ಒಟ್ಟು 15236 ಕಡೆಗಳಲ್ಲಿ , 134 ದಾಸರು , 5865 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದೆ ಕಂಡೆವು ಗುರುರಾಯನ ನಮ್ಮತÀಂದೆ ಸತ್ಯಾಭಿನವತೀರ್ಥನ ಫಲಿಸಬಂದೊದಗಿತು ನಮ್ಮಸುಕೃತಆನಂದರಸಾಬ್ಧಿ ಉಕ್ಕೇರಿತು ಪ.ಇದೀಗೆ ಕಲ್ಪದ್ರುಮ ಕಾಣಿರೈ ಅಹುದಿದೀಗೆ ಚಿಂತಾಮಣಿ ನೋಡಿರೈ ಮತ್ತಿದಿದೀಗೆಸುರಭಿಬಂದಿತೆನ್ನಿರೈ ತಮ್ಮಮುದದಿಂದ ಯತಿರೂಪವಾಯಿತೈ 1ಬಡವರ ದೊರೆ ನಮ್ಮ ಗುರುರಾಯ ಈಪೊಡವಿಲಿ ಯಾಚಕರಾಶ್ರಯ ಆಪ್ತಹಡೆದ ತಾಯಿತಂದೇರ ಮರೆಸಿದ ಎಮ್ಮೊಡೆಯ ಭಕ್ತಿ ಭಾಸವ ಬೆಳೆಸಿದ 2ಭಕ್ತಿ ಪಥವ ನೋಡಿ ನಡೆವನು ಯತಿಮುಕುಟಮಣಿಗೆ ಸರಿಗಾಣೆನು ಜ್ಞಾನಸುಖದ ಬಳ್ಳಿಯ ಬೆಳೆ ಬೆಳೆಸಿದ ಸಲೆಮುಕ್ತಿ ಮಂದಿರ ವಾತ್ರ್ಯರುಹಿಸಿದಒಂದೊಂದು ಗುಣಗಳ ಮಹಿಮೆಯು ಮತ್ತೆಂದಿಗೆ ಹೊಗಳಲಿ ತೀರವುಹಿಂದಾದ ಪೂತರು ಅಹರು ಯತೀಂದ್ರನ ಸಾಮ್ಯಕೆ ಸರಿಯಾರು 4ಗುರುಭಕ್ತಿನೆಲೆಕಳೆಮರೆಯದೆ ಶ್ರೀಧರಜೆ ರಾಘವಪಾದ ಜರಿಯದೆ ದೇವವರವೇದವ್ಯಾಸನ ಸೇವೆಗೆ ಒಂದರಘಳಿಗ್ಯಲಸ ತಾನೆಂದಿಗೆ 5ಹೊನ್ನ ತೃಣದೊಲು ಸೂರ್ಯಾಡಿದ ವಿದ್ಯೋನ್ನತರ ತವರುಮನೆಯಾದಮನ್ನಿಪ ಸುಜನಚಕೋರವ ಹೊರವಪೂರ್ಣ ಚಂದಿರನಂತಲ್ಲೊಪ್ಪುವ 6ತಪ್ತಲಾಂಛನ ತೀರ್ಥವೀವಾಗಭೃತ್ಯರುಪಟಳಕೊಲಿದು ನಲಿವನಾಗಕಪಟವ ಲೇಶಮಾತ್ರರಿಯನು ಇಂಥಗುಪ್ತ ಮಹಿಮಗೆಣೆಗಾಣೆನು 7ಸಕಳ ಪುರಾಣೋಕ್ತ ದಾನವ ಬಿಡದಖಿಳ ಧರ್ಮವನೆಲ್ಲ ಮಾಡುವನಿಖಿಳತತ್ವವನೊರೆದು ಹೇಳುವ ಈಅಕಳಂಕನೆಂದೂ ನಮ್ಮನುಕಾವ8ಕಷ್ಟ ಮೌನದಿ ವಾರಣಾಸಿಯ ಬಹುಶಿಷ್ಟರ ಸಲಹುತ ಯಾತ್ರೆಯ ಮಾಡಿತುಷ್ಟಿಬಡಿಸಿದಲ್ಲಿವಾಸರಬೇಡಿದಿಷ್ಟಾರ್ಥವನೀವನು ದಾಸರ 9ಪ್ರತಿದಿನ ಗುರುಪಾದುಕೆಯನಿಟ್ಟು ಮೇಲೆನೂತನವಸನಹೊನ್ನಾರ್ಚನೆಗಿಟ್ಟು ಮುಂದೆನುತಿಸಿಹಿಗ್ಗುವ ನವಭಕುತಿಂದ ಈವ್ರತಕಾಗಲಿಲ್ಲ ಒಂದಿನಕುಂದು10ಶ್ರೀಭಾಗವತಶಾಸ್ತ್ರ ಟೀಕನುಹರಿಗಾಭರಣವ ಮಾಡಿಟ್ಟನುಈ ಭೂಮಿಲಿಹ ಶಿಷ್ಯ ಜನರನು ತತ್ವಶೋಭಿತರನು ಮಾಡಿ ಹೊರೆದನು 11ಬಲುಹಿಂದ ಯವನನ ಬಲದಲ್ಲಿ ಕೃಷ್ಣಒಳಪೊಕ್ಕು ಸದೆದ ಪರಿಯಲ್ಲಿಕಲಿನೃಪ ಮ್ಲೇಚ್ಛನ ಬಂಧನ ತಪೋಬಲದಿಂದ ಗುರುರಾಯ ಗೆಲಿದನು 12ಭಕ್ತಿವಿರತಿಜ್ಞಾನಪೂರ್ಣನು ಸೇವಕ ಜನರಿಗೆ ಪ್ರಾಣಪ್ರಿಯನುಪ್ರಕಟಿಸಿದನು ನಿಜಕೀರ್ತಿಯನಿತ್ಯಸಕಲ ಸದ್ಗುಣಗಳ ವಾರ್ತೆಯ 13ಈಪರಿಬಹು ಪಟ್ಟವಾಳುತ ದಿವ್ಯಶ್ರೀಪಾದವ್ರತ ಪೂರ್ಣ ತಾಳುತಸ್ಥಾಪಿಸಿದನು ಮಧ್ವಸಿದ್ಧಾಂತ ದುಷ್ಟಕಾಪುರುಷರ ಮೊತ್ತ ಗೆದ್ದಾತ 14ಹರಿಗುಣ ಜಿಜ್ಞಾಸೆಯಿಂದ ಶ್ರೀಹರಿಮೂರ್ತಿ ಧ್ಯಾನ ಚಿಂತನೆಯಿಂದ ಶ್ರೀಹರಿನಾಮ ಸ್ಮರಣಶ್ರವಣದಿಂದ ಶ್ರೀಹರಿಪ್ರೀತಿಬಡಿಸಿದ ನಲವಿಂದ15ನಿರುತ ಉದಯಸ್ನಾನ ಮೌನವ ಶ್ರೀಗುರುಮಧ್ವಶಾಸ್ತ್ರವ್ಯಾಖ್ಯಾನವ ಮಹಾಗೀರ್ವಾಣ ವಾಕ್ಯದಿಂದ ಪೇಳುವ ಆತ್ಮಗುರುಗಳ ಸ್ಮರಣೆಯ ಮಾಡುವ 16ಗುರುಸತ್ಯನಾಥರ ತಂದನು ನಿಜಗುರುಪದವೇ ಗತಿಯೆಂದನು ತನ್ನಸ್ಮರಣೇಲಿ ಇಹರ ಕಾವನು ಬೇಡಿದರೆ ಅಭೀಷ್ಟಾರ್ಥವನೀವನು 17ಗುರುಸತ್ಯನಾಥಾಬ್ಧಿ ಸಂಜಾತ ಸಜ್ಜನರಹೃತ್ಕುಮುದತಾಪಸಂಹರ್ತಸರಸ ಸುಧಾಂಶು ವಾಕ್ಯಾನ್ವಿತ ಸಿತಕರನಹುದಹುದಯ್ಯ ಧರೆಗೀತ 18ಆವ ಪ್ರಾಣಿಯು ಗುರುಮಹಿಮೆಯ ಸದ್ಭಾವದಿ ನೆನೆಯಲು ಸುಖಿಯಾದದೇವ ಪ್ರಸನ್ವೆಂಕಟಾದ್ರೀಶ ಅವಗಾವಗೆ ಪಾಲಿಪ ಮಧ್ವೇಶ 19
--------------
ಪ್ರಸನ್ನವೆಂಕಟದಾಸರು
ಇದೆ ಪಾಲಿಸಿದೆ ಪಾಲಿಸಿದೆ ಪಾಲಿಸಯ್ಯಪದುಮ ಸಂಭವ ಪಿತನೆ ಪದೆಪದೆ ಎನಗಿನ್ನುಜೀವ ಅಸ್ವತಂತ್ರ ದೇವ ನಿಜ ಸ್ವತಂತ್ರಬಿಂಬ ಚಲಿಸಿದರೆ ಪ್ರತಿಬಿಂಬ ಚಲಿಸುವುದುಎನ್ನ ಬಿಂಬನೆ ಸರ್ವರ ಬಿಂಬನೆಂತೆಂದುಪುಣ್ಯಪಾಪಗಳೆರಡು ಇನ್ನು ಆಗುತಲಿರಲುಬಂಧನ ನಿವೃತ್ತಿ ಎಂದಿಗೊ ಎನಗೆಂದು
--------------
ಗೋಪಾಲದಾಸರು
ಇನ್ನಾದರೂ ಹರಿಯ ನೆನೆಯೊ ನೀ ಮನುಜಾ |ಮುನ್ನಾದ ದುಃಖಗಳು ನಿಜವಾಗಿ ತೊಲಗುವುವು ಪ.ಊರೂರ ನದಿಗಳಲಿಬಾರಿ ಬಾರಿಗೆ ಮುಳುಗಿ |ತೀರದಲಿ ಕುಳಿತು ನೀ ಪಣೆಗೆನಿತ್ಯ ||ನೀರಿನಲಿ ಮಟ್ಟಿಯನು ಕಲಸಿ ಬರೆಯುತ ಮೂಗು - |ಬೇರನ್ನು ಪಿಡಿದು ಮುಸುಕಿಕ್ಕಲೇನುಂಟು 1ನೂರಾರು ಕರ್ಮಂಗಳನ್ನು ಡಂಭಕೆ ಮಾಡಿ |ಆರಾರಿಗೋ ಹಣದ ದಾನಕೊಟ್ಟು |ದಾರಿದ್ರ್ಯವನು ಪಡೆದು ತಿರಿದಿಂಬುವುದಕೀಗ |ದಾರಿಯಾಯಿತೆ ಹೊರತು ಬೇರೆ ಫಲವುಂಟೇ? 2ಕಾಡುದೈವಗಳನ್ನು ಚಿನ್ನ - ಬೆಳ್ಳಿಗಳಿಂದೆ |ಮಾಡಿಕೊಂಡವರ ಪೂಜೆಯನೆ ಮಾಡಿ |ಕಾಡುಕಳ್ಳರು ಬಂದು ಅವುಗಳನು ಕೊಂಡೊಯ್ಯೆ |ಮಾಡಿಕೊಂಡಿರ್ದುದಕೆ ಬಾಯಬಡಕೊಳ್ಳುವೆ 3ಮಗನ ಮದುವೆಯು ಎಂದು ಸಾಲವನು ಮಾಡಿ ನೀ |ಸುಗುಣಿಯೆನ್ನಿಸಿಕೊಳಲು ವ್ಯಯ ಮಾಡಿದೆ ||ಹಗರಣವ ಪಡಿಸಿದರೆ ಸಾಲಗಾರರು ಬಂದು |ಬಗೆಬಗೆಯೊಳವರ ಕಾಲ್ಗೆರಗಿ ಬಿದ್ದಿರುವೆ 4ಕೆಟ್ಟುವೀ ಕೆಲಸಗಳ ಮಾಡಿದರೆ ಫಲವೇನು ? |ತಟ್ಟನೇ ಶ್ರೀಹರಿಯ ಪದವ ನಂಬಿ ||ದಿಟ್ಟ ಪುರಂದರವಿಠಲನೆ ಎಂದರೆ |ಸುಟ್ಟು ಹೋಗುವುವಯ್ಯ ನಿನ್ನ ಕಷ್ಟಗಳು 5
--------------
ಪುರಂದರದಾಸರು
ಇನ್ನೂ ದಯ ಬಾರದೇ-ದಾಸನ ಮೇಲೆ-ಇನ್ನೂ ದಯ ಬಾರದೇ ಪಮುನ್ನ ಮಾಡಿದ ದುಷ್ಕರ್ಮಗಳೆಲ್ಲವಮನ್ನಿಸಿ ಕಳೆವುದು ಇಂದಿರೆಯ ರಮಣಾ ಅ.ಪನಾನಾ ಜನ್ಮಗಳಲಿ ನಾನಾ ಜಾತಿಗಳಲಿನಾನಾ ಯೋನಿಗಳಲಿ ಜನಸಿ ಜನಿಸಿ ದೇವಾ ||ನಾನು ನನ್ನದು ಎಂದು ನರಕದೊಳಗೆ ಬಿದ್ದುನೀನೆ ಗತಿಯೆಂದು ಸ್ಮರಣೆ ಮಾಡಿದ ಮೇಲೆ 1ಕಾಮಾದಿ ಷಡುವರ್ಗ ಗಾಢಾಂಧಕಾರದಿಪಾಮರನಾಗಿ ಇದ್ದಂಥ ಪಾತಕನ ||ರಮಾಮನೋಹರಹರಿನೀನೇ ಗತಿಯೆಂದುನಾಮಾಮೃತವನು ಪಾನ ಮಾಡಿದ ಮೇಲೆ 2ಏನ ಓದಿದರೇನು ಏನ ಕೇಳಿದರೇನುಈ ನಾಮ ಸ್ಮರಣೆಗೆ ಸರಿಬಾರದು ||ಙ್ಞÕನಹೀನನ ಮೇಲೆ ದಯವಿಟ್ಟು ಪಾಲಿಸುದೀನ ದಯಾಕರಪುರಂದರವಿಠಲನೆ3
--------------
ಪುರಂದರದಾಸರು
ಇರಬರಲಿಲ್ಲ ಬಂದರು ಇರಲಿಲ್ಲ ಈಶರೀರ ಯಮನವಶಹರಿಮೊರೆ ಹೋಗು ನೀಪ.ಘಟಪಟಗಳಿವು ದಿಟಕೀಟಕ ಹೂವು ಕಪಟನಾಟಕನಪಾದಬಿಟ್ಟು ಕೆಟ್ಟೆಯಲ್ಲೊ1ನಗುನಗುತಭವಸೊಗಸೆಂದು ಸವಿವೆ ಬಹುತಗೆಬಗೇಸಯ್ಯ ನಿನಗೆ ಭವದ ಭಯ 2ಶರಣರ ಕಂಡು ಜರಿದರೆ ಕೇಡು ತಂದೆಸಿರಿಪ್ರಸನ್ನವೆಂಕಟ ಅರಸನ್ನ ನಂಬು 3
--------------
ಪ್ರಸನ್ನವೆಂಕಟದಾಸರು
ಇರಬೇಕು ಇರದಿರಬೇಕು ಶ್ರೀ - |ಹರಿದಾಸರು ಸಂಸಾರದೊಳು ಪ.ಕುಲಸತಿಯಾದರೆ ಕೂಡಿರಬೇಕು |ಸುಲಭದಿಂದ ಸ್ವರ್ಗ ಸೂರಾಡಬೇಕು ||ಕಲಹ ಗಂಟಿಸತಿ ಕರ್ಕಶೆಯಾದರೆ |ಹಲವು ಪರಿಯಿಂದಲಿ ಹೊರಗಾಗಬೇಕು 1ಮಕ್ಕಳು ತಾವು - ಮತಿವಂತರಾದರೆ |ಅಕ್ಕರೆಯಿಂದಲಿ ಕೂಡಿರಬೇಕು ||ಚಿಕ್ಕತನದಿ ಬುಧ್ಧಿ ತೇರುಂಡರಾದರೆ |ಗಕ್ಕನೆ ಅಲ್ಲಿಂದ ಹೊರಗಾಗಬೇಕು 2ದುಷ್ಟರ ಕಂಡರೆ ದೂರವಿರಬೇಕು |ಶಿಷ್ಟರ ಕಂಡರೆ ಕೈಮುಗಿಯಬೇಕು ||ದಿಟ್ಟ ಶ್ರೀ ಪುರಂದರವಿಠಲರಾಯನ |ಗಟ್ಟಿಯಾಗಿ ಆತನ ನೆರೆನಂಬಬೇಕು 3
--------------
ಪುರಂದರದಾಸರು
ಇರಲೇ ಬಾರದು - ಇಂಥಲ್ಲಿಇರಬಾರದಿಂದ ......... ವರೆ ಭಯಂಕರದುರುಳ ಜನ ಸಹವಾಸದಲ್ಲಿ ದುಷ್ಟಮೃಗವಿದ್ದಡವಿಯಲ್ಲಿ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಉರಗಗಳು ಸೇರಿಕೊಂಡ ಸದನಗಳಲ್ಲಿಕರುಬರಿದ್ದ ಊರಗಳಲಿ ಕಲಹ ಹೆಚ್ಚಿದ ರಾಜ್ಯದಲ್ಲಿಪರಹಿಂಸೆಯ ಮಾಡಲಂಜದ ಪಾಪಿಗಳಿದ್ದಲ್ಲಿ 1ಅವಿವೇಕದ ಪ್ರಭುಸೇವೆಯಲ್ಲಿ ಆತ್ಮಸೌಖ್ಯವಿಲ್ಲದಲ್ಲಿಲವಶೇಶವು ಸದ್ವಿದ್ಯಾ ಮಾತ್ರ ಲಾಭವಿಲ್ಲದಲ್ಲಿನವಯೌವನಭರಿತ ನಾರಿ ತಾನೊಬ್ಬಳಿದ್ದಲ್ಲಿಅವನಿಯೊಳಗರ್ಥಪ್ರಾಪ್ತಿಇಲ್ಲದಂಥಲ್ಲಿ2ಮಾನವಲ್ಲದ ಸಭೆಯಲ್ಲಿ ಮಾತ ಕದಿವ ನ್ಯಾಯದಲ್ಲಿನೂನ್ಯಪೂರ್ಣ ಎನ್ನವವನ ಉಟ್ಟಕಾಲದಲ್ಲಿಶ್ರೀನಾಥ ಶ್ರೀ ಪುರಂದರವಿಠಲ ರೂಪಗಳುಅನಂತಾನಂತವೆಂದು ಅರಿಯದ ಅದ್ವೆಷ್ಣವರಲ್ಲಿ 3
--------------
ಪುರಂದರದಾಸರು
ಇಲ್ಲದಿಲ್ಲಾಗಿ | ಇಲ್ಲದ್ದೆಲ್ಲ ತಾನಾಗಿ |ತೋರುವದಾಶ್ಚರ್ಯ | ಆಶ್ಚರ್ಯ ||ಸಂಶಯಪಾರಮಾಡಯ್ಯ ||ಶಿಷ್ಯನ ಪ್ರಶ್ನವ ತಿಳಿದು | ಸದ್ಗುರು ಹರ್ಷದಿಪೇಳಿದನೊಲಿದು1xmಟ veಡಿsioಟಿ='1.0' eಟಿಛಿoಜiಟಿg='%SಔUP-ಇಓಅಔಆIಓಉ%'ಸತ್ಯ ಸ್ವರೂಪಾಶ್ರಯಿಸಿ ಅಸತ್ಯವು ಸತ್ಯಂತೆನಿಸಿ ||ಸತ್ಯಕಿರಣವಿಡಿದು ಮೃಗಜಲವಸತ್ಯವೆ ಆಗಿಹುದು ||ದಿಟ ರಜ್ಜುವು ಶಿಂಪಿರುತ || ಆಶ್ರಯಿ ದಿಟವೆನಿಸುವದಹಿ ರಜತಾ|| ಆಶ್ರಯದಾರೋಪೆಂದು | ತೋರುವದು ಸರೂಪದಧ್ಯಾತೆಂ(ನೆಂ)ದೂ || ಅಧ್ಯಾರೋಪಾಪವಾದಾ |ಶಂಕರ ತಾನಿವು ಪುಸಿಯಂದೊರೆದಾ5
--------------
ಜಕ್ಕಪ್ಪಯ್ಯನವರು
ಇಲ್ಲಿ ನೋಡಲು ರಾಮ ಅಲ್ಲಿ ನೋಡಲು ರಾಮ |ಎಲ್ಲೆಲ್ಲಿ ನೋಡಲು ರಾಯಚಂದ್ರನು ಪಮೂಲೋಕದಲ್ಲಿ ತ್ರೈಮೂರ್ತಿರೂಪಗಳಲ್ಲಿಎಲ್ಲೆಲ್ಲಿ ನೋಡಲು ಅಲ್ಲಲ್ಲಿ ರಾಮರೂಪ ಅ.ಪರಾವಣನ ಮೂಲಬಲವ ಕಂಡು ಕಪಿಗಳುಆವಾಗಲೆ ಹೊರಟೋಡುತಿರೆಈವಾಗ ನರನಾಗಿ ಇರಬಾರದೆಂದೆನುತದೇವ ರಾಮಚಂದ್ರ ಬಹುರೂಪ ತಾನಾದ 1ಅವನಿಗೆ ಇವ ರಾಮ ಇವನಿಗೆ ಅವ ರಾಮಬುವಿಯೊಳಗೆ ಬೇರೆ ರೂಪವುಂಟೆಅವನಿಯೊಳಿರುತಿಪ್ಪದುರುಳ ಜನರೆಲ್ಲಅವರವರೆ ಹೊಡೆದಾಡಿ ಹತವಾಗಿ ಹೋದರು 2ಹನುಮಂತಾದಿ ಸಾಧುಜನರು ಅಪ್ಪಿಕೊಂಡುಕುಣಿದಾಡಿದರು ಅತಿ ಹರುಷದಲಿಕ್ಷಣದಲಿ ಪುರಂದರವಿಠಲರಾಯನುಕೊನೆಗೆ ರಾಮಚಂದ್ರನೊಬ್ಬನಾಗಿ ನಿಂತ 3
--------------
ಪುರಂದರದಾಸರು
ಇಲ್ಲಿಯೇ ಕುಳಿತಿದ್ದ ಭೂತವು - ಒಂದುಹಲ್ಲಿಯು ನುಂತು ಹದಿನಾಲ್ಕು ಲೋಕವ............. ಪಸೂಳೆಯ ಮನೆಯಲಿ ಇದೆಯೊಂದು ಕೋಳಿ |ಕೋಳಿಯ ನಾಲಗೆ ಏಳು ತಾಳೆಯುದ್ಧ ||ಕೋಳಿ ನುಂಗಿತು ಏಳು ಕಾಳಿಂಗ ನಾಗನ |ಮೇಲೊಂದು ಬೇಡಿತು ಸಿಂಹದ ಮರಿಯ 1ಕಾನನದೊಳಗೊಂದು ಇರುವದು ಕೋಣ |ಕೋಣನ ಕೊರಳಿಗೆ ಮುನ್ನೂರು ಬಾವಿ ||ಕೋಣ ನೀರಿಗೆ ಹೋಗಿಕ್ಷೋಣಿ ಕಪಿಯ ಕೊಂದು |ಟೊಣ್ಣನ ಮನೆಯೊಳಗೌತನವಯ್ಯ...................... 2ವುಕ್ಷದಮೇಲೊಂದು ಸೂಕ್ಷ್ಮದ ಪಕ್ಷಿ |ಪಕ್ಷಿಭಕ್ಷಣವಾದ ಅಮೃತದ ಹೆಣ್ಣು ||ಪಕ್ಷಿ ನೋಡಲು ಬಂದ ರಾಕ್ಷಸ ಬ್ರಾಹ್ಮಣ |ಶಿಕ್ಷೆಯ ಮಾಡಿದ ಪುರಂದರವಿಠಲ............ 3
--------------
ಪುರಂದರದಾಸರು
ಇಲ್ಲೆ ಕರೆಯ ಬ್ಯಾಡ ಕ್ಷುಲ್ಲಕರ ತಾಸುನಿಲ್ಲಿಸಿ ಹಾಸ್ಯ ಮಾಡಿ ಅಕ್ಕಯ್ಯ ಪ.ನಲ್ಲೆ ದ್ರೌಪತಿ ನಿನ್ನ ನಿಲ್ಲಿಸಿದವಗುಣಎಲ್ಲಮನಕೆತಾರೆ ಅಕ್ಕಯ್ಯ 1ವÀಂಚಕ ಗುಣದವರ ಮುಂಚೆ ನಿಲ್ಲಿಸಬೇಕುಪಾಂಚಾಲಿಬೇಡಿಕೊಂಬೆ ಅಕ್ಕಯ್ಯ 2ಬೂಟಕಗುಣದವರಪಾಟುಬಡಿಸುವಿ ತಾಸÀುಕೋಟಿ ಜನರು ನೋಡ ಅಕ್ಕಯ್ಯ 3ಗರುವಿನ ಗೊಂಬೆಯರ ಹಿರಿಯತನ್ಹಾಂಗಿರಲಿಕರವಮುಗಿಯೋಣವಂತೆ ನಾಳೆಗೆ ಅಕ್ಕಯ್ಯ4ಕೃಷ್ಣನ ಮಡದಿಯರ ಶ್ರೇಷ್ಠತನ ಹಾಂಗಿರಲಿಸಾಷ್ಟಾಂಗಕ್ಕೆರಗೋಣವಂತೆ ನಾಳಿಗೆ ಅಕ್ಕಯ್ಯ 5ನಿಂದಕರನ ತಾಸು ನಿಂದಿಸೋದುಚಿತವಂದಿಸುವೆನು ನಿನಗೆ ಅಕ್ಕಯ್ಯ 6ಸಿರಿರಮಿ ಅರಸನು ಭರದಿ ನಗುವಂತೆಇವರ ಗರವು ಮುರಿಯಬೇಕು ಅಕ್ಕಯ್ಯ 7
--------------
ಗಲಗಲಿಅವ್ವನವರು
ಇವಗೇಕೆ ಪರಿಮಳ ಇವಗೇಕೆ ಶೃಂಗಾರ |ನವನೀತ ಚೋರ ನಾರುವ ಗೊಲ್ಲಗೆಪಹೊಲಸು ಮೈಯವಗೇಕೆ ಹೊಸ ಕಸ್ತೂರಿಯ ಲೇಪ |ತಲೆದೋರದವಗೇಕೆ ದಟ್ಟ ಪುನುಗು |ಬಲು ಕೇಶದವಗೇಕೆ ಬಾವನ್ನದ ಲೇಪ |ಸಲೆಘೋರರೂಪಿಗೇಕೆ ನೊಸಲ ಸಾದು 1ತುಲಸಿಮಾಲೆಯ ಧರಿಸಿದವಗೇಕೆ ಜವ್ವಾಜಿ |ಕೊಲೆಗಡುಕಗೀಕೆ ಕುಂಕುಮತಿಲಕ ||ಅಲೆದಾಡುವವಗೇಕೆ ಅಂಗರಾಗದ ಸುಖ|ಕಳವು ಮಾಡುವವಗೇಕನಂಗ ಸೊಬಗು 2ಪರಸತಿಯ ಬಯಸುವಗೆ ಪನ್ನಗಶಯನವೇಕೆಹರಿದಾಡುವನಿಗೇಕೆ ಅಡಪ - ಡವಿಕೆ ||ಸಿರಿದೇವಿ ಶೃಂಗಾರಗೈದು ವರಿಸಿದ ಬಳಿಕ |ಧರೆಗಧಿPನಾದನೀಪುರಂದರ ವಿಠಲ3
--------------
ಪುರಂದರದಾಸರು
ಈ ಕಾರಣ ಹರಿನಾಮವ ನೆನೆಯಲಿಬೇಕಾಲಸ್ಯವಿಲ್ಲದಲೆಭೀಕರ ಯಮಭಟರಂತ್ಯದಿ ಕವಿಯಲಿನೂಕುವುದೀ ಅಸ್ತ್ತ್ರದಲಿ ಪ.ಷೋಡಶ ಉಪಚಾರದ ಪೂಜಾವಿಧಿಮಾಡುವ ಪಕ್ವಗೆ ಸಾಧ್ಯ ತಾಮಾಡೇನೆಂದರಗಾಧಮಾತಾಡಿದರೇನದಸಾಧ್ಯರೂಢಿಲಿ ಶ್ರೀಹರಿಗುಣ ಸಂಕೀರ್ತನೆಪಾಡಿದರತಿ ಆಹ್ಲಾದ 1ಸುಜ್ಞಾನಿಗಳ್ಹರಿ ಮೆಚ್ಚಿಸಿದರೆ ಅನಭಿಜÕರಿಗೆಲ್ಲಿಯ ಜ್ಞಾನಭವಸುಗ್ಗಿಯೊಳೆಲ್ಲಿ ಧ್ಯಾನ ವೈರಾಗ್ಯದ ನಡೆಯು ಕಠಿಣ ಅನಘ್ರ್ಯದ ಭೋಜನ ದೊರೆತಿದೆ ಹರಿನಾಮಂಗಳೆ ಅಮೃತದ ಪಾನ 2ಈ ಜನುಮವು ಜಗುಳುವ ಮುನ್ನಖಗರಾಜಗಮನ ರಂಗನ್ನ ಸರ್ವದಾ ಜಪಿಸುವನೆ ಧನ್ಯ ಸುಖಬೀಜವಿದೆನ್ನಿತ್ರಿಜಗತ್ಪತಿ ಪ್ರಸನ್ವೆಂಕಟರಾಯನಸೋಜಿಗನಾಮಂಗಳಣ್ಣ3
--------------
ಪ್ರಸನ್ನವೆಂಕಟದಾಸರು
ಈ ಜೀವನಿಂದು ಫಲವೇನು |ರಾಜೀವಲೋಚನನ ಮರೆದಿಹ ತನುವಿನಲಿ ಪ.ಅರುಣನುದಯಲೆದ್ದು ಹರಿಸ್ಮರಣೆಯ ಮಾಡಿ |ಗುರು - ಹಿರಿಯರ ಚರಣಕಮಲಕೆರಗಿ ||ಪರಮಶುಚಿಯಾಗಿ ನದಿಯಲಿ ಮಿಂದು ರವಿಗಘ್ಯ |ವೆರೆಯದೆ ಮರೆಹ ಈ ಪಾಪಿತನುವಿನಲಿ 1ಹೊನ್ನಗಿಂಡಿಯಲಿ ಅಗ್ರೋದಕವನೆ ತಂದು |ಚೆನ್ನಾಗಿ ಹರಿಗೆ ಅಭಿಷೇಕ ಮಾಡಿ ||ರನ್ನದುಡಿಗೆಯುಡಿಸಿ ರತುನಗಳಳವಡಿಸಿ |ಕಣ್ಣಿರಲು ನೋಡಲರಿಯದ ಪಾಪಿತನುವಿನಲಿ 2ನಳನಳಿಸುವ ನಾನಾ ಪುಷ್ಪಗಳು ಶ್ರೀತುಳಸಿ |ಹೊಳೆವ ಕಿರೀಟ ಕೊರಳಲಿ ಪದಕ ||ನಳಿನಾಕ್ಷನಿಗೆ ಕರ್ಪುರದಾರತಿಯನೆತ್ತಿ |ಕಳೆಯ ನೋಡಲರಿಯದ ಪಾಪಿತನುವಿನಲಿ 3ವರಭಕ್ಷ್ಯಗಳುಪರಮಾನ್ನ ಶಾಲ್ಯನ್ನವು |ವರವಾದ ಮಧುಘೃತ ಕ್ಷೀರವನ್ನು ||ಸಿರಿನಾರಾಯಣಗೆ ಸಮರ್ಪಣೆ ಮಾಡಿ ತಾ - |ಎರಡು ಕೈಮುಗಿಯದ ಪಾಪಿತನುವಿನಲಿ 4ಉರಗಾದ್ರಿ - ಸ್ವಾಮಿಪುಷ್ಕರಣಿಗಳು ಮೊದಲಾದ |ಪರಿಪರಿ ತೀರ್ಥಗಳನೆಲ್ಲ ಮಿಂದು ||ತಿರುವೆಂಗಳಪ್ಪ ಶ್ರೀ ಪುರಂದರವಿಠಲನ |ಚರಣವನು ಭಜಿಸಲಯದ ಪಾಪಿತನುವಿನಲಿ 5
--------------
ಪುರಂದರದಾಸರು
ಈ ಪರಿಯ ಅಧಿಕಾರ ಒಲ್ಲೆ ನಾನು |ಶ್ರೀಪತಿಯೆ ನೀನೊಲಿದು ಏನ ಕೊಟ್ಟುದೆ ಸಾಕು ಪಚಿರಕಾಲ ನಿನ್ನ ಕಾಯ್ದು ತಿರುಗಿದುದಕೆ ನಾನು |ಕರುಣದಲಿ ರಚಿಸಿ ನೀ ಈ ದುರ್ಗದಿ ||ಇರ ಹೇಳಿದುದಕೆ ನಾ ಹೊಕ್ಕು ನೋಡಿದೆ ಒಳಗೆ |ಹುರುಳ ಲೇಶವು ಕಾಣೆ ಕರಕರೆಯು ಬಲುನೋಡು 1ದಾರಿಯಲಿ ಹೋಗಿ ಬರುವವರಉಪಟಳಘನ|ಚೋರರಟ್ಟುಳಿಗಂತೂ ನೆಲೆಯೆ ಇಲ್ಲ ||ವೈರಿವರ್ಗದ ಜನರು ಒಳಗೆ ಬಲು ತುಂಬಿಹರು |ಮಿರಿ ನಿನ್ನಲಿ ಮನವನೂರಿ ನಿಲಗೊಡರು 2ಸರಿಬಂದ ವ್ಯಾಪಾರ ಮಾಡಿ ತಾವೆನ್ನನ್ನು |ಬರಿಯ ಲೆಕ್ಕಕೆ ಮಾತ್ರ ಗುರಿಯ ಮಾಡಿ ||ಕರಕರೆಯ ಬಡಿಸಬೇಕೆಂದು ಯೋಚಿಸುತಿಹರು |ಕರೆದು ವಿಚಾರಿಸಿ ನ್ಯಾಯ ಮಾಡಿಸು ದೊರೆಯೇ 3ನಾಮಾಂಕಿತಕೆ ಮಾತ್ರ ಅಧಿಕಾರವೆನಗಿತ್ತೆ |ಸ್ವಾಮಿತ್ವವೋನೋಡುಮನೆಮನೆಯಲಿ ||ಭೀಮ ವಿಕ್ರಮರವರು ದುರ್ಬಲಾಗ್ರಣಿ ನಾನು |ಗ್ರಾಮ ಒಪ್ಪಿಸೆ ನಮಿಪೆ ಸಂಬಂದ ತೆರಮಾಡು 4ಕಾಲಕ್ಕೆ ಕರೆಯ ಬಂದವರಿಗೆ ಒಳಗಾಗಿ |ಪಾಳೆಯವನೊಪ್ಪಿಸಿ ಕೊಡುವೆವೆಂದು ||ಆಲೋಚಿಸಿಹರಯ್ಯ ಈಗಲೆನಗೆ ನಿನ್ನ |ಆಳುಗಳ ಬಲಮಾಡಿ ಎನ್ನ ರಕ್ಷಿಸು ದೊರೆಯೆ 5ಕ್ಷಣಕೆ ನೂರುಪಟಳ ಈ ಕೋಟೆಗೆಲೊ ರಾಯ |ಅನುವಾದ ದಿವಸವೊಂದಾದರಿಲ್ಲ ||ಮೊನೆಗಾರ ಜನವಿಲ್ಲ ಇದ್ದವರು ವಶವಿಲ್ಲ |ಕೊನೆಗೊಂಡು ಗ್ರಾಮ ಕಾಪಾಡುವ ತೆರನೆಂತೊ 6ಎನಗೆ ಈ ಬಹುನಾಯಕರ ಕೊಂಪೆಯೊಳು ವಾಸ-|ವನು ಬಿಡಿಸಿ ನಿನ್ನ ನಿಜ ಪಟ್ಟಣದೊಳು ||ಮನೆ ಮಾಡಿಕೊಡಲು ನಾನಿನ್ನ ನೋಡಿಕೊಳುತ |ಅನುಗಾಲಬದುಕುವೆನೊ ಪುರಂದರವಿಠಲ7
--------------
ಪುರಂದರದಾಸರು