ಒಟ್ಟು 646 ಕಡೆಗಳಲ್ಲಿ , 84 ದಾಸರು , 575 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯೆ ಮೂಜಗದ ದೊರೆಯೆ ನಿನಗಿದು ಸರಿಯೆ ಪ. ಹರಿಯೆ ಮೂಜಗದ ದೊರೆಯೆ ನಿನ್ನನೆ ಮರೆಯಪೊಕ್ಕವರಲ್ಲಿ ಈ ಪರಿ ಬರಿಯ ಪಂಥದಿ ಮರುಗದಿರ್ಪುದು ಸರಿಯೆ ನಿನಗದು ಸರಸವಲ್ಲದುಅ.ಪ. ಉಕ್ಕಿನ ಕಂಬದಿಂದ ಉದಿಸಿ ಬಂದು ರಕ್ಕಸನುರವ ಸೀಳಿ ಕರುಳನು ಬಗೆದು ಉಕ್ಕುವ ಕೋಪದಿಂದ ರಕುತವು ಸುರಿಯೆ ಭಕ್ತ ಪ್ರಹ್ಲಾದನಾದರದಿ ಕಾಯ್ದು ಭಕ್ತ ವತ್ಸಲನೆನಿಸಲಹುದು ಶಕ್ತಿಹೀನತೆಯಿಂದ ಮರೆಹೊಕ್ಕ ಎನ್ನನು [ಕಾಯು]ವುದು 1 ಒಪ್ಪಿಡಿಯವಲಕ್ಕಿಯ ಒಪ್ಪಿಸಿನಿಂದ ವಿಪ್ರನ ನಲವಿಂದ ನೋಡುತಲಂತು ವಿಪುಲಸಂಪದವನ್ನು ಕರುಣಿಸಿದಂಥ ಅಪ್ರತಿಮ ಸಾಹಸಿಯೆನುತೆ ನಿನ್ನೊಳು ತಪಿಸಿ ಬೇಡುವ ಎನ್ನೊಳೀಪರಿ ಒಪ್ಪದೊಪ್ಪದೆನ್ನಪ್ಪ ಕೇಳಿದು ಸರಿಯೇ ಶ್ರೀನರಹರಿಯೇ 2 ಮಾನಿತÀಧ್ರುವ ಬಾಲನಂ ಮನ್ನಿಸಿ ಪೊರೆದೆ ಮಾನಿನಿ ಪಾಂಚಾಲಿಯ ಮಾನದಿ ಕಾಯ್ದೆ ಸಾನುರಾಗದಿಂ ಗಜನಂ ಉದ್ಧರಿಸಿದೆ ಕ್ಷೋಣಿಯೊಳಗತಿ ದೀನರಾದರ ಸಾನುರಾಗದಿ ಪೊರೆವ ಶ್ರೀಧರ ದಾನವಾಂತಕ ಶೇಷಗಿರೀಶನೆ ಸೂನುವೆಂಬಭಿಮಾನ ನಿನಗಿರೆ [ಮಾಣದೆನ್ನನು ಕಾಯೊ] ಹರಿಯೇ ಶ್ರೀನರಹರಿಯೇ3
--------------
ನಂಜನಗೂಡು ತಿರುಮಲಾಂಬಾ
ಹರಿಯೆ ಯನ್ನ ಧೊರೆಯೆ ನಿನ್ನಮರೆಯ ಹೊಕ್ಕೆನೊ ಸಿರಿಯರಮಣ ಪ ಸಕಲ ಲೋಕಗಳನುನೀನೇ ಸೃಜಿಸುವಾತನು ಸುಖದಿ ಪ್ರಾಣಿಗಳನು ನೀನೆ ಸಲಹುವಾತಾನು ಪ್ರಕಟವಾದ ಜಗವ ನೀನೆ-ಪ್ರಳಯಗೈವನು ನಿಖಿಲ ಜೀವಸಾಕ್ಷಿಯಾಗಿ ನಿತ್ಯನೀನೆನಿಯಮಿಸುವನು 1 ಸ್ಥೂಲಸೂಕ್ಷ್ಮರೂಪನೀನೆ ಮೂಲಪುರುಷನು ಲೀಲೆಯನ್ನು ಪ್ರಕಟಗೈವ ಕಾಲರುಪನು ನೀಲ ಲೋಹಿತಾದಿ ವಿಬುಧಜಾಲ ವಂದ್ಯನು ಪಾಲಿತಾಖಿಲಾಂಡ ರಮಾಲೋಲ ಸುಗುಣಜಾಲ ಶ್ರೀ 2 ಪರಮ ಪುರುಷ ಪಂಕಜಾಕ್ಷ-ಪತಿತ ಪಾವನ ಶರಧಿಶಯನ ಸಕಲಲೋಕ ಸಂವಿಭಾವನ ವಿಶ್ವ ಮೋಹನ ದುರಿತ ಗಜಮೃಗಾಧಿರಾಜವರದ ವಿಠಲ ವಿಹಗಯಾನ 3
--------------
ಸರಗೂರು ವೆಂಕಟವರದಾರ್ಯರು
ಹರಿಯೇ ಎನ್ನ | ಮರೆತಿರುವರೆ ಇದು ಸರಿಯೇ ಪಾಲಿಸು ನೀ ದೊರೆಯೇ | ತರಳತನದಿ ನಾ ಮರೆತೆನೆಂದು ನೀ ಜರೆದು ಬಿಟ್ಟರೆ ಮುಂದೆ ಪೊರೆವರಾರೈ ಶ್ರೀ ಪ ಒಡೆಯ ನೀನಾಗಿ ಸಲಹುವುದೀಗ ನಿನ್ನಯ ಪದ ಜಡಜಕೆರಗುವೆ ನಾ ಬೇಗ ಕಡು ದಾರಿದ್ರ್ಯದ ಕಡಲೊಳು ಮುಳುಗಿದೆ ತಡಿಯ ಕಾಣಿಸೋ ಜಗದೊಡೆಯ ದಯದಿ ಶ್ರೀ 1 ದುರುಳ ಬಾಧಿಸುತಿರೆ ಭರದೊಳಕ್ಷಯವಿತ್ತುದ್ಧರಿಸಲಿಲ್ಲವೆ ಶ್ರೀ 2 ಪರಮೇಷ್ಠಿ ಜನಕ ಶ್ರೀ 3 ತಂದೆ ನೀನಲ್ಲವೆ ಜಗದೀಶ ಪಾಲಿಸು ನಿನ್ನ ಕಂದನಲ್ಲವೆ ಸರ್ವೇಶ ಹಿಂದ ಮುಂದನಾನೊಂದನರಿಯೆ ದಯ ದಿಂದ ಕಾಯೋ ಮುಚುಕುಂದವರದ ಶ್ರೀ 4 ಮಂಗಲ ಪುರವಾಸ ಶ್ರೀ ವೆಂಕಟೇಶ | ಅಂಗಜ ಜನಕ ರಮೇಶ | ಮಂಗಲಾಂಗ ನಿನ್ನಂಘ್ರಿ ಸೇವಕರ ಸು-ಸಂಗವ ಪಾಲಿಸು ಗಂಗಾಜನಕ ಶ್ರೀ 5
--------------
ಅನ್ಯದಾಸರು
ಹರಿಯೇ ಗತಿ ಭರ್ತನು ಜಗಕೇ|ನರ ಹರಿಯೇ ನೆಂಟ ಭಕುತ ಜನಕೇ ಪ ಆರು ಸಲಹುವರ ನಾಥ ದೀನಜನ| ಘೋರಪಾತಕಿ ಬಧಿರಾಂಧರನು| ವಾರಿಜಾಸನ ಮುಖ್ಯ ದೇವತೆಗಳಲಿ|ವಿ ಚಾರಿಸೆ ಅನ್ಯದೊರೆಗಳುಂಟೆ 1 ಕಮಲ ಬಾಂ ಧವ ವರುಣರು ಮೃತ್ಯುಗಳೆಲ್ಲ| ಭಾವಿಸೆ ನೇಮದಲಿರುತಿಹರು 2 ಅವನ ರೋಮರೋಮದಿ ಬ್ರಹ್ಮಾಂಡವು | ಅವುದುಂಬರ ಫಲದಂತಿಹುದು | ಭುವನದಿ ಗುರುಮಹೀಪತಿ ಸ್ವಾಮಿಯು ಜಗ ಕಾವ ಕೊಲುವ ನಿರ್ಮಿಸುತಿಹನು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಸಿರಿ ರಮಣಿಯೆ ಕರಗಳ ಮುಗಿಯುವೆ ವರಮತಿ ನೀಡೆನಗೆ ಪ ಸರಸಿಜಾಕ್ಷನ ವಕ್ಷಸ್ಥಳದಿ ನಿವಾಸಿಯೆ ನಿರುತದಿ ಹರಿಪಾದ ಸ್ಮರಣೆ ಎನಗೆ ಕೊಡು ಅ.ಪ ಮಂದರೋದ್ಧರ ಗೋವಿಂದ ಗುಣಗಳಾ- ನಂದದಿ ಸ್ತುತಿಸಿ ಹಿಗ್ಗುವ ಜನನಿ ಇಂದಿರೆ ರಮೆ ಭಾರ್ಗವಿಯೆ ನಿನ್ನಯ ಪಾದ ದ್ವಂದ್ವಕೆ ನಮಿಪೆ ಸುಗಂಧಿ ಸುಂದರಿಯೆ 1 ಪರಮಪುರುಷ ಪುರುಷೋತ್ತಮನರಸಿಯೆ ಪಾವನಿ ಜನನಿ ಸುರರು ಕಿನ್ನರರು ಕಿಂಪುರುಷರು ಸ್ತುತಿಪರು ವರ ಮಹಾಲಕ್ಷ್ಮಿ ಸುಂದರಿ ಜಯ ಜಯ ಎಂದು 2 ಗಂಗಾಜನಕ ಪಾಂಡುರಂಗ ನಿಜ ಸತಿ ಭೃಂಗಕುಂತಳೆ ಭಾಗ್ಯದ ಖಣಿಯೆ ಅಂಗಜಜನಕ ವಿಹಂಗವಾಹನನ ಪಾ- ದಂಗಳ ಸ್ಮರಣೆಲಿ ನಲಿವ ಮನವ ಕೊಡು 3 ಪಕ್ಷಿವಾಹನ ಕಮಲಾಕ್ಷನ ಮಹಿಮೆಯ ವೀಕ್ಷಿಸಿ ಮನದಿ ಹಿಗ್ಗುವ ಜನನಿ ರಾಕ್ಷಸನಾಮ ವತ್ಸರದಲಿ ಭಕುತರ ಮೋಕ್ಷದಾತನು ಸಲಹುವ ಸುಜನರನು4 ಕಮಲಸಂಭವ ಕಮಲಾಲಯೆ ಹರಿಪಾದ ಕಮಲಭೃಂಗಳೆ ಹಿರಣ್ಯಹರಿಣಿ ಕಮಲನಾಭ ವಿಠ್ಠಲನೊಡಗೂಡಿ ಹೃ- ತ್ಕಮಲದಿ ಶೋಭಿಸು ಎನುತ ಸ್ತುತಿಸುವೆನು 5
--------------
ನಿಡಗುರುಕಿ ಜೀವೂಬಾಯಿ
ಹರಿಹರರು ಸರಿಯೆಂಬ ಮರುಳು ಜನರುಹರಿಹರರ ಚರಿತೆಯನು ತಿಳಿದು ಭಜಿಸುವುದು ಪ ಸುರರು ಮುನಿಗಳು ಕೂಡಿ ಪರದೈವವಾರೆಂದುಅರಿಯಬೇಕೆಂದೆರಡು ವರಧನುಗಳಹರಿಹರರಿಗಿತ್ತು ಸಂಗರವ ಮಾಡಿಸಿ ನೋಡೆಮುರಹರನು ಪುರಹರನ ಗೆಲಿದುದರಿಯಾ 1 ಕರವ ಶಿರದ ಮ್ಯಾಲಿರಿಸಿ ಖಳ-ನುರುಹಿ ಹರನನು ಕಾಯಿದ ಕಥೆಯ ನೀನರಿಯಾ 2 ದೂರ್ವಾಸರೂಪ ಹರನಂಬರೀಷನ ಮುಂದೆಗರ್ವವನು ಮೆರೆಸಿ ಜಡೆಯನು ಕಿತ್ತಿಡೆಸರ್ವಲೋಕದೊಳವನ ಚಕ್ರನಿಲಲೀಯದಿರೆಉರ್ವೀಶನನು ಸಾರಿ ಉಳಿದನರಿಯಾ 3 ಹರನಂಶ ದ್ರೋಣಸುತನು ಪಾಂಡವಾ ಎಂದುಉರವಣಿಸಿ ನಾರಾಯಣಾಸ್ತ್ತ್ರವನು ಬಿಡಲು ಹರಿ ಬಂದು ಬೇಗ ತನ್ನಸ್ತ್ರವನು ತಾ ಸೆಳೆದುಶರಣಾಗತರ ಕಾಯಿದ ಕಥೆಯನರಿಯಾ 4 ನರನಾರಾಯಣರು ಬದರಿಕಾಶ್ರಮದಲಿರೆಹರನು ಹರಿಯೊಡನೆ ಕದನವನು ಮಾಡೆಹರಿ ಹರನ ಕಂಠವನು ಕರದಲಿ ಪಿಡಿದು ನೂಕೆಕೊರಳ ಕಪ್ಪಾದ ಕಥೆ ಕೇಳಿ ಅರಿಯಾ 5 ಹರಿ ಸುರರಿಗಮೃತವನು ಎರೆದ ರೂಪವನೊಮ್ಮೆಹರ ನೋಡುವೆನೆಂದು ಸಂಪ್ರಾರ್ಥಿಸೆಪರಮ ಮೋಹನ ರೂಪಲಾವಣ್ಯವನು ಕಂಡುಹರ ಮರಳುಗೊಂಡ ಕಥೆ ಕೇಳಿ ಅರಿಯಾ 6 ಹರಿಯ ಮೊಮ್ಮನ ಬಾಣಾಸುರನು ಸೆರೆವಿಡಿಯೆಗರುಡವಾಹನನಾಗಿ ಕೃಷ್ಣ ಬಂದುಹರನ ಧುರದಲಿ ಜಯಿಸಿ ಅವನ ಕಿಂಕರನ ಸಾ-ವಿರ ತೋಳುಗಳ ತರಿದ ಕಥೆಯ ನೀನರಿಯಾ 7 ಸುರತರುವ ಕಿತ್ತು ಹರಿ ಸುರಲೋಕದಿಂದ ಬರೆಹರನು ಹರಿಯೊಡನೆ ಕದನವನು ಮಾಡೆತರಹರಿಸಲಾರದೋಡಿದ ಕಥೆಯ ನೀನೊಮ್ಮೆಹಿರಿಯರ ಮುಖದಿ ಕೇಳಿ ನಂಬು ಹರಿಯಾ 8 ಹರಸುತನು ತಪದಿಂದ ಹರಿಯ ಚಕ್ರವ ಬೇಡೆಪರಮ ಹರುಷದಲಿ ಚಕ್ರವನೀಯಲುಭರದಿಂದ ಧರಿಸಲಾರದೆ ಚಕ್ರವನಂದುಹರನು ಭಂಗಿತನಾದನೆಂದರಿಯಲಾ 9 ರಾವಣಾಸುರ ಕುಂಭಕರ್ಣ ನರಕಾದಿಗಳುಶೈವತಪವನು ಮಾಡಿ ವರವ ಪಡೆಯೆಅವರುಗಳನು ವಿಷ್ಣು ನರರೂಪಿನಿಂದರಿದುದೇವರ್ಕಳನು ಕಾಯಿದ ಕಥೆಯ ನೀನರಿಯಾ 10 ಗಂಗಾಜನಕನÀ ಸನ್ಮಂಗಲ ಚರಿತ್ರ್ರೆಗಳಹಿಂಗದಲೆ ಕೇಳಿ ಸುಖಿಸುವ ಜನರಿಗೆಭಂಗವಿಲ್ಲದ ಪದವನಿತ್ತು ಸಲಹುವ ನಮ್ಮರಂಗವಿಠ್ಠಲರಾಯನ ನೆರೆ ನಂಬಿರೋ11
--------------
ಶ್ರೀಪಾದರಾಜರು
ಹರಿಹರಿ ಹರಿಯೆನ್ನಿ ಮಂದರಧರನೆ ಗತಿಯೆನ್ನಿ ದೀನ ದಯಾಕರನು ದಿವಿಭುವಿ ಪ. ಮಾನ ಭರಾಕರನು ನೀನೆಂದೊರವರನು ದುರಿತ- ಹೀನರ ಮಾಡುವನು 1 ತರಳನ ಮೊರೆ ಕೇಳಿ ವರ ನರ ಹರಿಯ ರೂಪವ ತಾಳಿ ದುರುಳ ಹಿರಣ್ಯಕನಾ ಕರುಳನು ಕೊರಳೊಳು ಧರಿಸಿದನಾ 2 ಗಜರಾಜನ ಕಾಯ್ದಾ ಬಾಣನ ಭುಂಜ ಪುಂಜವ ಕೊಯ್ದಾ ಗಜಪುರವರಗೊಲಿದಾ ಚರಣಾಂ- ಬುಜವೀವುತ ನಲಿದಾ 3 ನೆನೆದಲ್ಲಿಗೆ ಬರುವಾ ನಂಬಿದ ಜನರ ಸಂಗಡವಿರುವಾ ಅನುಗಾಲವು ಪೊರೆವಾ ಮನಸಿಜ ಜನನಿಯನಪ್ಪಿರುವಾ 4 ದಾಸರ ಸಲಹುವದು ಶೇಷ ಗಿ- ರೀಶನ ಮಹಾ ಬಿರುದು ದೋಷಗಳನು ತರಿದು ಈರೆರ- ಡಾಸೆ ಪೂರಿಪ ನೆರೆದೂ 5
--------------
ತುಪಾಕಿ ವೆಂಕಟರಮಣಾಚಾರ್ಯ
ಹಂಸವಾಹನಪಿತನೆ _ ಹಂಸಾ ಢಿಭಿಕವೈರಿ ಶೌರಿ _ ಬಾ ಬಾ ಬಾ ಪ ಸಾಸಿರನಾಮದೊಡೆಯ ವಾಸವವಿನುತನೆ ಲೇಸಾಗಿಸ್ತುತಿಸುವೆ _ಬಾ ಬಾ ಬಾ ಅ ವೇದಾವಕದ್ದಂಥ ಉದ್ದಂಡ ದೈತ್ಯನ ಮರ್ಧಿಸಿ ವೇದವ ತಂದು ವೇಧನ ಸಲಹಿದ ಮತ್ಸ್ಯ ಬಾ ಬಾ ಬಾ 1 ಸಿಂಧು ವಿನೊಳಗಿದ್ದ ಮಂದರಗಿರಿಯನ್ನು ಬಂದು ಬೆನ್ನಿಲಿಪೊತ್ತು ತಂದು ಪೀಯೂಷವ ಚಂದದಿ ಸಲಹಿದ ಕೂರ್ಮಸ್ವರೂಪನೆ _ ಬಾ ಬಾ ಬಾ 2 ಕನಕನೇತ್ರನ ಕೊಂದು ಕಾಂತೆಯಹಿಡಿದೆತ್ತಿ ಕನಕಗರ್ಭನಿಗೊಲಿದ ಕಾರುಣ್ಯನಿಧಿಚಂದ್ರ ಕ್ರೋಢ ಯಜ್ಞ ಸ್ವರೂಪನೆ _ ಬಾ ಬಾ ಬಾ 3 ತರುಳನಮೊರೆಕೇಳಿ ದುರುಳನ ಕರುಳನೆ ಬಗೆದು ಕೊರಳೊಳು ಕರುಳ ಧರಿಸಿ ಸುರರನ್ನು ಪೊರೆದಂಥ ಸರ್ವವ್ಯಾಪಿ ಕರುಣಿಯೆ ಮೂರ್ತಿ _ ಬಾ ಬಾ ಬಾ 4 ಅನುಜನ ಪೊರೆಯಲು ತನುವನು ಮರೆಸಿಕೊಂಡು ದಾನವನು ಬೇಡುತ ಬಲಿ ಯನು ತುಳಿದು ಪೊರೆದ ಘನ್ನ ಮಹಿಮ ವಟು ವಾ ಮನ ರೂಪಿಯೆ _ ಬಾ ಬಾ ಬಾ 5 ಕೊಡಲಿಯ ಪಿಡಿಯುತ ಒಡೆಯರ ತರಿದು ಕಡಿದು ಮಾತೆಯ ಪಿತ ನುಡಿಯನು ಸಲಿಸಿದ ಚಂಡವಿಕ್ರಮ ಮಹಿಮ ಭಾರ್ಗವ ಮೂರುತಿ _ ಬಾ ಬಾ ಬಾ 6 ಕಾಂತೆಯನೆಪದಿಂದ ಕದನವ ಹೂಡಿಕೊಂಡು ಅಂತಕಸದನಕೆ ಅರಿಗಳ ತಳ್ಳುತ ಶಾಂತತೆ ಬೀರಿಪೊರೆದ ದಶರಥ ರಾಮನೆ _ ಬಾ ಬಾ ಬಾ 7 ಚೋರತನದಿ ಬಲು ಬೆಣ್ಣೆಯ ಮೆಲ್ಲುತ ಜಾರತನದಿ ಋಷಿ ಸ್ತ್ರೀಯರಿಗೊಲಿದಂಥ ಮಾರಜನಕ ಶ್ರೀ ರುಕ್ಮಿಣಿ ಕೃಷ್ಣ _ ಬಾ ಬಾ ಬಾ 8 ವೇದಗೋಚರ ವಿಶ್ವ ವೇದ ಬಾಹ್ಯರಿಗೆಲ್ಲ ವೇದ ವಿರುದ್ಧವಾದ ವಾದಗಳ ತೋರಿ ನಿಂದು ಬೆತ್ತಲೆ ಮೆರದ ಬೌದ್ಧ ಸ್ವರೂಪನೆ _ ಬಾ ಬಾ ಬಾ 9 ಕಲಿಬಾಧೆ ಹೆಚ್ಚಾಗೆ ಕಲಿಯುಗ ಕೊನೆಯಲ್ಲಿ ಮಲಿನಾರ ಮರ್ಧಿಸಿ ಉಳಿಸಲು ಧರ್ಮವ ಚಲುವ ರಾಹುತನಾದ ಕಲ್ಕಿ ಸ್ವರೂಪನೆ _ ಬಾ ಬಾ ಬಾ 10 ಸತ್ಯಸಂಕಲ್ಪನೆ ನಿತ್ಯಸ್ವರೂಪನೆ ಉತ್ತಮನೀನೆಂದು ಒತ್ತೊತ್ತಿ ಪೊಗಳುವೆ ಭೃತ್ಯನು ನಿನ್ನವನು ಕಣ್ಣೆತ್ತಿ ನೋಡುತ _ ಬಾ ಬಾ ಬಾ11 ಏಕರೂಪನೆ ನಿನ್ನನೇಕ ರೂಪಂಗಳ ಸಾಕಲ್ಯದಿಂದಲಿ ಶ್ರೀಕಾಂತೆ ಅರಿಯಳು ಕಾಕುಮತಿಯು ನಾನು ಎಂತು ವರ್ಣಿಸಲಯ್ಯ _ ಬಾ ಬಾ ಬಾ12 ಪೂರ್ಣಸ್ವರೂಪನೆ _ ಪೂರ್ಣ ಗುಣಾಬ್ಧಿಯೆ ಪೂರ್ಣನಂದಾನೆ ಪೂರ್ಣ ಸ್ವತಂತ್ರನೆ ಪೂರ್ಣಬೋಧರ ಪೂರ್ಣ ಕರುಣಾವ ಬೀರಿಸು _ ಬಾ ಬಾ ಬಾ 13 ಮಾತುಮಾತಿಗೆ ನಿನ್ನ ನಾಮದಸ್ಮರಣೆಯ ನಿತ್ತು ಪಾಲಿಸು ಎನ್ನ ಮೃತ್ಯೋಪಮೃತ್ಯುವೆ ದೇವ ಭಕ್ತಿಭಾಗ್ಯವನಿತ್ತು ಮನ್ನಿಸಿ ಸಲಹುತ _ ಬಾ ಬಾ ಬಾ 14 ದೋಷದೂರನೆ ನಿನ್ನ ದಾಸನುನಾನಯ್ಯ ವಾಸವ ಜಯಮುನಿ ವಾತನೊಳ್ವಾಸಿಪ ಈಶ ಸಿರಿಕೃಷ್ಣ ವಿಠಲರಾಯನೆ ಬೇಗ ಬಾ ಬಾ ಬಾ 15
--------------
ಕೃಷ್ಣವಿಠಲದಾಸರು
ಹುಟ್ಟಿ ಹುಟ್ಟಿ ಹೊಂದಲಾರೆನಯ್ಯ ಕೃಷ್ಣನೆ ುೀಕಷ್ಟವನ್ನು ಬಿಡಿಸಿ ಕಾಯಬೇಕು ಕೃಷ್ಣನೆ ಪಇಷ್ಟು ದಿವಸ ನಿನ್ನನರಿಯದಿದ್ದೆ ಕೃಷ್ಣನೆ ನೀನುದ್ಟೃುಟ್ಟು ಹುಟ್ಟದಂತೆ ಮಾಡು ಕೃಷ್ಣನೆಅ.ಪಗರ್ಭದೊಳು ನವಮಾಸ ಸಿಕ್ಕಿ ಕೃಷ್ಣನೆ ನೊಂದೆನರ್ಭಕತ್ವದಲ್ಲಿ ಮುಗ್ಧನಾದೆ ಕೃಷ್ಣನೆನಿರ್ಬಂಧವಾುತು ವಿದ್ಯದಲ್ಲಿ ಕೃಷ್ಣನೆ ಮತ್ತೆನಿರ್ಭರದ ಪ್ರಾಯದಲ್ಲಿ ಬೆರೆತೆ ಕೃಷ್ಣನೆ 1ಮದಗಳೆಂಟರಿಂದ ಮೈಯ ಮರೆತೆ ಕೃಷ್ಣನೆ ಬೇಗಹುದುಗಿ ಕ್ಲೇಶವೈದರಲ್ಲಿ ಬಿದ್ದೆ ಕೃಷ್ಣನೆವೊದಗಿ ಪಾಶವೆಂಟರಿಂದ ಬಿಗಿದೆ ಕೃಷ್ಣನೆ ಹಮ್ಮುಇದಕೆ ಮೂಲವಾುತು ಕರ್ಮದಿಂದ ಕೃಷ್ಣನೆ 2ಅರಿಗಳರುವರಿಂದ ಕೊರಗುತಿಹೆನು ಕೃಷ್ಣನೆ ಮುಂದನರಿಯದವರ ಸಂಗವನ್ನು ಮಾಡಿ ಕೃಷ್ಣನೆಉರುಳಿಬಿದ್ದೆ ವಿಷಯಕೂಪದಲ್ಲಿ ಕೃಷ್ಣನೆ ುದನುಪರಿವ ಶಕ್ತಿಯನ್ನು ಕಾಣೆನಯ್ಯ ಕೃಷ್ಣನೆ 3ಮಾಯಾಕಾರ್ಯ ದೇಹವೆನ್ನದೆಂದು ಕೃಷ್ಣನೆ ಅದುಹೇಯವೆಂದು ಕಾಣದಾದೆನಯ್ಯ ಕೃಷ್ಣನೆ ನೋಯದಂತೆ ಪೋಷಣೆಯ ಮಾಡಿ ಕೃಷ್ಣನೆ ುೀಗ ನೋಯಲಾಗಿ ಭಯವು ಜನಿಸಿತಯ್ಯ ಕೃಷ್ಣನೆ 4ಹರಿವ ನದಿಯ ನಡುವೆ ಪರ್ಣ ಸಿಕ್ಕಿ ಕೃಷ್ಣನೆ ಸುಳಿಯಬೆರಸಿ ತಡಿಯ ತಾನು ಸೇರದಂತೆ ಕೃಷ್ಣನೆಕುರುಡ ಕೂಪವರಿಯದುರುಳುವಂತೆ ಕೃಷ್ಣನೆ ಕಾಲಶರಧಿಯಲ್ಲಿ ಮುಳುಗಿ ನೆಲೆಯ ಕಾಣೆ ಕೃಷ್ಣನೆ 5ಇರುಹೆ ಕಡೆಯು ಬ್ರಹ್ಮನಾದಿಯಾಗಿ ಕೃಷ್ಣನೆ ಲೋಕಮರುಳುಗೊಂಡು ಮಾಯೆುಂದ ಮರುಗಿ ಕೃಷ್ಣನೆ ಕೊರಗುತಿದೆ; ಮಾಯೆಯನ್ನು ದಾಟಿ ಕೃಷ್ಣನೆ ಬೇಗಪರಮನೊಳು ಬೆರೆಸಿ ಕೊರಗ ಬಿಡಿಸು ಕೃಷ್ಣನೆ 6ರಜ್ಜು ಸರ್ಪನಾಗಿ ತೋರಿ ಬೆದರೆ ಕೃಷ್ಣನೆ ಅದರಬೆಜ್ಜರವ ಪರಿವ ಮಂತ್ರವುಂಟೆ ಕೃಷ್ಣನೆರಜ್ಜುವೆಂದು ತಿಳಿವುದೊಂದೆ ಮಂತ್ರ ಕೃಷ್ಣನೆ ಹಾಗೆರಜ್ಜು ಸ್ಥಾನ ನಿನ್ನ ನಿಜವ ತೋರು ಕೃಷ್ಣನೆ 7ಕರ್ಮವೆ ಜನ್ಮಕ್ಕೆ ಹೇತುವೆನಲು ಕೃಷ್ಣನೆ ಅಂದುಬ್ರಹ್ಮವತ್ಸಪಾಲರಪಹರಿಸೆ ಕೃಷ್ಣನೆಕರ್ಮವಿತ್ತೆ ಬದುಲ ನಿರ್ಮಿಸಲು ಕೃಷ್ಣನೆ ಹಾಗೆಕರ್ಮವೆನ್ನದೀಗಲೆನ್ನ ಸಲಹು ಕೃಷ್ಣನೆ 8ದುರಿತ ದುಃಖದಿಂದ ನೋವ ಜನರ ಕೃಷ್ಣನೆ ಅವರದುರಿತಗಳ ನೂಕಿ ನಿನ್ನೊಳಿರಿಸು ಕೃಷ್ಣನೆತಿರುಪತೀಶ ದೇವ ವೆಂಕಟೇಶ ಕೃಷ್ಣನೆ ಮಾಯಾತೆರೆಯ ತೆಗೆದು ನಿನ್ನ ನಿಜವ ತೋರು ಕೃಷ್ಣನೆ 9ಓಂ ಸತ್ಯಸಂಕಲ್ಪಾಯ ನಮಃ
--------------
ತಿಮ್ಮಪ್ಪದಾಸರು
ಹುರುಡು ನಿನಗೆ ಥರವೇನೊ ಸ್ವಾಮಿ ಗರುಡವಾಹನ ಸುರಧೇನು ಪ. ಕುರುಡ ಕಾಣದೆ ಕೂಪದಲಿ ಬಿದ್ದರೆತ್ತದೆ ಮೊರಡುತನದಿ ಮುಖ ನೋಡುತ ನಗುವಂಥ ಅ.ಪ. ಜ್ಞಾನಮಾರ್ಗವ ಕಾಣದಿರುವ ದೀನ ಮಾನವನಿಗೆ ಮೋಹಭರವ ತಾನೆ ಕಲ್ಪಿಸಿ ತತ್ವದಿರುವ ಮುಚ್ಚಿ ನಾನಾ ಯೋಗಿಗಳಲ್ಲಿ ತರುವ ಮಾನವು ಸರಿಯೆ ಮಹಾನುಭಾವ ನಿನ್ನ ದೀನ ಬಂಧುತ್ವಕೆ ಹಾನಿ ಬಾರದೆ ಕೃಷ್ಣ 1 ಇಂದ್ರಿಯಾರ್ಥ ಸನ್ನಕರ್ಷವೆಂಬ ಬಂಧನದಲ್ಲಿ ಸಿಕ್ಕಿ ಬೀಳ್ವ ನಾನಾ ತಂದ್ರ ಸಾಗರ ಮುನಿಗಳ ಬಹು ಮಂಜನು ಮಾಯೆಯ ಗೆಲ್ವ ಹೊಂದಿಕೆಯನು ಸುಖ ಸಾಂದ್ರ ನೀನರಿಯೆಯ ಇಂದ್ರಾದಿಗಳನು ಎಂದೆಂದಿಗೂ ಸಲಹುವಿ 2 ಅದರಿಂದ ಸರ್ವಕಾಲದಲಿ ನೀನೆ ಒದಗಿ ಪೊಳೆವುತ್ತ ಮನದಲಿ ಪದಯುಗವಿರಿಸಿ ಶಿರದಲಿ ದಾಸಪದವ ಪಾಲಿಸು ಕರುಣದಲಿ ಭವ ವಂದ್ಯ ವೆಂಕಟಗಿರಿನಾಯಕ ಪದುಮಾಲಯೆ ಕೂಡಿ ಸದನದಿ ನೆಲೆಯಾಗು 3
--------------
ತುಪಾಕಿ ವೆಂಕಟರಮಣಾಚಾರ್ಯ
ಹೊಂದದಿರುವಿ ಯಾಕೆ ಮನವೆ ಇಂದಿರೇಶನ ಹಿಂದೆ ಮುಂದೆ ಸುಖವನೀವ ಮಂದರಾದ್ರಿಧರನ ಬೇಗ ಪ. ಸುತ್ತಿ ಬರುವಿ ನೀ ಮತ್ತೆ ವಿಷಯದಿ ಎತ್ತಲಾದರೀಶನಂಥ ವೃತ್ತಿ ದೊರೆವುದುಂಟೆ ನಿನಗೆ 1 ತೋಷಗೊಳುವೆನೆಂಬಾಸ್ಥೆ ತಾಳುವಿ ದೋಷಗಳಲಿ ಸಿಲುಕಿ ಬಹಳ ಘಾಸಿಯಾಗಿ ನೊಂದುಕೊಳುವಿ 2 ಅರಿಯದಾದಿ ನೀ ಹರಿಯ ಗುಣಗಳ ಚರಣಪದ್ಮ ಮಧುರ ರಸವ ಸುರಿವ ಸುಖವನೆಂದು ತಿಳಿವಿ 3 ಕೇಳು ನುಡಿಯನು ಕರುಣಾಳು ಒಡೆಯನು ತಾಳ ತನ್ನ ನಂಬಿದವರ ಗೋಳ ಬಿಡಿಸಿ ಸಲಹುತಿಹನು 4 ಭ್ರಾಂತಿಗೊಳದಿರು ಶ್ರೀಕಾಂತನಲ್ಲಿರುಕಂತುಜನಕ ವೆಂಕಟೇಶ ಚಿಂತಿತಾರ್ಥವಿತ್ತು ಕಾವ 5
--------------
ತುಪಾಕಿ ವೆಂಕಟರಮಣಾಚಾರ್ಯ
ಹೊಂದಿ ಬದುಕಿರೈಯ್ಯಾ ದೇವನಾ | ತರು | ಣೇಂದು ಶೇಖರ ಉಮಾ ಧವನಾ || ವಂದಿಸಿದವರಘವೃಂದ ನಿವಾರಿಸಿ | ಕೈವಲ್ಯ ತಂದು ಕೊಡುವನಾ ಪ ಸ್ಮರಿಸಿದವರ ಬದಿಯಲಿರುವಾ | ತನ್ನ | ಶರಣರಿಷ್ಟಾರ್ಥವಗರವಾ || ಕರುಣದಿ ಪತಿತರುದ್ಧರಿಸಲು | ತಾರಕ | ಗುರುರೂಪ ತಾನಾಗಿ ಧರೆಲಿ ಮೆರೆವನಾ 1 ಗಗನಧುನಿ ಧರಿಸಿದನಾ | ಬೆಟ್ಟ | ಮಗಳಿಗೆ ಅರ್ಧಾಂಗಿ ನೀಡಿಹನಾ || ನಿಗಮಾಗ ಮಂಗಳಯುಗತಿಗೆ | ನಿಲುಕದು | ನಿಲುಕದುರಗ ಭೂಷಣ ಭಸ್ಮಾಂಗ ವಿಗಢ ನಾಟಕನಾ 2 ಘನಸಾರ ಗೌರಾಂಗ ಹರನಾ | ತಪ್ತ | ಕನಕ ವರ್ಣ ಜಟಾಧರನಾ || ಮುನಿಜನ ಶುಭತದವನ ಚೌರ್ಚಿತ | ಪದ || ಅನುದಿನ ಮಹಿಪತಿ ಜನ ಸಲಹುವನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹ್ಯಾಂಗಾದರ್ಹಾಂಗಾಗಲಿ ಎ- ನ್ನಿಂಗಿತವ ನೀ ಬಲ್ಲೆ ರಂಗಯ್ಯಪ ಮಂಗಳಾಂಗ ನೀ ಕೊಟ್ಟು ಸಲಹೋ ಶುಭಾಂಗ ಅ- ನಂಗಜನಕ ಭುಜಂಗಶಯನ ಮಾ- ತಂಗವರದ ಶ್ರೀ ರಂಗನಾಥನೇ1 ದೇವಾ ನಾ ಸದ್ಭಾವದಲ್ಲಿ ನಿನ್ನ ಪಾದ ಪದುಮ ನಿರುತ ಧೇನಿಸುವೆ ಪವಮಾನ ಜೀವೋತ್ತಮ ನೀ ಧರ್ಮೋತ್ತಮನೆನ್ನುವ ಭಾವ ಎನಗಾವಕಾಲದಿ ಇರಲಿ ಬೇಡೆನು ಇತರ ಸಂಪದವಾ 2 ಶ್ರೀಶಾ ಶ್ರೀ ವೆಂಕಟೇಶ ನಿರ್ದೋಷ ಗುಣ ವಾಸನೆ ನಿನ್ನ ದಾಸಜನಭವಪಾಶ ಕ್ಲೇಶ- ನಾಶನವ ಗೈಸಿ ಸಲಹುವುದು ಶೇಷಶಯನ ಶ್ರೀ ರಂಗಶಾಯಿ 3
--------------
ಉರಗಾದ್ರಿವಾಸವಿಠಲದಾಸರು
ಹ್ಯಾಗೆ ಉದ್ಧಾರ ಮಾಡುವನೋ ಹರಿ ಹೀಗೆ ದಿನಗಳ ಕಳೆಯುವರ ಪ. ಆದಿಮೂರುತಿ ಶ್ರೀ ದೇವ ಪದುಮನಾಭ ವೇದ ಉದ್ಧಾರನೆಂದನಲಿಲ್ಲ ಸಾದರದಲಿ ಹರಿ ಸಕಲರಿಗೊಡೆಯನೆಂ ದಾದರದಲಿ ನಾ ಪಾಡಲಿಲ್ಲ 1 ಮೃಚ್ಛಕೂರ್ಮಹರಿ ಸ್ವಚ್ಛÀವರಹನೆಂದು ಉಚ್ಚಧ್ವನಿಯಿಂದ ಕೂಗಲಿಲ್ಲ ತುಚ್ಛಕನ ಕೊಂದು ಅಚ್ಚ ಭಾಗವತಗೆ ಮೆಚ್ಚಿ ರಕ್ಷಿಸಿದನೆಂದೆನಲಿಲ್ಲ 2 ಚಲುವ ವಾಮನನಾಗಿ ಬಲಿಯ ದಾನವ ಬೇಡಿ ಮಲವನಳಿವ ಗಂಗೆ ಪಡೆದನೆಂದು ಕುಲವಳಿದು ಭೂಲಲನೆಯ ವಿಪ್ರರಿ ಗೊಲಿದು ಇತ್ತನೆಂದು ನೆನೆಯಲಿಲ್ಲ 3 ಸೀತೆಗಾಗಿ ಪಡೆಸವರುತ ಹರುಷದಿ ವಾತತನಯಗಜಪದವಿತ್ತನ ಈತನೆ ಪರದೈವನಾಥನು ಪರಕೆಂದು ಪ್ರೀತಿ ಭಕ್ತಿಯಲಿ ಮೈಮರೆಯಲಿಲ್ಲ 4 ಗೋಪಿಯರ ಕೂಡಿ ಗೋಪನ ಮನೆಯಲಿ ಶ್ರೀಪತಿ ಲೀಲೆಯ ತೋರ್ದನೆಂದು ಪಾಪದ ಕಾಷ್ಠಕೆ ಪಾವಕನಾಗಿಹ ತಾಪಹರನ ನಾ ನೆನೆಯಲಿಲ್ಲ 5 ಲಲನೇರ ವ್ರತವಳಿದು ಚಲುವ ಕುದುರೆ ಏರಿ ಕಲಿಮುಖರನು ಸದೆಬಡಿದನೆಂದು ಚಲುವ ಗೋಪಾಲನೆ ನೀನೇ ಗತಿ ಎಂದು ಹಲವು ಬಗೆಯಿಂದ ಪೊಗಳಲಿಲ್ಲ 6 ಗುರುಗಳು ಪೇಳಿದ ಪರಮ ರಹಸ್ಯವು ಅರಿವಾದರೂ ಅನುಭವ ಇಲ್ಲ ಪರಿಪರಿ ಮಹಿಮೆಯ ಉದಯಸ್ತ ಪರಿಯಂತ ಅರಿವು ಮನಕೆ ಎನಗಾಗಲಿಲ್ಲ 7 ದೇಹಸ್ತ ಹರಿ ಎಂದು ದೇಹವ್ಯಾಪ್ತನು ಎಂದು ದೇಹ ಗೇಹ ಜೀವ ಭಿನ್ನವೆಂದು ಶ್ರೀ ಹರಿ ಜೀವಾಂತರ್ಯಾಮಿಯಾಗಿಹನೆಂದು ಮೋಹವಳಿದು ಜ್ಞಾನ ಪುಟ್ಟಲಿಲ್ಲ 8 ತತ್ವಾಧಿಪತಿ ಹರಿ ತತ್ವಾಭಿಮಾನಿಗಳು ನಿತ್ಯ ಹರಿಮಾರ್ಗ ತೋರ್ವರೆಂದು ಸತ್ಯವಚನವನು ವಾಯು ಮತದಿ ನಂಬಿ ಭೃತ್ಯ ಭಾವವ ನಾ ವಹಿಸಲಿಲ್ಲ 9 ಎಷ್ಟು ಹೇಳಲಿ ಎನ್ನ ಅವಗುಣಗಳನೆಲ್ಲ ದೃಷ್ಟಿಯಿಂದಲಿ ನೋಡಿ ನೀನೆ ಸಲಹೋ ಬೆಟ್ಟದೊಡೆಯನಾಗಿ ಎಲ್ಲರ ಸಲಹುವ ಅಷ್ಟಭುಜ ಗೋಪಾಲಕೃಷ್ಣವಿಠಲ10
--------------
ಅಂಬಾಬಾಯಿ
(ಮೂಲ್ಕಿಯ ನರಸಿಂಹ ದೇವರು)ರಕ್ಷಿಸು ಮನದಾಪೇಕ್ಷೆಯ ಸಲಿಸುತಲಕ್ಷ್ಮೀನರಹರಿ ರಾಕ್ಷಸವೈರಿ ಪ.ಅಕ್ಷಮ ದುಶ್ಯೀಲ ದುವ್ರ್ಯಾಪಾರದಿಕುಕ್ಷಿಂಭರನೆಂದುಪೇಕ್ಷೆಯ ಮಾಡದೆ ಅ.ಪ.ಉಭಯ ಶುಚಿತ್ವವು ಊರ್ಜಿತವೆನೆ ಜಗ-ದ್ವಿಭುವಿಶ್ವಂಭರವಿಬುಧಾರಾದ್ಯಶುಭಮತಿ ಸಂಸ್ಥಿತಿಯಭಯವ ಪಾಲಿಸೊತ್ರಿಭುವನಮೋಹನ ಪ್ರಭು ನೀನನುದಿನ 1ತಂದೆಯ ಮುನಿಸಿನ ಕಂದನ ಸಲಹುತಸಿಂಧುಶಯನ ನಿತ್ಯಾನಂದ ಗುಣಾಬ್ಧೇಹಿಂದಣ ಪಾಪವು ಮುಂದೆಸಗದ ರೀತಿಮಂದರಾದ್ರಿಧರ ಮಾಮವ ದಯಾಕರ 2ಪಾಪಾತ್ಮರಲಿ ಭೂಪಾಲಕನು ನಾಶ್ರೀಪತಿ ಕರುಣದಿ ಕಾಪಾಡುವುದುಗೋಪೀರಂಜನ ಗೋದ್ವಿಜರಕ್ಷಣಕಾಪುರುಷರ ಭಯ ನೀ ಪರಿಹರಿಸಯ್ಯ 3ಸರ್ವೇಂದ್ರಿಯ ಬಲತುಷ್ಟಿಪುಷ್ಟಿಯಿತ್ತುಸರ್ವಾಂತರ್ಯದೊಳಿರುವನೆ ಸಲಹೊದುರ್ವಾರಾಮಿತ ದುರ್ವಿಷಯದಿ ಬೇ-ಸರ್ವೇನು ಪನ್ನಗಪರ್ವತವಾಸನೇ 4ಶರಣಾಗತನಾಗಿ ಸೆರಗೊಡ್ಡಿ ಬೇಡುವೆವರಮೂಲಿಕಪುರ ದೊರೆಯೇಹರಿಲಕ್ಷ್ಮೀನಾರಾಯಣತ್ರಿಜಗದ್ಭರಿತ ಉತ್ಪ್ರೇರಕ ಸ್ಥಿರಭಕ್ತಿಯನಿತ್ತು 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ