ಒಟ್ಟು 698 ಕಡೆಗಳಲ್ಲಿ , 99 ದಾಸರು , 616 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಮಹಾದೇವರು ಅಂಬಿಕಾಪತಿ ಶಂಭು ರಕ್ಷಿಸೆನ್ನಶಂಬರಾರಿ ಹರನೆ ನಂಬಿದೆನೊ ನಿನ್ನ ಪ ಭವ ಭ್ರಕುಟ ಭವಹರನೆ ನೀಎನ್ನಅವಗುಣಗಳೆಣಿಸದಿರು ಕವಿಗೇಯನೆ ||ಅವನಿಯೊಳು ಎನಗೀಗ ಸುವಿವೇಕಿಗಳ ಸಂಗಜವದಿ ಪಾಲಿಸು ಮುದದಿ ಜವನಾರಿ ಶಿವನೆ 1 ವಿನುತ ಇಳೆವರೂಥನೆ ನಿರುತತಲೆವಾಗಿ ಬೇಡುವೆನು ಸಲಹೆಂದು ನಾಎಲರುಣಿ ಭೂಷಣೆನೆ ಒಲಿದು ಪಾಲಿಸುದಯದಿಛಳಿಗಿರೀಶನ ಅಳಿಯ ನಳಿನಾರಿ ಧರನೆ 2 ಸಿರಿರಮಣ ಶಾಮಸುಂದರ ವಿಠಲ ಸಖನೆಮೊರೆ ಹೊಕ್ಕೆ ಮರೆಯದಿರು ಗರಗೊರಳನೆಕರುಣದಿಂದಲಿ ನಿನ್ನ ಚರಣ ಸೇವೆಯನಿತ್ತುಕರವಿಡಿದು ಕಾಪಾಡೊ ಕರಿಚರ್ಮಧರನೆ 3
--------------
ಶಾಮಸುಂದರ ವಿಠಲ
ಶ್ರೀ ಮುದ್ದುಮೋಹನದಾಸರು ಮುದದಿ ಪಾಲಿಸೊ | ಮುದ್ದು ಮೋಹನರಾಯಾ | ಮದ್ಗುರುವರ ಪ್ರೀಯಾ ಪ ಮಧ್ವೇಶನ ಪದ ಪದುಮ ಪೂಜಿಪ ಮಧುಪಾ ಪರಿಹರಿಸೆಲೊ ತಾಪಾ ಅ.ಪ. ಜನುಮ ಪೊತ್ತೆ ನೀ ದೊಡ್ಡ ಬಳ್ಳಾಪುರದೀ | ಅನುನಯದಲಿ ಓದೀ |ಗುಣವಂತೆಯು ಕನ್ಯೆಯ ತಾ ಸ್ವೀಕರಿಸೀ | ಕನ್ಯಾಸೆರೆ ಬಿಡಿಸೀ |ವನಜನಾಭನನು ಕಾಣಲು ಮನಮಾಡೀ | ಶ್ರೀ ವರರನು ಬೇಡೀ |ಗಾನ ಲೋಲ ಮುದ್ದು ಮೋಹನ ವಿಠ್ಠಲನಾ ಘನನಾಮ ಪೊತ್ತೆ ನಿನ್ನಾ 1 ಅಂಗಜಗಳು ಕದಲರ್ಧಾಂಗಿಯನಾಳೀ | ಯಾತ್ರೆಗೆ ಮನತಾಳೀ |ಗಂಗೆಯಾತ್ರೆ ಮೂರೊಂದು ಬಾರಿ ಮಾಡೀ | ಉಡುಪಿಗೆ ಬಲುಬಾರೀ | ತುಂಗ ಮಹಿಮ ನಮ್ಮ ವೆಂಕಟ ನಿಲಯನ್ನಾ | ತುಂಗೆ ತೀರಗನನ್ನಾ |ಭಂಗವಿಲ್ಲದಾನೇಕ ಬಾರಿ ನೋಡೀ | ಮಂಗಳಾಂಗನ ಪಾಡೀ 2 ಸಿರಿ ವಿಜಯ ವಿಟ್ಠಲನ ನಿಜಪುರದಲ್ಲೀ | ಸಂಸ್ಥಾಪಿಸುತಲ್ಲೀ |ಪರಮ ಶಿಷ್ಯರಿಗುಪದೇಶಗಳನ್ನಾ | ವಿರಚಿಸಿದಿಯೊ ಘನ್ನಾ |ಪರಿಸರ ಮತ ಸರ್ವೋತ್ತಮವೆಂದೂ | ಸಾರಿದೆ ದಯಾಸಿಂಧೂ 3 ಸಿರಿ ತಂದೆ ಮುದ್ದು ಮೋಹನರಾ | ಉದ್ಧರಿಸಿದ ಧೀರಾ |ಮಧ್ವ ಮತಾಗಮ ಸದ್ವನದಿ ವಿಹಾರ | ಬುಧಜನರಘ ಹರಾ |ವಿದ್ವದಾರ್ಯ ಮುದ್ದು ಮೋಹನ ರಾಯ | ಮುದ ಬೇಡುವೆ ಜೀಯ 4 ಕೃತನಿತ್ಯಾಹ್ನಿಕನಾಗಿ ತೆವಳಿ ಬಂದೂ | ಚಕ್ರದಿ ಕುಳಿತಂದೂ |ವತ್ಸರ ವಿಳಂಬಿ ವದ್ಯ ಕಾರ್ತೀಕದೀ | ಚತುರ್ದಶಿ ನಡುದಿನದಿ|ಅತುಳ ಮಹಿಮ ಗುರುಗೋವಿಂದ ವಿಠಲನ್ನ | ಹೃದಯಾಬ್ಜದಿ ಪವನಾ | ಆತುಮಾಂತರದಿ ಕಾಣುತಲವನಾ | ಕಿತ್ತೊಗೆದೆಯೊ ತನುವಾ 5
--------------
ಗುರುಗೋವಿಂದವಿಠಲರು
ಶ್ರೀ ವಾದಿರಾಜರ ಸ್ತೋತ್ರ ಪದ ವಾದಿರಾಜರೆ ನಿಮ್ಮ ಪಾದಕ್ಕೆರಗಿ ನಾಮೋದದಿಂ ಬೇಡುವೆ ಮಾಧವನ ತೋರೋ ಪ ಸಕಲವೇದ ಪುರಾಣ ಶಾಸ್ತ್ರಗಳೆಲ್ಲಾಪ್ರಕಟಿಸಿದೆ ಕನ್ನಡದಿ ಪ್ರೇಮದಿಂದನಿಖಿಳ ಜನರು ತಾವಾನಕ ದುಂದುಭಿ ಸುತನಭಕುತಿಯ ಪಡೆದು ಮೇಣ್ಮುಕುತಿಯೈದಲಿ ಎಂದು 1 ಗಣನೆ ಇಲ್ಲದೆ ಕೀರ್ತನೆ ಸುಳಾದಿಗಳನ್ನುಮನವೊಲಿದು ಮಾಡಿದ್ದು ಜನರು ಪಠಿಸಿವನಜನಾಭನ ಕರುಣವನು ಪಡೆದು ತಾವನುಭವಿಸಲಾನಂದನೆನುತಲಿ 2 ನಿನ್ನ ನೆನೆಯೆ ಧನ್ಯ ನಿನ್ನ ಪಾಡಲು ಮಾನ್ಯ ನಿನ್ನ ಕೊಂಡಾಡಲು ಪಾಪಶೂನ್ಯನಿನ್ನವನೆನೆ ವೇಣುಗೋಪಾಲ ವಿಠಲಮನ್ನಿಸಿ ಸದ್ಗತಿ ಪಾಲಿಪ ಮುದದಿ 3
--------------
ವೇಣುಗೋಪಾಲದಾಸರು
ಶ್ರೀ ವಾದಿರಾಜರು ಕರುಣದಿ ನೋಡೋ ಮದ್ಗುರುವರ ವಾದಿರಾಜನಂಬಿದ ಭಕ್ತರ ಸುರತರುವೇ ಪ ಪರಿಪರಿ ಭವಸಾಗರದಲಿ ಮುಳುಗುವತರಳನ ಮರೆವುದು ಥರವೇ ಅ.ಪ. ನಿಗಮ ವಿನುತ ಹಯವದನನಬೇಗ ಒಲಿಸಿದೆ ನೀ ಮುದದಿಯೋಗ ಜಿತಾಸನನಾಗಿರುವನೆ ತಲೆಬಾಗುವೆ ಭಯವಳಿ ತ್ವರಿತ 1 ವಾದದೊಳ್ ವಾದಿಗಳನೆ ಗೆದ್ದು ಗುರುಮತಸಾಧಿಸಿದೆಯೊ ಬಲವಂತಸಾಧು ಸೇವಿತ ನಿನ್ನ ಪಾದವ ನಂಬಿದೆ ಭವಬಾಧೆ ಕಳೆಯೋ ಮಹಂತಕ್ರೋಧ ರಹಿತ ಪಂಚಭೇಧ ಸುಜ್ಞಾನವಬೋಧಿಸುವ ದಯವಂತ 2 ಅತಿ ವಿಮಲನೆ ನಿನ್ನ ಸ್ತುತಿಸಲರಿಯೆ ನಾನುಮತಿವಂತನೆ ಮಹಾದಾತಾಸತತ ಬೇಡುವೆನು ಶ್ರೀಪತಿ ಭಜನೆಗೆ ಮನಜಿತವಾಗಿ ಇರಲಯ್ಯ ತಾತಕ್ಷಿತಿಯೊಳು ಕಂಡ ದುರ್ಮತಿಗಳ ಬಿಡಿಸೋದತಿ ಅಧಿಕವೇನೋ ಅನಾಥನಾಥಪತಿತ ಪಾವನ ರಮಾಪತಿ ವಿಠಲನ ನಿರುತ ನೋಳ್ಪ ಲಾತವ್ಯಬ್ಯಾತ 3
--------------
ರಮಾಪತಿವಿಠಲರು
ಶ್ರೀ ವಾದಿರಾಜರು ಗುರುವರ ದಯಮಾಡೈ ಹಯಮುಖ ಪದಯುಗ ನಿಜ ಭಕ್ತಾಗ್ರಣೀ ಪ ಚರಣವ ನಂಬಿದೆ ಮುಂದಿನ ಪರಿಸರ ಸರಸರ ಸುರಿಸುತ ವರಗಳ ಕರುಣದಿ ಅ.ಪ ನಿನ್ನನೆ ನಂಬಿದ ಅನ್ಯರವಲ್ಲದ ಚಿಣ್ಣರ ಬಿಡುವರೆ ಘನ್ನಗುಣಾರ್ಣವ ಸಣ್ಣವರೆನ್ನೆದೆ ಮನ್ನಿಸಿ ಕೈಪಿಡಿ ಚಿನ್ಮಯ ನಂದನ ಅನ್ಯರ ಪೋಷಕನೆ 1 ದಾಸರ ದೋಷವಿನಾಶಗೈವುದು ಕ್ಲೇಶವ ಭಾವೀಶ್ವಾಸ ನಿಯಾಮಕಗೆ ವಾಸವ ಗುರುಶಿವ ಶೇಷಸುವಂದಿತ ವಾಸಿಸಿ ಹೃದಯದಿ ಭಾಸಿಸು ಹರಿದಾರಿ 2 ಆರ್ರ್ತಿವಿದೂರ ಪರಾರ್ಥಕೆ ನೆಲಸಿಹ ಖ್ಯಾತ ಕವೀಂದ್ರನೆ ಪ್ರೀತಿಯ ಬೇಡುವೆನು ಮಾತೆಯ ತೆರಮುರವ್ರಾತವ ನೋಡದೆ ನಾಥನೆ ನೀಡಿಸು ಆತ್ಮವಿಕಾಸವನು 3 ವಿಜ್ಞಾನಾಸಿಯ ದಾನವ ಗೈಯುತ ದೀನನ ಮೌಢ್ಯದಿ ಶೂನ್ಯವಗೈಯುತ ಪ್ರಾಜ್ಜನ ಮಾಡೈ ಪ್ರಾಜ್ಞಲಲಾಮನೆ ಆಜ್ಞಾಧಾರಕ ನಿನ್ನ ಜನುಮ ಜನುಮದಲಿ4 ವೇದವ್ಯಾಸರ ಪಾದಾರಾಧಕ ಮೋದಮುನೀಂದ್ರರ ಪ್ರೇಮವ ಪಡೆದಿಹನೆ ವೇದವ್ಯಾಸರ ಸೇವಿಪ ಭಾಗ್ಯವ ಸಾದರದಿಂ ಕೊಡು ಕಾಮಿತ ಕೊಡುವವನೆ5 ಹಿರಿಯರ ಕರುಣದಿ ಕಿರಿಯರ ಸಾಧನೆ ಶರಣನ ಭಾರವು ಸೇರಿದೆ ನಿಮ್ಮಡಿ ಹರಣವ ವಪ್ಪಿಸಿ ಚರಣವ ಪಿಡಿದಿಹೆ ಪೊರೆಯೈ ಮನತರ ಕುರುಡನು ನಾನಿಹೆ 6 ಮಿಥ್ಯಾಮತ ವಿಧ್ವಂಸನೆ ಗೈಯುವ ಸದ್ಗ್ರಂಥಂಗಳದಾತನೆ ಬಾಗುವೆನು ಪಾರ್ಥನಸಖ “ಶ್ರೀಕೃಷ್ಣವಿಠಲ”ನ ಭಕ್ತಿತರಂಗವ ನೀಡುತ ಕಾಯುತ 7
--------------
ಕೃಷ್ಣವಿಠಲದಾಸರು
ಶ್ರೀ ವಿಷ್ಣು ತೀರ್ಥರು ಅಡವಿ ಆಚಾರ್ಯರ ಅಡಿಯ ಪೊಂದಿದ ಜನರು ಅಡಿಗಡಿಗೆ ಬಹುಪುಣ್ಯ ಪಡೆದು ಕೊಂಬುವರು ಪ ಪೊಡವಿಯಲಿ ಸಂಸಾರ ಮಡುವಿನಲಿ ಮುಣಿಮುಣಿಗಿ ಬಡವರಂತತಿ ಬಾಯ ಬಿಡುವರಲ್ಲವರು ಅ.ಪ ಪಂಚರತ್ನವ ಪಠಿಸಿ ಪಂಚಮೂರ್ತಿಗಳನ್ನು ಮುಂಚೆ ತಿಳಿವರು ಈ ಪ್ರಪಂಚದಲ್ಲಿ ಹಂಚಿಕೆಯಲಿ ಮತ್ತೆ ಪಂಚಭೇದವ ತಿಳಿದು ಪಂಚ ಮಹಾ ಪಾಪಗಳ ಮುಂಚೆ ಕಳೆಯುವರು 1 ಭಂಗ ಬಿಡಿಸುವ ಸುಧೆಯ ಮಂಗಳಾರ್ಥವ ತಿಳಿದು ಅಂಗದಲಿ ಸುರಿವರು ಕಂಗಳೊದಕವ ಮಂಗಳಾಂಗನ ಅಂತರಂಗದಿ(ದಲಿ) ಸ್ಮರಿಸುತ್ತ ಮುಂಗೈಯ್ಯ ಮುದ್ರೆಗಳ ಧರಿಸುವರಿವರು 2 ವಾಸುದೇವನ ದಾಸ ದಾಸರಾದೆವೆಂಬೊ ಆಶೆಯಲಿ ಅವನ ಸಹವಾಸ ಬಯಸುವರು ಶ್ರೀಸುಧಾರ್ಥಾನಂತಾದ್ರೀಶನಲ್ಲೇ ಭಕುತಿ ಯೇಸು ಕಾಲಕು ಬಿಡದೆ ಬ್ಯಾಸರದೆ ಬೇಡುವರು 3
--------------
ಅನಂತಾದ್ರೀಶರು
ಶ್ರೀ ವೆಂಕಟಾಚಲ ನಿವಾಸ ನಿನ್ನ ಸೇವಾನುಸೇವಕರ ದಾಸಾ ಎನಿಸಿ ಜೀವಿಸುವ ನರಗೆ ಆಯಾಸಾ ಯಾಕೆ ಶ್ರೀವರನೆ ಕೊಡು ಎಮಗೆ ಲೇಸಾ 1 ಕಂಸಾರಿ ಪ್ರಭು ನಿನ್ನ ದಿವ್ಯ ನಾಮ ಒದಗಲು ಜಿಹ್ವೆಗೆನ್ನಾ ದೋಷ ಸೀಮೆಗಾಣದಿದ್ದರೆನ್ನ ಸ್ವಾಮಿ ನೀ ಮರೆಯಲಾಗದು ಸುಪ್ರಸನ್ನ 2 ನೀಚ ಯೋನಿಗಳಲ್ಲಿ ಬಂದೆ ಇನ್ನು ನಾಚಿಕಿಲ್ಲವೊ ಎನಗೆ ತಂದೆ ನೀನೆ ಮೋಚಕನು ಬಿನ್ನಪ ವಿದೆಂದೆ ಸವ್ಯ ಸಾಚಿಸಖ ಕೈಪಿಡಿಯೋ ತಂದೆ 3 ನಾನೊಬ್ಬನೇ ನಿನಗೆ ಭಾರವಾದೆ ನೇನೊ ಸಂತತ ನಿರ್ವಿಕಾರ ಎನ್ನ ಹೀನತ್ವ ನೋಡಲ್ಕಪಾರ ಚಕ್ರ ಪಾಣಿ ಮಾಡಿದಿರೆನ್ನ ದೂರ 4 ಕಂಡ ಕಂಡವರಿಗಾಲ್ಪರಿದು ಬೇಡಿ ಬೆಂಡಾದೆ ನಿನ್ನಂಘ್ರಿ ಮರೆದು ದಿಟ ತೊಂಡವತ್ಸಲನೆಂಬ ಬಿರುದು ಕಾಯೊ ಪುಂಡರೀಕಾಕ್ಷ ನೀನರಿದು 5 ಈ ಸಮಯದೊಳೆನ್ನ ತಪ್ಪ ನೋಡಿ ನೀ ಸಡಿಲ ಬೇಡುವರೇನಪ್ಪ ನಿನ್ನ ದಾಸರ್ಪೆಸರ್‍ಗೊಳಲು ಬಪ್ಪಾ ದೋಷ ನಾಶವಾಗೋದು ತಿಮ್ಮಪ್ಪ 6 ಕಾಮಾದಿಗಳ ಕಾಟದಿಂದ ನಿನ್ನ ನಾ ಮರೆದೆ ಸಚ್ಚಿದಾನಂದ ಎನ್ನ ಈ ಮಹಾ ದೋಷಗಳ ವೃಂದ ನೋಡದೆ ನೀ ಮನ್ನಿಸೆನ್ನ ಮುಕುಂದ 7 ನೀ ಪಿಡಿದವÀರ ಸಹಸ್ರಾರ ಸುಜನ ಪಾಪಾಟವಿಗೆ ಸುಕುಠಾರಾ ಜಗ ದ್ವ್ಯಾಪಕನೆ ಎನ್ನ ಸಂಸಾರ ಘೋರ ಕೊಪದಿಂದೆತ್ತಯ್ಯ ಧೀರ 8 ಸಿಂಧೂರ ರಾಜ ಪರಿಪಾಲ ಕೋಟಿ ಕಂದರ್ಪ ಲಾವಣ್ಯ ಶೀಲ ಧರ್ಮ ಮಂದಾರ ಭೂಜಾಲಪಾಲ ಯೋಗಿ ಸಂದೋಹ ಹೃತ್ಕುಮುದ ಶೀಲಾ 9 ಶಿವನ ವೈರಿಯ ಕೊಂದ ಶಕ್ತ ಪುಣ್ಯ ಶ್ರವಣ ಕೀರ್ತನ ನಿನ್ನ ಭಕ್ತಾ ಜನರ ಭವದೊಳಗೆ ದಣಿಸುವುದು ಯುಕ್ತವೇನೊ ಭುವನ ಪಾವನ ನಿತ್ಯಮುಕ್ತ 10 ಶ್ರೀಕರ ಶ್ರೀಮದಾನಂತ ನಿಖಿಳ ಲೋಕೈಕನಾಥ ನಿನ್ನಂಥ ಸಖರ ನಾ ಕಾಣೆನೆಲ್ಲಿಯೂ ಮಹಂತಾ ಎನ್ನ ನೀ ಕಾಯೋ ಕಂಡ್ಯ ಭೂಕಾಂತಾ 11 ಕರ್ಮ ಚಿತ್ರತ್ವಗ್ರಸನ ಕಾಯ ಕರಣ ಮನಹಂಕಾರ ಘ್ರಾಣಾ ಬುದ್ದಿ ಚರಣ ಪಾಯೂಪಸ್ಥ ನಯನಜಾತ ಉರುಪಾಪ ಕ್ಷಮಿಸು ಶ್ರೀ ರಮಣಾ 12 ಅನಿಮಿತ್ತ ಬಂಧು ನೀಯೆನ್ನ ಬಿಡುವು ದನುಚಿತವೋ ಲೋಕಪಾವನ್ನ ಚರಿತ ಮನ ವಚನ ಕಾಯದಲಿ ನಿನ್ನ ಪಾದ ವನಜ ನಂಬಿದೆ ಸುಪ್ರಸನ್ನಾ 13 ನೀನಲ್ಲದೆನಗೆ ಗತಿಯಿಲ್ಲ ಪವ ಮಾನವಂದಿತ ಕೇಳೋ ಸೊಲ್ಲ ಎನ್ನ ಜ್ಞಾನೇಚ್ಛೆ ಕ್ರಿಯಂಗಳೆಲ್ಲಾ ನಿನ್ನ ಧೀನವಲ್ಲವೆ ಲಕ್ಷ್ಮೀನಲ್ಲಾ 14 ಪ್ರಾಚೀನ ಕರ್ಮಾಂಧ ಕೂಪದೊಳಗೆ ಯೋಚಿಸುವ ನರರ ಸಂತಾಪ ನಿನಗೆ ಗೋಚರಿಸದೇನೋ ಬಹುರೂಪ ವೆಂಕ ಟಾಚಲನಿಲಯ ಪಾಹಿ ಶ್ರೀಪಾ 15 ಯಾಕೆ ದಯ ಬಾರದೆನ್ನಲ್ಲಿ ನರಕ ನಾಕ ನರಕ ಭೂ ಲೋಕಂಗಳಲ್ಲಿ ಚರಿಸಿ ನಾ ಕಷ್ಟಪಟ್ಟ ಬಗ್ಗೆ ನೀ ಬಲ್ಲಿ ವೀತ ಶೋಕ ಕೊಡು ಭಕುತಿ ನಿನ್ನಲ್ಲಿ 16 ಬನ್ನ ಬಡಿಸುವರೇನೋ ಬಿಡದೆ ನಾನು ಮುನ್ನ ಮಾಡಿದ ಪಾಪ ಕೆಡದೆ ನೀ ಪ್ರ ಪನ್ನ ವತ್ಸಲನೆಂದು ನುಡಿದೆ 17 ತಾಪತ್ರಯಗಳಿಂದ ನೊಂದೆ ಮಹಾ ಪಾಪಿಷ್ಠರಲ್ಲನ್ನ ತಿಂದೆ ಇನ್ನು ಆಪರೇತೇಶ್ವರನ ಮುಂದೆ ಪೋಗಿ ನಾ ಪೇಕೊಳಲೇನು ತಂದೆ 18 ದೇಹ ಸಂಬಂಧಿಗಳ ಸಹಿತವಾಗಿ ನಾ ಹೊಂದಿದೆನು ಲೋಕಮೋಹಿತ ಎನ್ನ ಮೋಹಿಪ್ರದು ನಿನ್ನಗೇನು ವಿಹಿತ ಹೃದಯ ಬಾಹಿರಂತರದಿ ಸನ್ನಿಹಿತ 19 ಪೋಗುತಿದೆ ದಿವಸ ಕಮಲಾಕ್ಷ ಪರಮ ಅಪರೋಕ್ಷ ಎನಗೆ ಹೇಗಾಗುವುದೊ ಸುರಾಧ್ಯಕ್ಷ ದುರಿತ ನೀನು ಕಾಮಿತ ಕಲ್ಪವೃಕ್ಷ 20 ಗತಿಯಾರು ನಿನ್ನುಳಿದು ದೇವ ರಮಾ ಸಂಜೀವ ಎನ್ನ ಸತಿಸುತರ ಅನುದಿನದಿ ಕಾವ ಭಾರ ಸತತ ನಿನ್ನದು ಮಹಾನುಭಾವ 21 ದೊಡ್ಡವರ ಕಾಯ್ವುದೇನರಿದು ಪರಮ ದಡ್ಡರನು ಕಾಯ್ವದೇ ಬಿರುದು ಎನ್ನ ಗುಡ್ಡದಂತಹ ಪಾಪ ತರಿದು ಕಾಯೋ ವಡ್ಡಿ ನಾಯಕ ಸಾರೆಗರದೊ 22 ಜ್ಞಾನಿಗಳು ನೀಚರಲಿ ಕರುಣಾ ಮಾಡ ರೇನೋ ಬಿಡುವರೇ ರಥಚರಣ ಪಾಣಿ ಭಾನು ಚಂಡರವಿಕಿರಣ ಬಿಡದೆ ತಾನಿಪ್ಪನೆ ರಮಾರಮಣ23 ಆಡಲ್ಯಾತಕೆ ಬಹಳ ಮಾತಾ ಪರರ ಬೇಡಲಾರೆನೋ ಜಗತ್ರಾತಾ ಹೀಗೆ ಮಾಡುವರೇ ಕೆಳೆನ್ನ ಮಾತ ನೀನೆ ನೀಡೆನಗೆ ಪುರುಷಾರ್ಥ ದಾತಾ 24 ಬೇಡಲೇತಕೆ ಬಹಳ ಮಾತಾ ಎನ್ನ ಕೇಡು ನಿನ್ನದಲ್ಲೇ ಬಲಿದೌತ ಪಾದ ಬೇಡಿಕೊಂಬುವೆ ನಾನನಾಥ ದೂರ ನೋಡಲಾಗದು ಪಾರ್ಥಸೂತ 25 ನಿತ್ಯ ಬಿಡದೆ ಶಾರದೇಶನ ನುತಿಪ ಭಕ್ತ ಜನರ ಪಾರ ಸಂತೈಸುವುದು ಮಿಥ್ಯವಲ್ಲ ಶ್ರೀರಮಣ ಸಾಕ್ಷಿದಕೆ ಸತ್ಯಾ 26 ಪರಿಯಂತ ಶಯನ ಪ್ರಣತಾರ್ತಿ ಹರನೆಂಬೊ ಅಂಕಾ ಕೇಳಿ ಮಣಿದ ನಿನ್ನಂಘ್ರಿಗೆ ಶಶಾಂಕಾ ಭಾಸ ದಣಿಸಲಾಗದು ನಿಷ್ಕಳಂಕಾ27 ಕಾರ್ತವೀರ್ಯಾಜುನನ ಕೊಂದ ಭವ್ಯ ಕೀರ್ತಿ ನಿನ್ನಾನಂದ ವೃಂದ ಸತತ ಕೀರ್ತಿಸುವ ನರರ ಬಹುಕುಂದ ನೋಡ ದಾರ್ತನ್ನ ಪೊರೆಯೊ ಗೋವಿಂದ 28 ದಯದಿಂದ ನೋಡೆನ್ನ ಹರಿಯೆ ಜಗ ನ್ಮಯನೆ ಜ್ಞಾನಾನಂದ ವೃಂದ ಸಿರಿಯೆ ಮನಾ ಭಯದೂರರಿನ್ನೊಬ್ಬರರಿಯೇ 29 ನರಸಿಂಹ ನಿನ್ನುಳಿದು ಜಗವ ಕಾಯ್ವ ಪರಮೋಷ್ಠಿ ರಾಯನು ನಗುವ ನಿತ್ಯ ನಿರಯಾಂಧ ರೂಪದೊಳು ಹುಗಿವಾ 30 ದಾಸ ದಾಸರ ದಾಸನೆಂದು ಬಿಡದೆ ನೀ ಸಲಹೋ ಎನ್ನನೆಂದೆಂದೊ ನಿನ್ನ ನಾ ಸೇವಿಸುವೆ ಕೃಪಾಸಿಂಧು ಎಮ್ಮನು ದಾಸಿಸದÀನಿಮಿತ್ತ ಬಂಧೂ 31 ಎಂದೆಂದು ನೀ ಬಡವನಲ್ಲ ನಿನ್ನ ಮಂದಿರದೊಳಗೆ ಬಲ್ಯಲ್ಲಾ ಚಿದಾ ನಂದ ನೀ ಭಕ್ತ ವತ್ಸಲ್ಲಾ 32 ಕಾಮಿತಪ್ರದನೆಂಬ ಬಿರಿದು ಕೇಳಿ ನಾ ಮುದದಿ ಬಂದೆನೋ ಅರಿದು ಎನ್ನ ತಾಮಸ ಮತಿಗಳೆಲ್ಲ ತರಿದು ಮಮ ಸ್ವಾಮಿ ನೋಡೆನ್ನ ಕಣ್ದೆರದು33 ಹಿತವರೊಳು ನಿನಗಧಿಕರಾದ ತ್ರಿದಶ ತತಿಗಳೊಳು ಕಾಣೆನೋ ಪ್ರಮೋದ ನೀನೆ ಗತಿಯೆಂದು ನಂಬಿದೆ ವಿವಾದವ್ಯಾಕೊ ಪತಿತಪಾವನ ತೀರ್ಥಪಾದ 34 ಮಡದಿ ಮಕ್ಕಳು ತಂದೆ ತಾಯಿ ಎನ್ನ ಒಡಹುಟ್ಟಿದವರ ನೀ ಕಾಯಿ ಲೋಕ ದೊಡೆಯ ನೀನಲ್ಲದಿನ್ನಾರೈ ಎನ್ನ ನುಡಿ ಲಾಲಿಸೋ ಶೇಷಶಾಯಿ 35 ಅನುಬಂಧ ಜನರಿಂದ ಬಪ್ಪ ಕ್ಲೇಶ ವನುಭವಿಸಲಾರೆ ಎನ್ನಪ್ಪ ಉದಾ ಸೀನ ಮಾಡಿ ದಯಮಾಡದಿಪ್ಪರೇನೋ ಘನ ಮಹಿಮ ಫಣಿರಾಜತಲ್ಪ 36 ಹದಿನಾಲ್ಕು ಲೋಕಂಗಳನಾಳ್ವ ಬ್ರಹ್ಮ ಮೊದಲಾದವರು ನಿನ್ನ ಚಲ್ವನಖದ ವಿಧಿಸಲಾಪೆನೆ ನಿನ್ನ ಸಲ್ವಾ 37 ಧನ ಧಾನ್ಯ ಪಶು ಪತ್ನಿ ಗೇಹ ಜನನೀ ಜಾಮಾತ ಸಖ ನೇಹ ಅನುಜ ತನುಜಾಪ್ತವರ್ಗದಿಂದಾಹ ಸೌಖ್ಯ ನಿನಗರ್ಪಿಸಿದೆ ಎನ್ನ ದೇಹಾ 38 ನೀನಿತ್ತ ಸಂಸಾರದೊಳಗೆ ಸಿಲುಕಿ ನಾನೊಂದೆ ಕರೆ ನಿನ್ನ ಬಳಿಗೆ ಚರಣ ಧ್ಯಾನ ದೊರಕಲು ಭವದಿ ಮುಳುಗೆ ನಿನ್ನ ಕಾಣದಿರಲಾರೆನರ ಘಳಿಗೆ 39 ಸಲುಗೆ ಬಿನ್ನಪವ ನೀ ಕೇಳೋ ಎನ್ನ ಬಲು ದುರುಳತನವ ನೀ ತಾಳೋ ನೀನೆ ನೆಲೆಯಲ್ಲದೆನಗಾರು ಪೇಳೋ ಎನ್ನ ಕುಲದೈವ ಬಹುಕಾಲ ಬಾಳೋ40 ಸಾಂದೀಪ ನಂದನನ ತಂದ ನಂದ ಭವ ವೃಂದ ಕಳೆದು ಎಂದೆಂದು ಕುಂದದಾನಂದವೀಯೋ ಇಂದಿರಾರಮಣ ಗೋವಿಂದ41 ತೈಜಸ ಪ್ರಾಜ್ಞ ತುರಿಯಾ ಎನ್ನ ದುಸ್ವಭಾವವ ನೋಡಿ ಪೊರೆಯದಿಹರೆ ನಿಸ್ಪøಹ ನಾನಿನ್ನಂಘ್ರಿ ಮೊರೆಯ ಪೊಕ್ಕೆ ಅಸ್ವತಂತ್ರನ ಕಾಯೋ ಪಿರಿಯಾ42 ಇಹಪರದಿ ಸೌಖ್ಯ ಪ್ರದಾತ ನೀನೆ ಅಹುದೋ ಲೋಕೈಕ ವಿಖ್ಯಾತ ಮಹಾ ಮಹಿಮ ಗುಣಕರ್ಮ ಸಂಜಾತ ದೋಷ ದಹಿಸು ಸಂಸಾರಾಬ್ದಿ ಪೋತಾ 43 ಲೋಕಬಾಂಧವನೆಂಬ ಖ್ಯಾತಿಯನ್ನು ನಾ ಕೇಳಿದೆನು ಖಳಾರಾತಿ ಮನೋ ಶೋಕ ಮೋಹಾಜ್ಞಾನ ಭೀತಿ ಬಿಡಿಸು ಶ್ರೀ ಕರಾರ್ಚಿತ ಸ್ವಯಂ ಜ್ಯೋತಿ44 ಒಂದು ಗೇಣೊಡಲನ್ನಕಾಗಿ ಅಲ್ಪ ಮಂದಭಾಗ್ಯರ ಮನೆಗೆ ಪೋಗಿ ದೈನ್ಯ ದಿಂದ ಸತ್ಕರ್ಮಗಳ ನೀಗಿ ಕಂದಿ ಕುಂದಿದೆನೋ ಸಲಹೋ ಲೇಸಾಗಿ45 ಪಾತಕರೊಳಗಧಿಕ ನಾನಯ್ಯ ಜಗ ತ್ಪಾತಕವ ಕಳೆವ ಮಹಾರಾಯ ನಿನ್ನ ದೂತನಲ್ಲವೆ ಜೀಯ ಜಗ ನ್ನಾಥ ವಿಠ್ಠಲ ಪಿಡಿಯೋ ಕೈಯಾ 46
--------------
ಜಗನ್ನಾಥದಾಸರು
ಶ್ರೀ ಶೇಷದೇವರು ಪೋಷಿಸೆನ್ನನು ನಿರುತ ಶೇಷದೇವ ದೋಷ ನಾಶನಗೊಳಿಸಿ ಲೇಸಾಗಿ ಪಿಡಿಕರವ ಪ ತಲ್ಪ ಅನುಜ ಪೂರ್ವಜನಾ ಘನಸೇವೆಯನು ಗೈದು | ಫಣಿರಾಜನೆ ವಿನಯದಲಿ ಬಿನ್ನೈಪೆ | ನಿನಗಶನವಾದಾತ ಅನುದಿನ 1 ಭೂಗಗನ ಪಾತಾಳ | ಸಾಗರವ ವ್ಯಾಪಿಸಿದ ಯೋಗ ಸಾಧನ ಶೂರ | ನಾಗನಾಥ ಬಾಗಿಬೇಡುವೆ ಭವದ ರೋಗಕೌಷಧವಾದ ಭಾಗವತ ಶ್ರವಣ ಸುಖರಾಗದಲಿ ನೀಕೊಟ್ಟು 2 ಸಾನಿಸಿರಾಂಬಕ ನಮಿತ | ಸಾಸಿರಾನನನಾದ ವಾಸುಕೀವರ | ವಾರುಣೀಶ ನಿನ್ನ || ಹಾಸಿಗೆಯಗೈದಂಥ ಶ್ರೀ ಶಾಮಸುಂದರನ ನಿತ್ಯ 3
--------------
ಶಾಮಸುಂದರ ವಿಠಲ
ಶ್ರೀ ಸತ್ಯಪರಾಯಣರು ನೋಡು ಮನವೆ ಸತ್ಯಪರಾಯಣರ ಪದಗಳ ಬೇಡು ಬೇಡು ಬೇಡಿದಿಷ್ಟವೀವ ಯತಿಗಳ ಪ ಮಾರುತಿಯ ಬಲದಿ ದಕ್ಷಿಣ ದೇಶವ ಜೈಸಿದಾ ಸಾರಸಚ್ಛಾಸ್ತ್ರವನ್ನು ಸ್ಥಿರವಗೊಳಿಸಿದಾ ನಾರಾಯಣನ ಜಗತ್ಕಾರಣನೆನಿಸಿದಾ ಧೀರ ಸತ್ಯಸಂತುಷ್ಟ ಕುವರನೆನಿಸಿದಾ 1 ಭೀಮಸೇನ ಸನ್ಮತ ಸರಿಯಾಗಿ ನಡಿಸಿದಾ ಪ್ರೇಮದಿಂದ ರಘುಜಿಗೆ ವನಮಾಲೆ ಮುಡಿಸಿದಾ ತಾಮಸ ಮತದವರ ಮತವ ಮುರಿದು ಹಾಕಿದಾ ರಾಮನ್ನಾಮ ನುಡಿಸಿ ನುಡಿಸಿ ಹರುಷಬಡಿಸಿದಾ2 ವರ ಕದರುಂಡಲಗೀಶನ್ನೊಡೆಯ ರಾಮನ್ನ ನಿರುಪಮಾನಂದ ತೀರ್ಥ ಸುಪ್ರೇಮನ್ನ ಕರುಣದಿಂದ ಶಿಷ್ಯನಾಗಿ ಸಂದೋಹಪಾಲನ್ನ ಸ್ಮರನ ಜನಕಾ ಪಾಂಡುರಂಗನ ಸ್ಮರಿಪ ಲೋಲನ್ನ 3
--------------
ಕದರುಂಡಲಗೀಶರು
ಶ್ರೀ ಹರಿ ಸೇವೆಯ ಮಾಡುವ ಬನ್ನಿ ಮಹಾ ಮಹಿಮೆಯ ಕೊಂಡಾಡು ಬನ್ನಿ ಸಹಕಾರದ ಸುಖ ನೋಡುವ ಬನ್ನಿ ಪರದೊಳು ನಲಿದಾಡುವ ಬನ್ನಿ 1 ನೋಡುವ ಬನ್ನಿ ಸದ್ಗುರು ಪಾದ ಬೇಡುವ ಬನ್ನಿ ನಿಜ ಹಿತವಾದ ಕೂಡುವ ಬನ್ನಿ ನಿಜಬೋಧ ಮಾಡುವ ನಿಜ ಭಕ್ತಿಯು ನವವಿಧ 2 ಜಯ ಜಯಕಾರ ಮಾಡುವ ಬನ್ನಿ ಕೈಮುಗಿದು ವರ ಬೇಡುವ ಬನ್ನಿ ಮಹಿಪತಿಸ್ವಾಮಿಯ ನೋಡುವ ಬನ್ನಿ ದಯಾನಿಧಿಯ ಕೊಂಡಾಡುವ ಬನ್ನಿ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀಕರಾರ್ಚಿತ ರಂಗನಾಥ ಜಗದೇಕನಾಥ ಪ. ಪಾಕಶಾಸನವಂದ್ಯ ಪರಮ ಕಾರುಣ್ಯನಿಧಿ ಜೋಕೆಯಿಂ ಭಕ್ತರನು ರಕ್ಷಿಸಲು ಬಂದೆಯೊ ಅ.ಪ. ಸಿರಿ ಆಲದೆಲೆಯ ಮೇ- ಲೊಂದು ಬೆರಳನೆ ಚೀಪುತ ಮುಂದೆ ಶೇಷಶಯನನಾಗಿ ಬ್ರಹ್ಮನ ಪಡೆದು ಮಂದಹಾಸದಿ ನಲಿಯುತ ಇಂದಿರೆ ಸಹಿತಲಿರೆ ಭಕ್ತರೆಲ್ಲರು ಆಗ ನೋಡಲಿಲ್ಲೆಂದೆನುತ ಇಂದು ಈ ನಾಗರಾಜನ ಮಂಚವನೆ ಏರಿ ಸಿಂಧುಶಯನನೆ ಮಲಗಿದ್ಯಾ ಸ್ವಾಮಿ 1 ಅಜಗೆ ವೇದವನಿತ್ತು ಅಸುರನ್ನ ಕೊಂದು ನೀ ಭುಜಗಶಯನನೆ ಮಲಗಿದ್ಯಾ ಋಜುಗಣವಂದಿತನೆ ಬೆನ್ನಲಿ ಗಿರಿಪೊತ್ತ ಆಯಾಸದಿಂ ಮಲಗಿದ್ಯಾ ದ್ವಿಜಧ್ವಜನೆ ಭೂಮಿಯನು ಮೇಲೆತ್ತಿ ತಂದು ಸಾಕಾಗಿಲ್ಲಿ ಶಯನಿಸಿದೆಯಾ ಭಜಿಸಿದ ಬಾಲಕನ ಪಿತನೊಡನೆ ಕಾದಾಡಿ ಬಳಲಿ ನೀ ಪವಡಿಸಿದೆಯಾ ಸ್ವಾಮಿ 2 ಇಂದ್ರ ಪದವಿಗೆ ಬಂದ ಬಲೀಂದ್ರನ ನೆಲಕೊತ್ತಿ ಬಂದಿಲ್ಲಿ ಮಲಗಿಪ್ಪೆಯಾ ಕೊಂದು ಜನನಿಯ ಚಿಂತೆಯಿಂದ ಮನದಿನೊಂದು ಬಂದಿಲ್ಲಿ ಮಲಗಿಪ್ಪೆಯಾ ತಂದೆ ತಾಯಿ ಆಜ್ಞೆಯಿಂದ ಅಡವಿಯ ಅಲೆದು ಬಂದಿಲ್ಲಿ ಮಲಗಿಪ್ಪೆಯಾ ಮಂದರೋದ್ಧರ ಶ್ರೀಶ ಮಾವನ್ನ ಕೊಂದು ನೀ ಬಂದಿಲ್ಲಿ ಪವಡಿಸಿದೆಯಾ ಸ್ವಾಮಿ 3 ನಾರಿಯರ ವ್ರತ ಕೆಡಿಸಿ ನಾಚಿಕೆಯಿಂ ಬಂದು ಏರಿ ಮಂಚವÀ ಮಲಗಿದ್ಯಾ ಏರಿ ಕುದುರೆಯನು ದುಷ್ಟರ ಶಿರವ ತರಿಯುತ್ತ ಸೇರಿ ಶೇಷನ ಮಲಗಿದ್ಯಾ ಬಾರಿ ಬಾರಿಗೆ ಇಂಥ ಕಾರ್ಯಗಳ ಮಾಡಿಸಿ ಬಳಲಿಲ್ಲಿ ಮಲಗಿಪ್ಪೆಯಾ ನಾರದಾದ್ಯರ ಗಾನ ಕೇಳುತಾನಂದದಿಂ ನಿದ್ರೆಗೈಯುತ ಮಲಗಿದ್ಯಾ ಸ್ವಾಮಿ 4 ಭಕ್ತ್ರರಾಡುವ ಸಲಿಗೆ ಬಿನ್ನಪಕೆ ಬ್ಯಾಸತ್ತು ಯುಕ್ತಿಯಿಂ ಪವಡಿಸಿದೆಯಾ ಮುಕ್ತರ ಸ್ತುತಿಗೆ ನಿದ್ರೆಯು ಬಾರದೆಂತೆಂದು ಮುಕ್ತೇಶ ಇಲ್ಲಿ ಮಲಗಿದೆಯಾ ಎತ್ತ ನೋಡಲು ಮಾರ್ಗಬಿಡಳು ಕಾವೇರಿ ಎಂದು ಸೋತಿಲ್ಲಿ ಮಲಗಿಪ್ಪೆಯಾ ಚಿತ್ತಜಾಪಿತ ಸ್ವಾಮಿ ಭಕ್ತರೆಬ್ಬಿಸಲೆಂದು ಚಿತ್ತದಲಿ ಇಪ್ಪದೇನೋ ದೇವ 5 ಅಸುರರ ಕಾಟ ವೆಗ್ಗಳವಾಗೆ ಬಂದಿಲ್ಲಿ ಅಡಗಿ ನೀ ಮಲಗಿಪ್ಪೆಯಾ ಬಿಸಜನಾಭನೆ ನಿನ್ನ ಬಗೆಯರಿತು ಎಬ್ಬಿಸುವ ಬಲವಂತರನ್ಯಾರೆಲೊ ಶಶಿವದನ ಭಕ್ತರನುದ್ಧರಿಸಲೋಸುಗದಿ ಬಂದಿಲ್ಲಿ ಮಲಗಿಪ್ಪೆಯಾ ಭವ ಬಂಧನವ ಪರಿಹರಿಸಿ ಘಸನಗೊಳಿಸದಲೆ ಕಾಯೊ ಜೀಯ 6 ಏಳು ಫಣೆಯ ಸರ್ಪನ ಮೇಲೆ ಮಲಗಿ ಏಳು ಕಣ್ದೆರದು ನೋಡೋ ತಾಳಲಾರೆನೊ ನಿನ್ನ ಸೇವೆಯಗಲಿದ ದುಃಖ ಏಳು ಮನ್ನಿಸಿ ಪಾಲಿಸೊ ವ್ಯಾಳಶಯನನೆ ನಿನ್ನ ಸೇವೆಯನು ಎನ್ನಿಂದ ಲೀಲೆಯಿಂ ಸ್ವೀಕರಿಸೆಲೊ ಭಾಳ ಬೇಡುವದೇನೊ ಗೋಪಾಲಕೃಷ್ಣವಿಠ್ಠಲ ಈ ವ್ಯಾಳೆ ಎನ್ನ ಸಲಹೊ ಸ್ವಾಮಿ 7
--------------
ಅಂಬಾಬಾಯಿ
ಶ್ರೀದೇವಿ ಪ್ರಿಯ ವಿಠಲ | ಮೋದವಿತ್ತಿವನೀಗೆ ||ಕಾದುಕೋ ನೀ ದಯದಿ | ವೇದಾಂತ ವೇದ್ಯಾ ಪ ಮಾಧವನೆ ಬೇಡುತಿಹ | ಆದರದಿ ತವದಾಸ್ಯಸಾಧಿಸೋ ಇವನಲ್ಲಿ | ತದ್ಧರ್ಮ ಬಿಡದೇ ಅ.ಪ. ದುರಿತ ಗಜ ಸಿಂಹಾ 1 ಪ್ರಾಚೀನ ಕರ್ಮಾಳಿ | ಯೋಚಿಸಲು ಅಳವಲ್ಲವಾಚಾಮ ಗೋಚರನೆ | ಮೋಚ ಕೇಚ್ಛೆಯನೂಯಾಚಿಸುವೆ ಇವಗಾಗಿ | ಖೇಚರೋತ್ತಮ ಸವ್ಯಸಾಚಿ ಸಖನೇ ಹರಿಯೇ | ಸಚ್ಛಿದಾನಂದಾ 2 ಮೃಡ ಕರಿ | ಎಡರ ಪರಿಹರ್ತಾ 3 ನಿತ್ಯ ನಿತ್ಯ ನಿಗಮಾತೀತಭೃತ್ಯರೊಳು ವಾತ್ಸಲ್ಯ | ಪೊತ್ತ ನಗಧೀಶ4 ಬೋವ ನೀನಾಗುತಲಿಭಾವ ಮೈದುನಗೊಲಿದೆ | ದೇವ ದೇವೇಶಾ |ಭಾವುಕರ ಪಾಲಗುರು | ಗೋವಿಂದ ವಿಠ್ಠಲನೆತಾವಕನ ಪೊರೆಯೆಂಬ | ಭಾವ ಸಲಿಸುವುದೋ 5
--------------
ಗುರುಗೋವಿಂದವಿಠಲರು
ಶ್ರೀನಿವಾಸ-ಶ್ರೀನಿವಾಸ-ಶ್ರೀನಿವಾಸ ಪ ಶ್ರೀನಿವಾಸ ನಾನಿಹೆ ನಿನ್ನ ದಾಸ-ನಿನ್ನ ದಾಸ ನಿನ್ನದಾಸ ಅ.ಪ. ಈಶ, ತರಿಯುವೆ ಕ್ಲೇಶಾ ಕೊಡುಲೇಶ, ಕೊಡುಲೇಶ ಜೀಯ, ಸಡಗರ ದೈವ ಬಡವನು ನಾನು ಕೊಡುವುದು ಏನು, ಅಡಿಗಳನೀಡು, ಇಡುವೆನು ಮೌಳಿ, ಇಡುವೆನು ಮೌಳಿ ಘನಸುಖದಾತ, ಚಿನ್ಮಯಗಾತ್ರ, ವನರುಹ ನೇತ್ರ, ಅನಿಲನಸೂತ್ರ ಅನುದಿನ ತನುಮನನಾಥ ತನುಮನನಾಥ ಕುಂದುಗಳಳಿದು, ಕಂದನ ಸಲಹೋ ಕಂದನ ಸಲಹೋ 1 ವೇದವ್ಯಾಸ, ವಾದಾಗಾರ, ಬೋಧಿಸಿವಿದ್ಯೆ ಸಾಧನೆಗೈಸೋ ವೇಧನ ತಂದೆ ವೇಧನತಂದೆ ಸೋದರ ಪ್ರಜೆಗಳು ದೈತ್ಯರ, ಖೇದವನೀಡ್ಡೆ ಖೇದವನೀಡ್ದೆ ಧೀರವರಾಹ, ಯಾಗಶರೀರ, ಬಹುಗಂಭೀರ ಶೃತಿಗಳಸಾರ ಸಾರ ಸಾರಕೆ ಸಾರ ಕಂಭದಿಬಂದೆ ಕಂದನ ಪೊರೆದೆ ಕಂದನ ಪೊರೆದೆ 2 ಬಲಿಯೆಡೆನಿಂದ ಬೇಡುವೆನೆಂದ ಬೇಡುವೆನೆಂದ ಮೂರಡಿಯಿಂದ ಬೆಳೆಯುತ ಬಂದ ಬೆಳೆಯುತ ಬಂದ ಭೂಮಿಯು ಮುಗಿಯೆ ಶಿರವನ್ನೀಯೆ, ಭಕ್ತನಕಾಯೆ, ಬಾಗಿಲಕಾಯ್ದೆ, ಬಾಗಿಲಕಾಯ್ದೆ ವಿಪ್ರರ ಪೊರೆದ, ವರಸಮರಿಲ್ಲ ವರಸಮರಿಲ್ಲ ಭಾರ್ಗವರಾಮ, ಋಷಿಗಣಸ್ತೋಮ, ದೈತ್ಯವಿರಾಮ, ಸತ್‍ಜನಪ್ರೇಮ, ಮಂಗಳ ನಾಮ ಮಂಗಳನಾಮ 3 ತಾರಕನಾಮ, ಕಲಿಗಿವ ಭೀಮ, ದಶರಥರಾಮ, ಸೀತಾರಾಮ ಜಯಜಯರಾಮ ಜಯಜಯರಾಮ ಲಕ್ಷ್ಮಣನಣ್ಣ, ಸಗುಣಸಂಪನ್ನ, ಜಗಕಿವ ಅನ್ನ, ಬಿಡಬಿಡಬೆನ್ನ ಪ್ರಾಣನೆ ಅನ್ನ, ಕೇವಲನಣ್ಣ, ರವಿಶಶಿಕಣ್ಣ, ಸಿದ್ಧವಿದಣ್ಣ ಆಗಿಸಿ ಯಾಗ, ಸಾಗುತ ಬಂದ ಸಾಗುತ ಬಂದ ಕೊಂದನು ಖಳರ, ಮುಂದಕೆ ನಡೆದ 4 ಮುಟ್ಟಿ, ಕಳ್ಳನ ಮೆಟ್ಟಿ ರಾಜ್ಯವಕೊಟ್ಟ ಜಗಜ್ಜಟ್ಟಿಜಗಜ್ಜಟ್ಟಿ ನಿಜಮುನಿಇವನೆ, ನಿಜವಿಧಿ ಇವನೆ, ಸರ್ವೇಶ, ಸರ್ವೇಶ ಬೆಣ್ಣೆಯ ತಿಂದ ಪೋರನು ಎನಿಸಿ, ಚೋರನು ಎನಿಸಿ ಎನಿಸಿ, ಕ್ರೂರನು ಎನಿಸಿ, ನಾರೇರ ವರಿಸಿ, ಭೂರಿದನೆನಿಸಿ, ಲೀಲೆಯ ತೋರ್ದ 5 ಊರಿಗೆ ಬಂದೆ, ಜರೆಸುತ ಬಂದು, ಬಹುಮಡಿನೊಂದು, ಮರಳಿಯು ಬಂದು ಕದನಕೆ ನಿಂದ, ಬಲುಭಂಢ, ಬಲುಭಂಢ ರಾತ್ರಿಯಲೊಂದು ಸಾಗಿಸಿ ಬಂದು, ವೊಕ್ಕೂ, ತಾಮುಕುಂದ ತಾಮುಕುಂದ, ಸೂತ, ಜಗವಿಖ್ಯಾತ ಕೊಲ್ಲಿಸಿದಾತ ಸರ್ವಸಮರ್ಥ, ಸರ್ವಸಮರ್ಥ ಕಾಲದಿ ಭೇದ ಇಲ್ಲವು ಎಂದು ವಿಭುಶರಣೆಂಬೆ, ವಿಭುಶರಣೆಂಬೆ 6 ವೇದಸುವೃಂದ, ತ್ರಿಪುರರಕೊಂದ, ಬಲ್ಲ, ಎಲ್ಲವ ಬಲ್ಲ ನಿತ್ಯವಿದೆಲ್ಲ, ತಿಳಿದವರಿಲ್ಲ, ಸಾರಿಸಾಕಲ್ಯ ಜಗವನೆಲ್ಲ, ಬಿಗಿದಿಹನಲ್ಲ, ನಾಮದಿನಲ್ಲ, ನಾಮದಿನಲ್ಲ, ಆದಿಯು ಇಲ್ಲ, ಮಧ್ಯವು ಇಲ್ಲ, ಕೊನೆತಾನಿಲ್ಲ, ಖೇದವು ಇಲ್ಲ, ಮೋದವೆ ಎಲ್ಲ, ಭಗನಿಹನಲ್ಲ ಅಪಜಯವಿಲ್ಲ, ಶ್ರೀಗಿವನಲ್ಲ, ಅಪ್ರತಿಮಲ್ಲ, ಪ್ರಕೃತಿಯು ಅಲ್ಲ, ಸ್ವಾಮಿಯು ಇಲ್ಲ, ತಾನೇ ಎಲ್ಲ ಪ್ರೇರಿಪನೆಲ್ಲ, ಭಿನ್ನನು ನಲ್ಲ, ಸರ್ವೋತ್ಕøಷ್ಠ 7 ಕುಜನರ ಮುರಿಯೆ, ಎನಿಸಿ, ಧರ್ಮವನುಳುಹಿ, ಭಕ್ತರಿಗೊಲಿದು, ಪೊರೆವುದು ಸತ್ಯ, ಪೊರೆವುದು ಸತ್ಯ, ಸತ್ಯರ ಸತ್ಯ, ಸಂತರ ಮಿತ್ರ, ಪರಮ ಪವಿತ್ರ, ಲೋಕವಿಚಿತ್ರ ಸುಖಚಾರಿತ್ರ, ಮಂಗಳಗಾತ್ರ, ನಿಖಿಳಸುಭರ್ತ, ಭಕ್ತರ ಭೃತ್ಯ ನತ ಜನಪಾಲ, ವೇದಗಳೆಲ್ಲ, ಶಬ್ದಗಳೆಲ್ಲ, ಘೋಷಗಳೆಲ್ಲ ನಾಮಗಳೆಲ್ಲ, ಇವನನೆ ಎಲ್ಲ, ಪೊಗಳುವವಲ್ಲ, ಮುಕ್ತರಿಗೆಲ್ಲ, ಪ್ರಕೃತಿಯ ಸತ್ತಾ, ಸಕಲವ ನೀತ, ನೀಡುವ ದಾತ, ಸರ್ವಸುವ್ಯಾಪ್ತ, ಸರ್ವಸ್ವತಂತ್ರ8 ವೇದವ್ಯಾಸ, ಬದರೀನಿವಾಸ, ವೇದಸ ಪೀಠ, ಸಾಧಿಸುವಂತ್ಯ ಮೋದಕವೀಂದ್ರ, ಮಧ್ವನಪೋಷ, ಆದರವೀಯೊ ಪಾದಗಳಲ್ಲಿ ವೇದಗಳಳಿಯೆ, ವಿಧಿ ಮುಖಸುರರು, ಪಿಡಿದರು ಪಾದ ಮಾಧವ ನೀನು ಮೇದಿನಿಗಿತ್ತೆ ಸೂತ್ರ ಗೈದ ಮಹೇಶ, ವೇದಕುಮಿಗಿಲು, ಭಾರತಕರ್ತ, ಭಾರತ ಕರ್ತ ಛಂದದಸುಕಾಯ ಕುಡಿಸೈ ಜೀಯ ಹರಿಸುತಮಾಯ, ಹರಿಸುತಮಾಯ, ಹರಿಸುತಮಾಯ 9 ಶ್ರೀ ಇಹವಕ್ಷ, ಜ್ಞಾನಸುಪಕ್ಷ, ಸರ್ವಾಧ್ಯಕ್ಷ, ದಿವಿಜರಪಕ್ಷ ಬೃಹತೀಭಕ್ಷ, ತಾನಿರಪೇಕ್ಷ, ಆಶ್ರಿತರಕ್ಷ, ಕರುಣ ಕಟಾಕ್ಷ, ಕರುಣಿಸು ರಕ್ಷ, ನೀಜಗರಕ್ಷ, ಅಜಗರ ಶೈಯ್ಯ, ಮನ್ಮಥನಯ್ಯ ಭವಬಿಡಿಸಯ್ಯ, ಭಯಹರಿಸಯ್ಯ ದಯಮಾಡಯ್ಯ ಶರಣುಪರೇಶ ಇಚ್ಛೆ ಅನೀಶಾ, ಕಳೆಕಳೆ ಆಶಾ, ಕಡಿಕಡಿಪಾಶಾ, ನಾಬಡದಾಸ, ತೈಜಸ ಶರಣು, ಪ್ರಾಜ್ಞನೆ ಶರಣು, ತುರ್ಯನೆ ಶರಣು, ಕಪಿಲನೆ ಶರಣು ಶರಣು ಅನಂತ, ಶರಣು ಅನಂತ 10 ವೆಂಕಟರಮಣ, ಕಿಂಕರನಾನು, ಸಂಕಟಹರಿನೊ ಶಂಕರತಾತ ತಿದ್ದೊ, ಪಂಕಜನಯನ ದಡ್ಡನು ನಾನು ಭಕ್ತಿಗಡ್ಡೆಗೆಸೇರಿಸು ಪ್ರಾಣನ ಆಣೆ ರಾಜರ ಆಣೆ ಜಯಮುನಿ ಆಣೆ, ಗುರುಗಳ ಆಣೆ, ಉರಗಾದ್ರಿವಾಸ, ಪದ್ಮಜಳೀಶ, ಹರಿಸುತ ದೋಷ, ಚರಣದಿವಾಸ, ನಿರುತಲೀಯೊ, ಕರುಣವ ಸುರಿಸಿ, ಮರುತನ ಮತದ ಅರುಹುತಲೆನಗೆ, ಸಂತತ ವೆಂಬೆ, ಸಂತತವೆಂಬೆ, ಸಂತತವೆಂಬೆ ನಂದದಿ ಪಠಿಸೆ ನಂದವು ಶಾಶ್ವತ, ಜಯಮುನಿಹೃಸ್ಥ, ಮಧ್ಯರಮೇಶ ಶ್ರೀಕೃಷ್ಣವಿಠಲ ವಲಿಯುವ ಸಿದ್ಧ, ವಲಿಯುವ ಸಿದ್ಧ 11
--------------
ಕೃಷ್ಣವಿಠಲದಾಸರು
ಶ್ರೀನಿವಾಸನೆ ಗಾನಲೋಲನೆ ಸಾನುರಾಗದೊಳೀಕ್ಷಿಸೈ ಜ್ಞಾನಪೂರ್ಣನೆ ಸೂನುವೆಂಬಭಿಮಾನದಿಂ ಪರಿಪಾಲಿಸೈ ಪ. ದೀನಪಾಲಕ ದಾನವಾಂತಕ ದೈನ್ಯದಿಂ ಮೊರೆಹೊಕ್ಕೆನೈ ಜ್ಞಾನಗಮ್ಯನೆ ಭಾನುತೇಜನೆ ನೀನೇ ಗತಿಯೆಂದೆಂಬೆವೈ ಅ.ಪ. ಸಾರಸಾಕ್ಷನೆ ಶ್ರೀರಮೇಶನೆ ಸಾರಿ ಬಾ ಭವದೂರನೇ ಗಾರುಗೊಂಡೆವು ಪಾರುಗಾಣಿಸು ನೀರಜೋದ್ಭವ ಜನಕನೆ ಕಾರ್ಯಕಾರಣ ಕರ್ತೃ ನೀನಹುದಾರಯಲ್ ಜಗದೀಶನೆ ಬೇರೆ ಕಾಣೆವದಾರ ನಿನ್ನನೆÉೀ ಸಾರೆ ಬೇಡುವೆ ದೇವನೆ 1 ಸಾರ ಸಂಗ್ರಹ ಮಾಡುತೆ ಆರ್ಯಕೀರ್ತಿಯ ಸಾರಿಪಾಡುತೆ ವೀರನಾದವ ಗೈಯುತೆ ಭೂರಿ ವೈಭವವೆಲ್ಲವಂ ಧೈರ್ಯದಿಂ ನಲವೇರೆ ಕೀರ್ತಿಸಿ ಕಾರ್ಯಸಿದ್ಧಿಯ ಪೊಂದುವೋಲ್2 ನಿರ್ಗುಣಾತ್ಮನೆ ನಿರ್ವಿಕಲ್ಪನೆ ನಿತ್ಯನಿರ್ಮಲಚರಿತನೆ ಮಾರ್ಗದರ್ಶಕನಾಗಿ ನಮ್ಮೊಳಗಾವಗಂ ಕೃಪೆ ಗೈವನೇ ಸಾರ್ವಭೌಮನೆ ಸರ್ವಶಕ್ತನೆ ಶೇಷಶೈಲ ನಿವಾಸನೇ ಸಾರ್ವಕಾಲದೊಳೋವುದೆಮ್ಮನು ಪಾರ್ವತೀಪತಿ ಮಿತ್ರನೆ 3
--------------
ನಂಜನಗೂಡು ತಿರುಮಲಾಂಬಾ
ಶ್ರೀಪತೀ-ಎನಗೇನು ಗತೀ ನನಗಾಗಲಿ ನಿನ್ನಲಿ ರತೀ ಪ ಚಪಲ ತನದಿ ಬಹು ಕಪಟಭಕುತಿನಟಿಸಿ ಗುಪಿತ ದೋಷಿಯು ಆದೆ ಅ.ಪ. ಬಟ್ಟೆ ನೋಡಲು ಬಹು ಛಂಧ-ಮೇಲೆ ಘಟ್ಟಿ ಬಣ್ಣದ ಕಾವಿ ಶಾಟಿ ಹಾಗೆ ಪಟ್ಟೆಮಡಿಗಳ ಭಾರೀ ಥಳಕೊ-ಬಹಳ ದಟ್ಟ ತುಳಸೀಸರಗಳ ಹೊಳಪೂ ಆಹಾ ಸೃಷ್ಠಿಗೊಡೆಯನೆ ಎನ್ನ ಕೆಟ್ಟ ತನಗಳನ್ನು ಎಷ್ಟೆಂದು ಬಣ್ಣಿಪೆ ನಿಟ್ಟ ನೆನೆಯದೆ ಪರರ ದೃಷ್ಟಿನೋಡುತ ಹಿಗ್ಗಿ ಅಟ್ಟಹಾಸದಿ ಕುಣಿದು ಮಾನವ ನನಗೇ 1 ವೇದ ವಾದಗಳೇನು ಕಾಣೆ-ಶುದ್ಧ ಸಾಧು ಕರ್ಮಗಳೊಂದು ಇಲ್ಲ-ಜನರ ಮೋದಗೋಸುಗವೇನೆ ಎಲ್ಲ_ಕಾಮ ಕ್ರೋಧವ ನಿಬಿಡಿತೇನೇ ಬಿಚ್ಚೆಹೃದಯಾ ಆಹಾ ಮಧ್ವರಾಯರ ಶಾಸ್ತ್ರ ಗ್ರಂಥ ಸಹ ತಿಳಿಯದೆಲೆ ಸಿದ್ಧ ಸಾಧಕನಂತೆ ಸಾಧುಲಿಂಗವ ತೋರಿ ಮುಗ್ಧಗೈಯ್ಯುತ ಮಂದಿ ಮೆದ್ದು ಪಕ್ವಾನ್ನಗಳ ಗೆದ್ದುಕೊಳ್ಳುವೆ ಬಹಳ ದಕ್ಷಿಣೆ ಬಹುಮಾನ 2 ನೇಮನಿಷ್ಠೆಗಳಾಟ ಹೊರಗೆ-ಗೃಹದಿ ಪ್ರೇಮವಿಲಾಸ ಆಟ ಕೂಟಜನ ಸ್ತೋಮರೆಲ್ಲವ ನುಡಿವ ನೀತಿ ಖ್ಯಾತಿ ಕಾಮುಕನಾಗಿ ಚರಿಸಿದೆ ಜಗದೀ ಆಹಾ ಹೇಮದಾಸೆಗೆ ಸೂಳೆ ಪ್ರೇಮವ ತೋರ್ಪಂತೆ ಕಾಮಿತಪ್ರದ ನಿನ್ನ ನಾಮ ಸವಿಯನುಣ್ಣದೆ ತಾಮಸರಿಗೆ ಉಪದೇಶ ನೀಡುತ ಸತ್ಯ- ಭಾಮೆಯರಸ ನಿನಗೆ ದೂರನಾದೆನಲ್ಲಾ 3 ಹಾಡಿಹಾಡುವೆ ಎತ್ತಿ ಸುತ್ತ ಜನರು ನೋಡಿ ಹಿಗ್ಗುತ ಬಾಪು ಬಾಪು ನುಡಿಗೆ ಹಾಡಿನಲ್ಲಿಹ ಸವಿಯುಣ್ಣ ದೇನೆ ಆಡಿ ಆಡಿಪೆ ಶಿರವ ಜ್ಞಾನಿಯಂತೆ ಆಹಾ ಕೇಡು ಚಿಂತಿಸಿ ಪರರ ಸ್ವಾರ್ಥಗೋಸುಗನಿತ್ಯ ಕಾಡಿ ಬೇಡುತ ಜನರ ದೂಡುತಿಹೆ ಸಂಸಾರ ಪ್ರೌಢ ಭಕ್ತರ ಗೋಷ್ಠಿಕೂಡಿ ಭಜಿಸದ ಎನ್ನ ಗಾಢ ಡಂಭಕೆ ಜಗದಿ ಈಡು ಕಾಣಿಸು ಸ್ವಾಮಿ4 ಭಾರಿ ಶಾಲುಗಳನ್ನೆ ಹೊದ್ದು-ನಿತ್ಯ ಕೇರಿಕೇರಿ ಪುರಾಣಗಳನ್ನು ಮೆದ್ದು-ಹಾರಿ ಹಾರುತ ತತ್ವರಾಶಿ ನುಡಿದು-ಊರು ಜ- ನರಮುಂದೆ ಪಾಂಡಿತ್ಯ ತೋರ್ಪೆ ಆಹಾ ತೋರಿ ತೋರುವೆ ಪರಮವೈರಾಗ್ಯ ಭಕ್ತಿಯ ದೂರಿ ದೂಡುವೆ ಪರರ ಹುಳುಕುಗಳನು ಎತ್ತಿ ಪಾರುಗಾಣದ ಕರುಣ ತೋರದಿದ್ದರೆ ಇನ್ನು 5 ಗುಡಿಗೆ ಹೋಗುವೆ ನಾನು-ನಿತ್ಯ ಅಲ್ಲಿ ಬೆಡಗು ಸ್ತ್ರೀಯರ ಹುಡುಕುವುದೇನೆ ಕೃತ್ಯ ದೃಢಭಕುತಿಯನು ಮಾಡಲೊಲ್ಲೆ ಸತ್ಯ-ನ ಮಡದಿ ಮಕ್ಕಳಿಗಿಲ್ಲ ಭೃತ್ಯಾನುಭೃತ್ಯಾ ಆಹಾ ಹುಡುಕೀ ನೋಡಿದಾಗ್ಯೂ ವಿರಕ್ತಿ ಭಕ್ತಿಗಳಿಲ್ಲ ಬಿಡಲು ಪೊರೆಯೆ ಪುರಾಣಶಾಸ್ತ್ರಗಳನ್ನು ನಿತ್ಯ ಎನ್ನ ಅನಾದಿ ನೀ ಕಲಿಸದಿದ್ದರೆ ಈಗ 6 ದೊಡ್ಡ ಪಂಡಿತ ನಾನೆಂಬ ಹೆಮ್ಮೆ-ಶುದ್ಧ ದಡ್ಡನೆಂಬುದ ಬಲ್ಲೆ ಮನದಿ-ಹಾಗೂ ಅಡ್ಡ ಬೀಳೆನು ಭಕ್ತ ಗಣಕೆ ಸುಳ್ಳು ವೊಡ್ಡುತವರನು ಹಳಿದೂ-ಕುದಿದೇ ಮನದೀ ಆಹಾ ದುಡ್ಡುಗೋಸುಗ ಬಹಳ ದೊಡ್ಡ ದಾಸನು ಎನಿಸೀ ಹೆಡ್ಡಮಂದಿಯ ಮುಂದೆ ದೊಡ್ಡ ಭಾಷಣ ಮಾಳ್ವೆ ಗುಡ್ಡದೊಡೆಯನೆ ಭಕ್ತಜಿಡ್ಡುಲೇಶವು ಕಾಣೆ ದೊಡ್ಡ ನಾಮವ ಹಾಕಿ ಸಡ್ಡೆ ಮಾಡದೆ ತಿರಿವ 7 ಕಚ್ಚಿ ಬಿಡದಿಹ ತುಚ್ಛ ಕಲಿಯು-ಬಹಳ ಮೆಚ್ಚಿ ಬಂದಿಹ ನವನು ಬಿಡುವನೇನು ಇಚ್ಛೆ ನನ್ನದು ನಡೆಯದೇ ನೊಂದು ತುಚ್ಛ ವಿಷಯದಿ ಸೆಳೆದು ಸೆಳೆಯುತಿಹನು ಆಹಾ ಇಚ್ಛೆಯಿಂದಲಿ ಜಗವ ಸೃಜಿಸಿ ಪಾಲಿಪಲೀಲೆ ಹಚ್ಚಿಕೊಂಡಿಹ ನಿನಗೆ ನನ್ನ ಪಾಲಿಪುದೇನು ಹೆಚ್ಚು ಕಾರ್ಯವೆ ಜೀಯ ಮುಚ್ಚಿಕೊಂಡಹ ನಿನ್ನ ಸ್ವಚ್ಛ ಬಿಂಬವ ತೊರಿ ಮೆಚ್ಚಿ ಕೊಡದಿರೆ ಜ್ಞಾನ 8 ಶ್ವಾಸಮತದಲಿ ಜನ್ಮ ವಿತ್ತೆ-ವಿಜಯ ದಾಸರ ಪ್ರಿಯ ಮೋಹನ್ನ ಪರಂಪರೆಯ ದಾಸನೆನಿಸಿ ಯೆನ್ನ ಮೆರೆಸಿ ಹೀಗೆ ದೋಷಿಗೈವುದು ಥರವೆ ಶ್ರೀಭಕ್ತಪ್ರಿಯ ಆಹಾ ವಾಸುದೇವನೆ ತುರ್ಯಲೇಸು ದೃಷ್ಟಿಯ ಬೀರೆ ನಾಶವಾಗದೆ ದೋಷ ಭಾಸವಾಗದೆ ಜ್ಞಾನ ಕಾಸುಬೀಡೆನು ಹಿರಿಯ ದಾಸರ ಗುಣ ನೋಡಿ ಲೇಸು ನೀಡೆಂತೆಂಬೆ ಶ್ರೀಕೃಷ್ಣವಿಠಲಾ9
--------------
ಕೃಷ್ಣವಿಠಲದಾಸರು