ಒಟ್ಟು 5051 ಕಡೆಗಳಲ್ಲಿ , 129 ದಾಸರು , 3317 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನ ಪೇಳಲಿ ಹರಿಯ ವ್ಯಾಪಾರ ಮಹಿಮೆ ಪ ಆನಂದ ಆಶ್ಚರ್ಯ ಆಗುವುದು ಎನಗೆ ಅ.ಪ. ಮರಳಿಗೋಸುಗ ಪೋಗೆ ಮಾಣಿಕ್ಯ ದೊರೆಯಿತು ಅಮೃತ ಕಳಶವಾಯ್ತು ಇರುಳು ಕತ್ತಲೆಯೊಳಗೆ ಮಣಿದೀಪ ಮಿರುಗಿತು ಕಮಲ ಮಾಲಿಕೆಯಾಯ್ತು 1 ಪಾಪ ಕಾರ್ಯವ ಕೊಳಲು ಪುಣ್ಯ ಸಾಧನವೀವ ಪಾಪ ಸಾಧನವೀವ ಪುಣ್ಯ ಕಾರ್ಯದಲಿ ಪಾಪ ಬೀಜದ ಪುಣ್ಯ ಪುಣ್ಯ ಬೀಜದ ಪಾಪ ಶ್ರೀಪತಿಯ ವ್ಯಾಪಾರ ಈ ಪರಿಯಲಿಹುದು2 ಮೃಗಯಾ ವಿಹಾರದಲಿ ಮನವಿಟ್ಟು ನಾ ಬರಲು ಮೃಗಲಾಂಛನವನ ಕಳೆಯ ಮೀರುವಂಥ ಮಿಗೆ ತೇಜದೀ ಮಗುವು ಎನಗೆ ದೊರೆತುದು ನರ ಮೃಗರೂಪಿ ಕರಿಗಿರೀಶನ ಕರುಣವಿಲ್ಲದಲೆ 3
--------------
ವರಾವಾಣಿರಾಮರಾಯದಾಸರು
ಏನ ಬಣ್ಣಿಪೆನಮ್ಮ ಪ. ಏನ ಬಣ್ಣಿಪೆ ಪೂರ್ಣಪ್ರಜ್ಞ ಪಂಡಿತರಾಯರ ಅ.ಪ. ಮಧ್ವಸರೋವರ ತೀರದ ಮುದ್ದುಕೃಷ್ಣನ ಪ್ರ-ಸಿದ್ಧಿಯಿಂದ ಪೂಜೆಮಾಡಿ ಗೆದ್ದ ಬಲವಂತ ರಾಯರ1 ಭವಬಂಧ ಮಾಯಿಗಳ ಕಾಲಲೊದ್ದು [ಮೂಲೆಲ್ಹಾಕಿ]ಮಧ್ವಶಾಸ್ತ್ರವೆಲ್ಲ ಪ್ರಸಿದ್ಧ ಮಾಡಿದ ಯತಿರಾಯರ 2 ಸಿರಿ ಹಯವದನನ ಚರಣಕಮಲವನುನಿರುತವಾಗಿ ಸೇವಿಸುವ ಅಚ್ಛಿನ್ನ ನಿಜದಾಸರ 3
--------------
ವಾದಿರಾಜ
ಏನ ಮಾಡಲಿ ಎನ್ನ ರೋಗಕೆ ರಾಮ ಧ್ಯಾನದಮೃತವುಂಡು ಪೋಗ ಬೇಕಲ್ಲದೆ ಪ ಗೂಡಿನೊಳಗೆ ಜರೆ ಮುತ್ತಿತು ಅದಕೆ ಬಲ ಗೂಡಿ ರೋಗವು ಮತ್ತೆ ಪುಟ್ಟಿತು ಕಾಡಿನೌಷಧಿಯ ನಿತ್ಯ ಮಾಡುವ ಜಪತಪ ನಿಂತಿತು 1 ಯಾರಾರೇನೆಂದುದೆಲ್ಲವ ಮಾಚಿತು ಅದು ನಡೆಯೆಕಾಲುಬತ್ತಿತು ಶರೀರದೊಳಗೆ ಕ್ಷೀಣವಾಯಿತು 2 ವಾಂತಿ ಭ್ರಾಂತಿಗಳೆರಡಾಯಿತು ರೋಗ ಕಮಲಕಂಡಿತು ಕಾಲ ಬಂತೊ ಎಂಬಂತೆ ಮನವಾಯಿತು 3 ಹಿಂದೆ ಮಾಡಿದ ಪಾಪ ಬಂದಿತು ಈಗ ಮನದಿಹಂಬಲವಾಯಿತು ಇನ್ನು ಎಂದನೆಂದರೆ ದನಿ ಕುಂದಿತು 4 ಕಾಮನಯ್ಯನ ಚಿಂತೆ ಬಂದಿತು ರೋಗ ನಾಮಸ್ಮರಣೆಯಿಂದ ಹೋಯಿತು ಕ್ಷೇಮ ಕುಶಲಕೆಲ್ಲ ಭೀಮನ ಕೋಣೆ ಲಕ್ಷ್ಮೀರಮಣನಪ್ಪಣೆಯಿದ್ದಂತಾಯಿತು 5
--------------
ಕವಿ ಪರಮದೇವದಾಸರು
ಏನ ಹೇಳಲಿ ಈತನಿರವ ಭಕ್ತರ ಮನಾ- ಧೀನ ಹೆಳವನಕಟ್ಟೆ ರಂಗ ದೇವೋತ್ತುಂಗನ ಪ. ಹೊಳೆವ ಮೈಯ್ಯವ ಕಲ್ಲಹೊರುವ ಕಡಲೊಳಾಡುವ ತಿಳಿಯ ಎರಡಂಗನೆ ತಿರಿವ ಪರುಶುವಿಡಿವ ಕೋಡಗ ಕುಲವನಾಳುವ ಗೋವಕಾಯ್ವ ಕಾಂತೆಯರ ವ್ರತವ- ನಳಿವ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಜಲವಪೊಕ್ಕು ದೈತ್ಯನ ಸಂಹರಿಸಿ ಕಲಕಿ ಸಮುದ್ರವ ಕಾರಣಕಾಗಿ ನೆಲಗಳ್ಳನ ಮರ್ದಿಸಿ ಹಿರಣ್ಯಾಕ್ಷನ ಚಲುವ ಚೆಳ್ಳುಗುರಿಂದೊಡಲನೆ ಬಗಿದು ಸುಲಭನಾಗಿ ಶುಕ್ರನ ಕಣ್ಣಿರಿದು ಬಲುಸಾಹಸದಿ ಕ್ಷತ್ರಿಯರನು ಗೆಲಿದು ಗೆಲವ ತೋರಿ ಗೋಪಿಗೆ ಸುತನಾಗಿ ನಿಲುವ ದಿಗಂಬರಧರ ರಾವುತನಾಗಿ ಇಳೆಯೊಳು ಚರಿಸುವ ಈತ ಕಾಣೆ ಅಮ್ಮಯ್ಯ 1 ನಿಲ್ಲದಾಡುವ ನಗವ ಪೊರುವ ಮಣ್ಣಬಗೆವ ಕಲ್ಲ ಕಂಬವನೊಡೆವ ಇಳೆಯನಳೆವ ಭಾರ್ಗವ ವಲ್ಲಭನವರಗೆಲುವ ಲಜ್ಜೆನಾಚಿಕೆ- ಯಿಲ್ಲದೆ ಅಶ್ವವನೇರಿ ಮೆರೆವನ್ಯಾರೆ ಅಮ್ಮಯ್ಯ ಎಲ್ಲ ವೇದವನುದ್ಧರಿಸ್ಯಂಬುದಿಯ ಜಲ್ಲಿಸಿ ಧಾರುಣಿಯನು ತಂದಿರುಹಿ ತಲ್ಲಣಿಸುವ ಪ್ರಹಲ್ಲಾದನ ಪೊರೆÀದು ಬಲ್ಲಿದ ಬಲಿಯ ಬಂಧಿಸಿ ಪಿತನಾಜ್ಞೆಯ ಸಲ್ಲಿಸಿ ಮಾತೆಯ ಶಿರವ ಚೆಂಡಾಡಿ ಬಿಲ್ಲನ್ನೆತ್ತಿ ಭೂಮಿಜೆಯೊಡಗೂಡಿ ಮಲ್ಲರ ಮಡುಹಿ ಮುಪ್ಪುರದ ಬಾಲೆಯರ ಜಳ್ಳು ಮಾಡಿ ಧರ್ಮವ ಹೋಗ್ಯಾಡಿ ಹಲ್ಲಣಿಸುವ ತೇಜಿಯನೇರಿದ ಶಿರಿ ವಾಸುದೇವ ಕಾಣೆ ಅಮ್ಮಯ್ಯ 2 ಎವೆ ಇಕ್ಕ ಬೆನ್ನಲ್ಹೊತ್ತು ಗಿರಿಯಕೊ- ನೆವಲ್ಲ ಮಸೆವ ಸಮಯದಿ ಬಹವಿಪ್ರ ಮುನಿ ಭವ ಶ್ರೀರಾಘವ ನವನೀತಚೋರ ನಾರಿಯರ ಮೋಹಿಸಿ ತವಕದಿ ತುರಗವನೇರಿ ಮೆರೆವನ್ಯಾರೆ ಪೇಳಮ್ಮಯ್ಯ ತಮನ ಮರ್ದಿಸಿ ಸಾಮವನಜಗಿತ್ತು ಸುಮನಸರಿಗೆ ಸುಧೆಯನು ತಂದೆರದು ಅವನಿಗಳೆದ ಅಸುರನ ಸಂಹರಿಸಿ ಮಮತೆಯಿಂದ ಪುಟ್ಟ ಮಗುವನೆ ಸಲಹಿ ಗಮಕದೊಳಗಿದ್ದ ಬಲಿಯನು ಕೆಡಮೆಟ್ಟಿ ಸಮರಂಗದಿ ಸುರಧೇನುವ ತಂದು ದಿನಕರ ವಂಶೋದ್ಧಾರಕನಾಗಿ ಕಂಸ- ನ ಮಡುಹಿ ಮುಪ್ಪುರದ ಬಾಲೆಯರು ಭ್ರಮಿಸುವಂತೆ ಬೌದ್ಧಾವತಾರನಾದ ಕಲ್ಕಿ ಹೆಳವನಕಟ್ಟೆರಂಗ ದೇವೋತ್ತುಂಗನ 3
--------------
ಹೆಳವನಕಟ್ಟೆ ಗಿರಿಯಮ್ಮ
ಏನಂತ ನರನೆನ್ನಬೇಕೋ ಜಾನಕೀಶನ ಧ್ಯಾನ ಮನದೊಳಿಲ್ಲದವಗೆ ಪ ಸುಕೃತ ಒಡಗೂಡಿ ಮಾನವನಾದದ್ದು ಖೂನವಿನತಿಲ್ಲದೆ ಜ್ಞಾನಶೂನ್ಯನಾಗಿ ಶ್ವಾನನಂದದಿ ಕೂಗಿ ಹೀನಭವಕೆ ಬಿದ್ದು ನರಕಕ್ಹೋಗುವನಿಗೆ 1 ತಾನಾರೆಂಬ ವಿಚಾರವು ಇಲ್ಲದೆ ಏನೇನು ಸುಖವಿಲ್ಲದ್ಹೇಯಸಂಸಾರದ ಕಾನನದೊಳು ಬಿದ್ದು ಕುನ್ನಿಯಂದದಿ ಮಹ ಜಾಣರ ಜರೆಯುತ ಜವಗೀಡಾಗುವನಿಗೆ 2 ಹೇಸಿಪ್ರಪಂಚದ ವಾಸನ್ಹಿಡಿದು ಹಿಂದ ಕ್ಕೇಸೇಸು ಜನಮದಿ ಘಾಸಿಯಾದಂಥಾದ್ದು ಸೋಸಿಲಿಂ ತಿಳಕೊಂಡು ದಾಸಾನುದಾಸರ ದಾಸನಾಗದೆ ಕಾಲಪಾಶಕ್ಹೋಗುವನಿಗೆ 3 ಮಿಥ್ಯೆ ಕಾಣುವುದೆಲ್ಲ ನಿತ್ಯವಲ್ಲೆನ್ನುತ ಸತ್ಯವೃತ್ತಿ ತನ್ನ ಚಿತ್ತದೋಳ್ಬಲಿಸಲು ನಿತ್ಯ ಸುಖವನೀವ ಉತ್ತಮವಾದಂಥ ಹೊತ್ತನು ಕಳಕೊಂಡು ಮೃತ್ಯುವಶನಾಗುವಗೆ 4 ಸುಮನಸಕಲ್ಪದ್ರುಮ ತಂದೆ ಶ್ರೀರಾಮ ನಮಿತ ಚರಣ ಕಂಡು ನಮಿಸಿ ಪ್ರಾರಬ್ದವ ಕ್ರಮದಿ ಗೆಲಿದು ನಿಜ ವಿಮಲಪದ ಪಡೆವ ಸಮಯವನರಿಯದೆ ಯಮಲೋಕ ಸೇರುವಗೆ 5
--------------
ರಾಮದಾಸರು
ಏನಬೇಡಲೊ ಕೃಷ್ಣ ನಾಚಿಕಿಲ್ಲದೆ ಪ ಜ್ಞಾನಶೂನ್ಯನಾಗಿ ಬಹಳ ಹೀನ ಕಾರ್ಯ ಮಾಡಿ ನಾನು ಅ.ಪ. ಪರರ ವನಿತೆ ಧನಗಳಿಂಗೆ ಅರಿತು ಅರಿತು ಆಶೆಪಡುತ ದುರಿತಕೋಟಿಗಳನು ಮಾಡಿ ಪರಮ ನೀಚನೆನಿಸಿದವನು 1 ವನಗಳನು ಕಡಿಸಿ ಹಿರಿದು ಮನೆಗಳನ್ನು ರಚಿಸಿಕೊಂಡು ವನಿತೆ ಮಾತು ಕೇಳಿ ಜನನಿ ಜನಕರನ್ನು ತೊರೆದ ಪಾಪಿ 2 ಸತ್ಯ ಮತವನು ತುಚ್ಛಗೈದು ನಿತ್ಯಕರ್ಮಗಳನು ಬಿಟ್ಟು ಮತ್ತನಾಗಿ ತಿಂದು ಮಲಗಿ ಕತ್ತೆಯಂತೆ ಹೊರಳುವವನು 3 ಆರ್ತರಾದ ಜನರ ಸಲಹಿ ಕೀರ್ತಿಯನ್ನು ಹೊಂದಿ ದೇಹ ಸಾರ್ಥಕವನು ಮಾಡಿಕೊಳದೆ ಧೂರ್ತನೆನಿಸಿಕೊಳುವ ನರನು 4 ವಾಸುದೇವ ಸಕಲ ದೋಷ ರಾಸಿಗಳನು ದಹಿಸುವ ರಂ- ಗೇಶವಿಠಲರೇಯ ನಿನ್ನ ದಾಸನೆಂದು ಪೇಳದವನು 5
--------------
ರಂಗೇಶವಿಠಲದಾಸರು
ಏನಾಯ್ತು ಹರಿಪಾದ ನೆನೆವಲ್ಲಿ ಮನವೆ ದೀನನೆ ನಿನ್ನ ಬಾಯಿಗ್ಹುಣ್ಣ್ಹುಟ್ಟಿತೇನೋ ಪ ನಿಷ್ಠೆಯಿಂ ಕೈತಾಳವಿಟ್ಟು ಉಲ್ಲಾಸದಿ ಕಷ್ಟಹರನಂಘ್ರಿ ಮನಮುಟ್ಟಿ ಪಾಡುವಲ್ಲಿ ಕೆಟ್ಟಾಸೆಯಿಂ ಪರರಲ್ಹೊಟ್ಟ್ಹೊಟ್ಟ್ಹೊಡಕೊಂಡು ಬೇಡ್ದ ಪೆಟ್ಟಿಗೆ ಕರವರೆಡು ಮುರಿದಿರುವವೇನೋ 1 ವನಜನಾಭನ ದಿವ್ಯ ವನರುಹಂಘ್ರಿಯ ಚರಿತ ಘನವಾಗಿ ಪೊಗಳುತ ಕುಣಿದಾಡವಲ್ಲಿ ಮೊಣಕಾಲು ಕೀಲ್ಮುರಿದು ನೆಲಕಿ ಬಿದ್ದಿಹ್ಯವೆ 2 ನೀಲಶಾಮನ ವಿಮಲಲೀಲೆಗಳು ಶೀಲಮನದಾಲಸಾನಂದೊಳು ಲೋಲ್ಯಾಡವಲ್ಲಿ ಹಾಳು ಸಂಸಾರದ ಗೋಳಾಟ ಕೇಳಿ ಕೇಳಿ ಶೂಲೆಯೆದ್ದೆರಡು ಕಿವಿ ಕಿವುಡಾದವೇನು 3 ಸಾಗರನಿಲಯನ ನೀಗದ ಮಹಿಮೆಗಳ ಜಾಗರದಿಂ ಪಾಡಿ ಭವರೋಗ ಗೆಲಿವಲ್ಲಿ ಸೋಗಿನ ಸೂಳೆಸುದ್ದಿ ರಾಗದ್ಹಾಡ್ಹ್ಯಾಡಿ ಭವ ಜಿಹ್ವೆ ಕಳಕೊಂಡಿದ್ಯೇನೋ 4 ದಾಸನುದಾಸರ ವಾಸದಿಗೂಡಿಯನು ಮೇಷನು ವಿಚಾರದಿಂ ಶ್ರೀಶನ ಚರಣ ಧ್ಯಾಸದೊಳಗಿರ್ದು ಯಮಪಾಶವನು ಗೆಲಿದು ದಯ ಭೂಷ ಶ್ರೀರಾಮನ ಮುಕ್ತಿ ಪಡಿವಲ್ಲಿ 5
--------------
ರಾಮದಾಸರು
ಏನಿದ್ದರೇನಯ್ಯ ಜ್ಞಾನವಿಲ್ಲದಿರೆ ಶ್ರೀನಾಥನಂ ನೆನೆಯದಿಹ ಹೀನಮಾನವಗೇ ಪ. ಗುರುವ ಸೇವಿಸಲಿಲ್ಲ ಹರಿಯ ಧ್ಯಾನಿಸಲಿಲ್ಲ ಅರಿತವರ ಸಂಗತಿಯೊಳ್ವೆರಯಲಿಲ್ಲವಲ್ಲಾ 1 ಹರಿಕತೆಯ ಭಕ್ತಿಯೊಳು ಪ್ರಕಟಮಾಡಿಸಲಿಲ್ಲ ಪರಿಪರಿಯ ಭೋಗದಿಂ ಮರುಳಾದೆನಲ್ಲ 2 ಬಂದೇ ದಾನವಿರದ ಧನವೇಕೆ ಪೇಳು ತಿಂದುಂಡು ಮಲಗುವಾನರಜನ್ಮ ಹಾಳು3 ಕರ ಚರಣ ಮೊದಲಾದ ಕರಣಂಗಳಂ ಪಡೆದು ಹರಿಪದವ ಪೊಂದುವಾ ಪರಿಯುಂಟೆ ಪೇಳು 4 ಆನಂದ ಸಾಮ್ರಾಜ್ಯ ನಿನಗಹುದು ಕೇಳು 5
--------------
ನಂಜನಗೂಡು ತಿರುಮಲಾಂಬಾ
ಏನು ಇಲ್ಲದ ಎರಡು ದಿನದ ಸಂಸಾರಜ್ಞಾನದಲಿ ದಾನಧರ್ಮವ ಮಾಡಿರಯ್ಯ ಪ ಹಸಿದು ಬಂದವರಿಗೆ ಅಶನವೀಯಲು ಬೇಕುಶಿಶುವಿಗೆ ಪಾಲ್ಬೆಣ್ಣೆಯನುಣಿಸಬೇಕುಹಸನಾದ ಭೂಮಿಯನು ಧಾರೆಯೆರೆಯಲು ಬೇಕುಪುಸಿಯಾಡದಲೆ ಭಾಷೆ ನಡೆಸಲೇ ಬೇಕು1 ಹೊರೆಯಲು ಬೇಡಕುಳ್ಳಿರ್ದ ಸಭೆಯೊಳಗೆ ಕುತ್ಸಿತವು ಬೇಡಒಳ್ಳೆಯವ ನಾನೆಂದು ಬಲು ಹೆಮ್ಮೆಪಡಬೇಡಬಾಳ್ವೆ ಸ್ಥಿರವೆಂದು ನೀ ನಂಬಿ ಕೆಡಬೇಡ 2 ದೊರೆತನವು ಬಂದಾಗ ಕೆಟ್ಟುದ ನುಡಿಯಬೇಡಸಿರಿ ಬಂದ ಕಾಲಕ್ಕೆ ಬಲು ಮೆರೆಯಬೇಡಸಿರಿವಂತ ಶ್ರೀ ಕಾಗಿನೆಲೆಯಾದಿಕೇಶವನಚರಣ ಕಮಲವ ಸೇರಿ ಸುಖಿಯಾಗು ಮನುಜ 3 * ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ಏನು ಕರುಣವೊ ಸ್ವಾಮಿ | ಧೇನುಕ್ಹನನಾ ಪ ಮಾನ ನಿಧಿ ತೈಜಸನೆ | ಕಾಣಿಸಿದೆ ಪುಷ್ಕರವಾಅ.ಪ. ಮಾಧವ | ತ್ರಿವೇಣಿಯನೆ ಮೀಯುತ್ತಅಜ ಜನಕ ಶ್ರೀವ್ಯಾಸ | ಕಾಶಿ ನೋಡಿದೆವೋ 1 ವ್ರಜ ಸಾರಿ | ದೆಹಲಿ ಪುರವನು ಸೇರಿಭಯ ರಹಿತ ಕುರುಕ್ಷೇತ್ರ | ಸೇರಿ ಚಿಂತಿಸದೇ 2 ರೊಕ್ಕ ರೂಪನು ಹರಿಯ | ಅಕ್ಕರವ ಕಾಣದಲೆಪುಷ್ಕರ್ವೊರ್ಜಿತ ಮನದಿ | ಚಕ್ರಿಧ್ಯಾನದಿ ಮಲಗಿರೇ |ಚೊಕ್ಕ ತೈಜಸನನ್ನ | ಚಿಕ್ಕ ಲಿಂಗವು ಸ್ತಂಭಪುಷ್ಕರದಿ ಪೂಜಿಸುತ | ಸ್ನಾನ ಸೂಚಿಸಿದೇ 3 ಕಾಳಗ ಗೈದು | ವೀರ ಸ್ವರ್ಗವ ಸೇರ್ದೆಸ್ಮಾರಕಗಳಂ ತೋರ್ದೆ | ಶ್ರೀರಮಾಪತಿಯೇ 4 ಸೂರ್ಯ ಕುಂಡದಿ ಪಿತರ | ಕಾರ್ಯಗಳ ನಿರ್ವಹಿಸಿಆರ್ಯರುಕ್ತಿಯಗೊಂಡು | ಕಾರ್ಯ ಮುಂಬರಿಸೇ |ಪ್ರೇರ್ಯ ಪ್ರೇರಕ ಗುರು | ಗೋವಿಂದ ವಿಠ್ಠಲನ ವೀರ್ಯಗಳ ಸ್ತುತಿಸಿ ಮನ | ಸ್ಥೈರ್ಯ ಸಾಧಿಸಿದೇ 5
--------------
ಗುರುಗೋವಿಂದವಿಠಲರು
ಏನು ಕಾರಣ ಬಂದೆ ಗಂಗೆ | ನಾನೇನು ಪುಣ್ಯವನು ಮಾಡಿದವನಲ್ಲ ಪ ಕಾಸೀಪುರದಿಂದಲಿ ದೇಶ ನೋಡಲು ಬಂದ್ಯೋ | ಬೀಸಿ ಬಿಸುಟುವಂಥ ಅಸ್ಥಿಗಾರದೆ ಒಂದ್ಯೋ | ದಾಸರ ಮಹಿಮೆಯನು ನೋಡುವೆನೆಂದು ಬಂದ್ಯೋ | ದೋಷವರ್ಜಿತ ವಾರಣಾಸಿ ಕಡಿಯದಲೆ | ಲೇಸಾಗಿ ತಿಳಿಪುವದು ಭೀಷ್ಮನ ಜನನೀ 1 ತಿಲನೀರು ಕುಡಿದು ಧರಿಸಲಾರದೆ ಬಂದ್ಯೋ | ಮಲಜನರ ದೋಷವನು ಕಳೆವೆನೆಂದು ಬಂದ್ಯೋ | ಕಲಿಯುಗಕೆ ಈ ಕೃಷ್ಣಾ ಅಧೀನಳೆಂದು ಬಂದ್ಯೋ | ಸುಲಭ ತ್ರಿದದೇಶ್ವರಿ ಗಂಗೆ ತಡೆಯದಲೆ | ನೀರಜ ನಯನೇ 2 ನಿತ್ಯ ಕರ್ಮಗಳು ನೋಡಲಿ ಬಂದ್ಯೋ | ಮಜ್ಜನವ ಮಾಡಿಸಿ ಎನ್ನ ಪೊರಿಯಲು ಬಂದ್ಯೋ | ಮೂಜಗದೊಳು ಪೆಸೆರಾಗಿಪ್ಪೆನೆಂದು ಬಂದ್ಯೋ | ನಿರ್ಜನ ತಟನಿ ನಿರ್ಗುಣಸಾಂದ್ರೆ ತಡಿಯದಲೆ | ನಿಜವ ತಿಳುಪುವದು ವಿಜಯವಿಠ್ಠಲಸುತೆ 3
--------------
ವಿಜಯದಾಸ
ಏನು ಕಾರಣವೆಮ್ಮ ದೂರಕೆ ನೀನು ನೂಕಿದನೆನಿಸಿದೆಹಾನಿ ವೃದ್ಧಿಗಳನ್ನು ಕಾಣಿಸಿ ದೀನಧೀರರ ಮಾಡಿದೆ ಪಎಲ್ಲರೊಳು ನೀ ಪೂರ್ಣ'ರುತಿಲ್ಲವೆಮ್ಮೆಡೆಯೊಳಗೆನುವ ಭ್ರಮೆಯಲ್ಲಿ ಬಂದುದು ಎಮಗೆ ಠಾ'ನ್ನೆಲ್ಲಿ ನಿನ್ನನಗಲುವರೆಉಳ್ಳವನೆ ನಿನಗಿಂತು ಬರುತಿರುವಲ್ಲಿ ನ'್ಮುರವನ್ನು ಪೇಳ್ವದುಜಳ್ಳು ನೀನಿದಿರಿಟ್ಟು ತೊಲಗಿದೆಯಲ್ಲ ಶ್ರೀಗುರುವರ್ಯನೆ 1ಹಲವು ಪರಿಯಲಿ ಚಿತ್ತಪಾಕವ ತಿಳಿದು ಶ್ರುತಿತಾ ಸಾರಿದರ್ಥವುಹೊಳೆಯದೊಂದೊಂದರ್ಥದಲಿ ಮನತೊಳಲಿ ಮಾರ್ಗವ ಕಾಣದೆನಲುಗಿ ಭವಮೃತಿಯೊಂದಿ ಜೀವರು ಬಳಲುತಿರಲವತರಿಪನೆಂಬರುತಿಳಿ'ಯಗಲುವನೆಂದರ ನುಡಿಯಳವಡದು ಗುರುವರ್ಯನೆ 2ಕೊರಗಿ ಕರಗುವ ಜೀವರಾರೈ ಬರುವೆ ನೀನೆಲ್ಲಿಂದ ಸಮಯಕೆಇರುವೆ ನೀನಾವೆಡೆಯೊಳಜ್ಞತೆ ಬರುವದಿವರಿಂಗೇತಕ್ಕೆಹರೆವದೆಂತದರಂದತೋರದು ಧರಿಸುತಿಹೆ ನೀನೆಂತು ತನುವನುಮರೆಯ ಮಾಳ್ವೆಯದೇಕೆ ಮೂರ್ತಿಯ ಕರುಣಿಸೈ ಗುರುವರ್ಯನೆ 3ನಿನ್ನ ನಿನ್ನೊಳು ನೀನೆ ನಾನೆಂದೆನ್ನದೆಂಬುದರಿಂದ ತಿಳಿದರೆನನ್ನ ನಿನ್ನೊಳು ಕಾಣ್ಬೆ ಅಂದು ಪ್ರಸನ್ನನಾಗಿಯೆ ಕರುಣಿಸಿಎನ್ನೊಳಗೆ ಸರ್ವವನು ಸರ್ವರೊಳೆನ್ನ ತಿಳಿದನ್ಯಾರ್ಥವನೆ ಮರತುನ್ನತಾಮಲ ಪೂರ್ಣನಹೆಯೆಂದಿನ್ನು ತೋರದು ದೇವನೆ 4ಸಾಕು ಸನಿಯವ ಸೇರಿಸೆಮ್ಮೊಳು ನೂಕು ಕ'ದಿಹ ತಮವ ಸುಖವನುಸೋಕಿಸೈ ಕಡೆಗೊಳಿಸು ಚಿಂತೆಯ ಬೇಕು ನಿನ್ನಡಿ ಸೇವೆಯುಶ್ರೀಕರನೆ ಚಿಕನಾಗಪುರ ವರದರಸನೆ ಗುರುವಾಸುದೇವನೆತಾಕು ತಡೆ ಬರದಂತೆ ನಿನ್ನೊಳಗೇಕತೆಯ ದಯಮಾಡಿಸೈ 5
--------------
ವೆಂಕಟದಾಸರು
ಏನು ಖೋಡ್ಯಾದಲ್ಲೋ ಸಂಸಾರ ನಾನು ನೋಡಿದ್ದಿಲ್ಲ ಪ ಏನು ಖೋಡಿದು ವಿಚಾರ ತಪ್ಪಿಸಿ ಎನ್ನ ಶ್ವಾನದಂದದಿ ಖೂನವಿಲ್ಲದೆ ಕೂಗಿಸಿತೇನು ಅ.ಪ ತಾನೆ ನಿಜವಿಲ್ಲ ಎನ್ನನು ಏನು ಕೆಡಿಸಿತಲ್ಲ ನಾನಾಪರಿಲಿ ಮಾಯಮೋಹದಿ ಮುಳುಗಿಸಿ ಜ್ಞಾನ ಕೆಡಿಸಿ ಹೀನಬವಣೆಗೆ ತಂದಿತ್ತು 1 ಕನಸಿನಪರಿಯಂತೀಜಗಸುಖ ಕ್ಷಣಹೊತ್ತಿನ ಸಂತಿ ಇನಿಸು ತಿಳಿಗೊಡದೆನ್ನ ಮನಸು ಸೆಳೆದುಕೊಂಡು ಕುಣಿಸಿ ಕುಣಿಸಿ ಮಹ ನರಕಿಯೆನಿಸಿತ್ತು 2 ಸತ್ಯಮಾರ್ಗ ಮರೆಸಿ ಎನ್ನನಸತ್ಯಮಾರ್ಗಕೆಳಸಿ ನಿತ್ಯನಿರ್ಮಲನ ಸತ್ಯ ಚರಿತೆಗಳ ಗುರ್ತು ತಿಳಿಸದೆಮಮೃತ್ಯುತೀಡೆನಿಸಿತ್ತು3 ಮರವೆಯು ಮುಚ್ಚಿತ್ತು ಭವಪಾಶ ಕೊರಳಿಗೆ ಹಾಕಿತ್ತು ಅರಿವಿನ ಕುರುಹನು ತೋರಿಸದೆ ಪರದಿರವು ಮರೆಸಿ ಧರೆಭೋಗ ಅಹುದೆನಿಸಿತ್ತು 4 ನೇಮನಿತ್ಯಕೆಡಿಸಿ ಎನಗೆ ಶ್ರೀರಾಮಪಾದಮರೆಸಿ ಕಾಮಿಸಬಾರದ ಕಾಮಿತಗಳಿಂದ ಪಾಮರನೆನಿಸೆನ್ನ ಕೊಲ್ಲುತಲಿತ್ತು 5
--------------
ರಾಮದಾಸರು
ಏನು ಬಂದ್ಯೋ ಜೀವವೆ ಶರೀರದೊಳು ವ್ಯರ್ಥವಾಗಿಪ. ದಾನಧರ್ಮ ಮಾಡಲಿಲ್ಲ ದಯಬುದ್ಧಿ ಪುಟ್ಟಲಿಲ್ಲಜ್ಞÁನವರಿತು ಹರಿಪೂಜೆ ಮಾಡಲಿಲ್ಲಜ್ಞಾನಿ ಸುಜ್ಞಾನಿಗಳಸನ್ನಿಧಿಯಲ್ಲಿರಲಿಲ್ಲ ನಿರ್ಮಲಮನದಲಿ ಒಂದುದಿನವಿರಲಿಲ್ಲ 1 ಸತಿ ಪುರುಷರು ನಾವು ಸಂತೋಷದಿಂದಿರಲಿಲ್ಲಯತಿಯಾಗಿ ತೀರ್ಥಯಾತ್ರೆ ಮಾಡಲಿಲ್ಲಶ್ರುತಿಶಾಸ್ತ್ರ ಪುರಾಣಗಳ ಕಿವಿಗೊಟ್ಟು ಕೇಳಲಿಲ್ಲಮೃತವಾಗೋಕಾಲ ಬಂತು ಬರಿದೆ ಮುಪ್ಪಾದೆನಲ್ಲ 2 ಉಂಡು ಸುಖಿ ಅಲ್ಲ ಉಟ್ಟು ತೊಟ್ಟು ಪರಿಣಾಮ ಇಲ್ಲಕೊಂಡು ಕೊಟ್ಟು ಹರಿಸೇವೆ ಮಾಡಲಿಲ್ಲದುಂಡು ನಾಯಿಯಂತೆ ಮನೆಮನೆಗಳ ತಿರುಗಿ ಕೆಟ್ಟೆಮೊಂಡಜೋಗಿಗುಣಂಗಳ ಬಿಡಿಸೊ ಹಯವದನ 3
--------------
ವಾದಿರಾಜ
ಏನು ಭ್ರಮೆ ಮನುಜರಿಗೆ ಎಷ್ಟು ಮಮತೆ ಪ್ರಕೃತಿಯಲಿಮೀನು ಗಾಳವÀ ನುಂಗಿ ಮೋಸಹೋದ ತೆರನಂತೆ ಧ್ರುವ ಸತಿ ನನ್ನ ಸುತರೆಂದೆನಿಸಿಹೊನ್ನುಗಳ ಗಳಿಸಿ ಹೆಚ್ಚಾಗಿ ಹೋರ್ಯಾಡಿಸಣ್ಣವರ ಮದುವೆ ಸಂಭ್ರಮದಿ ಮಾಡುವೆನೆಂದುಅನ್ನ ಮೊದಲು ಕಾಣದೆ ಅಂತರ ಪಿಶಾಚಿಯಂತೆ 1 ಬಲುವೋದಿಕೆಯಲ್ಲಿ ಬಲ್ಲವರೆನಿಸಬೇಕೆನುತಹಲವು ಬುದ್ಧಿಯಲ್ಲಿ ಹಿರ್ರನೆ ಹಿಗ್ಗುತಮಲಿನ ಮನಸಿನಜ್ಞಾನದಲಿ ತಾನರಿಯದೆ 2 ಮಿಗಿಲು ಆಸೆಗೆ ಬಿದ್ದು ಬಗೆ ಬಗೆ ಹೂಣಿಕೆಯಲಿಹೊಗದಲ್ಲಿ ಹೊಗುವರು ಹೂ ಬಿಟ್ಟು ತಿಳಿಯರುಖಗವಾಹನ ಮುದ್ದು ರಂಗವಿಠಲನ ನಾಮ ಸ್ಮರಿಸಲುವಿಗಡ ಸಂಸಾರ ಹಗರಣ ನೀರಗುಳ್ಳೆಯಂತೆ3
--------------
ಶ್ರೀಪಾದರಾಜರು