ಒಟ್ಟು 12410 ಕಡೆಗಳಲ್ಲಿ , 137 ದಾಸರು , 5990 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅಂಜನಾಸಂಜಾತ ಮುಖ್ಯ -ಪ್ರಾಣನೇ ಹನುಮಂತನೇ ಪ್ರಾಣನೇ ಹನುಮಂತನೇಪ್ರಾಣನೇ ಹನುಮಂತನೇ ಬಹು ಬಲವಂತನೇಪರಾಘವನಾಜೆÕಯ ತಾಳ್ದು ಸಾಗರವ ದಾಟಿದನೇ |ಸಾಗರವ ದಾಟಿದನೇ ಬೇಗ ಲಂಕಿಣಿ ಗೆಲ್ದನೇಚಬೇಗ ಲಂಕಿಣಿ ಗೆಲ್ದನೇ |ಪೋಗಿ ಲಂಕೆಯೊಳ್ ತಿರಿದನೇ1ಧರಣಿಸುತೆಯನು ಹುಡುಕಿ ಕಾಣದೆ |ಪುರವನೊಯ್ಯುವೆನೆಂದನೆ |ಪುರವನೊಯ್ಯುವೆನೆಂದನೆ |ಮರಳಿ ಸೀತೆಯ ಕಂಡನೇ |ಮರಳಿ ಸೀತೆಯ ಕಂಡನೇ |ಯೆರಗಿ ಉಂಗುರವಿತ್ತನೇ2ಚೂಡಕವ ಕೈಗೊಂಡು ಬರಲಾ |ನೋಡಿ ಬನವನು ಮುರಿದನೇ |ನೋಡಿ ಬನವನು ಮುರಿದನೇಖೋಡಿದೈತ್ಯರ ಗೆಲಿದನೇ |ಖೋಡಿದೈತ್ಯರ ಗೆಲಿದನೇ |ಕೈಗೂಡಿ ಸುಮ್ಮನೆ ಕುಳಿತನೆ3ಪುರವನೆಲ್ಲವ ಸುಟ್ಟು ದಹಿಸುತ |ತಿರುಗಿ ರಾಮನ ಕಂಡನೇ |ತಿರುಗಿ ರಾಮನ ಕಂಡನೇ |ಚೂಡಕವ ಕೈಗಿತ್ತನೇ |ಚೂಡಕವ ಕೈಗಿತ್ತನೇ |ಗೋವಿಂದ ದಾಸನ ಪೊರೆವನೆ4
--------------
ಗೋವಿಂದದಾಸ
ಅಂಜಿಕ್ಯಾತಕೆ ಮನವೇ ಅಂಜಿಕ್ಯಾತಕೇ ಪಕಂಜಹರನ ಪಿತನಪಾದ|ಕಂಜನಿರತಭಜಿಸುತಿರಲು ||ಅ.ಪ||ಎರಡು ಒಂದು ಕೋಟಿರೂಪ|ಧರಿಸಿ ರಕ್ಕಸರೊಳು ಕಾದಿ ||ಹರಿಯ ಕರುಣ ಗಳಿಸಿದವನ |ಚರಿತೆಗಳನು ಸ್ಮರಿಸುತಿರಲು 1ತಾಸಿಗೆಂಟು ಒಂದು ನೂರು |ಶ್ವಾಸಜಪವ ಮಾಡಿ ಜಂತು ||ರಾಶಿಗಳಿಗೆ ಸತತ ಬೇಡಿ |ದಾಸೆ ಪೂರ್ತಿಸುವವನಿರಲು2ಜಂಗಮರಿಗೆಪಾಣಿಚರಣ|ಕಂಗಳುಕಿವಿಯಾಡಿಸುತಲಿ ||ಪಿಂಗಳನಿಭಭಾರತೀಶ|ಹಿಂಗದನವರತ ಪೊರೆಯಲು 3ಪರಿಹರಿಸುತಲಗ್ನಿ ಭಯವ |ತ್ವರದಿ ಹಿಡಿಂಬ ಕೀಚಕ ಪ್ರಮು |ಖರನು ಕುರುಪತಿಯ ಕುಲವತರಿದ ಕುಂತೀ ಕುವರನಿರಲು 4ಭುಜಕೆ ಗೋಪೀಚಂದನವನು |ವಿಜಯಚಕ್ರಗಳನು ಧರಿಸಿ ||ಕುಜನರಿಪುಪ್ರಾಣೇಶ ವಿಠಲ |ಭಜಕನ ದಯ ಪೂರ್ಣವಿರಲು 5
--------------
ಪ್ರಾಣೇಶದಾಸರು
ಅಂತರಂಗದಲಿ ಹರಿಯ ಕಾಣದವ ತಾ ಹುಟ್ಟುಗುರುಡನೊಸಂತತ ಶ್ರೀ ಕೃಷ್ಣಚರಿತೆ ಕೇಳದವ ಜಡಮತಿಯೆ ಕಿವುಡನೊ ಎಂದೆಂದಿಗೂ ಪ.ಹರುಷದಿಂದಲಿ ಮುರಹರನ ಪೂಜೆಯ ಮಾಡದವನೆ ಕೈ ಮುರಿದವನೊಕುರುವೀರ ಸೂತನ ಮುಂದೆ ಕೃಷ್ಣ ಎಂದುಕುಣಿಯದವನೆ ಕುಂಟನೊ ||ನರಹರಿ ಪಾದೋದಕ ಧರಿಸದ ಶಿರ ನಾಯುಂಡ ಹಂಚು ಕಾಣೊಸುರವರ ಕೃಷ್ಣ ಪ್ರಸಾದವಿಲ್ಲದ ಊಟಸೂಕರಭೋಜನವೋ1ಅಮರೇಶ ಕೃಷ್ಣಗರ್ಪಿತವಲ್ಲದಕರ್ಮ ಅಸತಿಯ ವ್ರತನೇಮವೊರಮೆಯರಸಗೆ ಪ್ರೀತಿಯಿಲ್ಲದ ವಿತ್ತವು ರಂಡೆ ಕೊರಳಸೂತ್ರಕಮಲನಾಭನ ಪೊಗಳದಸಾರ ಸಂಗೀತ ಗಾರ್ದಭರೋದನವೊಮಮತೆಯಿಂದಲಿ ಕೇಶವಗೆ ನಮಸ್ಕಾರ ಮಾಡದವನೆ ಮೃಗವೊ 2ಜರೆ ಹುಟ್ಟು ಮರಣವ ತಡೆವ ಸುದ್ದಿಯ ಬಿಟ್ಟುಸುರೆಯ ಸುರಿಯ ಬೇಡವೊಸುರಧೇನು ಇರಲಾಗಿ ಶ್ವಾನನ ಮೊಲೆಹಾಲಕರೆದು ಕುಡಿಯಬೇಡವೊಕರಿ ರಥ ತುರಗವೇರಲು ಇದ್ದು ಕೆಡಹುವ ಕತ್ತೆ ಏರಲಿಬೇಡವೊಪರಮ ಪುರುಷ ಪುರಂದರವಿಠಲನಿರಲು ನರರ ಭಜಿಸಬೇಡವೊ 3
--------------
ಪುರಂದರದಾಸರು
ಅಂದಿಂದ ನಾ ನಿನ್ನನೆರೆನಂಬಿದೆನೊ ಕೃಷ್ಣತಂದೆ ಗೋವಿಂದ ಮುಕುಂದ ನಂದನ ಕಂದ ಪಬಲವಂತ ಉತ್ತಾನಪಾದರಾಯನ ಕಂದಮಲತಾಯಿ ನೂಕಲು ಅಡವಿಯೊಳು ||ಜಲಜಾಕ್ಷ ನಿನ್ನ ಧ್ಯಾನದಿ ತಪವಿರಲಾಗಿಒಲಿದು ಧ್ರುವಗೆ ಪಟ್ಟಕಟ್ಟಿದ್ದಕೇಳಿ1ನಕ್ರರಿಗೆ ಗಜರಾಜ ಸಿಕ್ಕಿ ಸರಸಿಯೊಳುದುಕ್ಖದಿ ಶ್ರೀಹರಿ ಸಲಹೆನ್ನಲು ||ಚಕ್ರದಿ ನೆಗಳ ಕಂಠವ ತರಿದು ಭಕ್ತನಅಕ್ಕಸಪರಿದಾದಿಮೂಲನೆಂಬುದಕೇಳಿ2ದ್ರುಪದನ ಸುತೆಯ ದುಃಶ್ಯಾಸನ ಸಭೆಯೊಳುಕಪಟದಿ ಸೀರೆಯ ಸೆಳೆಯುತಿರೆ ||ಸುಪರ್ಣವಾಹನ ಕೃಷ್ಣ ಸಲಹೆಂಬಬಲೆಯನುಅಪಮಾನದಿಂದ ಕಾಯ್ದ ಹರಿಯೆಂಬುದನುಕೇಳಿ3ಹರಿನಾರಾಯಣನೆಂದು ಪ್ರಹ್ಲಾದ ಬರೆಯಲುದುರುಳದಾನವ ಅವನಿಗೆ ಮುನಿದು ||ಕರೆ ನಿನ್ನ ಒಡೆಯನ ಎಂದು ಗರ್ಜಿಸೆನರಹರಿಬಂದು ಒಡನೆಯೆ ಕಾಯ್ದನೆಂಬುದಕೇಳಿ4ಅಂಬರೀಷಗೆದೂರ್ವಾಸಶಾಪವ ಕೊಡೆಅಂಬುಜಲೋಚನ ಚಕ್ರದಿಂದ ||ಬೆಂಬತ್ತಿ ಮುನಿಯ ಶಾಪವ ಪರಿಹರಿಸಿದಕಂಬುಚಕ್ರಧರಹರಿಯೆಂಬುದಕೇಳಿ5ಛಲಬೇಡ ರಾಮನ ಲಲನೆಯ ಬಿಡು ಎಂದುತಲೆಹತ್ತರವಗೆ ಪೇಳಲು ತಮ್ಮನ ||ಬಳಲಿಸಿ ಹೊರಡಿಸೆ ಅವ ನಿನ್ನ ಮೊರೆಹೊಗಲುಸಲೆ ವಿಭೀಷಣಗೆ ಲಂಕೆಯನಿತ್ತುದನುಕೇಳಿ6ಸುರ-ನರ-ನಾಗಲೋಕದ ಭಕ್ತ ಜನರನುಪೊರೆಯಲೋಸುಗ ವೈಕುಂಠದಿಂದ ||ಸಿರಿಸಹಿತದಿ ಬಂದು ಶೇಷಾಚಲದಿ ನಿಂತಪುರಂದರವಿಠಲ ನಿನ್ನಯ ಚರಣವ ಕಂಡು 7
--------------
ಪುರಂದರದಾಸರು
ಅಂದೆ ನಿರ್ಣಯಸಿದರು ಕಾಣೋ |ಇಂದಿರಾಪತಿ ಪರದೈವತವೆಂಬುದ ಪಅಂದು ಚತುರ್ಮುಖ ನಾರದನಿಗೆ ತನ್ನ |ತಂದೆ ಶ್ರೀಹರಿ ಪರದೈವವೆಂದು ||ಸಂದೇಹಗಳ ಪರಿಹರಿಸಿಹ ದ್ವಿತೀಯದಸ್ಕಂಧದೊಳಯ್ದನೆಯ ಅಧ್ಯಾಯದಲಿ 1ಅಂದು ಕಪಿಲದೇವ ದೇವಹೊಲೆಗೆ ತಾನು |ಚೆಂದದ ತತ್ತ್ವವನೆಲ್ಲ ಬೋಧಿಸಿದ ||ಅಂದದಲರ್ಜುನ - ಉದ್ದವರಿಗೆ ಅಂದಾ - |ನಂದದಿ ಗೀತಾಶಾಸ್ತ್ರವನೊರೆದನೆಂದು 2ವೇದೈಶ್ಚ ಸರ್ವೋರಹಮೇವ ವೇದ್ಯಃ |ವೇದವಿಧಾಯಕ ನಾಮದವನು ||ವೇದಾಕ್ಷರಗಳು ಹರಿನಾಮಗಳೆಂದು |ವೇದಾಂತ ಸಿದ್ಧಾಂತಗಳಲಿ ಪೇಳಿದರೆಂದು 3ರಾಜಸ -ತಾಮಸ ಪೌರಾಣಗಳಿವು |ರಾಜಸ -ತಾಮಸ ಜೀವರಿಗೆ ||ರಾಜಸ -ತಾಮಸ ಗತಿಗೋಸ್ಕರ ಮುನಿ - |ರಾಜ ವ್ಯಾಸನು ಮೋಹಕವೆಂದು ಪೇಳಿದ 4ಬಿಡು ಪಾಷಂಡಮತದ ದುರ್ಬುದ್ಧಿಯ |ಬಿಡದೆಮಾಡು ವೈಷ್ಣವಸಂಗವ ||ಧೃಡಭಕ್ತಿಯಿಂದ ಶ್ರೀಹರಿಯ ಪೂಜಿಸಿದರೆ |ಮೃಡಪ್ರಿಯ ಪುರಂದರವಿಠಲನೊಲಿವನೆಂದು 5
--------------
ಪುರಂದರದಾಸರು
ಅನಿಮಿತ್ತ ಬಂಧುಅತಿದಯಾಸಿಂಧುಆನತ ನಾನೆಂದುಅಭಯನೀಡಿಂದುಪ.ಮಧುಕೈಟಭಾರಿ ಮುರಾಂತಕೋದಾರಿಮದನೋದ್ಭವಕಾರಿ ಮನ್ನಿಸೆನ್ನನುದಾರಿ 1ವೈಕುಂಠಸದನ ವಜ್ರಾಭರಣಶ್ರೀಕರವದನ ಸಲಹೆನ್ನನುದಿನ 2ಬಿಸಜಜನಯ್ಯ ಬರುಹಿ ಸುರಯ್ಯಪ್ರಸನ್ವೆಂಕಟಯ್ಯ ಪಾಪವಾರಿಸಯ್ಯ 3
--------------
ಪ್ರಸನ್ನವೆಂಕಟದಾಸರು
ಅನುಗಾಲವು ಚಿಂತೆ ಮನುಜಗೆ |ಮನಹೋಗಿ ಮಾಧವನ ಒಡಗೂಡುವನಕ ಪ.ಹೆಂಡಿರಿದ್ದರು ಚಿಂತೆ ಹೆಂಡಿರಿಲ್ಲದ ಚಿಂತೆ |ಕೊಂಡು ಕುರೂಪಿಯಾದರು ಚಿಂತೆಯು ||ತೊಂಡನಾಗಿ ತಿರುಗಿ ತುತ್ತ ತರುವ ಚಿಂತೆ |ಮಂಡೆ ಬೀಳುವ ತನಕ ಚಿಂತೆ ಕಾಣಣ್ಣಾ 1ಬಡವನಾದರು ಚಿಂತೆ ಬಲ್ಲಿದನಾದರು ಚಿಂತೆ |ಕೊಡಧನ ಕೈಯೊಳಿದ್ದರು ಚಿಂತೆಯು |ಬಡವನಾಗಿ ತಿರುಗಿ ತುತ್ತ ತರುವ ಚಿಂತೆ |ಪೊಡವಿಯೊಳಿಲ್ಲದ ಚಿಂತೆ ಕಾಣಣ್ಣಾ 2ಮನೆಯಿದ್ದರೂ ಚಿಂತೆ ಮನೆಯಿಲ್ಲದ ಚಿಂತೆ |ಮನೆ ಭಾರವತಿಯಾದರೂ ಚಿಂತೆಯು |ಮನಸಿಜನಯ್ಯ ಶ್ರೀ ಪುರಂದರವಿಠಲನ |ನೆನೆದರೆ ಚಿಂತೆಯೆ ಇಲ್ಲ ಕಾಣಣ್ಣಾ 3
--------------
ಪುರಂದರದಾಸರು
ಅನುದಿನಭವಾಬ್ಧಿಯಲ್ಲಿ ಭವತರಂಗ ರಾಶಿಯಲ್ಲಿಮುಳುಗುತಿಹೆ ಕೈಯ ಪಿಡಿಯೊ ಜನಕ ಕೃಷ್ಣಯ್ಯ ಪ.ಶ್ರೀನಿವಾಸ ನಿನ್ನ ಭಕ್ತಿ ಮಾಡದ ಅಘವಂತನೆಂದುಹೀನ ಜನರ್ಪಾಳಕಿಟ್ಟರೇನ ಹೇಳಲೊನೀನು ಪಾಲಿಪ ರಾಜ್ಯದಲ್ಲಜ್ಞಾನಿ ದೇಶಿಗನೊಬ್ಬ ಕೆಡಲುಹಾನಿ ಹೆಚ್ಚಳ ನಿನ್ನದಲ್ಲೆ ದೀನದಯಾಳು 1ಚಿತ್ತವೇಗಕ್ಕವಧಿ ಇಲ್ಲ ಹೊತ್ತುಕೊಂಡು ಕಂಡ ಕಡೆಗೆಸುತ್ತುತಿದೆ ತನ್ನ ದಳವ ಕೂಡಿ ರಂಗಯ್ಯಕರ್ತನಿನ್ನ ಪಾದದೆಡೆಯೆ ಒತ್ತಿ ನೀನಿದನಾಳಬೇಕುಹೆತ್ತ ತಾಯಿ ನೀನೆ ಗಡಾನೆತ್ತಿಕೊಳ್ಳಯ್ಯ 2ಹಳುವಗಳು ದಾರಿಕಾಣೆ ಸೆಳವಿನೊಳಾಶ್ರಯ ಕಾಣೆನಳಿನನೇತ್ರ ನೀನೆ ಕಾಯೊ ಸುಲಭರೊಡೆಯನೆಲೆಯ ತೋರಾತಂಕಹಾರಿ ಒಲಿದು ವರಾಭಯವ ಬೀರಿಒಲಿಯೊ ಪ್ರಸನ್ವೆಂಕಟಾದ್ರಿನಿಲಯ ಉದಾರಿ 3
--------------
ಪ್ರಸನ್ನವೆಂಕಟದಾಸರು
ಅಪಮಾನವಾದರೆ ಒಳಿತು |ಅಪರೂಪ ಹರಿನಾಮ ಜಪಿಸುವ ಮನುಜಗೆ ಪಮಾನದಿಂದಲಿ ಅಭಿಮಾನ ಪುಟ್ಟವುದು |ಮಾನದಿಂದಲಿ ತಪ ಹಾನಿಯಾಯಿತು ಹಾನಿಯಾಗುವುದು ||ಮಾನಿ ಕೌರವನಿಗೆ ಹಾನಿಯಾಯಿತು-ಅನು-|ಮಾನವಿಲ್ಲವು ಮಾನ-ಅಪಮಾನ ಸಮರಿಗೆ 1ಅಪಮಾನದಿಂದಲಿ ತಪವೃದ್ಧಿಯಾಹುದು |ಅಪಮಾನದಿಂ ಪುಣ್ಯ ಸಫಲವಾಗುವುದು ||ಅಪಮಾನದಿಂದಲಿನೃಪಧ್ರುವರಾಯಗೆ |ಕಪಟನಾಟಕ ಕೃಷ್ಣ ಅಪರೋಕ್ಷನಾದನು2ನಾನೇನ ಮಾಡಲಿ ಆರಲ್ಲಿ ಪೋಗಲಿ |ಕಾನನಚರರಾರಾಧ್ಯ ನೀನಿರಲು ||ದೀನರಕ್ಷಕ ನಮ್ಮ ಪುರಂದರವಿಠಲನೆ |ಏನು ಬೇಡೆನಗಪಮಾನವೆ ಇರಲಿ 3
--------------
ಪುರಂದರದಾಸರು
ಅಪರಾಧಿ ನಾನಲ್ಲ ಅಪರಾಧವೆನಗಿಲ್ಲ |ಕಪಟನಾಟಕ ಸೂತ್ರಧಾರಿ ನೀನೆಪನೀನು ಆಡಿಸಲು ಜಡವೊನಕೆ ಅಭಿನಯಬೊಂಬೆಏನು ಬಲ್ಲದು ಬೇರೆ ಕೃತಿಯನೊಂದ ||ನೀನಿಟ್ಟ ಸೂತ್ರದಿಂದಲುಗೆ ಕೈಕಾಲುಗಳು |ನೀನೆ ಮಗ್ಗಿಸಲು ಮಗ್ಗುವ ದೇಹ ತಾನಾಗೆ 1ಒಂದೆಂಟು ಬಾಗಿಲುಗಳುಳ್ಳ ಪಟ್ಟಣಕೆ ತನ-ಗೆಂದು ಇಪ್ಪತ್ತಾರು ಮನೆಯಾಳ್ಗಳ ||ತಂದು ಕಾವಲುನಿಲಿಸಿ ಎನ್ನ ನೀನೊಳಗಿಟ್ಟುಮುಂದೆ ಭವಭವದಿ ದಣಿಪುದು ನಿನ್ನದನ್ಯಾಯ 2ಯಂತ್ರವಾಹಕನೀನೆ ಒಳಗೆ ಇದ್ದೂ ಎನ್ನ-ಸ್ವತಂತ್ರನೆಂದೆನಿಸಿ ಕೊಲಿಸುವರೆ ಹೇಳೊ ||ಕಂತುಪಿತ ಲಕ್ಷ್ಮೀಶ ಎಂತಾದಡಂತಹುದನಂತ ಮೂರುತಿ ನಮ್ಮಪುರಂದರವಿಠಲ3
--------------
ಪುರಂದರದಾಸರು
ಅರಿಯಧಮನ ಸಂಗ ಕರಗಿದ್ದ ಹಿತ್ತಾಳೆಒರೆದು ನೋಡಲು ಬಣ್ಣ ಬರುವುದೇ ಹೇಳಿ ಪ.ಮಂಜುನೀರನೆ ತಂದು ತಂದನವ ಹದಮಾಡಿಒಂದಾಗಿ ಕೂಡಿ ಪರಿಮಳವ ಬೇಗಹಂದಿಯನು ಕರೆದು ಸೆಲೆ - ಪೊಸಲು ಅದು ತನ್ನಗಂಜಲವ ನೆನೆನೆನೆದು ಹೋಹಂತೆ ರಮಣಿ 1ಚೀನಿಕೋಲನೆ ತಂದು ಕೊರೆದು ತುಂಡನೆ ಮಾಡಿಶ್ವಾನನನು ಕರೆದು ಬಾಯೊಳಗಿರಿಸಲುತಾನದನು ಸವಿಸವಿದು ನೋಡಲರಿಯದ ತನ್ನದನದ ಮೂಳೆಯ ನೆನೆದು ಹೋಹಂತೆ ರಮಣಿ 2ಅಂತರವನರಿಯದಲೆ ಮಿಯಾ ಹೋಗುವುದರಿಂದಅಂತೆ ಇರುವುದೇ ಲೇಸು ಬಹು ಪ್ರೌಢರುಚಿಂತಿತಾರ್ಥವನೀವ ಸುಗುಣ ಪುರಂದರವಿಠಲನೆಂತೆಂತು ಭಜಿಸಿದರೆ ಅಂತಂತೊಲಿವನಲ್ಲರೆ 3
--------------
ಪುರಂದರದಾಸರು
ಅರ್ಚನೆ ಮಾಡಿರಯ್ಯ ಶ್ರೀ ಭಗವದರ್ಚನೆ ಮಾಡಿರಯ್ಯಅರ್ಚನೆ ಮಾಡುವ ಅರ್ಚಕ ಬುಧರಿಗೆಅರ್ಚಿಪ ಪದದಲ್ಲಿಅಚ್ಯುತದೊರೆವನೆಂದುಪ.ಅಂತರಂಗದ ಶುದ್ಧಿಲಿ ತನ್ನ ಬಾಹ್ಯಂತರ ಪರಿಪೂರ್ಣನಚಿಂತಿಸಿ ಸರ್ವಸ್ವತಂತ್ರ ಶ್ರೀ ಹರಿವೇದತಂತ್ರೋಕ್ತ ಪಥದಿ ನಿರಂತರ ಮರೆಯದೆ 1ಪೃಥುಧ್ರುವ ಅಂಬರೀಶ ಸುಧರ್ಮಜ ದಿತಿಜೋದ್ಭವ ಅಕ್ರೂರಕೃತವರ್ಮ ಸಾತ್ಯಕಿ ಯದುಕುಲ ಸುರಖಷಿಯತಿತತಿ ಅರ್ಚಿಸಿ ಅತಿಧನ್ಯರಾದರೆಂದು 2ಅನಂತಮೂರ್ತಿಯೊಳು ತನಗೊಂದು ಧ್ಯಾನಕ್ಕೆ ತಂದುಕೊಂಡುಆನಂದತೀರ್ಥರ ಸಂತತಿಗಳಿಂದತಾನು ಇಷ್ಟನಾಗಿ ನಾರಾಯಣನಾತ್ಮನೆಂದು 3ಬ್ರಹ್ಮಸ್ತೋತ್ರದಿ ಸಹಸ್ರ ಸನ್ನಾಮಪೂರ್ವಕ ಸ್ತೋತ್ರದಿಶ್ರೀಮತ್ಪಂಚಸೂಕ್ತ ಪಂಚಾಮೃತ ಸ್ನಾನರಮ್ಯಾಯುಧ ಕೌಸ್ತುಭಮಣಿ ಮಾಲೆಯಿಂದ 4ಧ್ಯಾನಾವಾಹನ ಸ್ನಾನ ಸುಪಾದ್ಯಾಚಮನಾಘ್ರ್ಯ ಧೂಪದೀಪ ಪ್ರಸೂನ ತುಳಸಿ ಗಂಧಮೋಘ ನೈವೇದ್ಯದಿಂಮಾನಸಾರ್ಚನೆ ಪ್ರತ್ಯಕ್ಷಾಗಲಿ ಎಂತೆಂದು 5ವೀರಾವರ್ಣದ ಮಧ್ಯದಿ ಶ್ರೀ ಮಧುಕೈಟಭಾಂತಕ ಕೃಷ್ಣನಕೋಟಿಕಾಂಚನ ರತ್ನಾಭರಣವೈಜಯಂತಿಕಿರೀಟಕುಂಡಲದಾಮಹಾರ ನೂಪುರಗಳಿಂದ6ದಿವ್ಯಾಂಬರ ಭೂಷಣ ನವರತುನ ಭವ್ಯ ಮಂಟಪವಸನಅವ್ಯಾಕೃತಾಧ್ಯಕ್ಷ ಶ್ರೀಭೂಮುಕ್ತಾಮುಕ್ತಸೇವ್ಯಮಾನನಾಪಾದ ಮೌಳ್ಯಾಂತ ವೀಕ್ಷಿಸಿ7ಬಹು ನೀರಾಂಜನಗಳಿಂದ ಸದ್ವೇದೋಕ್ತ ಗಹಗಹನ ಸೂತ್ರಂಗಳಿಂದಅಹಿವರಶಯನಜ ಭವಾಹಿಪ ವಿಪ್ರವಂದ್ಯಮಹಿಮನನಂತನೆಂತೆಂದು ಪರವಶದಿಂದ 8ತಾಳದಂಡಿಗೆ ಜಾಗಟೆ ಶಂಖ ಮದ್ದಳೆ ಕಂಸಾಳೆಭೇರಿಆಲಾಬುತಂಬೂರಿಭಾಗವತಗಾನಮೇಳೈಸಿ ತುತೂರಿ ವಾಜಂತ್ರಿ ಘೋಷದಿಂದ 9ಅಲವಬೋಧರು ಪೇಳಿದ ಪೂಜಾವಿಧಿಗಳ ಪ್ರದಕ್ಷಿಣೆ ಪ್ರಮಾಣಲಲಿತ ಗೀತ ನೃತ್ಯ ಬಲು ಪ್ರೇಮದಲಿ ಮಾಡಿಹೊಳೆವ ಬಿಂಬಾತ್ಮನ ಕಾಂಬ ಲವಲವಿಕೆಯಿಂದ 10ಆತ್ಮ ಕರ್ತೃತ್ವನೀಗಿಸರ್ವಾಂತರಾತ್ಮ ಪರಮಾತ್ಮನೆಂದುಆತ್ಮ ಮತ್ತೆ ಜಾÕನಾತ್ಮ ಪ್ರೇರಕ ಪ್ರೇರ್ಯಾತ್ಮ ನಿವೇದನ ಭಕ್ತಿ ನವಕಗಳಿಂದ 11ಸರ್ವೇಂದ್ರಿಯ ಮನಸ್ಥ ಮುಖ್ಯಪ್ರಾಣನೋರ್ವ ನಿಯಂತ್ರಹರಿಸರ್ವ ಪ್ರೇರಕನೆಂಬೊ ವಿಜ್ಞಾನಮಾರ್ಗದಿಸರ್ವಕಾಲದಲಿ ಸರ್ವಸಮರ್ಪಣೆಯೆಂದು 12ಮಂದಜನರು ಭಕ್ತಿಲಿ ದೂರ್ವನೀರಿಂದೆ ಪೂಜೆಯ ಮಾಡಲುತಂದೆ ಪ್ರಸನ್ವೆಂಕಟಕೃಷ್ಣ ಕಾರುಣ್ಯಸಿಂಧುಪ್ರಸನ್ನಾತ್ಮಬಂಧು ಮುಕ್ತಿಯನೀವ13
--------------
ಪ್ರಸನ್ನವೆಂಕಟದಾಸರು
ಆ ಸುಖ ಹರಿಮರೆದವಗಯ್ಯದೋಷಾಂಧಃತಮದೊಳಗೇನು ಸುಖ ಪ.ಕಂಠತ ವ್ಯಸನ ಹೊಲಬಿಲ್ಲದೆ ಧರ್ಮಕಂಟಕಶಾಸ್ತ್ರವಿಚಾರಕಗೆಎಂಟುವೃಷಭಹೂಡಿ ಮಹಾಶ್ರಮಿಸಿ ಬರೆದಂಟು ಬೆಳೆದವನಿಗೇನು ಸುಖ 1ಅನಿರುದ್ಧಗಖಿಳವರ್ಪಿಸಿದಾನಲ್ಪಗುಣದೆ ಮತಿ ದೃಢವಿಲ್ಲದ ಮಾನವಗೆಹಣ ವೆಚ್ಚಿಸಿ ರಿಣದೆಗೆದಿಟ್ಟ ಧಾನ್ಯವತೃಣಸಮ ವಿಕ್ರಿಸಲೇನು ಸುಖ 2ಶಂಖಪಾಣಿಯ ನಿಂದಿಸಿ ಕರ್ಮಶಕ್ತಿಯಶಂಕರ ರವಿಗಣೋಪಾಸಕಗೆಸಂಖ್ಯೆ ಇಲ್ಲದ ವಸ್ತು ನಿಶ್ಶೇಷದಿಸುಂಕಕೆ ತೆತ್ತಿದರಾವ ಸುಖ 3ಆಧ್ಯಾತ್ಮಾನುಭವ ಗುರುಕೃಪೆ ಇಲ್ಲದೆವಿದ್ಯೋನ್ಮತ್ತ ದಯಾಶೂನ್ಯಗೆನದ್ಯೋಲ್ಲಂಘಿಸಿ ದಡದಲಿ ನಾವೆ ಮುಳುಗಿದರೆ ಪ್ರಾಣಿಗಳಿಗೇನು ಸುಖ 4ಪ್ರಸನ್ನವೆಂಕಟ ಪದಸರೋರುಹಗಳಪ್ರಸನ್ನೀಕರಿಸದೆ ಸಾಹಸಬಡುವಅಶುಭದನುಜರು ತಪಮಾಡಿ ತುದಿಯಲಿವಿಷಮಗತಿಗ್ಹೋಗಲೇನು ಸುಖ 5
--------------
ಪ್ರಸನ್ನವೆಂಕಟದಾಸರು
ಆಗಮವ ತಮನೊಯ್ಯೆ | ಅವನ ಪಾತಾಳದಲಿ |ತಾಗಿದಲೆವರಿದು ವೇದಾವಳಿಗಳಾ |ಆಗ ತಂದ್ದತ್ತ ಮಚ್ಛಾಮಾರನೆ ವುದಯವಾಗುತಿದೆವುಪ್ಪುವಡಿಸೊ ಪಹರಿಯ ಭಾಗೀರಥಿ ಪಿತನೆ |ಭಾಗವತ ಜನಪ್ರಿಯನೆ |ಯೊಗಧೆಯ ವಪ್ಪುವಡಿಸೊ ಹರಿಯೆ | ಭಾಗೀರಥಿ ಪಿತನೆ 1ದೇವಾಸುರರು ಶಿಂದ್ಧು | ಮಥನದಲಿ ಗಿರಿ ಮುಳುಗೆ |ದೆವಾ ರಾಕ್ಷಿಸುತಾ ಕ್ಷಿಶನ ಉಳಿದೂ |ಆನೊಯಲು ವಾಗಿರಿಯ | ನಂತ ಕೂರ್ಮನೆ ವುದಯವಾಗುತಿದೆವಪ್ಪುವಡಿಸೊ ಹರಿಯೆ 2ಭೂತಳವ ಕಾದ್ದೊಯಿದ | ಹರಂಣ್ಯಕ್ಷನೆಂಬ ನರಪಾತಳದ |ಲೊರಶಿನಿಲಿಶಿದ ಜಗಂಗಳಾ | ಖ್ಯಾತಿ ಪಡೆದ ಪ್ರತಿಮ |ವರಹಾರೂಶಪನೆ ಸುಪ್ರಭಾತದಲಿವುಪ್ಪವಡಿಸೊ ಹರಿಯೇ 3ಭೂದೇವದೆವರನು | ಭಾಜಿಸುವ ಶಿವುವ ಪ್ರಹ್ಲಾದಗಾ | ಗಾಹವನುಕವಲುಗಿಶಿ ಉಗದೆ | ತೂದ ಕರುಳಿನಮಾಲೆ |ಯಪ್ಪನರಶಿಂಹ ಕಾರುಣೋದಯದೊ ವಪ್ಪವಡಿಸೊ ಹರಿಯೆ 4ಬರಿ ಭಕತಿಯಿಂದ ಮೊರಡಿನೆಲನ ಮಾತು ಕೂಡೆ |ನೆಲ ನಭನೆ ನೀರಡಿಯ ಮಾಡಿ ಬೆಳೆದೆ |ನಳಿನ ಜಾಂಡವನೊಡದೆ | ವಾಮನ ತ್ರಿವಿಕ್ರಮನೆಬೆಳಗಾಯಿತುಪ್ಪವಡಿಸೋಹರಿಯೆ 5ಕಾತ್ರ್ತವಿಯ್ರ್ಯಾರ್ಜುನನ ಕಡಿದು ಕ್ಷತ್ರಿಯ ಕುಮುದು |ಮಾತ್ರ್ತಂಡನಾದೆ ಮಾತೆಯ ಮಾತಿಗೆ ಆತ್ರ್ತಜನಬಂಧುವೆ | ಪರಶುರಾಮನೆ ಬ್ರಾಹ್ಮಿ ಮೂಹೋರ್ತದಲ್ಲಿವುಪ್ಪವಡಿಸೊ ಹರಿಯೆ 6ಪಂಪಾದಿಪನವರದ | ಅಮರಪತಿಯಾದ ಷ್ಕಂಪ್ಪರಾವಣನಗೆಲಿದವನನುಜಗೆ ಸಂತ್ಪಾರಂಪರೆಯಯಿತ್ತರಘುರಾಮದೆಶೆ | ಕೆಂಪಾಯಿತುಪ್ಪ ವಡಿಸೊಹರಿಯೆ 7ಯಿಂದು ರವಿಕುಲಗಳಲಿ | ಜನಿಶಿದಮಜರಾಜ| ಬೃಂದಾರಿಯಾಗಿಭೂಭರವಿಳಿಪಿದೆ | ನಂದನಂದನ ಕೃಷ್ಣ |ಆಂಗಯಗರಗಾಣ ಬಂದವಿದವುಪ್ಪ ವಡಿಸೊ ಹರಿಯೇ 8ತ್ರಿಪುರದಮಕಾರಿಗಳ | ಸತಿಯರಿಗೆವುಪಸತಿಗಳುಪದೆಶಗಳ ತೊಟ್ಟುಭ್ರಮಗೊಳಿಶಿದುತ್ರಿಪುರ ಹತಗಂಬಾದೆ |ತ್ರಿಪುರ ಸಾಧಕ ಜಾದ್ಕ ತಪ ನವಿದೆವುಪ್ಪವಡಿಸೊ ಹರಿಯೆ9ಆಶಿ ಖಾಡವಿಡಿದಾಶ್ವವೇರಿ ಕೋಪದಿ ವಿಷ್ಣು |ಯಶಶಿನಲಿ ಕಲ್ಕ್ಯಾವ | ತಾರನಾದೆ |ಕುಶಿರಿದರಿದಶಸುವೇಪದಶ್ಯೂಗಳಗೆಲಿದೆ | ಬಿಶಿಲಾಯಿತುಪ್ಪವಡಿಸೊ ಹರಿಯೆ 10ಯಿಂದ ಚಂದ್ದ್ರ್ಯಾದಿಗಳ್ ಬ್ರಹ್ಮ ರುದ್ದ್ರಾದಿಗಳುಪೇಂದ್ರಜಯ |ಜಯಯೆನುತ ಬಂದೈಧರೆ | ವೀಂದ್ದ್ರವಾಹನ ಪುರಂದರವಿಠಲಸೌಭಾಗ್ಯ ಸಾಂದ್ದ್ರನಿಧಿ ವುಪ್ಪವಡಿಸೊ ಹರಿಯೆ 11
--------------
ಪುರಂದರದಾಸರು
ಆಚ್ಯುತಾನಂತ ಗೋವಿಂದ-ಹರಿ |ನಾರಾಯಣ ನಿನ್ನ ನಾಮ-ಎನ್ನ |ಮಾಧವಮಂಗಳಗಾತ್ರ-ಸ್ವಾಮಿ |ಗೋವಿಂದ ಗೋಪಾಲ ಬಾಲ-ಸೋಳ |ವಿಷ್ಣುಚಕ್ರವು ಬಂದು ಸುತ್ತಿ-ಮೂರು |ಮಧುಸೂದನ ಮಾರಜನಕ-ನೀನು |ತ್ರಿವಿಕ್ರಮ ತ್ರೈಲೋಕ್ಯನಾಥ-ದೇವ |ವಾಮನರೂಪದಿ ಬಂದು-ಬಲಿಯ |ಶ್ರೀಧರ ಶೃಂಗಾರಾಧಾರ-ದಿವ್ಯ |ಹೃಷೀಕೇಶ ವೃಂದಾವನದಲಿ-ನೀ |ಪದ್ಮನಾಭನೆ ಕೇಳೊ ಮುನ್ನ-ಎನ್ನ |ದಾಮೋದರ ದನುಜಹರಣ-ಹರಿ |ಸಂಕರ್ಷಣ ಸರುವಾಭರಣ-ಇಟ್ಟು |ವಾಸದೇವ ಕೇಳೊ ನಿನ್ನ-ದಿವ್ಯ |ಪ್ರದ್ಯುಮ್ನ ನೀನೆಂದು ಕರೆಯೆ-ದುರ್ |ಅನಿರುದ್ದ ಗೋಕುಲದಲ್ಲಿ-ನೀಪುರುಷೋತ್ತಮಗಾರು ಸಾಟಿ?-ಶ್ರೀ |ಅಧೋಕ್ಷಜಅಸುರಸಂಹಾರಿ-ದೇವ |ನರಸಿಂಹರೂಪವ ತಾಳಿ-ಬಂದೆ |ಅಚ್ಯತ ನೀನಲೆ ಮುದ್ದು-ಗೋಪಿ |ಜನಾರ್ಧನ ಕೇಳೊ ಬನ್ನಪವ-ನೀ |ತೊಲಗಿಸು ಬಂದೆನ್ನ ಮನದ ಕಲುಷವ ||ಉಪೇಂದ್ರನುರಗನ ತುಳಿಯೆ-ಆಗ |ಹರಹರಿ ಎಂದರೆ ಪಾಪ-ರಾಶಿ |ಕೃಷ್ಣ ಕೃಷ್ಣನೆಂಬ ಸೊಲ್ಲ-ಕೇಳಿ |
--------------
ಪುರಂದರದಾಸರು