ಒಟ್ಟು 10452 ಕಡೆಗಳಲ್ಲಿ , 133 ದಾಸರು , 5883 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆವ ಸುಕೃತವುಈ ನಾರಿಯರು ಈಪರಿ ಸುಖಿಸುವುದು ಪ. ಪಂಕಜನಾಭಗೆ ಶಂಖೋದಕವೆತ್ತಿಅಂಕದಲ್ಲಿಹೊ ಲಕುಮಿಯಅಂಕದಲ್ಲಿಹೊ ಲಕುಮಿಯ ನಲ್ಲಗೆಅಸಂಖ್ಯಸ್ತೋತ್ರವನೆ ಸ್ತುತಿ ಸೋರು 1 ದುರ್ಗಾದೇವಿಯ ರಮಣ ಭಾರ್ಗವಿರಾಮಗೆಶೀಘ್ರದಿ ಕೊಟ್ಟು ಕವಳವಶೀಘ್ರದಿ ಕೊಟ್ಟು ಕವಳವ ಗೋಗ್ರಾಸವಸ್ವರ್ಧುನಿ ಜನಕ ಕುಳಿತಾನೆ 2 ಹರಿವಾಣ ಇದ್ದಲ್ಲೆರಂಗಯ್ಯ ಬಂದು ಕುಳಿತಾನೆ 3 ವೀತದೋಷನ ಮುಂದೆ ಮಾತಿನಮಧುರೆಯರು ಜಾತಿ ಮಾಣಿಕದ ಸಮೆಜಾತಿ ಮಾಣಿಕದ ಸಮೆ ತಂದಿಟ್ಟುಜ್ಯೋತಿಗಳ ಹಚ್ಚಿ ಎಡಬಲ 4 ಮಂದಗಮನೆಯರೆಲ್ಲ ಮಿಂದು ಮಡಿಯನುಟ್ಟುಇಂದಿರಾಪತಿಯ ಎಲೆಯಲಿಇಂದಿರಾಪತಿಯ ಎಲೆಯಲಿ ಬಡಿಸೋರುಕುಂದದೆ ಕೊಟ್ಟ ಸೌಭಾಗ್ಯ5 ಬಂದ ಜನರೆಲ್ಲ ಮಿಂದು ಮಡಿಯನುಟ್ಟುಇಂದಿರಾಪತಿಯ ಜೊತೆಯಾಗಿಇಂದಿರಾಪತಿಯ ಜೊತೆಯಾಗಿ ಊಟಕ್ಕೆಬಂದು ಕುಳಿತವರು ಕಡೆಯಿಲ್ಲ 6 ಉಪ್ಪು ಉಪ್ಪಿನಕಾಯಿ ಹಪ್ಪಳ ಸಂಡಿಗೆಒಪ್ಪುವ ಬುತ್ತಿ ಕಲಸನ್ನಒಪ್ಪುವ ಬುತ್ತಿ ಕಲಸನ್ನ ಬಡಿಸೋರುಸುಪ್ಪಾಣಿ ಮುತ್ತು ಉದುರುತ7 ಹೊನ್ನಹರಿವಾಣದಿ ಅನ್ನಭಕ್ಷ್ಯವ ತುಂಬಿಚೆನ್ನರಾಮೇಶನ ಎಡೆಯೊಳುಚೆನ್ನರಾಮೇಶನ ಎಡೆಯೊಳು ಬಡಿಸೋರುರನ್ನ ಮುತ್ತುಗಳು ಉದುರುತ8
--------------
ಗಲಗಲಿಅವ್ವನವರು
ಆವದೆನೆಗೆ ಪ್ರೀತಿ ಎಂದೆಂಬಿಯಾ | ದೇವ ದೇವಕಿ ತನುಜ ಬಿನ್ನಪವ ಮಾಡುವೆನೊ ಪ ದೊರೆತನವಲ್ಲೆ ಧನವಲ್ಲೆ ಒಬ್ಬರ ಬಳಿಯ | ಹಿರಿಯತನವಲ್ಲೆ ಹಿಗ್ಗುವುದು ವಲ್ಲೆ | ಹರಿ ನಿನ್ನ ಚರಣಗಳ ಸ್ಮರಿಸುವ ಭಾಗವತರ | ಅರಮನೆಯ ಬೀದಿಯಲಿ ಹೊರಳುವ ಭಾಗ್ಯವ ಕೊಡು 1 ಪಂಡಿತನಾಗಲಿವಲ್ಲೆ ಫಲವಲ್ಲೆ ನಾವು ಪ್ರ | ಚಂಡ ಯೋಗಗಳೊಲ್ಲೆ ಯಾಗವಲ್ಲೆ | ಥಂಡ ಥÀಂಡದಿ ನಿನ್ನ ಕೊಂಡಾಡುವರ ಬಳಿಯ | ಕೊಂಡರಾಗಿಪ್ಪವರ ಸೇರುವ ಭಾಗ್ಯವ ಕೊಡು 2 ಅಂದಣವೇರಲಿವಲ್ಲೆ ಆತ್ಮಸುಖವಲ್ಲೆ ನಾ | ನೆಂದು ಪೇಳುವರ ಸಂಗತಿಯವಲ್ಲೆ | ನಿತ್ಯ | ನಿಂದಂಗಳದೊಳಗೆ ಯಿಪ್ಪ ಭಾಗ್ಯವ ಕೊಡು 3 ರಸ ರಸಾಯನ ವಲ್ಲೆ ಹಸನಾದ ಪಟ್ಟಿ ರಂ | ಜಿಸುವದುವಲ್ಲೆ ರಾಗಗಳುವಲ್ಲೆ | ವಸುದೇವ ಸುತ ನಿನ್ನ ಪೆಸರು ಎಣಿಸುವವರ | ಶಿಶುವಾಗಿ ಬದಕುವ ಕುಶಲ ಭಾಗ್ಯವ ಕೊಡು 4 ಪುಣ್ಯ ತೀರ್ಥಗಳು ನಿನ್ನ ಮನಸಿಗೆ ಬಂದ | ವನ್ನು ಮಾಡಿಸು ಬಿಡದೆ ಮನ್ನಿಸೆನ್ನ | ಚನ್ನ ಮೂರುತಿ ಚೆನ್ನ ವಿಜಯವಿಠ್ಠಲರೇಯ | ಎನ್ನ ವಂದನೆಯನ್ನು ಮುನ್ನು ನೀ ಕೈಕೊಂಡು5
--------------
ವಿಜಯದಾಸ
ಆವದೇವರಿಗುಂಟೀ ವೈಭವ ಪ ಸಾರ್ವಭೌಮ ನೀನೆ ಸಕಲ ಭಾವಜನಯ್ಯ ಅ.ಪ ಸಿರಿಯರೆಂಟುಮಂದಿ ನಿನಗೆ ಅರಸಿಯರು ಕರುಣಶರಧಿ ಸುರರು ಮೂವತ್ತು ಮೂರು ಕೋಟಿ ಚರಣಸೇವಕರಯ್ಯ ಹರಿಯೆ1 ಅನುದಿನವು ಎಡೆಬಿಡದೆ ಮನು ಸುಜನ ಸಂತತಿ ಘನವೇದಘೋಷದಿಂದ ನೆನೆದು ಪೂಜಿಪರಪರಿಮಿತ ಲೀಲೆ 2 ಕೋಟಿಸೂರ್ಯಪ್ರಕಾಶ ನಿನ್ನ ಆಟ ಬಲ್ಲವರಾರು ಜಗದಿ ಆಟವಾಡುವಿ ಅಗಮ್ಯಚರಿತ ಸಾಟಿಯಿಲ್ಲದೆ ಧನವ ಕಲಸಿ 3 ಕರೆಸಿ ಅಸಮಭಕುತ ಜನರ ವರವ ನೀಡಿ ಮುಡಿಪುಗೊಂಡು ಮೆರೆವಿ ಪರಮ ಉತ್ಸವದೊಡನೆ ಗಿರಿಯ ಭೂವೈಕುಂಠಮೆನಿಸಿ 4 ಕಿಂಕರ ಜನರ ಪೊರೆಯಲೋಸುಗ ವೆಂಕಟಾದ್ರಿಯಲ್ಲಿ ನಿಂದಿ ವೆಂಕಟೇಶ ಕಿಂಕರಜನರ ಸಂಕಟಹರ ಶ್ರೀರಾಮಪ್ರಭೋ 5
--------------
ರಾಮದಾಸರು
ಆವಧನ್ಯರೋ ಸುಖಿಸುವರು ಗೋಕುಲದವರು | ಗೋವಿಂದನೊಳು ಕ್ರೀಡಿಸುವರು ಗೋಗೋವಳರು ಧ್ರುವ ಭಾವಿಸೆ ಮಖದಲ್ಲಿದಾವ ಸಾರಾಯ ಕೊಂಬಾ | ದೇವಗೋಪಾಲಕರ ಕರಿಸಿ | ಬುತ್ತಿಯ ತರಿಸಿ | ಸವಿಸವಿದುಂಬುವರ ವೆರಸಿ | ಕೈಯೊಳಿರಿಸಿ | ಅವರತನ್ನಂಜಲೆಂಬ ದೂರಿಸಿ ನಲುವಾದರಿಸಿ 1 ಸಿರಿರಮಣಿಯ ಕೂಡ ಸರಸದಿ ಕುಚವಿಡಿದಾ | ಕರದಿನವೀನ ತೃಣವಾ ಕಡಿದು ಕವಳವಿಡಿದು | ಕರೆದು ಆವಿನ ಪೆಸರಾ ನುಡಿದು ಕುಡವಾವಿ ನಡೆದು | ಕರುಣದಿ ಚಪ್ಪರಿಸುವಾ ಜಡಿದು ಮೈಯನಡದು 2 ಅನಂದಿನ ಧ್ಯಾಯಿಸುವಾ ಮುನಿಮನದಲ್ಲಿ ಹೊಳೆಯಾ | ಚಿನುಮಯ ಗೋಪಿಯರಾವಳಿಯಾ ಯೋದ್ಧುಳಿಯಾ | ಅನುವಾಗಿದೋವರ್ತನಕಳಿಯಾ ವರ ಬಳಿಯಾ | ಘನಮಹಿಪತಿ ಸ್ವಾಮಿ ನೆಲಿಯಾ ಬೊಮ್ಮತಾ ತಿಳಿಯಾ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಆವಬಂಧುಗಳೆಲೋ ಜೀವ ವಿಚಾರಿಸೋ ಕಾವ ಸಮರ್ಥದೇವ ಹರಿಯಲ್ಲದೆ ಪ ಮಾಯಮೋಹವ ನೀಗಿ ಕಾಯಶುದ್ಧಲಿ ಮನ ಪಾದ ದಿವ್ಯಭಕ್ತಿಲಿ ಭಜಿಸೊ ಅ.ಪ ಜನನಿ ಬಂದಹಳೆಂಬೆ ಜನನಿರ್ದಳಾಧ್ರುವಗೆ ಜನಕನ ತೊಡೆಯಿಂದ ಕನಿಕರಿಲ್ಲದೆ ಮಲ- ಜನನಿ ನೂಕಲು ಕಂದ ವನಕ್ಹೊರಟು ಪೋಗಲು ಜನನಿ ಸಲಹಿದಳೆನೋ ವನಜಾಕ್ಷನಲ್ಲದೆ 1 ಸತಿಹಿತದವಳೆನುವೆ ಸತಿಯಿರ್ದು ಸುಗ್ರೀವ ಖತಿಪಟ್ಟಾಗ್ರಜನಿಂ ವ್ಯಥೆಯಿಂದುಸುರ ಬಿಡಲು ಸತಿಬಂದು ಪತಿಯನ್ನು ಹಿತದಿ ಕರೆದೊಯ್ದಳೆ ಹಿತದ ಬಂಧುಗಳಿವರೇ ಕ್ಷಿತಿಪತಿಯಲ್ಲದೆ 2 ಸುತರ ಬಲವಿಹುದೆನುವೆ ಸುತರತಿ ಬಲಾನ್ವಿತರು ಜಿತಮಾರನಿಗಿರೆ ಉರಿಹಸ್ತ ವರವಿತ್ತು ಗತಿದೋರದಿರುತಿರೆ ಸುತರು ನೆರವಾದರೆ ಗತಿ ರಮಾಪತಿಯೆನೆ ಹಿತದಿಂ ಮೊರೆಕಾಯ್ದ 3 ಬಂಧುಗಳತಿಶಯದ ವೃಂದನೆರೆದು ಇರ ಲಂದು ಕರಿಮಕರಿಕೆಯಿಂದ ಬಂಧನ ಪಡಲ ವಂದು ಬೆಂಬಲಗೊಟ್ಟು ಬಂಧನವ ಬಿಡಿಸಿದುವೆ ತಂದೆಯಾ ಶ್ರಿ ಮುಕ್ಕುಂದನಲ್ಲದಲೆ 4 ಹರಿಯೆ ಪರದೈವವೋ ಹರಿಯೆ ಪರಲೋಕವು ಹರಿಯೇ ಸ್ಥಿರಸುಖವು ಹರಿಯೆ ವರ ಮುಕ್ತಿಯೋ ಹರಿಯೆಂದು ಅಜಮಿಳ ನರಕಯಾತನೆ ಗೆದ್ದ ಪಾದ 5
--------------
ರಾಮದಾಸರು
ಆವರೀತಿಲಿ ಎನ್ನ ಕಾವದೇವರು ನೀನಿ ನ್ನಾವ ದೈವದ ಬಲವು ನಾನೊಲ್ಲೆ ಸ್ವಾಮಿ ಪ ಆವರೀತಿಲಿ ಬಿಡದೆ ನೀ ಎನ್ನ ಕಾಯೊ ಭಕ್ತರ ಜೀವದರಸನೆ ಭಾವಜಪಿತ ನಿನ್ನ ಬಿಟ್ಟ ನ್ನ್ಯಾವ ದೇವರು ಇಲ್ಲ ಎನಗೆ ಅ.ಪ ಕುಸುಮಾಕ್ಷ ತವಧ್ಯಾನ ನಿಶಿದಿವದೊಳು ಬಿಡದೆ ಹಸನಾಗಿ ಭಜಿಪಂಥ ಕುಶಲಮತಿ ನೀಡಿ ಪುಸಿಯ ಸಂಸಾರದ್ವೆಸನವಳುಕಿಸಿ ಅಸಮ ಸಂತಸಸುಖವ ಕರುಣಿಸಿ ಅಸುವುಪೋದರು ಪುಸಿಯನಾಡದ ಸುಶೀಲ ಮನವಿತ್ತು ಪೋಷಿಸಭವ 1 ಬಿಡದೆಕಾಡುವ ಎನ್ನ ಕಡು ಜಡಮತಿಯನ್ನು ಕಡಿದೊಡನೆ ನುಡಿಯಂತೆ ನಡೆಯನೆನ್ನೊಡಲಿಗೆ ಗಡನೆ ಸ್ಥಿರಮಾಡಿ ಎಡರು ತೊಡರಿನ ಜಡರಿನೊಳಗಿಂದ ಕಡೆಗೆ ನಿಲ್ಲಿಸಿ ಒಡೆಯ ನಿನ್ನ ಅಡಿದೃಢವನಿತ್ತು ಪಿಡಿದು ನೀ ಎನ್ನ ಬಿಡದೆ ಸಲಹೊ 2 ರತಿಪತಿಪಿತ ನೀನೆ ಗತಿಯೆಂಬ ಸಿದ್ಧಾಂತ ನುತಿಯ ಮಂತ್ರವನೆನಗೆ ಹಿತದಿಂ ಪಾಲಿಸು ಸತತ ನಿನ್ನನು ಸ್ತುತಿಪ ಭಕ್ತರ ಹಿತದ ದರುಶನ ಪ್ರಥಮವಿತ್ತೆನ್ನ ಗತಿಸದಂಥ ನಿಜಸ್ಥಿತಿಯ ಸಂಪದ ವಿತ್ತು ರಕ್ಷಿಸೋ ಶ್ರೀರಾಮ ಪ್ರಭುವೆ 3
--------------
ರಾಮದಾಸರು
ಆಶೆಯ ಬಿಡಿಸಿದ್ಯೋ ಎನ್ನಾ ಮುಂದೆ ವಾಸವಾಗದಂತೆ ಕಾಯೋ ಮೋಹನ್ನಾ ವಾಸುದೇವನೆ ನಿನ್ನ ಸ್ಮರಣೆಯೊಳಗೆ ಮನ ಸೂಸದಂತೆ ಸ್ಥಿರ ನಿಜದಲ್ಲಿ ನಿಲಿಸಯ್ಯಾ ಪ ಬೆಂಬಿಡದೆಲೆ ನಿಜದರಿವನ್ನು ಕೊಡುವಾ ಕುಂಭಿಣಿಯೊಳಗೆಲ್ಲಾ ನೀನಲ್ಲದೆ ಎನ್ನಾ ನಂಬಿಗೆ ಕೊಡುವವರ್ಯಾರೋ ನಾರಾಯಣಾ 1 ಬೆಂದೆನು ನಾ ಭವದೊಳಗೆ ಎನ್ನಾ ತಂದೆ ನೀ ಕಾಯೋ ನಿಜಪದದೊಳಗೆ ಹಿಂದಿನ ಪ್ರಾರಬ್ಧ ಬವಣೆಯ ತೀರಿಸಿ ಮುಂದೆ ನೀ ಸಲಹೊ ಪರಮಪುರುಷನೆ ಹರಿ 2 ವಾಸನೆ ಬಂಧವೇ ಜೀವಾ ನಿ ರ್ವಾಸನೆಯನು ಕೊಟ್ಟು ಸಲಹೊ ಮಾಧವಾ ಶೇಷಶಯನನೆ ನಿಜ ಧ್ಯಾನದೊಳಿರಿಸೆನ್ನಾ ಆಶೆಯನು ಸಲಿಸಯ್ಯಾ ಮುರಾರಿ 3 ಅನಂತ ಮಹಿಮಾ ಮೇಘಶ್ಯಾಮಾ ನಿಶ್ಚಿಂತ ನಿಜ ಶಾಂತಿ ಸ್ವಸುಖವೀವಾ ನಂತಪರಾಧವ ಕ್ಷಮಿಸೆನ್ನಾ ಗುರುವೇ 4
--------------
ಶಾಂತಿಬಾಯಿ
ಆಶ್ರಮ ಧರ್ಮ ನಾಲ್ಕು ಉಪದ್ರಆಶ್ರಮ ಧರ್ಮ ಬಿಡೆ ಅವ ಪಟ್ಟ ಬದ್ಧ ಪ ಬ್ರಹ್ಮಚಾರಿಯು ಆಗೆ ಕರ್ಮದ ಉಪದ್ರಬ್ರಹ್ಮಚರ್ಯವು ಹೋಗೆ ಸ್ತ್ರೀಯ ಉಪದ್ರಸುಮ್ಮಗೆ ವಾನಪ್ರಸ್ಥನಾಗೆ ಬೆಂಕಿ ಉಪದ್ರಹಮ್ಮಳಿದು ಸಂನ್ಯಾಸಿಯಾಗೆ ಸ್ನಾನದುಪದ್ರ 1 ಗೃಹಸ್ಥನಾಗೆ ವ್ರತಗಳ ಉಪದ್ರಸತತ ಸಂಧ್ಯಾ ಜಪತಪದ ಉಪದ್ರಮಿತಿ ಇಲ್ಲದ ನಾನಾ ಕರ್ಮಗಳ ಉಪದ್ರಸತತ ಶುಚಿ ಅಶುಚಿ ಎಂಬುದರ ಉಪದ್ರ 2 ಆವ ಆಶ್ರಮದಲಿರೆ ಆವುದೊಂದು ಉಪದ್ರಆವ ಆಶ್ರಮದಿ ಉಪದ್ರವೇ ಅದು ಹೋಗದುಆವಾಶ್ರಮಗಳಿಗೆ ಬೇರೆ ಇರೆ ಸುಖಿಯಿಹದೇವ ಚಿದಾನಂದ ಮಹ ಸರ್ವಮಹೋಪದ್ರವ ಪರಿಹಾರವಯ್ಯ 3
--------------
ಚಿದಾನಂದ ಅವಧೂತರು
ಆಸೆಯೆನಗಿಲ್ಲ ಸರ್ವೇಶ ನಿನಬಿಟ್ಟು ವಾಸುಕೀಶಯನ ಜಗದೀಶ ನಿನ್ಹೊರತೆನಗೆ ಪ ನಿಗಮದಾಸೆಗೆ ಹೋಗಿ ನೀರೊಳಗೆ ಮುಳುಗಿ ನೀ ಸುಧೆಯ ಆಸೆಗೆ ಹೋಗಿ ಸುರರ ಕೈ ಸಿಕ್ಕು ನೆಲದ ಆಸೆಗೆ ಮಣ್ಣು ಬಗೆದÀು ಶ್ರಮವನೆ ಬಟ್ಟು ಕೊರಳ ಹಾರದ ಆಸೆ(ಗೆ) ಕರುಳ ಬಗೆವೊದೆ ಕಷ್ಟ1 ಭೂಮಿಯಲಿ ಭಾಳಾಸೆ ಭುವನ ವ್ಯಾಪಿಸಿಕೊಂಡು ಕಾಮಧೇನಿ (ನುವಿ?)ನ ಆಸೆ ಕಾರ್ತವೀರ್ಯಾರ್ಜುನನ ಕೊಂದು ಸಿರಿಯ ಸೌಂದರ್ಯದಾಸೆ ಶಿವನೆಬಲ್ಲನು ನೆಗಹಿ ಉದರದಾಸೆಗೆ ಅಸುರೆಜಗಿದು ವಿಷಮೊಲೆನುಂಡಿ 2 ತ್ರಿಪುರ ಸತಿಯರ ಆಸೆಗ್ವಸನವಿಲ್ಲದೆ ತಿರುಗಿ ಅಶ್ವದಲಿ ಆಸೆ ಅತಿ ಕಲಿಭಂಜನನೆನಿಸಿ ಈಸುಪರಿ ಆಸೆ ಭೀಮೇಶ ಕೃಷ್ಣಗೆ ಇರಲು ನಾಶರಹಿತನೆ ನಿನ್ನ ನಾಮವಿದ್ದರೆ ಸಾಕು 3
--------------
ಹರಪನಹಳ್ಳಿಭೀಮವ್ವ
ಆಸ್ಥಾನ ಮಾಡೋಣ ಆತ್ಮ ವಿಚಾರ ದಾಸ್ತಾನ ಮಾಡೋಣ ಪ ಸ್ವಸ್ತಿ ಆಯುಷ್ಕೀರ್ತಿ ಧರ್ಮಯಶೋಕಾಮ ಹಸ್ತಿವರದನಾಧೀನವೆಂದು ನಾವೆಲ್ಲಅ.ಪ ಶಮದಮಶ್ಯಾಂತಿ ವಿರಕ್ತ್ಯುಪರತಿಯಂಬೋ ಕ್ರಮಮಂತ್ರಿಗಳು ವಿಜ್ಞಾನಿ ಪ್ರಧಾನಿಯು ಸಮಾಧಿಕ ಶೂನ್ಯವೆಂಬುವ ರಾಜನು ವಿಷಯ ಭ್ರಮೆ ಎಂಬೊ ಕಟ್ಟು ವಿಚಾರಣೆಯಾಗುವ 1 ಸತ್ಕರ್ಮವೆಂಬೊ ಭೂಮಿಯನು ಸಾಧುಗಳೆಂಬ ವಕ್ಕಲುಗಳಿಗಿತ್ತು ಸಿದ್ಧಾಯವ ತೆಗೆದು ಭಕ್ತಿ ಜ್ಞಾನ ವೈರಾಗ್ಯ ಬಂಡಿಗಳಲಿ ತುಂಬಿ ಭಗವಂತನೆಂಬ ರಾಜಗೆ ಒಪ್ಪಿಸುವಂಥ 2 ಸ್ವಾಮಿ ಭೃತ್ಯನ್ಯಾಯ ಎಂಬೋ ಡಂಗುರವನು ಹೊಯಿಸಿ ತಾಮಸರಿಗೆ ನಿತ್ಯದಂಡನೆಯನು ವಿಧಿಸಿ ಕಾಮಕ್ರೋಧಗಳೆಂಬೋ ಖಳರ ಶಿಕ್ಷಿಸಿ ಗುರು- ರಾಮವಿಠಲನ ಕರುಣವೆಂಬೋ ಸಂಬಳ ಪಡೆದು 3
--------------
ಗುರುರಾಮವಿಠಲ
ಆಳ್ವಾರಾಚಾರ್ಯ ಸ್ತುತಿಗಳು 1. ವಿಶ್ವಕ್ಸೇನ ಪ್ರಾರ್ಥನೆ ಶ್ರೀನಾಥಜ್ಞಾಪ್ರಕಾರ ನಡೆಯುವ ಸೂತ್ರವತೀರಮಣ ಮಾನಿತ ಪ್ರದಾನ ಮಂತ್ರೀ ಪೂಜಿಪೆ ವಿಘ್ನೇಶಾ ನಮಿಪೆ ಪ ಬಿಳಿಯುಡೆ ತುಂಬಿದ ತಿಂಗಳ ಬೆಳಗಾ ತೊಳಗುವ ನಾಲಕು ತೋಳುಗಳ ಒಲಿದಿಹ ನಗೆಮೋಗ ವಿಷ್ಣು ನೆನೆವೆ ಸುಲಭದಿ ಕಾರ್ಯವ ಗೈಸುವನೆ1 ದ್ವಿರದವಕ್ತ್ರತಾ ಮೊದಲಾಗಿರುವ ಪರಿಜನ ನೂರ್ವರಿಂದೊಪ್ಪಿರುವೇ ಪರಿಪರಿ ತಡೆಗಳ ತರಿದೋಡಿಸುತ ಪೊರೆ ವಿಶ್ವಕ್ಸೇನಾಶ್ರಿತ ನಾನು 2 ಬಿಡುಗಣ್ಣರ ಬೆಡಗಿನ ಒಡಲುಳ್ಳ ಕುಡಿನೋಟದ ತಾವರೆಗಣ್ಣ ಪಿಡಿದಹ ಶಂಖ ಚಕ್ರ ಗದಾಯುಧ ಒಡೆಯ ಮುಕುಂದ ದ್ವಾರನಿಲಯನೇ 3 ಬೊಮ್ಮ ಭವಸುರರು ನಯದಿಂ ಮೊದಲಾರಾಧಿಪರು ಶುಭ ಫಲದಾಯಕ
--------------
ಶಾಮಶರ್ಮರು
ಆಳ್ವಾರಾಚಾರ್ಯಸ್ತುತಿಗಳು 1. ಶ್ರೀ ಆಂಜನೇಯ ಸ್ತುತಿಗಳು 155 ನಮೋಸ್ತು ಹನುಮಾನ್ ನಮೋಸ್ತು ಹನುಮಾನ್ ನಮೋಸ್ತು ಹನುಮಾನ್ ನಮೋ ನಮೋ ಪ ನಮೋಸ್ತು ಧೃತಿಮಾನ್ ನಮೋಸ್ತು ಧೃತಿಮಾನ್ ನಮೋಸ್ತು ಧೃತಿಮಾನ್ ನಮೋ ನಮೋ ಅ.ಪ ನಮೋಸ್ತು ಶ್ರೀಮಾನ್ ನಮೋಸ್ತು ಧೀಮಾನ್ ನಮೋಸ್ತು ಮರುತಾತ್ಮಜ ಹನುಮಾನ್ ನಮೋಸ್ತು ಬಲವಾನ್ ನಮೋಸ್ತು ವೀರ್ಯವಾನ್ ನಮೋಸ್ತು ಪಂಚಾನನ ರೂಪಾ 1 ನಮೋ ಸಮೀರಾಂಜನಾಕುಮಾರಾ ನಮೋ ದಿವಾಕರ ಭಯಂಕರಾ ವಿಧಿ ವರಪ್ರಸಾದಿತ ನಮೋ ನಮೋ 2 ನಮೋ ನಮೋ ವಾನರೇಂದ್ರ ಸಚಿವಾ ನಮೋ ಜಿತೇಂದ್ರಿಯ ಗದಾಧರಾ ಸನ್ನುತ ನಮೋಸ್ತು ಸಕಲಕಲಾಧರ 3 ವಸುಂಧರಾಪ್ರಿಯ ತನೂಭವಾನ್ಯೇ ವಸುಗಣೋತ್ಸುಕಾ ಶುಭದಾಯಕಾ ಹಸನ್ಮುಖಾ ಶ್ರೀರಘೋತ್ತಮ ಪ್ರಿಯಾ ಯ [ಸಖ] ಖಗೇಂದ್ರಸಮ ಕಪಿನಾಯಕಾ 4 ಜನಕಸುತಾ ಸುದರ್ಶನ ಹರ್ಷಿತ ವನಭಂಗಕರಾಕರಣಧೀರಾ ಲಂಕಾನಗರ ಭಯಂಕರಾ 5 ಸೀತಾರಾಮಾನಂದ ವರ್ಧಕಾ ಲಕ್ಷ್ಮಣ ಪ್ರತಾಪವಾನ್ ದೂತಕಾರ್ಯ ವಿಜಯೋತ್ಸುಕ ವಾನರ ಪತಿಸಂಪೂಜ್ಯ ಪ್ರದೀಪ್ತವಾನ್ 6 ರಾಮಾಲಿಂಗಿತ ದಿವ್ಯಶರೀರಾ ರಾವಣದರ್ಪ ವಿನಾಶಕರಾ ಭೀಮಪರಾಕ್ರಮ ಸಂಜೀವನಧರ ದಾನವತಿಮಿರ ವಿಭಾಕರ 7 ಗಂಭೀರಶರಧಿ ವಿಲಂಘನಧೀರಾ ಮೈನಾಕಾರ್ಚಿತ ಪರಮೋದಾರಾ ವಿಭೀಷಣ ಪ್ರಿಯ ಸಖಾಭಿವಂದಿತ ರಘುಪತಿಸೇವಾ ಧುರಂಧರಾ 8 ತಾರಕ ಮಂತ್ರೋಪಾಸಕ ಹನುಮಾನ್ ಶೂರಭವಿಷ್ಯ ಚತುರ್ಮುಖಾ ಧೀರೋದಾತ್ತ ಕೃಪಾಕರ ಮಾಂಗಿರಿರಂಗ ನೀಕೇತನ ಬಹಿರ್ಮುಖ 9
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಆಳ್ವಾರ್-ಆಚಾರ್ಯ ಸ್ತುತಿಗಳು ನೀರಾಟವ ನೋಡಿದೆ ನೀರಜಾಕ್ಷನ ರಾಣಿ ಗೋದಾದೇವಿಯ ಪ ಶ್ರೀವಿಲ್ಲಿಪುತ್ತೂರ ಶ್ರೀತುಳಸಿವನದಲ್ಲಿ ಶ್ರೀವಿಷ್ಣುಚಿತ್ತರಾ ಪುತ್ರಿಯೆಂದೆನಿಸಿ ಸುಪುತ್ರಿಯೆಂದೆನಿಸಿ ಶ್ರೀ ದೇವಿ ತಾನುದಿಸೆ ಬೇಗ ತೀವ್ರ ಹರುಷದಿಂ ಬೆಳೆಯುತ್ತಲಿದ್ದಾಳಲು 1 ಪುತ್ರಿಗೆ ತಕ್ಕಂಥ ವರವಿಲ್ಲವೆನುತಾಲೆ ಚಿತ್ತದೊಳಗೆ ಯೋಚಿಸಿದ ಆಳ್ವಾರರು ಪೆರಿಯಾಳ್ವರರು ಭಕ್ತವತ್ಸಲನಾ ವರಿಸಬೇಕೆನುತಾನೆ ಅರ್ಥಿಯಿಂದಲೆ ನೀರಾಟವನೆನೆದಾಳು 2 ಶ್ರೀಶವಾಸನೆಗಳ ಭಾವಿಸೀ | ಗೊಲ್ಲ ವಾಸನೆಗಳ ಭಾವಿಸೀ ವಾಸುದೇವನಾ ವರಿಸಬೇಕೆನುತಾಲೆ ಉ ಲ್ಲಾಸದಿಂದಲೆ ಹೆಂಗಳ ಕೂಡೆ ಪೊರಟಾಳು 3 ಮುತ್ತು ಮಾಣಿಕದಾಭರಣವನಿಟ್ಟು ಸುತ್ತೆಣೆ ಗಂಟನ್ಹಾಕಿ ದೇವಿ ಸುತ್ತೆಣೆ ಗಂಟನ್ಹಾಕಿ ಉತ್ತಮನಾಗಿದ್ದ ಪುಷ್ಪಗಳನೆ ಮುಡಿದು ಚಿತ್ತದೊಳೊಲ್ಲಭನಪ್ಪಣೆಗೊಂಡು ಪೊರಟಾಳು 4 ಮಾರ್ಗಶಿರ ಮಾಸದಿ ಪೊತ್ತೊಂದು ದಿವಸಾದಿ ಬೇಗ ತಾ ಪೊರಟೂ ಮಹಾಲಕ್ಷಿ ತಾ ಪೊರಟ ಳಾಗ ಬೀದಿಯನು ಸುತ್ತಿ ಮಂಟಪದಲಿ ನಿಂದು ಮಂಗಳಾರತಿಯನೆತ್ತೀ ಮಾರು ವಸ್ತ್ರವ ತೆಗದಾರು 5 ದಂತಧಾವನ ಮಾಡಿ ಕಂತುಪಿತನರಸೀಗೆ ಅಂತರಂಗದ ಭಕ್ತರು ಬೇಗ ಅಂತರಂಗದ ಭಕ್ತರು ಸಂತೋಷದಿಂದಲೆ ಮುಖವನ್ನು ತೊಳೆದು ಶ್ರೀ ಕಾಂತಗೆ ವಸ್ತ್ರದಿಂ ಮುಖವನೊರೆಸಿದಾರು 6 ಭಾಪು ಛತ್ರಿಚಾಮರ ಸೂರೆಪಾನವಾ ಜನ ಬೀಸಿ ಗೋಪಿ ಮುಕ್ತಿದಾಯಕಿಗಾಗ ಮುಕ್ತಿದಾಯಕಿಗಾಗ ದರ್ಪಣವನು ತೋರಿ ಕಂದರ್ಪನ ಮಾತೆಗೆ ಧೂಪ ದೀಪ ಕರ್ಪೂರದಾರತಿಯೆತ್ತಿದರು 7 ಬೇಗಾದಿಲಕ್ಷಿಗೆ ಆಭರಣ ಸಡುಲಿಸಿ ಆಗ ಮುಡಿಯ ಬಿಚ್ಚಿ ದೇವೀಗೆ ಆಗ ಮುಡಿಯ ಬಿಚ್ಚೀ ಬೇಗಾದಿಂ ಕಂಮೆಣ್ಣೆ ಕಸ್ತೂರಿತೈಲ ಮೈಗೆ ತಾಳಮೇಳದ ಗತಿಯಿಂದಲೊತ್ತಿದ್ದರೂ 8 ಶ್ವೇತವರ್ಣದ ದಿವ್ಯ ನಾಗವಲ್ಲಿಗಳಿಂದ ಖ್ಯಾತಿ ಪಡೆದಿರುವಾ ಕ್ರಮುಕಾ ಬೇಗ ಖ್ಯಾತಿ ಪಡೆದಿರುವಕ್ರಮುಕಾ ನೂತನವಾದ ಕರ್ಪೂರವರ್ಣಗಳಿಂದ ಜಗ ನ್ಮಾತೆಗೆ ತಾಂಬೂಲವ ನೀಡಿದರೂ 9 ಸಣ್ಣವಾದ್ಯದೊಳಗೆ ನುಡಿಸೇ ಬೇಗ ವಾದ್ಯದೊಳಗೆ ನುಡಿಸÉೀ ಹಣೆಯೊಳಗೆ ಬಾಚಿ ಮಣಿಗಂಟನಿಕ್ಕಿ ಉಳಿದ ಎಣ್ಣೆ ಭಕ್ತರಿಗೆಲ್ಲ ಯಿತ್ತಾರು 10 ಮಿಂದು ಮಡಿಯನುಟ್ಟು ಚಂದದಿಂದಲೆ ದೇವಿ ತಂದ ನೈವೇದ್ಯವುಂಡೂ ಬೇಗ ನೈವೇದ್ಯವುಂಡು ಬಂದ ಭಕ್ತರಿಗೆಲ್ಲ ತೀರ್ಥಪ್ರಸಾದವಿತ್ತು ಮಂದಗಮನೆ ತನ್ನ ಮಂದಿರಕೆ ನಡೆದಾಳು 11 ಬೈತಲೆಗೆ ರಾಗಟೆ ಹೆರಳಿಗೆ ಭಂಗಾರಗೊಂಡೆಯವ ನಿತ್ತು ಪಾನುಪಟ್ಟಿಯು ಮುತ್ತಿನಬಟ್ಟೆ ಕಟ್ಟಿ ಬೇಗ ಮುತ್ತಿನಬಟ್ಟೆ ಕಟ್ಟಿ ಕತ್ತುರಿ ಬಾವುಲಿ ಕಮಲಸರಗಳೂ ಮುತ್ತಿನ ಮೂಗುತಿ ಮುಕುರಾವನಿಟ್ಟಳೂ 12 ಹಾರಪದಕ ಹಸ್ತಕಡಗ ಹರಡಿ ವಂಕಿ ಶೀರೆಕುಪ್ಪಸ ತೊಟ್ಟೂ ಬೇಗ ಶೀರೆಕುಪ್ಪಸ ತೊಟ್ಟು ಅಂದುಗೆ ಇಂದೀರಾದೇವಿ ತಾನಿಟ್ಟು ಬಂದಳು ಆಗಾ 13 ಭಾಷ್ಯಕಾರರು ಮೊದಲಾದ ಭಕ್ತರುಯೆಲ್ಲ ಲಕ್ಷ್ಮಿದೇವಿಗೆ ಆಗ ಭಾಗ್ಯಲಕ್ಷ್ಮಿಗೆ ಆಗಾ ಭಾರಿ ಯಾ ಶೀರೆ ಕುಪ್ಪುಸವನಿತ್ತು ಪುಷ್ಪ ಮರ್ಯಾದೆಗಳ ಮಾಡೀ ಕರೆತಂದರು ಬೇಗಾ 14 ಮಂದಗಮನೆ ಅಂದು ಗೋವಿಂದನ ಎದುರಲ್ಲಿ ಆ ನಂದದಿಂದಲೆ ಕುಳಿತೂ ಬೇಗ ಆನಂದದಿಂದಲೆ ಕುಳಿತು ಚಂದದಿಂ ಮಲ್ಲಿಗೆಮಾಲೆಯ ಕಳುಹಲು ಮಂದರೋದ್ದರ ತನ್ನಾ ಮಡಿದೀಗೆ ಕಳುಹಿದ 15 ಕೂಡಾರವಲ್ಲಿಯೆಂತೆಂಬೊ ದಿವಸದಲ್ಲಿ ಕೂಡಿ ಮನ್ನಾರುರಂಗನಾ ಬೇಗ ಮನ್ನಾರುರಂಗನಾ ಕ್ಷೀರಾನ್ನ ಭೋಜನಂಗಳ ಮಾಡಿದರು ಭೋಗಿಯ ದಿನದಿ ಕಲ್ಯಾಣವ 16 ಮಕರ ಸಂಕ್ರಾಂತೀಲಿ ಮಂದರೋದ್ದಾರ ಸಹಿತ ಚೊಕ್ಕ ಪಲ್ಲಕ್ಕಿಯೇರಿ ಬೇಗ ಚೊಕ್ಕ ಪಲ್ಲಕ್ಕಿಯೇರಿ ಪಕ್ಕ ಮೆರವಣಿಗೆಯಲಿ ಬಂದು ಹರುಷದಿಂದ ವೆಂಕಟಕೃಷ್ಣನ ಎಡದಲ್ಲಿ ಕುಳಿತಾಳು 17
--------------
ಯದುಗಿರಿಯಮ್ಮ
ಇ. ಗುರುನಮನ ವಿಷ್ಣುತೀರ್ಥರೆ ಪಾಲಿಸೀ ನಿರಂತರ ಮಧ್ಯಗೇಹರ ಸುತನೆನಿಸಿರ್ದ ಗುರುವರ ಪ ಮಧ್ವಶಾಸ್ತ್ರವು ಜೀರ್ಣವಾಗುವ ಸಮಯದಿ ಬದ್ಧಾದರದಿ ಬಂದುದ್ಧರಿಸುವ ಗುರುವರ 1 ಜಾನಕೀಪತಿಯೊಳು ಲಕ್ಷುಮಣನಂತೆ 2 ವಾಲ್ಮೀಕಿಗಳ ಶಿಷ್ಯಕುಶಲವರಂತೆಯೇ ಚೆಲ್ವ ವ್ಯಾಸರು ಅನಿರುದ್ಧರು ನಿಮಗೆ 3 ಪಾಜಕ ಕ್ಷೇತ್ರದೊಳ್ಸನ್ಯಾಸಾಶ್ರಮಿಯಾಗಿ ರಾಜೇಶ ಹಯಮುಖ ಕೃಷ್ಣನರ್ಚಿಸಿದ 4
--------------
ವಿಶ್ವೇಂದ್ರತೀರ್ಥ
ಇ. ದೇವತಾ ಸ್ತುತಿ ವಾಯುದೇವರು ಇನ್ನಾದರೂ ಸುಮುಖನಾಗೊ ಧ್ವರಿಯೇ ಪ ಪರಿ ವಿಧದಿಂದ ನೊಂದು ಕರಮುಗಿದುಬಾಯ್‍ತ್ಯರದು ಕೂಗಿ ಕರಿವೆ ಸದ್ಗುರುರಾಜನೆಂದು ಅ.ಪ. ಪಾದ ನಂಬಿದ ಭಕ್ತರಿಗಾನಂದಗರಿವೆನೆಂಬ ಬಿರುದಾಂಕಿತನಾಗಿ ಸದ್ವøಂದದೊಳಗಿಪ್ಪೆ ರಾಜಾಚಾರು ಗುರು ಬೃಂದಾವನಾರ್ಯರ ಪೊರೆದ ಮಂದಾಕಿನಿಧರ ಧವಳಾಖ್ಯವಾಸಾ ಭೋಜಾ 1 ಭುವನದೊಳು ಸರಿಗಾಣೆ ನಿನಗಿನ್ನು ಪರಮಾಪ್ತ ಶಿರೋಮಣಿಗಳೊಳು ಸರ್ಜಿಸಿದ ಕಾರಣ ವಜ್ರಲೇಪನ ಮಾಡಿ ಊರ್ಜಿಸುವತ್ಯರ ಮಾಡು ಎನ್ನಾ 2 ಪರಮ ಪಾಮರನು ನಾನಯ್ಯ ಪವಮಾನರಾಯಾಪಾರುಗಾಣದೆ ಶರಧಿಯೊಳು ಮುಳುಗುವ್ಯನೋಕರವಿಡಿದು ತಡಿಗೆತ್ತಿ ಕಾಪಾಡು ತಂದೆವರದಗೋಪಾಲವಿಠಲನ ಮರಿಯೇ 3
--------------
ತಂದೆವರದಗೋಪಾಲವಿಠಲರು