರಿಕೆ ಶ್ರೀ ಸೋದೆಪುರವಾಸಿ ಗುರುಪಾದ ಯಚ್ಚರಿಕೆ ಯಚ್ಚರಿಕೆ ಪ ಶ್ರೀ ತ್ರಿವಿಕ್ರಮ ಲೋಕನಾಥನ ತಂದೆ ಶ್ರೀಪಾದಯಚ್ಚರಿಕೆ ಯಚ್ಚರಿಕೆ ಅ.ಪ. ಗುರುಹಯವದನ ಮನಮುಟ್ಟಿ ಸ್ಮರಿಸಿ ಪೂಜಿಪಶ್ರೀ ಗುರುಪಾದ ಯಚ್ಚರಿಕೆ ಯಚ್ಚರಿಕೆ 1 ಶತಷಣ್ಣವತಿ ಸಪ್ತ ಬ್ರಹ್ಮ ಕಲ್ಪಗಳಲ್ಲಿ ಶ್ರೀಹರಿಯೆ ಮಹ ಮಾರೆತವ ಚರಿಸಿದ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 2 ತಪಚರಿನಿಯರ ಡೃವತ್ತೂ ಷಣ್ಣವತಿ ಲಿಷ್ಟನೇ ಕಲ್ಪದ-ಲಿಲಾತವ್ಯ ವಾಯುಸಾಧನ ಮಾಡುವಾನಂದ ಜ್ಞಾನ ಯೋಗ ಸಿದ್ಧಿಸಿ ಕೊಡುವ ಉದಾರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 3 ಪ್ರಧಾನ ವಾಯು ಪದ ಸ್ವೀಕರಿಪ ಹಂಸವಾಹನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ4 ಹಿಂದೆ ವಿರಜಸ್ನಾನದಿ ಅಜ್ಞಾನಾತ್ಮಕ ಲಿಂಗದೋಷನಿಶ್ಶೇಷ ಹೊಂದಿದ ಗುರುವಿರಾಜರ ವಾದದ್ವಯ ಯಚ್ಚರಿಕೆ ಯಚ್ಚರಿಕೆ 5 ನಿರ್ಜೀವ ನಿಷ್ಕ್ರಿಯಾ ದಗ್ಧಪಟದಪ್ಪಂತಿರುವ ದೇಹ ಲಿಂಗವ ನಿಮಿತ್ತ ಮಾತ್ರಕೆ ಹರಿಯಿಭಯಿಂ ಧರಿಸಿರುವ ಲಾತವ್ಯ ಗುರುಪಾದ ಯಚ್ಚರಿಕೆ ಯಚ್ಚರಿಕೆ6 ಮುಕ್ತ ಅಮುಕ್ತಿ ಭೇದ ತೋರ್ಪದಕೆ ಶಿರಿಯಿಂದನದಿ ಶಾಲ್ಮಲ ವಾಸಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 7 ದ್ವಸ್ತ ದುರಾಗಮಿ ಶ್ರೀರಾಜಗುರು ಪಾದಕೆಚ್ಚರಿಕೆ 8 ಅಜ್ಞಾನ ಅಹಂಕಾರ ಭಯ ಮೋಹ ವಿಸ್ಮøತಿ ದುಃಖಾದಿಬಂಧನ ಕಳೆವ ಪ್ರಭುವಾದಕೆಚ್ಚರಿಕೆ 9 ಪತಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 10 ತ್ರಿವಿಧ ಜೀವರ ಚತುರ್ವಿಧಶರೀರದಿಯಿದ್ದವರ ಸಾಧನವಾ ಮಾಡಿಸಿ ಜೀವರ ಸುಖದುಃಖಗಳಿಂತಾ ಬದ್ಧರಾಗದೆ ಪೂರ್ಣ ನಿರ್ಲಿಪ್ತರಾಗಿರುವಶ್ರೀಪಾದ ಯಚ್ಚರಿಕೆ ಯಚ್ಚರಿಕೆ11 ತ್ರಿವಾರ ವಿರಜ ಸ್ನಾನವ ಮಾಡ್ವ ಸೌಭಾಗ್ಯ ಪ್ರಾರಬ್ಧಪೊಂದಿರುವ ಗುರು ವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 12 ಸತ್ವ ಜೀವರ ಮೋಕ್ಷ ಪ್ರಾಪ್ತಿಗೆ ವಿರಜ ನದಿಯಲಿಸ್ನಾನ ಮಾಡಿಸಿ ಜೀವಸತ್ವರ ಮೋಕ್ಷಕ್ಕಿಡುವ ನಿವ್ರ್ಯಾಜ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 13 ಸುಜೀವರ ಅನಾದಿ ಲಿಂಗ ಅಜ್ಞಾನ ಸ್ವರೂಪ ದೇಹ-ಭಂಗಿಸುವ ಶ್ರೀರಮಾತ್ಮಕ ವಿರಜ ನದಿಯಲಿ ಸ್ನಾನ-ಮಾಡಿ ಸ್ವಲಿಂಗ ವಿಶಿಷ್ಟವಾದ ಅಜ್ಞಾನದಿಂ-ವಿರಹಿತರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 14 ಆನಂದವ ವೃಷಭಾವಿ ಆನಂದ ತೀರ್ಥ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 15 ತ್ರಿವಿಧ ಜೀವರಲಿಯಿದ್ದು ತ್ರಿವಿಧಸಾಧನ ಮಾಡಿಸುವ ಭಾವಿ ವಾಯುನಾಮಕ ನತ್ತಾ ಪ್ರದ ಲಾತವ್ಯವಾಯು ವಾದಿರಾಜ ಮಧ್ವ ಮುನಿ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 16 ಆಯಾಯರ ಜೀವರ ಚಲನವಲನಾದಿ ವ್ಯಾಪಾರ ಮಾಡಿಸುವ ಭಾವಿ ಪ್ರಾಣನಾಮಕ ಭೀಷ್ಟಾಪ್ರದ ವಾದಿರಾಜಗುರುಪಾದಯಚ್ಚರಿಕೆ ಯಚ್ಚರಿಕೆ 17 ಚತುರ್ವಿದ ಶರೀರಗಳಲಿದ್ದು ಸಂರಕ್ಷಿಸುವ ಭಾವಿ ಧರ್ಮನಾಯಕಧಾರಣಪ್ರದ ಶ್ರೀ ಗುರುರಾಜರಶ್ರೀಪಾದ ಯಚ್ಚರಿಕೆ ಯಚ್ಚರಿಕೆ 18 ಪ್ರಭುತ್ವವಾರ್ತೈಸಿಜೀರರ ಅವರವರ ಸ್ವರೂಪಯೋಗ್ಯಗತಿ ಕೊಡುವ ಭಕ್ತಿ ಮುಕ್ತಿ ಪ್ರದ ಭಾವಿ ಭಾರತೀ ರಮಣ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 19 ದೇವೋತ್ತಮ ಲಾತ ವಾಯುಸ್ವನಾಮಕೆ ಭಗವಂತಗೇ ನಿತ್ಯನ್ವ ಭಕ್ತರ ಪಾಪ ಮನ್ನಿಸುವಂತೆ ಪ್ರಾರ್ಥಿಸಿ ತಾವು ಮನ್ನಿಸಿ ಕ್ಷಮಿಸುವಲ್ಲಿ ಕ್ಷಮಾ ಸಮುದ್ರರಾದ ಶ್ರೀಗುರುಪಾದಯಚ್ಚರಿಕೆ ಯಚ್ಚರಿಕೆ 20 ಪುಣ್ಯ ಪ್ರದಾನ ಮಾಡುವಲ್ಲಿ ಜೀವರಿಗೆ ಪರಮ ದಯಾಳು ಆರ್ತರಿಗೆ ದಯತೋರುವ ಕೃಪಾನಿಧಿ ಸಜ್ಜನರ ದೋಷ ವಿಚಾರದಿ ಮಹಾ ಸಹಿಷ್ಣುಗಳಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 21 ಶಿಖಾಮಣಿ ಸಕಲ ತಾತ್ವಿಕ ದೇವತಾ ರಂಜಕ ಆಹ್ಲಾದಕರ ದಾನವ ಭಂಜಕ ಸಂಹಾರ ಕರ್ತರಾದ ಕಾರಣ ಭಾವಿ ಪ್ರಭಂಜನ ವರವಾಜ್ಯರಾದವರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 22 ಸರ್ವದಾ ಅನ್ಯ ಜೀವರು ಕಾಣದಾ ಅಸಾಧಾರಣ ಗುಣ ಕ್ರಿಯಾ ಸ್ವರೂಪರಾದ ವೇದ ಪ್ರತಿಪಾದ್ಯರಾದುದರಿಂದ ಮಹಂತರೆಂದು ಕರೆಸುವ ಭಾವಿ ವಾಯುವಿನ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ23 ಅವರವರ ಸಾಧನಗಳ ಪೂರೈಸಿ ಕೊನೆಗವರ ನಿಜಗತಿ ಪ್ರವರಾದ ಸರ್ವ ಜೀವರಂತರ್ಯಾಮಿ ಸಕಲ ಗುಣ ಸದ್ಧಾಮ ಭಾವಿ ಮರುತ ಗುರುವಾದಿರಾಜರ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 24 ಬರುವ ಜಗತ್ತಿನ ಸರ್ವ ಜೀವರಿಗೆಲ್ಲ ಜೀವನ ಪ್ರಾಣ- ವಾಗಿರುವ ಜೀವೋತ್ತಮ ಶ್ರೀ ಭಾವಿ ಬ್ರಹ್ಮ ಮರುತ ವಾದಿರಾಜರ ಶ್ರೀಪಾದದ್ವಯ ಯಚ್ಚರಿಕೆ ಯಚ್ಚರಿಕೆ 25 ಸಕಲ ಜೀವರ ಸಂಜೀವರಾದ ಯಲ್ಲ ಜೀವರ ಜೀವ ಯಲ್ಲಪ್ರಾಣಿಗಳ ಪ್ರಾಣರಾಗಿ ಪ್ರಾಣೆಂದು ಕರೆಸುವ ಭಾವಿ ಮುಖ್ಯ ಪ್ರಾಣ ವಾದಿರಾಜರ ಗುರುಪಾದಕೆಚ್ಚರಿಕೆ 26 ಸದಾಸರ್ವತ್ರ ಭಗವದ್ರಷ್ಟøಗಳಾದ ಬ್ರಹ್ಮದೇವರ ಭೃತ್ಯಣ ಜೀವ ಪರ್ಯಂತ ವ್ಯಾಪ್ತರಾದ ಆಯಾ ಸ್ಥಳದಿದ್ದು ಆಯಾ ಜೀವರ ತಕ್ಕ ವ್ಯಾಪಾರ ಮಾಡುವ ಭಾವಿ ಪೂರ್ಣಪ್ರಜ್ಞರೆನಿಸಿರುವ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 27 ಸಾಕ್ಷಾತ್ರ್ಪತಿಬಿಂಬರಾದ ಕಾರಣ ಭಾವಿ ಮುಖ್ಯ ಪ್ರತಿಬಿಂಬ-ರೆಂದೆನಿಸಿಕೊಂಡ ಗುರುವಾದಿರಾಜ ವಿಭುಪಾದಕೆಯಚ್ಚರಿಕೆ ಯಚ್ಚರಿಕೆ 28 ನಿತ್ಯ ಸಾಯುಜ್ಯ ಸಹ ಭೋಜನದ ಭೋಗ ಹೊಂದುವ ಭಾವಿ ಮರುತ ಶ್ರೀಲಾತವ್ಯ ವಾಯು ಗುರು ಮಧ್ವ ಮುನಿಯ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 29 ಸದನ ಪೂರ್ಣ ಚಂದ್ರವದನರು ಮೋಕ್ಷ ಸಾಮ್ರಾಜ್ಯ ನಿರ್ದುಷ್ಟ ಆನಂದ ಸುಖಸ್ವರೂಪರು ಪರಮ ಪುರುಷಾರ್ಥ ಪಾತ್ರಗಳು ಪುಣ್ಯ ಸ್ವರೂಪ ಪಂಚ ರೂಪಾತ್ಮಕ ಹರಿಯೆ ಪಂಚ ವೃಂದಾವನ ಸ್ವರೂಪದಿಯಿರುವ ರಂಜಪುಣ್ಯ ವೃಂದಾವನದಿ ವಿರಾಜಿಸಿ ಪಂಚ ಪುಣ್ಯ ಧಾರೆಯೆರೆವ ಪಂಚಪ್ರಾಣರಾದ ವಾದಿಗಳ ಪಲ್ಮುರಿವ ವಾದಿರಾಜಮಧ್ವ ಮುನಿಯ ಶ್ರೀ ಭಾವೀ ಭಾರತೀದೇವಿ ತನ್ನ ಮೃದು ಕೋಮಲ ತೊಡೆಯ ಮೇಲೆ ಪತಿಯ ಶ್ರೀಪಾದಪದ್ಮದ್ವಯವಿಟ್ಟು ವತ್ತೂವ ಅಜ್ಞಾನ ತಿಮಿರಕೆ ಮಾರ್ತಾಂಡ ವಾದ ಜ್ಞಾನಾನಂದ ದಾಯಕ ಶ್ರೀಗುರುಪಾದ ಯಚ್ಚರಿಕೆ ಯಚ್ಚರಿಕೆ30 ಜಗಜ್ಜೀವನಗಳಿಗೆ ಮುಖ್ಯ ಕಾರಣ ಪ್ರಾಣ ಆ ಪ್ರಾಣವಿಲ್ಲದಿರೆ ಸ್ವತಃ ಚಲಿಸಲು ಅಸಮರ್ಥ ಸರ್ವ ಜಗತ್ತಿಗೆ ಪ್ರಾಣ ವಿಜ್ಞಾನ ಪ್ರಾಣಾಗ್ನಿ ಶಬ್ದವಾಜ್ಯ ಈ ಭಾವಿಮುಖ್ಯ ಪ್ರಾಣ ಜಗಜ್ಜೀವನಗಳಿಗೆ ತಾನೇ ಮುಖ್ಯ ಪ್ರಾಣರೂಪ ಹೀಗೆಂದು ಬಳಿತ್ಥಾ ಸೂಕ್ತ ಅಗ್ನಿ ಸೂಕ್ತದಲಿ ಉಕ್ತ ಈ ಸೂಕ್ತಿಗಳಿಂದ ಪ್ರತಿಪಾದ್ಯರಾದ ಜಗನ್ನೇತ್ರಜಗಜ್ಜೀವನರಾದ ಪಂಚಪ್ರಾಣ-ರೂಪಾತ್ಮಕ ಶ್ವಾಸನಿಯಾಮಕ ಸೋದೆಪುರವಾಸಿ ಭೂತರಾಜರ ಹೃನ್ಮಂದಿರ ವೇದ್ಯ ವೇದ್ಯನುತ ಅಹಿಪ ಖಗಪ ಉಮೇಶಾದಿ ಸುರರಿಗೆ ಚಿಂತಿಸಲು ಅಳವಲ್ಲದ ಅಗಮ್ಯ ಮಹಿಮ ಶ್ರೀ ಪ್ರಭು-ವಾದಿರಾಜರ ನಿರ್ದೋಷ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 31 ಜಿತಣಮ ಸರ್ವಜ್ಞ ಅಶೇಕ್ಷ ಸಂಪದ್ವಿಶಿಷ್ಟ ಸದ್ಗುಣ ಭರಿತ ಪೂರ್ಣ ತೃಪ್ತ ನಿಶ್ಚಲ ಭಕ್ತ ದೃಢವ್ಯೆರಾಗ್ಯಶಾಲಿಚಿರಂಜೀವಿ ಶ್ರೀ ಗುರುವಾದಿರಾಜರ ಶ್ರೀಪಾದ ಪದ್ಮ ನಖರೇಣುಗಳಿಗೆ ಯಚ್ಚರಿಕೆ ಯಚ್ಚರಿಕೆ 32 ಪರಿ ಪರಿ ಕ್ರೀಡೆ-ರಮಿಸಿ ಆ ಆನಂದ ಶ್ರೀ ಹರಿಗೆ ಅರ್ಪಿಪ ಗುರುವಾದಿರಾಜಶ್ರೀಪಾದಂಗಳ ಶ್ರೀಪಾದ ಯಚ್ಚರಿಕೆ ಯಚ್ಚರಿಕೆ 33 ನಿತ್ಯ ನಿತ್ಯ ಶ್ರೀವರ ಮಾಲೇಶೆಗೆ ಅರ್ಪಿಪ ಭಾವಿಲಾಳೂರ ಶ್ರೀ ಗುರುರಾಜರ ಪಾದಕೆ ಯಚ್ಚರಿಕೆ ಯಚ್ಚರಿಕೆ34 ತನ್ನ ಶ್ರೀಪಾದ ರಜ ಧೆಣಿಯಲಿ ಧರಿಸಿ ಜೀವಿವರ ಹಯವದನ ಪಾದಕರ್ಪಿಸುವೆನೆಂದು ಪಣತೊಟ್ಟು ಜೀವನ್ಮುಕ್ತರನು ಮಾಡಿ ಪರಿಪಾಲಿಪೆನೆಂದು ಧೀರ ವೃಂದಾವನದಿ ಮೆರೆವ ಶ್ರೀಗುರು-ವಾದಿರಾಜರ ಶ್ರೀಪಾದಕೆ ಯಚ್ಚರಿಕೆ ಯಚ್ಚರಿಕೆ 35 ಶ್ರೀ ತ್ರಿವಿಕ್ರಮನ ರಥೋತ್ಸವಕೆ ಬಂದವರಲಿ ಒಂದೊಂದಂಶ ಸುರರ ಪ್ರವೇಶಿಸಿ ಅವರಲ್ಲಿ ತನ್ನೊಂದಂಶದಿಂದ ಸುರರ ಸಾಧನ ಮಾಡಿ ಸುರನರರ ಕೃತ ಕೃತ್ಯರೆನಿಸಿ ಶಿರಿ ಹಯ-ವದನನ ಕಾಣ್ವ ಜ್ಞಾನ ಭಕುತಿ ವೈರಾಗ್ಯ ನಿಷ್ಠಿಯನಿತ್ತು ಬ್ರಹ್ಮ ನಿಷ್ಯ್ಠೆ ಕರೆನು ಮಾಳ್ವ ಶ್ರೀ ಗುರು ಶ್ರೀಪಾದಕೆಯಚ್ಚರಿಕೆ ಯಚ್ಚರಿಕೆ 36 ಶ್ರೀ ಧವಳ ಗಂಗೆಯ ಸ್ನಾನ ಮಾಡುವ ಜ್ಞಾನವೀವ ಶ್ರೀ ಗುರು-ಪಾದಕೆ ಯಚ್ಚರಿಕೆ ಯಚ್ಚರಿಕೆ 37 ವಾಸುದೇವ ಪರಿ ಸ್ತೋತ್ರ ಮಾಡಿರೈ ಜ್ಞಾನಿ-ಗಳಾದವರೆಲ್ಲ ಶ್ರೀ ಗುರುಪಾದದೆಚ್ಚರಿಕೆಯಲಿ ತಂದೆವರದಗೋಪಾಲವಿಠಲ 38
--------------
ಗುರುತಂದೆವರದಗೋಪಾಲವಿಠಲರು
ಯತಿಗಳು ಶ್ರೀಜಯತೀರ್ಥರು ಕರುಣಿಸೊ ಜಯರಾಯಾ ಗುರುವರ್ಯ ಚರಣವೆ ಗತಿಯಯ್ಯ ಹೇ ಜಿಯಾ ಪ ರಘುನಾಥನ ಪುತ್ರ ಪವಿತ್ರ ರಾಘವನ ಪ್ರೀತಪ್ರಾತ್ರ ಚರಿತ್ರ ಮಘವನಾ ನೀ ನಘದೂರ ಶ್ರೀ ರಘುರಾಮನ ಕಿಂಕರನ ಅಮೋಘ ಸೇವಕನೊ 1 ಕುಕರ್ವಿಣಿಯ ತೀರಾ ಘೋರಕುವಾದಿಗಳ ಕು ಲಕುಠಾರ ಗಂಭೀರ ಸಕಲಶಾಸ್ತ್ರಸತ್ಸಾರ ಟೀಕಕರ ಕುಕವಿಶೃಗಾಲಕುಲಕಾಲಭಯಂಕರ 2 ಎರಗೋಳಾದ್ರಿಯೊಳು ಗುಹೆಯೊಳು ನಿರುತ ಪ್ರವಚನಗಳು ನಿತ್ಯದೊಳು ಮರುತಮತಾಂಬುಧಿಚಂದಿರ ಸುಂದರ ವರಸುಜ್ಞಾನಮಣಿಕಿರಣವ ತೋರಿದೆ 3 ಗುರು ಮಧ್ವಮುನಿ ತತ್ತ್ವಗ್ರಂಥದ ಕ್ಷೀರಶರಧಿಗೆ ಮಂಥಾ ವುನ್ನಂಥಾ ಮರುತನನುಗ್ರಹ ಪ್ರಗ್ರಹದಿಂದಲಿ ವರಮಥನದಿ ಇತ್ತೆ ಅಮೋಘವಸ್ತುಗಳೆಲ್ಲಾ4 ಉತ್ತಮ ಗ್ರಂಥವನಧೀ ಮಥನದಿ ಉತ್ತಮ ವಸ್ತುಗಳನಿತ್ತೆಯೊ ತತ್ತ್ವಪ್ರಕಾಶಿಕಾ ಮಹಾಲಕುಮಿಯು ಚಂದಿರನೇ ಪ್ರಮೇಯದೀಪಿಕಾ ಸುಧೆಯೇ ನ್ಯಾಯಸುಧಾಗ್ರಂಥ ಶ್ರೀ ಕೌಸ್ತುಭದಂತಿಹ ನ್ಯಾಯದೀಪಿಕಾ 5 ದುರುಳ ಮಾಯಾಖಂಡ ನಾಯುಧವೂ ಸರ್ವಜೀಯನೆ ಐರಾವತದಂತೆ ಋ ಗ್ಭಾಷ್ಯಟೀಕಾ ನ್ಯಾಯವಿವರಣವು ಉಚ್ಛೈಶ್ರವಸ್ಸು 6 ಕರ್ಮನಿರ್ಣಯ ಟೀಕಾ ವಜ್ರಾಯುಧ ಆ ಮಹಾಪಾರಿಜಾತ ವಿಖ್ಯಾತಾ ಶ್ರೀಮದ್ವಿಷ್ಣು ತತ್ತ್ವ ನಿರ್ಣಯ ಟೀಕೆಯು ಕಲ್ಪವು ಉಪನಿಷತ್ ಭಾಷ್ಯ ಟೀಕೆಯು 7 ಈಶಾವಾಸ್ಯ ಭಾಷ್ಯ ಟೀಕಾ ಸಂತಾನವೆಂಬೋ ಮಹಾವೃಕ್ಷಾ ಪ್ರ ಬಿಸಜ ಮಂದಾರ ಪ್ರಮಾಣ ಪದ್ಧÀ್ದತಿ ಹರಿಚಂದನಕೆ ಸಮನಾದ ವಾದಾವಳಿ 8 ಪಾಕಶಾಸನಾಂಶಾ ಕರುಣಿಸು ಶ್ರೀಕರಪದಪಾಂಸ ಯತೀಶಾ ನಾರ ಪತಿಯೆ ಶ್ರೀಕಾಗಿನೀ ತೀರದಿ ಏಕಾಂತದಿ ನಿಂದೆ ಲೋಕ ವಂದಿತ ದೇವಾ 9 ಮಂದಭಾಗ್ಯಜನರಾ ಪರಮಾ ನಂದದಿಂದಲಿ ನೋಡಿ ದಯಮಾಡಿ ತಂದೆಯಂದದಿ ಕಾಯ್ದಾನಂದವೀವೆ ನಿತ್ಯಾ10 ಪರಮಪಾತಕಿ ನಾನು ಗುರುವೆ ತವ ಪಾ ದ ರಕ್ಷಕವಚವ ತೊಡಿಸೊ ಉಳಿಸೋ ನಿರುತ ಶರಣರ ಕಾಯ್ವ ಶ್ರೀ ವೆಂಕಟೇಶನ ಪ್ರೀಯಾಉರಗಾದ್ರಿವಾಸವಿಠಲನ ದಾಸಾ 11
--------------
ಉರಗಾದ್ರಿವಾಸವಿಠಲದಾಸರು
ಯತಿಗಳು ಇರುವರ್ಯತಿಗಳ್ಹನ್ನೆರಡು ಮಂದಿ ರಘುವ(ರ) ಅಕ್ಷೋಭ್ಯತೀರ್ಥರ ನಡುವೆ ಕುಳಿತಿದ್ದಂಥ ಟೀಕೆ ಬರೆದ ಜಯ ಮಹರಾಯರಿವರು ಪಾಲಿಸೆನ್ನನು ಜಯರಾಯ ಪ ಎತ್ತಿನ ಜನ್ಮದಿ ಬಂದು ಶ್ರೀಮದಾನಂದತೀರ್ಥರಲ್ಲಿದ್ದು ಶಿಷ್ಯತ್ವ ವಹಿಸಿಕೊಂಡು ಬಿಟ್ಟು ಹರಿದಿನ ಮೇವು ನೀರನೆ ಪುಸ್ತಕದ ಗಂಟ್ಹೊತ್ತು ತಿರುಗುತ ತತ್ವಜ್ಞಾನವ ತಿಳಿದು ದ್ವಾದಶ ಸ್ತೋತ್ರ ಹೇ ಳುತ ಪ್ರಕಟವಾದರು 1 ಗೋವುಸುತನ ಜನ್ಮ ನೀಗಿ ಮಂಗಳವೇಡಿ ಸಾಹುಕಾರನ ಸುತನಾಗಿ ತೇಜಿಯನೇರಿ ಮಾ(ಮಹಾ?) ನದಿ ಮಧ್ಯದಲಿ ಮಂಡಿಬಾಗಿ ನೀರನು ಕುಡಿಯ- ಲಾಕ್ಷಣ ನೋಡಿ ಕರೆತರಲವರ ಗುರುಗಳ ಪಾದಕÀ್ವಂದನೆ ಮಾಡಿ ನಿಂತರು 2 ಅಕ್ಷೋಭ್ಯತೀರ್ಥರು ಆ ಮಹಿಮರ ನೋಡಿ ಕೊಟ್ಟು ಕಾಯ್ಕರದಲಿ ಜುಟ್ಟು ಜನಿವಾರವನು ಕಿತ್ತೆ ಕಾವಿಶಾಟಿಗಳನು ಉಟ್ಟು ದಂಡ ಕಾಷ್ಠವ್ಹಿಡಿದು ಶ್ರೇಷ್ಠಯತಿ ಆಶ್ರಮದಿ ಕುಳಿತಿರೆ ಹೆತ್ತವರು ಹುಡುಕುತ್ತ ಬಂದರು 3 ಕಂಡಕಂಡಂತೆ ಮಾತುಗಳಾಡಿ ಗುರುಗಳಿಗೆ ಧೋಂಡು ರಘುನಾಥನ ಕರಕೊಂಡು ಹಿಂದಕೆ ಹೋಗಿ ಹೆಂಡತಿ ಸಹಿತೆರೆದು ಪ್ರಸ್ತ ಮಂಡಿಗಿ ಮೃಷ್ಟಾನ್ನ ಉಣಿಸಿ ಚೆಂದದ್ವಸ್ತ್ರಾಭರಣ ಕೊಟ್ಟುರುಟಣೆಯ ಮಾಡಿಸ್ಯಾರತಿಯ ಬೆಳಗೋರು 4 ಸುಪ್ಪತ್ತಿಗೆಯು ಮಂಚ ಕುತ್ತಣಿ ಹಾಸಿಕೆಯಲ್ಲಿ ಇಟ್ಟು ತಾಂಬೂಲ ಬು- ಕ್ಕಿ ್ಹಟ್ಟು ಪರಿಮಳ ಗಂಧ ಸಕ್ಕರೆ ಕ್ಷೀರಗಳು ಲಡ್ಡಿಗೆ ಅಚ್ಚಮಲ್ಲಿಗೆ ಮಾಲೆ ಫಲಗಳು ರತ್ನ ಜ್ಯೋತಿ ಪ್ರಕಾಶದೊಳಗುತ್ತಮರು ಕುಳಿತಿರಲರ್ಥಿಯಿಂದಲಿ 5 ಮಡದಿ ಮಂಚಕೆ ಬಂದ ಸಡಗರವನು ನೋಡಿ ಹೆಡೆಯ ತೆಗೆದು ಕಣ್ಣು ಬಿಡುತ ವಿಷನಾಲಿಗೆಯ ಚಾಚುತಾರ್ಭಟಿಸಿ ಬರುತಿರಲ- ಸಾಧ್ಯಸರ್ಪವು ಕಡಿವುದೆನುತೆದೆ ಒಡೆದು ಕೂಗಲು ಹಡೆದವರು ಬಾಯ್ಬಿಡುತ ಬಂದರು 6 ಹಾವಾಗ್ಹರಿದು ಹುತ್ತವ ಸೇರಿಕೊಂಬುವೋದೀಗ ನಾವು ಮಾಡಿದಪರಾಧ ಕ್ಷಮಿಸಬೇಕೆನುತಲಿ ಬೇಡಿಕೊಂಡಾಕ್ಷಣದಿ ಮಗನ ನೋಡಿ ಕರೆತಂದಾಗ ಅಕ್ಷೋಭ್ಯರಾಯರಂಘ್ರಿಚರಣಕೊಪ್ಪಿಸಿ ನಾವು ಧನ್ಯರಾದೆವೆಂದರು 7 ಅತಿ ಬ್ಯಾಗದಿಂದವರಿಗ್ಯತಿ ಆಶ್ರಮವಕೊಟ್ಟು ದೇ- ವತಾ ಪೂಜೆಗಧಿಕಾರ ಮಾಡಲು ಗುರುಗಳು ಪಾಂಡಿತ್ಯದಿ (ಇ)ವರಿಗೆ ಪ್ರತಿಯು ಇಲ್ಲ- ವೆಂದೆನಿಸಿ ಮೆರೆವರು ಪತಿತರನೆ ಪಾವನವ ಮಾಡಿ ಸದ್ಗತಿಯ ಕೊಡುವ ಸಜ್ಜನ ಶಿರೋಮಣಿ 8 ಮಧ್ವರಾಯರು ಮಾಡಿದಂಥ ಗ್ರಂಥಗಳಿಗೆ ತಿದ್ದಿ ಟೀಕೆ ಟಿಪ್ಪಣಿ ಮಾಡಿ ಪದ್ಮನಾಭ ಭೀಮೇಶಕೃಷ್ಣಗೆ ಪರಮ ಭಕ್ತರೆನಿಸಿ ಮೆರೆವರು ವಿದ್ಯಾರಣ್ಯನ ಗರುವ ಮುರಿದು ಪ್ರಸಿದ್ಧರೆನಿಸೋರು ಸರುವ ಲೋಕದಿ 9
--------------
ಹರಪನಹಳ್ಳಿಭೀಮವ್ವ
ಯತಿರಾಜ ಯತಿರಾಜ ಮಾಧವೇಂದ್ರ ಗುರು ಸಾರ್ವಭೌಮ ಪ್ರಭು ಪ ಧಾರುಣಿಯೊಳಗಪಾರವಾದ ವಿದ್ಯಾ ವಾರಿಧಿಚಂದ್ರಮ ವೈರಾಗ್ಯಮೂರುತಿ1 ಶಿಷ್ಟಶಿರೋಮಣಿ ಕಟ್ಟಳೆಯಿಂದ ಬಲು ದಿಟ್ಟತನದಿ ಯತಿಪಟ್ಟವೇರಿದನೀತ 2 ಭೇದದಿಂದತಿಶಯ ವಾದಿಪ ಮಹದು ರ್ವಾದಿಗಳನು ಗೆದ್ದು ನೀ ಸಾಧಿಸಿದಧಿಕಾರ 3 ಅಧಮರ ಉಪಟಳಕೆದೆಪೊಡೆಯದೆ ನಿಜ ಸದಮಲ ವೈಕುಂಠಪದವಿಗೆ ನಡೆದನು 4 ಮಧ್ವಶಾಸ್ತ್ರ ಪ್ರಸಿದ್ಧ ಪದ್ದತಿಗಳ ಸಿದ್ಧಿಪಡೆದು ಪರಿಶುದ್ಧನೆನಿಸಿಕೊಂಡ 5 ಗುರುವೆಂದೆನಿಸಿ ಭೂಸುರರನುದ್ಧರಿಸೀತ ಸ್ಥಿರವಾಗಿ ನಿಂತನು ಮೆರೆವ ಬುದ್ಧಿನ್ನಿಯೊಳು 6 ಪರಮಭಕ್ತಿಯಿಂದ ನಿರುತ ಸೇವೆಗೈದು ವರವ ಬೇಡಿರೆಲೋ ಭರದಿ ಕೊಡುವ ಮೆಚ್ಚಿ 7 ಆಸೆರಹಿತನನುಮೇಷ ಪೂಜಿಸಿರೊ ದೋಷ ದಾರಿದ್ರ್ಯವ ನಾಶಮಾಡುವನು 8 ಸ್ವಾಮಿ ಕೃಷ್ಣ ಶ್ರೀರಾಮನಾಮಾಮೃತ ಪ್ರೇಮದಿಗರೆಯುವ ಕಾಮಧೇನು ಸತ್ಯ 9
--------------
ರಾಮದಾಸರು