ಒಟ್ಟು 9531 ಕಡೆಗಳಲ್ಲಿ , 132 ದಾಸರು , 5434 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೇಲಿಸೊ ನೀ ಮುಣುಗಿಸೊ |ನಿನ್ನ ಮಾಯವ ತಿಳಿಯದ ಮೂಢ ಜನರನುಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ವಿಷಯದೊಳಗೆ ಮನ ಬುದ್ಧಿ ಗರ್ಕಾಯಿತುಘಸಣೆ ಬಡುವ ದೇಹ ಹ್ಯಾಗೆ ಪಾರಾಯ್ತು 1|ಹರ ಬಿಡಿಸು ಮೊರೆಹೋದೆ ದೇವಾಬಿರುಬೆಟ್ಟಿತು ಪರಿಹಾರ ಹ್ಯಾಗ2ಭವನದಿಯೊಳು ಸುಳಿದಾಡು ಹರಗೋಲಕ್ಕೆಶಿವಶಂಕರ ಕಡೆಗೆ ಹಚ್ಚು ಧಡಕ್ಕೆ3
--------------
ಜಕ್ಕಪ್ಪಯ್ಯನವರು
ತೊರವೆಪುರನಿವಾಸ ನರಸಿಂಹ ನೀಹೊರೆಯೊ ಭಕ್ತರ ಭಯಗಜಸಿಂಹಅರಿವರಾರಯ್ಯ ನಿನ್ನ ಮಹಿಮೆಯಸರಸಿಜಭವಭವಸುರವರಅಹಿಕಿನ್ನರವರಮುನಿವರ ನರವರವಂದ್ಯಪ.ಹಿರಣ್ಯಕನೆಂಬ ದೈತ್ಯ ಮಹೀತಳದಿವಿಧಿಹರವರದಲಿ ಬಲುಸೊಕ್ಕಿ ಅಂದುಪರಮಭಾಗವತಪ್ರಹ್ಲಾದನಿಗೆಪರಿಪರಿದುರಿತವ ಮರಳಿ ಮರಳಿ ಭಯಂಕರವನು ಚರಿಸಲು ನೆರೆಮೊರೆಯಿಡಲು 1ತರಳಗಂಜಿಸಿ ನಿನ್ನ ದೊರೆಯ ತೋರೊ ಎನಲುಸರವಭೂತ ಭರಿತಾನಂತನೀಗಅರಸಿದರೀ ಕಂಬದೊಳಿಹನೆನಲುಮೊರೆ ಮೊರೆದೇಳುತ ಸರಸರನೊದೆಯಲುಬೆರಬೆರ ದೋಷದಿ ವರನರಹರಿಯೆ 2ಚಿಟಿಲು ಚಿಟಿಲು ಭುಗಿಭುಗಿಲೆನುತ ಪ್ರಕಟಿಸಿ ದೈತ್ಯನುದರವನು ಸೀಳಿತ್ರುಟಿಯೊಳು ಕರುಳಮಾಲೆಯ ಧರಿಸಿಶಠನ ವಧಿಸಿ ನಿಜಭಟನ ಪೊರೆದ ಜಗಜಠರಪ್ರಸನ್ನವೆಂಕಟ ನರಸಿಂಹ3
--------------
ಪ್ರಸನ್ನವೆಂಕಟದಾಸರು
ತೋರುತಲೈದಾನೆ ಮುಕ್ತಿಯ ತೋರುತಲೈದಾನೆಸಾರಿ ಶರಣರೆಂದು ಶ್ರೀನಿವಾಸದೇವ ಪ.ಹುಲ್ಲು ಕಲ್ಲಿನ ಪೂಜೆಯ ಮಾಡಿ ಕೆಡದೆಬೆಲ್ಲದಾಸೆಗೆಂಜಲು ತಿನ್ನದೆಸೊಲ್ಲುಸೊಲ್ಲಿಗೆ ಹರಿಸರ್ವೋತ್ತಮನೆಂದುಬಲ್ಲವರು ಭಕ್ತಿಲಿ ಭಜಿಸಿರೆಂದು 1ಭುವಿಯ ವೈಕುಂಠವು ನೋಡಿರಾನತರೆಂದುನವನವ ಉತ್ಸಾಹದೊಳಿಹನುಯುವತಿ ಲಕುಮಿ ಕೂಡ ಸ್ವಾಮಿ ಪುಷ್ಕರಕೂಲಭವನದೊಳಗಿಪ್ಪ ಭಕ್ತ ಚಿಂತಾಮಣಿ 2ನೆಲೆಯೆ ಸಿಕ್ಕದ ಧರ್ಮಕರ್ಮದ ತೊಡರ ಬಿಟ್ಟಲಸದೆ ತನ್ನಂಘ್ರಿಯಾತ್ರೆ ಮಾಡಿಸುಲಭದಿ ಮೋಕ್ಷವ ಗಳಿಸಿಕೊಳ್ಳೆನುತಲಿಕಲಿಯುಗದೊಳಗೆ ಪ್ರಸನ್ನವೆಂಕಟಪತಿ 3
--------------
ಪ್ರಸನ್ನವೆಂಕಟದಾಸರು
ತೋಳು ತೋಳು ತೋಳು ಕೃಷ್ಣ-ತೋಳನ್ನಾಡೈ |ನೀಲಮೇಘಶ್ಯಾಮ ಕೃಷ್ಣ ತೋಳನ್ನಾಡೈಪಗಲಿಕೆಂಬಂದುಗೆ ಉಲಿಯುವ ಗೆಜ್ಜೆಯ ತೋ-|ಅಲುಗುವ ಅರಳೆಲೆ ಮಾಗಾಯ್ಮಿನುಗಲು ತೋ-|ನೆಲುವು ನಿಲುಕದೆಂದೊರಳ ತಂದಿಡುವನೆ ತೋ-|ಚೆಲುವ ಮಕ್ಕಳ ಮಾಣಿಕ್ಯವೆ ನೀ ತೋ- 1ದಟ್ಟಡಿಯಿಡುತಲಿ ಬೆಣ್ಣೆಯ ಮೆಲುವನೆ ತೋ-|ಕಟ್ಟದ ಕರಡೆಯ ಕರುವೆಂದೆಳೆವನೆ ತೋ-||ಬೊಟ್ಟಿನಲ್ಲಿ ತಾಯ್ಗಣಕಿಸಿ ನಗುವನೆ ತೋ-|ಬಟ್ಟಲ ಹಾಲನು ಕುಡಿದು ಕುಣಿವನೆ ತೋ- 2ಅಂಬೆಗಾಲಿಲೊಂದೊರಳನ್ನೆಳೆವನೆ ತೋ-|ತುಂಬಿದ ಬಂಡಿಯ ಮುರಿಯಲೊದ್ದವನೆ ತೋ-|ಕಂಬದಿಂದಲವತರಿಸಿದವನೆ ನೀ ತೋ-|ನಂಬಿದವರನುಹೊರೆವಕೃಷ್ಣ ತೋ3ಕಾಲಕೂಟದ ವಿಷವ ಕಲಕಿದ ತೋ-|ಕಾಳಿಂಗನ ಹೆಡೆಯನು ತುಳಿದ ತೋ-||ಕಾಳೆಗದಲಿ ದಶಕಂಠನ ಮಡುಹಿದ ತೋ-|ಶಾಲಕ ವೈರಿಯೆ ಕರುಣಿಗಳರಸನೆ ತೋ 4
--------------
ಪುರಂದರದಾಸರು
ತ್ರಿಜಗದ್ವಾ ್ಯಪಕಹರಿಎನುವರು ಸುಜನರುನಿಜದಲಿ ಪೇಳಿವದಾರಕ್ಕಾಅಜಭವಾದಿಗಳಿಗರಸನಾದಹದಿನಾಲ್ಕು ಲೋಕಕೆ ದೊರೆ ತಂಗಿ 1ನೀರೊಳು ಮುಳುಗುತ ಮೀನರೂಪದಿಸಾರುವ ಮಯ್ಯವದಾರಕ್ಕನೀರೊಳು ಮುಳುಗಿ ವೇದವ ತಂದು ಸುತಗಿತ್ತಧೀರ ಮತ್ಸ್ಯಮೂರುತಿ ತಂಗಿ 2ಭಾರಬೆನ್ನಿಲಿ ಪೊತ್ತು ಮೋರೆ ಕೆಳಗೆ ಮಾಡಿನೀರೊಳು ವಾಸಿಪದಾರಕ್ಕವಾರಿಧಿಮಥಿಸಿದಮೃತ ಸುರರಿಗೆ ಇತ್ತಧೀರಕೂರ್ಮಮೂರುತಿ ತಂಗಿ3ಕೋರೆದಾಡಿಯಲಿ ಧಾರುಣಿ ನೆಗಹಿದಫೋರನೆನುವರಿವದಾರಕ್ಕಕ್ರೂರ ಹಿರಣ್ಯಾಕ್ಷನ ಕೊಂದು ಭೂಮಿಯ ತಂದಶೂರ ವರಹ ಮೂರುತಿ ತಂಗಿ 4ಕ್ರೂರರೂಪತಾಳುತ ಕರುಳ್ವನಮಾಲೆ ಹಾಕಿದವದಾರಕ್ಕಪೋರನ ಸಲಹಲು ಕಂಬದಿಂದುಸಿದನಾರಸಿಂಹ ಮೂರುತಿ ತಂಗಿ 5ಮೂರಡಿ ಭೂಮಿಯ ದಾನವ ಬೇಡಿದಹಾರ್ವನೆನುವನಿವದಾರಕ್ಕಧೀರ ಬಲಿಯ ಭಕ್ತಿಗೆ ಮೆಚ್ಚಿ ಬಾಗಿಲು ಕಾಯ್ದವಾಮನ ಮೂರುತಿ ಇವ ತಂಗಿ 6ಮೂರು ಏಳುಬಾರಿಧಾರುಣಿ ಚರಿಸಿದಶೂರನೆನುವರಿವದಾರಕ್ಕವೀರ ಕ್ಷತ್ರಿಯರ ಮದವನಡಗಿಸಿದ ಪರಶು-ರಾಮ ಮೂರುತಿ ತಂಗಿ 7ಕೋತಿಗಳೊಡನಾಡಿ ಸೇತುವೆ ಕಟ್ಟಿದ ಪ್ರ-ಖ್ಯಾತನೆನುವರಿವದಾರಕ್ಕಮಾತರಿಶ್ವನಿಗೆ ಒಲಿದಂಥ ದಶರಥರಾಮ ಚಂದ್ರ ಮೂರುತಿ ತಂಗಿ 8ಗೋಕುಲದೊಳು ಪಾಲ್ಬೆಣ್ಣೆ ಮೊಸರುನವನೀತಚೋರನಿವದಾರಕ್ಕಲೋಕಗಳೆಲ್ಲಾ ತಾಯಿಗೆ ಬಾಯೊಳುತೋರ್ದಗೋಪಾಲಕೃಷ್ಣ ಮೂರುತಿ ತಂಗಿ 9ತ್ರಿಪುರರ ಸತಿಯರ ವ್ರತಗಳನಳಿದನುಗುಪಿತನೆನುವರಿವದಾರಕ್ಕಕಪಟನಾಟಕ ಸೂತ್ರಧಾರಿ ಶ್ರೀ-ಹರಿಬೌದ್ಧ ಮೂರುತಿ ತಂಗಿ10ಅಶ್ವುವನೇರುತ ಹಸ್ತದಿ ಖಡ್ಗ ಪುರು-ಷೋತ್ತಮನೆನುವರಿವದಾರಕ್ಕಸ್ವಸ್ತದಿ ಕಲಿಯೊಳು ಸುಜನರ ಪಾಲಿಪಕರ್ತೃ ಕಲ್ಕಿ ಮೂರುತಿ ತಂಗಿ 11ಶಂಖು ಚಕ್ರ ಗದೆ ಪದುಮವು ಸಿರದಿ ಕಿ-ರೀಟಧಾರಿ ಇವದಾರಕ್ಕಪಂಕಜಾಕ್ಷಿ ಪದ್ಮಾವತಿಪತಿಶ್ರೀ-ವೆಂಕಟೇಶ ಮೂರುತಿ ತಂಗಿ 12ಮಮತೆಲಿ ಸುಜನರ ಶ್ರಮ ಪರಿಹರಿಸುವಕಮಲಾಪತಿ ಇವದಾರಕ್ಕಕಮಲಪತ್ರಾಕ್ಷ ಶ್ರೀ ಕಮಲನಾಭ ವಿ-ಠ್ಠಲ ಮೂರುತಿ ಕೇಳಿವ ತಂಗಿ 13
--------------
ನಿಡಗುರುಕಿ ಜೀವೂಬಾಯಿ
ತ್ರುಟಿಗೆ ಕ್ಷಣಕೆ ನೆನೆಮನವೇ - ಹರಿಯ |ತ್ರುಟಿಗೆ ಕ್ಷಣಕೆ ನೆನೆಮನವೆ ಪತ್ರುಟಿಗೆ ಕ್ಷಣಕೆ ನೆನೆ ಕ್ಷಣಕೆ ಲವಕೆ ನೆನೆ |ಘಟಿಗೆ ಘಟಿಗೆ ನೆನೆ, ಇರುಳು ಹಗಲು ನೆನೆ ಅ.ಪಜಠರದಿ ಜಗತಿಗೆ ಹಿರಿಯ-ಜಗ |ನ್ನಾಟಕಮೋಹ ಸೂತ್ರಧಾರಿಯ ||ಪಟು ಹಿರಣ್ಯಾಕ್ಷ ಸಂಹಾರಿಯ |ನಿಷ್ಠುರನಾದ ಕಂಸಾರಿಯ 1ರಣಿತ ಕಂಕಣ ನೂಪುರಿಯ-ರು |ಕ್ಮಿಣಿಯನಾಳುವ ದೊಡ್ಡ ದೊರೆಯ ||ಗುಣನಿಧಿ ಗೋವರ್ಧನಧಾರಿಯ-ನೀ- |ಕರುಣಿಯು ಅವನೆಂದರಿಯ 2ನವನೀತದಧಿತಸ್ಕರಿಯ -ಈ |ಭವಹರಒಡೆಯನೆಂದರಿಯ ||ಜವನು ಕೇಳಲು ನಿನ್ನ ಮೊರೆಯ -ಚಿಹಿ |ಅವನ ನಾಲಗ್ಗೆ ಮುಳ್ಳು ಮುರಿಯ 3ಮನಕಭಾಗಿಗೆ ಶ್ರುತಿಯರಿಯ -ದಂಥ |ಘನಪಾಪಿಗಳಿಗವ ದೊರೆಯ ||ನೆನೆವರ ಪಾಲಿಪುದ ಮರೆಯ -ಸು |ಮ್ಮನೆ ಇರಲವ ನಮ್ಮ ಪೊರೆಯ4ಸ್ಮರಿಸಲು ಯಮ ನಿನ್ನ ದಾರಿಯ -ಹೋಗ |ವರಭಾರತಿಪತಿ ಮರೆಯ |ಪುರಂದರವಿಠಲ ದೊರೆಯ -ನೆನೆ-ದಿರೆ ಯಮ ನಿನ್ನನು ಕೊರೆಯ 5ತ್ರುಟಿಗೆ ಕ್ಷಣಕೆ ನೆನೆಮನವೇ-ಹರಿಯತ್ರುಟಿಗೆ ಕ್ಷಣಕೆ ನೆನೆಮನವೇ ||
--------------
ಪುರಂದರದಾಸರು
ತ್ವರಿತಾ ಬಾರಯ್ಯ ಹೇ ಶ್ರೀಯರಸ ವೆಂಕಟ ದೀನ |ಸುರತರುವೆ ದೇವೇಶವರಾಹಭೂಧರಧಾಮ|ಕರುಣಾ ಪಯೋದಧೆ ಸರ್ವ ರಕ್ಷಿ ಕಂಧರದೊಳ- |ಗಿರುತಿಹ ನರಗಜ ವದನನೇ ಪಇಳಿಪತಿಗಳ ಕೂಡ ಕಲಹ ಮಾಡಿ ತೋರೆಂದುಅಂಗಲಾಚಲಾ ಕುಂತೀದೇವಿ |ಗೊಲಿದಾಸೆ ಪೂರ್ತಿಸಿ ಅನಿಲಜನಾಗ ನಿನ್ನ ತೇರೊ-ತ್ತಲು ಹಿಂದಕ್ಕೆ ನೀ ನಗು- |ತ್ತಲೆ ಮುಂದಕ್ಕೆ ಬಂದಿ ದೂರಲಾಘವವಾದಿಂದಂದೀಗಹಲವು ಜನರು ಬಹು |ಬಲುವಿಂದ ರಥವನೆಳೆದರೂ ಬಾರದಿದುಖಲು ಸೋಜಿಗವೆಲೆ |ಹಲಧರನನುಜ ಕಡಲ ಮನೆ ಕಾರವಡಲ ರವಿದಶ ಧರಖಳವಿಪಿನದ್ವಿದಲ 1ಬರಬೇಡವೆಲವೊ ನಮ್ಮ ಮಂದಿರಾಕೆಂದು ಬಹಳಾ ಬೈ-ದರೂ ಮುದದಿಂದ ಗೋಪಿ- |ಯರ ಸದ್ಮಕೆ ಪೋಗುವೆಜರಿದುನಿನ್ನನು ತಾನಾತರಳನ ಕಾಯ್ವೆನೆಂದಾ |ನರನ ತಪ್ಪೆಣಿಸದೆ ಕರೆಯದಲೆ ಪೋದೆ ನಿ-ನ್ನರಮನೆಯ ತನಕಲಿ |ಎರಡೇ ಘಳಿಗೆಯೊಳು ಪರಿಪರಿ ಭಕುತ ಜನರುಗಳು ಬಿನ್ನೈ-ಪರು ಬೀದಿಗಳೊಳು |ಮೆರೆಯುತಲೀಗಲೆ ಸರಸರ ಬರುವದುಪರಮಾಯಾಸವೇ 2ಮೀನಾಕ್ಷಿ ಯಶೋದೆ ನಿನ್ನನು ಪೊತಾನೆಂದುನುಣ್ಣನೆ ತೊಟ್ಟಿಲೊಳಿಟ್ಟು |ತಾ ನುಡಿಯಲು ಜೋಗುಳಾನು ಕೇಳ್ವೆ ಕಿವಿಗೊಟ್ಟುನಾನಾಗಮ ಸಮ್ಮತ |ಗಾನ ಮಾಳ್ಪುದು ವಿದ್ವಾಂಸಾನೀಕವೀಗ ನಿನ್ನಧ್ಯಾನಕೆ ಬಾರದೆಯೇನು |ನಿನ್ನ ಬಗೆ ತಾನರಿಯಳು ಶ್ರೀಮಾನಿನಿಖಗವಹಶ್ರೀನಿಧೆ ಮೂರೊಂದು |ಹಾನಿರಹಿತ ಗದಾಪಾಣಿ ಹರಿಯೇ ಶ್ರೀ-ಪ್ರಾಣೇಶ ವಿಠಲನೆ 3
--------------
ಪ್ರಾಣೇಶದಾಸರು
ಥಟ್ಟನೆ ನಡೆ ಗೋಕುಲಕಕ್ರೂರಅಸುರಾವೇಶವ ತಾಳು |ಕೃಷ್ಣನಕರತಾ ಈ ಬಗೆಯಿಂದಲಿಪೇಳ್ವೆ ಉಪಾಯವ ಕೇಳು ಪಮಲ್ಲರಕುವಲಯಪೀಡಾ ಪಥÀದೊಳು |ನಿಲ್ಲಿಸಿಹನು ಎನಬೇಡ ||ಬಿಲ್ಲು ಹಬ್ಬಕೆ ಕರೆಸಿಹನೆನ್ನು |ಕೊಲ್ಲುವದುಸರಲಿ ಬೇಡ1ನಿಮ್ಮಾವನು ನಿನ್ನ ಕಾಣದೆ ಬಳಲುವ- |ವಮ್ಮಿಮ್ಮೆಲ್ಲವು ಎನ್ನು ||ಸುಮ್ಮನೆ ಆಲಸ್ಯಾತಕೆ ಹೋಗುವ |ಘಮ್ಮನೆ ಬಾ ಬಾ ಎನ್ನು 2ಪುಷ್ಟಿ ಮಾಡಿ ಮಾತುಗಳಿಂ ಮೆಚ್ಚಿಸಿ |ನೆಟ್ಟನೆ ಬಹಪರಿಮಾಡು|ಬಿಟ್ಟರೆ ನಿನ್ನ ಶ್ರಮ ಬಲ್ಲನು ಪ್ರಾಣೇಶ |ವಿಠ್ಠಲನೆವೇ ನೋಡು 3
--------------
ಪ್ರಾಣೇಶದಾಸರು
ದಡ ಸೇರಿಸು ಭವದ ಕಡಲಿನದಡ ಸೇರಿಸು ಹರಿಯೆಕಡೆ ಮೊದಲಿಲ್ಲದ ಕ್ಲೇಶದ ವಾರಿಯಕಡು ಕಾಂಕ್ಷದ ಬಲುತೆರೆಯ ಪ.ಸಾಧು ಸಮಾಗಮ ಸಚ್ಛಾಸ್ತ್ರ ಶ್ರವಣಾದಿಗಳಿಲ್ಲದೆ ಕೆಡುವೆಮೇದಿನಿಯೊಳು ಮೂಢಾತ್ಮನು ನಾ ಶ್ರೀಪಾದವ ಹೊಂದಿಸು ಹರಿಯೆ 1ಸಾಸಿರ ನಾಮದಿ ತುಲಸೀ ಕುಸುಮವಶ್ರೀಶನಿಗರ್ಪಿಸಲಿಲ್ಲಹೇಸದೆ ಬಾರದುದನ್ನೆ ಬಯಸುತವಾಸುದೇವಕೆಟ್ಟೆನಲ್ಲ2ಮನ ವಶವಾಗದು ತನು ಮಡಿಯಾಗದುಕನಸಲಿ ಧರ್ಮವನರಿಯೆಒಣಮಾತಲಿ ದಿನ ಹೋದವು ಪರಗತಿಗನುಕೂಲಲ್ಲದು ದೊರೆಯೆ 3ದುವ್ರ್ಯಸನಕೆ ಬೇಸರೆನೆಂದಿಗೆಘನಗರ್ವಿಲಿ ವರ್ತಿಪೆನಲ್ಲಪರ್ವತ ನೆಗಹುವ ನುಡಿಯನ್ನಾಡುವೆನಿರ್ವಾಹಕಡ್ಡಿಯೊಳಿಲ್ಲ4ನನ್ನ ಗುಣದ ನಂಬಿಕೆ ನನಗಿಲ್ಲನಿನ್ನಯ ನಾಮವೆ ಗತಿಯುಇನ್ನಾದರು ಕಡೆಗಣ್ಣಲೆನೋಡುಪ್ರಸನ್ವೆಂಕಟ ಸಿರಿಪತಿಯೆ 5
--------------
ಪ್ರಸನ್ನವೆಂಕಟದಾಸರು
ದಂಡಿಸಬೇಡೈ ದಯೆದೋರೈ ಕರದಂಡದಳಾಂಬಕನೆ ಪ.ಕಂಡೀಶವಿನುತ ಬ್ರಹ್ಮಾಂಡಪಾಲ ಮಾ-ರ್ತಾಂಡಮಂಡಲಗ ಶುಂಡಾಲವರದ ಅ.ಪ.ಕ್ಷೇಮದಿ ಶ್ರೀಹರಿನಾಮವ ವರ್ಣಿಸೆನೇಮಾನುಷ್ಠಾನದೊಳಿರಲುನಾ ಮಾಡಿದ ನಾನಾವಿಧ ಪಾಪವತಾಮಸಗೊಳಿಸುವ ಕಾಮಕ್ರೋಧಗಳಿಂ 1ಶಿಷ್ಟಾಚಾರದೊಳಿಷ್ಟನಾಗಿಪರಮೇಷ್ಠಿಜನಕ ಜಯ ಜಯವೆನಲುಭ್ರಷ್ಟಾಲೋಚನೆ ಪುಟ್ಟಿಸಿ ಪಾಪದಬಟ್ಟಿಯ ಹೊದ್ದಿಪ ದುಷ್ಟಸಂಗದಿಂ 2ನಾರಾಯಣ ನರಹರಿಯೆನ್ನುವ ವ್ಯಾ-ಪಾರವ ನಾ ಮಾಡುತ್ತಿರಲುಆರೋಹಣಾವರೋಹಣ ನಾದವಿ-ಕಾರಗೊಳಿಪ ಶಾರೀರಪ್ರಕೃತಿಯಿಂ 3ಆರ್ಕಾರಣ ರಿಪುಗಳಿಗೈ ಸರ್ವ ದೇ-ವರ್ಕಳ ಮಸ್ತಕಮಣಿ ನೀನೈತರ್ಕಾಗಮ್ಯ ಲಕ್ಷ್ಮೀನಾರಾಯಣಅರ್ಕಾಮಿತಪ್ರಭ ಕಾರ್ಕಳಪುರವರ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ದಣಿಯ ನೋಡಿದೆನೋ ವೆಂಕಟನ ಮನದಣಿಯೆ ನೋಡಿದೆ ಶಿಖಾಮಣಿಯ ನಿರ್ಮಲನ ಪಕೇಸಕ್ಕಿಅನ್ನ ಉಂಬುವನ ದುಡ್ಡುಕಾಸು ಬಿಡದೆ ಹೊನ್ನುಗಳಿಸಿಕೊಂಬುವನ ||ದೋಸೆ ಅನ್ನವ ಮಾರಿಸುವನತನ್ನ ದಾಸರ ಮೇಳದಿ ಕುಣಿದಾಡುತಿಹನ 1ಗಂಟಿನೊಲ್ಲಿಯ ಹೊದ್ದಿಹನ-ಹೊರಹೊಂಟು ಹೋಗಿ ಬೇಟೆಯಾಡುತಲಿಹನ ||ಗಂಟೆ ನಾದಕೆ ಒಲಿಯುವನ ಭೂವೈ-ಕುಂಠವಿದೆಂದು ಹಸ್ತವ ತೋರಿದವನ 2ಬೆಟ್ಟದೊಳಗೆ ಇದುತಿಹನ ಮನಮುಟ್ಟೆ ಭಜಿಪ ಭಕುತರಿಗೊಲಿದವನ ||ಕೊಟ್ಟ ವರವ ತಪ್ಪದವನ ಈಸೃಷ್ಟಿಗಧಿಕಪುರಂದರವಿಠಲನ3
--------------
ಪುರಂದರದಾಸರು
ದಾಟು ಭವಾಟವಿಯನ್ನು ಮನುಜ ನೀದಾಟು ಭವಾಟವಿಯನ್ನುಕೈಟಭಾಂತಕನಾಮಪಾತಕರೊಡಗೂಡಿನೀಟಾಗದಂದದ ಪಾಟಿಯ ಕೇಳಿನ್ನು ಪ.ಹೆಣ್ಣೆಂಬ ಹೆದ್ದೋಳ ತಿರುಗುತಿವೆ ಬಲುಪುಣ್ಯಮಾರ್ಗವ ನಡಿಗುಡವುಬಣ್ಣ ಬಣ್ಣದ ಮೃತ್ಯುಗಳೆಂಬ ಹೆಬ್ಬುಲಿಕಣ್ಣಲಿ ಕಂಡರೆ ಬಿಡವುಸಣ್ಣಮಕ್ಕಳು ನೆಂಟರಿಷ್ಟ ನರಿಗಳರ್ಥಪೆಣ್ಣಿನ ನಾತಕೆ ಓಡ್ಯಾಡುವುವುಹಣ್ಣುಕಾಯಿಗಳೆಲ್ಲ ವಿಷಮಯವಾಗಿಹ ಅರಣ್ಯದ ಖಳರೆಂಬ ಗಿಡವು 1ಆರಿಂದ್ರಿಯ ಕಳ್ಳರೆಂಬ ಕಾಮವೆಂಬಚೋರನಾಯಕನುಪಟಳವುಭೂರಿಕಾಲದ ಧರ್ಮವೆಂಬ ದ್ರವ್ಯವೆಲ್ಲಸೂರ್ಯಾಡಿಸುಲಕೊಂಬ ಹಯವುಮೂರು ಬಗೆಯಿಂದ ಸುಡುತ ಕಂಗೆಡಿಸುವದಾರುಣತರ ದಾವಾನಳವುಚೀರುವ ನಿಂದಕ ಝಲ್ಲಿಕದುಶಾಸ್ತ್ರ ನಿಸ್ಸಾರ ಘೂಕಗಳ ರವವು 2ಅಡ್ಡಡ್ಡ ಬಂದು ಅಜ್ಞಾನ ಕಾಳೋರಗವೆಡ್ಡುಗೊಳಿಸಿ ಕಚ್ಚುತಿವೆದೊಡ್ಡೆಂಟು ಮದವೆಂಬೊ ಮದ್ದಾನೆ ಎದೆಯೆಂಬಗುಡ್ಡದೊಳಗೆ ಸುತ್ತುತಿವೆಹೆಡ್ಡನೆಂದು ಚುನ್ನವಾಡಿ ಮನೋಬುದ್ಧಿಗಡ್ಡದ ಕಪಿ ಕಾಡುತಿವೆ 3ಜನ್ಮಮರಣ ಹಸುತೃಷೆಜರಾವ್ಯಾಧಿಯೆಂಬುಮ್ಮಳಿಕೆಯ ಪೊರೆಯುಂಟುಹಮ್ಮುಮಮತೆ ಎಂಬ ತಲೆಹೊರೆ ಭಾರಾಗಿಒಮ್ಮೆಗಿಳಿಯಲಿಲ್ಲ ಗಂಟುಸ್ವರ್ಮಂದಿರವೆ ಹೆಬ್ಬೆಟ್ಟನಾಯಕನರ್ಕಕಮ್ಮರಿಗಳು ಇಪ್ಪತ್ತೆಂಟುಸನ್ಮಾನ ರಾಗಭೋಗಗಳೆಂಬ ಬಯಲಾಸೆಯ ಮೃಗತೃಷ್ಣೆಯ ನಂಟು 4ಅಲ್ಲಿಗಲ್ಲಿಗೆ ಸುಖದು:ಖನೆಳಲುಬಿಸಲಲ್ಲಿಗಲ್ಲಿಗೆ ಪ್ರಿಯತರುವುಬಲ್ಲಿದರಿಂದಾಹ ಭಯದಂತೆ ಸೂಚಿಪಕಲ್ಲುಕೊಳ್ಳಗಳ ನಿರ್ಝರವುಕೊಲ್ವಾರಿನೃಪದೂತರೆಂಬ ಸೂಕರಮೋಹÀಹಲ್ಲೊಳಗಘಕೂಪದಿರವುಕ್ಷುಲ್ಲಕ ಪಿಸುಣರೆಂಬುವ ಋಕ್ಷಬಿಡಾಲಹೊಲ್ಲನಖಿಗಳ ಸಂಚರವು 5ಈಷಣತ್ರಯಯಂತ್ರ ಏಳು ಪ್ರಾಕಾರದಿದ್ವೇಷಿಗಳಿದ್ದ ದುರ್ಗಗಳುದೂಷಣ ಸ್ತುತಿ ಎಂಬ ಕಾಕಪಿಕೋಕ್ತಿ ಪ್ರದೋಷದ ಮಳೆ ಮಂಜುಗಳುನೈಷಧನುಂಡು ಕೊಬ್ಬಿದ ಇಂದ್ರಿಯಗೋಳಕಮೂಷಕಗಳಿಹ ಬಿಲಗಳುದೋಷ ದುರ್ವಾರ್ತೆ ದುರಿತವೆಂಬ ಕ್ರವ್ಯಾದಘೋಷಣ ಭಯಂಕರಗಳು 6ಈ ರೀತಿಕಾಂತಾರದಾಟುವ ಧೀರಗೆಮಾರುತಿ ಮತ ಪಕ್ಷ ಬೇಕುನಾರಾಯಣನೆ ಸರ್ವೋತ್ತಮನೆಂದೆಂಬತೋರ ಗಧಾಯುಧ ಬೇಕುಘೋರಾದ್ವೈತ ಕಕ್ಷವ ಛೇದಿಸುವ ಸುಕುಠಾರ ತತ್ವಗಳಿರಬೇಕುಸಾರಜÕಜನಪ್ರಭು ಪ್ರಸನ್ವೆಂಕಟಕೃಷ್ಣನಾರಸಿಂಹನಸ್ಮøತಿಬೇಕು7
--------------
ಪ್ರಸನ್ನವೆಂಕಟದಾಸರು
ದಾತೆಇಂದಿರೆಪಾರಿ| ಜಾತ ಮಂದಿರೆ ಲೋಕ |ನಾಥೆ ಸುಖ ಪೂರ್ಣೆ ವಿಖ್ಯಾತೆ ||ಬಿನ್ನವಿಸುವೆನೆ ಯನ್ನಮಾತು ಮನ್ನಿಪುದೇ ವಿಧಿಮಾತೆ ಪಪಾನೀಯಧಿ ಹರಿಗೆ | ಏನು ಕೊಟ್ಟನೊ ನಿನ್ನ |ಕಾಣಿಸವೆ ಕಣ್ಣು ಕುಲವಿಲ್ಲ ||ಗೋತ್ರವಿಲ್ಲ ಹೆತ್ತವರ-ಕ್ಷೋಣಿಯೊಳಗೊಬ್ಬರರಿತಿಲ್ಲ1ಏನು ಮರುಳಾದೆವ್ವ | ಶ್ರೀನಾರಿಯಿಂಥವಗೆ |ಹೀನಳುಚ್ಛಿಷ್ಟ ಫಲಮೆದ್ದ ||ಬಡ ಬ್ರಾಹ್ಮಣೊದ್ದರೆಮಾನವೇ ಇಲ್ಲಿ ನಗುತಿದ್ದ2ಥವ ಚೋರ ಬಹುಜಾರ| ಸವತಿಯರು ಬಲು ಮಂದಿ |ಅವರಿಗಾತ್ಮಜರು ಹತ್ತತ್ತು ||ನಿನ್ನೊಗತನದೊಳಿದ್ದಅವಿವೇಕ ಮೂಲೋಕಕೆ ಗುರುತು3ಅತ್ತೆ ಮಾವಗಳಿಲ್ಲ |ವೃತ್ತಿಕ್ಷೇತ್ರಗಳಿಲ್ಲ |ಹಸಿದರನ್ನಿಲ್ಲ ಮನೆಯಲ್ಲಿ ||ಈ ಗಂಡನೊಡನೆಯೇ-ನರ್ಥಿ ಪಡುತಿಹೆಯೆ ನೀ ಬಲ್ಲೆ 4ಸೇರಿದನುಪತಿನಿನ್ನ | ತೌರು ಮನೆ ನೋಡಲ್ಕೆ |ಧಾರಿಣಿಯೊಳಗೆ ಬಹು ನಿಂದಾ ||ಭಕ್ತಿಯಿಂದವನ ಹ್ಯಾ-ಗಾರಾಧಿಸುವದೋ ಸುರವೃಂದಾ 5ಶಿಶು ಹಿಂಸಕತಿ ಕಠಿಣ | ಹಸನ್ಮುಖನಲ್ಲರ್ಭಕ ಹೆಂ- |ಗಸರಳಿದ ಪುಕ್ಕಾ ಬಹು ಠಕ್ಕಾ ||ಕಲಹಗಂಟೇನು ಸೇ-ವಿಸಿದ್ಯೊ ವ್ರತಗಳನು ಇವ ಸಿಕ್ಕಾ6ಎಲ್ಲೆಲ್ಲಿ ನೋಡಿದರು | ಇಲ್ಲಿ ಪ್ರಾಣೇಶ ವಿ- |ಠಲನಂಥವರೂ ಏನೆಂಬೆ ||ಮುದದಿಂದ ಬಿಡದೆ ಅವ-ನಲ್ಲಿ ಪೊಂದಿರ್ಪೆ ಜಗದಂಬೆ 7
--------------
ಪ್ರಾಣೇಶದಾಸರು
ದಾರಿಯ ತೋರೊ ಮುಕುಂದ - ಹರಿ-|ನಾರಾಯಣ ಗೋವಿಂದ ಪಬಂದೆನು ಬಹುಜ್ಮನದಲಿ -ನಾ-|ಬಂಧನದೊಳು ಸಿಲುಕುತಲಿ ||ಮುಂದಿನದಾವುದು ಪಯಣ -ತೋರೊ-|ಇಂದುನೀ ಇಂದಿರೆರಮಣ1ಗತಿಯಿಲ್ಲದವರಿಗೆ ನೀನೆ -ಸದ್-|ಗತಿಯೆಂದು ಸ್ತುತಿಮಾಡಿದೆನೊ ||ಗತಿಯೆಂದು ನಂಬಿದೆ ನಿನ್ನ |ಸತುವ ತೋರು ನರಹರಿಯೆ ಗೋವಿಂದ 2ಮಡವಿನೊಳಗೆ ಧಮುಕಿದೆನೆ -ಇನ್ನು-ಕಡಹಾಯಿಸುವರ ನಾ ಕಾಣೆ ||ಹಡೆದ ತಾಯಿ - ತಂದೆ ನೀನೆ -ಕೈ-|ಹಿಡಿದು ಸಲಹೊ ಎನ್ನೊಡೆಯ ಮುರಾರಿ 3ಮಿಕ್ಕಿ ಬರುವ ಹೊಳೆಯೊಳಗೆ -ನಾನು-|ಸಿಕ್ಕಿದೆ ನಡುನೀರೊಳಗೆ ||ಕಕ್ಕುಲಾತಿನಿನಗಿರದೆ |ಭಕ್ತವತ್ಸಲ ನೀ ದಯಮಾಡೋ 4ಕುಕ್ಷಿಯೊಳಗೆ ಇಂಬಿಟ್ಟು -ಎನ್ನ-|ರಕ್ಷಿಸಿ ಸಲಹಬೇಕು ||ಅಕ್ಷಯಅನಂತ ಮಹಿಮನೆ - ನೀನು |ಪಕ್ಷಿವಾಹನನೆಪುರಂದರವಿಠಲ5
--------------
ಪುರಂದರದಾಸರು
ದಾರಿಯ ತೋರೊ ಮುರಾರಿ ಮುಂದಣದಾರಿಯ ತೋರೊ ಮುರಾರಿ ಪ.ದಾರಿತೋರುಕಂಸಾರಿಭವಾಂಜನಪಾರಾವಾರಉತ್ತಾರಣಗೈಯುವಅ.ಪ.ಮಾಯಾಶ್ರಿತನಾಗಿಹೆನಲ್ಲೊ ಮೋಕ್ಷೋ-ಪಾಯಭೇದಂಗಳ ಮರತೆನಲ್ಲೊಕಾಯಜಪಿತ ಕಮಲಾಯತಲೋಚನಕಾಯದೊಳಗೆ ಸನ್ನಾಯದಿ ನೋಡುವ 1ದುಃಖವಿಲ್ಲದೆ ಸುಖವಿಲ್ಲ ಇದಒಕ್ಕಣಿಪರೆ ತುದಿಬುಡವಿಲ್ಲಸೊಕ್ಕಿ ನಡೆದು ಭವಯಿಕ್ಕುಳ ಬಾಯೊಳುಸಿಕ್ಕಿದೆನಲ್ಲವೊ ರಕ್ಕಸವೈರಿಯೆ 2ಬಲ್ಲೆನೆಂಬರೆ ಬಲವಿಲ್ಲಭವಬಲ್ಲೆಯೊಳಗೆ ಸಿಲುಕಿದೆನಲ್ಲಕಲ್ಲೊಳಗ್ನಿ ಕಲಕಿರುವಂದದಿ ಮನದಲ್ಲಿ ನಿನ್ನ ಪದಪಲ್ಲವ ಭಜಿಸುವ 3ಸಾರರಹಿತ ಸಂಸಾರದಿಮಾಯಾನಾರಿ ಗೈದ ಮಮಕಾರದಿಘೋರದುರಿತವಪಹಾರಗೈವ ಲಕ್ಷ್ಮೀನಾರಾಯಣನು ಸೇರಿ ಸೇವಿಸುವಂಥ 4
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ