ಒಟ್ಟು 646 ಕಡೆಗಳಲ್ಲಿ , 84 ದಾಸರು , 575 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸ್ಮರಿಸುವೆನು ಗುರುರಾಯ ವರಮಂತ್ರ ಪುರಾಧಿಪ ಪೊರೆಯೊ ಎನ್ನನು ಜೀಯಾ ತವ ಮಹಿಮ ವರ್ಣಿಸ ಲರಿಯ ಮುರಹರಪ್ರೀಯಾ ಅಧ ಮಾಧಮನ ಮಮ ಪರಿಯ ನೀ ಬಲ್ಲೆಯ್ಯಾ ತೋರಯ್ಯಾ ದಯ ವರದ ಚರಿತೆಯ ಅರುಹುವದಕೆ ಪರವಾಕ್ಯರಣಿಯನು ಪಾಲಿಸಿ ನಿರುತ ಹರಿಗುರು ಚರಣದಲಿ ರತಿ ತ್ವರಿತ ಕರುಣಿಸು ರಾಘವೇಂದ್ರನೆ ಪ ಹಿಂದೆ ಕೃತಯುಗದಲಿ ಪ್ರಹ್ಲಾದ ನಾಮದಿ ತಂದೆ ಹಿರಣ್ಯಾಕ್ಷನಲಿ ಸರ್ವೋತ್ತಮನು ಹರಿ ದ್ವಂದ್ವ ಕರ್ಮವನಲಿ ಅರ್ಪಿಸಲು ಮಹದಾ ನಂದ ಪೊಂದುವರಲ್ಲಿ ಎಂದು ಪೇಳುತಿರೆ ಮಂದ ದೈತ್ಯವನಂದ ಮಾತಿಗೆ ಬಂಧನಾದಿಗ ಳಿಂದ ಶಿಕ್ಷಿಸೆ ಬಂದ ದುರಿತವನಂದು ಕಳೆದಾ ಕಂದನನು ಹರಿಪೊರೆಯೆ ದಿತಿಜನು ಒಂದೂ ತಿಳಿಯದೆ ಮಂದಿರ ಗೋವಿಂನೆಲ್ಲಿಹ ನೆಂದು ಕೇಳುತ ಮಂದರರೋದ್ಧಾರ ನಿಲ್ಲದಿಹ ಸ್ಥಳ ವಂದೂ ಇಲ್ಲವೂ ಎಂಂದು ಸಾರಿದೆ ತಂದು ತೋರಿಸು ಸ್ತಂಭದಲಿ ತವ ಇಂದಿರಾಪತಿಯೆಂದು ಗರ್ಜಿಸೆ ಕಂದನಾಡಿದ ಮಾತುಗಳನು ನಿಜ ವೆಂದು ನರಹರಿ ಪೊರೆದೆ 1 ಶ್ರೀಶನಾಜ್ಞೆಯ ವಹಿಸಿ ದ್ವಿತೀಯಾವತಾರದಿ ವ್ಯಾಸರಾಯನು ಎನಿಸಿ ಬ್ರಹ್ಮಣ್ಯರÀಲಿ ಸ ನ್ಯಾಸವನು ಸ್ವೀಕರಿಸಿ ಸರ್ವಜ್ಞ ಶಾಸ್ತ್ರಾಭ್ಯಾಸವನು ಪೂರೈಸಿ ವ್ಯಾಸತ್ರಯ ರಚಿಸಿ ದೇಶದೇಶಗಳನ್ನು ಚರಿಸುತ ಆ ಸಮಸ್ತ ಕುವಾದಿಗಳ ಮತ ನಾಶಗೊಳಿಸಿ ರ ಮೇಶ ಶ್ರೀ ವೆಂಕಟೇಶನನು ಬಹುದಿನವು ಪೋಜಿಸಿ ವಾಸಿಸುತ ಗಜರಾಮ ಪುರಧಾಧೀಶರಾಯನ ಕುಹಯೋಗವ ಪುರಂದರ ದಾಸರಿಂದೊಡಗೂಡಿ ಕೃಷ್ಣನುಪಾಸನೆಯ ಭಕ್ತಿಯಲಿ ಗೈಯುತ ವಾಸುದೇವನ ಶಿಲ್ಪ ಶಾಸ್ತ್ರದ ಶಾಸನಕೆ ಪ್ರತಿಯಾಗಿ ನಿಲ್ಲಿಸಿ ತೋಷಿಸಿದ ಸೌಭಾಗ್ಯ ವೈಭವ 2 ಪದುವ ಸಂಭವ ಜಾತ ಶ್ರೀ ರಾಘವೇಂದ್ರ ಸು ಪದವ ಪಡೆದ ಪ್ರಖ್ಯಾತ ಜಯತೀರ್ಥ ಮುನಿಕೃತ ಸುಧೆಗೆ ಪರಿಮುಳ ಗ್ರಂಧ ರಚಿಸಿ ಮೆರೆದಾತ ಬಧಿರ ಮೂಕಾಂಧ ವ್ಯಂಗ್ಯರು ವಿಧ ವಿಧಿದ ಘನರೋಗಗ್ರಸ್ತರು ಸದಯ ನೀಗತಿಯೆಂದು ಸೇವಿಸೆ ತ್ರಿದಶ ಭೂರುಹದಂತೆ ಸಲಹುವಿ ಕುಧರ ತೀರದಿ ಮೂಲ ರಘುಪತಿ ಪದವ ಪೂಜಿಸುತಲಿ ಸಜೀವದಿ ಮುದದಿ ವೃಂದಾವನ ಪ್ರವೇಶಿಸಿ ಪದುಮನಾಭ ಶ್ರೀ ಶಾಮಸುಂದರ ಮಧು ವಿರೋಧಿಯನು ಧ್ಯಾನಿಸುತ ಶಿರಿ ಸದನನು ವಲಿಸುತ್ತ ಕರುಣಾ ನಿಧಿಯು ಭಜಕರ ಪೊರೆವ ಮಹಿಮೆಯ 3
--------------
ಶಾಮಸುಂದರ ವಿಠಲ
ಸ್ಮರಿಸುವೊ ಜನರಿಗೆ ಸಲಹುವ ದೊರೆಗಳಿನ್ನುಂಟೇವೆಂಕಟೇಶಾ ಪ ಕರುಣಾನಿಧಿ ಮಹಾಮಹಿಮ ನೀನೆಂದು ನಾ ನಂಬಿದೆವೆಂಕಟೇಶಾ ಅ.ಪ. ಬರಿದು ದಂಡಿಸಿ ನಿನ್ನ ಪದ ಹೊಂದುವ ಬಗೆ ತೋರೋವೆಂಕಟೇಶಾ ಬಾಧೆಯ ತಾಳದೆ ಹಾದಿಯ ತಪ್ಪಿದೆ ವೆಂಕಟೇಶಾ 1 ಮಾರಿ ಮುಸುಕಿ ಎನ್ನ ಗಾರು ಮಾಡದೆ ವೆಂಕಟೇಶಾಘೋರ ಜಾರದ ವಾರಿಧಿಯಲಿ ನಾ ಮುಳುಗಿದೆ ವೆಂಕಟೇಶಾ 2 ಪಾರುಗಾಣದೆ ನಿನ್ನ ಮರೆಹೊಕ್ಕೆನೋ ವೆಂಕಟೇಶಾನಾನಾಗಿ ನಿನ್ನ ಗಣ್ಮ್ರತಗರಿಯೊ ವೆಂಕಟೇಶಾ 3 ಚೋರರ ಬಾಧೆಗೆ ಚೀರಿ ಚೀರುತಲಿಹೆನೊ ವೆಂಕಟೇಶಾದೂರ ನೋಡದಿರು ದಾಸರ ದೂತ ವೆಂಕಟೇಶಾ 4 ಹತ್ತು ಒಂಬತ್ತು ವತ್ಸರದಿಂದ ಕುಂಭಿಯೊಳಿದ್ದೆ ವೆಂಕಟೇಶಾಇನ್ನೆಂತು ಪೊಗಳಲಿ ನಿನ್ನ ಕರುಣವು ಬಾರದೆ ವೆಂಕಟೇಶಾ 5 ಕುಂಕುಮ ಅಂಕಿತ ಪದಪಂಕಜ ಶೋಭಿತ ವೆಂಕಟೇಶಾಕಂದನೆಂದು ಪೊರೆಯದಿರೆ ಬಿರಿದುಂಟೆ ವೆಂಕಟೇಶಾ 6 ಜ್ಞಾನದಿ ನಿನ್ನ ಧ್ಯಾನಿಪಲೊಲ್ಲೆ ವೆಂಕಟೇಶಾತೇಜ ತಂದೆವರದಗೋಪಾಲವಿಠಲ ವೆಂಕಟೇಶಾ 7
--------------
ತಂದೆವರದಗೋಪಾಲವಿಠಲರು
ಸ್ವಾಮಿಯ ನೆನೆಯೋ ಪಾಮರ ಮನಸೆ ನೀ ತಾಮಸವನು ನೀಗಿ ಪ ಕಾಮಾದಿಗಳ ಜೈಸಾಮಹಿಮ ಸತ್ಯ ಭಾಮೇಶಗತಿಯೆಂದು ನೇಮವಹಿಸಿ ಬಿಡದೆ ನಾಮ ಪೊಗಳುವರ ಕಾಮಿತಗಳನಿತ್ತು ಪ್ರೇಮದಿಂ ಕಾಯ್ವಂಥ 1 ಗೋಪ ಗೋಪತಿ ನಮಿತ ಗೋಪಿಯ ಪ್ರಿಯಬಾಲ ಪಾಪನಿವಾರಣ ಆ ಪರಬ್ರಹ್ಮನ ಶ್ರೀಪಾದ ಪೊಗಳಲು ತಾಪತ್ರಯಂಗಳ ಲೋಪಮಾಡುವಂಥ 2 ಪರಮ ಶ್ರೀಗುರು ಎಂದು ಪರಮಾತ್ಮ ಶ್ರೀರಾಮ ಚರಣಸಾನ್ನಿಧ್ಯಕ್ಹೊಂದು ನರಕಯಾತನೆ ಗೆಲಿಸಿ ಬರುತಿರ್ಪ ಕಷ್ಟಗಳ ಪರಿಹರಿಸಿ ಕರಪಿಡಿದು ಕರುಣದಿ ಸಲಹುವ 3
--------------
ರಾಮದಾಸರು
ಸ್ವಾಮೀ ರಕ್ಷಿಸು ಸುಬ್ರಹ್ಮಣ್ಯ ಕಾಮಿತಪ್ರದ ಸುರಸ್ತೋಮಾಗ್ರಗಣ್ಯಪ. ಜನ್ಮ ಜನ್ಮಾಂತರದ ಕರ್ಮಾನುಸಾರದಿಂ ದುರ್ಮತಿಗೆಳಸಿಯಹಮ್ಮಮತೆಯಲಿ ದುರಿತ ದೂರವಿರಿಸು ನಿರ್ಮಲಜ್ಞಾನೋಪದೇಶವನಿತ್ತೆನ್ನ1 ಪ್ರತ್ಯಗಾತ್ಮನ ನಾಮ ಕೀರ್ತನೆ ಗೈಯುತ್ತ ಭಕ್ತಿಸೌಭಾಗ್ಯವಿರಕ್ತಿಯ ನೀಡು ಭೃತ್ಯವತ್ಸಲ ಭವಭಯಹರ ಗಿರಿಜಾ- ಪುತ್ರನೆ ಪರಮಪವಿತ್ರ ಸುಚರಿತ್ರನೆ2 ಸುರಲೋಕವನು ಕಾವ ಧುರಧೀರ ಪ್ರಭು ನಿನಗೀ ನರಲೋಕವನು ಕಾವದುರು ಕಷ್ಟವೇನು ಪರಿಶುದ್ಧ ಸ್ಥಾನಿಕಧರಣೀಸುರಕುಲ- ಗುರುವೆಂದು ಚರಣಕ್ಕೆ ಶರಣಾಗತನಾದೆ3 ಸಾಕುವಾತನು ನೀನೆ ಸಲಹುವಾತನು ನೀನೆ ಬೇಕು ಬೇಡೆಂಬುವರ ನಾ ಕಾಣೆ ದೊರೆಯೆ ಲೋಕೇಶ ಸುಕುಮಾರ ಶೋಕಮೋಹವಿದೂರ ನೀಕರಿಸದೆಯೆನ್ನ ಸ್ವೀಕಾರ ಮಾಡಯ್ಯ4 ಪೃಥ್ವಿಯೊಳ್ಪಾವಂಜೆ ಕ್ಷೇತ್ರಾಧಿವಾಸನೆ ಸುತ್ರಾಮಾದಿ ಸುರಮೊತ್ತ ಪೂಜಿತನೆ ಕರ್ತ ಲಕ್ಷ್ಮೀನಾರಾಯಣನ ಸಾರೂಪ್ಯನೇ ದೈತ್ಯದಲ್ಲಣ ವಲ್ಲೀದೇವಿ ಮನೋಹರನೆ5
--------------
ತುಪಾಕಿ ವೆಂಕಟರಮಣಾಚಾರ್ಯ
ಹನುಮಾ ಹನುಮಾಯನ್ನೆ ಉದ್ಧರಿಸುವೆ ನೀ ಜನುಮಾ ಪ ಭಂಜನ ನಿರಂಜನ ಎನ್ನ ಗುರುವೇ 1 ಸರ್ವಾಂತರಂಗಾ | ಕಿನ್ನರ ಫಣವರ ಯಕ್ಷ ವಿಧ್ಯಾಧರ ವಂದಿತನೇ 2 ವೃಂದವನಾಳಿ ಕುಠಾರಿ | ಛಂದದಿಂದಲಿ ಮಹಿಪತಿ ನಂದನ ಸಲಹುವಾನಂದದ ಮಾರುತಿ ಮೂರುತಿಯೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹಯವದನನ ಪಾದದ್ವಯವ ನೆನೆಯದವ ಜಯಿಸುವನೆಂತೋ ಸಂಸ್ಮøತಿ ಫಲವ ಪ. ಕಾಗೆಯಂತಾದರು ಬಿದ್ದರು ಎದ್ದರು ಯೋಗದೊಳಿದ್ದರು ಬಿದ್ದವನೆ ಆಗಮವನು ತಂದು ಅಜನಿಗೆ ಬೋಧಿಸಿ- ದಾ ಗುಣನಿಧಿಯನರ್ಚಿಸದವನು 1 ಬೂದಿಗೆ ವಾದಿಸಿ ಮಣ್ಣಮೇಲುಣ್ಣಲು ಸಾಧಿಪುದೇನವ ಶ್ರವ ಶ್ರಾವಕ ವ್ರತವ ಬೂದಿಯ ಮಾಡಿದ ಮಣ್ಣಿನ ಗಂಡನ ಹಾದಿಯನೊಲ್ಲದ ಹಂಚುನರ2 ಉಟ್ಟದ ಬಿಟ್ಟು ತನ್ನಟ್ಟಲು ಬಟ್ಟೆಯ ಕಷ್ಟ ತಾ ಬಟ್ಟು ಕಂಗೆಟ್ಟನೈಸೆ ಸೃಷ್ಟಿಸಿ ಸಲಹುವ ಹಯವದನನ ಪರಿ- ತುಷ್ಟಿಗೆ ಪುಟ್ಟದ ದುಷ್ಟಪಶು3
--------------
ವಾದಿರಾಜ
ಹರಿ ಭಜನೆ ಮಾಡು ನೀ ತ್ವರದಿ ತ್ವರದಿ ಪ ಸಲಹುವ ನಮ್ಮ ಪರಮ ಪಾವನ 1 ವರಧ್ರುವರಾಜನು ನರಹರಿ ಸ್ಮರಿಸಲು ಕರುಣಿಸ್ಯೆವನ ಹರಿ ಭರದಿ ಪೊರೆದೆ 2 ವನವಾಸದಲಿ ಶ್ರಮ ಅನುಭವಿಸಿದ ಪಾಂಡು ತನಯರ ಸಲಹಿದ ಹನುಮೇಶವಿಠಲ 3
--------------
ಹನುಮೇಶವಿಠಲ
ಹರಿ ಹರಿ ಹರಿ ಹರಿ ಹರಿಯೆನಬೇಕು ಹರಿ ಸ್ಮರಣೆಯೋಳನುದಿನವಿರಬೇಕು ಧ್ರುವ ಹರಿಯೇ ಶ್ರೀ ಪರಬ್ರಹ್ಮೆನಬೇಕು ಹರಿ ಪರಂದೈವೆವೆಂದರಿಬೇಕು ಹರಿಯೇ ತಾ ಮನದೈವೆನಬೇಕು ಹರಿ ಋಷಿ ಮುನಿಕುಲಗೋತ್ರೆನಬೇಕು 1 ಹರಿಯೇ ತಾಯಿತಂದೆನಬೇಕು ಹರಿಯೇ ನಿಜ ಬಂಧುಬಳಗೆನಬೇಕು ಹರಿಯೇ ಆಪ್ತ ಮೈತ್ರೆನಬೇಕು ಹರಿಕುಲಕೋಟೀ ಬಳಗೆನಬೇಕು 2 ಹರಿಯೇ ಸಲಹುವ ದೊರೆಯನಬೇಕು ಹರಿ ಸುಖ ಸೌಖ್ಯದ ಸಿರಿಯೆನಬೇಕು ಹರಿ ನಾಮವೆ ಧನದ್ರವ್ಯೆನಬೇಕು ಹರಿಸ್ಮರಣೆಯು ಸಂಪದವೆನಬೇಕು 3 ಹರಿದಾಸರ ಸಂಗದಲಿರಬೇಕು ಹರಿಭಕ್ತರ ಅನುಸರಿಸಿರಬೇಕು ಹರಿಚರಣದಿ ರತಿಮನವಿಡಬೇಕು ಹರಿ ನಿಜರೂಪವ ನೋಡಲಿಬೇಕು 4 ಹರಿ ಮಹಿಮೆಯ ಕೊಂಡಾಡಲಿಬೇಕು ಹರಿಸ್ತುತಿಸ್ತವನ ಪಾಡಲಿಬೇಕು ಹರಿತಾರಕ ಪರಬ್ರಹ್ಮೆನಬೇಕು ಹರಿ ಸರುವೋತ್ತಮ ಸ್ವಾಮೆನಬೇಕು 5 ಹರಿಯೇ ಸಕಲ ತಾ ಧರ್ಮನಬೇಕು ಹರಿ ಸರ್ವಮಯ ಪುಣ್ಯಕ್ಷೇತ್ರೆನಬೇಕು ಹರಿಯೇ ಇಹಪರ ಪೂರ್ಣೆನಬೇಕು ಹರಿ ಸದೋದಿತ ಸಹಕಾರೆನಬೇಕು 6 ಹರಿ ಬಾಹ್ಯಾಂತರೇಕೋಮಯವೆನಬೇಕು ಹರಿ ಸಕಲವು ವ್ಯಾಪಕವೆನಬೇಕು ಹರಿಯೇ ಶ್ರೀ ಪರಮಾತ್ಮೆನಬೇಕು ಹರಿ ಮಹಿಪತಿ ಸದ್ಗತಿಯೆನಬೇಕು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿ ಹರಿಯೆಂದು ನೆನೆಯೋ ಮರಿಯದೆ ಮನುಜ ಧ್ರುವ ನಡೆಯುತ ನುಡಿಯುತ ನಡೆ ನುಡಿಯೊಳಗೆ ಪೊಡವಿಧರನ ಮಹಿಮೆಯ ಕೊಂಡಾಡುತ ಇಡವುತ ತೊಡವುತ ಮುಡವುತ ಮನದೊಳು ಬಿಡದೆ ಸ್ಮರಸೊ ನೀ ಅಡಿ ಗಡಿಗೊಮ್ಮೆ 1 ಉಣುತ ಉಡುತನ್ನೋದಕ ಕೊಳುತ ವನಿತಯರೊಡಗೂಡಿ ಘನಸುಖ ಪಡೆಯುತ ಅನಭದಿಂದಾನಂದದಿ ನೆನೆಯೋ ತನುಮನದೊಳು ನೀ ಕ್ಷಣಕ್ಷಣಕೊಮ್ಮೆ 2 ಏಳುತ ಕೂಡುತ ಮಲಗುತ ನೆನೆಯೋ ಹಲವು ಪರಿಲಿ ಶ್ರೀ ಹರಿ ಸರ್ವೋತ್ತಮ ನೆಲೆಗೊಂಡಿರೋ ಮಹಿಪತಿ ನಿಜನಾಮವ ಸಲಹುತ ಸ್ವಾಮಿ ಶ್ರೀಗುರು ಶ್ರೀಪತಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಹರಿನಾಮ ಜಪಕಿನ್ನು ಸರಿಯಾದುದಿಲ್ಲ ಸರಸಿಜಾಸನಿದರ ಸಾರವನು ಬಲ್ಲ ಪ. ಬಡವಾಗ್ನಿ ಸುತ್ತಿದರು ಕೊಡುವದನುಪಮ ತಂಪ ನಡುನೀರೊಳಗೆ ಮುಳುಗಲುಡುಪವಹದು ಕಡುಭಯದ ಕಾಡಲ್ಲಿ ಮಿಡುಕುತಿಹ ಸಮಯದಲಿ ಒಡೆಯನನು ನೆನೆದವನ ಕಡೆಹಾಯಿಸುವ ನಮ್ಮ 1 ಘೋರ ರಿಪು ರಾಜಾಗ್ನಿ ಘೋರಾಹಿ ಪಕ್ಷಿ ಮೃಗ ಮಾರಿ ಮೊದಲಾದಭಯಕಾರಿಗಳನು ದೂರ ಓಡಿಸಿ ದಡವ ಸೇರೆ ಸಲಹುವ ನಮ್ಮ ಕಾರುಣ್ಯ ನಿಧಿಯನ್ನು ಸಾರಿಸಾರಿಗೆ ನೆನೆವ 2 ಆವ ಕಾಲಕು ಸುಖವನೀವ ಶೇಷ ಗಿರೀಶ ಶ್ರೀವರನ ಸರ್ವತ್ರ ಸ್ಮರಿಸಿರೆಂದು ದೇವಋಷಿಯೆಂದುದನು ದಿಟವೆನುತ ನಂಬುವರ ಕಾವನನುಭವ ಸಿದ್ಧ ಕಮಲಾಕ್ಷ ಗತಿಯೆಂಬ 3
--------------
ತುಪಾಕಿ ವೆಂಕಟರಮಣಾಚಾರ್ಯ
ಹರಿಬಾಬು ರಾಮಚಂದ್ರ ಶೀತಾಪತೇ ಪ ದಶರಥನುದರದೊಳ್ ಶಿಶುವಾಗಿ ಪುಟ್ಟಿದೆ ದಶಕಂಠನಾಶನೇ ನೀನೆವೋಹರಿ ಶೀತಾಪತೇ 1 ತಾಪತ್ರಯಗಳಿಂದ ಪಾಪಿಯಾಗಿಹೆ ನಾನು ತಾಪವಿದಾರನೇ ನೀನೇವೋಹರಿ ಶೀತಾಪತೇ 2 ವಾಸುದೇವನೇ ನೀನು ದಾಸರ ಸಲಹುವ ಭೂಷಣ ಪೋಷಿಪ ನೀನೇವೋಹರಿ 3 ಆಶಾಪಾಶಗಳಿಂದ ಘಾಶಿಯಾದೆನು ನಾನು ದೋಷವಿದಾರನೇ ನೀನೇವೋಹರಿ 4 ಶಾಂತಿಪದದಲಿ ವಿಶ್ರಾಂತಿ ಕೊಟ್ಟಿನ್ನಾ ಭ್ರಾಂತಿಯ ತೋರಿಸುವ ನೀನೇವೋಹರಿ ಶೀತಾಪತೇ 5
--------------
ಶಾಂತಿಬಾಯಿ
ಹರಿಯ ಪಟ್ಟದರಾಣಿ ನಿಮ್ಮ ಸಿರಿಚರಣಕ್ಕೆ ನಾ ಶರಣೆಂಬೆಧರಣಿ ಒರೆಸಮ್ಮ ದುರಿತಘಮ್ಮ ಹರಿಸುದಮ್ಮ ಪ. ಧನಧಾನ್ಯವಿತ್ತು ಮತ್ರ್ಯರ ಪೊರೆವೆ ಎಂದೆಂದುಮನೆಗಿಂಬುಕೊಟ್ಟು ರಕ್ಷಿಸಿದೆದಿನದಿನದಿ ಚರಣವಿಟ್ಟರೆ ನೊಂದುಕೊಳೆ ನಿನ್ನಗುಣಕೆ ಭೂದೇವಿ ಸರಿಗಾಣೆ ಸಕಲಮುನಿ-ಜನರ ಪೊರೆವುದು ನಿಮ್ಮಾಣೆ ನಾರಾಯಣ ಬಂದುನಿನ್ನ ಸಲಹುವ ಪ್ರವೀಣೆ1 ನಿತ್ಯ ಸಮಸ್ತಪರ್ವತಭಾರವ ನೀ ತಾಳ್ವೆಉತ್ತಮ ತ್ರಿವಿಕ್ರಮನ ರಥೋತ್ಸವವೆ ಮೊದಲಾದಪವಿತ್ರಾಂಕುರಾರ್ಪಣಕೆ ನೀ ಬಂದು ವರಿಯಸುತ್ತಿನ ಪವಳಿಯೊಳಗೆ ನಿಂದು ನಮಗೆಮುಕ್ತಿ ಪದವೀವುದಕೆ ಬಾ ಕೃಪಾಸಿಂಧು 2 ಕೊಂಡ ಸಿರಿ ಹಯವದನಹರಿಯಕರ ಕರಿಭೇರುಂಡ ಸಿರಿಗೆ ಸರಿಯೆನಿಸಿನಿನ್ನನ್ನು ಪೊರೆಯುತಲಿಹನು ಕಂಡಾ3
--------------
ವಾದಿರಾಜ
ಹರಿಯಂದು ಸ್ಮರಿಸುವರ ದುರಿತಪರಿಹಾರವೆಂದು ನೆರೆಪೇಳ್ವ ಶೃತಿ ತಿಳಿದು ಮನವೆ ಕರುಣಾಸಾಗರನಾದ ಕಮಲಾದ್ರಿವಾಸ ನರಹರಿಯಪಾದ ಭಜಿಸುವ ಮನವೆ ಪ ಸುತನ ನಿಂದಗನೆಂದು ಹಿತದಂತ್ಯಕಾಲ ಸಂಘಾತನೆ ಹಿತ ವೇಳ್ವೆ ಕರಿಯಲು ಮನವೆ ಚತುರಾಸ್ಯ ಜನಕ ಮನ್ಮಥಕೋಟಿರೂಪ ಸದ್ಗತಿ ತೋರಿಸಲಹುದೇನು ಮನವೆ 1 ಆ ಮರರೀಮರ ಎಂಬ ಪಾಮರಗೆ ಪಟ್ಟಾಭಿರಾಮ ಭಕ್ತರ ಪ್ರೇಮ ಮನವೆ ಕಾಮಿತಾರ್ಥವನಿತ್ತ ಕಂಜಾಕ್ಷದಯದಿ ಸೀತಾಮನೋಹರ ರಾಮ ಮನವೆ 2 ಕರಿಯು ಮಕರಿಗೆ ಶಿಲ್ಕಿ ನೆರಳುತಲಿ ಪರಮಾತ್ಮ ಪರಬ್ರಹ್ಮನೆಂದು ಸ್ತುತಿಸಿ ಮನವೆ ಗರುಡವಾಹನ ಹೆನ್ನೆಪುರನಿಲಯ ಮರಿಯದಲೆ ಪರಿಪಾಲಿಸಿ ಪೊರೆವ ಮನವೆ 3
--------------
ಹೆನ್ನೆರಂಗದಾಸರು
ಹರಿಯೆ ಎನ್ನ ದೊರೆಯೆ ನಿನ್ನಯ ಮರೆಯಹೊಕ್ಕೆನೊ ಪ ವ್ಯಾಘ್ರಗಿರಿಯೊಳಿರುವ ಸಿರಿನಾರಾಯಣ ಅ.ಪ ಸಕಲ ಲೋಕಗಳನು ನೀನೇ ಸೃಜಿಸುವಾತನು ಸುಖದಿ ಪ್ರಾಣಿಗಳನು ನೀನೇ ಸಲಹುವಾತನು ಪ್ರಕಟವಾದ ಜಗವ ನೀನೆ ಪ್ರಳಯಗೈವನು ನಿತ್ಯ ನೀನೆ ನಿಯಮಿಸುವನು 1 ಸ್ಥೂಲ ಸೂಕ್ಷ್ಮರೂಪ ನೀನೆ ಮೂಲ ಪುರುಷನು ಲೀಲೆಯನ್ನು ಪ್ರಕಟಗೈವ ಕಾಲರೂಪನು ನೀಲಲೋಹಿತಾದಿ ವಿಬುಧಜಾಲವಂದ್ಯನು ಪಾಲಿತಾಖಿಲಾಂಡ ರಮಾಲೋಲ ಸುಗುಣಜಾಲ ಶ್ರೀ 2 ಪರಮಪುರುಷ ಪಂಕಜಾಕ್ಷ ಪತಿತಪಾವನ ಶರಧಿ ಶಯನ ಸಕಲಲೋಕ ಸಂವಿಭಾವನ ವರಗುಣಾಢ್ಯ ವಿಗತಮಾಯ ವಿಶ್ವಮೋಹನ ದುರಿತಗಜ ಮೃಗಾಧಿರಾಜ ವರದವಿಠಲ ವಿಹಗಯಾನ3
--------------
ವೆಂಕಟವರದಾರ್ಯರು
ಹರಿಯೆ ಪೊರೆಯೊ ಪರತರ ಮರೆಯ ಹೊಕ್ಕೆ ಕರುಣಾಕರ ಶ್ರೀಕರ ಪ ಸರುವತಾಪದಿಂದ ಗೆಲಿಸಿ ಸರುವವಿಷಯದಿದ ಉಳಿಸಿ ಪರಮ ನಿಮ್ಮ ಕರುಣ ಬರೆಸಿ ಕರವ ಪಿಡಿದು 1 ಘೋರ ಭವಕಡಲವ ಘೋರ ಬಟ್ಟು ಈಸಿಸಭವ ಸೈರಿಸದೆ ನಿಮ್ಮ ಪಾದವ ಸೇರಿದೆ ಸಲಹು ಪರಮಕರುಣ ಸಿರಿಯರಮಣ2 ಮಾಯಮೋಹಗಳ ಬಿಡಿಸಿ ಕಾಯಕರ್ಮಗಳನು ಕೆಡಿಸಿ ತೋಯಜಾಕ್ಷೆನ್ನಯ್ಯ ರಾಮ ಸಿಂಧು 3
--------------
ರಾಮದಾಸರು