ಒಟ್ಟು 18764 ಕಡೆಗಳಲ್ಲಿ , 134 ದಾಸರು , 7642 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆ. ಶ್ರೀಹರಿಯ ಸ್ತುತಿ ಅಂಗಾರವನೆ ನೀಡು ಯನ್ನಂತರಂಗದ ಧೊರಿಯೇ ಪ ಅಮಂಗಳಗಳ ನೀಡುವೋ ಪರಮನೀಚ ಅಂಗನಿಯಳಿಗೆ ಅ.ಪ. ಮಂಗಳಾತ್ಮಜ ನಿನ್ನ ಅನುಗಾಲ ಕಂಗಳಿಂದಲಿ ನೋಡಿ ಸುಖಿಸುವೋಡಿಂಗನಾ ಭಂಗಪಡಿಸುತಿಹಳಿ 1 ಪರಮ ಅದ್ಭುತ ಮೂಗುತಿಯೆ ನಿನ್ನ ಅದ್ಭುತ-ಚರಿಯವ ತೋರು ಭೂತನಾಥಾ 2 ಭಕ್ತವತ್ಸಲನೆಂಬ ಬಿರುದು ಬೇಕಾದರೆ ನಂಬಿದ ಭಕುತರನು ಪಾಲಿಸಿ ಬಿರುದು ಪಡಿಯೋ 3 ಶಕುತಿ ಇಲ್ಲದ ಕಾರಣದಿ ವಿಷಕೂಪದೊಳು ಬಿದ್ದು ಘನ ಪಾಪಕೊಳಗಾದೆನೋ ವಿಷಕಂಠನೇ 4 ಹಂಸರೂಢನಾದ ದಾಸ ನಿನ್ನ ದಾಸರನು ಕ್ಲೇಶಪಡಿಸುವರ ಧ್ವಂಸಗೈಯೋ ತಂದೆವರದಗೋಪಾಲನಭಜಕಾ 5
--------------
ತಂದೆವರದಗೋಪಾಲವಿಠಲರು
ಆಕಳ ಕಾಯುವ ಗೊಲ್ಲನ ಪರಿಯಲಿ ತಾ ಕೋಲನು ಪಿಡಿಯನು ಹರಿಯು ಪ ಸಾಕಲು ಬಯಸುವ ಜನರಿಗೆ ದೇವನು ತಾ ಕರುಣಿಸುವನು ಸನ್ಮತಿಯ ಅ.ಪ ಸಂಸಾರದ ಸಾಗರವನು ದಾಟಲು ಹಿಂಸೆಗಳೆಲ್ಲವ ಸಹಿಸುವರ ಸಂಶಯ ಭ್ರಾಂತಿಯ ತೊಲಗಿಸಿ ಪೊರೆಯಲು ಕಂಸಾರಿಯು ತಾ ಕೊಡುವ ವಿವೇಕವÀ 1 ನೀರಿನ ಮೇಲಿನ ಗುಳ್ಳೆಗಳಂದದಿ ಭವ ಭೋಗಗಳು ಯಾರಲಿ ಕರಣವ ತೋರ ಬಯಸುವನೊ ದೂರ ಮಾಡುವನು ಧನಕನಕಗಳ 2 ಶಾಂತಿಯೇ ಸೌಖ್ಯಕೆ ಕಾಣವೆಂಬುವ ಅಂತರಂಗವನು ಗಮನಿಸಿರಿ ಶಾಂತಿಗೆ ಸಾಧನ ಜ್ಞಾನವ ಪಡೆಯಲು ಸಂತತ ಸನ್ಮತಿ ಕೊಡಲಿ ಪ್ರಸನ್ನನು 3
--------------
ವಿದ್ಯಾಪ್ರಸನ್ನತೀರ್ಥರು
ಆಗಿದ್ದ ಹರಿ ಈಗಿಲ್ಲವೇನು ಸಾಗರಶಾಯಿ ಭಕ್ತರಭಿಮಾನ್ಯಲ್ಲೇನು ಪ ಖುಲ್ಲರ್ಹಾವಳಿಯಿಂದ ಝಲ್ಲು ಬಿಡಿಸಿ ಮುನಿಯ ಕಲ್ಲನ್ನು ಸತಿಮಾಡ್ದ ಬಿಲ್ಲು ಇಕ್ಕಡಿಗೈದ ಕೊಲ್ಲಿ ದಶಮುಖನನ್ನು ನಲ್ಲೆಯಳ ಕರೆತಂದ ಒಲ್ಲಿದು ರಾಜ್ಯವನಿತ್ತ ಸುಲಭದ್ವಿಭೀಷಣಗೆ1 ಅರಮನೆಕಂಬದಿ ಅರಿಯದಂತಡಗಿ ತಾ ದುರುಳನ ಸದೆಬಡಿದು ತರಳ ಸಲಹಿದ ಬರುವ ಮುನಿಶಾಪವಂ ವರಚಕ್ರದಿಂ ತಡೆದು ಕರುಣದಿ ನೃಪನನ್ನು ಪೊರೆದ ಪರಮಾತ್ಮ 2 ಕರುಣಾಳು ಶ್ರೀರಾಮ ಚರಣದಾಸರ ಮನಕೆ ಕೊರತೆಯ ತರದಂತಿರುವ ಬೆಂಬಿಡದೆ ಮರುಗಿ ಸೊರುಗುವುದ್ಯಾಕೊ ಸರುವ ಭಾರವನ ಮೇ ಲ್ಹೊರೆಸಿ ಮೊರೆಯಿಟ್ಟ ಬಳಿಕರಿಯನೇನೀಶ 3
--------------
ರಾಮದಾಸರು
ಆಂಜನೇಯನೆ ಅನಿಲಸುತನೆ ಪ ಸಂಜೀವರಾಯ ಮಂಜುಳ ವಜ್ರಕಾಯ ಅ.ಪ ತಾಮರಸ ಭಾಂಧವ ಕಬಳೀಕೃತ 1 ಧಾಮ ಸುನಾಮ ತಾಮಸ ಕೌರವ ನಿರ್ನಾಮ ಕೃಷ್ಣಪ್ರೇಮ 2 ಗುರುರಾಮ ವಿಠಲ ಕಿಂಕರ ಯತಿವರ ಮಧ್ವಾಭಿಧ ಹರಿನಾನೇ ಯೆಂಬುವರ ಗರ್ವವ ಮುರಿದ 3
--------------
ಗುರುರಾಮವಿಠಲ
ಆಂಜನೇಯನೆ ಅಮರವಂದಿತ ಕಂಜನಾಭನÀ ದೂತನೆ ಪ. ಮಂಜಿನೋಲಗದಂತೆ ಶರಧಿಯ ದಾಂಟಿದ ಮಹಾಧೀರನೆಅ.ಪ. ಆಂಜನೇಯನೆ ನಿನ್ನಗುಣಪರಾಕ್ರಮ ಪೊಗಳಲಳವೆ ಪ್ರಖ್ಯಾತನೆಸಂಜೀವನವ ತಂದು ಕಪಿಗಳ ನಂಜು ಕಳೆದ ಪ್ರಖ್ಯಾತನೆ 1 ಕಾಮನಿಗ್ರಹನೆನಿಸಿ ಸುರರಭಿಮಾನಿ ದೇವತೆಯೆನಿಸಿದೆರಾಮಪಾದಕ್ಕೆರಗಿ ನಡೆದು ನಿಸ್ಸೀಮ ನೀನೆಂದೆನಿಸಿದೆ 2 ಸಿಂಧು ಹಾರಿದೆ ಶೀಘ್ರದಿಂದಲಿ ಬಂದು ಸೀತೆಗೆ ನಮಿಸಿದೆತಂದು ಮುದ್ರೆಯನಿತ್ತು ಮಾತೆಯ ಮನವ ಸಂತೊಷಪಡಿಸಿದೆ 3 ಜನಕತನುಜೆಯ ಮನವ ಹರುಷಿಸಿ ವನವ ಕಿತ್ತೀಡಾಡಿದೆದನುಜರನ್ನು ಸದೆದು ಲಂಕೆಯ ಅನಲಗಾಹುತಿ ಮಾಡಿದೆ 4 ಶ್ರೀರಾಮಕಾರ್ಯವ ವಹಿಸಿ ಅಕ್ಷಕುಮಾರನನು ಸಂಹರಿಸಿದೆಘೋರ ರಕ್ಕಸರೆಂಬುವರನು ಮಾರಿವಶವನು ಗೈಸಿದೆ 5 ಭರದಿ ಬಂದು ಶ್ರೀರಾಮಪಾದಕ್ಕೆರಗಿ ಬಿನ್ನಹ ಮಾಡಿದೆಉರಗಗಿರಿ ಹಯವದನನ ಪರಮಭಕ್ತನೆಂದೆನಿಸಿದೆ6
--------------
ವಾದಿರಾಜ
ಆಟವಾಡಬೇಕು ಒಳ್ಳೆ ಊಟಮಾಡಬೇಕು ಪ ಆಟ ಬಲ್ಲ ಮಾನವನಿಗೆ ರೋಗದ ಕಾಟವಿರದೆ ತಾ ಊಟ ಮಾಡುವನು ಅ.ಪ ಪಂಡಿತರಾಗಿ ಅಖಂಡ ಕಲೆಗಳನು ಚಂಡಿನಂತೆ ಕರತಲದಲಿ ಪಿಡಿಯುತ 1 ಕಣ್ಣಮುಚ್ಚಿ ಇಂದ್ರಿಯಗಳ ನಿಲ್ಲಿಸಿ ಹೃನ್ಮಂದಿರದಲಿ ಹರಿಯನು ಹಿಡಿಯುವ 2 ಈಶ ಜೀವ ಜಡರೆಂಬೊ ಮೂವರಲಿ ಈಶನೇ ಹಾಸೆಂದರಿಯುತ ಮೂರೆಲೆ 3 ಹಿಂದಿನ ದಿನ ಹರಿದಿನ ಮರುದಿನಗಳು ಇಂದಿರೆಯರಸನ ಕೂಡಿ ಏಕಾದಶಿ 4 ಸಿಕ್ಕಿದ ಸ್ಥಾನವು ದಕ್ಕದೆಂಬುದಕೆ ಭಕ್ತ ಪ್ರಸನ್ನ ತೋರಿದ ಕೊಕ್ಕಿನ5
--------------
ವಿದ್ಯಾಪ್ರಸನ್ನತೀರ್ಥರು
ಆಡಣ್ಣ ನೀನಾಡಣ್ಣ ಅನುಭವದಾಟ ಆಡಣ್ಣ ಪ ರೂಢಿಯೋಳ್ಹರಿಯ ಗಾಢಮಹಿಮೆ ಕೊಂಡಾಡುವರೊಡನಾಟ ಅ.ಪ ಅಳುವರ ಕಂಡರೆ ಅತ್ತಂತೆ ಕಾಣೋ ನಗುವರ ಕಂಡರೆ ನಕ್ಕಂತೆ ಕಾಣೋ ಅಳುವ ನಗುವರಲಿ ಸಿಲುಕಿ ಸಿಲುಕದೆ ನಿ ನ್ನೊಳಗೆ ಮಾಧವನ ತಿಳಿದು ಆನಂದದಿ 1 ಅವರನು ಕಂಡರೆ ಅವರಂತೆ ಇವರನು ಕಂಡರೆ ಇವರಂತೆ ಅವರಿವರಿಗೊಂದೆಸವನೆತೋರಿ ಸಿರಿ ಪಾದ ಮನಭವನದಿಟ್ಟ್ಹಿಗ್ಗುತ 2 ವಾಸನೆ ಪ್ರಥಮ ನಾಶನ ಮಾಡೊ ದಾಸರ ಕಂಡರೆ ಸೇವೆಯ ಮಾಡೋ ಆಶಪಾಶ ನೀಗಿ ಶ್ರೀಶ ಶ್ರೀರಾಮನ ದಾಸನಾಗಿ ನಿಜ ಮುಕ್ತಿಯ ಕೂಡೊ 3
--------------
ರಾಮದಾಸರು
ಆಡುತ್ತಾ ಬಾರಮ್ಮಾ ನಲಿದಾಡತ್ತಾ ಬಾರಂಮಾ ಆಡುತ್ತವರಗಳಾ ನೀಡುತ್ತಾ ಕರುಣಾದಿ ನೋಡುತ್ತಾ ದಯದಿಂದಾ ಲಕ್ಷ್ಮಿ ಆಡುತ್ತಾಬಾರಮ್ಮಾ ಪ. ಬೇಸರವು ಬೇಡಮ್ಮಾ ದಾಸರ ದಾಸಿಯು ನಾನಿಂವÀು ವಾಸನಪೂರಿತೆ ವನರೂಹ ನೇತ್ರೆ ಸಾಸಿರನಾಮದ ವಾಸುದೇವನ ಸತಿ ಆಡುತ್ತಾಬಾರಮ್ಮಾ ನಲಿದಾಡುತ್ತಾ ಬಾರಮ್ಮಾ 1 ಕರದಾರವೊಯೆಂದು ತಾಯೆಯಂನಾ ಮೊರೆಯಲಾಲಿಸೆ ನೀ ಬಂದು ದುರಿತಗಳಾನೆಲ್ಲಾ ಪರಿಹರಿಸುವ ನಿಂಮ ಅನುದಿನ ಆಡÀುತ್ತಾ ಬಾರಮ್ಮಾ2 ಧರಣಿಯೊಳುನ್ನತವಾದ ಹೆಳವನಾಕಟ್ಟೆ ಗಿರಿಯೊಳು ನೆಲಸಿದ ಪರಮ ಪವಿತ್ರಳ ಕರುಣಾ ಸಿಂಧುವೆ ವರವನು ಕೊಡುತ್ತಾ ಬೇಗಾದಿಂದಲಿ ಆಡುತ್ತಾ ಬಾರಮ್ಮಾ3
--------------
ಹೆಳವನಕಟ್ಟೆ ಗಿರಿಯಮ್ಮ
ಆಡುವ ಬನ್ನಿರಿ ಬಾಲಕರೆ ಪ ರೂಢಿಗಚ್ಚರಿಯಾಗಿ ಬಲುಲೀಲೆಗಳಿಂ ಅ.ಪ ಜನನ ಮರಣವÉಂಬ ಚೆಂಡು ಬುಗುರಿಯಿಂ ಮನದ ವೃತ್ತಿಗಳೆಂಬ ಗೋಲಿಗಜ್ಜುಗದಿಂ ಜನಸಂಘವೆಂಬುವ ಚಿಳ್ಳೆಕೋಲುಗಳಿಂ ಅನುದಿನ ಭ್ರಾಂತಿಯೆಂಬ ಕವಣೆ ಕಲ್ಲುಗಳಿಂ 1 ಏಳುತಲೀ ಮುಖ ತೊಳೆದು ನೀವೆಲ್ಲ ಕರ್ಮ ಭಕ್ಷಗಳೆಲ್ಲ ಲೀಲೆಯಿಂ ಮೆಲ್ಲುತಲಿದರೊಳು ಬಲ್ಲ ಶೀಲ ಸದ್ಗುಣವುಳ್ಳ ಬಾಲಕರೆಲ್ಲ 2 ಶ್ರವಣ ಮನನವೆಂಬ ಸಾಧನೆಯಿಂದ ಭವಹರ ಗುರುರಾಮ ವಿಠಲ ಮುಕುಂದ 3
--------------
ಗುರುರಾಮವಿಠಲ
ಆಡುವರೇಚಕ ಪೂರಕ ನಂದಿಯ | ಜೋಡಿಸಿ ಎರಡನು ಮೆರೆವಸುಷಮ್ನಿಯ | ನಾಡಿಯ ರಥಿಕರ ಹೂಡುತ ಮೆಲ್ಲನೆ | ನಿಜಮನ ಸಾರಥಿಯಾ | ಕೂಡಿಸಿ ಹರುಷಲೇರಿ ನಡೆಸುತ ಸ | ವಾಡಿಕಿಯಿಂದಲಿ ಮೇಲ್ಗುರಿಯಾತ್ರೆಯ | ಮಾಡಿ ವಿಲಾಸದಲಾಡಿದ ಮಹಿಪತಿ | ಗುರುಮೂರ್ತಿಗೆ ಶರಣು
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಆತ್ಮನಿವೇದನೆ ಅಗಲದಿರೆಲೋ ನೀನೆನ್ನ ಬಿಟ್ಟು ಅಗಲದಿರೆಲೋ ನಿಗಮಾತೀತ ನಿರ್ಜರೇಶ ಪ ಹಗಲು ಇರುಳು ನಿನ್ನ ಬಿಟ್ಟು ಅಗಲಿ ಇರಲಾರೆ ನಾನು ಸುಗುಣ ಸಂತರಾತ್ಮನೆನ್ನ ಬಗೆಗೊಂಡು ರಕ್ಷಿಸಭವ 1 ಮುಟ್ಟಿಭಜಿಪೆ ನಿನ್ನ ಚರಣ ಕೆಟ್ಟಗುಣಗಳೆಣಿಸದೆನ್ನ ನಿಷ್ಠೆಯೊಳಗೆ ನಿಂತು ಸಲಹೋ ಕಷ್ಟಹರಣ ಕರುಣಾಶರಧಿ 2 ಶ್ರೀಶರಾಮ ನಿನ್ನ ಚರಣ ದಾಸ ನಾನು ಮನ್ನಿಸೆನ್ನ ಧ್ಯಾನದಲ್ಲಿ ನೀ ವಾಸನಾಗಿ ಪೋಷಿಸನುಮೇಷ ಬಿಡದೆ 3
--------------
ರಾಮದಾಸರು
ಆತ್ಮನಿವೇದನೆ ಅಚಿಂತ್ಯಾದ್ಭುತ ಮಹಿಮ ಈ ಸಚರಾಚರದೊಳು ಪ್ರಚುರನಾಗಿಹೆ ದೇವಾ ಮುಚುಕುಂದವರದಾ ಪ ಅಚಲಭಕುತಿಯು ನಿನ್ನ ಚರಣದಿ ಕಿಂಚಿತಾದರೂ ಪ್ರಚುರಮಾಡಿಸು ಅತಿಚಂಚಲನು ಬಲು ವಂಚಕನು ನಾ ಅನು- ಚಿತೋಚಿತ ಕರ್ಮವರಿಯೆನೋ ಅ.ಪ ವಿಪಿನವಾಸದಿ ಎನಗೆ ವಿಪರೀತವನು ತೋರಿ ಅಪರಾಧವೆಣಿಸದೆ ಪಾಲಿಸಿದೇ ಕೃಪಣವತ್ಸಲ ನೀನೇ ಕೃಪೆಮಾಡಿ ಸ್ವಪನದಿ ಅಪರಿಮಿತದ ವಿಶ್ವರೂಪವ ನೀ ತೋರ್ದೆ ಅಪರಾಧಿ ನಾನಹುದೋ ಸ್ವಾಮಿ ಅಪವರ್ಗಪ್ರದನು ನೀನು ಸಫಲಗೊಳಿಸಿದೆ ಎನ್ನ ಮನದನು- ತಾಪವನು ಪರಿಹರಿಸಿ ಕಾಯ್ದೆ ನಿನ್ನಡಿದಾವರೆಯ ನಂಬಿದೆನೋ ಶ್ರೀ ಪರಮಹಂಸರಿಂದ ನುಡಿಸಿದ ರಹಸ್ಯಗಳು ಅದುಏನೋ ಶ್ರೀ ಪುರುಷೋತ್ತಮನೆ ನೀನೆನ್ನಭಯಹಸ್ತದಿ ಕರೆದ ಪರಿಯೇನೋ ಅದನೊಂದನರಿಯೆನೊ ಈಪರಿಯ ಕರಚರಣದಲಿ ಚರಿಸಿದ ಅನುಪಮ ಕ್ರಿಯೆಯ ನೋಡಿ ಮನದೊಳು ಸುಪುತಕಾಲದಿ ತೈಜಸನೆ ನೀನೆನ್ನ ಪುಳುಕಾಂಕಿತನ ಮಾಡಿದೇ 1 ಅಮಿತ ಕಾರ್ಯವನೆಸಗೀ ಬಲು ಯಾತನೆಗೊಂಡು ಇಳೆಯೊಳು ಬಾಳೀ ದು- ರ್ಬಲನಾಗಿದ್ದರು ಎನ್ನ ಛಲವು ತೊಲಗಲಿಲ್ಲ ಜಲಜನಾಭನೆ ನೀನೆ ಕರುಣಿಸಿ ಸಲಹದಿರ್ದೊಡೆ ಪ್ರ- ಬಲರೆನ್ನನು ಕವಿದು ಮನಚಂಚಲವ ಪುಟ್ಟಿಸೀ ವಲೀಮುಖನಂತಾಡಿಸುವರೋ ಕಲಿಮಲವನ್ನೆ ಪರಿಹರಿಸುವುದೋ ಮನದಿ ಎಡೆಯು ದುರ್ಲಭವೋ ಒಲುಮೆಯಿಂದಲಿ ಸಾಧಿಸಲು ಎಲ್ಲೆಡೆಯ ಸರ್ವತಂತ್ರ ಸ್ವಾತಂತ್ರ್ಯ ನಿನ್ನದೋ ಭೋ ಜಗತ್ಪತೇ ಕಾಲನಾಮಕ ನೀನೆ ಆಪತ್ಕಾಲಬಾಂಧವವೆಂದು ನಂಬಿದೆ ಜಾಲಮಾಡದೆ ಎನ್ನ ಜೀವಿತದಲ್ಪಕಾಲದಿ ಕರುಣೆ ತೋರೈ2 ತುಷ್ಟನೆಂತಾಗುವೆಯೊ ಭ್ರಷ್ಟಪಾತಕಿ ನಾನು ಕಷ್ಟವಲ್ಲವೋ ನಿನಗೆ ಶ್ರೇಷ್ಟಮೂರುತಿಯೆ ಇಷ್ಟಮೂರುತಿಯೆಂದು ಇಷ್ಟು ನುಡಿದೆನೊ ಸಾಷ್ಟಾಂಗ ನಿನ್ನೊಳು ಇರಲೋ ಇಷ್ಟೇ ಎನ್ನದೊ ದೇವಾ ಕಷ್ಟಕಷ್ಟವೊ ಬೆಟ್ಟದೊಡೆಯ ಕೊಟ್ಟುದಷ್ಟು ನಿನ್ನದಯ್ಯಾ ಇಷ್ಟೆಬೇಡುವೆ ಎನಗೆ ಎ- ಳ್ಳಷ್ಟು ಭಕುತಿಯ ಕೊಡದಿರುವೆಯಾ ಸೃಷ್ಟಿಸ್ಥಿತಿಲಯನಿಯಮನಾದ್ಯಷ್ಟ ಕತೃತ್ವವು ನಿನ್ನದೊ ಅಷ್ಟಾಂಗಯೋಗದಿ ತುಷ್ಟಪಡಿಸೆ ತನುಮನೋಧಿಷ್ಟಾನವು ನಿನ್ನದೊ ಶ್ರೇಷ್ಠಮೂರುತಿ ಸುಲಭದಲಿ ನೀ ದೃಷ್ಟಿಗೋಚರವಾಗುವುದು ಇನ್ನೆಂತೋ ಹಾ ಕಷ್ಟಕಷ್ಟವೋ ಸೃಷ್ಟಿಯೊಳು ನಾನೆಷ್ಟರವ ನಿನ್ನಿಷ್ಟಬಂದಂತಾಗಲಿ ಭವ- ಶ್ರೀ ವೇಂಕಟೇಶ ಉರಗಾದ್ರಿವಾಸವಿಠಲ 3
--------------
ಉರಗಾದ್ರಿವಾಸವಿಠಲದಾಸರು
ಆತ್ಮನಿವೇದನೆ ಅಂಜಬ್ಯಾಡ ಅಂಜಬ್ಯಾಡೆಲೋ ಜೀವ ಭವ ಭಂಜನ ಹರಿ ಶರಣರ ಕಾವಾ ಪ ಮಾತ ಹೇಳುವೆ ನಿನಗೊಂದ ಪರರಜ್ಯೋತಿ ಕಾಣುವತನಕೀ ಬಂಧ ಭೂತ ಭೇತಾಳಗಳಿಂದ ನಿನಗೆ ಭೀತಿ ಪುಟ್ಟಲಿಲ್ಲೋ ಮತಿಮಂದ 1 ಛೇದ ಭೇದಗಳು ನಿನಗೆಲ್ಲಿ ನೀ ಅ- ನಾದಿ ನಿತ್ಯವೆಂಬುದ ಬಲ್ಲಿ ವೇದ ಬಾಹ್ಯರಾಗದೆ ಇಲ್ಲಿ ಹರಿ ಪಾದ ಇನ್ಯಾಕೆ ಪೂಜಿಸಲೊಲ್ಲಿ 2 ನೀನು ನಿನ್ನದು ಅಲ್ಲವೋ ನೋಡಾ ದೇಹ ನಾನು ನನ್ನದೆಂಬರೋ ಮೂಢಾ ಮಾನಹಾನಿ ಮಾಡಿಕೊಳಬೇಡ ಬಿಡು ಸಾನುಬಂಧಿಗಳ ಸ್ನೇಹವ ಗಾಢ 3 ಅಹಿತಾದಿ ವಿಭೂತಿಯ ನೋಡೋ ಸೋಹಂ ಎಂಬರೆ ವಿಘಾತಿಯ ನೇಹವ ಪಡೆವರೆ ಗೀತೆಯ ಕೇಳಿ ಮೋಹವ ಕಳಕೋ ವಿಜಾತಿಯ 4 ಮಧ್ವವಲ್ಲಭ ಮಾಡಿದ ಗ್ರಂಥ ದೊಳಗದ್ವೈತತ್ರಯ ತಿಳಿದಂಥ ವಿದ್ವಾಂಸರು ಚರಿಸುವ ಪಂಥವನ್ನು ಸದ್ಭಕ್ತಿಲಿ ಸಾಧಿಸು ಭ್ರಾಂತ 5 ಜಾಗರ ಸ್ವಪ್ನ ಸುಷುಪ್ತಿಗಳೊಳು ವರ ಭೋಗಿಶಯನನ ರೂಪಗಳೇಳು ಭಾಗವತ ಬಲ್ಲವರ ಕೇಳು ಬೃಹ- ದ್ಯಾಗವ ಹರಿಗರ್ಪಿಸಿ ಬಾಳು 6 ಪಂಚಾತುಮ ಸಿಲುಕವ ಷಟ್ ಪಂಚ ಪಂಚಿಕೆಗಳ ಕರ್ಮವ ಮೀಟಿ ಪಂಚಿಕೆ ತಿಳಿದುಕೊಂಡರೆ ನಿಷ್ಪ್ರ ಪಂಚನಾಗಿ ನೀ ಕಡೆದಾಟಿ7 ಜ್ಞಾನೇಚ್ಛಾ ಕ್ರಿಯಾ ಶಕ್ತಿಗಳೆಂಬ ಈ ಮ- ಹಾನುಭಾವದಿ ನಿನ್ನ ಬಿಂಬ ತಾನೇ ಸರ್ವತ್ರದಲಿ ಕಾಂಬ ಇದ- ಕೇನು ಸಂದೇಹವಿಲ್ಲವೋ ಶುಂಭ 8 ತಾಪತ್ರಯಂಗಳು ನಿನಗೆಲ್ಲಿ ಪುಣ್ಯ ಪಾಪಕ್ಕೆ ಲೇಪನಾಗೋಕೆ ಹೊಲ್ಲ ಪ್ರಾಪಕ ಸ್ಥಾಪಕ ಹರಿಯೆಲ್ಲ ಜಗ ದ್ವ್ಯಾಪಕನೆಂದರಿತರೆ ಕೊಲ್ಲ 9 ಡಿಂಭದೊಳಗೆ ಚೇತನವಿಟ್ಟು ಜಗ- ದಂಬಾರಮಣ ಮಾಡಿದ ಕಟ್ಟು ಉಂಬುಡುವ ಕ್ರಿಯೆಗಳನಷ್ಟು ನಿನ್ನ ಬಿಂಬನಾಧೀನನಾದರೆ ಇಷ್ಟ 10 ಲಕ್ಕುಮಿ ಅವನ ಪಟ್ಟದ ರಾಣಿ ದೇ- ವರ್ಕಳು ಪರಿಚಾರಕ ಶ್ರೇಣಿ ವಕ್ಕಲು ನಾವೆಲ್ಲರು ಪ್ರಾಣಿ ದಶ- ದಿಕ್ಕುನಾಳುವ ನಮ್ಮ ದೊರೆಯ ನೀ 11 ಮತ್ರ್ಯಲೋಕದ ಸಂಪದ ಪೊಳ್ಳು ಜಗ ಮಿಥ್ಯಮತವೆಂದಿಗು ಜೊಳ್ಳು ಶ್ರುತ್ಯನ್ನರ್ಥ ಪೇಳ್ವದೇ ಸುಳ್ಳು ನೀ ಭೃತ್ಯನು ಕರ್ತನಾಗದಿರೆಲೋ ಕೇಳು12 ಮಾಧವನಲಿ ತನುಮನ ಮೆಚ್ಚು ಕ್ರೋಧರೂಪದ ಕಲಿಮಲ ಕೊಚ್ಚು ಮೋದತೀರ್ಥರ ವಚನವ ಮೆಚ್ಚು ವಾದಿ ಮತಕ್ಕೆ ಬೆಂಕಿಯ ಹಚ್ಚು 13 ಸವಿವುಳ್ಳರೆ ಕೇಳೆನ್ನಯ ಸೊಲ್ಲ ನಮ್ಮ ಪವನನಯ್ಯನ ಪ್ರೇರಣೆಯಿಲ್ಲ ಎವೆಯಿಕ್ಕಲರಿಯದೀ ಜಗವೆಲ್ಲ ಎಂದು ಶಿವ ತನ್ನ ಸತಿಗೆ ಹೇಳಿದನಲ್ಲ 14 ಧ್ರುವ ಬಲ್ಯಾದಿ ರಾಯರ ನೋಡು ನಿನ್ನ ಅವಗುಣಗಳನೆಲ್ಲಾ ಈಡ್ಯಾಡೋ ಅವಶ್ಯವಾಗಿ ಕರ್ಮವ ಮಾಡೋ ಮಾ- ಧವ ನಿನ್ನವನೆಂದು ನಲಿದಾಡೋ 15 ನಿಂದಾ ಸ್ತುತಿಗಳ ತಾಳಿಕೋ ಬಲು ಸಂದೇಹ ಬಂದಲ್ಲಿ ಕೇಳಿಕೋ ಬಂದವರಿಂದಲಿ ಬಾಳಿಕೋ ಗೋ- ವಿಂದ ನಿನ್ನವನೆಂದು ಹೇಳಿಕೋ 16 ತತ್ವವಿಚಾರವ ಮಾಡಿಕೋ ನಿನ್ನ ಭಕ್ತಿಯ ಆಳವ ಅಳಿದುಕೋ ಮಾಯಾ ಮೋಹ ಕಳೆದುಕೋ ನಿನ್ನ ಹತ್ತಿರ ಹರಿಯಿರುವ ನೋಡಿಕೋ 17 ಹಿಂಡು ದೈವಗಳಿಂದ್ಹಿರಿಯನೀತ ತನ್ನ ತೊಂಡನೆಂದದವರಿಗೆ ತಾ ಸೋತಾ ದಂಡಿಸಿ ದಯಮಾಡುವ ದಾತಾ ಭೂ- ಮಂಡಲದೊಳಗೆಲ್ಲ ಪ್ರಣ್ಯತಾ 18 ನಾಡ ಖೋಡಿ ದೈವಗಳಂತೆ ತನ್ನ ಬೇಡಲು ತಾ ಬೇಡಿಕೊಳನಂತೆ ನೀಡುವ ನಿಖಿಳಾರ್ಥವದಂತೆ ನಿಜ ನೋಡಿಕೋ ನಿನಗ್ಯಾತರ ಚಿಂತೆ 19 ಏನು ಕೊಟ್ಟರೆ ಕೈಚಾಚುವ ತನ್ನಾ- ಧೀನವೆಂದರೆ ನಸುನಾಚುವಾ ದಾನವ ಕೊಡಲೂರಿ ಗೀಚುವ ತನ್ನಲಿ ತಾನೇವೇ ಮನದೊಳು ಸೂಚುವ20 ಕರಕರದಲ್ಲಿ ತಾ ಬರುವಾನು ಮರತುಬಿಟ್ಟವರ ತಾ ಮರೆಯಾನು ನಿಜ ಶರಣರ ಕಾದುಕೊಂಡಿರುವಾನು ತನ್ನ ಸರಿಯಂದವರ ಹಲ್ಲು ಮುರಿದಾನು 21 ಆರು ಮುನಿದು ಮಾಡುವದೇನು ಪ್ರೇರ್ಯ ಪ್ರೇರಕರೊಳಗಿದ್ದು ಹರಿ ತಾನು ಓರಂತೆ ಕಾರ್ಯವ ನಡೆಸೋನು ಮುಖ್ಯ ಕಾರಣ ಶ್ರೀಹರಿ ಅಲ್ಲವೇನೋ 22 ಹಲವು ಹಂಬಲಿಸಲ್ಯಾತಕೆ ಹುಚ್ಚಾ ವಿದ್ಯಾ ಕುಲಶೀಲಧನದಿಂದ ಹರಿ ಮೆಚ್ಚಾ ಕಲಿಯುಗದೊಳಗಾರ್ಯರ ಪೆಚ್ಚಾ ತಿಳಿ ಸುಲಭೋಪಾಯಾದಿಗಳ ನಿಚ್ಯಾ 23 ದುರ್ಜನರೊಳು ದೈನ್ಯ ಬಡದಿರು ಸಾಧು ಸಜ್ಜನರೊಳು ವೈರ ತೊಡದಿರು ಅರ್ಜುನಸಖನಂಘ್ರಿ ಬಿಡದಿರು ನಿ- ರ್ಲಜ್ಜನಾಗಿ ಬಾಯ್ಬಿಡದಿರು 24 ಭಯರೂಪದಿ ಒಳಹೊರಗಿದ್ದು ನಿ- ರ್ಭಯ ನಾಮಕನು ಧೈರ್ಯವನೆ ಗೆದ್ದು ಭಯದೋರುವನೆಂಬುದೆ ಮದ್ದು ಮಹಾ ಭಯಕೃದ್ಭಯಹಾರಿಯನೆ ಪೊಂದು 25 ಪರಸತಿಯರ ಸಂಗವ ಬಿಡು ಹರಿ ಸರ್ವೋತ್ತಮನೆಂದು ಕೊಂಡಾಡು ಪರಮಾತ್ಮನ ಧ್ಯಾನವ ಮಾಡು ನರ ಹರಿದಾಸರಂಗಳ ಒಡಗೂಡು 26 ಸೃಷ್ಟಿಗೊಡೆಯ ಶ್ರೀದವಿಠಲ ವಿಷ್ಟಾವಿಷ್ಟನಾಗಿದ್ದೆಲ್ಲ ಇಷ್ಟಾನಿಷ್ಟವ ಕೊಡಬಲ್ಲ ಮನ- ಮುಟ್ಟಿದವರ ಬೆಂಬಿಡನಲ್ಲಾ 27
--------------
ಶ್ರೀದವಿಠಲರು
ಆತ್ಮನಿವೇದನೆ ಅಪಮೃತ್ಯು ಪರಿಹರಿಸೊ ಶ್ರೀ ವೆಂಕಟೇಶ ಅಪರಾಧವೆಣಿಸದಲೆ ಉದ್ಧರಿಸೊ ಶ್ರೀಶಾ ಪ ಅಪರಾಧ ಸಹಸ್ರಗಳ ಮಾಡುತನುದಿನದಿ ಅಪರಿಮಿತ ಮಹಿಮ ನಿನ್ನನ್ನು ಸ್ಮರಿಸದೆ ಚಪಲ ಬುದ್ಧಿಗಳಿಂದ ತಪಿಸಿದೆನೊ ಭವದೊಳಗೆ ಗುಪಿತದಿಂ ಸಲಹಯ್ಯ ಪಿತನೆ ಕೈ ಮುಗಿವೆ 1 ಪೂರ್ವಕಾಲದೊಳೊಬ್ಬ ರಾಜಶೇಖರ ತನ್ನ ಮೋಜಿನಿಂದಲೆ ನಿನ್ನ ಸ್ಮರಣೆ ಮರೆತು ಮೂರ್ಜಗತ್ಪತಿಯ ಪೂಜಿಸದೆ ಕಾಲವ ಕಳೆಯೆ ಆ ಜವನ ದೂತರೆಳೆ ತಂದರೈ ಹರಿಯೆ 2 ಅಂದು ಯಮ ಭಟರುಗಳ ಬಂಧನದೊಳಿರೆ ನೃಪನು ಚಂದದಿಂ ಪಾಪಕರ್ಮಗಳ ನೋಡೆ ತುಂಬಿದ ಪಾಪವೆ ಬಹಳವಾಗುತಿರಲು ಇಂದಿರೇಶನ ಪೂಜೆ ಒಂದೆ ದಿನವೆನಲು 3 ಬಿಡದೆ ಇವನಿಗೆ ಶಿಕ್ಷೆ ಕೊಡಿರಿ ಎಂದೆನಲು ನುಡಿದರಾ ಭಟರುಗಳು ಮೊದಲು ಯಾವದು ಎನಲು ಮೊದಲು ಪುಣ್ಯವು ಎಂದು ನುಡಿದನಾ ನೃಪನು4 ತಕ್ಷಣವೆ ವಿಷ್ಣುದೂತರು ಬಂದು ನೃಪವರನ ಚಿತ್ತಜನಯ್ಯನಿಹ ಉತ್ತಮ ಸ್ಥಳಕೆ ಸತ್ಯವಂತರು ಬಹಳ ಕೀರ್ತಿಸುತ ಶ್ರೀಹರಿಯ ಮತ್ತೆ ವೈಕುಂಠದಲಿ ಮೆರೆಸಿದರು ಕ್ಷಣದಿ 5 ಒಡನೆ ಪುಣ್ಯವು ಮುಗಿಯೆ ನಡಿ ನರಕಕೆಂದೆನಲು ಒಡೆದು ಎದೆ ನಡುಗಿ ಕಳವಳಿಸಿ ನೃಪನು ನುಡಿದ ಹೀಗೆನುತ ಘರ್ಜಿಸುತ ಯಮದೂತರಿಗೆ ಬಿಡಿರಿ ನಿಮ್ಮಯ ಸತ್ಯ ನಿಜವಲ್ಲವೆನುತ 6 ನಾರಾಯಣನ ನೋಡಿದವರಿಗೆ ನರಕ ಭಯ ನಾರದರೆ ಈ ರೀತಿ ಸಾರಿ ಡಂಗುರವ ಹೀಗೆನಲು ನುಡಿಕೇಳಿ ಸಾರಿ ಪೇಳಿದರಾಗ ದೇವ ದೇವನೆ ಇದಕೆ ಉಪಾಯವೇನೆನಲು7 ಪರಮ ಕೃಪಾಳು ಹರಿ ಪರಮ ಭಕ್ತರನೆಲ್ಲ ಕರೆದು ಏಕಾಂತದಲಿ ಸರಸವಾಕ್ಯದಲಿ ಇರಲಿ ಈ ನರನ ವಾಕ್ಯದ ಜಾಣತನವನು ಸುರ ಲೋಕದವರು ಸ್ತುತಿ ಮಾಡಲೆಂದೆನಲು8 ಭಾಗವತ ಜನಪ್ರಿಯ ಬಾಗಿ ನಮಿಸುತಲಿ ವಂದನೆ ಮಾಡುವೆ ನಾಗಶಯನನೆ ನಿನ್ನ ಮಹಿಮೆಗೆಣೆಗಾಣೆನೊ ಬೇಗ ಪಾಲಿಸು ಕಮಲನಾಭ ವಿಠ್ಠಲನೆ 9
--------------
ನಿಡಗುರುಕಿ ಜೀವೂಬಾಯಿ
ಆತ್ಮನಿವೇದನೆ ಆತನೇ ದಾತನು ಯೆತ್ತಿಕೊಡುವವನು ಭೂತದಯೆಯುಳ್ಳಂಥ ಪುಣ್ಯಾತ್ಮನು ಪ ನಿಂದು ಕೀರ್ತಿಯೆ ಪಾಡೆ ದೇಹಿಯನ್ನುತ ಬೇಡೆ ಸಿಂಧು ಜಲದಲಿ ಮಿಂದು ಭಜಿಸಲಾಗ ಬಂಧನವ ಪರಿಹರಿಸಿ ಬಹು ಪ್ರೀತಿಯಿಂದೆನಗೆ ಬಂದಿರುವ ಕಷ್ಟಗಳ ನೀಗುವರು ಯಾರೋ 1 ನಿತ್ತು ಶ್ರೀ ಹರಿಭಜಿಸೆ ಕೂತು ಶ್ರೀ ಹರಿಸ್ಮರಿಸೆ ತಾತನೇ ಗತಿಯೆಂದು ಪಾದದಲಿ ಬೀಳೇ ಹೊತ್ತು ನೋಡದೆ ಮುದದಿ ಭಿನ್ನವೆಣಿಸದೆಯನಗೆ ಯೆತ್ತಿ ಮೋಕ್ಷವ ಬೇಗನೀವ ನಾರೋ 2 ನಾನು ಬಡವನು ಜಗದಿ ದೀನಹೀನನು ಹರಿಯೆ ಏನು ಗತಿಯೆಂದೆನುತ ಚರಣ ಮರೆ ಹೊಕ್ಕೇ ಪಾನ ಮಾಡುತಲೆನ್ನ ಅವಗುಣವ ನೀಗೆನಗೆ ತಾನೆ ಭಿಕ್ಷವು ಬೇಗನೀವ ನಾರೋ 3 ಭಜನೆ ಸ್ತೋತ್ರಗಳರಿಯೆ ಪೂಜೆ ವಿಧಿಯನು ತಿಳಿಯೇ ಅಜನ ಪಿತ ಶ್ರೀಹರಿಯ ಮೆಚ್ಚಿಸಲು ಅರಿಯೇ ಸುಜನರನು ಪೊರೆವಂತೆ ಸಲಹುವನು ಯಾರೋ 4 ನಾನು ಪಾಪಿಯು ಋಣಿಯು ಕ್ಲೇಶವನು ತೊರೆದೀಗ ಇನ್ನು ಮರೆಯದೆ ನಿನ್ನ ದಾಸನಾಗುವೆನು ಚನ್ನಕೇಶವ ಸ್ವಾಮಿ ರಕ್ಷಿಸೆಂದೊದರುತಿರೆ ಪ್ರಾಣವನು ಯತ್ತೆನ್ನ ಸಲಹುವನು ಯಾರೋ 5
--------------
ಕರ್ಕಿ ಕೇಶವದಾಸ