ಒಟ್ಟು 21316 ಕಡೆಗಳಲ್ಲಿ , 137 ದಾಸರು , 8969 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಯ ನಿವಾರಣವು ಶ್ರೀಗುರು ದಿವ್ಯನಾಮ ನಿಮ್ಮ ನಾಮ ಧ್ರುವ ಕ್ಲೇಶಪಾಶವು ಕತ್ತರಿಸಿ ದೋಷನಾಶವನು ಗೈಸಿ ಪೋಷಿಸುವ ಕೇಶವ ನಿಮ್ಮ ನಾಮ 1 ನರಕ ಘೋರದ ಘಟವೆಂಬ ನರಜನ್ಮದುರ್ಘಟ ತಾರಿಸುವ ನಾರಾಯಣ ನಿಮ್ಮ ನಾಮ 2 ಮದಮತ್ಸರವ ಜರಿಸಿ ಭೇದಾಭೇದವು ಹರಿಸಿ ಮಾಧವ ನಿಮ್ಮ ನಾಮ 3 ಭವ ಹಿಂಗಿಸುವ ಗೋವಿಂದ ನಿಮ್ಮ ನಾಮ 4 ಇಷ್ಟಾರ್ಥಗಳ ಕೊಟ್ಟು ಕಷ್ಟಾರ್ಥ ಪರಿಹರಿಸಿ ದೃಷ್ಟಾಂತದಲಿ ಹೊರೆವ ವಿಷ್ಣು ನಿಮ್ಮ ನಾಮ 5 ಮೊದಲು ಮೂವಿಧಿಯಗಳು ಜರಿಸಿ ಸದಮಲ ಪುಣ್ಯ ಪದವೀವ ಮಧುಸೂದನ ನಿಮ್ಮ ನಾಮ 6 ತ್ರಿವಿಧಾಧ್ಯಾತ್ಮ ಸ್ಥಿತಿಗತಿಯ ಈವ ಶಾಸ್ತ್ರಗಳನರಿಸಿ ಭಾವಭಕ್ತೀವ ತ್ರಿವಿಕ್ರಮ ನಿಮ್ಮ ನಾಮ 7 ವರ್ಮಧರ್ಮವನರಿಸಿ ಕರ್ಮಪಾಶವ ಹರಿಸಿ ಜನ್ಮ ತಾರಿಸುವ ವಾಮನ ನಿಮ್ಮ ನಾಮ 8 ಶ್ರೀಕರವನಿತ್ತು ಸಿರಿಸಕಲ ಸೌಭಾಗ್ಯದಲಿ ಸೃಷ್ಟಿಯೊಳು ಹೊರೆವ ಶ್ರೀಧರ ನಿಮ್ಮ ನಾಮ 9 ಹರಿಸಿ ಸಂದೇಹ ಸಂಕಲ್ಪ ಬಾಧೆಯಗಳು ಹರುಷ ಗತಿನೀವ ಹೃಷೀಕೇಶ ನಿಮ್ಮ ನಾಮ 10 ಪಾತಕ ಹರಿಸಿ ಪದ್ಮನಾಭ ನಿಮ್ಮ ನಾಮ 11 ದುರಿತ ವಿಧ್ವಂಸನಿಯ ಮಾಡಿ ಧರೆಯೊಳು ದ್ಧರಿಸುವ ದಾಮೋದರ ನಿಮ್ಮ ನಾಮ 12 ಸಕಲ ಪದವಿತ್ತ ಸುಖಸಾಧನವ ತೋರುತಿಹ್ಯ ಅಖಿಳದೊಳು ಸಂಕುರುಷಣ ನಿಮ್ಮ ನಾಮ 13 ವಾಸನೆಯು ಪೂರಿಸುತ ಭಾಷೆ ಪಾಲಿಸುತಿಹ ಲೇಸಾಗಿ ಶ್ರೀವಾಸುದೇವ ನಿಮ್ಮ ನಾಮ 14 ಪ್ರಾಣಪ್ರಿಯವಾಗಿ ಪ್ರಸನ್ನವಾಗುವ ಪೂರ್ಣ ಪ್ರತ್ಯಕ್ಷವಿದು ಪ್ರದ್ಯುಮ್ನ ನಿಮ್ಮ ನಾಮ 15 ಅನುಮಾನ ಪರಿಹರಿಸಿ ಅನುಭವಾಮೃತ ಸುರಿಸಿ ಅನಿರುದ್ಧ ನಿಮ್ಮ ನಾಮ 16 ಪೂರ್ವಕರ್ಮವ ಹರಿಸಿ ಪೂರ್ಣಕಳೆಯೊಳು ಬೆರೆಸಿ ಪುಣ್ಯಪದವೀವ ಪುರುಷೋತ್ತಮ ನಿಮ್ಮ ನಾಮ 17 ಅಧ್ಯಾತ್ಮ ಸುಖವರಿಸಿ ಸಿದ್ಧಾಂತವನು ತೋರಿ ಅಧ್ಯಕ್ಷವಾಗುವಾಧೋಕ್ಷಜ ನಿಮ್ಮ ನಾಮ 18 ನರಜನ್ಮವನು ಹರಿಸಿ ಹರಿಭಕ್ತಿಯೊಳು ಬೆರೆಸಿ ಅರುವು ಕುರ್ಹುವ್ಹಿಡಿದ ನರಸಿಂಹ ನಿಮ್ಮ ನಾಮ 19 ಅರ್ಚನೆಯು ಪ್ರಾರ್ಥನೆಯು ಪರಮಪೂಜೆಯನರಿಸಿ ಅಚ್ಯುತ ನಿಮ್ಮ ನಾಮ 20 ಜನನ ಮರಣವನಳಿಸಿ ತನುಮದೊಳು ಬೆರಿಸಿ ಜನುಮ ಹರಿಸುವ ಜನಾರ್ದನ ನಿಮ್ಮ ನಾಮ21 ಉಪಮೆಯ ರಹಿತ ವಸ್ತುವುಪಾಯದಲಿ ತೋರಿ ಕೃಪೆಯಿಂದ ಹೊರೆವ ಉಪೇಂದ್ರ ನಿಮ್ಮ ನಾಮ22 ಹರಿಸಿ ಅಹಂಭಾವ ಅರಿಸಿ ಅನುಭವ ಪೂರ್ಣ ಸುರಿಸುವ ಸುಖ ಶ್ರೀಹರಿ ನಿಮ್ಮ ನಾಮ 23 ಕರಕಮಲವಿಟ್ಟು ಶಿರದಲಿ ಸದ್ಗೈಸುತಿಹ ಕರುಣಾಳು ಮೂರುತಿ ಶ್ರೀಕೃಷ್ಣ ನಿಮ್ಮ ನಾಮ 24 ಸಾರ ಸಂಧ್ಯಾಯನದಿ ಮಹಿಪತಿಯ ಹೊರೆವ ಶ್ರೀಗುರು ನಿಮ್ಮ ನಾಮ 25
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಭಯ ನಿವಾರಿಸೋ ಜಯ ಶ್ರೀ ಹರಿಯೆ ಭಯ ನಿವಾರಿಸಯ್ಯ ದಯದಿ ಭಯ ನಿವಾರನೆನ್ನ ಪ ಮರವೆಯೆಂಬುವ ಇರುಳಿನಲ್ಲಿ ದುರಿತಯೆಂಬುವ ಗಿರಿಯಲ್ಲಿ ಪರನಿಂದೆಂಬುವ ಶರಧಿಯಲ್ಲಿ ಕರುಣವಿಲ್ಲದ ಕಾಯದುರ್ಗದರಣ್ಯಕಂಜಿ ಕೊರುಗುತಿರುವೆ ಹರಿಯೆ ನಿಮ್ಮ ಸ್ಮರಣವೆಂಬ ನಿರುತ ಧೈರ್ಯ ಕರುಣಿಸಭವ 1 ವ್ಯಸನವೆಂಬ ಮುಸುಕಿನಿಂದ ಪಿಸುಣತೆಂಬುವ ದಸಕಿನಿಂದ ಪುಸಿಯುಯೆಂಬುವ ಮಿಸುನಿಯಿಂದ ವಿಷಯದಾಸೆ ತಸ್ಕರಗಂಜಿ ದೆಸೆಗೆ ಬಾಯ ಬಿಡುವೆನಯ್ಯ ಅಸಮಮಹಿಮನ್ವ ಚಶ್ರವಣೆಂಬೆಸೆವ ಧೈರ್ಯ ಕರುಣಿಸಭವ 2 ಆರು ಹುಲಿಗಳ ಘೋರಿಸುವ ಮೂರು ಮರಿಗಳ ಹಾರುತಿರುವ ಮೂರೇಳು ನಾಯ್ಗಳ ಘೋರತಾಪ ಸೈರಿಸದೆ ಸಾರಸಾಕ್ಷ ಮರೆಯ ಹೊಕ್ಕೆ ಶ್ರೀರಾಮ ನಿಮ್ಮ ಚರಣ ಭಕ್ತೆಂ ಬ್ವೀರತನವ ಕರುಣಿಸಭವ 3
--------------
ರಾಮದಾಸರು
ಭಯಕೃದ್ಭಯನಾಶನ ಮಾಯಾರಮಣ ಭವಭಯಹರಣ ಪ ಜೀಯ ಕಾಯುವುದಯ್ಯ ಪರಿಹರಿಸಯ್ಯ ತಾಪ- ತ್ರಯ ದಯೆತೋರಯ್ಯ ಎನ್ನೊಡೆಯಾ ಅ.ಪ ನಾನರಿಯೆ ನಿನ್ನಯ ಗುಣಗಣಾದಿಗಳ ಅನುದಿನದಿನಾ ಅನುಭವಿಸಿ ಭವಚಕ್ರದಾಟಗಳ ಜನುಮ ಜನುಮಾಂತರದಿ ಬಂದ ವಾಸನಾದಿಗಳ ದೀನವತ್ಸಲ ದೂರ ನೋಡುವೆಯ ನೀನರಿಯ ಎನ್ನನು ಉಳುಹುವ ಪರಿಯ ಎನಗ್ಯಾರಿಹರೊ ನಿನ್ಹೊರತು ಪೂರೆವರಯ್ಯ ವನಜಸಂಭವನಯ್ಯ ಜೀಯ 1 ಕರಿ ಮಕರಿ ಪಿಡಿಯಲು ಬಂದ ಪರಿಯೇನು ನಿಖಿಳಖಳಕುಲವೈರಿ ಶ್ರೀಹರಿ ಸಿರಿಗೆ ಹೇಳದ್ದೇನು ಭಕುತನಾರ್ತಧ್ವನಿಯ ಕೇಳಿ ಬಂದೆಯಾ ಏನು ನಾನು ಆಸಾಧನವನರಿಯೇನು ಘನ್ನಮಹಿಮ ನಿನ್ನಯ ಕೀರ್ತಿಯನು ಕೇಳಿ ಬಂದೆನು ಇನ್ನೇನು ನಿನಗೆ ಏನು ತೋರಿದಂತೆ ಮಾಡಿನ್ನು ಎನ್ನೊಡೆಯ ನೀನೆಂದಡಿಗೆ ಬಿದ್ದಿಹೆನೊ ಇನ್ನು 2 ಈಸಲಾರೆನು ಸಾರಿ ಈ ಭವಸಾಗರದೊಳಗೆ ಶ್ರೀಶ ನಿನಗತಿಶಯವೆ ಕರುಣವಿಲಾಸ ತೋರೆನಗೆ ದಾಸದಾಸದಾಸರದಾಸ್ಯ ಕೊಡಿಸೆನಗೆ ಶ್ರೀಶ ಎನ್ನಯ ಮನದ ಕ್ಲೇಶವನೂ ನಾಶವಗೈಸು-ನಿರಾಶ್ರಯನಾಗಿಹೆನು ಏಸುಬಲ್ಲೆನು ಕಾಸಿನವನು ಬೇಸರಿಸದಿರು ಇನ್ನೂ-ಮುನ್ನೂ 3 ತಾಪತ್ರಯಗಳಿಂದನುದಿನದಿ ನಾ ನೊಂದೆ ಶ್ರೀಪತಿಯೆ ಹೃತ್ತಾಪಕಳೆದು ಪೊರೆಯಬೇಕೆಂದೆ ಗೋಪನಿನ್ನಯ ಶ್ರೀಪಾದದೊಳು ಮನವ ನೀಡೆಂದೆ ಕುಪಿತವೇ ನಿನ್ನವನು ನಾನೆಂದೆ ಭೂಪ ಆಪತ್ತೋದ್ಧಾರಕನೆಂದೆ ಪಾಪಿಮಾನವಜನುಮದಲಿ ಬಂದೆ ಕಾಪಾಡುವುದು ಎಂದೇ-ತಂದೇ 4 ಭೂಸ್ಥಳದಿ ನಿಂತ ಶ್ರೀ ವೇಂಕಟೇಶ ಹರೇ ತ್ರಿಸ್ಥಳದೊಳು ಈ ಸ್ಥಳವೆ ವೈಕುಂಠ ದೊರೆಯೆ ವಿಸ್ತರದಿ ಮಹಿಮೆಯ ಪಾಡಿ ಪೊಗಳಲು ನಾವು ಶಕ್ತರೆ ಸ್ವಸ್ಥಚಿತ್ತವಿಲ್ಲ ಶ್ರೀಹರೇ ಈ ಸ್ಥಿತಿಯಲ್ಲಿ ಎನ್ನ ನೋಡುವರೆ ದುಸ್ಥಿತಿಯಬಡವನಕೈಯ ಬಿಡುವರೆ-ಶೌರೆ5
--------------
ಉರಗಾದ್ರಿವಾಸವಿಠಲದಾಸರು
ಭಯಕೃದ್ಭಯಹಾರೀ ರಾಧಾನಯನ ಮನೋಹಾರೀ ಪ ತಾಪತ್ರಯ ಪರಿಹಾರಕ ರಂಗಾ ಗೋಪೀಜನ ಹೃತ್ಪದ್ಮ ಪತಂಗಾ 1 ಸುಂದರ ಸುಸ್ಮಿತಶೋಭಿತ ವದನಾ ಮಾಧವ ಜಿತಮದನಾ 2 ದುಷ್ಟಕುಲಾಂತಕ ಈ ಧರೆಯೊಳು ಶ್ರೀದ - ವಿಠಲ ವಿಧಿಭವವಂದಿತ ಪಾದಾ 3
--------------
ಶ್ರೀದವಿಠಲರು
ಭಯದೂರ ಧರ್ಮಸಾರ ಭುವನಾಧಾರ ಪ. ಭಕ್ತಾರ್ತಿಭಂಜನ ಭವಪಾಶಮೋಚನ ದಮನ ನಿಕೇತನ ಸಾರಿ ಮೈದೋರು ಬಾ ಶ್ರೀರಮಾಮನೋಹರ 1 ಸಂದಿಗ್ಧ ಸಮಯಂಗಳ್ ಬಂದಿರ್ಪವೇಳೆಯೊಳ್ ನೊಂದಿರ್ಪ ಭಜಕರೊಳ್ ಇಂದೇಕೆ ಸಂದೆಗಂ ಪೇಳ್ ಇಂದಿರಾಮನೋಹರ ನಂದನಕುಮಾರ 2 ಶ್ರೀನಾಥ ನಿನ್ನಂಘ್ರಿಯೊಳ್ ಅನ್ಯೂನ ಭಕ್ತಿಯಿರಲ್ ಮಾನಾಭಿಮಾನಂಗಳೇನೊಂದನೆಣಿಸದೆ ಜ್ಞಾನೋದಯಂ ತಾನಾಗೆ ಚಿದಾನಂದಮಪ್ಪುದೈ 3
--------------
ನಂಜನಗೂಡು ತಿರುಮಲಾಂಬಾ
ಭಯವಿಲ್ಲೋ ಭಯವಿಲ್ಲೋ ಭಯಹರ ನರಸಿಂಗನಡಿಯ ದಾಸರಿಗೆ ಪ ವೃಶ್ಚಿಕ ಮುಟ್ಟಲು ಬಾಧೆಯೆ ಇಲ್ಲ ತಕ್ಷ ಕಚ್ಚಲು ವಿಷವಂಟೋಣಿಲ್ಲ ಅಚ್ಯುತಾನಂತನ ಹೆಚ್ಚಿನಡಿದಾವರೆ ಮುಚ್ಚಿಭಜಿಪ ಮಹ ನಿಶ್ಚಲಚಿತ್ತರಿಗೆ 1 ಕಳ್ಳರು ಮುತ್ತಲು ಸುಲಕೊಂಬೋಣಿಲ್ಲ ದಳ್ಳುರಿ ಹತ್ತಲು ಸುಡುವ ಶಕ್ತಿಲ್ಲ ಪಾದ ಉಲ್ಲಾಸ ಮನದಿಂದ ನಿಲ್ಲದೆ ಭಜಿಪರ್ಗೆ ಎಳ್ಳಷ್ಟಾದರು 2 ಹುಲಿ ಕರಡಿ ಬದು ನುಂಗುವ ತ್ರಾಣಿಲ್ಲ ಬಲು ಭೂತ ಬೇತಾಳ ಎದುರೆ ಇಲ್ಲ ಮಲಿನಹರಣ ಕೃಪಾನಿಲಯ ಭಕ್ತಜನ ಸುಲಭನೆಂದೊದರುತ ನಲಿವ ನಿರ್ಮಲರಿಗೆ 3 ಭೂಪತಿಗಳ ಭಯ ರೋಮಕೆ ಇಲ್ಲ ಪಾಪತಾಪಗಳ ಲೇಪವೆ ಇಲ್ಲ ಆ ಪರಬ್ರಹ್ಮ ಜಗದ್ವ್ಯಾಪಕನನುದಿನ ಗೌಪ್ಯದಾರಾಧಿಸುವ ಪಾಪಲೋಪರಿಗೆ 4 ಏಸು ಕಷ್ಟಬಂದರಾಯಾಸವಿಲ್ಲ ನಾಶ ಮೃತ್ಯು ಗಾಳಿಸೊಂಕೋಣಿಲ್ಲ ಹೇಸಿ ದುರ್ಭವದ ವಾಸನಳಿದ ಮಹ ಶ್ರೀಶ ಶ್ರೀರಾಮನ ದಾಸದಾಸರಿಗೆ 5
--------------
ರಾಮದಾಸರು
ಭರತಪುರೀಶನೆ ಭಾಗ್ಯ ಸುಭಾಷನೇ ಪ ಪರಮ ವಿಲಾಸನೇ ಅ.ಪ ಪಾಮರನಾನೂ ಶ್ಯಾಮಲ ನೀನೂ ಕಾಮಿತ ಫಲವರ ಕೋಮಲರೂಪನೆ ಸಾಮಜಾವರ ರಂಗಾ 1 ಧರಣಿಜನನಾಥ ದಾತಾ ವಿದೂತಾ ಗುರುವರ ಶರಣರ ಪರಮಾಧಿಕಾರಿ ಕರುಣಬಾರದೇಕೊ ಭರತಪುರೀಶನೆ 2
--------------
ಚನ್ನಪಟ್ಟಣದ ಅಹೋಬಲದಾಸರು
ಭರಬರನೆ ಬಾಜಾರಕೆ ನಾ ಬಂದೆನಯ್ಯ ಚಿದಾನಂದನ ಮರೆಯಲಿಕೆ ಪ ಐವರು ಗೌಡರು ಕಟ್ಟಿದ ಪೇಟೆ ಆ ಪೇಟೆಗೆಐದು ನಾಲ್ಕು ಬಾಗಿಲುಗಳುಐದು ಮಂದಿ ಸೆಟ್ಟರು ಸೇರಿಹರು ಆವರಲ್ಲಿಯೆಐದು ಮಂದಿ ಚಲವಾದಿಗಳು1 ಭಾರ ನೇಮಲ್ಲಿದೆ 2 ತಡುಗರೆಂಬವಾಲೆ ಶೆಟ್ಟಿಗಳೆ ಅಲ್ಲಿಗಲ್ಲಿಗೆಪಡುವಲ ಕೋರಿ ಶೆಟ್ಟಿಗಳೇಕಡುಕರ್ಮಿ ಕೋಮಟಿ ಶೆಟ್ಟಿಗಳೇ ಬಾಯಿ ಘನವಾಗೆಬಡಬಡಿಪ ಪಟ್ಟಣ ಶೆಟ್ಟಿ 3 ಪಾಪವೆಂಬ ವಸ್ತ್ರದಂಗಡಿಯೇ ನಾ ನೋಡಲಾಗಿತಾಪವೆಂಬ ಜವಳಿ ಅಂಗಡಿಯೆಕೋಪವೆಂಬ ಕುಪ್ಪಸ ದಂಗಡಿಯೇಒಪ್ಪುತಲಿರೆ ಕಾಪಥವೆಂಬ ಸಕಲಾತ್ಮಂಗಡಿಯೇ 4 ಚಿ, ಛೀ ಎಂಬ ಚಿಕ್ಕ ತಕ್ಕಡ ಗಂಡಿಯೆ ನಾ ಬರುತಿರೆನಾಚಿಕೆಯಿಲ್ಲದ ಕಂಚಿನಂಗಡಿಯೇಚು ಛೂ ಎಂಬ ಚೀನಿಯಂಗಡಿಯೇ ಯಡಬಲದಲ್ಲಿಕೋಚು ಮಾಡೋ ಉದ್ದಿನಂಗಡಿಯೇ 5 ತನು ವ್ಯಸನವೆಂಬ ತಾಡಪತ್ರಿ ತೋರಲಾಗಿಮನವ್ಯಸನವೆಂಬ ಕಿಂಕಾಪುಧನವ್ಯಸನವೆಂಬೋ ಮಖಮಲ್ಲು ನಾ ಬೆರಗಾಗೆಜನ ವ್ಯಸನವೆಂಬೋ ಜರತಾರಿಯೇ6 ನಾನಾ ವಿಷಯ ವೆಂಬೋ ಉತ್ತತ್ತಿ ಅಲ್ಲಿದ್ದಾವೆಜ್ಞಾನಶೂನ್ಯ ಜಾಜಿಕಾಯಿಮಾನ ಹಾನಿಯೆಂಬೋ ಜಾಪತ್ರಿನಾನು ನನ್ನದು ಎಂಬ ಭಂಗಿ ಸೊಪ್ಪು7 ಜೀವನೆಂಬ ಹೊಗೆಯ ತೊಪ್ಪಲೇ ಹಿರಿಯವಾದನೋವು ಕಷ್ಟಗಳೆಂಬ ಗಾಂಜಿಯೇಸಾವು ಬದುಕು ಎಂದೆಂಬ ಮಾಲೆಗಳೇ ಮಾರುತಲಿತ್ತೋನಾನು ನೀನು ಎಂಬ ಚಿಲುಮೆಗಳೋ 8 ಭೇದವೆಂಬ ನಿಲುವುಗನ್ನಡಿಯೆ ಒಳಗಿದ್ದಾವೆ ವಾದವೆಂಬವಜ್ರದಹರಳೇ ಹಾದಿ ಕಾಣೆನೆಂಬ ಹವಳದ ರಾಶಿಯೇ ಹರಡಿದ್ದಾವೆಗಾದೆ ಎಂಬ ಸೂಜಿದಬ್ಬಣವೇ 9 ಪ್ರಾರಬ್ಧವೆಂಬೋ ಉಂಬತಳಿಗೆಯೇ ಪಸರಿಸುತಿರುವಘೋರ ತಾಪತ್ರಯದ ತಟ್ಟೆಯೇನಾರಿ ನೋಟೆಂಬ ಕಠಾರಿಯೇ ನಿಲಿಸಿದ್ದಾವೆಸೂರಿಯ ಸುಕೃತವೆಂಬೋ ತುಬಾಕಿಯೇ10 ಪರಿಣಾಮಿಲ್ಲದ ಪಡವಲಕಾಯಿ ದಾರಿಯಲಿದಾರಿಯಿಲ್ಲದ ದೊಡ್ಡಿಲಕಾಯಿಅರಿವಿಲ್ಲದ ಕುಂಬಳಕಾಯಿ ಹಾಗಿದ್ದಾವೆಮರುಳು ಎಂಬ ಮಾವಿನಕಾಯಿ11 ಮಂಠ ಎಂಬೋ ಮೆಂತ್ಯ ಪಲ್ಲಯೇ ಮಾಸಲವಿತ್ತೆಕಂಟಕ ಎಂಬೋ ಹರಿವೆ ಪಲ್ಲೆಯೇಕೊಂಟೆಯೆಂಬೊ ಬಸಲೆ ಪಲ್ಲೆಯೇ ತೀವ್ರದಲಿತ್ತೆಶುಂಠವೆಂಬೋ ಬೆರಕೆ ಪಲ್ಲೆಯೇ 12 ಬಂಗಾರವೆಂಬೋ ಬಿಳಿಯ ಜೋಳವೇ ಬೆಡಗಿಲಿರೇರಂಗು ಎಂಬೋ ರಾಗಿ ರಾಶಿಯೇಸಂಗವೆಂಬೋ ಸಣ್ಣಕ್ಕಿಯೇ ಸಾರಿದ್ದಾವೆಹಿಂಗದೀಪರಿ ದಿವಾರಾತ್ರಿಯೇ 13 ಸಂಕಲ್ಪೆಂಬೋ ಧಾರಣೆ ಹಚ್ಚಿರೋ ಸಂಗಾತಲೆವಿಕಲ್ಪೆಂಬೋ ಧಾರಣೆಯಿಳಿವುದೇಸುಖದುಃಖವೆಂಬೋ ಮಾರಾಟವೇ ಸಾಗಿರಲಾಗಿಕಾಕಧಾವಂತರ ಸಂಧಾನವೇ 14 ಕಾಮಕ್ರೋಧಗಳೆಂಬ ಕಳ್ಳರೇ ಕಾವಲಿರ್ದುರಾಮನೆಂಬ ಸ್ಮರಣೆ ಕದ್ದಿಹರೋಕಾಮುಕರೆ ತಿರುಗಾಡುವರೆಲ್ಲ ಕಾಣದ ಹಾಗೆಆ ಮಹಾಜ್ಞಾನವ ಸುಲಿದಿಹರೋ15 ಬರಬಾರದ ನಾನು ಬಂದೆನೇ ಬಾಜಾರ ಬಿಟ್ಟುಹೊರಡುವ ತೆರನ ಕಾಣೆನೇಕರುಣಿಯಾಗಿ ಕೈ ವಿಡಿವರಾರೋಕರುಣಾಕರ ಹರ ವಿಶ್ವೇಶನೇ ಬಲ್ಲ 16 ಚಿಂತೆ ನಾನು ಮಾಡುತಿರಲಾಗಿ ಚಿದಾನಂದಚಿಂತೆ ಬೇಡೆಂದು ಮುಂದೆ ನಿಂದಿಹನುಚಿಂತೆ ಬಿಡು ಕಾವಲಿಹೆನೆಂದು ಚಿದ್ರೂಪ ತೋರಿಎಂತು ಪೇಳಲಿ ಎನ್ನೆದುರು ನಿಂದಿಹನೆ17
--------------
ಚಿದಾನಂದ ಅವಧೂತರು
ಭರಿತ ದಯಾಸಾರ ವಿಹಾರಾ | ಭರಿತ ದಯಾಸಾರಾ ಪ ನಿರುಪಮ ಲೀಲಾ ಗೋಕುಲ ಬಾಲಾ ತ್ರಿಭುವನ ಪಾಲಾ ದಾನವ ಕಾಲಾ ಸುಮನಸ ಪಾಲಾ | ತುಳಸೀಮಾಲಾ 1 ಶುಭಕರ ಚರಿತಾ | ಮುನಿಗಣ ವಿನುತಾ ಸುರಗಣ ಸನ್ನುತಾ | ಸುಭವ ನಮಿತಾ ಶರಣ ಜನಾನತ ಸಕಲಾಧಿತಾ ಕಾಮಿತ ದಾತ-ಮಾಂಗಿರಿನಾಥಾ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಭವ ಎನಗೆ ಹಿಂಗಿತು ಪ ಪದುಮನಾಭನ ಪಾದದೊಲುಮೆ ಎನಗಾಯಿತು ಅ ಹರಿತೀರ್ಥ ಪ್ರಸಾದ ಎನ್ನ ಜಿಹ್ವೆಗೊದಗಿತುಹರಿಯ ನಾಮಾಮೃತ ಕಿವಿಗೊದಗಿತುಹರಿಯ ದಾಸರು ಎನ್ನ ಬಂಧು ಬಳಗವಾದರುಹರಿಯ ಶ್ರೀಮುದ್ರೆ ಆಭರಣವಾಯ್ತು 1 ಮುಕುತರಾದರು ಎನ್ನ ನೂರೊಂದು ಕುಲದವರುಮುಕುತಿ ಮಾರ್ಗಕೆ ಯೋಗ್ಯ ನಾನಾದೆನೊಅಕಳಂಕ ಶ್ರೀಹರಿ ಭಕುತಿಗೆನ್ನ ಮನ ಬೆಳೆದುರುಕುಮಿಣಿಯರಸ ಕೈವಶನಾದನೆನಗೆ 2 ಇಂದೆನ್ನ ಜೀವಕ್ಕು ಸಕಲ ಸಂಪದವಾಯ್ತುಮುಂದೆನ್ನ ಜನ್ಮ ಸಫಲವಾಯಿತುತಂದೆ ಶ್ರೀ ಕಾಗಿನೆಲೆಯಾದಿಕೇಶವರಾಯಬಂದೆನ್ನ ಹೃದಯದಲಿ ನೆಲೆಯಾಗಿ ನಿಂತ 3
--------------
ಕನಕದಾಸ
ಭವ ಕಾಮಹರ ನಿನ್ನಂಘ್ರಿ ತಾಮರಸಯುಗಳ ಭಜಿಸುವೆ | ಭಜಿಸಿ ಬಿನ್ನೈಸುವೆ ಶ್ರೀ ಮನೋಹರನ ತೋರಯ್ಯ 1 ಕೃತ್ತಿವಾಸನೆ ಎನ್ನ ಚಿತ್ತದಲಿ ಹರಿಯಪದ ನಿತ್ಯದಲಿ ಭಜಿಪ ಮತಿ ನೀಡೊ | ಮತಿ ನೀಡೊ ಪಾರ್ವತಿ ಚಿತ್ತದೊಲ್ಲಭನೆ ನಮಿಸುವೆ 2 ಸುವರ್ಣಮುಖರಿಯ ತೀರದಲಿ ನೆಲಸಿರುವೆ ಶ್ರೀ ವರಾಹನಂಘ್ರಿ ಭಜಿಸುತ್ತ | ಭಜಿಸುತ್ತ ನೆಲಸಿರುವ ಪಾವನರೂಪ ಸಲಹಯ್ಯ 3 ಕಾಳಸ್ತಿನಿಲಯನೆ ಪೇಳಲಿನ್ನೇನು ನಾ ತಾಳಲಾರೆನು ಈ ಭವಬಂಧ | ಭವಬಂಧ ಬಿಡಿಸುವ ವ್ಯಾಳ ಶಯನನ್ನ ತೋರೈಯ್ಯ 4 ಭಕ್ತರಿಗೊಲಿದು ಅಪಮೃತ್ಯು ಪರಿಹರಿಸಿದೆ ಸತ್ಯ ಸಂಕಲ್ಪ ನಿನ್ನಂಘ್ರಿ | ನಿನ್ನಂಘ್ರಿ ಕಮಲಗಳ ಚಿತ್ತದಲಿ ತೋರಿ ಸಂತೈಸು 5 ಮನಕೆ ಗುರು ನೀನಹುದು ಮನವ ಹರಿಯಲಿ ನೆಲಸೊ ವೈರಿ ಮಮತೆಯಿಂ | ಮಮತೆಯಿಂದಲಿ ನಿತ್ಯ ಮನಶುದ್ಧಿಗೈದು ಕಾಯಯ್ಯ 6 ಶಂಖಚಕ್ರವ ಪಿಡಿದ ಸಂಕರ್ಷಣನ ರೂಪ ನಿತ್ಯ ಭಜಿಸುವೆ | ಭಜಿಸುವೆ ಕೈಲಾಸ ಅಂಕದಲಿ ನೆಲಸಿ ಹರುಷದಿ 7 ನರಸಿಂಹ ರೂಪವನು ಸ್ಮರಿಸುತ್ತ ಮೈಮರೆವೆ ಉರುತರ ಭಾವ ಭಕ್ತಿಯಲಿ | ಭಕ್ತಿಯಲಿ ಭಜಿಪ ನಿನ್ನ ಸ್ಮರಿಸುವರ ಭಯವ ಹರಿಸುವೆ 8 ಶ್ರೀ ರಾಮನಾಮವನು ಪ್ರೇಮದಿಂದುಮೆಗರುಹಿ ಆರಾರು ಅರಿಯದಾನಂದ | ಆನಂದವಿತ್ತೆ ಭವ ತಾರಕವೆಂದು ಕರುಣಾಳೂ 9 ಅಜನ ಭ್ರೂಮಧ್ಯದಲಿ ಜನಿಸಿದೆಯೊ ಜಗದಲ್ಲಿ ಭಂಜನ | ಭಂಜನಗೊಳಿಸಿದೆ ತ್ರಿಜಗದಲಿ ನಿನಗೆ ಸರಿಯುಂಟೆ 10 ಶೇಷ ಪರ್ಯಂಕನಿಗೆ ಹಾಸಿಗೆಯಾಗಲು ತೋಷದಲಿ ತಪವಾಚರಿಸಿದೆ | ಚರಿಸಿ ಸಾಧಿಸಿದೆ ನೀ ಶೇಷ ಪದವಿಯನು ತ್ರಿನೇತ್ರ 11 ಶರಧಿ ಮಥಿಸಲು ಗರಳ ಉದ್ಭವಿಸಿ ಭಯವಾಗೆ | ಭಯವಾಗಿ ಪರಿಹರಿಸಿ ಗರಳವನೆ ಕುಡಿದೆ ಶ್ರೀ ಕಂಠ 12 ಅಸುರರ ವಂಚಿಸಿದ ವಶವಲ್ಲದ ಹೆಣ್ಣು ವಶವಾಗಲೆಂದು ಹಾರೈಸಿ | ಹಾರೈಸಿ ಬಳಲುತಿರೆ ಬಿಸಜಾಕ್ಷ ನಿನ್ನ ಸಲಹಿದ 13 ತಾರಕಾಸುರನಿಂದ ಘೋರಪಡುತಿರೆ ಜಗವು ಮಾರ ಪೂಅಸ್ತ್ರ ಎಸೆಯಲು | ಎಸೆಯಲು ದಹಿಸಿ ಕು- ಮಾರನನು ಪಡೆದೆ ಗಿರಿಜೇಶ 14 ಸ್ತುತಿಪ್ರಿಯ ನಿನ್ನ ನಾ ಸ್ತುತಿಸಲಾಪೆನೆ ಮಂದ ಮತಿ ಎಂದು ನೀನೆ ಸಂತೈಸೊ | ಸಂತೈಸಬೇಕಿನ್ನು ಮತಿಯಿತ್ತು ಹರಿಯ ಪದದಲ್ಲಿ 15 ಶಿರದಲ್ಲಿ ಗಂಗೆ ಚಂದ್ರನ ಮೆರೆಯುವ ಉರಗ ಭೂಷಣನೆ ಕೇಳಿನ್ನು | ಕೇಳಿನ್ನು ಎನ್ನ ಮನ ಮರೆಯದೆ ಹರಿಯ ನೆನೆಯಲಿ 16 ವಿಷ್ಣು ಭಕ್ತರೊಳಗೆ ಶ್ರೇಷ್ಠ ನೀನಹುದಯ್ಯ ಜಿಷ್ಣುವಿಗೆ ಮೆಚ್ಚಿ ಧನುವಿತ್ತೆ | ಧನುವಿತ್ತೆ ಗೋಪಾಲ- ಕೃಷ್ಣವಿಠ್ಠಲನ ತೋರಯ್ಯ 17
--------------
ಅಂಬಾಬಾಯಿ
ಭವ ಕೃತ ಪಾಪ ನಿಷ್ಕøತಿ ನಿನ್ನಚರಣಾಂಬುವೆಂದರುಹುತಲಿದೆ ಶ್ರುತಿತತಿ 1ಮೊದಲು ಪಾತ್ರಾಂತರದಲಿ ಗ್ರಹಿಸಿಯೆ ಯಂತ್ರವಿಧಿುಂದ ಬರೆದು ಬೀಜಾಕ್ಷರಂಗಳನುಹದಿನಾರೆಂಟಾವರ್ತಿ ಜಪಿಸಿ ಮೂಲವನೆತ್ತಿವದನದಿಂ ಬಿಂದು ಸೂಸದವೋಲ್ಸೇವಿಪ ಹಾಗೆ 2ಮೂರಾವರ್ತಿಯೊಳಿಂತು ಸೇವಿಸಿ, ಶಿರದಲ್ಲಿಸೇರಿಸಿ, ಬೇರೆ ಹಸ್ತವ ಮಾರ್ಜಿಸಿಸಾರಿಸಿ ತಡವಿ ತನುವ ಧನ್ಯನಹೆನು ಸಂಸಾರಸಾಗುವ ದಾಂಟಿಸುವರೆ ಜಗದೀಶ 3ಚರಣದಂಗುಟದಿಂದ ಚಿಮ್ಮಿದ ತುಲಸಿಯುಬೆರೆದ ಪುಷ್ಪವು ಬಂತೆನ್ನೊರೆಗೆ ಸರ್ವೇಶಹರುಷದಿಂ ನಿನ್ನಡಿ ಸರಸಿಜಯುಗಳವಮರೆಯೊಕ್ಕ ದೀನನೊಳ್ಕರುಣ ಬಂದುದೆ ಕೃಷ್ಣಾ 4ತಿರುಪತಿನೆಲೆವಾಸ ವರದವೆಂಕಟೇಶಗುರು ವಾಸುದೇವಾರ್ಯನಾಗಿಯೆ ನೀನೆಅರುಹಿದ ಮತ ಪಿಡಿದಿರುವೆನು ತ್ವನ್ನಾಮಸ್ಮರಣೆ ಮಾತ್ರವನಿತ್ತು ಪೊರೆಯಬೇಕೆನ್ನನು 5ಓಂ ಜಿಷ್ಣವೇ ನಮಃ
--------------
ತಿಮ್ಮಪ್ಪದಾಸರು
ಭವ ಕೊಳ್ಳವ ಬೀಳದಿರೊ ಪ ಹರುಷ ವಿಷಾದವು ಮನಸಿನದೆಂಬರೆ | ಮನಕೆ ತಗುಲಿತೆಂತಾ || ಸ್ಪರಿಶ ಶಬ್ದವು ರೂಪವು ರಸ ಗಂಧದಿ | ತೋರಿತು ಭ್ರಾಂತೀ1 ಹಸಿವು ತೃಷವು ಜೀವನದೆಂಬರೆ ಜೀವನಕದು ಉಂಟೇ || ವಿಷಯ ಸುಖವು ಕಳೆದಾನಂದದ ಬೋಧದೊಳಗುಂಟೇ 2 ಜರೆ ಮರಣವು ತನುವಿನದೆಂಬರೆ | ತನುವದು ಒಂದಲ್ಲಾ || ಚಿನುಮಯ ಭವತಾರಕನೊಲಿದರೆ ಶೇಡೋರ್ಮಿಗಳೇನಿಲ್ಲಾ 3
--------------
ಭಾವತರಕರು
ಭವ ತಾರಿಸೊ ಸುಜ್ಞಾನ ಪ್ರೇರಿಸೊ ಪ ಮಾಯದ ಮೃಗದ ಬಾಯಿಗೀಡಾದೆ ಕಾಯುವದಾತರ ಕಾಣೆ ಹರಿಯೆ ನಾಯಿಯ ತೆರದಲಿ ಮಬ್ಬಿಲಿ ಮೆರೆದೆ ದೋಷ ನೋಡದೆ ಕಾಯೋ 1 ಬಂದೆನು ಭೂಸುರನಾಗುತ ಜಗದಿ | ಪೊಂದಿದೆ ತವ ಪದ ಹರಿಯೆ ನಂದನಸುತ ನೀ ಬಂಧನ ಬಿಡಿಸೋ ಕಂದನ ಮರೆಯುವರೇನೋ 2 ಮನ್ನಿಸೋ ಶಾಮಸುಂದರವಿಠಲ ಭಾರ ನಿನಗೊಪ್ಪಿಸಿದೆ | ಹರಿಯೆ ಇನ್ನು ತೋರಿಸೈ ನಿನ್ನಯ ಚರಣ ಕರುಣಾಭರಣ ದೇವ 3
--------------
ಶಾಮಸುಂದರ ವಿಠಲ
ಭವ ನಿಂದುದಗಣಿತ ಕರ್ಮವೆಂದು ನಿನ್ನವನೆನಿಪುದೊ ಹರಿಯೇ ಅ.ಪಸೂಸುತಿದೆಯಜ್ಞಾನ ಮಾಸುತಿದೆ ಸುಜ್ಞಾನದೋಷಗಳು ಬಹುವಾಗಿವೆ ಹರಿಯೇಆಶೆಯೆಂಬುದಕಂತವಿಲ್ಲ ಬಹುಬಗೆ ತರದಪಾಶದಲಿ ಬಿಗಿವಡೆದೆನೋ ಹರಿಯೇಈಶ ನಿನ್ನಯ ಮಾಯೆಯೆಂಬ ಬಲು ಹುರಿ ಬಲೆಯುಬೀಸಿ ಸೋವುತ್ತಲಿದೆಕೋ ಹರಿಯೇಕ್ಲೇಶಸಾಗರದಲ್ಲಿ ಮುಳುಗಿ ತಡಿಯನು ಕಾಣೆವಾಸುದೇವ ಕಡೆಹಾುಸೋ ಹರಿಯೇ 1ಆವರಣ ವಿಕ್ಷೇಪವೆಂದೊಂದು ಶಕ್ತಿ ತಾನಾವರಿಸಿ ಬ್ರಹ್ಮಾಂಡವ ಹರಿಯೇತೀವಿಕೊಂಡೊಳಹೊರಗೆ ವಿಕ್ಷೇಪ ಶಕ್ತಿ ತಾಜೀವಕೋಟಿಗಳ ಸೃಜಿಸಿ ಹರಿಯೇಠಾವುಗಾಣದ ತೆರದಿ ಬಹುವಿಧದ ಕರ್ಮದಲಿಜೀವರನು ಬಂಧಿಸಿಹುದು ಹರಿಯೇಈ ವಿಧದ ಮಾಯೆ ತಾ ಯೋಗಿಗಳಿಗಸದಳವುದೇವ ಕೃಪೆಮಾಡಿ ಸಲಹೋ ಹರಿಯೇ 2ಮೂರು ಗುಣ ಮೂಲದಲಿ ಮೂರು ಕರ್ಮಗಳುದಿಸಿಮೂರಾರು ಕವಲಾದುದೋ ಹರಿಯೇಸಾರಿ ವೃಕ್ಷವ ಬಳ್ಳಿ ಮೀರಿ ಮುಸುಕಿದ ತೆರದಿತೋರದಿದೆ ನಿನ್ನ ನಿಜವ ಹರಿಯೇಬೇರುವರಿದಿಹ ಕರ್ಮಲತೆಯ ಜಾರಿಸಿ ಗುಣವಮೀರುವ ಉಪಾಯವೆಂತೋ ಹರಿಯೇಸೇರಿದೆನು ನಿನ್ನ ಚರಣವನು ವೆಂಕಟರಮಣದಾರಿಯನು ತೋರಿ ಸಲಹೋ ಹರಿಯೇ 3ಕಂ||ಗುರುವಾರದರ್ಚನೆಯನಿದಗುರುವಾಗಿಯೆ ಪೇಳ್ದೆ ನೀನೆ ಮೂಢನ ಸಲಹಲ್‍ಗುರುಸೇವೆಯೆಂತೊ ತಿಳಿಯದುಗುರುವರ ಸಂಗತಿಯನರಿಯೆ ನೀನೇ ಗತಿಯೈಓಂ ದಾಮೋದರಾಯ ನಮಃ
--------------
ತಿಮ್ಮಪ್ಪದಾಸರು