ಒಟ್ಟು 4883 ಕಡೆಗಳಲ್ಲಿ , 127 ದಾಸರು , 3275 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನೆನ್ನುತ್ಹಳಿಯಲಿ ನಿನ್ನ | ನಾನಾವಿಧದಿ ಬೆಳಗುವ ಮಹಮಹಿಮನ ಪ ಸಾಗರ ನಿಲಯನೆಂದೆನಲೇ ನೀಗದ್ವೊಯ್ಕುಂಠ ಮೇಲು ಮಂದಿರನ ರಾಗದಿಂ ದ್ವಾರಕೆ ಪುರಮನೆಯವನೆನಲೇ ಯೋಗದಿಂದಣುರೇಣುತೃಣದಿ ವ್ಯಾಪಕನ 1 ಪನ್ನಂಗ ಹಾಸಿಗೆ ಮಾಡಿಹ್ಯನೆನಲೇ ಉನ್ನತ್ಹಾಸಿಗೆಯ ಮೇಲೆ ಮಲಗಿಕೊಳ್ವವನ ಭಿನ್ನವಿಲ್ಲದೆ ದರ್ಭೆಶಾಯಿಯೆಂದೆನಲೇನು ಚಿನ್ನಮಂಚದ ಮೇಲೆ ಲೋಲ್ಯಾಡುವವನ 2 ಹೊಟ್ಟಿಗ್ಹುಲ್ಲ ತಿಂದವನೆನಲೇ ಶಿಷ್ಟ ದಿವಿಜರಿಟ್ಟ ಮೃಷ್ಟಾನ್ನುಣ್ವವನ ಕೊಟ್ಟ ಹಣ್ಣಿನ ತೋಟ ಹಸಿದು ತಿಂದವನೆನೆ ಸೃಷ್ಟಿ ಈರೇಳಕ್ಕೆ ಅನ್ನ ಕೊಡುವವನ 3 ಅಸುಬಿಟ್ಟ ದಿಕ್ಕಿಲ್ಲದನೆನಲೇ ಅಸಮಲಬಲವುಳ್ಳಂಥ ಯಾದವಾರ್ಯನ ಕುಸುಮನಾಭಂಗೆ ಸಂಸಾರಿಯೆಂದೆನಲೇನು ಎಸೆವ ಪರವಸ್ತು ನಿರ್ಬಯಲು ನಿರ್ಮಯನ 4 ಅಳವಲ್ಲ ಎನಗೆ ನಿನ್ನ ವೊಲಿರೆ ದಿವ್ಯ ಮಹಿಮೆ ತಿಳಿಯುವ ತ್ರಾಣ ಒಲಿದು ಚರಣದಾಸರಾಳಾಗಾಳುವೆನೆಂದು ಇಳೆಯೊಳು ಸಾರುವೆ ನಳಿನಾಕ್ಷ ಶ್ರೀರಾಮ 5
--------------
ರಾಮದಾಸರು
ಏನೆಂಬೆನು ಪವಮಾನ ದೇವನಲಿ ಶ್ರೀನಿವಾಸ ಕರುಣಾ ತಾನಾಗೀತನಕಡೆಯಲಿ ಬಹ ಲಕ್ಷ್ಮೀಮಾನ, ದೀನ ಶರಣಾ ಪ. ದುರುಳ ದಶಾಸ್ಯನ ಸೆರೆಯೊಳಗಿಕ್ಕಿದ ಸುರವರನಣುಗನನೂ ನೆರೆಯದೆ ಮಾರುತಿ ಇರುವ ನಿಮಿತ್ತದಿ ಕರಿಸಿದ ರವಿಜನನು ತಿರುಗಿ ದ್ವಾಪರದಿ ಬರಲಾರ ರವಿಜನ ನರನಿಂದೊರಸಿದನು ಎರಡು ಯುಗದೊಳೀ ತೆರದಲಿ ಭಾರತಿ ವರನನು ಸೇರಿದನು 1 ಶ್ರೀಕರ ಜೀವರಿಗೇಕೀ ಭಾವವ ಪೋಕ ಮೃಗಗಳಂದೂ ಕಾಕರಟನದಂತೊರೆವದನರಿತು ದಿ- ವೌಕಸಗಣಬಂದು ಶ್ರೀಕಮಲಾಸನ ವಂದ್ಯನೆ ಸಲಹೆನೆ ಸಾಕುವ ತಾನೆಂದೂ ಈ ಕಲ್ಯಾಣ ಗುಣಾಢ್ಯನ ಭೂಮಿಗೆ ತಾ ಕಳುಹಿದನಂದು 2 ಅದರಿಂ ತರುವಾಯದಲಿ ಸುಖಾಂಭುದಿ ಒದಗಿದ ತ್ವರೆಯಿಂದ ಪದುಮನಾಭ ಮೂರುತಿಯ ಕೆಲದಿ ನಿಂ- ದದುಭುತ ಭರದಿಂದಾ ವಿಧಿಭವ ಲೋಕಾದ್ಯಧಿಕೃತ ಪುಣ್ಯಾ ಸ್ಪದ ತೋರುವೆನೆಂದಾ ವಿಧಿ ಪದ ಯೋಗ್ಯನ ಚದುರತನಕೆ ಮೆಚ್ಚಿ ಪೂರ್ಣಾನಂದ 3 ವರ ವೈಕುಂಠವ ರಜತ ಪೀಠ ಸ- ತ್ಪುರದೊಳಗಿರಿಸಿಹನು ವಿರಜೆಯ ಮುನಿಕಡತ ಸರಸಿಗೆ ಕರೆಸಿದ ಮುರದಾನವಹರನು ಚರಣಾಂಬುಜಕಿಂಕರವರ ಚಂದ್ರೇ- ಶ್ವರನಲಿ ಕರುಣವನು ಇರಿಸಿ ಭಜಿಪ ಸುರತರುವೆನಿಸಿದ ಶ್ರೀ- ವರನ ಮಹಾತ್ಮೆಯನು 4 ಜ್ಞಾನಾನಂದಾಂಬುಧಿ ಶೇಷಾದ್ರಿಯ ಶ್ರೀನಿವಾಸನಿವನು ತಾನಾಗಿಲ್ಲಿಗೆ ಬಂದಿಹ ಭಕ್ತಾ- ಧೀನ ದಯಾಕರನು ಮಾನಸಗತ ಮಾಲಿನ್ಯವ ಕಳೆದನು ಮಾನವ ಬಿಡಿಸುವನು ನಾನಾಭೀಷ್ಟವ ನಿರವಧಿ ಕೊಡುತಿಹ ಮೌನಿ ಜನಾರ್ಚಿತನು 5
--------------
ತುಪಾಕಿ ವೆಂಕಟರಮಣಾಚಾರ್ಯ
ಏನೇನು ಬೇಕಯ್ಯ ಶ್ರೀ ಹರಿಯೆ ನಿನಗೇ ನೀನೆ ಗತಿಯೆಂದು ಸರ್ವಸ್ವವೊಪ್ಪಿಸುವೇ ಪ ತರಳನಾಗಿಹ ಧೃವನು ಘೋರ ತಪವಂಗೈಯ ಹರುಷದಿಂ ಬಾಲಕಗೆ ವರ ಪದವಿಯಿತ್ತೇ ಕರುಣಾಳು ಶ್ರೀ ಹರಿಯೇ ನಿಂನ ಮೆಚ್ಚಿಸಲಿಕ್ಕೆ ಉರುತರದ ತಪವು ಬೇಕೇನೊ ನಾನರಿಯೇ 1 ದೊರೆಯು ರುಕುಮುಂಗದನು ಯೇಕಾದಶೀವ್ರತವ ಸರಸದಿಂದಾಚರಿಸೆ ನಿಜಭಕ್ತಗೊಲಿದೇ ಕರುಣಾಳು ಶ್ರೀಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ವ್ರತವು ಬೇಕೇನೊ ನಾನರಿಯೇ 2 ತರಳ ಪ್ರಲ್ಹಾದ ತಾ ಹರಿನಾಮ ಕೀರ್ತಿಸಲು ದುರುಳ ತಾತನ ಕೊಂದು ಕಂದನನು ಪೊರೆದೆ ಕರುಣಾಳು ಶ್ರೀ ಹರಿಯೆ ನಿಂನÀ ಮೆಚ್ಚಿಸಲಿಕ್ಕೆ ಉರುತರದ ಕೀರ್ತನೆಯು ಬೇಕೋ ನಾ ನಾನರಿಯೇ 3 ಭರದಿ ದುಶ್ಯಾಸನನು ಮಾನವಂ ಕಳಯುತಿರೆ ಸರಳೆಗೇ ನೀನೊಲಿದು ಅಕ್ಷಯವನಿತ್ತೇ ಕರುಣಾಳು ಶ್ರೀಹರಿಯೆ ನಿನ್ನ ಮೆಚ್ಚಿಸಲಿಕ್ಕೆ ಉರುತರದ ಸ್ತೋತ್ರಗಳು ಬೇಕೋ ನಾನರಿಯೇ4 ಧರಣಿಸುತೆ ಜಾನ್ಹಕಿಯೆ ಹುಡುಕಲ್ಕಿ ವಿಕ್ರಮದಿ ಶರಧಿಯನು ದಾಟಿದಗೆ ಭರದಿಂದಲೊಲಿದೇ ಕರುಣಾಳು ಶ್ರೀಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ದಾಸ್ಯತ್ವ ಬೇಕೋ ನಾನರಿಯೇ 5 ನಿರುತದಾಸರು ನಿನ್ನ ಸೇವೆಯನು ಮಾಡಲ್ಕೆ ಕರುಣದಿಂ ದಾಸರಿಗೆ ಪ್ರತ್ಯಕ್ಷನಾದೇ ಕರುಣಾಳು ಶ್ರೀ ಹರಿಯ ನಿನ್ನ ಮೆಚ್ಚಿಸಲಿಕ್ಕೆ ಉರುತರದ ಸೇವೆ ಬೇಕೇನೊ ನಾನರಿಯೇ 6 ವರ ದುರ್ವಾಪುರದಲ್ಲಿನಿತ್ತು ಮೆರೆಯುವಿಯೆಂದು ಸಿರಿ ಚನ್ನಕೇಶವನೆ ಪರಮಾತ್ಮನಂದೂ ಕರುಣಾಳು ಶ್ರೀ ಹರಿಯೆ ನಿನ್ನ ನಂಬುತಲಿಂದು ಮರೆಹೊಕ್ಕೆ ಕಾಯೋ ಶ್ರೀ ಈಶ ಸರ್ವೇಶಾ 7
--------------
ಕರ್ಕಿ ಕೇಶವದಾಸ
ಏನೊ ಜೀವ ನನ್ನ ನುಡಿವ ನಾಲಗೆಯು ನಿನ್ನದೇನೊ ಕಾಣೆ ನಿನ್ನಾ ಬಣ್ಣವನೆನ್ನಾಣೆ ಕೇಳು ಪೇಳುವೆನೂ ಪಭೂತಂಗಳು ಪುಸಿಯೇನೊ ಮಾತೆ ಮಾಯೆಯಲ್ಲವೇನೊಏತಕೀಗರ್ವವು ನೀನು ಜಾತನಾದ ಬಗೆಯೇನೊಕೈತವವ ಬಿಡುುನ್ನೂ ಹೇತು ಹೀನೋಕ್ತಿಗಳೇನುನೀತಿಯಾಗಿ ಪೇಳು ನಾನು ತಾತಪ್ಯಮಾನನಪ್ಪೆನೂ 1ಬಿಸಿಲು ದೊರೆದೇರನೆ ನಾನು ಮಸಿಯಮಾತ ನುಡಿವೆ ನೀನುನಶಿದು ಪೋಪೆನಹುದು ನಾನು ಹಸದೊಳಿಪ್ಪುದುಂಟೆ ನೀನುಸಸಿನೆ ತಿಳಿದುಸುರಿನ್ನು ಕುಸಿಯ ಹಾಕದಿರೆನಿನ್ನೂನುಸುಳುದಾರಿ ಮನವನ್ನು ಹೊಸದು ಕೊಂಡಾಡಿದರೇನು 2ನೋಡುವ ಕಣ್ಣು ನಿನ್ನದೇನೊ ಆಡುವಾಟನಿನ್ನದೇನೊಓಡುವ ಕಾಲು ನಿನ್ನದೇನೊ ನೀಡುವ ಕೈ ನಿನ್ನದೇನೊಬೀಡ ಬಿಡುವರೆ ನೀನು ಗೂಡಾಗಿುದ್ದೆ ನಾನುಕೂಡಲಿಂದ್ರಿಯ ಕರಣ ತಾನು ಕಾಡುಪಾಲಾಗುವೆನೀನು 3ಎದ್ದು ನಡೆದಾಡುವೆ ನಾನು ನಿದ್ರೆಗೈವೆ ಮಲಗಿ ನಾನುಹೊದ್ದುಕೊಂಬೆ ಹೊದಿಕೆಗಳನು ಗದ್ದುಗೆಗಧಿಕಾರಿ ನಾನುಸಿದ್ದಿಯೆನ್ನಿಂದಲೆ ತಾನು ನಿರ್ಧರಿಪುದಿದ ನೀನುಬುದ್ದಿಹೀನನಾಗದಿರಿನ್ನು ಬದ್ಧವಾಡು ಕೇಳ್ವೆ ನಾನು 4ತಿರುಪತೀಶನಂಘ್ರಿ ನಾನು ಬರಿಯ ಪ್ರತಿಬಿಂಬ ನೀನುಗುರುವಾಸುದೇವಾರ್ಯರನ್ನು ಎರಗಿ ಸಂಪಾದಿಸಿದೆ ನಾನುಕರೆದು ಬಿಗಿದಪ್ಪಿದರೆನ್ನುವನು ಒರೆಯೆ ಕಿವಿಯೊಳ್ಮಂತ್ರವನ್ನುಭರದಲೆನ್ನ ಜಿಹ್ವೆ ಜಪಿಸಿ ಅಂತೆನೆಂಬೆ ನಿನ್ನ ನೀನು 5ಕಂ||ಒರಟುತ್ತರದಿಂದ ದೇಹವು ಬರಿ ಜಗಳವ ತೆಗೆಯೆ ಜೀವನರಿತಿದರಂದವ ನೆರೆಮೂರ್ಖರ ದಾರಿಯೊಳಗೆಬರುತರುಪುವ ಜಾಣನೆಂದು ನೀತಿಯ ನುಡಿದಂ
--------------
ತಿಮ್ಮಪ್ಪದಾಸರು
ಏಸು ರೂಪಾಯ್ಗೆ ಕೊಂಡು ಕೊಂಡೆವ್ವಾ ಒಸರುವ ಗಡಿಗೆ ಪ ಏಸುರೂಪಾಯ್ಗೆ ಕೊಂಡುಕೊಂಡೆವ್ವಾ ಏಸುರಾಪಾಯ್ಗೆ ಕೊಂಡುಕೊಂಡಿ ಹೇಸಿಕೊಳ್ಳದೆ ಇದನು ನೀನು ಬೇಸರಿಲ್ಲದೆ ತೊಳೆಯುತಿದ್ದಿ ವಾಸನಿಕ್ಕಿ ನಾರುತಿದೆ ಅ.ಪ ಎಂಥ ಕುಂಬಾರಿದನು ಮಾಡಿದ ಎಷ್ಟುಕಾಲದಿ ಕುಂತು ಇದಕೆ ಶೋಧ ಹುಡುಕಿದ ಅವನು ದಾವ ಸಂತೆಯೊಳಗೆ ಕುಂತು ಮಾರಿದ ಕೊಂಡೇನುತಿಳಿದ ತಂತು ತಿಳಿಯದೆ ಹೊತ್ತುಕೊಂಡು ನಿಂತಿಯಿದರ ಖ್ಯಾಲಿನೊಳಗೆ ಸಂತೆ ತೀರಿಹೋಗಲಾಗೇನಂತ ಹೇಳುವಿ ಕೇಳುವವರಿಗೆ 1 ಕಷ್ಟದ್ಹೊತ್ತು ಕುದಿಯುತಿದ್ದ್ಯಲ್ಲ ಹುಚ್ಚು ಎಷ್ಟುದುಡಿದು ತುಂಬುತಿದ್ದ್ಯಲ್ಲ ನಿಲ್ಲದಿನಿತು ಅಷ್ಟು ಒಸರಿ ಬಸಿಯುತಾದಲ್ಲ ಖೂನ ನಿನಗಿಲ್ಲ ನಟ್ಟನಡುವೆ ಗಂಟುಬಿದ್ದು ಕೊಟ್ಟು ನಿನಗೆ ಕಷ್ಟ ವಿಧ ವಿಧ ಕಟ್ಟ ಕಡೆಗೆ ಕೈಯ ಬಿಟ್ಟು ಕೆಟ್ಟು ಮಣ್ಣು ಕೂಡುತಾದೆ 2 ಮಸಣಿಬುದ್ಧಿ ನೀಗಿ ಕೇಳಮ್ಮ ನಿಜವನಿರುತ ಕುಶಲರ್ಹೇಳುವ ಮಾತು ತಿಳಿಯಮ್ಮ ಮುಂದೆ ಮಹಕಾಲ ನಿಶೆಯು ಒದಗುತದೆ ತಂಗೆಮ್ಮ ಪುಸಿಯಲ್ಲವಮ್ಮ ಮಸಿಯ ಗಡಿಗ್ಹಿಡಿದು ಹಸನಮಾಡಿ ವಸುಧೆಗಧಿಕ ಶ್ರೀರಾಮಪಾದ ಕುಸುಮಕರ್ಪಿಸಿ ಧನ್ಯಳಾಗಿ ಅಸಮಮೋಕ್ಷಪದವಿ ಪಡೆಯೆ 3
--------------
ರಾಮದಾಸರು
ಏಳು ನಾರಾಯಣ ಏಳು ಲಕ್ಷ್ಮೀರಮಣಏಳು ಬೆಳಗಾಯ್ತರುಣ ಬೀರುತಿದೆ ಕಿರಣ ಪ ರಂಗ ಬರುತಿಹನೆಂದು ಮಂಗಳಾಂಗಿಯರೆಲ್ಲಅಂಗಳ ಸಾರಿಸಿಸುತೆ ಮಂಗಳವ ಪಾಡುತ್ತೆರಂಗೋಲಿಯೊಳು ನಿನ್ನ ಚಿತ್ರವನು ರೇಖಿಸುತೆಶೃಂಗರಿಸುತಿಹರು ನೋಡೆದ್ದು ಬಾರೋ 1 ಹಿಂಡಿ ನೊರೆ ಹಾಲ್ಗಳನು ಗಿಂಡಿಯೊಳು ತಂದಿಟ್ಟುಕೊಂಡು ವದನವ ತೊಳೆಯ ಬಿಸಿ ನೀರು ತಂದಿಟ್ಟುತಂಡತಂಡದಿ ಭಕುತ ಮಂಡಲಿಯು ಕಾದಿಹುದು ಹೆಂಡತಿಯನೊಡಗೂಡಿಯುಂಡು ತಣಿಯು ಬಾರೋ2 ವೆಳ್ಳೆ ತುಂಬಿಗಳಾಡೆ ಮಂಗಳಾರತಿ ಮಾಡಿಬೆಳ್ಳಿ ಕಳಶಗಳೆನಲು ಅಮೃತವನು ತುಂಬಿಬೆಳ್ಳನೆಯ ಹೂಗಳನು ಮಡಿ ತಳಿಗೆಯೊಳು ಹಿಡಿದುಬಳ್ಳಿ ಮಲ್ಲಿಗೆ ತಾವು ಆತುರದಿ ನಿಂತಿಹವು 3 ಚಿಕ್ಕೆಗಳು ಬಾಡುತಿವೆ ಚೊಕ್ಕೆಲರು ತೀಡುತಿದೆಮಕ್ಕಳಾಡುಲೆವೆ ಕಕ್ಕುಲತೆಯೊಲಿ ನಮ್ಮ ರಕ್ಷಿಸಲು ನೀನೇಳು 4 ಕರ ಮಕದು ಭಕುತಿಯಿಂದಲಿ ಬೇಡುವರುಪಾವು ಮಂಚವ ಬಿಟ್ಟು ಬೇಗೆದ್ದು ಬಾರೋ 5 ಕಂಜದೆಲೆಯಲಿ ಬಿದ್ದ ಮಂಜುವನಿಗಳ ಮೇಲೆಕೆಂಜೆಡೆಯನಾಂಶುಗಳು ರಂಜಿಸಲು ದೀಪದೊಳುಕಂಜನಾಭ ನಿರಾಂಜನವ ಬೆಳಗಲಿಕೆಮುಂಜಾಮದಲೆ ಕಾಯುತಿಹಳೊ 6 ಶಿರಬಾಗಿ ನಿನ್ನ ಚರಣಗಳಿಗೆ ಬಂದಿದೆ ಶರಣನಿರುತ ಧನವಾರೋಗ್ಯವಿತ್ತು ದುರಿತಾಪಹರಣಪರಿಕಿಸದೆ ರಕ್ಷಿಸಲು ಬಾರೋ ಕರುಣಾಭರಣವರ ಗದುಗಿನಲಿ ಮೆರೆವ ವೀರನಾರಾಯಣ 7
--------------
ವೀರನಾರಾಯಣ
ಏಳು ಶ್ರೀನಿವಾಸ ಏಳು ಲಕ್ಷ್ಮೀರಮಣ ಏಳು ಬೆಟ್ಟದೊಡೆಯ ಏಳು ಭಕ್ತರ ಪ್ರೀಯ ಏಳಯ್ಯ ಬೆಳಗಾಯಿತು ಹರಿಯೇ ಪ. ಆದಿಶೇಷನ ಮೇಲೆ ಅಪ್ರಮೇಯನು ನೀನು ಆದರದಿ ಮಹಲಕ್ಷ್ಮಿಯೊಡನಿರಲೂ ಸುರರು ಸನಕ ಸನಂದನರು ಆದರಿಸೆ ಬಾ ಬೇಗ ಬಾಗಿಲನು ತೆಗೆದು ಆದಿಮೂರುತಿ ನಿನ್ನ ಮುಖ ದರ್ಶನವ ಮಾಡಿ ಮೋದ ಪಡುತಲೆ ಭಕ್ತ ಕೋಟಿ ಸ್ತುತಿ ಮಾಡಲು ಮಾಧವನೆ ಹಾಸು ಮಂಚವನಿಳಿದು ಬಾ ಕತ್ತಲೆ ಹರಿಪಾ ದಿವಾಕರನ ತೆರದಿ ಹರಿಯೇ ಏಳಯ್ಯ ಬೆಳಗಾಯಿತು 1 ಕಾಸಿದ್ಹಾಲನೆ ತಂದು ಕಾವಡಿಯಲಿ ತುಂಬಿ ಲೇಸಾಗಿ ನಿನ್ನ ಭಕ್ತರು ನಿಂತಿದಾರೆ ವಾಸುದೇವನೆ ನಿನಗೆ ಮಲ್ಲಿಗೆ ಕುಸುಮ ಭಾಸುರಾಂಗನೆ ತಂದು ಅರ್ಪಿಸಲು ಭಕ್ತರು ಏಸು ಹೊತ್ತಿನಿಂದ ತುಳಸೀ ದಳ ತಂದು ವಾಸುಕೀಶಯನಗೆಂದು ಭೂಸುರರು ನಿಂದಾರೆ ವೇದ ಘೋಷದಿಂದ ಈಸು ನುಡಿಗಳು ನಿನ್ನ ಕರ್ಣಕೇಳಲಿಲ್ಲವೆ ಏಸು ಮೆಚ್ಚಿಸಿಹಳೋ ಲಕ್ಷ್ಮೀ ನಿನ್ನ ಸರಸದೊಳು ವಾಸುಕೀಶಯನ ಹಾಸಿಗೆಯಿಂದೇಳೋ ದೊರೆಯೆ ಏಳಯ್ಯ ಬೆಳಗಾಯಿತು2 ಕರುಣಾಸಾಗರ ನಿನಗೆ ಕರುಣೆ ಬರುವಾತೆರ ಪರಿಪರಿಯ ಸ್ತೋತ್ರದೊಳು ನಾರಿಯೇರು ಕರೆವರೋ ಕರಗತ ಕಾಮಧೇನು ನೀನೆಂದು ಕರದೊಳಾರತಿಯ ಪಿಡಿದೂ ತರತರದ ಉಡಿಗೆ ತೊಡಿಗೆ ನಿನಗೀಯಲು ಸರಸರನೆ ದೇಶದೇಶದಿ ಬಂದು ನಿಂತಿದ್ದಾರೆ ಶರಧಿ ಗಂಭೀರನೆ ವರ ಶ್ರೀ ಶ್ರೀನಿವಾಸನೆ ಕರುಣೆ ತೋರುತ್ತ ನಿನ್ನ ಭಕ್ತರ ಮೇಲೆ ವರ ನಾರಿಯರ ನಾಟ್ಯ ವೈಭವದಿ ವರದುಂದುಭಿ ವಾದ್ಯದಲಿ ವರ ತಾಳ ಮೇಳದಿಂ ವರ ಶೇಷಾದ್ರಿವಾಸ ವೆಂಕಟೇಶನೆ ಏಳಯ್ಯ ಬೆಳಗಾಯಿತು 3
--------------
ಸರಸ್ವತಿ ಬಾಯಿ
ಏಳುತಲಿ ಎದ್ದು ಎಚ್ಚರಿಸುತ ನೀ ನೆನೆಯೊ | ಪಾಲಿಸುವ ಮೂಲೋಕ ಪರಮಾತ್ಮನಾ ಪ ಮೂರೊಂದು ಪದರದ ಚೀಲದೊಳು ಥಳಥಳಸಿ ದೋರುತಿಹ ರತ್ನ ಪರಿಚಿದ್ರೂಪನಾ | ಅರಿಗಳ ವಡೆದ ಘನ ತ್ರಿವೇಣಿ ತೀರದಲಿಹ | ಧೀರಯೋಗಿಯ ಕಂಗಳಾನಂದನ 1 ಬೇರು ಮೇಲಾಗಿ ಕೊಂಬುಗಳು ಕೆಳಗಾದ ಸಂ | ಸಾರ ವೃಕ್ಷವ ತ್ರಿಗುಣಮಯದಿಂದಲಿ || ವಾರಿಜಭವಾಂಡ ಪಿಂಡಾಂಡಗಳ ಪರಿಪರಿಯ | ತೋರಿ ತೋರದಲಿಪ್ಪ ನಿರ್ಲಿಪ್ತನಾ2 ನೋಡಿಸುವ ಕೇಳಿಸುವ ವಾಸಿಸುವ ಪರಿಮಳವ | ಆಡಿಸುವ ಕರಚರಣ ನುಡಿನುಡಿಸುವ | ರೂಢಿಯೊಳು ಸೂತ್ರಧಾರಕನಾಗಿ ಅಷ್ಟದಳದ | ಲಾಡುತಿಹ ಮಹೀಪತಿ ಸುತಪ್ರಭು ಭಕುತಿಯಲಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏಳೈಯ್ಯಾ ಆತ್ಮರಾಮಾ | ಯತಿ ಮುನಿಜನ ಪ್ರೇಮಾ | ಏಳೆಯ್ಯ ಘನಶಾಮಾ | ಎನ್ನಪಾಲಿಸೈ ಗುಣಧಾಮಾ ಪ ಬೋಧ ಸುರ್ಯನು ಬರಲಿ | ಮರವಿನ ಕತ್ತಲೆ ತೆರಳಿ | ಬೆಳಗಾಯಿತು ಮನದಲ್ಲಿ 1 ವಾದತಾರೆಗಳಡಗಿ | ವಿಕಸಿತ ಹೃತ್ಕಮಲಾಗಿ | ಸಾಧನ ಪಕ್ಷಿಗಳೊದಗಿ | ಕಲಕಲಿಸುತಿವೇ ಬಹುವಾಗಿ 2 ವಿವೇಕಾದ ಭರತಾ || ವೈರಾಗ್ಯ ಶತೃಘ್ನ ತಾ | ಸಾವಧ ಲಕ್ಷ್ಮಣ ನಿರುತಾ ಪದಸೇವೆಗೆ ನಿಂತರು ತ್ವರಿತಾ 3 ಶಮದಮವೇ ನಿಸ್ಸೀಮಾ | ವಿಭೀಷಣ ಸುಗ್ರೀವ ನೇಮಾ | ಜಾಂಬವ ಹನುಮಾ4 ಶಾಂತಿ ಸೀತೆಯು ವಲಿದು ನಿಂತಿಹಳೈ ಕೈಮುಗಿದು | ಚಿಂತಿತಾರ್ಥವನೇ ಕೊಡು | ಮಹಿಪತಿ ಸುತಗೊಲಿದು 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಐಸಿರಿಯನೇನೆಂದು ಪಾಡಲಿ ಶ್ರೀಹರಿಯ ಮೈಸಿರಿಯ ಪಾದಾದಿ ಕೇಶ ಪರ್ಯಂತ ಪ ಸಿರಿಯ ಕರಾಬ್ಜ ಪರಾಗದಿಂ ರಂಜಿಪ ಸರಸಿಜ ಕುಂಕುಮರಜ ರಮ್ಯವೆಂದೆನಿಪ ನಿರುತ ಯೋಗೀಂದ್ರ ಹೃತ್ಕಮಲವನರಳಿಪ ತರುಣಾತಪದ ಕಾಂತಿಯೆನೆ ಕಂಗೊಳಿಪ ವರಶ್ರುತಿ ಸೀಮಂತ ಸಿಂಧೂರವೆನೆ ತೋರ್ಪ ಫಣಿ ರತುನಾರತಿಯೆನಿಪ ಸುರುಚಿರ ಶೋಣ ಪ್ರವಾಳವ ಸೋಲಿಪ ಅರುಣಾಂಬುರುಹದಂದದಿ ಥಳಥಳಿಪ 1 ಚರಣತಳಂಗಳೊಪ್ಪುವ ತನಿ ಕೆಂಪಿನ ಶರಣ ಚಿಂತಾಮಣಿಯ ನಸುಗೆಂಪಿನ ಧರಣಿಯನೀರಡಿ ಮಾಡಿದ ಪೆಂಪಿನ ಕರುಣದಿ ಕಲ್ಲ ಪೆಣ್ಮಾಡಿದ ಸೊಂಪಿನ ಕರ ಶಂಖ ಪದ್ಮ ರೇಖಾಂಕಿತದಿಂಪಿನ ಕುರುನೃಪಗರ್ವ ನಿರ್ವಾಹಾಪಗುಂಪಿನ ಸುರಮಣೀಮಕುಟ ನಾಯಕದ ಸೊಂಪಿನ ಪರಮಪಾವನ ಪಾದದುಂಗುಟದಲಂಪಿನ 2 ಕಂಜಭವಾಂಡ ಸೋಂಕದ ಮುನ್ನ ಬೆಳಗುವ ಸಂಜನಿಸಿಹ ಗಂಗೆ ಮುದದಲ್ಲಿ ಮುಳುಗುವ ಭುಂಜಿಸಿತಮಸ ಜಗಂಗಳ ಬೆಳಗುವ ಮಂಜೀರ ಕಡಗ ಭಾಪುರಿಗಳಿಂ ಮೊಳಗುವ ಮಂಜುಳಾಂಗದಿ ನಖಪಂಕ್ತಿಗಳ್ ತೊಳಗುವ ರಂಜನೆಯಿಂ ಶ್ರೀಮದಂಘ್ರಿಗಳೆಸೆವ ವಂಚಿತ ಸೌಮ್ಯ ಜಂಘೆಗಳಿಂ ಸೊಗಯಿಸುವ ಕುಂಜರ ರುಚಿಯ ಪೂರ್ಣೇಂದು ರಂಜಿಸುವ 3 ಅಳವಟ್ಟ ಪೀತಾಂಬರದ ಸುಮಧ್ಯದ ಕಳಕಾಂಚಿದಾಮದುನ್ನತ ಕಟಿತಟದ ನಳಿನಾಲವೋದಿತ ನಾಭಿಪಂಕರುಹದ ಇಳೆಯ ಜನಂಗಳಿಗೆನಿಸುವ ವುದರದ ವಿಳಸದಲಂಕೃತ ಬಾಹು ಚತುಷ್ಟದ - ಮಳ ಶಂಕಚಕ್ರ ಸದಬ್ಜ ಸಂಭೃತದ ಪೊಳೆವ ಕೌಸ್ತುಭಮಣಿ ಶ್ರಿವತ್ಸೋದರದ ತುಳಸಿ ಮಂದಾರ ಮಾಲೆಗಳ ಕಂಧರದ 4 ಘನ ಸೌಭಗ ಗಂಡಮಂಡಲಯುಗ್ಮದ ಮಕರಕುಂಡಲ ಕರ್ಣಯುಗ್ಮದ ವನಜ ನೇತ್ರಂಗಳ ಕರುಣಾಕಟಾಕ್ಷದ ವಿನುತ ಮೌಕ್ತಿಕದಿಂದ ಮೆರೆವ ನಾಸಿಕದ ನಸು ಮೋಹನದಿ ಸಮನಿಪ ಚುಬುಕಾಗ್ರದ ತನಿರಸ ತುಳುಕುವ ಚೆಲುವಿನಧರದ (?)ಲಲಿತ ವದನದ ವರದಂತಪಂಙ್ತಯ ಇನಿಗೆದರುವೆಳನಗೆಯ ಸಿರಿಮೊಗದ 5 ಸಿಂಗಾಡಿಯಿಂ ಮಿರುಗುವ ಪುರ್ಬುಗಳ ಸ - ನಾಸಿಕ ಬೆಳ ದಿಂಗಳ ಪೊಂಗಿನ ಕಸ್ತೂರಿ ತಿಲಕ ರ ತ್ನಾಂಗದ ರಂಗಿನ ಮಕುಟ ಮಸ್ತಕದ ನೀ ಲಾಂಗದಳಾಂಗನೆಯರು ಸುರಪುರ ಮಧ್ಯ ನಿಖಿಳ ಜ ಗಂಗಳ ಹಿಂಗದೆ ಪೊರೆವ ಶ್ರೀ ಲಕ್ಷ್ಮೀಶ ಮಂಗಳೋತ್ತುಂಗ ಮೂರುತಿಗೆ ನಮೋ ನಮೋ 6
--------------
ಕವಿ ಲಕ್ಷ್ಮೀಶ
ಒಡಲೆರಡಂತೆ ಅಸುವೊಂದಂತೆ ನುಡಿಯಿದು ನಿಜವೇ ಪೇಳೇ ಗೋಪಮ್ಮ ಪ ನಡೆ ನುಡಿ ಭಾವಗಳೊಂದೇಯಂತೆ ಹುಡುಗನೇನೇ ಕೃಷ್ಣ ಪೇಳೇ ಗೋಪಮ್ಮ ಅ.ಪ ಸೋದರಿಯರು ಇದ ಹೇಳುವರಮ್ಮ ನಾದ ನರ್ತನ ದೇಹಕಾಂತಿಗಳಲ್ಲಿ ಭೇದವಿಲ್ಲೆಂಬರು ನಿಜವೇನಮ್ಮಾ 1 ಬಾಲೆಯು ತಾನೆ ಗೋಪಾಲನೆನುವಳಂತೆ ಬಾಲಕೃಷ್ಣನು ರಾಧೆ ತಾನೆಂಬನಂತೆ ಬಾಲನಾರಿದರಲ್ಲಿ ಬಾಲೆಯಾರಿವರಲ್ಲಿ ಮೂಲತತ್ವವ ನೀನೆ ಹೇಳೇ ಗೋಪಮ್ಮ 2 ಯುಗ ಯುಗದಲ್ಲಿ ತಾನವತರಿಸುವ ಕೃಷ್ಣ ಜಗದೀಶ್ವರನೆ ತಾದಿಟವಮ್ಮ [ಮಿಗೆ] ಭಾಗ್ಯವೆ ನಿನ್ನದಾಗಿಹುದಮ್ಮ 3 ನಿರುಪಮ ಭಕ್ತಿಯಮೂರ್ತಿಯು ರಾಧೆ ಮುರಳೀಧರನಲಿ ಒಂದಾಗಿಹಳು ಅರಿತುದ ಪೇಳ್ವೆನು ಮಾಂಗಿರಿರಂಗನ ಶರಣರಿಗೀತತ್ವ ಕರಗತವಮ್ಮಾ 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಒಂದಾನೊಂದು ದಿವಸದಲ್ಲಿ ಗುರುವ್ಯಾಸರಾಯರು | ಪ ಅಂದದಿಂದ ಪುರಂದರದಾಸರಿ | ಗಿಂದು ಭೋಜನಕ್ಕೆ ಬನ್ನಿರೆಂದು ಕರೆದರೂ ಅ.ಪ ಪೇಳಿತೆಂದು ದಾಸರು ಪೋಗಿ ತಾವು ನಿರ್ಮಲ ಸ್ನಾನ ಜಪಮಂತ್ರ ಹರಿಪೂಜೆಯನೆ ಮಾಡಿ || ಧಳಥಳಿಸುವ ವಿಠಲನ ದಿವ್ಯ ಪಾದ ಗಳ ಧ್ಯಾನಿಸಿ ಕುಳಿತರು ಜನಗಳೆಲ್ಲ ಕೇಳಿ 1 ವಿಠಲನ ದಿವ್ಯ ಮೂರ್ತಿಯ ಪಾಡಿ ದೃಷ್ಟಿಯಿಂದಲಿ ನೋಡಿ | ಮುಟ್ಟಿ ಮುಂದೊಲಿದು ಕುಣಿಕುಣಿದಾಡಿ || ಥಟ್ಟನೆ ವೇದಕ್ಕೆ ಸಮನಾದ ಪದಗಳು | ನಿಷ್ಠೆಯಿಂದ್ಹೇಳಿ ಅಭೀಷ್ಟವ ಪಡೆದರು2 ಎಡೆಯೊಳು ಷಡ್ರಸದನ್ನವ ನೀಡೆ | ಕಡು ಮಮತೆಗಳಿಂದ | ಬಿಡದೆ ದಾಸರ ದಾರಿಯ ನೋಡಿ || ಯೆಡ ಬಲದಷ್ಟ ದಿವ್ಯದಿಂಡೆಯರೆಲ್ಲಾ | ಕಡೆಯದೆಶೆ ಧರಿಸಿದರು ದಾಸರಾ 3 ಹಗಲು ಒಂಭತ್ತು ತಾಸಾಗಿರಲು | ಆಗೆದ್ದು ಬೇಗ ಗುರುಗಳ ಸಮೀಪಕ್ಕೆ ಬರಲು || ಮುಗಿದು ಕರಯುಗ್ಮವ ಬಗೆ ಬಗೆ ಸ್ತುತಿಸುತಾ | ಜಗದೊಳು ನಾನಪರಾಧಿಯೆಂದರೂ 4 ಭೋಜನವ ಮಾಡಿ ಗುರುಗಳಂದು ಸಿಂಹಾಸನದಲ್ಲಿ | ರಾಜಿಸುತ್ತ ಬಂದು ಕುಳಿತಿರಲಂದೂ || ಆ ಜನದೊಡಗೀ ದಾಸರು ಕರೆಯಲು | ನೈಜಭಾವದಿಂದು ಬಂದು ಕುಳಿತರೂ 5 ಪದಗಳು ಬರದ ವಹಿಯಕೊಂಡು ಪೋಗಿ | ಮಧ್ವಶಾಸ್ತ್ರದ ಮೇಲೆ ಕುಳ್ಳಿರಲಾಗ || ಅದನರಿಯದೆ ದಿಂಡೆಯನೊಬ್ಬನು ಆ | ಪದವಹಿಯ ತೆಗೆದು ಬಿಸುಟನಾಗಾ 6 ಯೆರಡಾವರ್ತಿ ತೆಗೆಯಲು ಆಗ | ತಿರುತಿರುಗಿ ಬಂದು ವರಪುಸ್ತಕದ ಮ್ಯಾಲೆ ಕುಳ್ಳಿರಲಂದೂ || ಗುರು ವ್ಯಾಸರಾಯರು ನೋಡಿ ಹರುಷದಿಂದ | ಕರೆದು ಬೈದರವಗೆ ಕಡು ಮೂರ್ಖನೆಂದೂ 7 ಪದದೊಹಿ ತೆಗೆದು ಬಿಸಾಡಿದರೆ ತಿರುತಿರು ಗ್ಯದರಮ್ಯಾಲೆ ವರನಾಲ್ಕು ವೇದಾರ್ಥದರೊಳಗುಂಟು || ನರರುತ್ತಮರೆಲ್ಲ ನೋಡಿ ಹರುಷದಿಂದ | ಪುರಂದರ ಉಪನಿಷತ್ತೆಂದರೂ 8 ಗುರುರಾಯರು ದಾಸರ ನೋಡಲಾಗ ಭರದಿಂದ ಯೆದ್ದು | ಅರಿವೆಯ ಕೈಯಿಂದೊರಸಲು ಆಗ || ತ್ವರಿತದಿ ಕೇಳಲು ವಿಠಲನ ಗುಡಿಯೊಳು | ಪಡದಗುರಿ ಹತ್ತವು ವರಿಸಿದೆವೆಂದರು 9 ಹಾಗೆಂದು ನುಡಿದಾಕ್ಷಣದಲಿ ಬೇಗ ಶಿಷ್ಯರಿಗೆ | ಹೋಗಿ ನೋಡಿ ಬಾರೆಂದೆನಲಾಗಿ || ಬೇಗದಿಂದಲಿ ಬಂದು ಕೇಳಲು ಅವರು | ಈಗ ದಾಸರು ಬಂದು ಪರಿಹರಿಸಿದರೆಂದು 10 ಆ ಮಾತು ಕೇಳಿದಾಕ್ಷಣದಿ ಬೇಗ | ಪ್ರೇಮದಿ ಬಂದು ಸ್ವಾಮಿರಾಯರಿಗೆ ಪೇಳಲು ಆಗ || ನಾಮವ ಸ್ಮರಿಸುತ ಪ್ರೇಮಾಲಿಂಗನವಿತ್ತು | ಕಾಮಿತಾರ್ಥ ಫಲವೀವ ಕಲ್ಪತರುವೆಂದರೂ 11 ಇಂತು ಅನುಭವ ಮಾತುಗಳನಾಡಿ ಲಕ್ಷ್ಮೀಕಾಂತನ | ಅಂತರಂಗದಲಿ ಅತಿಮಾನವ ಮಾಡಿ || ಮೂರ್ತಿ | ಶಾಂತತ್ವದಿ ನೋಡುತ ಶರಣು ಮಾಡಿದರೂ 12 ಗಜಪುರದಲ್ಲಿ ಇರುವರು ಕೂಡಿ ವಿಜಯವಿಠ್ಠಲನ್ನ | ಭಜನೆಯಿಂದ ದಿನ ದಿನ ಪೊಗಳಿ || ತ್ರಿಜಗದೊಡೆಯ ಗುರು ಪುರಂದರವಿಠಲನ | ನಿಜ ವೈಕುಂಠದ ಮುಕ್ತಿಯೈದಿದರೂ 13
--------------
ವಿಜಯದಾಸ
ಒಂದಿಲ್ಲದ ಮೇಲೆರಡುಂಟೇ ಭಕ್ತಿ ಒಂದಲ್ಲದೆ ಹರಿಯೊಲವುಟೇ ಪ ರುಚಿ ಔಷಧಿಯುಂಟೇ ನೊಂದಲ್ಲದೆ ರಂಗಾ ಎಂಬುವುದುಂಟೇ ಅ.ಪ ಗಿಡಮರವಾಗದೆ ಕೃಮಿಯಾಗುವೆನೇ ಅಡವಿಯೊಳಿರದೆ ಗೋವಾಗುವೆನೇ ಪಡೆಯದೆ ಪುಣ್ಯವ ನರನಾಗುವೆನೇ ಮೃಡನ ಪೂಜಿಸದೇ ದ್ವಿಜನಾಗುವೆನೇ 1 ಸುಗುಣವಿರದೆ ಮಾತಿನಿದಾಗುವುದೇ ಸೊಗಮಿಲ್ಲದೆ ಬಾಯಿ ನಗೆದೋರುವುದೇ ಸುಗುಣವಿಲ್ಲದೆ ನಿರ್ಗುಣಬಹುದೇ ಮುಗಿಲಿಲ್ಲದೆ ಮಳೆ ಧರೆಗೆ ಬೀಳುವುದೇ 2 ತಂಗಿದ್ದಲ್ಲದೆ ಭಾವ ಎಂಬೋದುಂಟೋ ಹಂಗಿ[ಗ]ಲ್ಲದೆ ಮರೆ ಹಿತಕುಂಟೋ ತಂಗಿನೋಡಲು ಭಾವ ಮರೆಯಹುದುಂಟೋ ಮಾಂಗಿರಿರಂಗ ನೀನೆನ್ನಯ ನಂಟೋ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಒಂದು ದಿನ ನಾರದಮುನಿ ಗೋಕುಲದಿ ಇಂದಿರೇಶನ ಲೀಲೆಯಾ ನಿಂದು ನಭದಲಿ ನೋಡುತಾ | ಮೈಯುಬ್ಬಿ ಬಂದನಾ ವೈಕುಂಠಕೆ 1 ಸಿರಿದೇವಿ ಸಖಿಯರೊಡನೆ | ವನದಲ್ಲಿ ಪರಿಪರಿಯ ಕ್ರೀಡೆಯೊಳಿರೇ ಅರವಿಂದ ನಯನೆಯನ್ನೂ | ಕಂಡನಾ ಸುರಮುನಿಯು ಸಂಭ್ರಮದಲೀ 2 ಜಗನ್ಮೋಹನಾಕಾರಳೂ | ಶ್ರೀ ಹರಿಯ ಜಗ ಸೃಷ್ಟಿಗನುಕೂಲಳೂ ಬಗೆ ಬಗೆಯವತಾರಳೂ | ಕ್ಷಣ ಹರಿಯ ಅಗಲದಂತಿರುತಿಪ್ಪಳೂ 3 ಹರಿಗೆ ಗುಣದಿಂ ಕಿರಿಯಳೂ | ಮತ್ತೆಲ್ಲ ಪರಿಯಲ್ಲಿ ಹರಿಗೆ ಸಮಳೂ ಶರಣೆಂದವರ ಕಾಯ್ವಳೂ | ಬೊಮ್ಮಾದಿ ಸುರರ ಸೃಜಿಸುವ ಶಕ್ತಳೂ 4 ನಾಕ ಸ್ತ್ರೀಯರನೆ ಕೂಡೀ | ವನದಲ್ಲಿ ಲೋಕನಾಯಕಿ ರಮಿಸುತಾ ಶ್ರೀಕಾಂತನಗಲದವಳೂ | ಮುನಿಗೆ ತ ನ್ನೇಕರೂಪವ ತೋರ್ದಳೂ 5 ನೊಡಿ ನಮಿಸಿದನು ಸಿರಿಯಾ | ಹರಿಗುಣವ ಹಾಡಿ ಪಾಡಿದನು ಮೈಯ್ಯಾ ಮೂಡೆ ರೋಮಾಂಚ ಕೈಯ್ಯಾ | ಮುಗಿಯುತಲಿ ನೋಡಿದನು ಸಿರಿಯ ದಣಿಯಾ 6 ಪಲ್ಲವಾಧರೆ ನಗುತಲಿ | ತನ್ನ ಕರ ಪಲ್ಲವದಿ ಕೃಪೆಯ ಮಾಡೀ ಎಲ್ಲಿಂದ ಬಂದೆ ಮುನಿಪಾ ವಿಷಯವೇ ನೆಲ್ಲ ಪೇಳೆಂದೆನ್ನಲೂ 7 ಏನ ಪೇಳುವೆನೆ ತಾಯೆ | ನಿನ ಪತಿಯ ನಾನಾ ವಿಧ ಚರ್ಯೆಗಳನೂ ನಾನರಿಯಲಾರೆ ನಮ್ಮಾ | ನವನೀತ ಚೋರನಾಗಿರುವನಮ್ಮಾ 8 ನಾಕ ಭೂಲೋಕ ತಿರುಗೀ | ಭುವಿಯೊಳಗೆ ನಾ ಕಂಡೆ ಗೋಕುಲವನೂ ಹೇ ಕಮಲೆ ಕೇಳು ಅಲ್ಲೀ | ನಿನ ಪತಿಯು ಆಕಳಾ ಕಾಯುತಿಹನೂ 9 ಬಿಟ್ಟು ವೈಕುಂಠವನ್ನೂ | ಪ್ರಾಯ ಸತಿ ದಿಟ್ಟೆ ನಿನ್ನನು ತೊರೆದನೂ ಹುಟ್ಟಿ ಗೊಲ್ಲರ ಕುಲದಲೀ | ಬೆರತನಾ ಕೆಟ್ಟ ಹೆಂಗಳೆಯರಲ್ಲಿ 10 ನಳಿನಜಾಂಡವ ಸಾಕುವಾ | ಜಗದೀಶÀ ಗೋಪಿ ಬೈ ಗಳನು ತಾ ಕೇಳುತಿಹನೂ 11 ಮದನಮೋಹನರೂಪನೂ | ಗೊಲ್ಲತೆರ ಅಧರಾಮೃತವ ಸವಿವನೂ ಎದೆ ಗಂಟು ಪಿಡಿಯುತಿಹನೂ | ಚಂಡೆಂದು ಗದರಿಸಲು ನುಡಿಯುತಿಹನೂ 12 ಸಂಪೂರ್ಣ ಕಾಮ ತಾನು | ವನದಲ್ಲಿ ಗುಂಪು ಸ್ತ್ರೀಯರ ಕೂಡ್ವನೂ ಸಂಪನ್ನ ಭೋಗಿಸುವನೂ | ಕೊಳಲ ಪಿಡಿ ದಿಂಪುಗಾನವ ಗೈವನೂ 13 ವನದ ಸೊಬಗೇನುಸುರುವೇ | ಶ್ರೀರಮಣಿ ದನಕರುವ ಕಾಯುತ್ಹರಿಯಾ ವನವನವ ತಿರುಗುತ್ತಿರೇ | ಕೊಳಲ ಧ್ವನಿ ವನವೆಲ್ಲ ತುಂಬಿರುತಿರೇ 14 ತಿಳಿಯುದಕ ಯಮುನೆ ಮಳಲು | ದಿಣ್ಣೆಯಲಿ ಕೊಳಲೂದೆ ಹರಿ ಕೇಳಲೂ ಮೊಳೆತವಾ ಬಂಜೆ ಮೋಟೂ | ಮೃಗಪಕ್ಷಿ ಕುಳಿತು ಮೈಮರೆತು ಕೇಳೇ 15 ಓಡಿ ಬರುತಲಿ ತುರುಗಳೂ | ಬಾಲವ ಲ್ಲಾಡಿಸದೆ ಕಣ್ಣುಮುಚ್ಚಿ ಮಾಡಿಟ್ಟ ಪ್ರತಿಮೆಯಂತೆ | ಕಾಣುತಿರೆ ಆಡಿಸದೆ ಸರ್ಪ ಹೆಡೆಯಾ 16 ಶೃಂಗಾರ ಕೊಳಲನೂದೆ | ಜಡ ಚೇತ ನಂಗಳಾಗುತ ಚಿಗುರಲೂ ಅಂಗ ಮರೆಯುತ ಜೀವಿಗಳ್ | ಜಡದಂತೆ ಕಂಗಳನುಮುಚ್ಚಿನಿಲ್ಲೆ 17 ಅಷ್ಟ ಐಶ್ವೈರ್ಯದಾತಾ | ನಾರಿಯರ ತುಷ್ಟಿಪಡಿಸುತಲಿ ಖ್ಯಾತಾ ಶಿಷ್ಟ ಜನರನು ಪೊರೆಯುತಾ | ರಕ್ಕಸರÀ ಹುಟ್ಟಡಗಿಸುವನು ವಿಹಿತಾ 18 ಪೇಳಲಳವಲ್ಲವಮ್ಮಾ | ಶ್ರೀ ಹರಿಯ ಲೀಲೆ ಜಾಲಗಳ ಬ್ರಹ್ಮಾ ನೀಲಗಳರರಿಯರಮ್ಮಾ | ಆನಂದ ತಾಳಿದೆನು ಕೇಳೆ ರಮ್ಮಾ 19 ಇಷ್ಟು ಗೋಕುಲದಿ ನೋಡೀ | ಕಾಣದಿ ನ್ನೆಷ್ಟೋ ಎನ್ನುತಲಿ ಪಾಡೀ ಗುಟ್ಟು ಪೇಳಲು ಬಂದೆನೂ | ಸಿರಿದೇವಿ ಸಿಟ್ಟಾಗಬೇಡವಿನ್ನೂ 20 ಪರನಾರಿಯರ ಬೆರೆಯುತಾ | ಶ್ರೀ ಕೃಷ್ಣ ಮರೆತು ನಿನ್ನನು ಸುಖಿಸುತಾ ಪರಿ ಯೊಚಿಸಮ್ಮಾ | ಆಜ್ಞೆ ಕೊಡು ತ್ವರಿತದಲಿ ಪೋಪೆನಮ್ಮಾ 21 ಹರಿಚÀರ್ಯವೆಲ್ಲ ಕೇಳಿ | ಶ್ರೀ ತರುಣಿ ಪರಮ ಆನಂದ ತಾಳೀ ಬೆರಗಾದ ಪರಿತೋರುತಾ | ಮುನಿವರಗೆ ಪರಿ ಏನು ಮುಂದೆ ಎನಲೂ 22 ಸನ್ನುತಾಂಗನ ಕೂಡಲೂ | ಭೂತಳದಿ ಇನ್ನೇನುಪಾಯವೆನಲೂ ಪನ್ನಂಗ ವೇಣಿ ಉದಿಸೂ | ಭೀಷ್ಮಕಗೆ ಇನ್ನು ನೀ ಕುವರಿ ಎನಿಸೂ 23 ಎಂತೆಂತು ಹರಿಯಚರ್ಯೆ | ಸಿರಿಕಾಂತೆ ಅಂತಂತು ನಿನ್ನ ಚರ್ಯೆ ಸಂತೋಷಪಡಿಸಿ ಎಮ್ಮಾ | ಸಲಹಮ್ಮ ಶಾಂತೆ ನಾ ಪೋಪೆನಮ್ಮಾ 24 ಮತ್ತೊಮ್ಮೆ ನೋಳ್ಪೆನೆಂದೂ | ಗೋಕುಲದ ಹತ್ತಿರದಿ ನಭದಿ ನಿಂದೂ ಸುತ್ತು ಮುತ್ತಲೂ ನೊಡಲೂ | ಸಿರಿದೇವಿ ವ್ಯಾಪ್ತಳಾಗಲ್ಲಿ ಇರಲೂ 25 ವನದಿ ಹರಿವಕ್ಷದಲ್ಲೀ | ಸಿರಿದೇವಿ ಘನ ವೇಣೂರೂಪದಲ್ಲೀ ವನಲಕ್ಷ್ಮೀರೂಪದಲ್ಲೀ | ಗೋಪಿಯರ ಪ್ರಣಯ ಪ್ರಕಾಶದಲ್ಲೀ 26 ಎಲ್ಲೆಲ್ಲಿ ಸೌಂದರ್ಯವೋ | ಉಲ್ಲಾಸ ಎಲ್ಲೆಲ್ಲಿ ವೈಭವಗಳೋ ಎಲ್ಲೆಲ್ಲಿ ಹರಿಲೀಲೆಯೋ | ಸಿರಿದೇವಿ ಅಲ್ಲಲ್ಲಿ ತಾನಿರುತಿರೆ 27 ಸಿರಿ ಹರಿಯ ಚರಿಯ ನೊಡಿದ ಪ್ರತಾಪಾ ಧರೆಗಿಳಿದು ನಮಿಸಿ ನಿಂದಾ | ಕ್ಷಮಿಸೆಂದು ಸಿರಿ ಹರಿಗೆ ಸ್ತೋತ್ರಗೈದಾ 28 ಸಿರಿಹರಿ ವಿಯೋಗವಿಲ್ಲಾ | ಆವಾವÀ ಕಾಲ ದೇಶದಲ್ಲೀ ಅರಿಯದಜ್ಞಾನ ನುಡಿಯಾ | ಮನ್ನಿಸೋ ಮಾಯಾ 29 ಜಯ ಜಯತು ಸುರವಂದ್ಯನೇ ಜಯ ಜಯತು ದುಷ್ಟಹರಣ | ಗುಣ ಪೂರ್ಣ ಜಯ ಜಯತು ಶಿಷ್ಟ ಶರಣಾ30 ಸ್ತುತಿಸುತಂಬರಕಡರಿದಾ | ಸುರಮುನಿಪ ಚ್ಯುತದೂರನತಿ ವಿನೋದಾ ಪತಿತರನು ಕಾಯ್ವ ಮೋದಾ | ಸುಖತೀರ್ಥ ಯತಿಗೊಲಿದು ಉಡುಪಿಲ್ನಿಂದಾ 31 ಆಪಾರ ಮಹಿಮ ಶೀಲಾ | ಸರ್ವೇಶ ಗೋಪಿಕಾ ಜನ ವಿಲೋಲಾ ಆಪನ್ನ ಜನರ ಪಾಲ | ಗುರುಬಿಂಬ ಗೋಪಾಲಕೃಷ್ಣವಿಠಲಾ 32
--------------
ಅಂಬಾಬಾಯಿ
ಒಂದು ಪ್ರಕಾರವೆ ಸ್ವಾಮಿ ಮಂದಿಯ ರಕ್ಷಿಸುವುದು ನಿಂದವರ ದೇಹದಲ್ಲಿ ಹಿಂದೆಮುಂದಭಯವನಿತ್ತು ಪ. ಅಪಾರ ಮಹಿಮ ನೀನು ಒಪ್ಪುವ ಹಯಾಸ್ಯನಾಗಿ ಎಪ್ಪತ್ತೆರಡು ಸಾವಿರ ಇಪ್ಪ ನಾಡಿಗಳೊಳಿದ್ದು 1 ಮುಖ ನಾಸ ನೇತ್ರ ಶ್ರೋತ್ರ ತ್ವಕ್ ನಖೇಂದ್ರಿಯ ತದ್ಗೋಳಕ ಸಕಲರೂಪಗಳಲ್ಲಿ ನೀನೆ ಆಧಾರವಾಗಿದ್ದು 2 ಶ್ವಾಸೋಚ್ಛ್ವಾಸ ಚೇಷ್ಟವಿಚÀಕ್ಷಣ ಹಾಸವಿಲಾಸ ಭೂಷಣ ಗ್ರಾಸಾವಾಸಂಗಳಿಗೆ ನಿವಾಸವಾಗಿ ಪ್ರೇರಿಸುವೆ 3 ಅನಂತ ರೂಪಗಳಲ್ಲಿ ನೀನೆ ಆಧಾರವಾಗಿದ್ದು 4 ಪ್ರಾಣೋಪಾನ ರೂಪಿನಿಂದ ವ್ಯಾನೋದಾನರೂಪನಾಗಿ ವ್ಯಾನೋದಾನ ರೂಪಿನಿಂದ ಉದಾನ ಸಮಾನನಾಗಿದ್ದು 5 ಪೂಜಾ ವ್ಯಾಖ್ಯಾನ ಕೀರ್ತನ ಭೋಜನ ಮಜ್ಜನಸುಖ ಭಾಜನೆಗಳಲ್ಲಿದ್ದು ಪೂಜ್ಯನಾಗಿ ಪ್ರೇರಿಸುವ 6 ವಿಶ್ವ ತೇಜಸ್ಸು ಪ್ರಾಜ್ಞಾ ತುರ್ಯಾ ಅವಸ್ಥಾತ್ರಯಂಗಳೆಲ್ಲ ಕೊಡುವೆ ಜಾಗ್ರತ್ಸ್ವಪ್ನ ಸುಷುಪ್ತಿಯಲ್ಲಿ ವಿಶ್ವಪ್ರೇರಕನಾಗಿದ್ದು 7 ಆತ್ಮರೂಪ ಆದ್ಯ ಅನಂತ ಅಂತರಾತ್ಮ ರೂಪನಾಗಿ ಜ್ಞಾ- ನಾತ್ಮ ರೂಪಿನಿಂದ ಪರಮಾತ್ಮರೂಪನಾಗಿ 8 ಅನಿರುದ್ಧ ಸಂಕರ್ಷಣ ಪ್ರದ್ಯುಮ್ನ ಘನ ವಾಸುದೇವ ನೆನೆವರ ಪಾಪ ಪರಿಹರಿಸುವ ನರಹರಿ 9 ನೀನು ನಿನ್ನ ದಾಸರಿಗಾಗಿ ಮನುಷ್ಯಮುಖದಿಂದ ತತ್ವ ತನುಗಳಿಂದ ಕುಡುವ ಅವರವರ ದೇಹ್ಯದೊಳಿದ್ದು 10 ಸರ್ವರೊಳಗೆ ನೀನಿದ್ದು ಅವರವರ ವಿಭಾಗದ ಕರ್ಮ ಪರೀಕ್ಷಿಸಿ ಪ್ರೇರಿಸುವ ವರ ಶ್ರೀಹಯವದನ 11
--------------
ವಾದಿರಾಜ