ಒಟ್ಟು 9531 ಕಡೆಗಳಲ್ಲಿ , 132 ದಾಸರು , 5434 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜೋಗಿಯ ಕಂಡೆಪರಮಯೋಗಿಯ ಕಂಡೆಭೋಗಿಶಯನಗಂಬೂರ ಚರ್ಚಿತಾಂಗ ವೆಂಕಟೇಶಪ.ವೇದವ ಕದ್ದೊಯ್ದವನ ಕೊಂದ ಜೋಗಿಯ ಕಂಡೆಭೂಧರಧರನಾದ ಜೋಗಿಯ ಕಂಡೆಭೇದಿಸಿ ಪಾತಾಳ ಪೊಕ್ಕು ಗರ್ಜಿಪ ಜೋಗಿಯ ಕಂಡೆಆದರದಿ ಕಂದನ ನುಡಿಯನಾಲಿಸಿ ಬಂದ 1ಅಂಗುಟದಿ ಬೊಮ್ಮಾಂಡವ ಸೀಳಿದ ಜೋಗಿಯ ಕಂಡೆಹೆಂಗಳ ತಲೆಯನರಿದ ಜೋಗಿಯ ಕಂಡೆಅಂಗನೆಗೋಸುಗಾರಣ್ಯ ಸಂಚಾರಿ ಜೋಗಿಯ ಕಂಡೆಪೊಂಗೊಳಲನೂದಿ ಮೂಜಗವನು ಮೋಹಿಸುವ 2ಕನ್ಯೇರ ವ್ರತಗೇಡಿ ದಿಗಂಬರ ಜೋಗಿಯ ಕಂಡೆಉನ್ನತ ವಾಜಿಯೇರಿದ್ದ ಜೋಗಿಯ ಕಂಡೆಪನ್ನಗಾದ್ರಿವರದ ಪ್ರಸನ್ನವೆಂಕಟೇಶನೆಂಬತನ್ನ ನಂಬಿದವರನು ಬಿಡದೆ ಪಾಲಿಸುವ 3
--------------
ಪ್ರಸನ್ನವೆಂಕಟದಾಸರು
ಡಂಗುರವ ಸಾರಿ ಹರಿಯ ಡಿಂಗರಿಗರೆಲ್ಲರು ಭೂ -ರಂಗದೊಳಗೆಲ್ಲ ಪಾಂಡುರಂಗ ಪರದೈವವೆಂದು ಪ.ಹರಿಯು ಮುಡಿದ ಹೂವ ಹರಿವಾಣದೊಳಗಿಟ್ಟುಕೊಂಡುಹರುಷದಿಂದ ಹಾಡಿ ಪಾಡಿ ಕುಣಿದು ಚಪ್ಪಳಿಕ್ಕುತ 1ಒಡಲ ಜಾಗಟೆಯ ಮಾಡಿ ಮಿಡಿವಗುಣಿ ನಾಲಗೆಯ ಮಾಡಿಒಡನೆ ಢಣ ಢಣ ಢಣ ಢಣ ಎಂದುಕುಣಿದು ಚಪ್ಪಳಿಕ್ಕುತ 2ಇಂತು ಸಕಲ ಜಗಕೆ ಲಕ್ಷ್ಮೀಕಾಂತನೆ ಪರದೈವವೆಂದುಕಂತುಪಿತ ಪುರಂದರವಿಠಲ ಪರದೈವವೆಂದು 3
--------------
ಪುರಂದರದಾಸರು
ಡಂಬಕ ಭಕುತಿಗೆ ಮೆಚ್ಚಿಕೊಳ್ಳನೊ ಕೃಷ್ಣ - ಹಾರಿ |<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಡೊಂಬಲಾಗ ಹಾಕಿ ಹೊರಳಿದರಿಲ್ಲ ಪ.ವಟವಟನೆ ಕಪಿಯಂತೆ ಒದರಿಕೊಂಡರೆ ಇಲ್ಲ |ಬೆಟ್ಟದಿಂದಲಿ ಕೆಳಗೆ ಬಿದ್ದರಿಲ್ಲ ||ಬಿಚ್ಚಿಟ್ಟರೆ ಇಲ್ಲ ನಿರ್ಭಾಗ್ಯರ್ಗೆಂದೆಂದು |ಅಚ್ಯುತಾನಂತನ ದಯವಿಲ್ಲದೆ 1ಕೆಟ್ಟೆನೆಂದರೂ ಇಲ್ಲ ಕ್ಲೇಶಪಟ್ಟರೂ ಇಲ್ಲ |ಸುಟ್ಟ ಸಂಸಾರದೊಳು ಸುಖವು ಇಲ್ಲ ||ಕೋಟಲೆಗಂಜಿದರಿಲ್ಲ ಕೊಸರಿಕೊಂಡರು ಇಲ್ಲ |ವಿಠಲನ ದೂರಿದರಿಲ್ಲ ವಿಧಿಯ ಬೈದರಿಲ್ಲ 2ಕನ್ನಹೊಕ್ಕರು ಇಲ್ಲ ಕಡಿದಾಡಿದರು ಇಲ್ಲ |ಕುನ್ನಿಯಂತೆ ಮನೆಮನೆಯ ಕೂಗಿದರಿಲ್ಲ ||ಹೊನ್ನಿನಾಸೆಗೆ ಹೋಗಿ ಹೊಡೆದುಕೊಂಡರು ಇಲ್ಲ |ಪನ್ನಗಾದ್ರಿ ಪುರಂದರವಿಠಲನ ದಯವಿರದೆ 3
--------------
ಪುರಂದರದಾಸರು
ತದಿಗೆಯ ದಿವಸ(ಶೇಷ ದೇವರನ್ನು ಕುರಿತು)ರಂಭೆ :ನ್ಯಾರೆಂಬುದನೆನಗೆ ಪೇಳೆಕ್ರೂರತನದಿ ತಾ ತೋರುವನೀಗ ಮ-ಹೋರಗನೆನ್ನುತ ಕೋರಿಕೆ ಬರುವದು 1ಒಂದೆರಡು ಶಿರವಲ್ಲ ಬಹುಹೊಂದಿಹವು ಸಟೆಯಲ್ಲಕಂಧರದಲಿ ಕಪ್ಪಂದದಿ ತೋರ್ಪವುಚಂದಿರಮುಖಿ ಯಾರೆಂದೆನಗರುಹೆಲೆ 2ಊರ್ವಶಿ : ಕೋಮಲಗಾತ್ರೆ ಮಹಾಮಹಿಮನು ಇವನ-ಸಾಮಾನ್ಯನೆ ಕಾಣೆಭೂಮಿಯ ಪೊತ್ತ ನಿರಾಮಯನಾದಸುಧೀಮನಿವನು ಜಾಣೆ 1ವಾಸುದೇವಗೆ ಈತ ಹಾಸಿಗೆಯವ ನಿ-ರ್ದೋಷನಿವನು ಜಾಣೆಸಾಸಿರಮುಖದ ವಿಲಾಸನಾಗಿಹ ಮಹಾ-ಶೇಷನಿವನು ಕಾಣೆ 2ಅದರಿಂದಲಿ ಕೇಳ್ ತದಿಗೆಯ ದಿವಸದಿಮಧುಸೂದನನಿವನಅಧಿಕಾನಂದದಿ ಒದಗಿಸಿ ಬರುವನುಇದೆಯಿಂದಿನಹದನ3ಎಂದಿನಂತೆ ಪುರಂದರವಂದ್ಯ ಮುಕುಂದಸಾನಂದದಲಿಅಂದಣವೇರಿ ಗೋವಿಂದ ಬರುವನೊಲ-ವಿಂದತಿ ಚಂದದಲಿ 4ಕಂಟಕಗಳು ಎಲ್ಲುಂಟೆಂಬಂತೆ ನೃಪ-ಕಂಠೀರವಗೈದಘಂಟಾನಾದದಿ ಮಂಟಪದೊಳು ವೈ-ಕುಂಠನು ಮಂಡಿಸಿದಾ 5ಕಾಂತಾಮಣಿ ಕೇಳಿಂತೀಪರಿ ಶ್ರೀ-ಕಾಂತ ನತತಂಡಸಂತವಿಸುತ ಮಹಾಂತಮಹಿಮನೇ-ಕಾಂತಸೇವೆಯಗೊಂಡ 6* * *ಪರಶಿವನನ್ನು ಕುರಿತುರಂಭೆ : ಯಾರಮ್ಮಾ ಮಹಾವೀರನಂತಿರುವನುಯಾರಮ್ಮಾ ಇವನ್ಯಾವ ಶೂರ ಯಾವಊರಿಂದ ಬಂದ ಪ್ರವೀರ ಆಹಾಮಾರಜನಕನ ವಿಸ್ತಾರಪೂಜೆಯ ವೇಳ್ಯಧೀರನಂದದಿ ತಾ ವಿಚಾರ ಮಾಡುವನೀತ 1ಕರದಿ ತ್ರಿಶೂಲವ ಧರಿಸಿ ಮತ್ತೆವರಕೃಷ್ಣಾಜಿನವನುಕರಿಸಿಹರಿಚರಣಸನ್ನಿಧಿಗೆ ಸತ್ಕರಿಸಿ ಆಹಾಜರಿಯ ದುಕೂಲವ ನಿರಿದುಟ್ಟುಕೊಂಡು ವಿ-ಸ್ತರವಾದ ತೋಷದಿ ಮೆರದು ನಲಿವ ಕಾಣೆ 2ಊರ್ವಶಿ : ಈತನೀಗ ಕಾಲಭೈರವ ಕೇಳೆಲೆಗೆ ನೀರ ಪ.ಈತನೀಗ ಪೂರ್ವದೊಳಗೆಭೂತನಾಥ ಸೇವೆಯೊಲಿದಓತು ವಿಷ್ಣುಭಕ್ತಿಯಿಂದಪೂತನಾದ ಪುಣ್ಯಪುರುಷ ಅ.ಪ.ಊರು ಇವಗೆ ಮೊದಲು ಗಂಗಾತೀರವಾಯ್ತುವೇಣುತಾ ವಿ-ಚಾರದಿಂದ ಪೊದನೈಉದಾರತನದಿ ರಾಮೇಶ್ವರಕೆಸಾರಗ್ರಹಿತ ಮುಕ್ತಿ ಪಥವನು ಕರುಣದಿಂದತೋರಿಸುವನು ವಿಷ್ಣುವೆಂದೆನುತ ಗಿರಿಯನೇರಿ ಕರುಣ ವಾರಿಧಿಯಪದಾರವಿಂದಸೇವೆಗೈದುಮಾರಪಿತನ ಭಕ್ತಿಯೊಳು ತಾ ಹೇರಿನಲಿವ ಚಾರುಚರಿತ 1ಪರಮಪುರುಷ ಹರುಷದಿಂದೀಪುರಕೆಬರುವಕಾಲದಲ್ಲಿಚರಣವನ್ನು ಬಿಡದೆ ಯಿಲ್ಲಿರುವನೈ ಮಹಾತ್ಮನೀತಸ್ಫುರಿತತೇಜೋಮೂರ್ತಿ ಈತನು ಲೋಕದೊಳಗೆಚರಿಸುವ ತ್ರಿಕಾಲಪ್ರಜÕನು ಇವನ ಗುಣವ-ನರಿವರ್ಯಾರು ಮನುಜಭುಜಂಗರಲಿಮಹತ್‍ಕಾರಣೀಕಪುರುಷನಿವ ಮಹಾ ಬಲಾಢ್ಯಕರುಣವುಳ್ಳ ವಿಷ್ಣುಭಕ್ತ 2ಶ್ರೀನಿವಾಸ ಕರುಣದಿಂಪ್ರಧಾನಿಯೆಂದು ನಡೆಸಿಕೊಡುವಏನಗೈದರೀತ ಮನದಿ ತಾನುತೋಷಪಟ್ಟು ಇರುವಕಾಣಿಕೆಗಳ ತರಿಸಿ ಇರಿಸುವ ಬೇತಾಳಪ್ರೇತನಾನಾ ಉಪದ್ರವಗಳ ಬಿಡಿಸುವ ಧನಿಯ ಆಜೆÕಏನ ದೊರಕಿತದನು ಬೇಗ ತಾನೆಬಂದು ಪೇಳಿ ಜನರಮಾನಿಸುತ ನಿಧಾನಗೊಳಿಸಿಕ್ಷೋಣಿಯೊಳಗೆ ಕೀರ್ತಿಪಟ್ಟ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಂದೆ ತಾಯಿಮಿತ್ರನೀನೆ ಬಾಂಧವ ನೀನೆ ನಿನ್ನಿಂದ ಬಳಗಿಲ್ಲೆನಗೆ ಇಂದಿರಾಧವನೆ ಕಾಯೊ ಪ.ಹೊಲೆಯ ರಕ್ತದಿ ರೇತ ನಿಲಿಸಿದನೊರ್ವ ಪಿತನೆಲೆಸಿ ಗರ್ಭದೊಳು ರಕ್ಷಿಸಿದೆ ನೀನುಹಲವು ಯೋನಿಯ ತೋರಿ ತೊಳಲಿಸಿ ತುದಿಯಲ್ಲಿನೆಲೆಗೆ ನಿಲ್ಲಿಸುವಂಥ ಸುಲಭ ಜನಕನಲ್ಲೆ 1ನವಮಾಸ ಧರಿಸಿ ಸ್ತನ್ಯವನುಣಲಿತ್ತಳವ್ವೆತವಕದಿ ನಡೆ ನುಡಿಸುವೆಯೊ ನೀನುಆವ ಕಾಲಕಾಲದಲ್ಲಿ ತವಗರ್ಭದಲ್ಲಿ ಪೊತ್ತುಜೀವಕೆ ಚೈತನ್ಯಾಶನವೀವ ತಾಯಿ ನೀನಲ್ಲವೆ 2ಶ್ರೇಯಸನಾದರಿಸುವ ಪ್ರಿಯಸಖರೆಲ್ಲರು ನಿ:ಶ್ರೇಯಸದಿ ಸುಖಮುದದಾಯಕ ನೀನೆಮಾಯಪಾಶ ಬಂಧನದಿ ನೋಯುವರವರ್ಗಾಬಾಧೆಯನಟ್ಟಿ ಕಳೆವ ಚಿನ್ಮಯಮಿತ್ರನೀನಲ್ಲವೆ3ವಿತ್ತವಿರೆ ಸಹೋದರರಿತ್ತ ಬನ್ನಿ ಕೂಡ್ಯೆಂಬರುವಿತ್ತಶೂನ್ಯನಾದರೆ ನೀನುಪೇಕ್ಷಿಸೆ ಅಯ್ಯಒತ್ತಿ ಬಹದುರಿತವಿಪತ್ತುಗಳ ಸವರಿ ಸುಮುಕ್ತಿಯ ಪದವೀವಾನಿಮಿತ್ತ ಬಂಧು ನೀನಲ್ಲವೆ 4ಸಿರಿಯು ಪೋಗೆ ನಿಲ್ಲರು ಶರೀರ ಸಂಬಂಧಿಗಳಾತುರದ ದಾರಿದ್ರ್ಯ ಪಾಪಹರನು ನೀನೆಕರುಣಿ ಪ್ರಸನ್ನ ವೆಂಕಟರಮಣ ನಿನ್ನ ನಾಮಸ್ಮರಣೆ ಎನ್ನ ಜಿಹ್ವೆಗೆ ಮರೆಯದಿರಲಿ ಕಂಡ್ಯ 5
--------------
ಪ್ರಸನ್ನವೆಂಕಟದಾಸರು
ತನಗಲ್ಲದಾ ವಸ್ತು ಎಲ್ಲಿದ್ದರೇನುಮನಕೆ ಬಾರದ ಹೆಣ್ಣು ಮತ್ತೆ ಬಂದರೆ ಏನು ? ಪ.ಆದರಣೆಯಿಲ್ಲದೂಟ ಅಮೃತಾನ್ನವಾದರೇನುವಾದಿಸುವಸತಿ - ಸುತರಿದ್ದು ಫಲವೇನು ?ಕ್ರೋಧ ಬಳೆಸುವ ಸಹೋದರರು ಇದ್ದರೇನುಮಾದಿಗರ ಮನೆಯೊಳೆ ಮದುವೆಯಾದರೇನು ? 1ನಾಲಿಗಿಲ್ಲದ ಪÀದವು ಸಂಚಿತುಂಬ ಇದ್ದರೇನುದೇವಾಂಕಿತವಿಲ್ಲದ ಕವಿತ್ವವೇನು ?ಹೇಮವಿಲ್ಲದ ಹೆಣ್ಣು ಹೆಚ್ಚು ಬಾಳಿದರೇನುಹಾವಿನ ಘಣಿಯೊಳಗೆ ಹಣವಿದ್ದರೇನು ? 2ಸನ್ಮಾನವಿಲ್ಲದೆ ದೊರೆ ಸಾವಿರಾರು ಕೊಟ್ಟರೆ ಏನುತನ್ನ ತಾನರಿಯದ ಜ್ಞಾನವೇನು ?ಎನ್ನುತ ಪುರಂದರವಿಠಲನ ನೆನೆಯದವಸಂನ್ಯಾಸಿಯಾದರೇನು ಪಂಡಿತನಾದರೇನು ? 3
--------------
ಪುರಂದರದಾಸರು
ತನುವ ನೀರೊಳಗದ್ದಿ ಫಲವೇನುಮನದಲ್ಲಿ ದೃಢಭಕುತಿ ಇಲ್ಲದ ಮನುಜನು ಪ.ಧಾನ - ಧರ್ಮಗಳನು ಮಾಡುವುದೇ ಸ್ನಾನಜಾÕನ - ತತ್ತ್ವಂಗಳ ತಿಳಿಯುವುದೇ ಸ್ನಾನಹೀನಪಾಪಂಗಳ ಬಿಡುವುದೆ ಸ್ನಾನಧ್ಯಾನದಿ ಮಾಧವನ ನಂಬುವುದೆ ಸ್ನಾನ 1ಗುರುಗಳ ಶ್ರೀಪಾದತೀರ್ಥವೆ ಸ್ನಾನಹಿರಿಯರ ದರುಶನ ಮಾಡುವುದೆ ಸ್ನಾನಕರೆದು ಅನ್ನವನು ಇಕ್ಕುವುದೊಂದು ಸ್ನಾನಸಿರಿಹರಿತರಣ ನಂಬುವುದೊಂದು ಸ್ನಾನ 2ದುಷ್ಟರ ಸಂಗವ ಬಿಡುವುದೊಂದು ಸ್ನಾನಕಷ್ಟಪಾಪಂಗಳನು ಹರಿವುದೆ ಸ್ನಾನಸೃಷ್ಟಿಯೊಳಗೆ ಸಿರಿಪುರಂದರವಿಠಲನಮುಟ್ಟಿ ಭಜಿಸಿ ಪುಣ್ಯ ಪಡೆವುದೇ ಸ್ನಾನ 3
--------------
ಪುರಂದರದಾಸರು
ತಪ್ಪ ಪಾಲಿಸಯ್ಯ ತಿಮ್ಮಯ್ಯತಪ್ಪ ಪಾಲಿಸಯ್ಯ ಪ.ತಪ್ಪ ಪಾಲಿಸದೆಯಿಪ್ಪರೆ ಯೆನ್ನೊಳುಒಪ್ಪಿಗೆ ಪಟ್ಟೊಲಿಯಪ್ಪ ತಿಮ್ಮಪ್ಪನೆ ಅ.ಪ.ಜಲಜನಾಭ ನಿನ್ನ ಮಹಿಮೆಯನೆಲೆಯನರಿಯದೆನ್ನ ಮನವದುನೆಲೆಯಿಲ್ಲದ ಭವಜಲಧಿಯೊಳಾಡುತ್ತಲಲನಾ ವಿಷಯದ ಬಲೆಗೆ ಮೋಹಿಸಿ ಮನಸಿಲುಕಿ ಮಲಿನವಾಯ್ತು ತತ್ವದನೆಲೆಯನರಿಯದಾಯ್ತು ಹೀಗೆನ್ನುತಕಳೆದುಹೋಯ್ತು ವಿಂಶತಿ ವತ್ಸರಗಳುತೊಳಲಿ ಸಕಲ ಭವದೊಳಗಾರ್ಜಿತವಹ 1ಹಾಳು ಮನವು ಕೂಡಿ ನಾನಾಚಾಳಿ ಮಾಳ್ಪುದಾಡಿ ಬುದ್ಧಿಯಪೇಳಿದಷ್ಟು ದುಶ್ಯೀಲವೆ ಮಾಳ್ಪುದುತಾಳೆಂದರೆ ಒಂದು ವೇಳೆಗೆ ಸುಮತಿಯಆಲೋಚನೆಯೊಳಗೆ ಬಿದ್ದರೆಮೇಲಿಲ್ಲವು ಕ್ಷಣಕೆ ತನ್ನಯಶೀಲವನೆ ಸ್ವೀಕರಿಸುತಿರುವುದುಪೇಳಲೇನು ಕರುಣಾಳು ನೀ ಯೆನ್ನಯ 2ನಾನಾ ಕಷ್ಟಪಟ್ಟೆ ಇನ್ನಾದರುಮಾನಿಸಬೇಕಷ್ಟೆ ಎನ್ನೊಳುಊನ ಗ್ರಹಿಸಿ ಅನುಮಾನ ಸಾಧಿಸಿದರೆನಾನೆಂಬುವದೇನು ಸ್ವತಂತ್ರವಕಾಣೆನು ಎನ್ನೊಳಗೆ ಸಂತತನೀನೇ ಗತಿಯೆನಗೆ ಇದಕನು-ಮಾನವಿಲ್ಲ ಪಾದಾನತಜನರಾಧೀನನೆಂಬ ಬಿರುದಾನಬೇಕಾದರೆ 3ಅಪರಾಧಿಯೆ ನಾನು ಹೇಗೈಅಖಿಲಾತ್ಮನು ನೀನು ಹೃದಯದಿಕೃಪೆಯ ಬೀರಿ ತೋರಿಪ ಪರಮಾತ್ಮನೆಚಪಲನಾಗಿ ಎನ್ನುಪಮೆಗೆಯೊಡ್ಡಿದೆಸಫಲವಾಯ್ತು ಎನಗೆ ಕೀರ್ತಿಯುಅಪಕೀರ್ತಿಯು ನಿನಗೆ ಪಾದವಜಪಿಸುವಂತೆ ಕರುಣಿಪುದಿನ್ನಾದರೂಕಪಟವಾಯ್ತೆ ಸರೀಸೃಪಗಿರಿರಾಜನೆ 4ದೂಷಣಾರಿ ನಿನ್ನ ಪಾದದದಾಸಗೈಯ್ಯೊ ಎನ್ನ ಎನ್ನೊಳುದೋಷವಿಲ್ಲ ಜಗದೀಶ ಜನಾರ್ದನದಾಶರಥಿಯ ಕರುಣಾಶರಧಿಯೊಳಗೆಈಸಾಡಿದ ದಾಸ ಕಾರ್ಕಳಾಧೀಶ ಶ್ರೀನಿವಾಸ ರವಿಶತಭಾಸ ಶ್ರೀಲಕ್ಷ್ಮೀನಾರಾಯಣ ಸರ್ವೇಶ ಭಕ್ತಜನಪೋಷ ನೀಯೆನ್ನಯ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಪ್ಪುಗಳೆಲ್ಲವು ಒಪ್ಪುಗೊಳ್ಳಯ್ಯ ಶ್ರೀಚಪ್ಪರ ಶ್ರೀನಿವಾಸ ಪ.ಸರ್ಪರಾಜಗಿರಿಯಪ್ಪ ತಿಮ್ಮಪ್ಪನೆದರ್ಪಕತಾತನೆ ತಾ ಸಜ್ಜನಪ್ರೀತ ಅ.ಪ.ಮಾಧವನಿನ್ನಯ ಮಹಿಮೆ ತಿಳಿಯದಪ-ರಾಧವ ಮಾಡಿದೆ ದಾರಿದ್ರ್ಯದಬಾಧೆಯಿಂದ ತವಪಾದದರುಶನದಗಾದಿಯ ಕಾಣದಾದೆ ನಾ ದ್ರೋಹಿಯಾದೆ 1ತ್ರಾಣವಿರುವಾಗಕಾಣಿಕೆಹಾಕಿದೆದೀನದಾರಿದ್ರ್ಯದ ಹೊತ್ತಿನಲಿಮೇಣದರಿಂದಲಿ ತೆಗೆದು ತೆಗೆದು ಪಂಚಪ್ರಾಣಕ್ಕಾಹುತಿಯ ಕೊಟ್ಟೆ ಅಪರಾಧ ಪಟ್ಟೆ 2ಮಂದವಾರದಿಕ್ಕೊಂದೂಟವ ಸತ್ತ್ವದಿಂದಿರುವಾಗ ನಾ ನೇಮಗೈದೆಮಂದಭಾಗ್ಯ ಜ್ವರದಿಂದ ಪೀಡಿತನಾದ-ರಿಂದೆರಡೂಟವನೂ ಮಾಡಿದೆ ನಾನು 3ಶನಿವಾರಕ್ಕೊಂದಾಣೆಕಾಣಿಕೆಹಾಕುತ್ತಮಿನುಗುವ ಡಬ್ಬಿಯ ನಾ ಮಾಡಿದೆಎನಗೆ ದಾರಿದ್ರ್ಯವ ಕೊಟ್ಟ ಕಾರಣದಿಂದಹಣವೆಲ್ಲಗುಣನುಂಗಿತು ಪಾದಕೆ ಗೊತ್ತು4ದೊಡ್ಡದಾರಿದ್ರ್ಯದ ಗುಡ್ಡೆ ಬಿದ್ದುದರಿಂದದುಡ್ಡೆಲ್ಲ ತೆಗೆದೆ ನಾ ದಡ್ಡನಾಗಿಅಡ್ಡಬಿದ್ದು ಕೈಯೊಡ್ಡಿ ಬೇಡುವೆ ಸ್ವರ್ಣಗುಡ್ಡೆಯ ಮೇಲಿರುವ ಮಹಾನುಭಾವ 5ಭಂಡಾರದ್ರೋಹ ಬ್ರಹ್ಮಾಂಡಪಾಪಾಗ್ನಿಯುಮಂಡೆಯೊಳುರಿವುದು ಖಂಡಿತದಿಪುಂಡರೀಕಾಕ್ಷನೆ ಕರುಣಾಮೃತರಸಕುಂಡದೊಳ್ ಮೀಯಿಸಯ್ಯ ವೆಂಕಟರಾಯ 6ದೃಢಭಕ್ತಿಯನು ಕೊಟ್ಟು ಸಲಹಬೇಕಲ್ಲದೆಕೆಡುಕು ಮಾಡುವುದೇನುಜಡಜನಾಭಕಡಲಶಯನ ಲಕ್ಷ್ಮೀನಾರಾಯಣ ನ-ಮ್ಮೊಡೆಯ ಪಡುತಿರುಪತೀಶ ರವಿಕೋಟಿಭಾಸ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ತಲ್ಲಿಕಾರರು ನಿನ್ನ ಬಂಟರು ರಂಗನಿಲ್ಲಲೀಸರು ಸಂಸಾರಿಗಳನು ಕೃಷ್ಣ ಪ.ಮಳ್ಳಿದರಾಗಿ ಮಾತಾಡಿ ಬಲುಂಡುಟ್ಟುಇಲ್ಲದ ತಪ್ಪನೆಣಿಸಿ ಹೊರಿಸಿಸುಳ್ಳುಕಳವು ಹಾದರದ ಪಾಪಭವಬಳ್ಳಿಯ ಹರಿದು ಮೊಳೆಯನೊತ್ತಗೊಡರು 1ಕಾಂಚನವಿಡಿದು ಕಕ್ಕಸಬಟ್ಟು ಪೂರ್ವದಸಂಚಿತದಿ ನರಪಶುಗ್ರಾಸದಮುಂಚುವ ಬಣವೆಗೆ ಕಿಚ್ಚಿಕ್ಕಿ ಹುಡಿದೂರಿಪಂಚಾನನಂತೆ ಖೋ ಇಟ್ಟು ಕೂಗುವರು 2ಇದಿರೆದ್ದು ಕರೆದು ಮನ್ನಿಸಿ ಪೂಜಿಸಿಪಾದೋದಕ ಪ್ರೋಕ್ಷಿಸಿಕೊಂಡು ಮರೆಹೊಕ್ಕರೆಬದಿಯ ಸಂಪದ ಬಂದ ಕಬ್ಬು ಬಾಳೆÉ ನೆಲ್ಲುಗದ್ದೆಯ ಸಂಹರಿಸುವರುಪಕಾರಿಗಳು 3ಛಲದಿ ಮಂದಿರ ಹೊಕ್ಕು ಹರಿಸೇವೆ ಗೊಂದಣಗಳಲಿ ಬೇಡಿ ಚಾಮುಂಡೆರೋಡಿಸಿಹೊಲ ಮನೆ ಮಧ್ಯದ ಪಾಮರರ ಹಿಡಿ ತಂದುಬಲು ಕಾಸಿಸಿ ಮುದ್ರೆಯೊತ್ತದೆ ಬಿಡರು 4ಈಪರಿಭವಸುಖಸೂರ್ಯಾಡಿಎಳೆದೊಯ್ದುಶ್ರೀಪದಪುರದಿ ಸೆರೆಯಿಕ್ಕುವರುಶ್ರೀಪ್ರಸನ್ವೆಂಕಟಪತಿ ಮುಖ್ಯ ಪ್ರಾಣೇಶಈ ಪುಂಡರಿಗೆ ಹೇಳೊ ಇವರ ಸಾಕೆಂದು 5
--------------
ಪ್ರಸನ್ನವೆಂಕಟದಾಸರು
ತಾತ್ತ್ವಿಕತೆ245ಆರಿಗಾದರು ಪೂರ್ವಕರ್ಮ ಬಿಡದುವಾರಿಜೋದ್ಭವಅಜಭವಾದಿಗಳ ಕಾಡುತಿಹುದುಪxmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ವೀರಭೈರವನಂತೆ ತಾನು ಬತ್ತಲೆಯಂತೆಮಾರಿಮಸಣಿಗಳಂತೆ ತಿರಿದು ತಿಂಬರಂತೆಸೂರ್ಯ ಚಂದ್ರಮರಂತೆ ರಾಹುವಟ್ಟುಳಿಯಂತೆಮೂರೆರಡು ತಲೆ ಹರಗೆ ಕೈಲಿ ಕಪ್ಪರವಂತೆ1ಶಿಷ್ಟ ಹರಿಶ್ಚಂದ್ರನಿಗೆ ಮಸಣದಡಿಗೆಯಂತೆಸೃಷ್ಟಿಸುವ ಬೊಮ್ಮನಿಗೆ ಶಿರ ಹೋಯಿತಂತೆಅಷ್ಟದಿಕಾಲ್ಪಕರು ಸೆರೆಯಾಗಿರುವರಂತೆಕಟ್ಟುಗ್ರದಿಂದ್ರನಿಗೆ ಮೈಯೆಲ್ಲ ಕಣ್ಣಂತೆ2ಹನ್ನೊಂದಕ್ಷೋಹಿಣಿ ಬಲವುಳ್ಳ ಕೌರವನುರಣದೊಳಗೆ ತೊಡೆಮುರಿದು ಬಿದ್ದನಂತೆವನಜಾಕ್ಷ ಸಿರಿಯರಸ ಬಲಿಯ ಬೇಡಿದನಂತೆವನಿತೆ ಧರ್ಮಜನ ತಾಯ್ತಿರಿದುಂಡಳಂತೆ3ಧರೆಗೆ ಧರ್ಮಜನಂತೆ ಕಂಕಭಟ್ಟನಂತೆಶೂರ ಭೀಮನು ಬಾಣಸಿಗನಾದನಂತೆವೀರ ಫಲುಗುಣನಂತೆ ಕೈಯೊಳಗೆ ಬಳೆಯಂತೆಕಿರಿಯ ನಕುಲ ಸಹದೇವರು ತುರುಗಾಯ್ದರಂತೆ4ಹರನ ವಾಹನವಂತೆ ಹುಲ್ಲು ತಿಂಬುವುದಂತೆವಿರಿಂಚಿವಾಹನವಂತೆಕಮಲಭಕ್ಷಿಪನಂತೆಹರಿಯ ಹೊತ್ತಿಹನಂತೆ ಹಾವು ಭಕ್ಷಿಪನಂತೆಸಿರಿಯಾದಿಕೇಶವನು ತಾ ಬೆಣ್ಣೆಗಳ್ಳನಂತೆ5
--------------
ಕನಕದಾಸ
ತಾಳು ತಾಳೆಲೊ ರಂಗಯ್ಯ- ನೀ |ತಾಳು ತಾಳೆಲೊ ಕೃಷ್ಣಯ್ಯ ಪನಾಳೆ ನೀನು ನಮ್ಮ ಮನೆಗೆ ಬಂದರೆ |ಕಾಲಕಂಬಕೆಕಟ್ಟಿಪೇಳುವೆ ಗೋಪಿಗೆಅ.ಪದೊರೆಗಳ ಮಗನೆಂಬುದಕೇನೊ-ಬಹು |ಧುರದಿ ಮನೆಯ ಪೊಕ್ಕ ಪರಿಯೇನೊ ||ದುರುಳತನದ ಬುದ್ಧಿ ಸರಿಯೇನೊ-ನೀನು |ತಿರಿದು ಬೇಡುಂಡದ್ದು ಮರೆತೆಯೇನೊ 1ಚಿಕ್ಕಮಕ್ಕಳು ಇಲ್ಲವಂತೇನೊ-ನಿನಗೆ |ಕಕ್ಕೂಲಾತಿಯಿಂದಲಿ ನಿನ್ನ ||ಸಿಕ್ಕಿದ ಶ್ರೀಲೋಲ ಹಿಡಿಹಿಡಿಯೆಂದರೆ |ಬಿಕ್ಕಿ ಬಿಕ್ಕಿ ಅತ್ತರೆ ಬಿಡುವರೇನೊ 2ಕಟ್ಟಿದ ತುರುಗಳ ಮೊಲೆಯುಂಡು-ಕರು |ಬಿಟ್ಟ ಕಾರಣವೇನು ಹೇಳೊ ||ಸೃಷ್ಟೀಶ ಪುರಂದರವಿಠಲರಾಯನೆ |ಇಟ್ಟಿಗೆಯ ಮೇಲೆ ಬಂದು ನಿಂತ ಕಾರಣವೇನೊ? 3
--------------
ಪುರಂದರದಾಸರು
ತುಂಬಿತುಂಬಿತುಂಬಿದೆ ಮುಕ್ತಿಯುತುಂಬಿದೆ ಮುಕ್ತಿಯು ತುಂಬಿದೆ ಮುಕ್ತಿಯುತುಂಬಿಪಧಡಧಡ ಧಡಿಸುತ ದಟ್ಟಣೆಯಿಂದಲಿ ದಯೆಗೈಯುತಲಿದೆತುಂಬಿಎಡದೆರಹಿಲ್ಲದೆ ಏಕವೆ ಎನಿಸುತ ಎಲ್ಲೆಡೆ ತುಂಬಿದೆತುಂಬಿ1ಅಂಬರದೊಳು ಚಿದಂಬರವೆನಿಸುವ ಅಂಬರತಾನಿದೆತುಂಬಿಬಿಂಬದಿ ತೋರುವ ಬಿಂಬಂತೆಲ್ಲವನಿಂಬಿಡುತಿದೆತಾತುಂಬಿ2ಜ್ಞಾನಾಮೃತ ರಸರಸವನೆ ಬೀರುತ ಜ್ಞಾನಕೆ ದೂರಿದೆತುಂಬಿತಾನೆ ತಾನೆ ತಾನಾದ ಪುರುಷಗೆ ತಾನೆಯಾಗಿದೆತುಂಬಿ3ನಾದದ ಮನೆಯಲಿ ನಾದದಿ ಮರೆಸುವ ನಾದದಿಬೆರೆತಿದೆತುಂಬಿಭೇದಾಭೇದಗಳಹ ದೃಗ್‍ದೃಶ್ಯದ ಭೇದವ ಸಾಕ್ಷಿಪತುಂಬಿ4ಇಂದುಅಮೃತಕರ ಸೂಸುವ ತೆರದಲಿಹೊಂದಿರುವವರನು ತಾತುಂಬಿಮಂದಹಾಸ ಮಹಾಲೀಲಾತ್ಮಕಸಿಂಧುಚಿದಾನಂದತುಂಬಿ5
--------------
ಚಿದಾನಂದ ಅವಧೂತರು
ತುಳಸಿ205ಎಲ್ಲಿ ಶ್ರೀ ತುಳಸಿಯ ವನವು |ಅಲ್ಲೊಪ್ಪುವರು ಸಿರಿ-ನಾರಾಯಣರು ಪಗಂಗೆ ಯಮುನೆ ಗೋದಾವರಿ ಕಾವೇರಿ |ಕಂಗೊಳಿಸುವ ಮಣಿಕರ್ಣಿಕೆಯು ||ತುಂಗಭದ್ರೆ ಕೃಷ್ಣವೇಣಿ ತೀರ್ಥಗಳೆಲ್ಲ |ಸಂಗಡಿಸುತ ವೃಕ್ಷಮೂಲದಲ್ಲಿರುವುವು 1ಸರಸಿಜಭವಭವಸುರಪಪಾವಕಚಂ-|ದಿರಸೂರ್ಯಮೊದಲಾದವರು ||ಸಿರಿರಮಣನ ಆಜೆÕಯಲಿ ಅಗಲದಂತೆ |ತರುಮಧ್ಯದೊಳುನಿತ್ಯನೆಲಸಿಪ್ಪರು2ಋಗ್ವೇದ ಯಜುರ್ವೇದಸಾಮಅಥರ್ವಣ |ಅಗ್ಗಳಿಸಿದ ವೇದಘೋಷಗಳು ||ಅಗ್ರಭಾಗದಲಿವೆ ಬೆಟ್ಟದೊಡೆಯನಲ್ಲಿ |ಶ್ರೀಘ್ರದಿ ಒಲಿವ ಶ್ರೀಪುರಂದರವಿಠಲ3
--------------
ಪುರಂದರದಾಸರು
ತೂಗಿರೆ ರಂಗನ್ನ ತೂಗಿರೆ ಕೃಷ್ಣನತೂಗಿರೆ ಅಚ್ಯುತಾನಂತನ ಪ.ತೂಗಿರೆ ವರಗಿರಿ ಅಪ್ಪ ತಿಮ್ಮಪ್ಪನತೂಗಿರೆ ಕಾವೇರಿ ರಂಗಯ್ಯನ ಅಪಇಂದ್ರಲೋಕದೊಳುಪೇಂದ್ರ ಮಲಗಿಹನೆಬಂದೊಮ್ಮೆ ತೊಟ್ಟಿಲ ತೂಗಿರೆಮಂದಗಮನೆಯರು ಚೆಂದದಿ ಪಾಡುತನಂದನ ಕಂದನ ತೂಗಿರೆ 1ನಾಗಲೋಕದಲ್ಲಿ ನಾರಾಯಣ ಮಲಗಿಹನೆಹೋಗಿ ನೀವ್ ತೊಟ್ಟಿಲ ತೂಗಿರೆನಾಗವೇಣಿಯರು ನಾಲ್ಕು ನೇಣನು ಪಿಡಿದುಭಾಗ್ಯವಂತನೆಂದು ತೂಗಿರೆ 2ಜಲಧಿಯೊಳಾಲದ ಎಲೆಯಲ್ಲಿ ಮಲಗಿದಚೆಲುವನ ತೊಟ್ಟಿಲ ತೊಗಿರೆಸುಲಭ ದೇವರ ದೇವ ಬಲಿಬಂಧಮೋಚಕಎಳೆಯನ ತೊಟ್ಟಿಲ ತೂಗಿರೆ 3ಸೂಸುವ ಮಡುವಿನೊಳ್ ಕಾಳಿಯನ ತುಳಿದಿಟ್ಟದೋಷವಿದೂರನ ತೂಗಿರೆಸಾಸಿರ ನಾಮದ ಸರ್ವೋತ್ತಮನೆಂದುಲೇಸಾಗಿ ತೊಟ್ಟಿಲ ತೂಗಿರೆ 4ಅರಳೆಲೆ ಮಾಗಾಯಿ ಕೊರಳ ಪದಕ ಸರತರಳನ ತೊಟ್ಟಿಲ ತೂಗಿರೆಉರಗಾದ್ರಿವಾಸ ಶ್ರೀ ಪುರಂದರವಿಠಲನಹರುಷದಿ ಪಾಡುತ ತೂಗಿರೆ 5
--------------
ಪುರಂದರದಾಸರು