ಒಟ್ಟು 1219 ಕಡೆಗಳಲ್ಲಿ , 97 ದಾಸರು , 942 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಹಳ ನಂಬಿದೆ ಭಕ್ತಪಾಲ ಶ್ರೀ ಲಕ್ಷೀಯ ಲೋಲ ವೆಂಕಟರಾಯನ ಮೂರು ಲೋಕದೊಡೆÉಯನ ಮುಕ್ತಿಯ ಕೊಡುವನ ಪಾಲಿಸಿ ಜಗವನುದ್ಧರಿಸಿದ ದೇವನ ಪ. ಜಲದೊಳು ಪೊಕ್ಕು ವೇದವ ತಂದು ಅಜವನಿಗಿತ್ತು ಬಲುಗಿರಿ ಕುಸಿಯಲು ಬೆನ್ನಿನಿಂದಲಿ ತಳೆದು ನೆಲನ ಕದ್ದಸುರನ ಕೊಂದು ಕಂಬದಿ ನಿಂದು ಬಲಿಯ ದಾನವ ಬೇಡಿ ಜಲ ಪರುಷವ ನೀಡಿ ಮತ್ತೆ ಮಾತೆಯ ಕಡಿದು ಛಲದಿ ರಾವಣನ ಸಂಹರಿಸಿ ಸೀತೆಯ ತರಿಸಿ ಬಲುಸತಿಯರನಾಳಿ ಬವುದ್ಧ ರೂಪವ ತಾಳಿ ಅಲ್ಲದಶ್ವವೇರಿದ ಅತಿ ಚೆಲುವ ದೇವನ 1 ನಿಗಮ ಚೋರನ ಕೊಂದು ನೀರೊಳು ಮುಳುಗ್ಯಾಡಿ ನಗವ ಬೆನ್ನಲಿ ಪೊತ್ತು ಸುರರಿಗಮೃತವಿತ್ತು ಬಗೆದು ಧಾರುಣಿಯನ್ನು [ಚೀರಿ ಹರಹಿ] ಹಿರಣ್ಯಕನ ಮಿಗಿಲಾದ ಬಲಿಯ ಮೆಟ್ಟಿ ಸೊಗಸಿಂದ ಕಾಮಧೇನುವ ತಂದು ಕೌಸಲ್ಯಾ ಮಗನಾಗಿ ಹುಟ್ಟಿ ರಕ್ಕಸÀರನ್ನು ತರಿದೊಟ್ಟಿ ವಿಗಡ ಮಾವನ ಕೊಂದು ಮತ್ತೆ ತ್ರಿಪುರವ ಗೆಲಿದು ಜಗದೊಳುದ್ದಂಡ ರಾವುತನಾದ ದೇವನ 2 ಆದಿಪೊಳ[ಕು] ಕ್ಷೀರಾಂಬುಧಿ ಮಥsÀನವ ಆಡಿ ಕೂರುಮನಾಗಿ ಮತ್ತ ಹಿರಣ್ಯಕನ ದಾಡೆಯಿಂದಲಿ ಸೀಳಿ ಜೋಡು ರೂಪವ ತಾಳಿ ಬೇಡಿ ಮೂರಡಿ ನೆಲವ ತೀಡಿ ಕ್ಷತ್ರಿಯರ ಸಂಹರಿಸಿ ಕಾಡೊಳು ಚರಿಸಿ ಗಾಡಿಗಾತಿಯರ ಮನೆಯೊಳುಳ್ಯಾಡಿ ಸತಿಯರ ವ್ರತ- ಗೇಡಿ ಭಕ್ತರಿಗೆ ಅಭಯವ ನೀಡಿ ಹೆಳವನಕಟ್ಟೆ ಕಾಡುಗಲ್ಲಲ್ಲಿ ನಿಂತ ಕಲಿ ವೆಂಕಟೇಶನ 3
--------------
ಹೆಳವನಕಟ್ಟೆ ಗಿರಿಯಮ್ಮ
ಬಾಗಿ ಭಜಿಸಿರೋ | ಭಾಗಣ್ಣ ದಾಸರನಾ | ನಮಿಪರ ಬೀಷ್ಟದನಾ ಪ ಭೋಗಿ ಭೂಷಣ ಸುತನಾ | ಮನ್ಮಥ ಸದೃಶನನಾ ಅ.ಪ. ಮುರಹರ ನಾಮಕನರಸಿಯುದರದಲ್ಲಿ | ಜನುಮತಾಳಿ ಅಲ್ಲೀಸುರಪುರ ವೈದಲು ತನ್ನ ಪಿತನು ಮುಂದೇ | ಸಂಕಾರ ಪುರಸೇರ್ದೇ | ವರಚಿಂತಲ ವೇಲಿಲಿ ಧ್ಯಾನಕಾಗಿ ನಿಂದು | ಗಾಯಿತ್ರಿ ಜಪಿಸು ತಂದು ವರಮಾರುತಿ ಗುಡಿಯೊಳು ನೆಲಿಸುತ್ತಾ | ವರಪಡೆದೆಯೊ ಜಪಿಸುತ್ತಾ 1 ತ್ರಿಲಿಂಗಪುರಕೇ ಕವಿಯೈತರಲೂ | ಪಂಡಿತರನು ಗೆಲಲೂಬಲುಚಿಂತಿಸಿ ಜನಸಭೆಯ ಸೇರಿ ಆಗ | ತೀರ್ಮಾನಿಸಿ ವೇಗ |ಕಳುಹಿದರವನ ಭಾಗಣ್ಣನ ಬಳಿಗಾಗೀ | ಬಲವನು ತೋರೆನಲಾಗೀ ನಿಲಲಾರದೆ ತೆರಳಿದ ಭೀತಿಯಲೀ | ವರಕವಿ ಮೆರೆದನು ಕೀರ್ತಿಯಲೀ2 ಪರಿ ನಿತ್ಯ ಶ್ರೀ ವೆಂಕಟಕೃಷ್ಣನ ಪಾಡುತ್ತಾ | ನರ್ತನ ಗೈಯ್ಯುತ್ತಾ ಸುತ್ತಿ ಬರುವ ಜನರ ದೃಷ್ಠಾರ್ಥಾ | ಪೇಳುತ ಗಳಿಸಿದೆ ಅರ್ಥಾ 3 ತಿಮ್ಮಣ್ಣ ದಾಸಾರ್ಯರ ಬಳಿಯಲೀ | ಆದವಾನಿಯಲ್ಲೀನೆಮ್ಮದಿಲಿದ್ದಲ್ಲಿಂದಲಿ ತೆರಳಿ | ಕಾಶೀಶನ ಬಳೀಕ್ರಮ್ಮಿಸಿ ದಿನ ಗುರು ಸೇವೆಯಲ್ಲಿ ಬಹಳಾ | ಮೆಚ್ಚಿಸಿ ಗುರುಗಳ | ಹಮ್ಮಿನ ವಿಜಯರಿಂದುಪದೇಶಾ | ಗೋಪಾಲ ವಿಠ್ಠಲದಾಸ 4 ವೆಂಕಟರಾಮಗೆ ರಾತ್ರಿಕಾಲದಲ್ಲೀ | ಆಘ್ರ್ಯವ ಕೊಡುವಲ್ಲೀ ಪಂಕಜಮಿತ್ರನ ತೋರುತಲವರೀಗೆ | ಸಂಶಯ ಕಳೆದವಗೆ | ವೆಂಕಟೇಶನೊಳ್ ಭಕುತಿ ಪುಟ್ಟುವಂತೆ | ಸೇವೆ ವಿಧಿಸಿ ಅಂತೇ ಪಂಕಜನಾಭನ ಕೀರ್ತನಾದಿಗಳನೂ | ಮಾಡಿ ಕಳೆದ ದಿನಗಳನೂ 5 ವೆಂಕಟೇಶನ ಪರೋಕ್ಷಿ ದಾಸರೆಂದು | ಪೇಳೆ ಜನರು ಅಂದು ವೆಂಕಟ ನರಸಿಂಹಾಚಾರ್ಯಾ | ದಾಸರೊಳು ಮಾತ್ಸರ್ಯಾ | ಶಂಕೆಪಟ್ಟು ಭಜನೆಯೊಳಿರುವಂದೂ | ಮುಂದಿನ ಪೀಠದಲೊಂದೂ ಲಂಕೆಯ ಪುರವನು ದಹಿಸಿದನಾ | ಕಂಡರು ಕೋಡಗನಾ 6 ವಾಸುದೇವ ವಿಠಲನ್ನಾ | ಕಾಣುತಲಿ ಮುನ್ನಾ ಅಂಕಿತ ನಾಮದಿ ಪದಪದ್ಯಾ | ರಚಿಸಿ ಮೆರೆದ ನಿರವದ್ಯಾ7 ರೋಗದಿ ಶ್ರೀನಿವಾಸಾಚಾರ್ಯಾ | ಬರಲಾಗ ದಾಸಾರ್ಯ ಜಾಗ ಗುಡಿಯಲಿ ಶುದ್ಧಿ ಮಾಡುತಿರಲು | ಕೇಳಿ ಗೃಹಕೆ ಹೋಗಲು | ವೇಗದಿ ಮಂತ್ರಿತ ರೊಟ್ಟಿ ತಿಂದು ಇನ್ನ | ಕಳೆದ ರೋಗವನ್ನ ನಾಗಶಯನ ಶ್ರೀ ಜಗನ್ನಾಥ ವಿಠಲನ್ನಾ | ತೋರ್ಯರ್ಧಾಯು ಇತ್ತವನ್ನಾ 8 ಮುದದಲಿ ನಿಜಜನರನು ಪೊರೆಯೇ | ಶಾಸ್ತ್ರರ್ಥವ ನೊರೆಯೆ ಪದ ಸುಳಾದಿಯನೆ ಬಲುರಚಿಸೀ | ಭಕುತಿ ಮಾರ್ಗ ಬೆಸಸೀ | ಸುಧೆಸಮವೆನೆ ಹರಿಕಥೆಸಾರ | ರಚಿಸಿ ಜನೋದ್ಧಾರ ಮುದಮುನಿ ಮತಗ್ರಂಥಗಳೊರೆದೇ | ಸಚ್ಛಾಸ್ತ್ರಪೊರೆದೇ 9 ಹತ್ತೆಂಟು ಒಂದು ಮೊಗದ ರೂಪ | ಶ್ರೀ ವಿಶ್ವರೂಪನಿತ್ಯ ಚಿಂತಿಪ ತನ್ನ ಬಿಂಬರೂಪ | ಅಂಶದಿಹನು ಗಣಪಚಿತ್ರಿಸಿರುವ ಚಕ್ರಾಬ್ಜ ವಲಯವನ್ನ | ಧೇನಿಸಿ ವಿಜಯರನ್ನಕೃತ್ಯ ಪೇಳಲೊಶವೆ ಅಪರೋಕ್ಷಿಗಳ | ಮಂದನು ನಾ ಬಹಳ 10 ಚಿತ್ರಮಾರ್ಗದಿ ಭ್ರಾತೃವರ್ಗವನ್ನ | ದೂರಕಳಿಸಿ ಮುನ್ನಚಿತ್ರಭಾನು ಸಂವತ್ಸರದಲ್ಲಿ | ದಶಮಾಸಾಷ್ಟಮಿಲೀ |ಚಿಂತಿಸುತ ಯೋಗಮಾರ್ಗದಲ್ಲಿ | ದಹಿಸಿ ದೇಹವಲ್ಲೀ |ಚಿತ್ರ ಚರಿತ ಗುರುಗೋವಿಂದ ವಿಠ್ಠಲನಾ | ಪದಕಮಲವ ಸೇರಿದನ 11
--------------
ಗುರುಗೋವಿಂದವಿಠಲರು
ಬಾಗಿಲನು ತೆರೆದು ಸೇವೆಯನು ಕೊಡು ಹರಿಯೆಕೂಗಿದರು ಧ್ವನಿ ಕೇಳಲಿಲ್ಲವೇ ನರಹರಿಯೇ ಪ ಪರಮ ಪದದೊಳಗೆ ವಿಷಧರನ ತಲ್ಪದಲಿ ನೀಸಿರಿ ಸಹಿತ ಕ್ಷೀರವಾರಿಧಿಯೊಳಿರಲುಕರಿರಾಜ ಕಷ್ಟದಲಿ ಆದಿಮೂಲಾ ಎಂದುಕರೆಯಲಾಕ್ಷಣ ಬಂದು ಒದಗಿದೆಯೊ ನರಹರಿಯೆ 1 ಕಡುಕೋಪದಿಂ ಖಳನು ಖಡುಗವನು ಪಿಡಿದು ನಿ-ನ್ನೊಡೆಯನೆಲ್ಲಿಹನೆಂದು ಜಡಿದು ನುಡಿಯೆದೃಢ ಭಕುತಿಯಲಿ ಶಿಶುವು ಬಿಡದೆ ನಿನ್ನನು ಭಜಿಸೆಸಡಗರದಿ ಕಂಬದಿಂದೊಡೆದೆ ನರಹರಿಯೆ 2 ಯಮಸುತನ ರಾಣಿಗಕ್ಷಯ ವಸನವನ್ನಿತ್ತೆಸಮಯದಲಿ ಅಜಮಿಳನ ಪೊರೆದೆಸಮಯಾಸಮಯವುಂಟೆ ಭಕ್ತವತ್ಸಲ ನಿನಗೆಕಮಲಾಕ್ಷ ಕಾಗಿನೆಲೆಯಾದಿಕೇಶವನೆ 3
--------------
ಕನಕದಾಸ
ಬಾದರಾಯಣ ಪಾದಕೆರಗಿದೆನೊ ಪ ನೀದಯದಿ ಕಾಮಕ್ರೋಧಗಳನೆ ಬಿಡಿಸಿ ಸಾಧು ಕರ್ಮದಲಿ ಆದರವೀಯೊ ಅ.ಪ ಜ್ಞಾನಿ ಗೌತಮಿ ಮೌನಿ ಶಾಪದಿಂದ ಜ್ಞಾನಿಗಳಿಗೆ ಅಜ್ಞಾನತೆ ಬರಲು ದೈನ್ಯದಲಿ ಚತುರಾನನಾದಿಗಳು ನೀನೆ ಗತಿಯೆನಲು ಮಾನಿಸಿದ ಸುಖಾತ್ಮ 1 ತಾಪಸೋತ್ತಮ ಆ ಪರಾಶರರು ದ್ವೀಪದಲ್ಲಿರಲು ನೀ ಪವಳಿಸಿದೆ ಶಾಪದಿಂದ ಕ್ರಿಮಿರೂಪ ಪೊಂದಿದವಗೆ ಭೂಪತನವನಿತ್ತ ದ್ವೈಪಾಯನಾಖ್ಯ 2 ಶೃತಿಗಳರ್ಥ ಮಂದಮತಿಗಳರಿಯದಿರೆ ಹಿತದಿ ಬ್ರಹ್ಮಸೂತ್ರತತಿಗಳನ್ನೆ ರಚಿಸಿ ಭಾಗವತ ವರ ಮಹಾಭಾ- ರತಗಳನ್ನು ರಚಿಸಿ ಅತಿ ಪ್ರಸನ್ನರಾದ 3
--------------
ವಿದ್ಯಾಪ್ರಸನ್ನತೀರ್ಥರು
ಬಾರಪ್ಪ ನೀ ಬಾರಪ್ಪಾ ಭಾರತಿರಮಣಾ ಮುಖ್ಯಪ್ರಾಣಾಗೋ'ನದಿನ್ನಿ ಹಣ್ಣಮಪ್ಪಾ ನೀ ಗಾಲವ ಕ್ಷೇತ್ರಕೆ ಬಾರಪ್ಪಾ ಪಗಾಲವಕ್ಷೇತ್ರಕ್ಕೆ ಬಾರಪ್ಪಾ ನೀ ಹೋಳಿಗೆತುಪ್ಪಾ ಹೊಡೆಯಪ್ಪಾಕೃಷ್ಣವೇಣಿಯ ತಟದ ಶಿಲೆಯೊಳು ಒಡಮೂಡುತ ನೀ ಇದ್ದೆಪ್ಪಾ1ಶಿಷ್ಟರಾದ ಶ್ರೀ ಉಮರ್ಜಿ ಆಚಾರ್ಯರ ನಿಷ್ಠೆಗೆ ಒಲಿದು ಬಂದೆಪ್ಪಾಶರಧಿಗೆ ಜಿಗಿದು ಸೀತಾದೇ'ಗೆ ರಾಮಮುದ್ರಿಕೆಯ ಕೊಟ್ಟೆಪ್ಪಾದುರುಳ ರಾವಣನ ಲಂಕಾಪಟ್ಟಣ ಸುಟ್ಟ ಕಪಿವರನು ನೀನಪ್ಪಾದುಷ್ಟ ಕೌರವನ ತೊಡೆಯ ಒಡೆದು ಗದೆಪಿಡಿದ ಭೀಮ ನೀ ಹೌದಪ್ಪಾ 2ದುಃಶಾಸನನ ಕರುಳ ಬಗೆದು ನರಸಿಂಹನ ಪ್ರೀತಿ ಪಡೆದೆಪ್ಪಾಹರಿಯದ್ವೇಗಳ ದುರ್ಮತಗಳನು ಮುರಿದು ಮಧ್ವಯತಿ ಆದೆಪ್ಪಾರಾಶಿ ರಾಶಿ ಸದಗ್ರಂಥ ರಚಿಸಿ ನೀ ವ್ಯಾಸರ ಸನ್ನಿಧಿ ಪಡೆದೆಪ್ಪಾಕೃಷ್ಣವೇಣಿತಟ ನರಾಹರಿ ಇರುವನು ರಾಯರು ಇರುವರು ಬಾರಪ್ಪಾ 3ಎಲ್ಲಿ ನರಹರಿ ಎಲ್ಲಿ ರಾಯರು ಅಲ್ಲಿ ನೀ ಇರಬೇಕಪ್ಪಾಪಾಪಿಷ್ಠರ ಗತಿಭಯಂಕರನು ನೀಪುಣೈವಂತರಿಗೆ ಸುಲಭಪ್ಪಾಭೂಪತಿ'ಠ್ಠಲನ ಭಕ್ತರ ಪೊರೆಯಲು ನೀ ಗಾಲವ ಕ್ಷೇತ್ರಕೆ ಬಾರಪ್ಪಾ 4ರುದ್ರದೇವರು
--------------
ಭೂಪತಿ ವಿಠಲರು
ಬಾರಯ್ಯ ಭಕ್ತವತ್ಸಲ ಶ್ರೀ ಗುರು ಮುದ್ದುಕೃಷ್ಣ ಮದನಗೋಪಾಲ ಧ್ರುವ ಯಾದವಕುಲತಿಲಕ ಶ್ರೀದೇವದೇವ ಸಾಧುಜನರ ಪಾಲಕ ಉದ್ಧವ ಪ್ರಾಣಪೋಷಕ ಆದಿಕೇಶವ ಸದಮಲ ಸುಖದಾಯಕ 1 ಇಂದೀವರದಳನಯನ ನಂದಕುಮಾರ ಸುಂದರ ಶುಭವದನ ಮಾಧವ ಮಧುಸೂದನ ಮಂದರಧರ ವೃಂದ ಗೋಕುಲೋದ್ಧರಣ 2 ಮುರಹರ ಸಂಕರುಷಣ ಉರಗಶಯನ ತೋರಯ್ಯ ನಿಮ್ಮ ಚರಣ ಬಾರಯ್ಯ ನಾರಾಯಣ ಗರುಡವಾಹನ ಹೊರೆಯಾ ಮಹಿಪತಿ ಪ್ರಾಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಬಾರೊ ಕೃಷ್ಣ ಬಾರೊ ಕೃಷ್ಣ ಬಾರೊ ಕೃಷ್ಣ ಮನದಸದನಕೆ ಪ ತೊರೊ ಕೃಷ್ಣ ತೊರೊಕೃಷ್ಣ ತೊರೊಕೃಷ್ಣ ಚರಣ ಬಡವಗೆ ಅ ಶಿರವ ನಿಡುವೆ ಚರಣದಲ್ಲಿದುರಿತಹರಣ ಕರುಣಭರಿತನೆ ಪೊರೆವ ಧರಣಿ ಧರಿಪನೆ 1 ಸಿರಿಯಮದದಿ ಮರೆತೆ ನಿನ್ನ ಕರೆದು ಪೊರೆಯೊ ಶರಣರಕ್ಷಕಾ ಅಳಿವೆ ಕ್ಷೇಮ ಧಾಮನೆ 2 ವೇದವಿನುತ ಮೋದಭರಿತ ಸಾಧುಚರಿತ ಆದಿ ಕಾರಣಾ ಕಾಯೊ ಬಂಧನೀಡ್ವನೇ3 ನೀರಜಾಕ್ಷ ವಾರಿನಿಲಯ ಸೂರಿಗಮ್ಯ ಪೂರ್ಣಧಾಮನೆ ಸರ್ವನಾಮ ಸರ್ವಕರ್ಮ ಸರ್ವಶ್ರೇಷ್ಟಸರ್ವ ಪ್ರೇರಕಾ 4 ಇಂದಿರೇಶ ನಂದಪೂರ್ಣ ಸುಂದರಾಂಗ ಬಂಧಮೋಚಕ ಕುಂದುರಹಿತ ವಂದನಾರ್ಹ ಬಿಂದು ಬಿಂಬ ಕಂಧರಾಶ್ರಯ 5 ಭುವನ ವಿತತ ಭುವನಮೂಲ ಭುವನ ಪಾಲ ಭುವನನಾಶಕ ಭುವನ ಭಿನ್ನ ಸ್ತವನ ಪ್ರೀಯ ಕವನವರಿಯೊ ಕವಿಬಿರೀಡಿತ ಭಕುತಿದಾಯಕ ಶಕುತ “ಶ್ರೀಕೃಷ್ಣವಿಠಲ” ಯುಕುತಿ ಗೊಲಿಯ ಲಕುಮಿನಾಯಕ
--------------
ಕೃಷ್ಣವಿಠಲದಾಸರು
ಬಾರೋ ಬಾರೋ ಚನ್ನಕೇಶವನೇ ಬಾರೋ ಬಾರೋ ಮುರಲೀಧರನೇ ಪ ನಿತ್ಯ ನಿರ್ಮಲನೇ ಸನಕಾದಿ ವಂದಿತ ಮಧುಸೂದನನೇ 1 ಭಜಕನ ಪಾಲಿಸೋ ಮುಕ್ತಿದಾಯಕನೇ 2 ದೂರ್ವಾಪುರದಿ ನಿತ್ತ ಯದು ಕುಲಪತಿಯೇ ದೂರ್ವಾಸವಂದಿತ ಆದಿ ಮೂರುತಿಯೇ 3
--------------
ಕರ್ಕಿ ಕೇಶವದಾಸ
ಬಾರೋ ಮನೆಗೆ ಗೋವಿಂದ ನಿನ್ನಂಘ್ರಿ ಕಮಲವತೋರೋ ಎನಗೆ ಮುಕುಂದ ನಲಿದಾಡು ಮನದಲಿಮಾರಪಿತ ಆನಂದನಂದನ್ನ ಕಂದ ಪ ಭವ ಘೋರ ನಾಶನವಾರಿಜಾಸನ ವಂದ್ಯ ನೀರಜಸಾರ ಸದ್ಗುಣ ಹೇ ರÀಮಾಪತೆ ಅ.ಪ. ನೋಡೋ ದಯದಿಂದೆನ್ನ-ಕರಪದುಮ ಶಿರದಲಿನೀಡೋ ಭಕ್ತಪ್ರಸನ್ನ-ನಲಿದಾಡೊ ಮನದಲಿಬೇಡಿಕೊಂಬೆನೊ ನಿನ್ನ-ಆನಂದ ಘನ್ನಮಾಡದಿರು ಅನುಮಾನವನು ಕೊಂ -ಡಾಡುವೆನು ತವ ಪಾದಮಹಿಮೆಗಳನುಜೋಡಿಸುವೆ ಕರಗಳನು ಚರಣಕೆಕೂಡಿಸೊ ತವ ದಾಸಜನರೊಳು 1 ಹೇಸಿ ವಿಷಯಗಳಲ್ಲಿ-ತೊಳಲ್ಯಾಡಿ ನಾ ಬಲುಕ್ಲೇಶ ಪಡುವುದು ಬಲ್ಲಿ-ಘನಯುವತಿಯರ ಸುಖಲೇಸು ಎಂಬುದನ್ನು ಕೊಲ್ಲಿ-ಆಸೆ ಬಿಡಿಸಿಲ್ಲಿಏಸು ಜನುಮದ ದೋಷದಿಂದಲಿಈಸುವೆನು ಇದರೊಳಗೆ-ಇಂದಿಗೆಮೋಸವಾಯಿತು ಆದುದಾಗಲಿಶ್ರೀಶ ನೀ ಕೈಪಿಡಿದು ರಕ್ಷಿಸು 2 ನೀನೆ ಗತಿಯೆನಗಿಂದು ಉದ್ಧರಿಸೊ ಬ್ಯಾಗನೆದೀನ ಜನರಿಗೆ ಬಂಧು-ನಾ ನಿನ್ನ ಸೇವಕಶ್ರೀನಿವಾಸ ಎಂದೆಂದು-ಕಾರುಣ್ಯ ಸಿಂಧುಪ್ರಾಣಪತಿ ಹೃದಯಾಬ್ಜಮಂಟಪ-ಸ್ಥಾನದೊಳಗಭಿವ್ಯಾಪ್ತ ಚಿನುಮಯಧ್ಯಾನಗೋಚರನಾಗಿ ಕಣ್ಣಿಗೆಕಾಣಿಸುವೆ ಶ್ರೀರಂಗವಿಠಲ 3
--------------
ಶ್ರೀಪಾದರಾಜರು
ಬಾಲಕೃಷ್ಣ ಹರಿ ವಿಠಲ | ಪಾಲಿಸೋ ಇವಳಾ ಪ ಲೀಲಾ ಮನೋರೂಪ | ಕಾಳಿಂದಿ ರಮಣಾ ಅ.ಪ. ಈ ದಾಸತ್ವ ದೀಕ್ಷಾ | ಸಾಧಿಸುವುದತಿ ಕಷ್ಟಸಾಧು ಈ ಕನ್ಯೆ ಬಹು | ಭಕ್ತಿಯಲಪೇಕ್ಷೆಗೈದು ಬೇಡಿಹಳಿವಳು | ಭೋಧಿಸಿಹೆ ಅಂಕಿತವಕಾದುಕೋ ದಯವನಧಿ | ಬಾದರಾಯಣನೇ 1 ಕಾಮಾದಿಗಳ ಕಳೆದು | ನೇಮದಲಿ ಸಾಧನವನೀ ಮಾಡಿ ಮಾಡಿಸೋ | ಕಾಮ ಪಿತ ಹರಿಯೇಸ್ವಾಮಿ ನೀನಲ್ಲದಲೆ | ಅನ್ಯರನು ನಾ ಕಾಣೆಭೀಮ ಭವಾರ್ಣವವ | ದಾಟಿಸಲು ನಾಕಾಣೆ 2 ಭವವನಧಿ ನವ ಪೋತ | ತವನಾಮ ಸ್ಮøತಿಯಿತ್ತುಪವನ ಸದನದಿ ನಿನ್ನ | ನಂದನದಲ್ಲಿರಿಸೋಅವರಿವರ ಮನೆ ವಾರ್ತೆ | ಕಿವಿಗೆ ಕೇಳಿಸಬೇಡಭವನದಲಿ ಸಾಧನವ | ಗೈವಂತೆ ಮಾಡೋ 3 ಸಾಧು ಸಂಗವ ಕೊಟ್ಟು | ನೀ ದಯದಿ ಕಾಪಾಡೋಮೋದ ತೀರ್ಥರ ಮತವ | ಭೋದಿಸೋ ಮುದದೀಮಾಧವನೆ ಕಾಮಿತವ | ಆದರದಿ ಪಾಲಿಸುತಕಾದುಕೋ ಬಿಡದಿವಳ | ಶ್ರೀದ ನರಹರಿಯೇ 4 ಭಾವ ಭಕ್ತಿಯಲಿಂದ ಹಿರಿಯರ ಸೇವಿಸುವಭಾವುಕಳ ಕೈಪಿಡಿದು | ಕಾಪಾಡೊ ಹರಿಯೇಗೋವು ಕರುವಿನ ಮೊರೆಗೇ | ಧಾವಿಸೀ ಬರುವಂತೆನೀವೊಲಿದು ಪೊರೆಯೊ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಬಾಲಗಜಾನನ ಬಾ ಗುಣಸದನ ಪಾಲಿತ ತ್ರಿಭುವನ ಬಾಲ ಜಗಜ್ಜೀವನ ಪ. ರಾಧಾದೇವಿಯಾರಾಧಿಸಿದಳು ನಿನ್ನ ಆದಿಯೊಳ್ ಕೈಕೊಂಬೆ ಮೋದದಿಂದ ಪೂಜನ 1 ವಿಘ್ನವಿಭಂಜನ ವಿಧಿಸುರ ರಂಜನ ಅಗ್ನಿ ಗರ್ಭನಗ್ರಜ ಅಖುವಾಹನ ಮೋಹನ 2 ಪ್ರಿಯ ಶ್ರೀ ಲಕ್ಷುಮಿನಾರಾಯಣಶರಣ ಕಾಯೊ ಕಾಮಿತಫಲದಾಯಕ ಸುಮನ 3
--------------
ತುಪಾಕಿ ವೆಂಕಟರಮಣಾಚಾರ್ಯ
ಬಿಟ್ಟನೋ ಆತಂಕಗಳನು ನಾ ಕೃಷ್ಣ ನಿನ್ನ ಕರುಣಾ ನಂಬಿ ಪ ಸೃಷ್ಟಿ ಸ್ಥಿತಿ ಲಯಾದಿ ಕರ್ತ ಅಷ್ಟವಿಭವಪೂರ್ಣ ನಿನ್ನ ಇಷ್ಟದಂತೆ ನಡೆಯುವುದೇ ಶ್ರೇಷ್ಠವೆಂಬೊ ಬುದ್ಧಿ ಬಂದು 1 ಬೆಟ್ಟದಂತೆ ಇದ್ದುದಲ್ಲಿ ಘಟ್ಟಿಮಂಜಿನಂತೆ ಕರಗಿ ಕಷ್ಟರಾಶಿಯೆಲ್ಲಾ ಸ್ವಪ್ನ ದೃಷ್ಟದಂತೆ ಆದಮೇಲೆ 2 ತಲೆಯಮೇಲೆ ಕೈಯ್ಯನಿಟ್ಟು ಇಳೆಯ ಮೋರೆ ಮಾಡಿ ನೊಂದು ನೆಲವ ಕಚ್ಚಿ ಬಿದ್ದರೇನು ಫಲವೊ ಧೀರಜನ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಬಿದಿಗೆಯ ದಿವಸ (ಹನುಮಂತನನ್ನು ಕುರಿತು) ರಂಭೆ : ಕಮಲದಳಾಕ್ಷಿ ಪೇಳೆಲೆ ಈತನ್ಯಾರೆ ಸಮನಸನಾಗಿ ತೋರುವನಲ್ಲೆ ನೀರೆಪ. ಧನ್ಯನಾಗಿರುವ ದೊರೆಯ ಧರಿಸುತ್ತ ಚೆನ್ನಿಗನಾಗಿ ತೋರುವನಲ್ಲೆ ಈತ1 ಪಟ್ಟೆಕಂಬಿಯ ನಿರುದುಟ್ಟುಕೊಂಡಿರುವ ಕಟ್ಟಿದುತ್ತರೀಯ ಭೂಷಣದಿಂದ ಮೆರೆವ 2 ಸೋಮಾರ್ಕಶಿಖಿಯಂತಿರುವುದು ತ್ರಿನಾಮ ರಾಮಣೀಯಕ ಮನೋಹರ ಪೂರ್ಣಕಾಮ3 ವೀರವೈಷ್ಣವ ಮುದ್ದು ಮೋಹನಕಾಯ ಭೂರಿಭೂಷಣಭುಜಬಲ ಹರಿಪ್ರಿಯ4 ರೂಪ ನೋಡಲು ಕಾಮರೂಪನಂತಿರುವ ಚಾಪಲ ಪ್ರೌಢ ಚಿದ್ರೂಪನಂತಿರುವ 5 ಬಾಲವ ನೆಗಹಿ ಕಾಲೂರಿ ಶೋಭಿಸುವ ನೀಲದುಂಗುರದ ಹಸ್ತವ ನೀಡಿ ಮೆರೆವ 6 ಗೆಜ್ಜೆ ಕಾಲುಂಗರ ಪದಕ ಕಟ್ಟಾಣಿ ಸಜ್ಜನನಾಗಿ ತೋರುವನು ನಿಧಾನಿ 7 ಊರ್ವಶಿ : ತರುಣಿ ಕೇಳೀತನೆ ದೊರೆ ಮುಖ್ಯಪ್ರಾಣ ವರ ನಿಗಮಾಗಮ ಶಾಸ್ತ್ರಪ್ರವೀಣ 1 ಮಾಯವಾದಿಗಳ ಮಾರ್ಗವ ಖಂಡಿಸಿದ ರಂಭೆ : ದಿಟವಾಯ್ತು ಪೇಳ್ದ ಮಾತಾದರು ಜಾಣೆ ಚಟುಳ ಹನುಮನ ಉತ್ಕಟರೂಪ ಕಾಣೆ 1 ವಾಮನನಾದ ಕಾರಣವೇನೆ ಪೇಳೆ ನಾ ಮನಸೋತೆ ಎಂತುಂಟೊ ಹರಿಲೀಲೆ 2 ಊರ್ವಶಿ : ನಾಗವೇಣಿ ನೀ ಕೇಳೆ ನಾಗವೈರಿಯೊಳು ಸಾಗಿತು ಸೇವೆಯೆಂಬುದು ಮನಸಿನೊಳು1 ವಾದವ ಮಾಡಿ ವಿನೋದದಿ ಹರಿಯ ಪಾದಸೇವೆಗೆ ಮನನಾದ ಕೇಳಿದೆಯೊ2 ವೀರ ವೇಷವನಿದ ಕಂಡು ಶ್ರೀಹರಿಯ ದೂರವಾದನೋ ಎಂದು ಮನದೊಳು ನಿಜವು3 ಭೂರಿಭೂಷಣ ಸುಂದರ ರೂಪವಾಂತ4 ಇಂದಿನ ಸೇವೆಯೆನ್ನಿಂದತಿ ದಯದಿ ಮಂದರಧರಿಸಿಕೊಳ್ವುದು ಎಂದು ಭರದಿ5 ಒಯ್ಯನೆ ಪೇಳುತ್ತ ವಯ್ಯಾರದಿಂದ ಕೈಯನು ನೀಡಿ ಸಾನಂದದಿ ಬಂದ6 ಕಂತುಪಿತನು ಹನುಮಂತ ಮಾನಸಕೆ ಸಂತಸ ತಾಳಿ ಆನಂತನು ದಿಟಕೆ7 ಭೂರಿ ವೈಭವದಿ ಸ್ವಾರಿಯು ಪೊರಟ ಸಾಕಾರವ ಮುದದಿ8 ತೋರಿಸಿ ಭಕ್ತರ ಘೋರ ದುರಿತವ ಸೂರೆಗೊಳ್ಳುವನು ವಿಚಾರಿಸಿ ನಿಜವ9 ಹದನವಿದೀಗೆಲೆ ಬಿದಿಗೆಯ ದಿನದಿ ಮದನಜನಕನು ಮೈದೋರುವ ಮುದದಿ10 ಪ್ರತಿದಿನದಂತೆ ಶ್ರೀಪತಿ ದಯದಿಂದ ಅತಿಶಯ ಮಂಟಪದೊಳು ನಲವಿಂದ11 ಎಂತು ನಾ ವರ್ಣಿಪೆ ಕಂತುಜನಕನ ಅಂತ್ಯರಹಿತ ಗುಣಾನಂಮಹಿಮನ12 ಏಕಾಂತದಿ ಲೋಕೈಕನಾಯಕನು ಶ್ರೀಕರವಾಗಿ ನಿಂದನು ನಿತ್ಯಸುಖನು13 * * * ರಂಭೆ : ಇವನತಿಜಾಣನಮ್ಮಾ ಇವನ್ಯಾರಮ್ಮಾಪ. ಇವನತಿಜಾಣ ಲಕ್ಷ್ಮೀಧವನಿಗಿಂತಲು ಮುಂದೆ ತವಕದಿ ಬರುವತ್ತಿತ್ತವರನ್ನು ನೋಡದೆ 1 ಅಂದಣವೇರಿ ಮತ್ತೊಂದ ತಾ ನೋಡದೆ ಒಂದೇ ಮನದಿ ಬೇಗ ಮುಂದೆ ಬರುವನಮ್ಮಾ2 ಬಾಲಬ್ರಹ್ಮಚಾರಿ ಶಿಲೆಯಂತಿರುವನು ಅಲೋಚಿಸಲಿವ ಮೂಲಪುರುಷನಮ್ಮಾ3 ಪುಟ್ಟನಾದರು ಜಗಜಟ್ಟಿಯಂತಿರುವನು ದಿಟ್ಟನಿವನವನ ಮುಟ್ಟಿ ನೋಡಮ್ಮ 4 ಊರ್ವಶಿ : ನಾರೀ ಇವನೀಗ ಹೊಂತಕಾರಿ ಲೋಕಕ್ಕಾಧಾರಿ ಪ. ಕೊಬ್ಬಿದ ದೈತ್ಯರಿಗೀತನೆ ಕಾಲ ಹಬ್ಬುವದಾತ್ಮಕ್ಕೀತನೆ ಮೂಲ ಉಬ್ಬುವ ಹರಿಯೆಂದರೆ ಮೈಯೆಲ್ಲ ಒಬ್ಬನಿಗಾದರೂ ಬಗ್ಗುವನಲ್ಲ1 ಎಲ್ಲಿರುವನು ಹರಿ ಅಲ್ಲಿಹನೀತ ಬಲ್ಲಿದ ನಾರಾಯಣಗಿವ ದೂತ ಖುಲ್ಲರ ಮನಕತಿ ಝಲ್ಲೆನುವಾತ ಸುಲ್ಲಭನೆಯಿವ ಮುಂದಿನ ಧಾತ2 ಭೇದವಿಲ್ಲೆಂಬುದವರಿಗೆಯಿವ ತುಂಟ ಮೇದಿನಿ ಬಾಧಕರಿಗೆ ಯಿವ ಕಂಟ ಆದಿ ಮೂರುತಿ ಕೇಶವನಿಗೆ ಬಂಟ ಮಾಧವಭಕ್ತರಿಗೀತನೆ ನೆಂಟ 3 ದುರಿತಾರಣ್ಯದಹನ ನಿರ್ಲೇಪ ವರ ವೆಂಕಟಪತಿಯಿದಿರೊಳಗಿಪ್ಪ ಪರಮಾತ್ಮನ ಪರತತ್ತ್ವ ಸ್ವರೂಪ ಮರೆಮಾತೇನಿವ ದೊರೆ ಹನುಮಪ್ಪ4
--------------
ತುಪಾಕಿ ವೆಂಕಟರಮಣಾಚಾರ್ಯ
ಬಿಂದುಮಾಧವ ಮಾಡÀದಿರೆನಗೆ ತಂದೆ ಭೇದವಕಂದುಗೊರಳಾಧೀಶ ಕಾಶಿಯ ಪುರವಾಸಕಂದನ್ನ ತಡೆಯದೆ ಕಾಯನುದ್ಧರಿಸೊ ಪ. ಮೋಕ್ಷದಾಯಕ ರಕ್ಷಿಸೊ ಎನ್ನ ಲಕ್ಷ್ಮೀನಾಯಕಕುಕ್ಷಿಯೀರೇಳು ಭುವನವ ತಾಳ್ವನಭಿಕ್ಷಾಪಾತ್ರ ಶಿವನ ಧ್ಯಾನದೊಳಿರಿಸೊ 1 ಪಾಪನಾಶನ ಪಾಲಿಸೊ ಎನ್ನಸಪರ್Àಭೂಷಣ ತಾತನೆಂದೆನಿಸಿ ತವ-ನಾಮಸ್ಮರಣೆಯ ಪಾರ್ವತೀಪತಿ ಯತಿ ಧ್ಯಾನದೊಳಿರಿಸೊ 2 ಆದಿಮೂರುತಿ ವಿಶ್ವೇಶ ವಿಷ್ಣು-ಪಾದವೆ ಗತಿ ವೀರನೆಂದೆನಿಸುವಸೋದೆಯ ಪುರವಾಸ ವಾದಿರಾಜವರದವಂದೇ ಹಯವದನ 3
--------------
ವಾದಿರಾಜ
ಬೆದರದಿರು ಚಿನ್ನಾ ನೀ ಬೆದರದಿರು ಪ ಮ್ಮುದವನಿತ್ತು ವಿಪದವ ಕಳೆವನು ಅ.ಪ ಆದಿಯಲಿ ಬೆದರಿಸಿ ಮನದ ಹದುಳವ ನೋಡುವ ಪದವಿ ಪೊಗಿಪÀ ಸಂಪದವೀಯನಿವನು 1 ಒಂದೆ ಮನದಿ ಗೋವಿಂದನ ಪದ ನಂಬು ಹಿಂದಾಗುವುದು ಚಿಂತೆ ಮುಂದುಳಿಯದು 2 ಇಂದಿರೆ ಅರಸ ವಿಜಯ ರಾಮ- ಚಂದ್ರವಿಠಲ ನಿನ್ನ ಬೆನ್ಹಿಂದೆ ಇರುವನು 3
--------------
ವಿಜಯ ರಾಮಚಂದ್ರವಿಠಲ