ಒಟ್ಟು 9343 ಕಡೆಗಳಲ್ಲಿ , 135 ದಾಸರು , 4870 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಸೆಗೆ ಬಾರೊ ಕುಸುಮನಯನ ಕುಶಲದಿಂದಲಿ ಬೇಗನೆಶಶಿಮುಖಿಯರ್ ಕರೆವರು ನಿನ್ನ ವಸುಧೆಪಾಲ ರಾಮನೊಪಅಸಮ ವೀರನನೆ ಗೆಲಿದು ಪಶುಪತಿಯ ಬಿಲ್ಲಮುರಿದುಕುಸುಮಬಾಲೆ ಕೊರಳೊಳ್ ಧರಿಸಿವಸುಧೆಸುತೆಯಕರವಪಿಡಿದು1ಕುಶಲದೀ ನಗುನಗುತಾ ಪಸರಿಸುವಿ ಮಂಟಪಕೆ ಹಸೆಗೆಧರಣಿ ಪಾಲರ್ ಲಜ್ಜೆವೆರಸಿ ಮೆರೆವ ಕೀರ್ತಿ ವಿಬುಧರೊಲಿಸೆದುರುಳದೈತ್ಯ ಕ್ರೋಧವರಿಸಿ ಸುರರುರಗದಲ್ಲಿನಿಂದುಹರುಷದಿ ಸುಮ ವರ್ಷವನ್ನು ಕರೆಯುವರೈ ಸರಸದೀ2ಜನಕರಾಯ ಹರುಷದಿಂದ ಜನಕೆ ಓಲೆ ಬರೆಯೆ ಕಂಡುಘನದಿ ದಿಬ್ಬಣ ಕೂಡಿ ಬಂದ ಜನಕ ಜನನಿಯರಿಗೆ ನಮಿಸಿಅನುನಯದಿಂ ಮನ ಓಲೈಸಿ ದನುಜಾಂತಕ ಗೋವಿಂದನೇ3<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಹಿಗ್ಗುವೆಯೇಕೊ - ಏ ಮನುಜಾಹಿಗ್ಗುವೆಯೇಕೊ ಅಹಿಗ್ಗುವ ತಗ್ಗುವ ಮುಗ್ಗುವ ಕುಗ್ಗುವಅಗ್ನಿಯೊಳಗೆ ದಗ್ಧವಾಗುವ ದೇಹಕೆ ಅಪಸತಿ ಪುರುಷರು ತಮ್ಮ ರತಿಕ್ರೀಡೆಗಳ ಮಾಡೆಪತವಾದಿಂದ್ರಿಯ ಪ್ರತಿಮೆಯ ದೇಹಕೆ 1ತೋರುವುದೊಂಬತ್ತು ದಾರಿಯ ಮಲವಾದನೀರಿಲ್ಲದಿದ್ದರೆ ನಾರುವ ದೇಹಕೆ 2ಆಗದ ಭೋಗದ ಆಗು ಮಾಡುತಲಿಪ್ಪರೋಗಬಂದರೆ ಬಿದ್ದು ಹೋಗುವ ದೇಹಕೆ 3ನರರ ಸೇವೆಯಮಾಡಿ ನರಕ ಭಾಜನನಾಗಿಮರಳಿ ಮರಳಿ ಹುಟ್ಟಿ ನರಳುವ ದೇಹಕೆ 4ಪುರಂದರವಿಠಲನಚರಣ ಕಮಲಕೆಎರಗದೆ ಇರುತಿಪ್ಪ ಗುರುವಿನ ದೇಹಕೆ 5
--------------
ಪುರಂದರದಾಸರು
ಹಿಂದಿನ ಪುಣ್ಯ ಫಲವೆಂತೊಇಂದಿರೇಶಾನಂದದ ಲೀಲೆ ಅರುಹಿದ ಪ.ಚಿತ್ರವಿಚಿತ್ರ ಮಹಿಮೆಯ ತೋರುತಖಳದೈತ್ಯರನೆಲ್ಲ ಮಡುಹಿದದೈತ್ಯರನೆಲ್ಲ ಮಡುಹಿ ಬಳಲ್ದನೆಂದುಕಸ್ತೂರಿ ತೈಲವೆರಸಿ ತಂದು 1ಶಂಕಿನಿ ಪದ್ಮಿನಿಯರೊಂದಾಗಿ ಕೃಷ್ಣನಪಂಕಜಾಸನದಲಿ ಕುಳ್ಳಿರಿಸಿಪಂಕಜಾಸನದಲಿ ಕುಳ್ಳಿರಿಸಿ ತಮ್ಮ ಒಲ್ವಕಂಕಣಗೈಯ ಮೌಳಿಯೊಳಿಟ್ಟು 2ಈರೇಳು ಲೋಕದ ದೊರೆಯಾಗು ಭಕುತರಸಿರಿಯಾಗು ದಿತಿಜರರಿಯಾಗುಸಿರಿಯಾಗು ಭಕ್ತರ ದಿತಿಜಾರಿಯಾಗೆನುತಹರಸಿದರರ್ಥಿ ಮಿಗಿಲಾಗಿ 3ಕುಂಭಕುಚದ ಕಾಮಿನಿಯರು ಹರುಷದಿಅಂಬುಜಾಕ್ಷನ ಪೂಸಿ ಕಿರುಬೆಮರಿಅಂಬುಜಾಕ್ಷನ ಪೂಸಿ ಕಿರುಬೆಮರಿ ದಣಿಯದೆ ಕದಂಬ ಕಡಿದಟಕಾಳಿಯ ತಂದು 4ವಿಕ್ರಮಾನ್ವಿವತವಾದವ್ಯಾಕೃತ ಗಾತ್ರಕೆಅಕ್ಕರಿಂದೆ ತೈಲನಾಶನವಅಕ್ಕರಿಂದಲಿ ತೈಲನಾಶನವ ಪೂಸಿ ಜಗುಳಲುಘಕ್ಕನಂಬರವ ಬಿಗಿದುಟ್ಟ 5ಹದವಾದ ಬಿಸಿನೀರ ಪೊಂಬಂಡೆಯೊಳುತುಂಬಿಪದುಮಗಂಧೆಯರು ನೀರೆರೆದರುಪದುಮಗಂಧೆಯರು ನೀರೆರೆವ ಸಂಭ್ರಮಕ್ಕೆಮುದದಿಸುರರುಹೂಮಳೆಗರೆದರು6ಮುಂಬರಿಯುತ ಬಾಲೆಯರುತಕದಿಂದಅಂಬುಧಾರೆಯ ನಿಲ್ಲಗುಡದೆರೆದುಅಂಬುಧಾರೆಯ ನಿಲ್ಲಗುಡದೆರೆದುಜಾಂಬೂನದಾಂಬರವುಡಿಸಿ ಕರೆತಂದು 7ಚಿತ್ರಮಂಟಪಕೆ ನವರತ್ನ ತೆತ್ತಿಸಿದ ಕಂಭಕಸ್ತೂರಿ ಕಾರಣೆ ರಚನೆಯಕಸ್ತೂರಿ ಕಾರಣೆ ರಚನೆಯ ಮಧ್ಯದಿಮುತ್ತಿನ ಹಸೆಯೊಳು ಕುಳ್ಳಿರಿಸಿ 8ನೀಲಮಾಣಿಕಮೋಘದಿಂದಲೊಪ್ಪುವ ಪದಕಲೋಲನೇತ್ರೆಯರಳವಡಿಸಿದರುಲೋಲನೇತ್ರೆಯರು ಅಳವಡಿಸಿ ಅಂಗುಲಿಗೆಲ್ಲ ಮುದ್ರಿಕೆನಿಟ್ಟು ನಲಿದರು 9ಮುಕುಟಕೌಸ್ತುಭಮಣಿಯುಕುತ ಭೂಷಣವಿಟ್ಟುರುಕುಮಿಣಿ ಸತ್ಯರೆಡಬಲದಿರುಕುಮಿಣಿ ಸತ್ಯರೆಡಬಲದಿ ಕುಳ್ಳಿರೆನಿತ್ಯಮುಕುತಗಾರತಿಯ ಬೆಳಗಲು 10ಚಿನ್ನದ ಹರಿವಾಣದಿ ರನ್ನದಾರತಿಯಿಟ್ಟುಕನ್ನೇರು ಕಿರುನಗೆ ಬೀರಿದರುಕನ್ನೇರು ಕಿರುನಗೆ ಬಿರಿಯುತ ಪಣೆಯೊಳುಪೊನ್ನಿನಾಕ್ಷತೆಯಿಟ್ಟು ಲಲಿತವ 11ಜಯ ರಾಮ ತ್ರೈಧಾಮ ಜಯ ಜೀಮೂತಶಾಮಜಯ ಪೂರ್ಣಕಾಮ ಸಾಸಿರನಾಮಜಯ ಪೂರ್ಣಕಾಮ ಸಾಸಿರನಾಮನೆಂದುಭಯರಹಿತಗಾರತಿಯ ಬೆಳಗಿದರು 12ಚಿತ್ತಜನಯ್ಯಗೆ ಚಿನುಮಯ ದೇಹಗೆಉತ್ತಮಗುಣಗಣ ಭರಿತಗೆಉತ್ತಮಗುಣಗಣ ಭರಿತಗೆ ಪರಮಪವಿತ್ರೇರಾರತಿಯ ಬೆಳಗಿದರು 13ಪನ್ನಗಾದ್ರಿವಾಸ ಪ್ರಸನ್ನವೆಂಕಟೇಶಕನ್ನೆ ಲಕ್ಷ್ಮಿಯ ಕೂಡಿ ಆರೋಗಣೆಯಕನ್ನೆ ಲಕ್ಷ್ಮಿಯ ಕೂಡ ಆರೋಗಣೆಯ ಮಾಡಿತನ್ನ ಭಕ್ತರಿಗೆಲ್ಲ ಸುಖಪ್ರೀತ 14
--------------
ಪ್ರಸನ್ನವೆಂಕಟದಾಸರು
ಹಿಂದಿನ ಬವಣೆಗಳೆಲ್ಲ ಆಗಲೆ ಮರೆದೆಯೇನೊ |ಇಂದುಬಂದ ಭಾಗ್ಯವು ನಿಜವೆ ವೆಂಕಟತಂದೆ?ಪತಲೆಗೆ ಹುಲಗಲ ಹೂವಕಟ್ಟಿತುರುಗಳ ಕಾಯುತಲಿದ್ದೆ |ಹಲವು ರತ್ನದ ಮುಕುಟ ಈಗ ಇಟ್ಟಿಹೆನೆಂದು 1ಒಪ್ಪಿಡಿಅವಲಕ್ಕಿಯನು ಒಪ್ಪದಿಂದ ಸವಿದೇ ಸವಿದೆ |ತಪ್ಪದೆ ಪಂಚಾಮೃತ ಉಂಡು ಸೊಕ್ಕಿದೆನೆಂದು 2ಭಾಗ್ಯವು ಬಂದರೆ ಭಕ್ತರನು ಮರೆವರೆ ಸೌ-|ಭಾಗ್ಯವಂತ ನೀನುಪುರಂದರವಿಠಲ3
--------------
ಪುರಂದರದಾಸರು
ಹಿಂದಿಲ್ಲಾ ಇನ್ನು ಮುಂದಿಲ್ಲಾ |ಹಿಂದಿಲ್ಲಾ ಮುಂದಿಲ್ಲಾ | ಒಂದಿನ ಸುಖವಿಲ್ಲಾಪನಂದ ಗೋಪನ ಮುದ್ದು | ಕಂದ ನೀನಲ್ಲದೆ ಅ.ಪಉಡುವರಿವೆ ಇಲ್ಲಾ ಉಂಬರನ್ನವು ಇಲ್ಲ |ನಡೆವರೆ ಮುಂದೆ ದಾರಿಯು ಕಾಣೆನಲ್ಲ ||ಪೊಡವಿ ಪಾಲಕ ಶ್ರೀಕೃಷ್ಣ ನೀನಲ್ಲದೇ |ಬಡವನ ಬಾರೆಂದು ಕರೆದು ಮನ್ನಿಪರಿಲ್ಲ1ಕಾಸು ಕೈಯೊಳಗಿಲ್ಲ | ಆಸೆ ದೇಹದೊಳಿಲ್ಲ ||ದೇಶ ದೇಶವ ಸುತ್ತಿ ಬಳಲಿದೆನಲ್ಲಾ ||ಭಾಸುರಾಂಗನೆ ಶ್ರೀನಿವಾಸ ನೀನಲ್ಲದೇ |ಲೇಸನೆಣಿಸುವರ ಕಾಣೆ ರುಕ್ಮಿಣಿನಲ್ಲ2ಸತಿಸುತರೆನಗಿಲ್ಲ |ಗತಿಮುಂದೆ ಶಿವ ಬಲ್ಲ ||ಹಿತದಿಂದಲಿರಲೊಂದು ಮನೆ ತನಗಿಲ್ಲ ||ಪೃಥವಿ ಪಾಲಕ ಸೀತಾರಾಮ ನೀನಲ್ಲದೇ |ಹಿತವ ಬಯಸುವರ ಕಾಣೆ ಜಗದ ನಲ್ಲ3ತಂದೆ ತಾಯಿಗಳಿಲ್ಲ | ಬಂಧು ಬಳಗವಿಲ್ಲ |ಒಂದು ವಿದ್ಯವ ನಾನು | ಕಲಿತವನಲ್ಲಾ ||ಇಂದಿರೆಯರಸ ಗೋವಿಂದ ನೀನಲ್ಲದೇ |ಬಂದ ಭಾಗ್ಯಗಳೊಂದು ನಿಜವಾದುದಲ್ಲಾ4<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>
--------------
ಗೋವಿಂದದಾಸ
ಹಿರಿದು ಸಂಸಾರ ನೆಲೆಯದು ಕಲ್ಪತರುಕಾಮಧೇನುವದು ಸುಖವೋ ದುಃಖವೋಹೊನ್ನು ಸತಿಯು ಸುತರೆನ್ನವರೆನ್ನದೆಚಿನ್ಮಯರೂಪೆಂದು ತಿಳಿದುಉನ್ನತವಾಗಿಹ ಸಾಧುಗುಣದಿ ತಾಮುನ್ನ ನೋಡುವವನ ನರನೋ ಹರನೋ1ಮನೆಯು ಮಾತಾ ಪಿತ ಮನುಜವರ್ಗವನೆಲ್ಲಘನಮಹಿಮನ ವಿನೋದವೆಂದುಸನುಮತದಲಿ ತಾನಧಿಕಾರಿಯೆನಿಸಿಯೆಮನದಿ ಸೂಚಿಪುದು ಉರಿಯೋ ಸಿರಿಯೋ2ಬಂಧನದೊಳು ಮಹಾ ನಿಂದನೆಯನು ಕೇಳುತಲಿಕುಂದುಕೊರತೆಗೆಲ್ಲ ಹಿಗ್ಗುತಲಿಇಂದಿದು ಅತ್ಮನ ಲೀಲಾ ಚರಿತನೆಂದುಮುಂದೆ ತೋರುವದಿದು ಭಯವೋ ಜಯವೋ3ಜನನ ಮರಣ ಸುಟ್ಟುಮನುಜ ಜೀವನ ಕೆಟ್ಟುಕನಸಿನ ತೆರ ಸಂಸಾರ ಮೂಡಿದಿನಕರಜ್ಯೋತಿಯಲಿ ಬಹುಬೆಳಗುತಲಿ ತಾ ನಿಹುದುಗೆಲುವೋ ಒಲವೋ4ಕರುಣಕಟಾಕ್ಷಸುಕರುಣ ಶಾಂತತ್ವದಿಸರಸ ಸುಜ್ಞಾನವನಳವಡಿಸಿಗುರುಚಿದಾನಂದಾವಧೂತನೆ ತಾನಾಗಿಹರುಷಿಸಿ ಸುಖಿಪುದು ದೊರೆಯೋ ಚರಿಯೋ5
--------------
ಚಿದಾನಂದ ಅವಧೂತರು
ಹೀಗೆ ಮಾಡಬೇಕೋ-ವಿಠಲ ತಂದೆಹೀಗೆ ಮಾಡಬೇಕೋ ಪಹೇಗಾದರು ದುರಿತಗಳೆನ್ನ ಕಾಡದಹಾಗೆ ಮಾಡ ಬೇಕೋ ಅ.ಪಹಿಂದಿನ ಸುಕೃತಗಳ ಫಲದಿಂದ ಬಂದೀ ನರಜನುಮಮುಂದೆ ನಾ ತಾಯ ಉದರದಲಿ ಜನಿಸದಹಾಗೆ ಮಡಬೇಕೋ ವಿಠಲ ತಂದೆ 1ದಾನಿ ನಿನ್ನನು ಬೇಡುವೆ ದುಷ್ಕರ್ಮದ -ಹಾನಿಯೊಂದೇ ಸಾಲದೆಹೀನ ಮಾನವರಿಗೆ ನಾನು ಕೈಯಾನದಹಾಗೆ ಮಾಡಬೇಕೋ - ವಿಠಲ ತಂದೆ 2ಕರುಣಿಪುರಂದರವಿಠಲ ತಂದೆನೆರೆನಂಬಿದೆ ನಿನ್ನಶರಣ ರಕ್ಷಕನೆಂಬ ಬಿರುದು ಬೇಕಾದರೆಹೀಗೆ ಮಾಡಬೇಕೋ - ವಿಠಲ ತಂದೆ 3
--------------
ಪುರಂದರದಾಸರು
ಹೇಳಬಾರದೆ ಬುದ್ಧಿಯ - ಮಗನ ಊರ-|ಗೂಳಿಯ ಮಾಡಿದೆನೆ ? ಪಮೇಳದಿ ಓರಗೆಯವರ ಕೂಡಿಕೊಂಡು |ಹಾಳು ಮಾಡುತಾನೆ ಗೋವಳಗೇರಿಯ ಅ.ಪಅಟ್ಟದ ಮೇಲಿಟ್ಟಹ - ಚೆಟ್ಟಿಗೆ ಹಾಲು |ಬಟ್ಟನಿಕ್ಕಿ ಚೀಪುವ ||ದುಷ್ಟತನವ ಮಾಡಬೇಡ ಅಯ್ಯಾ ಎನೆ |ಕಷ್ಟವೇನೆಂಬೆ ಮುದ್ದಿಟ್ಟು ಓಡಿ ಪೋದ 1ಮೊಸರ ಮಥಿಸುತಿರಲು - ಬಂದು ಕುಳಿತ |ಹಸುಗೂಸು ಎನುತಿದ್ದೆನೆ ||ಕುಸುಮನಾಭನು ತನ್ನ ವಶವಾಗು ಎನುತಲಿ |ವಸನೆತೆಗೆದು ಮೊಲೆ ಪಿಡಿದು ಹೋದ ಮೇಲೆ 2ಬೆಣ್ಣೆಯ ಕಂಡರಂತೂ - ಅದರರೂಪ |ಕಣ್ಣಿಗೆ ತೋರನಲೆ ||ಸಣ್ಣವನೆಂದು ಬಗೆದು ನಾ ಕರೆದರೆ |ಬಣ್ಣದ ಮಾತಾಡಿ ಬಾ ಎಂದು ಕರೆವನು 3ಉಡುವ ಸೀರೆಯ ಕಳೆದು - ತಡಿಯಲಿಟ್ಟು |ಮಡುವಿನೊಳ್ ಮೈದೊಳೆಯೆ ||ದಡದಡ ಬಂದೊಯ್ದು ಕಡಹದ ಮರವೇರಿ |ಕೊಡು ಕೃಷ್ಣ ಎನುತಿರೆ ಪಿಡಿ ಜೋಡು ಕೈಯೆಂಬ 4ಎಷ್ಟು ಹೇಳಲಿ ನಿನಗೆ - ಯಶೋದೆ ಒಂ-|ದಿಷ್ಟು ಕರುಣವಿಲ್ಲವೆ |ಸೃಷ್ಟಿಗೊಡೆಯ ನಮ್ಮಪುರಂದರವಿಠಲ-------------------------- 5
--------------
ಪುರಂದರದಾಸರು
ಹೊಯ್ಯಾಲೊ ಡಂಗುರವ - ಜಗ - |ದಯ್ಯನಯ್ಯ ಶ್ರೀಹರಿ ಅಲ್ಲದಿಲ್ಲವೆಂದುಪ.ಅಷ್ಟೈಶ್ವರ್ಯದ ಲಕುಮಿಯ ಅರಸೆಂದು |ಸೃಷ್ಟಿ - ಸ್ಥಿತಿ - ಲಯಕರ್ತನೆಂದು ||ಗಟ್ಟಿಯಾಗಿ ತಿಳಿದುಹರಿ ಎನ್ನದವರೆಲ್ಲ |ಭ್ರಷ್ಟರಾದರು ಇಹ - ಪರಕೆ ಬಾಹ್ಯರು ಎಂದು 1ಹರಿಯೆಂಬ ಬಾಲನ ಹರಹರ ಎನ್ನೆಂದು |ಕರುಣವಿಲ್ಲದೆ ಪಿತ ಬಾಧಿಸಲು ||ತರಳನ ಮೊರೆಕೇಳಿ ನರಮೃಗರೂಪದಿ |ಹರಿಯ ನಿಂದಕನ ಸಂಹರಿಸಿದ ಮಹಿಮೆಯ 2ಕರಿ ಆದಿಮೂಲನೆ ಕಾಯೆಂದು ಮೊರೆಯಿಡೆ |ಸುರರನು ಕರೆಯಲು ಬಲ್ಲದಿರೆ ||ಗರುಡನನೇರದೆ ಬಂದು ಮಕರಿಯ ಸೀಳ್ದು |ಕರಿರಾಜನ ಕಾಯ್ದ ಪರದೈವ ಹರಿಯೆಂದು 3ಸುರಪಗೊಲಿದು ಬಲಿಯ ಶಿರವನೊದ್ದಾಗಲೇ |ಸುರಸವು ಉದಿಸೆ ಶ್ರೀ ಹರಿಪಾದದಿ ||ಪರಮೇಷ್ಟಿ ತೊಳೆಯಲು ಪವಿತ್ರೋದಕವೆಂದು |ಹರ ತನ್ನ ಶಿರದಲ್ಲಿ ಧರಿಸಿದ ಮಹಿಮೆಯ 4ಮಾನಸಲಿಂಗಪೂಜೆಗೆ ಮೆಚ್ಚಿ ಶಿವ ಬಂದು |ಬಾಣನ ಬಾಗಿಲ ಕಾಯ್ದಿರಲು |ದಾನವಾಂತಕ ಸಾಸಿರ ತೋಳ ಕಡಿವಾಗ |ಮೌನದಿಂದೊಪ್ಪಿಸಿಕೊಟ್ಟ ಶಿವನು ಎಂದು 5ಭಕ್ತಗೊಲಿದು ಭಸ್ಮಾಸುರಗೆ ಶಿವ ವರವಿತ್ತು |ಭಕ್ತನ ಭಯದಿಂದ ಓಡುತಿರೆ ||ಯುಕ್ತಿಯಿಂದಸುರನ ಸುಟ್ಟು ಶಿವನ ಕಾಯ್ದ |ಶಕನು ಶ್ರೀಹರಿ ಅಲ್ಲದಿಲ್ಲವೆಂದು 6ಗರಳಜ್ವಾಲೆಗೆ ಸಿರಿರಾಮ - ರಾಮನೆಂದು |ಸ್ಮರಿಸುತಿರಲು ಉಮೆಯರಸನಾಗ ||ಕೊರಳು ಶೀತಲವಾಗೆ ಸಿತಿಕಂಠ ತನ್ನಯ |ಗಿರಿಜೆಗೆ - ರಾಮಮಂತ್ರವ ಕೊಟ್ಟ ಮಹಿಮೆಯ 7ಹರಬ್ರಹ್ಮ ಮೊದಲಾದ ಸುರರನುದಶಶಿರ |ಸೆರೆಹಿಡಿದು ಸೇವೆಯ ಕೊಳುತಿರಲು ||ಶರಧಿಯ ದಾಟಿ ರಾವಣನ ಸಂಹರಿಸಿದ |ಸುರರ ಲಜ್ಜೆಯ ಕಾಯ್ದ ಪರದೈವ ಹರಿಯೆಂದು 8ಜಗದುದ್ಧಾರನು ಜಗವ ಪೊರೆವನೀತ |ಜಗ ಬ್ರಹ್ಮಪ್ರಳಯದಿ ಮುಳುಗಲಾಗಿ ||ಮಗುವಾಗಿ ಜಗವನುದ್ಧರಿಸಿ ಪವಡಿಸಿ ಮತ್ತೆ |ಜಗದ ಜನಕಪುರಂದರವಿಠಲನೆಂದು9
--------------
ಪುರಂದರದಾಸರು
ಹೊಲೆಯ ಹೊಲತಿ ಇವರವರಲ್ಲಹೊಲಗೇರಿಯೊಳು ಹೊಲೆಯ ಹೊಲತಿಯಿಲ್ಲ ಪ.ಸತಿಯಳ ವಶನಾಗಿಜನನಿ - ಜನಕರಿಗೆಅತಿ ನಿಷ್ಟುರ ನುಡಿವವ ಹೊಲೆಯಸುತರ ಪಡೆದು ವಾರ್ಧಿಕ್ಯ ಮದವೇರಿಪತಿದ್ಟೇಷ ಮಾಡುವಳೆ ಹೊಲತಿ 1ಗುರುಗಳಲ್ಲಿ ವಿದ್ಯೆಗಳನು ಕಲಿತುಹಿರಿಯರ ಬಳಲಿಸುವವ ಹೊಲೆಯಪರಪುರಷಗೊಲಿದು ತನ್ನ ಪುರುಷನವಿರಸವ ಮಾಡುವ ಕುಲಕೇಡಿತೆ ಹೊಲತಿ 2ಒಡೆಯನನ್ನವನುಂಡು ಅಡಿಗಡಿಗೆ ಬಾಯ್ಬಿಡದೆ ತರ್ಕಿಸುವ ಜಡ ಹೊಲೆಯಬಡತನ ಬಂದರೆ ಪುರುಷನ ರಚ್ಚೆಗೆಬಿಡದೆ ತಹಳೆ ಶುದ್ಧ ಹೊಲತಿ 3ನೂರೊಂದು ಕುಲ ಕುಂಬಿಪಾಕಕಟ್ಟುವಪರನಾರಿಯಲ್ಲಿ ವೀರ್ಯವಿಟ್ಟವ ಹೊಲೆಯಆರೊಳು ಕಲಹಾಪಸ್ಮಾರಿ ದುರ್ಮುಖಿಯು - ಕಠೋರಕುಮತಿ ಶುದ್ಧ ಹೊಲತಿ 4ಅಜನುತ ಪುರಂದರವಿಠಲನ ದಾಸರಭಜನೆಯ ದಾರಿಯ ಬಿಟ್ಟವ ಹೊಲೆಯನಿಜವರ್ಯರಾದ ಸಜ್ಜನರ ಪಾದಪದ್ಮವಭಜಿಸದಿರುವಳೆ ಶುದ್ಧ ಹೊಲತಿ 5
--------------
ಪುರಂದರದಾಸರು